Hanuman Flag: ಮಂಡ್ಯ ಹನುಮಧ್ವಜ ಕೇಸ್‌; ಹಸಿರು ಧ್ವಜ ತೋರಿಸ್ತೇವೆ ತೆಗೆಯುತ್ತೀರಾ? ಸುನಿಲ್‌ ಕುಮಾರ್ ಪ್ರಶ್ನೆ - Vistara News

ರಾಜಕೀಯ

Hanuman Flag: ಮಂಡ್ಯ ಹನುಮಧ್ವಜ ಕೇಸ್‌; ಹಸಿರು ಧ್ವಜ ತೋರಿಸ್ತೇವೆ ತೆಗೆಯುತ್ತೀರಾ? ಸುನಿಲ್‌ ಕುಮಾರ್ ಪ್ರಶ್ನೆ

Hanuman Flag: ಮಂಡ್ಯ ಹನುಮಾಧ್ಯಜ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಇಲಾಖೆ ನೇರ ಹೊಣೆ ಆಗಲಿದೆ ಅಂತ ಸರ್ಕಾರಕ್ಕೆ ಎಚ್ಚರಿಸುತ್ತೇವೆ. ಸ್ಥಳೀಯ ಅಧಿಕಾರಿಗಳು ದೊಡ್ಡ ವಿವಾದ ಮಾಡಲು ಹೊರಟಿದ್ದಾರೆ. ಇದು ಆಕ್ಷೇಪಾರ್ಹ ಎಂದು ಮಾಜಿ ಸಚಿವ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್‌ ಕುಮಾರ್‌ ಕಿಡಿಕಾರಿದ್ದಾರೆ.

VISTARANEWS.COM


on

V Sunil Kumar react on Hanuman Flag
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ಶನಿವಾರ ರಾತ್ರಿ ಹನುಮಧ್ವಜ (Hanuman Flag) ಹಾರಿಸಿದ್ದು, ಪೊಲೀಸರನ್ನು ಬಳಸಿ ಧ್ವಜವನ್ನು ಕೆಳಗೆ ಇಳಿಸಿದ್ದನ್ನು ಖಂಡಿಸುತ್ತೇನೆ. ಒಂದು ಧ್ವಜ ಇಳಿಸಿದ್ರೆ, ಸಾವಿರಾರು ಧ್ವಜ ಹಾರಿಸಬೇಕಾಗುತ್ತವೆ. ಎಂದು ಎಚ್ಚರಿಕೆ ನೀಡಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ವಿ. ಸುನಿಲ್‌ ಕುಮಾರ್ (V Sunil Kumar), ಈಗ ರಾಜ್ಯದ ಹಲವು ಕಡೆ ಇರುವ ಹಸಿರು ಧ್ವಜ ತೆಗೆಯುತ್ತೀರಾ? ಎಂದು ಪ್ರಶ್ನೆ ಮಾಡಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸುನಿಲ್‌ ಕುಮಾರ್, ಇದಕ್ಕೆ ಗೃಹ ಇಲಾಖೆ ನೇರ ಹೊಣೆ ಆಗಲಿದೆ ಅಂತ ಸರ್ಕಾರಕ್ಕೆ ಎಚ್ಚರಿಸುತ್ತೇವೆ. ಸ್ಥಳೀಯ ಅಧಿಕಾರಿಗಳು ದೊಡ್ಡ ವಿವಾದ ಮಾಡಲು ಹೊರಟಿದ್ದಾರೆ. ಇದು ಆಕ್ಷೇಪಾರ್ಹ ಎಂದು ತಿಳಿಸಿದರು.‌

ಇದನ್ನೂ ಓದಿ: Janardhana Reddy: ಜನಾರ್ದನ ರೆಡ್ಡಿ ಪಕ್ಷ ಬಿಜೆಪಿಯಲ್ಲಿ ವಿಲೀನ; ವರಿಷ್ಠರ ಜತೆ ಚರ್ಚಿಸಿ ತೀರ್ಮಾನ: ವಿಜಯೇಂದ್ರ

ಸಿದ್ದರಾಮಯ್ಯ ನನಗೆ ಕೇಸರಿ ಕಂಡರೆ ಆಗಲ್ಲ ಅಂದಿದ್ದರು

ಗ್ರಾಮದ ಜನ ಒಗ್ಗಟ್ಟಾಗಿ ಹನುಮ ಧ್ವಜ ಹಾರಿಸಲು ಮುಂದಾಗಿದ್ದಾರೆ. ಅಲ್ಲದೆ, ಸ್ಥಳೀಯರ ಮೇಲೆ ಲಾಠಿ ಪ್ರಹಾರ ನಡೆದಿದೆ. ಯಾಕೆ ಇಳಿಸಲಾಗುತ್ತಿದೆ ಎಂದು ಕೇಸರಿ ವಿರೋಧಿ ಸರ್ಕಾರ ಸ್ಪಷ್ಟಪಡಿಸಬೇಕು. ಸ್ವತಃ ಸಿಎಂ ಸಿದ್ದರಾಮಯ್ಯ (CM Siddaramaiah) ನನಗೆ ಕೇಸರಿ ಕಂಡರೆ ಆಗಲ್ಲ ಅಂದಿದ್ದರು ಎಂದು ಸುನಿಲ್‌ ಕುಮಾರ್ ವಿವರಿಸಿದರು.

ಇನ್ಯಾವುದನ್ನು ಸಹಿಸ್ತೀರಾ?

ಅಯೋಧ್ಯೆ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ದಿನ ಎಲ್ಲರೂ ಸಂಭ್ರಮದಿಂದ ಪಾಲ್ಗೊಂಡಿದ್ದಾರೆ. ಸಹಜವಾಗಿ ಎಲ್ಲರ ಮನೆ ಮೇಲೆ ಕೇಸರಿ ಧ್ವಜ ಹಾರಿಸಿದ್ದಾರೆ. ಜತೆಗೆ ನಂದಾ ದೀಪ ಹಚ್ಚಿದ್ದಾರೆ. ಆ ಗ್ರಾಮದಲ್ಲಿ ಕೂಡ ಧ್ವಜ ಹಾರಿಸಿ, ರಾಮನ ಫೋಟೊ ಹಾಕಿ ಪೂಜೆ ಮಾಡಿದ್ದಾರೆ. ಇದನ್ನು ಸರ್ಕಾರ ಸಹಿಸುತ್ತಿಲ್ಲ, ಇನ್ಯಾವುದನ್ನು ಸಹಿಸ್ತೀರಾ? ಎಂದು ಸುನಿಲ್‌ ಕುಮಾರ್ ಕೇಳಿದರು.

ಹಸಿರು ಧ್ವಜ ತೆಗೆಯುತ್ತೀರಾ?

ಹಿಂದು ಧ್ವಜ ಹಾರಿಸೋದನ್ನು ತಡೆಯುತ್ತೀರಾ? ರಾಜ್ಯದ ಎಲ್ಲೆಂದರೆ ಅಲ್ಲಿ ಘೋರಿ ಇದೆ. ಹಸಿರು ಧ್ವಜ ಹಾರಾಡುತ್ತಿದೆ. ಅದನ್ನು ನಾವು ತೋರಿಸುತ್ತೇವೆ. ತೆರವು ಮಾಡುವ ಕ್ರಮ ಮಾಡ್ತೀರಾ? ಎಂದು ಪ್ರಶ್ನೆಯನ್ನು ಮುಂದಿಟ್ಟರು. ಅನಧಿಕೃತ ಧ್ವಜ ತೆರವಿಗೆ ಸರ್ಕಾರದ ನಿರ್ದೇಶನ, ಕ್ರಮ ಏನಿದೆ ಎಂದು ಸ್ಪಷ್ಟಪಡಿಸಲು ಆಗ್ರಹಿಸಿದರು.‌

ನಮ್ಮ ನಾಯಕರು ಮಂಡ್ಯಕ್ಕೆ ಭೇಟಿ ನೀಡ್ತಾರೆ

ಒಂದು ಕಡೆ ಕಾಂಗ್ರೆಸ್ ನಾಯಕರು ಅಯೋಧ್ಯೆಗೆ ಹೋಗಲ್ಲ ಅಂತಾರೆ. ಮತ್ತೊಂದು ಕಡೆ ಪೊಲೀಸರನ್ನು ಬಳಸಿ ಕೇಸರಿ ಧ್ವಜ ಇಳಿಸುವ ಕೆಲಸ ಮಾಡುತ್ತಿದೆ ಎಂದು ಆಕ್ಷೇಪಿಸಿದ ಸುನಿಲ್‌ ಕುಮಾರ್, ನಮ್ಮ ನಾಯಕರು ಮಂಡ್ಯ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.‌

ಊರಿನ ಜನ ಸ್ವಯಂಪ್ರೇರಿತರಾಗಿ ಹಾಕಿದ್ದಾರೆ. ಸರ್ಕಾರ ಕೇಸರಿ ವಿರೋಧಿ ನೀತಿಯಿಂದ ಹೊರಗೆ ಬರಬೇಕು. ಕಾಂಗ್ರೆಸ್ಸಿಗರು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಸುನಿಲ್‌ ಕುಮಾರ್ ಆಗ್ರಹಿಸಿದರು.

