Rahul Gandhi: ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿಗೆ ಇರುವ ಅಧಿಕಾರ ಏನೇನು? - Vistara News

ರಾಜಕೀಯ

Rahul Gandhi: ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿಗೆ ಇರುವ ಅಧಿಕಾರ ಏನೇನು?

2014 ಮತ್ತು 2019ರಲ್ಲಿ ಲೋಕಸಭೆಯಲ್ಲಿ ಶೇ.10ಕ್ಕಿಂತ ಕಡಿಮೆ ಸ್ಥಾನಗಳನ್ನು ಹೊಂದಿದ್ದ ಕಾಂಗ್ರೆಸ್‌ನ ಇದೀಗ ಹತ್ತು ವರ್ಷಗಳ ಬಳಿಕ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ವಿರೋಧ ಪಕ್ಷಕ್ಕೆ ಕನಿಷ್ಠ 55 ಸ್ಥಾನಗಳ ಅಗತ್ಯವಿದೆ. 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 99 ಸ್ಥಾನಗಳನ್ನು ಗಳಿಸಿದೆ. ವಿರೋಧ ಪಕ್ಷದ ನಾಯಕನಾಗಿರುವ ರಾಹುಲ್‌ ಗಾಂಧಿ ಅವರಿಗೆ ಇರುವ ಅಧಿಕಾರ ಏನೇನು ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Rahul Gandhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂಡಿಯಾ ಮೈತ್ರಿ ಕೂಟವು (India alliance) ಎನ್‌ಡಿಎ (NDA) ಸರ್ಕಾರದ ವಿರುದ್ಧ ಕಾಂಗ್ರೆಸ್ (congress) ನಾಯಕ ರಾಹುಲ್ ಗಾಂಧಿ (rahul gandhi) ಅವರನ್ನು ಲೋಕಸಭೆಯ (loksabha) ವಿರೋಧ ಪಕ್ಷದ ನಾಯಕರನ್ನಾಗಿ (Leader of the Opposition) ನೇಮಿಸಿದೆ. ವಿರೋಧ ಪಕ್ಷದ ನಾಯಕನಿಗೆ ಸಂಸತ್ತಿನಲ್ಲಿ ಕೆಲವು ಅಧಿಕಾರಗಳಿವೆ. ಹತ್ತು ವರ್ಷಗಳ ಬಳಿಕ ಕಾಂಗ್ರೆಸ್ ಈ ಬಾರಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆದಿದೆ.

2014 ಮತ್ತು 2019ರಲ್ಲಿ ಲೋಕಸಭೆಯಲ್ಲಿ ಶೇ.10ಕ್ಕಿಂತ ಕಡಿಮೆ ಸ್ಥಾನಗಳನ್ನು ಹೊಂದಿದ್ದ ಕಾಂಗ್ರೆಸ್‌ನ ಇದೀಗ ಹತ್ತು ವರ್ಷಗಳ ಬಳಿಕ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ವಿರೋಧ ಪಕ್ಷಕ್ಕೆ ಕನಿಷ್ಠ 55 ಸ್ಥಾನಗಳ ಅಗತ್ಯವಿದೆ. 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 99 ಸ್ಥಾನಗಳನ್ನು ಗಳಿಸಿತು.

ವಿರೋಧ ಪಕ್ಷದ ನಾಯಕ ಸಾಂವಿಧಾನಿಕ ಹುದ್ದೆಯಲ್ಲದಿದ್ದರೂ, ಪ್ರಮುಖ ನೇಮಕಾತಿಗಳನ್ನು ಒಳಗೊಂಡಿರುವ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಕೆಲವು ಅಧಿಕಾರಗಳನ್ನು ಹೊಂದಿದೆ. ಈ ಬಾರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಈ ಅಧಿಕಾರ ಚಲಾಯಿಸುವ ಅವಕಾಶ ಸಿಕ್ಕಿದೆ.

ವಿರೋಧ ಪಕ್ಷದ ನಾಯಕನಿಗೆ ಯಾವ ಅಧಿಕಾರವಿದೆ?

ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರು ನಿರ್ಣಾಯಕ ಸಂಸದೀಯ ಸಮಿತಿಗಳ ಸದಸ್ಯರಾಗಿರಲಿದ್ದಾರೆ. ಅವರು ಹಲವಾರು ಜಂಟಿ ಸಂಸದೀಯ ಸಮಿತಿಗಳು, ಸಾರ್ವಜನಿಕ ಖಾತೆಗಳ ಸಮಿತಿಗಳು, ಸಾರ್ವಜನಿಕ ಉದ್ಯಮ ಸೇರಿದಂತೆ ಹಲವು ಸಮಿತಿಗಳ ಸದಸ್ಯರಾಗಿರುತ್ತಾರೆ. ಪ್ರಮುಖ ಹುದ್ದೆಗಳಿಗೆ ಅಧಿಕಾರಿಗಳನ್ನು ನೇಮಿಸುವ ವಿಚಾರದಲ್ಲಿಯೂ ಅವರ ಮಾತಿಗೆ ಪ್ರಾಮುಖ್ಯತೆ ಇರುತ್ತದೆ.

ಇದಲ್ಲದೆ ಶಾಸನಬದ್ಧ ಸಂಸ್ಥೆಗಳಾದ ಸೆಂಟ್ರಲ್ ವಿಜಿಲೆನ್ಸ್ ಕಮಿಷನ್, ಸೆಂಟ್ರಲ್ ಇನ್ಫಾರ್ಮೇಶನ್ ಕಮಿಷನ್, ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್, ನ್ಯಾಷನಲ್ ಹ್ಯೂಮನ್ ರೈಟ್ಸ್ ಕಮಿಷನ್ ಆಫ್ ಇಂಡಿಯಾ, ಲೋಕಪಾಲ್ ಮತ್ತು ಹೆಚ್ಚಿನವುಗಳ ಮುಖ್ಯಸ್ಥರನ್ನು ನೇಮಿಸುವ ಜವಾಬ್ದಾರಿಯನ್ನು ಹೊಂದಿರುವ ಕೆಲವು ಸಮಿತಿಗಳ ಸದಸ್ಯರಾಗಿಯೂ ಸಹ ರಾಹುಲ್ ಗಾಂಧಿ ಅರ್ಹರಾಗಿದ್ದಾರೆ.

ಗಾಂಧಿ ಕುಟುಂಬದ ಮೂರನೇ ಸದಸ್ಯ

ರಾಹುಲ್ ಗಾಂಧಿ ಅವರು ಗಾಂಧಿ ಕುಟುಂಬದ ಮೂರನೇ ಸದಸ್ಯರಾಗಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಅವರಿಗಿಂತ ಮೊದಲು ಅವರ ಅವರ ತಾಯಿ ಸೋನಿಯಾ ಗಾಂಧಿ ಮತ್ತು ತಂದೆ ರಾಜೀವ್ ಗಾಂಧಿ ಈ ಅಧಿಕಾರ ನಿಭಾಯಿಸಿದ್ದರು. ರಾಜೀವ್ ಗಾಂಧಿ ಅವರು 1989- 1990ರವರೆಗೆ ಈ ಹುದ್ದೆಯಲ್ಲಿದ್ದರೆ, ಸೋನಿಯಾ 1999ರಿಂದ 2004ರವರೆಗೆ ಈ ಅಧಿಕಾರ ವಹಿಸಿಕೊಂಡಿದ್ದರು.

