Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌! - Vistara News

ರಾಜಕೀಯ

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Prajwal Revanna Case: ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಳಿ ಪೆನ್‌ಡ್ರೈವ್‌ ತರಿಸಿಕೊಂಡು ಎಲ್ಲವನ್ನೂ ರೆಡಿ ಮಾಡಿದ್ದು ಡಿಕೆಶಿ, ಇದರಲ್ಲಿ ಸುಮ್ಮನಾಗಲು 100 ಕೋಟಿ ರೂಪಾಯಿ ಆಫರ್‌ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಜೆಡಿಎಸ್‌ ಟ್ವೀಟ್‌ ಮಾಡಿದ್ದು, “CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್” ಆರೋಪ ಮಾಡಿದೆ. ಇವರೆಲ್ಲರೂ ಹೂಡಿರುವ ಸಂಚು ಏನ್ ಗೊತ್ತಾ? ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರುವುದಾಗಿದೆ ಎಂದು ಜೆಡಿಎಸ್‌ ದೂರಿದೆ.

VISTARANEWS.COM


on

Prajwal Revanna Case JDS calls CD Shivakumar pen drive gang
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ (Devarajegowda) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಪೆನ್‌ ಡ್ರೈವ್‌ ಪ್ರಕರಣದ ಹಿಂದೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಇದ್ದಾರೆ. ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಳಿ ಪೆನ್‌ಡ್ರೈವ್‌ ತರಿಸಿಕೊಂಡು ಎಲ್ಲವನ್ನೂ ರೆಡಿ ಮಾಡಿದ್ದು ಡಿಕೆಶಿ, ಇದರಲ್ಲಿ ಸುಮ್ಮನಾಗಲು 100 ಕೋಟಿ ರೂಪಾಯಿ ಆಫರ್‌ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಜೆಡಿಎಸ್‌ ಟ್ವೀಟ್‌ ಮಾಡಿದ್ದು, “CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್” ಆರೋಪ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರುವುದೇ ಇದರ ಹಿಂದಿರುವ ಸಂಚಾಗಿದೆ ಎಂದು ಜೆಡಿಎಸ್‌ ಟ್ವೀಟ್‌ ಮೂಲಕ ಆರೋಪ ಮಾಡಿದೆ.

ಜೆಡಿಎಸ್‌ ಟ್ವೀಟ್‌ನಲ್ಲೇನಿದೆ?

“CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್”
1.ಡಿಸಿಎಂ ಡಿ.ಕೆ.ಶಿವಕುಮಾರ್
2.ಕೃಷಿ ಸಚಿವ ಚೆಲುವರಾಯಸ್ವಾಮಿ
3.ಕಂದಾಯ ಸಚಿವ ಕೃಷ್ಣಭೈರೇಗೌಡ
4. IT BT ಸಚಿವ ಪ್ರಿಯಾಂಕ್ ಖರ್ಗೆ
+
ಇನ್ನೂ ಒಬ್ಬ ಸಚಿವ
+
ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ

ಇವರೆಲ್ಲರೂ ಹೂಡಿರುವ ಸಂಚು ಏನ್ ಗೊತ್ತಾ? ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರುವುದಾಗಿದೆ. ಈ ಸಂಚು ಸಾಕಾರಗೊಳಿಸಲು CD ಶಿವಕುಮಾರ್ ಸಾಹೇಬರು ವಕೀಲರಾದ ದೇವರಾಜೇಗೌಡರಿಗೆ ಆಫರ್ ಮಾಡಿದ ಮೊತ್ತ ಬರೋಬ್ಬರಿ 100 ಕೋಟಿ ರೂಪಾಯಿ” ಎಂದು ಜೆಡಿಎಸ್‌ ಟ್ವೀಟ್‌ನಲ್ಲಿ ಉಲ್ಲೇಖಿಸಿದೆ.

ಡಿಕೆಶಿಯಿಂದ 100 ಕೋಟಿ ರೂಪಾಯಿ ಆಫರ್; ದೇವರಾಜೇಗೌಡ ಆರೋಪ

ಹಾಸನ ಜೆಎಂಎಫ್‌ಸಿ ಕೋರ್ಟ್‌ ಹೊರಗೆ ಪೊಲೀಸ್‌ ವ್ಯಾನ್‌ನೊಳಗಿದ್ದ ವಕೀಲ ದೇವರಾಜೇಗೌಡ ಮಾಧ್ಯಮದವರೊಂದಿಗೆ ಮಾತನಾಡಿ, ಎಲ್.ಆರ್. ಶಿವರಾಮೇಗೌಡ ಮೂಲ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು. ಡಿ.ಕೆ. ಶಿವಕುಮಾರ್ ನೇರವಾಗಿ ನನ್ನ ಮಾತನಾಡಿದ್ದಲ್ಲ ಎಂದು ಹೇಳಿದರು.

ನಾಲ್ಕು ಜನ ಮಂತ್ರಿಗಳ ಕಮಿಟಿ ಎಂದು ನಾನು ಹೇಳಿದ್ದೆನಲ್ಲವೇ? ಅವರ ಬಗ್ಗೆ ಹೇಳುತ್ತೇನೆ. ಎನ್‌. ಚಲುವರಾಯಸ್ವಾಮಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಇನ್ನೊಬ್ಬ ಸಚಿವರನ್ನು ಈ ಪ್ರಕರಣವನ್ನು ಹ್ಯಾಂಡಲ್ ಮಾಡಲು ಬಿಟ್ಟಿದ್ದಾರೆ. ಈಗ ನನ್ನ ಮೇಲೆ ನಿರಂತರವಾಗಿ ಒತ್ತಡ ಹಾಕುತ್ತಿದ್ದಾರೆ. ಆದರೆ, ಅದ್ಯಾವುದಕ್ಕೂ ನಾನು ಒಪ್ಪಲಿಲ್ಲ ಎಂದು ದೇವರಾಜೇಗೌಡ ಹೇಳಿದರು.

