government employees have decided to launch a vote for OPS campaign in karnatakaNPS News : ಹಳೆ ಪಿಂಚಣಿ ಯೋಜನೆ ಜಾರಿಗಾಗಿ ʻವೋಟ್‌ ಫಾರ್‌ ಓಪಿಎಸ್‌ʼ ಆಂದೋಲನ; ಸರ್ಕಾರಿ ನೌಕರರ ನಿರ್ಧಾರ - Vistara News

ನೌಕರರ ಕಾರ್ನರ್

NPS News : ಹಳೆ ಪಿಂಚಣಿ ಯೋಜನೆ ಜಾರಿಗಾಗಿ ʻವೋಟ್‌ ಫಾರ್‌ ಓಪಿಎಸ್‌ʼ ಆಂದೋಲನ; ಸರ್ಕಾರಿ ನೌಕರರ ನಿರ್ಧಾರ

ಹಳೆ ಪಿಂಚಣಿ ಯೋಜನೆ (ಓಪಿಎಸ್‌) ಜಾರಿಗಾಗಿ ಒತ್ತಾಯಿಸುತ್ತಿರುವ ಎನ್‌ಪಿಎಸ್‌ ನೌಕರರು (NPS News) ಇದು ಚುನಾವಣೆಯ ವಿಷಯವಾಗಬೇಕೆಂಬ ಕಾರಣಕ್ಕೆ ʻವೋಟ್‌ ಫಾರ್‌ ಓಪಿಎಸ್‌ʼ ಆಂದೋಲನ ನಡೆಸಲು ಮುಂದಾಗಿದ್ದಾರೆ.

VISTARANEWS.COM


on

government employees have decided to launch a vote for OPS campaign in karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್‌) ರದ್ದು ಪಡಿಸಿ, ಹಳೆಯ ಪಿಂಚಣಿ ಯೋಜನೆ (ಓಪಿಎಸ್‌) ಜಾರಿಗೆ ತರಬೇಕೆಂದು ಒತ್ತಾಯಿಸುತ್ತಿರುವ (NPS News) ರಾಜ್ಯದ ಸರ್ಕಾರಿ ನೌಕರರು ʻವೋಟ್‌ ಫಾರ್‌ ಓಪಿಎಸ್‌ʼ (vote for ops) ಆಂದೋಲನವನ್ನು ರಾಜ್ಯದಲ್ಲಿಯೂ ನಡೆಸಲು ಮುಂದಾಗಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಈ ಆಂದೋಲನ ಮಹತ್ವದ ಪಾತ್ರ ವಹಿಸುವ ನಿರೀಕ್ಷೆ ಇದೆ.

ರಾಜ್ಯ ಸರ್ಕಾರಿ ನೌಕರರ ಸಂಘವು ಮುಷ್ಕರಕ್ಕೆ ಕರೆ ನೀಡಿದ್ದ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಓಪಿಎಸ್‌ ಜಾರಿಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲು ವಿಶೇಷ ಸಮಿತಿಯೊಂದನ್ನು ರಚಿಸಿತ್ತು. ಈ ಸಮಿತಿಗೆ ವರದಿ ನೀಡಲು ಎರಡು ತಿಂಗಳು ಕಾಲಾವಕಾಶ ನೀಡಲಾಗಿತ್ತು. ಆದರೆ ಸರ್ಕಾರ ಚುನಾವಣೆಯ ಸಂದರ್ಭದಲ್ಲಿ ಈ ನಿಲುವು ತೆಗೆದುಕೊಂಡಿರುವುದಕ್ಕೆ ಅಸಮಧಾನ ವ್ಯಕ್ತಪಡಿಸುತ್ತಿರುವ ಎನ್‌ಪಿಎಸ್‌ ನೌಕರರು ಹೋರಾಟ ಮುಂದುವರಿಸಲು ತೀರ್ಮಾನಿಸಿದ್ದಾರೆ.

ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಹಂತ ಹಂತವಾಗಿ ವೋಟ್‌ ಫಾರ್‌ ಓಪಿಎಸ್‌ ಆಂದೋಲನವನ್ನು ತೀವ್ರಗೊಳಿಸಲು ನಿರ್ಧರಿಸಲಾಗಿದೆ. ʻʻಮುಂದೆ ಅಧಿಕಾರಕ್ಕೆ ಬರುವ ಸರ್ಕಾರ ಓಪಿಎಸ್‌ ಜಾರಿಗೆ ಬದ್ಧವಾಗಿರಬೇಕು. ಇದನ್ನು ಖಚಿತಪಡಿಸಿಕೊಳ್ಳಲು ಚುನಾವಣೆಯ ಸಂದರ್ಭದಲ್ಲಿ ಈ ಆಂದೋಲನ ನಡೆಸಲು ತೀರ್ಮಾನಿಸಿದ್ದೇವೆʼʼ ಎಂದು ಎನ್‌ಪಿಎಸ್‌ ನೌಕರರ ಸಂಘದ ಮುಖಂಡರು ʻವಿಸ್ತಾರ ನ್ಯೂಸ್‌ʼಗೆ ತಿಳಿಸಿದ್ದಾರೆ.

ಓಪಿಎಸ್‌ ಜಾರಿಯ ಕುರಿತು ಸ್ಪಷ್ಟ ನಿರ್ಧಾರ ಪ್ರಕಟಿಸುವ ಪಕ್ಷವನ್ನು ಬೆಂಬಲಿಸಲು ರಾಜ್ಯ ಸರ್ಕಾರಿ ನೌಕರರಲ್ಲಿ, ನಿಗಮ ಮಂಡಳಿಗಳ, ಸ್ವಾಯತ್ತ, ಅನುದಾನಿತ ಸಂಸ್ಥೆಗಳ ನೌಕರರಲ್ಲಿ, ಅವರ ಕುಟುಂಬದವರಲ್ಲಿ ಹಾಗೂ ಸ್ನೇಹಿತರು, ಹಿತೈಷಿಗಳಲ್ಲಿ ಜಾಗೃತಿ ಮೂಡಿಸಲು ಸಂಘವು ತೀರ್ಮಾನಿಸಿದೆ. ಇದಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮುಂದಾಗಿದೆ.

ʻʻಒಂದು ಗಟ್ಟಿ ಸಂದೇಶವನ್ನು ರಾವಾನೆ ಮಾಡುವ ಉದ್ದೇಶದಿಂದ ಮಾ.24 ರಿಂದ ಮಾ.28 ರವರೆಗೆ ಐದು ದಿನಗಳ ಕಾಲ ಎರಡು ಅಭಿಯಾನ ನಡೆಸಲಾಗುತ್ತದೆ. ನೌಕರರು ಮತ್ತು ಸಾರ್ವಜನಿಕರಿಗೆ ನಮ್ಮ ವಿಷಯವನ್ನು ಮನವರಿಕೆ ಮಾಡಿಕೊಡಲು ʻವೋಟ್‌ ಫಾರ್‌ ಓಪಿಎಸ್‌ʼ ಪೋಸ್ಟರನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸಲಾಗುತ್ತದೆ. ಈ ಐದು ದಿನಗಳಲ್ಲಿ ಒಂದು ದಿನ ಗಾಂಧಿ ಪ್ರತಿಮೆ ಅಥವಾ ಅಂಬೇಡ್ಕರ್‌ ಪ್ರತಿಮೆಯ ಮುಂಭಾಗದಲ್ಲಿ ವೋಟ್‌ ಫಾರ್‌ ಓಪಿಎಸ್‌ ಅಭಿಯಾನದ ಪ್ರತಿಜ್ಞೆಯನ್ನು ಸ್ವೀಕರಿಸುವಂತೆ ಎಲ್ಲ ನೌಕರರಿಗೂ ಕರೆ ನೀಡಲಾಗುತ್ತಿದೆʼʼ ಎಂದು ರಾಜ್ಯ ಎನ್‌ಪಿಎಸ್‌ ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತಾರಾಮ ತಿಳಿಸಿದ್ದಾರೆ.

ಪ್ರತಿಜ್ಞೆ ಏನೆಂದು?

ಎಲ್ಲ ಸರ್ಕಾರಿ ನೌಕರರು ಮಾತ್ರವಲ್ಲದೆ, ಸಮಾಜ ಮುಖಿ ಚಿಂತಕರು, ಸಾರ್ವಜನಿಕರು ಈ ಅಭಿಯಾನಕ್ಕೆ ಬೆಂಬಲ ನೀಡಬೆಕೆಂದು ಶಾಂತಾರಾಮ ಮನವಿ ಮಾಡಿದ್ದಾರೆ.

ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ.

ರಾಜ್ಯದಲ್ಲಿ ಚುನಾವಣೆಯ ಕಾವು ಏರುತ್ತಿರುವಂತೆಯೇ ಎನ್‌ಪಿಎಸ್‌ ನೌಕರರೂ ಹೋರಾಟ ನಡೆಸಲು ಮುಂದಾಗಿರುವುದರಿಂದ ರಾಜಕೀಯ ಪಕ್ಷಗಳು ಚುನಾವಣೆಯ ಸಂದರ್ಭದಲ್ಲಿ ಈ ಕುರಿತು ಪ್ರಸ್ತಾಪಿಸುವುದು ಅನಿವಾರ್ಯವಾಗಲಿದೆ. ಈಗಾಗಲೇ ಕಾಂಗ್ರೆಸ್‌ ಪಕ್ಷ ಓಪಿಎಸ್‌ ಜಾರಿಯ ಕುರಿತು ಒಲವು ವ್ಯಕ್ತಪಡಿಸಿದೆಯಾದರೂ ಸ್ಪಷ್ಟ ಭರವಸೆ ನೀಡಿಲ್ಲ. ಪ್ರಣಾಳಿಕೆಯಲ್ಲಿ ಈ ಪಕ್ಷ ಏನೆಂದು ಪ್ರಕಟಿಸಲಿದೆ ಎಂಬ ಕುರಿತು ಕುತೂಹಲವಿದೆ. ಬಿಜೆಪಿ ಓಪಿಎಸ್‌ ಜಾರಿಗೆ ಸಹಮತ ಹೊಂದಿಲ್ಲ. ಈ ಕುರಿತು ಪಕ್ಷದ ಹೈಕಮಾಂಡ್‌ ತೀರ್ಮಾನಿಸಲಿದೆ ಎಂದು ರಾಜ್ಯ ನಾಯಕರು ನುಣುಚಿಕೊಳ್ಳುತ್ತಿದ್ದಾರೆ. ಜೆಡಿಎಸ್‌ ಓಪಿಎಸ್‌ ಜಾರಿಗೆ ಬದ್ಧವಿರುವುದಾಗಿ ಈಗಾಗಲೇ ಪ್ರಕಟಿಸಿದೆ.

