MLA Muniratna : ಲಂಚಕ್ಕಾಗಿ ಗುತ್ತಿಗೆದಾರನಿಗೆ ಜೀವ ಬೆದರಿಕೆ; ಶಾಸಕ ಮುನಿರತ್ನ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲು - Vistara News

ರಾಜಕೀಯ

MLA Muniratna : ಲಂಚಕ್ಕಾಗಿ ಗುತ್ತಿಗೆದಾರನಿಗೆ ಜೀವ ಬೆದರಿಕೆ; ಶಾಸಕ ಮುನಿರತ್ನ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲು

MLA Muniratna : ಲಂಚಕ್ಕೆ ಕಿರುಕುಳ ನೀಡುತ್ತಿರುವ ಹಿನ್ನೆಲೆಯಲ್ಲಿ ಗುತ್ತಿಗೆದಾರ ಚೆಲುವರಾಜು ನೀಡಿದ ದೂರಿನ ಮೇರೆಗೆ ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

VISTARANEWS.COM


on

FIR registered against MLA Munirathna and four others
ಶಾಸಕ ಮುನಿರತ್ನ ಹಾಗೂ ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾಜಿ ಸಚಿವ, ಶಾಸಕ ಮುನಿರತ್ನ (MLA Muniratna) ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್ಐಆರ್ ದಾಖಲಾಗಿದೆ. ಬಿಬಿಎಂಪಿ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ್ದು, ಜಾತಿ ನಿಂದನೆ ಮಾಡಿದ ಆರೋಪದಡಿಯಲ್ಲಿ ದೂರು ದಾಖಲಾಗಿದೆ. ಜೀವ ಬೆದರಿಕೆ ಪ್ರಕರಣದಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದ್ದು, A-1 ಮಾಜಿ ಸಚಿವ ಮುನಿರತ್ನ, A-2-ಆಪ್ತ ಸಹಾಯಕ ವಿ.ಜಿ ಕುಮಾರ್, A-3 ಸೆಕ್ಯೂರಿಟಿ ಅಭಿಷೇಕ್ , A-4 ವಸಂತ್ ಕುಮಾರ್ ಮೇಲೆ ಎಫ್‌ಐಆರ್‌ ದಾಖಲಾಗಿದೆ.

ಗುತ್ತಿಗೆದಾರನ ಬಳಿ ಲಂಚಕ್ಕೆ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ಚೆಲುವರಾಜು ಎಂಬುವವರು ನಿನ್ನೆ ಶುಕ್ರವಾರ ಸುದ್ದಿಗೋಷ್ಠಿ ‌ನಡೆಸಿ ಆಡಿಯೋ ಬಿಡುಗಡೆ ಮಾಡಿದ್ದರು. ಚೆಲವರಾಜು ನೀಡಿದ ದೂರಿನ ಒಂದು ಜಾತಿ ನಿಂದನೆ, ಜೀವ ಬೆದರಿಕೆ ಕೇಸ್ ದಾಖಲಾಗಿದ್ದರೆ, ಮಾಜಿ ಕಾರ್ಪೋರೇಟರ್‌ ವೇಲು‌ ನಾಯ್ಕರ್ ನೀಡಿದ ದೂರಿನ ಮೇರೆಗೆ ಜಾತಿ ನಿಂದನೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೇಣುಕಾಸ್ವಾಮಿಗೆ ಆದ ಗತಿ ನಿನಗೂ ಆಗುತ್ತೆ ಎಂದು ಬೆದರಿಕೆ

ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜ್ ಈ ಕುರಿತು ಮಾತನಾಡಿದ್ದು, ನನ್ನ ಕರೆಸಿ ಬೆದರಿಕೆ ಹಾಕಿ 20 ಲಕ್ಷ ರೂ. ಹಣ ಕೇಳಿದ್ದಾರೆ. ನಾನು ಆತ್ಮಹತ್ಯೆಗೂ ಯತ್ನಿಸಿದ್ದೆ, ಆದರೆ ನನ್ನ ಕುಟುಂಬದ ಸಲುವಾಗಿ ಉಳಿದುಕೊಂಡಿದ್ದೇನೆ. ರೇಣುಕಾಸ್ವಾಮಿಗೆ ಆದ ಗತಿ ನಿನಗೂ ಆಗುತ್ತೆ ನೋಡು.. ರೇಣುಕಾಸ್ವಾಮಿಗೆ ಗತಿ ಕಾಣಿಸಿದ್ದು ನಮ್ಮ ಅಕ್ಕನ ಮಗ ಎಂದು ಬೆದರಿಕೆ ಹಾಕಿದ್ದರಂತೆ. ನನ್ನ ಬಳಿ ನಿನ್ನನ್ನು ಮುಗಿಸಲು ನೂರು ಪ್ಲ್ಯಾನ್ ಇದೆ ಎಂದು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿದ್ದಾರೆ.

ಶಾಸಕ ಮುನಿರತ್ನ ಆಪ್ತನಾಗಿರುವ ವಸಂತ್ ಕುಮಾರ್ ಕೂಡ ಚೆಲುವರಾಜುಗೆ ಬೆದರಿಕೆ ಹಾಕಿದ್ದನಂತೆ. ರೇಣುಕಾಸ್ವಾಮಿಯನ್ನು ಕೊಂದ ಹಾಗೇ ನಿನ್ನನ್ನು ಕೊಂದು ಹಾಕುತ್ತಾರೆ. ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ್ಯಾರು ಗೊತ್ತಾ? ಮುನಿರತ್ನ ಅವರ ತಂಗಿ ಮಗಾನೇ. ಸುಮ್ಮನೆ ಅವರು ಹೇಳಿದ್ದಂತೆ ಕೇಳು ಎಂದು ಚೆಲುವರಾಜುಗೆ ವಸಂತ್ ಕುಮಾರ್ ಮುಖಾಂತರ ಸೂಚನೆ ನೀಡಿ ಬೆದರಿಕೆ ಹಾಕಿಸಿದ್ದರಂತೆ.

ಅವಾಚ್ಯ ಶಬ್ಧಗಳಿಂದ ನಿಂದನೆ

ಶಾಸಕ ಮುನಿರತ್ನ ವಿರುದ್ಧ ಲಂಚ ಬೇಡಿಕೆ ಆರೋಪ ಕೇಳಿ ಬಂದಿದೆ. ಬಿಬಿಎಂಪಿ ವಾರ್ಡ್ ನಂ 42 ಲಕ್ಷ್ಮಿದೇವಿನಗರ ವಾರ್ಡ್‌ನಲ್ಲಿ ಘನ ತ್ಯಾಜ್ಯ ಸಂಗ್ರಹಣೆ ಮತ್ತು ವಿಲೇವಾರಿ ನಿರ್ವಹಣೆ ಸಂಬಂಧಿಸಿದಂತೆ ಗುತ್ತಿಗೆದಾರ ಚೆಲುವರಾಜುಗೆ ಲಂಚ ನೀಡುವಂತೆ ತೊಂದರೆ ಹಾಗೂ ಜೀವಬೆದರಿಕೆ ನೀಡಿದ್ದರಂತೆ. ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಗುತ್ತಿಗೆದಾರ ಚೆಲುವರಾಜು ಆರೋಪಿಸಿದ್ದರು. ಮೆ. ಗಂಗಾ ಎಂಟರ್ ಪ್ರೈಸಸ್ ಎಂಬ ಕಂಪನಿ ಹೆಸರಿನಲ್ಲಿ ಚೆಲುವರಾಜು ಗುತ್ತಿಗೆ ಕೆಲಸ ಮಾಡುತ್ತಿದ್ದಾರೆ. ಲಕ್ಷ್ಮೀದೇವಿ ನಗರ ವಾರ್ಡ್ ನ ಡಿ. ದೇವರಾಜು ಅರಸು ಟ್ರಕ್ ಟರ್ಮಿನಲ್ ಪ್ರದೇಶದಲ್ಲಿ ಚೆಲುವರಾಜು ಕಸ ಸಂಗ್ರಹ‌ದ ಗುತ್ತಿಗೆ ಪಡೆದಿದ್ದಾರೆ. ಆದರೆ ಮುನಿರತ್ನ ಚೆಲುವರಾಜುಗೆ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರಂತೆ. ಜತೆಗೆ ಜೀವ ಬೆದರಿಕೆ ಹಾಕುತ್ತಿದ್ದರಂತೆ.

ನಾನು ಮಾಗಡಿ ತಾಲೂಕಿನವನು. ಬಿಬಿಎಂಪಿ ಪೌರ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದೆ. ನಂತರ ಟ್ರಕ್ ಡ್ರೈವರ್ ಆಗಿ ಬಳಿಕ ಕಸ ಸಂಗ್ರಹದ ಗುತ್ತಿಗೆದಾರನಾದೆ. ಒಂದು ದಿನ ಎಂಎಲ್‌ಎ ಗನ್ ಮ್ಯಾನ್ ವಿಜಯ್ ನನಗೆ ಕರೆ ಮಾಡಿದ್ದರು. ವೈಯ್ಯಾಲಿಕಾವಲ್‌ನಲ್ಲಿರುವ ಅವರ ಮನೆಗೆ ಹೋಗಿ ಮುನಿರತ್ನ ಅವರನ್ನು ಭೇಟಿಯಾದೆ. ನಿನಗೆ 10 ಆಟೋ ಕೊಡಿಸುತ್ತೀನಿ, 20 ಲಕ್ಷ ಕೊಡು ಎಂದು ಹೇಳಿದರು. ನಾನು 20 ಲಕ್ಷ ಕೊಟ್ಟೆ, ಆದರೆ ಆಟೋ ಕೊಡಿಸಿಲ್ಲ ಕೇವಲ ಶಿಫಾರಸು ಪತ್ರ ಕೊಟ್ಟು ಸುಮ್ಮನಾದರು.

ಜೂನ್ ತಿಂಗಳಲ್ಲಿ ಮತ್ತೆ ಎಂ ಎಲ್ ಎ ಮುನಿರತ್ನ ನನಗೆ ಕರೆ ಮಾಡಿ, ಮನೆಗೆ ಬಾ ಅಂತಾ ಕರೆದರು. ಆದರೆ ನಾನು ಹೋಗಲಿಲ್ಲ. ನಂತರ ಅಧಿಕೃತವಾಗಿ ಎಂಎಲ್‌ಎ ಪಿಎಸ್ ಪತ್ರ ಬರೆದು ಸಭೆಗೆ ಕರೆದರು. ಸಭೆಗೆ ಹೋದಾಗ ಬಾಯಿಗೆ ಬಂದಹಾಗೇ ಅವಾಚ್ಯ ಶಬ್ಧಗಳಿಂದ ಬೈದರು. ನನ್ನ ಟೆಂಡರ್ ರದ್ದು ಮಾಡಲು ಆಯುಕ್ತರಿಗೆ ಎಂಎಲ್‌ಎ ಪತ್ರ ಬರೆದರು. ನಂತರ ಮತ್ತೆ 30 ಲಕ್ಷ ದುಡ್ಡು ಕೊಡು ಎಂದರು. ಹಣ ಕೊಡದೆ ಇದ್ದಾಗ ಮತ್ತೆ ಆಯುಕ್ತರಿಗೆ ನನ್ನ ಟೆಂಡರ್ ರದ್ದು ಮಾಡುವಂತೆ ಪತ್ರ ಬರೆದರು. ಅವರ ಮನೆಗೆ ಹೋದಾಗಲೆಲ್ಲ ಬಾಯಿಗೆ ಬಂದ ಹಾಗೇ ಬೈದು ಸಾಯಿಸುತ್ತೇನೆ ಎಂದು ಅವಾಜ್ ಹಾಕಿದ್ದರಂತೆ.

ನನ್ನಗೆ 11 ಕೋಟಿ ಅರಿಯರ್ಸ್ ಬಂದಾಗ, ಅದರಲ್ಲೂ ದುಡ್ಡು ಕೊಡು ಎಂದು ಕಿರುಕುಳ‌ ಕೊಟ್ಟರು. ಬೇರೆ ಗುತ್ತಿಗೆದಾರರ ಮುಖಾಂತರ ಹಣ ನೀಡುವಂತೆ ಕಿರುಕುಳ ನೀಡಲು ಶುರುಮಾಡಿದರು. ಸೆ. 9ರಂದು ಮತ್ತೆ ಜೀವ ಬೆದರಿಕೆ ಹಾಕಿ, ರೇಣುಕಾಸ್ವಾಮಿ ಮಾದರಿಯಲ್ಲೇ ಕೊಲೆ ಮಾಡ್ತೇವೆ ಎಂದು ಮುನಿರತ್ನ ಆಪ್ತ ವಸಂತಕುಮಾರ್ ಬೆದರಿಕೆ ಹಾಕಿದ್ದಾನೆ. ಮೇ 18ರಂದು ನಿನ್ನ ಹೆಂಡತಿ ಚೆನ್ನಾಗಿದ್ದರೆ ಫೋಟೊ ತೋರಿಸೋ ಎಂದು
ಹೆಂಡತಿ ಬಗ್ಗೆ ಅವಾಚ್ಯ ಶಬ್ಧದಿಂದ ನಿಂದಿಸಿದ್ದಾರೆ.

