Lok Sabha Election 2024: ಈ ಬಾರಿ ಲೋಕಸಭೆ ಪ್ರವೇಶಿಸಲಿದ್ದಾರೆ 41 ಪಕ್ಷಗಳ ಸಂಸದರು! - Vistara News

ರಾಜಕೀಯ

Lok Sabha Election 2024: ಈ ಬಾರಿ ಲೋಕಸಭೆ ಪ್ರವೇಶಿಸಲಿದ್ದಾರೆ 41 ಪಕ್ಷಗಳ ಸಂಸದರು!

18ನೇ ಲೋಕಸಭೆಯಲ್ಲಿ (Lok Sabha Election 2024) ಈ ಬಾರಿ ಇಂಡಿಯಾ ಒಕ್ಕೂಟದ 233, ಎನ್ ಡಿಎ ಒಕ್ಕೂಟದ 293 ಹಾಗೂ ಇತರೆ ಪಕ್ಷಗಳ 17 ಮಂದಿ ಸೇರಿ 41 ಪಕ್ಷಗಳ ಒಟ್ಟು 543 ಸದಸ್ಯರು ಸಂಸತ್ತನ್ನು ಪ್ರವೇಶಿಸಲಿದ್ದಾರೆ. ಕಳೆದ ಬಾರಿ 543 ಸದಸ್ಯರ ಸದನದಲ್ಲಿ 36 ಪಕ್ಷಗಳ ಸಂಸದರು ಇದ್ದರು.

VISTARANEWS.COM


on

Lok Sabha Election 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಂಸತ್ತಿನ ಕೆಳಮನೆಯಾದ ಲೋಕಸಭೆಗೆ (Lok Sabha Election 2024) ಈ ಬಾರಿ 41 ರಾಜಕೀಯ ಪಕ್ಷಗಳು (political parties) ಪ್ರತಿನಿಧಿಗಳು ಪ್ರವೇಶ ಪಡೆದಿದ್ದಾರೆ. ಬುಧವಾರ ವಿಸರ್ಜನೆಗೊಂಡ 17ನೇ ಲೋಕಸಭೆಯಲ್ಲಿ 36 ಪಕ್ಷಗಳ ಸಂಸದರಿದ್ದರು (MPs) ಎಂದು ಚುನಾವಣೋತ್ತರ ಅಂಕಿಅಂಶಗಳು ತೋರಿಸುತ್ತವೆ.

543 ಸದಸ್ಯರ ಸದನದಲ್ಲಿ ಬಿಜೆಪಿ (BJP) 240, ಕಾಂಗ್ರೆಸ್ (congress) 99 ಸ್ಥಾನಗಳನ್ನು ಹೊಂದಿದೆ. ಈ ಎರಡು ದೊಡ್ಡ ಪಕ್ಷಗಳು ಒಟ್ಟು 339 ಸಂಸದರನ್ನು ಹೊಂದಿವೆ. ಬಿಜೆಪಿ ಈ ಬಾರಿ 63 ಸ್ಥಾನಗಳನ್ನು ಕಳೆದುಕೊಂಡಿದೆ. 2014 ರಲ್ಲಿ ಬಿಜೆಪಿ 282 ಮತ್ತು 2019 ರಲ್ಲಿ 303 ಸ್ಥಾನಗಳನ್ನು ಗಳಿಸಿತ್ತು. ಕಾಂಗ್ರೆಸ್ 2014ರಲ್ಲಿ 44, 2019ರಲ್ಲಿ 52 ಸ್ಥಾನಗಳನ್ನು ಗಳಿಸಿತ್ತು. ಈ ಬಾರಿ 99 ಸ್ಥಾನಗಳಿಗೆ ಏರಿದೆ.

ಬಿಜೆಪಿ ತನ್ನ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಸಹಾಯದಿಂದ ಕೇಂದ್ರದಲ್ಲಿ ಸತತ ಮೂರನೇ ಬಾರಿ ಸರ್ಕಾರವನ್ನು ರಚಿಸಲು ಸಿದ್ಧವಾಗಿದೆ. ಪ್ರಧಾನಿ ನರೇಂದ್ರ ಮೋದಿ ಜೂನ್ 8ರಂದು ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. . ಲೋಕಸಭೆಯಲ್ಲಿ ಎನ್‌ಡಿಎ ಪಕ್ಷಗಳು ಒಟ್ಟು 293 ಸ್ಥಾನಗಳನ್ನು ಗೆದ್ದಿವೆ.

ಕಾಂಗ್ರೆಸ್ ನೇತೃತ್ವದ ಇಂಡಿ ಒಕ್ಕೂಟವು 233 ಸಂಸದರನ್ನು ಹೊಂದಿದ್ದು, ಸಮಾಜವಾದಿ ಪಕ್ಷ (SP) ಉತ್ತರ ಪ್ರದೇಶದಿಂದ 37 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಅನಂತರ ಅತಿ ದೊಡ್ಡ ಪಕ್ಷವಾಗಿ ಸಮಾಜವಾದಿ ಪಕ್ಷ ಹೊರಹೊಮ್ಮಿದೆ. ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ 29 ಮತ್ತು ತಮಿಳುನಾಡಿನ ಡಿಎಂಕೆ 22 ಸ್ಥಾನಗಳನ್ನು ಗಳಿಸಿದೆ.

ಇದನ್ನೂ ಓದಿ: HD Kumaraswamy: ಎಚ್‌ಡಿ ಕುಮಾರಸ್ವಾಮಿ ಕೇಳಿದ ಕೃಷಿ ಖಾತೆ ಮೇಲೇ ನಿತೀಶ್‌ ಕಣ್ಣು; ಯಾರಿಗೆ ಒಲಿಯತ್ತೆ ಇಲಾಖೆ?


ರಾಷ್ಟ್ರೀಯ ಪಕ್ಷಗಳಿಗೆ ಶೇ. 64ರಷ್ಟು ಸ್ಥಾನ

ಥಿಂಕ್-ಟ್ಯಾಂಕ್ ಪಿ ಆರ್ ಎಸ್ ವಿಶ್ಲೇಷಣೆಯ ಪ್ರಕಾರ, “ರಾಷ್ಟ್ರೀಯ ಪಕ್ಷಗಳು” ಎಂದು ಗುರುತಿಸಲ್ಪಡುವ ರಾಜಕೀಯ ಸಂಘಟನೆಗಳು ಈ ಬಾರಿಯಾ ಚುನಾವಣೆಯಲ್ಲಿ 346 ಅಥವಾ ಶೇ. 64 ಸ್ಥಾನಗಳನ್ನು ಗಳಿಸಿದರೆ, ಪ್ರಾದೇಶಿಕ ಪಕ್ಷಗಳು 197 ಅಥವಾ ಶೇ. 33ರಷ್ಟು ಸ್ಥಾನಗಳನ್ನು ಗೆದ್ದವು. ಎನ್‌ಡಿಎ ಪಕ್ಷಗಳ ಏಳು ಸ್ವತಂತ್ರ ಅಭ್ಯರ್ಥಿಗಳು 17 ಸ್ಥಾನಗಳನ್ನು ಗೆದ್ದಿದ್ದಾರೆ.

ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಪ್ರಕಾರ ಈ ಬಾರಿ ಲೋಕಸಭಾ ಚುನಾವಣೆಗಳಲ್ಲಿ 751 ಪಕ್ಷಗಳು ಸ್ಪರ್ಧಿಸಿದ್ದವು. 2009ಕ್ಕಿಂತ ಇದರಲ್ಲಿ 104ರಷ್ಟು ಹೆಚ್ಚಾಗಿದೆ. 368 ಪಕ್ಷಗಳಿಂದ ನಾಮನಿರ್ದೇಶಿತರು ಕಣದಲ್ಲಿದ್ದರು. 2014ರಲ್ಲಿ 464 ಮತ್ತು 2019ರಲ್ಲಿ 677 ಪಕ್ಷಗಳ ಬೆಂಬಲಿಗರು ಕಣದಲ್ಲಿದ್ದರು ಎಂದು ಎಡಿಆರ್ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Amartya Sen: ಭಾರತ ಹಿಂದೂ ರಾಷ್ಟ್ರವಲ್ಲ ಎನ್ನುವುದಕ್ಕೆ ಲೋಕಸಭೆ ಚುನಾವಣೆ ಫಲಿತಾಂಶವೇ ಸಾಕ್ಷಿ: ಅಮರ್ತ್ಯ ಸೇನ್

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಂದಿನ ಅವಧಿಯಲ್ಲಿ ಜನರನ್ನು ವಿಚಾರಣೆಯಿಲ್ಲದೆ ಕಂಬಿಗಳ ಹಿಂದೆ ಹಾಕುವುದು ಮತ್ತು ಶ್ರೀಮಂತರು ಮತ್ತು ಬಡವರ ನಡುವಿನ ಅಂತರವನ್ನು ಹೆಚ್ಚಿಸುವಂತಹ ಕೆಲವು ಘಟನೆಗಳು ಇನ್ನೂ ಮುಂದುವರಿದಿದೆ. ಅದನ್ನು ನಿಲ್ಲಿಸಿ ಎಂದು ಖ್ಯಾತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ (Amartya Sen) ಹೇಳಿದರು. ಈ ಬಾರಿಯ ಲೋಕಸಭೆ ಚುನಾವಣೆಯ ಫಲಿತಾಂಶವು ಭಾರತ ಹಿಂದೂ ರಾಷ್ಟ್ರ ಅಲ್ಲ ಎನ್ನುವುದನ್ನು ಸಾರಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

By

Amartya Sen
Koo

ಕೋಲ್ಕತ್ತಾ: ಇತ್ತೀಚಿನ ಲೋಕಸಭಾ ಚುನಾವಣಾ (Lok Sabha Election) ಫಲಿತಾಂಶವು ಭಾರತ (India) ಹಿಂದೂ ರಾಷ್ಟ್ರವಲ್ಲ (Hindu Rashtra) ಎಂಬುದನ್ನು ಸೂಚಿಸುತ್ತದೆ ಎಂದು ನೋಬೆಲ್ ಪ್ರಶಸ್ತಿ ಪುರಸ್ಕೃತ (Nobel laureate) ಖ್ಯಾತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ (Amartya Sen) ಪ್ರತಿಪಾದಿಸಿದರು. ಯುಎಸ್‌ನಿಂದ (US) ಕೋಲ್ಕತ್ತಾಗೆ (Kolkata) ಆಗಮಿಸಿದ ಅವರು ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಪ್ರತಿ ಚುನಾವಣೆಯ ಅನಂತರ ನಾವು ಯಾವಾಗಲೂ ಬದಲಾವಣೆಯನ್ನು ಕಾಣುತ್ತೇವೆ ಎಂದ ಅವರು, ಭಾರತವು ಹಿಂದೂ ರಾಷ್ಟ್ರ ಅಲ್ಲ ಎಂಬುದು ಚುನಾವಣಾ ಫಲಿತಾಂಶಗಳಲ್ಲಿ ಪ್ರತಿಫಲಿಸುತ್ತದೆ ಎಂದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಂದಿನ ಅವಧಿಯಲ್ಲಿ ಜನರನ್ನು ವಿಚಾರಣೆಯಿಲ್ಲದೆ ಕಂಬಿಗಳ ಹಿಂದೆ ಹಾಕುವುದು ಮತ್ತು ಶ್ರೀಮಂತರು ಮತ್ತು ಬಡವರ ನಡುವಿನ ಅಂತರವನ್ನು ಹೆಚ್ಚಿಸುವಂತಹ ಕೆಲವು ಘಟನೆಗಳು ಇನ್ನೂ ಮುಂದುವರೆದಿದೆ. ಅದನ್ನು ನಿಲ್ಲಿಸಿ ಎಂದು ಅವರು ಹೇಳಿದರು.

ಭಾರತವು ಜಾತ್ಯತೀತ ಸಂವಿಧಾನವನ್ನು ಹೊಂದಿರುವ ಜಾತ್ಯತೀತ ರಾಷ್ಟ್ರವಾಗಿರುವಾಗ ರಾಜಕೀಯವಾಗಿ ಮುಕ್ತ ಮನಸ್ಸಿನ ಅವಶ್ಯಕತೆಯಿದೆ. ಭಾರತವನ್ನು ಹಿಂದೂ ರಾಷ್ಟ್ರವಾಗಿ ಪರಿವರ್ತಿಸುವ ಕಲ್ಪನೆಯು ಸೂಕ್ತವಲ್ಲ ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದ ಅವರು, ಹೊಸ ಕೇಂದ್ರ ಸಚಿವ ಸಂಪುಟವು ಹಿಂದಿನ ಸಂಪುಟದ ನಕಲು ಎಂದು ಅಭಿಪ್ರಾಯಪಟ್ಟರು.

ಹಲವು ಸಚಿವರಿಗೆ ಅವರ ಖಾತೆಗಳನ್ನು ಮುಂದುವರಿಸಲಾಗಿದೆ. ಸ್ವಲ್ಪಮಟ್ಟಿಗೆ ಪುನರ್ರಚನೆಯ ಹೊರತಾಗಿಯೂ, ರಾಜಕೀಯವಾಗಿ ಪ್ರಬಲರು ಇನ್ನೂ ಪ್ರಬಲರಾಗಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

ಭಾರತವು ಬ್ರಿಟಿಷರ ಆಳ್ವಿಕೆಯಲ್ಲಿದ್ದಾಗ ಜನರನ್ನು ಯಾವುದೇ ವಿಚಾರಣೆಯಿಲ್ಲದೆ ಜೈಲಿನಲ್ಲಿಡಲಾಗಿತ್ತು ಎಂದು ತಮ್ಮ ಬಾಲ್ಯದ ದಿನಗಳನ್ನು ಸೇನ್ ನೆನಪಿಸಿಕೊಂಡರು.

ನಾನು ಚಿಕ್ಕವನಿದ್ದಾಗ ನನ್ನ ಅನೇಕ ಚಿಕ್ಕಪ್ಪಂದಿರು ಮತ್ತು ಸೋದರಸಂಬಂಧಿಗಳನ್ನು ವಿಚಾರಣೆಯಿಲ್ಲದೆ ಜೈಲಿಗೆ ಹಾಕಲಾಯಿತು. ಭಾರತವು ಇದರಿಂದ ಮುಕ್ತವಾಗುತ್ತದೆ ಎಂದು ನಾವು ಭಾವಿಸಿದ್ದೇವೆ. ಇದು ನಿಲ್ಲದಿದ್ದಕ್ಕೆ ಕಾಂಗ್ರೆಸ್ ಕೂಡ ಕಾರಣ. ಅವರು ಅದನ್ನು ಬದಲಾಯಿಸಲಿಲ್ಲ. ಆದರೆ, ಪ್ರಸ್ತುತ ಸರ್ಕಾರದ ಅಡಿಯಲ್ಲಿ ಇದು ಹೆಚ್ಚು ಆಚರಣೆಯಲ್ಲಿದೆ ಎಂದು ಹೇಳಿದರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಹೊರತಾಗಿಯೂ ಬಿಜೆಪಿ ಫೈಜಾಬಾದ್ ಲೋಕಸಭಾ ಸ್ಥಾನವನ್ನು ಕಳೆದುಕೊಂಡಿರುವ ಬಗ್ಗೆ ಸೇನ್, ದೇಶದ ನಿಜವಾದ ಗುರುತನ್ನು ಮರೆಮಾಚುವ ಪ್ರಯತ್ನಗಳು ನಡೆದಿವೆ ಎಂದು ಹೇಳಿದರು.