ಏನಿದು ಮಂಡ್ಯದ ಹನುಮಧ್ವಜ ಕೇಸ್?‌

ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಗ್ರಾಮಸ್ಥರು ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಗ್ರಾಮದ 108 ಅಡಿ ಧ್ವಜಸ್ತಂಭದಲ್ಲಿ ಹನುಮ ಧ್ವಜವನ್ನು ಹಾರಿಸಿದ್ದರು. ಜನವರಿ 22 ರಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿತು. ಇದರ ನೆನೆಪಾಗಿ ಕೆರಗೋಡು ಗ್ರಾಮದಲ್ಲಿ 108 ಅಡಿ ಎತ್ತರ ಧ್ವಜಸ್ತಂಭದ ಮೇಲೆ ಹನುಮ ಧ್ವಜ ಹಾರಿಸಲು ಗ್ರಾಮಸ್ಥರು ನಿರ್ಧರಿಸಿದ್ದರು. ಧ್ವಜ ಹಾರಿಸಲು ನಿಶ್ಚಯಿಸಿದ ಜಾಗ ಗ್ರಾಮ ಪಂಚಾಯಿತಿಗೆ ಸೇರಿದ್ದರಿಂದ ಅನುಮತಿ ಕೋರಿ ಗ್ರಾಮ ಪಂಚಾಯಿತಿಗೆ ಮನವಿ ಮಾಡಿದ್ದರು. ಆದರೆ, ಗ್ರಾಮ ಪಂಚಾಯಿತಿ “ರಾಷ್ಟ್ರ ಧ್ವಜ ಮತ್ತು ನಾಡಧ್ವಜ” ಹೊರತುಪಡಿಸಿ ಯಾವುದೇ ಧಾರ್ಮಿಕ/ ರಾಜಕೀಯ ಧ್ವಜವನ್ನು ಹಾರಿಸುವಂತಿಲ್ಲವೆಂದು ಅನುಮತಿಯನ್ನು ನಿರಾಕರಣೆ ಮಾಡಿತ್ತು.

ಆದರೂ ಗ್ರಾಮಸ್ಥರು ಮತ್ತು ಹಿಂದು ಕಾರ್ಯಕರ್ತರು ಹನುಮ ಧ್ವಜ ಹಾರಿಸಿದ್ದರು. ಇದ್ದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಕೊನೆಗೆ ಈ ವಿಚಾರ ಮತ್ತೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಚರ್ಚೆಗೆ ಬಂದಿದೆ. ಅಲ್ಲಿ 22 ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ ಹನುಮ ಧ್ವಜ ಹಾರಾಟಕ್ಕೆ 20 ಸದಸ್ಯರು ಬೆಂಬಲ ವ್ಯಕ್ತಪಡಿಸಿದರು. ಬಳಿಕ ಗ್ರಾಮ ಪಂಚಾಯತ್​ ಸದಸ್ಯರು ನಡಾವಳಿ ರಚಿಸಿ, ವಿವಾದವನ್ನು ಇತ್ಯರ್ಥ ಪಡಿಸಿದ್ದರು. ಆದರೆ, ಸರ್ಕಾರಿ ಜಾಗದಲ್ಲಿ ಹನುಮ ಧ್ವಜ ಹಾರಿಸಲಾಗಿದೆ ಇದನ್ನು ತೆರವುಗೊಳಿಸುವಂತೆ ಜಿಲ್ಲಾಡಳಿತ ಮೌಖಿಕ ಆದೇಶವನ್ನು ಹೊರಡಿಸಿತ್ತು. ಹೀಗಾಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೀಣಾ ಅವರು ತೆರವುಗೊಳಿಸಲು ಮುಂದಾದರು. ಇದಕ್ಕೆ ಗ್ರಾಮಸ್ಥರು ಅಡ್ಡಿ ಪಡಿಸಿ ಪ್ರತಿಭಟಿಸಿದ್ದರು. ಹೀಗಾಗಿ ಅಲ್ಲಿಂದ ನಿರ್ಗಮಿಸಿದ್ದ ಅಧಿಕಾರಿಗಳು ಶನಿವಾರ (ಜ.27) ರಾತ್ರಿ ಪುನಃ ಬಂದು ಹನುಮ ತೆರವಿಗೆ ಮುಂದಾದರು. ಮುಂಜಾನೆ 3 ಗಂಟೆ ಹೊತ್ತಿಗೆ ಮಂಡ್ಯ ಎಸಿ ಶಿವಮೂರ್ತಿ, ತಹಸೀಲ್ದಾರ್ ಶಿವಕುಮಾರ್ ಬಿರಾದರ್ ನೇತೃತ್ವದಲ್ಲಿ ತೆರವಿಗೆ ಮುಂದಾಗುತ್ತಿದ್ದಂತೆ ಗ್ರಾಮಸ್ಥರಿಗೆ ವಿಷಯ ತಿಳಿದು ಬಂದು ಗಲಾಟೆ ಮಾಡಿದ್ದಾರೆ. ಈ ವೇಳೆ ಪೊಲೀಸರು ಸಹ ಸ್ಥಳದಲ್ಲಿದ್ದರು. ಪ್ರತಿಭಟನೆಯನ್ನೂ ಮಾಡಲಾಯಿತು. ಹೀಗಾಗಿ ಪುನಃ ವಾಪಸ್‌ ತೆರಳಲಾಯಿತು.

ಇದನ್ನೂ ಓದಿ: Hanuman Flag: ಮಂಡ್ಯ ಹನುಮ ಧ್ವಜ ಪ್ರಕರಣ; ತ್ರಿವರ್ಣ ಧ್ವಜ ಬಿಟ್ಟು ಭಗವಾಧ್ವಜ ಹಾರಿಸಿದ್ದು ಸರಿಯಲ್ಲ: ಸಿದ್ದರಾಮಯ್ಯ

ಕೊನೆಗೆ ಈಗ ಭಾನುವಾರ ಎಷ್ಟೇ ವಿರೋಧ ಹಾಗೂ ಪ್ರತಿಭಟನೆ ಇದ್ದರೂ ಅದರ ನಡುವೆ ಹನುಮಾನ್‌ ಧ್ವಜವನ್ನು ಇಳಿಸಿ, ರಾಷ್ಟ್ರಧ್ವಜವನ್ನು ಹಾರಿಸಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದರಿಂದ 144 ಸೆಕ್ಷನ್​ ಜಾರಿ ಮಾಡಲಾಗಿದೆ. ಪ್ರತಿಭಟನಾಕಾರರನ್ನು ಚದುರಿಸಲು ಲಾಠಿ ಚಾರ್ಜ್​ ಅನ್ನು ಸಹ ಮಾಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಈ ಬಗ್ಗೆ ಜರ್ಮನಿ ಮ್ಯೂನಿಕ್ ಏರ್‌ಪೋರ್ಟ್‌ನಿಂದ ವಿಸ್ತಾರ ನ್ಯೂಸ್‌ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಬೆಂಗಳೂರಿಗೆ ಬರುವ ಫ್ಲೈಟ್‌ನಲ್ಲಿ ಪ್ರಜ್ವಲ್‌ ಹತ್ತಿಲ್ಲ ಎಂಬ ಸಂಗತಿ ಗೊತ್ತಾಗಿದೆ. ಎಲ್ಲ ಪ್ರಯಾಣಿಕರಿಗೆ ಫ್ಲೈಟ್‌ ಹತ್ತಲು ಬೋರ್ಡಿಂಗ್‌ ಕ್ಲೋಸ್‌ ಆಗಿತ್ತು. 3.35ಕ್ಕೆ ಲುಫ್ತಾನ್ಸಾ ಏರ್‌ಲೈನ್ಸ್ LH764 ಟೇಕ್‌ ಆಫ್‌ ಆಗಿದೆ. ಈ ನಡುವೆ ಇನ್ನು ಸಿಬಿಐ ಮೂಲಕ ಇಂಟರ್‌ಪೋಲ್‌ನಿಂದ ಬ್ಲೂ ಕಾರ್ನರ್ ನೋಟಿಸ್‌ ಕೂಡಾ ಜಾರಿ ಮಾಡಲಾಗಿದ್ದು, ಕಾನೂನಿಗೆ ಡೋಂಟ್‌ ಕೇರ್ ಎಂದು ಪ್ರಜ್ವಲ್ ಹೇಳುತ್ತಿದ್ದಾರಾ ಎಂಬ ಅನುಮಾನ ಮೂಡಿದೆ.

