R Ashok : ಡಿ.ವಿ ಸದಾನಂದ ಗೌಡ್ರು ಎಲ್ಲೂ ಹೋಗಲ್ಲ ಎಂದ ಆರ್‌ ಅಶೋಕ್‌ - Vistara News

ರಾಜಕೀಯ

R Ashok : ಡಿ.ವಿ ಸದಾನಂದ ಗೌಡ್ರು ಎಲ್ಲೂ ಹೋಗಲ್ಲ ಎಂದ ಆರ್‌ ಅಶೋಕ್‌

R Ashok : ಡಿ.ವಿ. ಸದಾನಂದ ಗೌಡರನ್ನು ಚುನಾವಣೆಗೆ ನಿಲ್ಲಿ ಎಂದಿದ್ದು ನಾವೇ. ಟಿಕೆಟ್‌ ತಪ್ಪಿದ್ದರಿಂದ ಅವರಿಗೆ ಬೇಸರವಾಗಿದೆ. ಹಾಗಂತ ಅವರು ಎಲ್ಲೂ ಹೋಗಲ್ಲ ಎಂದಿದ್ದಾರೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌.

VISTARANEWS.COM


on

R Ashok DV Sadananda Gowda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ (Bangalore North Constituency) ಬಿಜೆಪಿ ಟಿಕೆಟ್‌ ವಂಚಿತರಾಗಿರುವ ಹಾಲಿ ಸಂಸದ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ (DV Sadananda Gowda) ಅವರು ಪಕ್ಷ ಬಿಟ್ಟು ಕಾಂಗ್ರೆಸ್‌ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿಗಳನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ (R Ashok) ಅವರು ತಳ್ಳಿ ಹಾಕಿದ್ದಾರೆ. ಡಿ.ವಿ. ಸದಾನಂದ ಗೌಡರು ಎಲ್ಲೂ ಹೋಗಲ್ಲ (DV Sadananda Gowda will not go anywhere) ಎಂದು ಹೇಳಿದರು.

ಲೋಕಸಭಾ ಚುನಾವಣೆಯ (Lok Sabha Election 2024) ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಅಂತಿಮಗೊಳಿಸುವ ಕುರಿತು ಚರ್ಚೆಗಾಗಿ ದಿಲ್ಲಿಗೆ ಆಗಮಿಸಿರುವ ಆರ್‌. ಅಶೋಕ್‌ ಅವರು ರಾಜ್ಯದಲ್ಲಿ ಅತೃಪ್ತಿ ವ್ಯಕ್ತಪಡಿಸಿರುವ ಬಿಜೆಪಿ ನಾಯಕರು, ಅವರ ಮುಂದಿನ ಹೆಜ್ಜೆಗಳು, ಸಮಾಧಾನ ಪಡಿಸಬೇಕಾದ ಅವಶ್ಯಕತೆ ಬಗ್ಗೆ ಮಾತನಾಡಿದ್ದಾರೆ. ಕೇಂದ್ರದ ನಾಯಕರು ಬಾಕಿ ಉಳಿದ ಕ್ಷೇತ್ರಗಳ ಬಗ್ಗೆ ಚರ್ಚಿಸಲು ಕರೆದಿದ್ದರು. ಶೇಕಡಾ 80ರಷ್ಟು ಸ್ಥಾನ ಘೋಷಣೆಯಾಗಿದೆ. ಉಳಿದ ಕ್ಷೇತ್ರಗಳ ಚರ್ಚೆಯಾಗಿದೆ. ಒಂದೇರಡು ದಿನದಲ್ಲಿ ಉಳಿದ ಅಭ್ಯರ್ಥಿ ಘೋಷಣೆ ಮಾಡಲಾಗುವುದು ಎಂದು ಅವರು ಹೇಳಿದರು.

ಡಿ.ವಿ. ಸದಾನಂದ ಗೌಡರು ಈ ಬಾರಿ ಕಣಕ್ಕೆ ಇಳಿಯುವುದಿಲ್ಲ ಎಂದು ಹೇಳಿದ್ದರು. ಆದರೆ, ಅವರಿಗೆ ಒಳ್ಳೆಯದಾಗಲಿ ಎಂಬ ಕಾರಣಕ್ಕೆ ನಾವು ಸ್ಪರ್ಧೆಗೆ ಮನವಿ ಮಾಡಿದ್ದೆವು. ಅವರ ಒಳ್ಳೆಯದಕ್ಕೇ ನಾವು ಸಲಹೆ ಕೊಟ್ಟಿದ್ದೆವು. ಅವರೂ ಒಪ್ಪಿಕೊಂಡಿದ್ದರು. ಅವರು ಟಿಕೆಟ್‌ ನಿರೀಕ್ಷೆಯಲ್ಲಿದ್ದರು. ಆದರೆ, ಹೈಕಮಾಂಡ್‌ ಗೆಲುವಿನ ಮಾನದಂಡದಲ್ಲಿ ಟಿಕೆಟ್‌ ನೀಡಿದೆ. ಅದರಿಂದ ಸದಾನಂದ ಗೌಡರಿಗೆ ನೋವಾಗಿದೆ ಎಂದು ವಿವರ ನೀಡಿದ್ದಾರೆ ಆರ್‌. ಅಶೋಕ್‌.

ನಾನು ಸದಾನಂದ ಗೌಡರನ್ನು ಭೇಟಿಯಾಗಿದ್ದೇನೆ. ಅವರು ಯಾವ ಕಾರಣಕ್ಕೂ ಅವರು ದುಡುಕಿನ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ನಮ್ಮ ಹಿರಿಯ, ಹಳೆಯ ನಾಯಕರು ಅಷ್ಟು ಸುಲಭದಲ್ಲಿ ದುಡುಕುವುದಿಲ್ಲ. ಕಾದು ನೋಡೋಣ ಅವಕಾಶವಿದೆ. ಕೇಂದ್ರ ನಾಯಕರು ತೀರ್ಮಾನ ಮಾಡ್ತಾರೆ ಎಂದು ಹೇಳಿದ್ದೇನೆ ಎಂದು ಆರ್‌. ಅಶೋಕ್‌ ಹೇಳಿದರು.

ಇದನ್ನೂ ಓದಿ : DV Sadananda Gowda : ಡಿವಿಎಸ್‌ ಕಾಂಗ್ರೆಸ್‌ ಸೇರ್ಪಡೆಗೆ ಒಕ್ಕಲಿಗರ ಸಂಘ ಬೆಂಬಲ; ಕೈ ತೀರ್ಮಾನ ಏನು?

ಮಾಧುಸ್ವಾಮಿ, ಈಶ್ವರಪ್ಪ ಅವರ ಕಥೆ ಏನು?