ಇಷ್ಟೆಲ್ಲ ದೊಡ್ಡ ಹಗರಣವಾಗಿರುವುದರಿಂದ ಇದರ ಮೂಲಕ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರಲು ಹೋಗಿದ್ದರು. ನಮಗೆ ಸುಮಾರು 100 ಕೋಟಿ ರೂಪಾಯಿ ಆಫರ್ ಕೊಟ್ಟಿದ್ದರು. ಅದರಲ್ಲಿ 5 ಕೋಟಿ ರೂಪಾಯಿ ಅಡ್ವಾನ್ಸ್ ಅನ್ನು ಬೋರಿಂಗ್ ಕ್ಲಬ್‌ನ ರೂಂ ನಂಬರ್ 110ಕ್ಕೆ ಕಳಿಸಿದ್ದರು. ಆ ಮೀಟಿಂಗ್‌ಗೆ ಚನ್ನರಾಯಪಟ್ಟಣದ ಎಂ.ಎ. ಗೋಪಾಲಸ್ವಾಮಿಯನ್ನು ಕಳಿಸಿದ್ದರು. ಐದು ಕೋಟಿ ರೂಪಾಯಿ ಕ್ಯಾಶ್‌ ಅನ್ನೂ ಕೊಟ್ಟು ಕಳಿಸಿದ್ದರು. ಈ 100 ಕೋಟಿ ರೂಪಾಯಿ ಆಫರ್ ಮಾಡಿದ್ದು ಡಿ.ಕೆ. ಶಿವಕುಮಾರ್ ಎಂದು ದೇವರಾಜೇಗೌಡ ಆರೋಪಿಸಿದರು.

ಒಪ್ಪದೇ ಇದ್ದಾಗ ಅಟ್ರಾಸಿಟಿ ಕೇಸ್

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳಂಕ ತರಬೇಕು. ರಾಜ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ ನಾಯಕತ್ವವನ್ನು ಹಾಳು ಮಾಡಬೇಕು ಎಂಬ ಕಾರಣಕ್ಕೆ ನನ್ನನ್ನು ಬಳಸಿಕೊಳ್ಳಲು ನೋಡಿದರು. ಅದಕ್ಕೆ ನಾನು ಒಪ್ಪದೇ ಇದ್ದಾಗ ಮೊದಲಿಗೆ ಅಟ್ರಾಸಿಟಿ ಕೇಸ್ ದಾಖಲು ಮಾಡಿದರು. ಅದರಲ್ಲಿ ಡಾಕ್ಯುಮೆಂಟ್ ಸಿಗಲಿಲ್ಲ ಎಂದು ದೇವರಾಜೇಗೌಡ ಹೇಳಿದರು.

ಇದನ್ನೂ ಓದಿ: HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌; ರೇವಣ್ಣ ವಿರುದ್ಧ ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

ನನ್ನ ಮೇಲೆ ಸುಳ್ಳು ಕೇಸ್‌

ನನ್ನ ಮೇಲೆ ಹಾಕಲಾದ ಅಟ್ರಾಸಿಟಿ ಕೇಸ್‌ನಲ್ಲಿ ಯಾವುದೇ ಪ್ರಯೋಜನ ಆಗಿಲ್ಲವೆಂದು ಮತ್ತೊಬ್ಬಳ ಕೈಯಲ್ಲಿ 354a ಕೇಸ್ ಹಾಕಿಸಿದರು. ಅದೂ ವಿಫಲವಾದ ಮೇಲೆ ರೇಪ್ ಕೇಸ್ ಹಾಕಿಸಿದರು. ಈ ಅತ್ಯಾಚಾರ ಪ್ರಕರಣದಲ್ಲಿಯೂ ಅವರಿಗೆ ಯಾವುದೇ ದಾಖಲೆಗಳು ಸಿಗಲಿಲ್ಲ. ನಾಲ್ಕು ದಿನಗಳ ಕಾಲ ನಿರಂತರವಾಗಿ ವಿಚಾರಣೆ ನಡೆಸಿದ್ದಾರೆ. ಪೆನ್‌ಡ್ರೈವ್‌ ಸಿಕ್ಕಿದ್ದನ್ನು ಕೋರ್ಟ್‌ನಲ್ಲಿ ಸೀಜ್‌ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

CM Siddaramaiah: ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಣ, ಆರೋಗ್ಯ, ಉದ್ಯೋಗಕ್ಕೆ ಆದ್ಯತೆ ನೀಡಲು ಸಿದ್ದರಾಮಯ್ಯ ಸೂಚನೆ

CM Siddaramaiah: ಕಲ್ಯಾಣ ಕರ್ನಾಟಕದಲ್ಲಿ ಎರಡು ವರ್ಷಗಳನ್ನು ಶೈಕ್ಷಣಿಕ ವರ್ಷ ಎಂದು ಘೋಷಿಸಿ, ಶೇ.25 ರಷ್ಟು ಅನುದಾನ ವೆಚ್ಚ ಮಾಡಲು ತೀರ್ಮಾನಿಸಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬೇಡಿಕೆ ಇದ್ದು, ಇದಕ್ಕೆ ಒತ್ತು ನೀಡಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

VISTARANEWS.COM


on

CM Siddaramaiah
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಅತ್ಯಂತ ಮಹತ್ವದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (KKRDB) ವ್ಯಾಪ್ತಿಯ ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ಅಧಿಕಾರಿಗಳು ಅಂಗನವಾಡಿ, ಹಾಸ್ಟೆಲ್‌ಗಳು, ಶಾಲೆಗಳು, ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಕಾರ್ಯದರ್ಶಿಗಳ ನಡುವೆ ಸಮನ್ವಯ ಇರಬೇಕು. ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಸೃಜನೆಗೆ ಹೆಚ್ಚು ಒತ್ತು ನೀಡಬೇಕು ಎಂದು ಸೂಚಿಸಿದ್ದಾರೆ.

