Rajya Sabha: ಸತ್ನಾಮ್‌ ಸಿಂಗ್‌ ಸಂಧು ಬಿಜೆಪಿ ಸೇರ್ಪಡೆ; ರಾಜ್ಯಸಭೆಯಲ್ಲಿ ಕೇಸರಿ ಪಕ್ಷದ ಬಲ 87ಕ್ಕೆ ಏರಿಕೆ - Vistara News

ರಾಜಕೀಯ

Rajya Sabha: ಸತ್ನಾಮ್‌ ಸಿಂಗ್‌ ಸಂಧು ಬಿಜೆಪಿ ಸೇರ್ಪಡೆ; ರಾಜ್ಯಸಭೆಯಲ್ಲಿ ಕೇಸರಿ ಪಕ್ಷದ ಬಲ 87ಕ್ಕೆ ಏರಿಕೆ

Rajya Sabha: ರಾಜ್ಯಸಭೆಯ ನಾಮನಿರ್ದೇಶಿತ ಸದಸ್ಯ ಸತ್ನಾಮ್‌ ಸಿಂಗ್‌ ಸಂಧು ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯರ ಬಲ 87ಕ್ಕೆ ಏರಿಕೆಯಾಗಿದೆ. 2024ರ ಜನವರಿ 31ರಂದು ಪ್ರಮಾಣವಚನ ಸ್ವೀಕರಿಸಿದ್ದ ಸಂಧು 6 ತಿಂಗಳ ಗಡುವು ಮುಗಿಯುವ ಮುನ್ನವೇ ಬಿಜೆಪಿ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಅವರನ್ನು ಬಿಜೆಪಿ ಸದಸ್ಯ ಎಂದು ಪರಿಗಣಿಸಲಾಗುತ್ತದೆ ಎಂದು ರಾಜ್ಯಸಭೆ ಪ್ರಕಟಣೆಯಲ್ಲಿ ತಿಳಿಸಿದೆ.

VISTARANEWS.COM


on

Rajya Sabha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ರಾಜ್ಯಸಭೆಯ ನಾಮನಿರ್ದೇಶಿತ ಸದಸ್ಯ ಸತ್ನಾಮ್‌ ಸಿಂಗ್‌ ಸಂಧು (Satnam Singh Sandhu) ಅವರು ಬಿಜೆಪಿ (BJP) ಸೇರ್ಪಡೆಯಾಗಿದ್ದಾರೆ. ಈ ಮೂಲಕ ರಾಜ್ಯಸಭೆ (Rajya Sabha)ಯಲ್ಲಿ ಬಿಜೆಪಿ ಸದಸ್ಯರ ಬಲ 87ಕ್ಕೆ ಏರಿಕೆಯಾಗಿದೆ. ನಾಮನಿರ್ದೇಶಿತ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದವರು ಆರು ತಿಂಗಳೊಳಗಾಗಿ ಯಾವುದಾದರೂ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆಯೇ ಎನ್ನುವುದನ್ನು ಸಂಸತ್ತಿಗೆ ತಿಳಿಸಬೇಕು. ಅದರಂತೆ ಜುಲೈ 31ರೊಳಗೆ ಸತ್ನಾಮ್‌ ಸಿಂಗ್‌ ಸಂಧು ತಮ್ಮ ನಿರ್ಧಾರ ತಿಳಿಸಬೇಕಿತ್ತು. ಹೀಗಾಗಿ ಅವರು ಬಿಜೆಪಿಗೆ ಸೇಪರ್ಡೆಯಾಗುತ್ತಿರುವುದಾಗಿ ಹೇಳಿದ್ದಾರೆ.

