Ashwini Puneeth Rajkumar: ಅಶ್ವಿನಿ ಪುನೀತ್ ಬಗ್ಗೆ ಕೀಳು ಮಟ್ಟದ ಪೋಸ್ಟ್; ಅಪ್ಪು ಅಭಿಮಾನಿಗಳಿಂದ ಗೃಹ ಸಚಿವರಿಗೆ ದೂರು - Vistara News

ರಾಜಕೀಯ

Ashwini Puneeth Rajkumar: ಅಶ್ವಿನಿ ಪುನೀತ್ ಬಗ್ಗೆ ಕೀಳು ಮಟ್ಟದ ಪೋಸ್ಟ್; ಅಪ್ಪು ಅಭಿಮಾನಿಗಳಿಂದ ಗೃಹ ಸಚಿವರಿಗೆ ದೂರು

Ashwini Puneeth Rajkumar: ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದು ಸರಿ ಅಲ್ಲ, ಇದಕ್ಕಾಗಿಯೇ ಆರ್​ಸಿಬಿ ಸೋಲುತ್ತಿದೆ ಎಂದು ‘ಗಜಪಡೆ’ (@GAJAPADE6) ಹೆಸರಿನ ಟ್ವಿಟರ್ ಅಕೌಂಟ್ ಕೀಳು ಮಟ್ಟದ ಟ್ವೀಟ್ ಮಾಡಿತ್ತು. ಆರ್​ಸಿಬಿ ಸೋಲುವುದಕ್ಕೂ, ಅಶ್ವಿನಿ ಪುನೀತ್​ ರಾಜ್​ಕುಮಾರ್​ಗೂ ಏನು ಸಂಬಂಧ? ಎಂದು ಅಪ್ಪು ಫ್ಯಾನ್ಸ್‌ ಆಕ್ರೋಶ ಹೊರಹಾಕಿ, ಈಗಾಗಲೇ ಅಪ್ಪು ಫ್ಯಾನ್ಸ್‌ ಕಾನೂನು ಕ್ರಮ ಮುಂದಾಗಿದ್ದರು. ಇದೀಗ ಸಚಿವ ಪರಮೇಶ್ವರ್ ಅವರು ಕಾನೂನು ಕ್ರಮ ತೆಗೆದುಕೊಳ್ಳಲು ಇವತ್ತೇ ಸೂಚನೆ ಕೊಡುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.

VISTARANEWS.COM


on

Ashwini Puneeth Rajkumar Appu fans complain to Home Minister
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ (Ashwini Puneeth Rajkumar)  ಬಗ್ಗೆ ಕೀಳು ಮಟ್ಟದ ಪೋಸ್ಟ್ (Post) ಮಾಡಿದವರ ವಿರುದ್ಧ ಕ್ರಮ ಹೆಚ್ಚಾಗುತ್ತಲೇ ಇದೆ. ಸಿನಿಮಾ ರಂಗದ ಅನೇಕರು ಪೋಸ್ಟ್ ವಿರುದ್ಧ ಧ್ವನಿ ಎತ್ತಿದ್ದಾರೆ. ಈಗ ಅಪ್ಪು ಫ್ಯಾನ್ಸ್ ಗೃಹ ಸಚಿವರನ್ನು ಭೇಟಿ ಮಾಡಿ, ಕ್ರಮಕ್ಕಾಗಿ ಒತ್ತಾಯ ಮಾಡಿದ್ದಾರೆ. ಸಚಿವ ಪರಮೇಶ್ವರ್ (parameshwara) ಅವರು ಕಾನೂನು ಕ್ರಮ ತೆಗೆದುಕೊಳ್ಳಲು ಇವತ್ತೇ ಸೂಚನೆ ಕೊಡುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ ಅಭಿಮಾನಿ ಬಳಗ ತುಮಕೂರು ತಾಲೂಕು ಹಾಗೂ ಜಿಲ್ಲಾ ಘಟಕ ಜಿ.ಪರಮೇಶ್ವರ್ ಅವರಿಗೆ ದೂರು ನೀಡಲಾಗಿದೆ. ದೂರಿನ ಸಾರಾಂಶ ಹೀಗಿದೆ: ʻʻಪುನೀತ್ ರಾಜ್‌ಕುಮಾರ್ ಅವರು ಕನ್ನಡ ನಾಡಿಗೆ ಸಲ್ಲಿಸಿರುವ ಸೇವೆ ಎಂದಿಗೂ ಅಪಾರ ಹಾಗೂ ಚಿರಸ್ಮರಣೀಯ. ಅವರ ಜನಪ್ರಿಯತೆ ಎಂದಿಗೂ ಇಂದಿಗೂ ಅಜರಾಮರ. ಕರ್ನಾಟಕ ರತ್ನ ಡಾ. ರಾಜ್‌ಕುಮಾರ್ ಅವರು ಕನ್ನಡ ನಾಡಿಗೆ ಮುಕುಟಮಣಿಯಂತೆ ಇದ್ದುದು ಕನ್ನಡ ನಾಡಿನ ಸಮಸ್ತ ಅಭಿಮಾನಿಗಳಿಗೆ ತಿಳಿದಿರುವ ವಿಷಯ. ಇಂತಹ ಮನೆಯಿಂದ ಬಂದಂತಹ ಕರ್ನಾಟಕ ಪುನೀತ್ ರಾಜ್‌ಕುಮಾರ್ ಅವರ ಧರ್ಮಪತ್ನಿ ಅಶ್ವಿನಿ ಪುನೀತ್‌ರಾಜ್‌ ಕುಮಾರ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ʻಗಜಪಡೆʼ, ʻಪೊರ್ಕಿʼ, ʻದಾಸʼ, ʻಕಿಂಗ್ ಡಿಬಾಸ್‌ʼ ಹಾಗೂ ಇನ್ನೂ ಮುಂತಾದ ಅನೇಕ ಹೆಸರುಗಳಲ್ಲಿ ಅವರನ್ನು ತೇಜೋವಧೆ ಮಾಡಲಾಗಿದೆ. ಇದರಿಂದ ರಾಜಕುಮಾರ್, ಪುನೀತ್ ರಾಜಕುಮಾ‌ರ್‌ ಅವರ ಅಭಿಮಾನಿಗಳ ಮನಸ್ಸಿಗೆ ಭರಿಸಲಾಗದ ನೋವನ್ನು ಉಂಟುಮಾಡಲಾಗಿದೆ. ಆದ್ದರಿಂದ ಅಶ್ವಿನಿ ಪುನೀತ್‌ರಾಜ್‌ಕುಮಾರ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ʻಗಜಪಡೆʼ, ʻಪೊರ್ಕಿʼ, ʻದಾಸʼ, ʻಕಿಂಗ್ ಡಿಬಾಸ್ʼ ಹಾಗೂ ಇನ್ನೂ ಮುಂತಾದ ಅನೇಕ ಹೆಸರುಗಳಲ್ಲಿ ಪೇಜ್‌ಗಳಿರುವವರು, ತೇಜೋವಧೆ ಮಾಡಿರುವವರ ವಿರುದ್ಧ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಇನ್ನೂ ಮುಂತಾದ ಅನೇಕ ಹೆಸರುಗಳಲ್ಲಿ ಪೇಜ್‌ಗಳಿದ್ದು ಅವರ ವಿರುದ್ಧವೂ ಕೂಡ ತುರ್ತಾಗಿ ಕಠಿಣ ಕ್ರಮ ಜರುಗಿಸಲು ಆದೇಶ ನೀಡಬೇಕಾಗಿ ತಮ್ಮಲ್ಲಿ ವಿನಮ್ರತೆಯಿಂದ ಪ್ರಾರ್ಥಿಸಿಕೊಳ್ಳುತ್ತೇವೆʼʼ ಎಂದು ಮನವಿ ಮಾಡಲಾಗಿದೆ.

ಇದನ್ನೂ ಓದಿ: Ashwini Puneeth Rajkumar: ಪುನೀತನ ಮಡದಿ ಅನಾಥಳಲ್ಲ ಎಂದು ಜಗ್ಗೇಶ್‌ ಆಕ್ರೋಶ!

