Prajwal Revanna Case: ಕಾಂಗ್ರೆಸ್‌ ಸರ್ಕಾರದಿಂದ ಪ್ರಜ್ವಲ್‌ ಕೇಸ್‌ ನಿಯಂತ್ರಣ; ಡೈವರ್ಟ್‌ ಮಾಡಲು ಬಿಜೆಪಿಗರ ಮೇಲೆ ದಾಳಿ ಎಂದ ಅಶೋಕ್‌! - Vistara News

ರಾಜಕೀಯ

Prajwal Revanna Case: ಕಾಂಗ್ರೆಸ್‌ ಸರ್ಕಾರದಿಂದ ಪ್ರಜ್ವಲ್‌ ಕೇಸ್‌ ನಿಯಂತ್ರಣ; ಡೈವರ್ಟ್‌ ಮಾಡಲು ಬಿಜೆಪಿಗರ ಮೇಲೆ ದಾಳಿ ಎಂದ ಅಶೋಕ್‌!

Prajwal Revanna Case: ಎಸ್ಐಟಿ ನಡೆಸುವ ತನಿಖೆಯ ಪಿನ್ ಟು ಪಿನ್ ಮಾಹಿತಿ‌ ಕಾಂಗ್ರೆಸ್ ಸರ್ಕಾರಕ್ಕೆ ಹೋಗುತ್ತಿದೆ. ಅದಕ್ಕಾಗಿಯೇ ಇಡೀ ಕೇಸ್‌ ಅನ್ನು ಬಿಜೆಪಿ ಕಡೆ ತಿರುಗಿಸುತ್ತಿದ್ದಾರೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಯಬೇಕಾದರೆ ಸಿಬಿಐಗೆ ತನಿಖೆಯನ್ನು ವಹಿಸಬೇಕು. ಪ್ರಜ್ವಲ್ ವಾಪಸ್ ಬಂದಿಲ್ಲ ಎಂದರೆ ಅದು ಸರ್ಕಾರದ ವೈಫಲ್ಯ. ಎಸ್ಐಟಿ ಟೀಂನವರು ಅವರನ್ನು ಬಂಧಿಸಿ ಕರೆ ತಂದಿಲ್ಲ. ಅದೇ ಈ ಕೇಸ್‌ ಅನ್ನು ಸಿಬಿಐಗೆ ವಹಿಸಿದರೆ ಅವರು ಬಂಧಿಸಿ ಕರೆತರುತ್ತಾರೆ ಎಂದು ಆರ್.‌ ಅಶೋಕ್‌ ಹೇಳಿದ್ದಾರೆ.

VISTARANEWS.COM


on

Valmiki Development Corporation Scam Opposition party leader R Ashok has demanded that CM Siddaramaiah should resign
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣವನ್ನು ಕಾಂಗ್ರೆಸ್‌ ನಿಯಂತ್ರಣ ಮಾಡುತ್ತಿದೆ. ಇದೆಲ್ಲವೂ ಕಾಂಗ್ರೆಸ್‌ ಸರ್ಕಾರದ ಪ್ರೀ ಪ್ಲ್ಯಾನ್‌ ಆಗಿದೆ. ಈ ಪೆನ್‌ಡ್ರೈವ್‌ ಹಂಚಿಕೆಯಲ್ಲಿ ಮಹಾ ನಾಯಕನ ಕೈವಾಡ ಇದೆ ಎಂಬುದಾಗಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನೀಡಿದ್ದ ಹೇಳಿಕೆಯಿಂದ ಮುಜುಗರವಾಗಿ ಈಗ ಇಡೀ ಕೇಸ್‌ ಅನ್ನು ಬಿಜೆಪಿ ಕಡೆ ತಿರುಗಿಸಲು ಯತ್ನಿಸುತ್ತಿದ್ದಾರೆ. ಕಾಂಗ್ರೆಸ್‌ ಕಾರ್ಯಕರ್ತರ ಮೊಬೈಲ್‌ನಲ್ಲಿ ಈ ಕೇಸ್‌ಗೆ ಸಂಬಂಧಿಸಿದ ವಿಡಿಯೊಗಳಿಲ್ಲವಾ? ಅಲ್ಲದೇ, ಪ್ರಜ್ವಲ್‌ ಮಾಜಿ ಡ್ರೈವರ್‌ ಕಾರ್ತಿಕ್‌ನನ್ನು ಏಕೆ ಬಂಧಿಸಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರ್.‌ ಅಶೋಕ್‌, ಎಚ್‌.ಡಿ. ಕುಮಾರಸ್ವಾಮಿಯವರು ಮಹಾನಾಯಕನ ಹೆಸರು ಹೇಳಿರುವ ಕಾರಣಕ್ಕಾಗಿಯೇ ಈಗ ಪ್ರಕರಣವನ್ನು ಬಿಜೆಪಿ ಕಡೆಗೆ ತಿರುಗಿಸಲಾಗುತ್ತಿದೆ. ಏಕೆಂದರೆ ಕಾಂಗ್ರೆಸ್‌ನವರಿಗೆ ಈಗ ಇದರಿಂದ ಮುಜುಗರವಾಗತೊಡಗಿದೆ. ಹೀಗಾಗಿ ಪ್ರಕರಣವನ್ನು ತಮ್ಮ ಕಂಟ್ರೋಲ್‌ಗೆ ತೆಗೆದುಕೊಂಡಿದ್ದಾರೆ. ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಜಾಮೀನು ನಿರಾಕರಣೆ ಆದ ಕೂಡಲೇ ಬಂಧಿಸಲಾಗುತ್ತದೆ. ಆದರೆ, ಅದೇ ಪೆನ್‌ಡ್ರೈವ್‌ ಅನ್ನು ಹರಿಬಿಟ್ಟ ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ನನ್ನು ಮಾತ್ರ ಈವರೆಗೆ ಏಕೆ ಬಂಧಿಸಿಲ್ಲ? ಈಗ ಹಾಸನದಲ್ಲಿ ಆಗಿರುವ ಎಸ್ಐಟಿ ದಾಳಿ ಉದ್ದೇಶವೇನೆಂದರೆ ಇಡೀ ಪ್ರಕರಣವನ್ನು ಬೇರೆ ಕಡೆ ಡೈವರ್ಟ್ ಮಾಡುವುದಾಗಿದೆ ಎಂದು ಕಿಡಿಕಾರಿದರು.