ತುಮಕೂರು ಕ್ಷೇತ್ರದಿಂದ ಟಿಕೆಟ್‌ ಬಯಸಿ ನಿರಾಸೆ ಅನುಭವಿಸಿರುವ ಮಾಜಿ ಸಚಿವ ಮಾಧುಸ್ವಾಮಿ ಜೊತೆಗೆ ಮೂರು ಗಂಟೆ ಚರ್ಚೆ ಮಾಡಿದ್ದೇನೆ. ಅವರು ಅವರು ಟೈಂ ತಗೊಂಡಿದ್ದಾರೆ ಬಿಎಸ್ ವೈ ಜೊತೆಗೆ ಮಾತನಾಡಿದ್ರೆ ಸರಿಯಾಗಬಹುದು ಎಂದು ಹೇಳಿದರು ಅಶೋಕ್‌.

ಬಿಎಸ್‌ವೈ ಮತ್ತು ಈಶ್ವರಪ್ಪ ನಡುವೆ ನಡೆದ ಮಾತುಕತೆ ಬಗ್ಗೆ ಗೊತ್ತಿಲ್ಲ. ಈಗ ಅವರು ಮಾತುಕತೆ ಮೂಲಕ ಸಮಸ್ಯೆ ಸರಿ ಮಾಡಿಕೊಳ್ಳಲಿದ್ದಾರೆ. ಅವರು ನಮ್ಮ ಹಳೆ ಕಾರ್ಯಕರ್ತರು, ಬೇರೆ ನಿರ್ಧಾರ ತೆಗೆದುಕೊಳ್ಳುವುದಿಲ್ಲʼʼ ಎಂದು ಹೇಳಿದರು.

ಜೆಡಿಎಸ್‌ ಜತೆ ಹಾಲು ಜೇನಿನ ಸಂಬಂಧ ಎಂದ ಅಶೋಕ್‌

ರಾಜ್ಯದಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ನಾಯಕರು ಹಾಲು ಜೇನಿನಂತೆ ಕೆಲಸ ಮಾಡುತ್ತೇವೆ. ಯಾವುದೇ ಅನುಮಾನ ಬೇಡ. ಕುಮಾರಸ್ವಾಮಿ ಅವರು ಹೈಕಮಾಂಡ್ ಭೇಟಿ ಮಾಡಿದ್ದಾರೆ, ಅವರಿಗೆ ಗೊತ್ತಿದೆ. ಕೋಲಾರ ಕ್ಷೇತ್ರ ಇನ್ನೂ ಅಂತಿಮವಾಗಿಲ್ಲ ಎಂದು ಹೇಳಿದರು ಆರ್‌. ಅಶೋಕ್‌.

ಹರಿಪ್ರಸಾದ್‌ ವಿರುದ್ಧ ಕ್ರಮ ಕೈಗೊಂಡ್ರಾ ಸ್ಟ್ರಾಂಗ್‌ ಸಿಎಂ?

ಈ ನಡುವೆ, ಸಿಎಂ ಸಿದ್ದರಾಮಯ್ಯ ಮತ್ತು ಪ್ರಧಾನಿ ಮೋದಿ ನಡುವಿನ ಪಿಎಂ-ಸಿಎಂ ಕದನಕ್ಕೆ ಪ್ರತಿಕ್ರಿಯೆ ನೀಡಿ, ಮೋದಿ ಅವರು ಸರ್ವತೋಮುಖ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಹೀನಾಯ ಸ್ಥಿತಿಯಲ್ಲಿದೆ. ಸಿಎಂ ಸ್ಟ್ರಾಂಗ್ ಪಿಎಂ ವೀಕ್ ಎಂದಿರುವ ಸಿದ್ದರಾಮಯ್ಯ ಅವರಿಗೆ ಅವರ ಪಕ್ಷದಲ್ಲೇ ಬೆಲೆ ಇಲ್ಲ. ಬಿ.ಕೆ. ಹರಿ ಪ್ರಸಾದ್ ಅವರು ನೇರವಾಗಿ ಟೀಕೆ ಮಾಡಿದರೂ ಅವರ ವಿರುದ್ಧ ಕ್ರಮ ತೆಗೆದುಕೊಂಡಿಲ್ಲ ಎಂದು ನೆನಪಿಸಿದರು. ಹಾಗಿರುವಾಗ ಮೋದಿ ಬಗ್ಗೆ ಆರೋಪ ಮಾಡಲು ಸಾಧ್ಯವಿಲ್ಲ ಎಂದರು.

ರಾಜ್ಯದಲ್ಲಿ ಬರಗಾಲ ಭುಗಿಲೆದ್ದಿದೆ. ಕುಡಿಯುವ ನೀರಿಗೂ ಸಮಸ್ಯೆಯಾಗಿದೆ. ಜನರು ಬೆಂಗಳೂರಿನಿಂದ ಗುಳೆ ಹೋಗುತ್ತಿದ್ದಾರೆ. ಇದು ಇತಿಹಾಸದಲ್ಲಿ ಮೊದಲ ಬಾರಿಗೆ ನಡೆಯುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ ಅಶೋಕ್‌ ಅವರು, ಬಾಂಬ್‌ ಸ್ಫೋಟ, ಪಾಕಿಸ್ತಾನ ಜಿಂದಾಬಾದ್‌, ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ.. ಇವೆಲ್ಲವೂ ರಾಜ್ಯದಲ್ಲಿ ಕಾನೂನು ಮತ್ತು ವ್ಯವಸ್ಥೆ ಹಾಳಾಗಿರುವುದಕ್ಕೆ ಸಾಕ್ಷಿ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Hassan Pen Drive Case: ಪ್ರಜ್ವಲ್‌ ರೇವಣ್ಣ ಜೆಡಿಎಸ್‌ನಿಂದ ಉಚ್ಚಾಟನೆ? ಎಚ್‌.ಡಿ. ದೇವೇಗೌಡರ ನಿರ್ಧಾರಕ್ಕೇನು ಕಾರಣ?

Hassan Pen Drive Case: ಈಗಾಗಲೇ ಜೆಡಿಎಸ್‌ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದೆ. ಅಲ್ಲದೆ, ಈ ಪ್ರಕರಣ ಈಗ ದೇಶಾದ್ಯಂತ ಸಂಚಲನ ಉಂಟುಮಾಡಿದೆ. ಮೈತ್ರಿ ಪಕ್ಷ ಬಿಜೆಪಿ ಕೂಡ ಇದರಿಂದ ಮುಜುಗರ ಅನುಭವಿಸುತ್ತಿದೆ. ದೇಶದ ಹಲವು ಕಡೆ ಇನ್ನೂ ಚುನಾವಣೆ ನಡೆಯುತ್ತಿದೆ. ಈ ಹೊತ್ತಿನಲ್ಲಿ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲವೆಂದಾದರೆ ಬಿಜೆಪಿಗೆ ಇದು ತೀವ್ರ ಇರಿಸುಮುರಿಸನ್ನು ತರುತ್ತದೆ. ಹೀಗಾಗಿ ಕ್ರಮಕ್ಕೆ ಬಿಜೆಪಿಯಿಂದಲೂ ಒತ್ತಡ ಇದೆ ಎನ್ನಲಾಗಿದೆ. ಅಲ್ಲದೆ, ಜೆಡಿಎಸ್‌ ಶಾಸಕರು ಸಹ ಒಬ್ಬೊಬ್ಬರಾಗಿ ಧ್ವನಿ ಎತ್ತುತ್ತಿದ್ದಾರೆ.

