CM Siddaramaiah : ಎಚ್‌.ಡಿ. ಕುಮಾರಸ್ವಾಮಿ ಆರೋಪಕ್ಕೆ ಉತ್ತರಿಸಲ್ಲ, ಹೇಳೋದೆಲ್ಲ ಸುಳ್ಳು: ಸಿಎಂ ಸಿದ್ದರಾಮಯ್ಯ - Vistara News

ಕರ್ನಾಟಕ

CM Siddaramaiah : ಎಚ್‌.ಡಿ. ಕುಮಾರಸ್ವಾಮಿ ಆರೋಪಕ್ಕೆ ಉತ್ತರಿಸಲ್ಲ, ಹೇಳೋದೆಲ್ಲ ಸುಳ್ಳು: ಸಿಎಂ ಸಿದ್ದರಾಮಯ್ಯ

CM Siddaramaiah : ಎಚ್‌.ಡಿ. ಕುಮಾರಸ್ವಾಮಿ ಅವರು ಹೇಳುವುದು ಬರೀ ಸುಳ್ಳು. ಅವರು ಸುಳ್ಳನ್ನೇ ಬಂಡವಾಳ ಮಾಡಿಕೊಂಡಿರುವ ವ್ಯಕ್ತಿಯಾಗಿದ್ದಾರೆ. ಅವರ ಹೇಳಿಕೆಗಳಿಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

HD Kumarswamy and CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ (Former CM HD Kumaraswamya) ಅವರ ಆರೋಪಗಳಿಗೆ ನಾನು ಉತ್ತರ ಕೊಡೋದಿಲ್ಲ. ಗ್ಯಾರಂಟಿ ಯೋಜನೆಗಳಲ್ಲಿ (Congress Guarantee Scheme) ಒಂದಾದ “ಶಕ್ತಿ” (Shakti Scheme) ಅಡಿ ಒಂದು ಕೋಟಿಗೂ ಅಧಿಕ ಮಹಿಳೆಯರು ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ. ಇದು ಸಾಧನೆ ಅಲ್ವಾ? ಈ ಸಾಧನೆಗಳನ್ನು ಕುಮಾರಸ್ವಾಮಿಗೆ ಸಹಿಸಲು ಆಗುತ್ತಿಲ್ಲ. ಈ ಕಾರಣಕ್ಕೇ ಪರದಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಕಿಡಿಕಾರಿದ್ದಾರೆ.

ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ (Former Prime Minister Jawaharlal Nehru) ಅವರ 134 ನೇ ಜನ್ಮ ದಿನೋತ್ಸವದ ಅಂಗವಾಗಿ ವಿಧಾನಸೌಧದಲ್ಲಿರುವ ಪ್ರತಿಮೆಗೆ ಹೂಮಾಲೆ ಹಾಕಿ ಗೌರವ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಎಚ್‌.ಡಿ. ಕುಮಾರಸ್ವಾಮಿ ಅವರು ಹೇಳುವುದು ಬರೀ ಸುಳ್ಳು. ಅವರು ಸುಳ್ಳನ್ನೇ ಬಂಡವಾಳ ಮಾಡಿಕೊಂಡಿರುವ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದರು.

Cm Siddaramaiah pays floral tributes to former PM Jawaharlal Nehru
ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಅವರ 134ನೇ ವರ್ಷದ ಜನ್ಮ ದಿನಾಚರಣೆಯ ಅಂಗವಾಗಿ ಅವರ ಪ್ರತಿಮೆ ಗೆ ಮಾಲಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ.

ಇದನ್ನೂ ಓದಿ: HSRP Number Plate : ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಇನ್ನೂ ಹಾಕಿಸಿಲ್ವಾ, ಟೆನ್ಶನ್‌ ಬೇಡ! ಯಾಕಂದ್ರೆ..?

ಕಾವೇರಿ ನಿವಾಸದಲ್ಲಿ ಐಷಾರಾಮಿ ಜೀವನ ಸಾಗಿಸುತ್ತಿದ್ದಾರೆ ಎಂಬ ಎಚ್.ಡಿ. ಕುಮಾರಸ್ವಾಮಿ ಆರೋಪದ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡಿದಾಗ, ಬರೀ ಸುಳ್ಳೇ.. ಸುಳ್ಳು ಬಿಟ್ರೆ ಬೇರೆ ಏನೂ ಗೊತ್ತಿಲ್ಲ ಅವರಿಗೆ. ಅವರು ಸುಳ್ಳನ್ನೇ ಆರೋಪ‌ ಮಾಡೋದು. ಸುಳ್ಳು ಅಂತ ಗೊತ್ತಿದ್ದರೂ ನೀವು ಪ್ರಶ್ನೆ ಮಾಡುತ್ತೀರಾ? ಎಂದು ಮಾಧ್ಯಮದವರನ್ನೇ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

ನೆಹರೂ ದೂರದೃಷ್ಟಿಯ ಫಲ ಇದು

ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ಜವಾಹರಲಾಲ್ ನೆಹರೂ. ಅವರ ದೂರದೃಷ್ಟಿಯ ಫಲವನ್ನು ಆಗಿನ-ಈಗಿನ ಪೀಳಿಗೆಯವರೂ ಅನುಭವಿಸುತ್ತಿದ್ದಾರೆ. ಮುಂದಿನ ಪೀಳಿಗೆಯವರೂ ಅನುಭವಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನೆಹರೂ ಮೌಲ್ಯವನ್ನು ಅಳವಡಿಸಿಕೊಳ್ಳೋಣ

ಪ್ರಜಾಪ್ರಭುತ್ವ-ಸಮಾಜವಾದ-ಜಾತ್ಯತೀತತೆ ನೆಹರೂ ಬದುಕಿನ ಮೌಲ್ಯಗಳು. ಈ ಮೌಲ್ಯಗಳನ್ನು ಪ್ರಧಾನಮಂತ್ರಿಯಾಗಿ ಭಾರತದಲ್ಲಿ ನೆಲೆಯೂರಿಸಲು ಶ್ರಮಿಸಿದರು. ಈ ಮೌಲ್ಯಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದೇ ನೆಹರೂ ಅವರಿಗೆ ನಾವು ಸಲ್ಲಿಸುವ ಅರ್ಥಪೂರ್ಣ ಶ್ರದ್ಧಾಂಜಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಆಧುನಿಕ ಭಾರತದ ಶಿಲ್ಪಿ

ಮಕ್ಕಳ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಕಾರಣಕ್ಕೇ ದೇಶದ ಮಕ್ಕಳ ಪಾಲಿಗೆ ಚಾಚಾ ನೆಹರೂ ಆದರು. ಸ್ವಾತಂತ್ರ್ಯ ಹೋರಾಟದಲ್ಲಿ 9 ವರ್ಷಗಳ ಕಾಲ ಜೈಲುವಾಸ ಅನುಭವಿಸಿದ್ದರು. ಸ್ವಾತಂತ್ರ್ಯಾ ನಂತರದಲ್ಲಿ ದೇಶದ ಪ್ರಧಾನಿಯಾಗಿ ಆಧುನಿಕ ಭಾರತದ ಶಿಲ್ಪಿ ಎನ್ನಿಸಿಕೊಂಡರು ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.