ಇದನ್ನೂ ಓದಿ: Parliament Sessions: ಸಂಸತ್‌ ಅಧಿವೇಶನದಲ್ಲಿ ಇಂದು ರಾಷ್ಟ್ರಪತಿ ಭಾಷಣ; Live ನೋಡಿ

ಮಹಾತ್ಮ ಗಾಂಧಿ, ರವೀಂದ್ರನಾಥ ಟ್ಯಾಗೋರ್ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ದೇಶದಲ್ಲಿ ಈ ರೀತಿ ನಡೆಯಬಾರದಿತ್ತು. ಭಾರತವನ್ನು ಹಿಂದೂ ರಾಷ್ಟ್ರ’ ಎಂದು ಬಿಂಬಿಸಲು ತುಂಬಾ ಹಣ ಖರ್ಚು ಮಾಡಿ ರಾಮ ಮಂದಿರವನ್ನು ನಿರ್ಮಿಸಲಾಗುತ್ತಿದೆ. ಇದು ಭಾರತದ ನಿಜವಾದ ಗುರುತನ್ನು ನಿರ್ಲಕ್ಷಿಸುವ ಪ್ರಯತ್ನವನ್ನು ತೋರಿಸುತ್ತದೆ ಮತ್ತು ಇದು ಬದಲಾಗಬೇಕು ಅವರು ಹೇಳಿದರು.

ಭಾರತದಲ್ಲಿ ನಿರುದ್ಯೋಗ ಹೆಚ್ಚುತ್ತಿದೆ ಮತ್ತು ಪ್ರಾಥಮಿಕ ಶಿಕ್ಷಣ ಮತ್ತು ಪ್ರಾಥಮಿಕ ಆರೋಗ್ಯದಂತಹ ಕ್ಷೇತ್ರಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಸೇನ್ ಹೇಳಿದರು.

Continue Reading

ದೇಶ

Parliament Sessions: ಸಂಸತ್‌ ಅಧಿವೇಶನದಲ್ಲಿ ಇಂದು ರಾಷ್ಟ್ರಪತಿ ಭಾಷಣ; Live ನೋಡಿ

Parliament Sessions: 18ನೇ ಲೋಕಸಭೆಯ ಮೊದಲ ಅಧಿವೇಶನದ ನಾಲ್ಕನೇ ದಿನವಾದ ಇಂದು ಲೋಕಸಭೆ ಮತ್ತು ರಾಜ್ಯಸಭೆಗಳ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ.

VISTARANEWS.COM


on

Parliament Sessions
Koo

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ (Parliament Sessions)ದ ನಾಲ್ಕನೇ ದಿನವಾದ ಇಂದು (ಜೂನ್‌ 27) ಲೋಕಸಭೆ ಮತ್ತು ರಾಜ್ಯಸಭೆಗಳ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಭಾಷಣ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಅಧಿಕಾರಕ್ಕೆ ಬಂದ ಬಳಿಕ ನಡೆಯುತ್ತಿರುವ ಈ ಮೊದಲ ಅಧಿವೇಶನ ಜೂನ್‌ 24ರಂದು ಆರಂಭವಾಗಿದ್ದು, ಜು. 3ರವರೆಗೆ ನಡೆಯಲಿದೆ. ರಾಜ್ಯಸಭೆಯ ಅಧಿವೇಶನ ಜೂ. 27ರಿಂದ ಜು. 3ರವರೆಗೆ ನಡೆಯಲಿದೆ.

ಭಾರತೀಯ ಸಂವಿಧಾನದ 87ನೇ ವಿಧಿಯ ಪ್ರಕಾರ ರಾಷ್ಟ್ರಪತಿ ಪ್ರತಿ ಲೋಕಸಭಾ ಚುನಾವಣೆಯ ನಂತರದ ಮೊದಲ ಅಧಿವೇಶನದ ಆರಂಭದಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡುತ್ತಾರೆ. ದ್ರೌಪದಿ ಮುರ್ಮು ಅವರು ತಮ್ಮ ಭಾಷಣದ ಮೂಲಕ ಸರ್ಕಾರದ ಕಾರ್ಯಕ್ರಮಗಳು ಮತ್ತು ನೀತಿಗಳನ್ನು ವಿವರಿಸಲಿದ್ದಾರೆ. ಅಧಿವೇಶನದ ಮೊದಲ ಎರಡು ದಿನ ಸಂಸದರು ಪ್ರಮಾಣ ವಚನ ಸ್ವೀಕರಿಸಿದರೆ ಮೂರನೇ ದಿನ ಸ್ಪೀಕರ್‌ ಆಯ್ಕೆ ನಡೆಯಿತು.

ಲೋಕಸಭಾ ಸ್ಪೀಕರ್‌ ಆಗಿ ಓಂ ಬಿರ್ಲಾ ನೇಮಕ

ಇನ್ನು ಬುಧವಾರ ನಡೆದ ಲೋಕಸಭಾ ಸ್ಪೀಕರ್‌ ಆಯ್ಕೆಯ ಚುನುವಾಣೆಯಲ್ಲಿ ಬಿಜೆಪಿಯ ಓಂ ಬಿರ್ಲಾ ನೇಮಕಗೊಂಡಿದ್ದಾರೆ. ಸಾಮಾನ್ಯವಾಗಿ ಅವಿರೋಧವಾಗಿ ಸ್ಪೀಕರ್‌ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದರೆ ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಇಂಡಿ ಬಣದ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಯಿತು. ಇಂಡಿ ಬಣದಿಂದ ಕಾಂಗ್ರೆಸ್‌ ಸಂಸದ ಕೊಂಡಿಕುನಾಲ್ ಸುರೇಶ್ (Kondikunal Suresh) ಕಣಕ್ಕಿಳಿದಿದ್ದರು. ಭಾರೀ ಕುತೂಹಲ ಮೂಡಿಸಿದ್ದ ಈ ಐತಿಹಾಸಿಕ ಚುನಾವಣೆಯಲ್ಲಿ ಇದೀಗ ಓಂ ಬಿರ್ಲಾ ಗೆಲುವಿನ ನಗೆ ಬೀರಿದರು.

ಆರಂಭದಲ್ಲಿ ಎನ್‌ಡಿಎ ಪ್ರತಿಪಕ್ಷಗಳ ಮನವೊಲಿಸಲು ಯತ್ನಿಸಿತ್ತು. ಓಂ ಬಿರ್ಲಾ ಅವರನ್ನು ಬೆಂಬಲಿಸಲು ಒಪ್ಪಿಗೆ ಸೂಚಿಸಿದ್ದ ಇಂಡಿ ಬಣ ಡೆಪ್ಯುಟಿ ಸ್ಪೀಕರ್ ತಮಗೆ ಸಿಗಬೇಕೆಂಬ ಷರತ್ತು ವಿಧಿಸಿತ್ತು. ಆದರೆ ಇದಕ್ಕೆ ಎನ್‌ಡಿಎ ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಮಾತುಕತೆ ಮುರಿದು ಬಿದ್ದು ಕೊನೆಯ ಕ್ಷಣದಲ್ಲಿ ಕೊಂಡಿಕುನಾಲ್ ಸುರೇಶ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದರು. ಹಂಗಾಮಿ ಸ್ಪೀಕರ್‌ ಭಾರ್ತೃಹರಿ ಮಹತಾಬ್‌ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

ಇನ್ನು ಎರಡನೇ ಬಾರಿ ಲೋಕಸಭೆ ಸ್ಪೀಕರ್‌ ಆಗಿ ಆಯ್ಕೆ ಆಗಿರುವ ಓಂ ಬಿರ್ಲಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಎಲ್ಲಾ ಸಂಸತ್‌ ಸದಸ್ಯರು ಪಕ್ಷಾತೀತ ಅಭಿನಂದನೆ ಸಲ್ಲಿಸಿದರು.