VISTARANEWS.COM


on

Hasan Pen Drive case Prajwal Revanna expelled from JDS
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS leader) ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಜೆಡಿಎಸ್‌ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬಕ್ಕೆ ಭಾರಿ ಮುಜುಗರವನ್ನುಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಇನ್ನೂ ಕೆಲವೇ ಕ್ಷಣದಲ್ಲಿ ಆದೇಶ ಹೊರಬೀಳಲಿದೆ ಎನ್ನಲಾಗಿದೆ.

ಪ್ರಜ್ವಲ್‌ ರೇವಣ್ಣ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ಕುರಿತು ಈಗಾಗಲೇ ಎಚ್.ಡಿ. ಕುಮಾರಸ್ವಾಮಿ ಸುಳಿವು ನೀಡಿದ್ದಾರೆ. ಪ್ರಜ್ವಲ್ ಪ್ರಕರಣದಿಂದ ಜೆಡಿಎಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದೆ. ಹೀಗಾಗಿ ನಾಳೆ (ಏಪ್ರಿಲ್‌ 30) ಒಳಗೆ ಪ್ರಜ್ವಲ್ ವಿರುದ್ಧ ಶಿಸ್ತುಕ್ರಮ ಗ್ಯಾರಂಟಿ ಎಂದು ಹೇಳಲಾಗುತ್ತಿದೆ.

ಏಕೆ ಈ ಕ್ರಮ?

ಈಗಾಗಲೇ ಜೆಡಿಎಸ್‌ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದೆ. ಅಲ್ಲದೆ, ಈ ಪ್ರಕರಣ ಈಗ ದೇಶಾದ್ಯಂತ ಸಂಚಲನ ಉಂಟುಮಾಡಿದೆ. ಮೈತ್ರಿ ಪಕ್ಷ ಬಿಜೆಪಿ ಕೂಡ ಇದರಿಂದ ಮುಜುಗರ ಅನುಭವಿಸುತ್ತಿದೆ. ದೇಶದ ಹಲವು ಕಡೆ ಇನ್ನೂ ಚುನಾವಣೆ ನಡೆಯುತ್ತಿದೆ. ಈ ಹೊತ್ತಿನಲ್ಲಿ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲವೆಂದಾದರೆ ಬಿಜೆಪಿಗೆ ಇದು ತೀವ್ರ ಇರಿಸುಮುರಿಸನ್ನು ತರುತ್ತದೆ. ಅಲ್ಲದೆ, ವಿಪಕ್ಷಗಳ ಟೀಕೆಯನ್ನು ಸಮರ್ಥವಾಗಿ ಎದುರಿಸಲು ಕಷ್ಟವಾಗುತ್ತದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸದ್ಯಕ್ಕೆ ಮುಜುಗರದಿಂದ ತಪ್ಪಿಸಿಕೊಳ್ಳಲು ಪ್ರಜ್ವಲ್ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಳ್ಳುವುದು ಅನಿವಾರ್ಯ ಎಂಬ ತೀರ್ಮಾನಕ್ಕೆ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಬಂದಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್, ಎಚ್.ಡಿ. ರೇವಣ್ಣ ಉಚ್ಚಾಟನೆಗೆ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಒತ್ತಾಯ

ಇನ್ನು ಪ್ರಜ್ವಲ್‌ ರೇವಣ್ಣ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಿ ಎಂದು ಜೆಡಿಎಸ್‌ ಶಾಸಕ ಮಂಜುನಾಥ್ ಅವರು ತಮ್ಮ ಸೋಷಿಯಲ್‌ ಮೀಡಿಯಾ ಫೇಸ್‌ಬುಕ್‌ ಮೂಲಕ ಮಾಜಿ ಸಿಎಂ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದಾರೆ.

ಸಮೃದ್ಧಿ ಮಂಜುನಾಥ್‌ ಮನವಿಯಲ್ಲೇನಿದೆ?

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ. ಇತ್ತೀಚಿನ ದಿನಗಳಲ್ಲಿ ಹಾಸನದ ಲೀಲೆಗಳು ಮಾಧ್ಯಮಗಳಲ್ಲಿ ಪ್ರಜ್ವಲಿಸುತ್ತಿರುವುದು ಪಕ್ಷದ ಸಾಮಾನ್ಯ ಕಾರ್ಯಕ್ರತರಾಗಿ ರಾಜ್ಯದಲ್ಲೆಡೆ ಮುಜುಗರಕ್ಕೆ ಒಳಗಾಗಿರುವುದಲ್ಲದೆ ಪಕ್ಷದ ಹೆಸರು ಹೇಳಲು ಸಹ ಹೇಸಿಗೆ ಅನಿಸುವಂತ ಸ್ಥಿತಿಗೆ ತಲುಪಿದೆ.

ಮಾಧ್ಯಮದವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಾಗದ ದಯನೀಯ ಪರಿಸ್ಥಿತಿ ಮೊದಲ ಬಾರಿಗೆ ಶಾಸಕನಾಗಿರುವ ನನಗೆ ಈ ಕಷ್ಟಕರ ಸನ್ನಿವೇಶಗಳು ಎದುರಾಗುತ್ತಿದ್ದರೆ, ಸಾಮಾನ್ಯ ಕಾರ್ಯಕರ್ತರ ಪರಿಸ್ಥಿತಿಯಾದರೇನು ಯೋಚಿಸಿ??

ಪಕ್ಷದ ರಾಷ್ಟ್ರಾಧ್ಯಕ್ಷರು ಎಚ್.ಡಿ. ದೇವೇಗೌಡರು, ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕಾದ ಸಮಯವಿದಾಗಿದೆ. ನಿಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ 19 ಜನ ಶಾಸಕರ ಭವಿಷ್ಯ ಬೇಕೋ ತಮ್ಮ ಕುಟುಂಬದ ರೇವಣ್ಣ, ಪ್ರಜ್ವಲ್‌ ಅವರು ಮುಖ್ಯವೋ ತೀರ್ಮಾನಿಸಬೇಕಿದೆ.

ಇದನ್ನೂ ಓದಿ: PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

24 ಗಂಟೆಗಳಲ್ಲಿ ಆರೋಪ ಹೊತ್ತಿರುವ ರೇವಣ್ಣ ಮತ್ತು ಪ್ರಜ್ವಲ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಸಿದ್ಧಾಂತಗಳನ್ನು ಉಳಿಸಿ ಕಾರ್ಯಕರ್ತರನ್ನು ನಮ್ಮನ್ನು ಮುಜುಗರದಿಂದ ಪಾರು ಮಾಡಲು ಕೋರುತ್ತೇನೆ. ನಿಮ್ಮ ತೀರ್ಮಾನದ ಮೇಲೆ ಪಕ್ಷದ ಮುಂದಿನ ಭವಿಷ್ಯವಿದೆಯೆಂಬುದು ಮತ್ತೊಮ್ಮೆ ತಿಳಿಸಲು ಬಯಸುತ್ತೇನೆ ಎಂದು ಫೇಸ್‌ಬುಕ್‌ನಲ್ಲಿ ಸಮೃದ್ಧಿ ಮಂಜುನಾಥ್ ಬರೆದುಕೊಂಡಿದ್ದಾರೆ.

