Prajwal Revanna Case: ಪೆನ್‌ಡ್ರೈವ್‌ ಸೂತ್ರಧಾರಿ ಕಾರ್ತಿಕ್‌ ಹಿಂದೆ ಯಾರಿದ್ದಾರೆ? ಎಲ್ಲಿದ್ದಾನೆ? ಅವನನ್ನೇಕೆ ಹಿಡಿಯಲಿಲ್ಲ? ಎಚ್‌ಡಿಕೆ ಪ್ರಶ್ನೆ - Vistara News

ರಾಜಕೀಯ

Prajwal Revanna Case: ಪೆನ್‌ಡ್ರೈವ್‌ ಸೂತ್ರಧಾರಿ ಕಾರ್ತಿಕ್‌ ಹಿಂದೆ ಯಾರಿದ್ದಾರೆ? ಎಲ್ಲಿದ್ದಾನೆ? ಅವನನ್ನೇಕೆ ಹಿಡಿಯಲಿಲ್ಲ? ಎಚ್‌ಡಿಕೆ ಪ್ರಶ್ನೆ

Prajwal Revanna Case: ರೇವಣ್ಣ ಅರೆಸ್ಟ್ ಆದಾಗ ನನಗೆ ಗೊತ್ತೇ ಇಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಏನು ಹೇಳಿದ್ದಾರೆ? ಈ ಪ್ರಕರಣದ ಹಿಂದೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಇದ್ದಾರೆ ಎಂಬುದಾಗಿ ಹೇಳಿದ್ದಾರೆ. ಈಗ ನನ್ನ ಪ್ರಶ್ನೆ ಎಂದರೆ ಈ ಪೆನ್‌ಡ್ರೈವ್‌ ರೂವಾರಿ ಕಾರ್ತಿಕ್‌ನನ್ನು ಏಕೆ ಬಿಟ್ಟಿದ್ದೀರಿ? ಎಸ್ಐಟಿ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಎಂದು ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

VISTARANEWS.COM


on

Prajwal Revanna Case Who is behind pen drive mastermind Karthik HD Kumaraswamy Question
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದ (Hassan Pen Drive Case) ಸೂತ್ರಧಾರಿ ಕಾರ್ತಿಕ್‌ ಗೌಡ ಕಥೆ ಏನು? ಆತ ಎಲ್ಲಿದ್ದಾನೆ? ಆತನ ಹಿಂದೆ ಯಾರಿದ್ದಾರೆ? ನಿಮ್ಮ ಈ ತನಿಖೆಯ ವಿಸ್ತಾರ ಎಷ್ಟು? ಕೇವಲ ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧ ಅಷ್ಟೇ ನಿಮ್ಮ ತನಿಖೆಯೇ? ಇಲ್ಲವೇ ಆಯೋಗ ಹೇಳಿದಂತೆ ಎಲ್ಲ ರಾಜಕಾರಣಿಗಳ ವಿರುದ್ಧ ತನಿಖೆ ಮಾಡುತ್ತಿದ್ದೀರಾ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ರೇವಣ್ಣ ಅರೆಸ್ಟ್ ಆದಾಗ ನನಗೆ ಗೊತ್ತೇ ಇಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಏನು ಹೇಳಿದ್ದಾರೆ? ಈ ಪ್ರಕರಣದ ಹಿಂದೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಇದ್ದಾರೆ ಎಂಬುದಾಗಿ ಹೇಳಿದ್ದಾರೆ. ಈಗ ನನ್ನ ಪ್ರಶ್ನೆ ಎಂದರೆ ಈ ಪೆನ್‌ಡ್ರೈವ್‌ ರೂವಾರಿ ಕಾರ್ತಿಕ್‌ನನ್ನು ಏಕೆ ಬಿಟ್ಟಿದ್ದೀರಿ? ಎಸ್ಐಟಿ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಎಂದು ಪ್ರಶ್ನೆ ಮಾಡಿದರು.

ಈ ವೇಳೆ ಪ್ರಜ್ವಲ್‌ ಪೆನ್‌ಡ್ರೈವ್‌ ವಿಷಯವಾಗಿ ಹಾಸನದ ನವೀನ್ ಗೌಡ ಮಾತನಾಡಿದ್ದಾರೆನ್ನಲಾದ ಆಡಿಯೊವನ್ನು ಎಚ್‌.ಡಿ. ಕುಮಾರಸ್ವಾಮಿ ಪ್ಲೇ ಮಾಡಿದರು. ಅಲ್ಲದೆ, ನವೀನ್ ಗೌಡ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜತೆ ಇರುವ ಹಾಗೂ ಸಚಿವ ಜಮೀರ್ ಅಹಮದ್ ಜತೆ ಇರುವ ಫೋಟೊವನ್ನು ಬಿಡುಗಡೆ ಮಾಡಿದರು. ನವೀನ್‌ ಗೌಡನ ಮೇಲೆ ಯಾವ ಕ್ರಮವನ್ನು ತೆಗೆದುಕೊಂಡಿದ್ದೀರಿ? ಎಂದು ಪ್ರಶ್ನೆ ಮಾಡಿದರು.

ಪೆನ್‌ಡ್ರೈವ್‌ ಸಂಚಿನ ಹಿಂದಿರುವ ಡಿ.ಕೆ. ಶಿವಕುಮಾರ್‌ ವಜಾಗೆ ಕುಮಾರಸ್ವಾಮಿ ಆಗ್ರಹ

ಈ ಪೆನ್‌ಡ್ರೈವ್‌ ಹಂಚಿಕೆ ಸಂಚಿನ ಹಿಂದೆ ಇರುವ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಸಂಪುಟದಿಂದ ಕೂಡಲೇ ವಜಾ ಮಾಡಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಬಗ್ಗೆ ದಿಢೀರ್‌ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಈ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಒಳಸಂಚಿದೆ. ಕ್ಯಾಬಿನೆಟ್‌ನಿಂದ ಮೊದಲು ಅವರನ್ನು ಕಿತ್ತುಹಾಕಿ. ಈ ಪ್ರಕರಣವನ್ನು ಅಷ್ಟು ಸುಲಭವಾಗಿ ನಾನು ಬಿಡಲ್ಲ. ಈ ಸಿಎಂ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಮೊದಲು ಡಿಕೆಶಿಯನ್ನು ಕೈಬಿಡಲಿ ಎಂದು ಆಗ್ರಹಿಸಿದರು.