Ashwini Puneeth Rajkumar

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪರಮೇಶ್ವರ್ ಅವರು ಮನವಿ ಸ್ವೀಕರಿಸಿದ್ದಾರೆ. ದೂರು ಸ್ವೀಕರಿಸಿದ ಬಳಿಕ ಪರಮೇಶ್ವರ್‌ ಅವರು ಮಾತನಾಡಿ ʻʻಆದಷ್ಟು ಶೀಘ್ರವಾಗಿ ಪತ್ತೆ ಹಚ್ಚಿ ಕಾನೂನು ಕ್ರಮ ತೆಗೆದುಕೊಳ್ಳಲು ಇವತ್ತೆ ಸೂಚನೆ ಕೊಡುತ್ತೇನೆ. ಯಾವ ಕಿಡಿಗೇಡಿಗಳನ್ನು ಕಾನೂನು ಚೌಕಟ್ಟಿಗೆ ತರದೇ ಬಿಡಲ್ಲʼʼ ಎಂದು ಹೇಳಿಕೆ ನೀಡಿದ್ದಾರೆ.

ಏನಿದು ಘಟನೆ?

ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದು ಸರಿ ಅಲ್ಲ, ಇದಕ್ಕಾಗಿಯೇ ಆರ್​ಸಿಬಿ ಸೋಲುತ್ತಿದೆ ಎಂದು ‘ಗಜಪಡೆ’ (@GAJAPADE6) ಹೆಸರಿನ ಟ್ವಿಟರ್ ಅಕೌಂಟ್ ಕೀಳು ಮಟ್ಟದ ಟ್ವೀಟ್ ಮಾಡಿತ್ತು. ಆರ್​ಸಿಬಿ ಸೋಲುವುದಕ್ಕೂ, ಅಶ್ವಿನಿ ಪುನೀತ್​ ರಾಜ್​ಕುಮಾರ್​ಗೂ ಏನು ಸಂಬಂಧ? ಎಂದು ಅಪ್ಪು ಫ್ಯಾನ್ಸ್‌ ಆಕ್ರೋಶ ಹೊರಹಾಕಿ, ಈಗಾಗಲೇ ಅಪ್ಪು ಫ್ಯಾನ್ಸ್‌ ಕಾನೂನು ಕ್ರಮ ಮುಂದಾಗಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

State Education Policy: 3 ವರ್ಷದ ಪದವಿಗೆ ರಾಜ್ಯ ಸರ್ಕಾರ ಅಸ್ತು; ಎಸ್‌ಇಪಿ ಆಯೋಗದ ಶಿಫಾರುಸುಗಳ ಅನ್ವಯ ಆದೇಶ

State Education Policy: 2024-25ನೇ ಶೈಕ್ಷಣಿಕ ಸಾಲಿನಿಂದ ಪದವಿ ಕಾರ್ಯಕ್ರಮಗಳಿಗೆ ಸಂಬಂಧಪಟ್ಟಂತೆ ರಾಜ್ಯ ಶಿಕ್ಷಣ ನೀತಿ ಆಯೋಗವು ನೀಡಿರುವ ಮಧ್ಯಂತರ ವರದಿಗಳ ಶಿಫಾರಸುಗಳ ಅನ್ವಯ ಪದವಿ ಅವಧಿ ಹಾಗೂ ಪಠ್ಯಕ್ರಮ ರಚನೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

VISTARANEWS.COM


on

State Education Policy
Koo

ಬೆಂಗಳೂರು: ರಾಜ್ಯ ಶಿಕ್ಷಣ ನೀತಿ ಆಯೋಗದ (State Education Policy) ಮಧ್ಯಂತರ ವರದಿ ಅನ್ವಯ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ವರದಿಯ ಶಿಫಾರಸುಗಳ ಆಧಾರದ ಮೇಲೆ ಪದವಿ ಅವಧಿ ಮತ್ತು ಪಠ್ಯಕ್ರಮ ರಚನೆಯಲ್ಲಿ ಕೆಲ ಮಾರ್ಪಾಡು ಮಾಡಲಾಗಿದೆ. ಇದರಲ್ಲಿ ಪ್ರಮುಖವಾಗಿ 4 ವರ್ಷಗಳ ಪದವಿಯನ್ನು ಕೈಬಿಟ್ಟು, ಈ ಹಿಂದೆ ಇದ್ದ ಮೂರು ವರ್ಷಗಳ ಪದವಿಯನ್ನೇ ಮುಂದುವರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದ ಉನ್ನತ ಶಿಕ್ಷಣ ಇಲಾಖೆಯಡಿ ವಿಶ್ವವಿದ್ಯಾಲಯಗಳು ಮತ್ತು ಸಂಯೋಜಿತ ಕಾಲೇಜುಗಳಲ್ಲಿ 2021-22ನೇ ಶೈಕ್ಷಣಿಕ ವರ್ಷದಿಂದ ಅಗತ್ಯ ಮಾರ್ಗಸೂಚಿಗಳನುಸಾರ ಅನುಷ್ಠಾನಗೊಳಿಸಲಾಗಿತ್ತು. ಚುನಾವಣಾ ಪೂರ್ವದಲ್ಲಿ ಎನ್‌ಇಪಿ ರದ್ದು ಪಡಿಸುವುದಾಗಿ ಘೋಷಿಸಿದ್ದ ಕಾಂಗ್ರೆಸ್‌, ಅಧಿಕಾರಕ್ಕೆ ಬಂದ ಆರಂಭದಲ್ಲಿ ಪ್ರೊ. ಸುಖ್‌ದೇವ್‌ ಥೋರಟ್‌ ನೇತೃತ್ವದಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗ ರಚಿಸಿತ್ತು. ಆಯೋಗವು ಇತ್ತೀಚೆಗೆ ಸಲ್ಲಿಸಿದ ಮಧ್ಯಂತರ ವರದಿಯ ಶಿಫಾರಸುಗಳ ಅನ್ವಯ ಪದವಿ ಅವಧಿ ಮತ್ತು ಪಠ್ಯಕ್ರಮ ರಚನೆಯಲ್ಲಿ ರಾಜ್ಯ ಸರ್ಕಾರ ಕೆಲ ಮಾರ್ಪಾಡುಗಳನ್ನು ಮಾಡಿದೆ.

ಆದೇಶದಲ್ಲಿ ಏನಿದೆ?

ರಾಜ್ಯದ ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣವನ್ನು ಸೂಕ್ಷ್ಮವಾಗಿ ಪರಾಮರ್ಶಿಸಿ ಶಿಕ್ಷಣ ನೀತಿಯನ್ನು ರೂಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಪ್ರೊ.ಸುಖದೇವ್ ಥೋರಟ್ ರವರ ಅಧ್ಯಕ್ಷತೆಯಲ್ಲಿ ಆಯೋಗ ರಚಿಸಿರುತ್ತದೆ. ಈ ನೀತಿಯು ರಾಜ್ಯದ ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣದಲ್ಲಿ ನೋಂದಣಿಯನ್ನು ವೃದ್ಧಿಸಲು, ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು, ಪ್ರತಿಯೊಬ್ಬರಿಗೂ ಗುಣಾತ್ಮಕ ಶಿಕ್ಷಣದಲ್ಲಿ ಸಮಾನ ಅವಕಾಶ ಕಲ್ಪಿಸಲು, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಜ್ಞಾನವನ್ನು ಸದೃಢಗೊಳಿಸಲು, ಶಾಲಾ ಹಾಗೂ ಉನ್ನತ ಶಿಕ್ಷಣವನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶವನ್ನು ಕಲ್ಪಿಸಲು ಮತ್ತು ಪ್ರಜಾಸತ್ತಾತ್ಮಕ ಮತ್ತು ನಾಗರೀಕ/ನೈತಿಕ ಮೌಲ್ಯಗಳನ್ನು ಬೆಳೆಸುವ ಗುರಿ ಹೊಂದಿದೆ.

