ಸಿದ್ದರಾಮಯ್ಯಗೆ ಸಿಎಂ ಗಾದಿ ತಪ್ಪಿದಾಗ ಕಣ್ಣೀರು ಹಾಕಿದ್ದು ದೇವೇಗೌಡರ ಮಗ! Vistara News
Connect with us

ಕರ್ನಾಟಕ ಎಲೆಕ್ಷನ್

ಸಿದ್ದರಾಮಯ್ಯಗೆ ಸಿಎಂ ಗಾದಿ ತಪ್ಪಿದಾಗ ಕಣ್ಣೀರು ಹಾಕಿದ್ದು ದೇವೇಗೌಡರ ಮಗ!

ವಿಧಾನಸಭೆ ಚುನಾವಣೆಗಳು ಹತ್ತಿರವಾದಂತೆ ರಾಜಕಾರಣಿಗಳ ಪ್ರತಿ ನಡೆಯಲ್ಲೂ ಒಂದು ಸಂದೇಶ, ವಿಶೇಷತೆ ಇರುತ್ತದೆ. ಇಂತಹ ಕೆಲ ಸೂಕ್ಷ್ಮ ಸಂಗತಿಗಳು ಇಲ್ಲಿವೆ.

VISTARANEWS.COM


on

HD Revanna
Koo

ಮಾರುತಿ ಪಾವಗಡ, ಬೆಂಗಳೂರು
2023ರ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ವಿಧಾನ ಸಭೆಯ ಸಾರ್ವತ್ರಿಕ ಚುನಾವಣೆ ರಾಜ್ಯ ರಾಜಕಾರಣದಲ್ಲಿ ಹಲವು ಲೆಕ್ಕಾಚಾರಗಳನ್ನು ಹಾಕಲು ಕಾರಣವಾಗಿದೆ. ಹೀಗಾಗಿ ಚುನಾವಣೆ ದೃಷ್ಟಿಯಿಂದ ಪ್ರತಿಯೊಂದು ಬೆಳವಣಿಗೆಗೂ ರಾಜಕೀಯ ಲಾಭ ನಷ್ಟದ ಲೆಕ್ಕಾಚಾರ ನಡೆಯುತ್ತಿದೆ. ಸೆಪ್ಟೆಂಬರ್‌ 13ರಿಂದ 24ರವರೆಗೆ ಬೆಂಗಳೂರಿನ ಅಧಿವೇಶನ ನಡೆಯಿತಲ್ಲ, ಅದರ ಸಂದರ್ಭದಲ್ಲೆ ವಿಧಾನಸೌಧದ ಪಡಸಾಲೆ, ಮೊಗಸಾಲೆಗಳಲ್ಲಿ ಅನೇಕ ಬೆಳವಣಿಗೆಗಳು ನಡೆದವು. ಇವು ಒಂದಕ್ಕೊಂದು ವಿಭಿನ್ನವಾಗಿದ್ದರೂ, ಒಟ್ಟಾರೆ ರಾಜ್ಯ ರಾಜಕಾರಣಕ್ಕೆ ಸಂಬಂಧಿಸಿದವು ಹಾಗೂ ಭವಿಷ್ಯದ ರಾಜಕಾರಣವನ್ನು ಪ್ರಭಾವಿಸಬಲ್ಲವು.

1. ಸಿದ್ದರಾಮಯ್ಯ-HDK ಪ್ಯಾಚ್‌ಅಪ್‌ ಆಯ್ತ?

ಸಮ್ಮಿಶ್ರ ಸರ್ಕಾರ ಪತನದ ಹಿಂದೆ ಸಿದ್ದರಾಮಯ್ಯ ಕೈವಾಡ ಇದೆ ಎಂಬ ಕುಮಾರಸ್ವಾಮಿ ಹೇಳಿಕೆಯಿಂದ ಶುರುವಾಗಿದ್ದ ಉಭಯ ನಾಯಕರ ನಡುವಿನ ಹಾವು ಮುಂಗುಸಿ ಜಿದ್ದಾಜಿದ್ದಿನ ಪಾಲಿಟಿಕ್ಸ್ ಹಲವು ಬಾರಿ ಸದನದಲ್ಲಿಯೇ ವಿಭಿನ್ನ ಅಭಿಪ್ರಾಯಗಳು ಮೂಡಿ ಗದ್ದಲ ಜೋರಾಗಿತ್ತು. ಆದರೆ ಈ ಅಧಿವೇಶನ ಸಮಯದಲ್ಲಿ ಉಭಯ ನಾಯಕರು ಎಲ್ಲವನ್ನೂ ಮರೆತು ಒಂದಾಗಲು ಮುಂದಾದರೇ ಎಂಬ ಕುತೂಹಲ ಮೂಡಿದೆ. ಅಥವಾ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದರೆ ನನಗೆ ನೀನು-ನಿನಗೆ ನಾನು ಎನ್ನುವ ಮಾತುಕತೆಗೆ ವೇದಿಕೆ ಕಲ್ಪಿಸುವ ಮೊದಲ ಪ್ರಯತ್ನವೇ ಎಂಬ ಅನುಮಾನವೂ ವ್ಯಕ್ತವಾಗುತ್ತಿದೆ. ಇದಕ್ಕೆ ಕಾರಣ ಇದೆ.

ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಬಿಎಂಎಸ್ ಕಾಲೇಜನಿನಲ್ಲಿ ನಡೆದಿದೆ ಎನ್ನಲಾದ ಹಗರಣವನ್ನು ಕುಮಾರಸ್ವಾಮಿ ಸದನದಲ್ಲಿ ಪ್ರಸ್ತಾಪ ಮಾಡಿದರು. ಕುಮಾರಸ್ವಾಮಿ ಜತೆ ಕುಶಲೋಪರಿ ವಿಚಾರಿಸಿದ ನಂತರ ಈ ವಿಷಯವನ್ನು ಪ್ರಸ್ತಾಪ ಮಾಡಿದ ಸಿದ್ದರಾಮಯ್ಯ, ಪ್ರಕರಣವನ್ನು ತನಿಖೆಗೆ ಒಪ್ಪಿಸಿ ಎಂದು ಸರ್ಕಾರವನ್ನು ಒತ್ತಾಯಿಸಿದರು.

ಇದನ್ನೂ ಓದಿ | ಮೊಗಸಾಲೆ ಅಂಕಣ | ಬಸವರಾಜ ಹೊರಟ್ಟಿಯವರ ಮುಂದಿನ ನಡೆ?