ಅಭಿವೃದ್ಧಿ ಕಾಮಗಾರಿಗಳಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ

ಚುನಾವಣಾ ಪ್ರಣಾಳಿಕೆಯಲ್ಲಿ ಹಾಗೂ ಆಯವ್ಯಯದಲ್ಲಿ ವರ್ಷಕ್ಕೆ 5,000 ಕೋಟಿ ರೂ. ಒದಗಿಸುವ ಭರವಸೆ ನೀಡಲಾಗಿದೆ. ಈ ಮೊತ್ತವನ್ನು ವೆಚ್ಚ ಮಾಡಲು ಅನುವಾಗುವಂತೆ ಜುಲೈ 15 ರೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸಿಎಂ ಸೂಚಿಸಿದ್ದಾರೆ.

ಈಗ ಅನುಮೋದನೆಯಾದ ಟೆಂಡರ್‌ ಕರೆಯದೆ ಇರುವ ಕಾಮಗಾರಿಗಳಿಗೆ ಕೂಡಲೇ ಟೆಂಡರ್‌ ಕರೆಯಬೇಕು. ಕಾಮಗಾರಿಗಳ ಮೌಲ್ಯಮಾಪನ ಮಾಡಬೇಕು. ಒಟ್ಟು 14,228 ಕೋಟಿ ಅನುದಾನದಲ್ಲಿ 10,342.90 ಕೋಟಿ ವೆಚ್ಚವಾಗಿದೆ. 2885.90 ಕೋಟಿ ಉಳಿದಿದೆ. ಬಾಕಿ ಉಳಿದ ಕಾಮಗಾರಿಗಳ ಕುರಿತು ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಿ, ಅನುಷ್ಠಾನಕ್ಕೆ ಇರುವ ತೊಡಕುಗಳನ್ನು ನಿವಾರಿಸಬೇಕು. ಬಾಕಿ ಉಳಿದಿರುವ 3528 ಕಾಮಗಾರಿಗಳನ್ನು ಜುಲೈ ಅಂತ್ಯದೊಳಗೆ ಪ್ರಾರಂಭಿಸಬೇಕು ಎಂದು ಸೂಚಿಸಿದರು.

ಇದನ್ನೂ ಓದಿ | DK Shivakumar: ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ

ಶಿಕ್ಷಣಕ್ಕೆ ಶೇ.25 ರಷ್ಟು ಅನುದಾನ

ಎರಡು ವರ್ಷಗಳನ್ನು ಶೈಕ್ಷಣಿಕ ವರ್ಷ ಎಂದು ಘೋಷಿಸಿ, ಶೇ.25 ರಷ್ಟು ಅನುದಾನ ವೆಚ್ಚ ಮಾಡಲು ತೀರ್ಮಾನಿಸಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬೇಡಿಕೆ ಇದ್ದು, ಇದಕ್ಕೆ ಒತ್ತು ನೀಡಬೇಕು. ನಿಗದಿತ ಮಾನದಂಡಗಳಂತೆಯೇ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಅಂತರ್ಜಲ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಿ

ಇನ್ನು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ 41 ಮಹಿಳಾ ಪದವಿ ಕಾಲೇಜು ಪ್ರಾರಂಭಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ. ಇದನ್ನು ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು. ಅರಣ್ಯೀಕರಕ್ಕೆ ಮತ್ತು ಶುದ್ಧ ಕುಡಿಯುವ ನೀರು, ಚೆಕ್ ಡ್ಯಾಂಗಳಿಗೆ ಆಧ್ಯತೆ ನೀಡುವ ಮೂಲಕ ಅಂತರ್ಜಲ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಂಡು, ಕಾರ್ಯಕ್ರಮಗಳನ್ನು ರೂಪಿಸುವಂತೆ ಸೂಚನೆ ನೀಡಿದರು

ಮಾನವ ಅಭಿವೃದ್ಧಿ ಸೂಚ್ಯಂಕಗಳನ್ನು ಗಮನದಲ್ಲಿ ಇಟ್ಟುಕೊಂಡು ಅಭಿವೃದ್ಧಿ ಸೂಚ್ಯಂಕದಲ್ಲಿ ಪ್ರಗತಿ ಕಾಣುವ ರೀತಿಯಲ್ಲಿ ಫಲಿತಾಂಶ ಬರುವಂತೆ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಬೇಕು. ಕಲ್ಯಾಣ ಕರ್ನಾಟಕ ಭಾಗದ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಅತ್ಯಂತ ಹಿಂದುಳಿದಿದ್ದು, ಈ ಜಿಲ್ಲೆಗಳನ್ನು ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಯಾವ ಯಾವ ಕ್ಷೇತ್ರದಲ್ಲಿ ಹಿಂದುಳಿದಿದ್ದೇವೆಯೋ ಆ ಕ್ಷೇತ್ರಗಳಿಗೆ ಒತ್ತು ನೀಡಬೇಕು. ಹಾಸ್ಟೆಲುಗಳು, ಅಂಗನವಾಡಿ ಹಾಗೂ ವಸತಿ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಬೇಕು. ಲಭ್ಯ ಅನುದಾನವನ್ನು ಆದ್ಯತೆಯ ಮೇರೆಗೆ ವೆಚ್ಚ ಮಾಡಬೇಕು. ರಸ್ತೆ, ಕುಡಿಯುವ ನೀರು, ನೀರಾವರಿ ಮತ್ತಿತರ ಮೂಲಸೌಕರ್ಯಗಳಿಗೆ ಒತ್ತು ನೀಡಬೇಕು ಎಂದು ಸಿಎಂ ತಿಳಿಸಿದರು.

ಸಿ.ಎಸ್.ಆರ್. ನಿಧಿಯಲ್ಲಿ ಶಾಲೆಗಳ ಅಭಿವೃದ್ಧಿ ಮಾಡಿ

ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳ ಸ್ಥಾಪನೆಗೆ ಆಡಳಿತ ಇಲಾಖೆಗಳು ಮಂಜೂರಾತಿ ನೀಡಬೇಕು. ಸಿ.ಎಸ್.ಆರ್. ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಸೂಚಿಸಿದ ಸಿಎಂ ಸಿದ್ದರಾಮಯ್ಯ ಅವರು, ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿ ತೀವ್ರ ಕೊರತೆ ಇದ್ದು, ಶೀಘ್ರವೇ ಹುದ್ದೆ ಭರ್ತಿಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿರು.

