KS Eshwarappa: ಡಿ.ಕೆ. ಸುರೇಶ್‌ಗೆ ಗುಂಡಿಕ್ಕಿ ಎಂದ ಈಶ್ವರಪ್ಪ ಮೇಲೆ ಲೀಗಲ್ ಆ್ಯಕ್ಷನ್: ಸಿಎಂ ಸಿದ್ದರಾಮಯ್ಯ - Vistara News

ರಾಜಕೀಯ

KS Eshwarappa: ಡಿ.ಕೆ. ಸುರೇಶ್‌ಗೆ ಗುಂಡಿಕ್ಕಿ ಎಂದ ಈಶ್ವರಪ್ಪ ಮೇಲೆ ಲೀಗಲ್ ಆ್ಯಕ್ಷನ್: ಸಿಎಂ ಸಿದ್ದರಾಮಯ್ಯ

KS Eshwarappa: ಡಿ.ಕೆ ಸುರೇಶ್ ಅವರನ್ನು ಗುಂಡಿಕ್ಕಿ ಕೊಲ್ಲಿ ಎಂದು ಕೆ.ಎಸ್.‌ ಈಶ್ವರಪ್ಪ ಹೇಳುತ್ತಾರೆ. ಒಬ್ಬ ಸಂಸದರನ್ನು ಕೊಲ್ಲಿ ಎಂದು ಹೇಳುವುದು ಸರಿಯೇ? ಇಂಥವರನ್ನು ರಾಜಕೀಯ ಧುರೀಣರು ಅಂತ ಹೇಳೋಕೆ ಆಗುತ್ತಾ? ಈಶ್ವರಪ್ಪ ಮೇಲೆ ಲೀಗಲ್ ಆ್ಯಕ್ಷನ್ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

KS Eshwarappa Cm Siddaramaiah and DK Suresh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಂಸದ ಡಿ.ಕೆ.ಸುರೇಶ್ (DK Suresh) ಹಾಗೂ ಶಾಸಕ ವಿನಯ್ ಕುಲಕರ್ಣಿ (Vinay Kulakarni) ರಾಷ್ಟ್ರದ್ರೋಹಿಗಳಾಗಿದ್ದು, ಅವರನ್ನು ಗುಂಡಿಕ್ಕಿ ಕೊಲ್ಲಿ ಎಂಬ ಬಿಜೆಪಿ ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ (KS Eshwarappa) ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.‌ ಈ ಹೇಳಿಕೆ ಬಗ್ಗೆ ಕಾಂಗ್ರೆಸ್ ಕೆಂಡವಾಗಿದೆ. ಈಗ ಈ ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರತಿಕ್ರಿಯೆ ನೀಡಿದ್ದು, ಈಶ್ವರಪ್ಪ ಮೇಲೆ ಲೀಗಲ್ ಆ್ಯಕ್ಷನ್ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡಿ.ಕೆ ಸುರೇಶ್ ಅವರನ್ನು ಗುಂಡಿಕ್ಕಿ ಕೊಲ್ಲಿ ಎಂದು ಕೆ.ಎಸ್.‌ ಈಶ್ವರಪ್ಪ ಹೇಳುತ್ತಾರೆ. ಒಬ್ಬ ಸಂಸದರನ್ನು ಕೊಲ್ಲಿ ಎಂದು ಹೇಳುವುದು ಸರಿಯೇ? ಇಂಥವರನ್ನು ರಾಜಕೀಯ ಧುರೀಣರು ಅಂತ ಹೇಳೋಕೆ ಆಗುತ್ತಾ? ಈಶ್ವರಪ್ಪ ಮೇಲೆ ಲೀಗಲ್ ಆ್ಯಕ್ಷನ್ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಕೆ.ಎಸ್. ಈಶ್ವರಪ್ಪ ಅವರಿಗೆ ಕಡಿಬಡಿ ಅನ್ನೋದು ಗೊತ್ತು.‌ ಇದು ಬಿಟ್ಟರೆ ಅವರಿಗೆ ಏನೂ ಗೊತ್ತಿಲ್ಲ. ಅವರ ಮೇಲೆ ಕಾನೂನಾತ್ಮಕವಾಗಿ ಕ್ರಮವನ್ನು ತೆಗೆದುಕೊಳ್ಳುತ್ತೇವೆ. ಆರ್‌ಎಸ್‌ಎಸ್ ಟ್ರೈನಿಂಗ್ ಆಗಿದೆ ಅಂತಾರೆ. ಈಶ್ವರಪ್ಪ ಅವರಿಗೆ ಅಲ್ಲಿ ಇದೇನಾ ಟ್ರೈನಿಂಗ್ ಆಗಿರೋದು? ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೆ.ಎಸ್.‌ ಈಶ್ವರಪ್ಪ ಹೇಳಿದ್ದೇನು?

ದಾವಣಗೆರೆಯಲ್ಲಿ ಗುರುವಾರ ನಡೆದಿದ್ದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ್ದ ಕೆ.ಎಸ್. ಈಶ್ವರಪ್ಪ, “ಸಂಸದ ಡಿ.ಕೆ.ಸುರೇಶ್ ಹಾಗೂ ಶಾಸಕ ವಿನಯ್ ಕುಲಕರ್ಣಿ ರಾಷ್ಟ್ರದ್ರೋಹಿಗಳು. ಇವರಂತೆ ದೇಶ ವಿಭಜನೆಯ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೆ ತರುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ” ಎಂದು ಹೇಳಿದ್ದರು. ಇದೀಗ ವ್ಯಾಪಕ ಟೀಕೆಗೆ ಗುರಿಯಾಗಿದೆ.