2024ರ ಜನವರಿ 31ರಂದು ಪ್ರಮಾಣವಚನ ಸ್ವೀಕರಿಸಿದ್ದ ಸಂಧು 6 ತಿಂಗಳ ಗಡುವು ಮುಗಿಯುವ ಮುನ್ನವೇ ಬಿಜೆಪಿ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಅವರನ್ನು ಬಿಜೆಪಿ ಸದಸ್ಯ ಎಂದು ಪರಿಗಣಿಸಲಾಗುತ್ತದೆ ಎಂದು ರಾಜ್ಯಸಭೆ ಪ್ರಕಟಣೆಯಲ್ಲಿ ತಿಳಿಸಿದೆ. ಇತ್ತೀಚೆಗೆ ನಾಮನಿರ್ದೇಶನಗೊಂಡಿದ್ದ ನಾಲ್ವರು ಸದಸ್ಯರ ಅವಧಿ ಮುಗಿದ ಹಿನ್ನೆಲೆಯಲ್ಲಿ ಮೇಲ್ಮನೆಯಲ್ಲಿ ಬಿಜೆಪಿ ಬಲವು 86ಕ್ಕೆ ಇಳಿಕೆಯಾಗಿತ್ತು.

8 ಮಂದಿ ನಾಮನಿರ್ದೇಶಿತ ಸಂಸದರ ಪೈಕಿ, ಸತ್ನಾಮ್ ಸಿಂಗ್‌ ಸಂಧು ಹಾಗೂ ಜಮ್ಮು ಮತ್ತು ಕಾಶ್ಮೀರದ ಗುಲಾಂ ಅಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದು, ನ್ಯಾಯಮೂರ್ತಿ ರಂಜನ್ ಗೊಗೋಯಿ, ಡಿ. ವಿರೇಂದ್ರ ಹೆಗ್ಗಡೆ, ಇಳಯರಾಜ, ಸುಧಾಮೂರ್ತಿ, ವಿಜಯೇಂದ್ರ ಪ್ರಸಾದ್ ಹಾಗೂ ಪಿ.ಟಿ. ಉಷಾ ಇನ್ನೂ ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ.

ಯಾರು ಈ ಸತ್ನಾಮ್ ಸಿಂಗ್‌ ಸಂಧು?

ಸತ್ನಾಮ್ ಸಿಂಗ್ ಸಂಧು ಭಾರತದ ಪ್ರಮುಖ ಶಿಕ್ಷಣ ತಜ್ಞರಲ್ಲಿ ಒಬ್ಬರು. ಅವರು ಕೃಷಿಕರೂ ಹೌದು. ಸತ್ನಾಮ್ ಸಿಂಗ್ ಸಂಧು 2001ರಲ್ಲಿ ಮೊಹಾಲಿಯ ಲ್ಯಾಂಡ್ರಾನ್‌ನಲ್ಲಿ ಚಂಡೀಗಢ ಗ್ರೂಪ್ ಆಫ್ ಕಾಲೇಜ್ಸ್‌ (ಸಿಜಿಸಿ) ಮತ್ತು 2012ರಲ್ಲಿ ಚಂಡೀಗಢ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದ್ದಾರೆ. ಅವರ ಆರಂಭಿಕ ಜೀವನವು ಕಷ್ಟಗಳಿಂದ ಕೂಡಿತ್ತು. ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಪಡೆಯಲೂ ಹೆಣಗಾಡಿದ್ದರು. ಇದೀಗ ಅವರು ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನೂ ನೀಡುತ್ತಾರೆ. ಜನಸಾಮಾನ್ಯರ ಆರೋಗ್ಯ ಮತ್ತು ಯೋಗಕ್ಷೇಮವನ್ನು ಸುಧಾರಿಸುವ ಪ್ರಯತ್ನಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ದೇಶದಲ್ಲಿ ಕೋಮು ಸೌಹಾರ್ದತೆಯನ್ನು ಹೆಚ್ಚಿಸಲು ಅವರು ಇಂಡಿಯನ್ ಮೈನಾರಿಟೀಸ್ ಫೌಂಡೇಶನ್ ಮತ್ತು ನ್ಯೂ ಇಂಡಿಯಾ ಡೆವಲಪ್‌ಮೆಂಟ್‌ ಫೌಂಡೇಶನ್ (Indian Minorities Foundation and New India Development) Foundation) ಎಂಬ ಎರಡು ಎನ್‌ಜಿಒ ನಡೆಸುತ್ತಿದ್ದಾರೆ.

