Prajwal Revanna Case: ವಿಡಿಯೊ ವೈರಲ್ ಅಪರಾಧದ ಸೆಕ್ಷನ್ ಹೇಳಿದ ಎಚ್‌ಡಿಕೆ; ಸಿಎಂ ಕುರ್ಚಿಯಲ್ಲಿ ಊಸರವಳ್ಳಿ ಎಂದು ಕಿಡಿ - Vistara News

ರಾಜಕೀಯ

Prajwal Revanna Case: ವಿಡಿಯೊ ವೈರಲ್ ಅಪರಾಧದ ಸೆಕ್ಷನ್ ಹೇಳಿದ ಎಚ್‌ಡಿಕೆ; ಸಿಎಂ ಕುರ್ಚಿಯಲ್ಲಿ ಊಸರವಳ್ಳಿ ಎಂದು ಕಿಡಿ

Prajwal Revanna Case: ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ! ಕರ್ನಾಟಕದ ಮುಖ್ಯಮಂತ್ರಿ ಕುರ್ಚಿಯ ಮೇಲೆ ನೀವು ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೋ? ನನಗಂತೂ ಅನುಮಾನ!! ಇಷ್ಟು ಬಣ್ಣಗೇಡಿ ವರ್ತನೆಯನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ ನಾನು. ಅತೀವ ವಿಷಾದ ಮತ್ತು ನೋವಿನಿಂದಲೇ ಈ ಮಾತು ಹೇಳುತ್ತಿದ್ದೇನೆ ಸಿದ್ದರಾಮಯ್ಯನವರೇ ಎಂದು ಕುಮಾರಸ್ವಾಮಿ ಕೇಳಿದ್ದಾರೆ. ಮಾತೆತ್ತಿದರೆ, ‘ನಾನು ಲಾಯರ್ ಗಿರಿ ಮಾಡ್ತಾ ಇದ್ದೆ. ಸುಮ್ಕೆ ಕೂತ್ಕಳಿ’ ಎಂದು ಎಲ್ಲರ ಬಾಯಿ ಮುಚ್ಚಿಸುತ್ತಿದ್ದ ನೀವು, ಈಗ ನೀವೇ ಬಾಯಿ ಮುಚ್ಚಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

VISTARANEWS.COM


on

Union Minister HD Kumaraswamy meeting with high officials of HMT Company in Bengaluru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಕೇಸ್‌ಗೆ (Prajwal Revanna Case) ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಎಚ್‌ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದರು. ನೊಂದ ಮಹಿಳೆಯರ ವಿಡಿಯೊಗಳನ್ನು ಜಾಲತಾಣಗಳಲ್ಲಿ ಹಂಚುವುದು ಮುಖ್ಯವಲ್ಲ. ಅದು ಅಪರಾಧವೂ ಅಲ್ಲ! ಅಶ್ಲೀಲ ವಿಡಿಯೊಗಳನ್ನು ವೈರಲ್ ಮಾಡಿದ್ದು ದೊಡ್ಡ ಅಪರಾಧ ಎನ್ನುವುದು ಯಾವ ಸೆಕ್ಷನ್‌ನಲ್ಲಿದೆ? ಅದನ್ನು ಯಾವ ಸೆಕ್ಷನ್‌ನಲ್ಲಿ ಉಲ್ಲೇಖಿಸಿದ್ದಾರೆ? ಕುಮಾರಸ್ವಾಮಿ ಪ್ರಕಾರ ಯಾವುದಾದರೂ ಹೊಸ ಸೆಕ್ಷನ್ ಇದ್ದರೆ ಹೇಳಲಿ ಎಂದು ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಸೆಕ್ಷನ್‌ಗಳ ಸಮೇತ ತಿರುಗೇಟು ಕೊಟ್ಟಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಎಚ್.ಡಿ. ಕುಮಾರಸ್ವಾಮಿ, ಸೆಕ್ಷನ್‌ಗಳ ಮಾಹಿತಿಯುಳ್ಳ ಎಸ್‌ಐಟಿ ಪತ್ರಿಕಾ ಹೇಳಿಕೆಯನ್ನು ಟ್ಯಾಗ್ ಮಾಡಿ ಸಿಎಂ ಸಿದ್ದರಾಮಯ್ಯ ಅವರ ಕಾಲೆಳೆದಿದ್ದಾರೆ.

ಸಿಎಂ ಕುರ್ಚಿಯಲ್ಲಿ ಊಸರವಳ್ಳಿ!!

ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ! ಕರ್ನಾಟಕದ ಮುಖ್ಯಮಂತ್ರಿ ಕುರ್ಚಿಯ ಮೇಲೆ ನೀವು ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೋ? ನನಗಂತೂ ಅನುಮಾನ!! ಇಷ್ಟು ಬಣ್ಣಗೇಡಿ ವರ್ತನೆಯನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ ನಾನು. ಅತೀವ ವಿಷಾದ ಮತ್ತು ನೋವಿನಿಂದಲೇ ಈ ಮಾತು ಹೇಳುತ್ತಿದ್ದೇನೆ ಸಿದ್ದರಾಮಯ್ಯನವರೇ ಎಂದು ಕುಮಾರಸ್ವಾಮಿ ಕೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದೀರಿ. “ನೊಂದ ಮಹಿಳೆಯರ ವಿಡಿಯೊಗಳನ್ನು ಜಾಲತಾಣಗಳಲ್ಲಿ ಹಂಚುವುದು, ಹರಡುವುದು ಮುಖ್ಯವಲ್ಲ. ಅದು ಅಪರಾಧವೂ ಅಲ್ಲ! ಅಶ್ಲೀಲ ವಿಡಿಯೊಗಳನ್ನು ವೈರಲ್ ಮಾಡಿದ್ದು ದೊಡ್ಡ ಅಪರಾಧ ಎನ್ನುವುದು ಯಾವ ಸೆಕ್ಷನ್‌ನಲ್ಲಿದೆ? ಅದನ್ನು ಯಾವ ಸೆಕ್ಷನ್‌ನಲ್ಲಿ ಉಲ್ಲೇಖಿಸಿದ್ದಾರೆ? ಕುಮಾರಸ್ವಾಮಿ ಪ್ರಕಾರ ಯಾವುದಾದರೂ ಹೊಸ ಸೆಕ್ಷನ್ ಇದ್ದರೆ ಹೇಳಲಿ” ಎಂದು ನನಗೆ ಪ್ರಶ್ನೆ ಮಾಡಿದ್ದೀರಿ ಎಂದು ಸಿಎಂಗೆ ಎಚ್.ಡಿ. ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

