Narendra Modi: ಬಿಜೆಪಿ ಕಾರ್ಯಕರ್ತರೊಂದಿಗೆ ಮೋದಿ ಸ್ನೇಹ ಮಿಲನ; ನಾವೆಲ್ಲರೂ ಒಂದೇ ಕುಟುಂಬ ಎಂದು ಬಣ್ಣಿಸಿದ ಪ್ರಧಾನಿ - Vistara News

ರಾಜಕೀಯ

Narendra Modi: ಬಿಜೆಪಿ ಕಾರ್ಯಕರ್ತರೊಂದಿಗೆ ಮೋದಿ ಸ್ನೇಹ ಮಿಲನ; ನಾವೆಲ್ಲರೂ ಒಂದೇ ಕುಟುಂಬ ಎಂದು ಬಣ್ಣಿಸಿದ ಪ್ರಧಾನಿ

Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು. ಮೂರನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ನೆರವಾದ ಪ್ರತಿಯೊಬ್ಬರಿಗೂ ಮೋದಿ ಧನ್ಯವಾದ ಅರ್ಪಿಸಿದರು. ‘ಸ್ನೇಹ ಮಿಲನ್‌’ ಹೆಸರಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನಾವೆಲ್ಲರೂ ಒಂದೇ ಕುಟುಂಬದ ಸದಸ್ಯರು ಎಂದು ಮೋದಿ ಬಣ್ಣಿಸಿದರು. ತವರು ರಾಜ್ಯ ಗುಜರಾತ್ ಮತ್ತು ರಾಷ್ಟ್ರ ಮಟ್ಟದಲ್ಲಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡ ದಿನಗಳನ್ನು ನೆನಪಿಸಿಕೊಂಡ ಅವರು, ತಮ್ಮ ಅನುಭವಗಳನ್ನು ಹಂಚಿಕೊಂಡರು ಮತ್ತು ಸೀಮಿತ ಸಂಪನ್ಮೂಲಗಳೊಂದಿಗೆ ಪಕ್ಷವು ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ಹಂಚಿಕೊಂಡರು.

VISTARANEWS.COM


on

Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುರುವಾರ ದೆಹಲಿಯ ಬಿಜೆಪಿ (BJP) ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು. ಮೂರನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ನೆರವಾದ ಪ್ರತಿಯೊಬ್ಬರಿಗೂ ಮೋದಿ ಧನ್ಯವಾದ ಅರ್ಪಿಸಿದರು. ‘ಸ್ನೇಹ ಮಿಲನ್‌’ ಹೆಸರಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿಶೇಷ ಎಂದರೆ ಮೂರನೇ ಬಾರಿ ಪ್ರದಾನಿ ಪಟ್ಟಕ್ಕಲೇರಿದ ಬಳಿಕ ಕಾರ್ಯಕರ್ತರೊಂದಿಗೆ ಮೋದಿ ನಡೆಸಿದ ಮೊದಲ ಸಮಾಲೋಚನೆ ಇದಾಗಿದೆ.

ಬಿಜೆಪಿ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರು ಮೋದಿ ಅವರನ್ನು ಪಕ್ಷದ ಕಚೇರಿಗೆ ಸ್ವಾಗತಿಸಿದರು. ಎರಡೂವರೆ ಗಂಟೆಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್, ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು.

ನಾವೆಲ್ಲರೂ ಒಂದೇ ಕುಟುಂಬದ ಸದಸ್ಯರು ಎಂದು ಮೋದಿ ಬಣ್ಣಿಸಿದರು. ತವರು ರಾಜ್ಯ ಗುಜರಾತ್ ಮತ್ತು ರಾಷ್ಟ್ರ ಮಟ್ಟದಲ್ಲಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡ ದಿನಗಳನ್ನು ನೆನಪಿಸಿಕೊಂಡ ಅವರು, ತಮ್ಮ ಅನುಭವಗಳನ್ನು ಹಂಚಿಕೊಂಡರು ಮತ್ತು ಸೀಮಿತ ಸಂಪನ್ಮೂಲಗಳೊಂದಿಗೆ ಪಕ್ಷವು ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ಬಹಿರಂಗಪಡಿಸಿದರು.

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಯಾವುದೇ ರಜಾಗಳಿಲ್ಲದೆ ಮೂರು ತಿಂಗಳ ಕಾಲ ಕೆಲಸ ಮಾಡಲು ಎಲ್ಲವನ್ನೂ ತ್ಯಾಗ ಮಾಡಿದ್ದಕ್ಕಾಗಿ ಪಕ್ಷದ ಸಿಬ್ಬಂದಿಗೆ ಧನ್ಯವಾದ ಅರ್ಪಿಸಿದ ಅವರು, ಪಕ್ಷದ ಸಂಘಟನೆಗಿಂತ ದೊಡ್ಡದು ಯಾವುದೂ ಇಲ್ಲ ಮತ್ತು ಎಲ್ಲ ಸಿಬ್ಬಂದಿ ಅದರ ಕೇಂದ್ರ ಬಿಂದು ಎಂದು ಒತ್ತಿ ಹೇಳಿದರು. ತಮ್ಮೊಂದಿಗೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡ ಹಿರಿಯ ಕಾರ್ಯಕರ್ತರನ್ನು ಮುಂದೊಂದು ದಿನ ಭೇಟಿಯಾಗುವುದಾಗಿ ಅವರು ತಿಳಿಸಿದರು.

ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. “ಪ್ರಧಾನಿ ಮೋದಿ ಅವರು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು. ಈ ಪೈಕಿ ಅನೇಕರು ದಶಕಗಳಿಂದ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಪಕ್ಷವು 2 ಸ್ಥಾನಗಳಿಂದ 303ಕ್ಕೆ ಏರಿರುವುದನ್ನು ಅವರು ನೋಡಿದ್ದಾರೆʼʼ ಎಂದು ತಿಳಿಸಿದ್ದಾರೆ. ಅವರನ್ನು ಪಕ್ಷ ಗುರುತಿಸಿದ್ದಕ್ಕೆ ಭಾವುಕರಾಗಿದ್ದರು ಎಂದು ಹೇಳಿದ್ದಾರೆ.

ವಿಶೇಷವೆಂದರೆ ಜುಲೈ ಅಂತ್ಯದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಯುವ ಸಾಧ್ಯತೆ ಇದೆ. ಸಭೆಯಲ್ಲಿ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಉಪಸ್ಥಿತರಿರಲಿದ್ದಾರೆ. ಮೂಲಗಳ ಪ್ರಕಾರ ಲೋಕಸಭೆ ಚುನಾವಣೆ ಫಲಿತಾಂಶ ಹಾಗೂ ಸರ್ಕಾರ ಮತ್ತು ಸಂಘಟನೆಯ ನಡುವಿನ ಸಮನ್ವಯತೆ ಕುರಿತು ಚರ್ಚೆ ನಡೆಯಲಿದೆ.

