ವಿಧವೆ ಅನ್ನೋದಕ್ಕೆ ರಾಷ್ಟ್ರಪತಿಯನ್ನು ಸಂಸತ್‌ ಭವನ ಉದ್ಘಾಟನೆಗೆ ಮೋದಿ ಆಹ್ವಾನಿಸಿಲ್ಲವೆಂದ ಕುಂ. ವೀರಭದ್ರಪ್ಪ - Vistara News

ಪ್ರಮುಖ ಸುದ್ದಿ

ವಿಧವೆ ಅನ್ನೋದಕ್ಕೆ ರಾಷ್ಟ್ರಪತಿಯನ್ನು ಸಂಸತ್‌ ಭವನ ಉದ್ಘಾಟನೆಗೆ ಮೋದಿ ಆಹ್ವಾನಿಸಿಲ್ಲವೆಂದ ಕುಂ. ವೀರಭದ್ರಪ್ಪ

New Parliament Building: ಈಚೆಗೆ ನವ ದೆಹಲಿಯಲ್ಲಿ ನಡೆದ ನೂತನ ಸಂಸತ್‌ ಭವನ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರನ್ನು ಆಹ್ವಾನಿಸದೇ ಇರುವುದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ಈಗ ಸಾಹಿತಿ ಕುಂ. ವೀರಭದ್ರಪ್ಪ ಮಾತನಾಡಿದ್ದು, ದ್ರೌಪದಿ ಮುರ್ಮು ಅವರು ವಿಧವೆ ಎಂಬ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Kum Veerabhadrappa and Droupadi murmu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಾಮರಾಜನಗರ: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi murmu) ಅವರು ವಿಧವೆ ಎಂಬ ಕಾರಣಕ್ಕಾಗಿ ನೂತನ ಸಂಸತ್ ಭವನದ (New Parliament Building) ಉದ್ಘಾಟನೆ ಸಮಾರಂಭಕ್ಕೆ ಅವರನ್ನು ಆಹ್ವಾನಿಸಿಲ್ಲ ಎಂದು ಸಾಹಿತಿ ಕುಂ. ವೀರಭದ್ರಪ್ಪ (Kum Veerabhadrappa) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಚಾಮರಾಜನಗರದ ರಂಗಮಂದಿರದಲ್ಲಿ ಗುರುವಾರ (ಜೂನ್‌ 8) ನಡೆದ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಕುಂ.ವೀರಭದ್ರಪ್ಪ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಸತ್ ಭವನದ ಉದ್ಘಾಟನೆಗೆ ಕರೆಯದಿರುವುದಕ್ಕೆ ಕಾರಣ ಇದೆ. ಶುಭ ಕಾರ್ಯಕ್ಕೆ ವಿಧವೆ ಬಂದರೆ ಅಮಂಗಲವೆಂಬ ಕಾರಣಕ್ಕೆ ಅವರನ್ನು ಕರೆದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: Textbook Revision: ಬುದ್ಧಿಜೀವಿ ಎಂದು ಹೇಳಿಕೊಂಡು ಕೆಲವರು ಓಡಾಡುತ್ತಿದ್ದಾರೆ!: ಸರ್ಕಾರಕ್ಕೆ ಹಿಗ್ಗಾಮುಗ್ಗಾ ಜಾಡಿಸಿದ ಮಾಜಿ ಸಚಿವ ಬಿ.ಸಿ. ನಾಗೇಶ್‌

ರಾಷ್ಟ್ರಪತಿ ಅವರನ್ನು ಕಾರ್ಯಕ್ರಮದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಹೊರಗಿಟ್ಟರು. ಸಂಸತ್ ದೇಶದ ಶಕ್ತಿ ಕೇಂದ್ರ, ಅದನ್ನು ರಾಷ್ಟ್ರಪತಿಯಾದವರು ಉದ್ಘಾಟಿಸಬೇಕಿತ್ತು. ಅಲ್ಲದೆ, ರಾಷ್ಟ್ರಪತಿಯವರು ಹಿಂದುಳಿದ ಜಾತಿಯವರಾಗಿರುವುದೂ ಅವರನ್ನು ಕರೆಯದೇ ಇರುವುದಕ್ಕೆ ಮತ್ತೊಂದು ಕಾರಣವಾಗಿದೆ. ಇದನ್ನು ಯಾರೂ ಸಹ ಪ್ರಶ್ನೆಯನ್ನೇ ಮಾಡಲಿಲ್ಲ ಎಂದು ಕುಂ. ವೀರಭದ್ರಪ್ಪ ಕಿಡಿಕಾರಿದರು.

ಹಿಂದಿನ ಪಠ್ಯದಲ್ಲಿ ಹುಸಿ ದೇಶಭಕ್ತಿ ಅಂದಿದ್ದ ಕುಂ. ವೀರಭದ್ರಪ್ಪ!

ಇದಕ್ಕೂ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿದ್ದ ಕುಂ. ವೀರಭದ್ರಪ್ಪ, ಹಿಂದಿನ ಸರ್ಕಾರ ಪಠ್ಯ ಪುಸ್ತಕದಲ್ಲಿ ಭಾರಿ ಲೋಪ ಎಸಗಿದೆ. ಕೆಲವು ಹುಸಿ ದೇಶಭಕ್ತರನ್ನು ಬಿಂಬಿಸುವ ಪ್ರಯತ್ನವನ್ನು ಬಿಜೆಪಿ ಸರ್ಕಾರ ಮಾಡಿದೆ. ರೋಹಿತ್ ಚಕ್ರತೀರ್ಥ ಎಂಬ ಅಪಕ್ವ ವ್ಯಕ್ತಿಯನ್ನು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಗೆ ಅಧ್ಯಕ್ಷನನ್ನಾಗಿ ಮಾಡಿತ್ತು. ಅವರು ಮಾಡಿದ ತಪ್ಪನ್ನು ಈಗ ಸರಿಪಡಿಸಬೇಕು. ಹೊಸ ಪಠ್ಯಪುಸ್ತಕ ಜಾರಿಗೆ ತರಬೇಕು ಎಂದು ಹೇಳಿದ್ದರು.

ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ಪರಿಷ್ಕರಣೆಗೊಂಡು ಮಕ್ಕಳು ಅಭ್ಯಾಸ ಮಾಡುತ್ತಿದ್ದ ಪಠ್ಯ ಅತ್ಯುತ್ತಮವಾಗಿತ್ತು. ಆ ಪುಸ್ತಕಗಳೇ ಮತ್ತೆ ಬರಬೇಕು. ಬಿಜೆಪಿಯವರು ಹೇಳುವುದು ಭಾರತೀಯತೆ ಅಲ್ಲ, ಅವರು ಹೇಳುವುದು ಹಿಂದುತ್ವವಾಗಿದೆ ಎಂದು ಕುಂ. ವೀರಭದ್ರಪ್ಪ ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ: Bengaluru Rain: ಡಿಕೆಶಿ ಅಪಾರ್ಟ್‌ಮೆಂಟ್ ಆದರೂ ಬುಲ್ಡೋಜರ್‌ ಪಕ್ಕಾ: ಡಿಸಿಎಂ ಡಿ.ಕೆ. ಶಿವಕುಮಾರ್‌ ಖಡಕ್‌ ಮಾತು

ದೇಶದ ಎಲ್ಲರ ಹಿತಾಸಕ್ತಿ ಕಾಪಾಡುವುದು ಭಾರತೀಯತೆಯಾಗಿದೆ. ಅವರು ಹೇಳುವ ಭಾರತೀಯತೆ ಒಪ್ಪಲು ಸಾಧ್ಯವಿಲ್ಲ. ಬಿಜೆಪಿಯವರು ಹೇಳುವುದು ಆರ್‌ಎಸ್ಎಸ್ ಪ್ರಣೀತ ಭಾರತೀಯತೆಯಾಗಿದೆ. ಅಂಬೇಡ್ಕರ್, ಗಾಂಧಿ ಆಶಯದ ಭಾರತೀಯತೆ ಅಲ್ಲ. ಹಳೇ ಪಠ್ಯಕ್ರಮವನ್ನು ಸರ್ಕಾರ ಜಾರಿಗೆ ತರಬೇಕು ಎಂದು ಸಾಹಿತಿ ಕುಂ. ವೀರಭದ್ರಪ್ಪ ಆಗ್ರಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Lok Sabha Election 2024: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಐಡಿ ರೇಡ್;‌ 2 ದಿನದಲ್ಲಿ 21.15 ಕೋಟಿ ರೂ. ಚಿನ್ನಾಭರಣ ವಶ!

Lok Sabha Election 2024: ಉದ್ಯಮಿಗಳು, ಚಿನ್ನಾಭರಣ ಮಳಿಗೆ ಮಾಲೀಕರ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹದಿನಾರು ಕಡೆ ಸೇರಿ ರಾಜ್ಯದ ಇಪ್ಪತ್ತಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿಯನ್ನು ನಡೆಸಲಾಗಿದೆ. ಆದರೆ, ಬೆಂಗಳೂರು ದಕ್ಷಿಣ ಕ್ಷೇತ್ರವೊಂದರಲ್ಲೇ ಕೋಟ್ಯಂತರ ರೂಪಾಯಿ ಮೌಲ್ಯದ ದಾಖಲೆಗಳು ಇಲ್ಲದ ಚಿನ್ನಾಭರಣಗಳು ಪತ್ತೆಯಾಗಿವೆ.

VISTARANEWS.COM


on

Lok Sabha Election 2024 ID raid in Bengaluru South Lok Sabha constituency 21.15 crore Gold ornaments seized in 2 days
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಹಣದ ಹರಿವು ಹೆಚ್ಚಳವಾಗಿರುತ್ತದೆ. ಕೆಲವು ಕಡೆ ಅಕ್ರಮಗಳು ನಡೆಯುವ ಸಾಧ್ಯತೆಗಳು ಇರುತ್ತವೆ. ಈ ಹಿನ್ನೆಲೆಯಲ್ಲಿ ಕಳೆದ ಎರಡು ದಿನದಲ್ಲಿ ಬೆಂಗಳೂರಿನ ಹದಿನಾರು ಕಡೆ ಐಟಿ ಅಧಿಕಾರಿಗಳು ದಾಳಿ (IT Raid) ನಡೆಸಿದ್ದರು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಪತ್ತೆಯಾಗಿವೆ. ಒಟ್ಟಾರೆ 21.15 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳಲಾಗಿದೆ.

ಉದ್ಯಮಿಗಳು, ಚಿನ್ನಾಭರಣ ಮಳಿಗೆ ಮಾಲೀಕರ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹದಿನಾರು ಕಡೆ ಸೇರಿ ರಾಜ್ಯದ ಇಪ್ಪತ್ತಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿಯನ್ನು ನಡೆಸಲಾಗಿದೆ. ಆದರೆ, ಬೆಂಗಳೂರು ದಕ್ಷಿಣ ಕ್ಷೇತ್ರವೊಂದರಲ್ಲೇ ಕೋಟ್ಯಂತರ ರೂಪಾಯಿ ಮೌಲ್ಯದ ದಾಖಲೆಗಳು ಇಲ್ಲದ ಚಿನ್ನಾಭರಣಗಳು ಪತ್ತೆಯಾಗಿವೆ.

2 ದಿನಗಳಲ್ಲಿ 16 ಕಡೆ ದಾಳಿ; ಸಿಕ್ಕ ಚಿನ್ನ, ನಗದು ಎಷ್ಟು?

1) 3 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ 4 ಕೆಜಿ 400 ಗ್ರಾಂ ಚಿನ್ನಾಭರಣ ಪತ್ತೆ
– ಶಂಕರಪುರ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

2) 3 ಕೋಟಿ 39 ಲಕ್ಷ ರೂಪಾಯಿ ಮೌಲ್ಯದ 4 ಕೆಜಿ 800 ಗ್ರಾಂ ಚಿನ್ನ ಪತ್ತೆ
ಶಾರದಾದೇವಿ ರಸ್ತೆ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

3) 2 ಕೋಟಿ 13 ಲಕ್ಷ ರೂಪಾಯಿ ಮೌಲ್ಯದ 3 ಕೆಜಿ 400 ಗ್ರಾಂ ಪತ್ತೆ
ಮರ್ಕೈಂಟಲ್ ಬ್ಯಾಂಕ್ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

4) 5 ಕೋಟಿ 33 ಲಕ್ಷ ರೂಪಾಯಿ ಮೌಲ್ಯದ 7 ಕೆಜಿ 598 ಗ್ರಾಂ ಚಿನ್ನ ಪತ್ತೆ
ಜಯನಗರ 3ನೇ ಬ್ಲಾಕ್ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

5) 84 ಲಕ್ಷ ಮೌಲ್ಯದ 1 ಕೆಜಿ 200 ಗ್ರಾಂ ಚಿನ್ನದ ಗಟ್ಟಿ ಪತ್ತೆ
ಸಾರಸ್ವತ ಬ್ಯಾಂಕ್, ಚಾಮರಾಜಪೇಟೆ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