ನೆಹರೂ ಅವರು ಪ್ರಧಾನಿ ಆಗಿ ವಿರೋಧ ಪಕ್ಷದವರು ಮಾತನಾಡುವಾಗ ಸಹನೆಯಿಂದ ಕೇಳಿಸಿಕೊಳ್ಳುತ್ತಿದ್ದರು. ವಿರೋಧ ಪಕ್ಷದವರ ಮಾತಿಗೆ ಗೌರವ ಕೊಡುತ್ತಿದ್ದ ಘನತೆಯ ವ್ಯಕ್ತಿತ್ವ ಅವರದ್ದಾಗಿತ್ತು.

ನೆಹರೂ ಅವರು ಯೋಜನಾ ಆಯೋಗ ರಚಿಸಿದರು. ಪಂಚವಾರ್ಷಿಕ ಯೋಜನೆ ಜಾರಿಗೆ ತಂದರು. ಕೊನೇ ಕ್ಷಣದವರೆಗೂ ಪ್ರಜಾಪ್ರಭುತ್ವ, ಜಾತ್ಯತೀತ ತತ್ವ, ಸಮಾಜವಾದದ ಮೌಲ್ಯಗಳನ್ನು ಜನಮಾನಸಕ್ಕೆ ವಿಸ್ತರಿಸಲು ಶ್ರಮಿಸಿದರು ಎಂದು ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.

ಇದನ್ನೂ ಓದಿ: HD Kumaraswamy : ಎಚ್‌ಡಿಕೆಯಿಂದ ವಿದ್ಯುತ್‌ ಕಳ್ಳತನವೆಂದ ಕಾಂಗ್ರೆಸ್‌; ದಂಡ ಕಟ್ತೇನೆ ಅಂದ್ರು ಕುಮಾರಸ್ವಾಮಿ

ಡಿಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Murder Case: ರಾಜಧಾನಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

Murder Case: ಬಡ್ಡಿ ವ್ಯವಹಾರದ ಕಾರಣದಿಂದ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಕೊಲೆಯಾದ ವ್ಯಕ್ತಿ ಬಾಣಸವಾಡಿಯಲ್ಲಿ ವಾಸವಾಗಿದ್ದು, ಕೆಲವರ ಬಳಿ ಬಡ್ಡಿಗಾಗಿ ಹಣ ಪಡೆದಿದ್ದ. ಹಣ ಕೊಡದೆ ಸತಾಯಿಸುತ್ತಿದ್ದ ಎಂಬ ಕಾರಣಕ್ಕೆ ಕೊಲೆ ಮಾಡಿರುವ ಶಂಕೆ ಇದೆ.

VISTARANEWS.COM


on

bangalore murder case
Koo

ಬೆಂಗಳೂರು: ಬೆಂಗಳೂರಿನಲ್ಲಿ‌ ಇನ್ನೊಂದು ಬರ್ಬರ ಹತ್ಯೆ (Murder Case) ನಡೆದಿದೆ. ಅಜಿತ್‌ ಎಂಬ ವ್ಯಕ್ತಿ ಕೊಲೆಯಾದವನು. ಹಣಕಾಸಿನ ವಿಚಾರದಲ್ಲಿ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ.

ಪುಲಿಕೇಶಿನಗರ ಕಾಕ್ಸ್ ಟೌನ್ ಬಳಿ ಅಜಿತ್‌ (35) ಬರ್ಬರ ಹತ್ಯೆಯಾಗಿದೆ. ಬಡ್ಡಿ ವ್ಯವಹಾರದ ಕಾರಣದಿಂದ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಕೊಲೆಯಾದ ವ್ಯಕ್ತಿ ಬಾಣಸವಾಡಿಯಲ್ಲಿ ವಾಸವಾಗಿದ್ದು, ಕೆಲವರ ಬಳಿ ಬಡ್ಡಿಗಾಗಿ ಹಣ ಪಡೆದಿದ್ದ. ಹಣ ಕೊಡದೆ ಸತಾಯಿಸುತ್ತಿದ್ದ ಎಂಬ ಕಾರಣಕ್ಕೆ ಕೊಲೆ ಮಾಡಿರುವ ಶಂಕೆ ಇದೆ. ಘಟನಾ ಸ್ಥಳಕ್ಕೆ ಪುಲಿಕೇಶಿನಗರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಪುಲಿಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಗುಂಟೆ ಸರ್ಕಲ್ ಬಳಿ ಘಟನೆ ನಡೆದಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಲಾಗಿದೆ. ದೊಡ್ಡಗುಬ್ಬಿ ಬಳಿಯ ಐಟಿಸಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಅಜಿತ್, ಕೆಲಸ ಮುಗಿಸಿ ವಾಪಸ್ ಮನೆಗೆ ಬರುವಾಗ ಮನೆ ಮುಂಭಾಗದಲ್ಲೇ ಕೊಲೆ ಮಾಡಲಾಗಿದೆ. ಡ್ಯೂಟಿ ಮುಗಿಸಿ ಬಟ್ಟೆ ಬದಲಿಸಲು ಆಗಮಿಸಿದ್ದ ವೇಳೆ ಅಟ್ಯಾಕ್ ಮಾಡಿದ ನಾಲ್ಕೈದು ಮಂದಿ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ.

ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅಪ್ಪ, ಅಮ್ಮ

ಮಗನ ಕುಡಿತದಿಂದ ಉಂಟಾಗಿರುವ ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ಹಿರಿಯ ವಯಸ್ಸಿನ ಪೋಷಕರು ಆತ್ಮಹತ್ಯೆ (Suicide News ) ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಘಟನೆ ನಡೆದಿದೆ. ಚಂದ್ರಶೇಖರ್ (54) ಹಾಗೂ ಶಾರದಮ್ಮ ಆತ್ಮಹತ್ಯೆ ಮಾಡಿಕೊಂಡ ದಂಪತಿ.

ಮಗ ಪ್ರಶಾಂತನಿಗೆ ವರ್ಷಗಳ ಹಿಂದೆ ಮದುವೆ ಮಾಡಿದ್ದರು. ಆದರೆ ಮಗ ಕುಡಿತದಿಂದ ಮನೆ ಬರೋದು ಕಡಿಮೆ ಮಾಡಿದ್ದ, ಇದರಿಂದ ನೊಂದು ಕಳೆದ ಮೂರು ತಿಂಗಳ ಹಿಂದೆ ಪ್ರಶಾಂತನ ಹೆಂಡತಿ ಮನೆ ಬಿಟ್ಟು ತವರು ಮನೆ ಸೇರಿದ್ದರು. ಇದರಿಂದ‌ ಮಗನ‌ ಬಾಳು ಹೀಗಾಯಿತು ಎಂದು ನೊಂದು ಕೊಂಡಿದ್ದರು.