ಎಸ್‌ಐಟಿ ನೀಡಿದ್ದ ಮಾಧ್ಯಮ ಪ್ರಕಟಣೆಯನ್ನು ಪೋಸ್ಟ್‌ ಮಾಡಿದ ಎಚ್‌ಡಿಕೆ

ದಯಮಾಡಿ ವಕೀಲಿಕೆ ಮಾಡಬೇಡಿ

ನಿಜ, ನೀವು ಸ್ವಯಂಘೋಷಿತ ಸಂವಿಧಾನ ತಜ್ಞರು! ಪ್ರ(ಕು)ಖ್ಯಾತ ಮಾಜಿ ವಕೀಲರು!! ಹಾಲಿ ಮುಖ್ಯಮಂತ್ರಿಗಳು. ಆದರೂ ನಿಮ್ಮ ಪ್ರಶ್ನೆಗೆ ಉತ್ತರ ಕೊಡುವುದು ನನ್ನ ಧರ್ಮ. ಆದರೆ, ನಿಮಗೆ ಈ ಪರಿ ಅಜ್ಞಾನವೇ ಎನ್ನುವುದು ನನಗೆ ಸೋಜಿಗ. ಮಾತೆತ್ತಿದರೆ, ‘ನಾನು ಲಾಯರ್ ಗಿರಿ ಮಾಡ್ತಾ ಇದ್ದೆ. ಸುಮ್ಕೆ ಕೂತ್ಕಳಿ’ ಎಂದು ಎಲ್ಲರ ಬಾಯಿ ಮುಚ್ಚಿಸುತ್ತಿದ್ದ ನೀವು, ಈಗ ನೀವೇ ಬಾಯಿ ಮುಚ್ಚಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ಇದೇ ಕಾರಣಕ್ಕೆ ನಾನು ನಿಮ್ಮನ್ನು ಅತ್ಯಂತ ವಿನಮ್ರತೆಯಿಂದ ವಿನಂತಿ ಮಾಡಿಕೊಂಡಿದ್ದು, ‘ದಯಮಾಡಿ ವಕೀಲಿಕೆ ಮಾಡಬೇಡಿ’ ಎಂದು. ಕಾನೂನಿನ ಬಗ್ಗೆ ಸಾಸಿವೆ ಕಾಳಿನಷ್ಟು ತಿಳಿವಳಿಕೆ ಇಲ್ಲದವರೊಬ್ಬರು ‘ನಾನೂ ವಕೀಲ.. ನಾನೂ ವಕೀಲಿಕೆ ಮಾಡ್ತಾ ಇದ್ದೆ’ ಎಂದು ಹೇಳಿಕೊಳ್ಳುವುದು ಗೌರವಾನ್ವಿತ ವಕೀಲ ಸಮುದಾಯಕ್ಕೆ ಮಾಡುವ
ಅಪಚಾರ. ತಮಗೆ ಇನ್ನಾದರೂ ಇರಲಿ ಶಿಷ್ಟಾಚಾರ ಎಂದು ಸಿಎಂಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಿವಿಮಾತು ಹೇಳಿದ್ದಾರೆ.

ಎಸ್‌ಐಟಿ ರೂಲ್ಸ್ ಗೊತ್ತಿಲ್ಲವೇ?

“ನೊಂದ ಮಹಿಳೆಯರ ವಿಡಿಯೊಗಳನ್ನು ಹಂಚುವುದು ಅಪರಾಧ ಎಂದು ಯಾವ ಸೆಕ್ಷನ್‌ನಲ್ಲಿ ಹೇಳಿದ್ದಾರೆ” ಎಂದು ಒಂದನೇ ಕ್ಲಾಸು ಮಗುವಿನಂತೆ ಕೇಳಿದ್ದೀರಿ! ನಿಮ್ಮ ಸರ್ಕಾರದ ಅಧೀನದಲ್ಲಿರುವ, ನೀವೇ ಆದೇಶಿಸಿ ರಚನೆ ಮಾಡಿಸಿರುವ ವಿಶೇಷ ತನಿಖಾ ತಂಡ (SIT) ಹೊರಡಿಸಿರುವ ಪತ್ರಿಕಾ ಪ್ರಕಟಣೆ, ರೂಪಿಸಿರುವ ಕಾನೂನುಬದ್ಧ ನಿಯಮಗಳು ‘ಸಾಕ್ಷಾತ್ ಸಿಎಂ’ ಆಗಿರುವ ನಿಮ್ಮ ಗಮನಕ್ಕೇ ಬಂದಿಲ್ಲವೆಂದರೆ!!??‌ ತಾವು ಸರ್ಕಾರ ನಡೆಸುತ್ತಿರುವಿರೋ ಅಥವಾ ವಿಧಾನಸೌಧವನ್ನು ಟೈಮ್ ಪಾಸ್ ಕ್ಲಬ್ ಮಾಡಿಕೊಂಡಿರುವಿರೋ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ನಿಮ್ಮ ಘನತವೆತ್ತ ಅವಗಾಹನೆಗೆ ಎಸ್‌ಐಟಿ ಹೊರಡಿಸಿರುವ ಪ್ರತಿಕಾ ಪ್ರಕಟಣೆಯನ್ನು ಇಲ್ಲಿ ಲಗತ್ತಿಸಿದ್ದೇನೆ. ದಯಮಾಡಿ ಓದಿಕೊಳ್ಳಿ, ಅರ್ಥ ಮಾಡಿಕೊಳ್ಳಿ.. ನೀವು ಕೇಳಿದ ಎಲ್ಲ ಸೆಕ್ಷನ್‌ಗಳು ಅದರಲ್ಲಿಯೇ ಇವೆ. ಒಂದಲ್ಲ, ಹತ್ತಾರು ಸಲ ಓದಿ ಮನನ ಮಾಡಿಕೊಳ್ಳಿ ಎಂದು ಎಚ್.ಡಿ. ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: PSI Exam: ಪಿಎಸ್‌ಐ ಸೇರಿ 4 ಸಾವಿರ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಅನೌನ್ಸ್‌; ಯಾವ ದಿನಕ್ಕೆ ಯಾವ ಪರೀಕ್ಷೆ?