ಇದನ್ನೂ ಓದಿ: Sudha Murthy: ʼಹೆಣ್ಣುಮಕ್ಕಳಿಗೆ ಇದೊಂದು ಕೊಟ್ಟುಬಿಡಿ, ಪ್ಲೀಸ್‌ʼ ಎಂದ ಸುಧಾ ಮೂರ್ತಿ; ರಾಜ್ಯಸಭೆಯಲ್ಲಿ ಭಾಷಣಕ್ಕೆ ಮೋದಿ ಮೆಚ್ಚುಗೆ

ಕಾಂಗ್ರೆಸ್‌ ಬಲಾಬಲ ಹೇಗಿದೆ?

ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಒಕ್ಕೂಟವು 87 ಸದಸ್ಯರನ್ನು ಹೊಂದಿದೆ. ಇವರಲ್ಲಿ ಕಾಂಗ್ರೆಸ್‌ 26, ತೃಣಮೂಲ ಕಾಂಗ್ರೆಸ್‌ 13, ಆಮ್‌ ಆದ್ಮಿ ಪಕ್ಷ, ಡಿಎಂಕೆ ತಲಾ 10 ಸದಸ್ಯರನ್ನು ಹೊಂದಿವೆ. ಉಳಿದ ಸ್ಥಾನಗಳು ತೆಲಂಗಾಣದ ಬಿಆರ್‌ಎಸ್‌, ನಾಮನಿರ್ದೇಶಿತ ಸದಸ್ಯರು ಹಾಗೂ ಸ್ವತಂತ್ರ ಸದಸ್ಯರಾಗಿದ್ದಾರೆ. ಆದಾಗ್ಯೂ ಬಿಜೆಪಿಯು ಪ್ರಸಕ್ತ ವರ್ಷ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಬಹುದಾಗಿದೆ. ಹಾಗೆಯೇ 11 ಸ್ಥಾನಗಳಿಗೆ ಚುನಾವಣೆಯೂ ನಡೆಯಲಿದೆ. ಹಾಗಾಗಿ ಶೀಘ್ರದಲ್ಲೇ ಬಿಜೆಪಿಯು ಮೇಲ್ಮನೆಯಲ್ಲಿ ಬಹುಮತ ಸಾಧಿಸಲಿದೆ ಎಂದೇ ತಜ್ಞರು ವಿಶ್ಲೇಷಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

DK Shivakumar: ಕನ್ನಂಬಾಡಿ ಕಟ್ಟೆ, ನಮ್ಮೆಲ್ಲರ ಅನ್ನದ ತಟ್ಟೆ; ಮಳೆ ಬರಲ್ಲ ಎಂದವರಿಗೆ ತಕ್ಕ ಉತ್ತರ ಸಿಕ್ಕಿದೆ ಎಂದ ಡಿಕೆಶಿ

DK Shivakumar: ಕೆಆರ್‌ಎಸ್ ಅಣೆಕಟ್ಟೆಗೆ ಬಾಗಿನ ಸಮರ್ಪಿಸಿದ ನಂತರ ನಡೆದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದ್ದಾರೆ. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚಿನ ಪ್ರಯೋಜನವಿದೆ. ಅಲ್ಲಿನ ಜನತೆಗೆ ಭಗವಂತನ ಕೃಪೆಯಿಂದ ಜ್ಞಾನೋದಯವಾಗುತ್ತದೆ. ನಮ್ಮ ಕಾಲದಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಅನುವು ಮಾಡಿಕೊಡುತ್ತಾರೆ ಎಂದು ನಂಬಿದ್ದೇವೆ ಎಂದು ತಿಳಿಸಿದ್ದಾರೆ.

VISTARANEWS.COM


on

DK Shivakumar
Koo

ಮಂಡ್ಯ: ಈ ಬಾರಿ ಉತ್ತಮ ಮಳೆಯಾಗಿರುವ ಪರಿಣಾಮ ಈಗಾಗಲೇ ತಮಿಳುನಾಡಿಗೆ 84 ಟಿಎಂಸಿಯಷ್ಟು ನೀರು ತಲುಪಿದೆ. ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವಂತಹ ಆಶೀರ್ವಾದವನ್ನು ಕಾವೇರಿ ತಾಯಿ ನಮ್ಮ ಸರ್ಕಾರಕ್ಕೆ ಮಾಡುತ್ತಾಳೆ. ಕನ್ನಂಬಾಡಿ ಕಟ್ಟೆ ನಮ್ಮೆಲ್ಲರ ಅನ್ನದ ತಟ್ಟೆಯಾಗಿದ್ದು, ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ನಂತರ ಮಳೆ ಬರಲಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದವರಿಗೆ ತಕ್ಕ ಉತ್ತರ ಸಿಕ್ಕಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ.