ಇದನ್ನೂ ಓದಿ | Press Freedom: ಚೀನಾ ಸೇರಿದಂತೆ ಈ ದೇಶಗಳು ಪತ್ರಕರ್ತರಿಗೆ ಸುರಕ್ಷಿತವಲ್ಲ

ಆಯೋಗವು ಆಗಸ್ಟ್ 2024ರಲ್ಲಿ ಅಂತಿಮ ವರದಿಯನ್ನು ಸಲ್ಲಿಸಲಿದ್ದು, ಪ್ರಸ್ತುತ ಕೆಲವು ಶಿಫಾರಸುಗಳೊಂದಿಗೆ ಮಧ್ಯಂತರ ವರದಿ ಸಲ್ಲಿಸಿದೆ. ಸರ್ಕಾರವು ಆಗಸ್ಟ್ 2021ರಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕಾಗಿ ಆದೇಶವನ್ನು ಹೊರಡಿಸಿತ್ತು. ರಾಜ್ಯ ಶಿಕ್ಷಣ ನೀತಿ ಆಯೋಗದ ಮಧ್ಯಂತರ ವರದಿಯ ಶಿಫಾರಸುಗಳ ಆಧಾರದ ಮೇಲೆ ಪದವಿ ಅವಧಿ ಮತ್ತು ಪಠ್ಯಕ್ರಮ ರಚನೆಯಲ್ಲಿ ಕೆಲವೊಂದು ಮಾರ್ಪಾಡುಗಳನ್ನು ಸೂಚಿಸಿದೆ.

ರಾಜ್ಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಪದವಿ ಕೋರ್ಸ್‌ಗಳಿಗೆ ಸಂಯೋಜನೆ ಹಾಗೂ ಪ್ರವೇಶಾತಿ ಪ್ರಕ್ರಿಯೆಯನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಯಾವುದೇ ವಿಳಂಬವಿಲ್ಲದೆ ಈ ಪ್ರಕ್ರಿಯೆಯನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲಾಗುವುದು. 2024-25ರ ಶೈಕ್ಷಣಿಕ ಸಾಲಿಗೆ ಸಂಬಂಧಿಸಿದಂತೆ ಕೆಳಕಂಡಂತೆ ಕೆಲವು ಬದಲಾವಣೆಗಳನ್ನು ಪ್ರಸ್ತಾಪಿಸಲಾಗಿದೆ.

2024-25ನೇ ಶೈಕ್ಷಣಿಕ ವರ್ಷಕ್ಕೆ ಕಾಲಾವಧಿ ಮತ್ತು ಪಠ್ಯಕ್ರಮದಲ್ಲಿ ಪ್ರಸ್ತಾಪಿಸಲಾಗಿರುವ ಬದಲಾವಣೆಗಳು:

ಆಯೋಗದ ಮಧ್ಯಂತರ ವರದಿಯ ಶಿಫಾರಸುಗಳನ್ನು ಆಧರಿಸಿ, ಸರ್ಕಾರವು ಉನ್ನತ ಶಿಕ್ಷಣದ ಪದವಿ ಕಾರ್ಯಕ್ರಮದಲ್ಲಿ ಮತ್ತು ಎಲ್ಲ ಸಾರ್ವಜನಿಕ ವಿಶ್ವವಿದ್ಯಾಲಯಗಳ ಹಾಗೂ ಸಂಯೋಜಿತ ಕಾಲೇಜುಗಳ ಪಠ್ಯಕ್ರಮದಲ್ಲಿ ಕೆಳಕಂಡ ಬದಲಾವಣೆಗಳನ್ನು ತರಲು ಉದ್ದೇಶಿಸಿದೆ.

1.ಪದವಿ ಕಾರ್ಯಕ್ರಮದ ಕಾಲಾವಧಿ: ಸ್ನಾತಕ ಪದವಿ ಕಾರ್ಯಕ್ರಮದ ಕಾಲಾವಧಿ ಕೇವಲ 3 ವರ್ಷಗಳು ಮಾತ್ರ ಆಗಿದ್ದು, ನಾಲ್ಕು ವರ್ಷದ ಪದವಿ ಕಾರ್ಯಕ್ರಮವನ್ನು ಪ್ರಾರಂಭಿಸುವ ಆಯ್ಕೆ ಇರುವುದಿಲ್ಲ. ಈ ಮೊದಲು ನಾಲ್ಕು ವರ್ಷದ ಪದವಿಯು ಆಯ್ಕೆಯಾಗಿತ್ತು.
2. ಮೂರು ವರ್ಷಗಳ ಪದವಿ ಕಾರ್ಯಕ್ರಮಕ್ಕೆ ಪಠ್ಯಕ್ರಮದ ಸ್ವರೂಪ: ಮೂರು ಬೇರೆಬೇರೆ ಪದವಿ ಪಠ್ಯಕ್ರಮದ ಚೌಕಟ್ಟುಗಳನ್ನು (CFW) ಪ್ರಸ್ತಾಪಿಸಿ ಅಂಗೀಕರಿಸಲಾಗಿದ್ದು, ಅವು ಈ ಕೆಳಗಿನಂತಿವೆ:

a. ಎಲ್ಲ 6 ಸೆಮಿಸ್ಮರ್‌ಗಳಲ್ಲಿ 3 ಮೇಜರ್‌ಗಳೊಡನೆ ಸಾಮಾನ್ಯ ಪದವಿ, ಅಥವಾ
b. 4ನೇ ಸೆಮಿಸ್ಟರ್ ವರೆಗೆ 3 ಮೇಜರ್ ಗಳು ಮತ್ತು 5 ಹಾಗೂ 6ನೇ ಸೆಮಿಸ್ಟರ್ ಗಳಲ್ಲಿ 1 Subject ನಲ್ಲಿ ವಿಶೇಷಜ್ಞತೆ (Specialization).
c. ಮೊದಲನೇ ಸೆಮಿಸ್ಟರ್ ನಿಂದ ಮೈನರ್ Subject ಗಳ ಜೊತೆಗೆ 1 Subject ನಲ್ಲಿ ವಿಶೇಷತೆ (Specialization) (ಉದಾ: ಬಿ.ಕಾಂ, ಬಿಬಿಎ, ಬಿಸಿಎ, ಬಿಎ/ಬಿಎಸ್ಸಿ) ಪಠ್ಯಕ್ರಮದ ವಿವರಗಳನ್ನು ಲಗತ್ತಿಸಲಾಗಿದೆ.

3.ಬಹು ಆಗಮನ/ನಿರ್ಗಮನ ಮೊದಲನೇ ವರ್ಷದ ನಂತರ ಸರ್ಟಿಫಿಕೇಟ್ ನೀಡುವ ಹಾಗೂ ಎರಡನೇ ವರ್ಷದ ನಂತರ ಡಿಪ್ಲೊಮಾ ನೀಡುವ (ಬಹು ಆಗಮನ/ನಿರ್ಗಮನು ಕುರಿತು, ಅಂತಿಮ ವರದಿ ಸಲ್ಲಿಕೆಯಾದ ನಂತರ ಶಿಫಾರಸುಗಳನ್ನು ಅನುಷ್ಠಾನಗೊಳಿಸುವ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ. ಆದರೆ ಈ ಹಂತದಲ್ಲಲ್ಲ.
4. ಪಠ್ಯಕ್ರಮ ರಚನೆಯಲ್ಲಿನ ಬದಲಾವಣೆಯ ಮೂಲಕ ಆಳವಾದ ಜ್ಞಾನ ಔದ್ಯಮಿಕ ಆಧಾರಿತ ಕೋರ್ಸ್‌ಗಳನ್ನು ಮತ್ತು ಪ್ರಾದೇಶಿಕ ನಿರ್ದಿಷ್ಟ ವಿಷಯಗಳನ್ನು ವಿಶ್ವವಿದ್ಯಾಲಯಗಳ ಅಧ್ಯಯನ ಮಂಡಳಿಗೆ ಸ್ವಾಯತ್ತತೆಯನ್ನು ನೀಡುವುದನ್ನು 5. Apprenticeship-embedded degree courses ಸಹ ಪಠ್ಯಕ್ರಮದ ಭಾಗವಾಗಿ ಪರಿಗಣಿಸಲಾಗಿದೆ.

ಪ್ರಸ್ತುತ ಚಾಲ್ತಿಯಲ್ಲಿರುವ ತಂಡಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ

ಈ ಬದಲಾವಣೆಗಳು 2021-22, 2022-23, 2023-24 ನೇ ವರ್ಷಗಳಲ್ಲಿ ಪ್ರವೇಶಾತಿ ಪಡೆದ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಪದವಿ ಕಾರ್ಯಕ್ರಮಗಳಿಗೆ 2021-22, 2022-23 ಮತ್ತು 2023-24 ನೇ ಶೈಕ್ಷಣಿಕ ವರ್ಷಗಳಲ್ಲಿ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳು ಕಾಲಾವಧಿ ಹಾಗೂ ಪಠ್ಯಕ್ರಮದ ಕುರಿತು ಸದ್ಯಕ್ಕೆ ಜಾರಿಯಲ್ಲಿರುವ ಸರ್ಕಾರದ ಆದೇಶ ಸಂಖ್ಯೆ: ಇಡಿ 260 ಯುಎನ್‌ಇ 2019 (ಭಾಗ-1), ದಿನಾಂಕ: 07-08-2021ರ ಅನುಸಾರವಾಗಿಯೇ ವಿದ್ಯಾಭ್ಯಾಸ ಮಾಡುತ್ತಾರೆ.