ಸಿಬಿಐಗೆ ಪ್ರಕರಣ ವಹಿಸಿ

ಎಸ್ಐಟಿ ನಡೆಸುವ ತನಿಖೆಯ ಪಿನ್ ಟು ಪಿನ್ ಮಾಹಿತಿ‌ ಕಾಂಗ್ರೆಸ್ ಸರ್ಕಾರಕ್ಕೆ ಹೋಗುತ್ತಿದೆ. ಅದಕ್ಕಾಗಿಯೇ ಇಡೀ ಕೇಸ್‌ ಅನ್ನು ಬಿಜೆಪಿ ಕಡೆ ತಿರುಗಿಸುತ್ತಿದ್ದಾರೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಯಬೇಕಾದರೆ ಸಿಬಿಐಗೆ ತನಿಖೆಯನ್ನು ವಹಿಸಬೇಕು. ಪ್ರಜ್ವಲ್ ವಾಪಸ್ ಬಂದಿಲ್ಲ ಎಂದರೆ ಅದು ಸರ್ಕಾರದ ವೈಫಲ್ಯ. ಎಸ್ಐಟಿ ಟೀಂನವರು ಅವರನ್ನು ಬಂಧಿಸಿ ಕರೆ ತಂದಿಲ್ಲ. ಅದೇ ಈ ಕೇಸ್‌ ಅನ್ನು ಸಿಬಿಐಗೆ ವಹಿಸಿದರೆ ಅವರು ಬಂಧಿಸಿ ಕರೆತರುತ್ತಾರೆ ಎಂದು ಆರ್.‌ ಅಶೋಕ್‌ ಹೇಳಿದರು.

ಇದೆಲ್ಲ ಪ್ರೀ ಪ್ಲ್ಯಾನ್‌

ಹಾಸನದಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಈಗ ಎಸ್‌ಐಟಿ ತಂಡದವರು ದಾಳಿ ಮಾಡುತ್ತಿದ್ದಾರೆ. ಇದು ಬೇಕೆಂದೇ ಮಾಡುತ್ತಿರುವ ಕೃತ್ಯವಾಗಿದೆ. ಹಾಗಾದರೆ, ಹಾಸನ ಕಾಂಗ್ರೆಸ್ ಕಾರ್ಯಕರ್ತರ ಬಳಿ ವಿಡಿಯೊಗಳು ಇಲ್ಲವೇ? ಅವರ ಮೊಬೈಲ್‌ಗಳನ್ನು ಚೆಕ್‌ ಮಾಡಲಿ. ಅವರ ಬಳಿ ಇದಕ್ಕಿಂತಲೂ ಹೆಚ್ಚು ವಿಡಿಯೊ ಮತ್ತು ಪೆನ್‌ಡ್ರೈವ್ ಇದೆ. ಕಾಂಗ್ರೆಸ್‌ನ ಯಾವೊಬ್ಬ ಕಾರ್ಯಕರ್ತನ ವಿಚಾರಣೆಯನ್ನು ಇದುವರೆಗೆ ಏಕೆ ಮಾಡಿಲ್ಲ? ಇದೆಲ್ಲ ಪ್ರೀ ಪ್ಲ್ಯಾನ್‌ ಆಗಿದೆ ಎಂದು ಆರ್.‌ ಅಶೋಕ್‌ ದೂರಿದರು.

