Parliament Election 2024: ಮತ್ತೆ ಬಿಜೆಪಿ ವಿರುದ್ಧ ಸಿಡಿದ ಪುತ್ತಿಲ, ಲೋಕ ಕಣಕ್ಕೆ ಪಕ್ಷೇತರನಾಗಿ ಎಂಟ್ರಿ - Vistara News

ರಾಜಕೀಯ

Parliament Election 2024: ಮತ್ತೆ ಬಿಜೆಪಿ ವಿರುದ್ಧ ಸಿಡಿದ ಪುತ್ತಿಲ, ಲೋಕ ಕಣಕ್ಕೆ ಪಕ್ಷೇತರನಾಗಿ ಎಂಟ್ರಿ

Parliament Election 2024 : ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಕಾಡಿದ್ದ ಅರುಣ್‌ ಕುಮಾರ್‌ ಪುತ್ತಿಲ ಮತ್ತೆ ತಲೆನೋವಾಗುತ್ತಾರಾ? ಅವರು ಲೋಕಸಭಾ ಚುನಾವಣೆಯಲ್ಲೂ ಪಕ್ಷೇತರನಾಗಿ ಕಣಕ್ಕಿಳಿಯುವುದಾಗಿ ಹೇಳಿದ್ದಾರೆ.

VISTARANEWS.COM


on

Parliament Election 2024 Arun kumar puttila
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡದ ಪುತ್ತೂರು ಕ್ಷೇತ್ರದಿಂದ ಬಂಡುಕೋರನಾಗಿ ಸ್ಪರ್ಧಿಸಿ ಬಿಜೆಪಿ ಸೋಲಿಗೆ ಕಾರಣರಾಗಿದ್ದ ಹಿಂದೂ ಸಂಘಟನೆ ನಾಯಕ ಅರುಣ್‌ ಕುಮಾರ್‌ ಪುತ್ತಿಲ (Arun Kumar puttila) ಮತ್ತೆ ಸಿಡಿದೆದ್ದಿದ್ದಾರೆ (Parliament Election 2024). ಇತ್ತೀಚೆಗೆ ಬಿಜೆಪಿ ನಾಯಕರ ಜತೆಗಿನ ಮಾತುಕತೆಯಲ್ಲಿ ಭಿನ್ನಮತ ಇತ್ಯರ್ಥವಾಗಿದೆ ಎಂದು ಹೇಳಲಾಗಿತ್ತು. ಆದರೆ, ಬಿಜೆಪಿ ನಾಯಕರು ನೀಡಿದ ಭರವಸೆಗಳು ಈಡೇರಿಲ್ಲ ಎಂಬ ಕಾರಣಕ್ಕೆ ಅವರು ಸಿಡಿದು ನಿಂತಿದ್ದು, ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ (Mangalore Constituency) ಪಕ್ಷೇತರನಾಗಿ ಕಣಕ್ಕಿಳಿಯಲು (Independent Candidate) ನಿರ್ಧರಿಸಿದ್ದಾರೆ.

ಗುರುವಾರ ಪುತ್ತೂರಿನಲ್ಲಿ ಪುತ್ತಿಲ ಪರಿವಾರದಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅರುಣ್‌ ಕುಮಾರ್‌ ಪುತ್ತಿಲ ಅವರ ಸ್ಪರ್ಧೆಯನ್ನು ಘೋಷಿಸಲಾಯಿತು. ಅರುಣ್‌ ಕುಮಾರ್‌ ಪುತ್ತಿಲ ಅವರು ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಪರಿವಾರದ ನಾಯಕರು ಪ್ರಕಟಿಸಿದರು.

ಮಾತುಕತೆ ವಿಫಲವಾಗಿದ್ದೇ ಸ್ಪರ್ಧೆ ನಿರ್ಧಾರಕ್ಕೆ ಕಾರಣ

ಪುತ್ತೂರು ಕ್ಷೇತ್ರದ ಚುನಾವಣೆ ಬಳಿಕ ಅರುಣ್‌ ಕುಮಾರ್‌ ಪುತ್ತಿಲ ಅವರು‌ ಮುಂದೆ ಲೋಕಸಭಾ ಕಣಕ್ಕೂ ಪ್ರವೇಶಿಸಿ ಬಿಜೆಪಿಗೆ ಮುಜುಗರ ಉಂಟು ಮಾಡಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ, ಅದರ ನಡುವೆ ಹಿರಿಯ ನಾಯಕರ ನಡುವೆ ಮಾತುಕತೆ ನಡೆದು ಕೆಲವೊಂದು ಷರತ್ತುಗಳೊಂದಿಗೆ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಹೋಗಲು ಪರಿವಾರ ನಿರ್ಧಾರ ಮಾಡಿತ್ತು. ಸ್ವತಃ ಅರುಣ್‌ ಕುಮಾರ್‌ ಪುತ್ತಿಲ ಅವರೇ ಇದನ್ನು ಪ್ರಕಟಿಸಿದ್ದರು.

ಬಿಜೆಪಿಯ ಪುತ್ತೂರು ಜಿಲ್ಲಾ ಪದಾಧಿಕಾರಿಗಳ ಆಯ್ಕೆಯಲ್ಲಿ ಪುತ್ತಿಲ ಪರಿವಾರದದವರಿಗೆ ಅವಕಾಶ ನೀಡಬೇಕು ಎನ್ನುವ ಪ್ರಮುಖ ಬೇಡಿಕೆ ಅವರದಾಗಿತ್ತು. ಇದೂ ಸೇರಿದಂತೆ ಕೆಲವು ಷರತ್ತುಗಳಿಗೆ ಬಿಜೆಪಿ ಒಪ್ಪಿತ್ತು ಎನ್ನಲಾಗುತ್ತಿದೆ. ಇದಾದ ಬಳಿಕ ಪುತ್ತಿಲ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರನ್ನು ಭೇಟಿಯಾಗಿದ್ದರು. ಆಗಲೂ ಕೆಲವೊಂದು ಬೇಡಿಕೆ, ಷರತ್ತುಗಳನ್ನು ಮುಂದಿಟ್ಟಿದ್ದರು. ಆದರೆ, ಸಾಮಾನ್ಯ ಕಾರ್ಯಕರ್ತರಾಗಿ ಬಿಜೆಪಿ ಸೇರ್ಪಡೆಗೆ ಸೂಚಿಸಲಾಗಿತ್ತು ಎನ್ನಲಾಗಿದೆ. ಮಾತುಕತೆ ವಿಫಲವಾದ ಹಿನ್ನಲೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಲು ಪುತ್ತಿಲ ನಿರ್ಧಾರ‌ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Arun Kumar puttila : ಬಿಜೆಪಿಯಲ್ಲಿ ವಿಲೀನವಾಯ್ತಾ ಪುತ್ತಿಲ ಪರಿವಾರ; ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್?