ಉತ್ತರ ಪ್ರದೇಶದ ರಾಯ್ಬರೇಲಿಯ ಕಾಂಗ್ರೆಸ್ ಸಂಸದ ರಾಹುಲ್‌ ಗಾಂಧಿಯವರು ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ಹೆಚ್ಚುವರಿ ಸಂಬಳ ಮತ್ತು ಭತ್ಯೆ ಪಡೆಯಲಿದ್ದಾರೆ.

ಇದನ್ನೂ ಓದಿ: Narendra Modi: ಅಂಬೇಡ್ಕರ್‌ರನ್ನು ಷಡ್ಯಂತ್ರದಿಂದ ಸೋಲಿಸಿದ ನೆಹರೂ; ಕಾಂಗ್ರೆಸ್‌ನಿಂದ ದಲಿತರ ಶೋಷಣೆ ಎಂದ ಮೋದಿ


ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

HD Kumaraswamy : ಎಲೆಕ್ಷನ್‌ಗೆ 50 ಕೋಟಿ ರೂ.ಗೆ ಡಿಮ್ಯಾಂಡ್‌ ಮಾಡಿ ಉದ್ಯಮಿಗೆ ಬೆದರಿಕೆ; ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

HD Kumaraswamy : ಎಲೆಕ್ಷನ್‌ಗಾಗಿ ಎಚ್‌ಡಿ ಕುಮಾರಸ್ವಾಮಿ ಅವರು 50 ಕೋಟಿ ರೂ.ಗೆ ಡಿಮ್ಯಾಂಡ್‌ ಮಾಡಿ ಉದ್ಯಮಿಗೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಸದ್ಯ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲಾಗಿದೆ.

VISTARANEWS.COM


on

By

HD kumaraswamy And Vijayetata
Koo

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ವಿರುದ್ಧ ಉದ್ಯಮಿ ವಿಜಯ ಟಾಟಾ ಎಂಬುವವರಿಂದ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ 50 ಕೋಟಿ ರೂ. ಹಣಕ್ಕೆ ಡಿಮ್ಯಾಂಡ್ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ವಿಜಯ್ ಟಾಟಾ ದೂರಿನಲ್ಲಿ ಏನಿದೆ?

ರಿಯಲ್ ಎಸ್ಟೇಟ್ ಉದ್ಯಮಿಯಾದ ನಾನು 2018 ರಿಂದ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದೇನೆ. ಎಚ್‌ಡಿ ದೇವೆಗೌಡರ ಪಕ್ಷದ ಸೋಷಿಯಲ್‌ ಮೀಡಿಯಾ ಉಪಾಧ್ಯಕ್ಷನಾಗಿ ನನ್ನನ್ನು ನೇಮಿಸಿದರು. 2019ರ ಮಂಡ್ಯ ಲೋಕಸಭಾ ಚುನಾವಣೆ ವೇಳೆ ಕುಮಾರಸ್ವಾಮಿ ಪರ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಅಭಿಯಾನ ನಡೆಸಿದ್ದೇನೆ. ಕಳೆದ ಕೆಲ ವರ್ಷಗಳಿಂದ ರಿಯಲ್ ಎಸ್ಟೇಟ್ ಉದ್ಯಮದ ಬಗ್ಗೆ ಗಮನಹರಿಸಿದ್ದೆ. ಪಕ್ಷದ ಕಾರ್ಯಗಳಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಆಗಸ್ಟ್ 24, 2024 ರಂದು ರಮೇಶ್ ಗೌಡ ನನ್ನ ನಿವಾಸಕ್ಕೆ ಆಗಮಿಸಿದ್ದರು.

ನನ್ನ ಮನೆಯಲ್ಲಿ ಜತೆಯಲ್ಲಿ ಊಟ ಮಾಡುತ್ತಾ ಚೆನ್ನಪಟ್ಟಣ ಚುನಾವಣೆ ಬಗ್ಗೆ ವಿವರಿಸಿದರು. ನಿಖಿಲ್ ಕುಮಾರಸ್ವಾಮಿಯವರಿಗೆ ಚನ್ನಪಟ್ಟಣ ಚುನಾವಣೆಗೆ ಟಿಕೆಟ್ ನೀಡುವುದು ಅಂತಿಮವಾಗಿದೆ ಎಂದರು. ಇದೇ ವೇಳೆ ಕುಮಾರಸ್ವಾಮಿ ಫೋನ್ ಮಾಡಿದ್ದರು. ನಿಖಿಲ್ ಚನ್ನಪಟ್ಟಣ ಚುನಾವಣೆಗೆ ನಿಲ್ಲುತ್ತಿದ್ದಾರೆ, ಚುನಾವಣೆಗೆ 50 ಕೋಟಿ ರೂ. ಕೊಡಿ ಅಂದರು. ಈ ವೇಳೆ ನಾನು ಆಗಲ್ಲ ಸರ್ ಅಂತೇಳ್ದೆ, ಅದಕ್ಕೆ ಕುಮಾರಸ್ವಾಮಿ ಕೋಪ ಮಾಡಿಕೊಂಡರು. ನೀವು ಬೆಂಗಳೂರಲ್ಲಿ ರಿಯಲ್ ಎಸ್ಟೇಟ್ ನಡೆಸೋದಷ್ಟೇ ಅಲ್ಲ. ಬದುಕುವುದೇ ಕಷ್ಟವಾಗತ್ತೆ ಅಂತ ಬೆದರಿಕೆ ಹಾಕಿ ಫೋನ್ ಕಟ್ ಮಾಡಿದ್ದರು. ನಿಮ್ಮ ರಿಯಲ್ ಎಸ್ಟೇಟ್ ಪ್ರಾಜೆಕ್ಟ್ ಕಂಪ್ಲೀಟ್ ಮಾಡಲಿಕ್ಕೆ ಬಿಡೊಲ್ಲ ಎಂದು ಹೇಳಿದ್ದರಂತೆ.

ಕುಮಾರಸ್ವಾಮಿ ಜತೆ ಫೋನ್‌ನಲ್ಲಿ ಮಾತಾಡುವ ವೇಳೆ ರಮೇಶ್ ಗೌಡ ಎದುರಲ್ಲಿ ಕುಳಿತಿದ್ದರು. ಈ ವೇಳೆ ರಮೇಶ್ ಗೌಡ ಕೂಡ ಐದು ಕೋಟಿ ಕೇಳಿದರು. ದೇವಾಲಯ ಹಾಗೂ ಶಾಲೆ ಕಟ್ಟಿಸುತ್ತಿದ್ದು ಅದಕ್ಕಾಗಿ ಐದು ಕೋಟಿ ರೂ. ಕೊಡಿ ಎಂದು ರಮೇಶ್ ಗೌಡ ಕೇಳಿದರು. ತುಂಬಾ ಕಷ್ಟ ಇದೆ ಯಾವುದೇ ಕಾರಣಕ್ಕೂ ಆಗಲ್ಲ ಅಂತ ಹೇಳಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಸಂಬಂಧ ಪ್ರತಿಕ್ರಿಯಿಸಿದ ಉದ್ಯಮಿ ವಿಜಯ್ ಟಾಟಾ ಕುಮಾರಸ್ವಾಮಿ ಹಾಗೂ ರಮೇಶ್ ಗೌಡ ವಿರುದ್ಧ ದೂರು ನೀಡಿದ್ದೇವೆ. ಒಂದು ವಾರದಿಂದ ಮೆಸೇಜ್, ಕಾಲ್ ಮಾಡುವ ಕೆಲಸ ರಮೇಶ್ ಗೌಡ ಮಾಡುತ್ತಿದ್ದರು. 2019ರ ಚುನಾವಣೆಗೆ ಅವರಿಗಾಗಿ ತುಂಬಾ ಖರ್ಚು ಮಾಡಿದ್ದೀವಿ. ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ. ಕುಮಾರಸ್ವಾಮಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಬಿ ಎನ್ ಎಸ್ 352 ಅಡಿಯಲ್ಲಿ ಎನ್ ಸಿ ಆರ್ ದಾಖಲಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