VISTARANEWS.COM


on

Prajwal Revanna Case Prajwal never boarded a flight from Germany
Koo

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ (Prajwal Revanna Case) ಎಸ್‌ಐಟಿ ಮೋಸ್ಟ್ ವಾಂಟೆಡ್‌ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ, ಇಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಎಂಬುದು ಸುಳ್ಳಾಗಿದೆ. ಅವರು ಜರ್ಮನಿ ಮ್ಯೂನಿಕ್ ಏರ್‌ಪೋರ್ಟ್‌ನ ಲಾಂಜ್‌ನಲ್ಲಿಯೇ ಕಾಣಿಸಿಕೊಂಡಿಲ್ಲ ಎಂಬ ಸಂಗತಿ ಗೊತ್ತಾಗಿದೆ. ಅಲ್ಲದೆ, ಫ್ಲೈಟ್‌ ಟೇಕ್‌ ಆಫ್‌ ಆಗಿದ್ದರೂ ಅವರು ಅವರು ಅತ್ತ ಸುಳಿದಿಲ್ಲ. ಹೀಗಾಗಿ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ಟಿಕೆಟ್‌ ಮಾಡಿಸಿಯೂ ಅವರು ವಿಮಾನವನ್ನು ಹತ್ತಿಲ್ಲ ಎಂಬ ಸಂಗತಿ ಗೊತ್ತಾಗಿದೆ.

ಈ ಬಗ್ಗೆ ಜರ್ಮನಿ ಮ್ಯೂನಿಕ್ ಏರ್‌ಪೋರ್ಟ್‌ನಿಂದ ವಿಸ್ತಾರ ನ್ಯೂಸ್‌ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಬೆಂಗಳೂರಿಗೆ ಬರುವ ಫ್ಲೈಟ್‌ನಲ್ಲಿ ಪ್ರಜ್ವಲ್‌ ಹತ್ತಿಲ್ಲ ಎಂಬ ಸಂಗತಿ ಗೊತ್ತಾಗಿದೆ. ಎಲ್ಲ ಪ್ರಯಾಣಿಕರಿಗೆ ಫ್ಲೈಟ್‌ ಹತ್ತಲು ಬೋರ್ಡಿಂಗ್‌ ಕ್ಲೋಸ್‌ ಆಗಿತ್ತು. 3.35ಕ್ಕೆ ಲುಫ್ತಾನ್ಸಾ ಏರ್‌ಲೈನ್ಸ್ LH764 ಟೇಕ್‌ ಆಫ್‌ ಆಗಿದೆ. ಇದರ ಬ್ಯುಸಿನೆಸ್ ಕ್ಲಾಸ್ ಫ್ಲೈಟ್ ಟಿಕೆಟ್‌ಗೆ
ಸುಮಾರು 3 ಲಕ್ಷ ರೂಪಾಯಿ ಮೌಲ್ಯದ್ದಾಗಿದೆ. ಇಷ್ಟಾದರೂ ಪ್ರಜ್ವಲ್ ಅಲ್ಲಿಂದ ಹೊರಟೇ ಇಲ್ಲ ಎಂದು ತಿಳಿದುಬಂದಿದೆ.

ಬುಕ್ ಮಾಡಿದ್ದ ಲುಫ್ತಾನ್ಸಾ ಫ್ಲೈಟ್‌ ಹತ್ತದ ಪ್ರಜ್ವಲ್ ರೇವಣ್ಣ!

ಲುಫ್ತಾನ್ಸಾ ಏರ್‌ಲೈನ್ಸ್ ಫ್ಲೈಟ್ LH764 ರಲ್ಲಿ ಬ್ಯುಸಿನೆಸ್ ಕ್ಲಾಸ್ ಕ್ಯಾಟಗರಿ 6ಜಿ ಸೀಟ್‌ ಅನ್ನು ಪ್ರಜ್ವಲ್‌ ರೇವಣ್ಣ ಬುಕ್ ಮಾಡಿದ್ದರು. ಈ ನಿರೀಕ್ಷೆಯಲ್ಲಿ ಎಸ್‌ಐಟಿ ಅಧಿಕಾರಿಗಳ ತಂಡ ಸಹ ಇದ್ದವು. ಆದರೆ, ಎಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ಕಳ್ಳಾಟ ಆಡಲು ಶುರು ಮಾಡಿದರೋ, ಅದೀಗ ಎಸ್‌ಐಟಿ ತಂಡವನ್ನು ಗರಂ ಆಗಿಸಿದೆ. ಒಂದು ಕಡೆ ಕಾನೂನಿಗೆ ತಲೆಬಾಗುತ್ತೇನೆ ಎಂದು ಪ್ರಜ್ವಲ್ ಅಪ್ಪ ಎಚ್.ಡಿ. ರೇವಣ್ಣ ಹೇಳುತ್ತಾರೆ. ಆದರೆ, ಇನ್ನೊಂದು ಕಡೆ ಕಾನೂನಿಗೆ ಡೋಂಟ್‌ ಕೇರ್ ಎಂದು ಪ್ರಜ್ವಲ್ ಹೇಳುತ್ತಿದ್ದಾರಾ ಎಂಬ ಅನುಮಾನ ಮೂಡಿದೆ. ಇನ್ನು ಸಿಬಿಐ ಮೂಲಕ ಇಂಟರ್‌ಪೋಲ್‌ನಿಂದ ಬ್ಲೂ ಕಾರ್ನರ್ ನೋಟಿಸ್‌ ಕೂಡಾ ಜಾರಿ ಮಾಡಲಾಗಿದೆ.

ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಎಚ್‌.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಪ್ರಜ್ವಲ್‌ ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಇಂದೇ ವಾಪಸ್‌ ಬರಲಿದ್ದಾರೆ ಎಂಬ ಮಹತ್ವದ ಮಾಹಿತಿ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿತ್ತು.

ಹೌದು, ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಮರಳುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಜರ್ಮನಿಯಲ್ಲಿರುವ ಪ್ರಜ್ವಲ್‌, ಲುಫ್ತಾನ್ಸಾ ಏರ್‌ಲೈನ್ಸ್‌ ಮೂಲಕ ಪ್ರಜ್ವಲ್‌ ಭಾರತಕ್ಕೆ ಹಿಂತಿರುಗಲಿದ್ದಾರೆ. ಜರ್ಮನಿಯಲ್ಲಿ ಬುಧವಾರ (ಮೇ 15) ಬೆಳಗ್ಗೆ 11.20 ರಿಂದ 11.50ರೊಳಗೆ ಬೋರ್ಡಿಂಗ್‌ ಆಗಲಿದ್ದು, ಅವರಿಗಾಗಿ ಸೀಟ್‌ ನಂಬರ್‌ 6ಜಿ ಬುಕ್‌ ಮಾಡಲಾಗಿದೆ. LH0764 ವಿಮಾನದಲ್ಲಿ ಸಂಸದ ಆಗಮಿಸಲಿದ್ದಾರೆ ಎಂದು ಹೇಳಲಾಗಿತ್ತು.

