Lingayat CM: ಲಿಂಗಾಯತ ಲಡಾಯಿ; ವಿನಯ ಕುಲಕರ್ಣಿ ಶಾಮನೂರು ಪರ ; ಪುತ್ರ ಮಲ್ಲಿಕಾರ್ಜುನ್‌ ಅಪಸ್ವರ - Vistara News

ಕರ್ನಾಟಕ

Lingayat CM: ಲಿಂಗಾಯತ ಲಡಾಯಿ; ವಿನಯ ಕುಲಕರ್ಣಿ ಶಾಮನೂರು ಪರ ; ಪುತ್ರ ಮಲ್ಲಿಕಾರ್ಜುನ್‌ ಅಪಸ್ವರ

Lingayat CM : ಲಿಂಗಾಯತರ ಅವಗಣನೆಯ ಚರ್ಚೆ ಇನ್ನೂ ಚಾಲ್ತಿಯಲ್ಲಿದೆ. ಆದರೆ, ಅದರ ತೀವ್ರತೆ ಸ್ವಲ್ಪ ಕಡಿಮೆಯಾದಂತಿದೆ. ಸ್ವತಃ ಶಾಮನೂರು ಪುತ್ರ ಎಸ್‌ಎಸ್‌. ಮಲ್ಲಿಕಾರ್ಜುನ ಅವರೇ ಆ ರೀತಿ ಏನೂ ಇಲ್ಲ ಎಂದಿದ್ದಾರೆ.

VISTARANEWS.COM


on

Shamanuru Shivashankarappa Vinay Kulkarni Mallikarjun
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ (Shamanuru Shivashankarappa) ಅವರು ಹಚ್ಚಿದ ಲಿಂಗಾಯತ ಅವಗಣನೆ (Lingayat CM) ಬೆಂಕಿ ಇನ್ನೂ ಸಿಡಿಯುತ್ತಲೇ ಇದೆ. ಕೆಲವು ನಾಯಕರು ಲಿಂಗಾಯತ ಅಧಿಕಾರಿಗಳ ಅವಗಣನೆ (Neglecting Lingayat officials) ಹೇಳಿಕೆ ಸರಿ ಎನ್ನುತ್ತಿದ್ದರೆ ಇನ್ನು ಕೆಲವರು ತಪ್ಪು ಮಾಹಿತಿಯಿಂದ ಶಾಮನೂರು ಮಾತನಾಡಿದ್ದಾರೆ ಅನ್ನುತ್ತಿದ್ದಾರೆ. ಲಿಂಗಾಯತ ಸಮುದಾಯದ ಹಿರಿಯ ನಾಯಕರಲ್ಲಿ ಒಬ್ಬರಾದ ವಿನಯ ಕುಲಕರ್ಣಿ ಅವರು ಶಾಮನೂರು ಪರವಾಗಿ ಮಾತನಾಡಿದ್ದಾರೆ. ಅಚ್ಚರಿ ಎಂಬಂತೆ ಶಾಮನೂರು ಅವರ ಪುತ್ರ ಮಲ್ಲಿಕಾರ್ಜುನ್‌ ಅವರು ಅಧಿಕಾರಿಗಳಿಗೆ ಸಮಸ್ಯೆ ಆಗಿಲ್ಲ ಅಂದಿದ್ದಾರೆ.

ಶಾಮನೂರು ಹೇಳಿಕೆ ಸತ್ಯವೇ ಇರಬಹುದು.. ಆದರೆ..: ವಿನಯ ಕುಲಕರ್ಣಿ

ಲಿಂಗಾಯತ ಸಮಾಜದ ಹಿರಿಯ ನಾಯಕರಾದ ವಿನಯ ಕುಲಕರ್ಣಿ ಅವರು, ಶಾಮನೂರು ಶಿವಶಂಕರಪ್ಪ ಅವರು ಹೇಳಿದ ಮಾತು ಸರಿ ಇರಬಹುದು. ಅವರು ಹೇಳಿದ್ದಾರೆ ಎಂದ ಮೇಲೆ ಸತ್ಯವಾಗಿಯೇ ಇರುತ್ತದೆ ಎಂದಿದ್ದಾರೆ. ಆದರೆ, ಅವರು ಅದನ್ನು ಮಾಧ್ಯಮಗಳ ಮೂಲಕ ಬಹಿರಂಗವಾಗಿ ಹೇಳುವುದು ಬೇಕಿರಲಿಲ್ಲ ಎಂದಿದ್ದಾರೆ.

ʻʻಇದನ್ನೆಲ್ಲ ಸಿಎಂಗೆ ಹೇಳಿ ಇದನ್ನು ಸರಿಪಡಿಸುವ ತಾಕತ್ತು ನಮಗೆಲ್ಲ ಇದೆ. ನನ್ನ ಬಳಿಯೂ ಎರಡು ಮೂರು ಅಧಿಕಾರಿಗಳು ಬಂದಿದ್ದರು. ನಾನೇ ಸಿಎಂ ಬಳಿ ಹೇಳಿ ಕೆಲಸ ಮಾಡಿಸಿಕೊಟ್ಟೆʼʼ ಎಂದು ವಿನಯ ಕುಲಕರ್ಣಿ ಹೇಳಿದರು.

Shamanuru Shivashankarappa Siddaramaiah Lingayat CM

ʻʻಸಿಎಂ ನಮ್ಮ ಹೊರಗಿನವರಲ್ಲ, ನಮ್ಮದೇ ಕುಟುಂಬ. ಒಂದು ಸಮಾಜದಿಂದ ಯಾರೂ ಸಿಎಂ ಆಗುವುದಿಲ್ಲ. ಒಂದು ಸಮಾಜದಿಂದ ಯಾರೂ ಶಾಸಕರಾಗುವುದಿಲ್ಲ. ಎಲ್ಲರೂ ಸೇರಿ ಗೆಲ್ಲಿಸಿರುತ್ತಾರೆ. ಅಧಿಕಾರಿಗಳು ಅಥವಾ ರಾಜಕಾರಣಿಗಳಿಗೆ ಸಮಸ್ಯೆ ಆಗುತ್ತಿದ್ದರೆ ಅಂತವರು ನಮ್ಮ ಗಮನಕ್ಕೆ ತರಲಿ. ಸಿಎಂ ಬಳಿ ಮಾತಾಡೋದಕ್ಕೆ ನಮಗೇನೂ ಸಮಸ್ಯೆ ಇಲ್ಲ. ನಮ್ಮ ನಮ್ಮ ಒಳಗಡೆ ಇದೆಲ್ಲ ಸರಿಪಡಿಸಿಕೊಳ್ಳುತ್ತೇವೆʼʼ ಎಂದು ವಿನಯ ಕುಲಕರ್ಣಿ ಹೇಳಿದರು.

ʻʻಲಿಂಗಾಯತರು ಕಾಂಗ್ರೆಸ್ ಗೆ ಓಟು ಹಾಕಿಲ್ಲ ಎನ್ನೋರು ಮೂರ್ಖರು. ಮಾತಾಡಿ ಮಾತಾಡಿಯೇ ಇಷ್ಟು ವರ್ಷ ಲಿಂಗಾಯತರು ಕಾಂಗ್ರೆಸ್ ನಿಂದ ದೂರವಾಗಿದ್ದರುʼʼ ಎಂದು ಕೆಲವರ ಮಾತಿಗೆ ಆಕ್ರೋಶ ವ್ಯಕ್ತಪಡಿಸಿದರು.

ಲಿಂಗಾಯತ ಅಧಿಕಾರಿಗಳಿಗೆ ಸಮಸ್ಯೆ ಆಗಿಲ್ಲ ಎಂದ ಎಸ್‌ಎಸ್‌ ಮಲ್ಲಿಕಾರ್ಜುನ್‌

ಈ ನಡುವೆ, ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್‌.ಎಸ್‌. ಮಲ್ಲಿಕಾರ್ಜುನ ಅವರು ಲಿಂಗಾಯತ ಅಧಿಕಾರಿಗಳಿಗೆ ಸಮಸ್ಯೆ ಆಗಿಲ್ಲ ಎಂದರು.

