MP Pratap Simha : ಯದುವೀರ್‌ ಆ್ಯಕ್ಟಿವ್‌ ಆಗುತ್ತಿದ್ದಂತೆಯೇ ಸಿಂಹ ಸೈಲೆಂಟ್‌?; ಭೇಟಿಗೂ ಮಿಸ್‌! - Vistara News

ರಾಜಕೀಯ

MP Pratap Simha : ಯದುವೀರ್‌ ಆ್ಯಕ್ಟಿವ್‌ ಆಗುತ್ತಿದ್ದಂತೆಯೇ ಸಿಂಹ ಸೈಲೆಂಟ್‌?; ಭೇಟಿಗೂ ಮಿಸ್‌!

MP Pratap Simha : ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರು ಮುಂದಿನ ಚುನಾವಣೆ ಟಿಕೆಟ್‌ ಪಡೆದ ಯದುವೀರ್‌ ಅವರನ್ನು ಇನ್ನೂ ಭೇಟಿ ಆಗಿಲ್ಲ. ಅವರು ಸೈಲೆಂಟ್‌ ಆಗಿ ದೂರ ಸರಿದಂತೆ ಕಾಣುತ್ತಿದೆ.

VISTARANEWS.COM


on

MP Pratap Simha Yaduveer
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಮೈಸೂರು ಲೋಕಸಭಾ ಕ್ಷೇತ್ರದ (Lok Sabha Election 2024) ಟಿಕೆಟ್‌ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ (Yaduveer Odeyar) ಪಾಲಾಗುತ್ತಿದ್ದಂತೆಯೇ ʻನಾಳೆಯಿಂದಲೇ ಪ್ರಚಾರ ಆರಂಭಿಸೋಣʼ ಎಂದಿದ್ದ ಹಾಲಿ ಸಂಸದ ಪ್ರತಾಪ್‌ ಸಿಂಹ (MP Pratap Simha) ಅವರು ನಾಪತ್ತೆಯಾಗಿದ್ದಾರಾ? ಹೌದು ಎನ್ನುತ್ತವೆ ಬೆಳವಣಿಗೆಗಳು. ಯದುವೀರ್‌ ಅವರು ಟಿಕೆಟ್‌ ಸಿಕ್ಕಿದ ಬಳಿಕ ಚಾಮುಂಡೇಶ್ವರಿ ದರ್ಶನ ಮಾಡಿ, ಬೆಂಗಳೂರಿನ ಬಿಜೆಪಿ ಕಚೇರಿಗೆ ಹೋಗಿ, ಮರಳಿ ಮೈಸೂರಿನ ಬಿಜೆಪಿ ಕಚೇರಿಗೂ ತೆರಳಿ ತಮ್ಮ ಚಟುವಟಿಕೆಯನ್ನು ತೀವ್ರಗೊಳಿಸಿದ್ದಾರೆ. ಆದರೆ, ಯದುವೀರ್‌ ಅವರು ಆ್ಯಕ್ಟಿವ್‌ ಆಗುತ್ತಿದ್ದಂತೆಯೇ ಪಕ್ಷ‌ ಕಟ್ಟೋಣ ಎಂದಿದ್ದ ಪ್ರತಾಪ್ ಸಿಂಹ ಸೈಲೆಂಟ್‌ (Pratap Simha Silent) ಆದಂತೆ ಕಾಣುತ್ತಿದೆ.

ಮೈಸೂರು ರಾಜ ವಂಶಸ್ಥರಾದ ಯದುವೀರ್‌ ಅವರು ಬೀದಿಗೆ ಇಳೀತಾರಾ? ಎಲ್ಲರ ಜತೆ ಬೆರೆಯುತ್ತಾರಾ ಎಂಬ ಪ್ರಶ್ನೆಗಳನ್ನು ಸ್ವತಃ ಪ್ರತಾಪ್‌ ಸಿಂಹ ಕೇಳಿದ್ದರು. ಆದರೆ, ಎಲ್ಲರ ನಿರೀಕ್ಷೆಗಳನ್ನು ಮೀರಿ ಯದುವೀರ್‌ ಮೊದಲ ದಿನವೇ ಮೈಸೂರಿನ ಬಿಜೆಪಿ ಕಚೇರಿಗೆ ಬಂದಿದ್ದಾರೆ. ಎಲ್ಲ ನಾಯಕರ ಜತೆ ಮಾತನಾಡಿದ್ದಾರೆ. ಮಾತ್ರವಲ್ಲ, ಬೀದಿಗೆ ಬಂದು ಮಾರ್ಗದ ಬದಿಯ ಚಹಾ ಅಂಗಡಿಯಲ್ಲಿ ಚಹಾ ಕುಡಿದಿದ್ದಾರೆ.

yaduveer Odeyar

ಇಷ್ಟೆಲ್ಲ ಆದರೂ ಸಂಸದ ಪ್ರತಾಪ್‌ ಸಿಂಹ ಒಬ್ಬರು ಯದುವೀರ್‌ ಅವರ ಕೈಗೆ ಸಿಗದೆ ಕಣ್ಣಾಮುಚ್ಚಾಲೆ ಆಟವಾಡಿದಂತೆ ಕಾಣುತ್ತಿದೆ. ಎಲ್ಲಿಯೂ ಕಾಣಿಸಿಕೊಳ್ಳದೆ, ಯಾರ ಕೈಗೂ ಸಿಗದ ಪ್ರತಾಪ್ ಸಿಂಹ ಅವರು ಗುರುವಾರ ಖುದ್ದು ಯದುವೀರ್ ಭೇಟಿಗೂ ಸಮಯ ನೀಡಿಲ್ಲ.

ನಿಜವೆಂದರೆ ಯದುವೀರ್‌ ಅವರು ಪ್ರತಾಪ್ ಸಿಂಹ ಮನೆಗೆ ಭೇಟಿ ನೀಡುವ ಪ್ರೊಗ್ರಾಂ ಇತ್ತು. ಆದರೆ, ಪ್ರತಾಪ್‌ ಸಿಂಹ ಸಮಯ ಕೊಟ್ಟಿರಲಿಲ್ಲ. ಜಿಲ್ಲೆಯ ಎಲ್ಲಾ ನಾಯಕರು ಯದುವೀರ್ ಗೆ ಸ್ವಾಗತ ಕೋರಿದ್ದರೂ ಪ್ರತಾಪ್‌ಸಿಂಹ ಬಂದಿರಲಿಲ್ಲ.

