Nigama Mandali : ನಿಗಮ ಮಂಡಳಿ ಪಟ್ಟಿ ಫೈನಲ್‌; ಶಾಸಕರಿಗೇ ಮಣೆ, ಕಾರ್ಯಕರ್ತರಿಗಿಲ್ಲ ಅವಕಾಶ - Vistara News

ಕರ್ನಾಟಕ

Nigama Mandali : ನಿಗಮ ಮಂಡಳಿ ಪಟ್ಟಿ ಫೈನಲ್‌; ಶಾಸಕರಿಗೇ ಮಣೆ, ಕಾರ್ಯಕರ್ತರಿಗಿಲ್ಲ ಅವಕಾಶ

Nigama Mandali : ರಾಜ್ಯದಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿ ಮೊದಲ ಪಟ್ಟಿ ಸಿದ್ಧವಾಗಿದೆ. ಆದರೆ, ಅದರಲ್ಲಿ ಸಿಂಹಪಾಲು ಶಾಸಕರೇ ಇದ್ದಾರೆ. ಕಾರ್ಯಕರ್ತರಿಗೆ ಅವಕಾಶ ಮಿಸ್‌ ಆಗಲಿದೆ.

VISTARANEWS.COM


on

Siddaramaiah DK Shivakumar board and Corporation
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ನಿಗಮ ಮತ್ತು ಮಂಡಳಿಗಳ (Nigama Mandali) ನೇಮಕಾತಿಯ ಪಟ್ಟಿ ಫೈನಲ್‌ ಆಗಿದೆ. ಆದರೆ, ಈ ಬಾರಿಯೂ ಕಾರ್ಯಕರ್ತರು ಅವಕಾಶ ಮಿಸ್‌ ಮಾಡಿಕೊಂಡಿದ್ದಾರೆ. ಒಟ್ಟು 30 ಮಂದಿಯ ಹೆಸರು ಫೈನಲ್‌ ಆಗಿದ್ದು, ಅವರಲ್ಲಿ 20ಕ್ಕೂ ಹೆಚ್ಚು ಮಂದಿ ಶಾಸಕರೇ (MLAs got lion Share) ಆಗಿದ್ದಾರೆ, ಉಳಿದವರು ಪ್ರಭಾವಿಗಳು ಎಂದು ತಿಳಿದುಬಂದಿದೆ.

ರಾಜ್ಯ ಸಚಿವ ಸಂಪುಟದಲ್ಲಿ (State Cabinet) ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ಉಳಿದ ಶಾಸಕರಿಗೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಬಹುತೇಕ ಬಂದ್‌ ಆಗಿದೆ. ಆದರೆ ಮಂತ್ರಿ ಸ್ಥಾನ ಇಲ್ಲವೇ ಅಧಿಕಾರ ಬೇಕೇಬೇಕು ಎಂದು ಹಠ ಹಿಡಿದಿರುವ ಶಾಸಕರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಅವರಲ್ಲಿ ಕೆಲವರನ್ನಾದರೂ ಸಮಾಧಾನ ಮಾಡುವ ಉದ್ದೇಶದಿಂದ ಇದೀಗ ಸುಮಾರು 20 ಮಂದಿಯನ್ನು ನಿಗಮ ಮತ್ತು ಮಂಡಳಿಗಳ (Board and Corporation) ಅಧ್ಯಕ್ಷರನ್ನಾಗಿ ನೇಮಕ ಮಾಡಲು ಸರ್ಕಾರ ಮುಂದಾಗಿದೆ.

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಅನುಕೂಲವಾಗುವಂತೆ ನಿಗಮ-ಮಂಡಳಿಗೆ ಆದಷ್ಟು ಬೇಗನೆ ನೇಮಕಾತಿ ಮಾಡಬೇಕು ಎನ್ನುವುದು ಪಕ್ಷದ ನಿರ್ಧಾರವಾಗಿತ್ತು. ಇದರ ಅನ್ವಯ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಸುದೀರ್ಘ ಚರ್ಚೆ ನಡೆಸಿ ಅಂತಿಮವಾಗಿ 3೦ ಮಂದಿಯ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ.

ಸುಮಾರು 20 ಶಾಸಕರಿಗೆ ಆಯಕಟ್ಟಿನ ನಿಗಮ ಮತ್ತು ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲು ಒಪ್ಪಿಗೆ ನೀಡಲಾಗಿದೆ ಎಂದು ಹೇಳಲಾಗಿದೆ. ಆದರೆ, ಈ ಪಟ್ಟಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ.

ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು, ಶುಕ್ರವಾರ ಒಂದು ಸುತ್ತಿನ ಚರ್ಚೆ ಆಗಿದೆ. ಮೊದಲು ಯಾರು ಯಾರಿಗೆ ಕೊಡಬೇಕೆಂದು ನಾವು ಪಟ್ಟಿ ಮಾಡಿದ್ದೇವೆ. ಹಿರಿಯ ನಾಯಕರಿಗೆ ಅವಕಾಶ ಕೊಡಬೇಕಿದೆ. ನಮ್ಮ ಪಕ್ಷದ ರಾಜ್ಯ ಉಸ್ತುವಾರಿಗಳು ಕರ್ನಾಟಕಕ್ಕೆ ಬಂದಾಗ ನಿಗಮ ಮಂಡಳಿ ಪಟ್ಟಿ ಬಿಡುಗಡೆ ಆಗಲಿದೆ ಎಂದು ಹೇಳಿದರು.

ಇದನ್ನೂ ಓದಿ: Karnataka Politics: ಡಿಕೆಶಿ ಹೊರಗಿಟ್ಟು ಕೈ ನಾಯಕರ ಡಿನ್ನರ್ ಪಾಲಿಟಿಕ್ಸ್; ಆಪ್ತ ಸಚಿವರ ಜತೆ ಸಿದ್ದರಾಮಯ್ಯ ಚರ್ಚೆ

ಹಾಗಿದ್ದರೆ ಯಾರಿಗೆಲ್ಲ ಒಲಿಯಲಿದೆ ನಿಗಮ ಮಂಡಳಿ?

ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್, ನರೇಂದ್ರಸ್ವಾಮಿ, ಬಸವರಾಜ ರಾಯರೆಡ್ಡಿ, ಎ.ಆರ್. ಕೃಷ್ಣಮೂರ್ತಿ, ಬಂಗಾರಪೇಟೆ ನಾರಾಯಣಸ್ವಾಮಿ, ಕೋಲಾರ ನಂಜೇಗೌಡ, ಬಿ.ಕೆ.ಸಂಗಮೇಶ್,ಬಿ.ಆರ್. ಪಾಟೀಲ್,ಎಂ.ವೈ.ಪಾಟೀಲ್, ಬಿ.ಜಿ ಗೋವಿಂದಪ್ಪ, ರಾಘವೇಂದ್ರ ಹಿಟ್ನಾಳ್, ಪ್ರಸಾದ್ ಅಬ್ಬಯ್ಯ,, ಶಿವಲಿಂಗೇಗೌಡ, ರೂಪ ಶಶಿಧರ್, ರಾಜೇಗೌಡ, ರಘುಮೂರ್ತಿ, ಗಣೇಶ್ ಹುಕ್ಕೇರಿ, ಅನಿಲ್ ಚಿಕ್ಕಮಾದು, ಷಡಕ್ಷರಿ, ಪ್ರಿಯಾಕೃಷ್ಣ, ಮಾಗಡಿ ಬಾಲಕೃಷ್ಣ ಅವರಿಗೆ ಅವಕಾಶ ಸಿಗಲಿದೆ ಎನ್ನಲಾಗಿದೆ.