ʻʻಶಾಮನೂರು ಶಿವಶಂಕರಪ್ಪ ಅವರು ಹೇಳಿದ್ದನ್ನು ಅವರಿಗೇ ಕೇಳಿ. ಸಿಎಂ ಮಾತಾನಾಡ್ತೀನಿ ಅಂದಿದ್ದಾರೆ. ಅವರವರೇ ಮಾತಾಡ್ತಾರೆ. ಅವರ ವೈಯಕ್ತಿಕ ವಿಚಾರ ಏನೂ ಅಂತ ಗೊತ್ತಿಲ್ಲ. ತಂದೆಯವರ ಜೊತೆಗೆ ನಾನು ಮಾತನಾಡಿಲ್ಲʼʼ ಎಂದರು. ʻʻಇದು ಮುಗಿದು ಹೋದ ಅಧ್ಯಾಯ, ಮುಗಿದು ಹೋದ ಕಥೆ. ಸಿಎಂ – ಶಾಮನೂರು ಮಾತಾಡಿಕೊಳ್ತಾರೆʼʼ ಎಂದು ಹೇಳಿದರು.

ಶಾಮನೂರಿಗೆ ಮಾಹಿತಿ ಕೊರತೆ ಎಂದ ಗುಂಡೂರಾವ್‌

ʻʻಶಾಮನೂರು ಶಿವಶಂಕರಪ್ಪ ಪಕ್ಷರ ಹಿರಿಯ ನಾಯಕರು. ಅವರಿಗೆ ಮಾಹಿತಿ ಕೊರತೆ ಇದೆ. ನಮ್ಮ ಸರ್ಕಾರ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತಿದೆ. ಯಾವುದೇ ಒಂದು ಜಾತಿಗೆ ಸೀಮಿತವಾಗದೆ ಒಟ್ಟಿಗೆ ಹೋಗುತ್ತಿದ್ದೇವೆ. ಪಕ್ಷ ಹಾಗೂ ಸರ್ಕಾರದ ಹಂತದಲ್ಲಿ ಎಲ್ಲಾ ಸಮುದಾಯವರಿಗೂ ಆದ್ಯತೆ ನೀಡಲಾಗಿದೆ. ಆದರೆ ಅವರು ಯಾವ ದೃಷ್ಟಿಯಿಂದ ಹೇಳಿದ್ದಾರೋ ಗೊತ್ತಿಲ್ಲʼʼ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ನ್ಯೂನತೆ ಇದ್ದರೆ ಸರಿ ಮಾಡ್ತೇವೆ ಎಂದ ಈಶ್ವರ ಖಂಡ್ರೆ

ʻʻಶಾಮನೂರು ನಮ್ಮ ಸಮಾಜದ ಉತ್ಕೃಷ್ಟ ನಾಯಕರು. ಅವರೊಂದಿಗೆ ಸಿಎಂ ಮಾತನಾಡ್ತಾರೆ. ನಾನೂ ಕೂಡ ಶಾಮನೂರು ಶಿವಶಂಕರಪ್ಪ ಜೊತೆಗೆ ಮಾತನಾಡ್ತೇನೆ. ನಮ್ಮ ಸರ್ಕಾರ ಎಲ್ಲ ಸಮುದಾಯಗಳನ್ನು ಜೊತೆಗೆ ತೆಗೆದುಕೊಂಡು ಹೋಗುತ್ತೇನೆ. ಏನಾದರೂ ನ್ಯೂನತೆ ಇದ್ದರೆ ಸರ್ಕಾರ ಅದನ್ನು ಸರಿಪಡಿಸುತ್ತದೆʼʼ ಎಂದು ಸಚಿವರೂ ಆಗಿರುವ ವೀರಶೈವ ಮಹಾಸಭಾ ಪ್ರಧಾನ ಕಾರ್ಯದರ್ಶಿ ಈಶ್ವರ್ ಖಂಡ್ರೆ ಹೇಳಿದ್ದಾರೆ.

ʻʻನಾನೊಬ್ಬ ಸಚಿವ, ನನ್ನ ಎಲ್ಲ ಸಮುದಾಯದ ಅಧಿಕಾರಿಗಳೂ ಭೇಟಿ ಆಗ್ತಾರೆ. ಈ ವಿಚಾರ, ಆ ವಿಚಾರ ಅಂತೇನೂ ಇರಲ್ಲ. ಸಚಿವನಾಗಿ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗ್ತೇವೆ. ನಾನು ಸಚಿವನೂ ಹೌದು, ವೀರಶೈವ ಮಹಾಸಭಾ ಪ್ರಧಾನ ಕಾರ್ಯದರ್ಶಿಯೂ ಹೌದು. ಸಮನ್ವಯ ಸಾಧಿಸುವ ಜವಾಬ್ದಾರಿ ಇದೆ. ಅದನ್ನು ಮಾಡ್ತಾ ಹೋಗುತ್ತೇನೆ. ಎರಡೂ ಜವಾಬ್ದಾರಿ ನಿಭಾಯಿಸುತ್ತೇನೆʼʼ ಎಂದರು ಈಶ್ವರ ಖಂಡ್ರೆ.

ನನಗೆ ಅದು ಸರಿ ಇದೆ ಅನಿಸ್ತಿಲ್ಲ ಎಂದ ವಿಜಯಾನಂದ ಕಾಶಪ್ಪನವರ್‌

ʻʻಶಾಮನೂರು ಶಿವಶಂಕರಪ್ಪ ಅವರು ಹಿರಿಯ ನಾಯಕರು. ಅವರ ಅನಿಸಿಕೆಯನ್ನು ಹೇಳಿರಬಹುದು. ಆದರೆ ಆ ರೀತಿ ಆಗಿದೆ ಅಂತಾ ಅನ್ನಿಸ್ತಿಲ್ಲ. ಎಲ್ಲಿ‌ ಏನಾಗಿದೆ ಅನ್ನೋದನ್ನು ಅವರೇ ಹೇಳಬೇಕುʼʼ ಎಂದು ಶಾಸಕ ವಿಜಯಾನಂದ ಕಾಶಪ್ಪನವರ್‌ ಹೇಳಿದರು.

ʻʻರಾಜ್ಯದಲ್ಲಿ ನಮ್ಮದೇ ಸರ್ಕಾರ ಇದೆ. ಅವರು ನೇರವಾಗಿ ಸಿಎಂ, ಡಿಸಿಎಂ ಭೇಟಿ ಮಾಡಿ ಹೇಳಬಹುದಾಗಿತ್ತು. ಆದರೆ, ಹೀಗೆ ಬಹಿರಂಗವಾಗಿ ಹೇಳಿರೋದು ಯಾಕೋ ಗೊತ್ತಿಲ್ಲʼʼ ಎಂದರು.