ಇದನ್ನೂ ಓದಿ: UP CM v/s DCM: ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ; ಯೋಗಿ ತಲೆದಂಡ ಪಕ್ಕಾನಾ?

ಜುಲೈ 14ರಂದು, ಉತ್ತರ ಪ್ರದೇಶ ಬಿಜೆಪಿ ಘಟಕವು ತನ್ನ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯನ್ನು ಲಖನೌ ಡಾ.ರಾಮ್ ಮನೋಹರ್ ಲೋಹಿಯಾ ಕಾನೂನು ವಿಶ್ವವಿದ್ಯಾಲಯದ ಅಂಬೇಡ್ಕರ್ ಸಭಾಂಗಣದಲ್ಲಿ ನಡೆಸಿತ್ತು. ಈ ಸಭೆಯಲ್ಲಿ 2024ರ ಲೋಕಸಭೆಯಲ್ಲಿ ಪಕ್ಷದ ಕಳಪೆ ಪ್ರದರ್ಶನದ ಬಗ್ಗೆ ಚರ್ಚಿಸಲಾಗಿತ್ತು. 

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Mohan Bhagwat: ಕೆಲವರು ದೇವರಾಗಲು ಬಯಸುತ್ತಾರೆ; ಪರೋಕ್ಷವಾಗಿ ಮೋದಿಗೆ ತಿವಿದ್ರಾ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್?

Mohan Bhagwat: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ನೀಡಿದ ಹೇಳಿಕೆ ಈ ಚರ್ಚೆಯ ಕಿಡಿ ಹೊತ್ತಿಸಿದೆ. ಜಾರ್ಖಂಡ್‌ನ ಗುಮ್ಲಾದಲ್ಲಿ ವಿಕಾಸ್ ಭಾರತಿ ಆಯೋಜಿಸಿದ್ದ ಕಾರ್ಯಕರ್ತರ ಮಾತನಾಡಿದ ಭಾಗವತ್, ಸ್ವಯಂ ಅಭಿವೃದ್ಧಿಯ ಹಾದಿಯಲ್ಲಿ, ಒಬ್ಬ ಮನುಷ್ಯನು ‘ಸೂಪರ್‌ಮ್ಯಾನ್‌’, ನಂತರ ‘ದೇವತೆ’, ‘ಭಗವಾನ್’ ಮತ್ತು ‘ವಿಶ್ವರೂಪ’ ಆಗಲು ಬಯಸಬಹುದು. ಆದರೆ ಮುಂದೇನು ಎಂದು ಯಾರಿಗೂ ಖಚಿತವಿಲ್ಲ. ಆಂತರಿಕ ಮತ್ತು ಬಾಹ್ಯ ಆತ್ಮದ ಬೆಳವಣಿಗೆಗೆ ಅಂತ್ಯವಿಲ್ಲ ಮತ್ತು ಮಾನವೀಯ ಕಾರ್ಯಕಕ್ಕಾಗಿ ಅವಿರತವಾಗಿ ಶ್ರಮಿಸಬೇಕುʼʼ ಎಂದು ಹೇಳಿದ್ದು, ಇದು ಪ್ರಧಾನಿ ಮೋದಿ ಅವರ ಮೇಲಿನ ಪರೋಕ್ಷ ವಾಗ್ದಾಳಿ ಎಂದೇ ಹಲವರು ವಿಶ್ಲೇಷಿಸುತ್ತಿದ್ದಾರೆ.

VISTARANEWS.COM


on

Mohan Bhagwat
Koo

ರಾಂಚಿ: ಕೆಲವರು ಸೂಪರ್‌ ಮ್ಯಾನ್ ಆಗಲು ಬಯಸುತ್ತಾರೆ, ನಂತರ ‘ಭಗವಾನ್’ (ದೇವರು) ಆಗಲು ಬಯಸುತ್ತಾರೆ, ಬಳಿಕ ವಿಶ್ವರೂಪ ಹೊಂದಲು ನೋಡುತ್ತಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಗುರುವಾರ ಹೇಳಿದ್ದು, ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ಈ ಹೇಳಿಕೆ ಪ್ರಧಾನಿ ಮೋದಿ ಅವರ ಮೇಲಿನ ಪರೋಕ್ಷ ವಾಗ್ದಾಳಿ ಎಂದೇ ಹಲವರು ವಿಶ್ಲೇಷಿಸುತ್ತಿದ್ದಾರೆ.

ಜಾರ್ಖಂಡ್‌ನ ಗುಮ್ಲಾದಲ್ಲಿ ವಿಕಾಸ್ ಭಾರತಿ ಆಯೋಜಿಸಿದ್ದ ಕಾರ್ಯಕರ್ತರ ಮಾತನಾಡಿದ ಭಾಗವತ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಸ್ವಯಂ ಅಭಿವೃದ್ಧಿಯ ಹಾದಿಯಲ್ಲಿ, ಒಬ್ಬ ಮನುಷ್ಯನು ‘ಸೂಪರ್‌ಮ್ಯಾನ್‌’, ನಂತರ ‘ದೇವತೆ’, ‘ಭಗವಾನ್’ ಮತ್ತು ‘ವಿಶ್ವರೂಪ’ ಆಗಲು ಬಯಸಬಹುದು. ಆದರೆ ಮುಂದೇನು ಎಂದು ಯಾರಿಗೂ ಖಚಿತವಿಲ್ಲ. ಆಂತರಿಕ ಮತ್ತು ಬಾಹ್ಯ ಆತ್ಮದ ಬೆಳವಣಿಗೆಗೆ ಅಂತ್ಯವಿಲ್ಲ ಮತ್ತು ಮಾನವೀಯ ಕಾರ್ಯಕಕ್ಕಾಗಿ ಅವಿರತವಾಗಿ ಶ್ರಮಿಸಬೇಕು. ಒಬ್ಬ ಕಾರ್ಮಿಕನು ತನ್ನ ಕೆಲಸದಿಂದ ಎಂದಿಗೂ ತೃಪ್ತನಾಗಬಾರದುʼʼ ಎಂದು ಹೇಳಿದ್ದಾರೆ.