ಮಾನವನ್ನು ವೋಟಿಗೆ ಒತ್ತೆ ಇಟ್ಟ ಕ್ರಿಮಿನಲ್!

ನಿಮ್ಮನ್ನು ಅಪಮಾನಿಸುತ್ತಿದ್ದೇನೆ ಎಂದು ಅನ್ಯತಾ ಭಾವಿಸಬೇಡಿ. ವಯಸ್ಸಿನಲ್ಲಿ ಹಿರಿಯರು, ಹೆಚ್ಚು ಅನುಭಸ್ಥರು ನೀವು. ಆದರೆ, ಪೆನ್ ಡ್ರೈವ್ ಪ್ರಕರಣದಲ್ಲಿ ನಿಮ್ಮ ನಡವಳಿಕೆ ಪ್ರಶ್ನಾರ್ಹ. ಅಮಾಯಕ ಹೆಣ್ಮಕ್ಕಳ ಮಾನವನ್ನು ವೋಟಿಗೆ ಒತ್ತೆ ಇಟ್ಟ ಕ್ರಿಮಿನಲ್ ಅನ್ನು ಪಕ್ಕದಲ್ಲೇ ಕೂರಿಸಿಕೊಂಡು ಮಾತನಾಡುತ್ತಿದ್ದೀರಿ. ಸಂವಿಧಾನಬದ್ಧವಾಗಿ ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿ ಸಂವಿಧಾನ ದ್ರೋಹಿ ಕೃತ್ಯ ಎಸಗಿರುವ ವ್ಯಕ್ತಿ ನಿಮ್ಮ ಸಂಪುಟದಲ್ಲಿ ಉಪ ಮುಖ್ಯಮಂತ್ರಿ!! ಇದಕ್ಕಿಂತ ನಿರ್ಲಜ್ಜತೆ ಉಂಟೇ? ಎಂದು ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀವು, ನಿಮ್ಮ ಇಡೀ ಕಾಂಗ್ರೆಸ್ ಪಕ್ಷ CD ಶಿವು (ಡಿ.ಕೆ. ಶಿವಕುಮಾರ್) ರಕ್ಷಣೆಗೆ ಟೊಂಕ ಕಟ್ಟಿ ನಿಂತಿದ್ದೀರಿ. ನಿಮ್ಮ ಇಡೀ ಕ್ಯಾಬಿನೆಟ್ ಆ ವ್ಯಕ್ತಿಯ ಹಿತಾಸಕ್ತಿಗಾಗಿ, ಆತ ರೂಪಿಸಿರುವ ಒಳಸಂಚಿನಲ್ಲಿ ಭಾಗಿಯಾಗಿದೆ. ನಿಮ್ಮದು CABINET OF KARNATAKA (ಕ್ಯಾಬಿನೆಟ್ ಆಫ್ ಕರ್ನಾಟಕ) ಅಲ್ಲ, ಅದು CABINET OF CONSPIRACY!! (ಕ್ಯಾಬಿನೆಟ್ ಆಫ್ ಕಾ‌ನ್ಸ್‌ಪಿರಸಿ) ಎಂದು ಬಹಳ ನೊಂದು ಹೇಳುತ್ತಿದ್ದೇನೆ ಎಂಬುದಾಗಿ ಎಚ್‌.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Speaker: ಎರಡನೇ ಬಾರಿ ಸ್ಪೀಕರ್‌ ಆದ ಓಂ ಬಿರ್ಲಾಗೆ ಮೋದಿ, ರಾಹುಲ್‌ ಅಭಿನಂದನೆ

Lok Sabha Speaker:ಇದೇ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಸದನದ ಪರವಾಗಿ ನಾನು ನಿಮ್ಮನ್ನು ಅಭಿನಂದಿಸಲು ಬಯಸುತ್ತೇನೆ. ಅಮೃತ ಕಾಲದ ಸಮಯದಲ್ಲಿ ನೀವು ಎರಡನೇ ಬಾರಿಗೆ ಈ ಜವಾಬ್ದಾರಿಯುತ ಹುದ್ದೆ ಅಲಂಕರಿಸಿರುವುದು ಬಹಳ ಸಂತಸ ತಂದಿದೆ. ನಿಮ್ಮ ಅನುಭವದೊಂದಿಗೆ, ಮುಂದಿನ 5 ವರ್ಷಗಳವರೆಗೆ ನೀವು ನಮಗೆ ಮಾರ್ಗದರ್ಶನ ನೀಡುತ್ತೀರಿ ಎಂದು ನಾವು ಭಾವಿಸುತ್ತೇವೆ. ನಿಮ್ಮ ಮುಖದ ಮೇಲಿನ ಸಿಹಿಯಾದ ನಗು ಇಡೀ ಸದನವನ್ನು ಸಂತೋಷವನ್ನಾಗಿರಿಸುತ್ತದೆ ಎಂದು ಹೇಳಿದರು.

VISTARANEWS.COM


on

Lok Sabha Speaker
Koo

ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್‌ ಆಗಿ ಎನ್‌ಡಿಎಯಿಂದ ಕಣಕ್ಕಿಳಿದ ಬಿಜೆಪಿ ಸಂಸದ ಓಂ ಬಿರ್ಲಾ (Om Birla) ಅವರು ಆಯ್ಕೆಯಾಗಿದ್ದಾರೆ (Lok Sabha Speaker). ಸಾಮಾನ್ಯವಾಗಿ ಅವಿರೋಧವಾಗಿ ಸ್ಪೀಕರ್‌ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದರೆ ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಇಂಡಿ ಬಣದ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಯಿತು. ಇದೀಗ ಎರಡನೇ ಬಾರಿ ಲೋಕಸಭೆ ಸ್ಪೀಕರ್‌ ಆಗಿ ಆಯ್ಕೆ ಆಗಿರುವ ಓಂ ಬಿರ್ಲಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಎಲ್ಲಾ ಸಂಸತ್‌ ಸದಸ್ಯರು ಪಕ್ಷಾತೀತ ಅಭಿನಂದನೆ ಸಲ್ಲಿಸಿದರು.