ಇದನ್ನೂ ಓದಿ: Lingayat CM : ರಾಜ್ಯದಲ್ಲಿ 3 ಲಿಂಗಾಯತ ಡಿಸಿ, 7 ಎಸ್ಪಿ ಇದಾರೆ; ಶಾಮನೂರು ಹೇಳಿಕೆ 100% ತಪ್ಪು ಎಂದ ರಾಯರೆಡ್ಡಿ

ಜಾತಿ ಆಧಾರದಲ್ಲಿ ಅಧಿಕಾರಿಗಳ ನೇಮಕ ಕಷ್ಟ ಎಂದ ತಂಗಡಗಿ

ʻʻಮಂತ್ರಿಗಳ ಸ್ಥಾನ, ಸೀಟು ಹಂಚಿಕೆ ಜಾತಿ ಮೇಲೆ ಮಾಡಬಹುದು. ಆದರೆ ಅಧಿಕಾರಿಗಳನ್ನು ಜಾತಿ ಆಧಾರದಲ್ಲಿ ನೇಮಕ ಮಾಡುವುದಿಲ್ಲ. ಅಧಿಕಾರಿಗಳನ್ನು ಮೆರಿಟ್ ಆಧಾರದಲ್ಲಿ ಪೋಸ್ಟಿಂಗ್ ಮಾಡಲಾಗುತ್ತದೆ. ಶಾಮನೂರು ಹಿರಿಯರು. ಅವರು ಹಾಗೆ ಹೇಳಬಾರದಿತ್ತು. ಸಿಎಂ, ಡಿಸಿಎಂ ಅವರ ಜೊತೆ ಮಾತಾಡ್ತಾರೆʼʼ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bangalore Rain: ಮಳೆ ಹಾನಿ ಬಗ್ಗೆ ಬೆಸ್ಕಾಂಗೆ ದೂರುಗಳ ಸುರಿಮಳೆ; ಉರುಳಿ ಬಿದ್ದ 176 ವಿದ್ಯುತ್ ಕಂಬ, 9 ಟ್ರಾನ್ಸ್‌ಫಾರ್ಮರ್‌ಗೆ ಹಾನಿ

Bangalore Rain: ಬೆಂಗಳೂರು ನಗರ ವ್ಯಾಪ್ತಿಯಲ್ಲಿ 74 ವಿದ್ಯುತ್ ಕಂಬಗಳು ಧರೆಗುರುಳಿದ್ದು, 102 ವಿದ್ಯುತ್ ಕಂಬಗಳ ಮೇಲೆ ಮರಗಳು ಬಿದ್ದಿವೆ. ಇನ್ನು 9 ಟ್ರಾನ್ಸ್ ಫಾರ್ಮರ್‌ಗಳಿಗೆ ಮಳೆಯಿಂದ ಹಾನಿಯಾಗಿದೆ. ಇದರಿಂದ ಬೆಸ್ಕಾಂಗೆ ಕೋಟ್ಯಂತರ ರೂ. ನಷ್ಟವಾಗಿದೆ.

VISTARANEWS.COM


on

Bangalore Rain
ಬೆಂಗಳೂರಿನ ಬಿಟಿಎಂ ಲೇಔಟ್‌ನ 29ನೇ ಮುಖ್ಯ ರಸ್ತೆಗೆ ಬೃಹತ್ ಮರ ಬಿದ್ದಿದ್ದು, ತೆರವು ಕಾರ್ಯ ನಡೆಯುತ್ತಿದೆ.
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ತಡರಾತ್ರಿ ಸುರಿದ ಧಾರಾಕಾರ ಮಳೆಯು (Bangalore Rain) ಸಾಕಷ್ಟು ಅವಾಂತರ ಸೃಷ್ಟಿಸಿದೆ. ಹೀಗಾಗಿ ಬೆಸ್ಕಾಂ ಹೆಲ್ಪ್ ಲೈನ್‌ 1912ಗೆ ದೂರುಗಳ ಸುರಿಮಳೆಯೇ ಬಂದಿದ್ದು, ವಿದ್ಯುತ್‌ ಕಂಬಗಳು ಉರುಳಿರುವುದು, ಮರಗಳು ಬಿದ್ದಿರುವುದು, ವಿದ್ಯುತ್‌ ಕಡಿತ ಸೇರಿ ಹಲವು ಸಮಸ್ಯೆಗಳ ಬಗ್ಗೆ ಬರೋಬ್ಬರಿ 8745 ದೂರುಗಳು ದಾಖಲಾಗಿವೆ. ಮತ್ತೊಂದೆಡೆ ಬೆಂಗಳೂರಿನಲ್ಲಿ ಭಾನುವಾರ (ಜೂ.2) ಸುರಿದ ಮಳೆಯು (Heavy Rain) 133 ವರ್ಷಗಳ ರೆಕಾರ್ಡ್ ಬ್ರೇಕ್ ಮಾಡಿರುವುದು ಕಂಡುಬಂದಿದೆ.

ಧಾರಕಾರ ಮಳೆ ಹಿನ್ನೆಲೆಯಲ್ಲಿ ಅತಿ ಹೆಚ್ಚಿನ ದೂರುಗಳು ಬಂದಿದ್ದು, ಬೆಸ್ಕಾಂ ವ್ಯಾಪ್ತಿಯಲ್ಲಿ 74 ವಿದ್ಯುತ್ ಕಂಬಗಳು ಧರೆಗುರುಳಿದ್ದು, 102 ವಿದ್ಯುತ್ ಕಂಬಗಳ ಮೇಲೆ ಮರಗಳು ಬಿದ್ದಿವೆ. ಇನ್ನು 9 ಟ್ರಾನ್ಸ್‌ಫಾರ್ಮರ್‌ಗಳಿಗೆ ಮಳೆಯಿಂದ ಹಾನಿಯಾಗಿದೆ. ಭಾರಿ ಮಳೆಗೆ ಬೆಸ್ಕಾಂ ತತ್ತರಿಸಿದ್ದು, ತಡರಾತ್ರಿ ಸುರಿದ ಮಳೆಯಿಂದ ಬೆಸ್ಕಾಂಗೆ ಕೋಟ್ಯಂತರ ರೂ. ನಷ್ಟವಾಗಿದೆ.

ಬೆಂಗಳೂರಿನಲ್ಲಿ ಭಾನುವಾರ 111.2 ಮಿ.ಮೀ ಮಳೆ

ಬೆಂಗಳೂರಿನಲ್ಲಿ ಭಾನುವಾರ ಸಂಜೆ ಸುರಿದ ಮಳೆಯು 133 ವರ್ಷಗಳ ದಾಖಲೆಯನ್ನು ಮುರಿದಿದೆ. ರಾಜಧಾನಿಯಲ್ಲಿ ಮೇ 2ರಂದು 111.2 ಮಿ.ಮೀ ಮಳೆ ಸುರಿದಿದ್ದು, ಜೂನ್ ತಿಂಗಳಲ್ಲಿ ಆದ ದಾಖಲೆಯ ಮಳೆ ಇದಾಗಿದೆ. 1891 ಜೂನ್ 16 ರಂದು 101.6 ಮಿ.ಮೀ ಮಳೆಯಾಗಿತ್ತು. ಆದರೆ, ನೆನ್ನೆ ಸುರಿದ ಜೂನ್ ತಿಂಗಳ ಮಳೆ 133 ವರ್ಷಗಳ ದಾಖಲೆ ಮುರಿದಿದೆ ಎಂದು ವಿಸ್ತಾರನ್ಯೂಸ್‌ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

1891 ಜೂನ್ 16 ರಂದು 101.6 ಮಿ.ಮೀ ಮಳೆಯಾಗಿತ್ತು. 2013 ಜೂನ್ 1 ರಂದು 100 ಮಿ.ಮೀ ಮಳೆ ಹಾಗೂ 2009 ಜೂನ್ 11 ರಂದು 89.6 ಮಿ.ಮೀ ಮಳೆಯಾಗಿತ್ತು.

Bangalore Rain

ಇದನ್ನೂ ಓದಿ | Bangalore Rain: ಬೆಂಗಳೂರಲ್ಲಿ ವರುಣನ ಅಬ್ಬರ; ಅಂಡರ್ ಪಾಸ್‌ನಲ್ಲಿ ಸಿಲುಕಿದ ಬಸ್‌, 20 ಪ್ರಯಾಣಿಕರ ರಕ್ಷಣೆ

ಬೆಂಗಳೂರಿಗೆ ಮುಂಗಾರು ಶಾಕ್‌, ನೂರಾರು ಮರಗಳು ಧರೆಗೆ, ಅಪಾರ್ಟ್‌ಮೆಂಟ್‌ ನಿವಾಸಿಗಳು ಅಲ್ಲೇ ಲಾಕ್!‌

bangalore rain news

ಬೆಂಗಳೂರು: ಮುಂಗಾರು (monsoon) ಸಾಕಷ್ಟು ಅಬ್ಬರದಿಂದಲೇ ರಾಜಧಾನಿಯನ್ನು (Bangalore rain news) ಪ್ರವೇಶಿಸಿದೆ. ನಿನ್ನೆ ಸಂಜೆಯಿಂದ ಸುರಿದ ಭಾರಿ ಮಳೆಗೆ ನಗರದ (Bengaluru rain news) ಹಲವು ಕಡೆ ಮರಗಳು (trees fall) ಮುರಿದುಬಿದ್ದಿವೆ. ತಗ್ಗು ಪ್ರದೇಶಗಳಿಗೆ ನೀರು (water clogging) ನುಗ್ಗಿದೆ. ಬೆಳ್ಳಂದೂರಿನ ಒಂದು ಅಪಾರ್ಟ್‌ಮೆಂಟ್‌ ಬೇಸ್‌ಮೆಂಟ್‌ಗೆ ನೀರು ನುಗ್ಗಿದ್ದು, ನಿವಾಸಿಗಳು ಮನೆಗಳಲ್ಲೇ ಲಾಕ್‌ ಆಗಿದ್ದಾರೆ.