“ಕೆಲಸ ಮುಂದುವರಿಯಬೇಕು. ಪರಿಸರ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ನಿರಂತರವಾಗಿ ಕೆಲಸ ಮಾಡಲು ಪ್ರಯತ್ನಿಸಬೇಕು. ಇದಕ್ಕೆ ಅಂತ್ಯವಿಲ್ಲ ಮತ್ತು ವಿವಿಧ ಕ್ಷೇತ್ರಗಳಲ್ಲಿ ನಿರಂತರ ಕೆಲಸವು ಏಕೈಕ ಪರಿಹಾರ. ಭಾರತದ ಪ್ರಕೃತಿಯಂತೆ ಈ ಜಗತ್ತನ್ನು ಸುಂದರ ಸ್ಥಳವನ್ನಾಗಿ ಮಾಡಲು ನಾವು ಶ್ರಮಿಸಬೇಕು” ಎಂದು ಅವರು ಕರೆ ನೀಡಿದ್ದಾರೆ.

ಸಮಾಜದ ಕಲ್ಯಾಣಕ್ಕಾಗಿ ಪ್ರತಿಯೊಬ್ಬರೂ ಅವಿರತವಾಗಿ ಶ್ರಮಿಸಬೇಕು ಎಂದ ಅವರು ʼʼದೇಶದ ಭವಿಷ್ಯದ ಬಗ್ಗೆ ಯಾವುದೇ ಸಂದೇಹವಿಲ್ಲ. ಅಭಿವೃದ್ಧಿಗಾಗಿ ಎಲ್ಲರೂ ಕೈಜೋಡಿಸುತ್ತಿದ್ದಾರೆʼʼ ಎಂದಿದ್ದಾರೆ. ಕೋವಿಡ್ -19 ಸಾಂಕ್ರಾಮಿಕ ರೋಗದ ನಂತರ ಭಾರತವು ಜಗತ್ತಿಗೆ ಶಾಂತಿ ಮತ್ತು ಸಂತೋಷದ ಮಾರ್ಗವನ್ನು ತೋರಿದೆ. ‘ಸನಾತನ ಧರ್ಮ’ ಮಾನವಕುಲದ ಕಲ್ಯಾಣದಲ್ಲಿ ನಂಬಿಕೆ ಇಟ್ಟಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಕಾಂಗ್ರೆಸ್‌ ವಾಗ್ದಾಳಿ

ಭಾಗವತ್ ತಮ್ಮ ಭಾಷಣದಲ್ಲಿ ಮೋದಿ ಅವರ ಹೆಸರನ್ನು ಎಲ್ಲಿಯೂ ಉಲ್ಲೇಖಿಸದಿದ್ದರೂ ಕಾಂಗ್ರೆಸ್‌ ನಾಯಕ ಜೈರಾಮ್ ರಮೇಶ್ ಪ್ರತಿಕ್ರಿಯಿಸಿ, ಆರ್‌ಎಸ್‌ಎಸ್‌ ಮುಖ್ಯಸ್ಥರು ಪ್ರಧಾನಿ ತನ್ನನ್ನು ದೇವರು ಕಳುಹಿಸಿದ್ದಾರೆ ಎಂಬ ಹೇಳಿಕೆಯ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ ಎಂದಿದ್ದಾರೆ. ಲೋಕಸಭೆ ಚುನಾವಣೆ ವೇಳೆ ನರೇಂದ್ರ ಮೋದಿ ಅವರು ‘ನಾನು ಜೈವಿಕವಾಗಿ ಜನಿಸಿದಂತೆ ಭಾಸವಾಗುತ್ತಿಲ್ಲ. ನನ್ನನ್ನು ಭಗವಂತನೇ ಕಳಿಸಿದ್ದಾನೆ ಎನಿಸುತ್ತಿದೆ’ ಎಂಬ ಹೇಳಿಕೆ ನೀಡಿದ್ದರು. ಇದಕ್ಕೂ ಮುನ್ನ ಭಾಗವತ್‌ ಅವರು ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆಗೆ ಕೆಲವು ನಾಯಕರ ಅಹಂಕಾರವೇ ಕಾರಣ ಎಂದು ಹೇಳಿದ್ದರು. ಜತೆಗೆ ಭಾಗವತ್ ಅವರು ಮಣಿಪುರ ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಕಲಹ ಪೀಡಿತ ಈಶಾನ್ಯ ರಾಜ್ಯದ ಪರಿಸ್ಥಿತಿಯನ್ನು ಆದ್ಯತೆಯೊಂದಿಗೆ ಪರಿಗಣಿಸಬೇಕು ಎಂದು ಸಲಹೆ ನೀಡಿದ್ದರು.

ಸದ್ಯ ಭಾಗವತ್‌ ಅವರ ಹೇಳಿಕೆಯನ್ನು ಜೈರಾಂ ರಮೇಶ್‌ ʼಇದು ನಾಗಪುರದಿಂದ (ಆರ್‌ಎಸ್‌ಎಸ್‌ ಕಚೇರಿಯಿಂದ) ಲೋಕಕಲ್ಯಾಣ ಮಾರ್ಗದತ್ತ (ಪ್ರಧಾನಿ ನಿವಾಸದತ್ತ) ಹಾರಿಸಿದ ಅಗ್ನಿಕ್ಷಿಪಣಿ’ ಎಂದು ವ್ಯಂಗ್ಯವಾಡಿದ್ದಾರೆ.

Continue Reading

ಪ್ರಮುಖ ಸುದ್ದಿ

Karnataka Assembly : ಗದ್ದಲದಲ್ಲೇ ಮುಕ್ತಾಯಗೊಂಡ ಮೂರನೇ ದಿನದ ವಿಧಾನಮಂಡಲ ಅಧಿವೇಶನ

Karnataka Assembly :ವಾಲ್ಮಿಕಿ ನಿಗಮದ ಹಗರಣ ಪ್ರಕರಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರ್​ ಎಂಬುವರ ಡೆತ್ ನೋಟ್​ ಓದುವಾಗ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹೆಸರನ್ನೇ ಬಿಟ್ಟಿದ್ದಾರೆ ಎಂಬುದ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅರೋಪಿಸಿದರು. ಬಳಿಕ ಬಿಜೆಪಿ ಹಾಗೂ ಜೆಡಿಎಸ್​ ಕಾರ್ಯಕರ್ತರು ಸದನದ ಬಾವಿಗೆ ಇಳಿದ ಪ್ರತಿಭಟನೆ ನಡೆಸಿದರು.

VISTARANEWS.COM


on

Karnataka Assembly
Koo

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣ ಹಾಗೂ ಮುಡಾ ಸೈಟ್​ ಪ್ರಕರಣದ ವಿಧಾನ ಮಂಡಲ ಅಧಿವೇಶನದ (Karnataka Assembly) ಮೂರನೇ ದಿನವನ್ನೂ ಹಾಳುಗಡೆವಿತು. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್​ ಮುಂದಾದರೆ, ಕಾಂಗ್ರೆಸ್​ ಮುಜುಗರದಿಂದ ತಪ್ಪಿಸಲು ನಾನಾ ರೀತಿಯ ಪ್ರಯತ್ನಗಳನ್ನು ಮಾಡಿತು. ಆದರೆ ಪ್ರತಿಭಟನೆ ಹಾಗೂ ಪ್ರತಿರೋಧಗಳಿಂದಾಗಿ ಕಲಾಪದ ಅವಧಿ ನಷ್ಟವಾಯಿತು.