ಯಾವ ಆಧಾರದಲ್ಲಿ ಮಣೆ ಹಾಕಲಾಗಿದೆ.

ಮೊದಲ ಪಟ್ಟಿಯಲ್ಲಿ ಮೂವತ್ತು ಮಂದಿಗೆ ಅವಕಾಶ ನೀಡಿರುವ ಸಿಎಂ, ಡಿಸಿಎಂ ಅವರು ಕೆಲವೊಂದು ಮಾನದಂಡಗಳನ್ನು ಇಟ್ಟುಕೊಂಡಿದ್ದರು. ಪಟ್ಟಿಯಲ್ಲಿ ಸಿಎಂ ಹಾಗೂ ಡಿಸಿಎಂ ತಮ್ಮ ಆಪ್ತ ಶಾಸಕರಿಗೆ ಮಣೆ ಹಾಕಿದ್ದಾರಾದರೂ ಎರಡಕಿಂತಲೂ ಹೆಚ್ಚು ಬಾರಿ ಗೆದ್ದವರಿಗೆ, ಜಿಲ್ಲೆವಾರು ಮತ್ತು ಜಾತಿವಾರು ಲೆಕ್ಕಾಚಾರವನ್ನೂ ಮಾಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬೆಂಗಳೂರು

Essay on Kempegowda in Kannada: ನಾಡಪ್ರಭು ಕೆಂಪೇಗೌಡರು ಆಧುನಿಕ ಬೆಂಗಳೂರಿನ ಮೂಲ ಶಿಲ್ಪಿ!

Essay on Kempegowda in Kannada: ವೇಗವಾಗಿ ಬೆಳೆಯುತ್ತಿರುವ ರಾಜ್ಯ ರಾಜ್ಯಧಾನಿ ಬೆಂಗಳೂರು ಇವತ್ತು ಕೋಟ್ಯಂತರ ಜನರ ಆಶ್ರಯತಾಣವಾಗಿದೆ. ಇಲ್ಲಿನವರಿಗಿಂತ ಹೆಚ್ಚು ಮಂದಿ ಹೊರಗಿನಿಂದ ಬಂದು ಇಲ್ಲಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಅತ್ಯಂತ ಸುರಕ್ಷಿತ, ಸುಂದರ ಮತ್ತು ಸುಸಜ್ಜಿತ ನಗರವಾಗಿ ಬೆಂಗಳೂರು ಬೆಳೆಯಲು ಕೆಂಪೇಗೌಡ (kempegowda jayanthi) ಅವರ ವಿವೇಚನೆ ಮತ್ತು ದೂರದೃಷ್ಟಿಯೇ ಮುಖ್ಯಕಾರಣ. ಇಂದು ನಾಡಪ್ರಭು ಕೆಂಪೇಗೌಡ ಜಯಂತಿ. ಈ ಹಿನ್ನೆಲೆಯಲ್ಲಿ ಅವರ ಜೀವನ ಮತ್ತು ಸಾಧನೆಯ ಚಿತ್ರಣ ಇಲ್ಲಿದೆ.

VISTARANEWS.COM


on

By

Nadaprabhu Kempegowda
Koo

ಬೆಂಗಳೂರು (bengaluru) ಹೆಸರೆತ್ತಿದ್ದ ತಕ್ಷಣ ನೆನಪಾಗುವುದು (Essay on Kempegowda in Kannada) ನಾಡಪ್ರಭು ಕೆಂಪೇಗೌಡರು ಆಧುನಿಕ (kempegowda jayanthi) ಬೆಂಗಳೂರಿನ ಮೂಲ ಶಿಲ್ಪಿ! ನಾಡಪ್ರಭು ಕೆಂಪೇಗೌಡ (Nadaprabhu Kempegowda). ಬೆಂಗಳೂರಿನ ನಿರ್ಮಾತೃ ಆಗಿರುವ ಇವರು ವಿಜಯನಗರ ಸಾಮ್ರಾಜ್ಯದಲ್ಲಿ (vijayanagara empire) ಮುಖ್ಯಸ್ಥರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು. ಗೌಡ ವಂಶಸ್ಥರಾದ ಇವರು ಆ ಕಾಲದಲ್ಲಿ ಅತ್ಯಂತ ವಿದ್ಯಾವಂತ ಯಶಸ್ವಿ ಆಡಳಿತಗಾರರಲ್ಲಿ ಒಬ್ಬರು ಎಂದು ಗುರುತಿಸಿಕೊಂಡಿದ್ದರು.

ವೇಗವಾಗಿ ಬೆಳೆಯುತ್ತಿರುವ ರಾಜ್ಯ ರಾಜ್ಯಧಾನಿ ಬೆಂಗಳೂರು ಇವತ್ತು ಕೋಟ್ಯಂತರ ಜನರ ಆಶ್ರಯತಾಣವಾಗಿದೆ. ಇಲ್ಲಿನವರಿಗಿಂತ ಹೆಚ್ಚು ಮಂದಿ ಹೊರಗಿನಿಂದ ಬಂದು ಇಲ್ಲಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಅತ್ಯಂತ ಸುರಕ್ಷಿತ, ಸುಂದರ ಮತ್ತು ಸುಸಜ್ಜಿತ ನಗರವಾಗಿ ಬೆಂಗಳೂರು ಬೆಳೆಯಲು ಕೆಂಪೇಗೌಡ ಅವರ ವಿವೇಚನೆ ಮತ್ತು ದೂರದೃಷ್ಟಿಯೇ ಮುಖ್ಯಕಾರಣ.

ವಿಜಯನಗರ ಸಾಮ್ರಾಜ್ಯದ ಸಾಮಂತರಾಗಿದ್ದ ಕೆಂಪೇಗೌಡ ಅವರು 1537ರಲ್ಲೇ ಬೆಂಗಳೂರು ನಗರವನ್ನು ಕಟ್ಟಿದರು. ಬಳಿಕ ಕೆಂಪೇಗೌಡರ ರಾಜಧಾನಿಯನ್ನು ಯಲಹಂಕದಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಯಿತು. ಎಲ್ಲ ಕುಲ ಕಸುಬುದಾರರಿಗೂ ವ್ಯಾಪಾರ ವಹಿವಾಟಿಗೆ ಅವಕಾಶ ಮಾಡಿಕೊಟ್ಟ ಅವರು, ಬೆಂಗಳೂರು ನಗರವನ್ನು ಪ್ರಮುಖ ವಾಣಿಜ್ಯ ಕೇಂದ್ರವಾಗಿ ಬೆಳೆಯಲು ಕಾರಣರಾದರು.

ಕೆಂಪೇಗೌಡ ಅವರ ಹಿನ್ನೆಲೆ ಏನು?