ಪಕ್ಷದ ಕಚೇರಿ, ನಾಯಕರ ಮನೆಗಳಿಗೆ ಯದುವೀರ್ ಭೇಟಿ ನೀಡಿದ್ದರು. ರಸ್ತೆ ಬದಿ ಕುಳಿತು ಮುಖಂಡರ ಜೊತೆ ಟೀ ಕುಡಿದರು. ಆಗೆಲ್ಲೂ ಸಂಸದ ಪ್ರತಾಪ್ ಸಿಂಹ ಕಾಣಿಸಿಕೊಂಡಿಲ್ಲ. ಅವರು ಸೋಷಿಯಲ್‌ ಮೀಡಿಯಾದಲ್ಲಿ ಮಾತ್ರ ಬೆಂಬಲ ನೀಡಿದ್ದಾ ಎಂಬ ಸಂಶಯ ಕಾಡಿದೆ.

ಇದನ್ನೂ ಓದಿ : ‌Lok Sabha Election 2024: ಮೆಣಸಿನಕಾಯಿಯನ್ನು ಜೀರ್ಣಿಸಿಕೊಳ್ತೇನೆ; ನನ್ನ ಮೇಲೆ ರಾಜಸ್ಥಾನದ ಪ್ರಭಾವ ಇಲ್ಲ: ಯದುವೀರ್

ರಾಜಕೀಯ ಪ್ರವೇಶ ನಂದೇ ತೀರ್ಮಾನ ಎಂದ ಯದುವೀರ್‌

ಈ ನಡುವೆ ಮೈಸೂರಿನಲ್ಲಿ ಗುರುವಾರ ಸಂಜೆ ಮಾತನಾಡಿದ ಯದುವೀರ್‌ ಒಡೆಯರ್‌ ಅವರು, ಕಳೆದ ಒಂದು ವರ್ಷದಿಂದಲೇ ರಾಜಕೀಯಕ್ಕೆ ಬರುವ ಬಗ್ಗೆ ತೀರ್ಮಾನ ಮಾಡಿದ್ದೆ. ರಾಜಸ್ಥಾನದ ಮೂಲ, ರಾಜಸ್ಥಾನದ ಪ್ರಭಾವ ಇದ್ಯಾವುದು ಇಲ್ಲ. ನನ್ನ ತಾಯಿಯ ಅನುಮತಿ ಹಾಗೂ ಆಶೀರ್ವಾದ ಪಡೆದು ಚುನಾವಣೆಗೆ ಬಂದಿದ್ದೇನೆ ಎಂದು ರಾಜಕೀಯ ಪ್ರವೇಶದ ಬಗ್ಗೆ ವಿವರಣೆ ನೀಡಿದರು.

ಎಸಿ ರೂಮಿನಿಂದ ಜನರ ಮಧ್ಯೆ ಬರುವುದು ಏನೂ ಕಷ್ಟ ಅಲ್ಲ. ನಾನು ಈಗಾಗಲೇ ಜನರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಶೈಕ್ಷಣಿಕ ಸಾಮಾಜಿಕ ಹಾಗೂ ಸೈಬರ್ ಕ್ಷೇತ್ರದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ರಾಜಕೀಯದಲ್ಲಿರುವ ಸವಾಲುಗಳನ್ನು ಅರಿತೇ ಬಂದಿದ್ದೇನೆ. ಕೇವಲ ಅವಕಾಶ ಸಿಕ್ಕಿದೆ ಅಂತ ನಾನು ಬಂದಿಲ್ಲ. ಪ್ರತಾಪಸಿಂಹ ಸೇರಿದಂತೆ ಹಲವರು ಉತ್ತಮ ಅಡಿಪಾಯ ಹಾಕಿದ್ದಾರೆ. ಅದನ್ನು ಮುಂದುವರಿಸುತ್ತೇನೆ ಎಂದು ಯದುವೀರ್‌ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Navneet Rana: ಮೋದಿಯವರ ಸಿಂಹಗಳು, ರಾಮಭಕ್ತರು ಗಲ್ಲಿ ಗಲ್ಲಿಯಲ್ಲಿದ್ದಾರೆ ಹುಷಾರ್‌!- ಓವೈಸಿಗೆ ಮತ್ತೆ ನವನೀತ್‌ ರಾಣಾ ಟಾಂಗ್

Navneet Rana:15 ನಿಮಿಷಗಳ ಕಾಲ ಪೊಲೀಸ್‌ ಭದ್ರತೆ ತೆಗೆದರೆ ಓವೈಸಿ ಸಹೋದರರು ಎಲ್ಲಿಂದ ಬಂದರು ಎಲ್ಲಿಗೆ ಹೋದರು ಎಂಬುದೇ ತಿಳಿಯದಂತೆ ಮಾಡುತ್ತೇನೆ ಎಂದಿದ್ದ ನವನೀತ್‌ ರಾಣಾ, ಇದೀಗ ಮತ್ತೆ ಓವೈಸಿ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಓವೈಸಿ ಅವರು ತಮ್ಮ ನಿಯಂತ್ರಣದಲ್ಲಿ ತಾವಿದ್ದರೆ ಉತ್ತಮ. ಇಲ್ಲದಿದ್ದರೆ ಪ್ರಧಾನಿ ಮೋದಿಯವರ ಸಿಂಹಗಳು ಮತ್ತು ರಾಮ ಭಕ್ತರು ಗಲ್ಲಿ ಗಲ್ಲಿಯಲ್ಲಿ ತಿರುಗಾಡುತ್ತಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Navneet Rana
Koo