MLA Muniratna: ಶಾಸಕ ಮುನಿರತ್ನ ಕೇಸ್‌; ರಾಜಕಾರಣಿಗಳ ಹನಿಟ್ರ್ಯಾಪ್‌ ಮಾಡುತ್ತಿದ್ದ ರೂಮಿನ ಸ್ಥಳ ಮಹಜರು ಮಾಡಿದ ಎಸ್‌ಐಟಿ ಅಧಿಕಾರಿಗಳು

MLA Muniratna: ಶಾಸಕ ಮುನಿರತ್ನ ಲೈಂಗಿಕ ದೌರ್ಜನ್ಯ, ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಸಂತ್ರಸ್ತೆಯೊಂದಿಗೆ ರಾಜಕಾರಣಿಗಳ ಹನಿಟ್ರ್ಯಾಪ್‌ ಮಾಡುತ್ತಿದ್ದ ರೂಮಿನ ಸ್ಥಳ ಮಹಜರು ಮಾಡಿದರು.

VISTARANEWS.COM


on

By

MLA Muniratna
Koo

ಬೆಂಗಳೂರು: ಶಾಸಕ ಮುನಿರತ್ನ (MLA Muniratna) ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಎಸ್‌ಐಟಿ ತನಿಖೆ ಮುಂದುವರಿದಿದೆ. ಸುದೀರ್ಘವಾಗಿ ಸಂತ್ರಸ್ತೆಯಿಂದ ಹೇಳಿಕೆ ದಾಖಲಿಸಿದ್ದು, ಈಗಾಗಲೇ ಮೊಬೈಲ್ ಸೀಜ್ ಮಾಡಿ ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ. ಅಧಿಕಾರಿಗಳಿಗೆ ಕೆಲ ವಿಡಿಯೊಗಳು ಮತ್ತು ಕೆಲ ದಾಖಲೆಗಳನ್ನು ಸಂತ್ರಸ್ತೆ ನೀಡಿದ್ದಾರೆ.

ಈ ಹಿಂದೆ ಅತ್ಯಾಚಾರ ಆರೋಪದ ಬೆನ್ನಲ್ಲೇ ಕಗ್ಗಲೀಪುರ ಪೊಲೀಸರು ಈ ಹಿಂದೆಯೇ ಸಂತ್ರಸ್ತೆಯನ್ನು ಕರೆದೊಯ್ದು ಸ್ಥಳ ಮಹಜರು ನಡೆಸಿದ್ದರು. ಇದೀಗ ಗುರುವಾರ ಜೆಪಿ ಪಾರ್ಕ್‌ನ ಗೋಡೌನ್‌, ರಾಮಯ್ಯ ಸಮಾಧಿ ಬಳಿ ಎಸ್‌ಐಟಿ ಅಧಿಕಾರಿಗಳು ಸ್ಥಳ ಮಹಜರ್‌ ಮಾಡಿದರು. ಹನಿಟ್ರ್ಯಾಪ್‌ ಮಾಡಿದ್ದ ಜೆಪಿ ಪಾರ್ಕ್ ಬಳಿಯ ಬಾಡಿಗೆ ಮನೆಯೊಂದರಲ್ಲಿ ಸಂತ್ರಸ್ತೆ ಕರೆತಂದು ಮಹಜರ್‌ ನಡೆಸಿದರು.

ಮಾಜಿ ಕಾರ್ಪೊರೇಟರ್ ವೇಲು ನಾಯ್ಕರ್ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದಾರೆ. ಮುನಿರತ್ನ ಸಂಬಂಧಿತ ಕೆಲ ದಾಖಲೆಗಳನ್ನು ಕೊಟ್ಟಿದ್ದಾರೆ ಎನ್ನಲಾಗಿದೆ. ಜತೆಗೆ ಮುನಿರತ್ನ ಆಪ್ತ ಸಹಾಯಕನ ವಿಚಾರಣೆ ನಡೆಸಲಾಗಿದ್ದು, ಸಂತ್ರಸ್ತೆ ಪರಿಚಿತೆ ಈ ರೀತಿ ಯಾಕೆ ಕೊಟ್ಟಿದ್ದಾರೋ ಗೊತ್ತಿಲ್ಲ ಎಂದಿದ್ದಾರೆ.

ಆರು ಮಂದಿ ನಾಪತ್ತೆ

ಶಾಸಕ ಮುನಿರತ್ನ ನಾಯ್ಡು ವಿರುದ್ಧ ಕಳೆದ ಸೆಪ್ಟೆಂಬರ್ 18ರಂದು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಒಟ್ಟು ಏಳು ಜನರ ಆರೋಪಿಗಳ‌ ಹೆಸರು ದಾಖಲಾಗಿದೆ. ಸದ್ಯ ಮುನಿರತ್ನರನ್ನು ಬಂಧನ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ಎಸ್‌ಐಟಿ ಮುಂದೆ ಮುನಿರತ್ನ ನಂಗೇನು ಗೊತ್ತಿಲ್ಲ ಎಂದಿದ್ದಾರೆ. ಇನ್ನು ಇದುವರೆಗೂ ಪ್ರಕರಣದಲ್ಲಿ ಇನ್ನುಳಿದ ಆರೋಪಿಗಳು ನಾಪತ್ತೆಯಾಗಿದ್ದಾರೆ. ಪ್ರಕರಣ ದಾಖಲಾಗಿ 15 ದಿನ ಕಳೆದರೂ ಆರು ಜನ ಆರೋಪಿಗಳು ಪತ್ತೆಯಾಗಿದ್ದಾರೆ. ಮುನಿರತ್ನ‌ ನಾಯ್ಡು ಸೇರಿದಂತೆ ವಿಜಯ್ ಕುಮಾರ್, ಸುಧಾಕರ, ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ್ ಮತ್ತು ಲೋಕಿ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸದ್ಯ ನಾಪತ್ತೆಯಾಗಿರುವ ಆರು ಜನ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಮುನಿರತ್ನರಿಗೆ ಡಿಎನ್‌ಎ ಟೆಸ್ಟ್‌