ಹರಿಯಾಣದ ಅಕಲ್‌ ಟ್ರಾವೆಲ್ಸ್‌ನಿಂದ ಪ್ರಜ್ವಲ್‌ಗೆ ಟಿಕೆಟ್‌ ಬುಕ್‌ ಮಾಡಲಾಗಿದೆ. ಜರ್ಮನಿಯ ಮ್ಯೂನಿಚ್‌ನಲ್ಲಿ ಇಂದು ಬೆಳಗ್ಗೆ 12.05ಕ್ಕೆ ಫ್ಲೈಟ್‌ ಟೇಕಾಫ್‌ ಆಗಲಿದ್ದು, ರಾತ್ರಿ 12.30ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಬಂದ ಕೂಡಲೇ ಅವರನ್ನು ವಶಕ್ಕೆ ಪಡೆಯಲು ಎಸ್‌ಐಟಿ ಸಜ್ಜಾಗಿದ್ದು, ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯನ್ನು ಆಯೋಜಿಸಲಾಗಿತ್ತು. ಆದರೆ, ಟಿಕೆಟ್‌ ಬುಕ್‌ ಮಾಡಿದ್ದ ಪ್ರಜ್ವಲ್‌ ಮಾತ್ರ ಇತ್ತ ಸುಳಿಯಲೇ ಇಲ್ಲ.

ಇದನ್ನೂ ಓದಿ | HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ಗೆ ಲುಕ್‌ ಔಟ್‌ ನೋಟಿಸ್‌ ಹಾಗೂ ಬ್ಲೂ ಕಾರ್ನರ್‌ ನೋಟಿಸ್‌ ಜಾರಿ ಮಾಡಲಾಗಿತ್ತು. ತಂದೆಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ನ್ಯಾಯಾಲಯದ ಮುಂದೆ ಶರಣಾಗುವ ಸಾಧ್ಯತೆ ಇದ್ದು, ಬಹುತೇಕ ಈ ವಾರದಲ್ಲೇ ವಿದೇಶದಿಂದ ಆಗಮಿಸಬಹುದು ಎನ್ನಲಾಗಿತ್ತು.

ಎಸ್ಐಟಿ ಮುಂದೆ ಬುಧವಾರ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದ್ದು, ಪ್ರಜ್ವಲ್‌ ರೇವಣ್ಣ ಬುಧವಾರ ಸಂಜೆ ಬೆಂಗಳೂರಿಗೆ ಬಂದು ಗುರುವಾರ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ. ರೇವಣ್ಣಗೆ ಜಾಮೀನು ಸಿಕ್ಕ ಬಳಿಕ ನ್ಯಾಯಾಲಯದ ಮುಂದೆ ಹಾಜರಾಗುವಂತೆ ರೇವಣ್ಣ ಕುಟುಂಬದ ವಕೀಲರು ಸಲಹೆ ನೀಡಿದ್ದರಿಂದ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುತ್ತಿದ್ದಾರೆ ಎಂದೇ ಭಾವಿಸಲಾಗಿತ್ತು.

Continue Reading

ರಾಜಕೀಯ

Prajwal Revanna Case: ನಿಮ್ಮ ಸರ್ಕಾರದ ಮೇಲೆ ಮಹಿಳೆಯರು ವಿಶ್ವಾಸ ಇಡಬಹುದೇ? ಸಿದ್ದರಾಮಯ್ಯಗೆ ಸಾಹಿತಿಗಳ ಬಹಿರಂಗ ಪತ್ರ!

Prajwal Revanna Case: ಸಂತ್ರಸ್ತರ ಪೋಟೊ, ವಿಡಿಯೊ ದಾಖಲಿಸಿ ಇಟ್ಟುಕೊಂಡಿರುವುದು ಎಷ್ಟರ ಮಟ್ಟಿಗೆ ಸರಿ? ಇದು ಹಲವಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಹಗರಣವೆಂದು ತಿಳಿಯುತ್ತದೆ. ಅಲ್ಲದೆ, ದೂರು ಕೊಡದಂತೆ ಬೆದರಿಕೆ ಹಾಕುವುದು, ಕಿಡ್ನ್ಯಾಪ್‌ ಮಾಡುವುದನ್ನೂ ಮಾಡಲಾಗಿದೆ. ರಾಜಕೀಯ ನಾಯಕರು ತಮ್ಮ ಹಿತಾಸಕ್ತಿಗಾಗಿ ಹಾಗೂ ಚುನಾವಣೆಯ ಲಾಭಕ್ಕಾಗಿ ಇದನ್ನೆಲ್ಲ ಬಳಸಿಕೊಳ್ಳುತ್ತಿರುವುದು ಸಹ ಆಘಾತಕಾರಿ ಅಂಶವಾಗಿದೆ ಎಂದು ಸಾಹಿತಿಗಳು ಪತ್ರದಲ್ಲಿ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸರ್ಕಾರದ ಮೇಲೆ ವಿಶ್ವಾಸವಿಟ್ಟು ಮಹಿಳೆಯರು ಸುರಕ್ಷಿತವಾಗಿರಲು ಸಾಧ್ಯವೇ ಎಂಬ ಪ್ರಶ್ನೆ ಮೂಡಿದೆ ಎಂದೂ ಹೇಳಿದ್ದಾರೆ.

VISTARANEWS.COM


on

Prajwal Revanna Case Can women trust your government Writers open letter to Siddaramaiah
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಹಿತಿಗಳು, ಮಹಿಳಾ ಸಂಘಟನೆಗಳವರು ಬಹಿರಂಗ ಪತ್ರ ಬರೆದಿದ್ದಾರೆ. ಈ ಕೇಸ್‌ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಜತೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದ ಬಗ್ಗೆಯೂ ಅಸಮಾಧಾನವನ್ನು ಹೊರಹಾಕಿದ್ದಾರೆ. ಇನ್ನು ಈ ಸಂಬಂಧ 16 ಬೇಡಿಕೆಗಳನ್ನು ಮುಂದಿಡಲಾಗಿದೆ.

ಹಿರಿಯ ಲೇಖಕರಾದ ಡಾ. ವಿಜಯಾ, ಸಾಹಿತಿಗಳಾದ ಡಾ. ಜಿ. ರಾಮಕೃಷ್ಣ, ವಸುಂಧರಾ ಭೂಪತಿ, ಮೀನಾಕ್ಷಿ ಬಾಳಿ, ಕೆ, ನೀಲಾ, ಕೆ.ಎಸ್ ವಿಮಲಾ, ಕುಂ ವೀರಭದ್ರಪ್ಪ,‌ ಮುಜಫರ್ ಅಸ್ಸಾದಿ ಸೇರಿದಂತೆ ಒಟ್ಟು 107 ಜನರಿಂದ ಈ ಪತ್ರವನ್ನು ಬರೆಯಲಾಗಿದೆ. ಪಜ್ಞಾವಂತ ನಾಗರಿಕರ ಬಹಿರಂಗ ಪತ್ರ ಎಂದು ಬರೆದುಕೊಳ್ಳಲಾಗಿದೆ.

ಸಂತ್ರಸ್ತರ ಪೋಟೊ, ವಿಡಿಯೊ ದಾಖಲಿಸಿ ಇಟ್ಟುಕೊಂಡಿರುವುದು ಎಷ್ಟರ ಮಟ್ಟಿಗೆ ಸರಿ? ಇದು ಹಲವಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಹಗರಣವೆಂದು ತಿಳಿಯುತ್ತದೆ. ಅಲ್ಲದೆ, ದೂರು ಕೊಡದಂತೆ ಬೆದರಿಕೆ ಹಾಕುವುದು, ಕಿಡ್ನ್ಯಾಪ್‌ ಮಾಡುವುದನ್ನೂ ಮಾಡಲಾಗಿದೆ. ರಾಜಕೀಯ ನಾಯಕರು ತಮ್ಮ ಹಿತಾಸಕ್ತಿಗಾಗಿ ಹಾಗೂ ಚುನಾವಣೆಯ ಲಾಭಕ್ಕಾಗಿ ಇದನ್ನೆಲ್ಲ ಬಳಸಿಕೊಳ್ಳುತ್ತಿರುವುದು ಸಹ ಆಘಾತಕಾರಿ ಅಂಶವಾಗಿದೆ ಎಂದು ಪತ್ರದಲ್ಲಿ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ದೇವೇಗೌಡರ ಕುಟುಂಬದ ಬಗ್ಗೆ ಬೇಸರ

