Producer K Manju from Padmanabha Nagar assembly constituency Entry into the political arena K. Manju: ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಿಂದ ನಿರ್ಮಾಪಕ ಕೆ ಮಂಜು? ರಾಜಕೀಯ ಅಖಾಡಕ್ಕೆ ಎಂಟ್ರಿ? - Vistara News

ರಾಜಕೀಯ

K. Manju: ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಿಂದ ನಿರ್ಮಾಪಕ ಕೆ ಮಂಜು? ರಾಜಕೀಯ ಅಖಾಡಕ್ಕೆ ಎಂಟ್ರಿ?

ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗುವ ಬಗ್ಗೆ ಇದೀಗ ನಿರ್ಮಾಪಕ ಕೆ.ಮಂಜು (K. Manju) ಮಾತನಾಡಿದ್ದಾರೆ. ಪದ್ಮನಾಭ ನಗರ (Padmanabha Nagar) ವಿಧಾನಸಭಾ ಕ್ಷೇತ್ರದಿಂದ ಅವರು ಸ್ಪರ್ಧಿಸುವ ಸಾಧ್ಯತೆ ಇದೆ. ಈ ಬಗ್ಗೆ ಅವರು ಶೀಘ್ರದಲ್ಲೇ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.

VISTARANEWS.COM


on

Producer K Manju from Padmanabha Nagar assembly constituency Entry into the political arena
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದ ರಾಜಕಾರಣಕ್ಕೆ ನಿರ್ಮಾಪಕ ಕೆ ಮಂಜು (K. Manju) ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗುವ ಬಗ್ಗೆ ಇದೀಗ ನಿರ್ಮಾಪಕ ಕೆ.ಮಂಜು ಮಾತನಾಡಿದ್ದಾರೆ. ಪದ್ಮನಾಭ ನಗರ (Padmanabha Nagar) ವಿಧಾನಸಭಾ ಕ್ಷೇತ್ರದಿಂದ ಅವರು ಸ್ಪರ್ಧಿಸುವ ಸಾಧ್ಯತೆ ಇದೆ. ಈ ಬಗ್ಗೆ ಅವರು ಶೀಘ್ರದಲ್ಲೇ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.

ರಾಜಕೀಯಕ್ಕೆ ಬರುತ್ತಿರುವ ಬಗ್ಗೆ ಕೆ.ಮಂಜು ಮಾತನಾಡಿ ʻʻರಾಜ್ಯ ರಾಜಕಾರಣ ನೋಡಿಕೊಂಡು ಬಂದಿದ್ದೇನೆ. ನನಗೆ ಜನಸೇವೆ ಮಾಡುವುದಕ್ಕೆ ಒಂದು ಅವಕಾಶ ಕೊಡಿ. ಪಕ್ಷದ ಬಗ್ಗೆ ನಾಯಕ ತೀರ್ಮಾನ ಮಾಡಿಕೊಂಡು, ಅವರ ಸಲಹೆ ಸೂಚನೆ ಮೇರೆಗೆ ಅನೌನ್ಸ್ ಮಾಡುತ್ತೇನೆ. ಒಕ್ಕಲಿಗ ಜನಾಂಗದಲ್ಲಿ ಜನರ ಸೇವೆ ಮಾಡಲು ಅವಕಾಶ ಕೊಡಬೇಕು. ಟಿಕೆಟ್ ತೆಗೆದುಕೊಳ್ಳುವುದು ಮುಖ್ಯವಲ್ಲ ಜನರ ಆಶೀರ್ವಾದ ನನ್ನ ಮೇಲೆ ಇರಬೇಕು. ಜೆಡಿಎಸ್ ಅಥವಾ ಕಾಂಗ್ರೆಸ್ ಪಕ್ಷಗಳಲ್ಲಿ ಯಾವುದಾದರೂ ಒಂದು ಪಕ್ಷದಲ್ಲಿ ನಿಂತು ಸ್ಪರ್ಧಿಸ್ತೇನೆ. ಜೆಡಿಎಸ್, ಕಾಂಗ್ರೆಸ್ ಎರಡು ಪಕ್ಷಗಳಲ್ಲಿ ಒಂದು ಪಕ್ಷ ನನ್ನ ಕೈ ಹಿಡಿಯುತ್ತದೆ. ಪದ್ಮನಾಭನಗರ ನಾಯಕರ ಜತೆ ಸಂಪರ್ಕದಲ್ಲಿ ಇದ್ದೀನೆʼʼಎಂದು ಹೇಳಿದರು.

K Manju

ಇದನ್ನೂ ಓದಿ: JDS Hassan: ಹಾಸನ ವಿಧಾನಸಭಾ ಕ್ಷೇತ್ರ ಟಿಕೆಟ್‌: ಭವಾನಿ-ಸ್ವರೂಪ್‌ ವಿವಾದದ ನಡುವೆ ಕೆ.ಎಂ. ರಾಜೇಗೌಡ ಅಭ್ಯರ್ಥಿ?

ಬಿಜೆಪಿಯ ಆರ್​. ಅಶೋಕ್​ ಅವರ ಪ್ರಾಬಲ್ಯ ಇರುವಂತಹ ಕ್ಷೇತ್ರ ಇದಾಗಿದ್ದು, ಒಂದು ವೇಳೆ ಕೆ. ಮಂಜು ಅವರು ಪದ್ಮನಾಭ ನಗರದಿಂದ ಚುನಾವಣೆಗೆ ಸ್ಪರ್ಧಿಸಿದ್ದೇ ಆದರೆ ಪೈಫೋಟಿ ಬಲವಾಗಲಿದೆ. ಅಶೋಕ್​ ವಿರುದ್ಧ ಕಾಂಗ್ರೆಸ್​ನಿಂದ ಪಿಜಿಆರ್ ಸಿಂಧ್ಯಾ ಅವರು ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ. ಜೆಡಿಎಸ್​ನಿಂದ ಕೆ. ಮಂಜು ಸ್ಪರ್ಧಿಸಿದರೆ ಮೂರೂ ಪಕ್ಷಗಳ ನಡುವೆ ಹಣಾಹಣಿ ಜೋರಾಗಲಿದೆ. ರಾಜಕೀಯ ಅಖಾಡಟಕ್ಕೆ ಕೆ. ಮಂಜು ಬರಲಿದ್ದಾರಾ ಎಂಬುದು ಕಾದು ನೋಡಬೇಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi : ವಿಶ್ವವೇ ನೋಡಿದೆ.. ಯುಪಿ ರ್ಯಾಲಿಯಲ್ಲಿ ಶಮಿಯನ್ನು ಹೊಗಳಿದ ಮೋದಿ

