Pranavananda Shri : ಮಧು ಬಂಗಾರಪ್ಪರಿಂದ ಜೀವ ಬೆದರಿಕೆ; ಪ್ರಣವಾನಂದ ಶ್ರೀ ಗಂಭೀರ ಆರೋಪ, ಕಾಂಗ್ರೆಸ್‌ ಪಕ್ಷಕ್ಕೂ ಎಚ್ಚರಿಕೆ Vistara News

ಕರ್ನಾಟಕ

Pranavananda Shri : ಮಧು ಬಂಗಾರಪ್ಪರಿಂದ ಜೀವ ಬೆದರಿಕೆ; ಪ್ರಣವಾನಂದ ಶ್ರೀ ಗಂಭೀರ ಆರೋಪ, ಕಾಂಗ್ರೆಸ್‌ ಪಕ್ಷಕ್ಕೂ ಎಚ್ಚರಿಕೆ

Pranavananda Shri : ಅತಿ ಹಿಂದುಳಿದ ವರ್ಗಗಳ ನಾಯಕರನ್ನು ಒಗ್ಗೂಡಿಸುತ್ತಿರುವ ಪ್ರಣವಾನಂದ ಶ್ರೀ ಅವರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆದರಿಕೆ ಹಾಕುತ್ತಿದ್ದಾರಂತೆ. ಇದನ್ನು ಬಹಿರಂಗಪಡಿಸಿದ ಶ್ರೀಗಳು ಒಂದೊಮ್ಮೆ ಮಧುವನ್ನು ಕಂಟ್ರೋಲ್‌ ಮಾಡದೆ ಇದ್ದರೆ ಕಾಂಗ್ರೆಸ್‌ ಪಕ್ಚಕ್ಕೂ ಹಾನಿ ಮಾಡಬೇಕಾದೀತು ಎಂದು ಬೆದರಿಕೆ ಹಾಕಿದ್ದಾರೆ!

VISTARANEWS.COM


on

pranavanda swameeji and Madhu Bangarappa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರಿಂದ ನನಗೆ ಜೀವ ಬೆದರಿಕೆ ಇದೆ. ಅವರ ಬೆಂಬಲಿಗರು ನನಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಬ್ರಹ್ಮ ಶ್ರೀ ನಾರಾಯಣ ಗುರುಗಳ ಶಕ್ತಿ ಪೀಠದ ಶ್ರೀ ಪ್ರಣವಾನಂದ ಸ್ವಾಮೀಜಿ (Pranavananda Shri) ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಒಗ್ಗಟ್ಟಾಗುತ್ತಿರುವ ಅತಿ ಹಿಂದುಳಿದ ಸಮುದಾಯಗಳ ಶಕ್ತಿಯನ್ನು ನೋಡಿ ಹೆದರಿ ಈ ರೀತಿ ಬೆದರಿಕೆ (Threatening call) ಹಾಕುತ್ತಿದ್ದಾರೆ. ಆದರೆ, ಇಂಥ ಬೆದರಿಕೆಗಳಿಂದ ನನ್ನನ್ನು ಹೋರಾಟದಿಂದ ಹಿಂದೆ ಸರಿಯುವಂತೆ ಮಾಡುವುದು ಸಾಧ್ಯವಿಲ್ಲ ಎಂದೂ ಸವಾಲು ಹಾಕಿದ್ದಾರೆ.

ಶ್ರೀ ಪ್ರಣವಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ತಳಸಮುದಾಯದ ನಾಯಕರ ಸಭೆಯೊಂದನ್ನು ಆಯೋಜಿಸಿದ್ದರು. ಅದರಲ್ಲಿ ಪ್ರಣವಾನಂದ ಶ್ರೀಗಳು ಕಾಂಗ್ರೆಸ್‌ ನಾಯಕ ಬಿ.ಕೆ. ಹರಿಪ್ರಸಾದ್‌ ಅವರಿಗೆ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದ್ದಲ್ಲದೆ, ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದರು. ಇದೇ ಕಾರ್ಯಕ್ರಮದಲ್ಲಿ ಬಿ.ಕೆ ಹರಿಪ್ರಸಾದ್‌ ಕೂಡಾ ಸಿದ್ದರಾಮಯ್ಯ ಅವರ ಮೇಲೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು.

ಇದಾದ ಬಳಿಕ ಮಧು ಬಂಗಾರಪ್ಪ ಅವರ ಅಭಿಮಾನಿಗಳು ಪ್ರಣವಾನಂದ ಶ್ರೀ ಅವರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಹೇಳಲಾಗಿದೆ. ಪ್ರಣವಾನಂದ ಶ್ರೀಗಳು ಸಮುದಾಯವನ್ನು ಒಡೆಯುತ್ತಿದ್ದಾರೆ, ಸಮುದಾಯವನ್ನು ವೈಯಕ್ತಿಕ ಲಾಭಕ್ಕಾಗಿ ಬಳಸುತ್ತಿದ್ದಾರೆ ಮಧು ಬಂಗಾರಪ್ಪ ಅವರ ಅಭಿಮಾನಿಗಳು ನಿಂದಿಸುತ್ತಿದ್ದಾರೆ ಎನ್ನಲಾಗಿದೆ. ಇದರ ಜತೆಗೆ ಪ್ರಣವಾನಂದ ಶ್ರೀಗಳಿಗೆ ಮದುವೆಯಾಗಿದೆ, ಅವರಿಗೆ ಸ್ವಾಮೀಜಿ ದೀಕ್ಷೆ ಕೊಟ್ಟಿದ್ದು ಯಾರು ಎನ್ನುವ ಪ್ರಶ್ನೆಗಳನ್ನು ಎತ್ತಿದ್ದಾರೆ ಎನ್ನಲಾಗಿದೆ. ಇದನ್ನು ಪ್ರಣವಾನಂದ ಶ್ರೀಗಳು ಖಂಡಿಸಿದ್ದು, ತೇಜೋವಧೆ ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ. ಮಧು ಬಂಗಾರಪ್ಪ ಅವರು ನಾಲಿಗೆ ಹರಿಬಿಡುವುದನ್ನು ನಿಲ್ಲಿಸಬೇಕು ಎಂದು ಅವರು ಕಾಂಗ್ರೆಸ್‌ ನಾಯಕರನ್ನೂ ಒತ್ತಾಯಿಸಿದ್ದಾರೆ. ಒಂದು ವೇಳೆ ಮಧು ಬಂಗಾರಪ್ಪ ಅವರನ್ನು ನಿಯಂತ್ರಿಸದಿದ್ದರೆ ಕಾಂಗ್ರೆಸ್‌ ಪಕ್ಷಕ್ಕೆ ಮತ ಹಾಕದಂತೆ ಸಮುದಾಯಕ್ಕೆ ಕರೆ ಕೊಡುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಪ್ರಣವಾನಂದ ಶ್ರೀಗಳ ಆಕ್ರೋಶದ ಮಾತುಗಳು ಇವು

