Parliament Session: ಪೈರಸಿಯಿಂದ ಚಿತ್ರೋದ್ಯಮಕ್ಕೆ 20,000 ಕೋಟಿ ರೂ. ನಷ್ಟ; ಸಂಸತ್‌ನಲ್ಲಿ ಕಳವಳ - Vistara News

ರಾಜಕೀಯ

Parliament Session: ಪೈರಸಿಯಿಂದ ಚಿತ್ರೋದ್ಯಮಕ್ಕೆ 20,000 ಕೋಟಿ ರೂ. ನಷ್ಟ; ಸಂಸತ್‌ನಲ್ಲಿ ಕಳವಳ

ಪೈರಸಿಯಿಂದಾಗಿ ಕಲಾವಿದರ ವರ್ಷಗಳ ಪರಿಶ್ರಮ ವ್ಯರ್ಥವಾಗುತ್ತಿದೆ. ಈ ವ್ಯಾಪಕ ಸಮಸ್ಯೆಯಿಂದ ಕಲಾವಿದರ ಸೃಜನಶೀಲ ಪ್ರಯತ್ನಗಳು ಮತ್ತು ಉದ್ಯಮದ ಆರ್ಥಿಕ ಸದೃಢತೆಗೆ ಧಕ್ಕೆಯಾಗುತ್ತಿದೆ. ಕೋವಿಡ್-19 ಸಾಂಕ್ರಾಮಿಕದ ಬಳಿಕ ಆನ್ಲೈನ್ ನಲ್ಲಿ ಪೈರಸಿಯು ಶೇ. 62 ಹೆಚ್ಚಳವಾಗಿದೆ ಎಂದು ರಾಜ್ಯಸಭೆಯಲ್ಲಿ (Parliament Session) ಸಂಸದ ರಾಘವ್ ಚಡ್ಡಾ ಕಳವಳ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Parliament Session
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನವದೆಹಲಿ: ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿನ (OTT platforms) ಪೈರಸಿಯನ್ನು (piracy on the film industry) ತಡೆಗಟ್ಟಲು ತುರ್ತು ಕ್ರಮ ಕೈಗೊಳ್ಳುವಂತೆ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ (MP Raghav Chadha) ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ (rajya sabha) ಮಾತನಾಡಿದ ಅವರು, ಚಲನಚಿತ್ರೋದ್ಯಮದ ಮೇಲೆ ಪೈರಸಿಯ ತೀವ್ರ ಆರ್ಥಿಕ ಪರಿಣಾಮವನ್ನು ಬೀರುತ್ತಿದೆ. ವಾರ್ಷಿಕ 20,000 ಕೋಟಿ ರೂ. ನಷ್ಟವಾಗುತ್ತಿದೆ ಎಂದು ತಿಳಿಸಿದರು.

ಪೈರಸಿಯಿಂದಾಗಿ ಕಲಾವಿದರ ವರ್ಷಗಳ ಪರಿಶ್ರಮ ವ್ಯರ್ಥವಾಗುತ್ತಿದೆ. ಈ ವ್ಯಾಪಕ ಸಮಸ್ಯೆಯಿಂದ ಕಲಾವಿದರ ಸೃಜನಶೀಲ ಪ್ರಯತ್ನಗಳು ಮತ್ತು ಉದ್ಯಮದ ಆರ್ಥಿಕ ಸದೃಢತೆಗೆ ಧಕ್ಕೆಯಾಗುತ್ತಿದೆ ಎಂದು ತಿಳಿಸಿದ ಚಡ್ಡಾ, ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲೇ ಪೈರಸಿಯು ಶೇ. 62 ಹೆಚ್ಚಳವಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು. ಟ್ವೀಟ್‌ನಲ್ಲೂ ಈ ಕುರಿತು ಮಾಹಿತಿ ಹಂಚಿಕೊಂಡ ಆಪ್ ನಾಯಕ ಪರಿಸ್ಥಿತಿಯ ಗಂಭೀರತೆ ಬಗ್ಗೆ ಎಲ್ಲರ ಗಮನ ಸೆಳೆಯುವ ಅಗತ್ಯವಿದೆ ಎಂದು ತಿಳಿಸಿದರು.