Narendra Modi : ಕ್ರಿಕೆಟ್ ವಿಶ್ವಕಪ್​ನಲ್ಲಿ ಸಹೋದರ ಮೊಹಮ್ಮದ್ ಶಮಿ ಮಾಡಿದ ಅದ್ಭುತ ಸಾಧನೆಯನ್ನು ಇಡೀ ಜಗತ್ತು ನೋಡಿದೆ. ಕ್ರೀಡೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಮೊಹಮ್ಮದ್ ಶಮಿ ಅವರಿಗೆ ಕೇಂದ್ರ ಸರ್ಕಾರ ಅರ್ಜುನ ಪ್ರಶಸ್ತಿ ನೀಡಿದೆ. “ಯೋಗಿ ಜಿ ಅವರ ಸರ್ಕಾರ ಎರಡು ಹೆಜ್ಜೆ ಮುಂದೆ ಹೋಗಿದೆ. ಯೋಗಿ ಜಿ ಅವರು ಇಲ್ಲಿನ ಯುವಕರಿಗಾಗಿ ಶಮಿ ಹೆಸರಿನಲ್ಲಿ ಕ್ರೀಡಾಂಗಣವನ್ನು ಸಹ ನಿರ್ಮಿಸುತ್ತಿದ್ದಾರೆ ಎಂದು ಮೋದಿ ಹೇಳಿದ್ದಾರೆ.

VISTARANEWS.COM


on

Narendra Modi
Koo

ಅಮ್ರೋಹಾ(ಉತ್ತರ ಪ್ರದೇಶ): ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರನ್ನು ಪ್ರಧಾನಿ ನರೇಂದ್ರ ಮೋದಿ (Narendra Modi ) ಮತ್ತೊಂದು ಬಾರಿ ಶ್ಲಾಘಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ಕ್ರಿಕೆಟ್ ವಿಶ್ವಕಪ್​ನಲ್ಲಿ ಸಹೋದರ ಮೊಹಮ್ಮದ್ ಶಮಿ ಮಾಡಿದ ಅದ್ಭುತ ಸಾಧನೆಯನ್ನು ಇಡೀ ಜಗತ್ತು ನೋಡಿದೆ. ಕ್ರೀಡೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಮೊಹಮ್ಮದ್ ಶಮಿ ಅವರಿಗೆ ಕೇಂದ್ರ ಸರ್ಕಾರ ಅರ್ಜುನ ಪ್ರಶಸ್ತಿ ನೀಡಿದೆ. “ಯೋಗಿ ಜಿ ಅವರ ಸರ್ಕಾರ ಎರಡು ಹೆಜ್ಜೆ ಮುಂದೆ ಹೋಗಿದೆ. ಯೋಗಿ ಜಿ ಅವರು ಇಲ್ಲಿನ ಯುವಕರಿಗಾಗಿ ಶಮಿ ಹೆಸರಿನಲ್ಲಿ ಕ್ರೀಡಾಂಗಣವನ್ನು ಸಹ ನಿರ್ಮಿಸುತ್ತಿದ್ದಾರೆ. ಇದಕ್ಕಾಗಿ ನಾನು ಅಮ್ರೋಹಾದ ಜನರನ್ನು ತುಂಬಾ ಅಭಿನಂದಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.

ಮುಂಬೈನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ವಿಶ್ವಕಪ್ ಸೆಮಿಫೈನಲ್​ನಲ್ಲಿ ಶಮಿ ಏಳು ವಿಕೆಟ್​ಗಳನ್ನು ಪಡೆದಿದ್ದರು. ಎಡ ಪಾದದ ಗಾಯದಿಂದಾಗಿ ಅವರು ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಿಂದ ಹೊರಗುಳಿದಿದ್ದಾರೆ.

ಅಮ್ರೋಹಾದ ‘ಧೋಲಕ್’ (ಸಂಗೀತ ವಾದ್ಯ) ಅನ್ನೂ ಪ್ರಧಾನಿ ಇದೇ ವೇಳೆ ಶ್ಲಾಘಿಸಿದರು. ಗಂಗಾ ಮಾತೆಯ ದಡದಲ್ಲಿರುವ ಈ ಭೂಮಿ ಭಗವಾನ್ ಶ್ರೀ ಕೃಷ್ಣನ ಹೆಜ್ಜೆಗುರುತುಗಳಿಗೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇದು ರಾಜಾ ಗಜ ಸಿಂಗ್ ಮತ್ತು ಠಾಕೂರ್ ಜೈರಾಮ್ ಸಿಂಗ್ ಅವರಂತಹ ಸಾಹಸಿಗರು ಹುಟ್ಟಿದ ಜನರ ಭೂಮಿ. ನನಗೆ ಧೋಲಕ್ ನೀಡಿದ್ದೀರಿ. ಇದು ಅಮ್ರೋಹಾದ ಮತ್ತೊಂದು ಹೆಗ್ಗುರುತು. ಇಲ್ಲಿನ ಧೋಲಕ್ ನ ಬಡಿತವು ಎಲ್ಲೆಡೆ ಪ್ರತಿಧ್ವನಿಸುತ್ತದೆ. ನಮ್ಮ ಯೋಗಿ ಜಿ ಅವರ ಪ್ರಯತ್ನದಿಂದಾಗಿ, ಬಿಜೆಪಿ ಸರ್ಕಾರವು ಅಮ್ರೋಹಾದ ಧೋಲಕ್​ಗೆ ಜಿಐ (ಜಿಯಾಗ್ರಾಫಿಕಲ್ ಇಂಡಿಕೇಟೆಡ್​ ಒರಿಜಿನ್​) ಟ್ಯಾಗ್ ನೀಡಿದೆ. ಇಡೀ ಜಗತ್ತಿನಲ್ಲಿ ಅದಕ್ಕೆ ಒಂದು ಗುರುತನ್ನು ಕೊಟ್ಟಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ: Narendra Modi : ಮತದಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳಿದ ಮೋದಿ; ಎನ್​ಡಿಎಗೆ ಮತ ನೀಡಿದ್ದಾರೆ ಎಂದ ಪ್ರಧಾನಿ

ಎರಡನೇ ಹಂತದಲ್ಲಿ ಏಪ್ರಿಲ್ 26 ರಂದು ಯುಪಿಯಲ್ಲಿ ಮತದಾನ ನಡೆಯಲಿದ್ದು, ಅಮ್ರೋಹಾ, ಮೀರತ್, ಬಾಗ್ಪತ್, ಗಾಜಿಯಾಬಾದ್, ಗೌತಮಬುದ್ಧ ನಗರ, ಬುಲಂದ್ಶಹರ್ (ಎಸ್ಸಿ), ಅಲಿಗಢ ಮತ್ತು ಮಥುರಾ ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿದೆ.