ಆರು ವರ್ಷಗಳ ಬಳಿಕ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದ ಸಿದ್ದರಾಮಯ್ಯ, ಇಬ್ಬರ ನಡುವೆ ಯಾವುದೇ ಅಸಮಾಧಾನ, ಭಿನ್ನಾಭಿಪ್ರಾಯ ಇಲ್ಲ ಎಂಬ ಸಂದೇಶ ನೀಡಲು ಮುಂದಾಗಿದ್ದಾರೆ.ತಮ್ಮ ವಿರುದ್ಧ ಅಸಮಾಧಾನಗೊಂಡಿದ್ದ ಒಕ್ಕಲಿಗ ಸಮುದಾಯದ ಮನವೊಲಿಸಲು ಮುಂದಾಗಿದ್ದಾರೆ ಎಂಬ ಮಾತುಗಳು ವಿಧಾನಸೌಧದ ಮೊಗಸಾಲೆಯಲ್ಲಿ ಶಾಸಕರ ನಡುವಿನ ಸಾಮಾನ್ಯ ಚರ್ಚೆಗೆ ಕಾರಣವಾಯಿತು. ಡಿ.ಕೆ. ಶಿವಕುಮಾರ್ ಸಹ ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವುದರಿಂದ ಸಿದ್ದರಾಮಯ್ಯ ಈ ರೀತಿ ರಾಜಕೀಯ ತಂತ್ರಗಾರಿಕೆ ಮಾಡಲು ಮುಂದಾಗಿದ್ದಾರೆ ಎಂಬ ಮಾತುಗಳು ಅಲ್ಲಲ್ಲಿ ಕೇಳಿಬರುತ್ತಲೇ ಇದ್ದವು.

2. ಮೊಗಸಾಲೆಯಲ್ಲಿ ರೇವಣ್ಣ ಜತೆ ಸಿದ್ದರಾಮಯ್ಯ ಮಾತುಕತೆ

ದೇವೇಗೌಡರನ್ನು ನಿವಾಸದಲ್ಲಿ ಭೇಟಿ ಮಾಡಿ ಬಂದ ಮಾರನೇ ದಿನ ಎದುರಿಗೆ ಕಾಣಸಿದ ರೇವಣ್ಣ ನೋಡಿ ಸಿದ್ದರಾಮಯ್ಯ ಮಾತು ಶುರು ಮಾಡಿದರು. “ಏಯ್ ರೇವಣ್ಣ ಯಾಕೆ ನಾನು ಬಂದಾಗ ಇರಲಿಲ್ಲ?” ಎಂದು ಕೇಳಿದರು. “ಬೇರೆ ಕೆಲಸದ ಮೇಲೆ ಹೊರಗೆ ಇದ್ದೆ” ಎಂದ ರೇವಣ್ಣ, “ನಾನು ಯಾವಾಗಲೂ ನಿಮ್ಮ ಜತೆ ಇರ್ತೀನಿ ಸಿದ್ದರಾಮಣ್ಣ. ನಿಮಗೆ ಯಾವಾಗಲೂ ನನ್ನ ಸಪೋರ್ಟ್ ಇರುತ್ತೆ” ಎಂದವರೇ ಪತ್ರಕರ್ತರ ಕಡೆ ನೋಡಿ “ಹೌದಣ್ಣಾ” ಎಂದು ತಲೆಯಾಡಿಸಿದರು. “ನಿನ್ನನ್ನು 2004ರಲ್ಲಿ ಸಿಎಂ ಮಾಡಬೇಕು ಅಂತ ದೇವೇಗೌಡರ ಮುಂದೆ ಹೇಳಿದೆ. ಆದರೆ ಕೊನೆಗೆ ಧರ್ಮಸಿಂಗ್ ಹೆಸರು ಘೋಷಣೆ ಮಾಡಿದಾಗ ಕಣ್ಣೀರು ಹಾಕಿದೆ. ಇದೆಲ್ಲ ನಿನಗೆ ಗೊತ್ತಲ್ಲ ಸಿದ್ದರಾಮಣ್ಣ?” ಎಂದು ಹೇಳಿ ಮತ್ತೆ ಪತ್ರಕರ್ತರ ಕಡೆ ನೋಡಿದರು. “ಹೌದು. ಇದು ನನಗೆ ಗೊತ್ತು ಹಲವು ಬಾರಿ ಇದನ್ನು ನಾನು ಹೇಳಿದ್ದೇನೆ ರೇವಣ್ಣ” ಎಂದು ಸಿದ್ದರಾಮಯ್ಯ ಸಹ ಹೇಳಿದರು. ಇದನ್ನು ಕೇಳುತ್ತಲೇ ಇದ್ದ, ಪಕ್ಕದಲ್ಲಿದ್ದ ಮಂಡ್ಯ ಜಿಲ್ಲೆಯ ಪಾಂಡವಪುರ ಶಾಸಕ ಪುಟ್ಟರಾಜು, “ಅಣ್ಣಾ ನಾನೂ ಕಣ್ಣೀರು ಹಾಕಿದ್ದೆ” ಎಂದರು. “ಹೌದು. ಅವತ್ತು ಹಲವು ಶಾಸಕರು ಕಣ್ಣೀರು ಹಾಕಿದರು” ಎಂದ ಸಿದ್ದರಾಮಯ್ಯ ನಗುತ್ತಲೇ ವಿಧಾನಸಭೆ ಒಳಕ್ಕೆ ಹೊರಟರು.

3. ಔತಣಕೂಟಕ್ಕೆ ಇಬ್ರಾಹಿಮ್‌ಗೆ ಅಹ್ವಾನ ನೀಡಿದ ಸಿದ್ದರಾಮಯ್ಯ!