  1. ಸಚಿವ ಮಧು ಬಂಗಾರಪ್ಪ ಅವರಿಂದ ಜೀವ ಬೆದರಿಕೆ ಇದೆ. ಅವರ ಅಭಿಮಾನಿಗಳು ನನಗೆ ಬೆದರಿಕೆ ಹಾಕುತ್ತಿದ್ದಾರೆ. ಈ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ಗೆ ದೂರು ನೀಡುತ್ತೇನೆ. ಜತೆಗೆ ಪೊಲೀಸರಿಗೂ ದೂರು ನೀಡುತ್ತೇನೆ. ಮುಖ್ಯಮಂತ್ರಿಗಳು, ಸ್ಪೀಕರ್‌ಗೂ ದೂರು ನೀಡುತ್ತೇನೆ.
  2. ಮಧು ಅವರು ಈಡಿಗ ಸಮುದಾಯದ ನಾಯಕರಲ್ಲ. ದಿ. ಬಂಗಾರಪ್ಪನವರ ಹೆಸರು ಹೇಳಿಕೊಂಡು ಈಗ ಮಂತ್ರಿ ಸ್ಥಾನ ಪಡೆದುಕೊಂಡಿದ್ದಾರೆ.
  3. ಮಧು ಅವರು ಸಮುದಾಯ ಒಡೆಯುವ ಕೆಲಸ ಮಾಡುತ್ತಿದ್ದಾರೆ.
  4. ನನ್ನ ಹೆಂಡತಿ ಮಕ್ಕಳ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ನಾನು ಮದುವೆಯಾಗಿದ್ದು ಕದ್ದುಮುಚ್ಚಿ ಅಲ್ಲ. ಶರಣ ಬಸವೇಶ್ವರರ ಸನ್ನಿಧಾನದಲ್ಲಿ ಎಲ್ಲ ಮುಂದೆ ಮದುವೆ ಆಗಿದ್ದೇನೆ. ಮದುವೆ ಆದ್ಮೇಲೆ ಮಕ್ಕಳು ಮಾಡದೆ ಬೇರೇನು ಮಾಡಲಿಕ್ಕಾಗುತ್ತದೆ? ನಾನು ಮದುವೆಯಾಗಿದ್ದೇನೆ. ಹಾಗಂತ ನನ್ನ ಹೆಂಡತಿಯನ್ನು ಕರೆದುಕೊಂಡು ನಿಮ್ಮ ಮನೆಗೆ ಬಂದಿಲ್ಲ.
  5. ನನಗೆ ದೀಕ್ಷೆ ಕೊಟ್ಟ ಸ್ವಾಮೀಜಿ ಯಾರು ಎಂದು ಕೇಳಿದ್ದಾರೆ. ನಾನು ಕೇರಳದವನು. ನಾರಾಯಣಗುರುಗಳ ಊರಿನವನು. ನನ್ನ ಹಿನ್ನೆಲೆಯನ್ನು ತನಿಖೆ ಮಾಡಿಸಿ. ನನಗೆ ನಿಮ್ಮ ಸರ್ಟಿಫಿಕೇಟ್‌ ಬೇಕಾಗಿಲ್ಲ.
  6. ನಾನು ಸಮುದಾಯದ ಹೆಸರು ಹೇಳಿ ದುಡ್ಡು ಮಾಡಿದ್ದೇನೆ ಎಂದು ಹೇಳಿದ್ದಾರೆ. ನಾನು ಒಂದು ಮಠ ಕಟ್ಟಿಲ್ಲ, ಆಸ್ತಿ ಮಾಡಿಲ್ಲ. ನಾನು ಸಮುದಾಯದ ಭೂಮಿ ಕೊಳ್ಳೆಹೊಡೆದಿಲ್ಲ. ಸೈಟ್ ಮಾಡಿ ಮಾರಾಟ ಮಾಡಿಲ್ಲ. ಇವತ್ತು ನಾನು ಓಡಾಡುವ ಕಾರು ಕೂಡಾ ಬೇರೆ ಸಮುದಾಯದವರು ಕೊಟ್ಟಿದ್ದು. ನನ್ನ ಬಗ್ಗೆಯೂ ತನಿಖೆ ಮಾಡಿಸಲಿ.
  7. ನಾನು ಇಲ್ಲಿನವನಲ್ಲ. ಕೇರಳದವನು. ನನ್ನಲ್ಲಿ ಹರಿಯುತ್ತಿರುವುದು ಈಡಿಗ ರಕ್ತ. ನಾನು ಸಮುದಾಯದ ಸ್ವಾಮೀಜಿ ಆಗಿದ್ದು ಕೇವಲ ಮೂರು ವರ್ಷದ ಹಿಂದೆ. ನಾನು ಸಮುದಾಯದಿಂದ ಯಾವುದೇ ಲಾಭ ಪಡೆದಿಲ್ಲ. ನಾನು ಸಮುದಾಯಕ್ಕಾಗಿ 900 ಕಿ.ಮೀ. ಪಾದಯಾತ್ರೆ ಮಾಡಿ ನಾರಾಯಣ ಗುರು ನಿಗಮ ಸ್ಥಾಪನೆಗೆ ಕಾರಣನಾಗಿದ್ದೇನೆ.
  8. ನಾನು ವಿಶ್ವ ಹಿಂದೂ ಪರಿಷತ್‌ ಸದಸ್ಯ ಎಂದು ತಪ್ಪು ಮಾಹಿತಿ ನೀಡುತ್ತಿದ್ದಾರೆ. ನಾನು ಯಾವುದೇ ಸಂಘಟನೆ, ಪಕ್ಷದ ಸದಸ್ಯನಲ್ಲ. ಕೆಲವೊಂದು ಸಂಘಟನೆಗಳ ಜತೆ ಸಮ ಅಭಿಪ್ರಾಯ ಇರಬಹುದು ಅಷ್ಟೆ. ನನ್ನನ್ನು ಪ್ರಶ್ನೆ ಮಾಡುವ ಮಧು ಯಾವ ಪಕ್ಷದಲ್ಲಿದ್ದರು? ಕಾಂಗ್ರೆಸ್‌ಗೆ ಬಂದು ಎಷ್ಟು ಸಮಯವಾಯಿತು?
  9. ಮಧು ಅವರು ನನ್ನನ್ನು ಮತ್ತು ಸಮುದಾಯವನ್ನು ನಿಂದಿಸುವ ಕೆಲಸ ಮಾಡುತ್ತಿರುವುದು ಇದು ಮೊದಲಲ್ಲ. ಒಂದುವರೆ ವರ್ಷದ ಹಿಂದಿನಿಂದಲೇ ನಮ್ಮ ಹೋರಾಟ, ಪಾದಯಾತ್ರೆಗಳನ್ನೇ ನಿಂದನೆ ಮಾಡಿದ್ದರು.
  10. ನೀವು ನನ್ನನ್ನು ನಿಂದಿಸುವ ಮೂಲಕ ರಾಜ್ಯದಲ್ಲಿ ಆರಂಭವಾಗಿರುವ ಅತಿ ಹಿಂದುಳಿದ ವರ್ಗಗಳ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದೀರಿ. ಮಧು ಅವರು ಮಾಡುತ್ತಿರುವ ಕುತಂತ್ರ ಬುದ್ಧಿ ಫಲಿಸುವುದಿಲ್ಲ.
  11. ಹರಿಪಸ್ರಾದ್ ಅವರು ಹಿಂದುಳಿದ ವರ್ಗದವರು. ಅವರಿಗೆ ಸ್ಥಾನಮಾನ ಕೇಳುವುದರಲ್ಲಿ ಏನು ತಪ್ಪಿದೆ? ಬೇರೆ ಸಮುದಾಯದವರು ಹೋರಾಟ ‌ಮಾಡಿದ್ದರಲ್ವಾ?
  12. ಮಧು ಬಂಗಾರಪ್ಪ ಅವರಿಗೆ ಈಗ ಅತಿ ಹಿಂದುಳಿದ ವರ್ಗಗಳ ಹೋರಾಟದಿಂದ ಹೆದರಿಕೆಯಾಗಿದೆ. ನನ್ನನ್ನು ಸಚಿವ ಸ್ಥಾನದಿಂದ ತೆಗೆದು ಹಾಕಿ ಬೇರೆಯವರಿಗೆ ಕೊಟ್ಟರೆ ಏನು ಗತಿ ಎನ್ನುವುದು ಅವರಿಗೆ ಭಯ ಶುರುವಾಗಿದೆ.
  13. ಕಾಂಗ್ರೆಸ್‌ ಪಕ್ಷ ಮಧು ಅವರನ್ನು ಕಂಟ್ರೋಲ್‌ ಮಾಡಬೇಕು. ಇಲ್ಲವಾದರೆ ಕೇವಲ ಸೊರಬ, ಶಿವಮೊಗ್ಗ ಅಲ್ಲ, ಇಡೀ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದ ವಿರುದ್ಧ ಮತ ಹಾಕುವಂತೆ ಹೇಳಬೇಕಾದೀತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Foeticide Case : ಮೈಸೂರಿನ ಮತ್ತೊಂದು ಆಸ್ಪತ್ರೆಯಲ್ಲೂ ಭ್ರೂಣ ಹತ್ಯೆ; ಹೆಡ್‌ ನರ್ಸ್‌ ಉಷಾರಾಣಿ ಬಂಧನ