ಶಾಸನಗಳ ಪ್ರಕಾರ ನಾಡಪ್ರಭು ಕೆಂಪೇಗೌಡರ ಪೂರ್ವಜರು ತಮಿಳುನಾಡಿನಿಂದ ದೇವನಹಳ್ಳಿ ತಾಲೂಕಿನ ಆವತಿ ಗ್ರಾಮಕ್ಕೆ ವಲಸೆ ಬಂದಿದ್ದರು ಎನ್ನಲಾಗುತ್ತದೆ. ರಣಭೈರೇಗೌಡ ಅವರು ಏಳು ತಮ್ಮಂದಿರಾದ ಮಲ್ಲಭೈರೇಗೌಡ, ಸಣ್ಣ ಭೈರೇಗೌಡ, ವೀರೇಗೌಡ, ಮರೀಗೌಡ, ಗಿಡ್ಡೇಗೌಡ, ತಮ್ಮೇಗೌಡ ಮತ್ತು ಗಿಟ್ಟಪ್ಪಗೌಡ ಅವರೊಂದಿಗೆ ಮಕ್ಕಳು ಜಯಗೌಡ, ಸಣ್ಣ ಭೈರೇಗೌಡ, ಹಾವಳಿ ಬೈರೇಗೌಡ ಅವರೊಂದಿಗೆ ಬಂದು ಇಲ್ಲಿ ನೆಲೆಯಾದರು. ತಮ್ಮ ಒಬ್ಬಳೇ ಮಗಳು ದೊಡ್ಡಮ್ಮಳನ್ನು ಆ ಪ್ರಾಂತ್ಯದ ಯಾಕಿಲ ದೊರೆ ಸೆಲ್ವ ನಾಯಕ ಸೊಸೆ ಮಾಡಿಕೊಂಡಿದ್ದರಿಂದ ಅವರೆಲ್ಲ ಇಲ್ಲಿಗೆ ಬಂದರು ಎನ್ನಲಾಗುತ್ತದೆ.

ಮಾಗಡಿ ಕೆಂಪೇಗೌಡ, ಯಲಹಂಕ ಕೆಂಪೇಗೌಡ, ನಾಡಪ್ರಭು ಕೆಂಪೇಗೌಡರು ಬೇರೆ ಬೇರೆಯೇ ಅಥವಾ ಎಲ್ಲರೂ ಒಬ್ಬರೇ ಎನ್ನುವ ಪ್ರಶ್ನೆಗಳು ಈಗಲೂ ಇವೆ. ಕ್ರಿ.ಶ.1420ರಲ್ಲಿ ಅಧಿಕಾರಕ್ಕೆ ಏರಿದ ಯಲಹಂಕ ಕೆಂಪೇಗೌಡ ರಣಭೈರೇಗೌಡ ಅವರ ಹಿರಿಯ ಮಗ ಜಯಗೌಡ ಎನ್ನಲಾಗುತ್ತದೆ. 13 ವರ್ಷಗಳ ಕಾಲ ಆಡಳಿತ ನಡೆಸಿ 1433ರಲ್ಲಿ ಮೃತಪಟ್ಟಿದ್ದರು. ಅವರಿಗೆ ಇಬ್ಬರು ಮಕ್ಕಳು. ಗಿಡ್ಡೇಗೌಡ ಮತ್ತು ಮಾಚಯ್ಯಗೌಡ. ಹಿರಿಯನಾದ ಗಿಡ್ಡೇಗೌಡ, ತಂದೆಯ ಅನಂತರ ಅಧಿಕಾರಕ್ಕೆ ಏರಿದರು.

ಮನೆದೇವರು ಕರಗದಮ್ಮನಿಗೆ ಕೆಂಪಮ್ಮಹರಕೆ ಹೊತ್ತಿದ್ದರಿಂದ ಹಲವು ವರ್ಷಗಳ ಅನಂತರ ಅವರಿಗೆ ಗಂಡು ಮಗು ಹುಟ್ಟಿದ್ದು, ಆ ಮಗುವಿಗೆ ಕೆಂಪನಂಜೇಗೌಡ ಎಂದು ನಾಮಕರಣ ಮಾಡಲಾಯಿತು. 10 ವರ್ಷಗಳ ಕಾಲ ಆಡಳಿತ ನಡೆಸಿದ ಗಿಡ್ಡೇಗೌಡ ಅವರ ಬಳಿಕ ಅಧಿಕಾರಕ್ಕೆ ಬಂದವರು ಕೆಂಪನಂಜೇಗೌಡ. ಇವರು 70 ವರ್ಷಗಳ ಕಾಲ ಯಲಹಂಕವನ್ನು ಆಳಿದ್ದರು. ಇವರ ಹಿರಿಯ ಪುತ್ರ ನಾಡಪ್ರಭು ಕೆಂಪೇಗೌಡ. ಕೆಂಪೇಗೌಡ ಅವರು ಹೆಸರಘಟ್ಟ ಸಮೀಪದ ಐವರುಕಂದಪುರದ (ಐಗೊಂಡಾಪುರ) ಗುರುಕುಲದಲ್ಲಿದ್ದಾಗ ತಮ್ಮ ನಾಯಕತ್ವದ ಕೌಶಲ್ಯವನ್ನು ಪ್ರದರ್ಶಿಸಿದರು.

ವಿಜಯನಗರದೊಂದಿಗೆ ಸಂಬಂಧ

ಕೆಂಪೇಗೌಡರಿಗೆ 1513ರಲ್ಲಿ ಪಟ್ಟಾಭಿಷೇಕ ನಡೆದಿತ್ತು. ಇವರ ಅಧಿಕಾರ ಅವಧಿಯಲ್ಲಿ ವಿಜಯನಗರ ಸಾಮ್ರಾಜ್ಯವನ್ನು ಶ್ರೀಕೃಷ್ಣದೇವರಾಯ ಮತ್ತು ಅಚ್ಯುತರಾಯ ಆಳಿದರು. ಸಣ್ಣ ಗ್ರಾಮವಾಗಿದ್ದ ಬೆಂಗಳೂರನ್ನು ಕೆಂಪೇಗೌಡರು ವಿಸ್ತರಿಸುತ್ತಾ ಬೆಳೆಸಿದರು. ಕ್ರಿ.ಶ.1537ರ ವೇಳೆಗೆ ಬೆಂಗಳೂರಿಗೆ ಕೋಟೆ ಕಟ್ಟಿಸಿ ಅದನ್ನು ರಾಜಧಾನಿಯನ್ನಾಗಿ ಮಾಡಿದರು.

ಬೆಂಗಳೂರಿನ ಕಲ್ಪನೆ

ಕೆಂಪೇಗೌಡ ಅವರು ತಮ್ಮ ಮಂತ್ರಿ ವೀರಣ್ಣ ಮತ್ತು ಸಲಹೆಗಾರ ಗಿಡ್ಡೆ ಗೌಡ ಅವರೊಂದಿಗೆ ಶಿವನಸಮುದ್ರದ ಕಡೆಗೆ ಬೇಟೆಯಾಡಲು ಹೋಗಿದ್ದಾಗ ಬೆಂಗಳೂರನ್ನು ಸುಂದರ ನಗರವನ್ನಾಗಿ ನಿರ್ಮಿಸುವ ಯೋಜನೆ ಮಾಡಿಕೊಂಡರು ಎನ್ನಲಾಗುತ್ತದೆ.

ಹೇಗಿತ್ತು ಪ್ರಾರಂಭ?