ಕಲಾಪ ಅನಿರ್ದಿಷ್ಟ ಕಾಲವಾದಿಗೆ ಮುಂದೂಡಿಕೆಯಾದ ಬಳಿಕ ಸಿದ್ದರಾಮಯ್ಯ ಹೊರ ಬರುತ್ತಿರುವಾಗ ವಿಧಾನಸಭೆ ಮೊಗಸಾಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಮ್ ಎದುರಿಗೆ ಬಂದರು. ಸಿದ್ದರಾಮಯ್ಯ ಅವರನ್ನು ನೋಡಿಯೂ ನೋಡದಂತೆ ಹೋಗುತ್ತಿದ್ದ ಇಬ್ರಾಹಿಮ್‌ರನ್ನು ನೋಡಿದ ಸಿದ್ದರಾಮಯ್ಯ, “ಏಯ್ ಇಬ್ರಾಹಿಮ್” ಎಂದು ಜೋರಾಗಿ ಕೂಗಿ ಸಮೀಪಕ್ಕೆ ಕರೆದರು. “ಮಧ್ಯಾಹ್ನ ಊಟ ಇದೆ ಬಾ. ನಾನೇ ಶಾಸಕರಿಗೆ ಊಟ ಹಾಕಿಸುತ್ತಿದ್ದೇನೆ” ಎಂದದ್ದಕ್ಕೆ, “ನಿಮ್ಮ ಪಕ್ಷದ ಶಾಸಕರ ಊಟಕ್ಕೆ ನಾನೇಕೆ ಬರಲಿ?” ಎಂದು ಇಬ್ರಾಹಿಂ ಪ್ರಶ್ನಿಸಿದರು. “ನೀನೂ ನಮ್ಮಲ್ಲಿ ಒಬ್ಬ ಬಾ” ಎಂದು ಸಿದ್ದರಾಮಯ್ಯ ಮತ್ತೆ ಆಹ್ವಾನಿಸಿದರು. ಇಬ್ರಾಹಿಮ್ ಕಾಂಗ್ರೆಸ್‌ನಿಂದ ದೂರವಾದರೂ ಮುಂದೆ ದೇವೇಗೌಡರು ಮತ್ತು ಕುಮಾರಸ್ವಾಮಿ ಜತೆ ಮಾತುಕತೆ ಅನಿವಾರ್ಯವಾದಾಗ ಇಬ್ರಾಹಿಮ್ ಅವರನ್ನು ಮಧ್ಯಸ್ಥಿಕೆಗೆ ಬಳಸಿಕೊಳ್ಳಲು ಸಿದ್ದರಾಮಯ್ಯ ಪ್ಲಾನ್ ಮಾಡುತ್ತಿದಂತಿದೆ ಎಂಬ ಗುಸುಗುಸು ಇತ್ತ ನಡೆಯುತ್ತಿತ್ತು.

4. ಜೆಡಿಎಸ್ ಬಗ್ಗೆ ಬಿಜೆಪಿ ಸಾಫ್ಟ್ ಕಾರ್ನರ್

10 ದಿನ ನಡೆದ ಅಧಿವೇಶನದಲ್ಲಿ ಬಿಜೆಪಿಯ ಯಾವ ಒಬ್ಬ ಶಾಸಕರೂ ಜೆಡಿಎಸ್ ವಿರುದ್ಧ ಮಾತನಾಡಲಿಲ್ಲ ಎನ್ನುವುದು ವಿಶೇಷ. ವಕ್ಫ್ ಆಸ್ತಿ ಕಬಳಿಕೆ ಪ್ರಕರಣವನ್ನು ಸದನದಲ್ಲಿ ಬಿಜೆಪಿ ಪ್ರಸ್ತಾಪ ಮಾಡಿದರೂ, ಕಾಂಗ್ರೆಸ್ ವಿರುದ್ಧ ಅಸ್ತ್ರವಾಗಿ ಬಳಸಲು ಮುಂದಾಯಿತು. ಕೆಲ ಕೈ ನಾಯಕರ ಹೆಸರನ್ನು ಪ್ರಸ್ತಾಪ ಮಾಡಿದ್ದು ಬಿಟ್ಟರೆ ಜೆಡಿಎಸ್‌ನ ಇಬ್ರಾಹಿಮ್ ಹೆಸರು ಯಾರೂ ಪ್ರಸ್ತಾಪ ಮಾಡಲಿಲ್ಲ. ಕುಮಾರಸ್ವಾಮಿ ಮತ್ತು ಅಶ್ವತ್ಥನಾರಾಯಣ ನಡುವೆ ಬಿಎಂಎಸ್ ಕಾಲೇಜು ಆಸ್ತಿ ಗಳಿಕೆ ಮತ್ತು ನಿರ್ದೇಶಕರ ನೇಮಕದ ಕುರಿತು ಜುಗಲ್‌ಬಂದಿಯಲ್ಲಿ ಅಶ್ವತ್ಥನಾರಾಯಣ ಏಕಾಂಗಿ ಹೋರಾಟ ನಡೆಸಿದರು. ಯಾವ ಸಚಿವರೂ ಜೆಡಿಎಸ್ ವಿರುದ್ಧ ಮಾತನಾಡಲಿಲ್ಲ. ಸ್ವತಃ ಸಿಎಂ ಮತ್ತು ಕಂದಾಯ ಸಚಿವ ಆರ್. ಆಶೋಕ್ ಸಹ ಮೌನ ವಹಿಸಿದರು. 2023ಕ್ಕೆ ಯಾವ ರೀತಿ ಫಲಿತಾಂಶ ಬರುತ್ತದೊ, ಯಾರಿಗೆ ಯಾರು ಅನಿವಾರ್ಯಾಗುತ್ತರೋ ಎನ್ನುವ ಚರ್ಚೆ ವಿಧಾನಸೌಧ ಮೊಗಸಾಲೆಯಲ್ಲಿ ಸಹಜವಾಗಿ ನಡೆಯುತ್ತಿತ್ತು.

ಇದನ್ನೂ ಓದಿ | ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್‌ ಇಬ್ಬರೂ ನರಿಗಳು; ಕುರಿಗಳ ಥರ ವೇಷ ಹಾಕ್ಕೊಂಡು ಬರ್ತಾರೆ ಅಷ್ಟೆ ಎಂದ ಶ್ರೀರಾಮುಲು

ಕರ್ನಾಟಕ

Karnataka Election: ಸಿಎಂ ಬೊಮ್ಮಾಯಿಗೇ ಟಿಕೆಟ್‌ ಸಿಗುವುದು ಡೌಟು ಎಂದ ಕಾಂಗ್ರೆಸ್‌

ನಿರುದ್ಯೋಗಿ ಯುವಕರಿಗೆ ಮಾಸಿಕೆ ಭತ್ಯೆ ನೀಡುವ ಕಾಂಗ್ರೆಸ್‌ ಗ್ಯಾರಂಟಿ ಯೋಜನೆಯನ್ನು ಮೊದಲಿಗೆ ರಾಹುಲ್‌ ಗಾಂಧಿಯವರಿಂದಲೇ ಆರಂಭಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದರು.