ಗೌಡರ ಕುಟುಂಬದ ಬಗ್ಗೆ ಡಿಕೆಶಿ ಕಿಂಡಲ್‌

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬ ಮೇಲೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಅನುಕಂಪ ತೋರಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಆರ್.‌ ಅಶೋಕ್, ಡಿ.ಕೆ. ಶಿವಕುಮಾರ್‌ ಅವರು ಕಿಂಡಲ್‌ ಮಾಡುತ್ತಿದ್ದಾರೆ. ಅವರು ದೇವೇಗೌಡರ ಕುಟುಂಬಕ್ಕೆ ಈ ಹೇಳಿಕೆ ಮೂಲಕ ಲೇವಡಿ ಮಾಡಿದ್ದಾರೆ ಎಂದು ವ್ಯಾಖ್ಯಾನಿಸಿದರು.

ತಿಮಿಂಗಿಲ ಬಗ್ಗೆ ಗೊತ್ತಾಗುತ್ತೆ

ಎಚ್.ಡಿ. ಕುಮಾರಸ್ವಾಮಿ ಅವರು ಡಿಕೆಶಿಗೆ ಪರೋಕ್ಷವಾಗಿ ತಿಮಿಂಗಿಲ ಎಂದಿರುವ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡ ಆರ್.‌ ಅಶೋಕ್‌, ಪ್ರಕರಣದಲ್ಲಿ ತಿಮಿಂಗಿಲ ಯಾರು ಅಂತ ಗೊತ್ತಾಗಲೇಬೇಕು. ಸಮುದ್ರದಲ್ಲಿರುವ ತಿಮಿಂಗಿಲ ಆಮ್ಲಜನಕಕ್ಕಾಗಿ ನೀರಿಂದ ಹೊರಗೆ ಬರಲೇಬೇಕು. ಆಗ ಆ ತಿಮಿಂಗಿಲ ಕಾಂಗ್ರೆಸ್‌ದಾ? ಜೆಡಿಎಸ್‌ದಾ ಅಂತ ಗೊತ್ತಾಗುತ್ತದೆ ಎಂದು ಹೇಳಿದರು.

ಹಗಲು ಕನಸು ಕಾಣುತ್ತಿರುವ ಸಿದ್ದರಾಮಯ್ಯ

ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿಕೆಯನ್ನು ನಿರಾಕರಣೆ ಮಾಡಿರುವ ಸಿಎಂ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಆರ್.‌ ಅಶೋಕ್‌, ಬಿಜೆಪಿಯವರು ಭ್ರಮೆಯಲ್ಲಿದ್ದಾರೆಂದು ಅವರು ಹೇಳುತ್ತಿರಬಹುದು. ಆದರೆ, ಭ್ರಮೆಯಲ್ಲಿರುವುದು ನಾವಲ್ಲ. ಹಗಲು ಕನಸು ಕಾಣುತ್ತಿರುವುದು ನಾವಲ್ಲ, ಸಿದ್ದರಾಮಯ್ಯ ಅವರಾಗಿದ್ದಾರೆ. ಈ ಹಿಂದೆ 17 ಶಾಸಕರು ಹೋಗ್ತಾರಾ? ಸಾಧ್ಯವಿಲ್ಲ ಅಂದಿದ್ದರು. ಆದರೆ, ಅದು ಸಾಧ್ಯವಾಗಿಲ್ಲವಾ? 17 ಶಾಸಕರು ಬಂದರಲ್ಲವೇ? ಮಹಾರಾಷ್ಟ್ರದಲ್ಲೂ 90 ಜನ ಶಾಸಕರು ಆಚೆ ಹೋದರಲ್ಲ. ಇದೆಲ್ಲವೂ ಹೇಗಾಯ್ತು? ಎಂದು ಪ್ರಶ್ನೆ ಮಾಡಿದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಕಾಂಗ್ರೆಸ್‌ ಮೊದಲು ಬಿಡುವವರು ಇವರೇ

ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಿ ಚುನಾಯಿತರಾದರೆ ಕಾಂಗ್ರೆಸ್‌ನವರಿಗೆ ಗಂಟು ಮೂಟೆ ಕಟ್ಟೋದಷ್ಟೇ ಬಾಕಿ. ಯಾರು ನಾನಲ್ಲ, ನಾನಲ್ಲ ಅಂತ ಹೇಳುತ್ತಿದ್ದಾರೋ, ಅವರೇ ಮೊದಲು ಕಾಂಗ್ರೆಸ್ ಬಿಡುತ್ತಾರೆ. ಆ ರೀತಿಯ ಸನ್ನಿವೇಶ ನಿರ್ಮಾಣವಾದರೆ ಅವರೇ ಬಿಜೆಪಿಗೆ ಬರಲು ಮೊದಲು ನಿಂತುಕೊಳ್ಳುತ್ತಾರೆ ಎಂದು ಆರ್.‌ ಅಶೋಕ್‌ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಚಿತ್ರದುರ್ಗ

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್‌ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ. ಸುಧಾಕರ್‌ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸುಧಾಕರ್‌ ಅವರು ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

ಸುಧಾಕರ್‌ ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. “ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಸಿಎಂ ಪ್ರಾರ್ಥಿಸಿದರು.

ಡಿ. ಸುಧಾಕರ್‌ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರ ನಿಧನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Continue Reading

Latest

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

VISTARANEWS.COM


on

ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್‌ ವಿಜಯ್‌ ಪದಗ್ರಹಣದ ಬಳಿಕ ತಮ್ಮ ಮೊದಲ ಭಾಷಣದಲ್ಲಿ ಜನತೆಗೆ ತಾನು ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುವುದಾಗಿ ಸ್ಪಷ್ಟಪಡಿಸಿದರು.

“ನಾನು ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇನೆ. ತಮಿಳುನಾಡಿನ 8 ಕೋಟಿ ಜನರೂ ನನ್ನವರೇ. ನಾನು ನಿಮ್ಮಲ್ಲೊಬ್ಬ., ನಿಮ್ಮ ಕುಟುಂಬದ ಸದಸ್ಯ, ನಿಮ್ಮ ಮನೆ ಮಗನಾಗಿ ಕೆಲಸ ಮಾಡುತ್ತೇನೆ” ಎಂದು ವಿಜಯ್‌ ಹೇಳಿದರು.

“ಇಲ್ಲಿರುವುದು ಒಂದೇ ಪವರ್‌ ಸೆಂಟರ್‌. ಆ ಕಡೆ ಒಂದು, ಈ ಕಡೆ ಒಂದು ಪವರ್‌ ಸೆಂಟರ್‌ ಇಲ್ಲ. ತಮಿಳುನಾಡಿನಲ್ಲಿ ಹೊಸ ಯುಗಾರಂಭ ಆಗಿದೆ” ಎಂದು ಅವರು ಘೋಷಿಸಿದರು.

ಹಿಂದೂ, ಕ್ರೈಸ್ತ ಹಾಗೂ ಮುಸ್ಲಿಂ ಸೇರಿದಂತೆ ಎಲ್ಲ ಧರ್ಮಗಳ ಜನರ ಹಿತ ಕಾಪಾಡುವುದಾಗಿ ಹೇಳಿದ ವಿಜಯ್‌, “ನಿಜವಾದ ಜಾತ್ಯಾತೀತ ಹಾಗೂ ಸಮಾಜವಾದಿ ಆಡಳಿತ ಆರಂಭವಾಗಿದೆ” ಎಂದು ತಿಳಿಸಿದರು.

ತಮ್ಮ ಸರ್ಕಾರ ರಚನೆಗೆ ಬೆಂಬಲ ನೀಡಿದ ಕಾಂಗ್ರೆಸ್‌, ವಿಸಿಕೆ ಹಾಗೂ ಎಡಪಕ್ಷಗಳಿಗೆ ಧನ್ಯವಾದ ಅರ್ಪಿಸಿದ ವಿಜಯ್‌, “ನನ್ನ ಸಹೋದರ ರಾಹುಲ್‌ ಗಾಂಧಿಗೆ ವಿಶೇಷ ಧನ್ಯವಾದ” ಎಂದರು.

“ನನ್ನ ಜನರ ಹಣ ಲೂಟಿ ಮಾಡಲು ನಾನು ಬಿಡುವುದಿಲ್ಲ” ಎಂದು ಭ್ರಷ್ಟಾಚಾರ ವಿರುದ್ಧ ಕಠಿಣ ನಿಲುವು ತಾಳುವುದಾಗಿ ಸಿಎಂ ವಿಜಯ್‌ ಸ್ಪಷ್ಟಪಡಿಸಿದರು.