Foeticide Case : ಮೈಸೂರಿನ ಚಾಮುಂಡೇಶ್ವರಿ ಆಸ್ಪತ್ರೆಯಲ್ಲೂ ಭ್ರೂಣ ಹತ್ಯೆ ನಡೆಯುತ್ತಿರುವ ಮಾಹಿತಿ ಪಡೆದಿರುವ ಪೊಲೀಸರು ಅಲ್ಲಿನ ಹೆಡ್‌ ನರ್ಸ್‌ ಉಷಾರಾಣಿಯನ್ನು ಬಂಧಿಸಿದ್ದಾರೆ.

VISTARANEWS.COM


on

Foeticide arrest
Koo

ಮೈಸೂರು: ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ದಂಧೆಯನ್ನು ಪೊಲೀಸರು ಬಯಲಿಗೆಳೆದ ಬೆನ್ನಿಗೇ ಇನ್ನೊಂದು ಆಸ್ಪತ್ರೆಯಲ್ಲೂ ಮಕ್ಕಳನ್ನು ಹುಟ್ಟುವ ಮೊದಲೇ ಸಾಯಿಸುವ ಕರಾಳ ಕೃತ್ಯ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಮೈಸೂರಿನ ಚಾಮುಂಡೇಶ್ವರಿ ಆಸ್ಪತ್ರೆಯಲ್ಲಿ (Chamundeshwari Hospital) ಭ್ರೂಣ ಹತ್ಯೆ (Foeticide Case) ನಡೆಯುತ್ತಿದ್ದು, ಇದಕ್ಕೆ ಸಂಬಂದಿಸಿ ಅಲ್ಲಿನ ಹೆಡ್‌ ನರ್ಸ್‌ ಉಷಾರಾಣಿ (Nurse Usharani arrested) ಎಂಬಾಕೆಯನ್ನು ಬಂಧಿಸಲಾಗಿದೆ. ಬೆಂಗಳೂರಿನ ಬೈಯಪ್ಪನ ಹಳ್ಳಿ ಪೊಲೀಸರು ಮಂಡ್ಯದಲ್ಲಿ ನಡೆಯುತ್ತಿರುವ ಬೃಹತ್‌ ಜಾಲವನ್ನು ಪತ್ತೆ ಹಚ್ಚಿ 10ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ ಬೆನ್ನಿಗೇ ಬೇರೆ ಬೇರೆ ಜಿಲ್ಲೆಗಳಲ್ಲಿ ‌ ನಡೆಯುತ್ತಿರುವ ದಂಧೆಗಳು ಬಯಲಾಗುತ್ತಿವೆ.

ಮೈಸೂರಿನ ಮಾತಾ‌ ಆಸ್ಪತ್ರೆಯಲ್ಲಿ ಅಬಾರ್ಷನ್‌ ನಡೆಯುತ್ತಿರುವ ಬಗ್ಗೆ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಅಲ್ಲಿನ ವೈದ್ಯ ಚಂದನ ಬಳ್ಳಾಲ್‌ ಮತ್ತು ನರ್ಸ್‌ ಮಂಜುಳಾಳನ್ನು ಬಂಧಿಸಲಾಗಿತ್ತು. ಇದೀಗ ಚಾಮುಂಡೇಶ್ವರಿ ಆಸ್ಪತ್ರೆಯಲ್ಲಿ ಕೂಡ ಭ್ರೂಣ ಹತ್ಯೆ ದಂಧೆ ನಡೆಯುತ್ತಿರುವುದು ಪತ್ತೆಯಾಗಿದ್ದು, ಹೆಡ್ ನರ್ಸ್ ಉಷಾರಾಣಿ ಸೆರೆ ಸಿಕ್ಕಿದ್ದಾಳೆ

ಬ್ರೋಕರ್ ಪುಟ್ಟರಾಜು ಅಣತಿಯಂತೆ ಇಲ್ಲಿ ಮಹಿಳೆಯರಿಗೆ ಅಬಾರ್ಷನ್ ಮಾಡಲಾಗುತ್ತಿತ್ತು ಎನ್ನಲಾಗಿದೆ. ಪುಟ್ಟರಾಜು ಮಾತಾ ಮತ್ತು ಚಾಮುಂಡೇಶ್ವರಿ ಆಸ್ಪತ್ರೆಗೆ ಗ‌ರ್ಭಿಣಿಯರನ್ನು ಕರೆದುಕೊಂಡು ಹೋಗುತ್ತಿದ್ದ. ಚಾಮುಂಡೇಶ್ವರಿ ಆಸ್ಪತ್ರೆ ನರ್ಸ್ ಉಷಾರಾಣಿ ಗರ್ಭಿಣಿಯರಿಗೆ ಅಬಾರ್ಷನ್ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.