ಮುನಿರತ್ನ ಫೋನ್‌ ಸ್ವಿಚ್ಡ್‌ ಆಫ್

ಶಾಸಕ ಮುನಿರತ್ನ ವಿರುದ್ಧ ವೈಯಾಲಿಕಾವಲ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದಾರೆ. ವೈಯ್ಯಾಲಿಕಾವಲ್ ಪೊಲೀಸರಿಂದ‌ ಮುನಿರತ್ನಗಾಗಿ ಹುಡುಕಾಟ ನಡೆಸಿದ್ದಾರೆ. ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಮುನಿರತ್ನ ಮನೆ ಬಳಿ ಪೊಲೀಸ್ ಭದ್ರತೆ ನೀಡಲಾಗಿದೆ. ಪ್ರತಿಭಟನೆ ಕೂಡ‌ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲೂ ಒಂದು ಕೆಎಸ್ಆರ್ಪಿಸಿ ತುಕಡಿ ನಿಯೋಜನೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Hariprakash Konemane: ದಲಿತೋದ್ಧಾರದ ಮಾತುಗಳು ಮೊಸಳೆ ಕಣ್ಣೀರಷ್ಟೇ; ಕಾಂಗ್ರೆಸ್ ತನ್ನ ನಿಜಬಣ್ಣ ತೆರೆದಿಟ್ಟಿದೆ- ಹರಿಪ್ರಕಾಶ್ ಕೋಣೆಮನೆ

Hariprakash Konemane: ರಾಹುಲ್ ಮೀಸಲಾತಿ ಕುರಿತ ಹೇಳಿಕೆ ಉದ್ದೇಶಪೂರ್ವಕವಾಗೇ ಇದೆ. ಕಾಂಗ್ರೆಸ್ ಪಕ್ಷದ ಮುಖವಾಡ ಕಳಚಿದೆ, ದಲಿತೋದ್ಧಾರದ ಮಾತು ಮೊಸಳೆ ಕಣ್ಣೀರು ಅಂತ ದೃಢಪಡಿಸಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆಮನೆ ಟೀಕಿಸಿದ್ದಾರೆ.

VISTARANEWS.COM


on

By

They have done a disservice to the Constitution Congress has exposed its true colours Hariprakash Koonemane
Koo

ಮಂಗಳೂರು: ರಾಹುಲ್ ಗಾಂಧಿ ತನ್ನ ಜತೆಗೆ ನಕ್ಸಲರು, ಮತಾಂಧರು, ಭಯೋತ್ಪಾದಕರನ್ನು ಸೇರಿಸಿಕೊಂಡು ದೇಶದ ವಿರುದ್ಧ ತಾನಿದ್ದೇನೆಂದು ತೋರಿಸುತ್ತಿದ್ದಾರೆ. ದೇಶದ ಬಗ್ಗೆ, ಸೇನೆಯ ಬಗ್ಗೆ ಅಗೌರವ ತೋರುತ್ತಿದ್ದಾರೆ. ವಿದೇಶದಲ್ಲಿ ಕುಳಿತು ಭಾರತದ ಚುನಾವಣಾ ವ್ಯವಸ್ಥೆಯನ್ನು ಟೀಕಿಸುತ್ತಿದ್ದಾರೆ. ಸೂಕ್ತ ಸಂದರ್ಭದಲ್ಲಿ ದಲಿತರ, ಹಿಂದುಳಿದವರ ಮೀಸಲು ವ್ಯವಸ್ಥೆಯನ್ನು ತೆಗೆದುಹಾಕುವುದಾಗಿ ಹೇಳುತ್ತಿದ್ದಾರೆ. ಆ ಮೂಲಕ ಸಂವಿಧಾನಕ್ಕೆ ಒಂದೆಡೆ ಅಪಚಾರ ಎಸಗಿದ್ದು, ಮತ್ತೊಂದೆಡೆ ಕಾಂಗ್ರೆಸ್ ಪಕ್ಷದ ನಿಜಬಣ್ಣವನ್ನು ತೆರೆದಿಟ್ಟಿದ್ದಾರೆ ಎಂದು ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆಮನೆ (Hariprakash Konemane) ಟೀಕಿಸಿದ್ದಾರೆ.

ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಭಾರತದ ಬಗ್ಗೆ ತಪ್ಪು ಕಲ್ಪನೆ ಬರುವ ರೀತಿ ಅಮೆರಿಕಾದಲ್ಲಿ ನಿಂತು ರಾಹುಲ್ ಮಾತನಾಡಿದ್ದಾರೆ. ಸೂಕ್ತ ಸಂದರ್ಭದಲ್ಲಿ ಮೀಸಲಾತಿ ವ್ಯವಸ್ಥೆ ತೆಗೆದು ಹಾಕುವುದಾಗಿ ಹೇಳಿದ್ದು, ನಾವಿದನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ. ಮೀಸಲಾತಿ ತೆಗೆಯುವ ಸೂಕ್ತ ಸಂದರ್ಭ ಯಾವುದು ಎಂಬುದನ್ನು ಕೇಳಬಯಸುತ್ತೇನೆ ಎಂದರು. ಸಮಾಜದ ಕಟ್ಟಕಡೆಯ ಕೆಳಸ್ತರದ ಜಾತಿಗಳನ್ನು ಮೇಲೆ ತರುವುದಕ್ಕಾಗಿ ಮೀಸಲಾತಿ ಅನಿವಾರ್ಯ ಎಂದು ಕೋರ್ಟ್ ಹೇಳಿದೆ ಎಂಬುದಾಗಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಾಂಗ್ರೆಸ್‌ ಮುಖವಾಡ ಕಳಚಿದೆ

ರಾಹುಲ್ ಮೀಸಲಾತಿ ಕುರಿತ ಹೇಳಿಕೆ ಉದ್ದೇಶಪೂರ್ವಕವಾಗೇ ಇದೆ. 1960ರಲ್ಲಿ ಅಂದಿನ ಪ್ರಧಾನಿ ಜವಾಹರ್ ನೆಹರು ಭಾಷಣ ಮಾಡುತ್ತ ಸರ್ಕಾರಿ ವ್ಯವಸ್ಥೆಯಲ್ಲಿ ದಕ್ಷತೆ ತರುವುದಕ್ಕಾಗಿ ಮೀಸಲಾತಿ ತೆಗೆದು ಹಾಕಬೇಕೆಂದು ಹೇಳಿದ್ದರು. ಅದೇ ಹೇಳಿಕೆಯನ್ನು ಈಗ ಮರಿ ಮೊಮ್ಮಗ ಉಲ್ಲೇಖಿಸಿದ್ದಾರೆ. ಆಮೂಲಕ ಕಾಂಗ್ರೆಸ್ ಪಕ್ಷದ ಮುಖವಾಡ ಕಳಚಿದೆ, ದಲಿತೋದ್ಧಾರದ ಮಾತು ಮೊಸಳೆ ಕಣ್ಣೀರು ಅಂತ ದೃಢಪಡಿಸಿದೆ. ಈ ಹೇಳಿಕೆಯ ಕಾರಣಕ್ಕೆ ರಾಹುಲ್ ಗಾಂಧಿ ಕೋಟ್ಯಂತರ ದಲಿತ ವರ್ಗದ, ಹಿಂದುಳಿದ ವರ್ಗದ ಕ್ಷಮೆಯಾಚನೆ ಮಾಡಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಪಿಎಫ್ಐ, ಎಸ್ಡಿಪಿಐ ಮತ್ತು ವಿಭಜಕ ಶಕ್ತಿಗಳು ಆಡಳಿತ ನಡೆಸುತ್ತಿರುವಂತೆ ಕಾಣುತ್ತಿದೆ. ಮೊದಲೇ ನಮಗೆ ರಾಜ್ಯದಲ್ಲಿ ಪಿಎಫ್ಐ, ಎಸ್ಡಿಪಿಐ ಅಧಿಕಾರಕ್ಕೆ ಬಂದಿದೆ ಎಂಬ ಅನುಮಾನ ಇತ್ತು. ಈಗ ಆ ಮಾತು ದೃಢವಾಗಿದೆ. ಸತತ ಎರಡನೇ ವರ್ಷವೂ ರಾಜ್ಯದಲ್ಲಿ ಗಣಪತಿ ವಿಸರ್ಜನೆ ವೇಳೆ ಗಲಭೆ ಕೃತ್ಯ ನಡೆಸಿದ್ದಾರೆ. ನಾಗಮಂಗಲದ ಘಟನೆ ನೋಡಿದರೆ ಪೂರ್ವಯೋಜಿತ ಅನ್ನುವ ಸಂಶಯ ಬರುತ್ತದೆ. ಯಾಕಂದರೆ, ಅಲ್ಲಿ ಘಟನೆ ನಡೆಯುವಾಗ ಪೊಲೀಸರೇ ಇರಲಿಲ್ಲ. ಗಣೇಶನ ವಿಸರ್ಜನೆಗೆ ಭದ್ರತೆ ಕೊಡುವ ಕಾಳಜಿ ರಾಜ್ಯದ ಪೊಲೀಸರಿಗೆ, ಸರ್ಕಾರಕ್ಕೆ ಇಲ್ಲದಿರುವುದು ವಿಭಜಕ ಶಕ್ತಿ ಬಲಗೊಂಡಿರುವುದನ್ನು ಸೂಚಿಸುತ್ತದೆ ಎಂದು ಹೇಳಿದರು.

ನಾಗಮಂಗಲದಲ್ಲಿ ಗಲಭೆ ನಡೆಸಿದವರ ಜತೆಗೆ ಗಣೇಶೋತ್ಸವ ಆಯೋಜಕರ ಮೇಲೂ ಕೇಸು ದಾಖಲಿಸಿದ್ದಾರೆ. ದಾಳಿ ನಡೆಸಿದವರೊಂದಿಗೆ 26ನೇ ಆರೋಪಿಯೆಂದು ಆಯೋಜಕರನ್ನು ಸೇರಿಸಿದ್ದಾರೆ. ದೊಂಬಿ ನಡೆದು ಹತ್ತಾರು ಅಂಗಡಿ, ವಾಹನಗಳಿಗೆ ಬೆಂಕಿ ಹಾಕಿದ್ದರೂ ಅದೊಂದು ಸಣ್ಣ ಘಟನೆ, ಮರೆತು ಬಿಡಿ ಎಂದು ಗೃಹ ಸಚಿವರು ಕ್ಷುಲ್ಲಕ ಮಾತಗಳನ್ನಾಡಿದ್ದಾರೆ. ಮಂಗಳೂರಿನ ಕುಕ್ಕರ್ ಬಾಂಬ್ ಸಂದರ್ಭದಲ್ಲಿ ಡಿಕೆಶಿ ಹೇಳಿರುವ ಮಾತಿಗೂ ಪರಮೇಶ್ವರ್ ಮಾತಿಗೂ ತಾಳೆಯಾಗುತ್ತಿದೆ. ಇವರು ವಿಭಜಕ ಶಕ್ತಿಗಳ ಪರವಾಗಿದ್ದಾರೆ ಎನ್ನುವುದನ್ನು ಇದು ತೋರಿಸುತ್ತದೆ ಎಂದು ಹೇಳಿದರು.

ದೇಶ ಒಡೆಯುವುದರಲ್ಲೇ ಕಾಂಗ್ರೆಸಿಗೆ ಆಸಕ್ತಿ

ಜಮ್ಮು ಕಾಶ್ಮೀರದಲ್ಲಿ ಚುನಾವಣೆ ಆಗುತ್ತಿರುವುದಕ್ಕೆ ಪ್ರಧಾನಿ ಮೋದಿಯವರ ದಿಟ್ಟ ನಿರ್ಧಾರ ಕಾರಣ. ಅಲ್ಲಿ ದೇಶದ ಧ್ವಜ ಹಾರಿಸುವುದಕ್ಕೂ ನಿರ್ಬಂಧ ವಿಧಿಸಿದ್ದ 370 ವಿಧಿಯನ್ನು ತೆಗೆದು ಹಾಕಿ, ಉಗ್ರರನ್ನು ಸದೆಬಡಿದು ಚುನಾವಣೆ ನಡೆಸುತ್ತಿದ್ದರೆ, ಕಾಂಗ್ರೆಸ್ ಪಕ್ಷವು ಪಾಕಿಸ್ತಾನದ ಪರವಾಗಿರುವ ರಾಜಕೀಯ ಶಕ್ತಿಗಳ ಜತೆ ನಿಂತು ತಾವು ಅಧಿಕಾರಕ್ಕೆ ಬಂದರೆ ಮತ್ತೆ ಪ್ರತ್ಯೇಕ ಸ್ಥಾನ ಕೊಡಿಸುವ 370 ವಿಧಿ ಜಾರಿಗೆ ತರುತ್ತೇವೆಂದು ಪ್ರಣಾಳಿಕೆಯಲ್ಲಿ ಹೇಳಿದೆ. ಕಾಂಗ್ರೆಸ್ ಗೆ ಈ ದೇಶವನ್ನು ಜೋಡಿಸುವುದರಲ್ಲಿ ನಂಬಿಕೆ ಇಲ್ಲ. ಜಾತಿ, ಧರ್ಮದ ಹೆಸರಲ್ಲಿ ದೇಶ ಒಡೆಯುವುದರಲ್ಲೇ ಇದೆ, ಮತ್ತೆ ದೇಶ ವಿಭಜನೆಯ ನೆನಪನ್ನು ಮಾಡಿಕೊಟ್ಟಿದೆ ಎಂದು ಹೇಳಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹುಬ್ಬಳ್ಳಿ