Continue Reading

Latest

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

VISTARANEWS.COM


on

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಜೋಸೆಫ್‌ ವಿಜಯ್‌ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಚೆನ್ನೈನ ನೆಹರೂ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ದೇವರ ಹೆಸರಿನಲ್ಲಿ ವಿಜಯ್‌ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಮಾಡಿದರು.

ಟಿವಿಕೆ ಪಕ್ಷ ಕಾಂಗ್ರೆಸ್‌, ವಿಸಿಕೆ ಮತ್ತು ಎಡಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಿದೆ. ಸಚಿವ ಸಂಪುಟದಲ್ಲಿ ಎನ್‌. ಆನಂದ್‌, ಆಥವ್‌ ಅರ್ಜುನ್‌, ಡಾ. ಅರುಣ್‌ ರಾಜ್‌, ಕೆ.ಎ. ಸೆಂಗೋಟ್ಟಿಯ್ಯನ್‌, ಪಿ. ವೆಂಕಟರಮಣನ್‌, ಆರ್‌. ನಿರ್ಮಲ್‌ ಕುಮಾರ್‌, ಎ.ರಾಜ್‌ ಮೋಹನ್‌, ಟಿ.ಕೆ. ಪ್ರಭು, ಸೆಲ್ವಿ ಎಸ್‌. ಕೀರ್ತನಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಚಿತ್ರನಟಿ ತ್ರಿಶಾ, ವಿಜಯ್‌ ತಂದೆತಾಯಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ವಿಜಯ್‌ ಪದಗ್ರಹಣ ಸಮಾರಂಭಕ್ಕೆ ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು.

Continue Reading

Latest

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

VISTARANEWS.COM


on

ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ವಿಜಯ್‌ ನೇತೃತ್ವದ ಟಿವಿಕೆ ಸರ್ಕಾರ ರಚನೆಗೆ ಸಂಖ್ಯಾಬಲ ಹೆಚ್ಚಿಸಿಕೊಳ್ಳುವ ಪ್ರಯತ್ನ ಮುಂದುವರಿಸಿದೆ. ವಿಸಿಕೆ ಬೆಂಬಲ ಪಡೆಯುವಲ್ಲಿ ವಿಜಯ್ ಪಡೆ ಬಹುತೇಕ ಯಶಸ್ವಿಯಾಗಿದೆ ಎನ್ನಲಾಗುತ್ತಿದೆ. ಚೆನ್ನೈನ ಮಾಮಲ್ಲಪುರಂನ ಖಾಸಗಿ ಹೋಟೆಲ್‌ನಲ್ಲಿ ಮಧ್ಯಾಹ್ನ ಟಿವಿಕೆ ಶಾಸಕರ ಸಭೆ ನಡೆಯಲಿದೆ.
ಇಂದು ಸಂಜೆ 4 ಗಂಟೆಗೆ ವಿಸಿಕೆ ಸುದ್ದಿಗೋಷ್ಠಿ ನಡೆಸಲಿದ್ದು, ಬೆಂಬಲ ಘೋಷಣೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ಕಾಂಗ್ರೆಸ್‌ ಹಾಗೂ ಎಡಪಕ್ಷಗಳು ಟಿವಿಕೆಗೆ ಬೆಂಬಲ ಸೂಚಿಸಿವೆ.
ಸದ್ಯ ವಿಜಯ್ ನೇತೃತ್ವದ ಮೈತ್ರಿಗೆ 116 ಶಾಸಕರ ಬೆಂಬಲವಿದೆ. ವಿಸಿಕೆ ಯ ಇಬ್ಬರು ಶಾಸಕರು ಬೆಂಬಲ ನೀಡಿದರೆ ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲ ಸಿಗಲಿದೆ.
ಇಂದು ಸಂಜೆ ವಿಜಯ್‌ ಅವರು ತಮಿಳುನಾಡು ರಾಜ್ಯಪಾಲ ರಾಜೇಂದ್ರ ಅರ್ಲೇಕರ್‌ ಅವರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸುವ ಸಾಧ್ಯತೆಯಿದೆ.
ಸಂಖ್ಯಾಬಲ ಹೀಗಿದೆ:
ಟಿವಿಕೆ – 107
ಕಾಂಗ್ರೆಸ್‌ – 5
ಎಡಪಕ್ಷಗಳು – 4
ವಿಸಿಕೆ – 2

Continue Reading
Advertisement
Latest17 hours ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ19 hours ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

Latest20 hours ago

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

Latest21 hours ago

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

ಪ್ರಮುಖ ಸುದ್ದಿ2 days ago

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

Latest2 days ago

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

Latest2 days ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ3 days ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ3 days ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ3 days ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