ಕರ್ನಾಟಕ ಎಲೆಕ್ಷನ್
Karnataka Election Results 2023 : ಫಲಿತಾಂಶ ಏನೇ ಆದರೂ ಎದುರಿಸಲು ಕಾಂಗ್ರೆಸ್ ಪಕ್ಷ ಸಿದ್ಧ!
ರಾಜ್ಯದಲ್ಲಿ ಫಲಿತಾಂಶ ಏನೇ ಬಂದರೂ (Karnataka Election Results 2023) ಅದನ್ನು ಎದುರಿಸಲು ಕಾಂಗ್ರೆಸ್ ಪಕ್ಷವು ಸಿದ್ಧತೆ ಮಾಡಿಕೊಂಡಿದೆ. ಶುಕ್ರವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದೆ.
ಬೆಂಗಳೂರು: ವಿಧಾನಸಭಾ ಚುನಾವಣೆಯ ಫಲಿತಾಂಶ (karnataka election results 2023) ಏನೇ ಆದರೂ ಅದನ್ನು ಹೇಗೆ ಎದುರಿಸಬೇಕೆಂಬ ಕುರಿತು ಕಾಂಗ್ರೆಸ್ ಪಕ್ಷವು ಸಿದ್ಧತೆ ಮಾಡಿಕೊಂಡಿದೆ. ಶುಕ್ರವಾರ ನಗರದ ಖಾಸಗಿ ಹೊಟೇಲ್ ಒಂದರಲ್ಲಿ ನಡೆದ ಪಕ್ಷದ ಉನ್ನತರ ನಾಯಕರ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದೆ.
ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ನಾಯಕರು ಭಾಗವಹಿಸಿದ್ದರು.
ಶನಿವಾರ ಫಲಿತಾಂಶ ಪ್ರಕಟವಾದ ನಂತರ ಪಕ್ಷವು 113 ಗಡಿ ದಾಟಿದರೆ ಕೂಡಲೇ ಶಾಸಕಾಂಗ ಪಕ್ಷದ ಸಭೆ ಕರೆಯುವುದು. ಆದಷ್ಟು ಬೇಗ ಶಾಸಕಾಂಗ ಪಕ್ಷದ ನಾಯಕನನ್ನು ನೇಮಕ ಮಾಡಿ ಸರ್ಕಾರ ರಚನೆಗೆ ರಾಜ್ಯಪಾಲರಿಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ತೀರ್ಮಾನಿಸಲಾಗಿದೆ.
ಪಕ್ಷೇತರರ ಸಂಪರ್ಕಕ್ಕೂ ಪ್ಲಾನ್
ಒಂದು ವೇಳೆ ಪಕ್ಷವು ಸರಳ ಬಹುಮತಕ್ಕಿಂತ ಕಡಿಮೆ ಸ್ಥಾನ ಗೆದ್ದು, ಪಕ್ಷೇತರರ ಬೆಂಬಲ ಪಡೆದು ಸರ್ಕಾರ ರಚಿಸಲು ಸಾಧ್ಯವಿದೆ ಎಂದೆನಿಸಿದರೆ ಗೆಲ್ಲಬಲ್ಲ ಪಕ್ಷೇತರರೊಂದಿಗೆ ಯಾರು ಮಾತನಾಡಬೇಕೆಂಬುದನ್ನೂ ತೀರ್ಮಾನಿಸಲಾಗಿದೆ. ಪಕ್ಷ 105 ರಿಂದ 108 ಸ್ಥಾನಗಳನ್ನು ಪಡೆದರೆ ಏನು ಎಂಬುದನ್ನು ಈ ಪ್ಲಾನ್ನಲ್ಲಿ ಸ್ಪಷ್ಟಪಡಿಸಿಕೊಳ್ಳಲಾಗಿದೆ.
ಅರಕಲಗೂಡು ಕೃಷ್ಣೇಗೌಡರು ಗೆದ್ದರೆ ಅವರನ್ನು ಸಂಪರ್ಕಿಸುವ ಜವಾಬ್ದಾರಿಯನ್ನು ಎಚ್ ಎಂ ರೇವಣ್ಣ ಹೆಗಲಿಗೆ ಹೋರಿಸಲಾಗಿದೆ. ಮಾಡಳ್ ಮಲ್ಲಿಕಾರ್ಜುನ ಅವರ ಸಂಪರ್ಕದ ಜವಾಬ್ದಾರಿಯನ್ನು ಶ್ಯಾಮನೂರು ಶಿವಶಂಕರಪ್ಪ ಮತ್ತು ನಿಖಿಲ್ ಕೊಂಡಜ್ಜಿ ಗೆ ವಹಿಸಲಾಗಿದೆ.