ಪ್ರಾರಂಭದಲ್ಲಿ ಕೆಂಪೇಗೌಡ ಅವರು ಬೆಂಗಳೂರು ನಗರದಲ್ಲಿ ಕೋಟೆ, ಕಂಟೋನ್ಮೆಂಟ್, ನೀರಿನ ಜಲಾಶಯಗಳು, ದೇವಾಲಯಗಳು ಮತ್ತು ಎಲ್ಲಾ ವ್ಯಾಪಾರ ಮತ್ತು ವೃತ್ತಿಯ ಜನರು ವಾಸಿಸಲು ಇರಬೇಕು ಎಂದು ಬಯಸಿ ಬೆಂಗಳೂರು- ಪುಣೆ ಹೆದ್ದಾರಿಯಲ್ಲಿ ಬೆಂಗಳೂರಿನಿಂದ 48 ಕಿಲೋಮೀಟರ್ ದೂರದಲ್ಲಿರುವ ಶಿವಗಂಗಾ ಸಂಸ್ಥಾನವನ್ನು ವಶಪಡಿಸಿಕೊಂಡರು. ವಿಜಯನಗರ ಚಕ್ರವರ್ತಿ ಅಚ್ಯುತರಾಯರ ಅನುಮತಿ ಪಡೆದು ಕ್ರಿ.ಶ. 1537ರಲ್ಲಿ ಬೆಂಗಳೂರು ಕೋಟೆ ಮತ್ತು ಪಟ್ಟಣವನ್ನು ನಿರ್ಮಿಸಿದ ಅವರು ಬಳಿಕ ತಮ್ಮ ರಾಜಧಾನಿಯನ್ನು ಯಲಹಂಕದಿಂದ ಹೊಸ ಬೆಂಗಳೂರು ಪೇಟೆಗೆ ಸ್ಥಳಾಂತರಿಸಿದರು.

ಜೈಲು ಸೇರಿದ್ದರು

ಅವಿವಾಹಿತ ಮಹಿಳೆಯರ ಎಡಗೈಯ ಕೊನೆಯ ಎರಡು ಬೆರಳುಗಳನ್ನು ಕತ್ತರಿಸುವ ಪದ್ಧತಿಯನ್ನು ನಿಷೇಧಿಸಿದ ಕೀರ್ತಿ ಇವರದ್ದು. ಬಹುಭಾಷಾ ಮತ್ತು ತೆಲುಗು ಭಾಷೆಯಲ್ಲಿ ಯಕ್ಷಗಾನ ನಾಟಕವಾದ ಗಂಗಾಗೌರಿ ವಿಲಾಸದ ರಚನೆ ಮಾಡಿರುವ ಕೆಂಪೇಗೌಡ ಅವರನ್ನು ನೆರೆಯ ಪಾಳೇಗಾರರ ದೂರಿನ ಬಳಿಕ ಜೈಲಿಗೆ ಹಾಕಲಾಯಿತು ಎನ್ನಲಾಗುತ್ತದೆ. ಐದು ವರ್ಷಗಳ ಕಾಲ ಜೈಲಿನಲ್ಲಿದ್ದ ಅವರು ಬಳಿಕ ಸುಮಾರು 56 ವರ್ಷಗಳ ಕಾಲ ಆಳ್ವಿಕೆ ನಡೆಸಿ 1569ರಲ್ಲಿ ನಿಧನರಾದರು.


54 ಪೇಟೆಗಳ ನಗರ ಬೆಂಗಳೂರು

ಇವತ್ತು ಬೆಂಗಳೂರು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಐಟಿ ಬಿಟಿ ಕಂಪನಿಗಳ ತವರಾಗಿರುವ ಬೆಂಗಳೂರಿನಲ್ಲಿ ಕೆಂಪೇಗೌಡರು 54 ಪೇಟೆಗಳು ನಿರ್ಮಿಸಿದ್ದರೆಂದು ಹೇಳಲಾಗುತ್ತದೆ. ಎಲ್ಲ ಜಾತಿ, ಸಮುದಾಯದವರಿಗೆ ವಾಸಿಸಲು ಯೋಗ್ಯವಾದ ನಗರವನ್ನು ನಿರ್ಮಿಸಿದ ಅವರ ಸರ್ವಧರ್ಮ ಸಹಿಷ್ಣುತೆಯು ಪ್ರಜೆಗಳ ಮನಗೆದ್ದಿತ್ತು.

ಇದನ್ನೂ ಓದಿ: Bengaluru News: ಗೋ ಶಾಲೆಗಳಿಗೆ 51 ಲಕ್ಷ ರೂ. ದೇಣಿಗೆ ನೀಡಿದ ಗೋಪ್ರೇಮಿ ಮಹೇಂದ್ರ ಮುನ್ನೋತ್

ಕೆರೆಗಳ ನಿರ್ಮಾಣ

ನದಿ ಮೂಲಗಳೇ ಇರದ ಬೆಂಗಳೂರಿನ ಜನರ ಕೃಷಿ ಮತ್ತು ಕುಡಿಯುವ ನೀರಿಗಾಗಿ ಧರ್ಮಾಂಬುಧಿ ಕೆರೆ, ಕೆಂಪಾಂಬುಧಿ ಕೆರೆ, ಹಲಸೂರು, ಸಂಪಂಗಿ ಕೆರೆ, ಕಾರಂಜಿ ಕೆರೆ, ಸಿದ್ಧಿಕಟ್ಟೆ, ಕೆಂಪಾಪುರ ಅಗ್ರಹಾರ ಕೆರೆ, ಜಕ್ಕರಾಯನಕೆರೆ ಸೇರಿದಂತೆ ನೂರಾರು ಕೆರೆ-ಕುಂಟೆ, ಕಲ್ಯಾಣಿಗಳನ್ನು ನಿರ್ಮಿಸಿದ್ದರು. ಇವರ ಕಾಲದಲ್ಲಿ 347 ದೊಡ್ಡ ಕೆರೆಗಳು, 1200ಕ್ಕೂ ಅಧಿಕ ಸಣ್ಣ ಕೆರೆ-ಕಟ್ಟೆಗಳಿದ್ದವು ಎನ್ನಲಾಗಿದೆ.

ದೇವಾಲಯ ನಿರ್ಮಾಣ

ಕೆಂಪೇಗೌಡರು ಬೆಂಗಳೂರಿನಲ್ಲಿ ಹಲಸೂರಿನ ಸೋಮೇಶ್ವರ, ಗವಿಪುರದ ಗವಿಗಂಗಾಧರೇಶ್ವರ, ಕಾಡು ಮಲ್ಲೇಶ್ವರ, ದೊಡ್ಡ ಗಣಪತಿ, ಧರ್ಮರಾಯಸ್ವಾಮಿ ದೇವಾಲಯಗಳನ್ನು ನಿರ್ಮಿಸಿದ್ದರು ಎನ್ನಲಾಗುತ್ತದೆ. ಕೇಂಪೇಗೌಡರು ಬೆಂಗಳೂರಿನ ಶಿಲ್ಪಿ ಎಂದು ಇಂದಿಗೂ ಜನಜನಿತರಾಗಿದ್ದಾರೆ.

Continue Reading

ಕರ್ನಾಟಕ

Rain News: ಕೊಡಗು, ಚಿಕ್ಕಮಗಳೂರು, ಕಾರವಾರದಲ್ಲಿ ವರುಣಾರ್ಭಟ; ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆ!