VISTARANEWS.COM


on

Edited by

congress says cm basavraj bommai will not get chance to contest inkarnataka election
Koo

ಬೆಂಗಳೂರು: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಯುವಕರಿಗೆ ಮಾಸಿಕ ನುರುದ್ಯೋಗ ಭತ್ಯೆ ನೀಡುವ ಗ್ಯಾರಂಟಿ ಯೋಜನೆಯನ್ನು ಟೀಕಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೇ ಚುನಾವಣೆ ಟಿಕೆಟ್‌ ಸಿಗುವುದು ಅನುಮಾನ ಎಂದು ಕಾಂಗ್ರೆಸ್‌ ಹೇಳಿದೆ.

ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ಮೂರು ಸಾವಿರ ರೂ., ಡಿಪ್ಲೊಮಾ ಪದವೀಧರರಿಗೆ ಮಾಸಿಕ ಒಂದೂವರೆ ಸಾವಿರ ರೂ. ನೀಡುವುದಾಗಿ ಬೆಳಗಾವಿಯಲ್ಲಿ ನಡೆದ ಸಮಾವೇಶದಲ್ಲಿ ರಾಹುಲ್‌ ಗಾಂಧಿ ಘೋಷಣೆ ಮಾಡಿದ್ದರು. ಈ ಕುರಿತು ಬಾಗಲಕೋಟೆಯಲ್ಲಿ ಮಂಗಳವಾರ ಪ್ರತಿಕ್ರಿಯಿಸಿದ್ದ ಬೊಮ್ಮಾಯಿ, ಈ ಯೋಜನೆಯನ್ನು ಮೊದಲಿಗೆ ರಾಹುಲ್‌ ಗಾಂಧಿಯವರಿಂದಲೇ ಆರಂಭಿಸಬೇಕು. ನಿರುದ್ಯೋಗಿಗಳಿಗೆ ಭತ್ಯೆ ಬಗ್ಗೆ ರಾಜಸ್ಥಾನ, ಛತ್ತೀಸ್‌ಗಢದಲ್ಲಿಯೂ ಹೇಳಿದ್ದರು. ಆದರೆ ಅನುಷ್ಠಾನವಾಗಿಲ್ಲ. ಅವರು ಹತಾಶರಾಗಿದ್ದಾರೆ. ಅವರಿಗೆ ಆಂತರಿಕ ಸಮೀಕ್ಷೆಯಲ್ಲಿ ಗೆಲ್ಲುವುದಿಲ್ಲ ಎಂದು ತಿಳಿದಿದೆ. ಶೇ 3-4 ರಷ್ಟು ಮತ ಗೆಲ್ಲಲು ಈ ರೀತಿಯ ಆಗಲಾರದ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಕರ್ನಾಟಕ ರಾಜಸ್ಥಾನ ಅಥವಾ ಛತ್ತೀಸ್‌ಗಢ ಅಲ್ಲ. ಕರ್ನಾಟಕದ ಜನ ಬಹಳ ಪ್ರಬುದ್ಧರಿದ್ದಾರೆ. ಯಾರು ಯಾಕೆ ಮಾತನಾಡುತ್ತಿದ್ದಾರೆ ಎಂದು ಅರ್ಥ ಮಾಡಿಕೊಳ್ಳಬೇಕು ಎಂದಿದ್ದರು.

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, “ಸ್ವತಃ ತಮಗೇ ಬಿಜೆಪಿಯ ಟಿಕೆಟ್ ಸಿಗುವ ಭರವಸೆ ಇಲ್ಲದ, ಟಿಕೆಟ್ ಸಿಕ್ಕರೂ ಗೆಲ್ಲುವ ಭರವಸೆ ಇಲ್ಲದ, ಗೆದ್ದರೂ ತಾವೇ ಸಿಎಂ ಹುರಿಯಾಳು ಎಂಬ ಭರವಸೆ ಇಲ್ಲದ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ನೀಡಿದ ಯುವನಿಧೀ ಯೋಜನೆಯ ಭರವಸೆಯನ್ನು ಟೀಕಿಸುವುದು ಹಾಸ್ಯಾಸ್ಪದ. ಬೊಮ್ಮಾಯಿಯವರೇ, ನೀವು ಕೈಲಾಗದವರಿರಬಹುದು, ಕಾಂಗ್ರೆಸ್‌ಗೆ ಎಲ್ಲವೂ ಸಾಧ್ಯ” ಎಂದಿದೆ.

Continue Reading

ಕರ್ನಾಟಕ

Congress Guarantee:‌ ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗೆ ಜಾರ್ಜ್‌ ಸೊರೊಸ್‌ ಹಣ ಕೊಡುತ್ತಾರೆಯೇ ಎಂದು ಪ್ರಶ್ನಿಸಿದ ಶೋಭಾ ಕರಂದ್ಲಾಜೆ

ಕಾಂಗ್ರೆಸ್‌ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು (Congress Guarantee) ಕರ್ನಾಟಕದ ಬಜೆಟ್‌ನಲ್ಲಿ ಅನುಷ್ಠಾನ ಮಾಡಲು ಸಾಧ್ಯವೇ ಇಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿದರು.

VISTARANEWS.COM


on

Edited by

Shobha Karandlaje criticizes congress guarantee
Koo

ಬೆಂಗಳೂರು: ಕಾಂಗ್ರೆಸ್‍ನವರು ಜನರನ್ನು ಮರುಳು ಮಾಡಲು, ಜನರಿಗೆ ಮೋಸ ಮಾಡಲು ಗ್ಯಾರಂಟಿ ಕಾರ್ಡ್ (Congress Guarantee) ಹಂಚುತ್ತಿದ್ದಾರೆ ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ ಆರೋಪಿಸಿದರು.

ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಶೋಭಾ ಕರಂದ್ಲಾಜೆ, ಕರ್ನಾಟಕದಲ್ಲಿ ನೀವು 2013ರಿಂದ 2018ರವರೆಗೆ ಅಧಿಕಾರ ನಡೆಸಿದ್ದೀರಿ. ಆಗ ನೀವು ಒಂದು ಸಮುದಾಯದ ಓಲೈಕೆಗಾಗಿ ಮಾತ್ರ ಯೋಜನೆ ಕೊಟ್ಟಿದ್ದೀರಲ್ಲವೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್‌ನ ಸುಳ್ಳು ಭರವಸೆ ನಂಬಲು ಕರ್ನಾಟಕದ ಜನರು ಮೂರ್ಖರಲ್ಲ. ಕರ್ನಾಟಕದ ಜನರು ವಿದ್ಯಾವಂತರು, ಪ್ರಜ್ಞಾವಂತರು, ಬುದ್ಧಿವಂತರು. ಅವರೆಲ್ಲರೂ ಮಾಧ್ಯಮ ನೋಡುತ್ತಾರೆ; ಸೋಷಿಯಲ್ ಮೀಡಿಯಾ ಗಮನಿಸುತ್ತಾರೆ; ಯಾವ ರಾಜ್ಯದಲ್ಲಿ ನೀವು ಮೋಸ ಮಾಡಿದ್ದೀರೆಂಬ ಅರಿವು ಅವರಿಗೆ ಇದೆ. 2001ರ ಗ್ಯಾರಂಟಿ ಕಾರ್ಡ್, 2013ರ ಗ್ಯಾರಂಟಿ ಕಾರ್ಡ್ ಏನಾಗಿದೆ ಎಂದು ಕಾಂಗ್ರೆಸ್‍ನ್ನು ಜನತೆ ಪ್ರಶ್ನಿಸಬೇಕು ಎಂದು ಮನವಿ ಮಾಡಿದರು.