“ನಿನ್ನೆ ಸುರಿದ ಭಾರಿ ಮಳೆಗೆ ನಗರದಲ್ಲಿ ಸುಮಾರು 260ಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿವೆ. ಬಹುತೇಕ ಜಯನಗರ. ಬಸವನಗುಡಿ ಸುತ್ತಮುತ್ತಲಿನಲ್ಲಿ 100ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಸದ್ಯ ಮರಗಳನ್ನು ತೆರವು ಮಾಡೋದಕ್ಕೆ ಬಿಬಿಎಂಪಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯಚರಣೆ ಮಾಡುತ್ತಿದ್ದಾರೆ. ಮೊದಲು ಸಂಚಾರಕ್ಕೆ ಅನುಕೂಲ ಕಲ್ಪಿಸಲು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಗಳ ತೆರವು ಮಾಡುತ್ತಿದ್ದೇವೆ. ಸಂಜೆ ವೇಳೆಗೆ ನಗರದ ಬಹುತೇಕ ಕಡೆ ಮರಗಳನ್ನು ತೆರವು ಮಾಡುತ್ತೇವೆ” ಎಂದು ಬಿಬಿಎಂಪಿ ಅರಣ್ಯ ವಿಭಾಗದ ಮುಖ್ಯಸ್ಥರು ವಿಸ್ತಾರ ನ್ಯೂಸ್‌ಗೆ ಮಾಹಿತಿ ನೀಡಿದ್ದಾರೆ.

Bangalore rain news

ಬೃಹತ್ ಗಾತ್ರದ ಮರಗಳು, ಸಣ್ಣ ಮರಗಳು ಹಾಗೂ ಕೊಂಬೆಗಳು ಧರಾಶಾಯಿಯಾದವು. ಬಸವೇಶ್ವರನಗರದಲ್ಲೂ ಮರಗಳು ಧರೆಗುರುಳಿವೆ. 3ನೇ ಮುಖ್ಯರಸ್ತೆಯಲ್ಲಿ ಕಾರ್ ಮೇಲೆ ಮರ ಬಿದ್ದು ಕಾರ್ ಜಖಂ ಆಗಿದೆ. ಜಯನಗರದ ಕೃಷ್ಣರಾವ್ ಪಾರ್ಕ್ ಬಳಿ ಬೃಹತ್ ಗಾತ್ರದ ಮರ ಟ್ರಾನ್ಸ್‌ಫಾರ್ಮರ್‌ ಮೇಲೆ ಬಿದ್ದು ರಾತ್ರಿ ಇಡೀ ವಿದ್ಯುತ್ ಕಟ್‌ ಆಗಿದೆ. ಜಯನಗರ ಸುತ್ತಮುತ್ತ ಸುಮಾರು ‌50ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಗಿರಿನಗರದಲ್ಲಿ ಮರ ಬಿದ್ದು ಕಾರು ಹಾಗೂ ದ್ವಿಚಕ್ರ ವಾಹನ ಸಂಪೂರ್ಣ ನಜ್ಜು ಗುಜ್ಜು ಆಗಿದೆ.

ಹಲವು ತಗ್ಗು ಪ್ರದೇಶಗಳಲ್ಲಿ ಮನೆಗಳು ಜಲಾವೃತಗೊಂಡವು. ಕೊತ್ತನೂರು ಭಾಗದಲ್ಲಿ ರಸ್ತೆ ಹಾಗೂ ಮನೆಗಳು ಪೂರ್ತಿ ಸಂಪೂರ್ಣ ಜಲಾವೃತವಾಗಿದೆ. ಮನೆಯೊಳಗೆ ನೀರು ತುಂಬಿ ಮನೆ ಮಾಲೀಕರು ಇಡೀ ರಾತ್ರಿ ಜಾಗರಣೆ ಮಾಡಿದರು. ಸುಮಾರು 60ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ತುಂಬಿದೆ. ನಗರದ 8 ವಲಯಗಳಲ್ಲಿ ಮನೆಗಳಿಗೆ ನೀರು ತುಂಬಿ ಅಕ್ಕಿ, ಬೇಳೆ ಸೇರಿದಂತೆ ಇತರೆ ವಸ್ತುಗಳು ಹಾಳಾಗಿವೆ. ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ನೀಡುವಂತೆ ಪಾಲಿಕೆ ಆಯುಕ್ತರು ಆದೇಶಿಸಿದ್ದಾರೆ.

Bangalore rain news

ರಸ್ತೆಯಲ್ಲಿ ನೀರು ನಿಂತಿದ್ದು ಒಂದು ತರಹದ ಸಮಸ್ಯೆಯಾದರೆ, ವಿದ್ಯುತ್ ಕಂಬಗಳದ್ದು ಮತ್ತೊಂದು ಸಮಸ್ಯೆ. ಕಂಬಗಳು ಮುರಿದು ಬಿದ್ದಿವೆ. ಉಮಾ ಥಿಯೇಟರ್ ಬಳಿ 4 ವಿದ್ಯುತ್ ಕಂಬಗಳು ಗಾಳಿಯಿಂದ ಅರ್ಧಂಬರ್ಧ ಬಿದ್ದಿವೆ. 4 ವಿದ್ಯುತ್ ಕಂಬಗಳ ವಯರ್ ರಸ್ತೆಯಲ್ಲಿ ಬಿದ್ದರೆ ವಾಹನ ಸವಾರರ ಜೀವಕ್ಕೆ ಹಾನಿ ಸಾಧ್ಯತೆ ಇದೆ. ಲಾಲ್‌ಬಾಗ್‌ನಲ್ಲಿ ಮರ ಬಿದ್ದು ಕಾಂಪೌಂಡ್ ಕುಸಿತವಾಗಿದೆ.

ಇದನ್ನೂ ಓದಿ: Karnataka Weather : ಬೆಂಗಳೂರಿಗೆ ಆವರಿಸಿದ ಮುಂಗಾರು; ಹಲವೆಡೆ ಇಂದು ಗಾಳಿಯೊಂದಿಗೆ ಭಯಂಕರ ಮಳೆ

ನಿನ್ನೆ ಸುರಿದ ಮಳೆಗೆ ಬೆಳ್ಳಂದೂರಿನ ಗ್ರೀನ್ ಎಲಿಗೆನ್ಸ್ ಅಪಾರ್ಟ್ಮೆಂಟ್‌ನ ಬೇಸ್‌ಮೆಂಟ್‌ಗೆ ನೀರು ನುಗ್ಗಿದ್ದು, ನಾಲ್ಕು ಕಾರು, ಬೈಕ್‌ಗಳು ಮುಳುಗಿವೆ. ರಾಜಕಾಲುವೆ ನೀರು ಅಪಾರ್ಟ್ಮೆಂಟ್‌ನೊಳಗೆ ನುಗ್ಗಿದೆ. ಕಳೆದ ಮೂರು ದಿನದಿಂದ ಅಪಾರ್ಟ್ಮೆಂಟ್‌ಗೆ ವಿದ್ಯುತ್‌ ಸಂಪರ್ಕ ಕಟ್‌ ಆಗಿದೆ. ನಿವಾಸಿಗಳು ಅಪಾರ್ಟ್ಮೆಂಟ್‌ನಲ್ಲೇ ಲಾಕ್ ಆಗಿದ್ದಾರೆ. ಅಪಾರ್ಟ್ಮೆಂಟ್ ಬೇಸ್‌ಮೆಂಟ್‌ನಿಂದಲೇ ಓಡಾಡಲು ದಾರಿ ಆಗಿರುವ ಕಾರಣ, ಕತ್ತಿನವರೆಗೆ ನಿಂತಿರುವ ನೀರಿನಲ್ಲಿ ಓಡಾಡಲಾಗದೆ 40 ಫ್ಲಾಟ್ ಮಾಲೀಕರು ಅಲ್ಲೇ ಬಾಕಿ ಆಗಿದ್ದಾರೆ. ಪಕ್ಕದ ಕಾಂಪೌಂಡ್‌ಗೆ ಏಣಿ ಹಾಕಿ ಓಡಾಟ ಮಾಡುತ್ತಿದ್ದಾರೆ.