ಹೈದರಾಬಾದ್‌: ಬಿಜೆಪಿ ನಾಯಕಿ ನವನೀತ್‌ ರಾಣಾ(Navneet Rana) ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ(Asaduddin Owaisi) ನಡುವಿನ ವಾಕ್ಸಮರ ಮುಂದುವರೆದಿದೆ. 15 ನಿಮಿಷಗಳ ಕಾಲ ಪೊಲೀಸ್‌ ಭದ್ರತೆ ತೆಗೆದರೆ ಓವೈಸಿ ಸಹೋದರರು ಎಲ್ಲಿಂದ ಬಂದರು ಎಲ್ಲಿಗೆ ಹೋದರು ಎಂಬುದೇ ತಿಳಿಯದಂತೆ ಮಾಡುತ್ತೇನೆ ಎಂದಿದ್ದ ನವನೀತ್‌ ರಾಣಾ, ಇದೀಗ ಮತ್ತೆ ಓವೈಸಿ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಓವೈಸಿ ಅವರು ತಮ್ಮ ನಿಯಂತ್ರಣದಲ್ಲಿ ತಾವಿದ್ದರೆ ಉತ್ತಮ. ಇಲ್ಲದಿದ್ದರೆ ಪ್ರಧಾನಿ ಮೋದಿಯವರ ಸಿಂಹಗಳು ಮತ್ತು ರಾಮ ಭಕ್ತರು ಗಲ್ಲಿ ಗಲ್ಲಿಯಲ್ಲಿ ತಿರುಗಾಡುತ್ತಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ತಮ್ಮನನ್ನು ನಾನು ಮಾತ್ರ ನಿಯಂತ್ರಿಸಲು ಸಾಧ್ಯ. ಬೇರೆ ಯಾರಿಂದಲೂ ಸಾಧ್ಯವಿಲ್ಲ ಎಂದು ಹಿರಿಯ ಸಹೋದರ ಅಸಾದುದ್ದೀನ್‌ ಓವೈಸಿ ಹೇಳುತ್ತಿದ್ದಾರೆ. ಇದು ಒಳ್ಳೆಯ ವಿಚಾರ. ಇದು ನಿಮಗೆ ಅರ್ಥ ಆಗಿದ್ದು ಒಳ್ಳೆಯದ್ದಾಯಿತು. ಇಲ್ಲದಿದರೆ ರಾಮ ಭಕ್ತರು ಮತ್ತು ಮೋದಿಯವರ ಸಿಂಹಗಳು ತಿರುಗಾಡುತ್ತಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನೆ ಮೂಡಿಸಿದೆ.

‍ಘಟಾನುಘಟಿಗಳ ಸ್ಪರ್ಧೆಯ ಕಾರಣದಿಂದ ಹೈದರಾಬಾದ್‌ ಲೋಕಸಭಾ ಕ್ಷೇತ್ರ ಈ ಬಾರಿ ದೇಶದ ಗಮನ ಸೆಳೆದಿದೆ. ಇಲ್ಲಿ ಬಿಜೆಪಿಯ ಫೈರ್‌ ಬ್ರ್ಯಾಂಡ್‌ ಮಾಧವಿ ಲತಾ ಅವರು ಎಐಎಂಐಎಂ ಮುಖ್ಯಸ್ಥ, ಹಾಲಿ ಸಂಸದ ಅಸಾದುದ್ದೀನ್‌ ಓವೈಸಿ (Asaduddin Owaisi)  ವಿರುದ್ಧ ಕಣಕ್ಕಿಳಿದಿದ್ದಾರೆ. ಅಸಾದುದ್ದೀನ್‌ ಓವೈಸಿ ಅವರ ಸಹೋದರ ಈ ಅಕ್ಬರುದ್ದೀನ್ ಓವೈಸಿ ಅವರು 2013ರಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಿ, ʼʼ15 ನಿಮಿಷ ಪೊಲೀಸರನ್ನು ತೆರವುಗೊಳಿಸಿ ನೋಡಿ. 100 ಕೋಟಿ ಹಿಂದುಗಳಿಗೆ ನಾವು ಏನು ಎಂಬುದನ್ನು ತೋರಿಸುತ್ತೇವೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದು ದೇಶಾದ್ಯಂತ ಚರ್ಚೆ ಹುಟ್ಟು ಹಾಕಿತ್ತು.

ಇದಕ್ಕೆ ಪ್ರತಿಕ್ರಿಯೆ ನೀಡಿದ ನವನೀತ್‌ ರಾಣಾ ಈ 15 ಸೆಕೆಂಡ್‌ಗಳ ಹೇಳಿಕೆ ನೀಡಿದ್ದಾರೆ. ʼʼಅಸಾದುದ್ದೀನ್ ಓವೈಸಿ ಮತ್ತು ಅಕ್ಬರುದ್ದೀನ್ ಓವೈಸಿ ಅವರಿಬ್ಬರೂ ಅಣ್ಣ-ತಮ್ಮಂದಿರು ತಾನೇ. ಈ ಹಿಂದೆ ಅಕ್ಬುರುದ್ದೀನ್ ಓವೈಸಿ 15 ನಿಮಿಷ ಪೊಲೀಸರನ್ನು ತೆರವುಗೊಳಿಸಿದರೆ, ನಾವೇನೆಂದು ತೋರಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ನಾವು ಹೇಳುತ್ತೇವೆ. ನಮಗೆ 15 ನಿಮಿಷ ಬೇಡ, 15 ಸೆಕೆಂಡು ಸಾಕು. 15 ಸೆಕೆಂಡು ಕಾಲ ಪೊಲೀಸರನ್ನು ತೆರವುಗೊಳಿಸಿದರೂ ಸಾಕು, ಅಣ್ಣ ತಮ್ಮಂದಿರಿಬ್ಬರು ಎಲ್ಲಿಂದ ಬಂದಿದ್ದಾರೆ, ಎಲ್ಲಿಗೆ ಹೋದರು ಎಂಬುದೂ ತಿಳಿಯಬಾರದು. ಹಾಗೆ ಮಾಡುತ್ತೇವೆʼʼ ಎಂದು ಹೇಳಿದ್ದಾರೆ.