ಮಹಿಳೆಯರಿಗೆ 2 ಸಾವಿರ ರೂ., 200 ಯೂನಿಟ್ ಉಚಿತ ವಿದ್ಯುತ್, ಯುವಕರಿಗೆ 3000 -1500 ರೂ. ಯಾವ ಹಣದಿಂದ ಕೊಡುತ್ತೀರಿ? ಯಾರಾದರೂ ಜಾರ್ಜ್ ಸೊರೊಸ್ ಅಂಥವರು ನಿಮಗೆ ಹಣ ಕೊಡ್ತಾರಾ? ಎಂದು ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್ಸಿಗರನ್ನು ಪ್ರಶ್ನಿಸಿದರು. ಕರ್ನಾಟಕದ ಬಜೆಟ್‍ನಲ್ಲಿ ಇದನ್ನು ಕೊಡಲು ಸಾಧ್ಯವೇ ಇಲ್ಲ. ಈ ವರ್ಷ ನಮ್ಮ ಸರಕಾರ 3 ಲಕ್ಷ ಕೋಟಿ ರೂಪಾಯಿಯ ಬಜೆಟ್ ಮಂಡಿಸಿದೆ. ಸುಮಾರು 2.5 ಲಕ್ಷ ಕೋಟಿ ರೂಪಾಯಿ ಸಂಗ್ರಹ ಆಗುವ ಮಾಹಿತಿ ಇದೆ. ಅಥವಾ 3 ಲಕ್ಷ ಕೋಟಿಯೇ ಸಂಗ್ರಹ ಆಗಲಿ; ಈಗ ಕಾಂಗ್ರೆಸ್‍ನವರು ಕೊಟ್ಟ ಭರವಸೆಗಳನ್ನು ಈಡೇರಿಸಲು 70-75 ಸಾವಿರ ಕೋಟಿ ಬೇಕು. ಸನ್ಮಾನ್ಯ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಘೋಷಣೆಯಂತೆ ಸಂಧ್ಯಾ ಸುರಕ್ಷಾ ಯೋಜನೆಯಡಿ ಅಜ್ಜ, ಅಜ್ಜಿಗೆ ತಲಾ 1200 ಸೇರಿ 2400 ರೂ. ನಾವು ಕೊಡುತ್ತಿದ್ದೇವೆ. ನಿಮ್ಮದು ಭರವಸೆ ಮಾತ್ರ. ನಾವು ನಿಜವಾಗಲೂ ಕೊಡುತ್ತಿದ್ದೇವೆ ಎಂದು ತಿಳಿಸಿದರು.

ಕಾಂಗ್ರೆಸ್ಸಿಗರು ಇದೇರೀತಿ ರಾಜಸ್ಥಾನದಲ್ಲೂ ಗ್ಯಾರಂಟಿ ಕಾರ್ಡ್ ಹಂಚಿದ್ದರು. 2018ರ ಚುನಾವಣೆಗೆ ಮೊದಲು ನಿರುದ್ಯೋಗಿ ಯುವಕರಿಗೆ 3,500 ರೂಪಾಯಿ ಭತ್ಯೆ ಕೊಡುವುದಾಗಿ ಗ್ಯಾರಂಟಿ ಕಾರ್ಡ್ ಕೊಟ್ಟು ತಿಳಿಸಿದ್ದಿರಿ. ಆದರೆ, ಇವತ್ತಿನ ತನಕ ಅದನ್ನು ಈಡೇರಿಸಿಲ್ಲ. ಛತ್ತೀಸ್‍ಗಡದಲ್ಲೂ ಗ್ಯಾರಂಟಿ ಕಾರ್ಡ್ ಕೊಟ್ಟಿದ್ದೀರಿ. ನಿಮ್ಮ ಅಧಿಕಾರ ಇದ್ದರೂ ಅದನ್ನು ಈಡೇರಿಸಿಲ್ಲ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಈ ಕುರಿತು ಉತ್ತರಿಸಲಿ ಎಂದು ಆಗ್ರಹಿಸಿದರು.

ಯಡಿಯೂರಪ್ಪನವರು 2008ರಲ್ಲಿ ಮುಖ್ಯಮಂತ್ರಿ ಆದಾಗ ಭರವಸೆ, ಗ್ಯಾರಂಟಿ ಕಾರ್ಡ್ ಕೊಡಲಿಲ್ಲ. ಬಿಜಾಪುರದಲ್ಲಿ ಅಜ್ಜಿ ಒಬ್ಬರು ಕಾಲಿಗೆ ಬಿದ್ದು, ‘ನನಗೆ ಗಂಡ ಇದ್ದಾರೆ, ಮಕ್ಕಳಿದ್ದಾರೆ, ಊಟ ಮಾಡಲು ಹಣ ಇಲ್ಲ’ ಎಂದಾಗ ‘ತಾಯಿ ನಿನಗೂ ಏನಾದ್ರೂ ಮಾಡುತ್ತೇನೆ’ ಎಂದು ತಿಳಿಸಿ ವಾಪಸ್ ಬಂದರು. ನಂತರದ ಕ್ಯಾಬಿನೆಟ್ ಸಭೆಯಲ್ಲಿ ಸಂಧ್ಯಾ ಸುರಕ್ಷಾ ಜಾರಿಗೊಳಿಸಿ ಅಜ್ಜ- ಅಜ್ಜಿಗೆ ಒಂದು ಮನೆಗೆ 2400 ರೂ. ಸಿಗುವಂತೆ ಮಾಡಿದವರು ಯಡಿಯೂರಪ್ಪನವರು ಎಂದು ವಿವರಿಸಿದರು.