Pralhad Joshi: ರಾಜಕೀಯ ಒತ್ತಡಕ್ಕೆ ಒಳಗಾಗಿ ಹುಚ್ಚಾಟ ಮಾಡ್ಬೇಡಿ; ಮಂಡ್ಯ ಎಸ್‌ಪಿಗೆ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಕೆ

Pralhad Joshi : ನಾಗಮಂಗಲ ಗಲಭೆ ಪ್ರಕರಣದಲ್ಲಿ ರಾಜಕೀಯ ಒತ್ತಡಕ್ಕೆ ಒಳಗಾಗಿ ಏನೇನೋ ಹುಚ್ಚಾಟ ಮಾಡಬೇಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಂಡ್ಯ ಎಸ್‌ಪಿಗೆ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

By

Minister Pralhad Joshi warns Mandya SP not to come under political pressure
Koo

ಹುಬ್ಬಳ್ಳಿ: ಮಂಡ್ಯದ ನಾಗಮಂಗಲ ಗಲಭೆ (Nagamangala Case) ಪ್ರಕರಣದಲ್ಲಿ ರಾಜಕೀಯ ಒತ್ತಡಕ್ಕೆ ಒಳಗಾಗಿ ಏನೇನೋ ಹುಚ್ಚಾಟ ಮಾಡಬೇಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರು ಮಂಡ್ಯ ಎಸ್‌ಪಿಗೆ ಎಚ್ಚರಿಕೆ ನೀಡಿದ್ದಾರೆ. ನಾಗಮಂಗಲ ಗಲಭೆ ಪೂರ್ವ ನಿಯೋಜಿತ ಇದ್ದಂತಿದೆ. ನಿಜವಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ ಎಂದು ಸೂಚಿಸಿದರು. ನಾಗಮಂಗಲದಲ್ಲಿ ಗಣಪತಿ ಪ್ರತಿಷ್ಠಾಪನೆ, ಮೆರವಣಿಗೆ ಎಲ್ಲದೂ ಸರ್ಕಾರದ ನಿಯಮ ಮತ್ತು ಪೊಲೀಸ್ ಇಲಾಖೆ ಅನುಮತಿ ಮೇರೆಗೆ ನಡೆದಿದೆ. ಗಲಭೆ ಖಂಡಿಸಿ ಬಿಜೆಪಿ ತೀವ್ರ ಹೋರಾಟ ನಡೆಸಲಿದೆ. ಮಸೀದಿ ಇರುವುದೇ ರಸ್ತೆಯಲ್ಲಿ. ಇನ್ನು, ಇಲ್ಲಿ ಓಡಾಡಬೇಡಿ, ವಾದ್ಯ ಬರಿಸಬೇಡಿ ಎಂದರೆ ಹೇಗೆ? ಇದನ್ನೇನು ಪಾಕಿಸ್ತಾನ ಮಾಡಿದ್ದಾರೆಯೇ? ಎಂದು ಜೋಶಿ ಹರಿ ಹಾಯ್ದರು. ಗಲಭೆಯಲ್ಲಿ ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆದವರನ್ನು ಬಿಟ್ಟು ಗಣಪತಿ ಇಟ್ಟವರನ್ನು, ಸಿಕ್ಕ ಸಿಕ್ಕವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗಿ ಕ್ರಮ ಜರುಗಿಸುವುದು ಸರಿಯಲ್ಲ ಎಂದು ಖಂಡಿಸಿದರು.

ಮಮತಾ ಬ್ಯಾನರ್ಜಿ ಡ್ರಾಮಾ ಬಿಟ್ಟು ರಾಜೀನಾಮೆ ನೀಡೋದು ಒಳ್ಳೇದು

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡುವುದೇ ಒಳ್ಳೆಯದು ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಮತಾ ಅವರು ರಾಜೀನಾಮೆಯ ನಾಟಕವಾಡುತ್ತಿದ್ದಾರೆ ಎಂದು ಟೀಕಿಸಿದರು. ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಆಗಿ ಸರ್ಕಾರ ಮುನ್ನಡೆಸಲು ಅವರು ಸಮರ್ಥರಿಲ್ಲ. ಸಮರ್ಪಕ ಆಡಳಿತ ನೀಡುವಲ್ಲಿ ಅವರು ಅಸಮರ್ಥರಾಗಿದ್ದಾರೆ ಎಂದು ಪ್ರಕ್ರಿಯಿಸಿದರು. ಅಧಿಕಾರ ನೀಡಿದ ಜನರಿಗೆ ನ್ಯಾಯ ಒದಗಿಸುವಲ್ಲಿ ಸಹ ವೈಫಲ್ಯ ಕಂಡಿದ್ದಾರೆ. ಸಮುದಾಯಕ್ಕೆ ಅವಮಾನ ಮಾಡುತ್ತಲೆ ಬಂದಿದ್ದಾರೆ. ಇದೇ ಪ್ರವೃತ್ತಿ ಮುಂದುವರಿಸುವ ಬದಲು ರಾಜೀನಾಮೆ ನೀಡುವುದೇ ಸೂಕ್ತ ಎಂದರು. ಮಮತಾ ಬ್ಯಾನರ್ಜಿ ಅವರ ರಾಜೀನಾಮೆ ಹೇಳಿಕೆ ಕೇವಲ ಡ್ರಾಮಾ. ಜನರೆದುರು ಈ ರೀತಿ ಕಣ್ಣಾ ಮುಚ್ಚಾಲೆ ಆಡುವುದು ಬೇಡ. ಬದಲಿಗೆ ರಾಜೀನಾಮೆ ನೀಡಲಿ ಎಂದರು.

ಅರವಿಂದ ಕೇಜ್ರಿವಾಲ್ ದೋಷಮುಕ್ತರಾಗಿಲ್ಲ

ದೆಹಲಿ ಸಿಎಂ ಆಗಿದ್ದ ಅರವಿಂದ ಕೇಜ್ರಿವಾಲ್ ಅವರಿಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಆದರೆ, ಅವರಿನ್ನೂ ದೋಷಮುಕ್ತರಾಗಿ ಹೊರ ಬಂದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು. ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಸಿಕ್ಕಿದೆ. ಈ ಹಿಂದೆ ಲಾಲೂ ಪ್ರಸಾದ್ ಯಾದವ್ ಅವರಿಗೂ ಬೇಲ್ ಸಿಕ್ಕಿತ್ತು ಆಮೇಲೆ ಶಿಕ್ಷೆಗೆ ಗುರಿಯಾದರು. ನ್ಯಾಯಾಂಗ ವ್ಯವಸ್ಥೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಆದರೆ, ನ್ಯಾಯಾಲಯ ಅವರನ್ನು ಇನ್ನೂ ಆರೋಪಮುಕ್ತ ಮಾಡಿಲ್ಲ. ಬಿಜೆಪಿಗೆ ನ್ಯಾಯಾಂಗದ ಮೇಲೆ ನಂಬಿಕೆಯಿದೆ ಎಂದು ಹೇಳಿದರು. ಹಿಂದೆ ಲಾಲೂ ಪ್ರಸಾದ ಯಾದವ್ ಅವರಿಗೂ ಬೇಲ್ ಸಿಕ್ಕಿತ್ತು. ಸಮಗ್ರ ವಿಚಾರಣೆ ಬಳಿಕ ಆರೋಪ ಸಾಬೀತಾಗಿ ಶಿಕ್ಷೆಗೆ ಒಳಗಾದರು ಎಂದು ಪ್ರಲ್ಹಾದ ಜೋಶಿ ವಿಶ್ಲೇಷಿಸಿದರು. ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಅತ್ಯುನ್ನತವಾಗಿದೆ ಮತ್ತು ಅತ್ಯಂತ ಶ್ರೇಷ್ಠವಾಗಿದೆ ಎಂಬುದಕ್ಕೆ ಇದು ನಿದರ್ಶನವಾಗಿದೆ ಎಂದರು.
ದೇಶದಲ್ಲಿ ಕೋರ್ಟ್‌ಗಳು ನ್ಯಾಯಯುತವಾಗಿ, ಅತ್ಯಂತ ನಿಷ್ಪಕ್ಷವಾಗಿ ಕೆಲಸ ಮಾಡುತ್ತಿವೆ ಎಂದು ಸಚಿವರು, ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಅರಿಯಲಿ ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: Nagamangala Case : ನಾಗಮಂಗಲ ಗಲಭೆ; ದುಷ್ಕರ್ಮಿಗಳ ಕೃತ್ಯಕ್ಕೆ ಬೀದಿಗೆ ಬಿದ್ದ ಕುಟುಂಬಗಳು

ದೇಶವಿರೋಧಿಗಳ ಜತೆ ಕೈ ಜೋಡಿಸುವುದೇ ರಾಹುಲ್ ಗಾಂಧಿ ನಡೆ

ಭಾರತದ ವಿರೋಧಿಗಳ ಜತೆ ಕೈ ಜೋಡಿಸುವುದೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ. ರಾಹುಲ್ ಗಾಂಧಿ ವಿದೇಶಿ ನೆಲದಲ್ಲಿ ನಿಂತು ಭಾರತವನ್ನು ಅವಹೇಳನ ಮಾಡುವುದು ದೇಶದ್ರೋಹದ ಕೆಲಸ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ದೇಶದ್ರೋಹಿಗಳ ಜತೆ, ಭಾರತದ ವಿರೋಧಿಗಳ ಜತೆ ರಾಹುಲ್ ಗಾಂಧಿ ದೇಶದ ವಿರುದ್ಧವಾಗಿ, ಪ್ರಜಾಪ್ರಭುತ್ವವನ್ನು ವಿರೋಧಿಸುವ ರೀತಿ ಮಾತನಾಡುತ್ತಾರೆ ಎಂದು ಹರಿ ಹಾಯ್ದರು. ವಿದೇಶದಲ್ಲಿ ನಿಂತು ಭಾರತದಲ್ಲಿ ಪ್ರಜಾಪ್ರಭುತ್ವವೇ ಇಲ್ಲ ಎನ್ನುವ ರಾಹುಲ್ ಗಾಂಧಿ, ತುರ್ತು ಪರಿಸ್ಥಿತಿ ಹೇರಿದವರು ಯಾರು? ಎಂಬುದನ್ನು ಅರಿತುಕೊಂಡು ಮಾತನಾಡಲಿ ಎಂದು ತಿರುಗೇಟು ನೀಡಿದರು. ಪ್ರಜಾಪ್ರಭುತ್ವ, ಸಮಾನತೆ ಎಂದು ಭಾಷಣ ಬಿಗಿಯುವ ರಾಹುಲ್ ಗಾಂಧಿ ಕಾಂಗ್ರೆಸ್ನಲ್ಲಿ ಮಲ್ಲಿಕಾರ್ಜುನ್ ಖರ್ಗೆ ಅವರೇ ಪ್ರಧಾನಿ ಅಭ್ಯರ್ಥಿ ಎಂದು ಹೇಳಲಿ ನೋಡೋಣ ಎಂದು ಸವಾಲು ಹಾಕಿದರು.