ಅಮ್ರೋಹಾದಲ್ಲಿ ಬಿಜೆಪಿಯ ಕನ್ವರ್ ಸಿಂಗ್ ತನ್ವರ್ ಮತ್ತು ಕಾಂಗ್ರೆಸ್ ನ ಡ್ಯಾನಿಶ್ ಅಲಿ ನಡುವೆ ಪ್ರಮುಖ ಸ್ಪರ್ಧೆ ಇದೆ. ಬಿಎಸ್ಪಿಯ ಮುಜಾಹಿದ್ ಹುಸೇನ್ ಕೂಡ ಚುನಾವಣಾ ಕಣದಲ್ಲಿದ್ದಾರೆ. ಅಮ್ರೋಹಾದಿಂದ ಒಟ್ಟು 12 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.

Continue Reading

ಕರ್ನಾಟಕ

Operation Hasta: ಮಾಜಿ‌ ಸಚಿವ ಮಾಲೀಕಯ್ಯ ಗುತ್ತೇದಾರ್, ಮಾಜಿ ಶಾಸಕಿ ಶಾರದಾ ಶೆಟ್ಟಿ ಕಾಂಗ್ರೆಸ್‌ ಸೇರ್ಪಡೆ

Operation Hasta: ಅಫಜಲಪುರ ಮಾಜಿ ಶಾಸಕ, ಸಚಿವ ಮಾಲೀಕಯ್ಯ ಗುತ್ತೇದಾರ್‌, ಕುಮಟಾ ಮಾಜಿ ಶಾಸಕಿ ಶಾರದಾ ಶೆಟ್ಟಿ ಹಾಗೂ ಬೆಂಬಲಿಗರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

VISTARANEWS.COM


on

Operation Hasta
Koo

ಬೆಂಗಳೂರು: ಅಫಜಲಪುರ ಮಾಜಿ ಶಾಸಕ, ಸಚಿವ ಮಾಲೀಕಯ್ಯ ಗುತ್ತೇದಾರ್‌, ಕುಮಟಾ ಮಾಜಿ ಶಾಸಕಿ ಶಾರದಾ ಶೆಟ್ಟಿ ಹಾಗೂ ಬೆಂಬಲಿಗರು ಶುಕ್ರವಾರ ಕಾಂಗ್ರೆಸ್‌ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಸಮ್ಮುಖದಲ್ಲಿ ಅವರು ಕಾಂಗ್ರೆಸ್‌ (Operation Hasta) ಸೇರಿದ್ದಾರೆ.

ಮಾಜಿ ಸಚಿವ ಗುತ್ತೇದಾರ್ ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲೇ ಇದ್ದರು. ಬಳಿಕ ಕಲಬುರಗಿ ಜಿಲ್ಲೆಯಲ್ಲಿ ಉಂಟಾದ ರಾಜಕೀಯ ಅಸಮಾಧಾನದಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರು. ಇದೀಗ ಕಾಂಗ್ರೆಸ್‌ಗೆ ಮರಳಿದ್ದಾರೆ. ಹಾಗೆಯೇ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಪಕ್ಷದಿಂದ ದೂರ ಉಳಿದಿದ್ದ ಮಾಜಿ ಶಾಸಕಿ ಶಾರದಾ ಶೆಟ್ಟಿ ಅವರು ಇದೀಗ ಮತ್ತೆ ಕಾಂಗ್ರೆಸ್‌ ಸೇರಿದ್ದಾರೆ.

ಬಿಜೆಪಿ ಬಗ್ಗೆ ಮಾಲೀಕಯ್ಯ ಗುತ್ತೇದಾರ್ ಅಸಮಾಧಾನ ಯಾಕೆ?

ಸಹೋದರ ನಿತಿನ್ ಗುತ್ತೇದಾರ್ ಹಾಗೂ ಮಾಲೀಕಯ್ಯ ಗುತ್ತೇದಾರ್ ನಡುವಿನ ಸಂಬಂಧ ಮೊದಲಿನಿಂದಲೂ ಎಣ್ಣೆ ಶೀಗೇಕಾಯಿ ಆಗಿತ್ತು. ಒಬ್ಬರು ಒಂದು ಪಕ್ಷದಲ್ಲಿದ್ದರೆ ಮತ್ತೊಬ್ಬರು ಆ ಪಕ್ಷವನ್ನು ತೊರೆಯುತ್ತಾರೆ. 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಾಲೀಕಯ್ಯ ಗುತ್ತೇದಾರ್‌ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದರು. ಆಗ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ನಿತಿನ್‌ ಗುತ್ತೇದಾರ್‌ ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದರು. ಇದರಿಂದ ಮಾಲೀಕಯ್ಯ ಗುತ್ತೇದಾರ್‌ ಸೋಲು ಕಾಣಬೇಕಾಯಿತು. ಈಗ ಈಚೆಗೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಿತಿನ್‌ ಗುತ್ತೇದಾರ್‌ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಇದು ಮಾಲೀಕಯ್ಯ ಅವರ ಕಣ್ಣನ್ನು ಕೆಂಪಗಾಗಿಸಿತ್ತು.

ಇದನ್ನೂ ಓದಿ: Lok Sabha Election 2024: ಈ ಬಾರಿ ಕೇಂದ್ರದಲ್ಲೂ ಬಿಜೆಪಿ ಅಧಿಕಾರಕ್ಕೆ ಬರೋದಿಲ್ಲ: ಸಿಎಂ ಸಿದ್ದರಾಮಯ್ಯ ಭವಿಷ್ಯ

ನಿತಿನ್‌ ಬಿಜೆಪಿ ಸೇರ್ಪಡೆ ಸಂಬಂಧ ಮಾಲೀಕಯ್ಯ ಗುತ್ತೇದಾರ್‌ ಅವರು ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದರು. 2018ರ ಚುನಾವಣೆಯಲ್ಲಿ ನಾನು ಬಿಜೆಪಿಯಿಂದ ಗೆಲ್ಲಬೇಕಿತ್ತು. ನಿತಿನ್‌ ಮತ್ತು ಕೆಲವು ಬಿಜೆಪಿ ಮುಖಂಡರು ನನಗೆ ಮೋಸ ಮಾಡಿದರು. 2023ರಲ್ಲಿ ನಿತಿನ್‌ ಸ್ವತಂತ್ರವಾಗಿ ಸ್ಪರ್ಧೆ ಮಾಡಿ ನನ್ನನ್ನು ಸೋಲಿಸಿದ್ದಾನೆ. ಈಗ ಆತನಿಂದ ಕೋಟಿ ಕೋಟಿ ಹಣ ಪಡೆದು ಅವನನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ ಎಂದು ಮಾಲೀಕಯ್ಯ ಗುತ್ತೇದಾರ್‌ ಗಂಭೀರ ಆರೋಪ ಮಾಡಿದ್ದರು. ಇದೀಗ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