ಪುಲಕೇಶಿ ನಗರದ ಅಖಂಡ ಶ್ರೀನಿವಾಸ ಮೂರ್ತಿ ಅವರನ್ನು ಕರೆದುಕೊಂಡು ಬರುವ ಜವಾಬ್ದಾರಿಯನ್ನು ಜಮೀರ್ ಅಹಮದ್ ಖಾನ್ ಅವರಿಗೆ ವಹಿಸಿದ್ದು, ಲತಾ ಮಲ್ಲಿಕಾರ್ಜುನ ಸಂಪರ್ಕ ಮಾಡಲು ಶ್ಯಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್ಗೆ ಜವಾಬ್ದಾರಿ ನೀಡಲಾಗಿದೆ. ಶಿರಹಟ್ಟಿ ಪಕ್ಷೇತರ ಅಭ್ಯರ್ಥಿ ರಾಮಕೃಷ್ಣ ದೊಡ್ಡಮಣಿ ಅವರನ್ನು ಸೆಳೆಯುವ ಟಾಸ್ಕ್ ಅನ್ನು ಉತ್ತರ ಕನ್ನಡದ ನಾಯಕರಿಗೆ ನೀಡಲಾಗಿದೆ.
ಸಮ್ಮಿಶ್ರ ಸರ್ಕಾರಕ್ಕೂ ರೆಡಿ
ಸಮ್ಮಿಶ್ರ ಸರ್ಕಾರ ರಚಿಸುವ ಅನಿವಾರ್ಯತೆ ನಿರ್ಮಾಣವಾದರೆ ಜೆಡಿಎಸ್ನ ವರಿಷ್ಠ ದೇವೇಗೌಡರನ್ನು ಸಂಪರ್ಕ ಮಾಡುವುದೆಂದು ತೀರ್ಮಾನಿಸಲಾಗಿದ್ದು. ಪಕ್ಷ 80 ಸ್ಥಾನ ದಾಟಿದರೆ ಮೈತ್ರಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಮೈತ್ರಿ ಏರ್ಪಟ್ಟರೆ ಮುಖ್ಯಮಂತ್ರಿ ಸ್ಥಾನದ ಹಂಚಿಕೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿ ತೀರ್ಮಾನಿಸಲಾಗಿದೆ.
ರಾಜ್ಯ ರಾಜಕಾರಣದ ಕುತೂಹಲಕಾರಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಒಟ್ಟಾರೆಯಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚನೆ ಆಗದಂತೆ ತಡೆಯುವ ಎಲ್ಲ ಪ್ರಯತ್ನ ನಡೆಸಲು ಸಭೆಯು ಒಮ್ಮತದ ತೀರ್ಮಾನಕ್ಕೆ ಬಂದಿದೆ ಎಂದು ಪಕ್ಷದ ಮೂಲಗಳು ಹೇಳಿವೆ.
ಇದನ್ನೂ ಓದಿ : Karnataka Election 2023 : ಇನ್ನು ಕೆಲವೇ ಕ್ಷಣಗಳಲ್ಲಿ ಕೌಂಟಿಂಗ್ ಶುರು : ಮತ ಎಣಿಕೆ ಹೇಗೆ ಗೊತ್ತೇ?
ಕರ್ನಾಟಕ ಎಲೆಕ್ಷನ್
Modi Magic: ಬರೀ ಮೋದಿ ಹೆಸರಿಗೆ ವೋಟ್ ಬರಲ್ಲ! ಬಿಜೆಪಿಗೆ ಆರೆಸ್ಸೆಸ್ ಮುಖವಾಣಿ ಪತ್ರಿಕೆಯಿಂದ ಫುಲ್ ಕ್ಲಾಸ್
Modi Magic: ಕರ್ನಾಟಕ ಚುನಾವಣೆ ಸೋತ ಬೆನ್ನಲ್ಲೇ ಆರೆಸ್ಸೆಸ್ ಚಿಂತಕರ ಚಾವಡಿ ಹೊಸ ನಿಟ್ಟಿನಲ್ಲಿ ಯೋಚಿಸುತ್ತಿರುವಂತಿದೆ. ಕೇವಲ ಮೋದಿ, ಹಿಂದುತ್ವದಿಂದಲೇ ಮತ ಬರುವುದಿಲ್ಲಎಂದು ಬಿಜೆಪಿಗೆ ಎಚ್ಚರಿಸಿದೆ.