ರಾಮಕೃಷ್ಣ ಹೆಗಡೆಯವರ ಕಾಲದಿಂದ ವಿಧವಾ ವೇತನ 75 ರೂಪಾಯಿಯಿಂದ ಆರಂಭವಾಗಿತ್ತು. ನೀವು ಹಲವು ವರ್ಷಗಳ ಆಡಳಿತ ನಡೆಸಿದ ಬಳಿಕ ಅದು 200 ರೂಪಾಯಿಗೆ ಬಂದು ನಿಂತಿತ್ತು. ವಿಧವಾ ವೇತನ ಹೆಚ್ಚಿಸಿ 1 ಸಾವಿರ ನೀಡುತ್ತಿರುವುದು ನಮ್ಮ ಸರಕಾರ ಎಂದ ಅವರು, ಕಾಂಗ್ರೆಸ್‍ನವರು ಯಾವ ಹೆಣ್ಮಕ್ಕಳಿಗೆ 2 ಸಾವಿರ ಕೊಡುತ್ತಾರೆ? ಬಿಪಿಎಲ್ ಕಾರ್ಡ್ ಇದ್ದವರಿಗೆ ಮಾತ್ರ ಕೊಡುತ್ತಾರಾ? ಎಲ್ಲರಿಗೂ ಕೊಡುತ್ತಾರಾ? ಅಥವಾ ವಿಧವೆಯರಿಗೆ ಮಾತ್ರ ಕೊಡಲಿದ್ದಾರಾ ಎಂದು ಪ್ರಶ್ನಿಸಿದರು.

2000- 2001ರಲ್ಲಿ ನಿರುದ್ಯೋಗಿ ಯುವಕರಿಗೆ 5 ಸಾವಿರ ಕೊಡುವುದಾಗಿ ಕಾಂಗ್ರೆಸ್ ಭರವಸೆ ಕೊಡಲಾಗಿತ್ತು. ಅದಕ್ಕಾಗಿ ನಾವು ಹೋರಾಟವನ್ನೂ ಮಾಡಿದ್ದೆವು. ಆದರೆ, ಅದು ಈಡೇರಲಿಲ್ಲ. ಸುಳ್ಳು ಹೇಳುವುದಕ್ಕೂ, ಮೋಸ ಮಾಡುವುದಕ್ಕೂ ಒಂದು ಮಿತಿ ಇರಲಿ ಎಂದರು.

ಇದನ್ನೂ ಓದಿ: Congress Guarantee: ಯುವಕರಿಗೆ ಕಾಂಗ್ರೆಸ್‌ನ 4 ನೇ ಗ್ಯಾರಂಟಿ: ಪದವೀಧರರಿಗೆ ʼಯುವ ನಿಧಿʼ; ಮಾಸಿಕ 3 ಸಾವಿರ ರೂ.

Continue Reading

ಉತ್ತರ ಕನ್ನಡ

Karnataka Election 2023: ಗಡಿ ಪ್ರದೇಶಗಳಲ್ಲಿ ಡ್ರಗ್ ದಂಧೆಕೋರರ ಮೇಲೆ ತೀವ್ರ ನಿಗಾ: ಜಿಲ್ಲಾಧಿಕಾರಿ ಸೂಚನೆ

Karnataka Election 2023: ಬಾರ್ಡರ್ ಚೆಕ್ ಪೋಸ್ಟ್‌ಗಳಲ್ಲಿ ಮದ್ಯ, ನಗದು, ಬೆಲೆಬಾಳುವ ಲೋಹಗಳು ಸಾಗಿಸುವ ವಾಹನಗಳ ಮೇಲೆ ಹೆಚ್ಚು ನಿಗಾ ವಹಿಸಬೇಕೆಂದು ಡಿಸಿ ಪ್ರಭುಲಿಂಗ ಕವಳಿಕಟ್ಟಿ ಸಲಹೆ ನೀಡಿದ್ದಾರೆ.

VISTARANEWS.COM


on

Edited by

DC Prabhulinga Kavalikatti karwar
ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ.
Koo

ಕಾರವಾರ: “ಕರ್ನಾಟಕ ರಾಜ್ಯದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ಸಾರ್ವತ್ರಿಕ ಚುನಾವಣೆ (Karnataka Election 2023) ಇರುವುದರಿಂದ ಅಂತಾರಾಜ್ಯ ಗಡಿ ಪ್ರದೇಶಗಳಲ್ಲಿ ಡ್ರಗ್ ದಂಧೆಕೋರರ ಮೇಲೆ ತೀವ್ರ ನಿಗಾ ಇರಿಸಲು ಕ್ರಮವಹಿಸಬೇಕು” ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ನ್ಯಾಯಾಲಯ ಸಭಾಂಗಣದಲ್ಲಿ ಅಂತಾರಾಜ್ಯ ಗಡಿ ಪ್ರದೇಶಗಳ ಚೆಕ್ ಪೋಸ್ಟ್‌ಗಳಲ್ಲಿ ಬಿಗಿ ಭದ್ರತೆ ಒದಗಿಸಲು ಹಮ್ಮಿಕೊಂಡಿದ್ದ ವಿಡಿಯೊ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿದ ಅವರು, “ಬಾರ್ಡರ್ ಚೆಕ್ ಪೋಸ್ಟ್‌ಗಳಲ್ಲಿ ಮದ್ಯ, ನಗದು, ಬೆಲೆಬಾಳುವ ಲೋಹಗಳು, ಡ್ರಗ್‌ಗಳು ಮತ್ತು ಗೃಹೋಪಯೋಗಿ ವಸ್ತುಗಳನ್ನು ಸಾಗಿಸುವ ವಾಹನಗಳ ಮೇಲೆ ಹೆಚ್ಚು ನಿಗಾ ವಹಿಸಬೇಕು” ಎಂದು ಅಂತಾರಾಜ್ಯ ಗಡಿ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: Swiss Open: ಸ್ವಿಸ್‌ ಓಪನ್ ಬ್ಯಾಡ್ಮಿಂಟನ್; ಪ್ರಶಸ್ತಿ ಉಳಿಸಿಕೊಳ್ಳಲಿದ್ದಾರಾ ಪಿ.ವಿ. ಸಿಂಧು?