ನಾಳೆಯ ಕೋರ್‌ ಕಮಿಟಿ ಸಭೆ ಬಳಿಕ ನಿರ್ಧಾರ

ಈ ಸಂಬಂಧ ನಾಳೆ (ಏಪ್ರಿಲ್‌ 30) ಜೆಡಿಎಸ್‌ ಕೋರ್‌ ಕಮಿಟಿ ಸಭೆ ಕರೆಯಲಾಗಿದ್ದು. ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲು ನಿರ್ಧಾರ ಮಾಡಲಾಗಿದೆ. ಈ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಬಳಿಕ ಉಚ್ಚಾಟನೆ ಕ್ರಮ ಕೈಗೊಳ್ಳಲು ತೀರ್ಮಾನ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Continue Reading

ಬಳ್ಳಾರಿ

Lok Sabha Election 2024: ದರೋಜಿ ಗ್ರಾ.ಪಂ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಬಿರುಸಿನ ಪ್ರಚಾರ

Lok Sabha Election 2024: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ.ತುಕಾರಾಂ, ದರೋಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿರುಸಿನ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದರು.

VISTARANEWS.COM


on

Ballari Lok Sabha Constituency Congress Candidate E Tukaram Election Campaign in Daroji
Koo

ಬಳ್ಳಾರಿ: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ.ತುಕಾರಾಂ, ದರೋಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿರುಸಿನ ಚುನಾವಣಾ (Lok Sabha Election 2024) ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದರು.

ದರೋಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧೆಡೆ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದ ಕಾಂಗ್ರೆಸ್‌ ಅಭ್ಯರ್ಥಿ ಈ.ತುಕಾರಾಂ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯದ ಜನರಿಗೆ ಏನನ್ನೂ ಕೊಡಲಿಲ್ಲ. ಆದರೆ ರಾಜ್ಯದ ಕಾಂಗ್ರೆಸ್‌ ಸರ್ಕಾರ ಎಲ್ಲಾ ಸೌಲಭ್ಯಗಳನ್ನೂ ನೀಡುತ್ತಾ ಬಂದಿದೆ. ಅನ್ನಭಾಗ್ಯದಿಂದ ಹಿಡಿದು ಮೂಲಸೌಕರ್ಯಗಳನ್ನು ಒದಗಿಸುತ್ತಿದೆ ಎಂದ ಅವರು, ಬಿಜೆಪಿಗೆ ಬಡವರ ಬಗ್ಗೆ ಕನಿಕರ ಇಲ್ಲ ಎಂದು ಅವರು ದೂರಿದರು.

ಇದನ್ನೂ ಓದಿ: Viral Video: ರೈಲು ಹತ್ತುವಾಗ ಕೆಳಗೆ ಬಿದ್ದ ವ್ಯಕ್ತಿ; ಮಹಿಳಾ ಪೇದೆಯಿಂದ ರಕ್ಷಣೆ-ರೋಚಕ ವಿಡಿಯೋ ವೈರಲ್‌

ಈ ಬಾರಿಯ ಚುನಾವಣೆಯಲ್ಲಿ ಹಸ್ತದ ಗುರುತಿಗೆ ಮತ ನೀಡಿ, ತಮ್ಮನ್ನು ಗೆಲ್ಲಿಸುವಂತೆ ಮತದಾರರದಲ್ಲಿ ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ತೋರಣಗಲ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಏಕಾಂಬ್ರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜನಾರ್ಧನ, ದರೋಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಪ್ರಮುಖ ಸುದ್ದಿ

Lok Sabha Election: ಇಂದೋರ್​ ಕಾಂಗ್ರೆಸ್​ ಅಭ್ಯರ್ಥಿ ಕಣದಿಂದ ಹಿಂದಕ್ಕೆ; ಚುನಾವಣೆಗೆ ಮೊದಲೇ ಬಿಜೆಪಿಗೆ ಮತ್ತೊಂದು ಸೀಟು!

Lok Sabha Election: ಬಾಮ್ ಕಣದಿಂದ ತಮ್ಮ ಉಮೇದುವಾರಿಕೆ ವಾಪಸ್​​ ಸ್ವಲ್ಪ ಸಮಯದ ನಂತ, ಮಧ್ಯಪ್ರದೇಶ ಹಿರಿಯ ಬಿಜೆಪಿ ಮುಖಂಡ ಮತ್ತು ಇಂದೋರ್​​ನ ಶಾಸಕ ಕೈಲಾಶ್ ವಿಜಯವರ್ಗಿಯಾ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಮುಖ್ಯಮಂತ್ರಿ ಮೋಹನ್ ಯಾದವ್ ಮತ್ತು ರಾಜ್ಯ ಅಧ್ಯಕ್ಷ ವಿ.ಡಿ.ಶರ್ಮಾ ಅವರ ನಾಯಕತ್ವ ನೆಚ್ಚಿ ಇಂದೋರ್​​ನ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಬಿಜೆಪಿ ಸೇರಿದ್ದಾರೆ ” ಎಂದು ಅವರು ಬರೆದಿದ್ದಾರೆ.

VISTARANEWS.COM


on

Lok Sabha Election
Koo

ಇಂದೋರ್: ಲೋಕಸಭಾ ಚುನಾವಣೆಯ (Lok Sabha Election) ನಾಲ್ಕನೇ ಹಂತದಲ್ಲಿ ಮತದಾನ ನಡೆಯಬೇಕಾಗಿದ್ದ ಮಧ್ಯಪ್ರದೇಶದ ಇಂದೋರ್​ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ (Akshay Kanti Bam) ತಮ್ಮ ಉಮೇದುವಾರಿಕೆ ವಾಪಸ್​ ಪಡೆದುಕೊಂಡಿದ್ದಾರೆ. ಆ ಬಳಿಕ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದು, ತಾವು ಚುನಾವಣಾ ಕಣದಿಂದ ಹಿಂದಕ್ಕೆ ಸರಿದು ಮೋದಿ ನೇತೃತ್ವದ ಬಿಜೆಪಿ ಸೇರಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಮೇ 13ರಂದು ಇಂದೋರ್​ನಲ್ಲಿ ಮತದಾನ ನಡೆಯಬೇಕಾಗಿತ್ತು. ಹಾಲಿ ಬಿಜೆಪಿ ಸಂಸದ ಶಂಕರ್ ಲಾಲ್ವಾನಿ ವಿರುದ್ಧ ಕಾಂಗ್ರೆಸ್ ಬಾಮ್ ಅವರಿಗೆ ಟಿಕೆಟ್​ ನೀಡಿ ಇದೀಗ ಪರಿತಪಿಸುವಂತಾಗಿದೆ. ಈ ಕ್ಷೇತ್ರದಲ್ಲಿ ಈಗ ಬಿಜೆಪಿ ಪ್ರಬಲ ಸ್ಪರ್ಧೆಯೇ ಇಲ್ಲದಂತಾಗಿದೆ. ಹಾಗಾಗಿ ಬಹುತೇಕ ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದಂತಾಗಿದೆ.

ಬಾಮ್ ಕಣದಿಂದ ತಮ್ಮ ಉಮೇದುವಾರಿಕೆ ವಾಪಸ್​​ ಸ್ವಲ್ಪ ಸಮಯದ ನಂತ, ಮಧ್ಯಪ್ರದೇಶ ಹಿರಿಯ ಬಿಜೆಪಿ ಮುಖಂಡ ಮತ್ತು ಇಂದೋರ್​​ನ ಶಾಸಕ ಕೈಲಾಶ್ ವಿಜಯವರ್ಗಿಯಾ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಮುಖ್ಯಮಂತ್ರಿ ಮೋಹನ್ ಯಾದವ್ ಮತ್ತು ರಾಜ್ಯ ಅಧ್ಯಕ್ಷ ವಿ.ಡಿ.ಶರ್ಮಾ ಅವರ ನಾಯಕತ್ವ ನೆಚ್ಚಿ ಇಂದೋರ್​​ನ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಬಿಜೆಪಿ ಸೇರಿದ್ದಾರೆ ” ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

ಈ ತಿಂಗಳ ಆರಂಭದಲ್ಲಿ, ಗುಜರಾತ್​ನ ಸೂರತ್ ನ ಕಾಂಗ್ರೆಸ್ ಅಭ್ಯರ್ಥಿ ನಿಲೇಶ್ ಕುಂಭಾನಿ ಅವರು ಇದೇ ರೀತಿ ಬಿಜೆಪಿ ಸೇರಿದ್ದರು. ಅನುಮೋದಕರ ಸಹಿಯಲ್ಲಿ ವ್ಯತ್ಯಾಸಗಳನ್ನು ಕಂಡುಕೊಂಡ ನಂತರ ಜಿಲ್ಲಾ ಚುನಾವಣಾಧಿಕಾರಿ ಅವರ ಉಮೇದುವಾರಿಕೆಯನ್ನು ತಿರಸ್ಕರಿಸಿದ್ದರು. ಅಲ್ಲದೆ ಈ ಸ್ಥಾನಕ್ಕೆ ಪಕ್ಷದ ಬದಲಿ ಅಭ್ಯರ್ಥಿ ಸುರೇಶ್ ಪಡ್ಸಾಲ ಅವರ ನಾಮಪತ್ರವನ್ನೂ ತಿರಸ್ಕರಿಸಲಾಗಿತ್ತು.

Fact Check: ಅಮಿತ್‌ ಶಾ ಎಸ್​​ಸಿ, ಎಸ್​ಟಿ ಮೀಸಲು ರದ್ದು ಮಾಡ್ತೀವಿ ಎಂದಿದ್ದು ನಿಜವೆ?​​

ನವ ದೆಹಲಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ (Fact Check) ನೀಡಲಾಗುತ್ತಿರುವ ಮಿಸಲಾತಿಯನ್ನು ತೆಗೆದು ಹಾಕಲಾಗುವುದು ಎಂದು ಅಮಿತ್ ಶಾ (Amit Shah) ಹೇಳಿದ್ದಾರೆ ಎಂದು ತಿರುಚಿದ ವಿಡಿಯೊ ಹರಿಬಿಟ್ಟ ಪ್ರಕರಣದಲ್ಲಿ ಡೆಲ್ಲಿ ಪೊಲೀಸರು (Delhi Police) ಎಫ್​ಐಆರ್​ ದಾಖಲಿಸಿದ್ದಾರೆ. ಇದೇ ವೇಳೆ ಪೊಲೀಸರು ವಿಡಿಯೊದ ಕುರಿತು ಮಾಹಿತಿ ನೀಡುವಂತೆ ಸೋಶಿಯಲ್ ಮೀಡಿಯಾ ಫ್ಲ್ಯಾಟ್​ಫಾರ್ಮ್​ ಎಕ್ಸ್​​ಗೆ (X) ಮನವಿ ಮಾಡಿದೆ. ಅದರ ಪ್ರಕಾರ ತನಿಖೆ ನಡೆಸುವುದಾಗಿ ಪೊಲೀಸರು ಹೇಳಿದ್ದಾರೆ. ಇದು ನಕಲಿ ಸೃಷ್ಟಿ ಎಂದು ಅಮಿತ್‌ ಶಾ ಸ್ಪಷ್ಪಪಡಿಸಿದ್ದಾರೆ.

ನಕಲಿ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್​​ಫಾರ್ಮ್​ಗಳಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಭಾನುವಾರ ಎಫ್ಐಆರ್ ದಾಖಲಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಗೃಹ ಸಚಿವಾಲಯ (ಎಂಎಚ್ಎ) ಈ ಸಂಬಂಧ ದೂರು ದಾಖಲಿಸಿದೆ. ಅದರ ಆಧಾರದ ಮೇಲೆ ದೆಹಲಿ ಪೊಲೀಸರ ವಿಶೇಷ ಸೆಲ್ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಭಾಗಗಳು ಮತ್ತು ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದೆ.

Continue Reading

Lok Sabha Election 2024

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra Modi: ಧರ್ಮದ ರಾಜಕಾರಣ ಮಾಡಲು ಕಾಂಗ್ರೆಸ್‌ನಿಂದ ವ್ಯವಸ್ಥಿತ ಸಂಚು ರೂಪಿಸಲಾಗುತ್ತಿದೆ. ಎಸ್‌ಸಿ – ಎಸ್‌ಟಿ ಹಾಗೂ ಒಬಿಸಿ ಮೀಸಲಾತಿ ತೆಗೆದು ಮುಸ್ಲಿಮರಿಗೆ ನೀಡಲು ಸಂಚು ರೂಪಿಸಲಾಗಿದೆ. ಆದರೆ, ನಾನು ಕಾಂಗ್ರೆಸ್ ನಾಯಕರ ರಾಜಕಾರಣದ ಸಂಚು ಫಲಿಸಲು ನಾನು ಬಿಡುವುದಿಲ್ಲ. ಮುಸ್ಲಿಮರನ್ನು ಓಲೈಸುತ್ತಾ ಪರಿಶಿಷ್ಟ ಜಾತಿ, ಪಂಗಡ, ಒಬಿಸಿ ವಿರುದ್ಧ ಸಂಚು ಮಾಡುತ್ತಿದ್ದಾರೆ. ಮೀಸಲಾತಿ, ನಿಮ್ಮ ಹಕ್ಕು, ನಿಮ್ಮ ಅಧಿಕಾರವನ್ನು ಕಿತ್ತುಕೊಳ್ಳಲು ಈ ನಿಮ್ಮ ನರೇಂದ್ರ ಮೋದಿ ಬಿಡುವುದಿಲ್ಲ. ನಿಮ್ಮ ರಕ್ಷಣೆಗೋಸ್ಕರ ಮೋದಿ ಯಾವ ಹಂತಕ್ಕೆ ಬೇಕಾದರೂ ಹೋಗುತ್ತಾರೆ. ಈ ವೇಳೆ ನಾನು ನಿಮಗೆ ಮಾತು ಕೊಡುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾನ ಮಾಡಿದ್ದಾರೆ.