ಇದೇ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಸದನದ ಪರವಾಗಿ ನಾನು ನಿಮ್ಮನ್ನು ಅಭಿನಂದಿಸಲು ಬಯಸುತ್ತೇನೆ. ಅಮೃತ ಕಾಲದ ಸಮಯದಲ್ಲಿ ನೀವು ಎರಡನೇ ಬಾರಿಗೆ ಈ ಜವಾಬ್ದಾರಿಯುತ ಹುದ್ದೆ ಅಲಂಕರಿಸಿರುವುದು ಬಹಳ ಸಂತಸ ತಂದಿದೆ. ನಿಮ್ಮ ಅನುಭವದೊಂದಿಗೆ, ಮುಂದಿನ 5 ವರ್ಷಗಳವರೆಗೆ ನೀವು ನಮಗೆ ಮಾರ್ಗದರ್ಶನ ನೀಡುತ್ತೀರಿ ಎಂದು ನಾವು ಭಾವಿಸುತ್ತೇವೆ. ನಿಮ್ಮ ಮುಖದ ಮೇಲಿನ ಸಿಹಿಯಾದ ನಗು ಇಡೀ ಸದನವನ್ನು ಸಂತೋಷವನ್ನಾಗಿರಿಸುತ್ತದೆ ಎಂದು ಹೇಳಿದರು.

ಸ್ವಾತಂತ್ರ್ಯದ 70 ವರ್ಷಗಳಲ್ಲಿ ನಡೆಯದ ಕೆಲಸಗಳು ನಿಮ್ಮ ಅಧ್ಯಕ್ಷತೆಯಲ್ಲಿ ಈ ಸದನದಲ್ಲಿ ಸಾಧ್ಯವಾಗಿವೆ. ಹಲವು ಮೈಲಿಗಲ್ಲುಗಳಿಗೆ ಈ ಸದನ ಸಾಕ್ಷಿಯಾಗಿತ್ತು. 17 ನೇ ಲೋಕಸಭೆಯ ಸಾಧನೆಗಳ ಬಗ್ಗೆ ದೇಶವು ಹೆಮ್ಮೆಪಡುತ್ತದೆ ಎಂದು ಹೇಳಿದರು.

ಇದು ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ, “ಪ್ರತಿಪಕ್ಷಗಳಿಗೆ ಮಾತನಾಡಲು ಅವಕಾಶ ನೀಡಿ ಭಾರತದ ಜನರನ್ನು ಪ್ರತಿನಿಧಿಸಲು ಅವಕಾಶ ನೀಡುವ ಮೂಲಕ, ನೀವು ಭಾರತದ ಸಂವಿಧಾನವನ್ನು ರಕ್ಷಿಸುವ ನಿಮ್ಮ ಕರ್ತವ್ಯವನ್ನು ನೀವು ಸರಿಯಾಗಿ ನಿರ್ವಹಿಸುತ್ತೀರಿ ಎಂಬ ಬಗ್ಗೆ ನಮಗೆ ವಿಶ್ವಾಸವಿದೆ. ನಾನು ಮತ್ತೊಮ್ಮೆ ನಿಮ್ಮನ್ನು ಅಭಿನಂದಿಸಲು ಬಯಸುತ್ತೇನೆ ಎಂದರು.

ಇದನ್ನೂ ಓದಿ: Life threat: ಹುಬ್ಬಳ್ಳಿ ಏರ್‌ಪೋರ್ಟ್‌ ನಿರ್ದೇಶಕರಿಗೆ ಜೀವ ಬೆದರಿಕೆ; ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಮೇಲ್‌ ಐಡಿಯಿಂದ ಸಂದೇಶ

Continue Reading

ಕರ್ನಾಟಕ

CM Siddaramaiah: ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿರೋದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದ ಸಿಎಂ

CM Siddaramaiah: ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಎದುರಿಸಲುರಾಹುಲ್ ಗಾಂಧಿ ಸೂಕ್ತ ವ್ಯಕ್ತಿ. ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

CM Siddaramaiah
Koo

ಬೆಂಗಳೂರು: ರಾಹುಲ್ ಗಾಂಧಿ ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು. ಅವರು ಲೋಕಸಭಾ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕೆಂದು ನಾನು ಕೂಡ ಸಲಹೆ ನೀಡಿದ್ದೆ. ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಎದುರಿಸಬೇಕಾದರೆ ನೀವೇ ವಿರೋಧಪಕ್ಷದ ನಾಯಕರಾಗಬೇಕೆಂದು ಕಾರ್ಯಕಾರಿಣಿ ಸಮಿತಿ ಹಾಗೂ ನಾನೂ ಒತ್ತಾಯ ಮಾಡಿದ್ದೆ. ವಿಪಕ್ಷ ನಾಯಕರಾಗಿ ಜವಾಬ್ದಾರಿ ವಹಿಸಿಕೊಂಡಿರುವ ಅವರಿಗೆ ಅಭಿನಂದನೆ ಹೇಳಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಎದುರಿಸಲುರಾಹುಲ್ ಗಾಂಧಿ ಸೂಕ್ತ ವ್ಯಕ್ತಿ. ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಹೇಳಿದರು.