ಇದನ್ನೂ ಓದಿ: Akbar Nagar: ಉತ್ತರ ಪ್ರದೇಶದ ಅಕ್ಬರ್‌ ನಗರದ ಅಕ್ರಮ ಮನೆಗಳ ಧ್ವಂಸಕ್ಕೆ ಸುಪ್ರೀಂ ಕೋರ್ಟ್‌ ಅಸ್ತು!

ಇನ್ನು ಇದಕ್ಕೆ ಪ್ರತಿಕ್ರಿಯಿಸಿದ ಓವೈಸಿ ನಾನು ಇಲ್ಲೇ ನಿಂತಿದ್ದೇನೆ ಅದೇನು ಮಾಡುತ್ತೀರೋ ಮಾಡಿ ಎಂದು ಟಾಂಗ್‌ ಕೊಟ್ಟಿದ್ದರು. ಮಹಾರಾಷ್ಟ್ರದಿಂದ ಬಂದ ಎಂಪಿ ಸಾಹೇಬರು ಇಲ್ಲಿ ನಮ್ಮ ವಿರುದ್ಧ ಏನೇನೋ ಮಾತನಾಡುತ್ತಿದ್ದಾರೆ. ನನ್ನ ತಮ್ಮ ಅಕ್ಬರುದ್ದೀನ್‌ ಓವೈಸಿ ಪರಿಸ್ಥಿತಿಯನ್ನು ಅವನದ್ದೇ ರೀತಿಯಲ್ಲಿ ತಿಳಿಗೊಳಿಸಲು ಮುಂದಾಗಿದ್ದ. ಆದರೆ ನಾನೇ ಅವನನ್ನು ತಡೆದು ನಿಲ್ಲಿಸಿದೆ ಎಂದು ಹೇಳಿದ್ದರು.

Continue Reading

ದೇಶ

Election Commission: ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಅಡ್ಡಿಪಡಿಸುವ ಪ್ರಯತ್ನ; ಖರ್ಗೆ ಪತ್ರಕ್ಕೆ EC ತಿರುಗೇಟು

Election Commission: ಲೋಕಸಭೆ ಚುನಾವಣೆಯ ಮೊದಲ 2 ಹಂತದಲ್ಲಿ ನಡೆದ ಮತದಾನ ಪ್ರಮಾಣದ ಬಗ್ಗೆ ತಡವಾಗಿ ಮಾಹಿತಿ ನೀಡಿರುವ ಆಯೋಗಕ್ಕೆ ಪತ್ರ ಬರೆದಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮತದಾನ ಮುಗಿದು ಒಂದು ವಾರದ ಬಳಿಕ ಮೊದಲ ಹಂತದಲ್ಲಿ ಶೇ. 5.5ರಷ್ಟು, ಎರಡನೇ ಹಂತದಲ್ಲಿ ಶೇ. 5.74ರಷ್ಟು ಮತ ಪ್ರಮಾಣ ಹೆಚ್ಚಳ ಮಾಡಿ ದತ್ತಾಂಶ ಬಿಡುಗಡೆ ಮಾಡಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಇದು ಆಯೋಗದ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡುತ್ತಿದೆ ಎಂದು ಖರ್ಗೆ ಪತ್ರದಲ್ಲಿ ಹೇಳಿದ್ದರು.

VISTARANEWS.COM


on

Election Commission
Koo

ನವದೆಹಲಿ: ಮತದಾನ ಪ್ರಮಾಣ ವರದಿ ಬಿಡುಗಡೆ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪತ್ರ ಬರೆದಿದ್ದ ಎಐಸಿಸಿ ಅಧ್ಯಕ್ಷ(AICC President) ಮಲ್ಲಿಕಾರ್ಜುನ ಖರ್ಗೆ (Mallikarjun Kharge)ಗೆ ಭಾರತೀಯ ಚುನಾವಣಾ ಆಯೋಗ(Election Commission) ಪ್ರತಿಕ್ರಿಯಿಸಿದ್ದು, ನ್ಯಾಯ ಸಮ್ಮತ ಚುನಾವಣೆ ಕೈಗೊಳ್ಳಲು ಅಡೆತಡೆ ಸೃಷ್ಟಿಸಲು ನಡೆಸುತ್ತಿರುವ ಪ್ರಯತ್ನ ಎಂದು ಟಾಂಗ್‌ ಕೊಟ್ಟಿದೆ. ಖರ್ಗೆ ಪತ್ರಕ್ಕೆ ಪತ್ರದ ಮೂಲಕ ಪ್ರತಿಕ್ರಿಯಿಸಿರುವ ಚುನಾವಣಾ ಆಯೋಗ, ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರು ಚುನಾವಣಾ ಆಯೋಗದ ಬಗ್ಗೆ ಸಲ್ಲದ ಆರೋಪ ಮಾಡುವ ಮೂಲಕ ಸಾರ್ವಜನಿಕವಾಗಿ ತಪ್ಪು ಮಾಹಿತಿ ನೀಡಿ, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ಕೈಗೊಳ್ಳಲು ಅಡೆತಡೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಕಿಡಿಕಾರಿದೆ.

ಖರ್ಗೆ ಪತ್ರ ಬರೆದಿದ್ದೇಕೆ?

ಲೋಕಸಭೆ ಚುನಾವಣೆಯ ಮೊದಲ 2 ಹಂತದಲ್ಲಿ ನಡೆದ ಮತದಾನ ಪ್ರಮಾಣದ ಬಗ್ಗೆ ತಡವಾಗಿ ಮಾಹಿತಿ ನೀಡಿರುವ ಆಯೋಗಕ್ಕೆ ಪತ್ರ ಬರೆದಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮತದಾನ ಮುಗಿದು ಒಂದು ವಾರದ ಬಳಿಕ ಮೊದಲ ಹಂತದಲ್ಲಿ ಶೇ. 5.5ರಷ್ಟು, ಎರಡನೇ ಹಂತದಲ್ಲಿ ಶೇ. 5.74ರಷ್ಟು ಮತ ಪ್ರಮಾಣ ಹೆಚ್ಚಳ ಮಾಡಿ ದತ್ತಾಂಶ ಬಿಡುಗಡೆ ಮಾಡಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಇದು ಆಯೋಗದ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡುತ್ತಿದೆ ಎಂದು ಹೇಳಿದ್ದರು.