Continue Reading

ಪ್ರಮುಖ ಸುದ್ದಿ

Narendra Modi : ಮತದಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳಿದ ಮೋದಿ; ಎನ್​ಡಿಎಗೆ ಮತ ನೀಡಿದ್ದಾರೆ ಎಂದ ಪ್ರಧಾನಿ

Narendra Modi: “ಮೊದಲ ಹಂತ, ಉತ್ತಮ ಪ್ರತಿಕ್ರಿಯೆ! ಇಂದು ಮತ ಚಲಾಯಿಸಿದ ಎಲ್ಲರಿಗೂ ಧನ್ಯವಾದಗಳು. ಇಂದಿನ ಮತದಾನ ಅತ್ಯುತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಭಾರತದಾದ್ಯಂತ ಜನರು ದಾಖಲೆ ಸಂಖ್ಯೆಯಲ್ಲಿ ಎನ್​ಡಿಗೆ ಮತ ಚಲಾಯಿಸುತ್ತಿದ್ದಾರೆ ಎಂಬುದು ಸ್ಪಷ್ಟ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭಾ ಚುನಾವಣೆಯ (Lok Sabha Election) ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದ ಬಳಿಕ ಎಕ್ಸ್​ ಪೋಸ್ಟ್​​ ಮಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಬಿಜೆಪಿಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದು ಹೇಳಿಕೊಂಡಿದ್ದಾರೆ. ಮತದಾನ ಪ್ರಮಾಣದಲ್ಲಿ ಹೆಚ್ಚಳ ಕಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಭಾರತದ ಜನರು ದಾಖಲೆ ಸಂಖ್ಯೆಯಲ್ಲಿ ಎನ್​ಡಿಗೆ ಮತ ಚಲಾಯಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

“ಮೊದಲ ಹಂತ, ಉತ್ತಮ ಪ್ರತಿಕ್ರಿಯೆ! ಇಂದು ಮತ ಚಲಾಯಿಸಿದ ಎಲ್ಲರಿಗೂ ಧನ್ಯವಾದಗಳು. ಇಂದಿನ ಮತದಾನ ಅತ್ಯುತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಭಾರತದಾದ್ಯಂತ ಜನರು ದಾಖಲೆ ಸಂಖ್ಯೆಯಲ್ಲಿ ಎನ್​ಡಿಗೆ ಮತ ಚಲಾಯಿಸುತ್ತಿದ್ದಾರೆ ಎಂಬುದು ಸ್ಪಷ್ಟ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಏಳು ಹಂತಗಳ ಚುನಾವಣೆಯಲ್ಲಿ ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಲ್ಲಿ ಮತದಾನ ನಡೆಯಿತು. ಚುನಾವಣಾ ಆಯೋಗ ಮತದಾನ “ಹೆಚ್ಚಿನ ಪ್ರಮಾಣದಲ್ಲಿ ಆಗಿದೆ” ಎಂದು ಬಣ್ಣಿಸಿದೆ. ಮತದಾನವು “ಹೆಚ್ಚಾಗಿ ಶಾಂತಿಯುತವಾಗಿ” ಉಳಿದಿದೆ ಎಂದು ಹೇಳಿದೆ.

2019 ರ ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಶೇಕಡಾ 69.43 ರಷ್ಟು ಮತದಾನ ದಾಖಲಾಗಿತ್ತು. ಕೆಲವು ಕ್ಷೇತ್ರಗಳು ಆಗ ವಿಭಿನ್ನವಾಗಿದ್ದವು ಮತ್ತು ಮತದಾನಕ್ಕೆ ಹೋದ ಒಟ್ಟು ಸ್ಥಾನಗಳ ಸಂಖ್ಯೆ 91 ಆಗಿತ್ತು.

ಇದನ್ನೂ ಓದಿ: lok Sabha Election : ಮೊದಲ ಹಂತದಲ್ಲಿ ಶೇ.60.3ರಷ್ಟು ಮತದಾನ

ಪಶ್ಚಿಮ ಬಂಗಾಳದ ಕೆಲವು ಪ್ರದೇಶಗಳು ಮತ್ತು ಜನಾಂಗೀಯ ಬಿಕ್ಕಟ್ಟು ಪೀಡಿತ ಮಣಿಪುರದಿಂದ ಹಿಂಸಾಚಾರ ವರದಿಯಾಗಿದೆ. ಬಿಜೆಪಿ ಕಾರ್ಯಕರ್ತರು ಮತ್ತು ಸಶಸ್ತ್ರ ಗುಂಪು ಜನರು ಮತ ಚಲಾಯಿಸಲು ತಮ್ಮ ಮನೆಗಳಿಂದ ಹೊರಬರದಂತೆ ತಡೆದಿದ್ದಾರೆ ಎಂದು ಇನ್ನರ್​​ ಮಣಿಪುರದ ಕಾಂಗ್ರೆಸ್ ಅಭ್ಯರ್ಥಿ ಎ ಬಿಮೋಲ್ ಅಕೋಯಿಜಾಮ್ ಆರೋಪಿಸಿದ್ದಾರೆ.

ಮಣಿಪುರದ ಒಳಭಾಗದ ಮತಗಟ್ಟೆಗಳಲ್ಲಿ ಜನರು ವಿದ್ಯುನ್ಮಾನ ಮತದಾನ ಯಂತ್ರಗಳನ್ನು (ಇವಿಎಂ) ಒಡೆದ ಕನಿಷ್ಠ ನಾಲ್ಕು ಘಟನೆಗಳು ವರದಿಯಾಗಿವೆ. ಸಶಸ್ತ್ರ ಗುಂಪಿನ ಪ್ರಾಕ್ಸಿ ಮತದಾನದ ಬಗ್ಗೆ ಜನರು ಅಸಮಾಧಾನಗೊಂಡರು.

ಉತ್ತರಾಖಂಡ, ಅರುಣಾಚಲ ಪ್ರದೇಶ, ಸಿಕ್ಕಿಂ, ಮೇಘಾಲಯ, ನಾಗಾಲ್ಯಾಂಡ್, ಮಿಜೋರಾಂ, ತಮಿಳುನಾಡು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ಪುದುಚೆರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪಗಳು ಇಂದು ಒಂದೇ ಹಂತದ ಚುನಾವಣೆಯಲ್ಲಿ ತಮ್ಮ ಮತದಾನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿವೆ.