ಎಸ್ಐಟಿ ಅಧಿಕಾರಿಗಳು ಸಿಎಂ, ಡಿಸಿಎಂಗೆ ಏಜೆಂಟ್‌

ಎಸ್ಐಟಿ ಅಧಿಕಾರಿಗಳು ಸಿಎಂ, ಡಿಸಿಎಂಗೆ ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ. ದೇವರಾಜೇಗೌಡನನ್ನು ಯಾಕೆ ಕರೆಸಿಕೊಂಡರು? ಯಾಕೆ ಅವರ ಹೇಳಿಕೆಯಲ್ಲಿನ ಒಂದು ಪ್ಯಾರಾವನ್ನು ಡಿಲಿಟ್ ಮಾಡಿ ಎಂದು ಹೇಳಿದರು? ಡಿಕೆಶಿ ಇತಿಹಾಸ ಎಲ್ಲರಿಗೂ ಗೊತ್ತು. ಮೊದಲು ಈ ಒಳಸಂಚು ಮಾಡಿದ್ದರಿಂದ ಅವರ ಮೇಲೆ ಕ್ರಮವಾಗಲಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದರು.

ಸಿಎಂ, ಡಿಕೆಶಿ ಇನ್ವೆಸ್ಟಿಗೇಷನ್‌ ಟೀಮ್

ಪ್ರಜ್ವಲ್‌ ಮೇಲಿನ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ದೂರು ಸಿದ್ಧಪಡಿಸಿ ಹೊಳೆನರಸೀಪುರಕ್ಕೆ ಕಳಿಸಿದ್ದರು. ಬಳಿಕ ಎಸ್ಐಟಿ ತನಿಖೆಗೆ ಆದೇಶಿಸಿ ದೂರು ದಾಖಲು ಮಾಡಿಕೊಂಡಿದ್ದಾರೆ. ಇದನ್ನು ಒಪ್ಪೋಣ. ಆದರೆ ನಿಷ್ಪಕ್ಷಪಾತ ತನಿಖೆ ಆಗುತ್ತದೆ ಎಂದು ನಾನು ಭಾವಿಸಿದೆ. ಇಲ್ಲಾಗಿದ್ದೇನು? ಸಿಎಂ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್‌ ಟೀಂ, ಡಿ.ಕೆ. ಶಿವಕುಮಾರ್ ಇನ್ವೆಸ್ಟಿಗೇಷನ್‌ ಟೀಮ್ ಎಂದು ಮಾಡಿಕೊಂಡಿದ್ದಾರೆ. ಈ ಕೇಸ್‌ಗೆ ಸಂಬಂಧಪಟ್ಟಂತೆ ನಡೆದ ಕಾಲ್ ರೆಕಾರ್ಡಿಂಗ್ ಹೊರಗೆ ಬರಬೇಕು. ಯಾರು ಯಾರು? ಯಾರ ಜತೆ ಮಾತನಾಡಿದ್ದಾರೆ ಎಂಬುದೆಲ್ಲವೂ ಹೊರಬರಬೇಕು ಎಂದು ಆಗ್ರಹಿಸಿದರು.

ಕೆಲವರ ತೇಜೋವಧೆಗೆ ಈ ಪ್ರಕರಣವನ್ನು ಬಳಸಿಕೊಂಡಿರಿ

ನಾನು ಪ್ರಜ್ವಲ್ ರೇವಣ್ಣ ಅವರನ್ನು ವಹಿಸಿಕೊಂಡು ಮಾತನಾಡುವುದಿಲ್ಲ. ಎಫ್ಐಆರ್ ದಾಖಲು ಮಾಡಿದಾಗ ಜಾಮೀನು ಸಹಿತ ಪ್ರಕರಣವನ್ನು ದಾಖಲು ಮಾಡಿದೆವು. ಎರಡನೇ ದಿನ ಮತ್ತೆ ಇನ್ನೊಂದು ಪ್ರಕರಣವನ್ನು ದಾಖಲು ಮಾಡಿದೆವು. ಗನ್ ಪಾಯಿಂಟ್‌ ಅಡಿ ಬೆದರಿಕೆಯೊಡ್ಡಿ ಅತ್ಯಾಚಾರ ಆಗಿದೆ ಅಂತ ದೂರು ಕೊಟ್ಟರು. ಮಾಧ್ಯಮಗಳ ಮುಂದೆ ಕಥೆ ಕಟ್ಟಿದವರು ಯಾರು? ಸುಪ್ರೀಂ ಕೋರ್ಟ್ ಏನು ಹೇಳಿದೆ? ಇಂಥ ಪ್ರಕರಣದಲ್ಲಿ ಗೌಪ್ಯತೆಯನ್ನು ಉಳಿಸಿಕೊಂಡಿರಾ? ಕೆಲವರ ತೇಜೋವಧೆಗೆ ಈ ಪ್ರಕರಣವನ್ನು ಬಳಸಿಕೊಂಡಿರಿ. ಇದು ಆಘಾತಕಾರಿ ಪ್ರಕರಣವಾಗಿದೆ. 2022ರಲ್ಲಿ ಈ ಘಟನೆ ಆಗಿದೆ ಎಂದು ಹೇಳಿದ್ದೀರಿ. ಮತ್ಯಾಕೆ ಸುಮ್ಮನಿದ್ದಿರಿ? ಎಂದು ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದರು.

ಆಕೆಯ ಹಿಂದೆ ಯಾರಿದ್ದಾರೆ?

22ನೇ ತಾರೀಖು ಪ್ರಜ್ವಲ್ ಪಕ್ಕಾ ಕೂತಿದ್ದ ಹೆಣ್ಣು ಮಗಳು ಯಾರು? ಮೊದಲ ವಿಡಿಯೊದಲ್ಲಿ ಬಂದ ಹೆಣ್ಣು ಮಗಳು 22ನೇ ತಾರೀಖು ಪ್ರಜ್ವಲ್ ಜತೆ ವೇದಿಕೆ ಹಂಚಿಕೆ ಮಾಡಿಕೊಂಡಿದ್ದಾರೆ. ಆಕೆಯ ಹಿಂದೆ ಯಾರಿದ್ದಾರೆ? ಸಿಎಂ ಸಿದ್ದರಾಮಯ್ಯ ಅವರೇ, ಡಿ.ಕೆ. ಶಿವಕುಮಾರ್ ಅವರೇ ಏನಿದು? ಎಂದು ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಮಹಿಳೆಯ ಕಿಡ್ನ್ಯಾಪ್‌ ಕೇಸ್‌ ಕತೆ ಏನು?