ಹಾಲಿನ ಉತ್ಪಾದನೆ 99 ಲಕ್ಷ ಲೀಟರ್‌ಗಿಂತ ಹೆಚ್ಚಾಗಿದೆ

ಹಾಲಿನ ದರ ಹೆಚ್ಚಾಗಿಲ್ಲ. ಕಳೆದ ವರ್ಷ ಇದೇ ವೇಳೆಗೆ ಹಾಲಿನ ಉತ್ಪಾದನೆ 90 ಲಕ್ಷ ಲೀಟರ್ ಇತ್ತು. ಈಗ 99 ಲಕ್ಷ ಲೀಟರ್‌ಗಿಂತ ಹೆಚ್ಚಾಗಿದೆ. ರೈತರಿಂದ ನಾವು ಹಾಲು ಪಡೆಯಬೇಕಾಗಿದ್ದು, ಅದನ್ನು ಮಾರಾಟ ಮಾಡಬೇಕಿದೆ. ಅರ್ಧ ಲೀಟರ್ ಪ್ಯಾಕೆಟ್‌ನಲ್ಲಿ 50 ಮೀ.ಲೀ ಹೆಚ್ಚು ಮಾಡಿದ್ದು, ಅದಕ್ಕೆ ತಗಲುವ 2.10 ರೂ.ಗಳನ್ನು ಪ್ರಮಾಣಕ್ಕೆ ತಕ್ಕಂತೆ ಬೆಲೆ ನಿಗದಿ ಮಾಡಲಾಗಿದೆ ಎಂದು ಪುನರುಚ್ಚರಿಸಿದರು. ಮಾರುಕಟ್ಟೆ ಅಗತ್ಯವಿದೆ, ಹಾಲಿನ ಬೆಲೆ ಹೆಚ್ಚು ಮಾಡಿಲ್ಲ. ಹಾಲು ಹೆಚ್ಚು ಉತ್ಪಾದನೆಯಾಗಿರುವುದನ್ನು ಹೆಚ್ಚು ನೀಡಿ ಅದಕ್ಕೆ ತಕ್ಕದರವನ್ನಷ್ಟೇ ನಿಗದಿ ಮಾಡಲಾಗಿದೆ ಎಂದರು.

ಹಾಲಿನ ದರ ಏರಿಕೆಯಾಗಿಲ್ಲ: ಕಾಫಿ, ಟೀ ದರಗಳ ಹೆಚ್ಚಳ ಸಲ್ಲದು

ಹೋಟೆಲ್ ಮಾಲೀಕರ ಸಂಘದವರು ಸಭೆ ಸೇರಿ ಕಾಫಿ‌, ಟೀ ದರಗಳನ್ನು ಹೆಚ್ಚಿಸಲಾಗುವುದು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅವರು ಹೇಗೆ ಹೆಚ್ಚಿಸುತ್ತಾರೆ, ಹಾಲಿನ ಬೆಲೆ ಏರಿದ್ದರೆ ಮಾತ್ರ ಹೆಚ್ಚಿಸಬೇಕು ಎಂದರು.

ಇದನ್ನೂ ಓದಿ | CM Siddaramaiah: ತೈಲ, ಹಾಲು ಆಯ್ತು; ಮುಂದಿನ ಸರದಿಯಲ್ಲಿ ನೀರು, ಆಟೋ, ಬಸ್‌ ಟಿಕೆಟ್‌ ದರ ಏರಿಕೆ ಗ್ಯಾರಂಟಿ

ರೈತರಿಂದ ಹಾಲು ಕೊಳ್ಳಬೇಕು

ಹೆಚ್ಚಾಗಿ ಉತ್ಪಾದನೆಯಾಗಿರುವ ಹಾಲನ್ನು ರೈತರಿಂದ ಕೊಳ್ಳಬೇಕೆ ಹೊರತು ಚೆಲ್ಲಲಾಗುವುದಿಲ್ಲ. ಕೊಳ್ಳುವವವರಿಗೆ ಹಾಲು ಹೆಚ್ಚಾಗಿ ದೊರೆಯುತ್ತಿದ್ದು ಜನ ಹಾಲನ್ನು ಕೊಳ್ಳಬೇಕು ಎಂದರು. ಇದೇ ವೇಳೆ ಸಂಸದರ ಸಭೆಗೆ ದೆಹಲಿಗೆ ತೆರಳುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಹೋಗುವಾಗ ಹೇಳುತ್ತೇನೆ ಎಂದರು.

Continue Reading

ದೇಶ

Asaduddin Owais: ಪ್ರಮಾಣ ವಚನ ಸ್ವೀಕರಿಸಿ ‘ಜೈ ಪ್ಯಾಲೆಸ್ತೀನ್​’ ಘೋಷಣೆ ಕೂಗಿದ ಓವೈಸಿ ಸದಸ್ಯತ್ವ ರದ್ದು? ಕಾನೂನು ಏನು ಹೇಳುತ್ತದೆ?

Asaduddin Owais: ಎಐಎಂಐಎಂ ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಮಂಗಳವಾರ 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ʼಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗಿದ್ದು, ವಿವಾದ ಎಬ್ಬಿಸಿದೆ. ಓವೈಸಿ ನಡೆಗೆ ಕಿಡಿಕಾರಿರುವ ಬಿಜೆಪಿ ಅವರ ಸದಸ್ಯತ್ವವನ್ನು ರದ್ದುಪಡಿಸಬೇಕೆಂದು ಆಗ್ರಹಿಸಿದೆ. ಹಾಗಾದರೆ ಓವೈಸಿ ಸದಸ್ಯತ್ವ ರದ್ದಾಗುತ್ತ? ಕಾನೂನು ಏನು ಹೇಳುತ್ತದೆ? ಇಲ್ಲಿದೆ ವಿವರ.

VISTARANEWS.COM


on

Asaduddin Owais
Koo

ನವದೆಹಲಿ: ಎಐಎಂಐಎಂ (AIMIM) ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಮಂಗಳವಾರ 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ʼಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗಿದ್ದು, ವಿವಾದ ಎಬ್ಬಿಸಿದೆ. ಓವೈಸಿ ನಡೆಗೆ ಕಿಡಿಕಾರಿರುವ ಬಿಜೆಪಿ ಅವರ ಸದಸ್ಯತ್ವವನ್ನು ರದ್ದುಪಡಿಸಬೇಕೆಂದು ಆಗ್ರಹಿಸಿದೆ. ಹಾಗಾದರೆ ಓವೈಸಿ ಸದಸ್ಯತ್ವ ರದ್ದಾಗುತ್ತ? ಕಾನೂನು ಏನು ಹೇಳುತ್ತದೆ? ಮುಂತಾದ ಪ್ರಶ್ನೆಗೆ ಇಲ್ಲಿದೆ ಉತ್ತರ.

ಉರ್ದುವಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಓವೈಸಿ ಕೊನೆಗೆ, ‘ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಹೈದರಾಬಾದ್‌ನಿಂದ ಕಣಕ್ಕಿಳಿದಿದ್ದ ಓವೈಸಿ ತಮ್ಮ ಪ್ರಬಲ ಸ್ಪರ್ಧಿ ಬಿಜೆಪಿಯ ಮಾಧವಿ ಲತಾ ಕೊಂಪೆಲ್ಲಾ ಅವರನ್ನು ಸೋಲಿಸಿ ಸತತ ಐದನೇ ಬಾರಿಗೆ ಲೋಕಸಭೆಗೆ ಪ್ರವೇಶಿಸಿದ್ದಾರೆ.