ಛತ್ತೀಸ್ ಗಢದ ಬಸ್ತಾರ್ ನ 56 ಹಳ್ಳಿಗಳ ಜನರು ತಮ್ಮ ಸ್ವಂತ ಹಳ್ಳಿಗಳಲ್ಲಿ ಸ್ಥಾಪಿಸಲಾದ ಮತಗಟ್ಟೆಗಳಲ್ಲಿ ಮೊದಲ ಬಾರಿಗೆ ಮತ ಚಲಾಯಿಸಿದ್ದಾರೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಬುಡಕಟ್ಟು ಸಮುದಾಯಗಳಿಗೆ ಸೇರಿದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಹೊರಬಂದಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಗ್ರೇಟ್ ನಿಕೋಬಾರ್ ನ ಶೋಂಪೆನ್ ಬುಡಕಟ್ಟು ಜನಾಂಗದವರು ಮೊದಲ ಬಾರಿಗೆ ಮತ ಚಲಾಯಿಸುವ ಮೂಲಕ ಇತಿಹಾಸ ನಿರ್ಮಿಸಿದರು.

ದೇಶದ ಹೆಚ್ಚಿನ ಭಾಗಗಳಲ್ಲಿ ಮತದಾರರು ಬಿಸಿಲಿನ ತಾಪವನ್ನು ಧೈರ್ಯದಿಂದ ಎದುರಿಸಿದರೆ, ಇತರ ಭಾಗಗಳಲ್ಲಿ ಸುರಿಯುತ್ತಿರುವ ಮಳೆಯಲ್ಲಿ ತಾಳ್ಮೆಯಿಂದ ಕಾಯುತ್ತಿದ್ದರು.

Continue Reading

ರಾಜಕೀಯ

lok Sabha Election : ಮೊದಲ ಹಂತದಲ್ಲಿ ಶೇ.60.3ರಷ್ಟು ಮತದಾನ

lok Sabha Election: ಏಳು ಹಂತಗಳ ಚುನಾವಣೆಯ ಮೊದಲ ಮತ್ತು ಅತಿದೊಡ್ಡ ಹಂತದ ಮತದಾನವು ಎಲ್ಲಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಯಿತು. ಹೆಚ್ಚಿನ ಸ್ಥಾನಗಳಲ್ಲಿ ಸಂಜೆ 6 ಗಂಟೆಗೆ ಕೊನೆಗೊಂಡಿತು. ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನಲ್ಲಿ ಏಕಕಾಲದಲ್ಲಿ ವಿಧಾನಸಭಾ ಚುನಾವಣೆಗಳು ನಡೆದಿದೆ.

VISTARANEWS.COM


on

Lok sabha Election
Koo

ಹೊಸದಿಲ್ಲಿ: ಪಶ್ಚಿಮ ಬಂಗಾಳ ಕೆಲವೆಡೆ ಹಿಂಸಾಚಾರ ನಡೆದಿರುವುದು ಸೇರಿದಂತೆ ಹಲವು ಘಟನೆಗಳ ಮಧ್ಯೆ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳನ್ನು ಒಳಗೊಂಡ ಲೋಕಸಭಾ ಚುನಾವಣೆಯ (lok Sabha Election) ಮೊದಲ ಹಂತದ ಮತದಾನ ಏಪ್ರಿಲ್​ 19ಕ್ಕೆ ಪೂರ್ಣಗೊಂಡಿತು. ಸಂಜೆ 5 ಗಂಟೆಯವರೆಗೆ ಸುಮಾರು ಶೇ.60ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಇದು ಅಂತಿಮ ಅಂಕಿ ಅಂಶವಲ್ಲ ಎಂಬುದಾಗಿಯೂ ಸ್ಪಷ್ಟಪಡಿಸಿದೆ. ಮತದಾನವು ಭಾಗಶಃ ಸುಗಮವಾಗಿ ಮತ್ತು ಶಾಂತಿಯುತವಾಗಿ ನಡೆಯಿತು ಎಂದು ಚುನಾವಣಾ ಆಯೋಗದ ವಕ್ತಾರರು ತಿಳಿಸಿದ್ದಾರೆ.

ಏಳು ಹಂತಗಳ ಚುನಾವಣೆಯ ಮೊದಲ ಮತ್ತು ಅತಿದೊಡ್ಡ ಹಂತದ ಮತದಾನ ಪ್ರಕ್ರಿಯೆ ಎಲ್ಲಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಯಿತು. ಹೆಚ್ಚಿನ ಸ್ಥಾನಗಳಲ್ಲಿ ಸಂಜೆ 6 ಗಂಟೆಗೆ ಕೊನೆಗೊಂಡಿತು. ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನಲ್ಲಿ ಏಕಕಾಲದಲ್ಲಿ ವಿಧಾನಸಭಾ ಚುನಾವಣೆಗಳು ನಡೆದಿದೆ.

ತಮಿಳುನಾಡು (39), ಉತ್ತರಾಖಂಡ (5), ಅರುಣಾಚಲ ಪ್ರದೇಶ (2), ಮೇಘಾಲಯ (2), ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು (1), ಮಿಜೋರಾಂ (1), ನಾಗಾಲ್ಯಾಂಡ್ (1), ಪುದುಚೇರಿ (1), ಸಿಕ್ಕಿಂ (1) ಮತ್ತು ಲಕ್ಷದ್ವೀಪ (1) ಸ್ಥಾನಗಳಿಗೆ ಮತದಾನ ನಡೆದಿದೆ.

ರಾಜಸ್ಥಾನದ 12, ಉತ್ತರ ಪ್ರದೇಶದ 8, ಮಧ್ಯಪ್ರದೇಶದ 6, ಅಸ್ಸಾಂ ಮತ್ತು ಮಹಾರಾಷ್ಟ್ರದ ತಲಾ 5, ಬಿಹಾರದ 4, ಪಶ್ಚಿಮ ಬಂಗಾಳದ 3, ಮಣಿಪುರದ 2, ತ್ರಿಪುರಾ, ಜಮ್ಮು ಮತ್ತು ಕಾಶ್ಮೀರ ಮತ್ತು ಛತ್ತೀಸ್ ಗಢದ ತಲಾ 1 ಸ್ಥಾನಗಳಿಗೆ ಇಂದು ಮತದಾನ ನಡೆಯಿತು.

ಅರುಣಾಚಲ ಪ್ರದೇಶ (60 ಸ್ಥಾನಗಳು) ಮತ್ತು ಸಿಕ್ಕಿಂ (32 ಸ್ಥಾನಗಳು) ವಿಧಾನಸಭಾ ಚುನಾವಣೆಗಳು ಇದೇ ವೇಳೆ ನಡೆದವು.