ಇದನ್ನೂ ಓದಿ : Sarvotthama Seva Prashasthi : ಸರ್ಕಾರಿ ಅಧಿಕಾರಿ, ನೌಕರರಿಂದ ನಾಮ ನಿರ್ದೇಶನ ಆಹ್ವಾನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

7th Pay Commission: 7ನೇ ವೇತನ ಆಯೋಗದ ವರದಿ ಸ್ವೀಕಾರ; ಸಿಎಂಗೆ ರಾಜ್ಯ ಸರ್ಕಾರಿ ನೌಕರರ ಸಂಘ ಅಭಿನಂದನೆ

7th Pay Commission: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು ಶನಿವಾರ, ತನ್ನ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ

VISTARANEWS.COM


on

CM Siddaramaiah
Koo

ಬೆಂಗಳೂರು: ರಾಜ್ಯ 7ನೇ ವೇತನ ಆಯೋಗದ ವರದಿಯನ್ನು (7th Pay Commission) ಸ್ವೀಕರಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ವೇತನ ಆಯೋಗದ ಅಧ್ಯಕ್ಷರು, ಸದಸ್ಯರು ಹಾಗೂ ಕಾರ್ಯದರ್ಶಿಗಳಿಗೆ ಸಮಸ್ತ ರಾಜ್ಯ ಸರ್ಕಾರಿ ನೌಕರರ ಪರವಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶನಿವಾರ ವರದಿಯನ್ನು ಸಲ್ಲಿಸಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಮತ್ತು ಪದಾಧಿಕಾರಿಗಳು ಭೇಟಿಯಾಗಿ ಸ್ಮರಣಿಕೆ ನೀಡಿ ಧನ್ಯವಾದ ಸಲ್ಲಿಸಿದ್ದಾರೆ.

ನಂತರ ರಾಜ್ಯದ ಏಳನೇ ವೇತನ ಆಯೋಗದ ಅಧ್ಯಕ್ಷ ಸುಧಾಕರ ರಾವ್ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಇದನ್ನೂ ಓದಿ | 7th Pay Commission : ಸರ್ಕಾರಿ ನೌಕರರಿಗೆ ಬಂಪರ್‌; 7ನೇ ವೇತನ ಆಯೋಗದ ಶಿಫಾರಸುಗಳ ಫುಲ್‌ ಲಿಸ್ಟ್‌

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯ ಸರ್ಕಾರಿ ನೌಕರರ ವೇತನ ಹಾಗೂ ಭತ್ಯೆಗಳ ಪರಿಷ್ಕರಣೆಗಾಗಿ ಸಲ್ಲಿಸಿದ್ದ ಮನವಿಯಲ್ಲಿ ಹಲವು ಅಂಶಗಳನ್ನು ಪರಿಗಣಿಸಿ ವೇತನ ಆಯೋಗ ಶಿಫಾರಸುಗಳನ್ನು ಮಾಡಿದೆ.

ವರದಿಯ ಪ್ರಮುಖ ಶಿಫಾರಸ್ಸುಗಳು

  • ದಿನಾಂಕ: 01-07-2022ಕ್ಕೆ ಇದ್ದಂತೆ ರಾಜ್ಯ ಸರ್ಕಾರಿ ನೌಕರರ ಮೂಲ ವೇತನಕ್ಕೆ ಶೇ. 27.50 ರಷ್ಟು ಫಿಟ್‌ ಮೆಂಟ್ ಹೆಚ್ಚಿಸಲು ಶಿಫಾರಸು
  • ದಿನಾಂಕ: 01-07-2022ಕ್ಕೆ ಇದ್ದಂತಹ ಶೇ. 31 ತುಟ್ಟಿಭತ್ಯೆ ವಿಲೀನ ಹಾಗೂ ಮೇಲಿನ ಶೇ.27.50 ರಷ್ಟು ಸೇರಿ ಒಟ್ಟು ಶೇ. 58.50ರಷ್ಟು ಮೂಲ ವೇತನದಲ್ಲಿ ಹೆಚ್ಚಳ.
  • ಸರ್ಕಾರಿ ನೌಕರರ ಕನಿಷ್ಠ ಮೂಲ ವೇತನವನ್ನು ರೂ. 17,000ರಿಂದ 27,000ಕ್ಕೆ ಹಾಗೂ 1,04.600ರಿಂದ 2,41,200ಕ್ಕೆ ಹೆಚ್ಚಳ.
  • ಸರ್ಕಾರಿ ನೌಕರರಿಗೆ ಹೊಸ ವೇತನ ಶ್ರೇಣಿ ಹಾಗೂ ಫಿಟ್ ಮೆಂಟ್ ಸೌಲಭ್ಯವನ್ನು 2022ರ ಜು.01 ರಿಂದ ಕಾಲ್ಪನಿಕವಾಗಿ ಅನುಷ್ಠಾನಗೊಳಿಸಲು ಶಿಫಾರಸು.
  • ವಾರ್ಷಿಕ ವೇತನ ಬಡ್ತಿ ದರವನ್ನು ಕನಿಷ್ಠ ರೂ. 400ರಿಂದ ರೂ. 650ಕ್ಕೆ ಹಾಗೂ ಗರಿಷ್ಠ 3100ರಿಂದ 5,000 ಹೆಚ್ಚಳ
    ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ದಿನಾಂಕ:2022ರ ಜುಲೈ 1ರಿಂದ ಭಾರತ ಸರ್ಕಾರವು ಮಂಜೂರು ಮಾಡಿದ ಪ್ರತಿ ಶೇ.1 ರಷ್ಟು ತುಟ್ಟಿಭತ್ಯೆಗೆ ಶೇ. 0.722ರಷ್ಟು ನೀಡುವುದು.
  • ಭಾರತ ಸರ್ಕಾರವು ತನ್ನ ನೌಕರರಿಗೆ ಮುಂದೆ ವೇತನ ಪರಿಷ್ಕರಿಸಿದಾಗ ಕೇಂದ್ರ ವೇತನ ರಚನೆಯ ಆಧಾರದ ಮೇಲೆ ರಾಜ್ಯ ಸರ್ಕಾರವು ತನ್ನ ನೌಕರರಿಗೆ ಕೇಂದ್ರ ಮಾದರಿಯ ವೇತನ ನೀಡಲು ಶಿಫಾರಸು ಮಾಡಿದೆ.
  • ಗ್ರೂಪ್ ‘ಸಿ’ ಮತ್ತು ‘ಡಿ’ ವೃಂದದ ನೌಕರರಿಗೆ ಹಾಲಿ ಇರುವ ಜಿ.ಐ.ಎಸ್. ಮಾಸಿಕ ವಂತಿಗೆಯನ್ನು ಶೇ. 100% ಕ್ಕೆ ಹೆಚ್ಚಳ ಮತ್ತು ಗ್ರೂಪ್ ‘ಎ’ ಮತ್ತು ‘ಬಿ’ ವೃಂದಕ್ಕೆ ಶೇ. 50%ಕ್ಕೆ ಹೆಚ್ಚಿಸಲು ಶಿಫಾರಸು.
  • ಪರಿಷ್ಕರಣೆಯಿಂದ ಹೆಚ್ಚಳವಾಗುವ ಮೂಲ ವೇತನಕ್ಕೆ ಮನೆ ಬಾಡಿಗೆ ಭತ್ಯೆಗಳನ್ನು ಕ್ರಮವಾಗಿ ‘ಎ’ ವರ್ಗದ ನಗರಗಳಿಗೆ ಶೇ.20%, ‘ಬಿ’ ವರ್ಗದ ನಗರಗಳಿಗೆ ಶೇ.15%, ‘ಸಿ’ ವರ್ಗದ ಪ್ರದೇಶಗಳಿಗೆ ಶೇ.7.5% ಶಿಫಾರಸು.
  • ಪರಿಷ್ಕರಣೆಯಿಂದ ಹೆಚ್ಚಳವಾಗುವ ಮೂಲ ವೇತನಕ್ಕೆ ನಗರ ಪರಿಹಾರ ಭತ್ಯೆಗಳನ್ನು ಕ್ರಮವಾಗಿ ‘ಎ’ ಮತ್ತು ‘ಬಿ’ ವೃಂದದ ನೌಕರರಿಗೆ ರೂ. 600ರಿಂದ ರೂ. 900ಕ್ಕೆ ಮತ್ತು ‘ಸಿ ಮತ್ತು ‘ಡಿ’ ವೃಂದದ ನೌಕರರಿಗೆ ರೂ. 500ರಿಂದ ರೂ. 750 ಹೆಚ್ಚಳ,
  • ಸಮವಸ್ತ್ರ ಭತ್ಯೆ, ನಿಗದಿತ ಪ್ರಯಾಣ ಭತ್ಯೆ, ಸಾಗಣೆ ಭತ್ಯೆ, ದಿನಭತ್ಯೆ ಮತ್ತು ವರ್ಗಾವಣೆ ಅನುದಾನವನ್ನು ಹಾಲಿ ಇರುವ ದರಗಳಿಗೆ ಶೇ.25% ಹೆಚ್ಚಳ.
  • ವಿಕಲಚೇತನ ನೌಕರರಿಗೆ ಹಲವಾರು ಭತ್ಯೆಗಳು ಮತ್ತು ಸೌಲಭ್ಯಗಳನ್ನು ಹೆಚ್ಚಳಕ್ಕೆ ಶಿಫಾರಸು
  • ವಿಶೇಷಚೇತನ ಮಕ್ಕಳ ಶೈಕ್ಷಣಿಕ ಭತ್ಯೆಯನ್ನು ಪ್ರತಿ ತಿಂಗಳು 1000 ರೂ.ಗಳಿಂದ 2000 ರೂ. ಹೆಚ್ಚಳಕ್ಕೆ ಶಿಫಾರಸು.
  • ನಾಲ್ಕು ಚಕ್ರ ವಾಹನ ಖರೀದಿ ಮುಂಗಡವನ್ನು 3ಲಕ್ಷ ರೂ. ದಿಂದ 6ಲಕ್ಷ ರೂ.ಗೆ ಹಾಗೂ ದ್ವಿ-ಚಕ್ರ ವಾಹನಕ್ಕೆ 50,000 ರೂ.ಗಳಿಂದ 80,000 ರೂ. ಹೆಚ್ಚಳ.
  • ಗೃಹನಿರ್ಮಾಣ ಮುಂಗಡವನ್ನು ‘ಎ’ ವೃಂದಕ್ಕೆ 65 ಲಕ್ಷ ಮತ್ತು ಇತರೆ ವೃಂದದ ನೌಕರರಿಗೆ 40 ಲಕ್ಷಗಳಿಗೆ ಹೆಚ್ಚಳ.
  • ನೌಕರರ ಸೇವಾವಧಿಯಲ್ಲಿ ಮೂರು ಭಾರಿ ಎಲ್.ಟಿ.ಸಿ. ಸೌಲಭ್ಯಕ್ಕೆ ಅವಕಾಶ.
  • ಗ್ರೂಪ್ ‘ಡಿ’ ಮತ್ತು ‘ಸಿ’ ವೃಂದದ ನೌಕರರಿಗೆ ಹಾಲಿ ಇದ್ದಂತಹ ವೈದ್ಯಕೀಯ ಭತ್ಯೆ 200 ರಿಂದ 500ರೂ.ಗಳಿಗೆ ಹೆಚ್ಚಳ.
  • ಸರ್ಕಾರಿ ನೌಕರರ ಅವಲಂಬಿತ ಕುಟುಂಬ ಸದಸ್ಯರು ಅನಾರೋಗ್ಯದ ಸಂದರ್ಭದಲ್ಲಿ ಆರೈಕೆ ಮಾಡಲು ಶೇ. 50% ವೇತನದೊಂದಿಗೆ 180 ದಿನಗಳ ‘ಆರೈಕೆ ರಜೆ’ ಎಂಬ ಹೊಸ ಯೋಜನೆಗೆ ಶಿಫಾರಸು ಮಾಡಿದೆ.
  • ಸರ್ಕಾರಿ ಸೇವೆಗೆ ಸೇರುವ 2 ತಿಂಗಳ ಮೊದಲು ಮಗುವಿಗೆ ಜನ್ಮ ನೀಡಿದ ಮಹಿಳಾ ಸರ್ಕಾರಿ ನೌಕರರಿಗೆ ನವಜಾತ ಶಿಶುವಿನ ಹಾರೈಕೆಗಾಗಿ 18 ವಾರಗಳ ಹೆರಿಗೆ ರಜೆಗೆ ಶಿಫಾರಸು ಮಾಡಿದೆ.
  • ಕೆಲಸ-ವಿರಾಮ ಸಮತೋಲನವನ್ನು ಸುಧಾರಿಸಲು ಹಾಗೂ ಸರ್ಕಾರಿ ನೌಕರರ ಕೆಲಸದ ಗುಣಮಟ್ಟವನ್ನು ಹೆಚ್ಚಿಸಲು ವಾರದ ಐದು ದಿನಗಳ ಕೆಲಸದ ಅವಧಿಯನ್ನು ಪರಿಚಯಿಸಲು ಶಿಫಾರಸು ಮಾಡಿದೆ.
    ರಾಜ್ಯ ಸರ್ಕಾರಿ ನೌಕರರ ಆಡಳಿತ ಇಲಾಖೆಯ ಹಾಗೂ ಕ್ಷೇತ್ರ ಇಲಾಖೆಗಳ ನೌಕರರಿಗೆ ಗುಣಮಟ್ಟದ ತರಬೇತಿಗಾಗಿ ಸಮಗ್ರ ತರಬೇತಿಗೆ ಶಿಫಾರಸು ಮಾಡಿದೆ.
  • ಈ ಮೇಲ್ಕಂಡ ಎಲ್ಲಾ ಸೌಲಭ್ಯಗಳು ರಾಜ್ಯ ಸರ್ಕಾರಿ ನೌಕರರಿಗೆ ನೀಡಿದ ರೀತಿಯಲ್ಲಿಯೇ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು, ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ನೌಕರರಿಗೂ ಅನ್ವಯಗೊಳಿಸಲು ಶಿಫಾರಸು ಮಾಡಿದೆ.
  • ಮಾಸಿಕ ಪಿಂಚಣಿಯ ಪ್ರಮಾಣವು ಅಂತಿಮ ಮೂಲ ವೇತನದ ಶೇ. 50% ರಷ್ಟು ಹಾಗೂ ಕುಟುಂಬ
    ಪಿಂಚಣಿಯು ಶೇ. 30% ಮುಂದುವರೆದು, ಕನಿಷ್ಠ ಪಿಂಚಣಿ ರೂ. 13,500 ಹಾಗೂ ಗರಿಷ್ಠ
    ಪಿಂಚಣಿ 1,20,600 ರೂ.ಗಳಿಗೆ ಪರಿಷ್ಕರಿಸಿದೆ.
  • 70-80 ವರ್ಷ ವಯಸ್ಸಿನ ಪಿಂಚಣಿದಾರರಿಗೆ ಮೂಲ ಪಿಂಚಣಿಯ ಹೆಚ್ಚುವರಿ ಶೇ. 10% ರಷ್ಟು ಶಿಫಾರಸ್ಸು ಮಾಡಿದೆ.
  • ಪಿಂಚಣಿದಾರರಿಗೆ ‘ಸಂಧ್ಯಾಕಿರಣ’ ಎಂಬ ಆರೋಗ್ಯ ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸಲು ಶಿಫಾರಸ್ಸು ಮಾಡಿದೆ. ಅಲ್ಲಿಯವರೆಗೆ ಮಾಸಿಕ ರೂ. 500-00ಗಳ ವೈದ್ಯಕೀಯ ಭತ್ಯೆ ನೀಡಲು ಶಿಫಾರಸು ಮಾಡುತ್ತದೆ.
  • ಪಿಂಚಣಿದಾರರು ಮರಣ ಹೊಂದಿದಲ್ಲಿ 10,000 ರೂ. ಶವಸಂಸ್ಕಾರ ಮೊತ್ತವನ್ನು ನೀಡಲು ಶಿಫಾರಸು
  • ವಿವಿಧ ವೃಂದಗಳ ವೇತನ ತಾರತಮ್ಯ ಹಾಗೂ ಇಲಾಖೆಗಳ ಬೇಡಿಕೆಗಳ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ನೀಡಿದ ಮನವಿಯನ್ನು ಪರಿಶೀಲಿಸಿ ಮತ್ತೊಂದು ಅಂತಿಮ ವರದಿಯನ್ನು ಆದಷ್ಟು ಶೀಘ್ರದಲ್ಲಿಯೇ ಆಯೋಗವು ಸರ್ಕಾರಕ್ಕೆ ಸಲ್ಲಿಸಲಿದೆ.