ಘೋಷಣೆ ಮಾಡಲ್ಪಟ್ಟಿರುವ ಬದಲಾವಣೆಗಳು ಶೈಕ್ಷಣಿಕ ವರ್ಷ 2024-25ರಿಂದ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ.

ಇದನ್ನೂ ಓದಿ | Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 7ರೊಳಗೆ ಅಪ್ಲೈ ಮಾಡಿ

2024-25ನೇ ಸಾಲಿನ ಸಂಯೋಜನೆ ಮತ್ತು ಪ್ರವೇಶಾತಿ ಪ್ರಕ್ರಿಯೆಗಳು

ವಿಶ್ವವಿದ್ಯಾಲಯಗಳಿಗೆ ಸಂಯೋಜನಾ ಪ್ರಕ್ರಿಯೆ ಮತ್ತು ಪ್ರವೇಶಾತಿಗಳು ಈ ಕೂಡಲೇ ಪ್ರಾರಂಭಗೊಳ್ಳುತ್ತವೆ. ಸರ್ಕಾರದ ಆದೇಶದಂತೆ ಪ್ರವೇಶಾತಿ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ. ಈ ಕುರಿತು ಈಗಾಗಲೇ ಎಲ್ಲ ವಿಶ್ವವಿದ್ಯಾಲಯಗಳಿಗೆ ಮಾಹಿತಿ ನೀಡಲಾಗಿದ್ದು, ಕಾಲೇಜುಗಳಿಗೆ ಸ್ಪಷ್ಟಿಕರಣ ಬೇಕಾದಲ್ಲಿ ತಮ್ಮ ಸಂಯೋಜಕ ವಿಶ್ವವಿದ್ಯಾಲಯಗಳನ್ನು ಕೇಳಬಹುದಾಗಿದೆ. 2024-25ನೇ ಶೈಕ್ಷಣಿಕ ಸಾಲಿನ ಸಂಯೋಜನಾ ಪ್ರಕ್ರಿಯೆಯು ಸಂಬಂಧಪಟ್ಟ ವಿಶ್ವವಿದ್ಯಾಲಯಗಳ ಸಂಯೋಜಿತ ಕಾಲೇಜುಗಳಿಗೆ ದಿನಾಂಕ 09.05.2024 ರಂದು UUCMS ತಂತ್ರಾಂಶದ ಮೂಲಕ ಪ್ರಾರಂಭವಾಗುತ್ತದೆ.

Continue Reading

ಕ್ರೈಂ

Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇಬ್ಬರು ಹೆಚ್ಚುವರಿ ಎಸ್‌ಪಿಪಿ ನೇಮಕ; ರಾಜ್ಯ ಸರ್ಕಾರದ ಮಹತ್ವದ ಆದೇಶ

Prajwal Revanna Case: ಈ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಹಿರಿಯ ವಕೀಲರಾದ ಅಶೋಕ್ ನಾಯಕ್ ಹಾಗೂ ಜಯನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯ ಸರ್ಕಾರವು ಆದೇಶದಲ್ಲಿ ತಿಳಿಸಿದೆ.

VISTARANEWS.COM


on

Prajwal Revanna Case Two additional SPPs appointed for SIT cases
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಎಸ್‌ಐಟಿ ಮುಂದೆ ದಾಖಲಾಗುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನು (Special Public Prosecutors) ನೇಮಿಸಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.

ಈ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಹಿರಿಯ ವಕೀಲರಾದ ಅಶೋಕ್ ನಾಯಕ್ ಹಾಗೂ ಜಯನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯ ಸರ್ಕಾರವು ಆದೇಶದಲ್ಲಿ ತಿಳಿಸಿದೆ.

ಎಚ್‌.ಡಿ. ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ; ಅಮಾವಾಸ್ಯೆ ದಿನವೇ ಜೈಲಿಗೆ ಶಿಫ್ಟ್‌!

ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಅವರ ಜಾಮೀನು ಅರ್ಜಿ ವಿಚಾರಣೆ ಬುಧವಾರ (ಮೇ 8) ನಡೆದಿದ್ದು, ಏಳು ದಿನ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ. ಹೀಗಾಗಿ ಪರಪ್ಪನ ಅಗ್ರಹಾರಕ್ಕೆ ರೇವಣ್ಣ ಶಿಫ್ಟ್‌ ಆಗಲಿದ್ದಾರೆ. ಅಮಾವಾಸ್ಯೆ ದಿನವೇ ರೇವಣ್ಣ ಅವರಿಗೆ ಜೈಲುವಾಸ ಆದಂತೆ ಆಗಿದೆ.

ವಾದ – ಪ್ರತಿವಾದ ಆಲಿಸಿದ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು, ರೇವಣ್ಣ ಅವರನ್ನುದ್ದೇಶಿಸಿ ನಿಮಗೆ ಪೊಲೀಸರಿಂದ ತೊಂದರೆ ಆಗಿದೆಯಾ? ಎಂದು ಪ್ರಶ್ನೆ ಮಾಡಿದರು. ಅದಕ್ಕೆ ರೇವಣ್ಣ, ಕಸ್ಟಡಿಗೆ ಬಂದು 3 ದಿನ ಆಗಿದೆ. ಮಾತ್ರೆ ತೆಗೆದುಕೊಳ್ಳಲು ತಡ ಆಗುತ್ತಿದೆ. ನನ್ನನ್ನು ಸುಮ್ಮನೆ ಸತಾಯಿಸುತ್ತಿದ್ದಾರೆ. ಪ್ರಕರಣ ದಾಖಲಾಗಿದ್ದು ನನಗೆ ಗೊತ್ತಿಲ್ಲ. ನನಗೆ ಕೇಳಿದ್ದನ್ನು ಹೇಳಿದ್ದೇನೆ. ಎಲ್ಲವೂ ದಾಖಲಿಸಿಕೊಂಡಿದ್ದಾರೆ. ಮೂರು ದಿನದಿಂದ ಹೊಟ್ಟೆ ನೋವು ಇದೆ. ಮಲಗಲು ಕೂಡ ಆಗಿಲ್ಲ. ಎಲ್ಲ ವಿಚಾರಣೆಯೂ ಮುಗಿದಿದೆ ಎಂದು ತನಿಖಾಧಿಕಾರಿಯು ನಿನ್ನೆಯೇ ಹೇಳಿದ್ದರು. ಆದರೆ, ಇಂದು ಮತ್ತೆ ವಿಚಾರಣೆ ಮಾಡಬೇಕಿದೆ ಎಂದು ಹೇಳುತ್ತಿದ್ದಾರೆ. ನನಗೆ ಹೊಟ್ಟೆ ನೋವಿದೆ. ಮೂರು ದಿನಗಳಿಂದ ಸತತವಾಗಿ ನಿದ್ದೆ ಮಾಡಿಲ್ಲ ಸರ್. ನಾನು ತಪ್ಪೇ ಮಾಡಿಲ್ಲ ಅಂದಾಗ ಯಾಕೆ ಒಪ್ಪಿಕೊಳ್ಳಬೇಕು? ದುರುದ್ದೇಶದಿಂದ ಎಲ್ಲವನ್ನೂ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮಾತು ಮುಂದುವರಿಸಿದ ಎಚ್.ಡಿ. ರೇವಣ್ಣ, ಪ್ರಜ್ವಲ್ ತಪ್ಪು ಮಾಡಿರಬಹುದು. ಅದರ ಬಗ್ಗೆ ನನಗೇನು ಗೊತ್ತಿಲ್ಲ. ಬೇಕು ಎಂದೇ ನನ್ನ ಮೇಲೆ ಈ ರೀತಿ ಮಾಡುತ್ತಿದ್ದಾರೆ. ನನಗೆ ಹುಷಾರಿಲ್ಲ, ಬೆಳಗ್ಗೆ ಡ್ರಿಪ್ಸ್ ಹಾಕಿದ್ದಾರೆ. ಹುಷಾರಿಲ್ಲ ಹೊಟ್ಟೆ ಉರಿ ಬಂದಿದೆ. ಗ್ಲುಕೋಸ್ ಹಾಕಿದ್ದಾರೆ. ನಾನು ಶಾಸಕನಾಗಿ 25 ವರ್ಷ ಕಳೆದಿದೆ. ಬೇಕಂತಲೇ ಈ ರೀತಿ ಮಾಡಲಾಗಿದೆ. ವಾರಂಟ್ ಇಲ್ಲದೆಯೆ ಮನೆಗೆ ಬಂದು ಅರೆಸ್ಟ್ ಮಾಡಿದರು ಎಂದೆಲ್ಲ ಮಾಹಿತಿ ನೀಡಿದರು.