ಮುಂಬೈ, ಮಹಾರಾಷ್ಟ್ರ: ಕರ್ನಾಟಕದಲ್ಲಿ ಬಿಜೆಪಿ ಹೀನಾಯವಾಗಿ ಸೋತಿರುವುದು ಬಿಜೆಪಿಯ ಥಿಂಕ್ ಟ್ಯಾಂಕ್ನಲ್ಲಿ ಪರ್ಯಾಯ ಯೋಚನೆಗೆ ಕಾರಣವಾಗಿದೆಯೇ? ಹೌದು, ಇಂಥದೊಂದು ಅನುಮಾನ ಬರಲು ಕಾರಣವಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS)ದ ಮುಖವಾಣಿಯಾಗಿರುವ ಆರ್ಗೈನಸರ್ (Organizer) ವಾರ ಪತ್ರಿಕೆಯಲ್ಲಿ ಪ್ರಕಟವಾದ ವರದಿಯೊಂದು ಇದಕ್ಕೆ ಪುಷ್ಟಿ ನೀಡುತ್ತದೆ. ಚುನಾವಣೆ ಗೆಲ್ಲಲು ಮೋದಿ (Modi Magic) ನಾಮಬಲ, ಹಿಂದುತ್ವವು (hindutva) ಪ್ರತಿಬಾರಿಯೂ ಕೆಲಸ ಮಾಡುವುದಿಲ್ಲ ಎಂದು ಕಟುವಾಗಿ ಟೀಕಿಸಿದೆ.
ಕರ್ನಾಟಕದಲ್ಲಿನ ಹೀನಾಯ ಸೋಲು ಮತ್ತು ಮುಂಬರುವ 2024ರ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಈ ವರದಿಯು ಮಹತ್ವ ಪಡೆದುಕೊಂಡಿದೆ. ಬಿಜೆಪಿಯ ಎಲ್ಲ ಚುನಾವಣೆಗಳನ್ನು ಮೋದಿ ಮ್ಯಾಜಿಕ್ನಿಂದಲೇ ನಡೆಯುತ್ತದೆ ಎಂದು ಭಾವಿಸುತ್ತದೆ. ಆದರೆ, ಈಗ ಮೋದಿ ಮ್ಯಾಜಿಕ್ ನಡೆಯುತ್ತಿಲ್ಲ ಎಂಬುದು ಸಾಬೀತಾಗಿದೆ ಎಂಬ ರೀತಿಯಲ್ಲಿ ಆರೆಸ್ಸೆಸ್ ಮುಖವಾಣಿ ವರದಿಯನ್ನು ಪ್ರಕಟಿಸಿದೆ. ಚುನಾವಣೆಗಳನ್ನು ಗೆಲ್ಲಲು ಬಿಜೆಪಿ ಪ್ರಭಾವಿ ನಾಯಕತ್ವ ಅಗತ್ಯವಾಗಿದೆ. ಪ್ರಾದೇಶಿಕವಾಗಿ ಆಶೋತ್ತರಗಳನ್ನು ಈಡೇರಿಸುವ ಪ್ರಯತ್ನ ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟಿದೆ.
ಪ್ರಾದೇಶಿಕ ಮಟ್ಟದಲ್ಲಿ ಪ್ರಬಲ ನಾಯಕತ್ವ ಮತ್ತು ಪರಿಣಾಮಕಾರಿ ಪ್ರಯತ್ನವಿಲ್ಲದೇ, ಪ್ರಧಾನಿ ಮೋದಿಯವರ ವರ್ಚಸ್ಸು ಮತ್ತು ಹಿಂದುತ್ವವು ಸೈದ್ಧಾಂತಿಕ ವಿಷಯಗಳು ಚುನಾವಣೆ ಗೆಲ್ಲಲು ಸಾಕಾಗುವುದಿಲ್ಲ ಪತ್ರಿಕೆಯಲ್ಲಿ ತಿಳಿಸಲಾಗಿದೆ. ಕರ್ನಾಟಕ ಚುನಾವಣಾ ಫಲಿತಾಂಶಗಳು ಕಾಂಗ್ರೆಸ್ ಪರವಾಗಿ ಹೊರಬಂದಿವೆ. ಆದರೆ 2024 ರ ಲೋಕಸಭೆ ಚುನಾವಣೆಯಲ್ಲಿ ಸೋಲುವುದು ಒಳ್ಳೆಯ ಹಾದಿಯಂತೂ ಅಲ್ಲ. ಹಾಗಾಗಿ, ಪರಿಸ್ಥಿತಿಯನ್ನು ಅವಲೋಕಿಸಲು ಬಿಜೆಪಿಗೆ ಇದು ಸರಿಯಾದ ಸಮಯ ಎಂದು ಅದು ಹೇಳಿದೆ.