ಕಾಂಟ್ರ್ಯಾಕ್ಟರ್‌ಗಳ‌ ಸಾವಿಗೆ ಕಾರಣರಾದವರನ್ನು ಏನು ಮಾಡಬೇಕು?: ರಾಮಲಿಂಗಾ ರೆಡ್ಡಿ

ಹಾಗಾದರೆ ಕಾಂಟ್ರ್ಯಾಕ್ಟರ್‌ಗಳ‌ ಸಾವಿಗೆ ಕಾರಣರಾದವರನ್ನು ಏನು ಮಾಡಬೇಕು? ಬಿಜೆಪಿಯವರಿಗೆ ಮಾಡೋಕೆ‌ ಏನೂ ಇಲ್ಲ. ಸುಳ್ಳು ಹೇಳೋದೇ ಅವರಿಗೆ ಒಂದು ಕೆಲಸವಾಗಿದೆ ಎಂದು ಕಲಬುರಗಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ನಾಳೆ ಪ್ರತಿಕ್ರಿಯೆ ಕೊಡ್ತೇನೆ: ಡಿ.ಕೆ. ಸುರೇಶ್

ತಮ್ಮನ್ನು ಗುಂಡಿಟ್ಟು ಕೊಲ್ಲುವ ಬಗ್ಗೆ ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ನೀಡಿರುವ ಹೇಳಿಕೆ ಬಗ್ಗೆ ಮಾಧ್ಯಮದವರು ನೀಡಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಸುರೇಶ್‌, ಈ ಬಗ್ಗೆ ಈಗ ಏನೂ ಹೇಳುವುದಿಲ್ಲ. ನಾಳೆ ಪ್ರತಿಕ್ರಿಯೆ ಕೊಡುತ್ತೇನೆ ಎಂದು ಹೇಳಿದರು.

ಯಾರಾದರೂ ದೂರು ಕೊಟ್ಟರೆ ಎಫ್ಐಆರ್: ಗೃಹ ಸಚಿವ ಡಾ. ಜಿ‌. ಪರಮೇಶ್ವರ್

ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ‌. ಪರಮೇಶ್ವರ್ ಮಾತನಾಡಿ, ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರಿಗೆ ಹೇಳಿ ಕಾನೂನು ಜಾರಿ ಮಾಡಲಿ. ಒಂದು ವೇಳೆ ಈ ಕಾನೂನು ಜಾರಿಯಾದರೆ ನಮ್ಮ ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಅನ್ವಯ ಆಗುತ್ತದೆ. ಅವರು ಕಾನೂನು ಜಾರಿ ಮಾಡಲಿ. ಈ ಬಗ್ಗೆ ಪದೇ ಪದೆ ಹೇಳ್ತಾ ಇರ್ತಾರೆ. ಆದರೆ, ಈಗ ಇವರ ಹೇಳಿಕೆಗೆ ಕಾನೂನು ಪ್ರಕಾರ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇವೆ. ಈಶ್ವರಪ್ಪ ಹೇಳಿಕೆಗೆ ಕಾನೂನು ಚೌಕಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು. ಯಾರಾದರೂ ದೂರು ಕೊಟ್ಟರೆ ಎಫ್ಐಆರ್ ಮಾಡಲಾಗುವುದು. ಯಾವ ಉದ್ದೇಶಕ್ಕೆ ಹೇಳಿದ್ದಾರೆ ಎಂಬುದನ್ನು ತನಿಖೆ ಮಾಡಲಾಗುತ್ತದೆ. ಯಾವ ಕಾನೂನು ಅನ್ವಯ ಆಗುತ್ತದೆ ಎಂಬುದನ್ನು ಪೊಲೀಸರು ನಿರ್ಣಯ ಮಾಡುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: PM Narendra Modi: ಮೋದಿಯದ್ದು ಅಮೃತಕಾಲ, ಕಾಂಗ್ರೆಸ್‌ನದ್ದು ವಿನಾಶಕಾಲ ಎಂದ ಬಿಜೆಪಿ

ಮಾತು ವಾಪಸ್‌ ಪಡೆಯದಿದ್ದರೆ 24 ಗಂಟೆಯಲ್ಲಿ ಕ್ರಮ: ಎಚ್.ಕೆ. ಪಾಟೀಲ್‌ ಎಚ್ಚರಿಕೆ

ಕೆ.ಎಸ್. ಈಶ್ವರಪ್ಪ ಹೇಳಿಕೆ ಬಗ್ಗೆ ಕಾನೂನು ಸಚಿವ ಎಚ್ ಕೆ ಪಾಟೀಲ್ ಗರಂ ಆಗಿ ಪ್ರತಿಕ್ರಿಯೆ ನೀಡಿದ್ದು, ಒಮ್ಮಿಂದೊಮ್ಮೆಲೆ ಪ್ರಚಾರಕ್ಕೆ ಬರಬೇಕು ಎಂದು ಇಂಥ ಪ್ರಚೋದನಕಾರಿ ಮಾತುಗಳನ್ನು ಹೇಳುತ್ತಾರೆ. ಒಮ್ಮಿಂದೊಮ್ಮೆಲೆ ಹೀರೋ ಆಗಿಬಿಡುತ್ತೇವೆ ಎನ್ನುವ ಕಲ್ಪನಾ ಲೋಕದಲ್ಲಿ ಇರುತ್ತಾರೆ ಅವರು. ಬಹಳ ದೊಡ್ಡ ಪ್ರಮಾದಗಳನ್ನು ಮಾಡ್ತಾ ಇದ್ದಾರೆ. ರಾಜಕಾರಣದಲ್ಲಿ 40 50 ವರ್ಷ ಇರುವಂಥವರಿಂದ ಬರುವ ಈ ರೀತಿಯ ಮಾತುಗಳು ಬಹಳ ದುಷ್ಪರಿಣಾಮವನ್ನು ಬೀರುತ್ತವೆ. 24 ಗಂಟೆಯೊಳಗೆ ಈಶ್ವರಪ್ಪ ತಮ್ಮ ಮಾತನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ 24 ಗಂಟೆ ಬಳಿಕ ಏನು ಕ್ರಮ ಎಂದು ಹೇಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Modi 3.0 Cabinet: ಜೋಶಿಗೆ ಆಹಾರ, ಎಚ್‌ಡಿಕೆಗೆ ಬೃಹತ್ ಕೈಗಾರಿಕೆ‌, ನಿರ್ಮಲಾಗೆ ವಿತ್ತ, ಸೋಮಣ್ಣಗೆ ಡಬಲ್‌ ಖುಷಿ, ಶೋಭಾಗೆ MSME

Modi 3.0 Cabinet: ಮೋದಿ 3.0 ಸಚಿವ ಸಂಪುಟದಲ್ಲಿ ರಾಜ್ಯದ ಐವರಿಗೆ ಸಚಿವ ಸ್ಥಾನ ಸಿಕ್ಕಿದ್ದು, ಯಾರಿಗೆ ಯಾವ ಖಾತೆ ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Koo

ಬೆಂಗಳೂರು: ಮೋದಿ ಸರ್ಕಾರದ ಸಚಿವ ಸಂಪುಟದಲ್ಲಿ (Modi 3.0 Cabinet) ರಾಜ್ಯದ ಐವರಿಗೆ ಸಚಿವ ಸ್ಥಾನ ಸಿಕ್ಕಿದೆ. ಪ್ರಲ್ಹಾದ್‌ ಜೋಶಿ, ಎಚ್‌.ಡಿ.ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್‌ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ಸಿಕ್ಕಿದ್ದರೆ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯ ಖಾತೆ ನೀಡಲಾಗಿದೆ.