ಇದನ್ನೂ ಓದಿ | 7th Pay Commission : 7ನೇ ವೇತನ ಆಯೋಗದ ವರದಿ ಸ್ವೀಕರಿಸಿದ ಸಿಎಂ; 27.5 % ವೇತನ ಹೆಚ್ಚಳ ಪರಿಶೀಲನೆ

Continue Reading

ಕಲೆ/ಸಾಹಿತ್ಯ

Kannada and Culture Department: ಕನ್ನಡ ಪುಸ್ತಕ ಪ್ರಾಧಿಕಾರ ಸೇರಿ ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರ ನೇಮಕ

Kannada and Culture Department: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ ವಿವಿಧ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷರು, ಸದಸ್ಯರನ್ನು ನೇಮಿಸಲಾಗಿದೆ.

VISTARANEWS.COM


on

Appointment of Presidents of various academies, including Kannada Book Authority
Koo

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ (Kannada and Culture Department) ವ್ಯಾಪ್ತಿಯ ವಿವಿಧ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷರು, ಸದಸ್ಯರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಥವಾ ಮೂರು ವರ್ಷಗಳ ಅವಧಿಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಪದಾಧಿಕಾರಿಗಳನ್ನು ನೇಮಿಸಲಾಗಿದೆ.

ವಿವಿಧ ಅಕಾಡೆಮಿ, ಪ್ರಾಧಿಕಾರಿಗಳ ಅಧ್ಯಕ್ಷರು

1.ಕನ್ನಡ ಪುಸ್ತಕ ಪ್ರಾಧಿಕಾರ- ಮೈಸೂರು ಮಾನಸ
2.ಕರ್ನಾಟಕ ಸಾಹಿತ್ಯ ಅಕಾಡೆಮಿ- ಎಲ್ ಎನ್ ಮುಕುಂದರಾಜ್
3.ಕರ್ನಾಟಕ ನಾಟಕ ಅಕಾಡೆಮಿ- ಕೆವಿ ನಾಗರಾಜಮೂರ್ತಿ
4.ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ- ಕೃಪಾ ಫಡಕಿ
5.ಕರ್ನಾಟಕ ಶಿಲ್ಪ ಕಲಾ ಅಕಾಡಮಿ- ಎಂಸಿ ರಮೇಶ್
6.ಲಲಿತ ಕಲಾ ಅಕಾಡಮಿ- ಡಾ.ಪಸ ಕುಮಾರ್
7.ಯಕ್ಷಗಾನ ಅಕಾಡೆಮಿ- ತಲ್ಲೂರು ಶಿವರಾಂ ಶೆಟ್ಟಿ
8.ಜಾನಪದ ಅಕಾಡೆಮಿ- ಶಿವ ಪ್ರಸಾದ್ ಗೊಲ್ಲಹಳ್ಳಿ
9.ತುಳು ಸಾಹಿತ್ಯ ಅಕಾಡೆಮಿ- ತಾರಾನಾಥ ಗಟ್ಟಿ ಕಾಪಿಕಾಡ್
10.ಕೊಂಕಣಿ ಸಾಹಿತ್ಯ ಅಕಾಡೆಮಿ- ಜೋಕಿಂ ಸ್ಟ್ಯಾನ್ಲಿ ಅಲ್ವಾರಿಸ್
11.ಬ್ಯಾರಿ ಸಾಹಿತ್ಯ ಅಕಾಡೆಮಿ- ಉಮರ್ ಯು ಎಚ್
12.ಅರೆ ಭಾಷಾ ಸಂಸ್ಕೃತಿ ಹಾಗೂ ಸಾಹಿತ್ಯ ಅಕಾಡೆಮಿ- ಸದಾನಂದ ಮಾವಜಿ
13.ಬಯಲಾಟ ಅಕಾಡೆಮಿ ದುರ್ಗದಾಸ್
14.ಬಂಜಾರ ಅಕಾಡೆಮಿ ಡಾಕ್ಟರ್‌ ಎಂ ಆರ್ ಗೋವಿಂದಸ್ವಾಮಿ
15.ರಂಗ ಸಮಾಜ- ಡಾ.ರಾಮಕೃಷ್ಣಯ್ಯ
16.ಕೊಡವ ಸಾಹಿತ್ಯ ಅಕಾಡೆಮಿ- ಅಜ್ಜಿನಕೊಂಡ ಮಹೇಶ್

ವಿವಿಧ ಅಕಾಡೆಮಿ, ಪ್ರಾಧಿಕಾರಿಗಳ ಅಧ್ಯಕ್ಷರು, ಸದಸ್ಯರ ಪೂರ್ಣಪಟ್ಟಿ ಇಲ್ಲಿದೆ

Continue Reading

ನೌಕರರ ಕಾರ್ನರ್

7th Pay Commission : ಸರ್ಕಾರಿ ನೌಕರರಿಗೆ ಬಂಪರ್‌; 7ನೇ ವೇತನ ಆಯೋಗದ ಶಿಫಾರಸುಗಳ ಫುಲ್‌ ಲಿಸ್ಟ್‌

7th Pay Commission : ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿರುವ ಏಳನೇ ವೇತನ ಆಯೋಗದ ವರದಿಯಲ್ಲಿರುವ 40 ಪ್ರಮುಖ ಅಂಶಗಳ ಪಟ್ಟಿ ಇಲ್ಲಿದೆ.