ವಾಲ್ಮಿಕಿ ನಿಗಮದ ಹಗರಣ ಪ್ರಕರಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರ್​ ಎಂಬುವರ ಡೆತ್ ನೋಟ್​ ಓದುವಾಗ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹೆಸರನ್ನೇ ಬಿಟ್ಟಿದ್ದಾರೆ ಎಂಬುದ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅರೋಪಿಸಿದರು. ಬಳಿಕ ಬಿಜೆಪಿ ಹಾಗೂ ಜೆಡಿಎಸ್​ ಕಾರ್ಯಕರ್ತರು ಸದನದ ಬಾವಿಗೆ ಇಳಿದ ಪ್ರತಿಭಟನೆ ನಡೆಸಿದರು.

ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಹಾಗೂ ಜೆಡಿಎಸ್​ ಸದಸ್ಯರು ವಿಧಾನ ಸೌಧದ ಗೇಟ್ ಬಳಿಯೂ ಪ್ರತಿಭಟನೆ ನಡೆಸಿದರು. ಸರ್ಕಾರವು ಹಗರಣಗಳನ್ನು ಮುಚ್ಚಿ ಹಾಕಲು ಯತ್ನಿಸುತ್ತಿದೆ ಎಂದು ವಿಪಕ್ಷಗಳ ಸದಸ್ಯರು ಈ ವೇಳೆ ಆರೋಪಿಸಿದರು.

ಸಂಧಾನ ಸಭೆ

ಸಿಎಂ ಸಿದ್ದರಾಮಯ್ಯ ಅವರು ಉತ್ತರ ಕೊಡುವಾಗ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸಿರುವ ಹಿನ್ನೆಲೆಯಲ್ಲಿಯ ಸ್ಪೀಕರ್​ ಯುಟಿ ಖಾದರ್ ಸಂಧಾನ ಸಭೆ ಕರೆದರು. ಆಡಳಿತ ಪಕ್ಷದ ಕಡೆಯಿಂದ ಸಿದ್ದರಾಮಯ್ಯ, ಎಚ್ ಕೆ ಪಾಟೀಲ್ ,ಜಾರ್ಜ್ ಹಾಗೂ ವಿಪಕ್ಷಗಳಿಂದ ಆರ್ ಆಶೋಕ್, ವಿಜೇಯೇಂದ್ರ, ಸುರೇಶ್ ಬಾಬು ಇದ್ದರು.

ಸಂಧಾನ ಸಭೆ ನಡೆಸಿದ ಬಳಿಕವೂ ವಿಪಕ್ಷಗಳ ಸದಸ್ಯರು ತಮ್ಮ ಹೋರಾಟವನ್ನ ಮುಂದುವರಿಸಿದ ಕಾರಣ ಕಲಾಪ ಬಹುತೇಕ ಗದ್ದಲದಲ್ಲಿಯೇ ಅಂತ್ಯಗೊಂಡಿತು.

ಅಹಿಂದಕ್ಕೆ ಅನ್ಯಾಯ ಮಾಡುವ ಕೆಲಸ ಸಿಎಂ ಮಾಡಿದ್ದಾರೆ. ವಾಲ್ಮೀಕಿ ನಿಗಮದ ಹಣದಿಂದ ಹೆಂಡ ಹಚ್ಚಿದ್ದಾರೆ. ಡೆತ್ ನೋಟ್ ನಲ್ಲಿ ಅಧಿಕಾರಿಗಳ ಹೆಸರನ್ನು ಮಾತ್ರ ಉಲ್ಲೇಖ ಮಾಡ್ತಾರೆ. ಸಚಿವರ ಹೆಸರು ಉಲ್ಲೇಖ ಮಾಡುತ್ತಾರೆ. ಇದೇ ವೇಳೆ ನಾಗೇಂದ್ರ ಕ್ಲಿನ್ ಚಿಟ್ ಪಡೆದು ಹೊರಗೆ ಬರ್ತಾರೆ ಅಂತ ಡಿಕೆ ಶಿವಕುಮಾರ್ ಹೇಳ್ತಾರೆ. ಸರ್ಕಾರದ ಮುಖವಾಡ ಬಯಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: Karnataka Job Reservation : ಹಗರಣಗಳನ್ನು ಮುಚ್ಚಿಡಲು ಕನ್ನಡಿಗರಿಗೆ ಮೀಸಲು ವಿಚಾರ ಮುನ್ನೆಲೆಗೆ ತಂದ ಸರ್ಕಾರ; ಸಿಟಿ ರವಿ ಆರೋಪ

ವಿಧಾನ ಪರಿಷತ್​ನಲ್ಲೂ ಇದೇ ರೀತಿ ಪರಿಸ್ಥಿತಿ ಮುಂದುವರಿಯಿತು. ಹೆಚ್ಚು ಚರ್ಚೆಗಳು ನಡೆಯದೇ ಆರೋಪಗಳಲ್ಲೇ ಕೊನೆಯಾಯಿತು.

ಸಿಎಂ ಉತ್ತರ

ನಿಯಮ‌ 69ರ ಅಡಿಯಲ್ಲಿ ನಡೆದ ವಾಲ್ಮೀಕಿ ಅಭಿವೃದ್ಧಿ ನಿಗಮ ಕುರಿತಾದ ಚರ್ಚೆಗೆ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ನೀಡಿದ್ದಾರೆ. ಆರ್.ಅಶೋಕ್, ವಿಜಯೇಂದ್ರ ನನ್ನ ರಾಜೀನಾಮೆ ಕೇಳಿದ್ದಾರೆ. ಆರಗ ಜ್ಞಾನೇಂದ್ರ ಮಾಜಿ ಗೃಹ ಸಚಿವರು. ಇವರು ಎಸ್​ಐಟಿ ಹಿಂದಕ್ಕೆ ಪಡೆಯಿರಿ ಎಂದು ಹೇಳಿದ್ದಾರೆ. ನೀವು ಗೃಹ ಮಂತ್ರಿ ಆಗಿದ್ದಾಗಲೂ ಎಸ್​ಐಟಿ ಬಗ್ಗೆ ಹೀಗೆ ಹೇಳಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

26-5-2024 ರಂದು ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡರು. ಇವರು ತಮಿಳುನಾಡಿನ ಬೋವಿ ಸಮುದಾಯದವರು. ವಿರೋಧ ಪಕ್ಷದವರು ಸಾವಿರ ಸಾರಿ ದಲಿತ, ದಲಿತ ಅಂತ ಹೇಳುತ್ತಿದ್ದಾರೆ ಎಂದರು.