EC ಪ್ರತಿಕ್ರಿಯೆ ಏನು?

ಮಲ್ಲಿಕಾರ್ಜುನ ಖರ್ಗೆ ಆರೋಪಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಕೇಂದ್ರ ಚುನಾವಣಾ ಆಯೋಗ, ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾಗಿ ಖರ್ಗೆಯವರು ಇಂತಹ ಗೊಂದಲಗಳನ್ನು ಜನರಲ್ಲಿ ಹುಟ್ಟು ಹಾಕೋದು ಸರಿಯಲ್ಲ. ಅವರು ಬರೆದಿರುವ ಪತ್ರ ರಾಜಕೀಯ ಪ್ರೇರಿತವಾಗಿದೆ. ಸಾರ್ವಜನಿಕವಾಗಿ ಸಂಶಯ ವ್ಯಕ್ತಪಡಿಸುವ ಮೂಲಕ ದೇಶದಲ್ಲಿ ಅರಾಜಕ ಪರಿಸ್ಥಿತಿ ನಿರ್ಮಾಣಕ್ಕೆ ದಾರಿ ಮಾಡಿಕೊಟ್ಟಿದ್ದಾರೆ. ಇಂತಹ ನಿರಾಧಾರ ಹೇಳಿಕೆಗಳಿಂದ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಅಡ್ಡಿ ಆತಂಕ ಉಂಟು ಮಾಡಿದ್ದಾರೆ ಎಂದು ಕಿಡಿ ಕಾರಿದೆ.

ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮತ ಪ್ರಮಾಣದ ದತ್ತಾಂಶಗಳ ಬಗ್ಗೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ವೋಟರ್‌ ಟರ್ನ್‌ ಔಟ್‌ ಆಪ್‌ನಲ್ಲಿ ಸಾರ್ವಜನಿಕವಾಗಿ ಈ ಮಾಹಿತಿ ಲಭ್ಯವಿದೆ. ಪ್ರತಿ ಬೂತ್‌ ಏಜೆಂಟ್‌ಗಳಿಗೆ ಮತದಾನ ಪ್ರಮಾಣದ ಬಗ್ಗೆ ಪೂರ್ಣ ವಿವರ ನೀಡಲು ಸೂಚಿಸಲಾಗಿರುತ್ತದೆ. ಇದೇ ಅಂಶಗಳನ್ನು ಮುಂದಿಟ್ಟುಕೊಂಡು ಮತ ಎಣಿಕೆ ಮಾಡಲಾಗುತ್ತದೆ. ಇಲ್ಲಿ ಸಂಶಯ ಪಡುವಂತಹ ಯಾವುದೇ ಕಾರ್ಯ ನಡೆಯುವುದಿಲ್ಲ. ಪದೇ ಪದೆ ದತ್ತಾಂಶಗಳನ್ನು ಬದಲಿಸಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ:Cyber crime: ದೇಶಾದ್ಯಂತ 28,000ಕ್ಕೂ ಹೆಚ್ಚು ಮೊಬೈಲ್‌ ಫೋನ್‌ಗಳು ಬ್ಲಾಕ್‌!

ಇನ್ನು ಈ ಬಗ್ಗೆ ಕಾಂಗ್ರೆಸ್‌ ಮುಖಂಡ ಜೈರಾಮ್‌ ರಮೇಶ್‌ ಪ್ರತಿಕ್ರಿಯಿಸಿದ್ದು, ಚುನಾವಣಾ ಆಯೋಗದೊಂದಿಗೆ ಇಂಡಿಯಾ ಮಿತ್ರಪಕ್ಷಗಳ ನಿಗದಿತ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರ ಪತ್ರ ಮತ್ತು ಪ್ರತಿಕ್ರಿಯೆಯನ್ನು ಪಕ್ಷವು ಪ್ರಸ್ತಾಪಿಸಲಿದೆ ಎಂದು ಹೇಳಿದ್ದಾರೆ.

Continue Reading

ದೇಶ

Rahul Gandhi: ನರೇಂದ್ರ ಮೋದಿ ಪ್ರಧಾನಿಯಲ್ಲ, ಮಹಾರಾಜ ಎಂದ ರಾಹುಲ್ ಗಾಂಧಿ

Rahul Gandhi: ನಾನು ನಿಜವನ್ನೇ ಹೇಳುತ್ತಿದ್ದೇನೆ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಅಲ್ಲ ಬದಲಾಗಿ ಅವರು ರಾಜ. ಅವರಿಗೆ ಸಂಪುಟ, ಸಂಸತ್‌ ಅಥವಾ ಸಂವಿಧಾನ ಇದ್ಯಾವುದೂ ಸಂಬಂಧವೇ ಇಲ್ಲ. ಅವರು 21ನೇ ಶತಮಾನ ಮಹಾರಾಜ. ನಿಜವಾದ ಅಧಿಕಾರವನ್ನು ತಮ್ಮ ಕೈಯಲ್ಲಿಟ್ಟುಕೊಂಡಿರು ಒಂದಿಬ್ಬರು ಶ್ರೀಮಂತರ ಎದುರು ಅವರು ಮಹಾರಾಜ. ನಾನು ಪ್ರಧಾನಿ ಮೋದಿವರಿಗೆ ಚರ್ಚೆಗೆ ಬರುವಂತೆ ಬಹಿರಂಗ ಸವಾಲು ಎಸೆಯುತ್ತಿದ್ದೇನೆ ಎಂದು ರಾಹುಲ್‌ ಗಾಂಧಿ ಹೇಳಿದರು.