ವಾದ – ಪ್ರತಿವಾದ ಆಲಿಸಿದ ನ್ಯಾಯಾದೀಶರು, ಮೇ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಹೀಗಾಗಿ ಇಂದಿನಿಂದ 7 ದಿನಗಳ ವರೆಗೆ ರೇವಣ್ಣ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಆಗಲಿದ್ದಾರೆ.

ವಾದ – ಪ್ರತಿವಾದ ಹೇಗಿತ್ತು?

ವಿಚಾರಣೆ ಆರಂಭವಾಗುತ್ತಿದ್ದಂತೆ, ಎಚ್‌.ಡಿ. ರೇವಣ್ಣ ಅವರನ್ನು ಕಸ್ಟಡಿಗೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಮನವಿ ಮಾಡಿದರು. ಇದಕ್ಕೆ ಎಸ್ಐಟಿ ರಿಮ್ಯಾಂಡ್ ಅಪ್ಲಿಕೇಶನ್ ಸಲ್ಲಿಸಿತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲರು, ಎಸ್ಐಟಿ ಸಲ್ಲಿಸಿರೋ ವರದಿಯಲ್ಲಿ ಆರೋಪಿ ತನಿಖೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಎಂದು ಉಲ್ಲೇಖಿಸಿದ್ದಾರೆ. ಮೌನ ವಹಿಸುವುದು ಸಹ ವ್ಯಕ್ತಿ ಹಕ್ಕಾಗಿದೆ ಎಂದು ಹೇಳಿದರು.

ಆದರೆ, ಈ ವೇಳೆ ಮಧ್ಯಪ್ರವೇಶ ಮಾಡಿದ ವಿಶೇಷ ಸಾರ್ವಜನಿಕ ಅಭಿಯೋಜಕರು, ಜಾಮೀನು ನೀಡದೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಮನವಿ ಮಾಡಿದರು. ಇದಕ್ಕೆ ರೇವಣ್ಣ ಪರ ವಕೀಲರಿಂದ ಆಕ್ಷೇಪಣೆ ವ್ಯಕ್ತವಾಗಿದೆ. ಅಲ್ಲದೆ, ಹಳೇ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ ಎಂದು ಹೇಳಿದರು.

ಆಗ ಎಸ್‌ಐಟಿ ಪರ ವಕೀಲರು, ಆರೋಪಿ ಜಾಮೀನು ನೀಡಿದರೆ ಸಾಕ್ಷಿಯನ್ನು ನಾಶ ಪಡಿಸುತ್ತಾರೆ. ಈಗಾಗಲೇ 354a ಪ್ರಕರಣ ದಾಖಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಈ ವಿಚಾರಗಳನ್ನು ಈ ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಿದರು.

ಆರೋಪಿ ಹೊಳೆನರಸೀಪುರ ತಾಲೂಕಿನಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಅವೆಲ್ಲವೂ ಜಾಮೀನು ಸಹಿತ ಸೆಕ್ಷನ್‌ಗಳಾಗಿವೆ ಎಂದು ವಾದ ಮಂಡಿಸಿದ್ದಾರೆ.

ರಿಮ್ಯಾಂಡ್ ಅಪ್ಲಿಕೇಷನ್‌ನಲ್ಲಿ ನೀಡಿರುವ ಮಾಹಿತಿ ಮೆಲೆ ರೇವಣ್ಣ ಪರ ವಕೀಲರು ವಾದ ಮಂಡಿಸಿದ್ದು, ಮೌನ ವಹಿಸುವುದು ತನಿಖೆಗೆ ಸಹಕರಿಸಿಲ್ಲ ಎಂದು ಅಲ್ಲ ಎಂದು ಸುಪ್ರೀಂ ಕೋರ್ಟ್ ಕೂಡ ಮೌನದಿಂದ ಇರುವುದನ್ನು ಒಪ್ಪಿದೆ ಎಂದು ಪ್ರಕರಣವೊಂದನ್ನು ಉಲ್ಲೇಖಿಸಿ ವಾದಿಸಿದ್ದಾರೆ. ಮಹಿಳೆಯನ್ನು ಸ್ವ – ಇಚ್ಛೆಯಿಂದ ಬೈಕ್‌ನಲ್ಲಿ ಕೂರಿಸಿಕೊಂಡು ಹೋದರೆ ಅಪಹರಣ ಏನಾಗುತ್ತದೆ? ಕಳೆದ ಮೂರು ದಿನಗಳಿಂದ ವಿಚಾರಣೆ ನಡೆಸಿದ್ದಾರೆ. ನೀಡಿದ ಮಾಹಿತಿಯನ್ನು ದಾಖಲಿಸಿಕೊಂಡಿದ್ದಾರೆ. ಆದರೆ, ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ನಕಾರಾತ್ಮಕ ಅಂತ ಹೇಳಿದರೆ ಏನು ಅರ್ಥ? ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Prajwal Revanna Case: ಕಾರ್ತಿಕ್‌ಗೆ ನೋಟಿಸ್‌ ನೀಡದ SIT; ರಾಜ್ಯಪಾಲ, ಕೋರ್ಟ್‌ ಮೊರೆ ಹೋಗಲು ಎಚ್‌ಡಿಕೆ ನಿರ್ಧಾರ

ಹಿಂದಿನ ವಿಚಾರಣೆಯಲ್ಲಿ ಏನಾಗಿತ್ತು?

ಜಾಮೀನು ನೀಡುವಂತೆ ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಧೀಶರು, ಆರೋಪಿ ಕಸ್ಟಡಿಯಲ್ಲಿದ್ದಾಗ ಜಾಮೀನು ಅರ್ಜಿ ವಿಚಾರಣೆ ನಡೆಸಲು ಯೋಗ್ಯವೇ ಎಂಬ ಬಗ್ಗೆ ಪ್ರಶ್ನೆ ಮಾಡಿದ್ದರು. ಆಗ ಈ ಬಗ್ಗೆ ರೇವಣ್ಣ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.‌ ನಾಗೇಶ್ ಅವರು ಕೆಲವು ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದರು. ವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ಸೂಚಿಸಿದ್ದು, ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿದ್ದರು.

Continue Reading

ಕ್ರೈಂ

Prajwal Revanna Case: ಎಚ್‌.ಡಿ. ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ; ಅಮಾವಾಸ್ಯೆ ದಿನವೇ ಜೈಲಿಗೆ ಶಿಫ್ಟ್‌!

Prajwal Revanna Case: ಪ್ರಜ್ವಲ್ ತಪ್ಪು ಮಾಡಿರಬಹುದು. ಅದರ ಬಗ್ಗೆ ನನಗೇನು ಗೊತ್ತಿಲ್ಲ. ಬೇಕು ಎಂದೇ ನನ್ನ ಮೇಲೆ ಈ ರೀತಿ ಮಾಡುತ್ತಿದ್ದಾರೆ. ನನಗೆ ಹುಷಾರಿಲ್ಲ, ಬೆಳಗ್ಗೆ ಡ್ರಿಪ್ಸ್ ಹಾಕಿದ್ದಾರೆ. ಹುಷಾರಿಲ್ಲ ಹೊಟ್ಟೆ ಉರಿ ಬಂದಿದೆ. ಗ್ಲುಕೋಸ್ ಹಾಕಿದ್ದಾರೆ. ನಾನು ಶಾಸಕನಾಗಿ 25 ವರ್ಷ ಕಳೆದಿದೆ. ಬೇಕಂತಲೇ ಈ ರೀತಿ ಮಾಡಲಾಗಿದೆ. ವಾರಂಟ್ ಇಲ್ಲದೆಯೆ ಮನೆಗೆ ಬಂದು ಅರೆಸ್ಟ್ ಮಾಡಿದರು ಎಂದೆಲ್ಲ ಎಚ್‌.ಡಿ. ರೇವಣ್ಣ ನ್ಯಾಯಾದೀಶರ ಮುಂದೆ ಮಾಹಿತಿ ನೀಡಿದರು. ವಾದ – ಪ್ರತಿವಾದ ಆಲಿಸಿದ ನ್ಯಾಯಾದೀಶರು, ಮೇ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಹೀಗಾಗಿ ಇಂದಿನಿಂದ 7 ದಿನಗಳ ವರೆಗೆ ರೇವಣ್ಣ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಆಗಲಿದ್ದಾರೆ.

