Modi in Karnataka: ಕರ್ನಾಟಕದ ರೈತರ ಖಾತೆಗೆ 12 ಸಾವಿರ ಕೋಟಿ ರೂ. ಬಂದಿದೆ: ಇದು ಡಬಲ್‌ ಇಂಜಿನ್‌ ಸರ್ಕಾರ ಎಂದ ಪ್ರಧಾನಿ ನರೇಂದ್ರ ಮೋದಿ Vistara News

ಕರ್ನಾಟಕ ಎಲೆಕ್ಷನ್

Modi in Karnataka: ಕರ್ನಾಟಕದ ರೈತರ ಖಾತೆಗೆ 12 ಸಾವಿರ ಕೋಟಿ ರೂ. ಬಂದಿದೆ: ಇದು ಡಬಲ್‌ ಇಂಜಿನ್‌ ಸರ್ಕಾರ ಎಂದ ಪ್ರಧಾನಿ ನರೇಂದ್ರ ಮೋದಿ

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದ ನರೇಂದ್ರ ಮೋದಿ, ಬಡವರನ್ನು ನಾಶ ಮಾಡುವ ಯಾವ ಅವಕಾಶವನ್ನೂ ಕಾಂಗ್ರೆಸ್‌ ಬಿಟ್ಟಿಲ್ಲ ಎಂದರು.

VISTARANEWS.COM


on

modi-in-karnataka-karnataka-farmers-got-twelve-thousand-crores-says-narendra-modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ರೈತರ ಸಣ್ಣಪುಟ್ಟ ಅವಶ್ಯಕತೆಗಳನ್ನೂ ಡಬಲ್‌ ಇಂಜಿನ್‌ ಸರ್ಕಾರವು ಪೂರೈಸುತ್ತಿದ್ದು, ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಲ್ಲಿ ಕರ್ನಾಟಕದ ರೈತರಿಗೆ 12 ಸಾವಿರ ಕೋಟಿ ರೂ. ಲಭಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. ಮಂಡ್ಯದ ಗೆಜ್ಜಲಗೆರೆಯಲ್ಲಿ ಆಯೋಜನೆ ಮಾಡಿದ್ದ, 12 ಸಾವಿರ ಕೋಟಿ ರೂ. ಮೊತ್ತದ 210 ಕಿಲೋಮೀಟರ್ ಉದ್ದದ ಎರಡು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಹೆದ್ದಾರಿಯಿಂದಾಗಿ ರಾಮನಗರ ಹಾಗೂ ಮಂಡ್ಯದ ಅಭಿವೃದ್ಧಿಗೂ ಸಹಕಾರವಾಗುತ್ತದೆ. ಮಳೆಗಾಲದ ಸಂದರ್ಭದಲ್ಲಿ ಭೂ ಕುಸಿತ ಉಂಟಾಗಿ ಬೆಂಗಳೂರು ಮಂಗಳೂರು ರಸ್ತೆ ಬಂದ್‌ ಆಗುತ್ತದೆ. ಮೈಸೂರು ಹಾಗೂ ಕುಶಾಲನಗರ ಚತುಷ್ಪಥ ಕಾಮಗಾರಿಯು ಈ ಸಮಸ್ಯೆಯನ್ನು ದೂರ ಮಾಡುತ್ತದೆ.

2014ಕ್ಕೆ ಮುನ್ನ ಕಾಂಗ್ರೆಸ್‌ ನೇತೃತ್ವದ ಸರ್ಕಾರವಿತ್ತು. ಈ ಸರ್ಕಾರವು ಬಡವರನ್ನು, ಬಡ ಕುಟುಂಬವನ್ನು ನಾಶ ಮಾಡುವ ಯಾವ ಅವಕಾಶವನ್ನೂ ಬಿಡಲಿಲ್ಲ. ಬಡವರ ಸಾವಿರಾರು ಕೋಟಿ ರೂ. ಹಣವನ್ನು ಕಾಂಗ್ರೆಸ್‌ ಲೂಟಿ ಮಾಡಿತ್ತು. ಬಡವರ ದುಃಖಕ್ಕೂ ಕಾಂಗ್ರೆಸ್‌ಗೂ ಯಾವುದೇ ಸಂಬಂಧ ಇಲ್ಲ. 2014ರಲ್ಲಿ ನಮ್ಮ ಸರ್ಕಾರಕ್ಕೆ ಅವಕಾಶ ನೀಡಿದ್ದರಿಂದ ಬಡವರ ಕಷ್ಟವನ್ನು ಅರಿಯುವ ಸಂವೇದನಾಶೀಲ ಸರ್ಕಾರ ಇದು.