VISTARANEWS.COM


on

Rahul Gandhi
Koo

ಲಕ್ನೋ: ಲೋಕಸಭಾ ಚುನಾವಣೆಯ(Lok Sabha election 2024) ಪ್ರಚಾರದ ವೇಳೆ ನಾಯಕರ ನಡುವೆ ಪರಸ್ಪರ ಟೀಕಾ ಪ್ರಹಾರ, ವಾಗ್ದಾಳಿ ಬಿರುಸಿನಿಂದ ಸಾಗಿದೆ. ಇಷ್ಟು ದಿನ ತಮ್ಮನ್ನು ಶೆಹಜಾದೆ(ರಾಜಕುಮಾರ) ಎಂದು ಟೀಕಿಸುತ್ತಿದ್ದ ಪ್ರಧಾನಿ ನರೇಂದ್ರ(Narendra Modi)ಯವರನ್ನು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ(Rahul Gandhi) ರಾಜ ಎಂದು ಕರೆದಿದ್ದಾರೆ. ಲಕ್ನೋದಲ್ಲಿ ನಡೆದ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಅಲ್ಲ.. ಅವರು ರಾಜ ಇದ್ದಂತೆ ಎಂದು ವ್ಯಂಗ್ಯವಾಡಿದ್ದಾರೆ

ನಾನು ನಿಜವನ್ನೇ ಹೇಳುತ್ತಿದ್ದೇನೆ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಅಲ್ಲ ಬದಲಾಗಿ ಅವರು ರಾಜ. ಅವರಿಗೆ ಸಂಪುಟ, ಸಂಸತ್‌ ಅಥವಾ ಸಂವಿಧಾನ ಇದ್ಯಾವುದೂ ಸಂಬಂಧವೇ ಇಲ್ಲ. ಅವರು 21ನೇ ಶತಮಾನ ಮಹಾರಾಜ. ನಿಜವಾದ ಅಧಿಕಾರವನ್ನು ತಮ್ಮ ಕೈಯಲ್ಲಿಟ್ಟುಕೊಂಡಿರು ಒಂದಿಬ್ಬರು ಶ್ರೀಮಂತರ ಎದುರು ಅವರು ಮಹಾರಾಜ. ನಾನು ಪ್ರಧಾನಿ ಮೋದಿವರಿಗೆ ಚರ್ಚೆಗೆ ಬರುವಂತೆ ಬಹಿರಂಗ ಸವಾಲು ಎಸೆಯುತ್ತಿದ್ದೇನೆ ಎಂದರು. ಈ ಬಾರಿ ಚುನಾವಣೆಯಲ್ಲಿ ಬಿಜೆಪಿ 180 ಸ್ಥಾನಗಳನ್ನೂ ಪಡೆಯುವುದಿಲ್ಲ. ಅಲ್ಲದೇ ಈ ಬಾರಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವುದಿಲ್ಲ ಎಂಬುದನ್ನು ನಾನು ಬೇಕಿದ್ದರೆ ಬರೆದು ಕೊಡುತ್ತೇನೆ ಎಂದ್ ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣಾ ಪ್ರಚಾರದಲ್ಲಿ ಮಾತನಾಡುತ್ತಾ ಪ್ರಧಾನಿ ಮೋದಿ ರಾಹುಲ್‌ ಗಾಂಧಿ ಹಾಗೂ ಅಖಿಲೇಶ್‌ ಯಾದವ್‌ ಅವರನ್ನು ರಾಜಕುಮಾರರು ಎಂದು ಟೀಕಿಸಿದ್ದರು. ತುಷ್ಠೀಕರಣ ರಾಜಕೀಯ ನಡೆಸುವ ಉದ್ದೇಶದಿಂದ ಇಬ್ಬರು ರಾಜಕುಮಾರರು ಒಗ್ಗೂಡಿದ್ದಾರೆ ಎಂದು ಅವರು ಹೇಳಿದ್ದರು.

ಕಾಂಗ್ರೆಸ್‌ ತಪ್ಪು ಮಾಡಿದೆ, ತಿದ್ದಿಕೊಳ್ಳುತ್ತೇವೆ

ಇದೇ ವೇಳೆ ಅವರು ಹಿಂದೆ ಕಾಂಗ್ರೆಸ್‌ ತಪ್ಪುಗಳು ಮಾಡಿವೆ. ಅದನ್ನು ತಿದ್ದಿಕೊಳ್ಳುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು. ಕಾಂಗ್ರೆಸ್‌ನಲ್ಲಿ ಬದಲಾವಣೆ ಬೇಕಾಗಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಬಹಳಷ್ಟು ಬದಲಾವಣೆಗಳನ್ನು ಅಳವಡಿಸಿಕೊಳ್ಳಲಿದೆ. ನಾನೊಬ್ಬ ಕಾಂಗ್ರೆಸ್ಸಿಗನಾಗಿ ಕಾಂಗ್ರೆಸ್‌ ಪಕ್ಷ ಕೂಡ ತಪ್ಪುಗಳನ್ನು ಮಾಡಿದೆ ಎಂದು ನಾನು ಹೇಳುತ್ತೇನೆ ಎಂದರು. ನಾನು ಅಧಿಕಾರಗಳ ನಡುವೆಯೇ ಹುಟ್ಟಿದವನು. ಆದರೂ ನನಗೆ ಅಧಿಕಾರದ ಬಗ್ಗೆ ಯಾವುದೇ ವ್ಯಾಮೋಹ ಇಲ್ಲ. ಇದು ಜನರಿಗೆ ಸಹಾಯ ಮಾಡಲು ಇರುವ ವ್ಯವಸ್ಥೆ ಅಷ್ಟೇ ಎಂದರು.

ಇದನ್ನೂ ಓದಿ: Prajwal Revanna case: ಪ್ರಜ್ವಲ್‌ ರೇವಣ್ಣ ವಿರುದ್ಧ ರೆಡ್‌ ಕಾರ್ನರ್ ಬ್ರಹ್ಮಾಸ್ತ್ರ; ಯಾವ ದೇಶದಲ್ಲಿದ್ದರೂ ಅರೆಸ್ಟ್‌ ಮಾಡಲು ಸಿದ್ಧತೆ?