6) 3 ಲಕ್ಷ 34 ಸಾವಿರ ರೂಪಾಯಿ ಮೌಲ್ಯದ 6.38 ಕ್ಯಾರೆಟ್ ವಜ್ರ ಪತ್ತೆ
ಅಂಚೆ ಕಚೇರಿ ಬಳಿ, ಬಸವನಗುಡಿ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

7) 3 ಲಕ್ಷದ 14 ಸಾವಿರ ಮೌಲ್ಯದ 5.99 ಕ್ಯಾರೆಟ್ ವಜ್ರ ಪತ್ತೆ
ಮಾತಾ ಶಾರದಾ ದೇವಿ ರಸ್ತೆ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

8) 6 ಕೋಟಿ 40 ಲಕ್ಷ ಮೌಲ್ಯದ 202.83 ಕ್ಯಾರೆಟ್ ವಜ್ರ ಪತ್ತೆ
ಜಯನಗರ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

ಇದನ್ನೂ ಓದಿ: VVPAT Verification: ಇವಿಯಂ-ವಿವಿಪ್ಯಾಟ್‌ ತಾಳೆ ಪ್ರಕರಣ; ಇಂದು ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಸೇರಿದಂತೆ ಹಲವು ಕಡೆ ದಾಳಿ ನಡೆದಿದ್ದು, ಈ ಕ್ಷೇತ್ರವೊಂದರಲ್ಲೇ ಸರಿ ಸುಮಾರು 21.15 ಕೋಟಿ ರೂಪಾಯಿಯಷ್ಟು ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಆದರೆ, ಎಷ್ಟು ನಗದು ಪತ್ತೆಯಾಗಿದೆ ಎಂಬ ಬಗ್ಗೆ ಇನ್ನೂ ಐಟಿ ಅಧಿಕಾರಿಗಳು ಮಾಹಿತಿಯನ್ನು ಹಂಚಿಕೊಂಡಿಲ್ಲ.

Continue Reading

ದೇಶ

Train Ticket Cancellation: ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ಆರ್‌ಎಸಿ ಟಿಕೆಟ್‌ ರದ್ದು ಪಡಿಸಿದರೆ ಇನ್ನು ಮುಂದೆ ಕೇವಲ 60 ರೂ. ಕಡಿತ

Train Ticket Cancellation: ಐಆರ್‌ಟಿಸಿ (Indian Railway Catering and Tourism Corporation) ವೆಬ್‌ಸೈಟ್‌ನಿಂದ ಕಾಯ್ದಿರಿಸಿದ ಆರ್‌ಎಸಿ (Reservation Against Cancellation) ಟಿಕೆಟ್‌ಗಳನ್ನು ರದ್ದುಗೊಳಿಸಲು ಕನಿಷ್ಠ ಶುಲ್ಕವನ್ನು ವಿಧಿಸಲು ರೈಲ್ವೇ ಇಲಾಖೆ ನಿರ್ಧರಿಸಿದೆ (Train Ticket Cancellation). ಇನ್ನು ಮುಂದೆ ಟಿಕೆಟ್‌ ಕ್ಯಾನ್ಸಲ್‌ ಮಾಡಿದರೆ ಪ್ರತಿ ಪ್ರಯಾಣಿಕರಿಂದ ಕೇವಲ 60 ರೂ. ಕಡಿತವಾಗಲಿದೆ ಎಂದು ಮೂಲಗಳು ತಿಳಿಸಿವೆ. ಗಿರಿದಿಹ್‌ನ ಸಾಮಾಜಿಕ ಮತ್ತು ಆರ್‌ಟಿಐ ಕಾರ್ಯಕರ್ತ ಸುನಿಲ್ ಕುಮಾರ್ ಖಂಡೇಲ್ವಾಲ್ ಅವರು ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ರೈಲ್ವೆ ಈ ನಿರ್ಧಾರ ಪ್ರಕಟಿಸಿದೆ.

VISTARANEWS.COM


on

Train Ticket Cancellation
Koo

ನವದೆಹಲಿ: ತನ್ನ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಗುಡ್‌ನ್ಯೂಸ್‌ ನೀಡಿದೆ. ಐಆರ್‌ಟಿಸಿ (Indian Railway Catering and Tourism Corporation) ವೆಬ್‌ಸೈಟ್‌ನಿಂದ ಕಾಯ್ದಿರಿಸಿದ ಆರ್‌ಎಸಿ (Reservation Against Cancellation) ಟಿಕೆಟ್‌ಗಳನ್ನು ರದ್ದುಗೊಳಿಸಲು ಕನಿಷ್ಠ ಶುಲ್ಕವನ್ನು ವಿಧಿಸಲು ರೈಲ್ವೇ ಇಲಾಖೆ ನಿರ್ಧರಿಸಿದೆ (Train Ticket Cancellation). ಇನ್ನು ಮುಂದೆ ಟಿಕೆಟ್‌ ಕ್ಯಾನ್ಸಲ್‌ ಮಾಡಿದರೆ ಪ್ರತಿ ಪ್ರಯಾಣಿಕರಿಂದ ಕೇವಲ 60 ರೂ. ಕಡಿತವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಗಿರಿದಿಹ್‌ನ ಸಾಮಾಜಿಕ ಮತ್ತು ಆರ್‌ಟಿಐ ಕಾರ್ಯಕರ್ತ ಸುನಿಲ್ ಕುಮಾರ್ ಖಂಡೇಲ್ವಾಲ್ ಅವರು ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ರೈಲ್ವೆ ಈ ನಿರ್ಧಾರ ಪ್ರಕಟಿಸಿದೆ. ಟಿಕೆಟ್‌ ರದ್ದು ಪಡಿಸುವಾಗ ವಿಧಿಸಲಾಗುವ ಅನಿಯಂತ್ರಿತ ಶುಲ್ಕದ ಬಗ್ಗೆ ಖಂಡೇಲ್ವಾಲ್ ಏಪ್ರಿಲ್ 12ರಂದು ರೈಲ್ವೆ ಆಡಳಿತಕ್ಕೆ ಪತ್ರ ಬರೆದಿದ್ದರು. ಐಆರ್‌ಟಿಸಿ ವೆಬ್‌ಸೈಟ್‌ ಮುಖಾಂತರ ಬುಕ್‌ ಮಾಡಲಾದ ವೈಟಿಂಗ್‌ ಟಿಕೆಟ್‌ ಖಾತರಿಯಾಗದಿದ್ದರೆ ರೈಲ್ವೇ ಇಲಾಖೆಯೇ ಸ್ವತಃ ಅದನ್ನು ರದ್ದು ಪಡಿಸುತ್ತದೆ. ಈ ವೇಳೆ ಸೇವಾ ಶುಲ್ಕದ ಹೆಸರಿನಲ್ಲಿ ಪಾವತಿಯ ಬಹು ದೊಡ್ಡ ಮೊತ್ತವನ್ನು ಕಡಿತ ಮಾಡಲಾಗುತ್ತದೆ ಎಂದು ಸುನಿಲ್ ಕುಮಾರ್ ತಮ್ಮ ಪತ್ರದಲ್ಲಿ ವಿವರಿಸಿದ್ದರು.