ಕರ್ನಾಟಕದ ಚುನಾವಣೆಯಲ್ಲಿ ಭ್ರಷ್ಟಾಚಾರವು ಪ್ರಮುಖ ವಿಷಯವಾಗಿತ್ತು. ಮೋದಿ ಕೇಂದ್ರದಲ್ಲಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭ್ರಷ್ಟಾಚಾರದ ಆರೋಪಗಳನ್ನು ಸಮರ್ಥಿಸಿಕೊಳ್ಳಬೇಕಾಯಿತು ಎಂದು ವರದಿಯಲ್ಲಿ ತಿಳಿಸಲಾಗಿದೆ.
ಈ ಸುದ್ದಿಯನ್ನೂ ಓದಿ: Jagadish Shettar: ನನ್ನೊಬ್ಬನನ್ನು ಸೋಲಿಸಲು ಹೋಗಿ ಬಿಜೆಪಿಯೇ ಸೋತಿದೆ: ಜಗದೀಶ್ ಶೆಟ್ಟರ್
ಕರ್ನಾಟಕ ಚುನಾವಣೆಯಲ್ಲಿ ಆಡಳಿತ ಪಕ್ಷವು (ಬಿಜೆಪಿ) ರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳೊಂದಿಗೆ ಮತದಾರರನ್ನು ಹುರಿದುಂಬಿಸಲು ಅತ್ಯುತ್ತಮವಾಗಿ ಪ್ರಯತ್ನಿಸಿತು. ಆದರೆ, ಕಾಂಗ್ರೆಸ್ ಸ್ಥಳೀಯ ಮಟ್ಟದಲ್ಲಿ ತನ್ನ ದಾಳಿ ಉರುಳಿಸಿತು. ಹಾಗಾಗಿ, ಅತಿ ಹೆಚ್ಚು ಮತದಾನವಾದ ಈ ಚುನಾವಣೆಯಲ್ಲಿ ಬಿಜೆಪಿಗೆ ತನ್ನ ಈ ಹಿಂದಿನ ಮತ ಪ್ರಮಾಣವನ್ನು ಉಳಿಸಿಕೊಳ್ಳಲು ವಿಫಲವಾಯಿತು. ಇದರಿಂದ ಹೀನಾಯವಾಗಿ ಸೋತಿತು. ಹಾಲಿ ಸಚಿವರ ವಿರುದ್ಧದ ಆಡಳಿತ ವಿರೋಧಿ ನಿಲುವು ಬಿಜೆಪಿಗೆ ಮುಳುವಾಯಿತು ಎಂದು ಆರ್ಗನೈಸರ್ ಹೇಳಿದೆ.
ದೇಶದ ಇನ್ನಷ್ಟು ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಭಾಗ-2: ಕನ್ನಡ ಬಾರದ ಶಿಕ್ಷಕಿ ವಿರುದ್ಧ ಉಪವಾಸ ಕುಳಿತ ವಿದ್ಯಾರ್ಥಿಗಳು!
ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ ಕೇರಳ ಸರ್ಕಾರ ಒಬ್ಬ ಶಿಕ್ಷಕಿಯನ್ನು ನಿಯೋಜನೆ ಮಾಡಿರುವುದನ್ನು ವಿದ್ಯಾರ್ಥಿಗಳು ಪ್ರತಿಭಟಿಸುತ್ತಿದ್ದಾರೆ.
ಬೆಂಗಳೂರು: ಕರ್ನಾಟಕ ಹಾಗೂ ಕಾಸರಗೋಡಿನ ನಡುವಿನ ಕೊಂಡಿಯಾಗಿರುವ ಕಾಸರಗೋಡಿನಲ್ಲಿ ಕನ್ನಡ ಮಾಧ್ಯಮ ಶಾಲೆಗಳಿಗೆ ಕಂಟಕ ಇನ್ನೂ ತಪ್ಪಿಲ್ಲ. ರಾಜಕೀಯವಾಗಿ ಕೇರಳ ರಾಜ್ಯಕ್ಕೆ ಸೇರಿರುವ ಕಾಸರಗೋಡಿನಲ್ಲಿ ಕನ್ನಡ ಶಾಲೆಗಳನ್ನು ಮುಚ್ಚಲು ಅಥವಾ ನಿರ್ಬಲಗೊಳಿಸಲು ಆಗಾಗ್ಗೆ ಅಲ್ಲಿ ನಡೆಯುವ ಪ್ರಯತ್ನಗಳ ಕುರಿತು 2018ರಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಎಂಬ ಸಿನಿಮಾವನ್ನು ರಿಷಭ್ ಶೆಟ್ಟಿ ನಿರ್ಮಿಸಿದ್ದರು.