VISTARANEWS.COM


on

PM Narendra modi in Bagalakote and Attack on Congress
Koo

ಬಾಗಲಕೋಟೆ: ಒಬಿಸಿ ಸಮುದಾಯಗಳ ಮೀಸಲಾತಿ ವಿಷಯದಲ್ಲಿ ಕಾಂಗ್ರೆಸ್‌ ಸರ್ಕಾರ ಷಡ್ಯಂತ್ರ ರೂಪಿಸಿದೆ. ಹಿಂದುಳಿದ ವರ್ಗಗಳು ಹಾಗೂ ಎಸ್‌ಸಿ, ಎಸ್‌ಟಿ ಮೀಸಲಾತಿಗೂ ಕುತ್ತು ತರಲು ಕಾಂಗ್ರೆಸ್‌ ಹೊರಟಿದೆ. ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ತೆಗೆದು ಮುಸ್ಲಿಮರಿಗೆ ಹಂಚಿಕೆ ಮಾಡಲು ಕಾಂಗ್ರೆಸ್‌ ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಬಾಗಲಕೋಟೆಯಲ್ಲಿ ನಡೆದ ಬಿಜೆಪಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಧರ್ಮದ ರಾಜಕಾರಣ ಮಾಡಲು ಕಾಂಗ್ರೆಸ್‌ನಿಂದ ವ್ಯವಸ್ಥಿತ ಸಂಚು ರೂಪಿಸಲಾಗುತ್ತಿದೆ. ಎಸ್‌ಸಿ – ಎಸ್‌ಟಿ ಹಾಗೂ ಒಬಿಸಿ ಮೀಸಲಾತಿ ತೆಗೆದು ಮುಸ್ಲಿಮರಿಗೆ ನೀಡಲು ಸಂಚು ರೂಪಿಸಲಾಗಿದೆ. ಆದರೆ, ನಾನು ಕಾಂಗ್ರೆಸ್ ನಾಯಕರ ರಾಜಕಾರಣದ ಸಂಚು ಫಲಿಸಲು ನಾನು ಬಿಡುವುದಿಲ್ಲ. ಮುಸ್ಲಿಮರನ್ನು ಓಲೈಸುತ್ತಾ ಪರಿಶಿಷ್ಟ ಜಾತಿ, ಪಂಗಡ, ಒಬಿಸಿ ವಿರುದ್ಧ ಸಂಚು ಮಾಡುತ್ತಿದ್ದಾರೆ. ಮೀಸಲಾತಿ, ನಿಮ್ಮ ಹಕ್ಕು, ನಿಮ್ಮ ಅಧಿಕಾರವನ್ನು ಕಿತ್ತುಕೊಳ್ಳಲು ಈ ನಿಮ್ಮ ನರೇಂದ್ರ ಮೋದಿ ಬಿಡುವುದಿಲ್ಲ. ನಿಮ್ಮ ರಕ್ಷಣೆಗೋಸ್ಕರ ಮೋದಿ ಯಾವ ಹಂತಕ್ಕೆ ಬೇಕಾದರೂ ಹೋಗುತ್ತಾರೆ. ಈ ವೇಳೆ ನಾನು ನಿಮಗೆ ಮಾತು ಕೊಡುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾನ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಬಾಗಲಕೋಟೆ ಕಾರ್ಯಕ್ರಮ

ಈ ಚುನಾವಣೆಯು ವಿಕಸಿತ ಭಾರತಕ್ಕೆ ನಡೆಯುತ್ತಿದೆ. ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ದೇಶ ಆಗುತ್ತದೆ. ನಿಮ್ಮ ಒಂದು ವೋಟು ನಮಗೆ ಈ ಶಕ್ತಿಯನ್ನು ತಂದು ಕೊಡಲಿದೆ.