ಇನ್ನು, ಚುನಾವಣಾ ಆಯೋಗದ ಬಗ್ಗೆ ಆರೋಪ ಮಾಡುತ್ತಾರೆ. ಕರ್ನಾಟಕ, ತೆಲಂಗಾಣ, ಹಿಮಾಚಲ ಪ್ರದೇಶಗಳಲ್ಲಿ ಕಾಂಗ್ರೆಸ್ ಮತ್ತು ವಿಪಕ್ಷಗಳು ಗೆದ್ದಿಲ್ಲವೇ? ಎಂದು ಪ್ರಶ್ನಿಸಿದ ಜೋಶಿ, ಕಾಂಗ್ರೆಸ್‌ನವರಿಗೆ ಪ್ರಜಾಪ್ರಭುತ್ವ, ಚುನಾವಣಾ ಆಯೋಗ, ನ್ಯಾಯಾಂಗ ಹೀಗೆ ಸಾಂವಿಧಾನಿಕವಾಗಿ ಇರುವ ಯಾವುದರ ಮೇಲೂ ನಂಬಿಕೆಯೇ ಇಲ್ಲ. ಅನುಕೂಲ ಸಿಂಧುಗಳಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇನ್ನೂ ಕಾಂಗ್ರೆಸ್ ಹಿಂದೂ ವಿರೋಧಿ ಪಕ್ಷ. ಹಾಗಾಗಿ ಪ್ರಧಾನಿ ಮೋದಿ ಸಿಜೆ ಅವರ ಮನೆಯಲ್ಲಿ ಗಣಪತಿ ಪೂಜೆ ಮಾಡಿದ್ದಕ್ಕೆ ವಿರೋಧ ಮಾಡುತ್ತಿದೆ ಎಂದು ಟೀಕಿಸಿದರು. ಹಿಂದೆ ಪ್ರಧಾನಿ ಆಗಿದ್ದ ಮನಮೋಹನ್ ಸಿಂಗ್ ಅವರು ಸಿಜೆಯವರ ಇಫ್ತೀಯಾರ್ ಕೂಟದಲ್ಲಿ ಭಾಗವಹಿಸಿದ್ದರಲ್ಲ. ಆಗೇಕೆ ಆಕ್ಷೇಪಿಸಲಿಲ್ಲ? ಎಂದು ಪ್ರಶ್ನಿಸಿದರು. ಇಲ್ಲಿ ಪ್ರಧಾನಿ ಮೋದಿ ಅವರು ಸಿಜೆ ಮನೆಗೆ ಹೋಗಿದ್ದಕ್ಕಲ್ಲ ವಿರೋಧ. ಗಣಪತಿ ಪೂಜೆ ಮಾಡಿದ್ದಕ್ಕೆ ಅವರ ವಿರೋಧ. ಹೀಗೆ ಯಾವತ್ತೂ ಹಿಂದೂ ವಿರೋಧಿಯಾಗೆ ವರ್ತಿಸುತ್ತಿದ್ದಾರೆ ಕಾಂಗ್ರೆಸ್ ನಾಯಕರು ಎಂದು ಪ್ರಲ್ಹಾದ ಜೋಶಿ ಕಿಡಿ ಕಾರಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಂಡ್ಯ

Nagamangala Case : ನಾಗಮಂಗಲ ಗಲಭೆ; ದುಷ್ಕರ್ಮಿಗಳ ಕೃತ್ಯಕ್ಕೆ ಬೀದಿಗೆ ಬಿದ್ದ ಕುಟುಂಬಗಳು

Nagamangala Case : ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಶುರುವಾದ ಗಲಭೆಯಿಂದಾಗಿ ಕೆಲವರ ಬದುಕನ್ನೇ ಕಳೆದುಕೊಳ್ಳುವಂತೆ ಮಾಡಿದೆ.

VISTARANEWS.COM


on

By

Nagamangala case
Koo

ಮಂಡ್ಯ: ನಾಗಮಂಗಲದಲ್ಲಿ (Nagamangala Case) ನಡೆದಿದ್ದ ಕೋಮು ದಳ್ಳುರಿ ಬಾರಿ ಚರ್ಚೆಗೆ ಗ್ರಾಸವಾಗಿದೆ. ರಾಜಕೀಯ ನಾಯಕರ ಕೆಸರೆರಚಾಟಕ್ಕೆ ಕಾರಣವಾಗಿರುವ ಈ ಗಲಭೆಯಿಂದಾಗಿ ಯಾರಿಗೆ ಅನುಕೂಲ ಆಗಿದೆಯೊ ಬಿಟ್ಟಿದೆಯೊ ಆದರೆ ಗಲಭೆ ಮಾತ್ರ ಕೆಲವರ ಬದುಕನ್ನೇ ಕಳೆದುಕೊಳ್ಳುವಂತೆ ಮಾಡಿದೆ.

ಶಾಂತಿಯ ತೋಟವಾಗಿದ್ದ ಮಂಡ್ಯ ಜಿಲ್ಲೆಯಲ್ಲಿ ಇದೇ ಪ್ರಥಮ ಬಾರಿಗೆ ಎನ್ನುವಂತೆ ಕೋಮು ದಳ್ಳುರಿ ಎಂಬುದು ದೊಡ್ಡದಾಗಿ ಸದ್ದು ಮಾಡಿದೆ. ರಾಜ್ಯದ ಘಟಾನುಗಟಿಗಳು, ರಾಜಕೀಯ ನಾಯಕರು ಇಲ್ಲಿಗೆ ಬಂದು ತಮಗೆ ಅನ್ನಿಸಿದ್ದನ್ನು ಹೇಳಿ ಹೊರಟಿದ್ದಾರೆ. ಆದರೆ ಕೆಲವು ಕುಟುಂಬಗಳು ಮಾತ್ರ ತಮ್ಮ ಬದುಕಿನ ಜೀವನೋಪಾಯಕ್ಕೆ ಆಧಾರವಾಗಿದ್ದ ಅಂಗಡಿಯನ್ನೇ ಕಳೆದುಕೊಂಡು ಬೀದಿಗೆ ಬಂದಿವೆ. ಇದ್ದದ್ದನ್ನು ಕಳೆದುಕೊಂಡಿರುವ ನಾವು ಮುಂದೇನು ಮಾಡಬೇಕು ಎಂದು ಕಣ್ಣೀರು ಹಾಕುತ್ತಿದ್ದಾರೆ.

ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯ ಎದುರಿನಲ್ಲೇ ಪಾತ್ರೆ ವ್ಯಾಪಾರಿಯೊಬ್ಬರು ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದರು. ಗಲಭೆ ಆರಂಭವಾಗುತ್ತಿದ್ದಂತೆ ಗಲಭೆಕೋರರು ಸ್ಟವ್ ಮತ್ತು ಪಾತ್ರೆ ಅಂಗಡಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಅಂಗಡಿಯಲ್ಲಿನ ಒಂದೇ ಒಂದು ಪಾತ್ರೆಯೂ ಉಳಿಯದಂತೆ ಬೆಂಕಿಗೆ ಆಹುತಿ ಆಗಿರುವುದು ಗಲಭೆಯ ತೀವ್ರತೆಗೆ ಸಾಕ್ಷಿಯಾಗಿದೆ. ಇನ್ನು ಗೌರಿ-ಗಣೇಶ ಹಬ್ಬ ಇದೆ ವ್ಯಾಪಾರ ಚೆನ್ನಾಗಿ ನಡೆಯಲಿದೆ ಎಂಬ ಕಾರಣಕ್ಕೆ ಬಳೆ ಮತ್ತು ಮಹಿಳೆಯರ ಅಲಂಕಾರಿಕ ವಸ್ತುಗಳನ್ನಿಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದ ಕುಟುಂಬವು ಬೀದಿಗೆ ಬಂದಿದೆ. ಯಾಕಂದ್ರೆ ದುಷ್ಕರ್ಮಿಗಳು ಬಳೆ ಅಂಗಡಿಯನ್ನೂ ಸುಟ್ಟುಹಾಕಿದ್ದಾರೆ. ಈ ಸಂಬಂಧ ಮಾತನಾಡಿದ ಅಂಗಡಿಯ ಮಾಲೀಕರು ತಮ್ಮ ಬದುಕಿಗೆ ಆಸೆಯಾಗಿದ್ದ ಅಂಗಡಿಯ ದುಸ್ಥಿತಿಯನ್ನ ಕಂಡು ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: Nagamangala Case: ನಾಗಮಂಗಲ ಗಲಭೆಯು ಕಾಂಗ್ರೆಸ್ ಪ್ರಾಯೋಜಿತ ಕಾರ್ಯಕ್ರಮವಷ್ಟೇ; ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಲು ಸಂಚು- ಎಚ್‌ಡಿ ಕುಮಾರಸ್ವಾಮಿ

ಬಳೆ ಮತ್ತು ಪಾತ್ರೆ ಅಂಗಡಿಗಳು ಮಾತ್ರವಲ್ಲ ಟೈಲರ್ ಸೇರಿದಂತೆ ಹಲವು ರೀತಿಯಲ್ಲಿ ಸಣ್ಣ ಪುಟ್ಟ ಅಂಗಡಿಯನ್ನಿಟ್ಟುಕೊಂಡು ಬದುಕು ಸಾಗಿಸುತ್ತಿದ್ದ ಹಲವರು ಬದುಕಿನ ಬಂಡಿಯೇ ಬೆಂಕಿಯ ಜ್ವಾಲೆಯಲ್ಲಿ ಬೆಂದು ಹೋಗಿವೆ. ನಾಗಮಂಗಲದ ಮೈಸೂರು ರಸ್ತೆಯಲ್ಲಿ ಟೈಯರ್ ಮಾರಾಟದ ಅಂಗಡಿಯನ್ನಿಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದ ರಿಯಾಜ್ ಕುಟುಂಬವು ತತ್ತರಿಸಿ ಹೋಗಿದೆ. ಯಾಕಂದರೆ 20 ಲಕ್ಷ ರೂ. ಬಂಡವಾಳ ಹಾಕಿಕೊಂಡು ನಾಲ್ಕು ಜನರಿಗೆ ಕೆಲಸ ಕೊಟ್ಟಿದ್ದ ರಿಜ್ವಾನ್ ಈಗ ತಾನೇ ಇನ್ನೊಬ್ಬರ ಬಳಿ ಕೆಲಸಕ್ಕೆ ಹೋಗಬೇಕಾದ ಸಂದರ್ಭ ಎದುರಾಗಿದೆ. ಗಲಭೆ ನಡೆದಿರುವ ಜಾಗಕ್ಕೂ ತಮ್ಮ ಟಯರ್ ಅಂಗಡಿ ಇರುವ ಜಾಗಕ್ಕೂ ತುಂಬಾ ದೂರ ಇದೆ. ಆದರೂ ಗಲಭೆಯಲ್ಲಿ ಟಾರ್ಗೆಟ್ ಮಾಡಿರುವ ರೀತಿಯಲ್ಲಿ ತಮ್ಮ ಟೈಯರ್ ಅಂಗಡಿಗೆ ಬೆಂಕಿ ಬಿದ್ದು, ಎಲ್ಲವೂ ನಾಶವಾಗಿದೆ. ಬದರಿಕೊಪ್ಪಲಿನ ‌ನಿವಾಸಿಗಳು ಈ ಮಾರ್ಗವಾಗಿ ಗಣೇಶ ಮೂರ್ತಿಯ ಮೆರವಣಿಗೆಯನ್ನು ತಾರದೆ ಇದ್ದರೂ ಗಲಭೆ ಆಗಿದೆ ಎಂದರು. ಇದು ರಿಜ್ವಾನ್ ಮತ್ತು ಶಾಹಿನ್ ತಾಜ್ ಅವರ ಕುಟುಂಬಕ್ಕೆ ಸೀಮಿತವಾಗಿಲ್ಲ, ಈ ಎರಡು ಕುಟುಂಬಗಳಂತೆ ಇನ್ನೂ ಹಲವು ಕುಟುಂಬಗಳು ಬದುಕಿನ‌ ಆಸರೆಯನ್ನೇ ಕಳೆದುಕೊಂಡಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕೋರ್ಟ್

CM Siddaramaiah : ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್;​ ವಾದ-ಪ್ರತಿವಾದ ಆಲಿಸಿ ತೀರ್ಪು ಕಾಯ್ದಿಸಿರಿದ ಹೈಕೋರ್ಟ್, ಮಧ್ಯಂತರ ತಡೆ ಮುಂದುವರಿಕೆ

CM Siddaramaiah : ರಾಜ್ಯಪಾಲರ ಪ್ರಾಸಿಕ್ಯೂಷನ್‌ ತಡೆಯಾಜ್ಞೆ ಕೋರಿ ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆಯ ಸುದೀರ್ಘ ವಾದ -ಪ್ರತಿವಾದ ಆಲಿಸಿದ ಹೈ ಕೋರ್ಟ್‌ ತೀರ್ಪು ಕಾಯ್ದಿಸಿರಿದೆ. ಅಂತಿಮ ತೀರ್ಪು ಬರುವವರೆಗೂ ಮಧ್ಯಂತರ ಆದೇಶ ಮುಂದುವರಿಸಿ ಎಂದು ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

VISTARANEWS.COM


on

By

Prosecution against Siddaramaiah Hc reserves verdict after hearing arguments
Koo

ಬೆಂಗಳೂರು:ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸಲ್ಲಿಸಿದ್ದ ಅರ್ಜಿ ವಿಚಾರಣೆಯ ಸುದೀರ್ಘ ವಾದ -ಪ್ರತಿವಾದ ಆಲಿಸಿ ಹೈಕೋರ್ಟ್‌ ತೀರ್ಪು ಕಾಯ್ದಿಸಿರಿದೆ. ಅಂತಿಮ ತೀರ್ಪು ಬರುವವರೆಗೂ ಮಧ್ಯಂತರ ಆದೇಶ ಮುಂದುವರಿಸಿ ಎಂದು ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಮೊದಲಿಗೆ ದೂರದಾರರ ವಾದ ಆಲಿಸಿ ಬಳಿಕ ಅರ್ಜಿದಾರರ ಪ್ರತಿವಾದ ಆಲಿಸಿ ಗುರುವಾರ ಬೆಳಗ್ಗೆ ವಾದ-ವಿವಾದ ಆಲಿಸಿದ್ದ ಏಕಸದಸ್ಯ ಪೀಠವು ಮಧ್ಯಾಹ್ನಕ್ಕೆ ವಿಚಾರಣೆಯನ್ನು ಮುಂದೂಡಿತ್ತು. ಮಧ್ಯಾಹ್ನದ ನಂತರ ಶುರುವಾದ ವಿಚಾರಣೆಯಲ್ಲಿ ಸಿಎಂ ಪರ ವಕೀಲ ಅಭಿಷೇಕ್ ಮನುಸಿಂಘ್ವಿ ವಾದ ಆರಂಭಿಸಿದರು. ಅಭಿಷೇಕ್‌ ಅವರು ಸುಭಾಷ್ ದೇಸಾಯಿ ಪ್ರಕರಣ ತೀರ್ಪು ಉಲ್ಲೇಖಿಸುವಾಗ ಮಧ್ಯಪ್ರವೇಶಿಸಿದ ನ್ಯಾಯಾಧೀಶರು ಇದೆಲ್ಲವೂ ಆರ್ಟಿಕಲ್ 356 ಸಂಬಂಧ ಇರುವ ತೀರ್ಪುಗಳು ಎಂದರು.