ಇದನ್ನು ಅವರು ಉದಾಹರಣೆ ಸಹಿತ ವಿವರಿಸಿದ್ದರು. ಪ್ರಯಾಣಿಕರೊಬ್ಬರು 190 ರೂ. ಪಾವತಿಸಿ ವೈಟಿಂಗ್‌ ಟಿಕೆಟ್ ಅನ್ನು ಕಾಯ್ದಿರಿಸಿದ್ದಾರೆ ಎಂದಿಟ್ಟುಕೊಳ್ಳೋಣ. ಈ ಟಿಕೆಟ್‌ ಖಾತರಿಯಾಗದಿದ್ದರೆ ರೈಲ್ವೇ ಕೇವಲ 95 ರೂ.ಗಳನ್ನು ಮಾತ್ರ ಮರು ಪಾವತಿಸುತ್ತದೆ. ಅಂದರೆ ಸುಮಾರು 100 ರೂ. ಕಡಿತವಾಗುತ್ತದೆ ಎಂದು ಸುನಿಲ್ ಕುಮಾರ್ ವಿವರಿಸಿದ್ದರು. ಈ ಹಿನ್ನೆಲೆಯಲ್ಲಿ ಐಆರ್‌ಟಿಸಿ ಇದೀಗ ಈ ಮಹತ್ವದ ಕ್ರಮ ಕೈಗೊಂಡಿದೆ.

ಐಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕರು ಏಪ್ರಿಲ್ 18ರಂದು ಸುನಿಲ್ ಕುಮಾರ್ ಅವರಿಗೆ ಈ ಹೊಸ ಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ. ರೈಲ್ವೇ ನಿಗದಿಪಡಿಸಿದ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸಲು ಐಆರ್‌ಟಿಸಿ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ʼʼಭಾರತೀಯ ರೈಲ್ವೆ ಸೂಚನೆಯ ಪ್ರಕಾರ ಇನ್ನು ಮುಂದೆ ವೈಟಿಂಗ್‌ ಟಿಕೆಟ್‌ ಕ್ಯಾನ್ಸಲ್‌ ಮಾಡಿದಾಗ ಕೇವಲ 60 ರೂ. ಸೇವಾ ಶುಲ್ಕವನ್ನು ವಿಧಿಸಲಾಗುತ್ತದೆʼʼ ಎಂದು ಅವರು ವಿವರಿಸಿದ್ದಾರೆ. ದೂರನ್ನು ಪರಿಶೀಲಿಸಿ ತ್ವರಿತ ಕ್ರಮ ಕೈಗೊಂಡಿದ್ದಕ್ಕಾಗಿ ರೈಲ್ವೆ ಆಡಳಿತ ಮಂಡಳಿಗೆ ಸುನಿಲ್ ಕುಮಾರ್ ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ: Bullet Train: ಬುಲೆಟ್‌ ರೈಲು ಓಡೋದು ಯಾವಾಗ? ರೈಲ್ವೆ ಸಚಿವ ಹೇಳೋದಿಷ್ಟು

1230 ಕೋಟಿ ರೂ. ಆದಾಯ!

ಕಳೆದ ಮೂರು ವರ್ಷಗಳಲ್ಲಿ ರೈಲ್ವೇಯು ವೈಟಿಂಗ್‌ ಟಿಕೆಟ್‌ಗಳ ರದ್ದತಿಯಿಂದ ಬರೋಬ್ಬರಿ 1,230 ಕೋಟಿ ರೂ. ಆದಾಯ ಗಳಿಸಿದೆ ಎನ್ನುವ ವಿಚಾರ ಅಂಕಿ-ಅಂಶಗಳಿಂದ ತಿಳಿದು ಬಂದಿದೆ.

Continue Reading

ಪ್ರಮುಖ ಸುದ್ದಿ

Wealth Redistribution: ಸಂಪತ್ತು ಮರು ಹಂಚಿಕೆ ವಿವಾದದ ಬೆಂಕಿಗೆ ತುಪ್ಪ ಸುರಿದ ಸ್ಯಾಮ್ ಪಿತ್ರೊಡಾ; ಕಾಂಗ್ರೆಸ್‌ಗೆ ಫಜೀತಿ!

Wealth Redistribution: ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಸಂಪತ್ತು ಮರುಹಂಚಿಕೆಗೆ ಯೋಜನೆ ಹಾಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದರು. ಇದಾದ ಬಳಿಕ ಹೇಳಿಕೆ ನೀಡಿದ್ದ ಕಾಂಗ್ರೆಸ್‌ ನಾಯಕ ಸ್ಯಾಮ್ ಪಿತ್ರೋಡಾ, ಅಮೆರಿಕದಲ್ಲಿ ವಿಧಿಸಲಾಗುತ್ತಿರುವ ಪಿತ್ರಾರ್ಜಿತ ತೆರಿಗೆಯ ಉದಾಹರಣೆಯನ್ನು ಎತ್ತಿದ್ದರು.

VISTARANEWS.COM


on

sam pitroda narendra modi
Koo

ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ನೀಡಿರುವ ಒಂದು ಟಕ್ಕರ್‌ಗೆ ಕಾಂಗ್ರೆಸ್‌ ಪಕ್ಷ ವಿಲವಿಲ ಅನ್ನುತ್ತಿದೆ. ʼಸಂಪತ್ತು ಮರು ಹಂಚಿಕೆ (Wealth Redistribution) ಯೋಜನೆʼ ಬಗ್ಗೆ ಕಾಂಗ್ರೆಸ್‌ (Congress) ನಾಯಕ ನೀಡಿದ ಹೇಳಿಕೆಯಿಂದ ಸ್ವತಃ ಆ ಪಕ್ಷ ನಾಲಿಗೆ ಕಚ್ಚಿಕೊಳ್ಳುವಂತಾಗಿದೆ. ಕಾಂಗ್ರೆಸ್ ಸಂಪತ್ತಿನ ಮರುಹಂಚಿಕೆಗೆ ಯೋಜಿಸುತ್ತಿದೆ ಎಂಬ ಬಿಜೆಪಿ (BJP) ಆರೋಪಗಳ ಹಿನ್ನೆಲೆಯಲ್ಲಿ ಪಕ್ಷದ ಹಿರಿಯ ನಾಯಕ ಸ್ಯಾಮ್ ಪಿತ್ರೋಡಾ (Sam Pitroda) ನೀಡಿರುವ ಹೇಳಿಕೆ ವಿವಾದದ ಬೆಂಕಿಗೆ ಇನ್ನಷ್ಟು ತುಪ್ಪ ಸುರಿದಿದೆ.

ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಸಂಪತ್ತು ಮರುಹಂಚಿಕೆಗೆ ಯೋಜನೆ ಹಾಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದರು. ಇದಾದ ಬಳಿಕ ಹೇಳಿಕೆ ನೀಡಿದ್ದ ಕಾಂಗ್ರೆಸ್‌ ನಾಯಕ ಸ್ಯಾಮ್ ಪಿತ್ರೋಡಾ, ಅಮೆರಿಕದಲ್ಲಿ ವಿಧಿಸಲಾಗುತ್ತಿರುವ ಪಿತ್ರಾರ್ಜಿತ ತೆರಿಗೆಯ ಉದಾಹರಣೆಯನ್ನು ಎತ್ತಿದ್ದರು.

“ನಾನು ಟಿವಿಯಲ್ಲಿನ ನನ್ನ ಸಾಮಾನ್ಯ ಸಂಭಾಷಣೆಯಲ್ಲಿ ಕೇವಲ ಉದಾಹರಣೆಯಾಗಿ US ನಲ್ಲಿ ಪಿತ್ರಾರ್ಜಿತ ತೆರಿಗೆಯನ್ನು ಪ್ರಸ್ತಾಪಿಸಿದ್ದೇನೆ. ನಾನು ಸತ್ಯಗಳನ್ನು ಉಲ್ಲೇಖಿಸಲು ಸಾಧ್ಯವಿಲ್ಲವೇ? ಜನರು ಚರ್ಚಿಸಲು ಮತ್ತು ಚರ್ಚಿಸಬೇಕಾದ ರೀತಿಯ ಸಮಸ್ಯೆಗಳೆಂದು ನಾನು ಹೇಳಿದೆ. ಇದು ಯಾವುದೇ ನೀತಿಯೊಂದಿಗೆ ಯಾವುದೇ ಸಂಬಂಧವಿಲ್ಲ. ಕಾಂಗ್ರೆಸ್ ಸೇರಿದಂತೆ ಪಕ್ಷ,” ಎಂದು ಅವರು ಹೇಳಿದರು. “55% ತೆಗೆದುಕೊಳ್ಳುವುದಾಗಿ ಯಾರು ಹೇಳಿದರು? ಭಾರತದಲ್ಲಿ ಇಂತಹದನ್ನು ಮಾಡಬೇಕು ಎಂದು ಯಾರು ಹೇಳಿದರು? ಬಿಜೆಪಿ ಮತ್ತು ಮಾಧ್ಯಮಗಳು ಏಕೆ ಗಾಬರಿಗೊಂಡಿವೆ?”

ಪ್ರಧಾನಿ ಹೇಳಿದ್ದೇನು?

ಪ್ರಧಾನಿಯವರು ತಮ್ಮ ಚುನಾವಣಾ ಭಾಷಣದಲ್ಲಿ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಜನತೆಯ ಸಂಪತ್ತನ್ನು ಮುಸ್ಲಿಮರಿಗೆ ಮರು ಹಂಚಿಕೆ ಮಾಡುವ ಸಾಧ್ಯತೆಯಿದೆ ಎಂದು ಹೇಳಿದ್ದರು. ಮುಸ್ಲಿಮರು ಈ ದೇಶದ ಆಸ್ತಿಯ ಮೇಲೆ ಪ್ರಥಮ ಆದ್ಯತೆ ಹೊಂದಿದ್ದಾರೆ ಎಂದು ಹೇಳಿದ್ದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಹೇಳಿಕೆಯನ್ನು ಅವರು ಉಲ್ಲೇಖಿಸಿದ್ದರು. ದಲಿತರ ಮೀಸಲಾತಿ ಕೋಟಾದಿಂದ ಒಂದಷ್ಟು ಭಾಗವನ್ನು ಮುಸ್ಲಿಮರಿಗಾಗಿ ಕಸಿಯುವ ಯೋಜನೆಯನ್ನು ಕಾಂಗ್ರೆಸ್‌ ಹೊಂದಿತ್ತು ಎಂದು ಅವರು ಆರೋಪಿಸಿದ್ದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿದ್ದ ಸಾಮಾಜಿಕ ಆರ್ಥಿಕ ಮತ್ತು ಜಾತಿ ಜನಗಣತಿಯ ಬಗ್ಗೆ ಗುರಿಯಾಗಿಸಿದ್ದರು. ಇದಾದ ಬಳಿಕ ದೇಶದಲ್ಲಿ ವಾದವಿವಾದ ಹುಟ್ಟಿಕೊಂಡಿದ್ದು, ಕಾಂಗ್ರೆಸ್‌ ಇದು ಸುಳ್ಳು ಆರೋಪ ಎಂದು ಪ್ರಧಾನಿಯನ್ನು ಟೀಕಿಸಿತ್ತು.

ಸ್ಯಾಮ್ ಪಿತ್ರೋಡಾ ಹೇಳಿದ್ದೇನು?

ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷರಾದ ಪಿತ್ರೋಡಾ, ಮೋದಿ ಹೇಳಿಕೆಯನ್ನು ಟೀಕಿಸಿದ್ದಾರೆ. “ಯಾವ ಪ್ರಧಾನಿಯೂ ಈ ರೀತಿ ಮಾತನಾಡುವುದಿಲ್ಲ. ಮೊದಲು ಇದು AI ರಚಿತವಾದ ವೀಡಿಯೊ ಎಂದು ನಾನು ಭಾವಿಸಿದೆವು. ಪ್ರಧಾನಿ ಭಾರತೀಯ ಪ್ರೇಕ್ಷಕರನ್ನು ಮೂರ್ಖರೆಂದು ಭಾವಿಸಿದ್ದಾರೆ. ಅವರು ಕಾನೂನಿಗಿಂತ ಮೇಲಲ್ಲ. ಕಾಂಗ್ರೆಸ್‌ನ ಪ್ರಣಾಳಿಕೆಯು ತುಂಬಾ ಚೆನ್ನಾಗಿ ರಚಿಸಲ್ಪಟ್ಟಿದೆ. ಅವರು ನಿಮ್ಮ ಚಿನ್ನ ಮತ್ತು ಮಂಗಳಸೂತ್ರವನ್ನು ಕದಿಯುತ್ತಾರೆ ಎಂದು ಹೇಳುವುದು ಅವರು ಕಟ್ಟಿದ ಕಥೆ. ಅವರು ಭಯಗೊಂಡಿದ್ದಾರೆ” ಎಂದು ಪಿತ್ರೋಡಾ ಹೇಳಿದ್ದಾರೆ.