ಮೋಜು ಮಸ್ತಿ ಮಾಡುವವರಿಂದ, ರಜೆ ಹಾಕುವವರಿಂದ ದೇಶದ ಅಭಿವೃದ್ಧಿ ಅಸಾಧ್ಯ. ದೇಶದ ಪ್ರಗತಿಗಾಗಿ ಗುರಿ ಬೇಕು. ಅದಕ್ಕಾಗಿ ಕಷ್ಟಪಟ್ಟು ದುಡಿಯಬೇಕು. ನಿಮ್ಮ ಮೋದಿ ಈ ಕೆಲಸವನ್ನು ಮಾಡಲಿದ್ದಾರೆ. 24/7 ಮಾದರಿಯಲ್ಲಿ ನಿಮ್ಮ ಸೇವೆಗಾಗಿ ನನ್ನ ಜೀವನವನ್ನು ಮುಡಿಪಾಗಿಟ್ಟಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಾಂಗ್ರೆಸ್‌ ಈಗ ಏನು ಮಾಡುತ್ತಿದೆ. ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಗಾಲು ಹಾಕುತ್ತಿರುವುದು ಮಾತ್ರವಲ್ಲದೆ, ದೇಶವನ್ನು ಲೂಟಿ ಹೊಡೆಯುವ ಕೆಲಸಕ್ಕೆ ಕೈಹಾಕಿದೆ. ಇಂಥ ಕಾಂಗ್ರೆಸ್‌ ಸರ್ಕಾರ ನಿಮಗೆ ಬೇಕಾ? ಇದಲ್ಲದೆ ಕಾಂಗ್ರೆಸ್‌ ಹೈಕಮಾಂಡ್‌ನವರು ಕರ್ನಾಟಕ ಕಾಂಗ್ರೆಸ್‌ ಸರ್ಕಾರವನ್ನು ಎಟಿಎಂ ಮಾಡಿಕೊಂಡಿದ್ದಾರೆ. ಹೀಗಾಗಿ ಕರ್ನಾಟಕ ಕಾಂಗ್ರೆಸ್‌ ನಾಯಕರು ಲೂಟಿ ಗ್ಯಾಂಗ್‌ ಅನ್ನು ಮಾಡಿಕೊಂಡಿದ್ದಾರೆ. ಭ್ರಷ್ಟಾಚಾರಕ್ಕೆ ಕಾಂಗ್ರೆಸ್‌ ಹಾಗೂ ಆ ಪಕ್ಷದ ನಾಯಕರೇ ಮೂಲ ಕಾರಣರಾಗಿದ್ದಾರೆ. ಇಂಥವರಿಗೆ ದೇಶದ ಜವಾಬ್ದಾರಿಯನ್ನು ಕೊಡುತ್ತೀರಾ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಕಟ್ಟಕಡೆಯ ಹಳ್ಳಿಗಳಿಗೆ ವಿದ್ಯುತ್‌ ಸೌಕರ್ಯವನ್ನು ಒದಗಿಸಿಲ್ಲ. ಕೋಟ್ಯಂತರ ಜನ ಮೂಲ ಸೌಕರ್ಯದಿಂದ ವಂಚಿತರಾಗಿದ್ದರು. ಆದರೆ, ಹಳ್ಳಿ ಹಳ್ಳಿಗಳಿಗೆ ವಿದ್ಯುತ್‌ ಸಂಪರ್ಕ ಕೊಡಿಸಿದ್ದು, ನಮ್ಮ ಸರ್ಕಾರದಿಂದ ಎಂಬುದು ಮುಖ್ಯ. ಇನ್ನು ನೀರಿನ ಸಮಸ್ಯೆಯನ್ನು ಬಗೆಹರಿಸಲು ಜಲಜೀವನ್‌ ಮಿಷನ್‌ ಅನ್ನು ಪ್ರಾರಂಭ ಮಾಡಿದ್ದೇವೆ. ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಶೇ. 17ರಷ್ಟು ಮಂದಿಗೆ ಮಾತ್ರ ನೀರಿನ ಸಂಪರ್ಕ ಇತ್ತು. ಇಂದು ನಮ್ಮ ಆಡಳಿತದಲ್ಲಿ ಶೇ. 75ರಷ್ಟು ನೀರಿನ ಸಂಪರ್ಕ ಇದೆ. ಇನ್ನು ಕರ್ನಾಟಕದಲ್ಲಿ ಕುಡಿಯುವ ನೀರಿಲ್ಲದೆ ಜನರು ಕಷ್ಟಪಡುತ್ತಿದ್ದಾರೆ. ಕಾಂಗ್ರೆಸ್‌ನ ಭ್ರಷ್ಟಾಚಾರದ ಪಾಪಕ್ಕೆ ಶಿಕ್ಷೆ ಕೊಡಬೇಕೇ? ಬೇಡವೇ? ಹೀಗಾಗಿ ನೀವು ಈ ಮೇ 7ರಂದು ಮತ ಚಲಾವಣೆ ಮಾಡಿ ಬಿಜೆಪಿ ಜಯಕ್ಕೆ ಕಾರಣರಾಗಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಬಾದಾಮಿ, ಐಹೊಳೆ, ಪಟ್ಟದಕಲ್ಲು ಪಾರಂಪರಿಕ ಸ್ಥಳಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ವಿಜಯಪುರದಲ್ಲೂ ಏರ್ಪೋರ್ಟ್‌ ನಿರ್ಮಾಣ ಮಾಡಲು ನಮ್ಮ ಸರ್ಕಾರ ಸಿದ್ಧವಾಗಿದೆ. ಇಳಕಲ್‌ ಸೀರೆಗಾಗಿ ಒಂದು ಗ್ರಾಮ ಒಂದು ಉತ್ಪನ್ನ ಎಂದು ಮಾಡಿದೆವು. ತಳವಾರ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಿದ್ದು ನಮ್ಮ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಾಂಗ್ರೆಸ್‌ನಿಂದ ತುಷ್ಟೀಕರಣ ರಾಜಕಾರಣ

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಏನಾಯಿತು? ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳಿಗೆ ಏನಾಯಿತು? ನೇಹಾ ಮೇಲೆ ಒಂದಾದ ಮೇಲೆ ಒಂದರಂತೆ ಚಾಕುವಿನಿಂದ ಚುಚ್ಚಿ ಚುಚ್ಚಿ ಕೊಂದಿದ್ದಾನೆ. ಆದರೆ, ಕಾಂಗ್ರೆಸ್‌ ಏನು ಕ್ರಮ ಕೈಗೊಂಡಿದೆ. ತುಷ್ಟೀಕರಣಕ್ಕಾಗಿ ಇದು ಯಾವ ಹಂತಕ್ಕೆ ಬೇಕಾದರೂ ಹೋಗಲಿದೆ. ಇನ್ನು ಬೆಂಗಳೂರಿನಲ್ಲಿ ಹನುಮಾನ್‌ ಚಾಲೀಸಾವನ್ನು ಪಠಣ ಮಾಡಿದರೆ ಗಲಾಟೆ ಮಾಡುತ್ತಾರೆ, ಹಲ್ಲೆ ನಡೆಸುತ್ತಾರೆ. ಇದರ ಬಗ್ಗೆ ಏನು ಕ್ರಮ ಕೈಗೊಂಡರು? ಅಲ್ಲದೆ, ಬೆಂಗಳೂರು ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಬಗ್ಗೆ ಕಾಂಗ್ರೆಸ್‌ ಸರ್ಕಾರ ಹೇಳಿದ್ದು ಏನು? ಸಿಲಿಂಡರ್‌ ಬ್ಲಾಸ್ಟ್‌ ಎಂದು ಹೇಳಿಬಿಟ್ಟರು. ಕೊನೆಗೆ ಬ್ಯುಸಿನೆಸ್‌ ಶತ್ರುಗಳು ಮಾಡಿದ್ದು ಎಂದು ಹೇಳಿದರು. ಇದು ಕಾಂಗ್ರೆಸ್‌ನ ಆಡಳಿತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ನನ್ನ ಬಗ್ಗೆ ಫೇಕ್‌ ವಿಡಿಯೊ ಕಂಡರೆ ದೂರು ಕೊಡಿ

ಇನ್ನು ನನ್ನ ಬಗ್ಗೆಯೇ ಕಾಂಗ್ರೆಸ್‌ ನಕಲಿ ವಿಡಿಯೊ ಮಾಡಿದೆ. ಚುನಾವಣೆಯಲ್ಲಿ ಸೋತು ಮೈದಾನ ಬಿಟ್ಟು ಹೋದವರಿಂದ ಫೇಕ್‌ ವಿಡಿಯೊ ಹೊರಗೆ ಬರುತ್ತಿದೆ. ಸೋಷಿಯಲ್‌ ಮೀಡಿಯಾಗಳಲ್ಲಿ ಅಂಥ ವಿಡಿಯೊಗಳನ್ನು ಅಪ್ಲೋಡ್‌ ಮಾಡುತ್ತಾ ಬರುತ್ತಿದ್ದಾರೆ. ಆ ರೀತಿಯ ಫೇಕ್‌ ವಿಡಿಯೊಗಳು ನಿಮ್ಮ ಗಮನಕ್ಕೆ ಬಂದರೆ ಪೊಲೀಸರಿಗೆ ದೂರು ಕೊಡಿ. ನಮ್ಮ ದೇಶದ ಕಾನೂನಿನಲ್ಲಿ ಫೇಕ್‌ ವಿಡಿಯೊ ಗ್ಯಾಂಗ್‌ಗೆ ತಕ್ಕ ಶಿಕ್ಷೆಯನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಶ್ರೀನಿವಾಸ್‌ ಪ್ರಸಾದ್‌ ನಿಧನಕ್ಕೆ ಕಂಬನಿ