ಪೈರಸಿ ಎನ್ನುವುದು ಚಲನಚಿತ್ರೋದ್ಯಮದಲ್ಲಿ ಮತ್ತು ಈಗ ಒಟಿಟಿ ಪ್ರಪಂಚದಲ್ಲಿಯೂ ವ್ಯಾಪಕವಾಗಿರುವ ಪ್ಲೇಗ್‌ನಂತೆ ಹರಡುತ್ತಿದೆ. ಸಾಂಕ್ರಾಮಿಕದ ಸಮಯದಲ್ಲೇ ಆನ್‌ಲೈನ್ ಪೈರಸಿ ಶೇ. 62ರಷ್ಟು ಏರಿಕೆ ಕಂಡಿದೆ. ಒಂದು ವರ್ಷದ ಹಿಂದೆ ಸಿನಿಮಾಟೋಗ್ರಾಫಿಕ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದ್ದೇವೆ. ಆದರೆ ಇದು ಆನ್‌ಲೈನ್ ಪೈರಸಿ ವಿರುದ್ಧ ಯಾವುದೇ ಕಾರ್ಯವಿಧಾನವನ್ನು ಹೊಂದಿಲ್ಲ. ಇದು ಮಲ್ಟಿಪ್ಲೆಕ್ಸ್‌ಗಳಲ್ಲಿ ಆಂಟಿ ಕ್ಯಾಮ್ ರೆಕಾರ್ಡಿಂಗ್ ಮೇಲೆ ಹೆಚ್ಚಾಗಿ ಕೇಂದ್ರೀಕರಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Yogi Adityanath: ನೀರು ಎರಚಿ ಮಹಿಳೆಗೆ ಕಿರುಕುಳ ಕೇಸ್‌; ಇಡೀ ಪೊಲೀಸ್‌ ಚೌಕಿಯೇ ಅಮಾನತು; ಇನ್ಮುಂದೆ ʼಬುಲೆಟ್‌ ರೈಲ್‌ʼ ಓಡಿಸಲಾಗುತ್ತೆ ಎಂದು ವಾರ್ನಿಂಗ್‌

ಸೀಮಿತ ವ್ಯಾಪ್ತಿ ಹೊಂದಿರುವ ಈಗಿನ ಕಾನೂನನ್ನು ಟೀಕಿಸಿದ ಅವರು, ಇದು ಡಿಜಿಟಲ್ ಪೈರಸಿಯಿಂದ ಎದುರಾಗುವ ಸವಾಲುಗಳನ್ನು ಎದುರಿಸಲು ಸಮರ್ಥವಾಗಿಲ್ಲ. ಇದರಿಂದ ಪೈರಸಿ ಹಾವಳಿ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಈ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಸೂಕ್ತವಾದ ಕಾನೂನನ್ನು ಪರಿಚಯಿಸುವಂತೆ ಅವರು ಸರ್ಕಾರಕ್ಕೆ ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಯುದ್ಧವಿರಾಮ ಅನಿರ್ದಿಷ್ಠಾವಧಿಗೆ ವಿಸ್ತರಣೆ: ಡೋನಾಲ್ಡ್ ಟ್ರಂಪ್‌ ಘೋಷಣೆ

VISTARANEWS.COM


on

Donald trump

ವಾಷಿಂಗ್ಟನ್‌: ಅಮೆರಿಕಾ-ಇಸ್ರೇಲ್‌- ಇರಾನ್‌ ನಡುವಿನ ಯುದ್ಧ ವಿರಾಮಕ್ಕೆ ಇನ್ನೇನು ಕೆಲವೇ ಗಂಟೆಗಳು ಬಾಕಿ ಇವೆ. ಅಷ್ಟರೊಳಗೆ ಯುದ್ಧ ವಿರಾಮ ಅನಿರ್ದಿಷ್ಠಾವಧಿಗೆ ವಿಸ್ತರಣೆಯಾಗಿದೆ.