ಮೋದಿ ಮಾತನಾಡಿ, ʼʼಸದನದ ಪರವಾಗಿ ನಾನು ನಿಮ್ಮನ್ನು ಅಭಿನಂದಿಸಲು ಬಯಸುತ್ತೇನೆ. ಅಮೃತ ಕಾಲದ ಸಮಯದಲ್ಲಿ ನೀವು ಎರಡನೇ ಬಾರಿಗೆ ಈ ಜವಾಬ್ದಾರಿಯುತ ಹುದ್ದೆ ಅಲಂಕರಿಸಿರುವುದು ಬಹಳ ಸಂತಸ ತಂದಿದೆ. ನಿಮ್ಮ ಅನುಭವದೊಂದಿಗೆ, ಮುಂದಿನ 5 ವರ್ಷಗಳವರೆಗೆ ನೀವು ನಮಗೆ ಮಾರ್ಗದರ್ಶನ ನೀಡುತ್ತೀರಿ ಎಂದು ನಾವು ಭಾವಿಸುತ್ತೇವೆ. ನಿಮ್ಮ ಮುಖದ ಮೇಲಿನ ಸಿಹಿಯಾದ ನಗು ಇಡೀ ಸದನವನ್ನು ಸಂತೋಷವನ್ನಾಗಿರಿಸುತ್ತದೆʼʼ ಎಂದು ಹೇಳಿದರು.

ಇನ್ನು ರಾಹುಲ್‌ ಗಾಂಧಿ ಮಾತನಾಡಿ, “ಪ್ರತಿಪಕ್ಷಗಳಿಗೆ ಮಾತನಾಡಲು ಅವಕಾಶ ನೀಡಿ ಭಾರತದ ಜನರನ್ನು ಪ್ರತಿನಿಧಿಸಲು ಅವಕಾಶ ನೀಡುವ ಮೂಲಕ, ನೀವು ಭಾರತದ ಸಂವಿಧಾನವನ್ನು ರಕ್ಷಿಸುವ ನಿಮ್ಮ ಕರ್ತವ್ಯವನ್ನು ನೀವು ಸರಿಯಾಗಿ ನಿರ್ವಹಿಸುತ್ತೀರಿ ಎಂಬ ಬಗ್ಗೆ ನಮಗೆ ವಿಶ್ವಾಸವಿದೆ. ನಾನು ಮತ್ತೊಮ್ಮೆ ನಿಮ್ಮನ್ನು ಅಭಿನಂದಿಸಲು ಬಯಸುತ್ತೇನೆʼʼ ಎಂದು ನುಡಿದರು. ಈ ಬಾರಿ ಪ್ರತಿಪಕ್ಷ ಪ್ರಬಲವಾಗಿರುವುದರಿಂದ ಅಧಿವೇಶನ ಯಾವ ರೋತಿ ನಡೆಯಲಿದೆ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: Asaduddin Owais: ಪ್ರಮಾಣ ವಚನ ಸ್ವೀಕರಿಸಿ ‘ಜೈ ಪ್ಯಾಲೆಸ್ತೀನ್​’ ಘೋಷಣೆ ಕೂಗಿದ ಓವೈಸಿ ಸದಸ್ಯತ್ವ ರದ್ದು? ಕಾನೂನು ಏನು ಹೇಳುತ್ತದೆ?

Continue Reading

ಕರ್ನಾಟಕ

DK Shivakumar: ಸರ್ಕಾರಿ ಅಧಿಕಾರಿಗಳು ಗುಲಾಮರೆಂದ ಮಾಜಿ ಶಾಸಕ; ಕ್ಷಮೆ ಕೇಳಿದ ಡಿ.ಕೆ. ಶಿವಕುಮಾರ್

DK Shivakumar: ಸರ್ಕಾರಿ ಅಧಿಕಾರಿಗಳು ಜನಸೇವೆಗೆ ತಮ್ಮ ಬದುಕು ಮುಡಿಪಿಟ್ಟಿದ್ದಾರೆ. ಅವರನ್ನು ಗುಲಾಮರು ಎಂದ ಮಾಜಿ ಶಾಸಕರ ಹೇಳಿಕೆಗೆ ನಾನು ಕ್ಷಮೆ ಕೇಳುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಚನ್ನಪಟ್ಟಣದ ಬೇವೂರು ಹಾಗೂ ತಿಟ್ಟಮಾರನಹಳ್ಳಿ ಜಿ.ಪಂ. ವ್ಯಾಪ್ತಿಯಲ್ಲಿ ಬುಧವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಹಾಗೂ ಚನ್ನಪಟ್ಟಣದ ಮಾಜಿ ಶಾಸಕ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರು ಹೇಳದೆ ಪರೋಕ್ಷವಾಗಿ ಟಾಂಗ್‌ ನೀಡಿದ್ದಾರೆ.

VISTARANEWS.COM


on

DCM Dk shivakumar statement in bagilige bantu sarkara sevege irali sahakara programme in channapattana
Koo

ಚನ್ನಪಟ್ಟಣ: ಸರ್ಕಾರಿ ಅಧಿಕಾರಿಗಳು ಜನಸೇವೆಗೆ ತಮ್ಮ ಬದುಕು ಮುಡಿಪಿಟ್ಟಿದ್ದಾರೆ. ಅವರನ್ನು ಗುಲಾಮರು ಎಂದ ಮಾಜಿ ಶಾಸಕರ ಹೇಳಿಕೆಗೆ ನಾನು ಕ್ಷಮೆ ಕೇಳುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದರು.

ಚನ್ನಪಟ್ಟಣದ ಬೇವೂರು ಹಾಗೂ ತಿಟ್ಟಮಾರನಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಹಾಗೂ ಚನ್ನಪಟ್ಟಣದ ಮಾಜಿ ಶಾಸಕ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರು ಹೇಳದೆ ಪರೋಕ್ಷವಾಗಿ ಹೀಗೆ ತಿಳಿಸಿದರು.

ಸರ್ಕಾರಿ ಕೆಲಸ ದೇವರ ಕೆಲಸ ಎಂದು ಇದೇ ಜಿಲ್ಲೆಯವರಾದ ಕೆಂಗಲ್ ಹನುಮಂತಯ್ಯ ಅವರು ವಿಧಾನಸೌಧದ ಪ್ರವೇಶದ್ವಾರದ ಮೇಲೆ ಬರೆದಿದ್ದಾರೆ. ಸರ್ಕಾರಿ ಅಧಿಕಾರಿಗಳು ಕೂಡ ಜನಸೇವೆಯೇ ಜನಾರ್ದನ ಸೇವೆ ಎಂದು ಭಾವಿಸಿ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: Essay on Kempegowda in Kannada: ನಾಡಪ್ರಭು ಕೆಂಪೇಗೌಡರು ಆಧುನಿಕ ಬೆಂಗಳೂರಿನ ಮೂಲ ಶಿಲ್ಪಿ!