ಎಸ್‌ಐಟಿ ಅಧಿಕಾರಿಗಳು ಗುರುವಾರ 42ನೇ ಎಸಿಎಂಎಂ ಕೋರ್ಟ್‌ಗೆ ಶಾಸಕ ಮುನಿರತ್ನರನ್ನು ಹಾಜರು ಪಡಿಸಿದರು. ಇದೆ ವೇಳೆ ಎಸ್‌ಐಟಿ ಅಧಿಕಾರಿಗಳು ಡಿಎನ್‌ಎ ಟೆಸ್ಟ್ ಮಾಡಿಸಲು ಅನುಮತಿ ಕೇಳಿದರು. ಈ ವೇಳೆ ಡಿಎನ್‌ಎ ಪರೀಕ್ಷೆಗೆ ಅನುಮತಿ ನೀಡಿ ನ್ಯಾಯಾಧೀಶರು ಆದೇಶಿಸಿದರು. ಇದಕ್ಕೂ ಮೊದಲು ಪೊಲೀಸರಿಂದ ಏನಾದರೂ ಸಮಸ್ಯೆ ಆಯಿತಾ ಎಂದು ಮುನಿರತ್ನರನ್ನು ನ್ಯಾಯಾಧೀಶರು ಕೇಳಿದರು. ಯಾವುದೇ ಸಮಸ್ಯೆ ಇಲ್ಲ, ಆದರೆ ಇದೊಂದು ಪಿತೂರಿ‌ ಎಂದು ಅಳಲು ತೋಡಿಕೊಂಡರು.

ವೈದ್ಯರೊಂದಿಗೆ ಹಾಜರಾಗಿದ್ದ ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರ ಸಮ್ಮುಖದಲ್ಲಿ ಮುನಿರತ್ನರ ರಕ್ತದ ಮಾದರಿ ಸಂಗ್ರಹ ಮಾಡಲು ಮುಂದಾದರು. ಈ ವೇಳೆ ಮುನಿರತ್ನ ತಮ್ಮ ವಕೀಲರು ಬರಬೇಕು. ಅವರ ಮುಂದೆ ಸ್ಯಾಂಪಲ್ಸ್ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದರು. ಮನವಿಯನ್ನ ಪುರಸ್ಕರಿಸಿ ವಕೀಲರು ಬಂದ ಮೇಲೆ ಸ್ಯಾಂಪಲ್ಸ್ ತೆಗೆದುಕೊಳ್ಳಲು ಎಸ್ಐಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಕ್ತದ ಮಾದರಿ ಸಂಗ್ರಹಿಸುವ ಸಂಬಂಧ ಮುನಿರತ್ನ ಪರ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದರು. ರಾಜ್ಯದಲ್ಲಿ ಕೆಲವೊಂದು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ರಕ್ತದ ಮಾದರಿ ಸಂಗ್ರಹಿಸಲು ನಮ್ಮದು ಅಭ್ಯಂತರ ಇಲ್ಲ. ಆದರೆ ಯಾವ ಕಾರಣಕ್ಕಾಗಿ ಬ್ಲಡ್ ಸ್ಯಾಂಪಲ್ಸ್ ತೆಗೆದುಕೊಳ್ಳುತ್ತಿದ್ದಾರೆ ಎಂಬ ಕಾರಣ ಬೇಕು. ಘಟನೆ ನಡೆದು ವರ್ಷಗಳೆ ಕಳೆದಿದೆ. ಎಫ್ಎಸ್‌ಎಲ್‌ಗೆ ರವಾನೆ ಮಾಡಲು ಬ್ಲಡ್ ಸ್ಯಾಂಪಲ್ಸ್ ತೆಗೆದುಕೊಳ್ಳಲಿ. ಸ್ಟೇಟ್ ಏಜೆನ್ಸಿ ಹೊರತು ಪಡಿಸಿ ಸೆಂಟ್ರಲ್ ಏಜೆನ್ಸಿಗೆ ಪರೀಕ್ಷೆ ನಡೆಸಲು ರವಾನಿಸಬೇಕು. ಬ್ಲಡ್ ಸ್ಯಾಂಪಲ್ಸ್ ತೆಗೆದುಕೊಳ್ಳುವ ಮುನ್ನ ನಮ್ಮ ಗಮನಕ್ಕೆ ತರಬೇಕಿತ್ತು ಎಂದು ವಾದಿಸಿದರು.

ಪ್ರಕರಣ ತನಿಖಾ ಹಂತದಲ್ಲಿದೆ. ಅದರಲ್ಲೂ ಆರೋಪಿ ತನಿಖಾ ತಂಡದ ಕಸ್ಟಡಿಯಲ್ಲಿದ್ದಾರೆ. ಆ ಸಂದರ್ಭದಲ್ಲಿ ತನಿಖಾಧಿಕಾರಿಗಳ ಮನವಿಗೆ ಸ್ಪಂದಿಸಿ, ಆದೇಶ ಮಾಡಲಾಗಿದೆ. ನೀವು ಆಕ್ಷೇಪಣೆ ಸಲ್ಲಿಸುವುದಾದರೆ ಸಲ್ಲಿಕೆ ಮಾಡಿ ಎಂದು ಬ್ಲಡ್ ಸ್ಯಾಂಪಲ್ಸ್ ಸಂಗ್ರಹಿಸುವ ಪ್ರಕ್ರಿಯೆಯನ್ನು ನಾಳೆ ಶುಕ್ರವಾರ ಬೆಳಗ್ಗೆಗೆ ಮುಂದೂಡಿ 42ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ. ಮಧ್ಯಾಹ್ನದ ನಂತರ ರಕ್ತದ ಮಾದರಿ ಸಂಗ್ರಹಿಸಲು ವೈದ್ಯರಿಗೆ ಸೂಚನೆ ನೀಡಿದರು.

ಜಾಮೀನು ಅರ್ಜಿ ವಿಚಾರಣೆ ಶುಕ್ರವಾರಕ್ಕೆ ಮುಂದೂಡಿಕೆ

ಶಾಸಕ ಮುನಿರತ್ನ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯು 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಗುರುವಾರ ನಡೆಯಿತು. ಕೋರ್ಟ್‌ ಜಾಮೀನು ಅರ್ಜಿ ವಿಚಾರಣೆ ನಡೆಸಿ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಇಂದು ಗುರುವಾರ (ಅ.3) ಮುನಿರತ್ನ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಮತ್ತೊಂದು ಸುತ್ತಿನ ವಾದ ಮಂಡಿಸಿದರು. ಎಸ್‌ಐಟಿ ಪರ ಎಸ್‌ಪಿಪಿ ಪ್ರದೀಪ್ ಹಾಜರಾಗಿದ್ದರು. ಸೆಕ್ಷನ್ 376(2)n ಸಂಬಂಧಿಸಿದಂತೆ ಹಲವು ಕೋರ್ಟ್ ಆದೇಶಗಳ ಉಲ್ಲೇಖಿಸಿ ಅಶೋಕ್ ಹಾರನಹಳ್ಳಿ ವಾದ ಮಾಡಿದರು. ಎಸ್‌ಪಿಪಿ ವಾದ ಮಂಡಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ನಾಳೆ ಶುಕ್ರವಾರ 2:45ಕ್ಕೆ ವಿಚಾರಣೆ ಮುಂದೂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮೈಸೂರು

Mysuru Dasara 2024: ವೈಭವದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಿಸಿದ ಹಿರಿಯ ಸಾಹಿತಿ ಡಾ. ಹಂಪ ನಾಗರಾಜಯ್ಯ

Mysuru Dasara 2024: ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ದಸರಾ ಮಹೋತ್ಸವವನ್ನು ಉದ್ಘಾಟಿಸಲಾಗಿದೆ. ಉದ್ಘಾಟನೆಯ ಸುಂದರ ಘಳಿಗೆಯ ಚಿತ್ರಣ ಇಲ್ಲಿದೆ

VISTARANEWS.COM


on

By

Mysuru Dasara 2024
Koo

ಮೈಸೂರು: ವಿಶ್ವವಿಖ್ಯಾತ 417ನೇ ಮೈಸೂರು ದಸರಾ (Mysore Dasara 2024) ಮಹೋತ್ಸವ ಅದ್ಧೂರಿಯಾಗಿ ಉದ್ಘಾಟನೆಗೊಂಡಿದೆ. ನಾಡಿನ ದೇವತೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ವಿಧ್ಯುಕ್ತ ಚಾಲನೆ ನೀಡಲಾಗಿದೆ.