“ಕರ್ನಾಟಕದ ಮದ್ಯದ ದರಕ್ಕಿಂತ ಗೋವಾ ರಾಜ್ಯದಲ್ಲಿ ಮದ್ಯದ ದರ ಅಗ್ಗವಾಗಿದೆ‌. ಈ ಕಾರಣದಿಂದ ಮದ್ಯ ಮಾರಾಟಗಾರರು ಗೋವಾದಿಂದ ಕರ್ನಾಟಕಕ್ಕೆ ಮದ್ಯವನ್ನು ಸಾಗಾಟ ಮಾಡುವ ಸಾಧ್ಯತೆ ಹೆಚ್ಚಾಗಿದ್ದು, ಗಡಿಯಲ್ಲಿ ತೀವ್ರ ನಿಗಾ ವಹಿಸುವಂತೆ ಸೂಚಿಸಿದರು. ಈಗಾಗಲೇ ಕಾರವಾರ ತಾಲೂಕಿನ ಮಾಜಾಳಿ ಚೆಕ್‌ಪೋಸ್ಟ್ ಮತ್ತು ಜೋಯಿಡಾ ತಾಲೂಕಿನ ಅನ್‌ಮೋಡ್ ಚೆಕ್‌ಪೋಸ್ಟ್ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ಇನ್ನೂ ಹೆಚ್ಚಿನ ಸಿಬ್ಬಂದಿ ನಿಯೋಜನೆ ಮಾಡಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸಬೇಕು” ಎಂದು ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಎನ್., ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ- 1 ಜಯಲಕ್ಷ್ಮಮ್ಮ, ಅಬಕಾರಿ ನಿರೀಕ್ಷಕರು ಜಗದೀಶ್ ಕುಲಕರ್ಣಿ ಉಪಸ್ಥಿತರಿದ್ದರು.

ಇದನ್ನೂ ಓದಿ: BJP Important Party: ಜಗತ್ತಿನಲ್ಲೇ ಬಿಜೆಪಿ ಪ್ರಮುಖ ಪಕ್ಷ, 2024ರಲ್ಲೂ ಗೆಲುವು; ವಾಲ್‌ಸ್ಟ್ರೀಟ್‌ ಜರ್ನಲ್‌ ವರದಿ

Continue Reading

ಕರ್ನಾಟಕ

Karnataka Election: ಯುಗಾದಿಗೆ ಕಾಂಗ್ರೆಸ್‌ ರಣಕಹಳೆ: ಮೊದಲ ಪಟ್ಟಿ ಬುಧವಾರ ಬಿಡುಗಡೆ ಎಂದ ಕೆ.ಜೆ. ಜಾರ್ಜ್‌

ಕಾಂಗ್ರೆಸ್‌ ಪಕ್ಷದಲ್ಲಿ ಟಿಕೆಟ್‌ ಘೋಷಣೆ ನಂತರ ಏಳಬಹುದಾದ ಸಂಘರ್ಷವನ್ನು ತಡೆಗಟ್ಟಲು ಪಕ್ಷದ ನಾಯಕರು ಪ್ರಯತ್ನ ನಡೆಸುತ್ತಿದ್ದಾರೆ.

VISTARANEWS.COM


on

Edited by

karnataka election congress would announce candidates wednesday
Koo

ಬೆಂಗಳೂರು: ಈಗಾಗಲೆ ರಾಜ್ಯ ಹಾಗೂ ಕೇಂದ್ರ ಮಟ್ಟದಲ್ಲಿ ಎರಡು ಸಭೆಗಳನ್ನು ನಡೆಸಿರುವ ಕಾಂಗ್ರೆಸ್‌ ಪಕ್ಷ ವಿಧಾನಸಭೆ ಚುನಾವಣೆಯ ಮೊದಲ ಪಟ್ಟಿಯನ್ನು ಯುಗಾದಿ ದಿನವಾದ ಬುಧವಾರ ಬಿಡುಗಡೆ ಮಾಡಲಿದೆ ಎನ್ನಲಾಗುತ್ತಿದೆ. ಮಾಜಿ ಸಚಿವ ಹಾಗೂ ಚುನಾವಣಾ ಸಮಿತಿಯ ಸದಸ್ಯರೂ ಆಗಿರುವ ಕೆ.ಜೆ. ಜಾರ್ಜ್‌ ಈ ವಿಚಾರವನ್ನು ಖಚಿತಪಡಿಸಿದ್ದಾರೆ.

ಸಿದ್ದರಾಮಯ್ಯ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂಬ ಪ್ರಶ್ನೆಗೆ ಉತ್ತರಿಸಿದ ಜಾರ್ಜ್‌, ಸಿದ್ದರಾಮಯ್ಯನವರಿಗೆ ಎಲ್ಲಾ ಕಡೆಯುತ್ತಿದ್ದಾರೆ. ಕೋಲಾರದಿಂದ ಸ್ಪರ್ಧೆ ಮಾಡ್ತೇನೆ ಎಂದಾಗ ನಾನು ಇದ್ದೆ‌. ಹೈಕಮಾಂಡ್ ಹೇಳಿದ ಕಡೆ ನಿಲ್ಲುತ್ತೇನೆ ಎಂದು ಹೇಳಿದ್ದಾರೆ. ಬುಧವಾರ ಫಸ್ಟ್ ಲಿಸ್ಟ್ ಬರುತ್ತದೆ. ಹೈಕಮಾಂಡ್ ಹೇಳಿದ ಕಡೆ ನಿಲ್ಲುತ್ತಾರೆ.

ಅವರು ಯಾವ ಕ್ಷೇತ್ರದಲ್ಲಿ ನಿಂತರೂ ಗೆಲ್ಲುತ್ತಾರೆ. ನಾನು ಸರ್ವಜ್ಞ ನಗರ ಬಿಟ್ಟು ಬೇರೆ ಕಡೆ ಹೋಗುತ್ತೇನಾ..? ಅವರು ಮಾಸ್ ಲೀಡರ್ ಎಲ್ಲೆ ನಿಂತ್ರು ಗೆಲ್ಲುತ್ತಾರೆ ಎಂದರು.

ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಘೋಷಣೆಯಾಗುವ ಸಾಧ್ಯತೆಯಿದೆ. ಹಾಲಿ ಶಾಸಕರು ಇರುವ ಕ್ಷೇತ್ರ ಹಾಗೂ ಒಂದೇ ಹೆಸರು ಶಿಫಾರಸಾಗಿರುವ ಕ್ಷೇತ್ರ ಸಿಂಗಲ್ ನೇಮ್ ಇರೋ ಹೆಸರು ಫೈನಲ್. ಆದ್ರೂ ಕಾಂಗ್ರೆಸ್ ಹಾಲಿ ಶಾಸಕರಲ್ಲಿ ಢವಢವ ಶುರುವಾಗಿದೆ. ಕೆಲ ಶಾಸಕರಿಗೆ ಟಿಕೆಟ್ ತಪ್ಪುವ ಆತಂಕ ಆರಂಭವಾಗಿದೆ.

