Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ - Vistara News

ಕರ್ನಾಟಕ

Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

Belagavi Winter Session: ಬರ ಪೀಡಿತ ಪ್ರದೇಶಕ್ಕೆ ಸಿಎಂ ಮತ್ತು ಸಚಿವರು ಎಲ್ಲ ಕಡೆ ಹೋಗಲು ಸಾಧ್ಯವಿಲ್ಲ ಎಂಬುದು ನಮಗೂ ಗೊತ್ತು. ಆದರೆ, ಕೆಲವು ಕಡೆಯಾದರೂ ಹೋಗಬೇಕಲ್ಲವೇ? ನೋಡಲ್ ಅಧಿಕಾರಿ ವಿಮಾನದಲ್ಲಿ ಹೋಗಿ ಮೀಟಿಂಗ್ ಮಾಡಿ ವಾಪಸ್ ಬರುತ್ತಾರೆ. ಕೊನೆಗೆ ಅಧಿಕಾರಿಗಳು ಯಾವುದೇ ಸಮಸ್ಯೆ ಇಲ್ಲ ಎಂದು ವರದಿ ಕೊಡುತ್ತಾರೆ ಎಂದು ಆರ್.‌ ಅಶೋಕ್‌ ಕಿಡಿಕಾರಿದರು.

VISTARANEWS.COM


on

R Ashok
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಳಗಾವಿ: ರಾಜ್ಯದಲ್ಲಿ ಭೀಕರ ಬರಗಾಲ (Karnataka Drought) ಇದೆ. ಆದರೆ, ಸಿಎಂ ಸಿದ್ದರಾಮಯ್ಯ (CM Siddaramaiah) ಅವರನ್ನೂ ಸೇರಿಸಿ ಯಾವೊಬ್ಬ ಸಚಿವರೂ ಸಹ ರೈತರನ್ನು ಭೇಟಿ ಮಾಡುವ ಕೆಲಸ ಮಾಡಲಿಲ್ಲ. ಸಿಎಂ ಮತ್ತು ಸಚಿವರು ಎಲ್ಲ ಕಡೆ ಹೋಗಲು ಸಾಧ್ಯವಿಲ್ಲ ಎಂಬುದು ನಮಗೂ ಗೊತ್ತು. ಆದರೆ, ಕೆಲವು ಕಡೆಯಾದರೂ ಹೋಗಬೇಕಲ್ಲವೇ? ನೋಡಲ್ ಅಧಿಕಾರಿ ವಿಮಾನದಲ್ಲಿ ಹೋಗಿ ಮೀಟಿಂಗ್ ಮಾಡಿ ವಾಪಸ್ ಬರುತ್ತಾರೆ. ಕೊನೆಗೆ ಅಧಿಕಾರಿಗಳು ಯಾವುದೇ ಸಮಸ್ಯೆ ಇಲ್ಲ ಎಂದು ವರದಿ ಕೊಡುತ್ತಾರೆ. ಸಿದ್ದರಾಮಯ್ಯ ಸಿದ್ದರಾಮಣ್ಣ ಮತ್ತು ನಮ್ಮ ಊರಲ್ಲೂ ಅದೇ ಕುರುಕ್ಷೇತ್ರ ಎಂದು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ (Belagavi Winter Session) ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ (Opposition leader R Ashok) ಕಿಡಿಕಾರಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಬರದ ಮೇಲಿನ ಚರ್ಚೆಯನ್ನು ಕೈಗೆತ್ತಿಕೊಂಡು ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌, ಬರ ಪರಿಸ್ಥಿತಿ ನಿರ್ವಹಣೆ ವಿಷಯದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅಧಿಕಾರಿಗಳು ಕುಳಿತಲ್ಲೇ ವರದಿ ತಯಾರಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Teachers Recruitment: ಪ್ರಾಥಮಿಕ, ಪ್ರೌಢ ಶಾಲೆ ಶಿಕ್ಷಕರ ನೇಮಕ; ಒಟ್ಟು ಎಷ್ಟು ಹುದ್ದೆ ನಿರೀಕ್ಷೆ?