ಈ ಸಿನಿಮಾ ಕರ್ನಾಟಕದಾದ್ಯಂತ ಜನಮೆಚ್ಚುಗೆಯನ್ನು ಪಡೆದು ಕಾಸರಗೋಡು ಸೇರಿ ರಾಜ್ಯದ ವಿವಿಧೆಡೆ ಸರ್ಕಾರಿ ಶಾಲೆ ಉಳಿಸುವ ಪ್ರೇರೇಪಣೆಯನ್ನು ಸಾರ್ವಜನಿಕರಿಗೆ ನೀಡಿತ್ತು. ಆದರೆ ಇದೀಗ ನಡೆದಿರುವುದು ಸಿನಿಮಾ ಕಥೆ ಅಲ್ಲ, ನಿಜವಾದ ಘಟನೆ.
ಕಾಸರಗೋಡು ಜಿಲ್ಲೆಯ ಅಡೂರು ಗ್ರಾಮದಲ್ಲಿರುವ ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ ಕೇರಳ ಸರ್ಕಾರ ಒಬ್ಬ ಶಿಕ್ಷಕಿಯನ್ನು ನಿಯೋಜನೆ ಮಾಡಿದೆ. ಆ ಶಿಕ್ಷಕಿ ಸಮಾಜ ವಿಜ್ಞಾನ ಬೋಧಿಸುವವರಿದ್ದರು. ಆದರೆ ಅವರಿಗೆ ಕನ್ನಡವೇ ಬರುವುದಿಲ್ಲ. ಕನ್ನಡ ಮಾಧ್ಯಮ ಶಾಲೆಯಲ್ಲಿ ಕನ್ನಡವೇ ಬಾರದ ಶಿಕ್ಷಕರನ್ನು ನೇಮಿಸಿದ್ದಕ್ಕೆ ಪೋಷಕರು ಹಾಗೂ ಸ್ವತಃ ವಿದ್ಯಾರ್ಥಿಗಳೇ ಸಿಟ್ಟಾಗಿದ್ದಾರೆ.
ಇತ್ತೀಚೆಗೆ ಈ ಶಿಕ್ಷಕಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಆಗಮಿಸಿದ್ದರು. ಆದರೆ ಆಗ ಗ್ರಾಮಸ್ಥರು ವಿರೋಧಿಸಿದ್ದರಿಂದ ವಾಪಸಾಗಿದ್ದರು. ಆದರೆ ಶನಿವಾರ ಪೊಲೀಸ್ ಕಾವಲಿನೊಂದಿಗೆ ವರದಿ ಮಾಡಿಕೊಳ್ಳಲು ಶಿಕ್ಷಕಿ ಆಗಮಿಸಿದರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿಗಳು ಊಟವನ್ನೂ ಮಾಡದೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಘಟನಾವಳಿಗಳನ್ನು ತಿಳಿದ ಮುಖ್ಯಶಿಕ್ಷಕರು ಕುಸಿದು ಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮತ್ತೆ ಸೋಮವಾರವೂ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ವಿದ್ಯಾರ್ಥಿಗಳು ಹೇಳಿದ್ದಾರೆ.
ಈ ಹಿಂದೆಯೂ ಇಂತಹ ಘಟನೆಗಳು ನಡೆದಿವೆ. ಕಳೆದ ವರ್ಷ ಕಾಸರಗೋಡಿನ ಅನೇಕ ಕನ್ನಡ ಮಾಧ್ಯಮ ಶಾಲೆಗಳಿಗೆ ಕ ನ್ನಡವೇ ತಿಳಿದಿಲ್ಲದ ಶಿಕ್ಷಕರನ್ನು ನಿಯೋಜನೆ ಮಾಡಲಾಗಿತ್ತು. ಇದರ ವಿರುದ್ಧ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಕೇರಳ ಸರ್ಕಾರಕ್ಕೆ ಮನವಿ ಮಾಡಿತ್ತು. ಈ ಸಂಬಂಧ ಪ್ರತಿಭಟನೆಗಳು ನಡೆದಾಗ ಸರ್ಕಾರ ತನ್ನ ನಿರ್ಧಾರವನ್ನು ಬದಲಾವಣೆ ಮಾಡಿಕೊಂಡಿತ್ತು.