ಸಮರ್ಥಿಸಿಕೊಂಡ ಓವೈಸಿ

ʼಜೈ ಪ್ಯಾಲೆಸ್ತೀನ್​’ ಘೋಷಣೆಗೆ ಬಿಜೆಪಿ ತೀವ್ರ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿದ ಓವೈಸಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಸದನದ ಹೊರಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, “ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್ ಎಂದು ಹೇಳುವುದರಲ್ಲಿ ಯಾವುದೇ ತಪ್ಪಿಲ್ಲʼʼ ಎಂದಿದ್ದಾರೆ. “ಇತರ ಸದಸ್ಯರು ಸಹ ವಿವಿಧ ರೀತಿಯ ಘೋಷಣೆ ಕೂಗುತ್ತಾರೆ. ಅದು ಹೇಗೆ ತಪ್ಪಾಗುತ್ತದೆ? ನಾನು ಏನು ಹೇಳಬೇಕೋ ಅದನ್ನು ಹೇಳಿದೆ. ಪ್ಯಾಲೆಸ್ತೀನ್ ಬಗ್ಗೆ ಮಹಾತ್ಮ ಗಾಂಧಿ ಹೇಳಿದ್ದನ್ನು ಓದಿ” ಎಂದು ಓವೈಸಿ ಹೇಳಿದ್ದಾರೆ.

ಓವೈಸಿ ಅವರ ಪ್ರಮಾಣ ವಚನದ ವಿಡಿಯೊ ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಪ್ರಮಾಣ ವಚನ ಸ್ವೀಕರಿಸಲು ವೇದಿಕೆಯತ್ತ ಸಾಗುತ್ತಿದ್ದ ಓವೈಸಿ ಅವರನ್ನು ಬಿಜೆಪಿ ಸಂಸದರು ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗುವ ಮೂಲಕ ಪ್ರಚೋದಿಸಿದ್ದಾರೆ ಎಂದು ಕೆಲವರು ಅವರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಯಾವೆಲ್ಲ ಕಾರಣಕ್ಕೆ ಸದಸ್ಯತ್ವ ರದ್ದಾಗುತ್ತದೆ?

ಇದೀಗ ಓವೈಸಿ ಅವರ ಸದಸ್ಯತ್ವ ರದ್ದಾಗುತ್ತ ಎನ್ನುವ ಪ್ರಶ್ನೆ ಎದ್ದಿದೆ. ಕಾನೂನು ಪ್ರಕಾರ ಯಾವೆಲ್ಲ ಕಾರಣಗಳಿಗೆ ಸದಸ್ಯತ್ವ ರದ್ದುಪಡಿಸಲಾಗುತ್ತದೆ ಎನ್ನುವ ವಿವರ ಇಲ್ಲಿದೆ.

  • ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರದ ಅಡಿಯಲ್ಲಿ ಯಾವುದೇ ಲಾಭದಾಯಕ ಹುದ್ದೆಯನ್ನು ಹೊಂದಿದ್ದರೆ
  • ನ್ಯಾಯಾಲಯವು ಅಭ್ಯರ್ಥಿಯನ್ನು ಮಾನಸಿಕ ಅಸ್ವಸ್ಥ ಎಂದು ಘೋಷಿಸಿದ್ದರೆ
  • ಸ್ವಯಂಪ್ರೇರಿತವಾಗಿ ವಿದೇಶಿ ಪೌರತ್ವವನ್ನು ಪಡೆದಿದ್ದರೆ
  • ಸಂಸತ್ತಿನ ಯಾವುದೇ ಕಾನೂನಿನ ಅಡಿಯಲ್ಲಿ ಅನರ್ಹಗೊಂಡಿದ್ದರೆ ಅಂತಹವರ ಸದಸ್ಯತ್ವ ರದ್ದುಗೊಳಿಸಲಾಗುತ್ತದೆ.

ಈ ಪ್ರಕರಣವನ್ನು ಲೋಕಸಭೆಯ ನೈತಿಕ ಸಮಿತಿಗೆ ಕಳುಹಿಸಲಾಗುವುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸಮಿತಿ ಸದಸ್ಯರು ತನಿಖೆ ನಡೆಸಿ ಓವೈಸಿ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಲಿದ್ದಾರೆ. ಅದಾಗ್ಯೂ ಓವೈಸಿ ಅವರ ಸದಸ್ಯತ್ವ ರದ್ದಾಗುವ ಸಾಧ್ಯತೆ ಇಲ್ಲ ಎನ್ನಲಾಗಿದೆ.

ಇದನ್ನೂ ಓದಿ: Chhatrapal Singh Gangwar: ಪ್ರಮಾಣ ವಚನದ ವೇಳೆ ʼಜೈ ಹಿಂದೂ ರಾಷ್ಟ್ರʼ ಘೋಷಣೆ ಮೊಳಗಿಸಿದ ಬಿಜೆಪಿ ಸಂಸದ!

2018ರಲ್ಲಿ, ನ್ಯಾಷನಲ್ ಕಾನ್ಫರೆನ್ಸ್ ಶಾಸಕ ಮೊಹಮ್ಮದ್ ಅಕ್ಬರ್ ಲೋನ್ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ʼಪಾಕಿಸ್ತಾನ್ ಜಿಂದಾಬಾದ್ʼ ಎಂಬ ಘೋಷಣೆಯನ್ನು ಕೂಗಿದ್ದರು. ಇದರ ಹೊರತಾಗಿಯೂ ಅವರು ತಮ್ಮ ಸದಸ್ಯತ್ವವನ್ನು ಕಳೆದುಕೊಂಡಿರಲಿಲ್ಲ.