ಚಾಮುಂಡೇಶ್ವರಿ ಆಸ್ಪತ್ರೆಯ ಮಾಲೀಕ ಜಗದೀಶ್‌ಗೆ ನೋಟಿಸ್‌ ನೀಡಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಚಾಮುಂಡೇಶ್ವರಿ ಆಸ್ಪತ್ರೆಯ ದಾಖಲಾತಿಗಳನ್ನು ಪೊಲೀಸರಿಗೆ ನೀಡುವಂತೆ ನೋಟೀಸ್‌ ನಲ್ಲಿ ತಿಳಿಸಲಾಗಿದೆ.

ಭ್ರೂಣ ಹತ್ಯೆ ಮಾಡಿ ಟಾಯ್ಲೆಟ್‌ ನಲ್ಲಿ ಫ್ಲಸ್‌ ಮಾಡುತ್ತಿದ್ದ ಮಂಜುಳಾ

ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ಅಬಾರ್ಷನ್‌ ಮಾಡಿಸುವಲ್ಲಿ ಚಂದನ್ ಬಲ್ಲಾಳ್‌ ಗೆ ಸಹಕಾರ ನೀಡುತ್ತಿದ್ದ ನರ್ಸ್‌ ಮಂಜುಳಾ, ಚಂದನ್‌ ಬಳ್ಳಾಲ್‌ ಬಂಧನದ ಬೆನ್ನಿಗೇ ತಲೆಮರೆಸಿಕೊಂಡಿದ್ದಳು. ಆಕೆ ಮತ್ತೊಂದು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ.

ಭ್ರೂಣ ಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಆಘಾತಕಾರಿ ಅಂಶಗಳು ಹೊರಬೀಳುತ್ತಿವೆ. ಚಂದನ್ ಬಲ್ಲಾಳ್‌ ಮಾಲೀಕತ್ವದ ಮಾತಾ ಆಸ್ಪತ್ರೆಯಲ್ಲಿ ನರ್ಸ್‌ ಆಗಿದ್ದ ಮಂಜುಳಾ, ತಿಂಗಳಿಗೆ 70ಕ್ಕೂ ಹೆಚ್ಚು ಅಬಾರ್ಷನ್‌ ಮಾಡಿಸುತ್ತಿದ್ದಳು. ಅಬಾರ್ಷನ್‌ ಮಾಡಿಸಿದ ಭ್ರೂಣಗಳನ್ನು ನಾನಾ ರೀತಿಯಲ್ಲಿ ಎಸೆಯುತ್ತಿದ್ದಳು.

ಭ್ರೂಣಗಳನ್ನು ಪೇಪರ್‌ನಲ್ಲಿ ಸುತ್ತಿ ಲ್ಯಾಬ್‌ ಟೆಕ್ನಿಶಿಯನ್‌ ನಿಸಾರ್‌ಗೆ ಕೊಡುತ್ತಿದ್ದಳು. ಆತ ಮಗುವನ್ನು ಕಾವೇರಿ ನದಿಯಲ್ಲಿ ಎಸೆದು ಬರುತ್ತಿದ್ದ. 12 ವಾರ ಕಳೆದ ಮಕ್ಕಳನ್ನು ಮೆಡಿಕಲ್‌ ವೇಸ್ಟ್‌ಗೆ ಹಾಕುತ್ತಿದ್ದವು. ಒಮ್ಮೊಮ್ಮೆ ಭ್ರೂಣಗಳನ್ನು ಟಾಯ್ಲೆಟ್‌ನಲ್ಲಿ ಎಸೆದು ಫ್ಲಶ್‌ ಮಾಡುತ್ತಿದ್ದಾಗಿ ವಿಚಾರಣೆಯಲ್ಲಿ ಹೇಳಿದ್ದಾಳೆ.

Continue Reading

ಕರ್ನಾಟಕ

Belagavi Winter Session: ಕಾವೇರಿದ ಚರ್ಚೆ ನಡುವೆ ಬಿಸಿ ಬಿಸಿ ಕಾಫಿ ಮಾಡಿಕೊಂಡು ಕುಡಿದ ಕೃಷ್ಣ ಬೈರೇಗೌಡ

Belagavi Winter Session : ಒಂದು ಕಡೆ ವಿಧಾನಸೌಧದದಲ್ಲಿ ಹಲವು ವಿಷಯಗಳ ಬಗ್ಗೆ ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿದ್ದರೆ ಮತ್ತೊಂದು ಕಡೆ ಕಂದಾಯ ಸಚಿವರಿಗೆ ಬಿಸಿ ಬಿಸಿ ಕಾಫಿ ಕುಡಿಯುವ ಆಸೆಯಾಗಿದೆ. ಹೀಗಾಗಿ ಅವರೇ ಅಡುಗೆ ಕೋಣೆಗೆ ಹೋಗಿ ಕಾಫಿಯನ್ನು ರೆಡಿ ಮಾಡಿ ಆಸ್ವಾದಿಸಿದ್ದಾರೆ.

VISTARANEWS.COM


on

Revenue Minister Krishna Byre Gowda making coffee
Koo

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ (Belagavi Winter Session) ಆರಂಭವಾಗಿದೆ. ಬರ, ರೈತರ ಸಮಸ್ಯೆ, ಶಿಕ್ಷಣ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಈ ಬಿಸಿ ಬಿಸಿ ಚರ್ಚೆಗಳ ನಡುವೆ ಕಂದಾಯ ಸಚಿವ ಕೃಷ್ಣ ಬೈರೇಗೌಡ (Revenue Minister Krishna Byre Gowda) ಅವರಿಗೆ ಬಿಸಿ ಬಿಸಿ ಕಾಫಿ ಕುಡಿಯಬೇಕು ಎಂದೆನಿಸಿದೆ. ಹೀಗಾಗಿ ಅವರು ಸೀದಾ ವಿಧಾನಸೌಧದ ಪ್ಯಾಂಟ್ರಿಗೆ (ಅಡುಗೆ ಮನೆ) ಹೋದ ಅವರು ತಾವೇ ಕಾಫಿಯನ್ನು ಸಿದ್ಧಪಡಿಸಿದ್ದಾರೆ.

Revenue Minister Krishna Byre Gowda making coffee

ಹೌದು, ಪ್ಯಾಂಟ್ರಿಗೆ ಹೋದ ಸಚಿವ ಕೃಷ್ಣ ಬೈರೇಗೌಡ ಬಿಸಿ ಬಿಸಿ ತಾಜಾ ಕಾಫಿ ಇದೆಯಾ ಎಂದು ಕೇಳಿದ್ದಾರೆ. ಅದಕ್ಕೆ ಅಡುಗೆ ಮನೆ ಸಿಬ್ಬಂದಿ, ಇಲ್ಲ ಸರ್‌.., ಈಗಲೇ ಮಾಡಿಕೊಡುವೆ ಎಂದು ಹೇಳಿದ್ದಾರೆ. ಆದರೆ, ಕೃಷ್ಣ ಬೈರೇಗೌಡ ಅವರು, ಅದೆಲ್ಲ ಬೇಡ, ನಾನೇ ಮಾಡಿಕೊಳ್ಳುತ್ತೇನೆ ಎಂದು ಖುಷಿಯಿಂದಲೇ ಹಾಲನ್ನು ಖಾಯಿಸಿ ಅದಕ್ಕೆ ತಮಗೆ ಬೇಕಾದಷ್ಟು ಡಿಕಾಕ್ಷನ್‌ ಬೆರೆಸಿ ಘಮ ಘಮಿಸುವ ಕಾಫಿಯನ್ನು ಮಾಡಿಕೊಂಡಿದ್ದಾರೆ.