ಮಾಜಿ ಶಾಸಕರು ನಿಮ್ಮನ್ನು ಗುಲಾಮರು ಎಂದು ಕರೆದಿದ್ದು, ನಾನು ನಿಮ್ಮ ಬಳಿ ಕ್ಷಮೆ ಕೇಳುತ್ತೇನೆ. ನಾನು ಸಂವಿಧಾನದ ಅಡಿಯಲ್ಲಿ ಸರ್ಕಾರಿ ನೌಕರ. ಜನ ಸಂತೋಷವಾಗಿರಲು ನಾವು ಸರ್ಕಾರದ ಕೆಲಸ ಮಾಡಬೇಕು. ನೊಂದ ಜನರಿಗೆ ಸಹಾಯ ಮಾಡಲು ಸರ್ಕಾರದಿಂದ ವೇತನ ನೀಡಲಾಗುತ್ತಿದೆ. ಕಷ್ಟಗಳಿಗೆ ಪರಿಹಾರ ಕೊಡು ಎಂದು ಕೇಳಲು ಜನ ದೇವಾಲಯಕ್ಕೆ ಹೋಗುತ್ತಾರೆ. ಅದೇ ರೀತಿ ಸರ್ಕಾರಿ ಕಚೇರಿ ಕೂಡ ದೇವಾಲಯ. ಜನರ ಕಷ್ಟಕ್ಕೆ ಸ್ಪಂದಿಸಿ ಪರಿಹಾರ ನೀಡಲು ಸರ್ಕಾರಿ ಕಚೇರಿ ಇದೆ ಎಂದರು.

ಕ್ಷೇತ್ರದ ಎರಡು ಕಡೆ ಈ ಕಾರ್ಯಕ್ರಮವನ್ನು ಮಾಡಿದ್ದು, ಈಗಾಗಲೇ 3 ಸಾವಿರ ಜನ ಅರ್ಜಿ ಸಲ್ಲಿಸಿದ್ದಾರೆ. ವ್ಯಾಪಾರಕ್ಕೆ ಸಾಲ ಸೌಲಭ್ಯ, ನಿವೇಶನ, ಮನೆ, ಸ್ಮಶಾನಕ್ಕೆ ಭೂಮಿ, ಕಾಲುವೆ ದುರಸ್ತಿ, ರಸ್ತೆ ಅಭಿವೃದ್ಧಿ, ವಿವಿಧ ಪಿಂಚಣಿ, ಪೋಡಿ, ಖಾತೆ ಸಮಸ್ಯೆ, ಸರ್ಕಾರಿ ಕಚೇರಿಯಲ್ಲಿ ಭ್ರಷ್ಟಾಚಾರದ ಬಗ್ಗೆ ಜನರು ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ. ಇನ್ನು ಮುಂದೆ ಬಡವರ, ರೈತರ ಕೆಲಸಗಳಿಗೆ ಸರ್ಕಾರಿ ಅಧಿಕಾರಿಗಳು, ನೌಕರರು ಲಂಚ ಕೇಳಿದರೆ ನಮಗೆ ದೂರು ನೀಡಿ. ಇದಕ್ಕಾಗಿ ಸರ್ಕಾರಿ ಕಚೇರಿಯಲ್ಲಿ ಪ್ರತ್ಯೇಕ ದೂರವಾಣಿ ಸಂಖ್ಯೆ ನೀಡಲಾಗುವುದು. ಲಂಚ ಕೇಳುವವರನ್ನು ಬಲಿ ಹಾಕುತ್ತೇವೆ. ಸರ್ಕಾರಿ ಅಧಿಕಾರಿಗಳಿಗೆ ವೇತನ ಇದೆ. ಆದರೆ ರೈತನಿಗೆ ಸಂಬಳ, ಬಡ್ತಿ, ಪಿಂಚಣಿ, ಲಂಚ ಸಿಗುವುದಿಲ್ಲ. ಆದರೂ ಅವರು ಬದುಕಬೇಕು. ಅಧಿಕಾರಿಗಳು ಕೂಡ ಅವರ ಪರಿಸ್ಥಿತಿಯಲ್ಲಿ ನಿಂತು ಆಲೋಚನೆ ಮಾಡಬೇಕು. ಇಲ್ಲಿ ತಮ್ಮ ಸಮಸ್ಯೆ ನಿವಾರಣೆ ಮಾಡಿಕೊಳ್ಳಬೇಕು ಎಂದು ಜನ ಬಂದಿದ್ದಾರೆ. ಈ ಜನರಿಗೆ ಯಾವುದೇ ತೊಂದರೆ ಆಗದಂತೆ ಅಧಿಕಾರಿಗಳು ಅವರ ಕೆಲಸ ಮಾಡಿಕೊಡಬೇಕು ಎಂದು ಸೂಚಿಸಿದರು.

ನೀವು ಯಾವುದೇ ಪಕ್ಷಕ್ಕೆ ಮತ ಹಾಕಿದ್ದರೂ, ಬೆಂಬಲ ನೀಡಿದ್ದರೂ ಮುಜುಗರ ಬೇಡ. ನಮ್ಮ ಬಳಿ ಸಮಸ್ಯೆ ಹೇಳಿಕೊಳ್ಳಿ, ಪರಿಹಾರ ಪಡೆಯಿರಿ. ನೀವು ಇಲ್ಲಿ ಅರ್ಜಿ ಕೊಡಲು ಸಂಕೋಚ ಪಡುವುದಾದರೆ, ಅಂತಹವರು ತಾಲೂಕು ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಶಿವಕುಮಾರ್‌ ಹೇಳಿದರು.

ಇದನ್ನೂ ಓದಿ: ECE v/s CSE: ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್‌ ಕಮ್ಯುನಿಕೇಷನ್; ಯಾವುದು ಉತ್ತಮ ಆಯ್ಕೆ?

ಸರ್ಕಾರದಿಂದ ಅನೇಕ ಸಮುದಾಯಗಳ ನಿಗಮಗಳಿವೆ. ಈ ನಿಗಮಗಳಲ್ಲಿ 1 ಲಕ್ಷ ರೂ. ಸಾಲ ಸೌಲಭ್ಯ ನೀಡಲಾಗುತ್ತಿದೆ. ಯುವಕರಿಗೆ ಸ್ವಯಂ ಉದ್ಯೋಗ ಮಾಡಲು ಸಬ್ಸಿಡಿ ಸಹಿತ ಸಾಲ ನೀಡಲಾಗುವುದು ಎಂದರು.

ನಿಮ್ಮ ಬದುಕಲ್ಲಿ ಬದಲಾವಣೆ ತರಲು ಬಂದಿದ್ದೇನೆ

ಈ ಕ್ಷೇತ್ರದಲ್ಲಿ ಬಗರ್ ಹುಕುಂ ಸಾಗುವಳಿ ಜಮೀನು, ಆಶ್ರಯ ಮನೆ ಯೋಜನೆ ಕುರಿತು ಸಭೆ ಆಗಿಲ್ಲ. ಈ ಹಿಂದೆ ಇದ್ದ ಶಾಸಕರು ಯಾಕೆ ಸಭೆ ಮಾಡಿಲ್ಲ ಎಂದು ಟೀಕೆ ಮಾಡಲು ಹೋಗುವುದಿಲ್ಲ. ಇಲ್ಲಿನ ಬಡವರಿಗೆ ನಿವೇಶನ, ಮನೆ ನೀಡಲು ಎಲ್ಲೆಲ್ಲಿ ಜಾಗ ಇದೆಯೋ ಅದನ್ನು ಗುರುತಿಸಿ. ಸರ್ಕಾರಿ ಜಮೀನು ಇಲ್ಲವಾದರೆ ನಿಮ್ಮ ನಿಮ್ಮ ಊರುಗಳಲ್ಲೇ 2-3 ಎಕರೆ ಜಾಗವನ್ನೂ ಸರ್ಕಾರದ ವತಿಯಿಂದ ಖರೀದಿ ಮಾಡುವ ಆಲೋಚನೆ ಇದೆ. ಚನ್ನಪಟ್ಟಣದಲ್ಲಿ ಕನಿಷ್ಠ 50 ಎಕರೆ ಜಾಗ ಗುರುತಿಸಿ ಅಲ್ಲಿ ಸರ್ಕಾರದ ವತಿಯಿಂದ ಲೇಔಟ್ ಮಾಡಿ, ನಿವೇಶನ ಹಂಚಿಕೆ ಮಾಡಲಾಗುವುದು. ನಿಮ್ಮ ಬದುಕಿನಲ್ಲಿ ಬದಲಾವಣೆ ತರಲು ನಾನು ಬಂದಿದ್ದೇನೆ ಎಂದು ಡಿಸಿಎಂ ತಿಳಿಸಿದರು.