ಸವಾಲುಗಳನ್ನು ಎದುರಿಸುವ ಶಕ್ತಿ ಬಿಜೆಪಿಗೆ ಇದೆ ಎಂದ ನಳಿನ್‌ ಕುಮಾರ್‌ ಕಟೀಲ್‌

ಮಂಗಳೂರು: ಅರುಣ್‌ ಕುಮಾರ್‌ ಪುತ್ತಿಲ ಅವರು ಮಂಗಳೂರು ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸುವ ಸುದ್ದಿಗೆ ಮಂಗಳೂರು ಕ್ಷೇತ್ರದ ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ʻʻಪುತ್ತಿಲ ಪರಿವಾರ ಒಂದು ಸ್ವತಂತ್ರ ಸಂಸ್ಥೆ. ಆ ಸಂಸ್ಥೆಗೆ ತೀರ್ಮಾನ ತೆಗೆದುಕೊಳ್ಳುವ ಸ್ವಾತಂತ್ರ್ಯ ಇದೆʼʼ ಎಂದು ಹೇಳುವ ಮೂಲಕ ಸ್ಪರ್ಧಿಸಲು ತಮ್ಮ ಆಕ್ಷೇಪವಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.

ಅರುಣ್‌ ಕುಮಾರ್‌ ಪುತ್ತಿಲ ಅವರ ಮನವೊಲಿಕೆಗೆ ಪಾರ್ಟಿ ಪ್ರಯತ್ನ ಮಾಡಿದೆ. ನಡೆಯುತ್ತಲೂ ಇದೆ ಎಂದು ಹೇಳಿದ ಅವರು, ʻʻಭಾಜಪಾ ಬಹಳ ವರ್ಷಗಳ ಹೋರಾಟದಿಂದ ಅತೀ ದೊಡ್ಡ ಪಾರ್ಟಿಯಾಗಿ ಬೆಳೆದಿದೆ. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ನ್ನು ಎದುರಿಸಿ ಲೋಕಸಭೆಯಲ್ಲಿ ಅತೀ ಹೆಚ್ಚು ಸೀಟು ಗೆದ್ದಿದೆ. ಪಕ್ಷಕ್ಕೆ ಎದಯರಾಳಿಯ ಪ್ರಶ್ನೆ ಇಲ್ಲʼʼ ಎಂದರು.

ʻʻಇದು ಪ್ರಜಾಪ್ರಭುತ್ವ, ಚುನಾವಣೆಗೆ ನಿಲ್ಲುವ ಹಕ್ಕು ಎಲ್ಲರಿಗೂ ಇದೆ. ಪ್ರತೀ ಚುನಾವಣೆಗೆ ಬಂದಾಗ ಹತ್ತಾರು ಸಮಸ್ಯೆಗಳು ಉದ್ಭವವಾಗುತ್ತದೆ. ಆ ಎಲ್ಲಾ ಸವಾಲುಗಳನ್ನು ಬಿಜೆಪಿ ಗೆದ್ದು ಗೆಲುವು ಸಾಧಿಸಿದೆʼʼ ಎಂದು ಹೇಳಿದರು.

ʻʻರಾಮಮಂದಿರ ನಿರ್ಮಾಣವಾದ ಬಳಿಕ ದೇಶದಲ್ಲಿ ಬಿಜೆಪಿ ಪರವಾದ ವಾತಾವರಣವಿದೆ. ಹಿಂದುತ್ವ, ರಾಷ್ಟ್ರವಾದ, ಅಭಿವೃದ್ಧಿ ವಿಚಾರವಾಗಿ ಜನ ಒಗ್ಗಟ್ಟಾಗುತ್ತಾರೆ. ವಿಧಾನಸಭಾ ಚುನಾವಣೆಗೂ ಲೋಕಸಭಾ ಚುನಾವಣೆಗೂ ವ್ಯತ್ಯಾಸ ಇದೆ. ಆಗಿನ ಸಮಸ್ಯೆ ಬೇರೆ. ಈಗಿನ ವಿಚಾರ ಬೇರೆ. ಈ ಬಾರಿಯ ಚುನಾವಣೆಯಲ್ಲೂ ಭಾರಿ ಗೆಲುವು ಸಾಧಿಸುತ್ತೇನೆʼʼ ಎಂದು ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.

ಲೋಕಸಭಾ ಚುನಾವಣೆ ಸ್ಪರ್ಧೆಗೆ ಅವಕಾಶ ಕೊಡುವುದು ಬಿಡುವುದು ರಾಷ್ಟ್ರೀಯ ನಾಯಕರ ತೀರ್ಮಾನ. ಆ ತೀರ್ಮಾನಕ್ಕೆ ಕಾರ್ಯಕರ್ತನಾಗಿ ಬದ್ಧನಾಗಿದ್ದೇನೆʼʼ ಎಂದು ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.

ಬಿಜೆಪಿ ಗೆಲುವಿಗೆ ಅಡ್ಡಗಾಲಾಗುತ್ತಾರಾ ಅರುಣ್‌ ಕುಮಾರ್‌ ಪುತ್ತಿಲ?

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಬಿಜೆಪಿ ಸೋಲಿಗೆ ಪ್ರಮುಖ ಕಾರಣವೇ ಅರುಣ್‌ ಕುಮಾರ್‌ ಪುತ್ತಿಲ.‌ ಬಿಜೆಪಿ ಟಿಕೆಟ್‌ ಕೇಳಿದ್ದ ಅವರನ್ನು ಪಕ್ಷ ಕಡೆಗಣಿಸಿತ್ತು. ಹೀಗಾಗಿ ಅವರು ಸ್ವತಂತ್ರವಾಗಿ ಕಣಕ್ಕಿಳಿದು ಎರಡನೇ ಸ್ಥಾನ ಪಡೆದಿದ್ದರು.

ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಅಶೋಕ್‌ ಕುಮಾರ್‌ ರೈ ಅವರು 66,607 ಮತಗಳನ್ನು ಪಡೆದು ಗೆದ್ದಿದ್ದರು. ಪಕ್ಷೇತರರಾಗಿದ್ದ ಅರುಣ್‌ ಕುಮಾರ್‌ ಪುತ್ತಿಲ ಅವರು 62,458 ಮತಗಳನ್ನು ಪಡೆದು ಪೈಪೋಟಿ ನೀಡಿದ್ದರು. ಬಿಜೆಪಿಯ ಆಶಾ ತಿಮ್ಮಪ್ಪ ಗೌಡ ಅವರು ಕೇವಲ 37,558 ಮತಗಳಿಗೆ ಸೀಮಿತವಾಗಿದ್ದರು.

ಲೋಕಸಭಾ ಚುನಾವಣಾ ಕಣ ಹೇಗಿತ್ತು?

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್‌ ಕುಮಾರ್‌ ಕಟೀಲ್‌ ಅವರು 2.74 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ನಳಿನ್‌ ಕುಮಾರ್‌ ಅವರು 7,74,285 ಮತಗಳನ್ನು ಪಡೆದರೆ ಅವರ ಸಮೀಪದ ಸ್ಪರ್ಧಿ ಕಾಂಗ್ರೆಸ್‌ನ ಮಿಥುನ್‌ ರೈ ಅವರಿಗೆ 4,99,664 ಮತಗಳು ಸಿಕ್ಕಿದ್ದವು.

ಈ ಬಾರಿ ನಳಿನ್‌ ಕುಮಾರ್‌ ಕಟೀಲ್‌ ಅವರಿಗೇ ಟಿಕೆಟ್‌ ನೀಡಿದರೆ ಸಣ್ಣ ಮಟ್ಟದ ಮತ ಪ್ರಮಾಣ ಕಡಿಮೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ಮೋದಿ ಅವರ ಅಲೆ ಇದನ್ನು ಸರಿದೂಗಿಸುವ ಸಾಧ್ಯತೆ ಇದೆ. ಅರುಣ್‌ ಕುಮಾರ್‌ ಪುತ್ತಿಲ ಅವರು ಪಕ್ಷೇತರರಾಗಿ ಸ್ಪರ್ಧಿಸಿ ಸುಮಾರು 2.5 ಲಕ್ಷ ಮತಗಳನ್ನು ಕಸಿದುಕೊಂಡರೆ ಅದು ಬಿಜೆಪಿಯ ಸೋಲಿಗೆ ಕಾರಣವಾಗುವ ಸಾಧ್ಯತೆ ಇದೆ. ಆದರೆ, ಅವರಿಗೆ ಅಷ್ಟು ಮತಗಳನ್ನು ಗಳಿಸುವ ಶಕ್ತಿ ಇದೆಯಾ ಎನ್ನುವುದು ಪ್ರಶ್ನೆಯಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಅವರು 62 ಸಾವಿರ ಮತಗಳನ್ನು ಪಡೆದಿದ್ದರು. ಅವರ ಪ್ರಭಾವ ಪುತ್ತೂರು ಮತ್ತು ಸುಳ್ಯ ಕ್ಷೇತ್ರದಲ್ಲಿ ಮಾತ್ರ ಜೋರಾಗಿದೆ. ಇದನ್ನು ಮೀರಿ ಅವರು ಜನಪ್ರಿಯತೆಯನ್ನು ಗಳಿಸಿದರೆ ಅದು ಬಿಜೆಪಿಗೆ ಮುಳುವಾಗಬಹುದು ಎಂದು ಹೇಳಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Brand Bangalore: ಬಯಲಾಯ್ತು ಮುಖವಾಡ, ಬೀದಿಗೆ ಬಂತು ಬಂಡವಾಳ; ಬ್ರ್ಯಾಂಡ್‌ ಬೆಂಗಳೂರು ಬಗ್ಗೆ ಕುಟುಕಿದ ಬಿಜೆಪಿ

Brand Bangalore: ನಗರ ಯೋಜನೆಯ ಕಲ್ಪನೆಯೇ ಇಲ್ಲದೆ ಹಾಗೂ ದೂರದೃಷ್ಟಿ ಕೊರತೆಯಿಂದ ಬಳಲುತ್ತಿರುವ ಕಾಂಗ್ರೆಸ್‌ ಸರ್ಕಾರದ ಬ್ರ್ಯಾಂಡ್ ಬೆಂಗಳೂರು ಯೋಜನೆ ರೂಪುಗೊಂಡ ಆರು ತಿಂಗಳ ಒಳಗೆ ಹಳ್ಳ ಹಿಡಿದಿದೆ. ಅನುದಾನ ಹಾಗೂ ಮೇಲುಸ್ತುವಾರಿ ಕೊರತೆಯಿಂದ ಬಳಲುತ್ತಿರುವ ಬ್ರ್ಯಾಂಡ್ ಬೆಂಗಳೂರು ಯೋಜನೆ ಈಗ ನೇಪಥ್ಯಕ್ಕೆ ಸರಿದಿದೆ. ಮಳೆಯಿಂದಾಗಿ ಬೆಂಗಳೂರಿನ ಹಲವು ನಿವಾಸಿಗಳ ಮನೆ ಬಾಗಿಲಿಗೆ ಚರಂಡಿ ನೀರು ಬಂದಿದೆ. ಮೊದಲು ಬೆಂಗಳೂರಿಗರ ಸಮಸ್ಯೆ ಬಗೆಹರಿಸಿ ಎಂದು ಕಾಂಗ್ರೆಸ್‌ ಸರ್ಕಾರ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ.

VISTARANEWS.COM


on

Brand Bangalore and BJP Slams DK Shivakumar and Congress Government
Koo

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಹಾಗೂ ಡಿಸಿಎಂ, ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌ (DK Shivakumar) ಅವರ ಕನಸಿನ “ಬ್ರ್ಯಾಂಡ್‌ ಬೆಂಗಳೂರು” (Brand Bangalore) ಯೋಜನೆ ಬಗ್ಗೆ ಬಿಜೆಪಿ ಕಿಡಿಕಾರಿದೆ. ನಗರ ಯೋಜನೆಯ ಕಲ್ಪನೆಯೇ ಇಲ್ಲದೆ ಹಾಗೂ ದೂರದೃಷ್ಟಿ ಕೊರತೆಯಿಂದ ಬಳಲುತ್ತಿರುವ ಕಾಂಗ್ರೆಸ್‌ ಸರ್ಕಾರದಿಂದ (Congress Government) ಈ ಯೋಜನೆ ಹಳ್ಳ ಹಿಡಿದಿದೆ ಎಂದು ಅಸಮಾಧಾನ ಹೊರಹಾಕಿದೆ. ಅಲ್ಲದೆ, “ಬಯಲಾಯ್ತು ಮುಖವಾಡ, ಬೀದಿಗೆ ಬಂತು ಬಂಡವಾಳ” ಎಂದು ಕಾಲೆಳೆದಿದೆ.

ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಬಿಜೆಪಿ, ಕಾಂಗ್ರೆಸ್‌ ಸರ್ಕಾರ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಮಳೆಯಿಂದಾಗಿ ಬೆಂಗಳೂರಿನ ಹಲವು ನಿವಾಸಿಗಳ ಮನೆ ಬಾಗಿಲಿಗೆ ಚರಂಡಿ ನೀರು ಬಂದಿದೆ. ಮೊದಲು ಬೆಂಗಳೂರಿಗರ ಸಮಸ್ಯೆ ಬಗೆಹರಿಸಿ ಎಂದು ಸಲಹೆಯನ್ನು ನೀಡಿದೆ.

ಇದನ್ನೂ ಓದಿ: ‌DK Shivakumar: ಕೆಪಿಸಿಸಿ ಅಧ್ಯಕ್ಷನಾಗಿ ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ; ಡಿಕೆಶಿ ಹೀಗೆ ಹೇಳಿದ್ಯಾಕೆ?

ಬಿಜೆಪಿ ಪೋಸ್ಟ್‌ನಲ್ಲೇನಿದೆ?

“ನಗರ ಯೋಜನೆಯ ಕಲ್ಪನೆಯೇ ಇಲ್ಲದೆ ಹಾಗೂ ದೂರದೃಷ್ಟಿ ಕೊರತೆಯಿಂದ ಬಳಲುತ್ತಿರುವ ಕಾಂಗ್ರೆಸ್‌ ಸರ್ಕಾರದ ಬ್ರ್ಯಾಂಡ್ ಬೆಂಗಳೂರು ಯೋಜನೆ ರೂಪುಗೊಂಡ ಆರು ತಿಂಗಳ ಒಳಗೆ ಹಳ್ಳ ಹಿಡಿದಿದೆ. ಅನುದಾನ ಹಾಗೂ ಮೇಲುಸ್ತುವಾರಿ ಕೊರತೆಯಿಂದ ಬಳಲುತ್ತಿರುವ ಬ್ರ್ಯಾಂಡ್ ಬೆಂಗಳೂರು ಯೋಜನೆ ಈಗ ನೇಪಥ್ಯಕ್ಕೆ ಸರಿದಿದೆ.

ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಮಹಾನಗರ ಅಭಿವೃದ್ಧಿಗೆ ನೀಡಬೇಕಾದಷ್ಟು ಆರ್ಥಿಕ ನೆರವು ನೀಡಿಲ್ಲ. ಇದರಿಂದ ಸಿಲಿಕಾನ್ ಸಿಟಿ ತಗ್ಗು ಗುಂಡಿಗಳ ನಗರವಾಗಿ ಮಾರ್ಪಟ್ಟಿದೆ. ಇದರ ಕೀರ್ತಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌ ಅವರಿಗೂ ಸಲ್ಲಬೇಕು.

ಇದನ್ನೂ ಓದಿ: CM Siddaramaiah: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ

ಹೊಸ ಹೊಸ ಯೋಜನೆಗಳನ್ನು ಘೋಷಣೆ ಮಾಡುವುದು, ಬಳಿಕ ಮೈಮರೆಯುವುದು ಕಾಂಗ್ರೆಸ್‌ ಸರ್ಕಾರಕ್ಕೆ ಹೊಸದಲ್ಲ. ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮ ರೂಪಿಸಿದ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌ ಅವರೇ, ಮಳೆಯಿಂದಾಗಿ ಬೆಂಗಳೂರಿನ ಹಲವು ನಿವಾಸಿಗಳ ಮನೆ ಬಾಗಿಲಿಗೆ ಚರಂಡಿ ನೀರು ಬಂದಿದೆ. ಮೊದಲು ಬೆಂಗಳೂರಿಗರ ಸಮಸ್ಯೆ ಬಗೆಹರಿಸಿ ಕೃತಾರ್ಥರಾಗಿ ಎಂದು ಬಿಜೆಪಿ ವ್ಯಂಗ್ಯವಾಡಿದೆ.

Continue Reading

ರಾಜಕೀಯ

Prajwal Revanna Case: ಡಿಕೆಶಿ ಒಪ್ಪಿಕೊಂಡಿದ್ದಕ್ಕಿಂತ ಸಾಕ್ಷಿ ಬೇಕಾ ಸಿದ್ದರಾಮಯ್ಯ? ಸಿಎಂಗೆ ಎಚ್‌ಡಿಕೆ ಪ್ರಶ್ನೆ

Prajwal Revanna Case: ಈಗಿನ ಪೆನ್‌ಡ್ರೈವ್‌ ಕೇಸ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗಳನ್ನು ಗಮನಿಸಿದ್ದೇನೆ. ಸಿದ್ದರಾಮಯ್ಯ ಅವರ ಸಾಕ್ಷಿ ಕೇಳುತ್ತಿದ್ದಾರೆ. ಮಾಧ್ಯಮಗಳಿಗೆ ಬಿಡುಗಡೆ ಆಗಿರುವ ಸಂಭಾಷಣೆಯಲ್ಲಿ ಏನಿದೆ? ವಕೀಲ ದೇವರಾಜೇಗೌಡ ಹಾಗೂ ಮಾಜಿ ಸಂಸದ, ಶಿವರಾಮೇಗೌಡ ಹಾಗೂ ಡಿ.ಕೆ. ಶಿವಕುಮಾರ್‌ ನಡುವೆ ನಡೆದ ಸಂಭಾಷಣೆಯಲ್ಲಿ ಏನಿದೆ? ಇದ್ಯಾವುದನ್ನೂ ಇವರು ಸಾಕ್ಷಿಯಾಗಿ ಪರಿಗಣಿಸುವುದಿಲ್ಲವೇ? ಇದಕ್ಕಿಂತ ಮತ್ತೇನು ಸಾಕ್ಷಿಗಳು ಬೇಕು ನಿಮಗೆ? ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Prajwal Revanna Case HD Kumaraswamy slams DK Shivakumar
Koo