ರಾಜ್ಯಪಾಲರು ಅತಿ ವಿರಳ ಸಂದರ್ಭದಲ್ಲಿ ಮಾತ್ರ ವಿವೇಚನಾಧಿಕಾರ ಬಳಸಬೇಕು. ರಾಜ್ಯಪಾಲರು ಜನರಿಂದ ಆಯ್ಕೆಯಾಗಿಲ್ಲ, ನೇಮಕಗೊಂಡಿದ್ದಾರೆ. ಹೀಗಾಗಿ ರಾಜ್ಯಪಾಲರಿಗೆ ಹೆಚ್ಚಿನ ಉತ್ತರದಾಯಿತ್ವ ಇದೆ. ರಾಷ್ಟ್ರಪತಿ ಆಳ್ವಿಕೆಗೆ ಸಂಬಂಧಿಸಿದ ತೀರ್ಪು ಉಲ್ಲೇಖಿಸಿದರು. 17A ಆದೇಶ ಮರುಪರಿಶೀಲನೆಗೆ ಒಳಪಡಿಸಬಹುದು. ಇಲ್ಲಿ ಸರಿಯಾದ ರಕ್ಷಣೆ ನೀಡದೇ ಇದ್ದರೆ, ಜನರಿಂದ ಆಯ್ಕೆಯಾದ ಸರ್ಕಾರಕ್ಕೆ ಹಾನಿಯಾಗುವ ಸಾಧ್ಯತೆ ಇರುತ್ತೆ ಎಂದು ಅಭಿಷೇಕ್‌ ಮನುಸಿಂಘ್ವಿ ವಾದಿಸಿದರು.

ರಾಷ್ಟ್ರಪತಿ ಆಳ್ವಿಕೆಗಿಂತ ಇದು ಹೆಚ್ಚು ರಾಜಕೀಯ ಪ್ರೇರಿತ

ಎಂ.ಪಿ.ಪೋಲೀಸ್ ಎಸ್ಟಾಬ್ಲಿಷ್ಮೆಂಟ್ ಕೇಸ್ ಉಲ್ಳೇಖಿಸಿ ವಾದ ಮುಂದುವರಿಸಿದ ಅಭಿಷೇಕ್‌ ಮನುಸಿಂಘ್ವಿ, ಸರಿಯಾದ ಅಂಶಗಳು ಇದ್ದರೂ ರಾಜ್ಯಪಾಲರು ಅಸಂಬಂಧ ಆದೇಶ ನೀಡಿದ್ದಾರೆ ಎಂದರು. ರಾಷ್ಟ್ರಪತಿ ಆಳ್ವಿಕೆ ಹೇರಿದ ಪ್ರಕರಣಗಳು 17A ಕೇಸ್‌ಗಿಂತ ಗಂಭೀರವಲ್ಲವೇ? ಆರ್ಟಿಕಲ್ 356 ತೀರ್ಪುಗಳನ್ನು ಸೆ. 17A ಕೇಸ್‌ಗೆ ಉಲ್ಲೇಖಿಸುವುದು ಸೂಕ್ತವೇ ಎಂದು ಸಿಎಂ ಪರ ವಕೀಲ ಅಭಿಷೇಕ್‌ ಮನುಸಿಂಘ್ವಿಗೆ ನ್ಯಾಯಾಧೀಶರು ಪ್ರಶ್ನಿಸಿದರು.

ರಾಜ್ಯಪಾಲರು 23 ವರ್ಷದ ಹಳೆಯ ಪ್ರಕರಣದ ತನಿಖೆಗೆ ಅನುಮತಿ ನೀಡಿದ್ದಾರೆ. ರಾಷ್ಟ್ರಪತಿ ಆಳ್ವಿಕೆಗಿಂತ ಇದು ಹೆಚ್ಚು ರಾಜಕೀಯ ಪ್ರೇರಿತವಾಗಿದೆ. ಸೆಕ್ಷನ್ 17ಎ ಅಡಿ ಅನುಮತಿ ನೀಡುವಾಗ ಸಚಿವ ಸಂಪುಟದ ಶಿಫಾರಸು ಪಾಲಿಸಬೇಕು. ಪಾಲಿಸದಿದ್ದರೆ ಅದಕ್ಕೆ ಸೂಕ್ತ ಕಾರಣ ನೀಡುವ ಹೊಣೆ ರಾಜ್ಯಪಾಲರ ಮೇಲಿದೆ ಎಂದರು. ಆಗ ಮತ್ತೆ ಮಧ್ಯಪ್ರವೇಶಿಸಿದ ನ್ಯಾಯಾಧೀಶರು, ರಾಜ್ಯಪಾಲರು ಸಚಿವ ಸಂಪುಟದ ಶಿಫಾರಸು ಪಾಲಿಸಲೇಬೇಕೆಂದಿಲ್ಲ. ಆದರೆ ಭಿನ್ನ ನಿಲುವಿಗೆ ಕಾರಣ ನೀಡಬೇಕೆಂಬುದು ನಿಮ್ಮ ವಾದವೇ ಎಂದು ಕೇಳಿದರು. ಸಚಿವ ಸಂಪುಟದ ನಿರ್ಧಾರವನ್ನು ಸಾರಾಸಗಟಾಗಿ ತಳ್ಳಿಹಾಕುವಂತಿಲ್ಲ. ರಾಜ್ಯಪಾಲರು ಸಚಿವ ಸಂಪುಟದ ಶಿಫಾರಸ್ಸು ತಪ್ಪು ಎಂದು ಹೇಳಿಲ್ಲ. ಹೀಗಾಗಿ ಕಾರಣವೇ ಹೇಳದೆ ಸಚಿವ ಸಂಪುಟದ ಕ್ರಮ ತಾರತಮ್ಯಪೂರಿತವೆನ್ನಲಾಗದು. ರಾಜ್ಯಪಾಲರು ಮಧ್ಯಪ್ರದೇಶ ಪೊಲೀಸ್‌ ಸ್ಥಾಪನಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತೀರ್ಪನ್ನು ತಪ್ಪಾಗಿ ಅರ್ಥೈಸಿದ್ದಾರೆ. ಆದರೆ ನಮ್ಮ ಕೇಸ್‌ನಲ್ಲಿ ಇಡೀ ತೀರ್ಪು ಸಿದ್ದರಾಮಯ್ಯ ಪರವಾಗಿದೆ ಎಂದು ಸಿಂಘ್ವಿ ವಾದಿಸಿದರು.

ಯಾವುದೇ ಒಂದೇ ಒಂದು ರೀಸನ್ ನೀಡದೆ ಅನುಮತಿ ನೀಡಿದ್ದಾರೆ. ಸಚಿವ ಸಂಪುಟದ ಶಿಫಾರಸ್ಸಿನಲ್ಲಿ ಇಂತಹ ತಪ್ಪಿದೆ ಎಂದು ರಾಜ್ಯಪಾಲರು ಹೇಳಿಲ್ಲ. ವಿವೇಚನಾಧಿಕಾರವನ್ನು ರಾಜ್ಯಪಾಲರು ಬಾಹಿರವಾಗಿ ಬಳಸಿದ್ದಾರೆ. ಎಂ.ಪಿ. ಪೊಲೀಸ್ ಎಸ್ಟಾಬ್ಲಿಷ್ ಮೆಂಟ್ ಕೇಸನ್ನು ರಾಜ್ಯಪಾಲರು ತಪ್ಪಾಗಿ ಬಳಸಿದ್ದಾರೆ. ಪೂರ್ವಾನುಮತಿಯನ್ನು ಯಾವ ಕಾರಣದಿಂದ ನೀಡಬೇಕು ಅನ್ನೋದು ಮುಖ್ಯ. ಹೀಗಾಗಿ ರಾಜ್ಯಪಾಲರ ಆದೇಶವನ್ನು ಕೋರ್ಟ್ ಮರುಪರಿಶೀಲಿಸಬೇಕಿದೆ. ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ ರಾಜ್ಯಪಾಲರು ನಿರ್ಧಾರ ಕೈಗೊಳ್ಳಬೇಕು. 1000 ಪುಟಗಳ ದಾಖಲೆ ಪರಿಶೀಲಿಸಿ 5 ಪುಟಗಳಲ್ಲಿ ಆದೇಶ ಹೇಳಲಾಗದು. ರಾಜ್ಯಪಾಲರ ಆದೇಶ ಓದಿದರೆ ಎಲ್ಲವೂ ಅರ್ಥವಾಗುವಂತಿರಬೇಕು. ರಾಜ್ಯಪಾಲರ ಆದೇಶದಲ್ಲಿ ಅನುಮತಿಗೆ ನೀಡುವ ಕಾರಣ ಶೂನ್ಯವಾಗಿದೆ ಎಂದು ಸಿಎಂ ಪರ ವಕೀಲ ಅಭಿಷೇಕ್‌ ಮನುಸಿಂಘ್ವಿ ವಾದಿಸಿದರು.

ಪ್ರಾಸಿಕ್ಯುಷನ್ ಅನುಮತಿಯನ್ನು ಏಕೆ ಕೊಡಲಾಗಿದೆ ಎಂಬ ಅಂಶವೇ ರಾಜ್ಯಪಾಲರ ಆದೇಶದಲ್ಲಿ ಇಲ್ಲ. ಸಿದ್ದರಾಮಯ್ಯ ಈ ಹಗರಣದಲ್ಲಿ ಹೇಗೆ ಭಾಗಿಯಾಗಿದ್ದಾರೆ? ಮೂಡಾ ಹಗರಣದ ಬಗ್ಗೆ ವರದಿ ನೀಡಿ ಸಿಎಸ್‌ಗೆ ರಾಜ್ಯಪಾಲರು ಕೇಳಿದ್ರೆ, ಸಿಎಸ್ ವರದಿ ನೀಡಿದ್ದು ಅದರಲ್ಲಿ ಸಿಎಂ ಪಾತ್ರ ಶೂನ್ಯವಾಗಿದೆ. ರಾಜ್ಯಪಾಲರ ಆದೇಶದಲ್ಲಿಯೂ ಅವರು ಪರಿಶೀಲಿಸಿದ ಫೈಲ್‌ಗಳ ಉಲ್ಲೇಖವಿಲ್ಲ. ಇಂತಹ ಟಿಪ್ಪಣಿಗಳ ಆಧಾರದ ಮೇಲೆ ನಿರ್ಧಾರ ಕೈಗೊಂಡಿದ್ದೇನೆಂದು ಹೇಳಿಲ್ಲ. ಕಂಪಾರಿಟೀವ್ ಚಾರ್ಟ್ ಬಗ್ಗೆಯೂ ರಾಜ್ಯಪಾಲರ ಆದೇಶದಲ್ಲಿ ಉಲ್ಲೇಖಿಸಿಲ್ಲ. ಸಿಎಂ ಸಿದ್ದರಾಮಯ್ಯ ನೀಡಿರುವ ಪ್ರತಿಕ್ರಿಯೆ ಬಗ್ಗೆಯೂ ಉಲ್ಲೇಖಿಸಿಲ್ಲ. ಮುಡಾ ಕೇಸ್‌ನಲ್ಲಿ ಸಿದ್ದರಾಮಯ್ಯ ಪಾತ್ರವೇನು ಎಂದೂ ರಾಜ್ಯಪಾಲರು ಹೇಳಿಲ್ಲ. ಪಕ್ಷಪಾತದಿಂದ ರಾಜ್ಯಪಾಲರು ಕೇವಲ 6 ಆರು ಪುಟಗಳ ಆದೇಶ ನೀಡಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆಗೆ ಸೆಕ್ಷನ್ 17A ಸೇರ್ಪಡೆಗೆ ಕಾರಣವಿದೆ ಮೊದಲಿಗೆ ಲೋಕಾಯುಕ್ತ, ಲೋಕಪಾಲರ ಅನುಮತಿಗೆ ಪ್ರಸ್ತಾಪವಿತ್ತು. ಆದರೆ ನಂತರ ಸಕ್ಷಮ ಪ್ರಾಧಿಕಾರಕ್ಕೆ ಇದರ ಹೊಣೆ ನೀಡಲಾಯಿತು. ತನಿಖಾಧಿಕಾರಿಯಿಂದ ಮಾತ್ರ 17A ಅನುಮತಿ ಕೇಳಬೇಕು. ಪರ್ಯಾಯ ಮಾಡಿ ಆದೇಶ ಮಾಡಲು ಸಾಧ್ಯವಿಲ್ಲ ಎಂದು ಸಿಂಘ್ವಿ ವಾದಿಸಿದರು.