ನಮ್ಮ ಸರ್ಕಾರ ಪ್ರತಿ ತಿಂಗಳು ಬಡ ಕುಟುಂಬದ ಮಹಿಳೆಗೆ 2 ಸಾವಿರ, ಉಚಿತ ಬಸ್ ಪ್ರಯಾಣ, ಅನ್ನಭಾಗ್ಯ ಅಕ್ಕಿ ಹಾಗೂ ಅಕ್ಕಿಯ ಹಣ ಸೇರಿದಂತೆ ಗ್ಯಾರಂಟಿ ಯೋಜನೆಗಳನ್ನು ನಿಮಗೆ ತಲುಪಿಸುತ್ತಿದೆ. ಈ ಹಿಂದೆ ಇದ್ದವರು ನಿಮಗೆ ಏನು ಸಹಾಯ ಮಾಡಿದರು, ಏನು ಮಾಡಲಿಲ್ಲ ಎಂಬುದರ ಬಗ್ಗೆ ನಾನು ಚರ್ಚೆ ಮಾಡುವುದಿಲ್ಲ. ಅವರು ಅವರದೇ ಆದ ಲೆಕ್ಕಾಚಾರದಲ್ಲಿ ನಿಮ್ಮ ಹೃದಯ ಗೆದ್ದಿದ್ದರು. ನಾನು ನಿಮ್ಮ ಹೃದಯ ಗೆಲ್ಲಬೇಕು ಎಂದರೆ ಶ್ರಮ ವಹಿಸಿ ಕೆಲಸ ಮಾಡಬೇಕು. ನಿಮಗೆ ಆರ್ಥಿಕ ಶಕ್ತಿ ತುಂಬಿ, ನಿಮ್ಮ ಕೈ ಬಲಪಡಿಸಬೇಕು. ಈ ಕಾರಣಕ್ಕೆ ನಾನು ಸರ್ಕಾರಿ ಅಧಿಕಾರಿಗಳನ್ನು ನಿಮ್ಮ ಮನೆ ಬಾಗಿಲಿಗೆ ಕರೆತಂದಿದ್ದೇನೆ ಎಂದರು.

ಈ ಕಾರ್ಯಕ್ರಮ ನಮ್ಮ ಜವಾಬ್ದಾರಿ. ಜನರ ಋಣ ತೀರಿಸಲು ಇಲ್ಲಿಗೆ ಬಂದಿದ್ದೇವೆ. ಈ ಭಾಗದ ಜನ ನಿವೇಶನ, ಮನೆ, ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಇಡುತ್ತಿದ್ದಾರೆ. ಇಷ್ಟು ದಿನ ಇದ್ದ ಶಾಸಕರು ಇಲ್ಲಿಗೆ ಬಂದು ಮತ ಹಾಕಿಸಿಕೊಂಡು ಹೋಗುತ್ತಿದ್ದರು. ಈ ಕ್ಷೇತ್ರದ ಹಳ್ಳಿಗಳ ಕಡೆ ತಿರುಗಿ ನೋಡುತ್ತಿರಲಿಲ್ಲ. ನಾನು ಬೆಂಗಳೂರು, ರಾಮನಗರ, ಕನಕಪುರದಲ್ಲಿ ಈ ಕಾರ್ಯಕ್ರಮ ಮಾಡಿದ್ದೇನೆ. ಈ ಹಿಂದೆ ಇದ್ದವರಿಗೆ ಈ ಬಗ್ಗೆ ಆಸಕ್ತಿ ಇರಲಿಲ್ಲ, ಹೀಗಾಗಿ ಇಂತಹ ಕಾರ್ಯಕ್ರಮ ಮಾಡಲಿಲ್ಲ. ಇಷ್ಟು ದಿನ ನೀವು ಆಶ್ವಾಸನೆಯಲ್ಲಿ ಬದುಕಿದ್ದೀರಿ. ನಿಮ್ಮ ಕಷ್ಟಗಳಿಗೆ ಆದಷ್ಟು ಬೇಗ ಕಾನೂನು ವ್ಯಾಪ್ತಿಯಲ್ಲಿ ಪರಿಹಾರ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಈ ಬಾರಿ ಚನ್ನಪಟ್ಟಣದಲ್ಲಿ ನಿಮ್ಮ ಕಷ್ಟಕ್ಕೆ ಸ್ಪಂದಿಸುವ ಶಾಸಕ ಆಯ್ಕೆಯಾಗುವ ಆತ್ಮವಿಶ್ವಾಸ ನನಗಿದೆ. ನಿಮಗೆ ನೋವಿದೆ, ಹಸಿದಿದ್ದೀರಿ. ನಿಮ್ಮ ಕಷ್ಟಕ್ಕೆ ಸ್ಪಂದಿಸುವ ಶಾಸಕನನ್ನು ಆಯ್ಕೆ ಮಾಡುತ್ತೀರಿ ಎಂಬ ನಂಬಿಕೆ, ವಿಶ್ವಾಸ ಇದೆ ಎಂದರು.

ಈ ಭಾಗದ ಅಭಿವೃದ್ಧಿಗೆ ವಿಶೇಷ ಅನುದಾನ

ಸರ್ಕಾರದಿಂದ 150-200 ಕೋಟಿಯಷ್ಟು ವಿಶೇಷ ಅನುದಾನ ತಂದು ಕ್ಷೇತ್ರದ ಎಲ್ಲಾ ಹಳ್ಳಿಗಳಲ್ಲಿ ಆಗಬೇಕಿರುವ ಕೆಲಸ ಮಾಡಲಾಗುವುದು. ನನ್ನ ನೀರಾವರಿ ಇಲಾಖೆಯಿಂದ 540 ಕೋಟಿ ವೆಚ್ಚದಲ್ಲಿ ಸತ್ತೆಗಾಲದಿಂದ 1.5 ಟಿಎಂಸಿ ನೀರು ಪೂರೈಸುವ ಕೆಲಸ ಮಾಡಲಾಗಿದೆ. ಇನ್ನು ಕಳೆದ ವರ್ಷ ಇಲ್ಲಿ ಮಳೆ ಬಂದು ನೀರು ನಿಂತಾಗ ನಾನು ಇಲ್ಲಿಗೆ ಬಂದು ಭೇಟಿ ನೀಡಿದ್ದೆ. ಇಲ್ಲಿ ನೀರು ಬಾರದಂತೆ ಕೋಡಿಹಳ್ಳಕ್ಕೆ ತಡೆಗೋಡೆ ನಿರ್ಮಿಸುವ ಯೋಜನೆಗೆ 1.40 ಕೋಟಿ ರೂ. ಅನುದಾನ ನೀಡಲಾಗಿದ್ದು, ಸದ್ಯದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಶಿವಕುಮಾರ್‌ ಹೇಳಿದರು.