Continue Reading

ಮಳೆ

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Karnataka Rain : ರಾಜಧಾನಿ ಬೆಂಗಳೂರಿನಲ್ಲಿ (Bengaluru Rains) ಭಾನುವಾರ ಸುರಿದ ಎರಡು ಗಂಟೆಯ ಮಳೆಗೆ ಹಳೆಯ ದಾಖಲೆಗಳನ್ನು ಮುರಿದು ಮುನ್ನುಗ್ಗಿದೆ. 133 ವರ್ಷದ ದಾಖಲೆಯನ್ನು ಬೆಂಗಳೂರು ಮಳೆ ರೆಕಾರ್ಡ್ ಬ್ರೇಕ್ ಮಾಡಿದೆ. ಜತೆಗೆ ಸೋಮವಾರವು ಹಲವೆಡೆ ಮಳೆಯು ಅಬ್ಬರಿಸಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು: ರಾಜಧಾನಿ ಬೆಂಗಳೂರು (Bengaluru Rain) ಜೂನ್‌ ಮೊದಲ ವಾರವೇ ಮಳೆಯಲ್ಲಿ ರೆಕಾರ್ಡ್‌ ಬ್ರೇಕ್‌ ಮಾಡಿದೆ. ಜೂ.2ರ ಭಾನುವಾರ ಬೆಂಗಳೂರಿನಲ್ಲಿ 111.2 mm ಮಳೆಯಾಗಿದೆ. ಈ ಮೂಲಕ 133 ವರ್ಷಗಳ ದಾಖಲೆಯನ್ನು ಮುರಿದಿದೆ. ಬೆಂಗಳೂರಿನಲ್ಲಿ 1891ರ ಜೂನ್ 16ರಂದು 101.6 mm ಮಳೆ ಆಗಿತ್ತು. ಆದರೆ ನಿನ್ನೆ ಭಾನುವಾರ ಸುರಿದ ಜೂನ್ ತಿಂಗಳ ಮಳೆ 133 ವರ್ಷಗಳ ದಾಖಲೆ (Karnataka Rain) ಮುರಿದಿದೆ ಎಂದು ವಿಸ್ತಾರ ನ್ಯೂಸ್‌ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಾಖಲೆಯ ಮಳೆ ಅಬ್ಬರದ ಡಿಟೈಲ್ಸ್‌

ವರ್ಷ- ಮಳೆ ಪ್ರಮಾಣ
1891ರ ಜೂನ್ 16ರಂದು 101.6 mm
2013ರ ಜೂನ್‌ 1ರಂದು 100mm
2009ರ ಜೂನ್ 11ರಂದು 89.6 mm
2024ರ ಜೂನ್‌ 2ರಂದು 111.2 mm

ಇದನ್ನೂ ಓದಿ: Bangalore Rain News : ಬೆಂಗಳೂರಿನಲ್ಲಿ ಭಾರಿ ಮಳೆ; ಹಲವು ಕಡೆ ಉರುಳಿ ಬಿದ್ದ ಮರಗಳು, ಮೆಟ್ರೋ ಸಂಚಾರಕ್ಕೂ ಅಡಚಣೆ

ಚಿಕ್ಕಮಗಳೂರಲ್ಲಿ ಮಳೆಗೆ 50 ಎಕರೆ ಅಡಿಕೆ ತೋಟ ಜಲಾವೃತ

ಚಿಕ್ಕಮಗಳೂರು ಬಯಲುಸೀಮೆ ಭಾಗದಲ್ಲಿ ಸೋಮವಾರ (ಜೂ. 3) ಭಾರಿ ಮಳೆಯಾಗಿದೆ. ಮಳೆಯ ಆರ್ಭಟಕ್ಕೆ 50 ಎಕರೆ ಅಡಿಕೆ ತೋಟ ಜಲಾವೃತಗೊಂಡಿದೆ. ಚಿಕ್ಕಮಗಳೂರು ತಾಲೂಕಿನ ಕ್ಯಾತನಬೀಡು, ಸಾದರಹಳ್ಳಿ ಗ್ರಾಮಗಳಲ್ಲಿ ಘಟನೆ ನಡೆದಿದೆ. ಗ್ರಾಮದ ಬಸವರಾಜು, ಲೋಕೇಶ್ ಸೇರಿದಂತೆ ಹಲವು ರೈತರ ತೋಟ ನೀರುಪಾಲಾಗಿದೆ. ಇನ್ನೂ ಚಿಕ್ಕಮಗಳೂರು, ಮುಡಿಗೆರೆ, ಕೊಪ್ಪ, ಶೃಂಗೇರಿ, ಎನ್‌ಆರ್ ಪುರದಲ್ಲಿ ನಿರಂತರ ಮಳೆಯಿಂದಾಗಿ ಜನ-ಜೀವನ ಅಸ್ತವ್ಯಸ್ತವಾಗಿದೆ. ಕೊಟ್ಟಿಗೆಹಾರ, ಚಾರ್ಮಾಡಿ, ಕಿಗ್ಗಾ, ಬಸರಿ ಕಟ್ಟೆ ಭಾಗದಲ್ಲೂ ವ್ಯಾಪಕ ಮಳೆಯಾಗುತ್ತಿದೆ.

ದಾವಣಗೆರೆಯಲ್ಲಿ ಕೊಚ್ಚಿ ಹೋದ ಮಂಡಲೂರು ಸೇತುವೆ

ಭಾನುವಾರ ರಾತ್ರಿ ಸುರಿದ ಮಳೆಯಿಂದ ಮಂಡಲೂರು ಸೇತುವೆ ಕೊಚ್ಚಿ ಹೋಗಿದೆ. ದಾವಣಗೆರೆಯ ಮಂಡಲೂರಿನಿಂದ ಕಾಟಿಹಳ್ಳಿ ತಾಂಡಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯು ಕೊಚ್ಚಿ ಹೋದ ಕಾರಣದಿಂದ ಸಂಚಾರಕ್ಕೆ ಅಡಚಣೆ ಆಗಿತ್ತು. ಮಂಡಲೂರು ಗ್ರಾಮಕ್ಕೆ ಬರಲು ಹೋಗಲು ಆಗದೆ ಕಾಟಿಹಳ್ಳಿ ತಾಂಡದ ಜನರಿಗೆ ತೊಂದರೆ ಅನುಭವಿಸಿದರು. ಸೇತುವೆ ತುರ್ತು ಕಾಮಗಾರಿ ಆರಂಭಿಸುವಂತೆ ಗ್ರಾಮಸ್ಥರು ಆಗ್ರಹಿಸಿದರು.