“ಕಾಂಗ್ರೆಸ್ ಯಾವಾಗಲೂ ಆರ್ಥಿಕ ಪಿರಮಿಡ್‌ನ ಕೆಳಭಾಗದಲ್ಲಿರುವ ಜನರ ಮೇಲೆ ಕೇಂದ್ರೀಕರಿಸಿದೆ. ಅವರು ಒಬಿಸಿ, ಮುಸ್ಲಿಮರು, ದಲಿತರು ಅಥವಾ ಬುಡಕಟ್ಟು ಜನಾಂಗದವರು ಇರಬಹುದು. ಕೋಟ್ಯಧಿಪತಿಗಳಿಗೆ ನಮ್ಮ ಸಹಾಯ ಬೇಕಾಗಿಲ್ಲ. ಬಡವರಿಗೆ ನಮ್ಮ ಸಹಾಯ ಬೇಕು. ಕಳೆದ 10 ವರ್ಷಗಳಲ್ಲಿ ಅಸಮಾನತೆ ಗಣನೀಯವಾಗಿ ಹೆಚ್ಚಾಗಿದೆ” ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಅವರು ಅಮೆರಿಕದಲ್ಲಿರುವ ಸಂಪತ್ತಿನ ಮರುಹಂಚಿಕೆಯ ನಿಯಮವನ್ನು ಉಲ್ಲೇಖಿಸಿದ್ದರು. “ಅಮೆರಿಕದಲ್ಲಿ ಪಿತ್ರಾರ್ಜಿತ ತೆರಿಗೆ ಇದೆ. ಒಬ್ಬನು 100 ಮಿಲಿಯನ್ USD ಮೌಲ್ಯದ ಸಂಪತ್ತನ್ನು ಹೊಂದಿದ್ದರೆ ಅವನು ಸತ್ತಾಗ ಕೇವಲ 45 ಪ್ರತಿಶತವನ್ನು ತನ್ನ ಮಕ್ಕಳಿಗೆ ವರ್ಗಾಯಿಸಬಹುದು. 55 ಪ್ರತಿಶತವನ್ನು ಸರ್ಕಾರವು ಹೊಂದುತ್ತದೆ. ಅದು ಆಸಕ್ತಿದಾಯಕ ಕಾನೂನು. ನಿಮ್ಮ ಪೀಳಿಗೆಯಲ್ಲಿ ನೀವು ಸಂಪತ್ತನ್ನು ಸಂಪಾದಿಸಿದ್ದೀರಿ. ಮತ್ತು ನೀವು ಈಗ ಹೋಗುವಾಗ, ನಿಮ್ಮ ಸಂಪತ್ತನ್ನು ಸಾರ್ವಜನಿಕರಿಗೆ ಬಿಡಬೇಕು. ಎಲ್ಲವನ್ನೂ ಅಲ್ಲ, ಅದರಲ್ಲಿ ಅರ್ಧದಷ್ಟು, ಇದು ನ್ಯಾಯೋಚಿತವಾಗಿದೆ” ಎಂದು ಪಿತ್ರೋಡಾ ಹೇಳಿದ್ದರು.

ಪಿತ್ರೋಡಾ ಹೇಳಿಕೆಗಳಿಂದ ಕಾಂಗ್ರೆಸ್‌ ಪಕ್ಷ ದೂರ ಉಳಿದಿದೆ. “ಅದು ಪಕ್ಷದ ನೀತಿಯನ್ನು ಪ್ರತಿಬಿಂಬಿಸುವುದಿಲ್ಲ” ಎಂದು ಹೇಳಿದೆ. ಪಿತ್ರೋಡಾ ಅವರ ಕಾಮೆಂಟ್‌ಗಳು “ಸಂವೇದನಾಶೀಲವಾಗಿವೆ” ಹಾಗೂ “ಪ್ರಧಾನಿ ನರೇಂದ್ರ ಮೋದಿಯವರ ದುರುದ್ದೇಶಪೂರಿತ ಮತ್ತು ಚೇಷ್ಟೆಯ ಚುನಾವಣಾ ಪ್ರಚಾರದಿಂದ ಗಮನವನ್ನು ಬೇರೆಡೆ ಸೆಳೆಯುವ ಗುರಿಯನ್ನು ಹೊಂದಿವೆ” ಎಂದು ಕಾಂಗ್ರೆಸ್‌ ಮುಖಂಡ ಜೈರಾಮ್ ರಮೇಶ್ ಸಾಮಾಜಿಕ ಮಾಧ್ಯಮ ಸಂದೇಶದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: Narendra Modi: ಕಾಂಗ್ರೆಸ್‌ ರಾಜ್ಯದಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾಪರಾಧ; ರಾಜಸ್ಥಾನದಲ್ಲಿ ಮೋದಿಯಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ತರಾಟೆ

Continue Reading

ವಿಜ್ಞಾನ

Zero Shadow Day: ಇಂದು ಬೆಂಗಳೂರಿನಲ್ಲಿ ನೆರಳೇ ಮೂಡುವುದಿಲ್ಲ; ಅದ್ಯಾಕೆ? ಏನಿದು ʼಶೂನ್ಯ ನೆರಳಿನ ದಿನʼ ?

Zero Shadow Day: ಎಲ್ಲರೂ ನಮ್ಮನ್ನು ತೊರೆದರೂ ನೆರಳು ಯಾವತ್ತೂ ನಮ್ಮನ್ನು ಬಿಟ್ಟು ಹೋಗುವುದಿಲ್ಲ ಎನ್ನುವ ಮಾತಿದೆ. ಆದರೆ ಈ ಮಾತು ಇಂದು ಕೆಲವು ನಿಮಿಷಗಳ ಮಟ್ಟಿಗೆ ಬೆಂಗಳೂರಿಗರ ಪಾಲಿಗೆ ಸುಳ್ಳಾಗಲಿದೆ. ಅಂದರೆ ಮಧ್ಯಾಹ್ನ ನೆರಳೇ ಮೂಡುವುದಿಲ್ಲ. ಇದನ್ನು ʼಶೂನ್ಯ ನೆರಳಿನ ದಿನʼ ಎನ್ನುತ್ತಾರೆ. ಇದು ಯಾಕೆ ಸಂಭವಿಸುತ್ತದೆ? ಏನಿದರ ವೈಶಿಷ್ಟ್ಯ? ಮುಂತಾದ ವಿವರ ಇಲ್ಲಿದೆ.