ಆನಂತರ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿದಾಗಲೂ, ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗುತ್ತದೆ ಎಂದು ಭರವಸೆ ನೀಡಿದ್ದರು. ಆದರೆ ಈಗ ಮತ್ತೊಮ್ಮೆ ಸರ್ಕಾರ ಅದೇ ತಪ್ಪನ್ನು ಮಾಡಿದೆ. ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ ಕೇರಳ ಸರ್ಕಾರಕ್ಕೆ ದೂರವಾಣಿ ಹಾಗೂ ಪತ್ರದ ಮೂಲಕ ಸಂಪರ್ಕಿಸಲಾಗಿದೆ. ಕಾಸರಗೋಡು ಜಿಲ್ಲಾಧಿಕಾರಿಗೂ ತಿಳಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಇದನ್ನೂ ಓದಿ: ಕೊಣನೂರು ಪಿಎಸ್ಐ ಮನೆಗೆ ಬೆಂಕಿ ಇಟ್ಟ ದುಷ್ಕರ್ಮಿಗಳು; ಸರ್ಕಾರಿ ಶಾಲೆಗೆ ಕಲ್ಲೆಸೆದು ವಿಕೃತಿ
ಕರ್ನಾಟಕ
Congress Guarantee: ಡಿಗ್ರಿ ನಂತರ ಪಿಜಿ ಓದಿದರೆ ಯುವನಿಧಿ ಇಲ್ಲ: ಸರ್ಕಾರದ ಮಾರ್ಗಸೂಚಿಯಲ್ಲಿ ಬಯಲಾಯ್ತು ಸತ್ಯ
ನಿರುದ್ಯೋಗ ಭತ್ಯೆಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಸರ್ಕಾರ ತಿಳಿಸಿದೆ. ಆದರೆ ಇನ್ನೂ ಸೇವಾ ಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಿಲ್ಲ.
ಬೆಂಗಳೂರು: ರಾಜ್ಯದ ನಿರುದ್ಯೋಗ ಯುವಕರಿಗೆ ಭತ್ಯೆ ನೀಡುವ ಯುವನಿಧಿ ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಅಧಿಸೂಚನೆ ಹಾಗೂ ಮಾರ್ಗಸೂಚಿ ಪ್ರಕಟಿಸಿದೆ. ಅದರಂತೆ, ಪದವಿ ವ್ಯಾಸಂಗ ಮಾಡಿದವರಿಗಷ್ಟೆ ನಿರುದ್ಯೋಗಭತ್ಯೆ ಸಿಗಲಿದೆ.
2022-23 ರಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿ೦ಗಳು 3000 ರೂ. ಹಾಗೂ
ಡಿಪ್ಲೊಮಾ ಹೊಂದಿದ ನಿರುದ್ಯೋಗಿಗಳಿಗೆ ಪ್ರತಿ ತಿ೦ಗಳು 1500 ರೂ. ನಿರುದ್ಯೋಗ ಭತ್ಯೆ ನೀಡುವ “ಯುವನಿಧಿ ಯೋಜನೆ” ಜಾರಿಗೊಳಿಸಲು ಸರ್ಕಾರವು ತಾತ್ವಿಕ ಅನುಮೋದನೆಯನ್ನು ಮೊದಲ ಸಂಪುಟ ಸಭೆಯಲ್ಲಿ ಸರ್ಕಾರ ನೀಡಿತ್ತು.
ಸಚಿವ ಸಂಪುಟದ ಅನುಮೋದನೆ ನ೦ತರ ಯೋಜನೆಯನ್ನು ಅನುಷ್ಠಾನಗೊಳಿಸಲು ಷರತ್ತು ಮತ್ತು ನಿಬ೦ಧನೆಗಳು ಹಾಗೂ ಅನರ್ಹತೆಯ ಮಾನದಂಡಗಳನ್ನು ವಿಧಿಸಿ ಆದೇಶ ಹೊರಡಿಸಿದೆ.
2023ರ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾ೦ಕದಿ೦ದ 180 ದಿನಗಳು ಕಳೆದರೂ ಉದ್ಯೋಗ
ಲಭಿಸದ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿ೦ಗಳು 3000 ರೂ. ನೀಡಲಾಗುತ್ತದೆ. ಇದರಲ್ಲಿ ಇಂಜಿನಿಯರಿಂಗ್, ಮೆಡಿಕಲ್ನಂತಹ ವೃತ್ತಿಪರ ಕೋರ್ಸ್ಗಳೂ ಸೇರಿವೆ. ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ
ತಿ೦ಗಳು 1500 ರೂ. ನೀಡಲಾಗುತ್ತದೆ. ಎರಡೂ ಭತ್ಯೆಗಳನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡಲಾಗುತ್ತದೆ.
ಪದವೀಧರರಿಗೆ ಯುವನಿಧಿ ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಪದವಿ ನಂತರ ಸ್ನಾತಕೋತ್ತರ ವ್ಯಾಸಂಗಕ್ಕೆ ತೆರಳುವವರಿಗೆ ಭತ್ಯೆ ಇಲ್ಲ ಎಂದು ತಿಳಿಸಿದೆ. ಆದರೆ ಸ್ನಾತಕೋತ್ತರ ಪದವಿ ನಂತರ ಉದ್ಯೋಗ ಲಭಿಸದಿದ್ದರೆ ಏನು ಎಂಬ ಪ್ರಶ್ನೆಗೆ ಮಾರ್ಗಸೂಚಿಯಲ್ಲಿ ಉತ್ತರ ಇಲ್ಲ.