ರೇವಣ್ಣ ವಿರುದ್ಧ ಇಂದಿಗೂ ಸಹ ಯಾರೂ ದೂರು ಕೊಟ್ಟಿಲ್ಲ. ಬಳಿಕ ಕಿಡ್ನ್ಯಾಪ್ ಕೇಸ್ ದಾಖಲು ಮಾಡಿಕೊಂಡಿರಿ. ಆ ಹೆಣ್ಣು ಮಗಳು ಬದುಕಿದ್ದಾಳೋ, ಮೃತಪಟ್ಟಿದ್ದಾಳೋ ಗೊತ್ತಿಲ್ಲ ಎಂದು ನಿಮ್ಮ ವಕೀಲರು ನ್ಯಾಯಾಧೀಶರ ಮುಂದೆ ಹೇಳುತ್ತಾರೆ. ಆ ಮೇಲೆ ಆಕೆಯನ್ನು ಕರೆದುಕೊಂಡು ಬಂದಿರಿ. ಎಲ್ಲಿಂದ ಕರೆದುಕೊಂಡು ಬಂದಿರಿ? ಏನು ಮಹಜರು ಮಾಡಿದಿರಿ? ಈ ದಿನದವರೆಗೂ ಜಡ್ಜ್ ಮುಂದೆ ಆ ಹೆಣ್ಣು ಮಗಳನ್ನು ಏಕೆ ಹಾಜರುಪಡಿಸಲಿಲ್ಲ? ಎಂದು ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಇದನ್ನೂ ಓದಿ: Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

ಎಚ್.ಡಿ. ರೇವಣ್ಣ ಅವರು ತನಿಖೆಗೆ ಸಹಕಾರ ಕೊಡುತ್ತಿಲ್ಲ ಎಂದು ಹೇಳಿದ್ದೀರಿ. ನೀವು ಹೇಳಿದಂತೆ ಮಾಜಿ‌ ಮಂತ್ರಿ ಹೇಳಿಕೆ ಕೊಡಬೇಕಾ? ಇದು ಯಾವ ಇನ್ವೆಸ್ಟಿಗೇಷನ್ ಎಂದು ಎಚ್‌.ಡಿ. ಕುಮಾರಸ್ವಾಮಿ ಖಾರವಾಗಿ ಪ್ರಶ್ನೆ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

R Ashok: ರಾಜ್ಯದಲ್ಲಿ ಮಳೆಗಿಂತ ಹೆಚ್ಚಾಗಿ ಕೊಲೆಗಳೇ ನಡೆಯುತ್ತಿವೆ: ಆರ್‌.ಅಶೋಕ್‌ ಕಿಡಿ

R Ashok: ಪ್ರಜ್ವಲ್‌ ರೇವಣ್ಣ ಪ್ರಕರಣ ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ ನಡೆಸುತ್ತಿದ್ದು, ಸರ್ಕಾರವೇ ಅಪರಾಧಿ ಸ್ಥಾನದಲ್ಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.

VISTARANEWS.COM


on

R Ashok
ಬೆಂಗಳೂರಿನ ಪದ್ಮನಾಭನಗರ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ವಿಪಕ್ಷ ನಾಯಕ ಆರ್‌.ಅಶೋಕ್‌ ಭೇಟಿಯಾಗಿ ಜನ್ಮದಿನದ ಶುಭಾಶಯ ತಿಳಿಸಿದರು.
Koo

ಬೆಂಗಳೂರು: ರಾಜ್ಯದಲ್ಲಿ ಕೊಲೆ, ಕಳ್ಳತನ, ದರೋಡೆ ಹೆಚ್ಚಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರೌಡಿ, ಕೊಲೆಗಡುಕರಿಗೆ ಹಬ್ಬ. ಈ ಹಬ್ಬಕ್ಕೆ ಕಾಂಗ್ರೆಸ್ಸೇ ನೇರ ಕಾರಣ. ಇತ್ತೀಚೆಗೆ ಹತ್ಯೆಯಾದ ಅಂಜಲಿ ಕುಟುಂಬದವರು ಕೊಲೆಗಾರರನ್ನು ಗಲ್ಲಿಗೇರಿಸಬೇಕು ಎಂದು ಹೇಳಿದ್ದಾರೆ. ಆದರೆ ರಾಜ್ಯ ಸರ್ಕಾರವೇ ಅಪರಾಧಿ ಸ್ಥಾನದಲ್ಲಿದ್ದು, ಸರ್ಕಾರವನ್ನೇ ಗಲ್ಲಿಗೇರಿಸಬೇಕು. ಮಳೆ ಸುರಿಯುವುದಕ್ಕಿಂತ ಹೆಚ್ಚಾಗಿ ಕೊಲೆಗಳು ನಡೆಯುತ್ತಿವೆ. ಇದರಿಂದ ಗೃಹ ಇಲಾಖೆಯು ಡಾ.ಜಿ.ಪರಮೇಶ್ವರ್‌ ಅವರ ಕೈಯಲ್ಲಿಲ್ಲ. ಇದನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ ಎನಿಸುತ್ತದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ (R Ashok) ಆರೋಪಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರಾಜೇಗೌಡ ಸ್ವತಃ ಹೇಳಿಕೆ ನೀಡಿ, ಡಿ.ಕೆ.ಶಿವಕುಮಾರ್‌ ಅವರ ಆಡಿಯೊ ಬಿಡುಗಡೆ ಮಾಡಿದ್ದಾರೆ. ನಿಜ ಇರುವುದಕ್ಕೆ ದಾಖಲೆ ಬಿಡುಗಡೆ ಮಾಡಿದ್ದು, ಅದಕ್ಕಾಗಿ ಅವರ ಬಂಧನವಾಗಿದೆ. ಲೋಕಸಭೆ ಚುನಾವಣೆಯ ಸಮಯದಲ್ಲಿ ಎಚ್ಚರವಾಗಿರಬೇಕೆಂದು ಹೀಗೆ ಮಾಡಿದ್ದಾರೆ. ಮಾಧ್ಯಮಗಳಲ್ಲಿ ಪ್ರಸಾರವಾಗುವುದನ್ನೂ ತಡೆಯುವ ಉದ್ದೇಶ ಡಿ.ಕೆ.ಶಿವಕುಮಾರ್‌ ಅವರಿಗಿದೆ ಎಂದರು.