ಸೋಮವಾ ಎರಡನೇ‌ ಮಗನನ್ನ ಅಂಗಡಿ ಕಳಿಸಿ ದಂಪತಿ ನೇಣಿಗೆ ಶರಣಾಗಿದ್ದರು. ಮಗ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರು ಹೊಸಕೋಟೆ ಮೂಲದವರು. ಅವರು ಹಲವು ವರ್ಷಗಳಿಂದ‌ ಹಳೆ ಬೈಯಪ್ಪನಹಳ್ಳಿ ಯಲ್ಲಿ ವಾಸ ಮಾಡಿಕೊಂಡಿದ್ದರು. ಬೆಂಗಳೂರಿನಲ್ಲೊ ಕೂಲಿ ಕೆಲಸ ಮಾಡಿಕೊಂಡಿದ್ದರು. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮರು ನೇಮಕ

Continue Reading

ಪ್ರಮುಖ ಸುದ್ದಿ

Dengue Fever: ಇನ್ನೂ ಏರಲಿದೆ ಡೆಂಗ್ಯು ಕೇಸ್‌ ಎಂದ ಆರೋಗ್ಯ ಸಚಿವರು; ಇದುವರೆಗೆ 6 ಸಾವು

Dengue Fever: ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ಬಾರಿ ಪ್ರಕರಣಗಳು ಡಬಲ್ ಆಗಿವೆ. ಜನವರಿಯಿಂದ ಜುಲೈ 1ರ ತನಕ ಒಟ್ಟು 6187 ಕೇಸ್ ಪಾಸಿಟಿವ್ ಇದೆ. ಕಳೆದ ವರ್ಷ 2903 ಇತ್ತು. ಇಷ್ಟೇ ಅಲ್ಲ ರಾಜ್ಯದಲ್ಲಿ ಮತ್ತಷ್ಟು ಡೆಂಗ್ಯು ಕೇಸ್ ಇರಬಹುದು. 47% ಟೆಸ್ಟಿಂಗ್ ರೇಟ್ ಹೆಚ್ಚಳ ಮಾಡಲಾಗಿದೆ.

VISTARANEWS.COM


on

dengue fever Dinesh Gundu Rao
Koo

ಬೆಂಗಳೂರು: ಇದುವರೆಗೆ ರಾಜ್ಯದಲ್ಲಿ ಡೆಂಗ್ಯು ಜ್ವರದಿಂದಾಗಿ (Dengue Fever) 6 ಜನ ಸತ್ತಿದ್ದಾರೆ. ಸೆಪ್ಟೆಂಬರ್‌ನಲ್ಲಿ ಡೆಂಗ್ಯು ಜ್ವರ ಪ್ರಕರಣಗಳು (Dengue Positive) ಇನ್ನೂ ಏರಬಹುದು ಎಂದು ಆರೋಗ್ಯ ಸಚಿವ (Health Minister) ದಿನೇಶ್‌ ಗುಂಡೂರಾವ್‌ (dinesh Gundu Rao) ಎಚ್ಚರಿಸಿದ್ದಾರೆ.

ಡೆಂಗ್ಯು ಹರಡುವಿಕೆ ನಿಯಂತ್ರಣದ ಬಗ್ಗೆ ವಿವಿಧ ಇಲಾಖೆಗಳ ಜೊತೆ ಸಭೆ ಮಾಡಿದ ಬಳಿಕ ಅವರು ಸುದ್ದಿಗೋಷ್ಠಿ ನಡೆಸಿದರು. ಡೆಂಗ್ಯು ಕಳೆದ ವರ್ಷಕ್ಕಿಂತ ಈ ಬಾರಿ ದುಪ್ಪಟ್ಟಾಗಿದೆ. ಇಲ್ಲಿಯವರೆಗೂ ರಾಜ್ಯದಲ್ಲಿ 6187 ಪ್ರಕರಣ ದಾಖಲಾಗಿದೆ. 6 ಜನ ಸತ್ತಿದ್ದಾರೆ. ಇದರಲ್ಲಿ ಕೋಮಾರ್ಬಿಡಿಟೀಸ್‌ (ಬಿಪಿ, ಮಧುಮೇಹ, ಹೃದಯ ಕಾಯಿಲೆ) ಇದ್ದ ಮೂವರೂ ಸೇರಿದ್ದಾರೆ ಎಂದು ಸಚಿವರು ತಿಳಿಸಿದರು.

ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ಬಾರಿ ಪ್ರಕರಣಗಳು ಡಬಲ್ ಆಗಿವೆ. ಜನವರಿಯಿಂದ ಜುಲೈ 1ರ ತನಕ ಒಟ್ಟು 6187 ಕೇಸ್ ಪಾಸಿಟಿವ್ ಇದೆ. ಕಳೆದ ವರ್ಷ 2903 ಇತ್ತು. ಇಷ್ಟೇ ಅಲ್ಲ ರಾಜ್ಯದಲ್ಲಿ ಮತ್ತಷ್ಟು ಡೆಂಗ್ಯು ಕೇಸ್ ಇರಬಹುದು. 47% ಟೆಸ್ಟಿಂಗ್ ರೇಟ್ ಹೆಚ್ಚಳ ಮಾಡಲಾಗಿದೆ. ಸದಾ ಮಳೆ ಬರುತ್ತಿದ್ದರೆ ಡೆಂಗ್ಯು ಸೊಳ್ಳೆ ಬರುವುದಿಲ್ಲ. ಮಳೆ ಬಿಟ್ಟು ಬಿಟ್ಟು ಬರುವ ಹಿನ್ನೆಲೆಯಲ್ಲಿ ಡೆಂಗ್ಯುವಿಗೆ ಅನುಕೂಲ ವಾತಾವರಣ ಇದೆ. ನಿಂತು ಬೀಳುವ ಮಳೆಯಿಂದಾಗಿ ಸೊಳ್ಳೆ ಹರಡುವಿಕೆ ಹೆಚ್ಚಾಗುತ್ತದೆ. ಇದು ಅನುಕೂಲ ಮಾಡಿಕೊಡುತ್ತದೆ. ಹವಾಮಾನ ಬದಲಾವಣೆಯಿಂದ ರೋಗ ಉಲ್ಬಣಗೊಳ್ಳುತ್ತಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದಲ್ಲಿ ಒಟ್ಟು 6187 ಪ್ರಕರಣಗಳು ಇವೆ. 3463 ಪ್ರಕರಣ ನಗರ ಪ್ರದೇಶಗಳಲ್ಲಿ ಕಂಡು ಬಂದಿವೆ. 56% ನಗರ ಪ್ರದೇಶದಲ್ಲಿ, 44% ಗ್ರಾಮೀಣ ಪ್ರದೇಶದಲ್ಲಿ ಪೊಸಿಟಿವ್‌ ಬಂದಿವೆ. ಒಂದು ವರ್ಷದ ಒಳಗಿನ 123 ಮಕ್ಕಳಿಗೆ, 1-18 ವರ್ಷದ 2301 ಮಂದಿಗೆ, 19- 60 ವರ್ಷದ 3313 ಮಂದಿಗೆ, 61 ವರ್ಷ ಮೇಲಿನ 450 ಮಂದಿಗೆ ಪಾಸಿಟಿವ್‌ ಬಂದಿದೆ ಎಂದು ಮಾಹಿತಿ ನೀಡಿದರು.