VISTARANEWS.COM


on

Prajwal Revanna Case HD Revanna sent to 7 day judicial custody
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive) ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಅವರ ಜಾಮೀನು ಅರ್ಜಿ ವಿಚಾರಣೆ ಬುಧವಾರ (ಮೇ 8) ನಡೆದಿದ್ದು, ಏಳು ದಿನ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ. ಹೀಗಾಗಿ ಪರಪ್ಪನ ಅಗ್ರಹಾರಕ್ಕೆ ರೇವಣ್ಣ ಶಿಫ್ಟ್‌ ಆಗಲಿದ್ದಾರೆ. ಅಮಾವಾಸ್ಯೆ ದಿನವೇ ರೇವಣ್ಣ ಅವರಿಗೆ ಜೈಲುವಾಸ ಆದಂತೆ ಆಗಿದೆ.

ವಾದ – ಪ್ರತಿವಾದ ಆಲಿಸಿದ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು, ರೇವಣ್ಣ ಅವರನ್ನುದ್ದೇಶಿಸಿ ನಿಮಗೆ ಪೊಲೀಸರಿಂದ ತೊಂದರೆ ಆಗಿದೆಯಾ? ಎಂದು ಪ್ರಶ್ನೆ ಮಾಡಿದರು. ಅದಕ್ಕೆ ರೇವಣ್ಣ, ಕಸ್ಟಡಿಗೆ ಬಂದು 3 ದಿನ ಆಗಿದೆ. ಮಾತ್ರೆ ತೆಗೆದುಕೊಳ್ಳಲು ತಡ ಆಗುತ್ತಿದೆ. ನನ್ನನ್ನು ಸುಮ್ಮನೆ ಸತಾಯಿಸುತ್ತಿದ್ದಾರೆ. ಪ್ರಕರಣ ದಾಖಲಾಗಿದ್ದು ನನಗೆ ಗೊತ್ತಿಲ್ಲ. ನನಗೆ ಕೇಳಿದ್ದನ್ನು ಹೇಳಿದ್ದೇನೆ. ಎಲ್ಲವೂ ದಾಖಲಿಸಿಕೊಂಡಿದ್ದಾರೆ. ಮೂರು ದಿನದಿಂದ ಹೊಟ್ಟೆ ನೋವು ಇದೆ. ಮಲಗಲು ಕೂಡ ಆಗಿಲ್ಲ. ಎಲ್ಲ ವಿಚಾರಣೆಯೂ ಮುಗಿದಿದೆ ಎಂದು ತನಿಖಾಧಿಕಾರಿಯು ನಿನ್ನೆಯೇ ಹೇಳಿದ್ದರು. ಆದರೆ, ಇಂದು ಮತ್ತೆ ವಿಚಾರಣೆ ಮಾಡಬೇಕಿದೆ ಎಂದು ಹೇಳುತ್ತಿದ್ದಾರೆ. ನನಗೆ ಹೊಟ್ಟೆ ನೋವಿದೆ. ಮೂರು ದಿನಗಳಿಂದ ಸತತವಾಗಿ ನಿದ್ದೆ ಮಾಡಿಲ್ಲ ಸರ್. ನಾನು ತಪ್ಪೇ ಮಾಡಿಲ್ಲ ಅಂದಾಗ ಯಾಕೆ ಒಪ್ಪಿಕೊಳ್ಳಬೇಕು? ದುರುದ್ದೇಶದಿಂದ ಎಲ್ಲವನ್ನೂ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮಾತು ಮುಂದುವರಿಸಿದ ಎಚ್.ಡಿ. ರೇವಣ್ಣ, ಪ್ರಜ್ವಲ್ ತಪ್ಪು ಮಾಡಿರಬಹುದು. ಅದರ ಬಗ್ಗೆ ನನಗೇನು ಗೊತ್ತಿಲ್ಲ. ಬೇಕು ಎಂದೇ ನನ್ನ ಮೇಲೆ ಈ ರೀತಿ ಮಾಡುತ್ತಿದ್ದಾರೆ. ನನಗೆ ಹುಷಾರಿಲ್ಲ, ಬೆಳಗ್ಗೆ ಡ್ರಿಪ್ಸ್ ಹಾಕಿದ್ದಾರೆ. ಹುಷಾರಿಲ್ಲ ಹೊಟ್ಟೆ ಉರಿ ಬಂದಿದೆ. ಗ್ಲುಕೋಸ್ ಹಾಕಿದ್ದಾರೆ. ನಾನು ಶಾಸಕನಾಗಿ 25 ವರ್ಷ ಕಳೆದಿದೆ. ಬೇಕಂತಲೇ ಈ ರೀತಿ ಮಾಡಲಾಗಿದೆ. ವಾರಂಟ್ ಇಲ್ಲದೆಯೆ ಮನೆಗೆ ಬಂದು ಅರೆಸ್ಟ್ ಮಾಡಿದರು ಎಂದೆಲ್ಲ ಮಾಹಿತಿ ನೀಡಿದರು.

ವಾದ – ಪ್ರತಿವಾದ ಆಲಿಸಿದ ನ್ಯಾಯಾದೀಶರು, ಮೇ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಹೀಗಾಗಿ ಇಂದಿನಿಂದ 7 ದಿನಗಳ ವರೆಗೆ ರೇವಣ್ಣ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಆಗಲಿದ್ದಾರೆ.

ವಾದ – ಪ್ರತಿವಾದ ಹೇಗಿತ್ತು?

ವಿಚಾರಣೆ ಆರಂಭವಾಗುತ್ತಿದ್ದಂತೆ, ಎಚ್‌.ಡಿ. ರೇವಣ್ಣ ಅವರನ್ನು ಕಸ್ಟಡಿಗೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಮನವಿ ಮಾಡಿದರು. ಇದಕ್ಕೆ ಎಸ್ಐಟಿ ರಿಮ್ಯಾಂಡ್ ಅಪ್ಲಿಕೇಶನ್ ಸಲ್ಲಿಸಿತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲರು, ಎಸ್ಐಟಿ ಸಲ್ಲಿಸಿರೋ ವರದಿಯಲ್ಲಿ ಆರೋಪಿ ತನಿಖೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಎಂದು ಉಲ್ಲೇಖಿಸಿದ್ದಾರೆ. ಮೌನ ವಹಿಸುವುದು ಸಹ ವ್ಯಕ್ತಿ ಹಕ್ಕಾಗಿದೆ ಎಂದು ಹೇಳಿದರು.

ಆದರೆ, ಈ ವೇಳೆ ಮಧ್ಯಪ್ರವೇಶ ಮಾಡಿದ ವಿಶೇಷ ಸಾರ್ವಜನಿಕ ಅಭಿಯೋಜಕರು, ಜಾಮೀನು ನೀಡದೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಮನವಿ ಮಾಡಿದರು. ಇದಕ್ಕೆ ರೇವಣ್ಣ ಪರ ವಕೀಲರಿಂದ ಆಕ್ಷೇಪಣೆ ವ್ಯಕ್ತವಾಗಿದೆ. ಅಲ್ಲದೆ, ಹಳೇ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ ಎಂದು ಹೇಳಿದರು.

ಆಗ ಎಸ್‌ಐಟಿ ಪರ ವಕೀಲರು, ಆರೋಪಿ ಜಾಮೀನು ನೀಡಿದರೆ ಸಾಕ್ಷಿಯನ್ನು ನಾಶ ಪಡಿಸುತ್ತಾರೆ. ಈಗಾಗಲೇ 354a ಪ್ರಕರಣ ದಾಖಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಈ ವಿಚಾರಗಳನ್ನು ಈ ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಿದರು.