ಯಾವುದಾದರೂ ತಹಸೀಲ್ದಾರ್ ಎಷ್ಟು ಊರಿಗೆ ಹೋಗಿರುವುದಾಗಿ ಹೇಳಿದ್ದಾರೆ ಎಂಬುದನ್ನು ಯಾರಾದರೂ ಹೇಳಿ ನೋಡೋಣ? ಗ್ರಾಮ ಪಂಚಾಯಿತಿಯಲ್ಲಿ ಕುಳಿತುಕೊಂಡು ಅಧಿಕಾರಿಗಳಿಗೆ ಏನು ಕೆಲಸ? ಬೆಳೆ ಎಷ್ಟು ನಷ್ಟ ಆಗಿದೆ ಅಂತ ನೋಡಿ ಹೇಳಬೇಕಲ್ಲವೇ? ಎಂದು ಆರ್.‌ ಅಶೋಕ್‌ ಪ್ರಶ್ನೆ ಮಾಡಿದರು.

ಸಿದ್ದರಾಮಯ್ಯ ಸಿಎಂ ಆಗಿ ಮುಂದೆ ಇರ್ತಾರೋ ಇಲ್ಲವೋ ಗೊತ್ತಿಲ್ಲ!

ಸಿದ್ದರಾಮಯ್ಯ 15 ಬಾರಿ ಬಜೆಟ್ ಮಂಡಿಸಿದ್ದಾರೆ. 2 ಬಾರಿ ಸಿಎಂ ಆಗಿದ್ದಾರೆ. 14 ಬಾರಿ ಅಲ್ವಾ ಒಂದು ಹೆಚ್ಚಾಗಿ ಹೇಳಿದ್ದೇನೆ. ಮುಂದೆಯೂ ನೀವೇ ಇರುತ್ತೀರಿ ಎಂದು ಹೇಳಿದ್ದೇನೆ. ನನಗೆ ಈ ಬಗ್ಗೆ ಗೊತ್ತಿಲ್ಲ. ಮಂಡ್ಯ ಎಂಎಲ್‌ಎ ರವಿ ಗಣಿಗ ಅವರು ಮಂಡ್ಯದಲ್ಲಿ 2 ವರ್ಷ, 3 ವರ್ಷ ಆದ ಮೇಲೆ ಯಾರನ್ನೋ ತರುತ್ತೇವೆ ಎಂದು ಹೇಳಿದ್ದರು ಎಂಬುದಾಗಿ ಆರ್.‌ ಅಶೋಕ್‌ ಸಿಎಂ ಸಿದ್ದರಾಮಯ್ಯ ಅವರ ಕಾಲೆಳೆಯುತ್ತಿದ್ದಂತೆ ಎದ್ದುನಿಂತ ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ, ನಿಮ್ಮ ಪಕ್ಷದ ಶಾಸಕರೊಬ್ಬರು ಮುಂದಿನ 10 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಅಂತ ಹೇಳಿದ್ದಾರೆ ಎಂದು ನೆನಪಿಸಿದರು. ಅದಕ್ಕೆ ಆರ್.‌ ಅಶೋಕ್‌, ಆಯ್ತು ಅಂತ ಹೇಳಿ ಸುಮ್ಮನಾದರು.