ಡೆಂಗ್ಯು ಜ್ವರ ಇನ್ನಷ್ಟು ಹೆಚ್ಚಾಗಬಹುದು. ಸೆಪ್ಟಂಬರ್‌ನಲ್ಲಿ ಮತ್ತೆ ಹೆಚ್ಚಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿಗಳು ಮುಂಜಾಗ್ರತಾ ಕ್ರಮಕ್ಕೆ ಸೂಚಿಸಿದ್ದಾರೆ. ಟೆಸ್ಟಿಂಗ್ ಕಿಟ್ ಹೆಚ್ಚುವರಿ ಇರಿಸಲಾಗಿದೆ. ಪ್ಲೇಟ್‌ಲೆಟ್ಸ್‌ ಕೊಡುವುದಕ್ಕೆ ತಿಳಿಸಿದ್ದೇವೆ. ಡೆಂಗ್ಯುವಿಗೆ ನಿರ್ದಿಷ್ಟ ಚಿಕಿತ್ಸೆ ಇಲ್ಲ. ಪ್ಲೇಟ್ ಲೆಟ್ಸ್ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೇವೆ. ಬ್ಲಡ್ ಯೂನಿಟ್‌ಗಳ ಜತೆ ಮಾತುಕತೆ ಮಾಡಲಾಗಿದೆ. ಐವಿ ಫ್ಲೂವಿಡ್‌ಗಳನ್ನು ಕೊಡಲಾಗುತ್ತದೆ. ಇದು ನಮ್ಮ ಬಳಿ ಸಾಕಷ್ಟು ಇದೆ. ಆರಂಭದಲ್ಲಿ ಪ್ಯಾರಸಿಟಮಲ್ ಕೊಟ್ಟರೆ ಸಾಕಾಗುತ್ತದೆ ಎಂದು ತಿಳಿಸಿದರು.

ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ

ಖಾಸಗಿ ಆಸ್ಪತ್ರೆಗಳು ಡೆಂಗ್ಯು ಕೇಸ್ ರಿಪೋರ್ಟ್ ಮಾಡುತ್ತಿಲ್ಲ. ಕೆಪಿಎಂ ಆಕ್ಟ್ ಪ್ರಕಾರ ಖಾಸಗಿ ಆಸ್ಪತ್ರೆಗಳು ಡೆಂಗ್ಯು ಕೇಸ್ ರಿಪೋರ್ಟ್ ಮಾಡುವುದು ಕಡ್ಡಾಯ. IHIPಯಲ್ಲಿ ಅನೇಕ ಖಾಸಗಿ ಆಸ್ಪತ್ರೆಗಳು ಅಪ್ಲೋಡ್ ಮಾಡುತ್ತಿಲ್ಲ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು. ಖಾಸಗಿ ಆಸ್ಪತ್ರೆಯಲ್ಲಿ ಡೆಂಗ್ಯು ತಪಾಸಣೆಗೆ ದರ ನಿಗದಿ ಮಾಡುವ ಬಗ್ಗೆ ಚರ್ಚೆ ಮಾಡಿಲ್ಲ. ಆ ಬಗ್ಗೆ ಮುಂದೆ ಚರ್ಚೆ ಮಾಡುತ್ತೇವೆ ಎಂದು ಅವರು ತಿಳಿಸಿದರು.

ನಮ್ಮ ವೆಬ್‌ಸೈಟಿನಲ್ಲಿ ಡೆಂಗ್ಯು ಬುಲೆಟಿನ್ ಬಿಡುಗಡೆ ಮಾಡುತ್ತೇವೆ. ಪ್ರತಿ ದಿನ ಎಷ್ಟು ಕೇಸ್ ಬಂದಿದೆ ಎನ್ನುವ ಮಾಹಿತಿ ಹಾಕುತ್ತೇವೆ. ದಿನ ನಿತ್ಯ ಡೆಂಗ್ಯು ಬುಲೆಟಿನ್ ಕೊಡಲಾಗುತ್ತದೆ. ಬೆಂಗಳೂರು ನಗರದಲ್ಲಿ ಬಿಬಿಎಂಪಿ ಎಲ್ಲಾ ಮನೆಗಳ ಸರ್ವೆ ಮಾಡುತ್ತಿದೆ. ಸೂಕ್ಷ್ಮ ಪ್ರದೇಶಗಳು ಮಾತ್ರವಲ್ಲ ಎಲ್ಲಾ ಮನೆಗಳ ಸರ್ವೆ ನಡೆಸಲು ನಾನು ಬಿಬಿಎಂಪಿಗೆ ಸೂಚನೆ ನೀಡಿದ್ದೇನೆ. ಮನೆ ಮನೆಗೆ ಭೇಟಿ ಕೊಡಲು ಸೂಚಿಸಿದ್ದೇನೆ. ರಾಜ್ಯಾದ್ಯಂತ ಡೆಂಗ್ಯು ಬಗ್ಗೆ ಕಟ್ಟೆಚ್ಚರ ವಹಿಸಲು ಸೂಚನೆ ಕೊಡಲಾಗಿದೆ. ಪ್ರತಿ ಶುಕ್ರವಾರ ಡೆಂಗ್ಯು ವಿಚಾರದಲ್ಲಿ ಫೀಲ್ಡ್‌ನಲ್ಲಿ ಇದ್ದು, ಮಾನಿಟರ್ ಮಾಡಲು ಸೂಚಿಸಿದ್ದೇನೆ. ಪ್ರತಿ ಶುಕ್ರವಾರ ಮನೆ ಮನೆ ಸಮೀಕ್ಷೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಎಲ್ಲೆಲ್ಲಿ ಪಾಸಿಟಿವ್ ಕೇಸ್ ಬರುತ್ತದೆಯೋ ಅಲ್ಲಿ ತೀವ್ರ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಲಾರ್ವ ನಾಶ, ಫಾಗಿಂಗ್ ಸೇರಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. RWA, ಕ್ರೆಡೈ ಸೇರಿ ಕಟ್ಟಡ ಮಾಲೀಕರು ಸೇರಿ ಅವರನ್ನು ಒಳಗೊಂಡು ಸಭೆ ನಡೆಸಲು ತೀರ್ಮಾನಿಸಿದ್ದೇವೆ. ಮೆಡಿಕಲ್ ಆಫೀಸರ್, MOH, ಸೈನ್ಸ್ ಟೀಚರ್ಸ್‌ಗೆ ಡೆಂಗ್ಯು ವಿಚಾರದಲ್ಲಿ ವಿಶೇಷ ತರಬೇತಿ ನೀಡಲಾಗಿದೆ. ಮಕ್ಕಳಿಗೆ ಡೆಂಗ್ಯು ಕುರಿತು ತಿಳಿವಳಿಕೆ ನೀಡಲಾಗಿದೆ. ಡಿಪೋಗಳಲ್ಲಿ ಟಯರ್‌ಗಳಲ್ಲಿ ಸೊಳ್ಳೆ ಉತ್ಪತ್ತಿ ಆಗುತ್ತಿರುವುದು ಕಂಡು ಬಂದಿದೆ. ಡಿಪೋಗಳಿಂದ ಸ್ಯಾಂಪಲ್ ಕಲೆಕ್ಟ್ ಮಾಡಲಾಗಿದೆ. ಹೆಚ್ಚು ಸಕ್ರಿಯ ಪ್ರಕರಣಗಳು ಕಂಡು ಬರ್ತಿದೆ. ಹೀಗಾಗಿ ಎಚ್ಚರಿಕೆ ವಹಿಸಲು ಸಾರಿಗೆ ಇಲಾಖೆಗೆ ಸೂಚಿಸಿದ್ದೇವೆ. ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಜನರಿಗೆ ಅರಿವು ಮೂಡಿಸುವಂತೆ ತಿಳಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Dengue fever: ಮಾರಕ ಡೆಂಗ್ಯು ಜ್ವರಕ್ಕೆ ಬಾಲಕಿ ಬಲಿ