ಖಾಸಗಿ ದೂರು ಪ್ರಕರಣ ದಾಖಲಿಸಲು 17A ಅಗತ್ಯವಿದೆ. ತನಿಖಾಧಿಕಾರಿ ಪಬ್ಲಿಕ್ ಸರ್ವೆಂಟ್ ಅನುಮತಿ ಪಡೆಯಲು ಹೇಗೆ ಸಾಧ್ಯ? 156 ಅಡಿ ಮಾತ್ರ ತನಿಖಾಧಿಕಾರಿ ಅನುಮತಿ ಕೇಳಲು ಸಾಧ್ಯ. ಖಾಸಗಿ ದೂರು ದಾಖಲಿಸಲು 17A ಅನುಮತಿ ಅಗತ್ಯ ಎಂದು ನಾನೇ ಆದೇಶ ಮಾಡಿದ್ದೇನೆ ಎಂದು ನ್ಯಾಯಾಧೀಶರು ತಿಳಿಸಿದರು. ಖಾಸಗಿ ದೂರಲ್ಲಿ ಪಬ್ಲಿಕ್ ಸರ್ವೆಂಟ್ ವಿರುದ್ಧ ತನಿಖೆ ಆರಂಭಿಸಲು 17A ಅಗತ್ಯವಿದೆ. ಹೀಗಿದ್ದಾಗ ತನಿಖಾಧಿಕಾರಿ ಅನುಮತಿ ಕೇಳುವ ಸಂದರ್ಭ ಹೇಗೆ ಎದುರಾಗುತ್ತೆ ಎಂದು ಪ್ರಶ್ನಿಸಿದರು. ಸೆಕ್ಷನ್ 17A ಅಡಿಯಲ್ಲಿ ಪೊಲೀಸ್ ಅಧಿಕಾರಿಯೇ ಅನುಮತಿ ಕೇಳಬೇಕು. ತನಿಖಾಧಿಕಾರಿಯೇ ತನಿಖೆಯ ಸಂಪೂರ್ಣ ಹಕ್ಕು ಹೊಂದಿರುತ್ತಾನೆ ಎಂದು ಸಿಂಘ್ವಿ ವಾದಿಸಿದಾಗ, ಪೊಲೀಸ್ ಅಧಿಕಾರಿ ದೂರು ಸ್ವೀಕರಿಸಲಿಲ್ಲವೆಂದಾದರೆ ಏನು ಮಾಡಬೇಕು? ಖಾಸಗಿ ದೂರುದಾರರಿಗೆ ಇರುವ ಮಾರ್ಗ ಯಾವುದು ಎಂದು ನ್ಯಾಯಾಧೀಶರು ಮರು ಪ್ರಶ್ನಿಸಿದರು. ನ್ಯಾಯಾಧೀಶರ ಪ್ರಶ್ನೆಗೆ ಉತ್ತರ ನೀಡಲು ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಗಲಿಬಿಲಿಗೊಂಡರು.

ಜುಲೈ 18ರಂದು ಟಿ.ಜೆ.ಅಬ್ರಹಾಂ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಜುಲೈ 26ಕ್ಕೆ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಎಸ್‌ಪಿಗೆ ದೂರು ನೀಡಬೇಕಿತ್ತು ಅದನ್ನು ಮಾಡಿಲ್ಲ. ಖಾಸಗಿ ದೂರುದಾರರಿಗೆ ಅವಕಾಶ ನೀಡಿದರೆ ಎಲ್ಲದಕ್ಕೂ ದೂರು ದಾಖಲಿಸುತ್ತಾರೆ. ಅದಕ್ಕೆಂದೇ 17A ರಕ್ಷಣೆ ಇದೆಯಲ್ಲಾ. ಸಕ್ಷಮ ಪ್ರಾಧಿಕಾರದ ಅನುಮತಿ ಬೇಕೆಂದಿರುವುದು ಇದಕ್ಕಾಗಿಯೇ ಎಂದು ನ್ಯಾಯಾಧೀಶರು ಉತ್ತರಿಸಿದರು.

ರಾಜ್ಯಪಾಲರು ಪಕ್ಷಾತೀತರಾಗಿರಬೇಕೆಂಬ ಮಾತುಗಳು ಕೇಳಲು ಮಾತ್ರ ಇದೆ. ಹಲವು ರಾಜ್ಯಪಾಲರು ರಾಜೀನಾಮೆ ನೀಡಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಖಾಸಗಿ ದೂರುದಾರರು ಸಕ್ಷಮ ಪ್ರಾಧಿಕಾರಕ್ಕೆ ದೂರು ಸಲ್ಲಿಸಲು ಅವಕಾಶ ನೀಡಬಾರದು. ವಿಪಕ್ಷಗಳ ಸರ್ಕಾರಗಳ ವಿರುದ್ಧ ದೂರುಗಳು ದಾಖಲಿಸಲು ಬಳಕೆಯಾಗಬಹುದು ಎಂದು ಸಿಂಘ್ವಿ ವಾದಿಸಿದರು. ಆಗ ಮತ್ತೆ ಮಧ್ಯಪ್ರವೇಶಿಸಿದ ನ್ಯಾಯಾಧೀಶರು ಪೊಲೀಸ್ ಅಧಿಕಾರಿ ದೂರು ದಾಖಲಿಸದಿದ್ದರೆ ಏನು ಮಾಡಬೇಕು ಎಂದಾಗ ಸಿಎಂ ಪರ ವಕೀಲ ಸಿಂಘ್ವಿ ಆಗ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲು ಅವಕಾಶವಿದೆಯಲ್ಲಾ. ತನಿಖೆಗೆ ನಿರ್ದೇಶಿಸುವಂತೆ ಹೈಕೋರ್ಟ್ ಅನ್ನು ಕೋರಬಹುದು ಎಂದರು.

ಅದೂ ಸಾಧ್ಯವಿದೆ ಎಂದರೆ ಖಾಸಗಿ ದೂರಿಗೂ ಅವಕಾಶವಿದೆಯಲ್ಲಾ ಎಂದು ನ್ಯಾಯಾಧೀಶರು ಪ್ರಶ್ನಿಸಿದರು. ಆಗ ದೂರುದಾರರು ರಾಜ್ಯಪಾಲರ ಮನೆ ಮುಂದೆ ನಿಲ್ಲುತ್ತಾರೆ. ರಾಜ್ಯಪಾಲರು ಎಲ್ಲರ ವಿರುದ್ಧದ ದೂರುಗಳಿಗೆ ಸಕ್ಷಮ ಪ್ರಾಧಿಕಾರಿಯಲ್ಲ. ದೂರುದಾರರು ಸಕ್ಷಮ ಪ್ರಾಧಿಕಾರದಿಂದ ಅನುಮತಿ ಕೋರಬಹುದು ಎಂದು ಸಿಂಘ್ವಿ ವಾದಿಸಿದರು. ಒಂದು ದೂರಿನಲ್ಲಿ ಮಾತ್ರ ಶೋಕಾಸ್ ನೋಟಿಸ್ ನೀಡಲಾಗಿದೆ.

ಉಳಿದ ಎರಡು ದೂರಿನಲ್ಲಿ ಶೋಕಾಸ್ ನೋಟಿಸ್ ನೀಡಿಲ್ಲ. ಇಲ್ಲಿ ನೈಸರ್ಗಿಕ ನ್ಯಾಯ ಉಲ್ಲಂಘನೆ ಆಗಿದೆ ಎಂದು ಅಭಿಷೇಕ್‌ ಮನುಸಿಂಘ್ವಿ ವಾದಿಸಿದರು. ರಾಜ್ಯಪಾಲರು ಉಳಿದ ಎರಡು ದೂರುಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ ಎಂದು ನ್ಯಾಯಾಧೀಶರು ಕೇಳಿದಾಗ, ದೂರುಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ಆದರೆ ಶೋಕಾಸ್ ನೋಟಿಸ್ ನೀಡಿಲ್ಲ ಎಂದು ಸಿಂಘ್ವಿ ಉತ್ತರಿಸಿದರು. ಯಾರ ದೂರಿಗೂ ಶೋಕಾಸ್ ನೋಟಿಸ್ ನೀಡಿಲ್ಲದಿದ್ದರೆ ಅಗತ್ಯವಿಲ್ಲವೆನ್ನಬಹುದಿತ್ತು. ಒಬ್ಬರ ದೂರಿಗೆ ನೀಡಿ, ಇಬ್ಬರ ದೂರಿಗೆ ಶೋಕಾಸ್ ನೋಟಿಸ್ ನೀಡಿಲ್ಲ. ಕನ್ನಡದಲ್ಲಿ ನೂರಕ್ಕೂ ಅಧಿಕ ಪುಟಗಳ ದಾಖಲೆಗಳನ್ನು ಒಂದೇ ಬಾರಿ ಪರಿಶೀಲಿಸಿ ಶೋಕಾಸ್ ನೊಟೀಸ್ ನೀಡುತ್ತಾರೆ. ಆದರೆ ಮತ್ತೊಂದು ಪ್ರಕರಣದಲ್ಲಿ ಟ್ರಾನ್ಸಲೇಷನ್ ಕೇಳಿ ಕಡತವನ್ನು ವಾಪಸ್ಸು ಕಳಿಸಿದ್ದಾರೆ. ಇದು ಹೇಗೆ ಸಾಧ್ಯವಾಗುತ್ತೆ? ಎಂದು ಸಿಂಘ್ವಿ ವಾದಿಸಿದರು. ರಾಜ್ಯಪಾಲರು ಸಿಎಂ ಬಿಟ್ಟು ಉಳಿದವರಿಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿಲ್ಲ. ಶಶಿಕಲಾ ಜೊಲ್ಲೆ ಕೇಸ್‌ನಲ್ಲಿ ತಿರಸ್ಕರಿಸಲಾಗಿದೆ. ಮುರುಗೇಶ್ ನಿರಾಣಿ ಕೇಸ್‌ನಲ್ಲಿ ಸ್ಪಷ್ಟನೆ ಕೇಳಿ ಹಿಂತಿರುಗಿಸಲಾಗಿದೆ. ಎಚ್‌ಡಿ ಕುಮಾರಸ್ವಾಮಿ ಕೇಸಿನಲ್ಲೂ ಹಿಂತಿರುಗಿಸಲಾಗಿದೆ.

ಈ ಪ್ರಕರಣವೆಲ್ಲವೂ ಬಿಜೆಪಿಯ ಆಡಳಿತದಲ್ಲಿ ನಡೆದಿದೆ

ಕೆಸರೆ ಗ್ರಾಮದ ಜಮೀನು 1992 ರಲ್ಲಿ ಮುಡಾಗೆ ಭೂಮಿ ಸ್ವಾಧೀನವಾಗಿತ್ತು. ದೇವರಾಜು ಎಂಬುವರು ಜಮೀನಿನ ಮಾಲೀಕರಾಗಿದ್ದರು ಎಂದು ಸಿಂಘ್ವಿ ಹೇಳಿದಾಗ, ದೇವರಾಜು ಜಮೀನಿನ ಮಾಲೀಕರು ಹೇಗಾದರು ಎಂದು ನ್ಯಾಯಾಧೀಶರು ಪ್ರಶ್ನಿಸಿದರು. ಆಗ 10.04.1993 ರಲ್ಲಿ ದೇವರಾಜುವಿನ ಹೆಸರಲ್ಲಿ ಫವತಿ ಖಾತೆಯಾಗಿದೆ. ನಂತರ ಜಮೀನು ಕಾನೂನಿನ ಪ್ರಕ್ರಿಯೆಯಂತೆ ಡಿನೋಟಿಫೈ ಆಗಿದೆ.

23 ವರ್ಷಗಳ ಹಗರಣದಂತೆ ದೊಡ್ಡ ದನಿಯಲ್ಲಿ ಬಿಂಬಿಸಲಾಗಿದೆ. ಇದು ಸಿಎಂ ವಿರುದ್ಧದ ಭ್ರಷ್ಟಾಚಾರ ಪ್ರಕರಣವಲ್ಲ. ಪೇಪರ್ ಮೇಲೆ ಮಾತ್ರ ಮುಡಾ ನಿವೇಶನ ಹಂಚಿಕೆಯಾಗಿದೆ. 2004 ರಲ್ಲಿ ಭಾಮೈದನಿಗೆ ಕ್ರಯ ಪತ್ರವಾಗಿದೆ. 2005 ರಲ್ಲಿ ಭೂಪರಿವರ್ತನೆ ಮಾಡಲಾಗಿದೆ. 2010 ರಲ್ಲಿ ಸಿದ್ದರಾಮಯ್ಯ ಪತ್ನಿಗೆ ದಾನಪತ್ರವಾಗಿದೆ.