VISTARANEWS.COM


on

7th Pay commission Recommendations
Koo

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು (7th Pay Commission) ಶನಿವಾರ ತನ್ನ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಸಲ್ಲಿಸಿದೆ. ಈ ವರದಿಯಲ್ಲಿ ಈ ವರದಿಯಲ್ಲಿ ರಾಜ್ಯ ಸರ್ಕಾರಿ (Government Employees) ನೌಕರರ ವೇತನವನ್ನು ಶೇ. 27ರಷ್ಟು ಹೆಚ್ಚಿಸಲು ಶಿಫಾರಸು (Recommendation for Salary hike) ಮಾಡಲಾಗಿದೆ. ಇದರ ಜತೆಗೆ ಮೂಲ ವೇತನವನ್ನು (Basic salary) 27,000 ರೂ.ಗಳಿಗೆ ಹೆಚ್ಚಿಸುವಂತೆಯೂ ಶಿಫಾರಸು ಮಾಡಲಾಗಿದೆ. ಇಷ್ಟು ಮಾತ್ರವಲ್ಲ, ಆಯೋಗವು ಇನ್ನೂ ಹಲವಾರು ಶಿಫಾರಸುಗಳನ್ನು ಮಾಡಿದೆ.

ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗವು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವರದಿ ಸಲ್ಲಿಸಿತು. ವರದಿಯನ್ನು ಸ್ವೀಕರಿಸಿದ ಸಿದ್ದರಾಮಯ್ಯ ಅವರು ವರದಿಯಲ್ಲಿರುವ ಅಂಶಗಳನ್ನು ಆರ್ಥಿಕ ಇಲಾಖೆಯ (Finance department) ಪರಿಶೀಲನೆ ಒಪ್ಪಿಸಲಾಗುವುದು, ಬಳಿಕ ವೇತನ ಹೆಚ್ಚಳದ (Recommendation for salary hike) ಸಂಬಂಧಿತ ಶಿಫಾರಸನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು.

7th Pay commission report submitted1 CM

ಇದನ್ನೂ ಓದಿ : 7th Pay Commission : 7ನೇ ವೇತನ ಆಯೋಗದ ವರದಿ ಸಲ್ಲಿಕೆ; 27.5 % ವೇತನ ಹೆಚ್ಚಳಕ್ಕೆ ಶಿಫಾರಸು

7ನೇ ವೇತನ ಆಯೋಗದ 40 ಪ್ರಮುಖ ಶಿಫಾರಸುಗಳು ಇಲ್ಲಿವೆ

7ನೇ ರಾಜ್ಯ ವೇತನ ಆಯೋಗ ಶಿಫಾರಸ್ಸುಗಳ ಸಾರಾ೦ಶ ಇಲ್ಲಿದೆ

1. 7ನೇ ರಾಜ್ಯ ವೇತನ ಆಯೋಗವು ಶೇ.31 ತುಟ್ಟಿಭತ್ಯೆಯನ್ನು ವಿಲೀನಗೊಳಿಸುವ ಮೂಲಕ ಮತ್ತು ಶೇ.27.50 ರಷ್ಟು ಫಿಟ್‌ಮೆಂಟ್‌ ಪ್ರಯೋಜನವನ್ನು ಒದಗಿಸುವ ಮೂಲಕ ರಾಜ್ಯ ಸರ್ಕಾರಿ ನೌಕರರ ಕನಿಷ್ಠ ಮೂಲ ವೇತನವನ್ನು ತಿಂಗಳಿಗೆ ಅಸ್ತಿತ್ವದಲ್ಲಿರುವ ರೂ.17,000 ರಿ೦ದ ರೂ.27,000 ಕ್ಕೆ ಪರಿಷ್ಕರಿಸಲು ಶಿಫಾರಸ್ಸು ಮಾಡುತ್ತದೆ (ಅಧ್ಯಾಯ 5.37).

2. ವೇತನ ರಚನೆಯಲ್ಲಿ ಕನಿಷ್ಠ ಮತ್ತು ಗರಿಷ್ಠ ವೇತನದ ನಡುವೆ ಅಸ್ತಿತ್ವದಲ್ಲಿರುವ 1:8.86 ರ ಅನುಪಾತವನ್ನು ಹೆಚ್ಚು-ಕಡಿಮೆ ಹಾಗೇ ಉಳಿಸಿಕೊಳ್ಳುವುದು ಮತ್ತು ಗರಿಷ್ಠ ವೇತನವನ್ನು ರೂ.2,41,200ಕ್ಕೆ ನಿಗದಿಪಡಿಸಲು ಆಯೋಗವು ಶಿಫಾರಸ್ಸು ಮಾಡುತ್ತದೆ (ಅಧ್ಯಾಯ 5.37).

3.ಹೊಸ ವೇತನ ಶ್ರೇಣಿಗಳನ್ನು ದಿನಾ೦ಕ: 01.07.2022 ರಿ೦ದ ಕಾಲ್ಪನಿಕವಾಗಿ ಅನ್ವಯಿಸುತ್ತದೆ. ಅನುಷ್ಠಾನಗೊಳಿಸುವ ನೈಜ್ಯ ದಿನಾ೦ಕವನ್ನು ರಾಜ್ಯ ಸರ್ಕಾರವು ನಿರ್ಧರಿಸುವುದೆ೦ದು ಆಯೋಗವು ಶಿಫಾರಸ್ಸು ಮಾಡುತ್ತದೆ (ಅಧ್ಯಾಯ 5.57).

4.ನೌಕರರ ಕುಟುಂಬದ ಕನಿಷ್ಠ ಬಳಕೆ ವೆಚ್ಚದ ಲೆಕ್ಕಾಚಾರಕ್ಕಾಗಿ ಬಳಸಲಾಗುವ ಅಕ್ರೋಯ್ದ್ನಾ ಸೂತ್ರವನ್ನು ಚಾಲ್ತಿಯಲ್ಲಿರುವ ‘1’ ಮತ್ತು ‘0.8, ರ ಪ್ರಮಾಣದ ಬದಲಿಗೆ ಪ್ರಾತಿನಿಧಿಕ ಕುಟು೦ಬದ ವಯಸ್ಕ ಪುರುಷ ಮತ್ತು ಮಹಿಳಾ ಸದಸ್ಯರಿಗೆ ‘1’ ಸಮಾನ ಪ್ರಮಾಣವನ್ನು ನೀಡುವ ಮೂಲಕ, ಎರಡೂ ಲಿ೦ಗಗಳನ್ನು ಸಮಾನವಾಗಿ ಪರಿಗಣಿಸಿ, ಸ್ವಲ್ಪ ಮಟ್ಟಿಗೆ ಮಾರ್ಪಡಿಸಲಾಗಿದೆ (ಅಧ್ಯಾಯ 5.33).

5. ಪರಿಷ್ಕೃತ ಪ್ರತ್ಯೇಕ 1761/1602) ವೇತನ ಶ್ರೇಣಿಗಳೊ೦ದಿಗೆ, ಪರಿಷ್ಕತ ಮುಖ್ಯ ಶ್ರೇಣಿಯನ್ನು ರೂಪಿಸಲಾಗಿದೆ. ಚಾಲ್ತಿಯಲ್ಲಿರುವ ರೂ.400 ರಿ೦ದ ರೂ.3,100 ರ ಬದಲಿಗೆ ವಾರ್ಷಿಕ ಬಡ್ತಿ ದರಗಳು ಮುಖ್ಯ ಶ್ರೇಣಿಯಾದ್ಯ೦ತ ರೂ.650 ರಿ೦ದ ರೂ.5,000 ರದವರೆಗೆ ಆಗಿರುತ್ತದೆ (ಅಧ್ಯಾಯ 5.43).

6.ಪ್ರಸ್ತುತ ಜಾರಿಯಲ್ಲಿರುವಂತೆ, ಒ೦ದು ಕ್ಯಾಲೆ೦ಡರ್‌ ವರ್ಷದಲ್ಲಿ 1ನೇ ಜನವರಿ ಅಥವಾ 1ನೇ ಜುಲೈನಲ್ಲಿ ವಾರ್ಷಿಕ ಬಡ್ತಿ ದರಗಳನ್ನು ಮ೦ಜುರೂ ಮಾಡುವುದನ್ನು ಮುಂದುವರೆಸಲು ಆಯೋಗವು ಶಿಫಾರಸ್ಸು ಮಾಡಿರುತ್ತದೆ (ಅಧ್ಯಾಯ 5.44).

7.ಕೇಂದ್ರದ ತುಟ್ಟಿಭತ್ಯೆ ಸೂತ್ರ ಮತ್ತು ಮಾದರಿಯನ್ನು ಅಳವಡಿಸಿಕೊಳ್ಳುವುದನ್ನು ಮುಂದುವರಿಸಲಾಗುತ್ತದೆ. ದಿನಾ೦ಕ: 01.07.2022 ರ೦ತೆ. 361704 ಸೂಚ್ಯಂಕ ಮಟ್ಟದಲ್ಲಿ ಸಂಪೂರ್ಣವಾಗಿ ತಟಸ್ಮಗೊ೦ಡಿರುವ ತುಟ್ಟಿಭತ್ಯೆಯೊಂದಿಗೆ, ದಿನಾ೦ಕ: 01.07.2022 ರಿ೦ದ, ಭಾರತ ಸರ್ಕಾರವು ಮ೦ಜೂರು ಮಾಡಿದ ಪ್ರತಿ ಶೇ.1 ರಷ್ಟು ತುಟ್ಟಿಭತ್ಯೆಗೆ, ರಾಜ್ಯ ಸರ್ಕಾರಿ ನೌಕರರಿಗೆ ಮ೦ಜೂರು ಮಾಡಬೇಕಾದ ತುಟ್ಟಿಭತ್ಯೆಯು ಪರಿಷ್ಕೃತ ಮೂಲ ವೇತನದ ಶೇ.0.722 ರಷ್ಟು ಆಗಿರುತ್ತದೆ (ಅಧ್ಯಾಯ 5.65).