ಕೇರಳದಿಂದ ಟಿಸಿ ಖರೀದಿ ಏಕೆ? ಆರಗ ಜ್ಞಾನೇಂದ್ರ ಪ್ರಶ್ನೆ

ಕೇರಳದಿಂದ ನಾಲ್ಕು ಸಾವಿರ ಟಿಸಿಗಳನ್ನು ಏಕೆ ಖರೀದಿ ಮಾಡುತ್ತಿದ್ದೀರಿ? ನಮ್ಮ ರಾಜ್ಯದಲ್ಲಿ ಉತ್ತಮ ಸಂಸ್ಥೆಗಳು ಇದ್ದರೂ ಕೇರಳದ ಸಂಸ್ಥೆಗಳಿಂದ ಟ್ರಾನ್ಸ್‌ಫಾರ್ಮ್ ಅನ್ನು ಖರೀದಿ ಮಾಡಿದ್ದು ಏಕೆ? ಎಂದು ಆರಗ ಜ್ಞಾನೇಂದ್ರ ಸದನದಲ್ಲಿ ಇದೇ ವೇಳೆ ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ಇಂಧನ ಸಚಿವ ಕೆ.ಜೆ. ಜಾರ್ಜ್, ನಮ್ಮ ರಾಜ್ಯದ ಸಂಸ್ಥೆಯಿಂದಲೂ ಟಿಸಿ ಕೂಡ ಖರೀದಿ ಮಾಡುತ್ತಿದ್ದೇವೆ. ಹೆಚ್ಚುವರಿ ಟಿಸಿಗೆ ಕೇರಳ ಸರ್ಕಾರದ ಅಧೀನದಲ್ಲಿರುವ ಸಂಸ್ಥೆಯಿಂದ ಖರೀದಿ ಮಾಡುತ್ತಿದ್ದೇವೆ. ಇದೇನು ಹೊಸತಲ್ಲ, ಬೆಸ್ಕಾಂ ಮನವಿ ಮೇರೆಗೆ ಒಪ್ಪಿಗೆ ಕೊಟ್ಟಿದ್ದೇವೆ ಎಂದು ಹೇಳಿದರು.

ಟಿಸಿ ಬದಲಾಯಿಸಲು ಹಣ ಕೇಳುತ್ತಿದ್ದಾರೆ!

ಈ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌, ರೈತರು ಹೇಳಿದ್ದನ್ನು ನಾನು ಹೇಳುತ್ತಿದ್ದೇನೆ. ಒಂದು ಟಿಸಿ ರಿಪೇರಿಗೆ ಹತ್ತರಿಂದ ಐದಿನೈದು ದಿನಗಳನ್ನು ತೆಗೆದುಕೊಳ್ಳುತ್ತಾರೆ. ಒಂದು ಕಂಬ ಹಾಕಲು ಎಂಟು ಸಾವಿರ ರೂಪಾಯಿಯನ್ನು ತೆಗೆದುಕೊಳ್ಳುತ್ತಾರೆ. ಏಳೆಂಟು ಬೋರ್‌ವೆಲ್‌ಗಳಿಗೆ ಒಂದು ಟ್ರಾನ್ಸ್‌ಫಾರ್ಮರ್ ಇರುತ್ತದೆ. ಅದು ರಿಪೇರಿಯಾದರೆ ಎಲ್ಲರೂ ಎರಡು ಸಾವಿರ ರೂಪಾಯಿ ಹಾಕಬೇಕು. ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಇದಕ್ಕೆ ಸಾಕ್ಷಿ ಕೇಳಿದ್ದರು. ಶಾಸಕ ಬಾಲಕೃಷ್ಣ ಅವರು ಹಿಂದೆಯೂ ಇತ್ತು, ಈಗಲೂ ಇದೆ ಎಂದು ಹೇಳುತ್ತಿದ್ದಾರೆ. ಸಾಕ್ಷಿಗೆ ಅವರ ಈ ಹೇಳಿಕೆಯೇ ಸಾಕು ಅನ್ನಿಸುತ್ತದೆ ಎಂದು ಹೇಳಿದರು.

ಹಣ ಕೇಳುವ ಅಧಿಕಾರಿ ಹೆಸರು ಹೇಳಿ; ಕ್ರಮ ತೆಗೆದುಕೊಳ್ಳುವೆ

ಶಾಸಕ ಸುನೀಲ್ ಕುಮಾರ್ ಮಾತನಾಡಿ, 24 ಗಂಟೆಯೊಳಗೆ ಟಿಸಿ ಸರಿ‌ ಮಾಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದೆ. ಅದಕ್ಕೆ ಪೂರಕವಾಗಿ ಕ್ರಮ ತೆಗೆದುಕೊಂಡಿದ್ದರು. ಬರಗಾಲದ ಸಂದರ್ಭದಲ್ಲಿ ಟಿಸಿ ಬದಲಾವಣೆಗೆ ಹಣ ಕೇಳುತ್ತಿದ್ದಾರೆ ಎಂದು ಕಿಡಿಕಾರಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಕೆ.ಜೆ. ಜಾರ್ಜ್‌, ಈಗ ಅಧಿಕಾರಿಗಳು ಹಣ ಕೇಳುತ್ತಾ ಇದ್ದಾರೆ ಎಂದು ವಿಪಕ್ಷ ನಾಯಕರು ಹೇಳುತ್ತಾ ಇದ್ದಾರೆ. ಯಾವ ಅಧಿಕಾರಿಗಳು ಎಂದು ನನ್ನ ಗಮನಕ್ಕೆ ತಂದರೆ ನಾನು ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಭರವಸೆ ನೀಡಿದರು.