ಷರತ್ತು ಮತ್ತು ನಿಬಂಧನೆಗಳು:
- ಪದವಿ ಅಥವಾ ಡಿಪ್ಲೊಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ.
- ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ
ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಮಗಿತಗೊಳಿಸಲಾಗುವುದು. - ಭತ್ಯೆಯನ್ನು ಖಾತೆಗೆ ನೇರ ನಗದು ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು
ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. - ವಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತ೦ತ್ರ ಪರಿಶೀಲನೆ ಇರಬೇಕು. ಉದ್ಯೋಗ ಪಡೆದ ನ೦ತರ ತಪ್ಪು ಫೋಷಣೆ
ಅಥವಾ ಘೋಷಿಸಲು ವಿಫಲವಾದರೆ ದ೦ಡ ವಿಧಿಸಲಾಗುವುದು.
ಯೋಜನೆಗೆ ಅರ್ಹರಾಗದೇ ಇರುವವರು ಯಾರು?
- ಉನ್ನತ ವ್ಯಾಸ೦ಗಕ್ಕೆ ದಾಖಲಾತಿ ಹೊ೦ದಿ ವಿದ್ಯಾಭ್ಯಾಸ ಮು೦ದುವರಿಸುವವರು.
- ಶಿಶಿಕ್ಕು (ಅಪ್ರೆಂಟೀಸ್) ವೇತನವನ್ನು ಪಡೆಯುತ್ತಿರುವವರು.
- ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು.
- ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್ಗಳಲ್ಲಿ ಸಾಲ ಪಡೆದು ಸ್ವಯಂ
ಉದ್ಯೋಗ ಹೊ೦ದಿದವರು ಈ ಯೋಜನೆಗೆ ಅರ್ಹರಲ್ಲ.
ನಿವಾಸಿ ಪ್ರಮಾಣ ಪತ್ರ:
ಕನ್ನಡಿಗರಿಗೆ ಮಾತ್ರ ಈ ಯೋಜನೆ ಅನ್ವಯವಾಗುತ್ತದೆ. ಹಾಗಾಗಿ ಕರ್ನಾಟಕದ ನಿವಾಸಿ ಎಂದು ದೃಢೀಕರಿಸಲು ಡೊಮಿಸಿಲ್ ಸರ್ಟಿಫಿಕೇಟ್ (ನಿವಾಸಿ ಪ್ರಮಾಣಪತ್ರ) ಅಗತ್ಯವಾಗುತ್ತದೆ ಎಂಬ ಚರ್ಚೆ ನಡೆದಿದೆ. ನಿವಾಸಿ ಪ್ರಮಾಣಪತ್ರಕ್ಕೆ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ವಿವರಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಸೇವಾಸಿಂಧು ಮೂಲಕ ಅರ್ಜಿ:
ನಿರುದ್ಯೋಗ ಭತ್ಯೆಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಸರ್ಕಾರ ತಿಳಿಸಿದೆ. ಆದರೆ ಇನ್ನೂ ಸೇವಾ ಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಿಲ್ಲ. ಕಾರಣವೇನೆಂದರೆ ಈ ವರ್ಷ ಅಂದರೆ 2023ರಲ್ಲಿ ತೇರ್ಗಡೆ ಹೊಂದಿರುವ ಪದವೀಧರರು ಹಾಗೂ ಡಿಪ್ಲೊಮಾದಾರರಿಗೆ ಮಾತ್ರವೇ ಈ ಯೋಜನೆ ಅನ್ವಯವಾಗಲಿದೆ. ಪದವಿ ಫಲಿತಾಂಶಗಳು ಆಗಮಿಸಿ ಆರು ತಿಂಗಳ ನಂತರವಷ್ಟೆ ನಿರುದ್ಯೋಗಿಗಳು ಅರ್ಜಿ ಸಲ್ಲಿಸಬೇಕಾಗುತ್ತದೆ. ಹಾಗಾಗಿ ಇದಕ್ಕೆ ಇನ್ನೂ ಸಮಯವಿದೆ.
ಕರ್ನಾಟಕ
Political News : ನಿಮ್ಮ ಶಾಸಕರು ಬೆಂಗಳೂರಿನಲ್ಲಿ ಎಲ್ಲಿ ಸಿಗುತ್ತಾರೆ ಗೊತ್ತೇ? ಇಲ್ಲಿದೆ ಮಾಹಿತಿ!