Rain News: ಜೂನ್‌ 27ರಂದು ಕೂಡ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಕೊಡಗು ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಸಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

VISTARANEWS.COM


on

Rain News
ಮಂಗಳವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕಾರವಾರದಲ್ಲಿ ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ.
Koo

ಬೆಂಗಳೂರು: ಕೊಡಗು, ಚಿಕ್ಕಮಗಳೂರು, ಕಾರವಾರ ಸೇರಿ ವಿವಿಧೆಡೆ ಮಂಗಳವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದ (Rain News) ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ಬೃಹತ್‌ ಮರಗಳು ರಸ್ತೆಗೆ ಉರುಳಿದ್ದರಿಂದ ಸಂಚಾರಕ್ಕೆ ಅಡಚಣೆಯಾಗಿದೆ. ಇನ್ನು ಕಾರವಾರದಲ್ಲಿ ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನ ಪರದಾಡುವಂತಾಗಿದೆ.

ಇನ್ನು ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆಯ‌ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು ಮತ್ತು ಹಾವೇರಿ ಜಿಲ್ಲೆಯಲ್ಲಿ ಗಂಟೆಗೆ 50 kmph ವೇಗದ ಗಾಳಿ, ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಸಿಡಿಲು- ಗುಡುಗು ವೇಳೆ ಎಲೆಕ್ಟ್ರಿಕ್ ಉಪಕರಣಗಳನ್ನು ಆಫ್ ಮಾಡುವಂತೆ ಹಾಗೂ ಮಳೆ ಬರುವಾಗ ಶಿಥಿಲ ಕಟ್ಟಡ, ಮರದ ಕೆಳಗಡೆ ನಿಲ್ಲದಂತೆ ಹವಾಮಾನ ಇಲಾಖೆ ಸೂಚನ ನೀಡಿದೆ.

ಕಾವೇರಿ ನದಿ ನೀರಿನ ಮಟ್ಟ ಗಣನೀಯ ಏರಿಕೆ

ಕೊಡಗು: ಜಿಲ್ಲೆಯ ವಿವಿಧೆಡೆ ಬಿರುಸಿನ ಮಳೆ‌ಯಾಗಿದ್ದು, ಪುಷ್ಪಗಿರಿ, ಬ್ರಹ್ಮಗಿರಿ ತಪ್ಪಲಿನಲ್ಲಿ ಭಾರಿ ಮಳೆಯಿಂದನದಿ, ತೊರೆ, ಹಳ್ಳ, ಕೊಳ್ಳಗಳ ನೀರಿನ ಮಟ್ಟ ಏರಿಕೆಯಾಗಿದೆ. ಕಾವೇರಿ ನದಿ ನೀರಿನ ಮಟ್ಟವೂ ಗಣನೀಯ ಏರಿಕೆಯಾಗಿದ್ದು, ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ಇನ್ನು ಗಾಳಿ ಮಳೆಗೆ ಹಲವೆಡೆ ಮರ ಗಿಡಗಳು ನೆಲಕ್ಕುರುಳಿವೆ.

ಮಡಿಕೇರಿ ವ್ಯಾಪ್ತಿಯಲ್ಲಿ ರಾತ್ರಿ ಧಾರಾಕಾರ ಮಳೆ ಹಿನ್ನಲೆಯಲ್ಲಿ ಮಡಿಕೇರಿ- ಚೆಟ್ಟಳ್ಳಿ ಮಾರ್ಗದಲ್ಲಿ ರಸ್ತೆಯ ಮೇಲೆ ಬೃಹತ್ ಮರ ಬಿದ್ದ‌ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಅಸ್ತವ್ಯವಾಗಿದೆ. ಮರ ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ.

ಇಂದು (ಬುಧವಾರ) ಬೆಳಗ್ಗೆಯಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ, ಮಧ್ಯಾಹ್ನದ ಬಳಿಕ ಮತ್ತೆ ಆರ್ಭಟಿಸುತ್ತಿದ್ದಾನೆ. ಇದರಿಂದ ಜನರ ಓಡಾಟಕ್ಕೆ ತೊಂದರೆಯಾಗಿದೆ. ಮಡಿಕೇರಿ, ಭಾಗಮಂಡಲ ನಾಪೋಕ್ಲು ಸೇರಿದಂತೆ ಹಲವೆಡೆ ಮಳೆ ಸುರಿಯುತ್ತಿದೆ.

ಮಲೆನಾಡಿನಲ್ಲಿ ಮಳೆ ಆರ್ಭಟ ಜೋರು

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡಿನಲ್ಲಿ ಮಳೆ ಆರ್ಭಟ ಜೋರಾಗಿದೆ. ಕುದುರೆಮುಖ ಸಮೀಪದ ನೆಲ್ಲಿಬೀಡು ಗ್ರಾಮದ ಬಳಿ ಕಳಸ-ಮಂಗಳೂರು ರಾಜ್ಯ ಹೆದ್ದಾರಿಯಲ್ಲಿ ಮರ ಅಡ್ಡಲಾಗಿ ಬಿದ್ದಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡಿದೆ. ಸ್ಥಳೀಯರಿಂದ ಮರ ತೆರವು ಕಾರ್ಯಚರಣೆ ನಡೆಯುತ್ತಿದೆ.

ಇನ್ನು ಮೂಡಿಗೆರೆ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿದಿದ್ದು, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್, ಬಣಕಲ್, ಕೊಟ್ಟಿಗೆಹಾರ, ಜಾವಳಿ, ಮಲೆಮನೆ, ರಾಣಿಜರಿ, ಸುಂಕಸಾಲೆ, ದೇವರಮನೆ ಸುತ್ತಮುತ್ತ ಬಿರುಸಿನ ಮಳೆಯಾಗಿದೆ.

ಕಳೆದೊಂದು ವಾರದಿಂದ ಬಿಡುವು ನೀಡಿದ್ದ ವರುಣದೇವ, ಇಂದು ಬೆಳಗ್ಗೆಯಿಂದ ಮತ್ತೆ ಅಬ್ಬರಿಸುತ್ತಿದ್ದಾನೆ. ಭಾರಿ ಗಾಳಿ-ಮಳೆಗೆ ಚಾರ್ಮಾಡಿಯಲ್ಲಿ ವಾಹನ ಸವಾರರು ಪರದಾಡುತ್ತಿದ್ದಾರೆ.

ಕಾರವಾರದಲ್ಲಿ ಮನೆಗಳಿಗೆ ನುಗ್ಗಿದ ನೀರು

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ತಡರಾತ್ರಿ ಸುರಿದ ಭಾರಿ ಮಳೆಗೆ ಕಾರವಾರದಲ್ಲಿ ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ.

ಕಾರವಾರ ನಗರದ ಮಾಲಾದೇವಿ ಮೈದಾನ ಸಮೀಪ ಚರಂಡಿಯಲ್ಲಿ ನೀರು ಹರಿಯದ ಪರಿಣಾಮ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಸಂಕಷ್ಟ ಅನುಭವಿಸುವಂತಾಗಿದೆ. ಮಲೆನಾಡು ಭಾಗದ ಶಿರಸಿ, ಸಿದ್ದಾಪುರ, ಯಲ್ಲಾಪುರ ಭಾಗದಲ್ಲಿ ಮಳೆಯಬ್ಬರ ಹೆಚ್ಚಿದ್ದು, ಕರಾವಳಿ ಭಾಗದ ಕಾರವಾರ, ಅಂಕೋಲಾ ಭಟ್ಕಳ, ಹೊನ್ನಾವರ ಭಾಗದಲ್ಲಿ ಅಲ್ಪ ಮಳೆಯಾಗಿದೆ. ಜಿಲ್ಲೆಯಾದ್ಯಂತ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.