Continue Reading

ಕ್ರೈಂ

Actor Darshan: ಒಂದೇ ಸೆಲ್‌ನಲ್ಲಿದ್ದರೂ ಶಿಷ್ಯನ ಮಾತನಾಡಿಸದ ದರ್ಶನ್‌, ʼಸಾಕು ನಿಮ್ಮ ಸಹವಾಸʼ ಎಂದ ಡಿ ಬಾಸ್

Actor Darshan: ನಾನು ತಪ್ಪು ಮಾಡಿಬಿಟ್ನೋ ಅಥವಾ ಜೊತೆಯಲ್ಲಿದ್ದವರ ಮಾತು ಕೇಳಿ ಕೆಟ್ನೋ ಗೊತ್ತಿಲ್ಲ ಎಂದು ಸಿಬ್ಬಂದಿಗಳ ಬಳಿ ಆತ ಮಾತಾಡಿದ್ದು ವರದಿಯಾಗಿದೆ. ತಾಯಿ ಬಂದಾಗಲೂ, ಪತ್ನಿ ಬಂದಾಗಲೂ, ರಕ್ಷಿತಾ ಪ್ರೇಮ್ ಬಂದಾಗಲೂ ದರ್ಶನ್ ಇದೇ ಮಾತು ಹೇಳಿದ್ದಾರೆ ಎನ್ನಲಾಗಿದೆ.

VISTARANEWS.COM


on

Actor Darshan his brother-in-law homeless
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಪರಪ್ಪನ ಅಗ್ರಹಾರ (Parappana Agrahara) ಜೈಲುಪಾಲಾಗಿರುವ ನಟ ದರ್ಶನ್‌ (Actor Darshan), ಒಂದೇ ಸೆಲ್‌ನಲ್ಲಿರುವ ತನ್ನ ಶಿಷ್ಯ ವಿನಯ್‌ ಅನ್ನು ಕೂಡ ಹೆಚ್ಚು ಮಾತನಾಡಿಸುತ್ತಿಲ್ಲ, ಮೌನವಾಗಿದ್ದಾನೆ ಎಂದು ತಿಳಿದುಬಂದಿದೆ. ಪ್ರಚೋದಿಸಿ ತನ್ನಿಂದ ಕೊಲೆ (Murder Case) ಮಾಡಿಸಿದರು ಎಂಬ ಸಿಟ್ಟೇ ಇದಕ್ಕೆ ಕಾರಣ ಎನ್ನಲಾಗಿದೆ.

ಸಹವಾಸ ಮಾಡಿ ಕೆಟ್ಟ ಮೇಲೆ ದರ್ಶನ್‌ಗೆ ಬುದ್ಧಿ ಬಂದಂತಿದೆ. ರೇಣುಕಾ ಸ್ವಾಮಿ ಮೆಸೇಜ್‌ಗಳಿಂದ ಆಕ್ರೋಶಗೊಂಡಿದ್ದ ದರ್ಶನ್‌ಗೆ ಇನ್ನಷ್ಟು ಪ್ರಚೋದನೆ ನೀಡಿದವರು ಜೊತೆಯಲ್ಲಿದ್ದ ವಿನಯ್ ಮತ್ತು ಟೀಂ. ಶೆಡ್‌ನಲ್ಲಿ ಹಲ್ಲೆ ನಡೆಸುತ್ತಿದ್ದಾಗ ʼಬಾಸ್, ಬಿಡ್ಬೇಡಿ ಬಿಡ್ಬೇಡಿʼ ಎಂದು ಗ್ಯಾಂಗ್‌ ಪ್ರಚೋದನೆ ಕೊಟ್ಟಿತ್ತು. ಇದರಿಂದಾಗಿಯೇ ಕೈಮೀರಿ ಕೊಲೆ ನಡೆಯಿತು ಎಂದು ದರ್ಶನ್‌ ಭಾವಿಸಿದಂತಿದೆ.

ತಾನು ಮಾಡಿದ್ದು ತಪ್ಪೋ, ಇವರ ಮಾತು ಕೇಳಿ ಕೆಟ್ಟೆನೋ ಎಂಬ ಚಿಂತೆಯಲ್ಲೇ ಇರುವ ದರ್ಶನ್, ಇದೇ ಕಾರಣಕ್ಕೆ ಜೊತೆಯಲ್ಲೇ ಒಂದೇ ಬ್ಯಾರಕ್‌ನಲ್ಲಿದ್ದರೂ ವಿನಯ್‌ ಅನ್ನು ಹೆಚ್ಚು ಮಾತನಾಡಿಸುತ್ತಿಲ್ಲ. ಜೊತೆಗಿರುವವರ ಸಹವಾಸ ಬಿಟ್ಟು ಹೆಚ್ಚು ಒಂಟಿಯಾಗಿದ್ದಾನೆ.

ನಾನು ತಪ್ಪು ಮಾಡಿಬಿಟ್ನೋ ಅಥವಾ ಜೊತೆಯಲ್ಲಿದ್ದವರ ಮಾತು ಕೇಳಿ ಕೆಟ್ನೋ ಗೊತ್ತಿಲ್ಲ ಎಂದು ಸಿಬ್ಬಂದಿಗಳ ಬಳಿ ಆತ ಮಾತಾಡಿದ್ದು ವರದಿಯಾಗಿದೆ. ತಾಯಿ ಬಂದಾಗಲೂ, ಪತ್ನಿ ಬಂದಾಗಲೂ, ರಕ್ಷಿತಾ ಪ್ರೇಮ್ ಬಂದಾಗಲೂ ದರ್ಶನ್ ಇದೇ ಮಾತು ಹೇಳಿದ್ದಾರೆ ಎನ್ನಲಾಗಿದೆ.

ಈ ನಡುವೆ, ದರ್ಶನ್‌ ಕುಟುಂಬಸ್ಥರಿಗೆ ಬಿಟ್ಟು ಉಳಿದವರ ಭೇಟಿಗೆ ಅವಕಾಶ ಕೊಡದಿರಲು ಜೈಲಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಪ್ರತಿನಿತ್ಯ ಜೈಲಿನ ಬಳಿ ವಿಐಪಿಗಳು ಬಂದರೆ ಮೈಂಟೇನ್ ಮಾಡುವುದು ಕಷ್ಟ. ಭೇಟಿಗೆ ದರ್ಶನ್ ಹೊರ ಬಂದು ವಿಸಿಟರ್ ಛೇಂಬರ್ ಬಳಿ ಬಂದರೆ ಉಳಿದ ಕೈದಿಗಳನ್ನು ಮೈಂಟೇನ್ ಮಾಡುವುದೂ ಕಷ್ಟವಾಗುತ್ತದೆ.