ಇದನ್ನೂ ಓದಿ | Pralhad Joshi: ಚುನಾವಣೆ ಸೋಲಿನ ಸೇಡಿಗಾಗಿ ಯಡಿಯೂರಪ್ಪ ಮೇಲೆ ರಾಜಕೀಯ ವೈಷಮ್ಯ; ಪ್ರಲ್ಹಾದ್‌ ಜೋಶಿ

ಸಭೆಯಲ್ಲಿ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ, ರಹೀಂ ಖಾನ್, ಈಶ್ವರ್ ಖಂಡ್ರೆ, ಜಮೀರ್ ಅಹಮದ್ ಖಾನ್, ಶರಣಬಸಪ್ಪ ದರ್ಶನಾಪೂರ, ಎನ್. ಎಸ್. ಭೋಸರಾಜು, ಶಿವರಾಜ್ ತಂಗಡಗಿ, ಡಿ.ಸುಧಾಕರ್, ಕೆ.ಕೆ. ಆರ್.ಡಿ.ಬಿ. ಅಧ್ಯಕ್ಷ ಡಾ. ಅಜಯ್‌ ಸಿಂಗ್‌, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Continue Reading

ಪ್ರಮುಖ ಸುದ್ದಿ

Lok Sabha Election : ಅಹಂಕಾರ ತೋರಿಸಿದ್ದಕ್ಕೆ ರಾಮನೇ 241 ಸ್ಥಾನಕ್ಕೆ ನಿಲ್ಲಿಸಿದ; ಪರೋಕ್ಷ ಟಾಂಗ್​ ಕೊಟ್ಟ ಆರ್​ಎಸ್​ಎಸ್​​ ಸಿದ್ಧಾಂತವಾದಿ

Lok Sabha Election: ಪ್ರಜಾಪ್ರಭುತ್ವದಲ್ಲಿಯೂ ರಾಮರಾಜ್ಯದ ವಿಧಾನವನ್ನು ಅನುಸರಿಸಬೇಕು. ಅಹಂಕಾರ ತೋರಬಾರದು. ರಾಮನ ಭಕ್ತಿಯನ್ನು ಮಾಡಿಯೂ ಕೆಲವರು ಕ್ರಮೇಣ ಅಹಂಕಾರಿಗಳಾಗಿ ಮಾರ್ಪಟ್ಟವರು. ಅವರು ಅತಿದೊಡ್ಡ ಪಕ್ಷವಾಗಿದ್ದರು. ಆದಾಗ್ಯೂ, ಅವರಿಗೆ ನೀಡಬೇಕಾದ ಬಹುಮತವನ್ನು ಅಹಂಕಾರದ ಕಾರಣಕ್ಕೆ ದೇವರು ತಡೆದಿದ್ದಾನೆ ಆದರೆ, ರಾಮನನ್ನು ವಿರೋಧಿಸಿದವರಿಗೆ ಎರಡನೇ ಸ್ಥಾನ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ.

VISTARANEWS.COM


on

Lok Sabha Election
Koo

ಜೈಪುರ: ಅಹಂಕಾರದ ಹೆಚ್ಚು ತೋರಿದ ಆಡಳಿತ ಪಕ್ಷ ಬಹುಮತದ ಕೊರತೆ ಅನುಭವಿಸಿದೆ. ರಾಮ ಅವರನ್ನು 241 ಸ್ಥಾನಕ್ಕೆ ನಿಲ್ಲಿಸಿದ. ರಾಮನ ವಿರೋಧಿಯಾಗಿದ್ದವರು 2 ನೇ ಸ್ಥಾನಕ್ಕೆ ಉಳಿದರು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಸಿದ್ಧಾಂತಿ ಇಂದ್ರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಜೈಪುರ ಬಳಿಯ ಕನೋಟಾದಲ್ಲಿ ಗುರುವಾರ ನಡೆದ ‘ರಾಮರಥ ಅಯೋಧ್ಯೆ ಯಾತ್ರಾ ದರ್ಶನ ಪೂಜಾ ಸಮರೋಹ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮನ ಭಕ್ತಿಯನ್ನು ಮಾಡಿಕೊಂಡಿದ್ದರೂ ಅಹಂಕಾರಿಯಾದ ಪಕ್ಷವನ್ನು 241 ಕ್ಕೆ ನಿಲ್ಲಿಸಲಾಯಿತು. ಅದುವೇ ಅತಿದೊಡ್ಡ ಪಕ್ಷವಾಯಿತು ಎಂದು ಅವರು ಬಿಜೆಪಿಗೆ ಪರೋಕ್ಷವಾಗಿ ಟೀಕಿಸಿದರು.

ಪ್ರಜಾಪ್ರಭುತ್ವದಲ್ಲಿಯೂ ರಾಮರಾಜ್ಯದ ವಿಧಾನವನ್ನು ಅನುಸರಿಸಬೇಕು. ಅಹಂಕಾರ ತೋರಬಾರದು. ರಾಮನ ಭಕ್ತಿಯನ್ನು ಮಾಡಿಯೂ ಕೆಲವರು ಕ್ರಮೇಣ ಅಹಂಕಾರಿಗಳಾಗಿ ಮಾರ್ಪಟ್ಟರು. ಅವರು ಅತಿದೊಡ್ಡ ಪಕ್ಷವಾಗಿದ್ದರು. ಆದಾಗ್ಯೂ, ಅವರಿಗೆ ನೀಡಬೇಕಾದ ಬಹುಮತವನ್ನು ಅಹಂಕಾರದ ಕಾರಣಕ್ಕೆ ದೇವರು ತಡೆದಿದ್ದಾನೆ ಆದರೆ, ರಾಮನನ್ನು ವಿರೋಧಿಸಿದವರಿಗೆ ಎರಡನೇ ಸ್ಥಾನ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ.