ಟಿಸಿಗೆ ಸಂಬಂಧಿಸಿ ಎಲ್ಲದಕ್ಕೂ ಹಣ ಕೊಡಬೇಕು: ಅಶೋಕ್‌ ಕಿಡಿ

ಈ ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.‌ ಅಶೋಕ್, ಟಿಸಿಗಳನ್ನು ರಿಪೇರಿ ಮಾಡಲು ಹಣ ಕೊಡಬೇಕು. ರಿಪೇರಿಗೆ ತೆಗೆದುಕೊಂಡು ಹೋದ ಆಟೋ ಚಾರ್ಜ್ ಕೊಡಬೇಕು. ಟಿಸಿಗೆ ಆಯಿಲ್‌ ಅನ್ನು ಸ್ವತಃ ರೈತರೇ ಕೊಡಬೇಕು. ಉಪ್ಪು ಸಹ ಕೊಡಬೇಕು, ಸರ್ಕಾರಕ್ಕೆ ಉಪ್ಪು ಸಹ ಬರವೇ? ಎಂದು ಸದನದ ಗಮನಕ್ಕೆ ತಂದರು. ಆಗ ಇದಕ್ಕೆ ಪ್ರತಿಕ್ರಿಯೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್‌, ಅಂತಹ ಯಾವ ಘಟನೆಗಳು ಆಗಿವೆ ಎಂಬ ಬಗ್ಗೆ ನಮಗೆ ವಿವರ ಕೊಡಿ. ಯಾರು ತಪ್ಪಿತಸ್ಥರು ಇದ್ದಾರೆ. ಅಂಥವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಇನ್ನೂ ಸ್ಟ್ರಾಂಗ್ ಆಗಿ ಮಾತಾಡಬೇಕು ಎಂದ ರಾಯರೆಡ್ಡಿ

ಬರದ ವಿಷಯದಲ್ಲಿ ಸರ್ಕಾರ ಅಧಿಕಾರಿಗಳ ಮಾತು ಕೇಳಿದರೆ ಆಗುವುದಿಲ್ಲ. ಜನರ ಬಳಿಯೇ ನೀವು ಹೋಗಿ, ಸತ್ಯ ಗೊತ್ತಾಗುತ್ತದೆ ಎಂದು ಆರ್.‌ ಅಶೋಕ್‌ ಹೇಳುತ್ತಿದ್ದಂತೆ ಮಧ್ಯಪ್ರವೇಶ ಮಾಡಿದ ಶಾಸಕ ಬಸವರಾಜ್ ರಾಯರೆಡ್ಡಿ, ಅಶೋಕ್ ಅವರೇ ನಿಮ್ಮ ಬಳಿ ಇರುವ ಮಾಹಿತಿ ಕೊಟ್ಟು ಬಿಡಿ. ಆಡಳಿತಾತ್ಮಕವಾಗಿ ಒಳ್ಳೆಯದು ಆಗಲಿದೆ. ನೀವು ರೂಲಿಂಗ್ ಪಾರ್ಟಿಯವರು ಮಾತಾಡಿದಂತೆ ಮಾತಡುತ್ತೀರಿ. ನೀವು ವಿಪಕ್ಷ ನಾಯಕರು. ಇನ್ನೂ ಸ್ಟ್ರಾಂಗ್ ಆಗಿ ಮಾತಾಡಬೇಕು ಎಂದು ಸಲಹೆ ನೀಡಿದರು.