ಇಂದು ಬೆಳಗ್ಗೆ ಬಿಜೆಪಿ ನಾಯಕ ಹಾಗೂ ಸಾಮಾಜಿಕ ನ್ಯಾಯದ ಸಿಪಾಯಿ ವಿ. ಶ್ರೀನಿವಾಸ್‌ ಪ್ರಸಾದ್ ನಿಧನ ಸುದ್ದಿ ಕೇಳಿ ನನಗೆ ನೋವಾಯಿತು. ಚಾಮರಾಜನಗರದ ಸಂಸದರಾಗಿದ್ದ ಶ್ರೀನಿವಾಸ್‌ ಪ್ರಸಾದ್‌ ಜನರ ನಾಯಕನಾಗಿ ರಾಜಕೀಯದಲ್ಲಿ ಬೆಳೆದು ಹಲವು ದಶಕಗಳಿಂದ ಸಾಮಾಜಿಕ ಜೀವನದಲ್ಲಿದ್ದರು. ಬಡವರು, ಶೋಷಿತರು ಹಾಗೂ ವಂಚಿತರ ಸೇವೆಯಲ್ಲಿ ತೊಡಗಿಕೊಂಡಿದ್ದರು. ಕೇಂದ್ರ ಹಾಗೂ ರಾಜ್ಯದಲ್ಲಿ ಮಂತ್ರಿಯೂ ಆಗಿ ಜನಸೇವೆ ಮಾಡಿದ್ದನ್ನು ಯಾವಾಗಲೂ ಮರೆಯಲ್ಲ. ಶ್ರೀನಿವಾಸ್ ಪ್ರಸಾದ್ ಆತ್ಮಕ್ಕೆ ಸದ್ಗತಿ ಸಿಗಬೇಕು, ಪ್ರಸಾದ್ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಸಿಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಾರ್ಥಿಸಿದರು.

ಇದನ್ನೂ ಓದಿ: Viral Video: ನಮಗೆ ಹಿಂದೂ ಮತಗಳ ಅಗತ್ಯವಿಲ್ಲ: ಕಾಂಗ್ರೆಸ್‌ ನಾಯಕನ ವಿಡಿಯೋ ವೈರಲ್‌

ಬಾಲಕಿಯ ಫೋಟೊ ತೆಗೆಯಲು ಹೇಳಿದ ಮೋದಿ!

ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ತಾಯಿಯ ಫೋಟೊವನ್ನು ಬಾಲಕಿಯೊಬ್ಬಳು ಪ್ರದರ್ಶನ ಮಾಡುತ್ತಿದ್ದಳು. ಇದನ್ನು ಭಾಷಣದ ಮಧ್ಯೆಯೇ ಗಮನಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎಸ್‌ಪಿಜಿ ಕಮಾಂಡೋಗಳಿಗೆ ಸೂಚಿಸಿ, ಆ ದೃಶ್ಯದ ಒಂದು ಫೋಟೊವನ್ನು ತೆಗೆದಿಟ್ಟುಕೊಳ್ಳಲು ಹೇಳಿದರು.

Continue Reading
Advertisement
Hasan Pen Drive case Prajwal Revanna expelled from JDS
ರಾಜಕೀಯ2 mins ago

Hassan Pen Drive Case: ಪ್ರಜ್ವಲ್‌ ರೇವಣ್ಣ ಜೆಡಿಎಸ್‌ನಿಂದ ಉಚ್ಚಾಟನೆ? ಎಚ್‌.ಡಿ. ದೇವೇಗೌಡರ ನಿರ್ಧಾರಕ್ಕೇನು ಕಾರಣ?

Ballari Lok Sabha Constituency Congress Candidate E Tukaram Election Campaign in Daroji
ಬಳ್ಳಾರಿ19 mins ago

Lok Sabha Election 2024: ದರೋಜಿ ಗ್ರಾ.ಪಂ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಬಿರುಸಿನ ಪ್ರಚಾರ

Lok Sabha Election
ಪ್ರಮುಖ ಸುದ್ದಿ26 mins ago

Lok Sabha Election: ಇಂದೋರ್​ ಕಾಂಗ್ರೆಸ್​ ಅಭ್ಯರ್ಥಿ ಕಣದಿಂದ ಹಿಂದಕ್ಕೆ; ಚುನಾವಣೆಗೆ ಮೊದಲೇ ಬಿಜೆಪಿಗೆ ಮತ್ತೊಂದು ಸೀಟು!

PM Narendra modi in Bagalakote and Attack on Congress
Lok Sabha Election 202431 mins ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

Family Drama Trailer Out
ಸಿನಿಮಾ40 mins ago

Family Drama Trailer: ʻಡೇರ್ ಡೆವಿಲ್ ಮುಸ್ತಾಫ’ ತಂಡದಿಂದ ವಿಭಿನ್ನ ಸಿನಿಮಾ!

gold rate today rakul
ಚಿನ್ನದ ದರ44 mins ago

Gold Rate Today: ಚಿನ್ನದ ಬೆಲೆಯಲ್ಲಿ ₹330 ಇಳಿಕೆ; ಇಂದಿನ ಬಂಗಾರ- ಬೆಳ್ಳಿ ದರಗಳು ಇಲ್ಲಿವೆ

Narenda Modi Sonia gandhi
ದೇಶ49 mins ago

Narendra Modi: ರಾಜಕೀಯ ದ್ವೇಷ ಮರೆತು ಸೋನಿಯಾ, ರಾಹುಲ್‌ಗೆ ಸಹಾಯ; ಹೀಗ್ಯಾಕಂದ್ರು ಪ್ರಧಾನಿ ಮೋದಿ?

dheeren rajkumar announces a new film change his name
ಸ್ಯಾಂಡಲ್ ವುಡ್1 hour ago

Dheeren Rajkumar: ಹೆಸರು ಬದಲಿಸಿಕೊಂಡು ಅದೃಷ್ಟ ಪರೀಕ್ಷೆಗಿಳಿದ ರಾಜ್‌ಕುಮಾರ್ ಮೊಮ್ಮಗ!

MS Dhoni
Latest1 hour ago

MS Dhoni : ಐಪಿಎಲ್​ನಲ್ಲಿ 150 ಪಂದ್ಯಗಳನ್ನು ಗೆದ್ದ ಹೆಗ್ಗಳಿಕೆಗೆ ಪಾತ್ರರಾದ ಧೋನಿ; ಅವರ ಬಳಿಕ ಯಾರಿದ್ದಾರೆ?

Mahesh Babu shares sweet moments with sister Manjula and Prabhas aunt
South Cinema1 hour ago

Mahesh Babu: ಸಹೋದರಿ ಮಂಜುಳಾ, ಪ್ರಭಾಸ್ ಚಿಕ್ಕಮ್ಮ ಜತೆ ಸಿಹಿಕ್ಷಣ ಹಂಚಿಕೊಂಡ ಮಹೇಶ್‌ ಬಾಬು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 202431 mins ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ9 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202421 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202423 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