ಕೆಆರ್‌ಎಸ್ ಅಣೆಕಟ್ಟೆಗೆ ಬಾಗಿನ ಸಮರ್ಪಿಸಿದ ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜುಲೈ ತಿಂಗಳಿನಲ್ಲಿ ಪ್ರತಿ ದಿನ 1 ಟಿಎಂಸಿಯಂತೆ ತಮಿಳುನಾಡಿಗೆ 40 ಟಿಎಂಸಿ ನೀರು ಹರಿಸಬೇಕಿತ್ತು. ಅದಕ್ಕಿಂತ ಹೆಚ್ಚಿನ ನೀರು ಹರಿದು ತಾಯಿ ಕಾವೇರಿ ನೆಮ್ಮದಿ ಶಾಂತಿ ತಂದಿದ್ದಾಳೆ” ಎಂದು ಹೇಳಿದರು.

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚಿನ ಪ್ರಯೋಜನವಿದೆ. ಸಂಕಷ್ಟ ಕಾಲದಲ್ಲಿ ಅವರ ಪಾಲಿನ 177 ಟಿಎಂಸಿ ನೀರನ್ನು ಅವರಿಗೆ ಹರಿಸಬಹುದು. ಸುಮಾರು 400 ಮೆ.ವ್ಯಾ ವಿದ್ಯುತ್ ತಯಾರಿಸಬಹುದು. ಈ ಅಣೆಕಟ್ಟು ಕಟ್ಟಲು ನ್ಯಾಯಾಲಯ ಅನುವು ಮಾಡಿಕೊಡುತ್ತದೆ ಎಂದು ನಂಬಿದ್ದೇವೆ. ತಮಿಳುನಾಡಿನ ಜನತೆಗೆ ಭಗವಂತನ ಕೃಪೆಯಿಂದ ಜ್ಞಾನೋದಯವಾಗುತ್ತದೆ. ನಮ್ಮ ಕಾಲದಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಅನುವು ಮಾಡಿಕೊಡುತ್ತಾರೆ ಎಂದು ನಂಬಿದ್ದೇವೆ ಎಂದರು.

ಇದನ್ನೂ ಓದಿ | BJP-JDS Padayatra: ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಅನುಮತಿ ಕೊಡಲ್ಲ: ಗೃಹ ಸಚಿವ ಪರಮೇಶ್ವರ್‌

2018- 19ರಲ್ಲಿ 404 ಟಿಎಂಸಿ, 2019-20ರಲ್ಲಿ 275, 2020-21ರಲ್ಲಿ 211, 2021-22ರಲ್ಲಿ 281, 2022- 23ರಲ್ಲಿ 667 ಹಾಗೂ 2023-24ರಲ್ಲಿ 87 ಟಿಎಂಸಿ ನೀರು ತಮಿಳುನಾಡಿಗೆ ಹರಿದಿದೆ. ಈ ವರ್ಷ 84 ಟಿಎಂಸಿ ನೀರು ಹರಿದಿದ್ದು, ಇದೇ ರೀತಿ ಮಳೆ ಬರಲಿ ಎಂದು ಎಲ್ಲರೂ ಪ್ರಾರ್ಥನೆ ಮಾಡಬೇಕು ಎಂದು ಹೇಳಿದರು.