Mysuru Dasara 2024

ಗುರುವಾರ ಬೆಳಗ್ಗೆ 9:15 ರಿಂದ 9:40 ರೊಳಗಿನ ಶುಭ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಡಾ. ಹಂಪ ನಾಗರಾಜಯ್ಯ ಅವರಿಂದ ದಸರಾ ಮಹೋತ್ಸವ ಉದ್ಘಾಟನೆಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ, ಚಾಮುಂಡೇಶ್ವರಿ ದೇಗುಲದ ಪ್ರಧಾನ ಅರ್ಚಕ ಡಾ.ಶಶಿಶೇಖರ್ ದೀಕ್ಷಿತ್ ಸೇರಿದಂತೆ ಹಲವು ಸಚಿವರು, ಶಾಸಕರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಚಾಲನೆ

ಇಂದು ಇಡೀ ದಿನ ಕಾರ್ಯಕ್ರಮಗಳು

-ಗುರುವಾರ ಬೆಳಗ್ಗೆ 9.15 ರಿಂದ 9.45ನಡುವೆ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆ
-ನಾಡದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಿ ಚಾಮುಂಡಿ ಬೆಟ್ಟದಲ್ಲಿ ಕಾರ್ಯಕ್ರಮ.
-ಬೆಳಗ್ಗೆ 11.30ಕ್ಕೆ ಕರ್ನಾಟಕ ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ಚಲನಚಿತ್ರೋತ್ಸವ ಉದ್ಘಾಟನೆ.
-ಮಧ್ಯಾಹ್ನ 12.30ಕ್ಕೆ ಕುಪ್ಪಣ್ಣ ಪಾರ್ಕ್ ನಲ್ಲಿ ಫಲಪುಷ್ಪ ಪ್ರದರ್ಶನ ಉದ್ಘಾಟನೆ.
-ಸಂಜೆ 4ಕ್ಕೆ ದಸರಾ ಕುಸ್ತಿ ಪಂದ್ಯಾವಳಿ ಉದ್ಘಾಟನೆ.
-ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣ.
-ಸಂಜೆ 4.30ಕ್ಕೆ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟ ಉದ್ಘಾಟನೆ.
-ಚಾಮುಂಡಿ ವಿಹಾರ ಕ್ರೀಡಾಂಗಣ.
-ರಾತ್ರಿ 6ಕ್ಕೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ.
-ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ, ಅರಮನೆ ಆವರಣ.
-ರಾತ್ರಿ 7.30 ದಸರಾ ವಸ್ತು ಪ್ರದರ್ಶನ ಉದ್ಘಾಟನೆ.

Mysuru Dasara 2024
ದಸರಾ ಮಹೋತ್ಸವದಲ್ಲಿ ಸಿಎಂ ಸಿದ್ದರಾಮಯ್ಯ
Mysuru Dasara 2024

ವಿಶ್ವವಿಖ್ಯಾತ ದಸರಾ ಮಹೋತ್ಸವ

Mysuru Dasara 2024

ವಿಶ್ವವಿಖ್ಯಾತ ದಸರಾ ಮಹೋತ್ಸವ

ವಿಶ್ವವಿಖ್ಯಾತ ದಸರಾ ಮಹೋತ್ಸವ

ವಿಶ್ವವಿಖ್ಯಾತ ದಸರಾ ಮಹೋತ್ಸವ

Continue Reading

ದೇಶ

Gandhi Jayanti 2024: `ಗಾಂಧಿ ಕ್ಲಾಸ್‌’ ಹೆಸರು ಬಂದಿದ್ದು ಹೇಗೆ?

Gandhi Jayanti 2024 : ಮಹಾತ್ಮಾ ಗಾಂಧಿ ಎಂಬ ಒಬ್ಬ ವ್ಯಕ್ತಿ ಆ ರೀತಿಯಾಗಿ ಇದ್ದರು ಎಂದು ಕಲ್ಪಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲದಂತೆ ಅವರು ಬದುಕಿದರು. ಅವರ ಚಿಂತನೆ, ಅವರ ನಡೆ ನುಡಿ, ಇಡೀ ದೇಶ ಮಾತ್ರವಲ್ಲ, ಜಗತ್ತನ್ನು ಆವರಿಸಿಕೊಂಡ ರೀತಿ ಕಲ್ಪನಾತೀತ. ಅವರ ಜನ್ಮದಿನದ ಸಂದರ್ಭದಲ್ಲಿ ಗಾಂಧೀಜಿ ಅವರ ಬದುಕಿನ ಕುತೂಹಲಕರ ಸಂಗತಿಗಳು ಇಲ್ಲಿವೆ.

VISTARANEWS.COM


on

By

Mahatma Gandhi How did the name Gandhi Class come about
Koo

ಇಂದು ಗಾಂಧಿ ಜಯಂತಿ. ಮಹಾತ್ಮಾ ಗಾಂಧಿ ಯವರ (Mahatma Gandhi) 155ನೆಯ ಹುಟ್ಟುಹಬ್ಬ. ಗುಜರಾತಿನ ಪೋರಬಂದರಿನಲ್ಲಿ ಹುಟ್ಟಿದ ಒಬ್ಬ ಸಾಮಾನ್ಯ ವ್ಯಕ್ತಿ ಇಡೀ ಜಗತ್ತನ್ನು ಪ್ರಭಾವಿಸಿದ್ದು, ಸಾಮಾನ್ಯ ಸಂಗತಿ ಅಲ್ಲ. ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ (Fight for Indian Independence) 33 ಕೋಟಿ ಭಾರತೀಯರು ಗಾಂಧಿಯವರ ಮಾತುಗಳನ್ನು ಆಲಿಸುತ್ತಿದ್ದರು ಅಂದರೆ ಅದೂ ಆಶ್ಚರ್ಯವೇ. ಅದರ ಬೆಳಕಿನಲ್ಲಿ ಗಾಂಧಿಯವರ ಬದುಕಿನ ಕೆಲವು ರೋಚಕ ಸಂಗತಿಗಳು ಇಲ್ಲಿವೆ.

1. ಗಾಂಧೀಜಿ ಹುಟ್ಟು ಹಬ್ಬವನ್ನು ವಿಶ್ವ ಅಹಿಂಸಾ ದಿನವಾಗಿ (World Non violence day) ಜಗತ್ತು ಆಚರಿಸುತ್ತದೆ. 2007ರಿಂದ ವಿಶ್ವ ಸಂಸ್ಥೆಯು ಗಾಂಧಿಗೆ ಕೊಟ್ಟ ಗೌರವ ಇದು.