ಈ ಸರ್ಕಾರವು ಅತ್ಯಂತ ಪ್ರಾಮಾಣಿಕತೆಯಿಂದ ಬಡವರ ಸೇವೆ ಮಾಡುವ ಹಾಗೂ ಬಡವರ ಕಷ್ಟವನ್ನು ಕಡಿಮೆ ಮಾಡುವ ನಿರಂತರ ಪ್ರಯತ್ನ ಮಾಡುತ್ತಿದೆ. ಬಡವರ ಬಳಿ ಸದೃಢ ಮನೆಯಿರಬೇಕು, ಮನೆಯಲ್ಲಿ ನಲ್ಲಿಯ ಮೂಲಕ ನೀರು ಬರಬೇಕು, ಉಜ್ವಲ ಗ್ಯಾಸ್‌ ಸಂಪರ್ಕ, ಗ್ರಾಮದ ರಸ್ತೆ, ಆಸ್ಪತ್ರೆ ಇರಬೇಕು, ಚಿಕಿತ್ಸೆಯ ವೆಚ್ಚ ಕಡಿಮೆ ಇರಬೇಕು ಎನ್ನುವುದಕ್ಕೆ ಬಿಜೆಪಿ ಸರ್ಕಾರ ಆದ್ಯತೆ ನೀಡಿದೆ.

ಇದನ್ನೂ ಓದಿ: Modi in Karnataka: 30 ವರ್ಷ ಉಳಿದವರ ಕಂಡಿರಿ; 4 ವರ್ಷದ ನಮ್ಮ ರಿಪೋರ್ಟ್‌ ಕಾರ್ಡ್‌ ನೋಡಿ ಆಶೀರ್ವದಿಸಿ, ಮಂಡ್ಯವನ್ನು ದೇಶದಲ್ಲೇ ನಂ. 1 ಮಾಡುತ್ತೇವೆ: ಸಿಎಂ

ಪಿಎಂ ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ಕರ್ನಾಟಕದ ರೈತರ ಖಾತೆಗಳಿಗೆ 12 ಸಾವಿರ ಕೋಟಿ ರೂ. ತಲುಪಿಸಲಾಗಿದೆ. ಇದರಲ್ಲಿ ಮಂಡ್ಯದ ಮೂರು ಮುಕ್ಕಾಲು ಲಕ್ಷ ರೈತರ ಖಾತೆಗಳಿಗೆ 600 ಕೋಟಿ ರೂ. ತಲುಪಿಸಲಾಗಿದೆ. ಕೇಂದ್ರ ಸರ್ಕಾರವು ಆರು ಸಾವಿರ ಕೋಟಿ ರೂ. ನೀಡಿದರೆ ಕರ್ನಾಟಕ ಸರ್ಕಾರ ನಾಲ್ಕು ಸಾವಿರ ರೂ. ಸೇರಿಸಿ ಹತ್ತು ಸಾವಿರ ರೂ. ನೀಡುತ್ತದೆ. ಇದಕ್ಕಾಗಿ ಕರ್ನಾಟಕ ಸರ್ಕಾರಕ್ಕೆ ಅಭಿನಂದನೆಗಳು. ಇದು ಡಬಲ್‌ ಇಂಜಿನ್‌ ಸರ್ಕಾರದ ಕಾರ್ಯವೈಖರಿ ಎಂದು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Shadow CM: ಕಾಂಗ್ರೆಸ್‌ನ ಪೇಸಿಎಂ ಅಭಿಯಾನಕ್ಕೆ ಬಿಜೆಪಿಯಿಂದ ಶ್ಯಾಡೊ ಸಿಎಂ ಪೋಸ್ಟರ್ ವಾರ್

ಅಧಿಕಾರಿಗಳ ವರ್ಗಾವಣೆಯಿಂದ ಮೊದಲುಗೊಂಡು ಅನೇಕ ಕಾರ್ಯಗಳನ್ನು ಸಿಎಂ ಸಿದ್ದರಾಮಯ್ಯ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ನಡೆಸುತ್ತಿದ್ದಾರೆ (Shadow CM) ಎಂದು ಬಿಜೆಪಿ ಆರೋಪಿಸಿದೆ.

VISTARANEWS.COM


on

Shadow CM Posters
Koo

ಬೆಂಗಳೂರು: ವಿಧಾನಸಭೆ ಎಲೆಕ್ಷನ್‌ಗೂ ಮುನ್ನ ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರದ ವಿರುದ್ಧ ಪೇಸಿಎಂ ಅಭಿಯಾನವನ್ನು ಕಾಂಗ್ರೆಸ್‌ ರೂಪಿಸಿತ್ತು. ಕರ್ನಾಟಕ ರಾಜ್ಯ ಕಾಂಟ್ರಾಕ್ಟರ್ಸ್‌ ಅಸೋಸಿಯೇಷನ್‌ ಮಾಡಿದ್ದ 40% ಕಮಿಷನ್‌ ಆರೋಪವನ್ನೇ ಆಧಾರವಾಗಿಸಿಕೊಂಡು ಪೆಸಿಎಂ ಪೋಸ್ಟರ್‌ಗಳನ್ನು ಬಹಿರಂಗವಾಗಿ ಅಂಟಿಸಿತ್ತು. (Shadow CM)

ಈ ಪೋಸ್ಟರ್‌ಗಳು ಸರ್ಕಾರಕ್ಕೆ ಸಾಕಷ್ಟ ಮುಜುಗರ ಉಂಟುಮಾಡಿದ್ದವು. ರಾಜ್ಯ ಸರ್ಕಾರವು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಜನರಿಗೆ ಮನವರಿಕೆ ಮಾಡುವಲ್ಲಿ ಸಾಕಷ್ಟು ಪರಿಣಾಮಕಾರಿಯಾಗಿದ್ದವು. ಇದೀಗ ಕಾಂಗ್ರೆಸ್‌ ಸರ್ಕಾರ ರಚನೆಯಾಗಿದ್ದು, ಶ್ಯಾಡೊ ಸಿಎಂ ಅಭಿಯಾನವನ್ನು ಬಿಜೆಪಿ ಕೈಗೆತ್ತಿಕೊಂಡಿದೆ.