ಕನ್ನಂಬಾಡಿ ಕಟ್ಟೆ, ನಮ್ಮೆಲ್ಲರ ಅನ್ನದ ತಟ್ಟೆ

ಕನ್ನಂಬಾಡಿ ಕಟ್ಟೆ ನಮ್ಮೆಲ್ಲರ ಅನ್ನದ ತಟ್ಟೆ. ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ ಮತ್ತು ತಮಿಳುನಾಡಿನವರು ಈ ನದಿಯ ಮೂಲಕ ಅನ್ನ ಬೆಳೆಯುತ್ತಿದ್ದೇವೆ. ಎಲ್ಲರ ಪಾಲಿನ ಜೀವನದಿ ಕಾವೇರಿಗೆ 92 ವರ್ಷ ಕಳೆದರೂ ನಮನ ಸಲ್ಲಿಸುತ್ತಿದ್ದೇವೆ. ತಾಯಿ ಚಾಮುಂಡೇಶ್ವರಿಯಲ್ಲಿ ಈ ವರ್ಷ ಉತ್ತಮ ಮಳೆಯಾಗಲಿ ಎಂದು ಬೇಡಿಕೊಂಡಿದ್ದೆವು. ನಮ್ಮ ಬದುಕು ಉಳಿಸು ಎಂದು ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದ್ದೆವು, ಮನುಷ್ಯ ಪ್ರಯತ್ನಕ್ಕೆ ಸೋಲಾಗಬಹುದು ಆದರೆ ಪ್ರಾರ್ಥನೆಗೆ ಎಂದೂ ಸೋಲಾಗುವುದಿಲ್ಲ ಎನ್ನುವುದಕ್ಕೆ ಕಾವೇರಿ ತಾಯಿ ತುಂಬಿ ಹರಿಯುತ್ತಿರುವುದೇ ಸಾಕ್ಷಿ. ಸ್ವರ್ಣಗೌರಿ ಹಬ್ಬದ ದಿನ ಮನೆಯ ಹೆಣ್ಣುಮಕ್ಕಳಿಗೆ ಬಾಗಿನ ಅರ್ಪಿಸಿದಂತೆ ಶುಭಗಳಿಗೆಯ ಅಭಿಜಿನ್ ಲಗ್ನದಲ್ಲಿ ಕಾವೇರಿ ತಾಯಿಗೆ ಬಾಗಿನ ಅರ್ಪಿಸಲಾಗಿದೆ ಎಂದರು.

ಮೇಲಿರುವ ಮೋಡಕ್ಕೆ ಕೆಳಗೆ ಯಾವ ಸರ್ಕಾರ ಇದೆ ಎಂದು ಗೊತ್ತಿರುವುದಿಲ್ಲ?

ತಮಿಳುನಾಡಿಗೆ ನಾನು ಅಥವಾ ಸಿದ್ದರಾಮಯ್ಯ ಅವರು ನೀರು ಬಿಟ್ಟಿಲ್ಲ. ತಾಯಿ ಕೃಪೆಯಿಂದ ಹೆಚ್ಚು ಮಳೆ ಬಂದಿದೆ ಆದ ಕಾರಣ ನೀರು ಅವರಿಗೆ ಹೋಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಗಳಾದ ನಂತರ ಮಳೆ ಬರಲಿಲ್ಲ, ನೀರು ಬರಲಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದರು. ಅವರಿಗೆಲ್ಲ ಈಗ ತಕ್ಕ ಉತ್ತರ ಸಿಕ್ಕಿದೆ. ಮೇಲೆ ಇರುವ ಮೋಡಕ್ಕೆ ಕೆಳಗೆ ಯಾವ ಸರ್ಕಾರ ಅಧಿಕಾರದಲ್ಲಿ ಇದೆ ಎನ್ನುವುದು ಗೊತ್ತಿರುವುದಿಲ್ಲ ಎಂದು ಹೇಳಿದರು.

ಮಳೆ ಇದೇ ರೀತಿ ಉತ್ತಮವಾಗಿ ಬಂದರೆ ತಮಿಳುನಾಡು ಪಾಲಿನ 177 ಟಿಎಂಸಿ ನೀರನ್ನು ಈ ವರ್ಷ ನೀಡಬಹುದು. ಕಳೆದ ವರ್ಷ 223 ತಾಲೂಕುಗಳಲ್ಲಿ ಬರ ಬಂದಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಬರ ಬರುತ್ತದೆ ಎಂದು ಟೀಕೆ ಮಾಡಿದರು. ಆದರೂ ನಾವು ಜನಪರವಾಗಿ ಕೆಲಸ ಮಾಡಿದೆವು. ಏಕೆಂದರೆ ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ಯಾರನ್ನೂ ನಾನು ಟೀಕೆ ಮಾಡುವುದಿಲ್ಲ. ನಮ್ಮ ಕೆಲಸ ಗಳು ಅವರಿಗೆ ಮುಂದಿನ ದಿನಗಳಲ್ಲಿ ಉತ್ತರ ನೀಡುತ್ತವೆ ಎಂದು ಹೇಳಿದರು.