ಕರ್ನಾಟಕದ ರಾಜ್ಯಸಭಾ ಸದಸ್ಯೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮತ್ತೆ ಹಣಕಾಸು ಖಾತೆ ನೀಡಲಾಗಿದ್ದು, ಕಳೆದ ಬಾರಿ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದ ಪ್ರಲ್ಹಾದ್‌ ಜೋಶಿ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ರಕ್ಷಣೆ, ಮರು ಬಳಕೆ ಇಂಧನ ಖಾತೆ ನೀಡಲಾಗಿದೆ. ಇನ್ನು ಮಂಡ್ಯ ಸಂಸದ, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಿಕ್ಕಿದೆ. ಕಳೆದ ಬಾರಿ ಕೃಷಿ ಖಾತೆ ರಾಜ್ಯ ಸಚಿವರಾಗಿದ್ದ ಬೆಂ.ಉತ್ತರ ಕ್ಷೇತ್ರ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಈ ಬಾರಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ರಾಜ್ಯ ಖಾತೆ, ತುಮಕೂರು ಸಂಸದ ವಿ.ಸೋಮಣ್ಣ ಅವರಿಗೆ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ನೀಡಲಾಗಿದೆ.

ಯಾರಿಗೆ ಯಾವ ಖಾತೆ?

1.ನಿರ್ಮಲಾ ಸೀತಾರಾಮನ್‌– ಹಣಕಾಸು ಖಾತೆ (ಸಂಪುಟ ದರ್ಜೆ)
2.ಪ್ರಲ್ಹಾದ್‌ ಜೋಶಿ– ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ರಕ್ಷಣೆ, ಮರು ಬಳಕೆ ಇಂಧನ (ಸಂಪುಟ ದರ್ಜೆ)
3.ಎಚ್‌.ಡಿ.ಕುಮಾರಸ್ವಾಮಿ– ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ (ಸಂಪುಟ ದರ್ಜೆ)
4.ಶೋಭಾ ಕರಂದ್ಲಾಜೆ– ಸಣ್ಣ ಮತ್ತು ಮಧ್ಯಮ ಕೈಗಾರಿಕೆ (ರಾಜ್ಯ ಖಾತೆ)
5. ವಿ.ಸೋಮಣ್ಣ- ಜಲಶಕ್ತಿ ಹಾಗೂ ರೈಲ್ವೆ ಖಾತೆ (ರಾಜ್ಯ ಖಾತೆ)

ಪ್ರಧಾನಿ ಮೋದಿಗೆ ಎಚ್‌ಡಿಕೆ ಧನ್ಯವಾದ

ಕೇಂದ್ರ ಸಚಿವ ಸಂಪುಟದಲ್ಲಿ ಬೃಹತ್ ಕೈಗಾರಿಕೆ ಖಾತೆ ಸಚಿವ ಸ್ಥಾನ ನೀಡಿದ್ದಕ್ಕೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಸತತವಾಗಿ 3ನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸರ್ಕಾರದ ಸಂಪುಟದಲ್ಲಿ ನರೇಂದ್ರ ಮೋದಿ ಅವರು ಅವರು ನನಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಹಂಚಿಕೆ ಮಾಡಿದ್ದು, ಅವರಿಗೆ ನನ್ನ ತುಂಬು ಹೃದಯದ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Modi 3.0 Cabinet: ಮೊದಲ ಸಂಪುಟ ಸಭೆಯಲ್ಲೇ ಮೋದಿ ಸಿಕ್ಸರ್;‌ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

ಅಮಿತ್‌ ಶಾಗೆ ಮತ್ತೆ ಗೃಹ ಖಾತೆ; ಇಲ್ಲಿದೆ ಮೋದಿ ಸಂಪುಟ ಸಚಿವರು ಮತ್ತು ಖಾತೆ ಪಟ್ಟಿ

Modi 3.0 Cabinet
Modi 3.0 Cabinet: Here Are The Modi Cabinet Ministers And Their PortFolios

ನವದೆಹಲಿ: ನರೇಂದ್ರ ಮೋದಿ (Narendra Modi) ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ (Portfolios) ಮಾಡಿದ್ದಾರೆ. ನರೇಂದ್ರ ಮೋದಿ ಅವರು ಮಹತ್ವದ ಖಾತೆಗಳನ್ನು ಬಿಜೆಪಿ ಸಚಿವರಿಗೇ ನೀಡಿದ್ದಾರೆ. ಕೇಂದ್ರ ಗೃಹ ಖಾತೆಯನ್ನು ಅಮಿತ್‌ ಶಾ ಅವರೇ ಹಾಗೂ ರಾಷ್ಟ್ರೀಯ ಹೆದ್ದಾರಿ ಹಾಗೂ ಭೂಸಾರಿಗೆ ಖಾತೆಗಳನ್ನು ನಿತಿನ್‌ ಗಡ್ಕರಿ ಅವರೇ ಮುಂದುರಿಸಿಕೊಂಡು ಹೋಗಲಿದ್ದಾರೆ. ನರೇಂದ್ರ ಮೋದಿ ಅವರು ಯಾರಿಗೆ ಯಾವ ಖಾತೆ ನೀಡಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ.