ಅಧಿಕಾರಿಗಳ ವರ್ಗಾವಣೆಯಿಂದ ಮೊದಲುಗೊಂಡು ಅನೇಕ ಕಾರ್ಯಗಳನ್ನು ಸಿಎಂ ಸಿದ್ದರಾಮಯ್ಯ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ನಡೆಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಇದೇ ಆರೋಪಕ್ಕೆ ಅನಗುಣವಾಗಿ ಶ್ಯಾಡೊ ಸಿಎಂ ಪೋಸ್ಟರ್‌ಗಳನ್ನು ರೂಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದೆ.

1. ಕಲೆಕ್ಷನ್ ಏಜೆಂಟ್ ಸುರ್ಜೇವಾಲಾರ ಕೈಗೊಂಬೆಯಾಗಿರುವ ಸಿದ್ದರಾಮಯ್ಯ, ಪುತ್ರನನ್ನು ಶ್ಯಾಡೋ ಸಿಎಂ ಮಾಡಿ ತಾಳಕ್ಕೆ ಕುಣಿಯುತ್ತಿದ್ದಾರೆ. ಸೋನಿಯಾ ಗಾಂಧಿಯವರ ತಾಳಕ್ಕೆ ರಾಜ್ಯದ ಕಾಂಗ್ರೆಸ್ ನಾಯಕರು ಕುಣಿಯುತ್ತಿದ್ದಾರೆ. 2024ರ ಕಾಂಗ್ರೆಸ್ ಚುನಾವಣಾ ಖರ್ಚಿಗೆ ರಾಜ್ಯ ಬಲಿಯಾಗುತ್ತಿದೆ.

2. ಸರಕಾರದ ಎಲ್ಲಾ ಬಗೆಯ ಡೀಲ್‌ಗಳಿಗೆ ನೇರವಾಗಿ ಸಂಪರ್ಕಿಸಿ…

3. ಹುದ್ದೆಗಳು ಮಾರಾಟಕ್ಕಿವೆ… #ShadowCM ರವರನ್ನು ನೇರವಾಗಿ ಸಂಪರ್ಕಿಸಬಹುದು.

4. ಹುದ್ದೆಗಳು ಮಾರಾಟಕ್ಕಿವೆ.. #ShadowCM ರವರನ್ನು ನೇರವಾಗಿ ಸಂಪರ್ಕಿಸಬಹುದು.

5. CM ನೆರಳಿನಲ್ಲಿ #ShadowCM ಅವ್ಯವಹಾರ. ಅಂಕೆ ಮೀರಿದೆ ಇವರಿಬ್ಬರ ಭ್ರಷ್ಟಾಚಾರ.

6. Commission Master in the shadows of Chief Minister!

Continue Reading

ಕರ್ನಾಟಕ

Evm Machine : ಡೆಮಾಲಿಷನ್‌ ವೇಳೆ ಎಂಜಿನಿಯರ್ ಮನೆಯಲ್ಲಿ ಇವಿಎಂ ಯೂನಿಟ್‌ಗಳು ಪತ್ತೆ!

Evm Control Units : ಮನೆ ಡೆಮಾಲಿಷನ್‌ ಸಮಯದಲ್ಲಿ ಎಂಜಿನಿಯರ್‌ವೊಬ್ಬರ ಮನೆಯಲ್ಲಿ ಇವಿಎಂ ಕಂಟ್ರೋಲ್‌ ಯೂನಿಟ್‌ಗಳು ಪತ್ತೆಯಾಗಿವೆ. ಇವಿಎಂ ಕಂಟ್ರೋಲ್‌ ಯೂನಿಟ್‌ಗಳನ್ನು ತಹಸೀಲ್ದಾರ್‌ ವಶಕ್ಕೆ ಪಡೆದುಕೊಂಡಿದ್ದಾರೆ.