ಅಕ್ರಮವಾಗಿದ್ದರೆ 5 ವರ್ಷಗಳ ನಂತರ ಯಾರಾದರೂ ದಾನಪತ್ರ ಮಾಡಿಸಿಕೊಳ್ಳುತ್ತಾರಾ? ಸಿಎಂ ಪತ್ನಿಗೆ ಮಾತ್ರ ಈ ರೀತಿಯ ಬದಲಿ ನಿವೇಶನ ಹಂಚಿಕೆಯಾಗಿಲ್ಲ. ಮುಡಾ ಸಭೆಯಲ್ಲಿ ಸಿಎಂ ಪುತ್ರ ಇದ್ದರೂ ಮಾತನಾಡಿಲ್ಲ. ದೂರು ಇರುವುದು ಸಿಎಂ ಸಿದ್ದರಾಮಯ್ಯ ವಿರುದ್ಧ ಎಂದು ಅಭಿಷೇಕ್‌ ಸಿಂಘ್ವಿ ವಾದಿಸಿದರು. ಮೂಡಾ ಸ್ವಾಧೀನ ಪಡಿಸಿಕೊಂಡ ಭೂಮಿಯಲ್ಲಿ 50 :50 ಅನುಪಾತದಲ್ಲಿ ನಿವೇಶನ ಹಂಚಿಕೆ ಬಗ್ಗೆ ನಿರ್ಧಾರವಾಗಿದೆ. ಇಡೀ ಪ್ರಕರಣ ಬಿಜೆಪಿಯ ಆಡಳಿತದಲ್ಲಿ ನಡೆದಿದೆ ಎಂದು ಹೇಳಿ ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ ಮನುಸಿಂಘ್ವಿ ವಾದ ಮುಕ್ತಾಯಗೊಳಿಸಿದರು.

ಟಿ.ಜೆ.ಅಬ್ರಹಾಂರನ್ನು ಪ್ರೀತಿಯಿಂದ ಕರೆದು ಮಾತಾಡಿ ಆದೇಶ ಮಾಡಲಾಗಿದೆ- ರವಿವರ್ಮ ಕುಮಾರ್

ಸಿದ್ದರಾಮಯ್ಯ ಪರ ಹಿರಿಯ ವಕೀಲ ಫ್ರೋ ರವಿವರ್ಮ ಕುಮಾರ್ ವಾದ ಮಂಡನೆ ಶುರು ಮಾಡಿದರು. ಆಗಸ್ಟ್‌ 14ರಂದು ಅಬ್ರಹಾಂ ಅವರಿಂದ ಹೆಚ್ಚುವರಿ ಮಾಹಿತಿ ಪಡೆಯಲಾಗಿದೆ. ನಂತರ ಸ್ಯಾಂಕ್ಷನ್ ನೀಡಿ ಆದೇಶ ಮಾಡಲಾಗಿದೆ. 05/07 ರಂದು ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ರಾಜ್ಯಪಾಲರು ಟಿ.ಜೆ.ಅಬ್ರಹಾಂ ಅವರನ್ನು ಪ್ರೀತಿಯಿಂದ ಕರೆದು ಮಾತಾಡಿ ಆದೇಶ ಮಾಡಲಾಗಿದೆ. ಸ್ನೇಹಮಯಿ ಕೃಷ್ಣ ಅವರಿಂದ ಯಾವುದೇ ಸಮಜಾಯಿಸಿ ಕೇಳಿಲ್ಲ, ಪ್ರದೀಪ್ ಕುಮಾರ್ ಅವರಿಂದಲೂ ಯಾವುದೇ ಮಾಹಿತಿ ಕೇಳಿಲ್ಲ. ಕಾನೂನು ಸಲಹೆ ಪಡೆದು ಸಿದ್ದರಾಮಯ್ಯ ಅವರಿಂದ ಶೋಕಾಸ್ ನೋಟಿಸ್‌ಗೆ ಉತ್ತರ ನೀಡಿದ್ದಾರೆ. ಈ ಮಧ್ಯೆ ರಾಜ್ಯಪಾಲರು ವಿವೇಚನೆ ಬಳಸಿ ಆದೇಶ ಮಾಡಲಾಗಿದೆ ಎಂದು ಬರೆದಿದ್ದಾರೆ.

ಒಬ್ಬ ಭಕ್ತ ಕೈಲಾಸಕ್ಕೆ ಹೋಗಬೇಕೋ ಅಥವಾ ವೈಕುಂಠಕ್ಕೆ ಹೋಗಬೇಕಾ ಅಂತ ಯೋಚನೆ ಮಾಡಿದ್ದ. ಈ ವೇಳೆ ಲೋಲಾಕ್ ಧರಿಸಿದ್ದ. ಲೋಲಾಕ್ ಸ್ಪರ್ಷಿಸುತ್ತಿದ್ದಂತೆ ವಿಷ್ಣು ನೆನಪಾಗುತ್ತಿದ್ದ. ಅಂತಿಮವಾಗಿ ಕೈಲಾಸಕ್ಕೆ ಹೋಗದೇ ಆತ ವೈಕುಂಠಕ್ಕೆ ಹೋದ ಎಂದು ಪುರಾಣದ ಕಥೆಯನ್ನು ಉಲ್ಲೇಖಿಸಿ ರಾಜ್ಯಪಾಲರು ಸಂಪುಟದ ವರದಿಯ ಪೀಡನೆಗೆ ಒಳಗಾಗಿದ್ದಾರೆ.

ವಿಚಾರಣೆ ಆರಂಭವಾದ ಬಳಿಕ ರಾಜ್ಯಪಾಲರ ಕಡತವನ್ನು ಸಲ್ಲಿಸಲಾಗಿದೆ. ಅಕ್ರಮ ಮತ್ತು ಅಧಿಕಾರ ದುರುಪಯೋಗವಾಗಿರುವ ಸಾಧ್ಯತೆ ಇದೆ ಎಂದು ರಾಜ್ಯಪಾಲರ ಉಲ್ಲೇಖವಿದೆ. ಸಹಿ ಹಾಕಿದ ಬಳಿಕ ಶೋಕಾಸ್ ನೋಟಿಸ್ ನೀಡಿದ್ದಾರೆ. 14.08.2024 ರಂದು ಫೈಲ್ ಪರಿಶೀಲಿಸಿದ್ದೇನೆ, ಡಿಕ್ಟೇಷನ್ ನೀಡಿದ್ದೇನೆ ಎಂದು ಬರೆಯಲಾಗಿದೆ. ಟಿ.ಜೆ.ಅಬ್ರಹಾಂ ಜು. 26ರಂದು ನೀಡಿದ ದೂರಿನ ಮೇಲೆ ಫೈಲ್ ಸಿದ್ದಪಡಿಸಲಾಗಿದೆ. ಜು. 5 ರಂದು ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಆದರೆ ಕಡತದಲ್ಲಿ ಅದರ ಉಲ್ಲೇಖವಿಲ್ಲವೆಂದು ರವಿಕುಮಾರ್‌ ವಾದಮಂಡನೆ ಮಾಡಿದರು. ಸಚಿವ ಸಂಪುಟದ ಆದೇಶ ತಿರಸ್ಕರಿಸಿದ ನಂತರ ರಾಜ್ಯಪಾಲರು ಏನು ಮಾಡಿದ್ದಾರೆ. ಸಿಎಂ ನೀಡಿದ ಉತ್ತರಕ್ಕೂ ರಾಜ್ಯಪಾಲರು ಪ್ರತಿಕ್ರಿಯೆ ನೀಡಿಲ್ಲ. ಎರಡು ವರ್ಷನ್‌ಗಳನ್ನು ಪರಿಗಣಿಸಿ ರಾಜ್ಯಪಾಲರು ಉಲ್ಲೇಖಿಸಿದ್ದಾರೆ. 1. ಮೇಲ್ನೋಟಕ್ಕೆ ಕಾನೂನು ಬಾಹಿರ ಕೃತ್ಯ ನಡೆದಿದ್ದು ವಿವೇಚನೆ ಬಳಸಿ ಸ್ಯಾಂಕ್ಷನ್ ನೀಡಲಾಗಿದೆ. 2. ಲೀಗಲ್ ಓಪಿನಿಯನ್ ಹಾಗೂ ಕ್ಯಾಬಿನೆಟ್ ಆದೇಶ ಪರಿಶೀಲಿಸಿ ಸ್ವತಂತ್ರವಾಗಿ ನಿರ್ಧಾರ ಮಾಡಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ರಾಜ್ಯಪಾಲರ ಆದೇಶವೇ ಕಾನೂನುಬಾಹಿರ

28 ವರ್ಷಗಳ ಹಿಂದೆ ನಿಂಗ ಸಾವನ್ನಪ್ಪಿದ್ದಾನೆ. ನಿಂಗನ ಹೆಸರಿಗೆ ಜಮೀನು ಅವಾರ್ಡ್ ಆಗಿತ್ತು. ಯಾವಾಗ ಮೂಡಾ ಈ ಭೂಮಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ದೂರು ನೀಡಿಲ್ಲ ಎಂದು ರವಿವರ್ಮ ವಾದಿಸಿದಾಗ, ಮಧ್ಯಪ್ರವೇಶಿಸಿದ ನ್ಯಾಯಾಧೀಶರು, ಆದರೆ ಎಲ್ಲಾ ದಾಖಲೆಗಳಲ್ಲಿಯೂ ಈ ಜಾಗ ಮೂಡಾ ವಶದಲ್ಲಿ ಇದೆ ಎಂದು ಹೇಳುತ್ತಿವೆ ಎಂದರು. ಆದರೆ, ಈ ಜಾಗ ಮೂಡಾ ವಶದಲ್ಲಿ ಇಲ್ಲ ಅನ್ನೋದಕ್ಕೆ‌ ದಾಖಲೆಗಳು ನನ್ನ ಬಳಿ ಇವೆ ಎಂದು ರವಿವರ್ಮ ಕುಮಾರ್ ವಾದಿಸಿದರು.

ರಾಜ್ಯಪಾಲರ ಆದೇಶದಲ್ಲಿ 25 ಸೆಕ್ಷನ್‌ಗಳನ್ನು ಉಲ್ಲೇಖಿಸಲಾಗಿದೆ. ಉದಾಹರಣೆಗೆ ಫೋರ್ಜರಿ ಮತ್ತಿತರ ಸೆಕ್ಷನ್ ಉಲ್ಲೇಖಿಸಿದ್ದಾರೆ. ಆದರೆ ಸಿಎಂ ಫೋರ್ಜರಿ ಮಾಡಿದ್ದಾರಾ ಎಂಬುದಕ್ಕೆ ಉತ್ತರವಿಲ್ಲ. ಜಮೀನು ಸ್ವಾಧೀನವಾದ ಬಳಿಕ ಪರಿಹಾರದ ನೋಟಿಸ್ ವಿಳಂಬವಾಗಿ ತಲುಪಿದೆ. ಮುಡಾ ಜಮೀನನ್ನು ಭೌತಿಕವಾಗಿ ಸ್ವಾಧೀನಕ್ಕೆ ಪಡೆದಿರಲಿಲ್ಲ. ನಂತರ ಸೆ.48 ಅಡಿ ಜಮೀನನ್ನು ಡಿನೋಟಿಫಿಕೇಷನ್ ಮಾಡಲಾಗಿದೆ. ಮಹಜರ್ ಮಾಡಿ ಭೂಮಿಯನ್ನು ಸ್ವಾಧೀನಕ್ಕೆ ಪಡೆದಿರಲಿಲ್ಲ. ಆದರೂ ರಾಜ್ಯಪಾಲರು ಮುಡಾ ಸ್ವಾಧೀನದಲ್ಲಿತ್ತು ಎಂದು ಹೇಳಿದ್ದಾರೆ. ಹೀಗಾಗಿ ರಾಜ್ಯಪಾಲರ ಆದೇಶವೇ ಕಾನೂನುಬಾಹಿರವಾಗಿದೆ.