ಪ್ರಜಲ್ ರೇವಣ್ಣ ಅವರ ತಾತ, ತಂದೆ, ತಾಯಿ, ಚಿಕ್ಕಪ್ಪ, ಚಿಕ್ಕಮ್ಮ, ಅಣ್ಣ, ತಮ್ಮ ಎಲ್ಲರೂ ಪ್ರಜಾಪ್ರಭುತ್ವದ ಎಲ್ಲ ಹುದ್ದೆಗಳನ್ನು, ಸವಲತ್ತುಗಳನ್ನು ಪಡೆದುಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣ ಮತ್ತು ಅವರ ಕುಟುಂಬವು ಪ್ರಜಾಪ್ರಭುತ್ವದ ಮುಸುಕಿನೊಳಗೆ ಪ್ರಜಾಪ್ರತಿನಿಧಿಗಳೆಂಬ ಧಿರಿಸು ಧರಿಸಿಕೊಂಡಿದ್ದಾರೆ. ಪ್ರಕರಣ ಹೊರ ಬಂದ ತಕ್ಷಣ ಚುನಾವಣಾ ಸ್ಪರ್ಧೆಗೆ ಅವಕಾಶ ನೀಡಬಾರದಾಗಿತ್ತು. ಹಗರಣ ಬಯಲಾಗಿ ಐದು ದಿನಗಳು ಆರೋಪಿಯನ್ನು ಸ್ವತಂತ್ರವಾಗಿ ಬಿಡಲಾಗಿದೆ. ಆತನ ಮೇಲೆ ಕಣ್ಗಾವಲನ್ನು ಹಾಕಿಲ್ಲ. ಸರ್ಕಾರದ ಮೇಲೆ ವಿಶ್ವಾಸವಿಟ್ಟು ಮಹಿಳೆಯರು ಸುರಕ್ಷಿತವಾಗಿರಲು ಸಾಧ್ಯವೇ ಎಂಬ ಪ್ರಶ್ನೆ ಮೂಡಿದೆ. ಸಂತ್ರಸ್ತರ ಕುಟುಂಬಗಳು ಮಾನಸಿಕ ಯಾತನೆಗಳಿಗೆ ಗುರಿಯಾಗಿವೆ. ಅಲ್ಲದೆ, ವಿಡಿಯೊಗಳು ಲಕ್ಷಾಂತರ ಜನರಿಗೆ ತಲುಪಿವೆ. ಇದರಿಂದ ಯುವಜನರು, ಕಾಮುಕರು, ಮಕ್ಕಳ ಮೇಲೆ ಪರಿಣಾಮ ಬೀರಬಹುದಾಗಿದೆ ಎಂದು ಸಾಹಿತಿಗಳು ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Prajwal Revanna Case: ಕಾಂಗ್ರೆಸ್‌ ಸರ್ಕಾರದಿಂದ ಪ್ರಜ್ವಲ್‌ ಕೇಸ್‌ ನಿಯಂತ್ರಣ; ಡೈವರ್ಟ್‌ ಮಾಡಲು ಬಿಜೆಪಿಗರ ಮೇಲೆ ದಾಳಿ ಎಂದ ಅಶೋಕ್‌!

ಸರ್ಕಾರಕ್ಕೆ ಸಲ್ಲಿಸಿದ ಪ್ರಮುಖ ಬೇಡಿಕೆಗಳು ಏನು?

  • ಆರೋಪಿಯನ್ನು ಕೂಡಲೇ ಬಂಧಿಸಬೇಕು,ಐಟಿ, ಐಪಿಸಿ ಕಾಯ್ದೆಗಳ ಅಡ್ಡಿಯಲ್ಲಿ ಮೊಕದ್ದಮೆ ಹೂಡಬೇಕು
  • ಸಂತ್ರಸ್ತ‌ ಮಹಿಳೆಯರು ಭೀತಿಯಿಲ್ಲದೆ ದೂರು ನೀಡುವ ವಾತಾವರಣ ನಿರ್ಮಾಣ ಮಾಡಬೇಕು
  • ತನಿಖೆ ಪೂರ್ಣಗೊಳ್ಳುವವರೆಗೆ ಎಚ್.ಡಿ. ರೇವಣ್ಣ ವಿಧಾನಸಭೆ ಸದಸ್ಯತ್ವ ತಾತ್ಕಾಲಿಕವಾಗಿ ರದ್ದು ಮಾಡಬೇಕು
  • ಆರೋಪ- ಪ್ರತ್ಯಾರೋಪಗಳಲ್ಲಿ ತೊಡಗಿರುವ ರಾಜಕೀಯ ನಾಯಕ ನಡವಳಿಕೆಗೆ ಕಡಿವಾಣ ಹಾಕಬೇಕು
  • ಎಸ್‌ಐಟಿ ತನಿಖೆಯು ಕಾಯ್ದೆ ಅನುಸಾರ ಕಾಲಮಿತಿಯೊಳಗೆ ನಡೆಯಬೇಕು
  • ಪ್ರಜ್ವಲ್ ಚಾಲಕ ಕಾರ್ತಿಕ್ ನನ್ನ ಕೂಡಲೇ ಬಂಧಿಸಬೇಕು
  • ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧವೂ ಗಂಭೀರ ಪ್ರಕರಣಗಳು ದಾಖಲು ಮಾಡಬೇಕು
  • ವಿಡಿಯೊಗಳನ್ನು ಹಂಚಿದವರ ವಿರುದ್ಧ ಮಾನವ ಹಕ್ಕುಗಳಿಗೆ ಧಕ್ಕೆ, ಎಲೆಕ್ಷನ್ ಸ್ಯಾಬೊಟೇಜ್ ಮಾಡಲು ಸಂಚು ಮಾಡಿರುವ ಆರೋಪಗಳ ಮೇಲೆ ಕೇಸ್ ಹೂಡಬೇಕು
  • ಹಳೇ ವಿಡಿಯೊ ಎಂದು ರೇವಣ್ಣ ಹೇಳಿದ್ದಾರೆ, ವಿಕೃತಿ ಮುಂದುವರೆಯಲು ಬಿಟ್ಟಿರುವ ಕುಟುಂಬದ ಎಲ್ಲ ಸದಸ್ಯರನ್ನು Accomplice ಗಳೆಂದು ಪರಿಗಣಿಸಿ
  • ಅವರ ಕುಟುಂಬ ಸದಸ್ಯರ ವಿರುದ್ಧವೂ ಮೊಕದ್ದಮೆ ಹೂಡಬೇಕು
  • ಪ್ರಜ್ವಲ್ ದೇಶ ಬಿಟ್ಟು ಪರಾರಿಯಾಗಿರುವುದು ಗೃಹ ಇಲಾಖೆ ಮತ್ತು ಗುಪ್ತಚರ ಇಲಾಖೆಯ ವೈಫಲ್ಯ
  • ಗೃಹ ಇಲಾಖೆ, ಗುಪ್ತಚರ ಇಲಾಖೆ ಅಧಿಕಾರಿಗಳನ್ನು ವಜಾ ಮಾಡಬೇಕು
Continue Reading

ರಾಜಕೀಯ

Prajwal Revanna Case: ಕಾಂಗ್ರೆಸ್‌ ಸರ್ಕಾರದಿಂದ ಪ್ರಜ್ವಲ್‌ ಕೇಸ್‌ ನಿಯಂತ್ರಣ; ಡೈವರ್ಟ್‌ ಮಾಡಲು ಬಿಜೆಪಿಗರ ಮೇಲೆ ದಾಳಿ ಎಂದ ಅಶೋಕ್‌!

Prajwal Revanna Case: ಎಸ್ಐಟಿ ನಡೆಸುವ ತನಿಖೆಯ ಪಿನ್ ಟು ಪಿನ್ ಮಾಹಿತಿ‌ ಕಾಂಗ್ರೆಸ್ ಸರ್ಕಾರಕ್ಕೆ ಹೋಗುತ್ತಿದೆ. ಅದಕ್ಕಾಗಿಯೇ ಇಡೀ ಕೇಸ್‌ ಅನ್ನು ಬಿಜೆಪಿ ಕಡೆ ತಿರುಗಿಸುತ್ತಿದ್ದಾರೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಯಬೇಕಾದರೆ ಸಿಬಿಐಗೆ ತನಿಖೆಯನ್ನು ವಹಿಸಬೇಕು. ಪ್ರಜ್ವಲ್ ವಾಪಸ್ ಬಂದಿಲ್ಲ ಎಂದರೆ ಅದು ಸರ್ಕಾರದ ವೈಫಲ್ಯ. ಎಸ್ಐಟಿ ಟೀಂನವರು ಅವರನ್ನು ಬಂಧಿಸಿ ಕರೆ ತಂದಿಲ್ಲ. ಅದೇ ಈ ಕೇಸ್‌ ಅನ್ನು ಸಿಬಿಐಗೆ ವಹಿಸಿದರೆ ಅವರು ಬಂಧಿಸಿ ಕರೆತರುತ್ತಾರೆ ಎಂದು ಆರ್.‌ ಅಶೋಕ್‌ ಹೇಳಿದ್ದಾರೆ.