ಪ್ರಧಾನಿ ಮೋದಿ ನೇತೃತ್ವದ ಎನ್​ಡಿಎ ಸತತ ಮೂರನೇ ಅವಧಿಗೆ ಬಲವಾದ ಬಹುಮತವನ್ನು ಬಯಸುತ್ತಿದ್ದರೆ, ಪ್ರತಿಪಕ್ಷ ಬಿಜೆಪಿ ಬಣದ ಘಟಕಗಳು 2014 ಮತ್ತು 2019 ರ ಚುನಾವಣೆಗಳಲ್ಲಿ ಹಿನ್ನಡೆಯನ್ನು ಎದುರಿಸಿದ ನಂತರ ಪುನರುಜ್ಜೀವನದ ನಿರೀಕ್ಷೆಯಲ್ಲಿವೆ.

ಮೊದಲ ಬಾರಿಗೆ ಮತ ಚಲಾಯಿಸಿದವರು, ಸಾಂಪ್ರದಾಯಿಕ ಉಡುಗೆಯಲ್ಲಿ ಬಂದ ಅನೇಕ ನವವಿವಾಹಿತ ದಂಪತಿಗಳು, ಅಂಗವಿಕಲರು ಮತ್ತು ಕೆಲವು ವೃದ್ಧರು ಸ್ಟ್ರೆಚರ್ ಮತ್ತು ಗಾಲಿಕುರ್ಚಿಗಳ ಮೂಲಕ ಬಂದವರು ಮೊದಲ ಹಂತದ ಚುನಾವಣೆಯಲ್ಲೂ ಕಂಡು ಬಂದರು.

ಇದನ್ನೂ ಓದಿ: Lok Sabha Election : ಕಾಂಗ್ರೆಸ್​ ಪರ ಶಾರುಖ್​ ಖಾನ್​ ಪ್ರಚಾರ; ಬಿಜೆಪಿಯಿಂದ ಆಕ್ಷೇಪ!; ವಿಡಿಯೊ ಇದೆ

ಇವಿಎಂ ದೋಷ

ತಮಿಳುನಾಡು, ಅರುಣಾಚಲ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಅಸ್ಸಾಂನ ಕೆಲವು ಬೂತ್ ಗಳಲ್ಲಿ ಸಣ್ಣ ಪ್ರಮಾಣದ ಇವಿಎಂ ದೋಷಗಳು ವರದಿಯಾಗಿವೆ. ಪಶ್ಚಿಮ ಬಂಗಾಳದಲ್ಲಿ ಸಂಜೆ 5 ಗಂಟೆಯವರೆಗೆ ಶೇಕಡಾ 77.57, ಅಸ್ಸಾಂನಲ್ಲಿ ಶೇಕಡಾ 70.77 ಮತ್ತು ಮೇಘಾಲಯದಲ್ಲಿ ಶೇಕಡಾ 69.91 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಹಿಂಸಾಸಾರ

ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಕ್ಷೇತ್ರದಲ್ಲಿ ಹಿಂಸಾಚಾರ ನಡೆದಿದೆ. ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಘರ್ಷಣೆ ನಡೆಸಿದ್ದು, ಮತದಾನ ಹಿಂಸಾಚಾರ, ಮತದಾರರ ಬೆದರಿಕೆ ಮತ್ತು ಚುನಾವಣಾ ಏಜೆಂಟರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಕ್ರಮವಾಗಿ 80 ಮತ್ತು 39 ದೂರುಗಳನ್ನು ದಾಖಲಾಗಿವೆ. ಸಂಘರ್ಷ ಪೀಡಿತ ಮಣಿಪುರದಲ್ಲಿ ಸಂಜೆ 5 ಗಂಟೆಯವರೆಗೆ ಶೇ.67.46ರಷ್ಟು ಮತದಾನವಾಗಿದೆ.

ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಥೊಂಗ್ಜು ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯರು ಮತ್ತು ಅಪರಿಚಿತ ವ್ಯಕ್ತಿಗಳ ನಡುವೆ ವಾಗ್ವಾದ ನಡೆದಿದೆ. ಛತ್ತೀಸ್​ಗಢದ ನಕ್ಸಲ್ ಪೀಡಿತ ಬಸ್ತಾರ್ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 63.41 ರಷ್ಟು ಮತದಾರರು ಮತ ಚಲಾಯಿಸಿದ್ದಾರೆ. ಅಲ್ಲಿ ಗ್ರೆನೇಡ್ ಆಕಸ್ಮಿಕವಾಗಿ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಸಿಆರ್​ಪಿಎಫ್​ ಜವಾನ ಗಾಯಗೊಂಡಿದ್ದಾರೆ. ಮತ್ತೊಂದು ಘಟನೆಯಲ್ಲಿ ಐಇಡಿ ಸ್ಫೋಟ ಸಂಭವಿಸಿದೆ.

ತಮಿಳುನಾಡಿನಲ್ಲಿ 63.20 ಶೇಕಡಾ ಮತದಾನ

ತಮಿಳುನಾಡಿನ 39 ವಿಧಾನಸಭಾ ಕ್ಷೇತ್ರಗಳಲ್ಲಿ ಶೇ.63.20ರಷ್ಟು ಮತದಾನವಾಗಿದೆ. ಇವಿಎಂ ತಾಂತ್ರಿಕ ದೋಷಗಳಿಂದಾಗಿ ತಾಂಬರಂ ಬಳಿಯ ಮತಗಟ್ಟೆಯಂತಹ ರಾಜ್ಯದ ಕೆಲವು ಮತಗಟ್ಟೆಗಳಲ್ಲಿ ಮತದಾನವು ಒಂದು ಗಂಟೆ ಮತದಾನ ವಿಳಂಬವಾಯಿತು.

ಅರುಣಾಚಲ ಪ್ರದೇಶದ ಒಟ್ಟು 8,92,694 ಮತದಾರರ ಪೈಕಿ ಶೇ.60ರಷ್ಟು ಮತದಾನವಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ಬೆಳಗ್ಗೆ ಸಮಯದಲ್ಲಿ ಮತದಾನವು ನಿಧಾನವಾಗಿದ್ದರೂ, ಹವಾಮಾನ ಪರಿಸ್ಥಿತಿಗಳು ಸುಧಾರಿಸುವುದರೊಂದಿಗೆ ವೇಗ ಪಡೆದುಕೊಂಡಿತು. ರಾಜ್ಯದ ಕೆಲವು ಮತಗಟ್ಟೆಗಳಲ್ಲಿ, ವಿದ್ಯುನ್ಮಾನ ಮತದಾನ ಯಂತ್ರಗಳಲ್ಲಿ (ಇವಿಎಂ) ತಾಂತ್ರಿಕ ದೋಷಗಳು ಕಾಣಿಸಿಕೊಂಡಿದ್ದರಿಂದ ಮತದಾನ ವಿಳಂಬವಾಯಿತು ಎಂದು ಮುಖ್ಯ ಚುನಾವಣಾ ಅಧಿಕಾರಿ ಪವನ್ ಕುಮಾರ್ ಸೈನ್ ತಿಳಿಸಿದ್ದಾರೆ.