Continue Reading

ದೇಶ

Narendra Modi: “ದಿವ್ಯಾಂಗ ಸಹೋದರಿಯರಿಗೆ ವ್ಯವಸ್ಥೆ ಮಾಡಿ.. ಅಲ್ಲಿವರೆಗೆ ಭಾಷಣ ಮುಂದುವರೆಸಲ್ಲ”; ಪ್ರಧಾನಿ ಮೋದಿ ವಿಡಿಯೋ ವೈರಲ್

Narendra Modi:ತೆಲಂಗಾಣದ ಮೆಹಬೂಬ್ ನಗರದಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಚೇತನ ಮಹಿಳೆಯರಿಗಾಗಿ ಮಾಡಿದ ಕಾರ್ಯ ಎಲ್ಲರ ಹೃದಯ ಗೆದ್ದಿದೆ. ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ತಮ್ಮನ್ನು ಆಶೀರ್ವದಿಸಲು ಅಲ್ಲಿಗೆ ಬಂದಿದ್ದ ದಿವ್ಯಾಂಗ ಸಹೋದರಿಯರಿಗೆ ದಾರಿ ಮಾಡಿಕೊಡುವಂತೆ ನೆರೆದಿದ್ದ ಜನರಿಗೆ ಮನವಿ ಮಾಡಿದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್‌ ವೈರಲ್‌ ಆಗಿದೆ.

VISTARANEWS.COM


on

Narendra Modi
Koo

ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ(Narendra Modi) ತಮ್ಮ ಚುನಾವಣಾ ಪ್ರಚಾರ(Lok Sabha Elction 2024)ದ ವೇಳೆ, ರ್ಯಾಲಿಗಳಲ್ಲಿ ಅದೆಷ್ಟು ಅಬ್ಬರದ ಭಾಷಣದಲ್ಲಿ ತೊಡಗಿದ್ದರೂ ಎದುರಿಗೆ ನೆರೆದಿರುವ ಜನರ ಮೇಲೆ ಪ್ರತ್ಯೇಕ ಗಮನ ಇದ್ದೇ ಇರುತ್ತದೆ. ಕೆಲವೊಮ್ಮೆ ಸಭಿಕರ ನಡುವೆ ಏನಾದರೂ ವಿಚಾರಗಳು ಕಂಡು ಬಂದಲ್ಲಿ ತಕ್ಷಣ ಅಲ್ಲೇ ಅದಕ್ಕೆ ಪ್ರತಿಕ್ರಿಯಿಸಿ ಗಮನ ಸೆಳೆದದ್ದೂ ಇದೆ. ಇದೀಗ ಮತ್ತೆ ಅಂತಹದ್ದೇ ಒಂದು ಘಟನೆ ತೆಲಂಗಾಣದಲ್ಲಿ ನಡೆದಿದೆ. ನೆಚ್ಚಿನ ನಾಯಕನ್ನು ಕಾಣಲೆಂದು ಬಂದಿದ್ದ ದಿವ್ಯಾಂಗ ಸಹೋದರಿಯರನ್ನು ವೇದಿಕೆ ಮೇಲಿದ್ದ ಪ್ರಧಾನಿ ಗಮನಿಸಿ ಅವರಿಗೆ ಕೂರಲು ಸರಿಯಾದ ವ್ಯವಸ್ಥೆ ಮಾಡಿಕೊಡುವಂತೆ ಕಾರ್ಯಕರ್ತರಿ(BJP Workers)ಗೆ ಸೂಚನೆ ನೀಡಿದ್ದಾರೆ.

ತೆಲಂಗಾಣದ ಮೆಹಬೂಬ್ ನಗರದಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಚೇತನ ಮಹಿಳೆಯರಿಗಾಗಿ ಮಾಡಿದ ಕಾರ್ಯ ಎಲ್ಲರ ಹೃದಯ ಗೆದ್ದಿದೆ. ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ತಮ್ಮನ್ನು ಆಶೀರ್ವದಿಸಲು ಅಲ್ಲಿಗೆ ಬಂದಿದ್ದ ದಿವ್ಯಾಂಗ ಸಹೋದರಿಯರಿಗೆ ದಾರಿ ಮಾಡಿಕೊಡುವಂತೆ ನೆರೆದಿದ್ದ ಜನರಿಗೆ ಮನವಿ ಮಾಡಿದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್‌ ವೈರಲ್‌ ಆಗಿದೆ.

ಇದನ್ನೂ ಓದಿ:K.S. Rajanna: ಛಲಬಿಡದ ಸಾಧಕನಿಗೆ ಪದ್ಮಶ್ರೀ ಗರಿ; ಅಂಗವೈಕಲ್ಯ ಮೆಟ್ಟಿನಿಂತ ಕನ್ನಡಿಗನಿಗೆ ದೇಶದ ನಮನ- ವೀಡಿಯೋ ವೈರಲ್‌

ದಿವ್ಯಾಂಗ ಸಹೋದರಿಯರು ನನ್ನನ್ನು ಆಶೀರ್ವದಿಸಲು ಬರುತ್ತಿದ್ದಾರೆ, ಅವರು ಮುಂದೆ ಬರಲಿ.ಈ ಮಹಿಳೆಯರಿಗೆ ಸರಿಯಾದ ವ್ಯವಸ್ಥೆ ಮಾಡುವವರೆಗೂ ತಾವು ಭಾಷಣವನ್ನ ಮುಂದುವರಿಸುವುದಿಲ್ಲ ಎಂದು ಪ್ರಧಾನಿ ಹೇಳಿದರು. ಅವರು ನೋವಿನಿಂದ ಬಳಲುತ್ತಿರುವುದನ್ನು ನಾನು ನೋಡಲಾರೆ, ದಯವಿಟ್ಟು ಅವರಿಗೆ ವ್ಯವಸ್ಥೆ ಮಾಡಿ” ಎಂದು ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ. ಆಗ ಅಲ್ಲಿ ನೆರದಿದ್ದ ಜನರು ವಿಶೇಷ ಚೇತನ ಮಹಿಳೆಯರನ್ನ ಎತ್ತಿಕೊಂಡು ಜನಸಮೂಹದ ಮುಂದಿನ ಸಾಲಿನಲ್ಲಿ ಕೂರಿಸಿದರು. ಬಳಿಕ ಪ್ರಧಾನಿ ಭಾಷಣ ಮುಂದುವರೆಸಿದರು. ಪ್ರಧಾನಿ ಮೋದಿಯವರ ಈ ಕಾರ್ಯಕ್ಕೆ ನೆರೆದಿದ್ದ ಸಾವಿರಾರು ಜನ ಚಪ್ಪಾಳೆ ಮೂಲಕ ಮೆಚ್ಚುಗೆ ಸೂಚಿಸಿದರು. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲೂ ವೈರಲ್‌ ಆಗಿದ್ದು, ಅನೇಕ ಜನ ಪ್ರಶಂಸೆ ವ್ಯಕ್ತಪಡಿದ್ದಾರೆ. ಇನ್ನು ಕೆಲವರು ಇದು ಕೇವಲ ಪ್ರಚಾರಕ್ಕಾಗಿ ಮಾಡುತ್ತಿರುವುದು ಎಂದು ಕಮೆಂಟ್‌ ಮಾಡಿದ್ದಾರೆ.