Revenue Minister Krishna Byre Gowda making coffee

ಬಳಿಕ ಆ ಕಾಫಿಯನ್ನು ಹಿಡಿದುಕೊಂಡು ಬೆಳಗಾವಿಯ ಸುವರ್ಣಸೌಧದ ಆಡಳಿತ ಪಕ್ಷದ ಮೊಗಸಾಲೆಗೆ ಬಂದಿದ್ದು, ಅಲ್ಲಿ ಆನಂದದಿಂದ ಸವಿದಿದ್ದಾರೆ. ಹೀಗಾಗಿ ಸ್ವತಃ ತಮ್ಮ ಕಾಫಿಯನ್ನು ತಾವೇ ರೆಡಿ ಮಾಡಿಕೊಂಡಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಈ 18 ಬಿಲ್ ಮಂಡನೆ ಸಾಧ್ಯತೆ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನವು ಹಲವಾರು ವಿಚಾರಗಳಿಂದ ಪ್ರಮುಖವಾಗಿದೆ. ಈ ಬಾರಿ ಅಧಿವೇಶನದಲ್ಲಿ 18 ಬಿಲ್‌ಗಳು ಮಂಡನೆಯಾಗುವ ಸಾಧ್ಯತೆ (18 bills likely to be introduced) ಇದೆ. ಈಗಾಗಲೇ ಕೆಲವು ವಿಧೇಯಕ ಸಂಬಂಧ ಸಚಿವ ಸಂಪುಟದಲ್ಲಿ ಒಪ್ಪಿಗೆಯನ್ನು ಪಡೆದುಕೊಳ್ಳಲಾಗಿದೆ.

ಕಳೆದ ಕೆಲವು ಸಚಿವ ಸಂಪುಟದಲ್ಲಿ ಹಲವು ವಿಧೇಯಕ ಸಂಬಂಧ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಈಗಾಗಲೇ ಅಲ್ಲಿ ಅನುಮೋದನೆಯನ್ನು ಪಡೆದುಕೊಳ್ಳಲಾಗಿದ್ದು, ಈಗ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಇಂದು ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಶಿಕ್ಷಣ ಪೂರೈಸಿ ಗ್ರಾಮೀಣ ಭಾಗಕ್ಕೆ ಸೇವೆಗೆ ಹಲವು ಯುವ ವೈದ್ಯರು ತೆರಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ವೈದ್ಯರ ಕೊರತೆಯು ಗಣನೀಯ ಪ್ರಮಾಣದಲ್ಲಿದೆ. ಹೀಗಾಗಿ ಈ ಬಾರಿ ಪ್ರಮುಖವಾಗಿ ವೈದ್ಯಕೀಯ ಪದವೀಧರ ಕಡ್ಡಾಯ ಗ್ರಾಮೀಣ ಸೇವೆ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಇದೂ ಅಲ್ಲದೆ, ಕರ್ನಾಟಕ ಕರಾವಳಿ ಅಭಿವೃದ್ಧಿ ನಿಗಮ ತಿದ್ದುಪಡಿ ವಿಧೇಯಕ 2021, ಕರ್ನಾಟಕ ಸರಕು ಮತ್ತು ಸೇವೆಗಳ ತಿದ್ದುಪಡಿ ವಿಧೇಯಕ, ಕರ್ನಾಟಕ ಪರಿಶಿಷ್ಟ ಜಾತಿ ಪಂಗಡಗಳ ಉಪ ಮಂಜೂರಾತಿ ಮಸೂದೆ, ಕರ್ನಾಟಕ ನಗರ ಮತ್ತು ಯೋಜನೆ ತಿದ್ದುಪಡಿ ವಿಧೇಯಕ, ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ವಿಧೇಯಕ ಸೇರಿದಂತೆ ಹಲವು ಬಿಲ್‌ಗಳನ್ನು ಮಂಡಿಸಿ ಪಾಸ್‌ ಮಾಡಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Belagavi Winter Session: ಚಳಿಗಾಲದ ಅಧಿವೇಶನಕ್ಕೆ ಶಾಸಕರ ಕೊರತೆ; ತೆಲಂಗಾಣದಲ್ಲಿ ಡಿಕೆಶಿ, ಜಮೀರ್‌!

ಈ 18 ಬಿಲ್‌ ಮಂಡನೆ ಸಾಧ್ಯತೆ

1) ಕರ್ನಾಟಕ ಕರಾವಳಿ ಅಭಿವೃದ್ಧಿ ನಿಗಮ ತಿದ್ದುಪಡಿ ವಿಧೇಯಕ 2021
2) ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ 2023
3) ವೈದ್ಯಕೀಯ ಪದವೀಧರ ಕಡ್ಡಾಯ ಗ್ರಾಮೀಣ ಸೇವೆ ತಿದ್ದುಪಡಿ ವಿಧೇಯಕ
4) ಕರ್ನಾಟಕ ಸರಕು ಮತ್ತು ಸೇವೆಗಳ ತಿದ್ದುಪಡಿ ವಿಧೇಯಕ
5) ಕರ್ನಾಟಕ ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ
6) ಗದಗ – ಬೆಟಗೇರಿ ವ್ಯಾಪಾರ ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ವಿಧೇಯಕ
7) ಕರ್ನಾಟಕ ಪರಿಶಿಷ್ಟ ಜಾತಿ ಪಂಗಡಗಳ ಉಪ ಮಂಜೂರಾತಿ ಮಸೂದೆ
8) ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ
9) ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ರಚನೆ ವಿಧೇಯಕ
10) ಕರ್ನಾಟಕ ಅಭಿವೃದ್ಧಿ ಮಂಡಳಿ ಮೈಸೂರು ನಗರ ಅಭಿವೃದ್ಧಿ ವಿಧೇಯಕ
11) ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣೆ ಪ್ರಾಧಿಕಾರ
12) ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ವಿಧೇಯಕ
13) ಕರ್ನಾಟಕ ಸ್ಟಾಂಪ್ ತಿದ್ದುಪಡಿ ವಿಧೇಯಕ
14) ಕರ್ನಾಟಕ ನಗರ ಮತ್ತು ಯೋಜನೆ ತಿದ್ದುಪಡಿ ವಿಧೇಯಕ
15) ಕರ್ನಾಟಕ ಸಿವಿಲ್ ಕೋರ್ಟ್ ತಿದ್ದುಪಡಿ ವಿಧೇಯಕ
16) ಕರ್ನಾಟಕ ಹೈಕೋರ್ಟ್ ತಿದ್ದುಪಡಿ ವಿಧೇಯಕ
17) ಕರ್ನಾಟಕ ವೃತ್ತಿ ಪರ ಸಿವಿಲ್ ಎಂಜಿನಿಯರ್‌ಗಳ ಪರಿಷತ್ ಮಸೂದೆ
18) ಕರ್ನಾಟಕ ಆಡಳಿತಾತ್ಮಕ ಕಾರ್ಯ ವಿಧಾನ ಮಸೂದೆ

Continue Reading

ಕರ್ನಾಟಕ

Video Viral : ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, ಪ್ರಾಣ ಉಳಿಸಿದ ಡ್ರೈವರ್‌; ವಿಡಿಯೊ ಇದೆ!