ಈ ಭಾಗದಲ್ಲಿ ಸಿ.ಎಸ್. ಆರ್. ನಿಧಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಿಸಿ ಗ್ರಾಮೀಣ ಭಾಗದ ಮಕ್ಕಳಿಗೆ ಜಾಗತಿಕ ಮಟ್ಟದ ಶಿಕ್ಷಣ ನೀಡಲು ಮುಂದಾಗಿದ್ದೇವೆ. ಈಗಾಗಲೇ ಟೊಯೊಟಾ ಅವರಿಂದ ಕೆಲವು ಶಾಲೆಗಳ ನಿರ್ಮಾಣ ಕಾರ್ಯ ಆರಂಭವಾಗಿವೆ. ಇನ್ನು ಈ ಭಾಗದ ರೈತರ ಪಂಪ್‌ಸೆಟ್‌ಗಳಿಗೆ ಅನುಕೂಲವಾಗಬೇಕು ಎಂದು ನಾವು ಉಚಿತ ಟಿಸಿ ಹಾಕಿಸಿದ್ದೆವು. ಸುರೇಶ್ ಅವರು ಸಂಸದರಾಗಿದ್ದಾಗ ಈ ಸೌಲಭ್ಯ ಕಲ್ಪಿಸಲಾಯಿತು. ಪಕ್ಕದ ಮಂಡ್ಯದಲ್ಲಿ ಇಂತಹ ವ್ಯವಸ್ಥೆ ಇಲ್ಲ. ನನ್ನ ಕೊಡುಗೆ ಏನು ಎಂದು ಯಾರು ಏನಾದರೂ ಟೀಕೆ ಮಾಡಲಿ. ನನ್ನ ಹಾಗೂ ನಿಮ್ಮ ಸಂಬಂಧ ಭಕ್ತ ಹಾಗೂ ಭಗವಂತನ ನಡುವಣ ಸಂಬಂಧ ಎಂದರು.

ತಕ್ಷಣವೇ ಬಸ್‌ ವ್ಯವಸ್ಥೆ ಮಾಡಲು ಸೂಚನೆ:

ಸಭೆಯಲ್ಲಿ ಸಿದ್ದರಾಮೇಶ್ವರ ಕಾಲೇಜು ಹಾಗೂ ಇತರೆ ಸರ್ಕಾರಿ ಶಾಲೆಗಳ 20 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು “ಸರ್ ನಮಗೆ ಸಮಯಕ್ಕೆ ಸರಿಯಾಗಿ ಬಸ್ ಇಲ್ಲ. ಚನ್ನಪಟ್ಟಣದಿಂದ ಮಲ್ಲನಕುಪ್ಪೆಗೆ ಪ್ರತಿದಿನ 9 ಗಂಟೆಗೆ ತಲುಪುವಂತೆ ಬಸ್ ವ್ಯವಸ್ಥೆ ಕಲ್ಪಿಸಿ” ಎಂದು ಮನವಿ ಮಾಡಿದರು.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

ಮನವಿಗೆ ಸ್ಪಂದಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, “ನಮ್ಮ ಹೆಣ್ಣು ಮಕ್ಕಳು ಧೈರ್ಯ, ಓದುವ ಛಲದಿಂದ ಇಲ್ಲಿಯವರೆಗೂ ಬಂದಿದ್ದಾರೆ. ನಿಮ್ಮ ಅಧಿಕಾರಿಗೆ ಹೇಳಿ” ಎಂದು ಪಕ್ಕದಲ್ಲಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಹೇಳಿದರು. ಆಗ ಕೆಎಸ್‌ಆರ್‌ಟಿಸಿ ಅಧಿಕಾರಿಯನ್ನು ಕರೆದ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು, “ಸೋಮವಾರವೇ ಬಸ್ ಬರಬೇಕು. ಈ ವಿದ್ಯಾರ್ಥಿನಿಯರ ಸಮಸ್ಯೆ ಬಗೆಹರಿಸಬೇಕು” ಎಂದು ಸ್ಪಷ್ಟ ಸೂಚನೆ ನೀಡಿದರು.

Continue Reading

ಕರ್ನಾಟಕ

DK Shivakumar: ಹಾಲಿನ ದರ ಕಡಿಮೆಯಾಯಿತು, ಇನ್ನೂ ಹೆಚ್ಚಿಸಬೇಕಿತ್ತು ಎಂದ ಡಿ.ಕೆ. ಶಿವಕುಮಾರ್

DK Shivakumar: ಬಿಜೆಪಿ ರೈತರ ವಿರೋಧಿ ಎಂದು ಮತ್ತೊಮ್ಮೆ ಸಾಬೀತಾಗಿದೆ. ರೈತರ ಹಿತಕ್ಕಾಗಿ ಕೇವಲ 2 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅದೂ ಹಾಲಿನ ಪ್ರಮಾಣ ಹೆಚ್ಚಳಕ್ಕೆ ಅನುಗುಣವಾಗಿ. ರಾಜಕೀಯವಾಗಿ ಯಾರು ಏನು ಬೇಕಾದರೂ ಹೇಳಿಕೆ ನೀಡಬಹುದು. ಆದರೆ ಹಸುಗಳ ಮೇವಿನ ಬೆಲೆ ಸೇರಿದಂತೆ ಅನೇಕ ವಿಚಾರಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ರೈತರ ಹಿತ ಗಮನದಲ್ಲಿಟ್ಟುಕೊಂಡು ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

DCM DK Shivakumar statement about milk price hike
Koo

ಬೆಂಗಳೂರು: ರೈತರ ಹಿತ ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ ಮಾಡಲಾಗಿದೆ. ಇದನ್ನು ವಿರೋಧಿಸಿರುವ ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣಗೊಂಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿರುಗೇಟು ನೀಡಿದರು.

ವಿಧಾನಸೌಧದ ಆವರಣದಲ್ಲಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಹಾಲಿನ ದರ ಏರಿಕೆ ವಿಚಾರವಾಗಿ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಅವರು, ಬಿಜೆಪಿ ರೈತರ ವಿರೋಧಿಗಳು ಎಂದು ಮತ್ತೊಮ್ಮೆ ಸಾಬೀತಾಗಿದೆ. ರೈತರ ಹಿತಕ್ಕಾಗಿ ಕೇವಲ 2 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅದೂ ಹಾಲಿನ ಪ್ರಮಾಣ ಹೆಚ್ಚಳಕ್ಕೆ ಅನುಗುಣವಾಗಿ. ರಾಜಕೀಯವಾಗಿ ಯಾರು ಏನು ಬೇಕಾದರೂ ಹೇಳಿಕೆ ನೀಡಬಹುದು. ಆದರೆ ಹಸುಗಳ ಮೇವಿನ ಬೆಲೆ ಸೇರಿದಂತೆ ಅನೇಕ ವಿಚಾರಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ರೈತರ ಹಿತ ಗಮನದಲ್ಲಿಟ್ಟುಕೊಂಡು ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಬೇರೆ ರಾಜ್ಯಗಳಲ್ಲಿ ಹಾಲಿನ ದರಕ್ಕೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಅತಿ ಕಡಿಮೆ ಬೆಲೆಗೆ ಹಾಲು ನೀಡಲಾಗುತ್ತಿದೆ ಎಂದರು.