82 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ

ಭಾರತದ ಏಳು ಪವಿತ್ರ ನದಿಗಳಲ್ಲಿ ಕಾವೇರಿಯೂ ಒಂದು. ಜನರ ಕುಡಿಯುವ ನೀರು, ವ್ಯವಸಾಯ, ಕೈಗಾರಿಕೆಗಳಿಗೆ ಕಾವೇರಿ ಜೀವ ನೀಡುತ್ತಿದ್ದಾಳೆ. ಈ ವರ್ಷ 82 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿದೆ. ಸುಮಾರು 62 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಂಡಿದೆ ಎಂದು ತಿಳಿಸಿದರು.

ಕಾವೇರಿ ಜಲಾನಯನ ಪ್ರದೇಶಕ್ಕೆ ಹೊಸ ರೂಪ ನೀಡಲು ನಮ್ಮ ಸರ್ಕಾರ ಮುಂದಾಗಿದೆ. ಕಳೆದ ವರ್ಷ ಎಲ್ಲಾ ಕಾಲುವೆಗಳನ್ನು ಸ್ವಚ್ಚಗೊಳಿಸಲಾಗಿದೆ. ಕಾಲುವೆಯ ಕೊನೆ ಭಾಗದ ರೈತರಿಗೂ ನೀರು ತಲುಪಬೇಕು ಎಂದು 1964-65ರ ಕಾನೂನಿಗೆ ತಿದ್ದುಪಡಿ ತಂದು ಈ ಬಾರಿಯ ವಿಧಾನಸಭೆಯಲ್ಲಿ ಮಂಡನೆ ಮಾಡಿ ಹೊಸ ಕಾನೂನು ತಂದಿದ್ದೇವೆ. ರೈತರ ಬದುಕು ಹಸನಾಗಬೇಕು ಎಂದು ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕು ಎನ್ನುವ ಕನಸನ್ನು ಸಚಿವ ಚೆಲುವರಾಯಸ್ವಾಮಿ ಅವರು ಹೊಂದಿದ್ದಾರೆ. ಇದು ಮಂಡ್ಯ ಜಿಲ್ಲೆಯ ರೈತರ ಬದುಕಿಗೆ ದೊಡ್ಡ ಮಾರ್ಗದರ್ಶನ ಸಿಗಲಿದೆ. ರೈತನಿಗೆ ಬಡ್ತಿ, ಸಂಬಳ, ನಿವೃತ್ತಿ ಎಂಬುದಿಲ್ಲ. ಆದ ಕಾರಣಕ್ಕೆ ರೈತರನ್ನು ನಾವು ಉಳಿಸಬೇಕಿದೆ ಎಂದರು.

ಸಂಕಷ್ಟದ ವರ್ಷಗಳಲ್ಲಿ ಮೇಕೆದಾಟು ಅಣೆಕಟ್ಟು ಪರಿಹಾರ ಎಂದು ನಾವು ಪಾದಯಾತ್ರೆ ಮಾಡಿದ್ದೆವು. ನಮ್ಮ ಎದುರು ಪಕ್ಷದವರು ಕೋವಿಡ್ ಕಾರಣ ಹೇಳಿ ಪಾದಯಾತ್ರೆಗೆ ತಡೆ ಹಾಕಿದರು. ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳು ಪಾದಯಾತ್ರೆಗೆ ಸೇರುವ ವೇಳೆ ರಾಮನಗರದಲ್ಲಿ ಪಾದಯಾತ್ರೆ ನಿಲ್ಲುವಂತೆ ಮಾಡಲಾಯಿತು. ಯಾರೇ ಏನೇ ತಡೆ ಹಾಕಿದರೂ ಪಾದಯಾತ್ರೆ ಸಂಪೂರ್ಣ ಮಾಡುತ್ತೇವೆ ಎಂದು ಬೆಂಗಳೂರಿನ ತನಕ ಹೆಜ್ಜೆ ಹಾಕಿದೆವು. ಕಾವೇರಿ ತೀರದ ಎಲ್ಲಾ ಪ್ರದೇಶಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಜನ ಸೇವೆಗೆ ಜನರು ಅವಕಾಶ ಮಾಡಿಕೊಟ್ಟಿದ್ದಾರೆ. ನಮ್ಮ ಜನರ ಋಣ ತೀರಿಸುತ್ತೇವೆ. ನಮ್ಮ ಮೇಲೆ ವಿಶ್ವಾಸವಿರಲಿ ಎಂದು ತಿಳಿಸಿದರು.