VISTARANEWS.COM


on

By

EVM units
Koo

ಬೆಂಗಳೂರು ಗ್ರಾಮಾಂತರ: ಇಲ್ಲಿನ ದೊಡ್ಡಬಳ್ಳಾಪುರ ತಾಲೂಕಿನ ಮೋಪರಹಳ್ಳಿ ಗ್ರಾಮದಲ್ಲಿ ಮನೆ ಡೆಮಾಲಿಷನ್ ವೇಳೆ ಇವಿಎಂ ಕಂಟ್ರೋಲ್‌ ಯೂನಿಟ್‌ಗಳು (Evm Control Units ) ಪತ್ತೆ ಆಗಿವೆ. ದೊಡ್ಡಬಳ್ಳಾಪುರ ನಿರ್ಮಿತಿ ಕೇಂದ್ರದ ಎಂಜಿನಿಯರ್ ಶಿವಕುಮಾರ್ ಎಂಬುವವರ ಮನೆಯಲ್ಲಿ (Evm Machine) ಪತ್ತೆ ಆಗಿದೆ.

2018ರ ಚುನಾವಣೆಯಲ್ಲಿ ಬಳಸಿ ರಿಜೆಕ್ಟ್‌ ಆಗಿದ್ದ ಇವಿಎಂ ಕಂಟ್ರೋಲ್ ಯೂನಿಟ್ ಮಿಷನ್‌ಗಳು ಎನ್ನಲಾಗಿದೆ. ಅಂದಹಾಗೇ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕಾಗಿ ಮನೆಯನ್ನು ಡೆಮಾಲಿಷನ್ ಮಾಡಲಾಗುತ್ತಿತ್ತು. ಈ ವೇಳೆ ಮನೆಯ ಅವಶೇಷಗಳಲ್ಲಿ ಇವಿಎಂ ಕಂಟ್ರೋಲ್‌ ಯೂನಿಟ್‌ ಪತ್ತೆ ಆಗಿವೆ. ಯೂನಿಟ್‌ಗಳು ಪತ್ತೆಯಾದ ಹಿನ್ನೆಲೆ ಸ್ಥಳಕ್ಕೆ ತಹಸೀಲ್ದಾರ್‌ ಮೋಹನ ಕುಮಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

EVM units found in demolition
ಎಂಜಿನಿಯರ್‌ ಮನೆ ಡೆಮಾಲಿಷನ್‌ ವೇಳೆ ಇವಿಎಂ ಯೂನಿಟ್‌ಗಳು ಪತ್ತೆ

ಮನೆಯ ಅವಶೇಷದಡಿ 7 ಯೂನಿಟ್‌ಗಳು ಪತ್ತೆ ಆಗಿದ್ದು, ತಹಸೀಲ್ದಾರ್‌ ಎಲ್ಲವನ್ನೂ ವಶಕ್ಕೆ ಪಡೆದು ಹಿರಿಯ ಅಧಿಕಾರಿಗಳಿಗೆ ವರದಿ ನೀಡಿದ್ದಾರೆ. ತಹಸೀಲ್ದಾರ್‌ ಮೋಹನ ಕುಮಾರಿ ಮುಂದಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಶಿವಶಂಕರ್ ಅವರಿಗೆ ವರದಿಯನ್ನು ನೀಡಿದ್ದಾರೆ. ಸದ್ಯ, ರಿಜೆಕ್ಟ್‌ ಆಗಿರುವ ಇವಿಎಂ ಕಂಟ್ರೋಲ್‌ ಯೂನಿಟ್‌ ಮಿಷನ್‌ಗಳನ್ನು ಯಾಕಾಗಿ ಮನೆಯಲ್ಲಿ ಇರಿಸಿಕೊಂಡಿದ್ದರು ಎಂಬ ಪ್ರಶ್ನೆ ಕಾಡುತ್ತಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

MLC Election: ವಿಧಾನ ಪರಿಷತ್‌ಗೆ ಕಾಂಗ್ರೆಸ್‌ನ ಮೂವರು ಅವಿರೋಧ ಆಯ್ಕೆ; ಶೆಟ್ಟರ್‌ ಕಮ್‌ ಬ್ಯಾಕ್‌

MLC Election: ಕಾಂಗ್ರೆಸ್‌ನ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರು ಎಂಎಲ್‌ಸಿಯಾಗಿ ಅವಿರೋಧ ಆಯ್ಕೆಯಾಗಿದ್ದಾರೆ.

VISTARANEWS.COM


on

New MLC Jagadish Shettar NS Boseraju and Tippanna Kamakanoor
ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು ಹಾಗೂ ಎನ್.ಎಸ್. ಬೋಸರಾಜು
Koo

ಬೆಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ (MLC Election) ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧ ಅಯ್ಕೆಯಾಗಿದ್ದಾರೆ. ಪಕ್ಷೇತರ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದ್ದರಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಅವರ ಅವಿರೋಧ ಆಯ್ಕೆ ಘೋಷಿಸಲಾಗಿದೆ.

ನಾಮಪತ್ರ ವಾಪಸ್ ಪಡೆಯಲು ಶುಕ್ರವಾರ ಕೊನೆಯ ದಿನವಾಗಿತ್ತು. ಪಕ್ಷೇತರ ಅಭ್ಯರ್ಥಿ ಡಾ.ಕೆ ಪದ್ಮರಾಜನ್‌ ಅವರ ನಾಮಪತ್ರ ಸೂಚಕರಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಹೀಗಾಗಿ ಉಳಿದ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಈ ಬಗ್ಗೆ ವಿಧಾನಸಭಾ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಮಾಹಿತಿ ನೀಡಿದ್ದಾರೆ.