ಈ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ ನಲ್ಲಿ ಈ ವಿಷಯ ತಿಳಿಸಿರುವ ಅಮೆರಿಕಾ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಇರಾನ್‌ ನಾಯಕರು ಮತ್ತು ಅವರ ಪ್ರತಿನಿಧಿಗಳು ಏಕರೂಪದ ಪ್ರಸ್ತಾವನೆಯೊಂದಿಗೆ ಬರುವವರೆಗೆ ಯುದ್ಧ ವಿರಾಮ ಮುಂದುವರಿಸುತ್ತೇನೆ ಎಂದಿದ್ದಾರೆ.


ಶಾಂತಿ ಮಾತುಕತೆಯ ಮಧ್ಯಸ್ಥಿಕೆ ವಹಿಸಿರುವ ಪಾಕಿಸ್ತಾನ್‌ ಮನವಿಯನ್ನು ತಾನು ಒಪ್ಪಿಕೊಂಡಿರುವುದಾಗೆ ಟ್ರಂಪ್‌ ಸ್ಪಷ್ಟಪಡಿಸಿದ್ದಾರೆ. ಇರಾನ್‌ ಸರ್ಕಾರ ಗಂಭೀರವಾಗಿ ಹಾನಿಗೀಡಾಗಿದೆ. ಹೀಗಾಗಿ ಯುದ್ಧ ವಿರಾಮ ವಿಸ್ತರಿಸುತ್ತಿದ್ದೇನೆ ಹೊರತು ಇದು ಅನಿರಿಕ್ಷಿತವಲ್ಲ ಎಂದು ಹೇಳಿಕೊಂಡಿದ್ದಾರೆ.
ಕಳೆದ ಫೆ.28 ಅಮೆರಿಕಾ-ಇಸ್ರೇಲ್‌ ಜಂಟಿಯಾಗಿ ಇರಾನ್‌ ವಿರುದ್ಧ ಯುದ್ಧ ಆರಂಭಿಸಿದ್ದವು. ಈ ಹಿಂದೆ ಇರಾನ್‌ ನ ವಿದ್ಯುತ್‌ ಸ್ಥಾವರಗಳು, ಮತ್ತು ನಾಗರಿಕ ಮೂಲಸೌಕರ್ಯಗಳ ಮೇಲೆ ಬಾಂಬ್‌ ದಾಳಿ ನಡೆಸುವುದಾಗಿ ಟ್ರಂಪ್‌ ಗುಡುಗಿದ್ದರು. ಇದನ್ನು ಅಂತರ ರಾಷ್ಟ್ರೀಯ ಕಾನೂನಿನಲ್ಲಿ ಇದಕ್ಕೆ ಅವಕಾಶ ಇಲ್ಲ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಗೂ ಮತ್ತಿತರ ದೇಶಗಳ ಮುಖಂಡರು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

Continue Reading

Latest

ಸರ್ಕಾರಿ ನೌಕರರಿಗೆ ಸಂಬಳ ಕೊಡದ ಸರ್ಕಾರ: ವಿಜಯೇಂದ್ರ ವಾಗ್ದಾಳಿ

VISTARANEWS.COM


on

BJP State President B Y Vijayendra latest statement in bengaluru

ಬೆಂಗಳೂರು: ರಾಜ್ಯಸರ್ಕಾರದ ದುರಾಡಳಿತ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರ್ಥಿಕ ನೀತಿಗಳ ವೈಫಲ್ಯ ಹಾಗೂ ಆಡಳಿತದಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿರುವ ಪರಿಣಾಮವಾಗಿ ರಾಜ್ಯದ ಸರಿಸುಮಾರು 5 ಲಕ್ಷ ಸರಕಾರಿ ನೌಕರರ ಪೈಕಿ ಬಹುತೇಕ ನೌಕರರಿಗೆ ಏಪ್ರಿಲ್ ತಿಂಗಳ 22 ರವರೆಗೆ ರಾಜ್ಯ ಸರ್ಕಾರ ಸಂಬಳವನ್ನೇ ನೀಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.