VISTARANEWS.COM


on

Prajwal Revanna Case Prajwal case controlled by Congress government says R Ashok
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣವನ್ನು ಕಾಂಗ್ರೆಸ್‌ ನಿಯಂತ್ರಣ ಮಾಡುತ್ತಿದೆ. ಇದೆಲ್ಲವೂ ಕಾಂಗ್ರೆಸ್‌ ಸರ್ಕಾರದ ಪ್ರೀ ಪ್ಲ್ಯಾನ್‌ ಆಗಿದೆ. ಈ ಪೆನ್‌ಡ್ರೈವ್‌ ಹಂಚಿಕೆಯಲ್ಲಿ ಮಹಾ ನಾಯಕನ ಕೈವಾಡ ಇದೆ ಎಂಬುದಾಗಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನೀಡಿದ್ದ ಹೇಳಿಕೆಯಿಂದ ಮುಜುಗರವಾಗಿ ಈಗ ಇಡೀ ಕೇಸ್‌ ಅನ್ನು ಬಿಜೆಪಿ ಕಡೆ ತಿರುಗಿಸಲು ಯತ್ನಿಸುತ್ತಿದ್ದಾರೆ. ಕಾಂಗ್ರೆಸ್‌ ಕಾರ್ಯಕರ್ತರ ಮೊಬೈಲ್‌ನಲ್ಲಿ ಈ ಕೇಸ್‌ಗೆ ಸಂಬಂಧಿಸಿದ ವಿಡಿಯೊಗಳಿಲ್ಲವಾ? ಅಲ್ಲದೇ, ಪ್ರಜ್ವಲ್‌ ಮಾಜಿ ಡ್ರೈವರ್‌ ಕಾರ್ತಿಕ್‌ನನ್ನು ಏಕೆ ಬಂಧಿಸಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರ್.‌ ಅಶೋಕ್‌, ಎಚ್‌.ಡಿ. ಕುಮಾರಸ್ವಾಮಿಯವರು ಮಹಾನಾಯಕನ ಹೆಸರು ಹೇಳಿರುವ ಕಾರಣಕ್ಕಾಗಿಯೇ ಈಗ ಪ್ರಕರಣವನ್ನು ಬಿಜೆಪಿ ಕಡೆಗೆ ತಿರುಗಿಸಲಾಗುತ್ತಿದೆ. ಏಕೆಂದರೆ ಕಾಂಗ್ರೆಸ್‌ನವರಿಗೆ ಈಗ ಇದರಿಂದ ಮುಜುಗರವಾಗತೊಡಗಿದೆ. ಹೀಗಾಗಿ ಪ್ರಕರಣವನ್ನು ತಮ್ಮ ಕಂಟ್ರೋಲ್‌ಗೆ ತೆಗೆದುಕೊಂಡಿದ್ದಾರೆ. ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಜಾಮೀನು ನಿರಾಕರಣೆ ಆದ ಕೂಡಲೇ ಬಂಧಿಸಲಾಗುತ್ತದೆ. ಆದರೆ, ಅದೇ ಪೆನ್‌ಡ್ರೈವ್‌ ಅನ್ನು ಹರಿಬಿಟ್ಟ ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ನನ್ನು ಮಾತ್ರ ಈವರೆಗೆ ಏಕೆ ಬಂಧಿಸಿಲ್ಲ? ಈಗ ಹಾಸನದಲ್ಲಿ ಆಗಿರುವ ಎಸ್ಐಟಿ ದಾಳಿ ಉದ್ದೇಶವೇನೆಂದರೆ ಇಡೀ ಪ್ರಕರಣವನ್ನು ಬೇರೆ ಕಡೆ ಡೈವರ್ಟ್ ಮಾಡುವುದಾಗಿದೆ ಎಂದು ಕಿಡಿಕಾರಿದರು.

ಸಿಬಿಐಗೆ ಪ್ರಕರಣ ವಹಿಸಿ

ಎಸ್ಐಟಿ ನಡೆಸುವ ತನಿಖೆಯ ಪಿನ್ ಟು ಪಿನ್ ಮಾಹಿತಿ‌ ಕಾಂಗ್ರೆಸ್ ಸರ್ಕಾರಕ್ಕೆ ಹೋಗುತ್ತಿದೆ. ಅದಕ್ಕಾಗಿಯೇ ಇಡೀ ಕೇಸ್‌ ಅನ್ನು ಬಿಜೆಪಿ ಕಡೆ ತಿರುಗಿಸುತ್ತಿದ್ದಾರೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಯಬೇಕಾದರೆ ಸಿಬಿಐಗೆ ತನಿಖೆಯನ್ನು ವಹಿಸಬೇಕು. ಪ್ರಜ್ವಲ್ ವಾಪಸ್ ಬಂದಿಲ್ಲ ಎಂದರೆ ಅದು ಸರ್ಕಾರದ ವೈಫಲ್ಯ. ಎಸ್ಐಟಿ ಟೀಂನವರು ಅವರನ್ನು ಬಂಧಿಸಿ ಕರೆ ತಂದಿಲ್ಲ. ಅದೇ ಈ ಕೇಸ್‌ ಅನ್ನು ಸಿಬಿಐಗೆ ವಹಿಸಿದರೆ ಅವರು ಬಂಧಿಸಿ ಕರೆತರುತ್ತಾರೆ ಎಂದು ಆರ್.‌ ಅಶೋಕ್‌ ಹೇಳಿದರು.

ಇದೆಲ್ಲ ಪ್ರೀ ಪ್ಲ್ಯಾನ್‌

ಹಾಸನದಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಈಗ ಎಸ್‌ಐಟಿ ತಂಡದವರು ದಾಳಿ ಮಾಡುತ್ತಿದ್ದಾರೆ. ಇದು ಬೇಕೆಂದೇ ಮಾಡುತ್ತಿರುವ ಕೃತ್ಯವಾಗಿದೆ. ಹಾಗಾದರೆ, ಹಾಸನ ಕಾಂಗ್ರೆಸ್ ಕಾರ್ಯಕರ್ತರ ಬಳಿ ವಿಡಿಯೊಗಳು ಇಲ್ಲವೇ? ಅವರ ಮೊಬೈಲ್‌ಗಳನ್ನು ಚೆಕ್‌ ಮಾಡಲಿ. ಅವರ ಬಳಿ ಇದಕ್ಕಿಂತಲೂ ಹೆಚ್ಚು ವಿಡಿಯೊ ಮತ್ತು ಪೆನ್‌ಡ್ರೈವ್ ಇದೆ. ಕಾಂಗ್ರೆಸ್‌ನ ಯಾವೊಬ್ಬ ಕಾರ್ಯಕರ್ತನ ವಿಚಾರಣೆಯನ್ನು ಇದುವರೆಗೆ ಏಕೆ ಮಾಡಿಲ್ಲ? ಇದೆಲ್ಲ ಪ್ರೀ ಪ್ಲ್ಯಾನ್‌ ಆಗಿದೆ ಎಂದು ಆರ್.‌ ಅಶೋಕ್‌ ದೂರಿದರು.

ಗೌಡರ ಕುಟುಂಬದ ಬಗ್ಗೆ ಡಿಕೆಶಿ ಕಿಂಡಲ್‌

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬ ಮೇಲೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಅನುಕಂಪ ತೋರಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಆರ್.‌ ಅಶೋಕ್, ಡಿ.ಕೆ. ಶಿವಕುಮಾರ್‌ ಅವರು ಕಿಂಡಲ್‌ ಮಾಡುತ್ತಿದ್ದಾರೆ. ಅವರು ದೇವೇಗೌಡರ ಕುಟುಂಬಕ್ಕೆ ಈ ಹೇಳಿಕೆ ಮೂಲಕ ಲೇವಡಿ ಮಾಡಿದ್ದಾರೆ ಎಂದು ವ್ಯಾಖ್ಯಾನಿಸಿದರು.