VISTARANEWS.COM


on

Zero Shadow Day
Koo

ಬೆಂಗಳೂರು: ಇಂದು (ಏಪ್ರಿಲ್‌ 24) ಬೆಂಗಳೂರಿಗರು ವಿಶಿಷ್ಟ ವಿದ್ಯಾಮಾನವೊಂದಕ್ಕೆ ಸಾಕ್ಷಿಯಾಗಲಿದ್ದಾರೆ. ಪ್ರತಿ ಕ್ಷಣವೂ ನಿಮ್ಮೊಂದಿಗೆ ಇರುವ ನೆರಳು ಕೆಲ ಹೊತ್ತು ನಿಮ್ಮನ್ನು ಬಿಟ್ಟು ದೂರ ಹೋಗಲಿದೆ. ಅಂದರೆ ಯಾವುದೇ ಲಂಬ ವಸ್ತುವೂ ನೆರಳನ್ನು ಹೊಂದಿರುವುದಿಲ್ಲ! ಇದನ್ನೇ ʼಶೂನ್ಯ ನೆರಳಿನ ದಿನʼ (Zero Shadow Day) ಎಂದು ಕರೆಯುತ್ತಾರೆ. ಇದು ಹೇಗೆ ರೂಪುಗೊಳ್ಳುತ್ತದೆ? ಏನಿದರ ವೈಶಿಷ್ಟ್ಯ ? ಮುಂತಾದ ನಿಮ್ಮ ಕುತೂಹಲಗಳಿಗೆ ಇಲ್ಲಿದೆ ಉತ್ತರ.

ಮಧ್ಯಾಹ್ನ 12.17ರಿಂದ 12.23ರ ನಡುವೆ ಈ ವಿದ್ಯಾಮಾನ ಸಂಭವಿಸಲಿದ್ದು, ಈ ವೇಳೆ ಸೂರ್ಯನ ಸ್ಥಾನವು ನಿಖರವಾಗಿ ಉತ್ತುಂಗದಲ್ಲಿರುತ್ತದೆ. ಹೀಗಾಗಿ ಎಲ್ಲ ವಸ್ತುಗಳ ನೆರಳು ಕಣ್ಮರೆಯಾಗುತ್ತದೆ. ಬೆಂಗಳೂರಿನ ಕೋರಮಂಗಲದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (IIA) ಈ ಸಂದರ್ಭಕ್ಕಾಗಿ ತನ್ನ ಕ್ಯಾಂಪಸ್‌ನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿದೆ.

ಏನಿದು ʼಶೂನ್ಯ ನೆರಳಿನ ದಿನʼ ?

ಸೂರ್ಯನು ಮಧ್ಯಾಹ್ನ ನಡು ನೆತ್ತಿಯ ಮೇಲಿರುವಾಗ ಲಂಬವಾಗಿರುವ ವಸ್ತುವಿಗೆ ಸ್ವಲ್ಪ ಮಾತ್ರವಾದರೂ ನೆರಳು ಇದ್ದೇ ಇರುತ್ತದೆ. ಆದರೆ ನಾಳೆ ಅಂಥ ಯಾವುದೇ ನೆರಳು ಇರುವುದಿಲ್ಲ. ಉಷ್ಣವಲಯದ ಸ್ಥಳಗಳಲ್ಲಿ (ಕರ್ಕಾಟಕ ಸಂಕ್ರಾಂತಿ ಮತ್ತು ಮಕರ ಸಂಕ್ರಾಂತಿಯ ನಡುವೆ) ವರ್ಷಕ್ಕೆ ಎರಡು ಬಾರಿ ಶೂನ್ಯ ನೆರಳು ದಿನ ಸಂಭವಿಸುತ್ತದೆ.

ಸೂರ್ಯನ ಸುತ್ತ ಭೂಮಿಯ ಪರಿಭ್ರಮಣೆಯ ಅಕ್ಷವು ತನ್ನ ಸಮತಲದಿಂದ 23.5 ಡಿಗ್ರಿಗಳಷ್ಟು ಬಾಗಿದೆ. ಇದರಿಂದ ವಿವಿಧ ಋತುಗಳು ಸಂಭವಿಸುತ್ತವೆ. ಇದರಿಂದಾಗಿ ಸೂರ್ಯನು ದಿನದ ಅತ್ಯುನ್ನತ ಬಿಂದುವಿನಲ್ಲಿರುವಾಗ, ಉತ್ತರಾಯಣದಲ್ಲಿ ಆಕಾಶ ಸಮಭಾಜಕದ ದಕ್ಷಿಣದ 23.5 ಡಿಗ್ರಿಗಳಿಂದ ಸಮಭಾಜಕದ ಉತ್ತರಕ್ಕೆ 23.5 ಡಿಗ್ರಿಗಳಿಗೆ ಚಲಿಸುತ್ತಾನೆ ಮತ್ತು ದಕ್ಷಿಣಾಯನದಲ್ಲಿ ಇದರ ವಿರುದ್ಧಕ್ಕೆ ಚಲಿಸುತ್ತಾನೆ. ಈ ಪರಿಭ್ರಮಣ ಚಲನೆಯಿಂದಾಗಿ, ಒಂದು ಶೂನ್ಯ ನೆರಳು ದಿನವು ಉತ್ತರಾಯಣದಲ್ಲಿ (ಸೂರ್ಯ ಉತ್ತರದ ಕಡೆಗೆ ಚಲಿಸುವಾಗ) ಬರುತ್ತದೆ ಮತ್ತು ಇನ್ನೊಂದು ದಕ್ಷಿಣಾಯನದಲ್ಲಿ (ಸೂರ್ಯನು ದಕ್ಷಿಣಕ್ಕೆ ಚಲಿಸುವಾಗ) ಬರುತ್ತದೆ. 23.5 ಡಿಗ್ರಿ ಉತ್ತರ ಮತ್ತು 23.5 ಡಿಗ್ರಿ ದಕ್ಷಿಣ ಅಕ್ಷಾಂಶಗಳ ನಡುವೆ ವಾಸಿಸುವ ಜನರಿಗೆ, ಸೂರ್ಯನ ಅವನತಿಯು ಅವರ ಅಕ್ಷಾಂಶಕ್ಕೆ ಎರಡು ಬಾರಿ ಸಮನಾಗಿರುತ್ತದೆ.

ಮಹತ್ವ

ಇದು ಸೂರ್ಯನ ನಿಖರವಾದ ಸ್ಥಾನವನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ. ಜತೆಗೆ ವಿಜ್ಞಾನಿ ಮತ್ತು ಖಗೋಳಶಾಸ್ತ್ರಜ್ಞರಿಗೆ ಸೂರ್ಯನ ಬೆಳಕಿನ ನಡವಳಿಕೆ ಮತ್ತು ಭೂಮಿಯ ವಾತಾವರಣದ ಮೇಲೆ ಅದು ಬೀರುವ ಪರಿಣಾಮಗಳ ಬಗ್ಗೆ ಸಂಶೋಧನೆ ನಡೆಸಲು ಅವಕಾಶವನ್ನು ಕಲ್ಪಿಸುತ್ತದೆ. ಸಾಮಾನ್ಯವಾಗಿ ಶೂನ್ಯ ನೆರಳು ಸುಮಾರು ಒಂದೂವರೆ ನಿಮಿಷ ಕಾಲ ಅನುಭವಕ್ಕೆ ಬರುತ್ತದೆ.