ಈ ಕುರಿತು ಎಕ್ಸ್‌ ಖಾತೆಯಲ್ಲಿ ತಮ್ಮ ಹೇಳಿಕೆಯನ್ನು ಪೋಸ್ಟ್‌ ಮಾಡಿರುವ ಅವರು, ಕಳೆದ ವರ್ಷ ಎರಡು ತಿಂಗಳ ಅವಧಿಗೆ ಗ್ರಹಲಕ್ಷ್ಮಿ ಹಣವನ್ನೇ ನುಂಗಿ ಹಾಕಿದ ರಾಜ್ಯ ಸರ್ಕಾರ ಈ ವರ್ಷ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಕಾರಣಕ್ಕಾಗಿ ಮಾರ್ಚ್ ಅಂತ್ಯಕ್ಕೆ ಖಜಾನೆಯಲ್ಲಿದ್ದ ಹಣವನ್ನು ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂಚಿಕೆ ಮಾಡಿದೆ ಎಂದಿದ್ದಾರೆ.


ಪರಿಣಾಮವಾಗಿ ರಾಜ್ಯ ಸರ್ಕಾರದ 5 ಲಕ್ಷ ಸರ್ಕಾರಿ ನೌಕರರಿಗೆ ತಿಂಗಳು ಕಳೆಯುತ್ತಾ ಬಂದರೂ ಸಂಬಳ ಕೊಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ ಎಂದು ಟೀಕಿಸಿದ್ದಾರೆ.


ಮುಖ್ಯಮಂತ್ರಿಗಳ ಬದಲಾವಣೆ, ಸಂಪುಟ ಪುನರ್ ರಚನೆ, ಮುಸ್ಲಿಮರ ತುಷ್ಟಿಕರಣ ಹೀಗೆ ಹಲವು ಆಂತರಿಕ ಬಿಕ್ಕಟ್ಟಿನಿಂದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ವೈಯಕ್ತಿಕ ಪ್ರತಿಷ್ಠೆಯಲ್ಲಿ ಮುಳುಗಿ ಹೋಗಿದ್ದಾರೆ. ಇದರ ನೇರ ಪರಿಣಾಮ ರಾಜ್ಯದ ಜನರ ಮೇಲೆ ಉಂಟಾಗುತ್ತಿದೆ.


ಸರ್ಕಾರಿ ನೌಕರರಿಗೆ ಸಂಬಳವನ್ನೇ ಕೊಡಲು ಸಾಧ್ಯವಾಗದ ಈ ಸರಕಾರ ಈ ವರ್ಷ ಬಿರು ಬೇಸಿಗೆ ಹಾಗೂ ಬರದ ಛಾಯೆಯಲ್ಲಿ ಈಗಾಗಲೇ ಬಸವಳಿದು ಹೋಗಿರುವ ರಾಜ್ಯದ ಜನರನ್ನು ದೇವರೇ ಕಾಪಾಡಬೇಕು ಎಂದಿದ್ದಾರೆ.