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಪೆನ್‌ಡ್ರೈವ್‌ ಹಂಚಿಕೆ ಹಿಂದೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಇದ್ದಾರೆ ಎಂಬುದಕ್ಕೆ ಇನ್ನೆಷ್ಟು ಸಾಕ್ಷಿ ಬೇಕು? ತಾವು ಅರ್ಧ ನಿಮಿಷಗಳ ಕಾಲ ಮಾತನಾಡಿದ್ದಾಗಿ ಸ್ವತಃ ಅವರೇ ಒಪ್ಪಿಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿ ಸಾಕ್ಷಿ ಏನಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಳುತ್ತಿದ್ದಾರೆ. ಇದು ಸರಿಯೇ? ಇದ್ದಕ್ಕಿಂತ ಸಾಕ್ಷಿ ಬೇಕಾ ಸಿದ್ದರಾಮಯ್ಯ ನಿಮಗೇ ಎಂದು ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಈಗಿನ ಪೆನ್‌ಡ್ರೈವ್‌ ಕೇಸ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗಳನ್ನು ಗಮನಿಸಿದ್ದೇನೆ. ಸಿದ್ದರಾಮಯ್ಯ ಅವರ ಸಾಕ್ಷಿ ಕೇಳುತ್ತಿದ್ದಾರೆ. ಮಾಧ್ಯಮಗಳಿಗೆ ಬಿಡುಗಡೆ ಆಗಿರುವ ಸಂಭಾಷಣೆಯಲ್ಲಿ ಏನಿದೆ? ವಕೀಲ ದೇವರಾಜೇಗೌಡ ಹಾಗೂ ಮಾಜಿ ಸಂಸದ, ಶಿವರಾಮೇಗೌಡ ಹಾಗೂ ಡಿ.ಕೆ. ಶಿವಕುಮಾರ್‌ ನಡುವೆ ನಡೆದ ಸಂಭಾಷಣೆಯಲ್ಲಿ ಏನಿದೆ? ಇದ್ಯಾವುದನ್ನೂ ಇವರು ಸಾಕ್ಷಿಯಾಗಿ ಪರಿಗಣಿಸುವುದಿಲ್ಲವೇ? ಇದಕ್ಕಿಂತ ಮತ್ತೇನು ಸಾಕ್ಷಿಗಳು ಬೇಕು ನಿಮಗೆ? ಎಂದು ಕೇಳಿದರು.

ಯಾರು ಯಾರೋ ಬರುತ್ತಿರುತ್ತಾರೆ. ಕೆಟ್ಟವರು ಬರ್ತಾರೆ, ಒಳ್ಳೆಯವರು ಬರ್ತಾರೆ ಅಂತ ಡಿ.ಕೆ. ಶಿವಕುಮಾರ್‌ ಅವರು ಹೇಳಿದ್ದಾರೆ. ವಕೀಲ ದೇವರಾಜೇಗೌಡರ ಜತೆಗೆ ಡಿಕೆಶಿ ಅರ್ಧ ನಿಮಿಷ ಮಾತನಾಡಿರುವುದು ಪ್ರಮುಖವಾದ ಅಂಶ ಅಲ್ವಾ ಇವರಿಗೆ? ಸಾಕ್ಷಿ ಕೊಡಿ ಸಾಕ್ಷಿ ಕೊಡಿ ಅಂತ ಹೇಳ್ತಾರೆ. ಎಸ್‌ಐಟಿ ತಂಡದಿಂದ 7 ಜನರನ್ನು ಬಂಧನ ಮಾಡಿ ಕರೆ ತಂದಿದ್ದಾರೆ. ಹಾಗಾದರೆ ಯಾವ ಸಾಕ್ಷಿ ಮೇಲೆ ಬಂಧನ ಮಾಡಿ ಕರೆ ತಂದಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು. ಹಲವಾರು ಜನರನ್ನು ಪ್ರತಿ ನಿತ್ಯ ಕರೆಯುವ ಎಸ್‌ಐಟಿ ಅಧಿಕಾರಿಗಳು ಈಗ ಮಾಡುತ್ತಿರುವುದು ಏನು? ಕಿರುಕುಳ ಅಲ್ಲವೇ? ಅವರಿಗೂ ಇದಕ್ಕೂ ಏನು ಸಂಬಂಧ ಇದೆ ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಈ ಪ್ರಕರಣದಲ್ಲಿ ಈಗ ಎಲ್ಲವೂ ಸ್ಪಷ್ಟವಾಗಿ ಕಣ್ಣಿಗೆ ಕಟ್ಟಿದ ಹಾಗೆ ಇದೆ. ಮಾಹಿತಿ ಏನು ಇದೆಯೋ ಎಲ್ಲವನ್ನು ಸಹ ಕೊಡಿ ಅಂತ ಕೇಳುತ್ತಾರೆ. ದೂರನ್ನು ಬಹಳ ಕಷ್ಟಪಟ್ಟು ಕೊಡಿಸಿದ್ದೇವೆ ಅಂತ ಹೇಳುತ್ತಾರೆ. ಅ ವ್ಯಕ್ತಿ ಜೊತೆ ಮಾತನಾಡಬೇಕಾದರೆ ಕಷ್ಟ ಪಟ್ಟು ಕೊಡಿಸಿದ್ದೇವೆ ಅಂತ ಹೇಳ್ತಾರೆ. ಇದಕ್ಕಿಂತಲೂ ಸಿಎಂ ಅವರಿಗೆ ಸಾಕ್ಷಿ ಬೇಕಾ..? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಏನೋ 6 ಪ್ರಶ್ನೆ ಇಟ್ಟಿದ್ದಾರಂತೆ..?