ಪ್ರಧಾನಿ ಮೋದಿ ನಿನ್ನೆ ತೆಲಂಗಾಣದ ಹೈದರಾಬಾದ್‌ ಮತ್ತು ಮೆಹಬೂಬ್‌ ನಗರದಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದರು. ಈ ವೇಳೆ ಮಾತನಾಡಿದ ಅವರು, ತೆಲಂಗಾಣದ ಜನರಿಗೆ ಈ ಚುನಾವಣೆ ದೇಶದ ಭವಿಷ್ಯ ನಿರ್ಧರಿಸುತ್ತದೆ ಎಂಬುದು ತಿಳಿದಿದೆ ಎಂದರು. ಇದೇ ವೇಳೆ ಅವರು ಕಾಂಗ್ರೆಸ್‌ ಮತ್ತು ಬಿಆರ್‌ ಎಸ್‌ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.

Continue Reading
Advertisement
Bengaluru News
ಬೆಂಗಳೂರು16 mins ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Madhu Bangarappa
ಕರ್ನಾಟಕ26 mins ago

ನಿಗದಿಗಿಂತ ಹೆಚ್ಚಿನ ಫೀಸ್ ತೆಗೆದುಕೊಂಡರೆ ಕ್ರಮ; ಖಾಸಗಿ ಶಾಲೆಗಳಿಗೆ ಮಧು ಬಂಗಾರಪ್ಪ ಖಡಕ್‌ ಎಚ್ಚರಿಕೆ

Navneet Rana
ದೇಶ34 mins ago

Navneet Rana: ಮೋದಿಯವರ ಸಿಂಹಗಳು, ರಾಮಭಕ್ತರು ಗಲ್ಲಿ ಗಲ್ಲಿಯಲ್ಲಿದ್ದಾರೆ ಹುಷಾರ್‌!- ಓವೈಸಿಗೆ ಮತ್ತೆ ನವನೀತ್‌ ರಾಣಾ ಟಾಂಗ್

Murder Case in kodagu
ಕೊಡಗು1 hour ago

Murder Case : ಕೊಡಗು ಹತ್ಯೆ ಕೇಸ್‌; ಬಾಲಕಿ ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ! ಬೆಚ್ಚಿ ಬಿದ್ದ ಪೊಲೀಸರು

Arvind Kejriwal
ದೇಶ1 hour ago

Arvind Kejriwal: ಜೈಲಿನಿಂದ ಬಂದ ಕೇಜ್ರಿವಾಲ್‌ಗೆ ಆರತಿ ಬೆಳಗಿ, ಹೂ ಹಾರ ಹಾಕಿ ಸ್ವಾಗತಿಸಿದ ತಾಯಿ! ವಿಡಿಯೊ ನೋಡಿ

Siddaramaiah
ಕರ್ನಾಟಕ2 hours ago

Siddaramaiah: ಮೋದಿ ಸುಳ್ಳಿನ ಸರದಾರ, ಭಾವನಾತ್ಮಕ ಆಟ ನಡೆಯಲ್ಲ; ಸಿದ್ದರಾಮಯ್ಯ ತಿರುಗೇಟು

accident case
ಕ್ರೈಂ2 hours ago

Accident Case : ಬ್ಯಾನರ್‌ ಕಟ್ಟುವಾಗ ಕರೆಂಟ್‌ ಶಾಕ್‌ಗೆ ವ್ಯಕ್ತಿ ಸಾವು; ಡಿವೈಡರ್‌ಗೆ ಗುದ್ದಿ ಪಲ್ಟಿಯಾದ ಕಾರು

Chinese app
ವಿದೇಶ2 hours ago

Chinese Apps: ಟಿಕ್‌ಟಾಕ್‌ ಮಾತ್ರ ಅಲ್ಲ.. ಚೀನಾದ ಈ ಆಪ್‌ಗಳೂ ಅಷ್ಟೇ ಡೇಂಜರಸ್‌; ಶಾಕಿಂಗ್‌ ವರದಿ ಔಟ್‌

Jyoti Rai
ಕಿರುತೆರೆ2 hours ago

Jyoti Rai: ನೋವಿನ ನಡುವೆಯೂ ಸಹಾಯ ಹಸ್ತ ಚಾಚಿದ ನಟಿ ಜ್ಯೋತಿ ರೈ; ವಿಡಿಯೊ ವೈರಲ್‌ ಮಾಡುವಂತೆ ಸವಾಲು ಹಾಕಿದ್ದೇಕೆ?

BS Yediyurappa
ಕರ್ನಾಟಕ3 hours ago

BS Yediyurappa: ಪ್ರಜ್ವಲ್‌ ಕೇಸ್‌ನಿಂದ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಧಕ್ಕೆ? ಯಡಿಯೂರಪ್ಪ ಹೇಳಿದ್ದಿಷ್ಟು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ10 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ1 day ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ1 day ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ2 days ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಟ್ರೆಂಡಿಂಗ್‌