ಕೆಲ ಕೈದಿಗಳನ್ನು ಭೇಟಿ ಮಾಡಲು ಬರುವ ಕುಟುಂಬಸ್ಥರು ಸಹ ಮುಗಿಬೀಳುತ್ತಾರೆ. ಕೈದಿಗಳು ಸಹ ದರ್ಶನ್ ಹೊರಬಂದಾಗ ಹಿಂದೆ ಓಡೋಡಿ ಬರುತ್ತಾರೆ. ಇದೆಲ್ಲದರಿಂದಾಗಿ ಜೈಲಿನೊಳಗೆ ಸುವ್ಯವಸ್ಥೆ ಸಮಸ್ಯೆ ಆಗುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ದರ್ಶನ್‌ ಭೇಟಿಯಾದ ಪವಿತ್ರಾ ಆಪ್ತೆ

ಜೈಲಿನಲ್ಲಿರುವ ನಟ ದರ್ಶನ್‌ನನ್ನು ಪವಿತ್ರಾ ಗೌಡ ಆಪ್ತ ಸ್ನೇಹಿತೆ ಮಂಗಳವಾರ ಭೇಟಿ ಮಾಡಿದ್ದಾರೆ. ಒಂದು ಕಡೆ ಪವಿತ್ರಾ ಸ್ನೇಹಿತೆ 15 ನಿಮಿಷ ದರ್ಶನ್ ಜತೆ ಮಾತುಕತೆ ನಡೆಸಿದ್ದರೆ, ಮತ್ತೊಂದೆಡೆ ದರ್ಶನ್‌ರನ್ನು‌ (Actor Darshan) ಭೇಟಿಯಾಗಲು ನಟ ಧನ್ವೀರ್‌ಗೆ ಅವಕಾಶ ಸಿಗದಿರುವುದು ಕಂಡುಬಂದಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ದರ್ಶನ್ ಅಭಿಪ್ರಾಯ ತಿಳಿಯಲು ಪವಿತ್ರಾ ಗೌಡ ಯತ್ನಿಸಿದ್ದಾರೆ. ಹೀಗಾಗಿ ಅವರು ನೀಡಿದ ಮಾಹಿತಿಯನ್ನು ದರ್ಶನ್‌ಗೆ ಪವಿತ್ರಾ ಗೌಡ ಆಪ್ತ ಸ್ನೇಹಿತೆ ಸಮತಾ ರವಾನಿಸಿದ್ದಾರೆ ಎನ್ನಲಾಗಿದೆ.

ಜೈಲಿನಲ್ಲಿ ಬೇರೆ ಬೇರೆಯಾಗಿದ್ದರೂ ದರ್ಶನ್ ಮತ್ತು ಪವಿತ್ರಾಗೆ ಪರಸ್ಪರ ಮಾಹಿತಿ ಸಿಗುತ್ತಿದೆ. ಇದಕ್ಕೆ ಪವಿತ್ರಾ ಸ್ನೇಹಿತೆ ಸಮತಾ ಮಧ್ಯವರ್ತಿಯಾಗಿದ್ದಾರೆ. ನಟ ದರ್ಶನ್ ತನ್ನ ಬಗ್ಗೆ ಏನು ಹೇಳುತ್ತಿದ್ದಾರೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ಅವರ ಅಭಿಪ್ರಾಯ ತಿಳಿಯಲು ಪವಿತ್ರಾ ಪ್ರಯತ್ನಿಸಿದ್ದಾರೆ. ಹೀಗಾಗಿ ಸ್ನೇಹಿತೆ ಮೂಲಕ ದರ್ಶನ್‌ರನ್ನು ಭೇಟಿ ಮಾಡಿಸಿದ್ದಾರೆ ಎನ್ನಲಾಗಿದೆ. ನಟ ದರ್ಶನ್ ಕೂಡ ಸಮತಾ ಭೇಟಿಗೆ ಓಕೆ ಅಂದಿದ್ದರು. ಹೀಗಾಗಿ ಅವರನ್ನು ಜೈಲಿನೊಳಗೆ ಕಳುಹಿಸಲಾಗಿದೆ.

ಇದನ್ನೂ ಓದಿ: Actor Darshan: ದರ್ಶನ್‌ ಮೇಲಿನ ಅಂಧಾಭಿಮಾನ; ಮಗನನ್ನೇ ಕೈದಿ ಮಾಡಿದ ಹುಚ್ಚು ಫ್ಯಾನ್!

Continue Reading

ಕರ್ನಾಟಕ

High Beam Lights‌: ರಾತ್ರಿ ಹೈ ಬೀಮ್‌ ಲೈಟ್‌ ಹಾಕಿಕೊಂಡು ವಾಹನ ಚಲಾಯಿಸುತ್ತೀರಾ? ಕೇಸು ಬೀಳುತ್ತೆ ಎಚ್ಚರ!

High Beam Lights: ರಾತ್ರಿ ವೇಳೆ ಹೈ ಬೀಮ್ ಲೈಟ್ ಉಪಯೋಗದಿಂದ ಅಪಘಾತ ಪ್ರಕರಣಗಳು ಹೆಚ್ಚಿವೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಗೆ ಇಳಿದಿರುವ ಪೊಲೀಸರು, ಹೀಗೆ ಹಾಕಿಕೊಂಡು ಚಲಾಯಿಸಿದವರ ವಿರುದ್ಧ ಕೇಸು ಜಡಿದಿದ್ದಾರೆ. ನಂಬರ್ ಪ್ಲೇಟ್ ಅಳವಡಿಸದ ಹಾಗೂ ಮರೆ ಮಾಚಿಕೊಂಡು ಓಡಾಡುತ್ತಿದ್ದವರ ಮೇಲೂ ಕೇಸ್ ಬಿದ್ದಿದೆ.

VISTARANEWS.COM


on

high beam lights
Koo

ಬೆಂಗಳೂರು: ವಾಹನಕ್ಕೆ ಬೇಕಾಬಿಟ್ಟಿ ಎಕ್ಸ್‌ಟ್ರಾ ಲೈಟ್ ಅಳವಡಿಸಿಕೊಂಡು ಚಲಾಯಿಸುವ ವಾಹನ ಚಾಲಕರು ಇನ್ನು ಮುಂದೆ ಎಚ್ಚರ ವಹಿಸಬೇಕಿದೆ. ಹೈ ಬೀಮ್ ಲೈಟ್ (High Beam Lights‌) ಉಪಯೋಗಿಸುತ್ತಿದ್ದ ವಾಹನ ಸವಾರರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯಾದ್ಯಂತ 966 ಪ್ರಕರಣಗಳನ್ನು ಪೊಲೀಸರು (Traffic Police) ದಾಖಲಿಸಿದ್ದಾರೆ.