ಶೆಟ್ಟರ್‌ 5 ವರ್ಷ, ಬೋಸರಾಜು 1 ವರ್ಷ, ಕಮಕನೂರು 3 ವರ್ಷ ಎಂಎಲ್‌ಸಿ

ರಾಜ್ಯದಲ್ಲಿ ಖಾಲಿಯಾಗಿರುವ ವಿಧಾನ ಪರಿಷತ್‌ನ (MLC Election) ಮೂರು ಸ್ಥಾನಗಳಿಗೆ ಜೂನ್‌ 30ರಂದು ಚುನಾವಣೆ ನಡೆಯಬೇಕಿತ್ತು. ಆದರೆ, ಕಾಂಗ್ರೆಸ್‌ ಮೂವರು ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಇನ್ನು ಇವರ ಅಧಿಕಾರಾವಧಿ ನೋಡುವುದಾದರೆ, ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ 5 ವರ್ಷ, ಹಾಲಿ ಸಚಿವ ಎನ್.ಎನ್‌. ಬೋಸ್‌ ರಾಜು 1 ವರ್ಷ ಮತ್ತು ತಿಪ್ಪಣ್ಣ ಕಮಕನೂರು 3 ವರ್ಷ ಎಂಎಲ್‌ಸಿಯಾಗಿ ಇರಲಿದ್ದಾರೆ.

ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‌ ನಡೆಯುವ ಚುನಾವಣೆ ಇದಾಗಿದೆ. 135 ಶಾಸಕರನ್ನು ಹೊಂದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಎಲ್ಲ ಮೂರು ಸ್ಥಾನಗಳನ್ನು ಗೆದ್ದುಕೊಂಡಿದೆ.

ಇದನ್ನೂ ಓದಿ | ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ? ಸುಳಿವು ಬಿಚ್ಚಿಟ್ಟ ಸಿ.ಪಿ.ಯೋಗೇಶ್ವರ್

ಶೆಟ್ಟರ್‌ಗೆ ದೊಡ್ಡ ಗೌರವ

ಕಳೆದ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿಯಲ್ಲಿ ಟಿಕೆಟ್‌ ನಿರಾಕರಿಸಲ್ಪಟ್ಟು ಕಾಂಗ್ರೆಸ್‌ ಸೇರಿದ್ದ ಜಗದೀಶ್‌ ಶೆಟ್ಟರ್‌ ಅವರು ಚುನಾವಣೆಯಲ್ಲಿ ಸೋಲು ಕಂಡರೂ ಅವರಿಗೆ ಪಕ್ಷ ದೊಡ್ಡ ಗೌರವವನ್ನೇ ನೀಡಿದೆ. ಬಾಬುರಾವ್‌ ಚಿಂಚನಸೂರು ಅವರಿಂದ ತೆರವಾಗಿರುವ ಸ್ಥಾನಕ್ಕೆ ಜಗದೀಶ್‌ ಶೆಟ್ಟರ್‌ ಅವರು ಆಯ್ಕೆಯಾಗಿದ್ದು, ಐದು ವರ್ಷ ಸದಸ್ಯರಾಗಿರಲಿದ್ದಾರೆ.

ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಆಗಿದ್ದರಿಂದ ಈ ಬಾರಿ ಕಾಂಗ್ರೆಸ್ ಗೆ ಲಾಭವಾಗಿತ್ತು. 39 ಲಿಂಗಾಯತ ಸಮುದಾಯದ ಶಾಸಕರು ಗೆಲ್ಲುವುದರಲ್ಲಿ ಶೆಟ್ಟರ್‌ ಅವರ ವರ್ಚಸ್ಸಿನ ಪ್ರಭಾವವೂ ಇದೆ ಎಂದು ಕಾಂಗ್ರೆಸ್‌ ಕಂಡುಕೊಂಡಿದೆ. ಇದರ ಲಾಭವನ್ನು ಲೋಕಸಭಾ ಚುನಾವಣೆಯಲ್ಲಿಯೂ ಪಡೆಯಲು ಶೆಟ್ಟರ್‌ಗೆ ಮಣೆ ಹಾಕಲಾಗಿದೆ ಎಂದು ಹೇಳಲಾಗಿದೆ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಶೆಟ್ಟರ್ ಗೆ ಐದು ವರ್ಷಗಳ ಅವಧಿ ಇರೋ ಎಂಎಲ್ಸಿ ಸ್ಥಾನವನ್ನು ಕಾಂಗ್ರೆಸ್‌ ಕೊಟ್ಟಿದೆ ಎನ್ನಲಾಗಿದೆ.