ತಿಮಿಂಗಿಲ ಬಗ್ಗೆ ಗೊತ್ತಾಗುತ್ತೆ

ಎಚ್.ಡಿ. ಕುಮಾರಸ್ವಾಮಿ ಅವರು ಡಿಕೆಶಿಗೆ ಪರೋಕ್ಷವಾಗಿ ತಿಮಿಂಗಿಲ ಎಂದಿರುವ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡ ಆರ್.‌ ಅಶೋಕ್‌, ಪ್ರಕರಣದಲ್ಲಿ ತಿಮಿಂಗಿಲ ಯಾರು ಅಂತ ಗೊತ್ತಾಗಲೇಬೇಕು. ಸಮುದ್ರದಲ್ಲಿರುವ ತಿಮಿಂಗಿಲ ಆಮ್ಲಜನಕಕ್ಕಾಗಿ ನೀರಿಂದ ಹೊರಗೆ ಬರಲೇಬೇಕು. ಆಗ ಆ ತಿಮಿಂಗಿಲ ಕಾಂಗ್ರೆಸ್‌ದಾ? ಜೆಡಿಎಸ್‌ದಾ ಅಂತ ಗೊತ್ತಾಗುತ್ತದೆ ಎಂದು ಹೇಳಿದರು.

ಹಗಲು ಕನಸು ಕಾಣುತ್ತಿರುವ ಸಿದ್ದರಾಮಯ್ಯ

ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿಕೆಯನ್ನು ನಿರಾಕರಣೆ ಮಾಡಿರುವ ಸಿಎಂ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಆರ್.‌ ಅಶೋಕ್‌, ಬಿಜೆಪಿಯವರು ಭ್ರಮೆಯಲ್ಲಿದ್ದಾರೆಂದು ಅವರು ಹೇಳುತ್ತಿರಬಹುದು. ಆದರೆ, ಭ್ರಮೆಯಲ್ಲಿರುವುದು ನಾವಲ್ಲ. ಹಗಲು ಕನಸು ಕಾಣುತ್ತಿರುವುದು ನಾವಲ್ಲ, ಸಿದ್ದರಾಮಯ್ಯ ಅವರಾಗಿದ್ದಾರೆ. ಈ ಹಿಂದೆ 17 ಶಾಸಕರು ಹೋಗ್ತಾರಾ? ಸಾಧ್ಯವಿಲ್ಲ ಅಂದಿದ್ದರು. ಆದರೆ, ಅದು ಸಾಧ್ಯವಾಗಿಲ್ಲವಾ? 17 ಶಾಸಕರು ಬಂದರಲ್ಲವೇ? ಮಹಾರಾಷ್ಟ್ರದಲ್ಲೂ 90 ಜನ ಶಾಸಕರು ಆಚೆ ಹೋದರಲ್ಲ. ಇದೆಲ್ಲವೂ ಹೇಗಾಯ್ತು? ಎಂದು ಪ್ರಶ್ನೆ ಮಾಡಿದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಕಾಂಗ್ರೆಸ್‌ ಮೊದಲು ಬಿಡುವವರು ಇವರೇ

ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಿ ಚುನಾಯಿತರಾದರೆ ಕಾಂಗ್ರೆಸ್‌ನವರಿಗೆ ಗಂಟು ಮೂಟೆ ಕಟ್ಟೋದಷ್ಟೇ ಬಾಕಿ. ಯಾರು ನಾನಲ್ಲ, ನಾನಲ್ಲ ಅಂತ ಹೇಳುತ್ತಿದ್ದಾರೋ, ಅವರೇ ಮೊದಲು ಕಾಂಗ್ರೆಸ್ ಬಿಡುತ್ತಾರೆ. ಆ ರೀತಿಯ ಸನ್ನಿವೇಶ ನಿರ್ಮಾಣವಾದರೆ ಅವರೇ ಬಿಜೆಪಿಗೆ ಬರಲು ಮೊದಲು ನಿಂತುಕೊಳ್ಳುತ್ತಾರೆ ಎಂದು ಆರ್.‌ ಅಶೋಕ್‌ ಹೇಳಿದರು.

Continue Reading

ರಾಜಕೀಯ

Himanta Biswa Sarma: ಬಿಜೆಪಿಗೆ ಏಕೆ 400 ಸೀಟುಗಳು ಬೇಕೇಬೇಕು? ಹಿಮಂತ ಬಿಸ್ವ ಶರ್ಮಾ ಉತ್ತರ ಹೀಗಿದೆ!

ಬಿಜೆಪಿ 300 ಸ್ಥಾನಗಳನ್ನು ಪಡೆದಾಗ ಅಯೋಧ್ಯೆಯಲ್ಲಿ ರಾಮಮಂದಿರವನ್ನು ನಿರ್ಮಿಸಿದೆ ಮತ್ತು ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಪಡೆದ ಅನಂತರ ಮಥುರಾದ ಕೃಷ್ಣ ಜನ್ಮಭೂಮಿ ಸ್ಥಳದಲ್ಲಿ ಮತ್ತು ವಾರಣಾಸಿಯ ಜ್ಞಾನವಾಪಿ ಮಸೀದಿಯ ಸ್ಥಳದಲ್ಲಿ ದೇವಾಲಯಗಳನ್ನು ನಿರ್ಮಿಸಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ತಿಳಿಸಿದ್ದಾರೆ.

VISTARANEWS.COM


on

By

Himanta Biswa Sarma
Koo

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ (Lok sabha election) ಈ ಬಾರಿ ಹಲವು ನಿರ್ಣಾಯಕ ಕಾರಣಗಳಿಗಾಗಿ ಭಾರತೀಯ ಜನತಾ ಪಕ್ಷಕ್ಕೆ (BJP) ಸಂಸತ್ತಿನಲ್ಲಿ (Parliament) 400 ಸ್ಥಾನಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ ಎಂದು ಅಸ್ಸಾಂ ಮುಖ್ಯಮಂತ್ರಿ (Assam Chief Minister) ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಹೇಳಿದ್ದಾರೆ.

ಬಿಜೆಪಿ 300 ಸ್ಥಾನಗಳನ್ನು ಪಡೆದಾಗ ಅಯೋಧ್ಯೆಯಲ್ಲಿ (ayodhya) ರಾಮಮಂದಿರವನ್ನು (ram mandir) ನಿರ್ಮಿಸಿದೆ ಮತ್ತು ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಪಡೆದ ಅನಂತರ ಮಥುರಾದ (Mathura) ಕೃಷ್ಣ ಜನ್ಮಭೂಮಿ (Krishna Janmabhoomi) ಸ್ಥಳದಲ್ಲಿ ಮತ್ತು ವಾರಣಾಸಿಯ ಜ್ಞಾನವಾಪಿ ಮಸೀದಿಯ (Gyanvapi Mosque) ಸ್ಥಳದಲ್ಲಿ ದೇವಾಲಯಗಳನ್ನು ನಿರ್ಮಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರವನ್ನು (ಪಿಒಜೆಕೆ) ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತದಲ್ಲಿ ಸೇರಿಸಲಾಗುವುದು ಎಂದು ಹೇಳಿದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಸಂಸತ್ತಿನಲ್ಲಿ ಯಾವುದೇ ಚರ್ಚೆ ನಡೆದಿರಲಿಲ್ಲ ಎಂದು ದೂರಿದ್ದಾರೆ.