ಬಿಜೆಪಿಯವರಿಗೆ ಏನೋ ಪತ್ರ ಬರೆದಿದ್ದಾರಂತೆ, ಗೊತ್ತಿದ್ದು ಯಾಕೆ ಪ್ರಜ್ವಲ್‌ಗೆ ಟಿಕೆಟ್ ಕೊಟ್ಟಿರಿ? ಜೆಡಿಎಸ್ ಅವರು ಪ್ರಜ್ವಲ್ ಅವರನ್ನು ಸಸ್ಪೆಂಡ್ ಯಾಕೆ ಮಾಡಿದರು? ಈಗ 5- ಪ್ರಶ್ನೆ ಕೇಳಿದ್ದೇವೆ ಅಂತ ಹೇಳುತ್ತಾರೆ. ನಾನು ಪಾರ್ಟಿಯಿಂದ ವಜಾ ಮಾಡುವ ನಿರ್ಧಾರ ಕೈಗೊಂಡೆ. ಆದರೆ, ಸಿಎಂ ಹೇಳಿಕೆಯನ್ನು ನೋಡಿದರೆ ಆರೋಪಿಯನ್ನು ಅಪರಾಧಿಯನ್ನಾಗಿ ಮಾಡಿದ್ದಾರೆ. ಆದರೆ, ಪ್ರಜ್ವಲ್‌ ಇನ್ನೂ ಆರೋಪಿ ಸ್ಥಾನದಲ್ಲಿ ಇದ್ದಾನೆ. ಅಪರಾಧಿ ಅನ್ನುವುದನ್ನು ಕೋರ್ಟ್‌ ನಿರ್ಧಾರ ಮಾಡಲಿದೆ? ಅದೀಗ ಎಲ್ಲಿ ಸಾಬೀತಾಗಿದೆ? ಎಂದು ಎಚ್.ಡಿ. ಕುಮಾರಸ್ವಾಮಿ ಕೇಳಿದರು.

ಇದನ್ನೂ ಓದಿ: CM Siddaramaiah: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ

ನಿಮ್ಮ ಎಸ್‌ಐಟಿಯವರು ಹೇಳುವ ಪ್ರಕಾರ, ವಿಡಿಯೊಗಳಲ್ಲಿ ಪ್ರಜ್ವಲ್‌ ಮುಖ ಕಾಣುತ್ತಿಲ್ಲ. ಹಾಗಾದರೆ, ಅಪರಾಧಿ ಸ್ಥಾನದಲ್ಲಿ ಯಾಕೆ ನಿಲ್ಲಿಸಿದ್ದೀರಿ? ಈ ಆರೋಪ ಪ್ರಜ್ವಲ್‌ ಮೇಲೆ ಬಂದ ತಕ್ಷಣ ನಾವು ನೈತಿಕತೆ ಉಳಿಸಿಕೊಳ್ಳಲು ಮೇಲೆ ಸಸ್ಪೆಂಡ್ ಮಾಡಿದ್ದೇವೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

Continue Reading

ರಾಜಕೀಯ

CM Siddaramaiah: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ

CM Siddaramaiah: ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸುಳ್ಳು ಹೇಳುತ್ತಿದೆ. ನೀರಾವರಿಗೆ 18,000 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಅದು ಕಡಿಮೆಯೇ? ಏನೂ ಮಾಡಿಲ್ಲ ಎಂದರೆ ಏನು? ಗ್ಯಾರಂಟಿಗಳನ್ನು ಒಳಗೊಂಡಂತೆ 1 ಲಕ್ಷ 20 ಸಾವಿರ ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿರಿಸಿದೆ ಎಂದು ವಿವರಿಸಿದ್ದಾರೆ.

VISTARANEWS.COM


on

Cm Siddaramaiah hits out at BJP for Gaurantee Scheme
Koo

ಮಂಗಳೂರು: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಗ್ಯಾರಂಟಿ ಯೋಜನೆಗಳನ್ನು (Congress Guarantee Scheme) ಒಳಗೊಂಡಂತೆ 1 ಲಕ್ಷ 20 ಸಾವಿರ ಕೋಟಿ ರೂ.ಗಳನ್ನು ನಮ್ಮ ಸರ್ಕಾರ ಬಜೆಟ್‌ನಲ್ಲಿ ಮೀಸಲಿರಿಸಿದೆ. ಈ ಬಿಜೆಪಿಯವರಿಗೆ (BJP Karnataka) ಬಜೆಟ್‌, ಆರ್ಥಿಕತೆ ಬಗ್ಗೆ ಏನು ಗೊತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕಿಡಿಕಾರಿದರು.

ಮಂಗಳವಾರ ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಹೇಳಿಕೆಗೆ ತಿರುಗೇಟು ನೀಡಿದರು. ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿ ಸುಳ್ಳು ಹೇಳುತ್ತಿದೆ. ನೀರಾವರಿಗೆ 18,000 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಅದು ಕಡಿಮೆಯೇ? ಏನೂ ಮಾಡಿಲ್ಲ ಎಂದರೆ ಏನು? ಗ್ಯಾರಂಟಿಗಳನ್ನು ಒಳಗೊಂಡಂತೆ 1 ಲಕ್ಷ 20 ಸಾವಿರ ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿರಿಸಿದೆ ಎಂದು ವಿವರಿಸಿದರು.

ಬಿಜೆಪಿಯವರು ಬಜೆಟ್ ಓದುವುದಿಲ್ಲ, ಆರ್ಥಿಕತೆ ಬಗ್ಗೆ ತಿಳಿದೂ ಇಲ್ಲ

ಬಿಜೆಪಿಯವರು ಬಜೆಟ್ ಓದುವುದಿಲ್ಲ, ಆರ್ಥಿಕತೆ ಬಗ್ಗೆ ಅವರಿಗೆ ತಿಳಿದೂ ಇಲ್ಲ. ಅಭಿವೃದ್ಧಿ ಶೂನ್ಯ ಎನ್ನುತ್ತಾರೆ. ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು, ಆರ್ಥಿಕ, ಸಾಮಾಜಿಕ ಶಕ್ತಿ ಬಂದಾಗ ಮಾತ್ರ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ ಎಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್.‌ ಅಂಬೇಡ್ಕರ್ ಹೇಳಿದ್ದರು. ಈ ಬಗ್ಗೆ ಬಿಜೆಪಿಗೆ ತಿಳಿದಿದೆಯೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ನಿನ್ನೆ (ಮೇ 20) ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಮ್ಮ ಸಾಧನೆಗಳನ್ನು ಜನರ ಮುಂದಿರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Congress Guarantee: ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ಸರ್ಕಾರ ಮಾಡಿದ ಖರ್ಚು ಎಷ್ಟು ಸಾವಿರ ಕೋಟಿ?