ಇದನ್ನೂ ಓದಿ | BY Vijayendra: ವಿಧಾನಪರಿಷತ್ ವಿವಿಧ ಕ್ಷೇತ್ರಗಳ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ; ಬಿ.ವೈ.ವಿಜಯೇಂದ್ರ

ಸುರ್ಜೇವಾಲ, ಡಿ.ಕೆ.ಶಿವಕುಮಾರ್‌, ಸಿಎಂ ಸಿದ್ದರಾಮಯ್ಯ ಸೇರಿ ಮಾಸ್ಟರ್‌ ಪ್ಲ್ಯಾನ್‌ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ದಲಿತ ನಾಯಕರನ್ನು ಮುಗಿಸಿದ್ದಾರೆ. ಇದೇ ರೀತಿ ಒಕ್ಕಲಿಗರನ್ನು ಮುಗಿಸಲು ಯೋಜನೆ ರೂಪಿಸಿದ್ದಾರೆ. ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸಬೇಕಿದೆ. ಆದರೆ ಸಿಬಿಐ ಬಳಿ ಹೋದರೆ ಸರ್ಕಾರದಲ್ಲಿ ಇರುವವರೇ ಕಂಬಿ ಎಣಿಸಬೇಕಾಗುತ್ತದೆ. ಇಡೀ ಗೃಹ ಇಲಾಖೆಯರನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ. ಮಾಜಿ ಸಚಿವ ರೇವಣ್ಣ ಅವರನ್ನು ಬಂಧಿಸಿದಂತೆ ಚಾಲಕನನ್ನು ಬಂಧಿಸಿಲ್ಲ. ಪೊಲೀಸರು ಕಾಂಗ್ರೆಸ್‌ ನಾಯಕರು ಹೇಳಿದಂತೆ ಕೇಳುತ್ತಾರೆ ಎಂದರು.

ಪ್ರಜ್ವಲ್‌ ರೇವಣ್ಣ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ. ಆದರೆ ವೀಡಿಯೋ ಹಂಚಿದವರ ವಿರುದ್ಧ ಕ್ರಮ ವಹಿಸಿಲ್ಲ. ಹೀಗೆ ಕಾಂಗ್ರೆಸ್‌ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ಪ್ರಕರಣವನ್ನು ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ ಮಾಡುತ್ತಿದೆ ಎಂದರು.

ಇದನ್ನೂ ಓದಿ | Arvind Kejriwal: “ತಾಕತ್‌ ಇದ್ರೆ ಅರೆಸ್ಟ್‌ ಮಾಡಿ…”; ಪ್ರಧಾನಿ ಮೋದಿಗೆ ಕೇಜ್ರಿವಾಲ್‌ ಓಪನ್‌ ಚಾಲೆಂಜ್‌

ದೇವೇಗೌಡರ ಭೇಟಿ

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಭೇಟಿಯಾಗಿ ಜನ್ಮದಿನದ ಶುಭಾಶಯ ತಿಳಿಸಿದ್ದೇನೆ. ಇದೇ ವೇಳೆ ರಾಜ್ಯ ರಾಜಕೀಯದ ಕುರಿತಾಗಿ ಕೆಲವು ಮಾತನಾಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲವೆಂದು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಅಶೋಕ್‌ ತಿಳಿಸಿದರು.

Continue Reading

ಕರ್ನಾಟಕ

Prajwal Revanna Case: ಪೆನ್​​ಡ್ರೈವ್ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ; ದೇವರಾಜೇಗೌಡ ತಪ್ಪು ಮಾಹಿತಿ ನೀಡಿದ್ದಾರೆ: ಶಿವರಾಮೇಗೌಡ

Prajwal Revanna Case: ʼʼಹಾಸನ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) ಅವರದ್ದು ಎನ್ನಲಾಗಿರುವ ಪೆನ್​​ಡ್ರೈವ್ ವಿಚಾರಕ್ಕೂ ನನಗೂ ಸಂಬಂಧವಿಲ್ಲ. ಯಾವುದೋ ವಿಚಾರದಲ್ಲಿ ನನ್ನನ್ನು ದೇವರಾಜೇಗೌಡ ಸಿಕ್ಕಿಸಿದ್ದಾನೆʼʼ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಹೇಳಿದ್ದಾರೆ. ʼʼಪೆನ್​​ಡ್ರೈವ್​​​ ಹೊರಗೆ ಬಿಟ್ಟಿದ್ದು ದೇವರಾಜೇಗೌಡ ಮತ್ತು ಕಾರ್ತಿಕ್. ಹೀಗಾಗಿ ಈ ಇಬ್ಬರನ್ನೂ ​ವಿಚಾರಣೆ ನಡೆಸಬೇಕು. ಈ ಪ್ರಕರಣಕ್ಕೂ ಡಿ.ಕೆ.ಶಿವಕುಮಾರ್​ ಅವರಿಗಾಗಲಿ ಮತ್ತು ನನಗಾಗಲಿ ಯಾವುದೆ ಸಂಬಂಧವಿಲ್ಲʼʼ ಎಂದು ಸ್ಪಷ್ಟಪಡಿಸಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ʼʼಹಾಸನ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) ಅವರದ್ದು ಎನ್ನಲಾಗಿರುವ ಪೆನ್​​ಡ್ರೈವ್ ವಿಚಾರಕ್ಕೂ ನನಗೂ ಸಂಬಂಧವಿಲ್ಲ. ಯಾವುದೋ ವಿಚಾರದಲ್ಲಿ ನನ್ನನ್ನು ದೇವರಾಜೇಗೌಡ ಸಿಕ್ಕಿಸಿದ್ದಾನೆʼʼ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಹೇಳಿದ್ದಾರೆ. ʼʼಪೆನ್​​ಡ್ರೈವ್​​​ ಹೊರಗೆ ಬಿಟ್ಟಿದ್ದು ದೇವರಾಜೇಗೌಡ ಮತ್ತು ಕಾರ್ತಿಕ್. ಹೀಗಾಗಿ ಈ ಇಬ್ಬರನ್ನೂ ​ವಿಚಾರಣೆ ನಡೆಸಬೇಕು. ಈ ಪ್ರಕರಣಕ್ಕೂ ಡಿ.ಕೆ.ಶಿವಕುಮಾರ್​ ಅವರಿಗಾಗಲಿ ಮತ್ತು ನನಗಾಗಲಿ ಯಾವುದೆ ಸಂಬಂಧವಿಲ್ಲʼʼ ಎಂದು ಸ್ಪಷ್ಟಪಡಿಸಿದ್ದಾರೆ.