ಹೀಗಿದೆ ಸಂಪುಟ ದರ್ಜೆ ಸಚಿವರ ಪಟ್ಟಿ ಹಾಗೂ ಅವರ ಖಾತೆಗಳು

  • ಅಮಿತ್ ಶಾ (ಬಿಜೆಪಿ- ಗುಜರಾತ್)- ಗೃಹ ಖಾತೆ
  • ರಾಜನಾಥ್ ಸಿಂಗ್ (ಬಿಜೆಪಿ- ಉತ್ತರ ಪ್ರದೇಶ)- ರಕ್ಷಣಾ ಖಾತೆ
  • ನಿತಿನ್ ಗಡ್ಕರಿ (ಬಿಜೆಪಿ- ಮಹಾರಾಷ್ಟ್ರ)- ರಾಷ್ಟ್ರೀಯ ಹೆದ್ದಾರಿ ಮತ್ತು ಭೂ ಸಾರಿಗೆ
  • ಜೆ.ಪಿ.ನಡ್ಡಾ (ಬಿಜೆಪಿ- ಹಿಮಾಚಲ ಪ್ರದೇಶ)- ಆರೋಗ್ಯ ಮತ್ತು ಕುಟುಂಬ ಕಲ್ಯಾಣ
  • ಶಿವರಾಜ್ ಸಿಂಗ್ ಚೌಹಾಣ್ (ಬಿಜೆಪಿ- ಮಧ್ಯಪ್ರದೇಶ )-‌ ಕೃಷಿ‌, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್
  • ನಿರ್ಮಲಾ ಸೀತಾರಾಮನ್ (ರಾಜ್ಯಸಭೆ ಬಿಜೆಪಿ ಸದಸ್ಯೆ)- ಹಣಕಾಸು
  • ಎಸ್.ಜೈ ಶಂಕರ್ (ರಾಜ್ಯಸಭೆ ಬಿಜೆಪಿ ಸದಸ್ಯ)- ವಿದೇಶಾಂಗ ವ್ಯವಹಾರಗಳ ಖಾತೆ
  • ಮನೋಹರ ಲಾಲ್‌ ಖಟ್ಟರ್‌ (ಬಿಜೆಪಿ- ಹರಿಯಾಣ)- ಇಂಧನ‌ ಮತ್ತು ವಸತಿ
  • ಎಚ್‌.ಡಿ.ಕುಮಾರಸ್ವಾಮಿ (ಜೆಡಿಎಸ್‌- ಕರ್ನಾಟಕ)- ಉಕ್ಕು ಮತ್ತು ಬೃಹತ್‌ ಕೈಗಾರಿಕೆ
  • ಪಿಯೂಷ್‌ ಗೋಯಲ್‌ (ಬಿಜೆಪಿ- ಮಹಾರಾಷ್ಟ್ರ )- ವಾಣಿಜ್ಯ
  • ಧರ್ಮೇಂದ್ರ ಪ್ರಧಾನ್ (ಬಿಜೆಪಿ- ಒಡಿಶಾ): ಶಿಕ್ಷಣ‌, ಮಾನವ ಸಂಪನ್ಮೂಲ
  • ಜಿತನ್ ರಾಮ್ ಮಾಂಝಿ (ಎಚ್‌ಎಎಂ- ಬಿಹಾರ)- ಸಣ್ಣ ಮತ್ತು ಮಧ್ಯಮ ಕೈಗಾರಿಕೆ
  • ರಾಜೀವ್‌ ರಂಜನ್‌ ಸಿಂಗ್‌ (ಲಲನ್‌ ಸಿಂಗ್-ಜೆಡಿಯು-ಬಿಹಾರ)
  • ಸರ್ಬಾನಂದ ಸೋನೊವಾಲ್‌‌ (ಬಿಜೆಪಿ- ಅಸ್ಸಾಂ): ಬಂದರು, ಜಲಸಾರಿಗೆ
  • ರಾಮ್‌ ಮೋಹನ್‌ ನಾಯ್ಡು (ಟಿಡಿಪಿ-ಆಂಧ್ರಪ್ರದೇಶ)- ನಾಗರಿಕ ವಿಮಾನಯಾನ
  • ಪ್ರಲ್ಹಾದ್‌ ಜೋಶಿ (ಬಿಜೆಪಿ- ಕರ್ನಾಟಕ): ಆಹಾರ ಮತ್ತು ಗ್ರಾಹಕ ವ್ಯವಹಾರಗಳು, ನವೀಕರಿಸಬಹುದಾದ ಇಂಧನ, ಆಹಾರ ಮತ್ತು ನಾಗರಿಕ ಪೂರೈಕೆ
  • ಡಾ.ವೀರೇಂದ್ರ ಕುಮಾರ್ (ಬಿಜೆಪಿ-ಮಧ್ಯಪ್ರದೇಶ)- ಸಾಮಾಜಿಕ ನ್ಯಾಯ
  • ಜುವೆಲ್‌ ಒರಾಮ್‌ (ಬಿಜೆಪಿ- ಒಡಿಶಾ)- ಬುಡಕಟ್ಟು
  • ಗಿರಿರಾಜ್‌ ಸಿಂಗ್‌ (ಬಿಜೆಪಿ-ಬಿಹಾರ) -‌ ಜವಳಿ
  • ಅಶ್ವಿನಿ ವೈಷ್ಣವ್‌ (ಬಿಜೆಪಿ-ರಾಜಸ್ಥಾನ-ರಾಜ್ಯಸಭೆ ಸದಸ್ಯ) – ರೈಲ್ವೆ ಮತ್ತು ಮಾಹಿತಿ ಪ್ರಸಾರ
  • ಜ್ಯೋತಿರಾದಿತ್ಯ ಸಿಂಧಿಯಾ (ಬಿಜೆಪಿ-ಮಧ್ಯಪ್ರದೇಶ)- ಟೆಲಿಕಾಮ್
  • ಭೂಪೇಂದ್ರ ಯಾದವ್‌ (ಬಿಜೆಪಿ-ರಾಜಸ್ಥಾನ)- ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ
  • ಗಜೇಂದ್ರ ಸಿಂಗ್ ಶೇಖಾವತ್ (ಬಿಜೆಪಿ- ರಾಜಸ್ಥಾನ): ಪ್ರವಾಸೋದ್ಯಮ ಮತ್ತು ಸಂಸ್ಕೃತಿ
  • ಅನ್ನಪೂರ್ಣ ದೇವಿ (ಬಿಜೆಪಿ-ಜಾರ್ಖಂಡ್)-ಮಹಿಳಾ ಮತ್ತು ಮಕ್ಕಳ ಕಲ್ಯಾಣ
  • ಕಿರಣ್‌ ರಿಜಿಜು (ಬಿಜೆಪಿ- ಅರುಣಾಚಲ ಪ್ರದೇಶ)-‌ ಸಂಸದೀಯ ವ್ಯವಹಾರ
  • ಹರ್ದೀಪ್ ಸಿಂಗ್ ಪುರಿ (ರಾಜ್ಯಸಭೆ ಬಿಜೆಪಿ ಸದಸ್ಯ-ಪಂಜಾಬ್)- ಪೆಟ್ರೋಲಿಯಂ
  • ಡಾ.ಮನ್ಸುಖ್‌ ಮಂಡಾವೀಯ (ಬಿಜೆಪಿ-ಗುಜರಾತ್)‌: ಕಾರ್ಮಿಕ ಮತ್ತು ಉದ್ಯೋಗ
  • ಜಿ.ಕಿಶನ್‌ ರೆಡ್ಡಿ (ಬಿಜೆಪಿ-ತೆಲಂಗಾಣ)- ಕಲ್ಲಿದ್ದಿಲು ಮತ್ತು ಗಣಿಗಾರಿಕೆ
  • ಚಿರಾಗ್‌ ಪಾಸ್ವಾನ್‌ (ಎಲ್‌ಜೆಪಿ-ಬಿಹಾರ)-‌ ಆಹಾರ ಸಂಸ್ಕರಣೆ
  • ಸಿ.ಆರ್‌.ಪಾಟೀಲ್‌ (ಬಿಜೆಪಿ-ಗುಜರಾತ್)-ಜಲಶಕ್ತಿ (ಜಲಸಂಪನ್ಮೂಲ)