Continue Reading

ದೇಶ

Lok Sabha Speaker: ಎರಡನೇ ಬಾರಿಗೆ ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

Lok Sabha Speaker: 18ನೇ ಲೋಕಸಭೆಯ ಸ್ಪೀಕರ್‌ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಬಿಜೆಪಿ ಸಂಸದ ಓಂ ಬಿರ್ಲಾ ಅವರು ಸ್ಪೀಕರ್‌ ಆಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಇಂಡಿ ಬಣದಿಂದ ಕಾಂಗ್ರೆಸ್‌ ಸಂಸದ ಕೊಂಡಿಕುನಾಲ್ ಸುರೇಶ್ ಭಾರೀ ಕುತೂಹಲ ಮೂಡಿಸಿದ್ದ ಚುನಾವಣೆಯಲ್ಲಿ ಓಂ ಬಿರ್ಲಾ ಗೆಲುವಿನ ನಗೆ ಬೀರಿದ್ದಾರೆ.

VISTARANEWS.COM


on

Lok Sabha Speaker
Koo

ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್‌ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಎನ್‌ಡಿಎಯಿಂದ ಕಣಕ್ಕಿಳಿದ ಬಿಜೆಪಿ ಸಂಸದ ಓಂ ಬಿರ್ಲಾ (Om Birla) ಅವರು ಸ್ಪೀಕರ್‌ ಆಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ (Lok Sabha Speaker). ಸಾಮಾನ್ಯವಾಗಿ ಅವಿರೋಧವಾಗಿ ಸ್ಪೀಕರ್‌ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದರೆ ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಇಂಡಿ ಬಣದ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಯಿತು. ಇಂಡಿ ಬಣದಿಂದ ಕಾಂಗ್ರೆಸ್‌ ಸಂಸದ ಕೊಂಡಿಕುನಾಲ್ ಸುರೇಶ್ (Kondikunal Suresh) ಕಣಕ್ಕಿಳಿದಿದ್ದರು. ಭಾರೀ ಕುತೂಹಲ ಮೂಡಿಸಿದ್ದ ಈ ಐತಿಹಾಸಿಕ ಚುನಾವಣೆಯಲ್ಲಿ ಇದೀಗ ಓಂ ಬಿರ್ಲಾ ಗೆಲುವಿನ ನಗೆ ಬೀರಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಸುಮಾರಿಗೆ ಆರಂಭವಾದ ಚುನಾವಣಾ ಪ್ರಕ್ರಿಯೆಯಲ್ಲಿ ಓಂ ಬಿರ್ಲಾ ಅವರು ಬಹುಮತಗಳನ್ನು ಪಡೆದುಕೊಂಡರು. ಓಂ ಬಿರ್ಲಾ ಅವರನ್ನು ಸ್ಪೀಕರ್‌ ಆಗಿ ಆಯ್ಕೆ ಮಾಡುವ ಪ್ರಸ್ತಾಪವನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದರು. ಬಳಿಕ ಹಲವು ನಾಯಕರು ಅನುಮೋದಿಸಿದರು. ಧ್ವನಿ ಮತದ ಮೂಲಕ ಸದಸ್ಯರು ಮತ ಚಲಾಯಿಸಿದರು. ಈ ಮೂಲಕ ಓಂ ಬಿರ್ಲಾ ಅವರು ಬಲರಾಮ್ ಜಖರ್ (1980-89) ನಂತರ ಎರಡು ಪೂರ್ಣ ಅವಧಿಗೆ ಆಯ್ಕೆಯಾದ ಎರಡನೇ ಸ್ಪೀಕರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಲೋಕಸಭೆಯ ಎರಡನೇ ಸ್ಪೀಕರ್ ಎಂ.ಎ.ಅಯ್ಯಂಗಾರ್ ಮತ್ತು ಗುರ್ದಿಯಾಲ್ ಸಿಂಗ್ ಧಿಲ್ಲಾನ್ ಈ ಹಿಂದೆ ಎರಡು ಬಾರಿ ಈ ಹುದ್ದೆಯನ್ನು ಆಯ್ಕೆಯಾಗಿದ್ದರೂ ಅವರ ಎರಡನೇ ಅವಧಿ ಒಂದೂವರೆ ವರ್ಷಕ್ಕಿಂತ ಹೆಚ್ಚು ಕಾಲ ಉಳಿದಿರಲಿಲ್ಲ. ಹಂಗಾಮಿ ಸ್ಪೀಕರ್‌ ಭಾರ್ತೃಹರಿ ಮಹತಾಬ್‌ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

ವಿಪ್‌ ಜಾರಿ

ಆರಂಭದಲ್ಲಿ ಎನ್‌ಡಿಎ ಪ್ರತಿಪಕ್ಷಗಳ ಮನವೊಲಿಸಲು ಯತ್ನಿಸಿತ್ತು. ಓಂ ಬಿರ್ಲಾ ಅವರನ್ನು ಬೆಂಬಲಿಸಲು ಒಪ್ಪಿಗೆ ಸೂಚಿಸಿದ್ದ ಇಂಡಿ ಬಣ ಡೆಪ್ಯುಟಿ ಸ್ಪೀಕರ್ ತಮಗೆ ಸಿಗಬೇಕೆಂಬ ಷರತ್ತು ವಿಧಿಸಿತ್ತು. ಆದರೆ ಇದಕ್ಕೆ ಎನ್‌ಡಿಎ ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಮಾತುಕತೆ ಮುರಿದು ಬಿದ್ದು ಕೊನೆಯ ಕ್ಷಣದಲ್ಲಿ ಕೊಂಡಿಕುನಾಲ್ ಸುರೇಶ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್‌ ಎಲ್ಲ ಸದಸ್ಯರಿಗೆ ಹಾಜರಾಗುವಂತೆ ಮಂಗಳವಾರ ವಿಪ್‌ ಜಾರಿ ಮಾಡಿದ್ದವು.