ಕರಡಿ ದಾಳಿಯಾದವರಿಗೆ ಪರಿಹಾರ ಕೊಡಿ

ಬಳಿಕ ಮಾತು ಮುಂದುವರಿಸಿದ ಆರ್. ಅಶೋಕ್, ಕರೆಂಟ್ ಬರೋದು ಬೆಳಗಿನ ಜಾವ ಮೂರು ಗಂಟೆ ಎಂದು ಹೇಳುತ್ತಾರೆ. ಆದರೆ ಅದೂ ಸಹ ಎರಡು ಗಂಟೆ ಬರುತ್ತದೆ. ಅದು ಸಹ ಟ್ರಿಪ್‌ ಆಗುತ್ತಿರುತ್ತದೆ. ಟಿಸಿಗಳು ಸುಟ್ಟು ಹೋಗುತ್ತವೆ. ರಾತ್ರಿ ಕರೆಂಟ್ ಕೊಡುತ್ತೇವೆ ಎಂದು ಹೇಳಿದರು. ರಾತ್ರಿ ಕರೆಂಟ್ ಹಾಕಲು ಹೋದವನಿಗೆ ಕರಡಿ ಕಚ್ಚಿದೆ. ಹಗಲು ಹೊತ್ತು ಕರೆಂಟ್ ಕೊಟ್ಟಿದ್ದರೆ ಅನುಕೂಲ ಆಗುತ್ತಿತ್ತು. ಕರಡಿ ಕಚ್ಚಿದರೆ ಅರಣ್ಯ ಇಲಾಖೆಯಿಂದ ಕಡಿಮೆ ಪರಿಹಾರ ಸಿಗುತ್ತದೆ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಇಂಧನ ಕೆ.ಜೆ ಜಾರ್ಜ್, ನನಗೆ ಕೆಲ ರೈತರು ಮನವಿ ಮಾಡಿದ್ದಾರೆ. ನಿರಂತರವಾಗಿ ಕರೆಂಟ್ ಕೊಟ್ಟರೆ ಬೋರ್‌ವೆಲ್‌ ಅನ್ನು ನಿರಂತರವಾಗಿ ಬಳಕೆ‌ ಮಾಡಲು ಆಗಲ್ಲ. ಹಗಲು ಮತ್ತು ರಾತ್ರಿ ವೇಳೆ ಸಮಯ ಹಂಚಿಕೆ ವಿದ್ಯುತ್‌ ಕೊಡಿ ಎಂದು ಮನವಿ ಮಾಡಿದ್ದಾರೆ. ಕರಡಿ, ಆನೆ ಕಾಟ ಇರುವ ಕಡೆ ಹಗಲು ಹೊತ್ತು ಕರೆಂಟ್ ಕೊಡಲು ಆದೇಶ ಮಾಡಲಾಗಿದೆ. ರಾತ್ರಿ ಹೊತ್ತು ಬೋರ್‌ವೆಲ್ ಆನ್ ಮಾಡಲು ಹೋದಾಗ ಕರಡಿ ದಾಳಿಗೆ ತುತ್ತಾದವರಿಗೆ ನಮ್ಮ ಇಲಾಖೆಯಿಂದಲೇ ಪರಿಹಾರ ನೀಡಲಾಗುತ್ತದೆ. ಆದರೆ, ಇದು ಇದೊಂದು ಪ್ರಕರಣಕ್ಕೆ ಮಾತ್ರ ಎಂದು ಹೇಳಿದರು. ಎಲ್ಲರಿಗೂ ಅನ್ವಯ ಆಗಲಿ ಎಂದು ವಿಪಕ್ಷ ಸದಸ್ಯರು ಆಗ್ರಹಿಸಿದರು. ಅದಕ್ಕೆ ಇಲ್ಲ ಎಂದು ಕೆ.ಜೆ. ಜಾರ್ಜ್‌ ಪ್ರತಿಕ್ರಿಯೆ ನೀಡಿದರು.

