Site icon Vistara News

Karnataka Weather : ದಕ್ಷಿಣ ಒಳನಾಡಲ್ಲಿ ಇಂದು ಗುಡುಗುವ ವರುಣ; ಬೆಂಗಳೂರಿನಲ್ಲಿ ಚಳಿ ಚಳಿ, ಅಲ್ಪ ಮಳೆ

Rain with nature

ಬೆಂಗಳೂರು: ರಾಜ್ಯದ ಹಲವು ಕಡೆ ವರುಣ ಬಿಡುವು ಕೊಟ್ಟಿದ್ದಾನೆ. ಆದರೆ, ಮುಂದಿನ 24 ಗಂಟೆಯಿಂದ 48 ಗಂಟೆ ಒಳಗೆ ದಕ್ಷಿಣ ಒಳನಾಡಿನ ಹಲವು ಕಡೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ತನ್ನ ಮುನ್ಸೂಚನಾ ವರದಿಯಲ್ಲಿ ಹೇಳಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ (Dry weather) ಮುಂದುವರಿಯಲಿದೆ ಎಂದು ಸಹ ಹೇಳಲಾಗಿದೆ. ಇನ್ನು ಬೆಂಗಳೂರಿನಲ್ಲಿ ಚಳಿಯೂ ಇರಲಿದೆ. ಮಳೆಯೂ ಬರಲಿದೆ ಎಂಬಂತಹ ಸ್ಥಿತಿ ಇದೆ ಎಂದು ಅಂದಾಜಿಸಲಾಗಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಯಾವುದೇ ಮಳೆ ಸೂಚನೆ ಇಲ್ಲ. ಬದಲಿಗೆ ಒಣಹವೆಯೇ ಇರಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ವಿಜಯಪುರ, ಯಾದಗಿರಿಯಲ್ಲೂ ಒಣಹವೆ ಇರಲಿದ್ದು, ಅಲ್ಲಲ್ಲಿ ಅಲ್ಪ ಪ್ರಮಾಣದ ಮಳೆಯಾಗಲಿದೆ ಎಂದು ಹೇಳಲಾಗಿದೆ.

ದಕ್ಷಿಣ ಒಳನಾಡಿನಲ್ಲಿ ಮಳೆ ಮುನ್ಸೂಚನೆ

ದಕ್ಷಿಣ ಒಳನಾಡಿನ ಜಿಲ್ಲೆಯಾದ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ರಾಮನಗರ, ಮೈಸೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು, ವಿಜಯನಗರದ ಅಲ್ಲಲ್ಲಿ ಮಳೆಯಾಗಬಹುದು. ಕೆಲವು ಕಡೆ ಮೋಡ ಕವಿದ ವಾತಾವರಣ ಇರಬಹುದು.

ಬೆಂಗಳೂರಲ್ಲಿ ಬೆಳಗ್ಗೆ ಬಿಸಿಲು, ರಾತ್ರಿ ಮಳೆ?

ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಬೆಳಗ್ಗೆ ಸಮಯದಲ್ಲಿ ಬಿಸಿಲಿನ ವಾತಾವರಣ ಇರಲಿದೆ. ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 26 ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: BY Vijayendra : ಚತುರ ಸಂಘಟಕ, ಕಾರ್ಯಕರ್ತರ ಆಶಾಕಿರಣ ವಿಜಯೇಂದ್ರ ರಾಜಕೀಯ ಹೆಜ್ಜೆಗಳು ಇಲ್ಲಿವೆ

ತಾಪಮಾನ ಎಚ್ಚರಿಕೆ

ಮುಂದಿನ 48 ಗಂಟೆಯಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಬೆಳಗ್ಗೆ ವೇಳೆ ಸೆಖೆಯಾದರೂ ರಾತ್ರಿ ವೇಳೆ ತಾಪಮಾನದಲ್ಲಿ ಇಳಿಕೆಯಾಗುವ ಬಗ್ಗೆ ಹೇಳಲಾಗಿದೆ. ಬೆಂಗಳೂರು ಸೇರಿ ಹಲವೆಡೆ ರಾತ್ರಿಯಾಗುತ್ತಿದ್ದಂತೆ ಚಳಿಯ ವಾತಾವರಣ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Exit mobile version