ಕೊನೆ ಕ್ಷಣದಲ್ಲಿ ಸುರೇಶ್‌ಗೆ ಬೆಂಬಲ ಸೂಚಿಸಿದ ಟಿಎಂಸಿ

ಇಂಡಿ ಬಣ ಅಭ್ಯರ್ಥಿಯಾಗಿ ಕೆ.ಸುರೇಶ್ ಅವರನ್ನು ಆಯ್ಕೆ ಮಾಡುವ ಮುನ್ನ ತಮ್ಮ ಬಳಿ ಸಮಾಲೋಚನೆಯನ್ನೇ ನಡೆಸಿಲ್ಲ ಎಂದು ಟಿಎಂಸಿ ಮಂಗಳವಾರ ಆರೋಪಿಸಿತ್ತು. ಕೆ. ಸುರೇಶ್ ಅವರನ್ನು ಇಂಡಿ ಬಣ ಜಂಟಿ ನಾಮನಿರ್ದೇಶಿತ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಪ್ರತಿಪಕ್ಷಗಳ ನಿರ್ಧಾರದ ಬಗ್ಗೆ ನಮ್ಮ ಪಕ್ಷದ ನಾಯಕರ ಬಳಿ ಸಮಾಲೋಚನೆ ನಡೆಸಿಲ್ಲ. ದುರದೃಷ್ಟವಶಾತ್ ಇದು ಏಕಪಕ್ಷೀಯ ನಿರ್ಧಾರ ಎಂದು ಟಿಎಂಸಿ ಹೇಳಿ ಇಂಡಿ ಬಣವನ್ನು ಆತಂಕಕ್ಕೆ ದೂಡಿತ್ತು. ಆದರೆ ಕೊನೆಕ್ಷಣದಲ್ಲಿ ಟಿಎಂಸಿ ಸದಸ್ಯರು ಸುರೇಶ್‌ ಅವರಿಗೆ ಬೆಂಬಲ ಸೂಚಿಸಿದರು.

ಇದನ್ನೂ ಓದಿ: Lok Sabha Speaker Election: ಲೋಕಸಭೆ ಇತಿಹಾಸದಲ್ಲೇ ಮೊದಲ ಬಾರಿ ಸ್ಪೀಕರ್‌ ಹುದ್ದೆಗೆ ನಡೆಯಲಿದೆ ಚುನಾವಣೆ

ಏಳು ಸಂಸದರು ಇನ್ನೂ ಪ್ರಮಾಣ ವಚನ ಸ್ವೀಕರಿಸಿಲ್ಲ ಮತ್ತು ಕೇರಳದ ವಯನಾಡು ಸ್ಥಾನಕ್ಕೆ ರಾಹುಲ್‌ ಗಾಂಧಿ ರಾಜೀನಾಮೆ ನೀಡಿದ ಕಾರಣ 535 ಸಂಸದರು ಇಂದು ಮತ ಚಲಾಯಿಸಿದ್ದರು. ಹೀಗಾಗಿ ಬಹುಮತಕ್ಕೆ 268 ಸದಸ್ಯರ ಬೆಂಬಲ ಅಗತ್ಯವಿತ್ತು. ಓಂ ಬಿರ್ಲಾ ಅವರಿಗೆ ಎನ್‌ಡಿಎ ಜತೆಗೆ ವೈಎಸ್ಆರ್ ಕಾಂಗ್ರೆಸ್ ಪಕ್ಷ, ಇತರರು ಬೆಂಬಲ ಸೂಚಿಸಿದ್ದರಿಂದ ಸುಲಭವಾಗಿ 300ಕ್ಕೆಂತ ಹೆಚ್ಚು ಮತ ಪಡೆದುಕೊಂಡರು.

Continue Reading
Advertisement
PGCET 2024
ಕರ್ನಾಟಕ8 mins ago

PGCET 2024: ಪಿಜಿಸಿಇಟಿ ಪರೀಕ್ಷೆ ಮುಂದೂಡಿಕೆ; ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟ

Liquor Price karnataka
ಕರ್ನಾಟಕ10 mins ago

Liquor Price Karnataka: ಶ್ರೀಮಂತರಿಗೆ ಮತ್ತು, ಬಡವರಿಗೆ ಕುತ್ತು! ಪ್ರೀಮಿಯಂ ಮದ್ಯ ದರ ಇಳಿಕೆ, ಬಡವರ ಎಣ್ಣೆ ರೇಟ್‌ ಏರಿಕೆ?

Lok Sabha Speaker
ದೇಶ25 mins ago

Lok Sabha Speaker: ಎರಡನೇ ಬಾರಿ ಸ್ಪೀಕರ್‌ ಆದ ಓಂ ಬಿರ್ಲಾಗೆ ಮೋದಿ, ರಾಹುಲ್‌ ಅಭಿನಂದನೆ

Tharun Sudhir and sonal monteiro love story support By Darshan
ಸ್ಯಾಂಡಲ್ ವುಡ್28 mins ago

Tharun Sudhir: ದರ್ಶನ್‌ ತಮಾಷೆಯಿಂದಲೇ ಹುಟ್ಟಿತು ತರುಣ್‌- ಸೋನಲ್‌ ಪ್ರೀತಿ? ಇಬ್ಬರ ಲವ್ ಸ್ಟೋರಿ ಶುರುವಾಗಿದ್ದೇಗೆ?

Kenya Violence
ವಿದೇಶ37 mins ago

Kenya Violence: ಕೀನ್ಯಾದಲ್ಲಿ ಭುಗಿಲೆದ್ದ ಹಿಂಸಾಚಾರ; ಭಾರತೀಯರಿಗೆ ಎಚ್ಚರಿಕೆ ನೀಡಿದ ಹೈಕಮಿಷನ್

ಕಥೆಕೂಟ literature meet
ಕಲೆ/ಸಾಹಿತ್ಯ44 mins ago

ಕಥೆ ನಿಜ, ಕಥೆಗಾರ ಸುಳ್ಳು: ಕಥೆಕೂಟ ಸಮಾವೇಶದಲ್ಲಿ ಟಿಎನ್‌ ಸೀತಾರಾಮ್‌

CM Siddaramaiah
ಕರ್ನಾಟಕ47 mins ago

CM Siddaramaiah: ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿರೋದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದ ಸಿಎಂ

Jayam Ravi's wife Aarti Ravi removes all her Instagram photos
ಕಾಲಿವುಡ್50 mins ago

Jayam Ravi: ಜಯಂ ರವಿ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ ಹಾದಿಯಲ್ಲಿ ಮತ್ತೊಂದು ಸ್ಟಾರ್‌ ಜೋಡಿ!

Gold Rate Today
ಚಿನ್ನದ ದರ1 hour ago

Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ದರ ಇಳಿಕೆ

ಕ್ರೀಡೆ1 hour ago

IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್​ ಪ್ರವೇಶಿಸಲಿ ಭಾರತ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