ಪಿಒಕೆ ನಮ್ಮದು ಎಂಬ ಚರ್ಚೆಯೇ ಆಗಿಲ್ಲ

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ, ಒಂದು ಕಾಶ್ಮೀರ ಭಾರತದಲ್ಲಿ ಮತ್ತು ಇನ್ನೊಂದು ಪಾಕಿಸ್ತಾನದಲ್ಲಿದೆ ಎಂದು ನಮಗೆ ಹೇಳಲಾಗಿತ್ತು. ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಹೊಂದಿದೆ ಎಂದು ನಮ್ಮ ಸಂಸತ್ತಿನಲ್ಲಿ ಎಂದಿಗೂ ಚರ್ಚಿಸಲಾಗಿಲ್ಲ, ಅದು ನಿಜವಾಗಿ ನಮ್ಮದು. ಇದೀಗ ಪಿಒಕೆಯಲ್ಲಿ ಪ್ರತಿದಿನ ಆಂದೋಲನ ನಡೆಯುತ್ತಿದ್ದು, ಜನರು ತಮ್ಮ ಕೈಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಿಡಿದು ಪಾಕಿಸ್ತಾನದ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಮೋದಿಜೀ 400 ಸೀಟುಗಳನ್ನು ಪಡೆದರೆ ಪಿಒಕೆ ಕೂಡ ಭಾರತಕ್ಕೆ ಸೇರುತ್ತದೆ. ಇದು ಈಗಾಗಲೇ ಪ್ರಾರಂಭವಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರವು ಮೀಸಲಾತಿಗೆ ಹೆಚ್ಚಿನ ಬಲವನ್ನು ನೀಡಲು ಕೆಲಸ ಮಾಡುತ್ತಿದೆ ಎಂದು ಪ್ರತಿಪಾದಿಸಿದ ಅವರು, ಪ್ರಧಾನಿ ಮೋದಿ ಸ್ವತಃ ಒಬಿಸಿ ವರ್ಗದಿಂದ ಬಂದವರು. ಬಿಜೆಪಿ 10 ವರ್ಷ ಅಧಿಕಾರದಲ್ಲಿದೆ. ನಮ್ಮ ಸರ್ಕಾರ ಮೀಸಲಾತಿಗೆ ಹೆಚ್ಚಿನ ಬಲ ನೀಡುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಈಗಾಗಲೇ ಆರಂಭಿಸಿರುವ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಮೀಸಲಾತಿಯನ್ನು ಕೊನೆಗೊಳಿಸಲು ಮತ್ತು ಮುಸ್ಲಿಮರಿಗೆ ಮೀಸಲಾತಿ ನೀಡಲು ಕಾಂಗ್ರೆಸ್ ಬಯಸಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮೊದಲು, ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ (ಪಿಒಜೆಕೆ) ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ಇದು ಭಾರತವಾಗಿದೆ ಮತ್ತು ಯಾವಾಗಲೂ ಇರುತ್ತದೆ ಎಂದು ಪುನರುಚ್ಚರಿಸಿದ್ದಾರೆ.

ಪಿಒಕೆ ಜನರು ತಮ್ಮ ಪರಿಸ್ಥಿತಿಯನ್ನು ಹೋಲಿಸಿ ನೋಡಬೇಕು. ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸುತ್ತಿರುವ ಜನರು ಸ್ಪಷ್ಟ ಪ್ರಗತಿಯನ್ನು ಸೂಚಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Shehbaz Sharif: ಎಲ್ಲ ಸರ್ಕಾರಿ ಸಂಸ್ಥೆಗಳನ್ನು ಮಾರಲು ನಿರ್ಧರಿಸಿದೆ ದಿವಾಳಿ ಪಾಕಿಸ್ತಾನ!

ಪಾಕಿಸ್ತಾನದ ಅರೆಸೈನಿಕ ರೇಂಜರ್‌ಗಳು ಸೋಮವಾರ, ಪಿಒಜೆಕೆ ನಲ್ಲಿ ಕಾನೂನುಬಾಹಿರವಾಗಿ ನಿಯೋಜಿಸಲ್ಪಟ್ಟರು. ಹಲವಾರು ಪ್ರತಿಭಟನಾಕಾರರನ್ನು ಗುಂಡಿಕ್ಕಿ ಕೊಂದರು ಮತ್ತು ಇದರಿಂದ ಅನೇಕ ಮಂದಿ ತೀವ್ರವಾಗಿ ಗಾಯಗೊಂಡರು. ಈ ಘಟನೆಯು ಪ್ರದೇಶದ ಹಲವಾರು ಸ್ಥಳೀಯರನ್ನು ಗಾಯಗೊಳಿಸಿತು. ಸಾವಿರಾರು ಸ್ಥಳೀಯರು ವಿದ್ಯುತ್ ಬಿಲ್‌ಗಳ ಮೇಲಿನ ತೆರಿಗೆಗಳು, ಸಬ್ಸಿಡಿಗಳಲ್ಲಿ ಕಡಿತ ಮತ್ತು ಪ್ರಧಾನಮಂತ್ರಿ ಮತ್ತು ರಾಷ್ಟ್ರಪತಿಗಳ ಸವಲತ್ತುಗಳು ಮತ್ತು ಸವಲತ್ತುಗಳನ್ನು ಕೊನೆಗೊಳಿಸುವುದರ ವಿರುದ್ಧ ತಮ್ಮ ಬೇಡಿಕೆಗಳನ್ನು ಎತ್ತಲು ಬೀದಿಗಿಳಿದಿದ್ದರು.

Continue Reading
Advertisement
Google
ವಿದೇಶ2 seconds ago

Google: 10 ಲಕ್ಷ ಕೋಟಿ ರೂ. ಮೌಲ್ಯದ ಪಿಂಚಣಿ ಡೇಟಾ ಡಿಲೀಟ್‌ ಮಾಡಿ Sorry ಎಂದ ಗೂಗಲ್; ಮುಂದೇನು?

Crazy MS Dhoni fan
ಕ್ರಿಕೆಟ್9 seconds ago

Crazy MS Dhoni fan: 2100 ಕಿ.ಮೀ ದೂರ ಸೈಕಲ್​ ತುಳಿದು ದಿಲ್ಲಿಯಿಂದ ಚೆನ್ನೈಗೆ ಬಂದ ಧೋನಿ ಅಭಿಮಾನಿ; 23 ದಿನಗಳಲ್ಲಿ ಮಿಷನ್​ ಕಂಪ್ಲೀಟ್​

Money Guide
ಮನಿ-ಗೈಡ್2 mins ago

Money Guide: ಪ್ಯಾನ್‌ ಕಾರ್ಡ್‌ ಕಳೆದುಹೋದರೆ ಚಿಂತೆ ಬೇಡ; ಮನೆಯಲ್ಲೇ ಕೂತು ಡುಬ್ಲಿಕೇಟ್‌ ಪಡೆಯುವ ವಿಧಾನ ಇಲ್ಲಿದೆ

Prajwal Revanna Case Prajwal never boarded a flight from Germany
ಕ್ರೈಂ5 mins ago

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

B C Mylarappa
ಕರ್ನಾಟಕ8 mins ago

B C Mylarappa: ಅಕ್ರಮ ಭೂ ವ್ಯವಹಾರ; ಪ್ರೊ. ಮೈಲಾರಪ್ಪ ಅಮಾನತಿಗೆ ಉನ್ನತ ಶಿಕ್ಷಣ ಇಲಾಖೆ ಸೂಚನೆ

Job Alert
ಉದ್ಯೋಗ9 mins ago

Job Alert: ಐಐಎಂಬಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

House of the Dragon season 2 new trailer hints at a bloody
ಸಿನಿಮಾ22 mins ago

House of the Dragon: ‘ಹೌಸ್ ಆಫ್ ದಿ ಡ್ರ್ಯಾಗನ್’ ಸೀಸನ್ 2 ಟ್ರೈಲರ್‌ ಔಟ್‌!

Google Update
ತಂತ್ರಜ್ಞಾನ22 mins ago

Google Update: ಕೃತಕ ಬುದ್ಧಿಮತ್ತೆ, ವಂಚನೆ ತಡೆಯಲು ಅಲರ್ಟ್‌; ಗೂಗಲ್‌ ಹೊಸ ಘೋಷಣೆಗಳು ಏನೇನು?

Seema Haider
ದೇಶ31 mins ago

Seema Haider: ಮತ್ತೆ ಸುದ್ದಿಯಾದ ಸೀಮಾ ಹೈದರ್‌; ಇದು ಗಡಿಯಾಚೆಗಿನ ಪ್ರೇಮ ಕಥೆಯೋ ಅಥವಾ ಪಾಕ್‌ ಗೂಢಾಚಾರಿಕೆಯೋ?

ICMR Dietary Guidelines
ಆರೋಗ್ಯ32 mins ago

ICMR Dietary Guidelines: ಊಟದ ಮೊದಲು, ಊಟದ ನಂತರ ಚಹಾ, ಕಾಫಿ ಕುಡಿದರೆ ಏನಾಗುತ್ತದೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ9 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ11 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ21 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202423 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