ಪೂರ್ವ ಕಾಮೆಂಗ್ ಜಿಲ್ಲೆಯ ಬಮೆಂಗ್ ಕ್ಷೇತ್ರದ ಮತದಾನ ಕೇಂದ್ರದ ಬಳಿ ಇಬ್ಬರು ಅಭ್ಯರ್ಥಿಗಳ ಬೆಂಬಲಿಗರು ಘರ್ಷಣೆ ನಡೆಸಿದ್ದಾರೆ.

ಇವಿಎಂ ಯಂತ್ರಕ್ಕೆ ಹಾನಿ

ಪೂರ್ವ ಕಾಮೆಂಗ್, ಕುರುಂಗ್ ಕುಮೆ ಮತ್ತು ಅಪ್ಪರ್ ಸುಬನ್ಸಿರಿ ಜಿಲ್ಲೆಗಳ ಮೂರು ಮತಗಟ್ಟೆಗಳಲ್ಲಿ ಇವಿಎಂ ಯಂತ್ರಗಳಿಗೆ ಹಾನಿ ಮಾಡಿದ ಘಟನೆಗಳು ವರದಿಯಾಗಿವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಶೋಂಪೆನ್​ ಬುಡಕಟ್ಟಿನ ಸದಸ್ಯರೊಬ್ಬರಿಂದ ಮತದಾನ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಶೇ.56.87ರಷ್ಟು ಮತದಾನವಾಗಿದೆ. ಕೆಲವು ಸಣ್ಣ ಇವಿಎಂ ದೋಷಗಳು ಕಂಡು ಬಂದವು ಅಧಿಕಾರಿಗಳು ತಿಳಿಸಿದ್ದಾರೆ. ಈ ಕೇಂದ್ರಾಡಳಿತ ಪ್ರದೇಶದಲ್ಲಿ ಮೊದಲ ಬಾರಿಗೆ, ಗ್ರೇಟ್ ನಿಕೋಬಾರ್ ದ್ವೀಪಗಳ ಅಪಾಯಕಾರಿ ಬುಡಕಟ್ಟು ಗುಂಪಾದ ಶೋಂಪೆನ್ ಬುಡಕಟ್ಟಿನ ಏಳು ಸದಸ್ಯರಲ್ಲಿ ಒಬ್ಬರು ಲೋಕಸಭಾ ಸ್ಥಾನಕ್ಕೆ ಮತ ಚಲಾಯಿಸಿದ್ದಾರೆ.

ಅಸ್ಸಾಂನ ಲಖಿಂಪುರದ ಬಿಹ್ಪುರಿಯಾದ ಮೂರು ಮತಗಟ್ಟೆಗಳಲ್ಲಿ, ಹೊಜೈ, ಕಾಲಿಯಾಬೋರ್ ಮತ್ತು ಬೊಕಾಖಾಟ್​​ನಲ್ಲಿ ತಲಾ ಒಂದು ಮತ್ತು ದಿಬ್ರುಗಢದ ನಹರ್ಕಟಿಯಾದಲ್ಲಿ ಒಂದು ಮತಗಟ್ಟೆಯಲ್ಲಿ ಇವಿಎಂ ಅಸಮರ್ಪಕವಾಗಿ ಕಾರ್ಯನಿರ್ವಹಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೈಜ ಮತದಾನ ಪ್ರಾರಂಭವಾಗುವ 90 ನಿಮಿಷಗಳ ಮೊದಲು ಪ್ರಾರಂಭವಾದ ಅಣಕು ಮತದಾನದ ಸಮಯದಲ್ಲಿ ಹೆಚ್ಚಿನ ದೋಷಗಳು ಕಂಡುಬಂದಿವೆ. ಆ ದೋಷಗಳನ್ನು ತಕ್ಷಣ ಸರಿಪಡಿಸಲಾಯಿತು. ಆ ಬೂತ್​ಗಳಲ್ಲಿ ಮತದಾನ ಸ್ವಲ್ಪ ತಡವಾಗಿ ಪ್ರಾರಂಭವಾಯಿತು ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಮುಳುಗಿದ ವಾಹನ

ಅಸ್ಸಾಂನ ಲಖಿಂಪುರ ಕ್ಷೇತ್ರದಲ್ಲಿ ನೀರಿನ ಮಟ್ಟ ಇದ್ದಕ್ಕಿದ್ದಂತೆ ಏರಿಕೆಯಾದ ಕಾರಣ ಇವಿಎಂ ಸಾಗಿಸುತ್ತಿದ್ದ ವಾಹನವು ಭಾಗಶಃ ನದಿಗೆ ಮುಳುಗಿದೆ. ಯಾಂತ್ರೀಕೃತ ದೋಣಿಯೂ ಕೊಚ್ಚಿಹೋಗಿದೆ. ವಾಹನಕ್ಕೆ ನೀರು ನುಗ್ಗುವ ಮೊದಲು ವಾಹನದ ಚಾಲಕ ಮತ್ತು ಮತಗಟ್ಟೆ ಅಧಿಕಾರಿ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ.

ಬಿಹಾರದಲ್ಲಿ ಕಡಿಮೆ ಮತದಾನ

ಬಿಹಾರದ ನಾಲ್ಕು ಲೋಕಸಭಾ ಕ್ಷೇತ್ರಗಳಲ್ಲಿ 75 ಲಕ್ಷ ಮತದಾರರ ಪೈಕಿ ಶೇ.46.32ರಷ್ಟು ಮಂದಿ ಸಂಜೆ 5 ಗಂಟೆಯವರೆಗೆ ತಮ್ಮ ಹಕ್ಕು ಚಲಾಯಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಉಧಂಪುರ ಸಂಸದೀಯ ಕ್ಷೇತ್ರದಲ್ಲಿ ಮತದಾನದ ಮೊದಲ ಆರು ಗಂಟೆಗಳಲ್ಲಿ ಶೇಕಡಾ 65.08 ರಷ್ಟು ಮತದಾರರು ತಮ್ಮ ಆಯ್ಕೆಯನ್ನು ಚಲಾಯಿಸಿದ್ದಾರೆ.