ಪ್ರತಿಪಕ್ಷವಾಗಿ ಬಿಜೆಪಿ ಸರ್ಕಾರವನ್ನು ಬಡಿದೆಬ್ಬಿಸಿ ಕುಡಿಯುವ ನೀರಿಗೂ ಪರಿತಪಿಸುತ್ತಿರುವ ಜನ , ಜಾನುವಾರು ನೆರವಿಗೆ ಮುಂದಾಗುವಂತೆ ಹೋರಾಟ ನಡೆಸಲು ಬದ್ಧವಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

Continue Reading

Latest

ಪಶ್ಚಿಮ ಬಂಗಾಳದ ಮೊದಲ ಹಂತದ ಮತದಾನಕ್ಕೆ ಕಣ ಸಜ್ಜು

VISTARANEWS.COM


on

ಕೋಲ್ಕತ್ತಾ: ಆಡಳಿತರೂಢ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿಗೆ ಕಾರಣವಾಗಿರುವ ಪಶ್ಚಿಮಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕಣ ಸಜ್ಜಾಗಿದೆ. ಏಪ್ರಿಲ್ 23ರಂದು ಉತ್ತರಬಂಗಾಳ ಹಾಗೂ ದಕ್ಷಿಣದ ವಿವಿಧ ಜಿಲ್ಲೆಗಳ ಒಟ್ಟು 152 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ಈ ಹಂತದಲ್ಲಿ ಸುಮಾರು 3.60 ಕೋಟಿ ಮತದಾರರು ಮತಚಲಾಯಿಸಲು ಅರ್ಹರಾಗಿದ್ದಾರೆ. ಇವರಲ್ಲಿ ಸುಮಾರು 1.84 ಕೋಟಿ ಪುರುಷರು, 1.75 ಕೋಟಿ ಮಹಿಳೆಯರು ಹಾಗೂ 465 ತೃತೀಯ ಲಿಂಗ ಮತದಾರರು ಸೇರಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರದ ಪ್ಯಾರಾ ಮಿಲಿಟರಿ ಪಡೆಗಳು ಸೇರಿದಂತೆ ಭಾರಿ ಪೊಲೀಸ್‌ ಬಂದೋಬಸ್ತ್‌ ಆಯೋಜಿಸಲಾಗಿದೆ.
ಮೊದಲ ಹಂತದ ಮತದಾನಕ್ಕಾಗಿ 8,000ಕ್ಕೂ ಹೆಚ್ಚು ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಎಂದು ಗುರುತಿಸಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಾಲ್ದಾ, ಮುರ್ಷಿದಾಬಾದ್, ಉತ್ತರ ದಿನಾಜ್ಪುರ್, ಕೂಚ್ ಬಿಹಾರ್, ಬಿರ್ಭೂಮ್ ಹಾಗೂ ಬರ್ಧ್ವಾನ್ ಜಿಲ್ಲೆಗಳನ್ನು ವಿಶೇಷವಾಗಿ ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲಾಗಿದೆ.
ರಾಜ್ಯದಲ್ಲಿ ಸತತ ನಾಲ್ಕನೇ ಬಾರಿ ಅಧಿಕಾರದ ಗಾದಿಯನ್ನೇರಲು ತೃಣಮೂಲ ಕಾಂಗ್ರೆಸ್ ತೀವ್ರ ಪ್ರಯತ್ನ ನಡೆಸಿದ್ದರೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವನ್ನು ಕೆಡವಲು ಬಿಜೆಪಿ ಚುನಾವಣಾ ತಂತ್ರ ರೂಪಿಸಿದೆ.
ಎಸ್‌ ಐ ಆರ್‌ ಪ್ರಕ್ರಿಯೆ ಮೂಲಕ ಸರಿ ಸುಮಾರು 91 ಲಕ್ಷ ಮತದಾರರನ್ನು ಕೈಬಿಟ್ಟರುವುದು ತೀವ್ರ ವಿವಾದ ಸೃಷ್ಟಿಸಿದ್ದನ್ನು ಇಲ್ಲಿ ಗಮನಿಸಬಹುದು.