2. ಜಗತ್ತಿನ ಅತೀ ಹೆಚ್ಚು ದೇಶಗಳು ಗಾಂಧಿಯವರ ಫೋಟೊ ಇರುವ ಸ್ಟಾಂಪ್ ಬಿಡುಗಡೆ ಮಾಡಿವೆ. ಈ ದಾಖಲೆಯಲ್ಲಿ ಕೂಡ ಗಾಂಧಿ ಎಲ್ಲರಿಗಿಂತ ಮುಂದೆ ಇದ್ದಾರೆ.

Mahatma Gandhi
Mahatma Gandhi memoir at Raj Ghat

3. ಗಾಂಧಿಯವರನ್ನು ಬ್ರಿಟಿಷರು ‘ಅರೆ ನಗ್ನ ಫಕೀರ’ ಎಂದು ಕರೆದರು. ಗಾಂಧಿಯವರ ಡ್ರೆಸ್ ಕೋಡ್ ಹಾಗೆಯೇ ಇತ್ತು. ಅದೇ ಡ್ರೆಸ್ಸಲ್ಲಿ ಗಾಂಧಿ ಇಂಗ್ಲೆಂಡಿಗೆ ದುಂಡು ಮೇಜಿನ ಪರಿಷತ್ತಿಗೆ ಹೋಗಿ ಬಂದರು.

Half Naked Fakeera Mahatma Gandhi

4. ಗಾಂಧಿ ಜೊತೆ ಒಂದೇ ಟೇಬಲ್ ಮೇಲೆ ಊಟ ಮಾಡಲು ಇಂಗ್ಲೆಂಡ್ ಪ್ರಧಾನಿ ವಿನ್‌ಸ್ಟನ್ ಚರ್ಚಿಲ್ (Winston Churchil) ಒಪ್ಪಲಿಲ್ಲ. ಗಾಂಧೀಜಿ ಇದರ ಬಗ್ಗೆ ತಲೆಕೆಡಿಸಿಕೊಳ್ಳಲಿಲ್ಲ.

5. ಅಹಿಂಸೆ ಮತ್ತು ಸತ್ಯಾಗ್ರಹ (Nonviolence and Satyagrah) ಎಂಬ ಎರಡು ಅಸ್ತ್ರಗಳನ್ನು ಗಾಂಧೀಜಿ ಸ್ವಾತಂತ್ರ್ಯ ಹೋರಾಟದಲ್ಲಿ ಬಳಸಿದರು. ಅದರಲ್ಲಿಯೂ ಸತ್ಯಾಗ್ರಹ ಎಂಬ ಹೋರಾಟವು ಜಗತ್ತಿನ ಹಲವು ಮಹಾ ನಾಯಕರ ಗಮನ ಸೆಳೆಯಿತು. ಮುಂದೆ ಹಲವು ದೇಶಗಳ ಸ್ವಾತಂತ್ರ್ಯ ಹೋರಾಟಕ್ಕೆ ಸತ್ಯಾಗ್ರಹವು ಪ್ರೇರಣೆ ಕೊಟ್ಟಿತು.

6. ಮಾರ್ಟಿನ್ ಲೂಥರ್ ಕಿಂಗ್ ಅವರು ಗಾಂಧೀಜಿಯವರನ್ನು ತನ್ನ ಐಕಾನ್ ಆಗಿ ಆರಿಸಿಕೊಂಡಿದ್ದರು. ಅವರ ಕಚೇರಿಯಲ್ಲಿ ಅವರ ಎದುರಿನ ಗೋಡೆಯಲ್ಲಿ ಗಾಂಧಿಯ ಫೋಟೊ ಇತ್ತು.

Mahatma gandhi preaches
Mahatma Gandhi memoir at Raj Ghat

7. ಯಾವ ದಕ್ಷಿಣ ಆಫ್ರಿಕ ಗಾಂಧಿ ಅವರನ್ನು ಕರಿಯ (ಬ್ಲಾಕ್) ಎಂಬ ಕಾರಣಕ್ಕೆ ಟ್ರೈನಿಂದ ಹೊರಗೆ ದೂಡಿ ಅಪಮಾನ ಮಾಡಿತ್ತಾ, ಅದೇ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಮುಂದೆ ಗಾಂಧಿ ಪ್ರೇರಣೆ ಕೊಟ್ಟರು.

8. ಗಾಂಧಿಯವರು ಮದ್ಯಪಾನ ನಿಷೇಧ ಮತ್ತು ಗೋಹತ್ಯೆ ನಿಷೇಧಗಳ ಪರವಾಗಿ ಬಲವಾಗಿ ನಿಂತಿದ್ದರು.

9. ಜಗತ್ತಿನ ಅತ್ಯಂತ ಜನಪ್ರಿಯ ಪತ್ರಿಕೆ ‘ಟೈಮ್ಸ್ ಮ್ಯಾಗಜೀನ್’ ಗಾಂಧಿಯವರನ್ನು ‘ವರ್ಷದ ವ್ಯಕ್ತಿ ಪ್ರಶಸ್ತಿ’ (Times man of the year) ಮೂಲಕ ಗೌರವಿಸಿತು. ಆ ಗೌರವ ಪಡೆದ ಮೊದಲ ಮತ್ತು ಏಕೈಕ ಭಾರತೀಯ ಅಂದರೆ ಅದು ಗಾಂಧಿ.

Mahatma Gandhi TIMES cover in 1930

10. ವಿದೇಶಗಳಲ್ಲಿ ಗಾಂಧಿ ಹೆಸರಿನ 48 ರಸ್ತೆಗಳು ಇವೆ. ಭಾರತದಲ್ಲಿ 53 ದೊಡ್ಡ ರಸ್ತೆಗಳು ಗಾಂಧಿ ಅವರ ಹೆಸರು ಪಡೆದಿವೆ. ಇನ್ನು ಗಾಂಧಿ ಭವನ್, ಗಾಂಧಿ ಪ್ರತಿಮೆ, ಗಾಂಧಿ ಮೈದಾನ, ಗಾಂಧಿ ಚೌಕ….ಇವುಗಳನ್ನು ಲೆಕ್ಕ ಮಾಡಲು ಸಾಧ್ಯವೇ ಇಲ್ಲ!

11. ಗಾಂಧಿಯವರ ಹೆಸರು ನೊಬೆಲ್ ಶಾಂತಿ ಪುರಸ್ಕಾರಕ್ಕೆ (Nobel Peace Award) ಐದು ಬಾರಿ ಶಿಫಾರಸು ಆಗಿತ್ತು. ಆದರೆ ಅದರದ್ದೇ ಒಂದು ಕಾರಣಕ್ಕೆ ಅದು ನಿರಾಕರಣೆ ಆಯ್ತು.

12. ಜಾಗತಿಕ ಅತೀ ದೊಡ್ಡ ಫೌಂಡೇಶನ್ ಆದ ‘ಹೆನ್ರಿ ಫೋರ್ಡ್ ಫೌಂಡೇಶನ್’ ಗಾಂಧಿಯವರನ್ನು ತನ್ನ ಆದರ್ಶವಾಗಿ ತೆಗೆದುಕೊಂಡಿದೆ. ಆ ಫೌಂಡೇಶನ್ ಪ್ರಕಾರ ಗಾಂಧಿಯವರು ‘ಜಾಗತಿಕ ಐಕಾನ್’ (Universal Icon).