ರಾಜಸ್ಥಾನದಲ್ಲಿ ಸಂಜೆ 5 ಗಂಟೆಯವರೆಗೆ ಶೇ.50.27 ರಷ್ಟು ಮತದಾನವಾಗಿದ್ದರೆ, ಉತ್ತರಾಖಂಡದಲ್ಲಿ ಶೇ.53.56 ರಷ್ಟು ಮತದಾನವಾಗಿದೆ.

ಮಹಾರಾಷ್ಟ್ರ ವರದಿ

ಮಹಾರಾಷ್ಟ್ರದಲ್ಲಿ ಸಂಜೆ 5 ಗಂಟೆಯವರೆಗೆ ಶೇ.54.85 ರಷ್ಟು ಮತದಾನವಾಗಿದ್ದರೆ, ಮಧ್ಯಪ್ರದೇಶದ ಆರು ಲೋಕಸಭಾ ಕ್ಷೇತ್ರಗಳಲ್ಲಿ ಶೇ.63.50 ರಷ್ಟು ಮತದಾನವಾಗಿದೆ. ಉತ್ತರ ಪ್ರದೇಶದಲ್ಲಿ ಶೇ.57.54, ಮಿಜೋರಾಂನಲ್ಲಿ ಶೇ.56.68, ನಾಗಾಲ್ಯಾಂಡ್ನಲ್ಲಿ ಶೇ.50.41, ಪುದುಚೇರಿಯಲ್ಲಿ ಶೇ.72.8 ಮತ್ತು ಸಿಕ್ಕಿಂನಲ್ಲಿ ಶೇ.67.95ರಷ್ಟು ಮತದಾನವಾಗಿದೆ.

ಮೊದಲ ಹಂತದಲ್ಲಿ 16.63 ಕೋಟಿ ಜನರು ಮತ ಚಲಾಯಿಸಲು ಅರ್ಹರಾಗಿದ್ದರು.. ಮೊದಲ ಹಂತದಲ್ಲಿ 35.67 ಲಕ್ಷ ಮೊದಲ ಬಾರಿಗೆ ಮತದಾರರು, 20-29 ವರ್ಷ ವಯಸ್ಸಿನ 3.51 ಕೋಟಿ ಯುವ ಮತದಾರರು ಇದ್ದರು. ಜೂನ್ 1 ರಂದು ಮುಕ್ತಾಯಗೊಳ್ಳಲಿರುವ ಚುನಾವಣೆಯ ಮತ ಎಣಿಕೆ ಜೂನ್ 4 ರಂದು ನಡೆಯಲಿದೆ.

ಕಣದಲ್ಲಿದ್ದ ಪ್ರಮುಖ ಸ್ಪರ್ಧಿಗಳು

ಮೊದಲ ಹಂತದಲ್ಲಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಮತ್ತು ಸರ್ಬಾನಂದ ಸೋನೊವಾಲ್, ಕಾಂಗ್ರೆಸ್​ನ ಗೌರವ್ ಗೊಗೊಯ್ ಮತ್ತು ಡಿಎಂಕೆಯ ಕನಿಮೋಳಿ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.

Continue Reading
Advertisement
ಕರ್ನಾಟಕ4 hours ago

Water Crisis: ಬೆಂಗಳೂರಿನ 110 ಹಳ್ಳಿಗಳಿಗೆ ಗುಡ್ ನ್ಯೂಸ್ ಕೊಟ್ಟ ಜಲಮಂಡಳಿ; ಶೀಘ್ರದಲ್ಲೇ ಹೆಸರಘಟ್ಟ ಕೆರೆಯಿಂದ ನೀರು!

Neha Hiremttt
ಪ್ರಮುಖ ಸುದ್ದಿ4 hours ago

ವಿಸ್ತಾರ ಸಂಪಾದಕೀಯ: ನೇಹಾ ಹಿರೇಮಠಗೆ ನ್ಯಾಯ ಸಿಗಲಿ, ಆರೋಪಿಗೆ ಗಲ್ಲು ಶಿಕ್ಷೆಯಾಗಲಿ

Narendra Modi
ದೇಶ4 hours ago

Narendra Modi : ವಿಶ್ವವೇ ನೋಡಿದೆ.. ಯುಪಿ ರ್ಯಾಲಿಯಲ್ಲಿ ಶಮಿಯನ್ನು ಹೊಗಳಿದ ಮೋದಿ

IPL 2024
ಕ್ರೀಡೆ5 hours ago

IPL 2024 : ಚೆನ್ನೈ ವಿರುದ್ಧ ಲಕ್ನೊ ತಂಡಕ್ಕೆ8 ವಿಕೆಟ್ ಭರ್ಜರಿ ಗೆಲುವು

Operation Hasta
ಕರ್ನಾಟಕ5 hours ago

Operation Hasta: ಮಾಜಿ‌ ಸಚಿವ ಮಾಲೀಕಯ್ಯ ಗುತ್ತೇದಾರ್, ಮಾಜಿ ಶಾಸಕಿ ಶಾರದಾ ಶೆಟ್ಟಿ ಕಾಂಗ್ರೆಸ್‌ ಸೇರ್ಪಡೆ

Ballari Lok Sabha constituency Congress candidate e Tukaram Election campaign
ಬಳ್ಳಾರಿ5 hours ago

Lok Sabha Election 2024: ಬಡವರ ಬಾಳು ಬಂಗಾರ ಮಾಡಿದ್ದು ಕಾಂಗ್ರೆಸ್‌: ಈ. ತುಕಾರಾಂ

Lok Sabha Election 2024
Lok Sabha Election 20245 hours ago

Lok Sabha Election 2024: 1 ವೋಟಿಗಾಗಿ ದಟ್ಟ ಕಾಡಿನಲ್ಲಿ 18 ಕಿ.ಮೀ. ನಡೆದ ಚುನಾವಣಾ ಸಿಬ್ಬಂದಿ

Narendra Modi
ಪ್ರಮುಖ ಸುದ್ದಿ5 hours ago

Narendra Modi : ಮತದಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳಿದ ಮೋದಿ; ಎನ್​ಡಿಎಗೆ ಮತ ನೀಡಿದ್ದಾರೆ ಎಂದ ಪ್ರಧಾನಿ

Lok sabha Election
ರಾಜಕೀಯ5 hours ago

lok Sabha Election : ಮೊದಲ ಹಂತದಲ್ಲಿ ಶೇ.60.3ರಷ್ಟು ಮತದಾನ

Actor Darshan
ಕರ್ನಾಟಕ6 hours ago

Actor Darshan: ನಟ ದರ್ಶನ್‌ ಇದ್ದ ಪ್ರಚಾರ ವಾಹನಕ್ಕೆ ವಿದ್ಯುತ್‌ ಸ್ಪರ್ಶ; ತಪ್ಪಿದ ಭಾರೀ ಅನಾಹುತ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ13 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ23 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