ಆರೋಪಿ ಹೊಳೆನರಸೀಪುರ ತಾಲೂಕಿನಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಅವೆಲ್ಲವೂ ಜಾಮೀನು ಸಹಿತ ಸೆಕ್ಷನ್‌ಗಳಾಗಿವೆ ಎಂದು ವಾದ ಮಂಡಿಸಿದ್ದಾರೆ.

ರಿಮ್ಯಾಂಡ್ ಅಪ್ಲಿಕೇಷನ್‌ನಲ್ಲಿ ನೀಡಿರುವ ಮಾಹಿತಿ ಮೆಲೆ ರೇವಣ್ಣ ಪರ ವಕೀಲರು ವಾದ ಮಂಡಿಸಿದ್ದು, ಮೌನ ವಹಿಸುವುದು ತನಿಖೆಗೆ ಸಹಕರಿಸಿಲ್ಲ ಎಂದು ಅಲ್ಲ ಎಂದು ಸುಪ್ರೀಂ ಕೋರ್ಟ್ ಕೂಡ ಮೌನದಿಂದ ಇರುವುದನ್ನು ಒಪ್ಪಿದೆ ಎಂದು ಪ್ರಕರಣವೊಂದನ್ನು ಉಲ್ಲೇಖಿಸಿ ವಾದಿಸಿದ್ದಾರೆ. ಮಹಿಳೆಯನ್ನು ಸ್ವ – ಇಚ್ಛೆಯಿಂದ ಬೈಕ್‌ನಲ್ಲಿ ಕೂರಿಸಿಕೊಂಡು ಹೋದರೆ ಅಪಹರಣ ಏನಾಗುತ್ತದೆ? ಕಳೆದ ಮೂರು ದಿನಗಳಿಂದ ವಿಚಾರಣೆ ನಡೆಸಿದ್ದಾರೆ. ನೀಡಿದ ಮಾಹಿತಿಯನ್ನು ದಾಖಲಿಸಿಕೊಂಡಿದ್ದಾರೆ. ಆದರೆ, ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ನಕಾರಾತ್ಮಕ ಅಂತ ಹೇಳಿದರೆ ಏನು ಅರ್ಥ? ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Prajwal Revanna Case: ಕಾರ್ತಿಕ್‌ಗೆ ನೋಟಿಸ್‌ ನೀಡದ SIT; ರಾಜ್ಯಪಾಲ, ಕೋರ್ಟ್‌ ಮೊರೆ ಹೋಗಲು ಎಚ್‌ಡಿಕೆ ನಿರ್ಧಾರ

ಹಿಂದಿನ ವಿಚಾರಣೆಯಲ್ಲಿ ಏನಾಗಿತ್ತು?

ಜಾಮೀನು ನೀಡುವಂತೆ ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಧೀಶರು, ಆರೋಪಿ ಕಸ್ಟಡಿಯಲ್ಲಿದ್ದಾಗ ಜಾಮೀನು ಅರ್ಜಿ ವಿಚಾರಣೆ ನಡೆಸಲು ಯೋಗ್ಯವೇ ಎಂಬ ಬಗ್ಗೆ ಪ್ರಶ್ನೆ ಮಾಡಿದ್ದರು. ಆಗ ಈ ಬಗ್ಗೆ ರೇವಣ್ಣ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.‌ ನಾಗೇಶ್ ಅವರು ಕೆಲವು ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದರು. ವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ಸೂಚಿಸಿದ್ದು, ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿದ್ದರು.

Continue Reading

ರಾಜಕೀಯ

Prajwal Revanna Case: ಒಕ್ಕಲಿಗ ನಾಯಕರ ಪೈಪೋಟಿಯಂತೆ, ರಾಜೀನಾಮೆ ಬೇಕಂತೆ; ಕೊಡ್ತೇನೆ ಅಂದ್ರ ಡಿಕೆಶಿ!

Prajwal Revanna Case: ಎಚ್.ಡಿ. ಕುಮಾರಸ್ವಾಮಿ ಅವರ ಕೆಲಸ ಮುಗಿಸೋದೇ ಅಲ್ವಾ? ಅವರು ಕಿಂಗ್ ಆಫ್ ಬ್ಲ್ಯಾಕ್‌ಮೇಲರ್. ‌ಅಧಿಕಾರಿಗಳು, ರಾಜಕಾರಣಿಗಳನ್ನು ಹೆದರಿಸುತ್ತಿದ್ದಾರೆ. ಅವರದು ಇದೇ ಕೆಲಸವಾಗಿದೆ. ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆ ಮಾಡಲು ಟೈಮ್ ಇದೆ. ಅಸೆಂಬ್ಲಿಯೂ ಇದೆ. ಎಲ್ಲವನ್ನೂ ತಗೊಂಡ್ ಬರ್ಲಿ ಚರ್ಚೆ ಮಾಡೋಣ. ಮೊದಲು ಅವರ ಹೆಸರು ಸ್ಟ್ಯಾಂಡ್ ಆಗಲಿ, ದೇವೇಗೌಡರು ನನ್ನ ಹೆಸರು ತೆಗೆದುಕೊಳ್ಳುವುದು ಬೇಡ ಅಂದರು. ಅವರದ್ದೇ ಬೇರೆ ಫ್ಯಾಮಿಲಿ, ನಮ್ಮದೇ ಬೇರೆ ಫ್ಯಾಮಿಲಿ ಎಂದಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಬೇಕು ಎಂದವರು ಈಗ ಯಾಕೆ ಉರಿ ಮಾಡಿಕೊಳ್ಳುತ್ತಿದ್ದಾರೆ? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Prajwal Revanna Case Will resign says DK Shivakumar and slams HD Kumaraswamy
Koo

ಚಿಕ್ಕಮಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣವು (Hassan Pen Drive Case) ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನಡುವೆ ಭಾರಿ ವಾಕ್ಸಮರಕ್ಕೆ ಕಾರಣವಾಗಿದೆ. ಆರೋಪ – ಪ್ರತ್ಯಾರೋಪಗಳು ತಾರಕಕ್ಕೇರಿವೆ. ಮಂಗಳವಾರವಷ್ಟೇ ಸುದ್ದಿಗೋಷ್ಠಿ ನಡೆಸಿದ್ದ ಎಚ್‌ಡಿಕೆ, ಸಂಪುಟದಿಂದ ಡಿಕೆಶಿ ವಜಾಕ್ಕೆ ಆಗ್ರಹಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಡಿ.ಕೆ. ಶಿವಕುಮಾರ್‌, ಒಕ್ಕಲಿಗ ನಾಯಕರ ಪೈಪೋಟಿಯಂತೆ, ರಾಜೀನಾಮೆ ಬೇಕಂತೆ ಕೊಡೋಣ ಎಂದು ವ್ಯಂಗ್ಯವಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಚುನಾವಣೆ ಮುಗಿಯಿತು. ನಾನೀಗ ಸಿದ್ದಾರ್ಥ್ ಮನೆಗೆ ರೆಸ್ಟ್ ಮಾಡಲು ಬಂದಿದ್ದೇನೆ. ಪೆನ್‌ಡ್ರೈವ್ ವಿಚಾರ ಎಲ್ಲವೂ ಕುಮಾರಸ್ವಾಮಿಗೆ ಗೊತ್ತು. ಕುಮಾರಣ್ಣನಿಗೆ ನನ್ನ ರಾಜೀನಾಮೆ ಬೇಕಂತೆ. ಒಕ್ಕಲಿಗ ನಾಯಕರ ಪೈಪೋಟಿಯಂತೆ, ರಾಜೀನಾಮೆ ಬೇಕಂತೆ ಕೊಡೋಣ ಎಂದು ಹೇಳಿದರು.