8.ಅನುದಾನಿತ ಶಿಕ್ಷಣ ಸ೦ಸ್ಥೆಗಳ ನೌಕರರು, ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಗಳ ಬೋಧಕೇತರ ಸಿಬ್ಬಂದಿಗಳ ವೇತನ ಶ್ರೇಣಿಗಳನ್ನು ರಾಜ್ಯ ಸರ್ಕಾರಿ ನೌಕರರಿಗೆ ಪರಿಷ್ಕರಿಸಿದ ರೀತಿಯಲ್ಲಿಯೇ ಪರಿಷ್ಕರಿಸಬೇಕು (ಅಧ್ಯಾಯ 5.54).

9.ರಾಜ್ಯ ಸರ್ಕಾರವು, ಕೇಂದ್ರದ ವೇತನ ರಚನೆಯನ್ನು ಅಳವಡಿಸಿಕೊಳ್ಳಲು ಒಂದು ವಿಧಾನವನ್ನು ಆಯೋಗವು ರೂಪಿಸಿದೆ. ಆದಾಗ್ಯೂ ಪ್ರಸ್ತುತ, ರಾಜ್ಯ ಸರ್ಕಾರವು ಮುಖ್ಯ ಶ್ರೇಣಿ ಮತ್ತು ವಿಭಜಿತ ಪ್ರತ್ಯೇಕ ವೇತನ ಶ್ರೇಣಿಗಳನ್ನು ಒಳಗೊ೦ಡಿರುವ ಅಸ್ತಿತ್ವದಲ್ಲಿರುವ ವೇತನದ ಮಾದರಿಯನ್ನು ರಾಜ್ಯ ಸರ್ಕಾರವು ಉಳಿಸಿಕೂಳ್ಳುವುದು ಸೂಕ್ತವೆಂದು ಅಭಿಪ್ರಾಯಪಟ್ಟಿದೆ. ಭಾರತ ಸರ್ಕಾರವು ತನ್ನ ನೌಕರರಿಗೆ ಮುಂದಿನ ವೇತನವನ್ನು ಪರಿಷ್ಕರಿಸಿದಾಗ ರಾಜ್ಯ ಸರ್ಕಾರವು ಕೇಂದ್ರೀಯ ವೇತನ ರಚನೆಯ ಆಧಾರದ ಮೇಲೆ ಪರ್ಯಾಯ ರಚನೆಯನ್ನು ಅಳವಡಿಸಿಕೊಳ್ಳಲು ಸೂಕ್ತ ಸಮಯವಾಗಿರುತ್ತದೆ (ಅಧ್ಯಾಯ 6.14).

10.ಮಾಸಿಕ ಪಿಂಚಣಿ ಪ್ರಮಾಣವು ಅಂತಿಮವಾಗಿ ಪಡೆದ ಮೂಲ ವೇತನದ ಶೇ.50 ರಷ್ಟರಲ್ಲಿಯೇ ಮುಂದುವರೆಯುತ್ತದೆ ಮತ್ತು ಕುಟುಂಬ ಪಿ೦ಚಣಿಯು ಅಂತಿಮವಾಗಿ ಪಡೆದ ಮೂಲ ವೇತನದ ಶೇ.30 ರಷ್ಟರಲ್ಲಿ ಮುಂದುವರಿಯುತ್ತದೆ. ಅದರಂತೆ, ಕನಿಷ್ಠ ಪಿಂಚಣಿಯನ್ನು ರೂ.13,500 (ಕವಿಷ್ಠ ವೇತನ ರೂ. 27,000 ರ ಶೇ.50 ರಷ್ಟು) ಮತ್ತು ಗರಿಷ್ಠ ಪಿ೦ಚಣಿಯನ್ನು ರೂ.1,20,600 (ಗರಿಷ್ಠ ರೂ.2,41,200 ವೇತನದ ಶೇ.50 ರಷ್ಟು) ಪರಿಷ್ಕರಿಸುವುದು (ಅಧ್ಯಾಯ 8.18).

11.70-80 ವರ್ಷ ವಯಸ್ಸಿನ ಪಿ೦ಚಣಿದಾರರಿಗೆ ಮೂಲ ಪಿ೦ಚಣಿಯ ಹೆಚ್ಚುವರಿ ಶೇ.10 ರಷ್ಟನ್ನು ಆಯೋಗವು ಶಿಫಾರಸ್ಸು ಮಾಡುತ್ತದೆ (ಅಧ್ಯಾಯ 8.26).

12.ಆಯೋಗವು ಪಿಂಚಣಿದಾರರು ಮತ್ತು ಕುಟುಂಬ ಪಿ೦ಚಣಿದಾರರನ್ನು ಒಳಗೊಳ್ಳುವ ಉದ್ದೇಶಿತ “ಸಂಧ್ಯಾಕಿರಣ” ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸಲು ಒತ್ತಾಯಿಸುತ್ತದೆ. ಮತ್ತು ಈ ಮಧ್ಯೆ, ರಾಜ್ಯ ಸರ್ಕಾರವು ಈ ಯೋಜನೆಯ ಅನುಷ್ಕಾನವನ್ನು ಪ್ರಾರ೦ಭಿಸುವವರೆಗೆ ಎಲ್ಲಾ ಪಿ೦ಚಣಿದಾರರು ಮತ್ತು ಕುಟುಂಬ ಪಿಂಚಣಿದಾರರಿಗೆ ವೈದ್ಯಕೀಯ ಭತ್ಯೆಯಾಗಿ ತಿಂಗಳಿಗೆ ರೂ.500 ಪಾವತಿಸುವಂತೆ ಶಿಫಾರಸ್ಸು ಮಾಡುತ್ತದೆ (ಅಧ್ಯಾಯ 8.37).

12.ಪಿಂಚಣಿದಾರರು ಆತ ಅಥವಾ ಆಕೆಯು ಮರಣದ ಹೊಂದಿದಲ್ಲಿ, ಅವರ ಅಂತ್ಯಕ್ರಿಯೆ ವೆಚ್ಚಗಳನ್ನು ಭರಿಸಲು ರೂ.10000. ಗಳ ಮೊತ್ತವನ್ನು ಪಿ೦ಚಣಿದಾರರ ನಾಮನಿರ್ದೇಶಿತನಿಗೆ ಪಾವತಿಸಲು ಶಿಫಾರಸ್ಸು ಮಾಡಲಾಗಿದೆ (ಅಧ್ಯಾಯ 8.39).

13.ಕರ್ನಾಟಕ ಸರ್ಕಾರಿ ನೌಕರರ (ಕುಟು೦ಬ ಪಿ೦ಚಣಿ) ನಿಯಮಗಳು, 2002 ರಲ್ಲಿ ಮಹಿಳಾ ಸರ್ಕಾರಿ ನೌಕರರು / ಪಿಂಚಣಿದಾರರು ತಮ್ಮ ಮಗು / ಮಕ್ಕಳನ್ನು ಕಲವು ಸಂದರ್ಭಗಳಲ್ಲಿ ಸ೦ಗಾತಿಯ ಬದಲಿಗೆ ಕುಟು೦ಬ ಪಿಂಚಣಿಗೆ ನಾಮನಿರ್ದೇಶನ ಮಾಡಲು ಅವಕಾಶ ಕಲ್ಪಿಸಬಹುದು ಎ೦ದು ಆಯೋಗವು ಪಸ್ತಾಪಿಸಿದೆ (ಅಧ್ಯಾಯ 8.66).

14.ಆಯೋಗವು ಅಸ್ತಿತ್ವದಲ್ಲಿರುವ ಎಲ್ಲಾ ಭತ್ಯೆಗಳ ದರಗಳನ್ನು ಪರಿಶೀಲಿಸಿ, ಕೆಲವು ಅಸ್ತಿತ್ವದಲ್ಲಿರುವ ಭತ್ಯೆಗಳನ್ನು ಹೊಸ ವರ್ಗದ ನೌಕರರಿಗೆ ವಿಸ್ತರಿಸಲು ಮತ್ತು ಹೊಸ ಭತ್ಯೆಗಳನ್ನು ನೀಡಲು ಈ ಕೆಳಕ೦ಡ ಪ್ರಮುಖ ಶಿಫಾರಸ್ಸುಗಳನ್ನು ಮಾಡಿದೆ (ಅಧ್ಯಾಯ 7.5).

15. ವೃಂದ ಸಿ ಮತ್ತು ಡಿ ನೌಕರರಿಗೆ ರಾಜ್ಯ ಗು೦ಪು ವಿಮಾ ಯೋಜನೆಯ ಮಾಸಿಕ ವಂತಿಗೆಯನ್ನು ಶೇ.100 ರಷ್ಟು ಮತ್ತು ವೃ೦ದ ಎ ಮತ್ತು ಬಿ ನೌಕರರಿಗೆ ಶೇ.50 ರಷ್ಟು ಹೆಚ್ಚಿಸುವುದು (ಅಧ್ಯಾಯ 8.44).

16.ಎ, ಬಿ ಮತ್ತು ಸಿ ಸ್ಥಳಗಳ ಮೂರು ವರ್ಗಗಳಿಗೆ ಅಸ್ತಿತ್ವದಲ್ಲಿರುವ ಶೇ.24, ಶೇ.16 ಮತ್ತು ಶೇ.8 ರಿ೦ದ ಪರಿಷ್ಕತ ಮೂಲ ವೇತನದ ಕನಿಷ್ಠ ಶೇ.20, ಶೇ.15 ಮತ್ತು ಶೇ. 75 ಕೈ ಅನುಕ್ರಮವಾಗಿ ಮನೆ ಬಾಡಿಗೆ ದರಗಳನ್ನು ಪರಿಷ್ಕರಿಸಲಾಗಿದೆ. ಶಿಫಾರಸ್ಸು ಮಾಡಲಾದ ಪರಿಷ್ಕೃತ ವೇತನ ಶ್ರೇಣಿಗಳ ಆಧಾರದ ಮೇಲೆ, ಇದು 3 ವರ್ಗಗಳಿಗೆ ತಿ೦ಗಳಿಗೆ. ರೂ.1,320, . ರೂ.1,330.. ಮತ್ತು ರೂ.690 ಅನುಕ್ರಮವಾಗಿ ಹೆಚ್ಚಳವಾಗಿರುವುದರಿ೦ದ ನಿಶ್ಚಳವಾಗಿ ಮನೆ ಬಾಡಿಗೆ ಭತ್ಯೆಯಲ್ಲಿ ಸುಮಾರು ಶೇ.40 ರಷ್ಟು ಹೆಚ್ಚಳವಾಗಿದೆ (ಅಧ್ಯಾಯ 7.18).