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಮೇ 20ಕ್ಕೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ್ದು, ಸರ್ಕಾರದ ಸಾಧನೆಗಳ ಬಗ್ಗೆ ಕೈ ನಾಯಕರು ಸ್ಮರಿಸುತ್ತಿದ್ದಾರೆ. ವಿಧಾನಸಭೆ ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು (Congress Guarantee) ಜಾರಿ ಮಾಡಿರುವ ಕಾಂಗ್ರೆಸ್‌ ಸರ್ಕಾರ, ಪಂಚ ಗ್ಯಾರಂಟಿಗಳು ಜಾರಿಯಾದಾಗಿನಿಂದ ಈವರೆಗೆ ಬಳಕೆಯಾಗಿರುವ ಅನುದಾನದ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಇದರ ಒಟ್ಟು ಮೊತ್ತ 44816 ಕೋಟಿ ರೂಪಾಯಿ ಆಗಿದೆ.

ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಲ್ಲಿ 5 ಕೆಜಿ ಅಕ್ಕಿಯ ಜತೆಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ತಲಾ 170 ರೂ. ನೀಡುವ ʼಅನ್ನಭಾಗ್ಯ ಯೋಜನೆʼ, ಮನೆ ಯಜಮಾನಿಗೆ ಮಾಸಿಕ 2000 ರೂ. ಮಾಸಾಶನ ನೀಡುವ ʼಗೃಹ ಲಕ್ಷ್ಮಿ ಯೋಜನೆʼ, ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್‌ ಒದಗಿಸುವ ʼಗೃಹ ಜ್ಯೋತಿ ಯೋಜನೆʼ, ಮಹಿಳೆಯರಿಗೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ʼಶಕ್ತಿ ಯೋಜನೆʼಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದೆ. ಇನ್ನು ಐದನೇ ಗ್ಯಾರಂಟಿಯಾದ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3000 ರೂ., ಡಿಪ್ಲೊಮಾ ಮಾಡಿದವರಿಗೆ 1500 ರೂ. ನೀಡುವ ಯುವ ನಿಧಿ ಯೋಜನೆ ಅನುಷ್ಠಾನದ ಹಂತದಲ್ಲಿದೆ.

ಇದನ್ನೂ ಓದಿ | Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇನ್ನೊಬ್ಬ ಎಸ್‌ಪಿಪಿ ನೇಮಕ; ಹೈಕೋರ್ಟ್‌ನಲ್ಲಿ ವಾದಕ್ಕೆ ಸಜ್ಜಾದ ಸರ್ಕಾರ

ಗ್ಯಾರಂಟಿಗಳಿಗೆ ಆಗಿರುವ ವೆಚ್ಚ

ಗ್ಯಾರಂಟಿ ಯೋಜನೆಗಳು ಜಾರಿಯಾದಾಗಿನಿಂದ ಮೇ 19ರವರೆಗೆ ಬಳಕೆಯಾಗಿರುವ ಅನುದಾನದಲ್ಲಿ ಗೃಹ ಲಕ್ಷ್ಮಿ ಯೋಜನೆಗೆ 23,098 ಕೋಟಿ ರೂ., ಗೃಹಜ್ಯೋತಿ ಯೋಜನೆಗೆ 10,207 ಕೋಟಿ ರೂ., ಶಕ್ತಿ ಯೋಜನೆಗೆ 4,054 ಕೋಟಿ ರೂ., ಅನ್ನ ಭಾಗ್ಯ ಯೋಜನೆಗೆ 7,364 ಕೋಟಿ ರೂ. ಹಾಗೂ ಯುವ ನಿಧಿ ಯೋಜನೆಗೆ 93 ಕೋಟಿ ರೂ. ವೆಚ್ಚವಾಗಿದೆ. ಶಕ್ತಿ ಯೋಜನೆಯಲ್ಲಿ 211.5 ಕೋಟಿ ಟ್ರಿಪ್‌ಗಳಲ್ಲಿ ಮಹಿಳೆಯರು ಸರ್ಕಾರಿ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸಿದ್ದಾರೆ.

Continue Reading

ದೇಶ

Abhijit Gangopadhyay: ದೀದಿ ವಿರುದ್ಧ ಮಾಜಿ ಜಡ್ಜ್‌ ಅವಹೇಳನಕಾರಿ ಹೇಳಿಕೆ; 24 ಗಂಟೆಗಳ ಕಾಲ ಚುನಾವಣಾ ಪ್ರಚಾರಕ್ಕೆ ತಡೆ

Abhijit Gangopadhyay: ಅಭಿಜಿತ್ ಗಂಗೋಪಾಧ್ಯಾಯ ಅವರು ಮೇ 15 ರಂದು ಹಲ್ದಿಯಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ತೃಣಮೂಲ ಕಾಂಗ್ರೆಸ್ ನೀಡಿದ್ದ ದೂರಿನ ಆಧಾರದ ಗಂಗೋಪಾಧ್ಯಾಯ ವಿರುದ್ಧ ಚುನಾವಣಾ ಆಯೋಗ ಈ ಹಿಂದೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿತ್ತು. ಅಲ್ಲದೇ ಮೇ 20ರೊಳಗೆ ಪ್ರತಿಕ್ರಿಯಿಸುವಂತೆ ಸೂಚನೆ ನೀಡಿತ್ತು.

VISTARANEWS.COM


on

Abhijit Gangopadhyay
Koo

ನವದೆಹಲಿ:ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಾಜಿ ಹೈಕೋರ್ಟ್ ನ್ಯಾಯಾಧೀಶ ಮತ್ತು ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ(Abhijit Gangopadhyay) ಅವರಿಗೆ 24 ಗಂಟೆಗಳ ಕಾಲ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಕ್ಕೆ ಚುನಾವಣಾ ಆಯೋಗ(Election Commission of India) ತಡೆಯೊಡ್ಡಿದೆ. ಒಬ್ಬ ವ್ಯಕ್ತಿಯ ವೈಯಕ್ತಿಕ ಬದುಕಿನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

ಅಭಿಜಿತ್ ಗಂಗೋಪಾಧ್ಯಾಯ ಅವರು ಮೇ 15 ರಂದು ಹಲ್ದಿಯಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ತೃಣಮೂಲ ಕಾಂಗ್ರೆಸ್ ನೀಡಿದ್ದ ದೂರಿನ ಆಧಾರದ ಗಂಗೋಪಾಧ್ಯಾಯ ವಿರುದ್ಧ ಚುನಾವಣಾ ಆಯೋಗ ಈ ಹಿಂದೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿತ್ತು. ಅಲ್ಲದೇ ಮೇ 20ರೊಳಗೆ ಪ್ರತಿಕ್ರಿಯಿಸುವಂತೆ ಸೂಚನೆ ನೀಡಿತ್ತು.