ಎಐಸಿಸಿ ರಿಪೋರ್ಟ್‌ನಲ್ಲಿ ನೆಗೆಟಿವ್ ರಿಪೋರ್ಟ್ ಇರೋರಿಗೆ ಟಿಕೆಟ್ ಅನುಮಾನ ಎನ್ನಲಾಗುತ್ತಿದ್ದು, ಅನೇಕರು ನಾಯಕರ ಬಳಿ ತೆರಳಿ ಚರ್ಚೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: JDS Politics: ದೇವೇಗೌಡರ ಸಭೆ ನಂತರವೂ ಬಗೆಹರಿಯದ ಹಾಸನ ಟಿಕೆಟ್‌ ಸಂಘರ್ಷ: ಮತ್ತೆ ಸಭೆ ನಡೆಸಿದ ಮಾಜಿ ಪ್ರಧಾನಿ

Continue Reading
Advertisement
ಸಿನಿಮಾ41 seconds ago

Rashmika Mandanna: ದ್ವೇಷಿಸುವವರನ್ನು ಹೇಗೆ ಎದುರಿಸಬೇಕೆಂದು ಪಾಠ ಹೇಳಿಕೊಟ್ಟ ನಟಿ ರಶ್ಮಿಕಾ ಮಂದಣ್ಣ

inflation
ವಾಣಿಜ್ಯ2 mins ago

Retail inflation : ಚಿಲ್ಲರೆ ಹಣದುಬ್ಬರ ಹೆಚ್ಚಳಕ್ಕೆ ಆರ್‌ಬಿಐ ಕಳವಳ

Delhi team won the toss against UP and chose fielding
ಕ್ರಿಕೆಟ್4 mins ago

WPL 2023 : ಯುಪಿ ವಿರುದ್ಧ ಟಾಸ್​ ಗೆದ್ದ ಡೆಲ್ಲಿ ತಂಡದಿಂದ ಫೀಲ್ಡಿಂಗ್ ಆಯ್ಕೆ

savadatti accident
ಕರ್ನಾಟಕ8 mins ago

Road accident : ಸವದತ್ತಿ ಪಟ್ಟಣದಲ್ಲಿ ಲಾರಿ ಬ್ರೇಕ್‌ ಫೇಲ್‌ ಆಗಿ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರು ಮೃತ್ಯು

HP Pavilion Aero 13 Laptop Launched and Check details
ಗ್ಯಾಜೆಟ್ಸ್10 mins ago

HP Pavilion Aero 13 ಲ್ಯಾಪ್‌ಟಾಪ್ ಲಾಂಚ್, ಏನೆಲ್ಲ ವಿಶೇಷತೆಗಳಿವೆ? ಬೆಲೆ ಎಷ್ಟು?

ಕರ್ನಾಟಕ12 mins ago

Basavaraj Bommai: ವಿಜಯಪುರದಲ್ಲಿ 4.64 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿ; ಬೊಮ್ಮಾಯಿ

congress says cm basavraj bommai will not get chance to contest inkarnataka election
ಕರ್ನಾಟಕ23 mins ago

Karnataka Election: ಸಿಎಂ ಬೊಮ್ಮಾಯಿಗೇ ಟಿಕೆಟ್‌ ಸಿಗುವುದು ಡೌಟು ಎಂದ ಕಾಂಗ್ರೆಸ್‌

Azam peer Khadri
ಕರ್ನಾಟಕ35 mins ago

Karnataka Elections : ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಕಟ್ಟಿ ಹಾಕಲು ಹೊರಟ ಕಾಂಗ್ರೆಸ್‌ಗೆ ಈಗ ಖಾದ್ರಿ ಸಂಕಟ!

ಕಿರುತೆರೆ38 mins ago

Kannada Serial: 900 ಸಂಚಿಕೆ ಪೂರೈಸಿದ ಜೊತೆ ಜೊತೆಯಲಿ ಧಾರಾವಾಹಿ; ಸಂಭ್ರಮದಲ್ಲಿ ತಂಡ

ಕರ್ನಾಟಕ40 mins ago

Murder Case: ಅವಳದ್ದು ಮೋಹ, ಇವನಿಗೆ ಮಧುಮೇಹ; ಕೊಲೆಯಲ್ಲಿ ಅಂತ್ಯವಾಯ್ತು ಕಾಳಜಿ ಕಲಹ

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ1 month ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ1 month ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ15 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Paid leave for govt employees involved in the strike
ನೌಕರರ ಕಾರ್ನರ್3 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ4 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ1 month ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ2 hours ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ6 hours ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ7 hours ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ1 day ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ1 day ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ2 days ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

Auto services to be stopped from Sunday midnight, Drivers protest against whiteboard bike taxi
ಕರ್ನಾಟಕ2 days ago

Bengaluru Auto Bandh: ಬೈಕ್‌ ಟ್ಯಾಕ್ಸಿಗೆ ವಿರೋಧ; ಭಾನುವಾರ ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ

Organizing our Power Run Marathon in the name of puneeth rajkumar
ಕರ್ನಾಟಕ2 days ago

Puneeth Rajkumar: ಅಪ್ಪು ಹೆಸರಲ್ಲಿ ನಮ್ಮ ಪವರ್ ರನ್ ಮ್ಯಾರಥಾನ್; ಅಶ್ವಿನಿ ಪುನೀತ್‌ ಚಾಲನೆ

Due to heavy rains, motorists struggle on Bengaluru-Mysuru dashapatha
ಕರ್ನಾಟಕ3 days ago

Karnataka Rain: ಸರಾಗವಾಗಿ ಹರಿಯದ ಮಳೆ ನೀರು, ಕೈಕೊಟ್ಟ ವಾಹನ; ಬೆಂಗಳೂರು-ಮೈಸೂರು ದಶಪಥದಲ್ಲಿ ದಿಕ್ಕೆಟ್ಟ ಪ್ರಯಾಣಿಕರು!

ಕರ್ನಾಟಕ6 days ago

Karnataka Election 2023: ಧ್ರುವನಾರಾಯಣ ಪುತ್ರ ದರ್ಶನ್‌ಗಾಗಿ ನಂಜನಗೂಡು ಟಿಕೆಟ್ ತ್ಯಾಗ ಮಾಡಿದ ಎಚ್.ಸಿ. ಮಹದೇವಪ್ಪ

ಟ್ರೆಂಡಿಂಗ್‌

error: Content is protected !!