ರಾತ್ರಿ ವೇಳೆ ಹೈ ಬೀಮ್ ಲೈಟ್ ಉಪಯೋಗದಿಂದ ಅಪಘಾತ (Accidents) ಪ್ರಕರಣಗಳು ಹೆಚ್ಚಿವೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಗೆ ಇಳಿದಿರುವ ಪೊಲೀಸರು, ಹೀಗೆ ಹಾಕಿಕೊಂಡು ಚಲಾಯಿಸಿದವರ ವಿರುದ್ಧ ಕೇಸು ಜಡಿದಿದ್ದಾರೆ. ಪಶ್ಚಿಮ ವಿಭಾಗ ಸಂಚಾರ ಪೊಲೀಸರಿಂದ 239 ಪ್ರಕರಣ, ದಕ್ಷಿಣ ವಿಭಾಗ ಸಂಚಾರ ಪೊಲೀಸರಿಂದ 104 ಹಾಗೂ ಪೂರ್ವ ವಿಭಾಗ ಸಂಚಾರ ಪೊಲೀಸರಿಂದ 102 ಪ್ರಕರಣ ದಾಖಲಾಗಿವೆ.

ನಂಬರ್ ಪ್ಲೇಟ್ ಅಳವಡಿಸದ ಹಾಗೂ ಮರೆ ಮಾಚಿಕೊಂಡು ಓಡಾಡುತ್ತಿದ್ದವರ ಮೇಲೂ ಕೇಸ್ ಬಿದ್ದಿದೆ. ಬೆಂಗಳೂರು ದಕ್ಷಿಣ ವಿಭಾಗ ಸಂಚಾರ ಡಿಸಿಪಿ ಶಿವಪ್ರಕಾಶ್ ದೇವರಾಜ್ ನೇತೃತ್ವದಲ್ಲಿ ಸ್ಪೆಷಲ್ ಡ್ರೈವ್ ಮೂಲಕ ಇಂಥವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ನಂಬರ್ ಫ್ಲೇಟ್ ಅಳವಡಿಸಿಕೊಳ್ಳದೇ ಚಾಲನೆ ಮಾಡುತ್ತಿದ್ದ 100 ಪ್ರಕರಣ, ನಂಬರ್ ಫ್ಲೇಟ್ ಮರೆಮಾಚಿಕೊಂಡು ಸಂಚರಿಸುತ್ತಿದ್ದವರ ವಿರುದ್ಧ 104 ಪ್ರಕರಣ ದಾಖಲಾಗಿದೆ.

ದೋಷಪೂರಿತ ಸೈಲೆನ್ಸರ್ ಅಳವಡಿಸಿಕೊಂಡು ಸಂಚರಿಸುತ್ತಿದ್ದವರ ವಿರುದ್ಧ 62 ಪ್ರಕರಣ ದಾಖಲಾಗಿದೆ. ವಿಶೇಷ ಕಾರ್ಯಚರಣೆಯಲ್ಲಿ ಒಟ್ಟು 266 ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಾಗಿದೆ.

ಕರೆದ ಕಡೆ ಹೋಗದೆ ಉದ್ಧಟತನ ತೋರುತ್ತಿದ್ದ ಹಾಗೂ ನಿಗದಿತ ದರಕ್ಕಿಂತ ಹೆಚ್ಚಿನ ಬಾಡಿಗೆ ಪಡೆಯುತ್ತಿದ್ದ ಆಟೋ ಚಾಲಕರಿಗೂ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬಾಡಿಗೆಗೆ ಹೋಗಲು ನಿರಾಕರಿಸುತ್ತಿದ್ದ 11 ಆಟೋ ಚಾಲಕರು, ನಿಗದಿತ ದರಕ್ಕಿಂತ ಹೆಚ್ಚು ಬಾಡಿಗೆ ಪಡೆಯುತ್ತಿದ್ದ 6 ಜನ ಆಟೋ ಚಾಲಕರು, ಯೂನಿಫಾರ್ಮ್ ಧರಿಸದೇ ಆಟೋ ಚಾಲನೆ ಮಾಡುತ್ತಿದ್ದ 66 ಚಾಲಕರು, ಅನಧಿಕೃತವಾಗಿ ಆಟೋ ಪಾರ್ಕಿಂಗ್ ಮಾಡುತ್ತಿದ್ದ 11 ಜನ ಆಟೋ ಚಾಲಕರು ಹೀಗೆ ಒಟ್ಟು 94 ಆಟೋ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ

ಬೆಂಗಳೂರು: ವಾಹನ ಸಂಚಾರ ನಿಯಮ ಉಲ್ಲಂಘನೆ ಹಾಗೂ ರಸ್ತೆ ಅಪಘಾತಗಳ ತಡೆಗಾಗಿ ಸಂಚಾರ ಪೊಲೀಸ್‌ ವಿಭಾಗ, ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಳ್ಳುತ್ತಿದೆ. ಇದರ ಭಾಗವಾಗಿ ಇಂದಿನಿಂದ (ಜುಲೈ 1) ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ (Bangalore–Mysore Expressway) ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್‌ (ITMS) ಜಾರಿಯಾಗಲಿದೆ. ಈ ಹೈವೇಯಲ್ಲಿ ಇನ್ನುಮುಂದೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸರಿಗೆ ನೆರವಾಗಲಿದೆ.

ಜುಲೈ 1ರಿಂದ ಹೆದ್ದಾರಿಯಲ್ಲಿ ಈ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ ಜಾರಿ ಆಗಲಿದೆ. ಈ ಮಾರ್ಗದಲ್ಲಿ ಸಂಚಾರ ನಿಯಮ ಉಲ್ಲಂಘನೆ ದಂಡವನ್ನು ನೇರವಾಗಿ ಫಾಸ್ಟ್ಯಾಗ್‌ ಖಾತೆಯಿಂದಲೇ ಕಡಿತಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಕ್ಯಾಮೆರಾಗಳು, ಸ್ಪೀಡ್‌ ಗನ್‌ಗಳು ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಲು ನೆರವಾಗಲಿವೆ.

ಜುಲೈ 1ರಿಂದ ಮೈಸೂರು-ಬೆಂಗಳೂರು ಹೆದ್ದಾರಿಯು ಸಂಪೂರ್ಣವಾಗಿ ಕ್ರಿಯಾತ್ಮಕ ಐಟಿಎಂಎಸ್ ಕಾರಿಡಾರ್ (ITMS Corridor) ಆಗಲಿದೆ ಎಂದು ಕರ್ನಾಟಕ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಎಡಿಜಿಪಿ ಅಲೋಕ್ ಕುಮಾರ್ ಇತ್ತೀಚೆಗೆ ತಿಳಿಸಿದ್ದರು.