ಈ ಎಲ್ಲಾ ನಿಗಮಗಳ ಉದ್ದೇಶ ಆಯಾ ಸಮುದಾಯಗಳನ್ನು ಆರ್ಥಿಕವಾಗಿ ಬಲಿಷ್ಠರನ್ನಾಗಿಸುವುದೇ ಆಗಿದೆ. 2013 ಡಿಸೆಂಬರ್ ನಲ್ಲಿ ಎಸ್​​ಸಿಪಿ, ಟಿಸಿಪಿ ಕಾಯ್ದೆ ಜಾರಿ ಮಾಡಿದೆ. ನಾನು ಮುಖ್ಯಮಂತ್ರಿಯಾಗಿಯೇ ಜಾರಿ ಮಾಡಿದೆ. 24.1% ಅಭಿವೃದ್ಧಿ ಹಣ ಈ ಸಮುದಾಯದ ಅಭಿವೃದ್ಧಿಗೆ ಮೀಸಲಿಡಬೇಕು ಎಂದು ಕಡ್ಡಾಯ ಮಾಡಿದ್ದು ನಾನು. ಪ್ರತಿಪಕ್ಷಗಳು ಬರಿ ಮೊಸಳೆ ಕಣ್ಣೀರು ಹರಿಸುತ್ತವೆ ಎಂದರು.

ನಾನು ಹಿಂದಿನ ಸಿದ್ದರಾಮಯ್ಯ ಅಲ್ಲ ಅಂತ ಯತ್ನಾಳ್ ಅವರು ಹೇಳಿದರು. ಯತ್ನಾಳ್ ಅವರು ಕೂಡ ವಾಜಪೇಯಿ ಅವರ ಸಂಪುಟದಲ್ಲಿದ್ದ ಯತ್ನಾಳ್ ಆಗಿ ಉಳಿದಿಲ್ಲ ಎಂದರು. ಆರ್.ಅಶೋಕ್ ಮೂರು ಗಂಟೆ ನಾಲ್ಕು ನಿಮಿಷ ಸದನದಲ್ಲಿ ಆರೋಪಿಸಿದ್ದೆಲ್ಲಾ ಪತ್ರಿಕಾ ಸುದ್ದಿಗಳ ಆಧಾರದಲ್ಲಿ ಮಾತ್ರ. ಪರಿಶಿಷ್ಠ ಸಮುದಾಯಗಳ ಬಗ್ಗೆ ಪ್ರಾಮಾಣಿಕ ಕಾಳಜಿ ಇದ್ದಿದ್ದರೆ ಕೇಂದ್ರದ ಬಿಜೆಪಿಯಾಗಲಿ, ಅವರು ಅಧಿಕಾರದಲ್ಲಿರುವ ರಾಜ್ಯಗಳಲ್ಲಾಗಲಿ ಕಾಯ್ದೆಯನ್ನು ಏಕೆ ಜಾರಿಗೆ ತಂದಿಲ್ಲ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಇರುವವರೆಗೂ, ನಾನು ಇರುವವರೆಗೂ ಸಾಮಾಜಿಕ ನ್ಯಾಯಕ್ಕೆ ನಾವು ಬದ್ದರು. ನಿಮ್ಮಿಂದ ಸಾಮಾಜಿಕ ನ್ಯಾಯದ ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು.

Continue Reading

ದೇಶ

Udhayanidhi Stalin: ತಮಿಳುನಾಡು ಉಪ ಮುಖ್ಯಮಂತ್ರಿಯಾಗಿ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್?

Udhayanidhi Stalin:ಸಿಎಂ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಪ್ರಸ್ತುತ ತಮಿಳುನಾಡಿನ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಚಿವ ಸಂಪುಟ ಪುನಾರಚನೆ ನಿರೀಕ್ಷೆಯಲ್ಲಿರುವಾಗಲೇ ಉದಯನಿಧಿ ಅವರಿಗೆ ಈ ಮಹತ್ವದ ಹುದೆ ಸಿಗುವ ಸಾಧ್ಯತೆ ಇದೆ. ಈ ವರ್ಷದ ಜನವರಿಯಲ್ಲಿ, ಸಿಎಂ ಎಂಕೆ ಸ್ಟಾಲಿನ್ ಅವರು ತಮ್ಮ ಪುತ್ರ ಡಿಸಿಎಂ ಆಗುತ್ತಾರೆಂಬ ವದಂತಿಯನ್ನು ತಿರಸ್ಕರಿಸಿದ್ದರು. 2026ರಲ್ಲಿ ತಮಿಳುನಾಡು ವಿಧಾನಸಭೆಗೆ ಚುನಾವಣೆ ನಡೆಯಲಿದೆ.

VISTARANEWS.COM


on

Udhayanidhi Stalin
Koo

ಚೆನ್ನೈ: ತಮಿಳುನಾಡು (Tamilnadu) ಸಿಎಂ ಎಂಕೆ ಸ್ಟಾಲಿನ್(MK Stalin) ಅವರ ಅಮೆರಿಕ ಭೇಟಿಗೆ ಮುನ್ನ ಆಗಸ್ಟ್‌ನಲ್ಲಿ ತಮಿಳುನಾಡಿನ ಉಪಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್(Udhayanidhi Stalin) ಅವರನ್ನು ನೇಮಕ ಮಾಡುವ ಸಾಧ್ಯತೆಯಿದೆ ಎಂದು ಡಿಎಂಕೆ ಮೂಲಗಳು ತಿಳಿಸಿವೆ. ಆಗಸ್ಟ್ 22 ರಂದು ಸಿಎಂ ಸ್ಟಾಲಿನ್ ಅವರ ಅಮೇರಿಕಾ ಪ್ರವಾಸಕ್ಕೆ ಮುಂಚಿತವಾಗಿ ಉದಯನಿಧಿ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ನೇಮಿಸುವ ಸಾಧ್ಯ ತೆ ಇದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಸಿಎಂ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಪ್ರಸ್ತುತ ತಮಿಳುನಾಡಿನ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಚಿವ ಸಂಪುಟ ಪುನಾರಚನೆ ನಿರೀಕ್ಷೆಯಲ್ಲಿರುವಾಗಲೇ ಉದಯನಿಧಿ ಅವರಿಗೆ ಈ ಮಹತ್ವದ ಹುದೆ ಸಿಗುವ ಸಾಧ್ಯತೆ ಇದೆ. ಈ ವರ್ಷದ ಜನವರಿಯಲ್ಲಿ, ಸಿಎಂ ಎಂಕೆ ಸ್ಟಾಲಿನ್ ಅವರು ತಮ್ಮ ಪುತ್ರ ಡಿಸಿಎಂ ಆಗುತ್ತಾರೆಂಬ ವದಂತಿಯನ್ನು ತಿರಸ್ಕರಿಸಿದ್ದರು. 2026ರಲ್ಲಿ ತಮಿಳುನಾಡು ವಿಧಾನಸಭೆಗೆ ಚುನಾವಣೆ ನಡೆಯಲಿದೆ.