ರಾಮನನ್ನು ವಿರೋಧಿಸಿದವರಲ್ಲಿ ಯಾರಿಗೂ ಅಧಿಕಾರ ನೀಡಲಿಲ್ಲ. ಅವರೆಲ್ಲರನ್ನೂ ಒಟ್ಟುಗೂಡಿಸಿ ಎರಡನೇ ಕ್ರಮಾಂಕದಲ್ಲಿ ಇಟ್ಟಿದ್ದಾರೆ ಎಂದಿದ್ದಾರೆ. ಇದು ಕೆಲವು ದಿನಗಳ ಹಿಂದೆ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಗೆ ಪೂರಕವಾಗಿದೆ. ನಿಜವಾದ ‘ಸೇವಕ’ ಅಹಂಕಾರವಿಲ್ಲದೆ ಜನರ ಸೇವೆ ಮಾಡಬೇಕು ಮತ್ತು ಘನತೆಯನ್ನು ಕಾಪಾಡಿಕೊಳ್ಳಬೇಕು ಎಂದು ಭಾಗವತ್ ಹೇಳಿದ್ದರು.

ಇದನ್ನೂ ಓದಿ: BS Yediyurappa : ಲೈಂಗಿಕ ಕಿರುಕುಳ ಕೇಸ್; ಹೈಕೋರ್ಟ್​ನಲ್ಲಿ ಇಂದು ಯಡಿಯೂರಪ್ಪಗೆ ಜಾಮೀನು ಸಿಗದಿದ್ದರೆ ಬಂಧನ

ರಾಮನನ್ನು ಪ್ರಾರ್ಥಿಸುವವರು ವಿನಮ್ರರಾಗಿರಬೇಕು… ಭಗವಾನ್ ರಾಮನು ತಾರತಮ್ಯ ಮಾಡುವುದಿಲ್ಲ ಮತ್ತು ಶಿಕ್ಷಿಸುವುದಿಲ್ಲ. ರಾಮ ಎಲ್ಲರಿಗೂ ನ್ಯಾಯ ಒದಗಿಸುತ್ತಾನೆ. ಅವನು ಎಲ್ಲರಿಗೂ ಕೊಡುತ್ತಾನೆ ಮತ್ತು ಕೊಡುತ್ತಲೇ ಇರುತ್ತಾನೆ. ಭಗವಾನ್ ರಾಮ ಯಾವಾಗಲೂ ನ್ಯಾಯಯುತನಾಗಿದ್ದ ಮತ್ತು ಹಾಗೆಯೇ ಇರುತ್ತಾನೆ” ಎಂದು ಇಂದ್ರೇಶ್ ಅವರು ಹೇಳಿದ್ದಾರೆ.

ಪ್ರತಿಪಕ್ಷ ಇಂಡಿಯಾ ಬಣವನ್ನು ಗುರಿಯಾಗಿಸಿಕೊಂಡು ಅವರನ್ನು “ರಾಮ ವಿರೋಧಿ” ಎಂದು ಕರೆದರು. ಅಹಿಂಸೆ ಮತ್ತು ಸತ್ಯದ ತತ್ವಗಳನ್ನು ಉಲ್ಲೇಖಿಸಿ ಭಾಗವತ್ ಎಲ್ಲರ ಬಗ್ಗೆ ವಿನಮ್ರತೆ ಮತ್ತು ಸದ್ಭಾವನೆಯ ಅಗತ್ಯವನ್ನು ಒತ್ತಿ ಹೇಳಿದರು.

Continue Reading

ಕರ್ನಾಟಕ

Pralhad Joshi: ಚುನಾವಣೆ ಸೋಲಿನ ಸೇಡಿಗಾಗಿ ಯಡಿಯೂರಪ್ಪ ಮೇಲೆ ರಾಜಕೀಯ ವೈಷಮ್ಯ; ಪ್ರಲ್ಹಾದ್‌ ಜೋಶಿ

Pralhad Joshi: ರಾಜ್ಯದಲ್ಲಿ ಕಾಂಗ್ರೆಸ್‌ಗೆ ಪ್ರಸಕ್ತ ಲೋಕಸಭೆ ಚುನಾವಣೆ ಸೋಲನ್ನು ಅರಗಿಸಿಕೊಳ್ಳಲಾಗಿಲ್ಲ. ಹೀಗಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ರಾಜಕೀಯ ವೈಷಮ್ಯ ತೋರುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿದ್ದಾರೆ.

VISTARANEWS.COM


on

Union Food and Consumer Affairs Minister Pralhad Joshi latest statement
Koo

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್‌ಗೆ (Congress) ಲೋಕಸಭೆ ಚುನಾವಣೆ (Lok Sabha Election) ಸೋಲನ್ನು ಅರಗಿಸಿಕೊಳ್ಳಲಾಗಿಲ್ಲ. ಹೀಗಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ರಾಜಕೀಯ ವೈಷಮ್ಯ ತೋರುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ದುರಾಡಳಿತ ಮರೆಮಾಚಲು ಮಾಜಿ ಸಿಎಂ, 81 ವರ್ಷದ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಇಲ್ಲಸಲ್ಲದ ಪ್ರಕರಣ ದಾಖಲಿಸಿ ಷಡ್ಯಂತ್ರ ನಡೆಸುತ್ತಿದೆ. ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಸೋಲುಂಡ ಕಾಂಗ್ರೆಸ್ ಅದನ್ನು ಜೀರ್ಣಿಸಿಕೊಳ್ಳಲಾಗದೆ ಆಡಳಿತವನ್ನು ಮನಬಂದಂತೆ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

ಇದನ್ನೂ ಓದಿ: Gold Rate Today: ಆಭರಣ ಖರೀದಿಸಲು ಇದು ಸಕಾಲ; ಚಿನ್ನದ ಬೆಲೆ ಇಳಿಕೆ

ಮೂರ್ನಾಲ್ಕು ತಿಂಗಳ ಹಿಂದೆ ಮಾಜಿ ಸಿಎಂ ಬಿ.ಎಸ್.ವೈ ವಿರುದ್ಧ ಪೋಸ್ಕೋ ಪ್ರಕರಣ ದಾಖಲಿಸಿದ ಮಹಿಳೆ ಮಾನಸಿಕ ಅಸ್ವಸ್ಥಳು, ದುರುದ್ದೇಶದಿಂದ ದೂರು ನೀಡಿದ್ದಾಳೆ ಎಂದು ಆಗಲೇ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಆದರೆ ಈಗ ಚುನಾವಣೆ ಮುಗಿದ ಮೇಲೆ ರಾಜ್ಯ ಕಾಂಗ್ರೆಸ್ ನಾಯಕರು ಹೊಸ ಡ್ರಾಮಾ ಶುರು ಮಾಡಿದ್ದಾರೆ ಎಂದು ಸಚಿವರು ಖಂಡಿಸಿದ್ದಾರೆ.