ಸಿದ್ದರಾಮಯ್ಯ ಅವರಿಗೆ ಹಣ ಹೊಂದಿಸುವ ಸಾಮರ್ಥ್ಯವಿದೆ

ರೈತರಿಗಾಗಿ ಹಗಲು ಹೊತ್ತು ಕರೆಂಟ್ ಕೊಡಿ. ಇದಕ್ಕೆ ಸಾವಿರ ಕೋಟಿ ರೂ. ಆಗಬಹುದು. ಸಿಎಂ ಸಿದ್ದರಾಮಯ್ಯ ಅವರಿಗೆ ಹಣ ಹೊಂದಿಸುವ ಸಾಮರ್ಥ್ಯವಿದೆ. ಮೇವು ಸಂಗ್ರಹ ಎಂಟರಿಂದ ಹತ್ತು ಆಗುತ್ತದೆ ಎಂದು ಹೇಳಿದ್ದಾರೆ. ಎಲ್ಲೂ ಸಂಗ್ರಹ ಮಾಡಿದ್ದು ಕಾಣಿಸಿಲ್ಲ. ನಮ್ಮ ಬಳಿ ಹಣವಿದೆ, ಆದರೆ ಮೇವು ಖರೀದಿಗೆ ಸರ್ಕಾರ ಆದೇಶ ಕೊಟ್ಟಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಮುಂದೆ ಜನವರಿಯಲ್ಲಿ ಮೇವು ಎಲ್ಲಿಂದ ತರುತ್ತೀರ? ಇದುವರೆಗೆ ಒಂದು ಗೋ ಶಾಲೆಯನ್ನೂ ಮಾಡಿಲ್ಲ. ಸರ್ಕಾರ‌ ಮಾಡಿದ್ದನ್ನು ಸಹ ಕ್ಯಾನ್ಸಲ್ ಮಾಡಿದ್ದಾರೆ. ರೈತರಿಗೆ ಮೇವು ಕೊಡಬೇಕು. ದೇವರ ಹೆಸರಿನಲ್ಲಿ ಗೋವುಗಳನ್ನು ಬಿಟ್ಟಿರುತ್ತಾರೆ. ಈ ಬಗ್ಗೆ ಬಳ್ಳಾರಿ ಡಿಸಿ ಜತೆಗೆ ಮಾತನಾಡಿದ್ದೇನೆ. ಅವರು ನಮ್ಮ ಬಳಿ ಹಣ ಇದೆ ಎಂದು ಹೇಳುತ್ತಾರೆ. ಹಣ ಇರುವುದು ಎಲ್ಲರಿಗೂ ಗೊತ್ತಿದೆ. ಆದರೆ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಖರ್ಚು ಮಾಡುವ ಮನಸ್ಸು ಮಾಡುತ್ತಿಲ್ಲ. ಜಿಲ್ಲಾ‌ ಮಂತ್ರಿಗಳು ಪರಿಶೀಲನೆ ಸಭೆ ನಡೆಸಿ ಹಣ ಬಿಡುಗಡೆಗೆ ಆದೇಶ ಮಾಡಬೇಕಿತ್ತು. ಅಧಿಕಾರಿಗಳಿಗೆ ಬುದ್ಧಿ ಕಲಿಸಿದರೆ ಎಲ್ಲರೂ ದಾರಿಗೆ ಬರುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: Belagavi Winter Session: ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ; ತಿದ್ದುಪಡಿ ವಿಧೇಯಕ ಮಂಡನೆ

ಸಿಎಂ ಸಿದ್ದರಾಮಯ್ಯ ಜನತಾ ದರ್ಶನವನ್ನು ಪ್ರತಿ ತಿಂಗಳು ಮಾಡಬೇಕು ಎಂದು ಆರ್.‌ ಅಶೋಕ್ ಇದೇ ವೇಳೆ ಒತ್ತಾಯ ಮಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading
Advertisement
Live News12 hours ago

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

Latest17 hours ago

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

Latest19 hours ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ1 day ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ2 days ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ2 days ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

ದೇಶ3 days ago

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

ರಾಜಕೀಯ3 days ago

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

ರಾಜಕೀಯ3 days ago

ತಮಿಳುನಾಡು ರಾಜಕೀಯಕ್ಕೆ ರೋಚಕ ಟ್ವಿಸ್ಟ್‌, ದಳಪತಿ ಪ್ರಮಾಣವಚನಕ್ಕೆ ಬ್ರೇಕ್‌, ಡಿಎಂಕೆ-ಎಐಎಡಿಎಂಕೆ ಮೈತ್ರಿ ಸಾಧ್ಯತೆ

ಕ್ರೈಂ3 days ago

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