ಜುಜುಬಿ ಸೈಟ್‌ಗೆ ಅಕ್ರಮ ಮಾಡ್ತಾರಾ

ಅಂತಿಮ ಭೂಸ್ವಾಧೀನದ ನಂತರ ಜಮೀನು ಮುಡಾ ಸ್ವಾಧೀನಕ್ಕೆ ಹೋಗುತ್ತದಲ್ಲವೇ ಎಂದು ನ್ಯಾಯಾಧೀಶರು ಪ್ರಶ್ನಿಸಿದಾಗ, ಇಲ್ಲ ಪ್ರಕ್ರಿಯೆ ಪಾಲಿಸದಿರುವುದರಿಂದ ಸ್ವಾಧೀನಕ್ಕೆ ಹೋಗುವುದಿಲ್ಲ ಎಂದು ರವಿಕುಮಾರ್‌ ಉತ್ತರಿಸಿದರು. ಸ್ವಾಧೀನದಲ್ಲಿ ಇದ್ದಿದ್ದಾದರೆ ಮುಡಾ ಲೇಔಟ್ ರಚಿಸಲು ಹೇಗೆ ಬಿಟ್ಟಿರಿ? ನೀವು ಏಕೆ ಮುಡಾ ಬಡಾವಣೆ ವಿರೋಧಿಸಲಿಲ್ಲಎಂದು ನ್ಯಾಯಾಧೀಶರು ಪ್ರಶ್ನಿಸಿದರು. ಮುಡಾ ಬಡಾವಣೆ ನಕ್ಷೆಯಲ್ಲಿ ನಮ್ಮ ಜಮೀನು ಇರಲಿಲ್ಲ. ಹೀಗಾಗಿ ನಾವು ಅದನ್ನು ವಿರೋಧಿಸುವ ಅಗತ್ಯವಿರಲಿಲ್ಲ. ಇದರಲ್ಲಿ ಸಿಎಂ ಪಾತ್ರವೇನು ಎಂಬುದಕ್ಕೆ ಯಾರೂ ಉತ್ತರಿಸಿಲ್ಲ. ಜಮೀನು ಮುಡಾ ಸ್ವಾಧೀನದಲ್ಲಿತ್ತು ಎಂಬ ಭಾವನೆ ಆಧಾರದಲ್ಲಿ ರಾಜ್ಯಪಾಲರು ಆದೇಶಿಸಿದ್ದಾರೆ. ಕಳೆದ 50 ವರ್ಷದ ಇತಿಹಾಸವನ್ನು ನೀವು ನೋಡಬಹುದು. ಸಿದ್ದರಾಮಯ್ಯ ಒಬ್ಬರೇ 5 ವರ್ಷ ಸಂಪೂರ್ಣ ಅಧಿಕಾರದಲ್ಲಿದ್ದರು. ಈಗ ಮತ್ತೆ ಅವರನ್ನು ಆಯ್ಕೆ ಮಾಡಲಾಗಿದೆ. ಅವರ ಮೇಲೆ ಯಾವುದೇ ಆರೋಪವೂ ಕೇಳಿ ಬಂದಿಲ್ಲ. ಒಂದು ಜುಜುಬಿ ಸೈಟ್‌ಗೆ ಅಕ್ರಮ ಮಾಡ್ತಾರಾ ಎಂದು ರವಿವರ್ಮ ಕುಮಾರ್ ವಾದ ಮಂಡನೆ ಮಾಡಿದರು. ಆ ಸೈಟ್‌ ಬೆಲೆ 55 ಕೋಟಿ ರೂ. ಆಗಿದೆ ಎಂಬುದೇ ತಕರಾರು ಎಂದು ನ್ಯಾಯಾಧೀಶರು ತಿಳಿಸಿದರು. ಒಂದು ಸರ್ಕಾರ ಇದ್ದಾಗ ಹಲವರಿಗೆ ಸಹಕಾರ ಆಗಬಹುದು. ಅವರ ಸಂಬಂಧಿಕರಿಗೆ ಅನುಕೂಲ ಆಗಿರಬಹುದು. ಅದಕ್ಕೆ ಈ ರೀತಿ ಸ್ಯಾಂಕ್ಷನ್ ನೀಡಬಹುದೇ? ಎಂದು ರವಿವರ್ಮ ವಾದಿಸಿದಾಗ, ಅದು ಸ್ಯಾಂಕ್ಷನ್ ಅಲ್ಲ, ಅಪ್ರೂವಲ್ ಎಂದು ನ್ಯಾಯಾಧೀಶರು ತಿಳಿಸಿದರು.

ರಾಜಕೀಯ ದುರುದ್ದೇಶ

ಕೆಸರೆ ಗ್ರಾಮವೇ ಇಲ್ಲ ಎಂದು ದೂರುದಾರರು ಹೇಳಿದ್ದಾರೆ ಎಂದಾಗ 2011ರಲ್ಲಿ ಜನಗಣತಿ ಪ್ರಕಾರ ಕೆಸರೆ ಗ್ರಾಮ ಇದೆ. ಈ ಗ್ರಾಮದಲ್ಲಿ 4 ಸಾವಿರ ಎಕರೆ ಭೂಮಿ, ಸ್ಕೂಲ್ ಹಾಗೂ ಆಸ್ಪತ್ರೆ ಇದೆ. ಮೈಸೂರು ಕಾರ್ಪೊರೇಷನ್ ವ್ಯಾಪ್ತಿಯಲ್ಲಿ ಈ ಗ್ರಾಮ ಇದೆ. 60:40 ಗೆ ಅವರ ತಕರಾರಿಲ್ಲ, 50:50 ಅನುಪಾತಕ್ಕೆ ತಕರಾರಿದೆ. ಪರಿಹಾರದ ನಿವೇಶನ ಕೊಟ್ಟಿರುವುದು ಸಿದ್ದರಾಮಯ್ಯ ಅಲ್ಲ ಮುಡಾ ಪ್ರಾಧಿಕಾರ. ಜನಪ್ರಿಯ ನಾಯಕನ ವಿರುದ್ಧ ರಾಜ್ಯಪಾಲರು ಈ ರೀತಿ ಅನುಮತಿ ನೀಡಬಾರದಿತ್ತು. ರಾಜಕೀಯ ದುರುದ್ದೇಶದಿಂದ ಈ ರೀತಿ ಮಾಡಿದ್ದಾರೆ . ಅಧಿಕಾರದಲ್ಲಿದ್ದಾಗ ಸಂಬಂಧಿಕರು, ಅಧಿಕಾರಿಗಳು ಅಸೂಯೆಯಿಂದ ಏನಾದರೂ ಮಾಡಿರಬಹುದು. ಅದಕ್ಕೆಲ್ಲಾ ಸಿಎಂ ಸಿದ್ದರಾಮಯ್ಯರನ್ನು ಹೊಣೆ ಮಾಡುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಪರ ಪ್ರೊ. ರವಿವರ್ಮಕುಮಾರ್ ವಾದಮಂಡನೆ ಮುಕ್ತಾಯಗೊಳಿಸಿದರು.

ಬಳಿಕ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಆರಂಭಿಸಿದರು. ತನಿಖಾಧಿಕಾರಿಗೆ ಕಾಗ್ನಿಜೇಬಲ್ ಪ್ರಕರಣ ಅನ್ನಿಸಿದಾಗ ಮಾತ್ರ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯಬೇಕು. ಅದಕ್ಕೆ ನಾನು ಡಾ.ಅಶೋಕ್ ಪ್ರಕರಣದಲ್ಲಿ ಅನುಮತಿ ಇಲ್ಲದೆ ಪಬ್ಲಿಕ್ ಸರ್ವೆಂಟ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬಾರದು ಅಂತ ಆದೇಶ ಮಾಡಿರುವುದು ಎಂದು ಎಜಿ ವಾದ ಮುಕ್ತಾಯಗೊಳಿಸಿದರು. ಕೇಂದ್ರ ಸರ್ಕಾರದ ಎಸ್ಓಪಿ ಪ್ರಕಾರ 17A ಅಡಿ ಪೂರ್ವಾನುಮತಿಯನ್ನ ತನಿಖಾಧಿಕಾರಿ ಪಡೆಯಬೇಕು. ಈ ಹಂತದಲ್ಲಿ ಪೂರ್ವಾನುಮತಿ ನೀಡಲು ಸಾಧ್ಯವಿಲ್ಲ, ಇಟ್ಸ್ ಪ್ರಿಮೆಚುರ್ ಎಂದಾಗ ಯಾವಾಗ ಪೂರ್ವಾನುಮತಿ ನೀಡಬೇಕಿತ್ತು ಎಂದು ಜಡ್ಜ್ ಪ್ರಶ್ನಿಸಿದರು. ಲಲಿತಾ ಕುಮಾರಿ ಪ್ರಕಾರ ತನಿಖಾಧಿಕಾರಿ ಪಡೆಯಬೇಕು ಎಂದೇಳಿ ಎಜಿ ವಾದ ಮುಕ್ತಾಯಗೊಳಿಸಿದರು.

ಟಿ.ಜೆ.ಅಬ್ರಹಾಂ ಪರ ರಂಗನಾಥ್ ರೆಡ್ಡಿ ವಾದ ಆರಂಭಿಸಲು ಮುಂದಾದಾಗ ಕೇವಲ 5 ನಿಮಿಷದಲ್ಲಿ ವಾದ ಮುಗಿಸಬೇಕು. ಈಗಾಗಲೇ ಹೇಳಿದ ವಿಷಯ ಪ್ರಸ್ತಾಪಿಸಬಾರದು ಎಂದು ಜಡ್ಜ್‌ ಸೂಚನೆ ಕೊಟ್ಟರು. ಸಿಎಂ ಪರ ವಕೀಲರು ಒಂದೆಡೆ ಕೃಷಿ ಜಮೀನು ಅಂತಾರೆ. ಮತ್ತೊಂದೆಡೆ ಮುಡಾ ಜಮೀನು ಒತ್ತುವರಿ ಮಾಡಿದೆ ಎನ್ನುತ್ತಿದ್ದಾರೆ. ಎರಡೆರಡು ರೀತಿಯಲ್ಲಿ ಸಿಎಂ ಪರ ವಕೀಲರು ವಾದಿಸಿದ್ದಾರೆ. ಪ್ರಕ್ರಿಯೆ ಪಾಲಿಸದೇ ಹಣವನ್ನು ಠೇವಣಿ ಇಡುವುದು ಸಾಧ್ಯವಿಲ್ಲ. ದೇವನೂರು ಬಡಾವಣೆಯ ಜಮೀನಿಗೆ ವಿಜಯನಗರದಲ್ಲಿ ಬದಲಿ ನಿವೇಶನ ನೀಡಲಾಗಿದೆ. ಚಿಂತಾಮಣಿಯ ಜಮೀನಿಗೆ ಸದಾಶಿವನಗರದಲ್ಲಿ ನಿವೇಶನ ಕೊಟ್ಟಂತಾಗಿದೆ ಎಂದು ವಾದ ಮುಗಿಸಿದರು. ಈ ವೇಳೆ ನಾಳೆಯೂ ವಾದ ಮಾಡಲು ರವಿವರ್ಮಾ ಕುಮಾರ್ ಅವಕಾಶ ಕೇಳಿದರು.

ಸುದೀರ್ಘ ವಾದ -ಪ್ರತಿವಾದ ಆಲಿಸಿ ಕೋರ್ಟ್‌ ತೀರ್ಪು ಕಾಯ್ದಿಸಿರಿದೆ. ಅಂತಿಮ ತೀರ್ಪು ಬರುವವರೆಗೂ ಮಧ್ಯಂತರ ಆದೇಶ ಮುಂದುವರಿಸಿ ಎಂದು ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

Continue Reading
Advertisement
Murder case
ಹಾಸನ26 seconds ago

Murder Case : ಹಾಸನದಲ್ಲಿ ಚಾಕುವಿನಿಂದ ಇರಿದು ವಾಟರ್‌ಮ್ಯಾನ್‌ನ ಬರ್ಬರವಾಗಿ ಕೊಂದ ರೌಡಿಶೀಟರ್‌

FIR registered against MLA Munirathna and four others
ರಾಜಕೀಯ30 mins ago

MLA Muniratna : ಲಂಚಕ್ಕಾಗಿ ಗುತ್ತಿಗೆದಾರನಿಗೆ ಜೀವ ಬೆದರಿಕೆ; ಶಾಸಕ ಮುನಿರತ್ನ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲು

Hindi Imposition
ಬೆಂಗಳೂರು1 hour ago

Hindi Imposition : ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಕರವೇ; ಕಪ್ಪು ದಿನವನ್ನಾಗಿ ಆಚರಣೆ

Murder case
ಬೆಂಗಳೂರು2 hours ago

Murder case:ಪ್ರಿಯಕರನೊಟ್ಟಿಗೆ ಏಕಾಂತದಲ್ಲಿರುವಾಗಲೇ ಮಗಳು ಲಾಕ್‌; ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ತಾಯಿಯನ್ನೇ ಕೊಂದಳು ಪಾಪಿ

They have done a disservice to the Constitution Congress has exposed its true colours Hariprakash Koonemane
ರಾಜಕೀಯ3 hours ago

Hariprakash Konemane: ದಲಿತೋದ್ಧಾರದ ಮಾತುಗಳು ಮೊಸಳೆ ಕಣ್ಣೀರಷ್ಟೇ; ಕಾಂಗ್ರೆಸ್ ತನ್ನ ನಿಜಬಣ್ಣ ತೆರೆದಿಟ್ಟಿದೆ- ಹರಿಪ್ರಕಾಶ್ ಕೋಣೆಮನೆ

dina bhavishya
ಭವಿಷ್ಯ8 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರ

Minister Pralhad Joshi warns Mandya SP not to come under political pressure
ಹುಬ್ಬಳ್ಳಿ18 hours ago

Pralhad Joshi: ರಾಜಕೀಯ ಒತ್ತಡಕ್ಕೆ ಒಳಗಾಗಿ ಹುಚ್ಚಾಟ ಮಾಡ್ಬೇಡಿ; ಮಂಡ್ಯ ಎಸ್‌ಪಿಗೆ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಕೆ

Actor darshan
ಬೆಂಗಳೂರು20 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌; ಸೆ.17ರವರೆಗೆ ದರ್ಶನ್‌ ಆ್ಯಂಡ್ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ

Nagamangala case
ಮಂಡ್ಯ21 hours ago

Nagamangala Case : ನಾಗಮಂಗಲ ಗಲಭೆ; ದುಷ್ಕರ್ಮಿಗಳ ಕೃತ್ಯಕ್ಕೆ ಬೀದಿಗೆ ಬಿದ್ದ ಕುಟುಂಬಗಳು

Nagamangala Case
ಮಂಡ್ಯ21 hours ago

Nagamangala Case: ನಾಗಮಂಗಲ ಗಲಭೆಯು ಕಾಂಗ್ರೆಸ್ ಪ್ರಾಯೋಜಿತ ಕಾರ್ಯಕ್ರಮವಷ್ಟೇ; ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಲು ಸಂಚು- ಎಚ್‌ಡಿ ಕುಮಾರಸ್ವಾಮಿ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ10 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 year ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್2 weeks ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 weeks ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ3 weeks ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 month ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 month ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 month ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 month ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 month ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 month ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