ರಾಜ್ಯ ಖಾತೆ ಸಚಿವರು

  • ವಿ. ಸೋಮಣ್ಣ: ಜಲಶಕ್ತಿ ಮತ್ತು ರೈಲ್ವೆ
  • ಶೋಭಾ ಕರಂದ್ಲಾಜೆ: ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಖಾತೆ
  • ತೋಖನ್‌ ಸಾಹು (ಬಿಜೆಪಿ-ಛತ್ತೀಸ್‌ಗಢ)- ವಸತಿ ಮತ್ತು ನಗರಾಭಿವೃದ್ಧಿ
  • ಸುರೇಶ್‌ ಗೋಪಿ (ಬಿಜೆಪಿ-ಕೇರಳ)- ಸಂಸ್ಕೃತಿ ಮತ್ತು ಪ್ರವಾಸೋದ್ಯಮ
  • ಹರ್ಷ ಮಲ್ಹೋತ್ರಾ (ಬಿಜೆಪಿ-ದೆಹಲಿ)- ರಾಷ್ಟ್ರೀಯ ಹೆದ್ದಾರಿ ಮತ್ತು ಭೂ ಸಾರಿಗೆ
Continue Reading

ಕರ್ನಾಟಕ

Vinay Kulkarni: ವಿನಯ್ ಕುಲಕರ್ಣಿಗೆ ತೀವ್ರ ಹಿನ್ನಡೆ; ಸಿಬಿಐ ವಿಶೇಷ ಕೋರ್ಟ್‌ನ ತೀರ್ಪು ಎತ್ತಿ ಹಿಡಿದ ಸುಪ್ರೀಂ

ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ದೋಷಾರೋಪ ಮತ್ತು ವಿಚಾರಣಾ ಪ್ರಕ್ರಿಯೆ ರದ್ದು ಕೋರಿ ಶಾಸಕ ವಿನಯ್‌ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಆದರೆ, ವಿನಯ್ ಕುಲಕರ್ಣಿ ವಿರುದ್ಧ ಹೊರಿಸಿರುವ ಆರೋಪ ಸರಿ ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

VISTARANEWS.COM


on

Vinay Kulkarni
Koo

ಬೆಂಗಳೂರು: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್‌ ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿಗೆ ತೀವ್ರ ಹಿನ್ನಡೆಯಾಗಿದೆ. ವಿನಯ್ ಕುಲಕರ್ಣಿ ವಿರುದ್ಧ ಹೊರಿಸಿರುವ ಆರೋಪ ಸರಿ ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಈ ಮೂಲಕ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ಸೋಮವಾರ ಎತ್ತಿ ಹಿಡಿದಿದೆ.

ವಿಚಾರಣಾ ನ್ಯಾಯಾಲಯದ ತೀರ್ಪನ್ನು ಈ ಹಿಂದೆ ಎತ್ತಿ ಹಿಡಿದಿದ್ದ ಹೈಕೋರ್ಟ್‌ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ನ್ಯಾಯಮೂರ್ತಿಗಳಾದ ಪಿ.ವಿ. ಸಂಜಯ್ ಕುಮಾರ್ ಮತ್ತು ಅಗಸ್ಟಿನ್ ಜಾರ್ಜ್ ಮಸೀಹ್ ಅವರಿದ್ದ ಪೀಠ ನಿರಾಕರಿಸಿದೆ. ಸಿಬಿಐ ವಿಶೇಷ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಕೂಡ ಎತ್ತಿ ಹಿಡಿದಿತ್ತು.

ತಮ್ಮ ವಿರುದ್ಧ ಹೊರಿಸಲಾಗಿರುವ ದೋಷಾರೋಪ ಮತ್ತು ವಿಶೇಷ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣಾ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ವಿನಯ್‌ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಏ.8ರಂದು ಪ್ರಕರಣದ ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ನ್ಯಾಯಪೀಠ, ಶಾಸಕ ವಿನಯ್​ ಕುಲಕರ್ಣಿ ವಿರುದ್ಧ ಚಾರ್ಜ್‌ಶೀಟ್‌ ಕೈಬಿಡಲು ನಿರಾಕರಿಸಿತ್ತು. ಹೀಗಾಗಿ ವಿನಯ್‌ ಕುಲಕರ್ಣಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ, ಸುಪ್ರೀಂ ಕೋರ್ಟ್‌ ಕೂಡ ವಿಚಾರಣಾ ನ್ಯಾಯಾಲಯದ ತೀರ್ಪನ್ನೇ ಎತ್ತಿ ಹಿಡಿದಿದೆ.

ಇದನ್ನೂ ಓದಿ | R Ashok: ವಾಲ್ಮೀಕಿ ನಿಗಮ ಹಗರಣದಲ್ಲಿ ಸಿದ್ದರಾಮಯ್ಯ ಮೊದಲ ಆರೋಪಿ ಎಂದ ಆರ್‌.ಅಶೋಕ್‌

ಏನಿದು ಪ್ರಕರಣ?

ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಗೌಡ ಅವರನ್ನು 2016ರ ಜೂನ್‌ 15ರಂದು ಬರ್ಬರವಾಗಿ ಹತ್ಯೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ 2020ರ ನವೆಂಬರ್‌ನಲ್ಲಿ ವಿನಯ್‌ ಕುಲಕರ್ಣಿ ಅವರ ಬಂಧನವಾಗಿತ್ತು. ಅವರು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಒಂಬತ್ತು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ಒಟ್ಟು 21 ಆರೋಪಿಗಳ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ಕೊಲೆ ಪ್ರಕರಣದಲ್ಲಿ ಆರೋಪಿಯಾದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಈ ಹಿಂದೆ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಒಂದು ವೇಳೆ ಧಾರವಾಡಕ್ಕೆ ತೆರಳಿದರೆ ಜಾಮೀನು ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿತ್ತು. ವಿಧಾನ ಸಭಾ ಚುನಾವಣೆಯಲ್ಲಿ ಗೆಲುವು ಕಂಡರೂ ಶಾಸಕನಿಗೆ ಧಾರವಾಡ ಜಿಲ್ಲೆ ಪ್ರವೇಶದ ಮೇಲಿರುವ ನಿರ್ಬಂಧ ತೆರವು ಮಾಡಿಲ್ಲ.

Continue Reading

ಪ್ರಮುಖ ಸುದ್ದಿ

Modi 3.0 Cabinet: ಮೊದಲ ಸಂಪುಟ ಸಭೆಯಲ್ಲೇ ಮೋದಿ ಸಿಕ್ಸರ್;‌ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

Modi 3.0 Cabinet: ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿಯೇ ಸಂಪುಟ ಸಭೆ ನಡೆದಿದ್ದು, 30 ಸಂಪುಟ ದರ್ಜೆ ಸಚಿವರು, ಐವರು ಸ್ವತಂತ್ರ ಖಾತೆ ನಿರ್ವಹಣೆ ಹಾಗೂ 31 ರಾಜ್ಯ ಖಾತೆ ಸಚಿವರು ಪಾಲ್ಗೊಂಡಿದ್ದರು. ಮೊದಲ ಸಂಪುಟ ಸಭೆಯಲ್ಲಿಯೇ ಬಡವರಿಗೆ ಅನುಕೂಲವಾಗುವ ದಿಸೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದಕ್ಕೆ ಎಲ್ಲ ಸಚಿವರು ಸಹಮತ ಸೂಚಿಸಿದರು.

VISTARANEWS.COM


on

Modi 3.0 Cabinet
Koo

ನವದೆಹಲಿ: ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ (Narendra Modi) ಅವರು ಮೊದಲ ಸಚಿವ ಸಂಪುಟ ಸಭೆ ನಡೆಸಿದ್ದು, ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ದೇಶದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸಿಕೊಡುವ ಮಹತ್ವದ ತೀರ್ಮಾನವನ್ನು ಮೊದಲ ಸಂಪುಟ ಸಭೆಯಲ್ಲಿ (Modi 3.0 Cabinet) ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಆವಾಸ್‌ ಯೋಜನೆ (Pradhan Mantri Awas Yojana-PMAY) ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿಯೇ ಸಂಪುಟ ಸಭೆ ನಡೆದಿದ್ದು, 30 ಸಂಪುಟ ದರ್ಜೆ ಸಚಿವರು, ಐವರು ಸ್ವತಂತ್ರ ಖಾತೆ ನಿರ್ವಹಣೆ ಹಾಗೂ 31 ರಾಜ್ಯ ಖಾತೆ ಸಚಿವರು ಪಾಲ್ಗೊಂಡಿದ್ದರು. ಮೊದಲ ಸಂಪುಟ ಸಭೆಯಲ್ಲಿಯೇ ಬಡವರಿಗೆ ಅನುಕೂಲವಾಗುವ ದಿಸೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದಕ್ಕೆ ಎಲ್ಲ ಸಚಿವರು ಸಹಮತ ಸೂಚಿಸಿದರು. ಇದರೊಂದಿಗೆ ಮೊದಲ ಸಂಪುಟ ಸಭೆಯಲ್ಲಿಯೇ ಬಡವರಿಗೆ ಅನುಕೂಲವಾಗುವ ತೀರ್ಮಾನ ತೆಗೆದುಕೊಂಡಂತಾಗಿದೆ.

ಏನಿದು ಯೋಜನೆ? ಹೇಗೆ ಅನುಕೂಲ?

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬಡವರು ಸ್ವಂತ ಮನೆ ಕನಸನ್ನು ನನಸು ಮಾಡುವ ದಿಸೆಯಲ್ಲಿ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಆವಾಸ್‌ ಯೋಜನೆ ಜಾರಿಗೆ ತಂದಿದೆ. ಯೋಜನೆ ಅಡಿಯಲ್ಲಿ ಫಲಾನುಭವಿಗಳು ಬಯಲು ಪ್ರದೇಶದಲ್ಲಿ ಮನೆ ನಿರ್ಮಿಸಿಕೊಳ್ಳಲು 1.20 ಲಕ್ಷ ರೂ. ನೀಡಲಾಗುತ್ತದೆ. ಇನ್ನು ಗುಡ್ಡಗಾಡು ಪ್ರದೇಶದಲ್ಲಿ ಮನೆ ನಿರ್ಮಿಸಿಕೊಳ್ಳಲು 1.30 ಲಕ್ಷ ರೂ. ಸಹಾಯಧನ ನೀಡಲಾಗುತ್ತದೆ. ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರವು ಸುಮಾರು 4.21 ಕೋಟಿ ಮನೆಗಳನ್ನು ನಿರ್ಮಿಸಿಕೊಟ್ಟಿದೆ.

ಭಾನುವಾರ ಸಂಜೆ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ‘ಪಿಎಂ ಕಿಸಾನ್ ನಿಧಿ’ ಬಿಡುಗಡೆಯ ಕಡತಕ್ಕೆ ಸಹಿ ಹಾಕಿದರು. ಇದು ಅವರು ಮೂರನೇ ಅವಧಿಯಲ್ಲಿ ಸಹಿ ಹಾಕಿದ ಮೊದಲ ಫೈಲ್​. ಪಿಎಂ ಕಿಸಾನ್ ನಿಧಿಯ 17 ನೇ ಕಂತಿನ ಬಿಡುಗಡೆಗೆ ಅಧಿಕಾರ ನೀಡುವ ಕಡತಕ್ಕೆ ಅವರು ಸಹಿ ಹಾಕಿದರು. ಇದು 9.3 ಕೋಟಿ ರೈತರಿಗೆ ಪ್ರಯೋಜನ ನೀಡುವ ಸುಮಾರು 20,000 ಕೋಟಿ ರೂ. ಬಿಡುಗಡೆಯಾಗಲಿದೆ.

ಇದನ್ನೂ ಓದಿ: Tshering Tobgay: ಮೋದಿ ನನ್ನ ಗುರು, ದೊಡ್ಡಣ್ಣ;‌ ಭೂತಾನ್‌ ಪ್ರಧಾನಿ ತ್ಶೆರಿಂಗ್‌ ತೋಬ್ಗೆ ಬಹುಪರಾಕ್!