ಐಟಿಎಂಎಸ್ ಅಥವಾ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ಅನ್ನು ಡಿಸೆಂಬರ್ 2022ರಲ್ಲಿ ಬೆಂಗಳೂರಿನಲ್ಲಿ ಚಾಲನೆಗೆ ತರಲಾಯಿತು. ಅದಕ್ಕಾಗಿ 250 ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ (ಎಎನ್‌ಪಿಆರ್) ಕ್ಯಾಮೆರಾಗಳು ಮತ್ತು 80 ರೆಡ್ ಲೈಟ್ ಉಲ್ಲಂಘನೆ ಪತ್ತೆ (ಆರ್‌ಎರ್‌ವಿಡಿ) ಕ್ಯಾಮೆರಾಗಳನ್ನು ನಗರದ 50 ಜಂಕ್ಷನ್ ಗಳಲ್ಲಿ ಅಳವಡಿಸಲಾಗಿದೆ. ಈಗ ಐಟಿಎಂಎಸ್ ಅಡಿಯಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ ಕ್ಯಾಮೆರಾಗಳನ್ನು ಮೈಸೂರಿನ ಪ್ರಮುಖ ರಸ್ತೆಗಳಲ್ಲಿ 8.5 ಕೋಟಿ ರೂ. ಅಂದರೆ ಮೈಸೂರು ನಗರಕ್ಕೆ ರೂಪಾಯಿ 4 ಕೋಟಿ ಮತ್ತು ಮೈಸೂರು ಜಿಲ್ಲೆಗೆ ರೂ.4.5 ಕೋಟಿ ಅಂದಾಜು ವೆಚ್ಚದಲ್ಲಿ ಅಳವಡಿಸಲಾಗಿದೆ. ಅಲ್ಲದೇ ಜುಲೈ 1ರಿಂದ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ವಾಹನ ಚಾಲಕರಿಗೆ ಚಲನ್ ನೀಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದ್ದರು.

ಅಲ್ಲದೇ ಕ್ಯಾಮೆರಾಗಳನ್ನು ಮೈಸೂರು ಜಿಲ್ಲೆಯ ಹುಣಸೂರು, ಎಚ್ ಡಿ ಕೋಟೆ, ನಂಜನಗೂಡು ಮತ್ತು ಟಿ ನರಸೀಪುರದಂತಹ ಹಲವಾರು ಪ್ರದೇಶಗಳಲ್ಲಿ ಅಳವಡಿಸಲಾಗುವುದು. ಹಾಗಾಗಿ ರೂಲ್ಸ್ ಬ್ರೇಕ್ ಮಾಡಿದ ವಾಹನ ಚಾಲಕರಿಗೆ ಸರಿಯಾದ ಸಮಯಕ್ಕೆ ಎಸ್ ಎಂಎಸ್ ಕಳುಹಿಸಲಾಗುವುದು ಎಂದು ಅವರು ಹೇಳಿದ್ದರು.
ಹೆಚ್ಚುವರಿಯಾಗಿ ಈ ವರ್ಷ ಬೆಂಗಳೂರಿನಿಂದ ಹತ್ತಿರದ ತಾಲೂಕುಗಳು ಮತ್ತು ಜಿಲ್ಲೆಗಳಿಗೆ ಸಂಪರ್ಕಿಸುವ ನಾಲ್ಕು ಪ್ರಮುಖ ಹೆದ್ದಾರಿಗಳಲ್ಲಿ (ತುಮಕೂರು ರಸ್ತೆ, ಕನಕಪುರ ರಸ್ತೆ, ಹೊಸೂರು ರಸ್ತೆ ಮತ್ತು ಹೊಸಕೋಟೆ) ಐಟಿಎಂಎಸ್ ಕ್ಯಾಮೆರಾಗಳನ್ನು ಅಳವಡಿಸಲು ಎಡಿಜಿಪಿ ಪ್ರಸ್ತಾಪಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: Viral Video: ಕಾರು ತಡೆದ ಟ್ರಾಫಿಕ್‌ ಪೊಲೀಸ್‌ ಕ್ಯಾಬ್‌ ಡ್ರೈವರ್‌ ಮಾಡಿದ್ದೇನು ಗೊತ್ತಾ?

Continue Reading
Advertisement
IND vs ZIM
ಕ್ರೀಡೆ8 mins ago

IND vs ZIM: ಜಿಂಬಾಬ್ವೆ ತಲುಪಿದ ಯಂಗ್‌ ಟೀಮ್‌ ಇಂಡಿಯಾ; ಶನಿವಾರದಿಂದ ಸರಣಿ ಆರಂಭ

Medal Biteing
ಕ್ರೀಡೆ15 mins ago

Medal Biting: ಒಲಂಪಿಕ್ಸ್‌ನಲ್ಲಿ ಕ್ರೀಡಾಪಟುಗಳು ಪದಕ ಕಚ್ಚುವುದು ಏಕೆ?

Tharun Sudhir sonal monteiro marriage update
ಸ್ಯಾಂಡಲ್ ವುಡ್25 mins ago

Tharun Sudhir: ಸೋನಾಲ್-ತರುಣ್ ಮದುವೆ ಯಾವಾಗ? ಭಾವಿ ಸೊಸೆ ಬಗ್ಗೆ ಡೈರೆಕ್ಟರ್ ಅಮ್ಮ ಏನಂದ್ರು?

Stock Market
ವಾಣಿಜ್ಯ48 mins ago

Stock Market: ಮೊದಲ ಬಾರಿಗೆ 80,000 ಗಡಿ ದಾಟಿದ ಸೆನ್ಸೆಕ್ಸ್: 24,250 ಪಾಯಿಂಟ್‌ ತಲುಪಿದ ನಿಫ್ಟಿ

bangalore murder case
ಕ್ರೈಂ1 hour ago

Murder Case: ರಾಜಧಾನಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

Team India
ಕ್ರೀಡೆ1 hour ago

Team India: ತವರಿಗೆ ಪ್ರಯಾಣ ಬೆಳೆಸಿದ ಟೀಮ್​ ಇಂಡಿಯಾ; ನಾಳೆ ದಿಲ್ಲಿಗೆ ಆಗಮನ

Actor Darshan V Manohar About Darshan
ಸ್ಯಾಂಡಲ್ ವುಡ್1 hour ago

Actor Darshan: ಹೆಣ್ಣುಮಕ್ಕಳ ಶಾಪ ತಟ್ಟಿದ್ರೆ ಏನಾಗತ್ತೆ ಅನ್ನೋದಕ್ಕೆ ದರ್ಶನ್‌ ಕೇಸ್‌ ಸಾಕ್ಷಿ ಎಂದ ವಿ ಮನೋಹರ್‌!

Nitin Gadkari
ದೇಶ2 hours ago

Nitin Gadkari: ರಸ್ತೆಗಿಳಿಯಲಿದೆ 132 ಸೀಟು, ಹೋಸ್ಟೆಸ್‌ ಒಳಗೊಂಡ ಬಸ್‌; ಸಾರಿಗೆ ವಲಯದಲ್ಲಿನ ಯೋಜನೆ ವಿವರಿಸಿದ ಸಚಿವ ನಿತಿನ್‌ ಗಡ್ಕರಿ

Amarnath Tragedy
Latest2 hours ago

Amarnath Tragedy: ಬಸ್‌ ಬ್ರೇಕ್ ಫೇಲ್; ಜೀವ ಉಳಿಸಿಕೊಳ್ಳಲು ಬಸ್‌ನಿಂದ ಜಿಗಿದ ಅಮರನಾಥ ಯಾತ್ರಿಕರು! ವಿಡಿಯೊ ಇದೆ

Kalki 2898 AD Box Office Collection Day Deepika Padukone's Film
ಟಾಲಿವುಡ್2 hours ago

Kalki 2898 AD: ಕಡಿಮೆ ಆಗಿಲ್ಲ `ಕಲ್ಕಿ’ ಅಬ್ಬರ; ಚಿತ್ರದ ಒಟ್ಟೂ ಗಳಿಕೆ ಎಷ್ಟು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ17 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