ʼʼದೇವರಾಜೇಗೌಡ ನನಗೆ ಫೋನ್ ಮಾಡಿ, ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿ ಮಾಡಿಸುವಂತೆ ಹೇಳಿದ್ದ. ನಾನು ಆಗಲಿ ಎಂದು ಫೋನ್​ನಲ್ಲಿ ಹೇಳಿದ್ದೆ. ಬಳಿಕ ಡಿಕೆಶಿ ಅವರಿಗೆ ಕರೆ ಮಾಡಿ ಹಲೋ ದೇವರಾಜೇಗೌಡ ಎಂದಿದ್ದು ಬಿಟ್ಟು ಬೇರೇನೂ ಕೇಳಿಲ್ಲ. ಇದನ್ನೇ ಮುಂದಿಟ್ಟುಕೊಂಡು ದೇವರಾಜೇಗೌಡ ಸುಳ್ಳು ಮಾಹಿತಿ ನೀಡಿದ್ದಾನೆ. ದೇವರಾಜೇಗೌಡ ಏ. 29ರಂದು ಬೆಂಗಳೂರಿನ ಎಂ.ಜಿ.ರಸ್ತೆಯ ಬೌರಿಂಗ್​ ಕ್ಲಬ್​ನಲ್ಲಿ ನಮ್ಮನ್ನು ಭೇಟಿ ಮಾಡಿದ್ದೆ ಎಂದು ತಿಳಿಸಿದ್ದಾನೆ. ಮೋಸ್ಟ್ ಕ್ರಿಮಿನಲ್ ಮ್ಯಾನ್ ಇವನು. ಇವನ ಜತೆ ಯಾರೇ ವ್ಯವಹರಿಸುತ್ತಿದ್ದರೂ ಎಚ್ಚರಿಕೆಯಿಂದ ಇರಬೇಕು. ಬರೀ ಒಂದು ಫೋನ್‌ ಮಾತಾಡಿದ್ದಕ್ಕೆ ಸೀನ್ ಕ್ರಿಯೇಟ್ ಮಾಡಿದ್ದಾನೆʼʼ ಎಂದು ಶಿವರಾಮೇಗೌಡ ಹೇಳಿದ್ದಾರೆ.

ʼʼಅವನು (ದೇವರಾಜೇಗೌಡ) ಒಳಗೆ ಹೋದ ಮೇಲೆ ಹುಚ್ಚು ನಾಯಿ ಒಳಗೆ ಹೋಯಿತಲ್ಲ ಎಂದು ಪ್ರಾರ್ಥನೆ ಮಾಡಿದ್ದೇನೆ. ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಪೆನ್​​ಡ್ರೈವ್ ಅನ್ನು ಮಾರಾಟಕ್ಕೆ ಇಟ್ಟಿದ್ದೇ ದೇವರಾಜೇಗೌಡ. ಪೊಲೀಸ್ ಬಾಷೆಯಲ್ಲಿ ವಿಚಾರಿಸಬೇಕು. ಆಗ ಸತ್ಯ ಬಾಯಿ ಬಿಡುತ್ತಾನೆʼʼ ಎಂದು ಶಿವರಾಮೇಗೌಡ ವಾಗ್ದಾಳಿ ನಡೆಸಿದ್ದಾರೆ.

ಇನ್ನು ದೇವರಾಜೇಗೌಡ ಭೇಟಿಯ ಕುರಿತು ಸ್ಪಷ್ಟನೆ ನೀಡಿದ ಶಿವರಾಮೇಗೌಡ ಅವರು, ʼʼನಾನು ದೇವರಾಜೇಗೌಡ ಜತೆ ಮೊದಲು ಮಾತನಾಡಿದ್ದೆ ಏಪ್ರಿಲ್ 29ರಂದು. ಅಂದು ಪೆನ್‌ಡ್ರೈವ್‌ ಕೇಸ್‌ ಅನ್ನು ಸಿಎಂ, ಡಿಸಿಎಂ ಎಲ್ಲ ಸೇರಿ ಮುಚ್ಚಿ ಹಾಕ್ತಾರೆ ಕಣಣ್ಣ ಎಂದು ದೇವರಾಜೆಗೌಡ ಹೇಳಿದ್ದ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಬಿಟ್ಟು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೆಸರನ್ನು ಮಾತ್ರ ಹೇಳುತ್ತಿದ್ದಾನೆ. ವಿಚಾರಣೆಯ ದಿಕ್ಕು ತಪ್ಪಿಸಲು ಕಾಣದ ಕೈಗಳು ಕೆಲಸ ಮಾಡುತ್ತಿವೆʼʼ ಎಂದು ಆರೋಪಿಸಿದ್ದಾರೆ.

ಮಾನನಷ್ಟ ಮೊಕದ್ದಮೆ ಹಾಕುತ್ತೇನೆ

ʼʼಕೇಸ್‌ನಲ್ಲಿ ಪದೇ ಪದೆ ನನ್ನ ಹೆಸರು ಪ್ರಸ್ತಾವಿಸುವ ಕಾರಣ ದೇವರಾಜೇಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ಈ ಬಗ್ಗೆ ಈಗಾಗಲೇ ವಕೀಲರ ಜತೆ ಮಾತನಾಡಿದ್ದೇನೆ. ಶ್ರೀಘ್ರದಲ್ಲಿಯೇ ಲೀಗಲ್ ನೋಟಿಸ್‌ ಕೊಡಲಿದ್ದೇವೆ. ಅವನು ನನ್ನ ಬಗ್ಗೆ ಹೇಳಿರುವ ವಿಡಿಯೊವನ್ನು ಈಗಾಗಲೇ ವಕೀಲರಿಗೆ ಕೊಟ್ಟಿದ್ದೇನೆ. ದೇವೇಗೌಡರಿಗೆ ಈ ವಯಸ್ಸಿನಲ್ಲಿ ನೋವು ತಂದ್ರಲ್ಲ ಎಂಬ ನೋವು ನನಗೆ ಕಾಡುತ್ತಿದೆʼʼ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್‌ ಸೇರ್ಪಡೆ?