17. ಬಿಬಿಎಂಪಿ ವ್ಯಾಪ್ತಿಯೊಳಗಿನ ವೃ೦ದ ಎ ಮತ್ತು ಬಿ ನೌಕರರಿಗೆ ಮಾಸಿಕ ಅಸ್ತಿತ್ವದಲ್ಲಿರುವ ನಗರ ಪರಿಹಾರ ಭತ್ಯೆಯನ್ನು ರೂ.600 ರಿ೦ದ ರೂ.900 ಕ್ಕೆ ಮತ್ತು ವೃಂದ ಸಿ ಮತ್ತು ಡಿ ನೌಕರರಿಗೆ ಮಾಸಿಕ ರೂ.500 ರಿ೦ದ ರೂ.750 ಕ್ಕೆ ಹೆಚ್ಚಿಸಲಾಗಿದೆ. ನಗರ ಸಮುಚ್ಚಯಗಳಾದ ಬೆಳಗಾವಿ, ಮ೦ಗಳೂರು, ಮೈಸೂರು, ಹಾಗೂ ಪುರಸಭೆಳಾದ ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ನಗರಗಳ ವೃ೦ದ ಎ ಮತ್ತು ಬಿ ನೌಕರರಿಗೆ ಮಾಸಿಕ ರೂ.450 ರಿ೦ದ ರೂ.700 ಕ್ಕೆ ಮತ್ತು ವೃ೦ದ ಸಿ ಮತ್ತು ಡಿ ನೌಕರರಿಗೆ ಮಾಸಿಕ ರೂ.400 ರಿ೦ದ ರೂ.600 ಗಳಿಗೆ ನಗರ ಪರಿಹಾರ ಭತ್ಯೆಯನ್ನು ಪರಿಷ್ಕರಿಸಿದೆ (ಅಧ್ಯಾಯ 7.19).

18.ಸಮವಸ್ತ್ರ ಭತ್ಯೆ, ನಿಗದಿತ ಪ್ರಯಾಣ ಭತ್ಯೆ, ಸಾಗಣೆ ಭತ್ಯೆ, ರಾಜ್ಯದೊಳಗೆ ಮತ್ತು ಹೊರಗೆ ತ೦ಗವುದಕ್ಕಾಗಿ ದಿನ ಭತ್ಯೆ, ವರ್ಗಾವಣೆ ಅನುದಾನ ಮತ್ತು ಹೊರ ರಾಜ್ಯ ಭತ್ಯೆ (ದೆಹಲಿ ಹೊರತುಪಡಿಸಿ ಇತರ ಸ್ಥಳಗಳಿಗೆ) ಸಾಮಾನ್ಯವಾಗಿ ಅಸ್ತಿತ್ವದಲ್ಲಿರುವ ದರಗಳಿಗಿ೦ಂತ ಶೇ.25 ರಷ್ಟನ್ನು ಮೇಲ್ಮುಖವಾಗಿ ಹೆಚ್ಚಿಸಿ ಪರಿಷ್ಕರಿಸಲಾಗಿದೆ (ಅಧ್ಯಾಯ 7.20).

19. ಆರೋಗ್ಯ ಮತ್ತು ಕುಟು೦ಬ ಕಲ್ಯಾಣ ಇಲಾಖೆಯಲ್ಲಿನ ವೈದ್ಯರುಗಳಿಗೆ ನೀಡಲಾಗುತ್ತಿರುವ ವಿಶೇಷ ಭತ್ಯೆಯನ್ನು, ಪ್ರಸ್ತುತ ಇರುವ ವೈಪರೀತ್ಯಗಳನ್ನು ಸರಿಪಡಿಸುವ ಮೂಲಕ ಇಎಸ್‌ಐ ವೈದ್ಯರುಗಳಿಗೆ ಅವರ ಅರ್ಹತೆಗಳು ಮತ್ತು ಸೇವಾ ವರ್ಷಗಳ ಆಧಾರದ ಮೇಲೆ ವಿಸ್ತರಿಸಲು ಶಿಫಾರಸ್ಸು ಮಾಡಲಾಗಿದೆ (ಅಧ್ಯಾಯ 7.43).

20. ಅಸ್ತಿತ್ವದಲ್ಲಿರುವ ಮೂಲ ವೇತನದ ಶೇ.5 ರಷ್ಟು ನಿಯೋಜನೆ ಭತ್ಯೆ / ವಿದೇಶಿ ಸೇವಾ ಭತ್ಯೆಯ ದರವನ್ನು ಹಾಗೇ ಉಳಿಸಿಕೂೊ೦ಡು, ಚಾಲ್ತಿಯಲ್ಲಿರುವ ರೂ.200 ಗಳ ಮಿತಿಯಿಂದ ಮಾಸಿಕ ರೂ.2000 ರದ ಗರಿಷ್ಠ ಮಿತಿಗೊಳಪಟ್ಟು ಹೆಚ್ಚಿಸುವುದು (ಅಧ್ಯಾಯ 7.50).

21.ಪರಿಷ್ಕೃತ ವೇತನ ಶ್ರೇಣಿಯಲ್ಲಿಯೂ ಶೇ.15 ರಷ್ಟು ಪ್ರಭಾರ ಭತ್ಯೆಯನ್ನು ಮುಂದುವರೆಸಲು ಆಯೋಗವು ಶಿಫಾರಸ್ಸು ಮಾಡುತ್ತದೆ (ಅಧ್ಯಾಯ 7.48).

22. ಇನ್ನು ಮು೦ದೆ ಸ೦ಬ೦ಧಿಸದ ಅಥವಾ ಅಗತ್ಯವಿಲ್ಲದ ಹಲವಾರು ಹುದ್ದೆಗಳಿಗೆ ವಿಶೇಷ ಭತ್ಯೆಗಳನ್ನು ರದ್ದುಪಡಿಸಲು ಪೊಲೀಸ್‌ ಇಲಾಖೆ ಮಾಡಿದ ಪುಸ್ತಾವನೆಗೆ ಆಯೋಗವು ಸಹಮತ ವ್ಯಕ್ತಪಡಿಸಿದೆ (ಅಧ್ಯಾಯ 7.39).

ವಿಶೇಷ ಚೇತನ ನೌಕರರಿಗಾಗಿ ಆಯೋಗವು ಕೆಳಗಿನ ಶಿಫಾರಸು

23. ವಾಹನ ಭತ್ಯೆಯನ್ನು ಕೇವಲ ಅಂಧ ಮತ್ತು ಚಲನವಲನ ವೈಕಲ್ಯತೆಯುಳ್ಳ ವಿಶೇಷ ಚೇತನ ನೌಕರರಿಗೆ ಸೀಮಿತಗೊಳಿಸುವ ಬದಲಾಗಿ ಎಲ್ಲಾ ವಿಶೇಷ ಚೇತನ ನೌಕರರಿಗೆ ಈ ಸೌಲಭ್ಯವನ್ನು ವಿಸ್ತರಿಸುವುದು.

24. ಸರ್ಕಾರಿ ನೌಕರರ ವಿಕಲಚೇತನ ಮಕ್ಕಳ ಶಿಕ್ಷಣ ಭತ್ಯೆಯನ್ನು ಪ್ರತಿ ಮಗುವಿಗೆ ತಿ೦ಗಳಿಗೆ ರೂ.1,000 ರಿ೦ದ ರೂ.2,000 ಕ್ಕೆ ಹೆಚ್ಚಿಸುವುದು.

25.ಬಡ್ಡಿ ರಹಿತ ರೂ.50,0000 ಮುಂಗಡ ಅಥವಾ ಸಲಕರಣೆಗಳ ಬೆಲೆ ಯಾವುದು ಕಡಿಮೆಯೋ ಅದನ್ನು 10 ಮಾಸಿಕ ಕಂತುಗಳಲ್ಲಿ ಮರುಪಡೆಯಬಹುದಾದ ಲ್ಯಾಪ್‌ಟಾಪ್‌ಗಳು, ಡಿಜಿಟಲ್‌ ಒತ್ತಾಸೆಗಳು, AI-ಚಾಲಿತ ಸ್ಮಾರ್ಟ್‌ ಗ್ಲಾಸ್‌ಗಳು ಮತ್ತು ಇತರ ಸಾಧನಗಳನ್ನು ಖರೀದಿಸಲು ಒದಗಿಸಲಾಗುತ್ತದೆ.

26.ವಿಶೇಷ ಚೇತನ ಯಉದ್ಯೋಗಿಗಳಿಗಾಗಿ. ವಿಶೇಷವಾಗಿ ವಿನ್ಯಾಸಗೊಳಿಸಲಾದ ಯಾವುದೇ ವಾಹನದ ಖರೀದಿಗೆ ಅಸ್ತಿತ್ವದಲ್ಲಿರುವ ಶೇ.30 ರಿ೦ದ ಶೇ.40ಕ್ಕ ವಾಹನ ದರದ ಗರಿಷ್ಠ ರೂ.60,000 ಕ್ಕ ಒಳಪಟ್ಟು ಸಬ್ಸಿಡಿಯನ್ನು ಹೆಚ್ಚಿಸುವುದು.

ವಾಹನಗಳ ಖರೀದಿ ಮುಂಗಡಗಳಿಗೆ ಸ೦ಬಂಧಿಸಿದ ಶಿಫಾರಸುಗಳು

27.ಆಂತರಿಕ ದಹನ (ಐಸಿ) ಎ೦ಜಿನ್‌ ಹೊ೦ದಿರುವ ನಾಲ್ಕು ಚಕ್ರದ ವಾಹನಗಳಿಗೆ ಮುಂಗಡವನ್ನು ಈಗಿರುವ ರೂ.3 ಲಕ್ಷದಿ೦ದ ಗರಿಷ್ಠ ರೂ.6 ಲಕ್ಷಕ್ಕೆ ಹೆಚ್ಚಿಸುವುದು (ಅಧ್ಯಾಯ 7.66).