Mahatma gandhi with assistants
Mahatma Gandhi memoir at Raj Ghat

13. ಗಾಂಧಿಯವರನ್ನು ಮೊದಲ ಬಾರಿಗೆ ‘ಮಹಾತ್ಮ’ ಎಂದು ಕರೆದದ್ದು ರಾಷ್ಟ್ರಕವಿ ರವೀಂದ್ರನಾಥ್ ಠಾಗೋರ್ ಅವರು.

14. ಗಾಂಧಿಯವರ ಇಂಗ್ಲಿಷ್ ಭಾಷಣದಲ್ಲಿ ಐರಿಷ್ ಅಸೆಂಟ್ ಇತ್ತು. ಅದಕ್ಕೆ ಕಾರಣ ಅವರ ಮೊದಲ ಇಂಗ್ಲಿಷ್ ಟೀಚರ್ ಒಬ್ಬರು ಐರಿಷ್ ಆಗಿದ್ದರು.

15. ಗಾಂಧಿಯವರು ಒಳ್ಳೆಯ ಭಾಷಣಕಾರ ಆಗಿರಲಿಲ್ಲ. ಅವರ ಧ್ವನಿಯೂ ಕೀರಲು ಇತ್ತು. ಆದರೆ ಆ ಭಾಷಣವು ಹೆಚ್ಚು ಪ್ರಭಾವಶಾಲಿ ಆಗಿತ್ತು. ಗಾಂಧಿ ತಮ್ಮ ಭಾಷಣದಲ್ಲಿ ಏನಾದರೂ ಕರೆಕೊಟ್ಟರೆ ಸೇರುತ್ತಿದ್ದ ಸಾವಿರಾರು ಜನರು ಅದನ್ನು ಪ್ರಶ್ನಾತೀತವಾಗಿ ಪಾಲನೆ ಮಾಡುತ್ತಿದ್ದರು. ಗಾಂಧಿ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುತ್ತಾರೆ ಎಂದು ಆಗ ಬಹುಪಾಲು ಭಾರತೀಯರು ನಂಬಿದ್ದರು.

Mahatma gandhi satyagrah
Mahatma Gandhi memoir at Raj Ghat

16. ಮುಂದೆ ಬಾಂಗ್ಲಾ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ನೋಬೆಲ್ ಪ್ರಶಸ್ತಿ ಪಡೆದ ಹೋರಾಟಗಾರ್ತಿ ಆಂಗ್ ಸಾನ್ ಸೂಕಿ ಆರಿಸಿಕೊಂಡದ್ದು ಅಹಿಂಸಾ ಮಾರ್ಗವನ್ನು. ಅದಕ್ಕೆ ಪ್ರೇರಣೆ ಗಾಂಧಿ.

17. ಗಾಂಧಿ ಕರ್ನಾಟಕವನ್ನು ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ 18 ಬಾರಿ ಭೇಟಿ ಕೊಟ್ಟಿದ್ದರು. ಅದರಲ್ಲಿ ಉಡುಪಿಗೆ ಬಂದದ್ದು ಒಂದು ಬಾರಿ (ಫೆಬ್ರುವರಿ 25, 1934). ಆಗ ಕೃಷ್ಣ ಮಠದ ಬೀದಿಯಲ್ಲಿ ಗಾಂಧಿ ನಡೆದುಕೊಂಡು ಹೋದರೂ ಕೃಷ್ಣ ಮಠದ ಒಳಗೆ ಅವರು ಬರಲಿಲ್ಲ. ಅಜ್ಜರಕಾಡು ಮೈದಾನದಲ್ಲಿ ಗಾಂಧಿಯವರ ಭಾಷಣವನ್ನು 3000 ಮಂದಿ ಸೇರಿ ಕೇಳಿದ್ದರು. ಆ ಕಾರ್ಯಕ್ರಮದ ವ್ಯವಸ್ಥೆ ಮಾಡಿದ್ದು ಕಾರ್ಪೋರೇಶನ್ ಬ್ಯಾಂಕ್ ಸ್ಥಾಪನೆ ಮಾಡಿದ್ದ ಖಾನ್ ಬಹಾದ್ದೂರ್ ಹಾಜಿ ಅಬ್ದುಲ್ಲ ಸಾಹೇಬರು. ಕಾಡಬೆಟ್ಟು ಎಂಬಲ್ಲಿ ಗಾಂಧೀಜಿ ಒಂದು ಖಾದಿ ಭಂಡಾರವನ್ನು ಉದ್ಘಾಟನೆ ಮಾಡಿದ್ದರು.

18. ಗಾಂಧಿ ಅದೇ ಅವಧಿಯಲ್ಲಿ ಮಂಗಳೂರಿಗೆ ಮೂರು ಬಾರಿ ಭೇಟಿ ನೀಡಿದ್ದರು. 1920, 1927, 1934 ಹೀಗೆ ಮೂರು ಭೇಟಿಗಳು. ಗಾಂಧಿಯವರ 1934ರ ಭೇಟಿಯಲ್ಲಿ 10,000 ಮಂದಿ ಸೇರಿದ್ದರು. ಆಗ ಅವರು ಕೆನರಾ ಶಾಲೆಯಲ್ಲಿ ಕೃಷ್ಣ ಮಂದಿರ ಉದ್ಘಾಟನೆ ಮಾಡಿದ್ದರು. ಅವರ ಮಂಗಳೂರು ಸಭೆಗಳನ್ನು ವ್ಯವಸ್ಥೆ ಮಾಡಿದ್ದು ಕಾರ್ನಾಡ್ ಸದಾಶಿವ ರಾಯರು ಮತ್ತು ಆಗಿನ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾಗಿದ್ದ ಎಂ.ಡಿ ಅಧಿಕಾರಿಯವರು. ಅವರು ನನ್ನ ಕಾರ್ಕಳ ತಾಲೂಕಿನವರು.

Mahatma gandhi dandi satyaghraha
Mahatma Gandhi memoir at Raj Ghat

19. ಗಾಂಧೀಜಿಯವರು ಸಾಮೂಹಿಕ ಪ್ರಾರ್ಥನೆಯನ್ನು ಮತ್ತು ಶ್ರೀ ರಾಮನ ಭಜನೆಗಳನ್ನು ಪ್ರಬಲವಾಗಿ ಪ್ರತಿಪಾದನೆ ಮಾಡಿದರು ಮತ್ತು ಆಚರಣೆ ಮಾಡಿದರು. ‘ವೈಷ್ಣವ ಜನತೋ’ ಅವರು ಅತೀ ಹೆಚ್ಚು ಬಾರಿ ಆಲಿಸಿದ ಪದ್ಯ. ರಾಮರಾಜ್ಯದ ಸುಂದರ ಕಲ್ಪನೆಯ ಬಗ್ಗೆ ಅವರು ಹಲವಾರು ಲೇಖನಗಳನ್ನು ಬರೆದಿದ್ದಾರೆ.

20. ಗಾಂಧಿಯವರು ಎಡಗೈಯಿಂದ ಬರೆಯುತ್ತಿದ್ದರು. ಅವರ ಜೊತೆ ಯಾವಾಗಲೂ ಇರುತ್ತಿದ್ದದ್ದು ಒಂದು ಗಡಿಯಾರ.