Video viral : ಬಸ್ಸಿಗೆ ಡಿಕ್ಕಿ ಹೊಡೆದ ಕಾರು ಹೊತ್ತಿ ಉರಿದಿದೆ. ಬಸ್‌ ಚಾಲಕ ಪ್ರಯಾಣಿಕರನ್ನು ರಕ್ಷಿಸಿದ್ದು ಮಾತ್ರವಲ್ಲ ಕಾರಿಗೆ ಅಂಟಿಕೊಂಡ ಬಸ್ಸನ್ನು ಬೇರ್ಪಡಿಸಲು ಮಾಡಿದ ಪ್ರಯತ್ನ ಮತ್ತು ಅದರಲ್ಲಿ ಯಶಸ್ವಿಯಾದ ಕಥೆ ಇಲ್ಲಿದೆ.

VISTARANEWS.COM


on

Car catches fire after hitting bus
Koo

ಬೆಂಗಳೂರು: ಕಾರೊಂದು ಬಿಎಂಟಿಸಿ ಬಸ್‌ಗೆ ಡಿಕ್ಕಿ ಹೊಡೆದು ಸುಟ್ಟು ಕರಕಲಾದ ಘಟನೆ (Car Hits bus and catches fire in Bangalore) ಬೆಂಗಳೂರಿನ ಚಂದ್ರಾ ಲೇಔಟ್‌ ಸಮೀಪದ ನಾಗರಬಾವಿ ರಿಂಗ್‌ ರಸ್ತೆಯಲ್ಲಿ (Nagarabavi Ring Road) ಸೋಮವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಕಾರು ಬಸ್ಸಿಗೆ ಅಂಟಿಕೊಂಡು ಬಸ್‌ಗೂ ಬೆಂಕಿ ಹತ್ತಿಕೊಂಡಿತ್ತು (video Viral). ಆದರೆ, ಬಸ್‌ನ ಚಾಲಕ ಪ್ರಯಾಣಿಕರನ್ನು ಇಳಿಸಿ ರಕ್ಷಿಸಿದ್ದಲ್ಲದೆ, ಅತ್ಯಂತ ಚಾಲಾಕಿತನ ಮತ್ತು ಸಮಯಪ್ರಜ್ಞೆ ಮೆರೆದು (Time sense of driver) ಬಸ್‌ ನಿಂದ ಕಾರನ್ನು ಬೇರ್ಪಡಿಸಿದ್ದಾರೆ. ಬಸ್‌ ಕೂಡಾ ಸಂಪೂರ್ಣ ಸುಟ್ಟು ಹೋಗುವುದನ್ನು (Fire Accident) ತಪ್ಪಿಸಿದ್ದಾರೆ.

ಸೋಮವಾರ ಬೆಳಗ್ಗೆ 9 ಗಂಟೆಗೆ ಹೊತ್ತಿಗೆ ನಗರದ ಚಂದ್ರಾ ಲೇಔಟ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಯಶವಂತಪುರದಿಂದ ನಾಯಂಡಹಳ್ಳಿ ಕಡೆ ತೆರಳುತ್ತಿದ್ದ ಬಸ್‌ ಚಂದ್ರಾ ಲೇಔಟ್ ಬಳಿ ನಿಂತಿತ್ತು. ಆಗ ಹಿಂಬದಿಯಿಂದ ವೇಗವಾಗಿ ಬಂದ ಕಾರೊಂದು ಬಸ್‌ಗೆ ಡಿಕ್ಕಿ ಹೊಡೆಯಿತು. ಅತ್ಯಂತ ರಭಸದಿಂದ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಕ್ಷಣಾರ್ಧದಲ್ಲಿಯೇ ಬೆಂಕಿ ಹತ್ತಿಕೊಂಡಿದೆ. ಆಗ ಕಾರಿನ ಪ್ರಯಾಣಿಕರು ಕೂಡಲೇ ಇಳಿದು ಜೀವ ರಕ್ಷಿಸಿಕೊಂಡರು. (video Viral)

ಅದರ ಜತೆಗೆ ಬಸ್‌ ಚಾಲಕ ಕೂಡಾ ಎಲ್ಲ ಪ್ರಯಾಣಿಕರನ್ನು ಇಳಿಸಿದರು. ಇಷ್ಟರ ನಡುವೆ ಕಾರು ಬಸ್ಸಿಗೆ ಅಂಟಿಕೊಂಡು ಹೊತ್ತಿ ಉರಿಯತೊಡಗಿತ್ತು. ಬಸ್ಸನ್ನು ಸ್ವಲ್ಪ ಮಂದೆ ಕೊಂಡು ಹೋಗಲು ಪ್ರಯತ್ನಿಸಿದಾಗ ಅದು ಅಂಟಿಕೊಂಡಿದ್ದು ಗೊತ್ತಾಯಿತು. ಅದನ್ನು ಹೇಗಾದರೂ ಬೇರ್ಪಡಿಸಬೇಕು ಎಂದು ಯೋಚಿಸಿದ ಬಿಎಂಟಿಸಿ ಚಾಲಕ ಭಾರಿ ಡೇಂಜರಸ್‌ ಪ್ರಯೋಗಕ್ಕೆ ಮುಂದಾದರು.

ಕಾರು ಹೊತ್ತಿ ಉರಿಯುತ್ತಿದ್ದಂತೆಯೇ ಬಸ್ಸನ್ನು ಮುಂದಕ್ಕೆ ಚಲಾಯಿಸಿದರು ಚಾಲಕ. ಬಸ್ಸು ಮುಂದಕ್ಕೆ ಚಲಿಸಿದಾಗ ಕಾರು ಕಳಚಿಕೊಳ್ಳಬಹುದು ಎನ್ನುವುದು ಅವರ ಯೋಚನೆಯಾಗಿತ್ತು. ಆದರೆ, ಅದು ಕಳಚಿಕೊಳ್ಳಲಿಲ್ಲ. ಬದಲಾಗಿ ಗಾಳಿಯ ವೇಗಕ್ಕೆ ಬೆಂಕಿ ಇನ್ನಷ್ಟು ಧಗಧಗಿಸಿತು.