Continue Reading

Latest

ಆನ್‌ಲೈನ್‌ ನಲ್ಲಿ ಆರ್ಡರ್‌ ಮಾಡಿದರೆ ಮನೆಬಾಗಿಲಿಗೆ ಜಲಮಂಡಳಿ ಕುಡಿವ ನೀರು ಪೂರೈಕೆ

VISTARANEWS.COM


on

ಬೆಂಗಳೂರು: ಏ.21- ಬಿರುಬಿಸಿನ ಬೆಗೆ ಜನರನ್ನು ಹೈರಣಾಗಿಸಿದೆ. ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿಗೂ ತತ್ವಾರ ಸಹಜ. ಇದರ ಲಾಭ ಪಡೆಯಲು ಖಾಸಗಿ ಒಡೆತನದ ನೀರಿನ ಟ್ಯಾಂಕರ್‌ ಗಳು ಜನರ ಸುಲಿಗೆಗಿಳುವುದು ಮಾಮೂಲು, ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಜಲಮಂಡಳಿ ಟ್ಯಾಂಕರ್‌ ಮಾಫಿಯಾಗೆ ಬ್ರೇಕ್‌ ಹಾಕಲು ಮುಂದಾಗಿದೆ.

ಡಿಜಿಟಲ್‌ ಯುಗದಲ್ಲಿ ಎಲ್ಲವೂ ಆನ್‌ಲೈನ್‌ ಮೂಲಕ ಮನೆ ಬಾಗಿಲಿಗೆ ಸಿಗುತ್ತಿರುವಂತೆಯೇ, ಇದೀಗ ಕುಡಿಯುವ ನೀರೂ ಆ್ಯಪ್‌ ಮೂಲಕವೇ ಮನೆಗೆ ತಲುಪುವ ವ್ಯವಸ್ಥೆ ಮತ್ತೆ ಜಾರಿಗೆ ಬಂದಿದೆ. ಈ ಯೋಜನೆಯಡಿ ನಾಗರಿಕರು ತಮ್ಮ ಮೊಬೈಲ್‌ ಆ್ಯಪ್‌ ಮೂಲಕವೇ ಬೇಕಾದಷ್ಟು ಕಾವೇರಿ ನೀರನ್ನು ಬುಕ್‌ ಮಾಡಿ ಮನೆ ಬಾಗಿಲಿಗೆ ಪಡೆಯಬಹುದಾಗಿದೆ. ಆ್ಯಪ್‌ ಆಧಾರಿತ ನೀರು ಪೂರೈಕೆ ಸೇವೆಗೆ ಆರ್ಡರ್‌ ಮಾಡಿದರೆ ಮನೆ ಬಾಗಿಲಿಗೆ ನೇರ ಪೂರೈಕೆಯಾಗಲಿದೆ. . ಈ ಯೋಜನೆಗಾಗಿ 500ಕ್ಕೂ ಹೆಚ್ಚು ಟ್ಯಾಂಕರ್‌ಗಳ ಬಳಕೆ ಮಾಡಿಕೊಳ್ಳಲಾಗುತ್ತಿದೆ. 4,000 ರಿಂದ 12,000 ಲೀಟರ್‌ವರೆಗೆ ನೀರು ಪೂರೈಕೆ ಮಾಡಲಾಗುವುದು ಆನ್‌ಲೈನ್‌‍ ಅಥವಾ ನಗದು ಪಾವತಿ ಸೌಲಭ್ಯ ಕಲ್ಪಿಸಲಾಗಿದೆ.

ದರ ವಿವರ: 4,000 ಲೀಟರ್‌ ನೀರಿಗೆ 660 ರೂ.
5,000 ಲೀಟರ್‌ ಗೆ 700
6,000 ಲೀಟರ್‌ ಗೆ 740
12,000 ಲೀಟರ್‌ಗೆ 1,290
ಈ ದರಗಳು ಪ್ರಾರಂಭಿಕ 2 ಕಿಲೋಮೀಟರ್‌ ವ್ಯಾಪ್ತಿಗೆ ಅನ್ವಯಿಸುತ್ತವೆ. 4,000 ದಿಂದ 6,000 ಲೀಟರ್‌ ಟ್ಯಾಂಕರ್‌ಗಳಿಗೆ: 2 ಕಿಮೀ ನಂತರ ಪ್ರತಿ ಕಿಮೀಗೆ 50ರೂ. 12,000 ಲೀಟರ್‌ ಮತ್ತು ಅದಕ್ಕಿಂತ ಹೆಚ್ಚಿನ ಟ್ಯಾಂಕರ್‌ಗಳಿಗೆ 2 ಕಿಮೀ ನಂತರ ಪ್ರತಿ ಕಿಮೀಗೆ 70 ರೂ. ನೀಡಬೇಕಾಗುತ್ತದೆ ಎಂದು ಜಲಮಂಡಳಿ ಅಧ್ಯಕ್ಷ ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