ಡಿಎಂಕೆಯ ಯುವ ಮೋರ್ಚಾ ಅಧ್ಯಕ್ಷ ಮತ್ತು ಚೆಪಾಕ್-ತಿರುವಲ್ಲಿಕೇಣಿ ಕ್ಷೇತ್ರದ ಶಾಸಕ ಉದಯನಿಧಿ ಅವರು ಡಿಸೆಂಬರ್ 2022 ರಲ್ಲಿ ಡಿಎಂಕೆ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮೂಲಗಳ ಪ್ರಕಾರ ಈ ವರ್ಷ ಉದಯನಿಧಿ ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರಿಸುವ ಅವಕಾಶಗಳು ಬಂದಿದ್ದವು. ಆದರೆ, ವಿವಾದಗಳಿಂದ ಹೊಡೆದ ಡಿಎಂಕೆಯ ಯೋಜನೆಗಳು ಕಾರ್ಯರೂಪಕ್ಕೆ ಬರಲಿಲ್ಲ.
ಈ ವರ್ಷದ ಜನವರಿಯಲ್ಲಿ ಸನಾತನ ಧರ್ಮದ ವಿವಾದ ಹಾಗೂ ನಂತರ ಕಲ್ಲಕುರಿಚಿ ಹೂಚ್ ದುರಂತದಿಂದಾಗಿ ಅವರನ್ನು ಉಪ ಮುಖ್ಯಮಂತ್ರಿ ಮಾಡುವ ಯೋಜನೆ ಕೈಬಿಡಲಾಗಿತ್ತು.

ಉದಯನಿಧಿಯವರು ಸನಾತನ ಧರ್ಮವನ್ನು “ಮಲೇರಿಯಾ” ಮತ್ತು “ಡೆಂಗ್ಯೂ” ಗೆ ಹೋಲಿಸಿದ ನಂತರ ಅದರ ನಿರ್ಮೂಲನೆಗೆ ಕರೆ ನೀಡಿದಾಗ ಜನವರಿ ತಿಂಗಳಿನಲ್ಲಿ ಸನಾತನ ಧರ್ಮದ ವಿವಾದ ಭುಗಿಲೆದ್ದಿತು. ಸನಾತನ ಧರ್ಮವು ಜಾತಿ ವ್ಯವಸ್ಥೆ ಮತ್ತು ತಾರತಮ್ಯವನ್ನು ಆಧರಿಸಿದೆ ಎಂದು ಡಿಎಂಕೆ ಸಚಿವರು ವಾದಿಸಿದರು. ಅವರ ಹೇಳಿಕೆಯು ವ್ಯಾಪಕ ಟೀಕೆಗೆ ಕಾರಣವಾಯಿತು. ಅಷ್ಟೇ ಅಲ್ಲದೇ ಹಲವಾರು ದೂರುಗಳು ದಾಖಲಾಗಿ ಸುಪ್ರೀಂ ಕೋರ್ಟ್‌ ಅಂಗಳದಲ್ಲೂ ಇದರ ಬಗ್ಗೆ ಬಹಳ ಚರ್ಚೆ ಆಗಿತ್ತು.

ಉದಯನಿಧಿ ಸ್ಟಾಲಿನ್‌ 2023ರ ಸೆ. 4ರಂದು ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಪ್ರಗತಿಪರ ಲೇಖಕರು, ಕಲಾವಿದರ ಸಂಘದಿಂದ ಆಯೋಜಿಸಿದ್ದ “ಸನಾತನ ನಿರ್ಮೂಲನಾ ಸಮಾವೇಶ”ದಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್‌ ಸನಾತನ ಧರ್ಮದ ಉಲ್ಲೇಖ ಮಾಡಿದ್ದರು. “ ಸನಾತನ ಧರ್ಮ ಕೊರೊನಾ, ಡೆಂಗ್ಯೂ, ಮಲೇರಿಯಾ ಇದ್ದಂತೆ. ಇಂತಹ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಲು ನನಗೆ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳು. ನೀವು “ಸನಾತನ ವಿರೋಧಿ ಸಮ್ಮೇಳನ” ಎಂಬುದಾಗಿ ಆಯೋಜಿಸುವ ಬದಲು “ಸನಾತನ ನಿರ್ಮೂಲನಾ ಸಮ್ಮೇಳನ” ಎಂಬುದಾಗಿ ಕಾರ್ಯಕ್ರಮ ಆಯೋಜಿಸಿದ್ದು ನನಗೆ ಇಷ್ಟವಾಯಿತು” ಎಂದು ಹೇಳಿದ್ದರು.

ಇದನ್ನೂ ಓದಿ:Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಇತ್ತು ಆ 6 ಪ್ರಮುಖ ಕಾರಣಗಳು

Continue Reading

ಪ್ರಮುಖ ಸುದ್ದಿ

Karnataka Job Reservation : ಹಗರಣಗಳನ್ನು ಮುಚ್ಚಿಡಲು ಕನ್ನಡಿಗರಿಗೆ ಮೀಸಲು ವಿಚಾರ ಮುನ್ನೆಲೆಗೆ ತಂದ ಸರ್ಕಾರ; ಸಿಟಿ ರವಿ ಆರೋಪ

Karnataka Job Reservation : ಮೀಸಲಾತಿ ಕುರಿತು ಸರ್ಕಾರ ತನ್ನ ಪ್ರಕಟಣೆ ಹೊರಡಿಸಿದೆ. ಬಳಿಕ ಅದಕ್ಕೆ ತಡೆದಿದೆ. ಕರ್ನಾಟಕದಿಂದ ಖಾಸಗಿ ವಲಯದಲ್ಲಿ ಸಿ ಮತ್ತು ಡಿ ವಲಯದಿಂದ ಉದ್ಯೋಗ ಮೀಸಲಿಡಬೇಕು ಎಂಬುದರ ಕುರಿತು ಸಿಎಂ ತಮ್ಮ ನಿಲುವು ಪ್ರಕಟಿಸಬೇಕು. ನಿಮ್ಮ ಸರ್ಕಾರದ ಮೇಲೆ ಹಗರಣ ಸುತ್ತಿಕೊಂಡಿದೆ. ಅದಕ್ಕಾಗಿ ಈ ವಿಷಯವನ್ನು ಮುನ್ನೆಲೆಗೆ ತರಲಾಗಿದೆ ಎಂದು ಆರೋಪಿಸಿದಿರು