Mahatma Gandhi
Mahatma Gandhi memoir at Raj Ghat

21. ತನಗೆ ಪತ್ರ ಬರೆಯುತ್ತಿದ್ದ ಪ್ರತಿಯೊಬ್ಬರಿಗೂ ಗಾಂಧೀಜಿ ಅವರು ತಮ್ಮ ಕೈ ಬರಹದಲ್ಲಿ ಉತ್ತರ ಬರೆಯುತ್ತಿದ್ದರು.

22. ಗಾಂಧಿ ತಮ್ಮ ಬದುಕಿನ ಉದ್ದಕ್ಕೂ ರೈಲಿನಲ್ಲಿ ದ್ವಿತೀಯ ದರ್ಜೆಯ ಡಬ್ಬಿಯಲ್ಲಿ ಪ್ರಯಾಣ ಮಾಡಿದ್ದರು. ಮುಂದೆ ಅದನ್ನು ಜನರು `ಗಾಂಧಿ ಕ್ಲಾಸ್’ ಎಂದು ಕರೆದರು.

ಇದನ್ನೂ ಓದಿ: Raja Marga Column : ಅಂದು ಜಿ.ಆರ್‌ ವಿಶ್ವನಾಥ್‌ ಅವರಿಂದಾಗಿ ಭಾರತ ಸೋತಿತ್ತು, ಆದರೆ ಕ್ರಿಕೆಟ್‌ ಗೆದ್ದಿತ್ತು!

23. ಗಾಂಧೀಯವರ ಹತ್ಯೆಯನ್ನು ನಾಥೂರಾಮ್ ಗೋಡ್ಸೆ ಮಾಡಿದಾಗ ಅವರ ಬಾಯಿಂದ ಬಂದ ಮೊದಲ ಶಬ್ದ ಹೇ ರಾಮ್. ಎರಡನೇ ಶಬ್ದ – ಉಸ್ಕೋ ಚೋಡ್ ದೋ!

Mahatma Gandhi memoir at Raj Ghat
Mahatma Gandhi memoir at Raj Ghat

24. ಗಾಂಧಿಯವರ ಅಂತಿಮ ಯಾತ್ರೆಯಲ್ಲಿ ಅಂದು ಭಾಗವಹಿಸಿದ ಜನರ ಸಂಖ್ಯೆಯೂ ಮಹಾ ದಾಖಲೆ. ಆಗ ಎಂಟು ಕಿಲೋಮೀಟರ್ ಉದ್ದವಾದ ಅಂತಿಮ ಯಾತ್ರೆಯು ಸಾಗಿ ಬಂದಿತ್ತು.

25. ಯಾವುದೇ ಸಾಮಾಜಿಕ ಜಾಲ ತಾಣ ಮತ್ತು ದೂರದರ್ಶನ ಇಲ್ಲದ ಕಾಲದಲ್ಲಿ ಕೂಡ ಒಬ್ಬ ವ್ಯಕ್ತಿ ಇಡೀ ಭಾರತವನ್ನು ತಲುಪಿದ್ದು ಮತ್ತು ಇಡೀ ವಿಶ್ವದ ಮೇಲೆ ಪ್ರಭಾವ ಬೀರಿದ್ದು ದೊಡ್ಡ ಸಾಧನೆಯೇ ಹೌದು. ಅದಕ್ಕಾಗಿ ಅವರು ಮಹಾತ್ಮ ಆದದ್ದು.

Continue Reading
Advertisement
Action Prince Dhruva Sarja much awaited film Martin to hit the screens on October 11
ಸಿನಿಮಾ4 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Actor Darshan
ಬೆಂಗಳೂರು5 ಗಂಟೆಗಳು ago

Parappana Agrahara : ಜೈಲಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಕೇಸ್; ಕ್ಲೈ ಮ್ಯಾಕ್ಸ್ ಹಂತದಲ್ಲಿ ರಿವೈಲ್ ಆಯ್ತು ಜೈಲಿನೊಳಗಿನ ಅಂದರ್ ಕಿ ದರ್ಬಾರ್!

Bengaluru News
ಬೆಂಗಳೂರು7 ಗಂಟೆಗಳು ago

Bengaluru News : ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ; ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬ

HD kumaraswamy And Vijayetata
ಬೆಂಗಳೂರು8 ಗಂಟೆಗಳು ago

HD Kumaraswamy : ಎಲೆಕ್ಷನ್‌ಗೆ 50 ಕೋಟಿ ರೂ.ಗೆ ಡಿಮ್ಯಾಂಡ್‌ ಮಾಡಿ ಉದ್ಯಮಿಗೆ ಬೆದರಿಕೆ; ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

Karnataka weather Forecast
ಪ್ರಮುಖ ಸುದ್ದಿ9 ಗಂಟೆಗಳು ago

Karnataka Rain : ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ; ಹೈರಾಣಾದ ವಾಹನ ಸವಾರರು

MLA Muniratna
ಬೆಂಗಳೂರು9 ಗಂಟೆಗಳು ago

MLA Muniratna: ಶಾಸಕ ಮುನಿರತ್ನ ಕೇಸ್‌; ರಾಜಕಾರಣಿಗಳ ಹನಿಟ್ರ್ಯಾಪ್‌ ಮಾಡುತ್ತಿದ್ದ ರೂಮಿನ ಸ್ಥಳ ಮಹಜರು ಮಾಡಿದ ಎಸ್‌ಐಟಿ ಅಧಿಕಾರಿಗಳು

Power cut off due to a technical problem in the transformer Bengaluru faces water crisis today
ಬೆಂಗಳೂರು11 ಗಂಟೆಗಳು ago

Water supply: ಟ್ರಾನ್ಸಫಾರ್ಮರ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ವಿದ್ಯುತ್‌ ಸಂಪರ್ಕ ಕಡಿತ; ಬೆಂಗಳೂರಿಗೆ ಇಂದು ನೀರಿನ ಸಮಸ್ಯೆ

Gandhi Jayanti 2024
ಬೆಂಗಳೂರು11 ಗಂಟೆಗಳು ago

Gandhi Jayanti 2024: ಗಾಂಧಿ ಜಯಂತಿ ಹಿನ್ನೆಲೆ ಸರ್ಕಾರಿ ಯೋಜನೆಗಳ ಅರಿವು ಮೂಡಿಸಿದ ಎನ್‌ಸಿಸಿ ಕೆಡೆಟ್‌ಗಳು

Drugs Mafia
ಕೊಡಗು12 ಗಂಟೆಗಳು ago

Drugs Mafia: ಥೈಲ್ಯಾಂಡ್ ಟು ದುಬೈ ಡ್ರಗ್‌ ಮಾಫಿಯಾಗೆ ಇಂಡಿಯಾನೆ ಮೈನ್ ಲಿಂಕ್; 3 ಕೋಟಿ ಮೌಲ್ಯದ ಗಾಂಜಾ ವಶ

Mysuru Dasara 2024
ಮೈಸೂರು13 ಗಂಟೆಗಳು ago

Mysuru Dasara 2024: ವೈಭವದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಿಸಿದ ಹಿರಿಯ ಸಾಹಿತಿ ಡಾ. ಹಂಪ ನಾಗರಾಜಯ್ಯ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ4 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