ಕೊಡಗಿಗೂ ಎಂಟ್ರಿ ಕೊಟ್ಟ ಮುಂಗಾರು ಮಳೆ

ಸೋಮವಾರ ಕೊಡಗು ಜಿಲ್ಲೆಯ ಹಲವೆಡೆ ತುಂತುರು ಮಳೆ ಆರಂಭವಾಗಿದೆ. ಕಳೆದ ಹಲವು ದಿನಗಳಿಂದ ಜಿಲ್ಲೆಯಲ್ಲಿ ಬಿಸಿಲ ವಾತವರಣವಿತ್ತು. ಸೋಮವಾರ ಮಧ್ಯಾಹ್ನದ ನಂತರ ಮಡಿಕೇರಿ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆಯಾಗಿದ್ದು, ಮನ್ಸೂನ್ ಮಾದರಿಯ ವಾತಾವರಣ ಕಂಡು ಬಂತು. ಮಳೆಯಿಂದಾಗಿ ಕೊಡಗಿನ ರೈತಾಪಿ ವರ್ಗದಲ್ಲಿ ಮಂದಹಾಸ ಮೂಡಿದೆ. ಇತ್ತ ದಿಢೀರ್‌ ಮಳೆಗೆ ಸಾರ್ವಜನಿಕರು ಹಾಗೂ ದ್ವಿಚಕ್ರ ವಾಹನ ಸವಾರರು ಪರದಾಡಿದರು.

ಚಿತ್ರದುರ್ಗದಲ್ಲಿ ಮಳೆಗೆ ಬೆಳೆ ನಾಶ

ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಆರ್ಭಟಕ್ಕೆ ಮೊಳಕಾಲ್ಮುರು ತಾಲೂಕಿನಲ್ಲಿ ಅವ್ಯವಸ್ಥೆ ಆಗಿದೆ. ಪಕ್ಕುರ್ತಿ ಗ್ರಾಮದಲ್ಲಿ ಮಳೆಯಿಂದಾಗಿ ಶೇಂಗಾ, ಹತ್ತಿ, ಕಲ್ಲಂಗಡಿ, ಕನಕಾಂಬರ ಬೆಳೆ ನಾಶವಾಗಿದೆ. ಮಳೆ ರಭಸಕ್ಕೆ ನಾಲ್ಕು ಬೋರ್ವೆಲ್,ವಿದ್ಯುತ್ ಪರಿಕರ,ಪೈಪ್ ಲೈನ್ ಕೊಚ್ಚಿ ಹೋಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿವಮೊಗ್ಗ

Shivamogga Lok Sabha Constituency: ತ್ರಿಕೋನ ಕದನದ ಶಿವಮೊಗ್ಗದಲ್ಲಿ ಯಾರಿಗೆ ವಿಜಯದ ಮಾಲೆ?

Shivamogga Lok Sabha Constituency: ಗೀತಾ ಶಿವರಾಜ್‌ ಕುಮಾರ್‌ ಜತೆಗೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕೆ.ಎಸ್.‌ ಈಶ್ವರಪ್ಪ ಅವರು ಸ್ಪರ್ಧಿಸಿರುವುದು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಚುನಾವಣೆ ಫಲಿತಾಂಶವು ಇನ್ನಿಲ್ಲದಷ್ಟು ಕುತೂಹಲ ಕೆರಳಿಸಿದೆ. ಇನ್ನು ಬಿ.ವೈ.ರಾಘವೇಂದ್ರ ಅವರಿಗೆ ತಂದೆ ಬಿ.ಎಸ್.ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಲವಿದೆ.

VISTARANEWS.COM


on

Shivamogga Lok Sabha Constituency
Koo

ಶಿವಮೊಗ್ಗ: ಕರ್ನಾಟಕದಲ್ಲಿಯೇ ಅತಿ ಹೆಚ್ಚು ಕುತೂಹಲ ಕೆರಳಿಸಿರುವ ಕ್ಷೇತ್ರಗಳಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರವೂ (Shivamogga Lok Sabha Constituency) ಒಂದಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ, ಮತ್ತೊಬ್ಬ ಮಾಜಿ ಸಿಎಂ ಎಸ್‌.ಬಂಗಾರಪ್ಪ ಅವರ ಪುತ್ರಿ, ನಟ ಶಿವರಾಜ್‌ ಕುಮಾರ್‌ ಅವರ ಪತ್ನಿ ಗೀತಾ ಶಿವರಾಜ್‌ ಕುಮಾರ್‌ (Geetha Shivarajkumar) ಅವರು ಕಣಕ್ಕಿಳಿದಿದ್ದಾರೆ. ಇನ್ನು, ಬಂಡಾಯದ ಬಾವುಟ ಬೀಸಿರುವ ಕೆ.ಎಸ್.ಈಶ್ವರಪ್ಪ (KS Eshwarappa) ಅವರು ಪಕ್ಷೇತರರಾಗಿ ಸ್ಪರ್ಧಿಸಿದ್ದು, ತ್ರಿಕೋನ ಕದನ ಏರ್ಪಟ್ಟಿದೆ. ಹಾಗಾಗಿ, ಇದು ಎಲ್ಲರಿಗೂ ಪ್ರತಿಷ್ಠೆಯ ಕಣವಾಗಿದೆ.

ರಾಘವೇಂದ್ರ ಬಲವೇನು?

ಹಾಗೆ ನೋಡಿದರೆ, ಕ್ಷೇತ್ರದಲ್ಲಿ ಬಿ.ವೈ.ರಾಘವೇಂದ್ರ ಅವರಿಗೆ ಹಲವು ರೀತಿಯ ಅನುಕೂಲಕರ ವಾತಾವರಣವಿದೆ. ಕ್ಷೇತ್ರವು ಬಿಜೆಪಿ ಭದ್ರಕೋಟೆಯಾಗಿದೆ. ಬಿ.ಎಸ್‌.ಯಡಿಯೂರಪ್ಪ ಅವರು ತವರು ಜಿಲ್ಲೆ ಶಿವಮೊಗ್ಗ. ರಾಘವೇಂದ್ರ ಅವರ ಸಹೋದರ ಬಿ.ವೈ.ವಿಜಯೇಂದ್ರ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ. ಅದರಲ್ಲೂ, ಸಂಸದರಾಗಿ ಬಿ.ವೈ.ರಾಘವೇಂದ್ರ ಅವರು ರೈಲು ಸಂಪರ್ಕ ಸೇರಿ ಹಲವು ರೀತಿಯ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ನರೇಂದ್ರ ಮೋದಿ ಅವರ ಅಲೆಯೂ ಇಲ್ಲಿ ಕೆಲಸ ಮಾಡುವ ಸಾಧ್ಯತೆ ಇದೆ. ಹಾಗಾಗಿ, ರಾಘವೇಂದ್ರ ಅವರು ಗೆಲುವಿನ ವಿಶ್ವಾಸದಲ್ಲಿದ್ದಾರೆ.

BY Raghavendra

ಗೀತಾ ರಣತಂತ್ರ ಹೀಗಿತ್ತು

ಮತ್ತೊಂದೆಡೆ, ಎಸ್.‌ ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್‌ ಕುಮಾರ್‌ ಅವರು ಎರಡನೇ ಬಾರಿ ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದು, ಈ ಬಾರಿ ರಣತಂತ್ರ ರೂಪಿಸಿದ್ದಾರೆ. ಶಿವರಾಜ್‌ ಕುಮಾರ್‌ ಅವರ ವರ್ಚಸ್ಸು, ಎಸ್‌. ಬಂಗಾರಪ್ಪ ಅವರ ಹೆಸರು, ಸಹೋದರ, ಸಚಿವ ಮಧು ಬಂಗಾರಪ್ಪ ನೆರವಿನ ಬಲದೊಂದಿಗೆ ಅವರು ಅಬ್ಬರದ ಪ್ರಚಾರ ಕೈಗೊಂಡಿರುವ ಕಾರಣ ಬಿ.ವೈ.ರಾಘವೇಂದ್ರ ಅವರಿಗೆ ಗೆಲುವು ಸುಲಭವಲ್ಲ ಎಂದು ಹೇಳಲಾಗುತ್ತಿದೆ.