ಇದನ್ನೂ ಓದಿ | Congress Guarantee: ರಾಜ್ಯ ಬಿಜೆಪಿ ಅಧ್ಯಕ್ಷ ಮನೆಗೆ ಮಾರಿ ಪರರಿಗೆ ಉಪಕಾರಿ: ಸಚಿವ ದಿನೇಶ್‌ ಗುಂಡೂರಾವ್‌ ವಾಗ್ದಾಳಿ

ಎನ್.ಎಸ್‌. ಬೋಸರಾಜು ಅವರಿಗೆ 1 ವರ್ಷ ಅವಕಾಶವಿರುವ ಪರಿಷತ್‌ ಸದಸ್ಯತ್ವವನ್ನು ನೀಡಲಾಗಿದೆ. ಬೋಸರಾಜು ಅವರನ್ನು ಈಗಾಗಲೇ ಸಣ್ಣ ನೀರಾವರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಇವರು ಆರ್‌.ಶಂಕರ್‌ ಅವರಿಂದ ತೆರವಾಗಿರುವ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.

ಇತ್ತ ತಿಪ್ಪಣ್ಣ ಕಮಕನೂರು ಅವರಿಗೆ ಲಕ್ಷ್ಮಣ ಸವದಿ ಅವರಿಂದ ತೆರವಾದ ಮೂರು ವರ್ಷಗಳ ಅವಧಿಯ ಮೇಲ್ಮನೆ ಸ್ಥಾನವನ್ನು ನೀಡಲಾಗಿದೆ.

Continue Reading

ಕರ್ನಾಟಕ

‌Brand Bengaluru: ವಿದ್ಯುತ್‌ ಜತೆಗೆ ಕಸದ ಶುಲ್ಕವೂ ಸೇರ್ಪಡೆಗೆ ಸಲಹೆ: ಖಚಿತಪಡಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್‌

ಬೆಂಗಳೂರನ್ನು ಉತ್ತಮಪಡಿಸಲು ಪೋರ್ಟಲ್‌ ಲಾಂಚ್ ಮಾಡ್ತಿದ್ದೇನೆ. ಪ್ರಮುಖ ನಗರಗಳಲ್ಲಿ ಪುಟ್ ಪಾತ್ ಸಮಸ್ಯೆ ಇದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

VISTARANEWS.COM


on

DK Shivakumar Thushar girinath
Koo

ಬೆಂಗಳೂರು: ಅನೇಕ ನಗರಗಳಲ್ಲಿ ಕಸ ಸಂಗ್ರಹಣೆಗೆ ಶುಲ್ಕ ವಿಧಿಸಲಾಗುತ್ತಿದೆ. ಬೆಂಗಳೂರಿನಲ್ಲೂ ಶುಲ್ಕ ವಿಧಿಸಿ ವಿದ್ಯುತ್‌ ಬಿಲ್‌ ಜತೆಗೆ ಸೇರಿಸಬೇಕು ಎಂಬ ಸಲಹೆ ಬಂದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನ ಸಮಗ್ರ ಅಭಿವೃದ್ಧಿಗಾಗಿ ನಾಗರಿಕರು ಹಾಗೂ ತಜ್ಞರಿಂದ ಸಲಹೆ ಕೇಳುವ BrandBengaluru.karnataka.gov.in ಪೋರ್ಟಲ್‌ಗೆ ಚಾಲನೆ ನೀಡಿದ ನಂತರ ಮಾತನಾಡಿದರು.

1 ಕೋಟಿ 60 ಲಕ್ಷ ಜನಸಂಖ್ಯೆ ಬೆಂಗಳೂರಿನಲ್ಲಿ ಇದೆ. 1 ಕೋಟಿ 30 ಲಕ್ಷ ಅಧಿಕೃತ ಜನಸಂಖ್ಯೆ. ಆದರೆ ಪ್ರತಿದಿನ ಬಂದು ಹೋಗವರ ಸಂಖ್ಯೆ ಹೆಚ್ಚಿದೆ. ಬೆಂಗಳೂರಿನ ಪ್ರಕೃತಿ ಗಮನದಲ್ಲಿಟ್ಟುಕೊಂಡು ಇಲ್ಲಿ ಬಂದು ನೆಲೆಸಲು ಇಚ್ಚೆ ಪಡುತ್ತಾರೆ. ಬೆಂಗಳೂರಿಗೆ ಬಂದವರು ಯಾರು ವಾಪಸು ಹೋಗಲ್ಲ.

ನಾನು ಸಹ ಬೆಂಗಳೂರಿನ ನಿವಾಸಿ. ಜನ ಸಮಾನ್ಯರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇನೆ. ಬಿಲ್ಡರ್ಸ್, ಉದ್ಯಮಿಗಳು ಸಹ ಕರೆಸಿದ್ದೆ ಅವರ ಅಭಿಪ್ರಾಯ ಪಡೆದಿದ್ದೇನೆ. ಹಿರಿಯ ನಾಯಕರ ಅಭಿಪ್ರಾಯ ಸಹ ಸಂಗ್ರಹ ಮಾಡಿದ್ದೇನೆ. ಮಾಜಿ ಸಿಎಂಗಳನ್ನ ಭೇಟಿ ಮಾಡ್ತೀನಿ. ಬೊಮ್ಮಾಯಿ ಸಮಯ ಕೇಳಿದ್ದೆ. ಕಸಕ್ಕೆ ಕೆಲ ನಗರಗಳಲ್ಲಿ ತೆರಿಗೆ ಹಾಕುತ್ತಿದ್ದಾರೆ. ಇಲ್ಲೂ ಹಾಕಿ ಅಂತ ಸಲಹೆ ನೀಡಿದ್ದಾರೆ. ವಿದ್ಯುತ್ ಬಿಲ್ ಜತೆಗಿನ ಇದನ್ನ ಹಾಕಲು ಸಲಹೆ ಬಂದಿದೆ. ಆದರೆ ಈಗ ವಿದ್ಯುತ್ ಬಿಲ್ ಜತೆ ಹಾಕಲು ಸಾಧ್ಯವಿಲ್ಲ ಎಂದರು.