ಇದನ್ನೂ ಓದಿ | IND vs ENG Semi Final: ಇಂಡೋ-ಆಂಗ್ಲ ಸೆಮಿಫೈನಲ್​ ಪಂದ್ಯದ ಸಂಭಾವ್ಯ ತಂಡ, ಪಿಚ್​ ರಿಪೋರ್ಟ್​ ಹೀಗಿದೆ

ಭಾರಿ ಮಳೆಗೆ ಮನೆ ಗೋಡೆ ಕುಸಿದು ನಾಲ್ವರು ಸಾವು

ಮಂಗಳೂರು: ಭಾರಿ ಮಳೆಯ (Rain news) ಪರಿಣಾಮ ಮನೆಯ ಗೋಡೆ ಕುಸಿದು (Wall collapse) ಬಿದ್ದು ನಾಲ್ವರು‌ ದುರ್ಮರಣ (four death) ಹೊಂದಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ (Ullala) ನಡೆದಿದೆ.

ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ದುರ್ಘಟನೆ ನಡೆದಿದ್ದು, ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ ಕುಸಿದಿದೆ. ಇದು ಪಕ್ಕದ ಯಾಸಿರ್ ಎಂಬವರ ಮನೆಯ ಗೋಡೆಗೆ ಬಿದ್ದು ಭಾರೀ ಅವಘಡ ಸಂಭವಿಸಿತು. ಮನೆಯೊಳಗಿದ್ದ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಸಾವಿಗೀಡಾದರು.

ರಾತ್ರಿ ಸುರಿದ ಭಾರೀ ಮಳೆಗೆ ಈ ದುರಂತ ಸಂಭವಿಸಿದೆ. ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಾಲ್ವರ ಮೃತದೇಹವನ್ನೂ ಸ್ಥಳೀಯರು ಹೊರತೆಗೆದಿದ್ದಾರೆ.

Continue Reading

ಕರ್ನಾಟಕ

Prajwal Revanna Case: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ; ಮತ್ತೆ ಜೈಲೇ ಗತಿ

Prajwal Revanna Case: ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಪ್ರಜ್ವಲ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ವಜಾ ಮಾಡಿದೆ.

VISTARANEWS.COM


on

Prajwal revanna Case
Koo

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಜಾಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರ ಪ್ರಕರಣದಲ್ಲಿ ಪ್ರಜ್ವಲ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಡ್ಜ್‌ ಸಂತೋಷ್‌ ಗಜಾನನ ಭಟ್‌ ಅವರು ಜಾಮೀನು ಅರ್ಜಿ ವಜಾಗೊಳಿಸಿದ್ದು, ಇದರಿಂದ ಸದ್ಯ ಪ್ರಜ್ವಲ್‌ಗೆ ಜೈಲೇ ಗತಿಯಾಗಿದೆ.

ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಮೊದಲು ಪ್ರಕರಣ ದಾಖಲಾಗಿತ್ತು. ನಂತರ ಪ್ರಜ್ವಲ್ ಮೇಲೆ ಅತ್ಯಾಚಾರ ಆರೋಪವನ್ನು ಪ್ರಕರಣದಲ್ಲಿ ಸೇರಿಸಲಾಗಿತ್ತು. ಪ್ರಕರಣದಲ್ಲಿ ಈಗಾಗಲೇ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಜಾಮೀನು ಪಡೆದುಕೊಂಡಿದ್ದರು. ಆದರೆ, ಪ್ರಜ್ವಲ್‌ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.

ʼಪ್ರತಿ ದಿನ ಫೋನ್‌ ಮಾಡಿ ಬಟ್ಟೆ ಕಳಚಲು ಹೇಳ್ತಿದ್ದ…ʼ ಪ್ರಜ್ವಲ್‌ ವಿರುದ್ಧ ದಾಖಲಾದ 4ನೇ ದೂರಿನಲ್ಲಿ ಏನಿದೆ?

prajwal revanna case 4th


ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ವಿರುದ್ಧ ನಾಲ್ಕನೇ ಪ್ರಕರಣ ದಾಖಲಾಗಿದ್ದು, ಆರೋಪಿಯ ಕುರಿತು ಇನ್ನಷ್ಟು ವಿಕೃತಿಯ ದೂರುಗಳು ದಾಖಲಾಗಿವೆ. ಈ ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ (Preetham Gowda) ಹೆಸರು ಕೂಡ ತಳುಕು ಹಾಕಿಕೊಂಡಿದೆ.

ಸಿಐಡಿ ಸೈಬರ್ ಕ್ರೈಂ (CID Cyber Crime) ಠಾಣೆಯಲ್ಲಿ ಸಂತ್ರಸ್ತೆ ನೀಡಿದ ದೂರಿನನ್ವಯ ಎಫ್ಐಆರ್ (FIR) ದಾಖಲಾಗಿದೆ. ಎಫ್ಐಆರ್‌ನಲ್ಲಿ ಸಂತ್ರಸ್ತೆಯಿಂದ ಉಲ್ಲೇಖವಾಗಿರುವ ಅಂಶಗಳು ಹೀಗಿವೆ: ಮಗನ ಶಾಲೆ‌ ವಿಚಾರಕ್ಕೆ ಪ್ರಜ್ವಲ್‌ನನ್ನು ಸಂತ್ರಸ್ತ ಮಹಿಳೆ ಭೇಟಿಯಾಗಿದ್ದರು. ಭೇಟಿ ವೇಳೆ ಸಂತ್ರಸ್ತೆಯಿಂದ ಪ್ರಜ್ವಲ್‌ ಫೋನ್‌ ನಂಬರ್ ಪಡೆದಿದ್ದ. ನಂಬರ್‌ ಪಡೆದು ವಿಡಿಯೊ ಕಾಲ್ ಮಾಡಿ ದಿನ ನಿತ್ಯ ಮಾತಾಡುತ್ತಿದ್ದ.

ನಂತರ ಮಹಿಳೆಗೆ ವಿಡಿಯೊ ಕಾಲ್ ಮಾಡಿ ವಿವಸ್ತ್ರವಾಗುವಂತೆ ಒತ್ತಾಯಿಸುತ್ತಿದ್ದ. ವಿವಸ್ತ್ರಗೊಂಡ ಮಹಿಳೆಯನ್ನು ನೋಡುತ್ತ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ. ವಿವಸ್ತ್ರವಾಗಲು ಒಪ್ಪದಿದ್ದಾಗ ವಿಡಿಯೊ ಸೇವ್ ಮಾಡಿಕೊಂಡಿರುವುದಾಗಿಯೂ, ವೈರಲ್ ಮಾಡುವುದಾಗಿಯೂ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ.

ನಂತರ ಏಕಾಏಕಿ ಸಾಮಾಜಿಕ ಜಾಲತಾಣದಲ್ಲಿ ಈ ಫೋಟೊ ವೈರಲ್ ಆಗಿರುವ ವಿಚಾರ ಸಂತ್ರಸ್ತೆ ಗಮನಕ್ಕೆ ಬಂದಿದೆ. ಈ ಕುರಿತು ಪ್ರಜ್ವಲ್‌ನನ್ನು ಸಂತ್ರಸ್ತ ಮಹಿಳೆ ಸಂಪರ್ಕ ಮಾಡಿದ್ದಾರೆ. ಆಗ ʼಸ್ಟೇ ತಂದಿದ್ದೇನೆ, ಏನೂ ಆಗಲ್ಲʼ ಎಂದಿದ್ದರಂತೆ. ಎರಡನೇ ಬಾರಿ ಫೋಟೊ ವೈರಲ್ ಆದಾಗ ಸಂತ್ರಸ್ತೆ ದೂರು ನೀಡಲು ಮುಂದಾಗಿದ್ದರು.