ʼʼನಾನು ಈಗ ಬಿಜೆಪಿಗೆ ರಾಜೀನಾಮೆ ಕೊಟ್ಟಿದ್ದೇನೆ. ಮುಂದೆ ಯಾವ ಪಕ್ಷಕ್ಕೆ ಸೇರುತ್ತೇನೆ ಅಂತ ಹೇಳುತ್ತೇನೆ. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ರಾಜೀನಾಮೆ ಪತ್ರ ಕಳಿಸಿದ್ದೇನೆ. ಅವರು ಇನ್ನೂ ಏನು ಹೇಳಿಲ್ಲʼʼ ಎಂದು ಶಿವರಾಮೇಗೌಡ ತಿಳಿಸಿದ್ದಾರೆ. ʼʼಈ ಹಿಂದೆ ಅಧಿಕಾರ ಕೊಡುತ್ತಾರೆ ಅಂತ ಜೆಡಿಎಸ್​ಗೆ ಸೇರಿದೆ. ಆಮೇಲೆ ರುಬ್ಬಿ ಹೊರಗಡೆಯೂ ಕಳುಹಿಸಿದ್ದಾರೆ. ನಾನು ಮೂಲತಃ ಕಾಂಗ್ರೆಸ್ ವ್ಯಕ್ತಿ. ಯೂತ್‌ ಕಾಂಗ್ರೆಸ್​ನಲ್ಲೂ ಇದ್ದೆʼʼ ಎಂದು ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಅಶ್ಲೀಲ ವಿಡಿಯೊ ವೈರಲ್ ಕೇಸ್‌; ವಕೀಲ ದೇವರಾಜೇಗೌಡ ಎಸ್‌ಐಟಿ ಕಸ್ಟಡಿ ಅವಧಿ 2 ವಿಸ್ತರಣೆ

Continue Reading

ಕರ್ನಾಟಕ

MLC Election: ವಿಧಾನ ಪರಿಷತ್‌ ಚುನಾವಣೆ; ನೈಋತ್ಯ ಶಿಕ್ಷಕರ ಕ್ಷೇತ್ರದ 1 ನಾಮಪತ್ರ ತಿರಸ್ಕೃತ

MLC Election: ಕರ್ನಾಟಕ ವಿಧಾನ ಪರಿಷತ್‌ನ ನೈಋತ್ಯ ಪದವೀಧರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿ ನಾಮಪತ್ರ ಪರಿಶೀಲನೆ ನಡೆಸಲಾಗಿದೆ. ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಎಂ.ಸತೀಶ್‌ ಕಾರಂತ್‌ ಅವರ ನಾಮಪತ್ರ ತಿರಸ್ಕೃತಗೊಂಡಿದೆ.

VISTARANEWS.COM


on

MLC Election
Koo

ಮೈಸೂರು: ಕರ್ನಾಟಕ ವಿಧಾನ ಪರಿಷತ್‌ನ ನೈಋತ್ಯ ಪದವೀಧರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿ ನಾಮಪತ್ರ ಪರಿಶೀಲನೆ ನಡೆಸಲಾಗಿದೆ (MLC Election). ಈ ಪೈಕಿ ಒಂದು ನಾಮಪತ್ರ ತಿರಸ್ಕೃತಗೊಂಡಿದೆ. ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಎಂ.ಸತೀಶ್‌ ಕಾರಂತ್‌ ಅವರ ನಾಮಪತ್ರ ತಿರಸ್ಕೃತಗೊಂಡಿದೆ.

ಚುನಾವಣೆ ಅಧಿಕಾರಿ ಡಾ. ಪ್ರಕಾಶ್ ನೇತೃತ್ವದಲ್ಲಿ ಪರಿಶೀಲನೆ ನಡೆಯಿತು. ಈ ವೇಳೆ ಪಕ್ಷೇತರ ಅಭ್ಯರ್ಥಿಯಾಗಿ ಸತೀಶ್‌ ಕಾರಂತ್‌ ಅವರು ಸಲ್ಲಿಸಿದ್ದ ನಾಮಪತ್ರದಲ್ಲಿ ನಮೂನೆ-26 ನೋಟರಿ ಅಫಿಡವಿತ್‌ ಮತ್ತು ವಿಧಾನಸಭಾ ಮತದಾರರ ಪಟ್ಟಿಯ ದೃಢೀಕೃತ ಪ್ರತಿಯನ್ನು ಸಲ್ಲಿಸದಿರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ 13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿದ್ದು, ಎಲ್ಲ 13 ನಾಮಪತ್ರವೂ ಅಂಗೀಕಾರಗೊಂಡಿದೆ. ನೈಋತ್ಯ ಪದವೀಧರ ಕ್ಷೇತ್ರಕ್ಕೆ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 11 ಅಭ್ಯರ್ಥಿಗಳ ನಾಮಪತ್ರವೂ ಸ್ವೀಕೃತಗೊಂಡಿದೆ. ನೈಋತ್ಯ ಪದವೀಧರ ಕ್ಷೇತ್ರಕ್ಕೆ 10 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿದ್ದು, ಈ ಪೈಕಿ ಎಂ.ಸತೀಶ್‌ ಕಾರಂತ್‌ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ವಿಧಾನ ಪರಿಷತ್‌ ಚುನಾವಣೆಗೆ ಮೇ 9ರಂದು ಅದಧಿಸೂಚನೆ ಹೊರಡಿಸಲಾಗಿತ್ತು. ಮೇ 17ರ ತನಕ ನಾಮಪತ್ರ ಪರಿಶೀಲನೆ ನಡೆಸಲಾಯಿತು. ಮೇ 20ರ ಅಪರಾಹ್ನ 3 ಗಂಟೆಯವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ.

ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ ಬಿಜೆಪಿ ಬಂಡಾಯ ಅಭ್ಯರ್ಥಿ

ಬೆಂಗಳೂರು: ʼʼವಿಧಾನಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿ, ಆಕಾಂಕ್ಷಿಯಾಗಿದ್ದು ನಾಮಪತ್ರ ಸಲ್ಲಿಸಿದ್ದೆ. ಪಕ್ಷ ನಿಮ್ಮನ್ನು, ನಿಮ್ಮ ಸೇವೆಯನ್ನು ಮುಂದೆ ಗುರುತಿಸಲಿದೆ ಎಂದು ಹಿರಿಯರಾದ ಯಡಿಯೂರಪ್ಪ ಅವರು ಹೇಳಿದ್ದಾರೆ. ಅಮರನಾಥ ಪಾಟೀಲರನ್ನು ಬೆಂಬಲಿಸಿ ಎಂದು ಪಕ್ಷದ ಇತರ ನಾಯಕರು ಸೂಚಿಸಿದ್ದಾರೆ. ಅವರ ಸೂಚನೆಯಂತೆ ಸೋಮವಾರ ಕಲಬುರಗಿಗೆ ತೆರಳಿ ನಾಮಪತ್ರ ಹಿಂದಕ್ಕೆ ಪಡೆಯಲಿದ್ದೇನೆʼʼ ಎಂದು ಸುರೇಶ್ ಸಜ್ಜನ್ ತಿಳಿಸಿದ್ದಾರೆ.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼʼಪಕ್ಷದ ಹಿರಿಯರು, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ರಾಜುಗೌಡ, ಎನ್. ರವಿಕುಮಾರ್, ಗೋವಿಂದ ಕಾರಜೋಳ ಅವರ ಆಶೀರ್ವಾದ ಪಡೆಯಲು ನಿಯೋಗದೊಂದಿಗೆ ಇಲ್ಲಿಗೆ ಬಂದಿದ್ದೆ. ನಾಮಪತ್ರ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ. ಅವರ ಮಾತಿಗೆ ಒಪ್ಪಿದ್ದೇನೆʼʼ ಎಂದು ತಿಳಿಸಿದ್ದಾರೆ. ಇಲ್ಲಿಗೆ ಬಂದಿದ್ದ ಮುಖಂಡರ ಜತೆ ಸಮಾಲೋಚನೆ ಮಾಡಿ ಈ ನಿರ್ಧಾರ ಮಾಡಿದ್ದಾಗಿ ವಿವರಿಸಿದ್ದಾರೆ. ರಾಜ್ಯಾಧ್ಯಕ್ಷರು ಪಕ್ಷಕ್ಕಾಗಿ ಮಾಡುತ್ತಿರುವ ಹೋರಾಟ, ಸಂಘಟನಾ ಕಾರ್ಯಕ್ಕೆ ಅವರು ಮೆಚ್ಚುಗೆ ಸೂಚಿಸಿದರು. ʼʼನನಗೆ ಟಿಕೆಟ್ ಮುಖ್ಯವಲ್ಲ; ಪಕ್ಷದ ಅಭ್ಯರ್ಥಿಯ ಗೆಲುವೇ ಮುಖ್ಯ ಎಂದು ತಿಳಿಸಿದ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮುಂದೆ ಮುಖ್ಯಮಂತ್ರಿಯಾಗಲು ಅವರ ಕೈ ಬಲಪಡಿಸುವ ಅಗತ್ಯವಿದೆʼʼ ಎಂದು ಇದೇ ವೇಳೆ ತಿಳಿಸಿದ್ದಾರೆ.

ಇದನ್ನೂ ಓದಿ: MLC Election: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣಾ ಪೂರ್ವಸಿದ್ಧತೆ ಸಭೆ; ಬಿಜೆಪಿ ಅಭ್ಯರ್ಥಿ ಅ. ದೇವೇಗೌಡ ಗೆಲುವಿಗೆ ರಣತಂತ್ರ

Continue Reading

ದೇಶ

Arvind Kejriwal: “ತಾಕತ್‌ ಇದ್ರೆ ಅರೆಸ್ಟ್‌ ಮಾಡಿ…”; ಪ್ರಧಾನಿ ಮೋದಿಗೆ ಕೇಜ್ರಿವಾಲ್‌ ಓಪನ್‌ ಚಾಲೆಂಜ್‌

Arvind Kejriwal: ನಿನ್ನೆ ರಾತ್ರಿ ವಿಡಿಯೋ ಸಂದೇಶವೊಂದನ್ನು ಹರಿಬಿಟ್ಟಿರುವ ಕೇಜ್ರಿವಾಲ್‌, ನಾಳೆ ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸುವುದಾಗಿ ಹೇಳಿದ್ದು, ಸಾಧ್ಯವಾದರೆ ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಸವಾಲೆಸೆದಿದ್ದಾರೆ.

VISTARANEWS.COM


on

Arvind Kejriwal
Koo

ನವದೆಹಲಿ: ದೆಹಲಿ ಅಬಕಾರಿ ನೀತಿ (Delhi Excise policy) ಹಗರಣದಲ್ಲಿ ಅರೆಸ್ಟ್‌ ಆಗಿ, ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ (Aam Admi Party) ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಮರ ಸಾರಿದ್ದಾರೆ. ತಮ್ಮ ಪಕ್ಷದ ನಾಯಕರನ್ನು ಒಬ್ಬರಾದ ಮೇಲೊಬ್ಬರಂತೆ ಜೈಲಿಗೆ ತಳ್ಳಿ ಆಪ್‌ ಪಕ್ಷದ ಧ್ವನಿ ಅಡಗಿಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿರುವ ಅವರು, ಇಂದು ದೆಹಲಿಯ ಬಿಜೆಪಿ ಕಚೇರಿ ಎದುರು ಪಕ್ಷದ ಮುಖಂಡರು, ಕಾರ್ಯಕರ್ತರ ಜೊತೆಗೂಡಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ನಿನ್ನೆ ರಾತ್ರಿ ವಿಡಿಯೋ ಸಂದೇಶವೊಂದನ್ನು ಹರಿಬಿಟ್ಟಿರುವ ಕೇಜ್ರಿವಾಲ್‌, ನಾಳೆ ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸುವುದಾಗಿ ಹೇಳಿದ್ದು, ಸಾಧ್ಯವಾದರೆ ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಸವಾಲೆಸೆದಿದ್ದಾರೆ. ಒಬ್ಬರ ನಂತರ ಒಬ್ಬರನ್ನು ನೀವು ಜೈಲಿಗೆ ತಳ್ಳುತ್ತಿದ್ದೀರಿ. ಮಾನ್ಯ ಪ್ರಧಾನಮಂತ್ರಿಗಳೇ, ನೀವು ಆಪ್‌ ನಾಯಕರನ್ನು ಅರೆಸ್ಟ್‌ ಮಾಡಿಸುವ ಆಟ ಆಡುತ್ತಿದ್ದೀರಿ. ನಾಳೆ ಮಧ್ಯಾಹ್ನ ನಾನು ಪಕ್ಷದ ಎಲ್ಲಾ ಮುಖಂಡರು, ಶಾಸಕರು, ಸಂಸದರ ಜೊತೆಗೆ ಬಿಜೆಪಿ ಪ್ರಧಾನ ಕಚೇರಿಎ ಹೋಗುತ್ತಿದ್ದೇನೆ. ನಿಮಗೆ ಯಾರನ್ನು ಅರೆಸ್ಟ್‌ ಮಾಡಬೇಕು ಅಂತಾ ಅನಿಸುತ್ತದೆಯೋ ಅವರನ್ನು ಅರೆಸ್ಟ್‌ ಮಾಡಿ. ಇಲ್ಲ ಎಲ್ಲರನ್ನೂ ಅರೆಸ್ಟ್‌ ಮಾಡೋವುದಾದರೆ ಮಾಡಿ ಎಂದು ಹೇಳಿದ್ದಾರೆ.