Continue Reading

ಕರ್ನಾಟಕ

Shivaraj Kumar: ನನ್ನ ಹೆಂಡತಿ ಗೆಲ್ಲಲಿ ಎಂದು ಆಸೆ ಪಟ್ಟಿದ್ದು ತಪ್ಪಾ?: ನಟ ಶಿವರಾಜ್‌ ಕುಮಾರ್‌

Shivaraj Kumar: ಶಿವಮೊಗ್ಗದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ನಟ ಶಿವರಾಜ್‌ ಕುಮಾರ್‌ ಮಾತನಾಡಿದ್ದಾರೆ. ಸೋಲೇ ಗೆಲುವಿನ‌ ಮೆಟ್ಟಿಲು, ಹತಾಷರಾಗುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Shivaraj Kumar
Koo

ಶಿವಮೊಗ್ಗ: ಚುನಾವಣೆಯಲ್ಲಿ ನಾನೂ ಒಬ್ಬ ಕಾರ್ಯಕರ್ತನಾಗಿ ಕೆಲಸ‌ ಮಾಡಿದ್ದೇನೆ. ಆದರೆ ಕೆಲವರು ಅದನ್ನು ಬಣ್ಣ ಹಚ್ಚಿದ್ದಾರೆಂದು ಹೇಳಿದ್ದಾರೆ. ನಾನು ರಿಯಲ್‌ ಲೈಫ್‌ನಲ್ಲಿ ಬಣ್ಣ ಹಚ್ಚಿಲ್ಲ. ನನ್ನ ಹೆಂಡತಿ ಗೆಲ್ಲಲಿ ಎಂದು ಆಸೆ ಪಟ್ಟಿದ್ದು ತಪ್ಪಾ? ಸೋತಿದ್ದು ಬೇಸರವಾಯಿತು ಎಂದು ನಟ ಶಿವರಾಜ್‌ ಕುಮಾರ್‌ (Shivaraj Kumar) ಹೇಳಿದ್ದಾರೆ.

ನಗರದಲ್ಲಿ ಸೋಮವಾರ ಆಯೋಜಿಸಿದ್ದ ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಅವರು, ಸಾರ್ವಜನಿಕವಾಗಿ ಮಾತನಾಡುವಾಗ ಭಯ ಆಗುತ್ತದೆ. ಆದರೂ ಎಲ್ಲವನ್ನೂ ಬಿಟ್ಟುಬಂದು, ನನ್ನ ಹೆಂಡತಿ‌- ಮಕ್ಕಳನ್ನು ಸಾಕುವ ಶಕ್ತಿ ನನಗಿದೆ. ಸಿನಿಮಾದಲ್ಲಿ ಸಣ್ಣ-ಪುಟ್ಟ ಪಾತ್ರಗಳು ಬರುತ್ತವೆ. ಆದರೆ, ರಾಜಕೀಯ ಆಗಿಲ್ಲ. ಪ್ರತಿಯೊಬ್ಬರಿಗೂ ಆಸೆ ಇರುತ್ತದೆ ಎಂದು ತಿಳಿಸಿದ್ದಾರೆ.

ನಿಮ್ಮೊಂದಿಗೆ ಇದ್ದಿದ್ದೆ ಖುಷಿ ವಿಚಾರ. ಜೀವನ ನಡೆಯಬೇಕು, ಸಾವಿರ ಜನ ಸಾವಿರ ಮಾತನಾಡುತ್ತಾರೆ. ನಮ್ಮ ನಿಯತ್ತು ನಮ್ಮನ್ನು ಕಾಪಾಡುತ್ತದೆ. ನನ್ನ ಜೀವನ ನಾವೇ ರೂಪಿಸಿಕೊಳ್ಳಬೇಕು. ನನ್ನ ಹೆಂಡತಿ ಗೆಲ್ಲಲಿ ಎಂದು ಅಸೆ ಪಟ್ಟಿದ್ದು ತಪ್ಪಾ? ಸೋತಿದ್ದು ಬೇಸರವಾಯಿತು. ಸೋಲೇ ಗೆಲುವಿನ‌ ಮೆಟ್ಟಿಲು, ಹತಾಷರಾಗುವ ಅವಶ್ಯಕತೆ ಇಲ್ಲ. ನಾನು ತಪ್ಪು ಮಾಡಿದರೆ ನನಗೇ ಶಿಕ್ಷೆ ಆಗುತ್ತದೆ. ಮನಸ್ಥಾಪ ತೆಗೆದುಬಿಡಿ, ತಪ್ಪು ದಾರಿಯಿಂದ ಒಳ್ಳೆಯ ದಾರಿಗೆ ಕರೆದುಕೊಂಡು ಬರಬೇಕು. ಸಾವಿರ ಜನ ಸಾವಿರ ಮಾತಾನಾಡಲಿ ಅದಕ್ಕೆಲ್ಲ ತಲೆಕೆಡಿಸಿಕೊಳ್ಳಬಾರದು. ಈ ಕಿವೀಲಿ ಕೇಳಿ, ಆ ಕಿವೀಲಿ ಬಿಡಬೇಕು ಎಂದು ತಿಳಿಸಿದ್ದಾರೆ.

ಶಿವಮೊಗ್ಗ ಬಿಟ್ಟು ಹೋಗುವ ಪ್ರಶ್ನೆ ಇಲ್ಲ: ಗೀತಾ ಶಿವರಾಜ್‌ ಕುಮಾರ್

ಗೀತಾ ಶಿವರಾಜ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ದೊಡ್ಡ ಪ್ರಮಾಣದ ಮತಗಳು ಬಂದಿರುವುದು ಇದೇ‌ ಮೊದಲು. ಮತದಾರರೇ ದೇವರು, ಸಹೋದರ ಮಧು ತೀವ್ರ ಶ್ರಮ ಪಟ್ಟಿದ್ದಾರೆ. ಪತಿ ಶಿವರಾಜ್ ಕುಮಾರ್ ಕೂಡ ನನ್ನ ಜತೆಗಿದ್ದರು. ಚುನಾವಣೆ ಮಾತ್ರ ಅಲ್ಲ, ಯಾವಾಗಲೂ ಅವರು ನನ್ನ ಜತೆಗಿರುತ್ತಾರೆ. ಚುನಾವಣೆಯಲ್ಲಿ ಸೋಲಾಗಿದೆ ಎಂದು ಶಿವಮೊಗ್ಗ ಬಿಟ್ಟು ಹೋಗುವ ಪ್ರಶ್ನೆ ಇಲ್ಲ. ಇಲ್ಲೇ ಇರುತ್ತೇನೆ ಶಕ್ತಿಧಾಮ ಮಾದರಿ ಇಲ್ಲೊಂದು ಪುನರ್ವಸತಿ ಕೇಂದ್ರ ಶುರು ಮಾಡುತ್ತೇವೆ, ಮನೆ ಕೂಡ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ | R Ashok: ವಾಲ್ಮೀಕಿ ನಿಗಮ ಹಗರಣದಲ್ಲಿ ಸಿದ್ದರಾಮಯ್ಯ ಮೊದಲ ಆರೋಪಿ ಎಂದ ಆರ್‌.ಅಶೋಕ್‌