ಬೆಂಗಳೂರನ್ನು ಉತ್ತಮಪಡಿಸಲು ಪೋರ್ಟಲ್‌ ಲಾಂಚ್ ಮಾಡ್ತಿದ್ದೇನೆ. ಪ್ರಮುಖ ನಗರಗಳಲ್ಲಿ ಪುಟ್ ಪಾತ್ ಸಮಸ್ಯೆ ಇದೆ. ಮಲ್ಲೇಶ್ವರ, ಬಸವನಗುಡಿಯಲ್ಲಿ ಪುಟ್ ಪಾತ್ ಸಮಸ್ಯೆ ಇದೆ. ಬೆಂಗಳೂರು ಟ್ರಾಫಿಕ್‌ನಲ್ಲಿ ಕೆಲಸ ಮಾಡಿದ ನಿವೃತ್ತ ಅಧಿಕಾರಿಗಳ ಅಭಿಪ್ರಾಯ ಸಂಗ್ರಹ ಮಾಡ್ತೀನಿ. ಟ್ರೈನ್ ಮತ್ತು ಬಸ್ಸು ಹೋಗುವ ರೀತಿ ಟನಲ್‌ ಮಾಡಬೇಕು ಅನ್ನೋ ಅಭಿಪ್ರಾಯ ಇದೆ. ಜಯದೇವ ಬಳಿ ಪೈಲಟ್ ಯೋಜನೆ ಅಂತ ಪರಿಗಣಿಸುತ್ತಿದ್ದೇವೆ. ಬೆಂಗಳೂರು ಪ್ಲಾನ್ಡ್‌ ಸಿಟಿ ಅಲ್ಲ. ಮುಂಬಯಿ, ದೆಹಲಿ ರೀತಿಯಲ್ಲಿ ಪ್ಲಾನ್ ಸಿಟಿ ಅಲ್ಲ. ಆದರೆ ಮುಂಬಯಿ ಮತ್ತು ದೆಹಲಿಯಲ್ಲಿ ಟ್ರಾಫಿಕ್ ಜಾಸ್ತಿ ಇದೆ. ನಮಗಿಂತಲೂ ಹೆಚ್ಚಿಜ ಟ್ರಾಫಿಕ್ ಇದೆ. ಇಲ್ಲಿ ನೀರು ನುಗ್ಗಿದರೂ ಸಮಸ್ಯೆ ಆಗುತ್ತೆ, ಅದನ್ನೇ ದೊಡ್ಡದಾಗಿ ಬರೆಯುತ್ತೀರಿ ಎಂದರು.

ಹಿಂದಿನ ಕಾಮಗಾರಿಗಳನ್ನು ಸರ್ಕಾರ ಸ್ಥಗಿತಗೊಳಿಸಿದೆ ಎಂಭ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿ, ಇನ್ನಷ್ಟು ದೊಡ್ಡಮಟ್ಟದಲ್ಲಿ ಮಾತನಾಡಲಿ. ಎಲ್ಲ ಬಿಚ್ಚಿಸ್ತೀನಿ. ಟೆಂಡರ್ ಡಬಲ್ ಆಗ್ತಿದೆ, ನಾವು ಅಧಿಕಾರಕ್ಕೆ ಬಂದ್ರೆ ಇದಕ್ಕೆ ಅವಕಾಶ ಕೊಡಲ್ಲ ಎಂದು ನಾವು ಚುನಾವಣೆ ಸಂದರ್ಭದಲ್ಲಿ ಹೇಳಿದ್ದೆವು. ನಾವು ಅದಕ್ಕೆ ಬದ್ಧರಾಗಿದ್ದೇವೆ. ಯಾವ ಗುತ್ತಿಗೆದಾರ ಏನು ಬೇಕಾದರೂ ಮಾಡಿಕೊಳ್ಳಲಿ. ಕಾನೂನಾತ್ಮಕವಾಗಿ ಪರಿಶೀಲನೆ ಮಾಡುವವರೆಗೂ ನಾವು ವರ್ಕ್ ಆರ್ಡರ್ ಕೊಡಲ್ಲ. ತನಿಖೆ ಬಳಿಕವೇ ಕಾಮಗಾರಿ ಬಿಲ್ ಬಿಡುಗಡೆ ಮಾಡ್ತೀವಿ ಎಂದರು.