ಇದನ್ನೂ ಓದಿ: Suraj Revanna Case: ಸೂರಜ್‌ ರೇವಣ್ಣಗೇ ʼಹಿಂದಿನಿಂದ ಇರಿದವರುʼ ಯಾರು?

ವೈರಲ್ ಆದ ಕೆಲವು ಫೋಟೊಗಳನ್ನು ಕಿರಣ್, ಶರತ್ ಹಾಗೂ ಪ್ರೀತಂ ಗೌಡ ವೈರಲ್‌ ಮಾಡಿಸಿರುವ ಆರೋಪ ಇದೆ. ಈ ಹಿನ್ನೆಲೆಯಲ್ಲಿ ಒಟ್ಟು ನಾಲ್ಕು ಜನರ ಮೇಲೆ ದೂರು ನೀಡಲು ಮಹಿಳೆ ಮುಂದಾಗಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಎಸ್ಐಟಿ ಅಧಿಕಾರಿಗಳಿಂದ ತನಿಖೆ‌ ಚುರುಕುಗತಿ ಪಡೆದುಕೊಂಡಿದೆ.

Continue Reading

ಕರ್ನಾಟಕ

Renuka Swamy Murder: ರೇಣುಕಾಸ್ವಾಮಿ ಕೊಲೆ ಕೇಸ್‌; ಬೆಂಗಳೂರಿನಿಂದ ತುಮಕೂರು ಜೈಲು ಸೇರಿದ ನಾಲ್ವರು ಆರೋಪಿಗಳು

Renuka Swamy Murder: ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶದ ಹಿನ್ನೆಲೆ‌ಯಲ್ಲಿ ರೇಣುಕಾಸ್ವಾಮಿ ಕೊಲೆ ಕೇಸ್‌ನ ನಾಲ್ವರು ಆರೋಪಿಗಳನ್ನು ಬೆಂಗಳೂರಿನಿಂದ ತುಮಕೂರು ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

VISTARANEWS.COM


on

Renuka Swamy Murder
Koo

ತುಮಕೂರು‌: ನಟ ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ (Renuka Swamy Murder) ನಾಲ್ವರು ಆರೋಪಿಗಳನ್ನು ತುಮಕೂರಿನ ಜೈಲಿಗೆ ಪೊಲೀಸರು ಕರೆತಂದಿದ್ದಾರೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶದ ಹಿನ್ನೆಲೆ‌ಯಲ್ಲಿ ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ತುಮಕೂರು ಜೈಲಿಗೆ ಶಿಫ್ಟ್‌ ಮಾಡಲಾಗಿದೆ.‌

ಆರೋಪಿಗಳಾದ ರವಿಶಂಕರ್, ಕಾರ್ತಿಕ್, ಕೇಶವ್, ನಿಖಿಲ್ ತುಮಕೂರು ಜೈಲಿಗೆ ಸ್ಥಳಾಂತರಗೊಂಡಿದ್ದಾರೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ನಾಲ್ವರು ಆರೋಪಿಗಳನ್ನು ತುಮಕೂರಿನ ಊರುಕೆರೆ ಬಳಿಯ ರಂಗಾಪುರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ. ಕಾರಾಗೃಹ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಭದ್ರತಾ ದೃಷ್ಟಿಯಿಂದ ಈ ನಾಲ್ವರು ಆರೋಪಿಗಳನ್ನು ಪ್ರತ್ಯೇಕವಾಗಿಡಲು ಕೋರ್ಟ್ ಆದೇಶಿಸಿತ್ತು. ಹೀಗಾಗಿ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಆರೋಪಿಗಳನ್ನು ಕರೆತರಲಾಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ (Renuka Swamy Murder) ನಾಲ್ವರು ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲು 24ನೇ ಎಸಿಎಂಎಂ ಕೋರ್ಟ್ ಜೂನ್‌ 24ರಂದು ಆದೇಶ ನೀಡಿತ್ತು. ಅರ್ಜಿ ವಿಚಾರಣೆ ವೇಳೆ ಆರೋಪಿಗಳ ಪರ ವಕೀಲರು ತುಮಕೂರು ಜೈಲಿಗೆ ವರ್ಗಾವಣೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ, ಆರೋಪಿಗಳ ವರ್ಗಾವಣೆ ಯಾಕೆ ಅಗತ್ಯ ಎಂದು ಎಸ್‌ಪಿಪಿ ಪ್ರಸನ್ನ ಕುಮಾರ್ ವಿವರಿಸಿದ್ದರು.

ಇದನ್ನೂ ಓದಿ | Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

ಕೊಲೆ ನಡೆದ ಬಳಿಕ ಮೊದಲು ಪೊಲೀಸರ ಮುಂದೆ ಕಾರ್ತಿಕ್‌, ಕೇಶವ್ ಮತ್ತು ನಿಖಿಲ್ ಶರಣಾಗಿದ್ದರು. ಈ ಮೂವರು ಕೊಲೆ ಬಗ್ಗೆ ಸಂಪೂರ್ಣವಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದರು. ಇದರಿಂದ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿತ್ತು. ಒಂದೇ ಜೈಲಿನಲ್ಲಿದ್ದರೇ ಅವರವರೇ ಹೊಡೆದಾಡಿಕೊಳ್ಳುವ ಸಾಧ್ಯತೆ ಇದ್ದು, ನಾಲ್ವರು ಆರೋಪಿಗಳ ಜೀವಕ್ಕೆ ಅಪಾಯ ಇರುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರನ್ನು ತುಮಕೂರು ಜೈಲಿಗೆ ಶಿಫ್ಟ್‌ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ರೇಣುಕಾಸ್ವಾಮಿಯನ್ನ ಹೀರೊ ಮಾಡೋದು ನಿಲ್ಲಿಸಿ, ದರ್ಶನ್‌ನ ಬಿಟ್ಟುಕೊಡಲ್ಲ ಎಂದ ಖ್ಯಾತ ನಿರೂಪಕಿ!

Actor Darshan support by anchor hemalatha

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ (Actor Darshan) ಹತ್ಯೆಯಲ್ಲಿ ಪವಿತ್ರಾ ಗೌಡ ಹಾಗೂ ದರ್ಶನ್​ 14ದಿನಗಳ ವರೆಗೆ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಹಲವರು ನಟನ ಬೆಂಬಲಕ್ಕೆ ನಿಂತಿದ್ದರು. ನಟಿ ಸಂಜನಾ ಗಲ್ರಾನಿ ಅವರು ಕೂಡ ಸ್ಪಷ್ಟ ಅಭಿಪ್ರಾಯ ನೀಡಿ ದರ್ಶನ್ ತೂಗುದೀಪ ಬೆಂಬಲಕ್ಕೆ ನಿಂತಿದ್ದರು. ಇದರ ಬೆನ್ನಲ್ಲೇ ಕನ್ನಡದ ಖ್ಯಾತ ನಿರೂಪಕಿ ಹೇಮಾಲತಾ ತಮ್ಮ ಇನ್‌ಸ್ಟಾ ಖಾತೆಯಲ್ಲಿ ದರ್ಶನ್‌ ಜೊತೆಗಿನ ಫೋಟೋ ಹಂಚಿಕೊಂಡು ಮೃತ ರೇಣುಕಾಸ್ವಾಮಿಯನ್ನು ಹೀರೋ ಮಾಡುವುದನ್ನು ನಿಲ್ಲಿಸಿ ಎಂದು ಬರೆದುಕೊಂಡಿದ್ದಾರೆ.