VISTARANEWS.COM


on

CT Ravi
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಗರಣಗಳನ್ನು ಮುಚ್ಚಿಡಲು ಕನ್ನಡಿಗರಿಗೆ ಖಾಸಗಿ ಕಂಪನಿಗಳಲ್ಲಿ ಮೀಸಲಾತಿ ನೀಡುವ ವಿಚಾರವನ್ನು (Karnataka Job Reservation) ಮುನ್ನೆಲೆಗೆ ತಂದಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ವಿಧಾನಸೌಧದ ಪಡಸಾಲೆಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಸರ್ಕಾರದ ಮೇಲೆ ಹಗರಣಗಳು ಸುತ್ತಿಕೊಂಡಿವೆ. ಅವುಗಳನ್ನು ವಿಷಯಾಂತರ ಮಾಡುವುದಕ್ಕೆ ಮೀಸಲಾತಿ ವಿಚಾರವನ್ನು ಎತ್ತಿದ್ದಾರೆ ಎಂದು ಹೇಳಿದ್ದಾರೆ.

ಮೀಸಲಾತಿ ಕುರಿತು ಸರ್ಕಾರ ತನ್ನ ಪ್ರಕಟಣೆ ಹೊರಡಿಸಿದೆ. ಬಳಿಕ ಅದಕ್ಕೆ ತಡೆದಿದೆ. ಕರ್ನಾಟಕದಿಂದ ಖಾಸಗಿ ವಲಯದಲ್ಲಿ ಸಿ ಮತ್ತು ಡಿ ವಲಯದಿಂದ ಉದ್ಯೋಗ ಮೀಸಲಿಡಬೇಕು ಎಂಬುದರ ಕುರಿತು ಸಿಎಂ ತಮ್ಮ ನಿಲುವು ಪ್ರಕಟಿಸಬೇಕು. ನಿಮ್ಮ ಸರ್ಕಾರದ ಮೇಲೆ ಹಗರಣ ಸುತ್ತಿಕೊಂಡಿದೆ. ಅದಕ್ಕಾಗಿ ಈ ವಿಷಯವನ್ನು ಮುನ್ನೆಲೆಗೆ ತರಲಾಗಿದೆ ಎಂದು ಆರೋಪಿಸಿದಿರು

ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ಹಣ ವರ್ಗಾವಣೆ ಮಾಡಿ ವಂಚನೆ ಮಾಡಿರೋದು ಸಿಎಂ ಗಮನಕ್ಕೂ ಬಂದಿದೆ. ಇದರಿಂದಾ ನಿಮ್ಮ ಸರ್ಕಾರದ ಘನತೆಗೆ ಚ್ಯುತಿ ತಂದಿದೆ. ಹೀಗಾಗಿ ಜನರನ್ನು ಭಾವನಾತ್ಮಕವಾಗಿ ಬದಲಾಯಿಸಲು ಮೀಸಲಾತಿ ವಿಚಾರವನ್ನು ಎತ್ತಲಾಗಿದೆ ಎಂದು ಸಿಟಿ ರವಿ ಆರೋಪಿಸಿದರು.

ಇದನ್ನೂ ಓದಿ: Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಇತ್ತು ಆ 6 ಪ್ರಮುಖ ಕಾರಣಗಳು

ಉದ್ದಿಮೆಯಲ್ಲಿ ಎಷ್ಟು ಉದ್ಯೋಗ ಇದೆ. ಕನ್ನಡಿಗರಿಗೆ ಎಷ್ಟು, ಹೊರಗಿನವರಿಗೆ ಎಷ್ಟು ಅಂತ‌ಮಾಹಿತಿ ಪಡೆಯಬೇಕಿತ್ತು. ಯಾವ ಉದ್ಯೋಗಕ್ಕೆ ಕೌಶಲದ ಅವಶ್ಯಕತೆ ಇದೆ ಅಂತ ಮಾಹಿತಿ ಪಡೆಯಬೇಕಿತ್ತು. ಹಾಗಾದರೆ ಮಾತ್ರ ಅದು ಸರ್ಕಾರದ ಬದ್ಧತೆಯಾಗಲಿದೆ.

ಮೀಸಲಾತಿ ವಿಷಯದ ಕುರಿತು ಚರ್ಚಿಸಲು ಎಷ್ಟು ಸಭೆ ನಡೆಸಲಾಗಿದೆ. ಈ ವಿಷಯದಲ್ಲಿ ಮುಖ್ಯಮಂತ್ರಿಗೆ ಬದ್ಧತೆ ಇದೆಯೇ ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಬದಲಾಗಿದ್ದಾರೆ. ಈ ಹಗರಣಗಳೇ ಅದಕ್ಕೆ ಸ್ಪಷ್ಟ ಉದಾಹರಣೆ. ಚಾಮುಂಡೇಶ್ವರಿ ಉಪಚುನಾವಣೆ ಬಂದಾಗ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ಇತ್ತು. ಆಗ ನಾನು ಹೋರಾಟಗಾರರು ಸೋಲಬಾರದು ಎಂದು ಹೇಳಿದ್ದೆ. ಅಹಿಂದ ನಾಯಕರು ಗೆಲ್ಲಬೇಕು ಎಂದಿದ್ದೆ ಎಂದು ಸಿಟಿ ರವಿ ಹೇಳಿದ್ದಾರೆ.

ನಿಗಮದ ಹಣ, ಎಸ್​ಸಿಪಿ ಮತ್ತು ಟಿಎಸ್​​ಪಿ ಹಣ ದುರ್ಬಳಕೆಗೆ ನಿಮ್ಮ ಸರ್ಕಾರವೇ ಹೊಣೆಯಾಗಿದೆ. ಅದರ ಲೂಟಿಯಲ್ಲಿ ಸಿಎಂ ಸಚಿವ ಸಂಪುಟ ಸಹೋದ್ಯೋಗಿ ಭಾಗಿಯಾಗಿದ್ದಾರೆ. ಹಿಂದಿನ ನಾಯಕ ಸಿದ್ದರಾಮಯ್ಯ ಇಂಥದ್ದನ್ನು ಸಹಿಸುತ್ತಿರಲಿಲ್ಲ. ಇದು ಕೇವಲ‌ ಆಷಾಢ ಭೂತಿತನ ಅಷ್ಟೆ ಎಂದು ಸಿಟಿ ರವಿ ಹೇಳಿದ್ದಾರೆ.