ಬೆಲೆ ಏರಿಕೆ ಹಣ ರೈತರಿಗೆ ಹೋಗುವುದಿಲ್ಲ ಎಂದು ಕೆಎಂಎಫ್ ಅಧ್ಯಕ್ಷರು ಹೇಳಿದ್ದಾರೆ ಎಂದು ಕೇಳಿದಾಗ, “ಕೆಎಂಎಫ್ ಎಂದರೆ ರೈತರು, ಅದು ರೈತರ ಒಕ್ಕೂಟ. ಯಾರು ಏನಾದರೂ ವಿವಾದ ಮಾಡಲಿ, ಪರವಾಗಿಲ್ಲ. ನನ್ನ ಪ್ರಕಾರ ಹಾಲಿನ ದರ ಇನ್ನೂ ಹೆಚ್ಚಳ ಮಾಡಬೇಕಿತ್ತು. ರೈತರು ತಮ್ಮ ಹಸುಗಳನ್ನು ಮಾರಿಕೊಳ್ಳುವ ದುಸ್ಥಿತಿಯಲ್ಲಿ ಇದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಹಾಲಿನ ದರ ಎಷ್ಟಿದೆ ಎಂದು ತಿಳಿದು, ಆಮೇಲೆ ಮಾತಾಡಲಿ. ರೈತರನ್ನು ಬದುಕಿಸುವ ಕೆಲಸ ಮಾಡಲಿ” ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

ರಾಹುಲ್ ಗಾಂಧಿ ಅವರಿಗೆ ಅಭಿನಂದನೆಗಳು: ವಿರೋಧ ಪಕ್ಷದ ನಾಯಕನಾಗಬೇಕು ಎಂಬುದು ರಾಹುಲ್ ಗಾಂಧಿ ಅವರ ಬಯಕೆಯಲ್ಲ. ಇದು ಜನರ ಬಯಕೆ. ನಮ್ಮ ಮನವಿಯನ್ನು ಒಪ್ಪಿ ವಿರೋಧ ಪಕ್ಷದ ನಾಯಕ ಜವಾಬ್ದಾರಿ ವಹಿಸಿಕೊಂಡ ರಾಹುಲ್ ಗಾಂಧಿ ಅವರಿಗೆ ದೇಶದ ಜನರ ಪರವಾಗಿ, ಇಂಡಿಯಾ ಮೈತ್ರಿಕೂಟ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ಧನ್ಯವಾದ ಹೇಳುತ್ತೇನೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆಗೆ ರಾಹುಲ್ ಗಾಂಧಿ ಅವರು ಕೈಗೊಂಡಿರುವ ಈ ತೀರ್ಮಾನ ನಾವು ಸ್ವಾಗತಿಸುತ್ತೇವೆ ಎಂದು ತಿಳಿಸಿದರು.

ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ತೀರ್ಮಾನ ಕೈಗೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಒತ್ತಡ ಹಾಕಿದ ಇಂಡಿಯಾ ಮೈತ್ರಿಕೂಟ ನಾಯಕರಿಗೆ ಅಭಿನಂದನೆಗಳು. ಈ ದೇಶದ ರಕ್ಷಣೆ ಹಾಗೂ ಜನರ ಹಿತ ಕಾಯಲು ಇಂಡಿಯಾ ಮೈತ್ರಿಕೂಟ ಹೋರಾಟ ಮಾಡಲಿದೆ ಎಂದರು.

ಇದನ್ನೂ ಓದಿ: Rain News: ಕೊಡಗು, ಚಿಕ್ಕಮಗಳೂರು, ಕಾರವಾರದಲ್ಲಿ ವರುಣಾರ್ಭಟ; ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆ!

ಹೆಚ್ಚುವರಿ ಡಿಸಿಎಂ ಬೇಡಿಕೆ ಚರ್ಚೆ ಬಗ್ಗೆ ಕೇಳಿದಾಗ, ಈ ವಿಚಾರವಾಗಿ ಮುಖ್ಯಮಂತ್ರಿಗಳನ್ನು ಕೇಳಿ. ಈ ಬಗ್ಗೆ ಉತ್ತರ ನೀಡಲು ಅವರೇ ಸೂಕ್ತ ವ್ಯಕ್ತಿ ಎಂದು ತಿಳಿಸಿದರು.

Continue Reading
Advertisement
Actor Darshan
ಸಿನಿಮಾ2 mins ago

Actor Darshan : ನಟ ದರ್ಶನ್‌ಗಾಗಿ ಊಟ ಬಿಟ್ಟು ಜೈಲಿನ ಹೊರಗೆ ವಿಶೇಷಚೇತನ ಯುವತಿ ಗೋಳಾಟ

cm siddaramaiah price hikes
ಕರ್ನಾಟಕ34 mins ago

CM Siddaramaiah: ₹2000 ಕೊಟ್ಟು ₹4740 ಕಿತ್ತುಕೊಳ್ಳುತ್ತಿರುವ ರಾಜ್ಯ ಸರಕಾರ! ನಿಮ್ಮ ಜೇಬಿಗೆ ಕತ್ತರಿ ಬೀಳುತ್ತಿರುವುದರ ಲೆಕ್ಕ ಇಲ್ಲಿದೆ ನೋಡಿ!

Mohan Yadav
ದೇಶ40 mins ago

Mohan Yadav: ಇನ್ಮುಂದೆ ಶಾಲಾ ಪಠ್ಯದಲ್ಲಿ ಇರಲಿದೆ ‘ತುರ್ತು ಪರಿಸ್ಥಿತಿ’ಯ ಅಧ್ಯಾಯ

Road Accident
ಕ್ರೈಂ51 mins ago

Road Accident : ರೈಲು ಬಡಿದು ವ್ಯಕ್ತಿ ಸಾವು;ನಿಂತಿದ್ದ ಬಸ್‌ಗೆ ಗುದ್ದಿ ಛಿದ್ರಗೊಂಡ ಹೊಸ ಕಾರು

Rohit Sharma
ಕ್ರೀಡೆ56 mins ago

Rohit Sharma : ಇಂಗ್ಲೆಂಡ್​ ಸೋಲಿಸುವ ಯೋಜನೆ ವಿವರಿಸಿದ ನಾಯಕ ರೋಹಿತ್ ಶರ್ಮಾ

Droupadi Murmu
ದೇಶ1 hour ago

Droupadi Murmu: ತುರ್ತು ಪರಿಸ್ಥಿತಿ ಸಂವಿಧಾನದ ಮೇಲೆ ನಡೆದಿರುವ ಅತಿದೊಡ್ಡ ದಾಳಿ; ದ್ರೌಪದಿ ಮುರ್ಮು

IND vs ENG
ಪ್ರಮುಖ ಸುದ್ದಿ1 hour ago

IND vs ENG : ಭಾರತದ ವಿರುದ್ಧ ಹೂಡಲಿರುವ ತಂತ್ರಗಳನ್ನು ವಿವರಿಸಿದ ಇಂಗ್ಲೆಂಡ್ ಕೋಚ್​ ಮ್ಯಾಥ್ಯೂ ಮಾಟ್​

karnataka Rains Effected
ಮಳೆ1 hour ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

Share Market
ವಾಣಿಜ್ಯ2 hours ago

Share Market: ಮೊದಲ ಬಾರಿಗೆ 79,000 ಅಂಕಗಳ ಗಡಿ ದಾಟಿದ ಸೆನ್ಸೆಕ್ಸ್; ಗರಿಷ್ಠ ಮಟ್ಟ ತಲುಪಿದ ನಿಫ್ಟಿ

pattanagere shed actor darshan renuka swamy murder
ಕ್ರೈಂ2 hours ago

Actor Darshan: ಪಟ್ಟಣಗೆರೆ ಶೆಡ್ಡಾ? ನಾವು ಅಲ್ಲಿಗೆ ಹೋಗೋಲ್ಲ ಅನ್ನುತ್ತಿರುವ ವಾಹನ ಮಾಲಿಕರು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rains Effected
ಮಳೆ1 hour ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ7 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 weeks ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 weeks ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 weeks ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

ಟ್ರೆಂಡಿಂಗ್‌