ಟಾಟಾ ಬಾಯ್ ಬಾಯ್ ಏನೂ ಇಲ್ಲ, ನಿಮ್ಮೊಂದಿಗೆ ಇರಲಿದ್ದೇನೆ. ಇನ್ನೂ ಸಾಕಷ್ಟು ವಿಚಾರಗಳಿವೆ. ಆದರೆ ಅದನ್ನು ಇನ್ನೊಮ್ಮೆ ಅದನ್ನು ಬಹಿರಂಗ ಪಡಿಸುತ್ತೇನೆ. ಚುನಾವಣೆಯಲ್ಲಿ ಸೋತಿದ್ದಕ್ಕೆ ಬೇಜಾರ್ ಇಲ್ಲ, ನನ್ನ ತಂದೆಯೂ ಸೋತಿದ್ದರು. ಗೆಲ್ಲುತ್ತೇವೆ ಎಂದುಕೊಂಡಿದ್ದೆ. ಐದೂವರೆ ಲಕ್ಷ ಜನರು ಮತ ಹಾಕಿದ್ದಾರೆ ಎಂದರೆ ಸಣ್ಣ ವಿಚಾರವಲ್ಲ ಎಂದು ತಿಳಿಸಿದ್ದಾರೆ.

Continue Reading
Advertisement
Yuva Rajkumar
ಕರ್ನಾಟಕ4 hours ago

Yuva Rajkumar: ‘ಅನೈತಿಕ ಸಂಬಂಧ’ ಎಂದು ಯುವ ಪರ ವಕೀಲ ಆರೋಪ; ತಿರುಗೇಟು ಕೊಟ್ಟ ಶ್ರೀದೇವಿ!

Yuva Rajkumar
ಪ್ರಮುಖ ಸುದ್ದಿ5 hours ago

Yuva Rajkumar: ಹಲ್ಲು ಉಜ್ಜಲ್ಲ, ಸ್ನಾನ ಮಾಡಲ್ಲ, ಫಿಟ್ ಇಲ್ಲ ಎಂದು ಕಿರುಕುಳ ಕೊಡುತ್ತಿದ್ದ ಯುವ ಪತ್ನಿ!: ವಕೀಲರ ಆರೋಪ

Minister Dinesh Gundurao instructed to prepare for the disaster management that may occur on the coast during rainy season.
ದಕ್ಷಿಣ ಕನ್ನಡ5 hours ago

Mangalore News: ಸಿಡಿಲ ಅಪಾಯ ಇರುವ ಸ್ಥಳಗಳಲ್ಲಿ ಮಿಂಚು ಪ್ರತಿಬಂಧಕ ವ್ಯವಸ್ಥೆ; ಸರ್ಕಾರದ ನಿರ್ಧಾರ

Inauguration of Pushpam Ayurveda Wellness Center in Bengaluru
ಬೆಂಗಳೂರು5 hours ago

Bengaluru News: ಬೆಂಗಳೂರಿನಲ್ಲಿ ಪುಷ್ಪಮ್ ಆಯುರ್ವೇದ ವೆಲ್‌ನೆಸ್ ಸೆಂಟರ್‌ಗೆ ಚಾಲನೆ

Kalki 2898 AD Trailer Released on Vyjayanthi Movies YouTube Channel
ಕರ್ನಾಟಕ5 hours ago

Kalki 2898 AD: ಮೈನವಿರೇಳಿಸುವ ‘ಕಲ್ಕಿ 2898 AD’ ಚಿತ್ರದ ಟ್ರೇಲರ್‌ ರಿಲೀಸ್‌!

Mohan Bhagwat
ದೇಶ6 hours ago

Mohan Bhagwat: ಮಣಿಪುರ ಹಿಂಸೆ ನಿಲ್ಲಿಸಿ; ಅಧಿಕಾರ ಹಿಡಿದ ಮೋದಿಗೆ ಟಾಸ್ಕ್‌ ಕೊಟ್ಟ ಮೋಹನ್‌ ಭಾಗವತ್!

Stabbing Case
ಕರ್ನಾಟಕ6 hours ago

Stabbing Case: ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ; ಐವರು ಆರೋಪಿಗಳ ಬಂಧನ

Yuva Rajkumar
ಕರ್ನಾಟಕ7 hours ago

Yuva Rajkumar: ಶ್ರೀದೇವಿ ಭೈರಪ್ಪಗೆ ಅಕ್ರಮ ಸಂಬಂಧ; ಯುವ ರಾಜ್‌ಕುಮಾರ್ ಪರ ವಕೀಲ ಸ್ಫೋಟಕ ಹೇಳಿಕೆ

Modi 3.0 Cabinet
ದೇಶ8 hours ago

Modi 3.0 Cabinet: ಮೋದಿಗೆ ಬಾಹ್ಯಾಕಾಶ, ಅಮಿತ್‌ ಶಾಗೆ ಗೃಹ ಖಾತೆ; ಇಲ್ಲಿದೆ 72 ಸಚಿವರು ಹಾಗೂ ಖಾತೆಗಳ ಪಟ್ಟಿ

ಕರ್ನಾಟಕ8 hours ago

Modi 3.0 Cabinet: ಜೋಶಿಗೆ ಆಹಾರ, ಎಚ್‌ಡಿಕೆಗೆ ಬೃಹತ್ ಕೈಗಾರಿಕೆ‌, ನಿರ್ಮಲಾಗೆ ವಿತ್ತ, ಸೋಮಣ್ಣಗೆ ಡಬಲ್‌ ಖುಷಿ, ಶೋಭಾಗೆ MSME

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ11 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ7 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