Site icon Vistara News

Photo | ʼಏನ್‌ ಸರ್‌, ಹೇಗಿದ್ದೀರಿ?ʼ: ವಿಧಾನಸೌಧದಲ್ಲಿ BSY-HDK, BSY-ಸಿದ್ದು ಮುಖಾಮುಖಿ

ಬೆಂಗಳೂರು: ವಿಧಾನಮಂಡಲ ಅಧಿವೇಶನದ ನಡುವೆ ಮೂರೂ ಪಕ್ಷದ ಪ್ರಮುಖ ನಾಯಕರು ಮೊಗಸಾಲೆಯಲ್ಲಿ ಪರಸ್ಪರರನ್ನು ಎದುರುಗೊಂಡು ಕುಶಲೋಪರಿ ಮಾತನಾಡಿಕೊಂಡರು.

ಸ್ಪೀಕರ್‌ ವಿಶ್ವೇಶ್ವರ ಕಾಗೇರಿಯವರು ಆಯೋಜಿಸಿದ್ದ ಸರ್ವಪಕ್ಷ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಬಿ.ಎಸ್‌. ಯಡಿಯೂರಪ್ಪ, ಸಿದ್ದರಾಮಯ್ಯ, ಎಚ್‌.ಡಿ. ಕುಮಾರಸ್ವಾಮಿ ಭಾಗವಹಿಸಿದ್ದರು.

ಹೊರಬಂದ ಕೂಡಲೆ ಯಡಿಯೂರಪ್ಪ ಹಾಗೂ ಎಚ್‌.ಡಿ. ಕುಮಾರಸ್ವಾಮಿ ಭೇಟಿಯಾದರು. ಉಭಯಕುಶಲೋಪರಿ ವಿಚಾರಿಸಿಕೊಂಡ ನಾಯಕರು, ಎಚ್‌.ಡಿ. ದೇವೇಗೌಡರ ಆರೋಗ್ಯದ ಕುರಿತು ಮಾತನಾಡಿದರು.

ಇದೇ ವೇಳೆ ಸಿದ್ದರಾಮಯ್ಯ ಸಹ ಸ್ಥಳಕ್ಕೆ ಆಗಮಿಸಿದರು. ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಕೆಲಹೊತ್ತು ಮಾತುಕತೆ ನಡೆಸಿದರು. ಆದರೆ ಸಿದ್ದರಾಮಯ್ಯ ಅವರೊಂದಿಗೆ ಯಾವುದೇ ಮಾತನಾಡದೆ ಎಚ್‌.ಡಿ. ಕುಮಾರಸ್ವಾಮಿ ಅಲ್ಲಿಂದ ತೆರಳಿದರು.

ಇದನ್ನೂ ಓದಿ | ಸಿದ್ದರಾಮೋತ್ಸವ | ಜನುಮ ದಿನಾಚರಣೆ ಬೇಡ ಎನ್ನುವ ಸಿದ್ದರಾಮಯ್ಯ ಸಿದ್ದರಾಮೋತ್ಸವಕ್ಕೆ ಒಪ್ಪಿದ್ದೇಕೆ?

Exit mobile version