ಆ ಮಹಿಳೆ ಈಗಾಗಲೇ ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ರಾಜಕಾರಣಿಗಳ ಮೇಲೆ 60ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾಳೆ ಎಂದೂ ಗೃಹ ಮಂತ್ರಿಗಳೇ ಖುದ್ದಾಗಿ ಈ ಹಿಂದೆ ಹೇಳಿದ್ದರು. ಈಗ ತಮ್ಮ ದುರಾಡಳಿತವನ್ನು ಮರೆಮಾಚಲು ಬಿಜೆಪಿ ವರಿಷ್ಠ ಬಿಎಸ್‌ವೈ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಟ್ವೀಟ್ ಮೂಲಕ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: Euro Cup 2024: ಇಂದಿನಿಂದ ಯುರೋ ಕಪ್ ಟೂರ್ನಿ; ಜರ್ಮನಿ-ಸ್ಕಾಟ್ಲೆಂಡ್ ನಡುವೆ ಮೊದಲ ಪಂದ್ಯ

ಇಲ್ಲ ಸಲ್ಲದ ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಎಳೆಯುತ್ತಿರುವುದು ರಾಜಕೀಯ ವೈಷಮ್ಯ ಸರಿ. ಅವರ ಈ ದುರ್ಬುದ್ಧಿಗೆ ತಕ್ಕ ಪಾಠ ಕಲಿಯಲಿದ್ದಾರೆ ಎಂದು ಸಚಿವ ಜೋಶಿ ಎಚ್ಚರಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Pradeep Eshwar: ಸುಧಾಕರ್‌, ನಾವೆಲ್ಲ ಒಂದೇ; ನಮಗೋಸ್ಕರ ನೀವ್ಯಾಕೆ ಸುಮ್ನೆ ಹೊಡೆದಾಡ್ತೀರಾ ಎಂದ ಪ್ರದೀಪ್‌ ಈಶ್ವರ್!

Pradeep Eshwar: ಚಿಕ್ಕಬಳ್ಳಾಪುರ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೋಲಿನ ಬಗ್ಗೆ ಶಾಸಕ ಪ್ರದೀಪ್‌ ಈಶ್ವರ್‌ ಪ್ರತಿಕ್ರಿಯಿಸಿದ್ದಾರೆ. ನಾವು ನಮ್ಮ ಹೆಂಡತಿ‌, ಮಕ್ಕಳ ಜೊತೆ ಆರಾಮಾಗಿರ್ತೀವಿ. ನೀವ್ಯಾಕೆ ನಮಗೋಸ್ಕರ ಹೊಡೆದಾಡ್ತೀರಾ? ಯಾಕೆ ಸುಮ್ಮನೆ ಬಟ್ಟೆ ಹರ್ಕೋತೀರಾ? ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ.

VISTARANEWS.COM


on

Pradeep Eshwar
Koo

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಬಳಿಕ ಮತ್ತೆ ʼನಮಸ್ತೆ ಚಿಕ್ಕಬಳ್ಳಾಪುರʼ ಕಾರ್ಯಕ್ರಮದ ಮೂಲಕ ಮನೆಮನೆಗೆ ತೆರಳಿ ಜನರ ಅಹವಾಲು ಸ್ವೀಕರಿಸಲು ಶಾಸಕ ಪ್ರದೀಪ್‌ ಈಶ್ವರ್‌ ಮುಂದಾಗಿದ್ದಾರೆ. ಈ ವೇಳೆ ಕ್ಷೇತ್ರದ ನೂತನ ಸಂಸದ ಡಾ.ಕೆ.ಸುಧಾಕರ್‌ ಅವರಿಗೆ ಶುಭ ಹಾರೈಸಿರುವ ಅವರು, ಸುಧಾಕರ್ ದೆಹಲಿಯಲ್ಲಿ ಆರಾಮಾಗಿ ಇರ್ತಾರೆ. ನಾವು ನಮ್ಮ ಹೆಂಡತಿ‌, ಮಕ್ಕಳ ಜೊತೆ ಆರಾಮಾಗಿರ್ತೀವಿ, ನೀವ್ಯಾಕೆ ನಮಗೋಸ್ಕರ ಹೊಡೆದಾಡ್ತೀರಾ, ಯಾಕೆ ಸುಮ್ಮನೆ ಬಟ್ಟೆ ಹರ್ಕೋತೀರಾ ಎಂದು ಕಾರ್ಯಕರ್ತರಿಗೆ ಹೇಳಿದರು.

ಕ್ಷೇತ್ರದಲ್ಲಿ ಡಾ.ಕೆ. ಸುಧಾಕರ್‌ಗೆ ಒಂದು ವೋಟ್ ಲೀಡ್ ಬಂದರೂ ರಾಜೀನಾಮೆ ಕೊಡೋದಾಗಿ ಹೇಳಿದ್ದರಿಂದ ಪ್ರದೀಪ್ ಈಶ್ವರ್ ರಾಜೀನಾಮೆಗೆ ಒತ್ತಾಯಗಳು ಕೇಳಿಬಂದಿದ್ದವು. ಹೀಗಾಗಿ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಶುಕ್ರವಾರ ʼನಮಸ್ತೆ ಚಿಕ್ಕಬಳ್ಳಾಪುರʼ ಕಾರ್ಯಕ್ರಮ ನಡೆಸಲಾಯಿತು. ನಗರದ 17ನೇ ವಾರ್ಡ್‌ನಲ್ಲಿ ಮನೆಮನೆಗೆ ತೆರಳಿ ಶಾಸಕ ಪ್ರದೀಪ್‌ ಈಶ್ವರ್, ಜನರ ಅಹವಾಲು ಆಲಿಸಿದರು.