ಆಪ್‌ ಪಕ್ಷದ ಹಿರಿಯ ನಾಯಕರಾದ ಸತ್ಯೇಂದ್ರ ಜೈನ್‌, ಮನೀಷ್‌ ಸಿಸೋಡಿಯಾ, ಅದಾದ ಬಳಿಕ ನನ್ನನ್ನು ಬಿಜೆಪಿ ಟಾರ್ಗೆಟ್‌ ಮಾಡಿ ಜೈಲಿಗೆ ಕಳುಹಿಸಿದೆ. ಇದೀಗ ಇತರ ನಾಯಕರೂ ಅವರ ಪಟ್ಟಿಯಲ್ಲಿದ್ದಾರೆ. ಬಿಜೆಪಿ ಹೀಗೆಲ್ಲಾ ಮಾಡಲು ಕಾರಣವೇನು? ಕಾರಣ ಇಷ್ಟೇ ನಾವು ದಿಲ್ಲಿಯಲ್ಲಿ ಜನರಿಗೆ ಉತ್ತಮ ಶಿಕ್ಷಣ, ಆರೋಗ್ಯ ವ್ಯವಸ್ಥೆಯನ್ನು ಕಲ್ಪಿಸಿದ್ದೇವೆ. ಅದು ಅವರಿಂದ ಸಾಧ್ಯವಾಗಿರಲಿಲ್ಲ. ಹೀಗಾಗಿ ನಮ್ಮನ್ನು ಈ ರೀತಿಯಾಗಿ ಹತ್ತಿಕ್ಕುತ್ತಿದೆ ಎಂದು ಅವರು ಕಿಡಿ ಕಾಡಿದ್ದಾರೆ.

ಇದನ್ನೂ ಓದಿ:Swati Maliwal case: ಸ್ವಾತಿ ಮಲಿವಾಲ್‌ ಹಲ್ಲೆ ಕೇಸ್‌; ಕೇಜ್ರಿವಾಲ್‌ ಆಪ್ತ 5ದಿನ ಪೊಲೀಸ್‌ ಕಸ್ಟಡಿಗೆ

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟಿದ್ದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ರಿಲೀಫ್‌ ಸಿಕ್ಕಿದೆ.

Continue Reading
Advertisement
West Nile fever Health department on alert
ಆರೋಗ್ಯ6 mins ago

West Nile fever : ಕೇರಳದಲ್ಲಿ ವೆಸ್ಟ್‌ ನೈಲ್ ಭೀತಿ; ಮೈಸೂರು ಗಡಿಭಾಗದಲ್ಲಿ ಆರೋಗ್ಯ ಇಲಾಖೆ ಅಲರ್ಟ್‌

Great Khali
ದೇಶ10 mins ago

Great Khali: ಜಗತ್ತಿನ ಕುಬ್ಜ ಮಹಿಳೆಯನ್ನು ಮಗುವಿನಂತೆ ಎತ್ತಿ ಆಡಿಸಿದ ಗ್ರೇಟ್‌ ಖಲಿ; ಜನ ಕೆಂಡವಾಗಿದ್ದು ಏಕೆ?

Kalki 2898 AD
ಪ್ರಮುಖ ಸುದ್ದಿ13 mins ago

Kalki 2898 AD: ಮೇ 22ಕ್ಕೆ ಭೈರವನ ನಂಬಿಕಸ್ಥ ಗೆಳೆಯ ಬುಜ್ಜಿಯ ಅನಾವರಣ; ಕಲ್ಕಿ ಚಿತ್ರದ 5ನೇ ಸೂಪರ್ ಸ್ಟಾರ್ ಯಾರು?

RCB vs CSK
ಕ್ರೀಡೆ32 mins ago

RCB vs CSK: ಆನ್​ಲೈನ್​ ವೀಕ್ಷಣೆಯಲ್ಲೂ ದಾಖಲೆ ಬರೆದ ಆರ್​ಸಿಬಿ-ಚೆನ್ನೈ ಪಂದ್ಯ

Rain News
ಕರ್ನಾಟಕ45 mins ago

Rain News: ಕುಷ್ಟಗಿಯಲ್ಲಿ ಸಿಡಿಲು ಬಡಿದು ರೈತ ಸಾವು, ಯುವಕನಿಗೆ ಗಂಭೀರ ಗಾಯ

Prajwal Revanna Case
ಕರ್ನಾಟಕ1 hour ago

ದೇವೇಗೌಡ ಇನ್ನೂ ಆತ್ಮಹತ್ಯೆ ಮಾಡಿಕೊಂಡಿಲ್ವಲ್ಲ; ಹೊಸ ಆಡಿಯೊದಲ್ಲಿ ಶಿವರಾಮೇಗೌಡ ಸ್ಫೋಟಕ ಹೇಳಿಕೆ

Rohit Sharma
ಕ್ರೀಡೆ1 hour ago

Rohit Sharma: ಐಪಿಎಲ್ ಪ್ರಸಾರಕರ ವಿರುದ್ಧ ಕಿಡಿ ಕಾರಿದ ಹಿಟ್​ಮ್ಯಾನ್​ ರೋಹಿತ್​

R Ashok
ರಾಜಕೀಯ2 hours ago

R Ashok: ರಾಜ್ಯದಲ್ಲಿ ಮಳೆಗಿಂತ ಹೆಚ್ಚಾಗಿ ಕೊಲೆಗಳೇ ನಡೆಯುತ್ತಿವೆ: ಆರ್‌.ಅಶೋಕ್‌ ಕಿಡಿ

Thailand Open 2024
ಬ್ಯಾಡ್ಮಿಂಟನ್2 hours ago

Thailand Open 2024: ಥಾಯ್ಲೆಂಡ್‌ ಓಪನ್‌ ಗೆದ್ದ ಭಾರತದ ಚಿರಾಗ್‌-ಸಾತ್ವಿಕ್‌ ಜೋಡಿ

Prajwal Revanna Case
ಕರ್ನಾಟಕ2 hours ago

Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