ಎಲ್ಲೆಲ್ಲಿ , ಯಾವಾಗ?

ಶೂನ್ಯ ನೆರಳಿನ ದಿನ ದೇಶದ ವಿವಿಧ ನಗರಗಳಲ್ಲಿ ವರ್ಷದಲ್ಲಿ ಎರಡು ಬಾರಿ ಅನುಭವಕ್ಕೆ ಬರುತ್ತದೆ. ಅದು ಯಾವಾಗ ಎನ್ನುವ ವಿವರ ಇಲ್ಲಿದೆ.

  • ಕನ್ಯಾಕುಮಾರಿ: ಏಪ್ರಿಲ್ 10 ಮತ್ತು ಸೆಪ್ಟೆಂಬರ್ 1 (ಮಧ್ಯಾಹ್ನ: 12.21, 12.22)
  • ಬೆಂಗಳೂರು: ಏಪ್ರಿಲ್ 24 ಮತ್ತು ಆಗಸ್ಟ್ 18 (ಮಧ್ಯಾಹ್ನ: 12.17, 12.25)
  • ಹೈದರಾಬಾದ್: ಮೇ 9 ಮತ್ತು ಆಗಸ್ಟ್ 5 (ಮಧ್ಯಾಹ್ನ: 12.12, 12.19)
  • ಮುಂಬೈ: ಮೇ 15 ಮತ್ತು ಜೂನ್ 27 (ಮಧ್ಯಾಹ್ನ: 12.34, 12.45)
  • ಭೋಪಾಲ್: ಜೂನ್ 13 ಮತ್ತು ಜೂನ್ 28 (ಮಧ್ಯಾಹ್ನ: 12.20, 12.23)

ಇದನ್ನೂ ಓದಿ: Water From Air: ಗಾಳಿಯಿಂದಲೇ ನೀರು ಉತ್ಪಾದನೆ! ಬೆಂಗಳೂರು ಸ್ಟಾರ್ಟಪ್‌ನ ಕ್ರಾಂತಿಕಾರಿ ಹೆಜ್ಜೆ!

Continue Reading
Advertisement
Kannada New Movie Vidyarthi Vidyarthiniyare Bad Boys Full Video In AI Touch
ಸಿನಿಮಾ2 mins ago

Kannada New Movie: ʻವಿದ್ಯಾರ್ಥಿ ವಿದ್ಯಾರ್ಥಿನಿಯರೇʼ ಸಿನಿಮಾದ ವಿಡಿಯೊ ಸಾಂಗ್‌ಗೆ ʻAIʼ ಟಚ್‌!

Vicky Kaushal transforms into Chhatrapati Sambhaji Maharaj
ಸಿನಿಮಾ4 mins ago

Vicky Kaushal: ಛತ್ರಪತಿ ಸಂಭಾಜಿ ಮಹಾರಾಜ ಲುಕ್‌ನಲ್ಲಿ ವಿಕ್ಕಿ ಕೌಶಲ್; ಫೋಟೊ ಲೀಕ್‌!

Patanjali Case
ದೇಶ36 mins ago

Patanjali Case: ಪತಂಜಲಿ ಕೇಸ್‌; ಜಾಹೀರಾತು ಮೂಲಕ ಕ್ಷಮೆ ಕೋರಿದ ಬಾಬಾ ರಾಮ್‌ದೇವ್‌

Road accident in Ankola The biker was burnt to death
ಕ್ರೈಂ36 mins ago

Road Accident: ಅಂಕೋಲಾದಲ್ಲಿ ಭೀಕರ ಅಪಘಾತ; ಬೈಕ್‌ ಸವಾರ ಸುಟ್ಟು ಕರಕಲು!

Sachin Tendulkar Net Worth Assets Owned
ಕ್ರಿಕೆಟ್57 mins ago

Sachin Birthday: ಸಚಿನ್ ತೆಂಡೂಲ್ಕರ್ ಬಳಿ ಇರುವ ಅತ್ಯಂತ ದುಬಾರಿ ಆಸ್ತಿಗಳಿವು!

gold model
ಚಿನ್ನದ ದರ58 mins ago

Gold Rate Today: ಚಿನ್ನದ ಬೆಲೆ ಇಂದು ತುಸು ಏರಿಕೆ; 22K, 24K ಬಂಗಾರದ ಬೆಲೆಗಳನ್ನು ಇಲ್ಲಿ ಖಚಿತಪಡಿಸಿಕೊಳ್ಳಿ

Lok Sabha Election 2024 ID raid in Bengaluru South Lok Sabha constituency 21.15 crore Gold ornaments seized in 2 days
ಕರ್ನಾಟಕ1 hour ago

Lok Sabha Election 2024: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಐಡಿ ರೇಡ್;‌ 2 ದಿನದಲ್ಲಿ 21.15 ಕೋಟಿ ರೂ. ಚಿನ್ನಾಭರಣ ವಶ!

Train Ticket Cancellation
ದೇಶ1 hour ago

Train Ticket Cancellation: ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ಆರ್‌ಎಸಿ ಟಿಕೆಟ್‌ ರದ್ದು ಪಡಿಸಿದರೆ ಇನ್ನು ಮುಂದೆ ಕೇವಲ 60 ರೂ. ಕಡಿತ

sam pitroda narendra modi
ಪ್ರಮುಖ ಸುದ್ದಿ1 hour ago

Wealth Redistribution: ಸಂಪತ್ತು ಮರು ಹಂಚಿಕೆ ವಿವಾದದ ಬೆಂಕಿಗೆ ತುಪ್ಪ ಸುರಿದ ಸ್ಯಾಮ್ ಪಿತ್ರೊಡಾ; ಕಾಂಗ್ರೆಸ್‌ಗೆ ಫಜೀತಿ!

Rajkumar Birth Anniversary Dodmane family visited Rajkumar Samadhi
ಸಿನಿಮಾ2 hours ago

Rajkumar Birth Anniversary: ರಾಜ್ ಕುಮಾರ್ ಸಮಾಧಿಗೆ ಆಗಮಿಸಿ ಪೂಜೆ ಸಲ್ಲಿಸಿದ ದೊಡ್ಮನೆ ಕುಟುಂಬ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