ಈ ವೇಳೆ ನೂತನ‌ ಸಂಸದ ಡಾ.ಕೆ.ಸುಧಾಕರ್‌ಗೆ ಶುಭ ಹಾರೈಸಿದ ಪ್ರದೀಪ್ ಈಶ್ವರ್, ಒಳ್ಳೆ ಕೆಲಸ ಮಾಡಿಕೊಂಡು ಹೋಗಲಿ. ಜನಾಭಿಪ್ರಾಯ ಸುಧಾಕರ್ ಪರವಾಗಿ ಬಂದಿದೆ. ಕಳೆದ ಒಂದು ವಾರದಿಂದ ಕ್ಷೇತ್ರದಲ್ಲಿ ಗಲಾಟೆಗಳಾಗುತ್ತಿವೆ. ನನ್ನ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ತಕ್ಷಣ ನಾನು ರಿಯಾಕ್ಟ್ ಮಾಡಿದ್ರೆ ನಮ್ಮ ಕಾರ್ಯಕರ್ತರು, ಅವರ ಕಾರ್ಯಕರ್ತರು ಹೊಡೆದಾಡಿಕೊಳುತ್ತಾರೆ. ನಾನು ಬೈಯ್ಯಬೇಕಾ, ನಾನೇ ಅಖಾಡಕ್ಕೆ ಇಳಿಯುತ್ತೇನೆ‌. ನನ್ನ ಕಾರ್ಯಕರ್ತರನ್ನು ಯಾವುದೇ ಕಾರಣಕ್ಕೂ ಬಲಿ ಕೊಡಲ್ಲ. ನನ್ಮ ಅಸ್ತಿತ್ವದ ಪ್ರಶ್ನೆ ನಾನೇ ಕಾಪಾಡಿಕೊಳ್ತೀನಿ ಎಂದರು.

ಇದನ್ನೂ ಓದಿ | DK Shivakumar: ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ

ನಾಲ್ಕೈದು ಕಡೆ ದಾಳಿಯಾದರೂ ನಾನು ತಾಳ್ಮೆಯಿಂದ ಇದ್ದೇನೆ. ಕೆ.ಸುಧಾಕರ್ ದೆಹಲಿಯಲ್ಲಿ ಆರಾಮಾಗಿ ಇರುತ್ತಾರೆ. ನಾನು ಬೆಂಗಳೂರಿನಲ್ಲಿ ಆರಾಮಾಗಿ ಇರುತ್ತೇನೆ. ನಾವು ನಮ್ಮ ಹೆಂಡತಿ‌, ಮಕ್ಕಳ ಜೊತೆ ಆರಾಮಾಗಿರ್ತೀವಿ. ನೀವ್ಯಾಕೆ ನಮಗೋಸ್ಕರ ಹೊಡೆದಾಡ್ತೀರಾ? ಯಾಕೆ ಸುಮ್ಮನೆ ಬಟ್ಟೆ ಹರ್ಕೋತೀರಾ? ನಮಗೆಲ್ಲಾ ನಮ್ಮ ಹೆಂಡತಿ ಮಕ್ಕಳೇ ಮುಖ್ಯ ಎಂದು ಹೇಳುವ ಮೂಲಕ ನಾವೆಲ್ಲಾ ಒಂದೇ ಎನ್ನುವ ಅರ್ಥದಲ್ಲಿ ಕಾರ್ಯಕರ್ತರಿಗೆ ಸಂದೇಶ ನೀಡಿದ್ದಾರೆ.

ಮನೆಗೆ ಕಲ್ಲು ಹೊಡೆದ ನಾಲ್ಕು ಜನರನ್ನು ಠಾಣೆಗೆ ಕರೆಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಫೇಕ್ ರಾಜೀನಾಮೆ ಪತ್ರ ಹರಿಬಿಟ್ಟಿದ್ದಾರೆ. ಮೈಸೂರಿನ ಅವಿನಾಶ್ ಜೊತೆ ಇನ್ನಿಬ್ಬರು ಹುಡುಗರು ಈ ರೀತಿ ಮಾಡಿದ್ದಾರೆ. ಫೇಕ್ ರಾಜೀನಾಮೆ ಲೆಟರ್ ಹರಿಬಿಟ್ಟಿರುವ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಅಖಾಡದಲ್ಲಿ ನಾನು ಇದ್ದಿದ್ರೆ ಅದರ ಕಥೆ ಬೇರೆ ಆಗ್ತಿತ್ತು

ಕ್ಷೇತ್ರದಲ್ಲಿ ಪಕ್ಷದ ಸೋಲಿಗೆ ಪರೋಕ್ಷವಾಗಿ ರಕ್ಷಾರಾಮಯ್ಯಗೆ ವಿರುದ್ಧ ಅಸಮಾಧಾನ ಹೊರಹಾಕಿದ ಶಾಸಕ ಪ್ರದೀಪ್ ಈಶ್ವರ್, ಸುಧಾಕರ್ ವಿರುದ್ಧ ಅಖಾಡದಲ್ಲಿ ನಾನು ಇದ್ದಿದ್ದರೆ ಅದರ ಕಥೆ ಬೇರೆ ಆಗ್ತಿತ್ತು. ಎಲ್ಲರೂ ಪ್ರದೀಪ್ ಈಶ್ವರ್ ಆಗಕ್ಕೆ ಸಾಧ್ಯವಿಲ್ಲ. ಇನ್ನು ಮುಂದೆ ನಾನೆ ಮನೆಮನೆಗೆ ಸುತ್ತುತ್ತೇನೆ. ಕಾರ್ಯಕರ್ತರನ್ನು ಬಲಪಡಿಸುತ್ತೇನೆ. ಕಾಂಗ್ರೆಸ್ ಪಕ್ಷ ದೊಡ್ಡದು, ಪ್ರದೀಪ್ ಈಶ್ವರ್ ಅಲ್ಲ. ನನ್ನಂಥಹ ಅಹಿಂದ ಹುಡುಗರ ರಕ್ಷಣೆ ಸಿಗಬೇಕಾದರೆ ಕಾಂಗ್ರೆಸ್ ಉಳಿಯಬೇಕು. ಚಿಕ್ಕಬಳ್ಳಾಪುರಲ್ಲಿ ಈ ಸೋಲು ಸೋಲಲ್ಲ, ಗೆಲುವು ಇನ್ನು ಐದು ವರ್ಷ ಮುಂದಕ್ಕೆ ಹೋಗಿದೆ ಅಷ್ಟೇ ಎಂದು ಹೇಳಿದರು.