ಎಸ್​ಸಿಪಿ- ಟಿಎಸ್​​ಪಿ ಹಣ ದುರ್ಬಳಕೆ ಆಗಿದೆ. ಆ ಹಣ ಅವರಿಗೆ ಮಾತ್ರ ಬಳಕೆ‌ ಆಗಬೇಕು. ಸರ್ಕಾರದ ಗ್ಯಾರಂಟಿ ಉದ್ದೇಶಕ್ಕೆ ಅಲ್ಲ. ಹೀಗಾಗಿ ಹಣ ಬಳಕೆಯನ್ನು ಕೂಡಲೇ ನಿಲ್ಲಿಸಬೇಕು. ವಾಲ್ಮೀಕಿ ನಿಗಮ, ಮುಡಾ, ಪರಿಶಿಷ್ಟರ ಹಣದ ಬಳಕೆಯ ಹೊಣೆಯನ್ನು ಸಿಎಂ ಹೊರಬೇಕು ಎಂದು ಸಿಟಿ ರವಿ ನುಡಿದಿದ್ದಾರೆ.

ಅರ್ಕಾವತಿ ರೀಡು ಹಗರಣ ಸಿಎಂ ಮೇಲೆ ಬಂದಿತ್ತು. ರಿಯಲ್ ಎಸ್ಟೇಟ್ ಉದ್ಯಮಗಳಿಂದ ಕೋಟ್ಯಂತ ರೂಪಾಯಿ ಪಡೆದಿರೋ ಆರೋಪ ಬಂದಿತ್ತು. ವಿಚಾರಣೆಗೆ ಕೆಂಪಣ್ಣ ಆಯೋಗ ರಚನೆ ಮಾಡಿದ್ದೀರಿ. ಬಳಿಕ ದೇಸಾಯಿ ಆಯೋಗ ರಚನೆ ಮಾಡಿದ್ದೀರಿ. ಸದನದಲ್ಲಿ ಮೊದಲು ಕೆಂಪಣ್ಣ ಆಯೋಗದ ವರದಿ ತಂದು ಬಳಿಕ ಅನ್ನು ಮುಚ್ಚಿಟ್ರಿ. ಬಳಿಕ ಸಾಯಿ ಆಯೋಗ ಸಿದ್ದಪಡಿಸಿದ್ದೀರಿ. ಬಳಿಕ ತಪ್ಪನ್ನು ಮುಚ್ಚಿಟ್ಟಿರಿ ಎಂದು ರವಿ ಅವರು ಆರೋಪಿಸಿದರು.

ಲೋಕಾಯುಕ್ತ ಪವರ್ ಕಡಿಮೆ ಮಾಡಿ, ಎಸಿಬಿ ರಚನೆ ಮಾಡಿದವರು ಸಿಎಂ ಸಿದ್ದರಾಮಯ್ಯ. ಎರಡೂ ಇಲಾಖೆ ದುರ್ಬಳಕೆ ಮಾಡಿಕೊಂಡವರು ನೀವೇ. ತಕ್ಷಣವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಸಿಟಿ ರವಿ ಆಗ್ರಹಿಸಿದರು.

Continue Reading
Advertisement
Kannada Actress Many opportunities for this actress before the release Back Benchers'!
ಸ್ಯಾಂಡಲ್ ವುಡ್16 mins ago

Kannada Actress: `ಬ್ಯಾಕ್‍ ಬೆಂಚರ್ಸ್’ ಬಿಡುಗಡೆಗೂ ಮುನ್ನವೇ ಹಲವು ಅವಕಾಶಗಳು ಈ ನಟಿಗೆ!

Donald Trump
ವಿದೇಶ23 mins ago

Donald Trump: ಅಮೆರಿಕವೂ ಐರನ್ ಡೋಮ್ ಕ್ಷಿಪಣಿ ತಯಾರಿಸಲಿದೆ; ಡೊನಾಲ್ಡ್‌ ಟ್ರಂಪ್‌ ಸೂಚನೆ

ಪ್ರಮುಖ ಸುದ್ದಿ38 mins ago

Olympic Games: ಒಲಿಂಪಿಕ್ಸ್​ನಲ್ಲಿ ಮಹಿಳೆಯರು ಮೊದಲ ಬಾರಿಗೆ ಸ್ಪರ್ಧಿಸಿದ್ದು ಯಾವಾಗ?

Ram Pothineni double ismart second song out
ಟಾಲಿವುಡ್1 hour ago

Ram Pothineni: `ಡಬಲ್ ಇಸ್ಮಾರ್ಟ್’ ಸಿನಿಮಾದ ಎರಡನೇ ಹಾಡು ರಿಲೀಸ್!

UT Khader karnataka assembly live
ಪ್ರಮುಖ ಸುದ್ದಿ1 hour ago

Karnataka Assembly Live: ವಿಧಾನಸಭೆಯಲ್ಲಿ ಶಾಸಕರಿಗೆ ಮಧ್ಯಾಹ್ನ ಮಲಗಲು ವ್ಯವಸ್ಥೆ ಮಾಡಿಸಿದ ಸ್ಪೀಕರ್!

Sri Lanka Tour
ಕ್ರೀಡೆ1 hour ago

Sri Lanka Tour: ಸಂಜು, ಅಭಿಷೇಕ್​ಗೆ ಅವಕಾಶ ನೀಡದಕ್ಕೆ ಬಿಸಿಸಿಐ ವಿರುದ್ಧ ಕಿಡಿಕಾರಿದ ಸಂಸದ ​ತರೂರ್

Gold Rate Today
ಚಿನ್ನದ ದರ1 hour ago

Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ; ಬಂಗಾರ ಇಂದು ಇಷ್ಟು ಅಗ್ಗ

Tharun Sudhir gives Darshan a wedding invitation card and visits Jail
ಟಾಲಿವುಡ್1 hour ago

Tharun Sudhir: ದರ್ಶನ್‌ಗೆ ಮದುವೆ ಇನ್ವಿಟೇಶನ್‌ ಕಾರ್ಡ್‌ ಕೊಟ್ಟು, ಆಶೀರ್ವಾದ ಪಡೆಯಲು ಜೈಲಿಗೆ ಭೇಟಿ ಕೊಡಲಿದ್ದಾರಂತೆ ತರುಣ್ ಸುಧೀರ್

Train services
ಬೆಂಗಳೂರು2 hours ago

Train services: ವಿವಿಧ ಕಾಮಗಾರಿ ಹಿನ್ನೆಲೆ ಈ ಮಾರ್ಗದ ರೈಲುಗಳು ಸಂಚಾರ ಭಾಗಶಃ ರದ್ದು

road accident mbbs student death
ಬೆಂಗಳೂರು2 hours ago

Road Accident: ನಿರ್ಲಕ್ಷ್ಯದಿಂದ ಓಡಿಸಿ ಎಂಬಿಬಿಎಸ್‌ ವಿದ್ಯಾರ್ಥಿಯ ಜೀವ ತೆಗೆದ ಟ್ಯಾಂಕರ್ ಚಾಲಕ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ20 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ21 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ5 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ5 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಟ್ರೆಂಡಿಂಗ್‌