Continue Reading
Advertisement
Latest3 hours ago

ಫರ್ಮಾನ್ ಖಾನ್ ಜೊತೆ ಮದುವೆಯಾದ ಒಂದೇ ತಿಂಗಳಲ್ಲಿ ಮೊನಾಲಿಸಾ ಭೋಸ್ಲೆ ಗರ್ಭಿಣಿ!

Latest3 hours ago

ಎಸ್ಎಸ್ಎಲ್‌ಸಿ: ಹಿಂದಿಗೆ ಈ ಬಾರಿ ಗ್ರೇಡ್‌ ಬದಲು ಅಂಕ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

Latest4 hours ago

ಇರಾನ್‌ ಸರಕು ಸಾಗಣೆ ಹಡಗಿನ ಮೇಲೆ ಗುಂಡಿನ ದಾಳಿ: ಅಮೆರಿಕ ವಿರುದ್ಧ ಆಕ್ರೋಶ

Latest4 hours ago

ಹೋಮ್‌ಸ್ಟೇನಲ್ಲಿ ಅತ್ಯಾಚಾರ: ಸುತ್ತೋಲೆ ಹೊರಡಿಸಲಾಗಿದೆ ಎಂದ ಸಚಿವ ಪರಮೇಶ್ವರ್‌

Latest5 hours ago

ಜೈಲಿನಲ್ಲಿದ್ದುಕೊಂಡೆ ವಿಧ್ವಂಸ ಕೃತ್ಯಕ್ಕೆ ಸಂಚು: 7 ಆರೋಪಿಗಳಿಗೆ ಕಠಿಣ ಶಿಕ್ಷೆ ಪ್ರಕಟಿಸಿದ ಎನ್‌ ಐ ಎ ಕೋರ್ಟ್

Latest5 hours ago

ಸಚಿವ ಪ್ರಲ್ಹಾದ ಜೋಶಿ ಮನವಿಗೆ ಸ್ಪಂದನೆ; “ಧಾರವಾಡ ಆಕಾಶವಾಣಿ ಕೇಂದ್ರ” ಸ್ಥಳಾಂತರಿಸದಿರಲು ನಿರ್ಧಾರ

Latest5 hours ago

ಚಿನ್ನ ಕಳ್ಳ ಸಾಗಣೆ: ನಟಿ ರನ್ಯಾರಾವ್‌ ಗೆ ಸಿಕ್ತು ಜಾಮೀನು

Latest5 hours ago

ತಮಿಳುನಾಡು: ಯಾರು ಹಿತವರು ಈ ಮೂವರೊಳಗೆ?:dmk; aiadmk; tvk

Latest6 hours ago

ಗೋಲ್ಡ್ ಸ್ಮಗ್ಲಿಂಗ್ ಹಗರಣ: ನಟಿ ರನ್ಯಾ ರಾವ್​​ಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ!

ಅವಿಭಾಗೀಕೃತ6 hours ago

“ನಿಮ್ಮಿಂದಲೇ ಟ್ರಾಫಿಕ್‌ ಜಾಮ್!‌ ಗೆಟ್‌ ಔಟ್‌” ಎಂದು ಸಚಿವರನ್ನು ನಿಂದಿಸಿದ ಮಹಿಳೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