ಇಸಿ ತನ್ನ ನೋಟಿಸ್‌ನಲ್ಲಿ ಗಂಗೋಪಾಧ್ಯಾಯ ಅವರ ಹೇಳಿಕೆಯು ಅಸಮರ್ಪಕ, ನ್ಯಾಯಸಮ್ಮತವಲ್ಲ. ಘನತೆಯನ್ನು ಮೀರಿ, ಕೆಟ್ಟ ಅಭಿರುಚಿಯಿಂದ ಹೇಳಿಕೆ ನೀಡಲಾಗಿದೆ ಮತ್ತು ಮೇಲ್ನೋಟಕ್ಕೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವುದು ಕಂಡುಬಂದಿದೆ ಎಂದು ಇಸಿ ಹೇಳಿತ್ತು.

ಗಂಗೋಪಾಧ್ಯಾಯ ಅವರು ತಮ್ಮ ತೀರ್ಪುಗಳಿಂದ ಜನಪ್ರಿಯರಾದವರು. ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಮೇ 25 ರಂದು ಮತದಾನ ನಡೆಯಲಿರುವ ಪಶ್ಚಿಮ ಬಂಗಾಳದ ತಮ್ಲುಕ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಗಂಗೋಪಾಧ್ಯಾಯ ಅವರನ್ನು ಕಣಕ್ಕಿಳಿಸಲಾಗಿದೆ.

ನಕಲಿ ವಿಡಿಯೋ ಎಂದ ಬಿಜೆಪಿ

ಇನ್ನು ಈ ತೃಣಮೂಲ ಕಾಂಗ್ರೆಸ್‌ ಆರೋಪಕ್ಕೆ ತಿರುಗೇಟು ಕೊಟ್ಟಿರುವ ಬಿಜೆಪಿ ಇದೊಂದು ನಕಲಿ ವಿಡಿಯೋ ಎಂದು ಹೇಳಿದೆ. ಪಕ್ಷದ ಘನತೆಗೆ ಚ್ಯುತಿ ತರುವ ಉದ್ದೇಶದಿಂದ ಟಿಎಂಸಿ ಈ ರೀತಿ ನಕಲಿ ವಿಡಿಯೋ ಬಿಡುಗಡೆ ಮಾಡಿದೆ. ಇದರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರಲು ಸಾಧ್ಯವೇ ಇಲ್ಲ ಎಂದು ಬಿಜೆಪಿ ವಕ್ತಾರ ಸಾಮಿಕ್‌ ಭಟ್ಟಾಚಾರ್ಯ ಹೇಳಿದ್ದಾರೆ.

ಇದನ್ನೂ ಓದಿ:Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!!

Continue Reading
Advertisement
Wedding Fashion
ಫ್ಯಾಷನ್18 mins ago

Wedding Fashion: ವೆಡ್ಡಿಂಗ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾಗಿವೆ ಈ ಮಿರಮಿರ ಮಿನುಗುವ ಲೆಹೆಂಗಾಗಳು!

Sambit Patra
ದೇಶ18 mins ago

‘ಪುರಿ ಜಗನ್ನಾಥನೇ ಮೋದಿಯ ಭಕ್ತ’ ಹೇಳಿಕೆ; ಪ್ರಾಯಶ್ಚಿತ್ತವಾಗಿ ಸಂಬಿತ್‌ ಪಾತ್ರಾ 3 ದಿನ ಉಪವಾಸ!

2024 Bajaj Pulsar F250
ಪ್ರಮುಖ ಸುದ್ದಿ22 mins ago

2024 Bajaj Pulsar F250 : ಬೆಲೆ ಏರಿಕೆ ಮಾಡದೇ ಹೊಸ ಪಲ್ಸರ್​ 250 ರಸ್ತೆಗಿಳಿಸಲಿದೆ ಬಜಾಜ್​​

Karnataka Rain
ಮಳೆ25 mins ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Cauvery Dispute
ಕರ್ನಾಟಕ42 mins ago

Cauvery Dispute: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸಲು CWMA ಸೂಚನೆ

Brand Bangalore and BJP Slams DK Shivakumar and Congress Government
ರಾಜಕೀಯ43 mins ago

Brand Bangalore: ಬಯಲಾಯ್ತು ಮುಖವಾಡ, ಬೀದಿಗೆ ಬಂತು ಬಂಡವಾಳ; ಬ್ರ್ಯಾಂಡ್‌ ಬೆಂಗಳೂರು ಬಗ್ಗೆ ಕುಟುಕಿದ ಬಿಜೆಪಿ

Eye Care Tips
ಆರೋಗ್ಯ48 mins ago

Eye Care Tips: ಕಣ್ಣಿನ ಸುಸ್ತಿಗೆ ನೀವು ಇಷ್ಟಾದರೂ ಮಾಡಿ, ಕಣ್ಣಿಗೆ ಅಗತ್ಯ ವಿಶ್ರಾಂತಿ ನೀಡಿ!

Turbulence
ಪ್ರಮುಖ ಸುದ್ದಿ60 mins ago

Turbulence: ಟರ್ಬುಲೆನ್ಸ್‌ಗೆ ತುತ್ತಾದ ವಿಮಾನ; ಒಬ್ಬ ಪ್ರಯಾಣಿಕ ಸಾವು, 30 ಮಂದಿಗೆ ಗಾಯ, ಇಲ್ಲಿದೆ ಭೀಕರ ವಿಡಿಯೊ

Used Car Sale
ಪ್ರಮುಖ ಸುದ್ದಿ1 hour ago

Used Car Sale : ನಿಮ್ಮ ಕಾರನ್ನು ಜಾಸ್ತಿ ಬೆಲೆಗೆ ಮಾರಬೇಕೇ? ಈ ಕೆಲವು ತಂತ್ರಗಳನ್ನು ಅನುಸರಿಸಿ

Summer Star Fashion
ಫ್ಯಾಷನ್1 hour ago

Summer Star Fashion: ಏನಿದು ನಟಿ ಅದಿತಿ ರಾವ್‌ ಹೈದರಿಯ ಕೋ-ಆರ್ಡ್ ಕೊಸ್ಟಾ ಪ್ಯಾಂಟ್‌ ಟ್ರೆಂಡ್‌?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ25 mins ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು7 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