28.ಐಸಿ ಇ೦ಜಿನ್‌ಗಳನ್ನು ಹೊಂದಿರುವ ದ್ವಿಚಕ್ರ ವಾಹನಗಳಿಗೆ ಮುಂಗಡವನ್ನು ಈಗಿರುವ ರೂ.50,000 ದಿ೦ದ ಗರಿಷ್ಠ ರೂ.80,000 ಹೆಚ್ಚಿಸುವುದು (ಅಧ್ಯಾಯ 7.69).

29. ಬೈಸಿಕಲ್‌. ಮು೦ಗಡವನ್ನು ಗರಿಷ್ಠ ರೂ.10,000. ಕ್ಕೆ. ಹೆಚ್ಚಿಸುವುದು (ಅಧ್ಯಾಯ 7.72)
ವಿದ್ಯತ್‌ ಚಾಲಿತ ಬೈಸಿಕಲ್‌ಗಳಿಗೆ ಮು೦ಗಡವನ್ನು ಗರಿಷ್ಠ ರೂ.30,000 ಕ್ಕೆ ಹೆಚ್ಚಿಸುವುದು (ಅಧ್ಯಾಯ 7.73).
ವಿದ್ಯುತ್‌ ಚಾಲಿತ ದ್ವಿಚಕ್ರ ವಾಹನಗಳಿಗೆ ಮು೦ಗಡವನ್ನು ಗರಿಷ್ಠ ರೂ.1.25 ಲಕ್ಷಕ್ಕೆ ಹೆಚ್ಚಿಸುವುದು (ಅಧ್ಯಾಯ 7.70)
ವಿದ್ಯುತ್‌ ಚಾಲಿತ ನಾಲ್ಕು ಚಕ್ರದ ವಾಹನಗಳಿಗೆ ಮು೦ಗಡವನ್ನು ಗರಿಷ್ಠ ರೂ.10 ಲಕ್ಷಕ್ಕೆ ಹೆಚ್ಚಿಸುವುದು (ಅಧ್ಯಾಯ 7.67.)

30.ಗಣಕಯಂತ್ರ ಮುಂಗಡವನ್ನು ಗರಿಷ್ಠ ರೂ.60,000 ಕ್ಕೆ. ಪರಿಷ್ಕರಿಸುವುದು (ಅಧ್ಯಾಯ 7.79).

31.ಸೋಲಾರ್‌ ವಾಟರ್‌ ಹೀಟರ್‌, ಸೋಲಾರ್‌ ಕುಕ್ಕರ್‌, ಮೊಪೆಡ್‌ ಮತ್ತು ಮೋಟಾರು ವಾಹನಗಳ ದುರಸ್ಮಿ ಮತ್ತು ಉಪಕರಣಗಳಿಗೆ ಮು೦ಗಡಗಳನ್ನು ಸ್ಥಗಿತಗೊಳಿಸುವುದು (ಅಧ್ಯಾಯ 7.76).

32. ವೃ೦ದ ಎ ನೌಕರರಿಗೆ ಗರಿಷ್ಠ ರೂ.65 ಲಕ್ಷ ಮತ್ತು ಇತರ ನೌಕರರಿಗೆ ರೂ.40 ಲಕ್ಷಗಳ ಗೃಹ ನಿರ್ಮಾಣ ಭತ್ಯೆಯನ್ನು ಪರಿಷ್ಕರಿಸಿದೆ (ಅಧ್ಯಾಯ 7.78).

33.ನೌಕರರ ಸೇವಾವಧಿಯಲ್ಲಿ ರje ಪ್ರಯಾಣ ಭತ್ಯೆಯ ಪ್ರಯೋಜನವನ್ನು ಎರಡು ಬಾರಿಯಿ೦ದ ಮೂರು ಬಾರಿಗೆ ಹೆಚ್ಚಿಸುವುದು (ಅಧ್ಯಾಯ 7.84).

34.ಸರ್ಕಾರಿ ನೌಕರರ ತರಬೇತಿಯ ಗುಣಮಟ್ಟವನ್ನು ಸುಧಾರಿಸುವುದಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಬೇಕೆಂದು ಗುರುತಿಸಿ, ತರಬೇತಿ ಸ೦ಸ್ಥೆಗಳಲ್ಲಿನ ಅಧ್ಯಾಪಕರ ಗುಣಮಟ್ಟವನ್ನು ಹೆಚ್ಚಿಸಲು, ಎಲ್ಲಾ ಸರ್ಕಾರಿ ತರಬೇತಿ ಸಂಸ್ಥೆಗಳಲ್ಲಿ ನಿಯೋಜಿತ ಅಥವಾ ಅಧ್ಯಾಪಕರಾಗಿ ನೇಮಕಗೊ೦ಡ ನೌಕರರಿಗೆ ಅಸ್ತಿತ್ವದಲ್ಲಿರುವ ವಿಶೇಷ ಭತ್ಯೆಯನ್ನು ಶೇ.25 ಕ್ಕ ಹೆಚ್ಚಿಸುವುದು (ಅಧ್ಯಾಯ 7.562.

35. ಇಲಾಖೆಗೆ ಸ೦ಬ೦ಧಿಸಿದ ಅಸ್ತಿತ್ವದಲ್ಲಿರುವ ಭತ್ಯೆಗಳನ್ನು ನಿಯಮಿತವಾಗಿ ಪರಿಶೀಲಿಸಲು ಮತ್ತು ಖಾತರಿಯಿಲ್ಲದವುಗಳನ್ನು ತೆಗೆದುಹಾಕಲು, ಆರ್ಥಿಕ ಇಲಾಖೆ, ಡಿಪಿಎಆರ್‌ ಮತ್ತು ಸ೦ಬ೦ಧಪಟ್ಟ ಆಡಳಿತ ಇಲಾಖೆಗಳು ಸ್ಥಾಯಿ ಸಮಿತಿಯನ್ನು ರಚಿಸುವ ಅಗತ್ಯತೆಯನ್ನು ಪುಸ್ತಾಪಿಸಿದೆ. ಯಾವುದೇ ಸ೦ದರ್ಭದಲ್ಲಿ, ಈ ಸ್ಮಾಯಿ ಸಮಿತಿಯು ನಿರ್ದಿಷ್ಟವಾಗಿ ಶಿಫಾರಸು ಮಾಡದ ಹೊರತು ಯಾವುದೇ ಹೊಸ
ಭತ್ಯೆಯನ್ನು ಪರಿಚಯಿಸತಕ್ಕದಲ್ಲ (ಅಧ್ಯಾಯ 7.7).

36.ಪೋಷಕರು ಅಥವಾ ಅತ್ತೆ/ಮಾವಂ೦ದಿರು ಅಥವಾ ಕುಟು೦ಬದ ಹಿರಿಯರು ಅಥವಾ ಗ೦ಭೀರ ಅನಾರೋಗ್ಯದಿ೦ದ ಬಳಲುತ್ತಿರುವ ಸಣ್ಣ ಮಕ್ಕಳನ್ನು ಆರೈಕೆ ಮಾಡಲು ನೌಕರರಿಗೆ ಆರೈಕೆ ರಜೆ ಎ೦ಬ ಹೊಸ ಪ್ರಯೋಜನವನ್ನು ಒದಗಿಸಬೇಕೆಂದು ಹಾಗೂ ರಜೆಯ ಅವಧಿಯಲ್ಲಿ ಶೇ.50 ರಷ್ಟು ವೇತನದೊಂದಿಗೆ ಈ ರಜೆಯ ಗರಿಷ್ಠ ಅವಧಿಯು 180 ದಿನಗಳಿಗೆ (6 ತಿ೦ಗಳುಗಳು) ನಿಗದಿಪಡಿಸಲು ಆಯೋಗವು ಶಿಫಾರಸ್ಸು ಮಾಡಿದೆ
(ಅಧ್ಯಾಯ 7.89).

37. ಸೇವೆಗೆ ಸೇರುವ 60 ದಿನಗಳ ಮೊದಲು ಮಗುವಿಗೆ ಜನ್ಮ ನೀಡಿದ ಮಹಿಳಾ ಸರ್ಕಾರಿ ನೌಕ ರಿಗೆ ಸೇವೆಗೆ ಸೇರುವ ಸಮಯದಲ್ಲಿ ನವಜಾತ ಶಿಶುವಿನ ಆರೈಕೆಯ ಅವಧಿಯಲ್ಲಿ ಇರುವವರಿಗೆ 18 ವಾರಗಳ ಹೆರಿಗೆ ರಜಿಯನ್ನು ಶಿಫಾರಸ್ಸು ಮಾಡಿದೆ (ಅಧ್ಯಾಯ 7.92)

38.ಕೆಲಸ-ವಿರಾಮ ಸಮತೋಲನವನ್ನು ಸುಧಾರಿಸಲು ಮತ್ತು ಆ ಮೂಲಕ ಸರ್ಕಾರಿ ನೌಕರರ ಕೆಲಸದ ಗುಣಮಟ್ಟವನ್ನು ಸುಧಾರಿಸಲು ಸರ್ಕಾರವು ಐದು ದಿನಗಳ ಕೆಲಸದ ವಾರವನ್ನು ಪರಿಚಯಿಸಬೇಕೆಂದು ಆಯೋಗವು ಶಿಫಾರಸ್ಸು ಮಾಡಿದೆ (ಅಧ್ಯಾಯ 9.42).