Congress candidate Geetha Shivarajkumar's roadshow in Shivamogga

ಇವರಿಬ್ಬರ ಮಧ್ಯೆ, ಕೆ.ಎಸ್.ಈಶ್ವರಪ್ಪ ಅವರು ಪುತ್ರ ಕಾಂತೇಶ್‌ಗೆ ಟಿಕೆಟ್‌ ನೀಡಲಿಲ್ಲ ಎಂದು ಬಿಜೆಪಿ ವಿರುದ್ಧ ಬಂಡಾಯವೆದ್ದು, ಪಕ್ಷೇತರರಾಗಿ ಚುನಾವಣೆ ಕಣಕ್ಕಿಳಿದಿದ್ದಾರೆ. ಕಟ್ಟಾ ಆರೆಸ್ಸೆಸ್ಸಿಗರಾಗಿರುವ ಕೆ.ಎಸ್.ಈಶ್ವರಪ್ಪ ಅವರು ಹಿಂದುತ್ವದ ನೆಲೆಗಟ್ಟಿನಲ್ಲಿ ಮತಯಾಚನೆ ಮಾಡಿದ್ದಾರೆ. ಹಾಗಾಗಿ, ಇವರು ಮತಗಳನ್ನು ಒಡೆದಿದ್ದರೂ ಅಚ್ಚರಿ ಇಲ್ಲ ಎಂದು ಹೇಳಲಾಗುತ್ತಿದೆ. ಇಷ್ಟೆಲ್ಲ ಕಾರಣಗಳಿಂದಾಗಿ ಶಿವಮೊಗ್ಗ ಲೋಕಸಭೆ ಕ್ಷೇತ್ರವು ಎಲ್ಲರಿಗೂ ಪ್ರತಿಷ್ಠೆಯ ಕಣವಾಗಿದೆ.

KS Eshwarappa

2019, 2014ರ ಫಲಿತಾಂಶ ಏನಾಗಿತ್ತು?

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಬಿ.ವೈ.ರಾಘವೇಂದ್ರ ಅವರು 2.23 ಲಕ್ಷ ಮತಗಳ ಅಂತರದಲ್ಲಿ ಜೆಡಿಎಸ್‌ನ ಮಧು ಬಂಗಾರಪ್ಪ ಅವರ ವಿರುದ್ಧ ಗೆಲುವು ಸಾಧಿಸಿದ್ದರು. 2014ರಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿಯಿಂದ ಸ್ಪರ್ಧಿಸಿ ಸುಮಾರು 3 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು. ಆಗ ಎಸ್.‌ ಬಂಗಾರಪ್ಪ ಅವರ ಪುತ್ರಿ, ನಟ ಶಿವರಾಜ್‌ ಕುಮಾರ್‌ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಅವರು ಕೂಡ ಸ್ಪರ್ಧಿಸಿ, ಮೂರನೇ ಸ್ಥಾನ ಪಡೆದಿದ್ದರು. ಈಗ ಮತ್ತೆ ಗೀತಾ ಶಿವರಾಜ್‌ ಕುಮಾರ್‌ ಅವರು ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿ: Bidar Lok Sabha Constituency: ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಹಳೇ ಬೇರು Vs ಹೊಸ ಚಿಗುರು; ಖೂಬಾ, ಖಂಡ್ರೆ ಕದನದಲ್ಲಿ ಜಯ ಯಾರಿಗೆ?

Continue Reading

ಪ್ರಮುಖ ಸುದ್ದಿ

MLC Election: ಕಾಂಗ್ರೆಸ್‌ನ 7, ಬಿಜೆಪಿಯ 3, ಜೆಡಿಎಸ್‌ನ ಒಬ್ಬ ಅಭ್ಯರ್ಥಿಯಿಂದ ಮೇಲ್ಮನೆಗೆ ನಾಮಪತ್ರ ಸಲ್ಲಿಕೆ

MLC Election: ವಿಧಾನ ಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ನಡೆಯಲಿರುವ 11 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಸೋಮವಾರ (ಜೂ. 3) ಕೊನೆಯ ದಿನವಾಗಿತ್ತು. ಮೂರೂ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.

VISTARANEWS.COM


on

mlc election nomination
Koo

ಬೆಂಗಳೂರು: ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಗೆ (MLC Election) ನಾಮಪತ್ರ (nomination) ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಮೂರೂ ಪಕ್ಷಗಳ ಎಲ್ಲ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್‌ನ (Congress) 7, ಬಿಜೆಪಿಯ (BJP) 3, ಜೆಡಿಎಸ್‌ನ (JDS) ಒಬ್ಬ ಅಭ್ಯರ್ಥಿಯಿಂದ ಮೇಲ್ಮನೆಗೆ (legislative council) ನಾಮಪತ್ರ ಸಲ್ಲಿಕೆಯಾಯಿತು.

ವಿಧಾನ ಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ನಡೆಯಲಿರುವ 11 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಸೋಮವಾರ (ಜೂ. 3) ಕೊನೆಯ ದಿನವಾಗಿತ್ತು. ಹನ್ನೊಂದು ಸ್ಥಾನಗಳ ಪೈಕಿ ಕಾಂಗ್ರೆಸ್ 7, ಬಿಜೆಪಿ 3 ಮತ್ತು ಜೆಡಿಎಸ್ 1 ಸ್ಥಾನವನ್ನು ಗೆಲ್ಲುವ ಅವಕಾಶವಿದೆ. ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಗುರುವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್ 13ಕ್ಕೆ ಮತದಾನ ನಿಗದಿಯಾಗಿದ್ದು, ಅಂದೇ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ. ಹೆಚ್ಚುವರಿ ಅಭ್ಯರ್ಥಿಗಳು ಕಣದಲ್ಲಿ ಇಲ್ಲದ ಹಿನ್ನೆಲೆಯಲ್ಲಿ, ಚುನಾವಣೆ ಇಲ್ಲದೆ ಅಭ್ಯರ್ಥಿಗಳ ಅವಿರೋಧ ಆಯ್ಕೆ ಆಗುವ ಸಂಭವ ಇದೆ.

ಇಂದು ಕಾಂಗ್ರೆಸ್‌ 7 ಅಭ್ಯರ್ಥಿಗಳಾದ ಯತೀಂದ್ರ ಸಿದ್ದರಾಮಯ್ಯ, ಎನ್.ಎಸ್ ಬೋಸರಾಜು, ವಸಂತ್ ಕುಮಾರ್, ಗೋವಿಂದ ರಾಜು, ಐವಾನ್ ಡಿಸೋಜಾ, ಬಿಲ್ಕಿಸ್ ಬಾನು ಹಾಗೂ ಜಗದೇವ್ ಗುತ್ತೆದಾರ್ ಅವರು ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್‌ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ಬಿಜೆಒಇ ಅಭ್ಯರ್ಥಿಗಳಾದ ಸಿ.ಟಿ ರವಿ, ಎನ್ ರವಿಕುಮಾರ್ ಹಾಗೂ ಎಂ.ಜಿ ಮುಳೆ ಕೂಡ ವಿಧಾನ ಸಭೆ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.‌ ಅಶೋಕ್, ಮಾಜಿ ಸಿಎಂ ಸದಾನಂದಗೌಡ, ಸುನೀಲ್ ಕುಮಾರ್ ಮುಂತಾದವರು ಸಾಥ್‌ ನೀಡಿದರು.