Car catches fire after hitting bus
ತಡೆಗೋಎಗೆ ಡಿಕ್ಕಿ ಹೊಡೆದು ಬಸ್ಸಿನಿಂದ ಕಾರನ್ನು ಬೇರ್ಪಡಿಸಲು ಪ್ರಯತ್ನ

ಈ ವೇಳೆ ಚಾಲಕ ಬಸ್ಸನ್ನು ಸ್ವಲ್ಪ ದೂರ ಹೋಗಿ ನಿಲ್ಲಿಸಿ ಇನ್ನೊಂದು ಪ್ಲ್ಯಾನ್‌ ಮಾಡಿದರು. ಇದೊಂದು ಡಬಲ್‌ ರೋಡ್‌ ಆಗಿದ್ದು, ಒಂದು ಭಾಗದಲ್ಲಿ ತಡೆಗೋಡೆ ಇದೆ. ಚಾಲಕ ಬಸ್ಸನ್ನು ಆ ತಡೆಗೋಡೆಗೆ ಡಿಕ್ಕಿ ಹೊಡೆಸಿ ಕಾರನ್ನು ಕದಲಿಸುವ ಪ್ರಯತ್ನವನ್ನು ಮಾಡಿದರು. ಆದರೆ, ಕಾರು ಬಿಡಿಸಿಕೊಳ್ಳಲೇ ಇಲ್ಲ.

ಇದನ್ನೂ ಓದಿ: ಮೈಚಾಂಗ್‌ ಚಂಡಮಾರುತ; ಭಾರಿ ಮಳೆಗೆ ತಮಿಳುನಾಡಿನಲ್ಲಿ ಇಬ್ಬರ ಸಾವು, ಬೆಂಗಳೂರಿಗೂ ಎಫೆಕ್ಟ್?

ಈ ನಡುವೆ, ಕಾರು ಸುಟ್ಟು ಹೋಗುವ ವೇಗ ಜಾಸ್ತಿಯಾಯಿತು. ಪೆಟ್ರೋಲ್‌ ಟ್ಯಾಂಕ್‌ ಕೂಡಾ ಸಿಡಿಯಿತು. ಬಸ್ಸಿಗೂ ಬೆಂಕಿ ಹತ್ತಿಕೊಳ್ಳುವ ವೇಗ ಜಾಸ್ತಿಯಾಯಿತು. ಇಷ್ಟಾದರೂ ಚಾಲಕ ತನ್ನ ಪ್ರಯತ್ನವನ್ನು ಬಿಡಲಿಲ್ಲ, ವ್ಯವಧಾನವನ್ನು ಕಳೆದುಕೊಳ್ಳಲಿಲ್ಲ.

ಇದು ಡಬಲ್‌ ರೋಡ್‌ ಆಗಿದ್ದರಿಂದ ನಡುವೆ ಸಣ್ಣ ರಸ್ತೆ ವಿಭಾಜಕ ಇತ್ತು. ಇತ್ತು. ಚಾಲಕ ಬಸ್ಸನ್ನು ತಿರುಗಿಸಿ ಆ ತಡೆಗೋಡೆಯ ಮೇಲೆ ಕಾರನ್ನು ಹಾರಿಸಿದ. ಆಗ ಅಂಟಿಕೊಂಡಿದ್ದ ಕಾರು ಕಳಚಿಕೊಂಡಿತು. ಈ ನಡುವೆ, ಕಾರು ಸಂಪೂರ್ಣ ಸುಟ್ಟು ಹೋದರೆ, ಬಸ್‌ ಗೆ ಅಲ್ಲಿದ್ದವರೆಲ್ಲ ಸ್ವಲ್ಪ ಸ್ವಲ್ಪ ನೀರು ತಂದೇ ಸಿಂಪಡಿಸಿ ಬೆಂಕಿ ಆರಿಸಿದರು.

Car catches fire after hitting bus
ರಸ್ತೆ ವಿಭಜಕವನ್ನು ಹಾಯಿಸಿ ಕಾರು ಬೇರ್ಪಡಿಸಿದ ಬಗೆ

ಬಸ್ಸಿನ ಹಿಂದಿನ ಎರಡು ಸೀಟುಗಳಿಗೆ ಸೀಮಿತವಾಗಿ ಬೆಂಕಿ ಹತ್ತಿಕೊಂಡಿದೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ಇದು ಸಾಧ್ಯವಾಗಿದೆ. ಅಲ್ಲಿ ಸೇರಿದವರೆಲ್ಲ ಬೆಂಕಿ ಆರಿಸುವಲ್ಲಿ ಚಾಲಕನಿಗೆ ನೆರವಾಗಿದ್ದಲ್ಲದೆ, ಅವರನ್ನು ಹಾಡಿ ಹೊಗಳಿ ಬೆನ್ನು ತಟ್ಟಿದರು.

ಒಟ್ಟಾರೆ ಘಟನೆಯ ಫುಲ್‌ ವಿಡಿಯೊ ಇಲ್ಲಿದೆ.

Continue Reading

ಕರ್ನಾಟಕ

ಮೈಚಾಂಗ್‌ ಚಂಡಮಾರುತ; ಭಾರಿ ಮಳೆಗೆ ತಮಿಳುನಾಡಿನಲ್ಲಿ ಇಬ್ಬರ ಸಾವು, ಬೆಂಗಳೂರಿಗೂ ಎಫೆಕ್ಟ್?

ತಮಿಳುನಾಡಿನಲ್ಲಿ ಮೈಚಾಂಗ್‌ ಚಂಡಮಾರುತದ ಅಬ್ಬರ ಜೋರಾಗಿದ್ದು, ಮಳೆ ಸಂಬಂಧಿತ ಅವಘಡದಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ. ಒಬ್ಬ ಗಾಯಗೊಂಡಿದ್ದು, ಇನ್ನೂ 24 ಗಂಟೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

Michaung Cyclone
Koo

ಚೆನ್ನೈ: ಮೈಚಾಂಗ್‌ ಚಂಡಮಾರುತಕ್ಕೆ ತಮಿಳುನಾಡು ತತ್ತರಿಸಿ ಹೋಗಿದೆ. ಚಂಡಮಾರುತದಿಂದಾಗಿ ತಮಿಳುನಾಡಿನಲ್ಲಿ (Tamil Nadu) ಭಾರಿ ಮಳೆಯಾಗಿದ್ದು, ಚೆನ್ನೈ ಜಲಾವೃತಗೊಂಡಿದೆ. ಅದರಲ್ಲೂ, ಚನ್ನೈನ ಕಣತೂರ್‌ನಲ್ಲಿ ಭಾರಿ ಮಳೆಗೆ ಇತ್ತೀಚೆಗಷ್ಟೇ ಕಟ್ಟಿದ ಗೋಡೆ ಕುಸಿದು ಇಬ್ಬರು ಮೃತಪಟಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟ ಇಬ್ಬರೂ ಜಾರ್ಖಂಡ್‌ನವರು ಎಂದು ತಿಳಿದುಬಂದಿದೆ. ಮತ್ತೊಂದೆಡೆ, ಮೈಚಾಂಗ್‌ ಚಂಡಮಾರುತದ (Maichaung Cyclone) ಅಬ್ಬರ ಜೋರಾಗಿರುವುದರಿಂದ ಬೆಂಗಳೂರಿನಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬಂಗಾಳ ಕೊಲ್ಲಿಯಲ್ಲಿ ಮೈಚಾಂಗ್‌ ಚಂಡಮಾರುತ ರೂಪುಗೊಂಡಿರುವ ಕಾರಣ ತಮಿಳುನಾಡಿನ ಬಹುತೇಕ ಕಡೆ ಭಾರಿ ಮಳೆಯಾಗುತ್ತಿದೆ. ಆಂಧ್ರಪ್ರದೇಶದಲ್ಲೂ ಭಾರಿ ಮಳೆಯಾಗುತ್ತಿರುವ ಕಾರಣ ಎರಡೂ ರಾಜ್ಯಗಳಲ್ಲಿ ಸೋಮವಾರ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆಂಧ್ರಪ್ರದೇಶ ಹಾಗೂ ತಮಿಳುನಾಡು ಕರ್ನಾಟಕದ ನೆರೆಯ ರಾಜ್ಯಗಳಾಗಿರುವ ಕಾರಣ ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಈಗಾಗಲೇ ಮೋಡ ಕವಿದ ವಾತಾವರಣ ಇದೆ.