39. ಆಡಳಿತಕ್ಕೆ ಸ೦ಬ೦ಧಿಸಿದ ಪರಿಸರ ಸಾಮಾಜಿಕ ಮತ್ತು ಆಡಳಿತ (ESG) ತತ್ವಗಳು ಮತ್ತು ಸುಸ್ಥಿರ. ತಂತ್ರಜ್ಞಾನದಲ್ಲಿನ ಇತ್ತೀಚಿನ ಬೆಳವಣಿಗೆಗಳೊ೦ದಿಗೆ ಪ್ರತಿಯೊಬ್ಬ ಉದ್ಯೋಗಿಗಳಿಗೆ ಪರಿಚಿತರಾಗಲು ಡಿಪಿಎಆರ್‌ ತೆಗೆದುಕೊಳ್ಳಬೇಕಾದ ಸಚಿವಾಲಯ ಮತ್ತು ಕ್ಷೇತ್ರ ಮಟ್ಟದ ಸರ್ಕಾರಿ ನೌಕರರ ಸ೦ಪೂರ್ಣ ಸ್ಪೆಕ್ಟ್ರಮ್‌ ಅನ್ನು ಒಳಗೊಂಡಿರುವ ಸಮಗ್ರ ತರಬೇತಿ ಕಾರ್ಯಕ್ರಮವನ್ನು ಆಯೋಗವು ಬಲವಾಗಿ ಶಿಫಾರಸ್ಸು ಮಾಡುತ್ತದೆ (ಅಧ್ಯಾಯ 9.56)

Continue Reading

ನೌಕರರ ಕಾರ್ನರ್

7th Pay Commission : 7ನೇ ವೇತನ ಆಯೋಗದ ವರದಿ ಸ್ವೀಕರಿಸಿದ ಸಿಎಂ; 27.5 % ವೇತನ ಹೆಚ್ಚಳ ಪರಿಶೀಲನೆ

7th Pay Commission : ಏಳನೇ ವೇತನ ಆಯೋಗದ ವರದಿಯನ್ನು ಸ್ವೀಕರಿಸಿರುವ ಸಿಎಂ ಸಿದ್ದರಾಮಯ್ಯ ಅವರು ಶಿಫಾರಸುಗಳನ್ನು ಆರ್ಥಿಕ ಇಲಾಖೆಯು ಇದನ್ನು ಪರಿಶೀಲಿಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

VISTARANEWS.COM


on

7th Pay commission report submitted
Koo

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು (7th Pay Commission) ಶನಿವಾರ ತನ್ನ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಸಲ್ಲಿಸಿದೆ. ವರದಿಯನ್ನು ಸ್ವೀಕರಿಸಿದ ಸಿದ್ದರಾಮಯ್ಯ ಅವರು ವರದಿಯಲ್ಲಿರುವ ಅಂಶಗಳನ್ನು ಆರ್ಥಿಕ ಇಲಾಖೆಯ (Finance department) ಪರಿಶೀಲನೆ ಒಪ್ಪಿಸಲಾಗುವುದು, ಬಳಿಕ ವೇತನ ಹೆಚ್ಚಳದ (Recommendation for salary hike) ಸಂಬಂಧಿತ ಶಿಫಾರಸನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗವು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವರದಿ ಸಲ್ಲಿಸಿತು. ಆಯೋಗದ ಸದಸ್ಯರಾದ ಪಿ.ಬಿ. ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ , ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾ ಡಾ.ಕೆ.ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು.

ಈ ವರದಿಯಲ್ಲಿ ರಾಜ್ಯ ಸರ್ಕಾರಿ (Government Employees) ನೌಕರರ ವೇತನವನ್ನು ಶೇ. 27ರಷ್ಟು ಹೆಚ್ಚಿಸಲು ಶಿಫಾರಸು (Recommendation for Salary hike) ಮಾಡಲಾಗಿದೆ. ಇದರ ಜತೆಗೆ ಮೂಲ ವೇತನವನ್ನು (Basic salary) 27,000 ರೂ.ಗಳಿಗೆ ಹೆಚ್ಚಿಸುವಂತೆಯೂ ಶಿಫಾರಸು ಮಾಡಲಾಗಿದೆ.

7th Pay commission report submitted1 CM

ಇದನ್ನೂ ಓದಿ : 7th Pay Commission : 7ನೇ ವೇತನ ಆಯೋಗದ ವರದಿ ಸಲ್ಲಿಕೆ; 27.5 % ವೇತನ ಹೆಚ್ಚಳಕ್ಕೆ ಶಿಫಾರಸು

ವರದಿ ಸ್ವೀಕರಿಸಿ ಸಿದ್ದರಾಮಯ್ಯ ಹೇಳಿದ್ದೇನು?

7ನೇ‌ ವೇತನ‌ ಆಯೋಗದ ಅಧ್ಯಕ್ಷ ಸುಧಾಕರ್ ರಾವ್ ವರದಿ ಸಲ್ಲಿಸಿದ್ದಾರೆ. ನೌಕರರ ಬೇಡಿಕೆಗಳನ್ನು ಆಧರಿಸಿ ವರದಿ ನೀಡಲು‌ ಸರ್ಕಾರ ಸಮಿತಿ‌ ರಚಿಸಲಾಗಿತ್ತು. ಆಯೋಗ ರಚನೆಯ ಬೆನ್ನಿಗೇ ರಾಜ್ಯ ಸರ್ಕಾರ ಈಗಾಗಲೇ ಮೂಲ ವೇತನದ ಮೇಲೆ ಶೇಕಡಾ 17ರಷ್ಟು ವೇತನ ಹೆಚ್ಚಳಕ್ಕೆ ಆದೇಶ ನೀಡಿತ್ತು. ಇದೀಗ ಶೇಕಡಾ 27.5ರಷ್ಟು ವೇತನ ಹೆಚ್ಚಳಕ್ಕೆ ಶಿಫಾರಸು ಮಾಡಲಾಗಿದೆ. ವರದಿಯನ್ನ‌ ಆರ್ಥಿಕ ಇಲಾಖೆ ಪರಿಶೀಲನೆ ಮಾಡಬೇಕು ಎಂದು ವರದಿ ಸ್ವೀಕರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದರು.

ಆಯೋಗದ ವರದಿಯನ್ನು ಒಂದು ಬಾರಿ ಮೂರು ತಿಂಗಳ ಮಟ್ಟಿಗೆ ವಿಸ್ತರಿಸಲಾಗಿತ್ತು. ಆಯೋಗದ ಅವಧಿ ಮಾರ್ಚ್‌ 15ಕ್ಕೆ ಮುಕ್ತಾಯವಾಗಿದ್ದು, ಅಂದೇ ವರದಿ ಸ್ವೀಕರಿಸಬೇಕಾಗಿತ್ತು. ಆದರೆ, ಶುಕ್ರವಾರ ಮೈಸೂರು‌ ಪ್ರವಾಸದಲ್ಲಿದ್ದ ಕಾರಣ ವರದಿ ಸ್ವೀಕಾರ ಮಾಡಲು ಆಗಿರಲಿಲ್ಲ. ಇದೀಗ ಅಂತಿಮ ವರದಿಯನ್ನು ಕೊಟ್ಟಿದ್ದಾರೆ. ವರದಿಯಲ್ಲಿನ ಎಲ್ಲ ಶಿಫಾರಸುಗಳನ್ನು ಹೇಳಲಾಗದು. ಆದರೆ, ಮೂಲ ವೇತನ ಹೆಚ್ಚಳ ಮತ್ತು ವೇತನವನ್ನು ಶೇ. 27.5ರಷ್ಟು ಹೆಚ್ಚಿಸಲು ಶಿಫಾರಸು ಮಾಡಿರುವುದು ಹೌದು ಎಂದರು.

ಎಲ್ಲ ಶಿಫಾರಸುಗಳನ್ನು ಆರ್ಥಿಕ‌ ಇಲಾಖೆ ಪರಿಶೀಲನೆ ಮಾಡುತ್ತದೆ. ಪರಿಶೀಲನೆ ಮಾಡಿ ನಂತರ ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ. ಎಲ್ಲರ ಸಲಹೆಗಳನ್ನು ಪಡೆದು ಅಂತಿಮ‌ ತೀರ್ಮಾನ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Continue Reading
Advertisement
Lok Sabha Election 2024 BJP JDS coordination committee meeting successful Fight to win with the workers
Lok Sabha Election 202412 mins ago

Lok Sabha Election 2024: ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ ಯಶಸ್ವಿ; ಎಲೆಕ್ಷನ್‌ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್!

tcs jobs IT hiring
ಉದ್ಯೋಗ13 mins ago

IT Hiring: ಟಿಸಿಎಸ್‌ನಲ್ಲಿ ಫ್ರೆಶರ್‌ಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವುದು ಹೇಗೆ? ಯಾವಾಗ ಕೊನೆಯ ದಿನ?

Road Accident
ಬೆಂಗಳೂರು ಗ್ರಾಮಾಂತರ16 mins ago

Road Accident : ತಲೆ ಮೇಲೆ ಹರಿದ ಲಾರಿ; ಅರಣ್ಯ ಇಲಾಖೆ ಸಿಬ್ಬಂದಿ ಸಾವು, ಮತ್ತೊಬ್ಬ ಗಂಭೀರ

Sonarika Bhadoria
ಕಿರುತೆರೆ25 mins ago

Sonarika Bhadoria: ಹನಿಮೂನ್‌ನ ಹಾಟ್‌ ಫೋಟೊ ಶೇರ್‌ ಮಾಡಿದ ಹಿಂದಿ ಸೀರಿಯಲ್‌ ನಟಿ!

Riyan Parag
ಕ್ರೀಡೆ36 mins ago

Riyan Parag: 3 ದಿನ ನೋವು ನಿವಾರಕ ಮಾತ್ರೆ ಸೇವಿಸಿ ಹಾಸಿಗೆಯಲ್ಲಿದ್ದೆ; ಪಂದ್ಯಶ್ರೇಷ್ಠ ಪ್ರಶಸ್ತಿ ವೇಳೆ ಭಾವುಕರಾದ ​ಪರಾಗ್

Accident Case
ತುಮಕೂರು49 mins ago

Accident Case : ಮರ ಕಡಿಯುವಾಗ ಕರೆಂಟ್‌ ಶಾಕ್‌ಗೆ ಬಲಿ; ಹುಣಸೆ ಹಣ್ಣು ಕೊಯ್ಯುವಾಗ ಬಿದ್ದು ಸಾವು

shani louk photo hamas terrorists
ವಿದೇಶ1 hour ago

Shani Louk Photo: ಹಮಾಸ್‌ ಒತ್ತೆಯಾಳು ಇಸ್ರೇಲಿ ಮಹಿಳೆಯ ನಗ್ನ ದೇಹದ ಫೋಟೋಗೆ ಪ್ರಶಸ್ತಿ; ಆಕ್ರೋಶ; ಉಗ್ರನೇ ತೆಗೆದ ಫೋಟೋನಾ?

Rahul Gandhi And Sonia Gandhi
ದೇಶ1 hour ago

Congress: ಕಾಂಗ್ರೆಸ್‌ಗೆ ಐಟಿ ಮತ್ತೊಂದು ಶಾಕ್;‌ 1,700 ಕೋಟಿ ರೂ. ಟ್ಯಾಕ್ಸ್ ನೋಟಿಸ್‌ ಜಾರಿ‌

Karimani Malika Ninalla play by violinist Aneesh Vidyashankar
ವೈರಲ್ ನ್ಯೂಸ್1 hour ago

Karimani Malika Ninalla: ʻಕರಿಮಣಿ ಮಾಲೀಕʼ ರೀಲ್ಸ್‌ಗೆ ಇನ್ನಷ್ಟು ಮೆರುಗು ನೀಡಿದ ವಯೋಲಿನ್‌ ವಾದಕ!

Karnataka Weather
ಮಳೆ2 hours ago

Karnataka Weather: 28 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ತಾಪಮಾನ; ಇನ್ನೊಂದು ವಾರ ಕಾದ ಕೆಂಡ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