ನಿರೂಪಕಿ ಹೇಮಾಲತಾ ಪೋಸ್ಟ್‌ನಲ್ಲಿ ʻʻಸಾವಿರ ಜನ ಸಾವಿರ ಮಾತನಾಡಲಿ.. ಒಮ್ಮೆ ಬೆಳೆದ ಸ್ನೇಹಕ್ಕೆ ಕಡಲಿನಸ್ಟಿರುವ ಪ್ರೀತಿಗೆ ನಾವೆಲ್ಲರೂ ಋಣಿಗಳೇ.. ಸ್ನೇಹಾವೆಂಬ ಸಂಕೋಲೆಯಲಿ ಒಮ್ಮೆ ಸಿಕ್ಕಿಕೊಂಡರೆ ಕೊಂಡಿ ಕಳಚುವುದಿಲ್ಲ…
ಅಂದಿಗೂ ಇಂದಿಗೂ ಎಂದೆಂದಿಗೂ ಮರೆಯುವುದಿಲ್ಲ, ಬಿಡುವುದಿಲ್ಲ, ಬಿಟ್ಟುಕೊಡುವುದಿಲ್ಲ. ಈ ಘಟನೆಗೆ ಏನು ಹೇಳಬೇಕು ಎಂದು ತಿಳಿಯುತ್ತಿಲ್ಲ, ಕಾನೂನಿನ ಮುಖಾಂತರ ಅಂತ್ಯವನ್ನಾಡಿ ಎಲ್ಲಾ ಕಳಂಕವನ್ನು ತೊಳೆದುಕೊಂಡು ಹೊರಗೆ ಬನ್ನಿ. ನಿಮ್ಮ ಮೇಲಿರುವ ಪ್ರೀತಿ ಗೌರವ ಎಂದಿಗೂ ಕಮ್ಮಿ ಆಗುವುದಿಲ್ಲ. ಅಲ್ಲದೇ ಕೊಲೆಯಾಗಿರುವ ರೇಣುಕಾಸ್ವಾಮಿಯನ್ನು ಹೀರೋ ಎನ್ನುವಂತೆ ಬಿಂಬಿಸಬೇಡಿʼʼ ಎಂದು ನಿರೂಪಕಿ ಹೇಮಾಲತಾ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

ಇನ್ನು ಈ ಹಿಂದೆ ಬಿಗ್‌ಬಾಸ್‌ ಸ್ಪರ್ಧಿ ಇಶಾನಿ ದರ್ಶನ್‌ ಜೊತೆಗಿನ ಫೋಟೋ ಹಂಚಿಕೊಂಡು, ದರ್ಶನ್ ಸರ್ ತಪ್ಪು ಮಾಡಿದ್ದರೆ ಅವರಿಗೆ ಶಿಕ್ಷೆಯಾಗಲಿ ಎಂದಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಇಶಾನಿ, ನಿಜಕ್ಕೂ ಇದು ಅಘಾತಕಾರಿ ಸುದ್ದಿ. ಒಬ್ಬ ಅಣ್ಣನ ರೂಪದಲ್ಲಿ ನಾನು ಕಂಡ ದರ್ಶನ್ ಸರ್ ನಿಜಕ್ಕೂ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಕೇಳಿದಾಗ ನಂಬಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Continue Reading
Advertisement
Monsoon Rain Boots Fashion
ಫ್ಯಾಷನ್5 mins ago

Monsoon Rain Boots Fashion: ಮಕ್ಕಳ ಮಾನ್ಸೂನ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾದ 3 ಬಗೆಯ ರೈನ್‌ ಬೂಟ್ಸ್

Narendra Modi
ದೇಶ29 mins ago

Narendra Modi: ಸಂಸತ್ತಿನಲ್ಲಿ ಇಬ್ಬರು ‘ಪುಟಾಣಿ’ ಅತಿಥಿಗಳನ್ನು ಸ್ವಾಗತಿಸಿದ ಮೋದಿ; ಯಾರವರು? Video ನೋಡಿ

Weight Loss Tips
ಆರೋಗ್ಯ35 mins ago

Weight Loss Tips: ನಲವತ್ತರ ನಂತರ ತೂಕ ಇಳಿಸುವುದು ಹೇಗೆ?

Nadaprabhu Kempegowda
ಬೆಂಗಳೂರು42 mins ago

Essay on Kempegowda in Kannada: ನಾಡಪ್ರಭು ಕೆಂಪೇಗೌಡರು ಆಧುನಿಕ ಬೆಂಗಳೂರಿನ ಮೂಲ ಶಿಲ್ಪಿ!

Nitin Gadkari
ದೇಶ1 hour ago

Nitin Gadkari: ಜಿಪಿಎಸ್‌ ತಂತ್ರಜ್ಞಾನದಿಂದ ಹೆದ್ದಾರಿ ಪ್ರಾಧಿಕಾರಕ್ಕೆ ಬಂಪರ್;‌ 10 ಸಾವಿರ ಕೋಟಿ ರೂ. ಆದಾಯ!

Paris Fashion Week
ಫ್ಯಾಷನ್1 hour ago

Paris Fashion Week: ಪ್ಯಾರಿಸ್‌ ಹಾಟ್‌ ಕೌಚರ್‌ ಫ್ಯಾಷನ್‌ ವೀಕ್ 2024ರ ಹೈಲೈಟ್ಸ್

Anant Ambani
ದೇಶ2 hours ago

Anant Ambani Video: ಮಹಾರಾಷ್ಟ್ರ ಸಿಎಂ ಹೆಗಲ ಮೇಲೆ ಕೈ ಹಾಕಿದ ಅಂಬಾನಿ ಮಗ! ನೀವೇನಂತೀರಿ?

Viral Video
Latest2 hours ago

Viral Video: ಜಿಮ್‌ಗೆ ಹೋಗುವವರೇ ಹುಷಾರ್‌! ಈ ವಿಡಿಯೊ ನೋಡಿ!

Acharya Pramod Krishnam
ದೇಶ2 hours ago

ಕಾಂಗ್ರೆಸ್‌ನಂತೆ 15 ತಿಂಗಳಲ್ಲಿ ಪ್ರತಿಪಕ್ಷಗಳೂ ರಾಹುಲ್‌ ಗಾಂಧಿಯಿಂದ ನಿರ್ನಾಮ; ಆಚಾರ್ಯ ಪ್ರಮೋದ್‌ ಸ್ಫೋಟಕ ಹೇಳಿಕೆ!

Viral Video
Latest2 hours ago

Viral Video: ಬಾಗಿಲ ಬಳಿ ಇದ್ದ ಆಹಾರ ಪ್ಯಾಕೆಟ್‌ ಕದ್ದೊಯ್ದ ಜೊಮ್ಯಾಟೊ ಡೆಲಿವರಿ ಬಾಯ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