ಕೆರೆಯಂತಾದ ಚೆನ್ನೈ ಏರ್‌ಪೋರ್ಟ್‌

ನಿರಂತರವಾಗಿ ಸುರಿದ ಮಳೆಯಿಂದಾಗಿ ಚೆನ್ನೈ ವಿಮಾನ ನಿಲ್ದಾಣವು ಜಲಾವೃತಗೊಂಡಿದೆ. ವಿಮಾನ ನಿಲ್ದಾಣದ ರನ್‌ವೇ, ಪಾರ್ಕಿಂಗ್‌ ಜಾಗವು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಮತ್ತೊಂದೆಡೆ, ಚೆನ್ನೈ ವಿಮಾನ ನಿಲ್ದಾಣಕ್ಕೆ ತೆರಳಬೇಕಿದ್ದ 11 ವಿಮಾನಗಳನ್ನು ಬೆಂಗಳೂರಿನಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಮಾಡಲಾಗಿದೆ. ಮುಂದಿನ 24 ಗಂಟೆಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ವಿಮಾನಗಳ ಹಾರಾಟ ಕಷ್ಟ ಸಾಧ್ಯ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Karnataka Weather : ನಾಳೆಯಿಂದ ಡಿ. 9ರ ವರೆಗೆ ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ

ವರ್ಕ್‌ ಫ್ರಂ ಹೋಮ್‌ಗೆ ಸೂಚನೆ

ತಮಿಳುನಾಡಿನಲ್ಲಿ ಗಂಟೆಗೆ 90-100 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮಳೆಯೂ ಅಷ್ಟೇ ಜೋರಾಗಿದೆ. ಇದರಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿರುವ ಜತೆಗೆ ಚೆನ್ನೈ, ತಿರುವಳ್ಳೂರ್‌, ಕಾಂಚಿಪುರಂ ಹಾಗೂ ಚೆಂಗಲ್‌ಪಟ್ಟು ನಗರಗಳಲ್ಲಿ ಖಾಸಗಿ ಕಂಪನಿಗಳು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ (ವರ್ಕ್‌ ಫ್ರಂ ಹೋಮ್)‌ ಮಾಡುವಂತೆ ಸೂಚಿಸಿವೆ. ಭಾರಿ ಮಳೆಯಿಂದಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ಬೆಳೆ ನಾಶವಾಗಿದೆ ಎಂದು ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Foeticide arrest
ಕರ್ನಾಟಕ12 mins ago

Foeticide Case : ಮೈಸೂರಿನ ಮತ್ತೊಂದು ಆಸ್ಪತ್ರೆಯಲ್ಲೂ ಭ್ರೂಣ ಹತ್ಯೆ; ಹೆಡ್‌ ನರ್ಸ್‌ ಉಷಾರಾಣಿ ಬಂಧನ

Tukali imitate sangeetha sringeri
ಬಿಗ್ ಬಾಸ್18 mins ago

BBK SEASON 10: ನಾಯಿಯಾದ ಸಂಗೀತಾ; ಅನುಕರಣೆ ಮಾಡೋದ್ರಲ್ಲಿ ತುಕಾಲಿ ಎತ್ತಿದ ಕೈ!

Revenue Minister Krishna Byre Gowda making coffee
ಕರ್ನಾಟಕ34 mins ago

Belagavi Winter Session: ಕಾವೇರಿದ ಚರ್ಚೆ ನಡುವೆ ಬಿಸಿ ಬಿಸಿ ಕಾಫಿ ಮಾಡಿಕೊಂಡು ಕುಡಿದ ಕೃಷ್ಣ ಬೈರೇಗೌಡ

Car catches fire after hitting bus
ಕರ್ನಾಟಕ51 mins ago

Video Viral : ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, ಪ್ರಾಣ ಉಳಿಸಿದ ಡ್ರೈವರ್‌; ವಿಡಿಯೊ ಇದೆ!

Michaung Cyclone
ಕರ್ನಾಟಕ1 hour ago

ಮೈಚಾಂಗ್‌ ಚಂಡಮಾರುತ; ಭಾರಿ ಮಳೆಗೆ ತಮಿಳುನಾಡಿನಲ್ಲಿ ಇಬ್ಬರ ಸಾವು, ಬೆಂಗಳೂರಿಗೂ ಎಫೆಕ್ಟ್?

Rishab rashmika
South Cinema1 hour ago

Rishab Shetty: ಪರೋಕ್ಷವಾಗಿ ರಶ್ಮಿಕಾ, ಪ್ರಶಾಂತ್‌ ನೀಲ್‌ಗೆ ತಿರುಗೇಟು ಕೊಟ್ರಾ ರಿಷಬ್‌! ಸ್ಪಷ್ಟನೆ ಏನು?

18 bills likely to be introduced in Belagavi Winter Session
ಕರ್ನಾಟಕ1 hour ago

Belagavi Winter Session: ಬೆಳಗಾವಿ ಅಧಿವೇಶನದಲ್ಲಿ ಈ 18 ಬಿಲ್ ಮಂಡನೆ ಸಾಧ್ಯತೆ

Narendra Modi And Share Market
ದೇಶ2 hours ago

ಬಿಜೆಪಿ ಜಯಭೇರಿ ಬೆನ್ನಲ್ಲೇ ನಿಫ್ಟಿ, ಸೆನ್ಸೆಕ್ಸ್‌ ನೆಗೆತ, ಸುಧಾರಿಸಿದ ರೂಪಾಯಿ ಮೌಲ್ಯ!

Shortage of MLAs for Belagavi Winter Session
ಕರ್ನಾಟಕ2 hours ago

Belagavi Winter Session: ಚಳಿಗಾಲದ ಅಧಿವೇಶನಕ್ಕೆ ಶಾಸಕರ ಕೊರತೆ; ತೆಲಂಗಾಣದಲ್ಲಿ ಡಿಕೆಶಿ, ಜಮೀರ್‌!

Drivers fight in Bangalore
ಕರ್ನಾಟಕ2 hours ago

Viral News : ಚಾಲಕರ ನಡುವೆ ಕಿರಿಕ್‌;‌ ಇನೋವಾ ಕಾರನ್ನೇ ಇನ್ನೊಬ್ಬನ ಮೇಲೆ ಹರಿಸಲು ಯತ್ನಿಸಿದ ಡ್ರೈವರ್‌

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ10 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ1 day ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