ಜೆಡಿಎಸ್‌ ಅಭ್ಯರ್ಥಿ ಜವರಾಯಿಗೌಡ ಕೂಡ ಇಂದೇ ನಾಮಪತ್ರ ನೀಡಿದರು. ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರ ಜೊತೆಗಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, “ಬಿಜೆಪಿಯಿಂದ ನಮ್ಮ ಮೂರು ಜನ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಆಗಿದೆ. ವಿಜಯೇಂದ್ರ, ಸದಾನಂದಗೌಡ ಎಲ್ಲರೂ ಇದ್ದಾರೆ. ಪಕ್ಷದಲ್ಲಿ ದುಡಿದ ಕಾರ್ಯಕರ್ತರಿಗೆ ರಾಜ್ಯದಿಂದ, ರಾಷ್ಟ್ರದಿಂದ ಆಯ್ಕೆಯಾಗಿದೆ. ಪಕ್ಷದಿಂದ ಇನ್ನಷ್ಟು ಗಟ್ಟಿಯಾದ ಹೋರಾಟ ಆಗಬೇಕಿದೆ. ಕಾಂಗ್ರೆಸ್ ಭಂಡ ಸರ್ಕಾರ. ಹಗರಣ ಮಾಡಿ ರಾಜಾರೋಷವಾಗಿ ಓಡಾಡ್ತಿದ್ದಾರೆ. ಇದರ ವಿರುದ್ಧ ಬಿಜೆಪಿ ಹೋರಾಟಕ್ಕೆ ಅಣಿಯಾಗಿದೆ. ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ನಮ್ಮ ಮೂರೂ ಅಭ್ಯರ್ಥಿಗಳನ್ನು ಗೆಲ್ಲಿಸಿ, ಬಿಜೆಪಿ ಪರ ಹೋರಾಟ ಮಾಡ್ತಾರೆ” ಎಂದರು.

ಯತೀಂದ್ರ ಸಿದ್ದರಾಮಯ್ಯ ವಿಸ್ತಾರ ನ್ಯೂಸ್‌ಗೆ ನೀಡಿದ ಹೇಳಿಕೆ: “2023ರಲ್ಲಿ ಹೈಕಮಾಂಡ್ ನನಗೆ ಕ್ಷೇತ್ರ ತ್ಯಾಗ ಮಾಡಲು ಸೂಚಿಸಿತ್ತು. ಹೀಗಾಗಿ ನಾನು ವರುಣ ಕ್ಷೇತ್ರದಲ್ಲಿ ಚುನಾವಣಾ ಕೆಲಸ ಮಾಡಿದೆ. ಹೈಕಮಾಂಡ್ ಅಂದು ಹೇಳಿದಂತೆ ನಡೆದುಕೊಂಡಿದೆ. ನಾನು ಹೈಕಮಾಂಡ್ ಗೆ ಧನ್ಯವಾದ ತಿಳಿಸುತ್ತೇನೆ. ರಾಜ್ಯದ ಜನರ ಸಮಸ್ಯೆಗಳನ್ನ ಸರ್ಕಾರದ ಗಮನಕ್ಕೆ ತಂದು ಪರಿಹರಿಸುವ ಕೆಲಸ ಮಾಡ್ತೀನಿ” ಎಂದರು.

ಬಿ.ವೈ ವಿಜಯೇಂದ್ರ ಹೇಳಿಕೆ: “ಪಕ್ಷವು ಸಿ.ಟಿ ರವಿ, ಎನ್. ರವಿಕುಮಾರ್, ಎಂ.ಜಿ ಮುಳೆ ಅವರನ್ನು ಆಯ್ಕೆ ಮಾಡಿದೆ. ಮೂವರೂ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ನಮ್ಮ ಇನ್ನಷ್ಟು ಧ್ವನಿ ಎತ್ತುವ ಕೆಲಸ ಮಾಡಲಿದ್ದೇವೆ. ಎಕ್ಸಿಟ್ ಪೋಲ್ ಫಲಿತಾಂಶದಿಂದ ಸಿಎಂ, ಸಚಿವರಿಗೆ ಎದೆಬಡಿತ ಜೋರಾಗಿದೆ. ವಾಲ್ಮೀಕಿ ನಿಗಮ ಹಗರಣದಲ್ಲಿ ಬಿಜೆಪಿಯಿಂದ ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದೇವೆ. ಸಿಬಿಐ ತನಿಖೆ ಆಗಬೇಕು. ರಾಜ್ಯ ಸರ್ಕಾರ ಇದನ್ನು ಮುಚ್ಚಿ ಹಾಕೋ ಪ್ರಯತ್ನ ಮಾಡ್ತಿದೆ” ಎಂದರು.

ಇದನ್ನೂ ಓದಿ: MLC Election: ಮೇಲ್ಮನೆ ಚುನಾವಣೆ ಮತದಾನ ಆರಂಭ, 6 ಕ್ಷೇತ್ರಗಳಲ್ಲಿ 78 ಸ್ಪರ್ಧಿಗಳ ಹಣಾಹಣಿ

Continue Reading
Advertisement
Kedar Jadhav Retirement
ಕ್ರಿಕೆಟ್7 mins ago

Kedar Jadhav Retirement: ಧೋನಿ ಶೈಲಿಯಲ್ಲೇ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಕೇದಾರ್​ ಜಾಧವ್

Nishant Agarwal
ದೇಶ11 mins ago

Nishant Agarwal: ಬ್ರಹ್ಮೋಸ್‌ ಕ್ಷಿಪಣಿ ಕುರಿತು ಪಾಕ್‌ಗೆ ಮಾಹಿತಿ; ಮಾಜಿ ಎಂಜಿನಿಯರ್‌ ನಿಶಾಂತ್‌ ಅಗರ್ವಾಲ್‌ಗೆ ಜೀವಾವಧಿ ಶಿಕ್ಷೆ!

Bangalore Rain
ಕರ್ನಾಟಕ14 mins ago

Bangalore Rain: ಮಳೆ ಹಾನಿ ಬಗ್ಗೆ ಬೆಸ್ಕಾಂಗೆ ದೂರುಗಳ ಸುರಿಮಳೆ; ಉರುಳಿ ಬಿದ್ದ 176 ವಿದ್ಯುತ್ ಕಂಬ, 9 ಟ್ರಾನ್ಸ್‌ಫಾರ್ಮರ್‌ಗೆ ಹಾನಿ

Karnataka Rain
ಮಳೆ33 mins ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Rishab Shetty Shivamma Yarehanchinala Official Trailer out
ಸ್ಯಾಂಡಲ್ ವುಡ್36 mins ago

Rishab Shetty: ರಿಷಬ್ ನಿರ್ಮಾಣದ ‘ಶಿವಮ್ಮ’ ಟ್ರೈಲರ್‌ ಔಟ್‌; ಜೂನ್‌ 14ಕ್ಕೆ ತೆರೆಗೆ

Mira Road Tragedy
ಕ್ರೀಡೆ41 mins ago

Mira Road Tragedy: ಸಿಕ್ಸರ್​ ಬಾರಿಸಿ ಮರು ಕ್ಷಣವೇ ಪ್ರಾಣ ಕಳೆದುಕೊಂಡ ಕ್ರಿಕೆಟಿಗ​; ದುರಂತ ವಿಡಿಯೊ ವೈರಲ್​

Shivamogga Lok Sabha Constituency
ಶಿವಮೊಗ್ಗ47 mins ago

Shivamogga Lok Sabha Constituency: ತ್ರಿಕೋನ ಕದನದ ಶಿವಮೊಗ್ಗದಲ್ಲಿ ಯಾರಿಗೆ ವಿಜಯದ ಮಾಲೆ?

Pakistan Army
ವಿದೇಶ48 mins ago

Pakistan Army: ಪಾಕಿಸ್ತಾನ ಸೇನೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮೊದಲ ಮಹಿಳಾ ಬ್ರಿಗೇಡಿಯರ್ ಆಗಿ ಇತಿಹಾಸ ಬರೆದ ಡಾ. ಹೆಲೆನ್ ಮೇರಿ

Self Harming
ಕ್ರೈಂ60 mins ago

Self Harming: ಐಎಎಸ್‌ ದಂಪತಿ ಪುತ್ರಿ ಬಹುಮಹಡಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

mlc election nomination
ಪ್ರಮುಖ ಸುದ್ದಿ1 hour ago

MLC Election: ಕಾಂಗ್ರೆಸ್‌ನ 7, ಬಿಜೆಪಿಯ 3, ಜೆಡಿಎಸ್‌ನ ಒಬ್ಬ ಅಭ್ಯರ್ಥಿಯಿಂದ ಮೇಲ್ಮನೆಗೆ ನಾಮಪತ್ರ ಸಲ್ಲಿಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ33 mins ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 hour ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