ಅಸೆಂಬ್ಲಿಗೆ ಎಲ್ಲವನ್ನೂ ತಗೊಂಡ್ ಬರ್ಲಿ ಚರ್ಚೆ ಮಾಡೋಣ

ಎಚ್.ಡಿ. ಕುಮಾರಸ್ವಾಮಿ ಅವರ ಕೆಲಸ ಮುಗಿಸೋದೇ ಅಲ್ವಾ? ಅವರು ಕಿಂಗ್ ಆಫ್ ಬ್ಲ್ಯಾಕ್‌ಮೇಲರ್. ‌ಅಧಿಕಾರಿಗಳು, ರಾಜಕಾರಣಿಗಳನ್ನು ಹೆದರಿಸುತ್ತಿದ್ದಾರೆ. ಅವರದು ಇದೇ ಕೆಲಸವಾಗಿದೆ. ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆ ಮಾಡಲು ಟೈಮ್ ಇದೆ. ಅಸೆಂಬ್ಲಿಯೂ ಇದೆ. ಎಲ್ಲವನ್ನೂ ತಗೊಂಡ್ ಬರ್ಲಿ ಚರ್ಚೆ ಮಾಡೋಣ. ಮೊದಲು ಅವರ ಹೆಸರು ಸ್ಟ್ಯಾಂಡ್ ಆಗಲಿ, ದೇವೇಗೌಡರು ನನ್ನ ಹೆಸರು ತೆಗೆದುಕೊಳ್ಳುವುದು ಬೇಡ ಅಂದರು. ಅವರದ್ದೇ ಬೇರೆ ಫ್ಯಾಮಿಲಿ, ನಮ್ಮದೇ ಬೇರೆ ಫ್ಯಾಮಿಲಿ ಎಂದಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಬೇಕು ಎಂದವರು ಈಗ ಯಾಕೆ ಉರಿ ಮಾಡಿಕೊಳ್ಳುತ್ತಿದ್ದಾರೆ? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದರು.

ಹೋಗಿ ವಾದ ಮಾಡಲಿ

ಇವರು ವಕೀಲರಾ? ನ್ಯಾಯಾಧೀಶರಾ? ಹೋಗಿ ವಾದ ಮಾಡಲಿ. ಶಿವಕುಮಾರ್, ಸಿದ್ದರಾಮಯ್ಯ, ಸುರ್ಜೆವಾಲ ಇನ್ವೆಸ್ಟಿಗೇಷನ್ ಟೀಮ್ ಎಂದು ಹೇಳುತ್ತಾರೆ. ಆದರೆ, ಈ ಪ್ರಕರಣದ ಕಥಾ ನಾಯಕ, ಡೈರೆಕ್ಟರ್, ಪ್ರೊಡ್ಯೂಸರ್ ಎಲ್ಲವೂ ಇವರೇ ಆಗಿದ್ದಾರೆ. ಎಲ್ಲವೂ ಗೊತ್ತಿದೆ. ಅವರ ಕಾರ್ಯಕರ್ತರು ಅಂತೆ, ಮರ್ಯಾದೆ ಇದ್ದರೆ ಹೋಗಿ ಧೈರ್ಯ ತುಂಬಲಿ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಇದನ್ನೂ ಓದಿ: Prajwal Revanna Case: ವಿಡಿಯೋ ಕಿಂಗ್‌ಪಿನ್‌ ಕಾರ್ತಿಕ್‌ ಕಾಂಗ್ರೆಸ್‌ ಅಭ್ಯರ್ಥಿ ಜೊತೆ ಕ್ಲೋಸ್;‌ ʼಕೈʼವಾಡಕ್ಕೆ ಸಾಕ್ಷಿ ಫೋಟೋಗಳು ಇಲ್ಲಿವೆ!

ಮೋರ್‌ ಸ್ಟ್ರಾಂಗ್‌ ಮೋರ್‌ ಎನಿಮಿ

ನನ್ನ ಮೇಲೆ ಆರೋಪ ಮಾಡದಿದ್ದರೆ ಎಚ್.ಡಿ. ಕುಮಾರಸ್ವಾಮಿಗೆ ಮಾರ್ಕೆಟ್‌ ಓಡಲ್ಲ. ನನ್ನ ಹೆಸರು ಇರದಿದ್ದರೆ ನೀವು ಮಾಧ್ಯಮದಲ್ಲಿ ತೋರಿಸಲಲ್ಲ. ನನ್ನ ಹೆಸರು ಇಲ್ಲದಿದ್ರೆ ಪಾಪ ಅವರಿಗೆ ನಿದ್ದೆಯೇ ಬರಲ್ಲ. ಮೋರ್‌ ಸ್ಟ್ರಾಂಗ್‌ ಮೋರ್‌ ಎನಿಮಿ, ಲೆಸ್‌ ಸ್ಟ್ರಾಂಗ್‌ ಲೆಸ್‌ ಎನಿಮಿ ಎಂದು ಡಿ.ಕೆ. ಶಿವಕುಮಾರ್‌ ಮಾರ್ಮಿಕವಾಗಿ ನುಡಿದರು.

Continue Reading
Advertisement
State Education Policy
ಕರ್ನಾಟಕ1 min ago

State Education Policy: 3 ವರ್ಷದ ಪದವಿಗೆ ರಾಜ್ಯ ಸರ್ಕಾರ ಅಸ್ತು; ಎಸ್‌ಇಪಿ ಆಯೋಗದ ಶಿಫಾರುಸುಗಳ ಅನ್ವಯ ಆದೇಶ

Actor Ravichandran female lead in ravichandrans premaloka 2
ಸ್ಯಾಂಡಲ್ ವುಡ್4 mins ago

Actor Ravichandran: ಕನಸುಗಾರನ ʻಪ್ರೇಮಲೋಕ 2’ ಚಿತ್ರಕ್ಕೆ ನಾಯಕಿ ಫಿಕ್ಸ್‌!

Prajwal Revanna Case Two additional SPPs appointed for SIT cases
ಕ್ರೈಂ8 mins ago

Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇಬ್ಬರು ಹೆಚ್ಚುವರಿ ಎಸ್‌ಪಿಪಿ ನೇಮಕ; ರಾಜ್ಯ ಸರ್ಕಾರದ ಮಹತ್ವದ ಆದೇಶ

Paris Olympics 2024
ಕ್ರೀಡೆ30 mins ago

Paris Olympics 2024: 19ನೇ ಶತಮಾನದ ಹಡಗಿನಲ್ಲಿ ಇಂದು ಫ್ರಾನ್ಸ್‌ಗೆ ಬರಲಿದೆ ಒಲಿಂಪಿಕ್‌ ಜ್ಯೋತಿ

Chicken Shawarma
ಪ್ರಮುಖ ಸುದ್ದಿ42 mins ago

Chicken Shawarma: ಬೀದಿ ಬದಿ ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು; ಚಿಕನ್‌ ಪ್ರಿಯರೇ ಎಚ್ಚರ!

Thug Life Simbu is the new gun wielding gangster in town
South Cinema45 mins ago

Thug Life Movie: ಕಮಲ್‌ ಹಾಸನ್‌ ಸಿನಿಮಾಗೆ ಕಾಲಿವುಡ್‌ ನಟ ಸಿಂಬು ಎಂಟ್ರಿ!

Viral video
ವೈರಲ್ ನ್ಯೂಸ್1 hour ago

Viral Video: ಅಂಬಾನಿಗಿಂತಲೂ ರಿಚ್‌ ಈತ.. ಗದ್ದೆ ಉಳುಮೆಗೆ 20 ಲಕ್ಷದ ಕಾರೇ ಬೇಕು..!

Prajwal Revanna Case HD Revanna sent to 7 day judicial custody
ಕ್ರೈಂ1 hour ago

Prajwal Revanna Case: ಎಚ್‌.ಡಿ. ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ; ಅಮಾವಾಸ್ಯೆ ದಿನವೇ ಜೈಲಿಗೆ ಶಿಫ್ಟ್‌!

Shakib Al Hasan
ಕ್ರೀಡೆ1 hour ago

Shakib Al Hasan: ಸೆಲ್ಫಿ ತೆಗೆಯಲು ಬಂದ ಅಭಿಮಾನಿಗೆ ಥಳಿಸಲು ಮುಂದಾದ ಶಕಿಬ್; ವಿಡಿಯೊ ವೈರಲ್​

Ram Mandir
ದೇಶ1 hour ago

Ram Mandir: ರಾಮಮಂದಿರ ‘ಯೂಸ್‌ಲೆಸ್’ ಎಂದ ಸಮಾಜವಾದಿ ಪಕ್ಷದ ನಾಯಕ; ಬಿಜೆಪಿ ಆಕ್ರೋಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ12 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ20 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ23 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 day ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