ಇದನ್ನೂ ಓದಿ | Rahul Gandhi: ನನ್ನ ಮೇಲೆ ಮೋದಿಗಿರುವಷ್ಟು ದೇವರ ಕೃಪೆ ಇಲ್ಲ ಎಂದ ರಾಹುಲ್‌ ಗಾಂಧಿ; ಏಕಿಂಥ ಮಾತು?

ಯಾರೇ ಆಗಿದ್ರೂ ಶಿಕ್ಷೆ ಆಗಲೇ ಆಗುತ್ತೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಕೇಸ್‌ನಲ್ಲಿ ಯಾವುದೇ ರಾಜಕೀಯ ಹಸ್ತಕ್ಷೇಪ ಇಲ್ಲ. ರೇಣುಕಾಸ್ವಾಮಿ ಹತ್ಯೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ತಪ್ಪಿತಸ್ತರು ಯಾರೆ ಇದ್ದರೂ ಕಾನೂನು ಕ್ರಮ ಜರುಗಿಸಬೇಕು. ಬೆಂಗಳೂರಿನ ಪೊಲೀಸರು ಬಲಿಷ್ಠವಾಗಿದ್ದಾರೆ. ಕಾನೂನಿಗಿಂತ ದೊಡ್ಡವರು ಈ ಭೂಮಿ ಮೇಲೆ ಯಾರೂ ಇಲ್ಲ. ಯಾರೇ ಆಗಿದ್ರೂ ತಪ್ಪಿಗೆ ಶಿಕ್ಷೆ ಆಗಲೇ ಆಗುತ್ತೆ ಎಂದು ಪ್ರದೀಪ್‌ ಈಶ್ವರ್‌ ಅಭಿಪ್ರಾಯಪಟ್ಟರು.

Continue Reading
Advertisement
Baby Death
ಪ್ರಮುಖ ಸುದ್ದಿ7 mins ago

Baby Death: ಆಟವಾಡುತ್ತ 7ನೇ ಮಹಡಿ ಬಾಲ್ಕನಿಯಿಂದ ಕೆಳಗೆ ಬಿದ್ದ ಮಗು; ವಿಡಿಯೊ ಇದೆ

Train Accident
ಕ್ರೈಂ12 mins ago

Train Accident : ಹಳಿ ದಾಟುವಾಗ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಸಾವು

Job Alert
ಉದ್ಯೋಗ13 mins ago

Job Alert: ಕಾಟನ್‌ ಕಾರ್ಪೋರೇಷನ್‌ನಲ್ಲಿದೆ 214 ಹುದ್ದೆ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

CM Siddaramaiah
ಕರ್ನಾಟಕ22 mins ago

CM Siddaramaiah: ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಣ, ಆರೋಗ್ಯ, ಉದ್ಯೋಗಕ್ಕೆ ಆದ್ಯತೆ ನೀಡಲು ಸಿದ್ದರಾಮಯ್ಯ ಸೂಚನೆ

Lok Sabha Election
ಪ್ರಮುಖ ಸುದ್ದಿ23 mins ago

Lok Sabha Election : ಅಹಂಕಾರ ತೋರಿಸಿದ್ದಕ್ಕೆ ರಾಮನೇ 241 ಸ್ಥಾನಕ್ಕೆ ನಿಲ್ಲಿಸಿದ; ಪರೋಕ್ಷ ಟಾಂಗ್​ ಕೊಟ್ಟ ಆರ್​ಎಸ್​ಎಸ್​​ ಸಿದ್ಧಾಂತವಾದಿ

Tata Motors Panch EV Nexon EV 5 star rating by Bharat NCAP
ಕರ್ನಾಟಕ26 mins ago

Tata Motors: ಪಂಚ್. ಇವಿ, ನೆಕ್ಸಾನ್.ಇವಿಗೆ ಭಾರತ್-ಎನ್‌ಸಿಎಪಿಯಿಂದ 5 ಸ್ಟಾರ್ ರೇಟಿಂಗ್

Nari Samman 2024 award ceremony on June 15 in Bengaluru
ಕರ್ನಾಟಕ37 mins ago

Bengaluru News: ಬೆಂಗಳೂರಿನಲ್ಲಿ ಜೂ.15ರಂದು ʼನಾರಿ ಸಮ್ಮಾನ್‌ʼ ಪ್ರಶಸ್ತಿ ಪ್ರದಾನ

Viral Video
ವಿದೇಶ48 mins ago

ಹಿಂದೂಗಳ ಆಸ್ತಿ ಲೂಟಿ ಮಾಡಿ, ದೇವರ ವಿಗ್ರಹ ಕದ್ದು ಪಾಕಿಸ್ತಾನ ಸ್ಥಾಪನೆ; ಪಾಕ್‌ ಪತ್ರಕರ್ತನ ವಿಡಿಯೊ ವೈರಲ್‌

Actor Darshan
ಪ್ರಮುಖ ಸುದ್ದಿ56 mins ago

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್; ಆರೋಪಿಗಳಿಗೆ ನೀಡಲು ರೆಸ್ಟೋರೆಂಟ್‌ನಲ್ಲಿ ಇಟ್ಟಿದ್ದ 30 ಲಕ್ಷ ಸೀಜ್

Flight issues
Latest58 mins ago

flight problems: ವಿಮಾನದಲ್ಲಿ ಕೈಕೊಟ್ಟ ಎಸಿ; ಸೆಕೆ ತಾಳಲಾರದೆ ಬಟ್ಟೆ ಬಿಚ್ಚಿದ ಪ್ರಯಾಣಿಕರು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ7 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