ನಗರದಲ್ಲಿ ಇರೋ ಸ್ಲಮ್ ಶಿಫ್ಟ್ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಂತಹ ಸಲಹೆಗಳು ಬಂದಿವೆ. ಕೆಲವರು ಸರ್ಕಾರಿ ಜಾಗದಲ್ಲಿ ಇದ್ದಾರೆ. ಕೆಲ ಸ್ಲಮ್ ನಗರದ ಒಳಗೆ ಇವೆ. ಅದನ್ನ ಶಿಫ್ಟ್ ಮಾಡಲು ಸಮಯ ಬೇಕಾಗುತ್ತದೆ ಎಂದರು.

ಇದನ್ನೂ ಓದಿ: Rice Politics: ನಾಳೆ ಅಮಿತ್‌ ಶಾ ಭೇಟಿಗೆ ಸಿದ್ದರಾಮಯ್ಯ ದೆಹಲಿ ಪ್ರವಾಸ; ನಾನೂ ಹೋಗುವೆ ಎಂದ ಡಿಕೆಶಿ

Continue Reading
Advertisement
IPL 2024 Auction
ಐಪಿಎಲ್ 20232 seconds ago

IPL 2024: ಹರಾಜಿನಲ್ಲಿ ಯಾವ ತಂಡಕ್ಕೆ ಎಷ್ಟು ಆಟಗಾರರನ್ನು ಖರೀದಿಸಬಹುದು? ಇಲ್ಲಿದೆ ಮಾಹಿತಿ

Assembly session Drought HD Kumaraswamy
ಕರ್ನಾಟಕ5 mins ago

Assembly Session : ಬರ ಸಂತ್ರಸ್ತ ರೈತರ 2 ಲಕ್ಷ ರೂ.ವರೆಗಿನ ಕೃಷಿ ಸಾಲ ಮನ್ನಾ; HDK ಆಗ್ರಹ

waiter beaten to death, tray of used plates touched guests in marriage
ಕ್ರೈಂ7 mins ago

ಬಳಸಿದ ಪ್ಲೇಟ್‌ಗಳಿದ್ದ ಟ್ರೆ ತಾಗಿದ್ದಕ್ಕೆ ವೇಟರ್‌ನನ್ನು ಹೊಡೆದು ಕೊಂದೇ ಬಿಟ್ರು!

Krishna Byregowda Central assistance
ಕರ್ನಾಟಕ35 mins ago

Assembly Session : ಕೇಂದ್ರ ಅನುದಾನ ವರ್ಷದಿಂದ ವರ್ಷಕ್ಕೆ ಇಳಿಕೆ; ಪೈಸೆ ಪೈಸೆ ಲೆಕ್ಕ ಕೊಟ್ಟ ಕೃಷ್ಣ ಬೈರೇಗೌಡ

Karnataka Drought
ಕರ್ನಾಟಕ45 mins ago

Karnataka Drought: ಮುಂದಿನ ವಾರ ಡಿಬಿಟಿ ಮೂಲಕ ರೈತರಿಗೆ ಬರ ಪರಿಹಾರ; 2 ಸಾವಿರ ರೂ.ವರೆಗೆ ಜಮೆ

IT raids on liquor traders across Odisha and Jharkhand
ದೇಶ47 mins ago

ತೆರಿಗೆಗಳ್ಳರ ಮೇಲೆ ಐಟಿ ದಾಳಿ; ನೋಟು ಎಣಿಸಿ ಎಣಿಸಿ ಕೌಂಟಿಂಗ್ ಮೆಷಿನ್‌ಗೆ ಸುಸ್ತು!

Attendance Araga Jnanendra UT Khader Araga jnanendra
ಕರ್ನಾಟಕ1 hour ago

Belagavi Winter Session : ನಾವೂ ಟೈಮಿಗೆ ಸರಿಯಾಗಿ ಬಂದಿದ್ದೀವಿ; ಸ್ಪೀಕರ್‌ ಜತೆ ಶಾಸಕರ ಜಗಳ!

Madhu Bangarappa in Belagavi Winter Session
ಕರ್ನಾಟಕ1 hour ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Pressmeet for Demand for construction of bypass road in Yallapur
ಉತ್ತರ ಕನ್ನಡ1 hour ago

Uttara Kannada News: ಯಲ್ಲಾಪುರ ಪಟ್ಟಣದಲ್ಲಿ ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ಒತ್ತಾಯ

Israel
ಪ್ರಮುಖ ಸುದ್ದಿ2 hours ago

Israel Palestine War: ಅರ್ಧದಷ್ಟು ಹಮಾಸ್ ಕಮಾಂಡರ್‌ಗಳು ಫಿನಿಷ್! ಇಸ್ರೇಲ್ ಹೇಳಿಕೆ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Madhu Bangarappa in Belagavi Winter Session
ಕರ್ನಾಟಕ1 hour ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ2 hours ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ8 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ15 hours ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ23 hours ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ1 day ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ1 day ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ1 day ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ1 day ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ1 day ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

ಟ್ರೆಂಡಿಂಗ್‌