ನೂತನ ಶಾಸಕರಿಗೆ ಬೆಂಗಳೂರಿನ ಶಾಸಕರ ಭವನದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ (Political News). ಈ ಕುರಿತ ಮಾಹಿತಿ ಇಲ್ಲಿದೆ.
ಬೆಂಗಳೂರು: ನೂತನ ವಿಧಾನಸಭೆಗೆ ಆಯ್ಕೆಯಾಗಿರುವ ರಾಜ್ಯದ ಎಲ್ಲ ಶಾಸಕರುಗಳಿಗೆ ರಾಜಧಾನಿಯ ಶಾಸಕರ ಭವನದಲ್ಲಿ ಕೊಠಡಿಗಳನ್ನು ಹಂಚಿಕೆ (Political News) ಮಾಡಲಾಗಿದೆ.
ವಿಧಾನಸಭೆ ಅಧಿವೇಶನ ಮತ್ತು ಸರ್ಕಾರದ ಕೆಲಸಕ್ಕಾಗಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಶಾಸಕರು ಇನ್ನು ಮುಂದೆ ಶಾಸಕರ ಭವನದ ಈ ಕೊಠಡಿಯಲ್ಲಿ ಉಳಿದುಕೊಳ್ಳಲಿದ್ದಾರೆ. ಯಾವ ಶಾಸಕರಿಗೆ ಯಾವ ಕೊಠಡಿಯನ್ನು ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ;
ಇದನ್ನೂ ಓದಿ: Congress Guarantee : ನಿಮಗೆ ಫ್ರೀ ಕರೆಂಟ್ ಸಿಗುತ್ತದೆಯೋ ಇಲ್ಲವೋ ಎಂದು ತಿಳಿಯುವುದು ಹೇಗೆ? ಇಲ್ಲಿದೆ ಸರಳ ಮಾರ್ಗ
-
ಕರ್ನಾಟಕ18 hours ago
Odisha Train Accident: ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ ನೀಡಿದ ಮಹಿಳೆ, ಒಡಿಶಾ ಪೊಲೀಸರಿಂದ ತನಿಖೆ
-
ಕರ್ನಾಟಕ16 hours ago
ವಿಶ್ವ ಪರಿಸರ ದಿನ: ಸಸಿ ನೆಡಿ, ಫೋಟೊ ಕಳುಹಿಸಿ; ವಿಸ್ತಾರ ನ್ಯೂಸ್ ಅಭಿಯಾನ
-
ಕರ್ನಾಟಕ9 hours ago
DK Shivakumar: ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ಮಾಡಿದ್ದಕ್ಕೆ ಜಾಡಿಸಿದ ಡಿಕೆಶಿ; ಅಧಿಕಾರಿಗಳ ಅಮಾನತಿಗೆ ಆದೇಶ
-
ಕರ್ನಾಟಕ13 hours ago
Murder Case: ಟೋಲ್ ವಿಚಾರಕ್ಕೆ ಕಿರಿಕ್; ಹಾಕಿ ಸ್ಟಿಕ್ನಿಂದ ಬಡಿದು ಕೊಂದೇಬಿಟ್ಟರು ದುರುಳರು
-
ದೇಶ14 hours ago
Odisha Train Accident: ಗಾಯದ ಮೇಲೆ ಬರೆ ಎಂದರೆ ಇದೇ; ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು
-
ದೇಶ17 hours ago
world environment day : ಇಂದು ವಿಶ್ವ ಪರಿಸರ ದಿನ 2023: ಈ ದಿನದ ಮಹತ್ವ, ಇತಿಹಾಸ, ಥೀಮ್ ತಿಳಿಯಿರಿ
-
ಪರಿಸರ9 hours ago
ವಿಶ್ವ ಪರಿಸರ ದಿನ: ‘ಸಸಿ ನೆಡಿ, ಫೋಟೊ ಕಳುಹಿಸಿ’ ವಿಸ್ತಾರ ಅಭಿಯಾನ; ನಿಮ್ಮ ಮತ್ತಷ್ಟು ಫೋಟೊಗಳು ಇಲ್ಲಿವೆ
-
ಕರ್ನಾಟಕ16 hours ago
ಕಲಬುರಗಿಯಲ್ಲಿ ಚಂಡಿಕಾ ಹೋಮದ ಬೆಂಕಿಯಲ್ಲಿ ಕಾಣಿಸಿಕೊಂಡ ದುರ್ಗಾ ದೇವಿ!; ಇಲ್ಲಿದೆ ನೋಡಿ ಫೋಟೊ