ಬೃಂದಾವನಕ್ಕೆ ಹೊಸ ರೂಪ; ಕಾವೇರಿ ಆರತಿ ಪ್ರಾರಂಭ

ಕೆಆರ್‌ಎಸ್‌ ಅಣೆಕಟ್ಟೆ ಬಳಿ ಬೃಂದಾವನ ಗಾರ್ಡನ್‌ ಅನ್ನು ಮೈಸೂರು ಮಹಾರಾಜರು ಅದ್ಭುತವಾಗಿ ನಿರ್ಮಾಣ ಮಾಡಿದ್ದರು. ಗುಂಡೂರಾವ್ ಅವರು ಇದಕ್ಕೆ ಹೊಸರೂಪ ನೀಡಿದರು. ಪ್ರವಾಸೋದ್ಯಮವನ್ನು ಗುರಿಯಾಗಿಟ್ಟುಕೊಂಡು ಪಿಪಿಪಿ ಮಾದರಿಯಲ್ಲಿ ಹೊಸ ರೂಪ ನೀಡಲು ನಮ್ಮ ಸರ್ಕಾರ ಹೊರಟಿದೆ. ಗಂಗಾ ಆರತಿಗಿಂತ ಮಿಗಿಲಾಗಿ ಪ್ರತಿವಾರ ಕಾವೇರಿ ಆರತಿ ಮಾಡಲಾಗುವುದು. ಈ ಕಾರ್ಯಕ್ರಮವನ್ನು ಆದಷ್ಟು ಬೇಗ ಪ್ರಾರಂಭ ಮಾಡಲಾಗುವುದು. ಈಗಾಗಲೇ ಚೆಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಕಾವೇರಿ ಜಲಾನಯದ ಪ್ರದೇಶದ ಶಾಸಕರ ಹಾಗೂ ಸಂಬಂಧಪಟ್ಟ ಇಲಾಖೆಗಳನ್ನು ಸೇರಿಸಿ ಸಮಿತಿ ರಚಿಸಲಾಗಿದೆ ಎಂದರು.

ರೈತರ ಜಮೀನನ್ನು ಒತ್ತಾಯವಾಗಿ ವಶಪಡಿಸಿಕೊಳ್ಳಲ್ಲ

ರೈತರು ಬೃಂದಾವನಕ್ಕೆ ಹೊಸ ರೂಪ ನೀಡುವ ಮೊದಲು ನಮ್ಮ ಜೊತೆ ಚರ್ಚೆ ನಡೆಸಿ ಎಂದು ಹೇಳಿದ್ದಾರೆ. ಯಾವುದೇ ಮುಚ್ಚುಮರೆಯಿಲ್ಲದೇ ಇದರ ಅಭಿವೃದ್ಧಿ ಮಾಡಲಾಗುವುದು ಹಾಗೂ ಅವರ ಜತೆ ಚರ್ಚೆ ನಡೆಸಲಾಗುವುದು. ಯಾರ ಜಮೀನು ವಶಪಡಿಸಿಕೊಳ್ಳುವುದಿಲ್ಲ. ಸರ್ಕಾರದ ಜಮೀನಿನಲ್ಲೇ ಅಭಿವೃದ್ಧಿ ಮಾಡಲಾಗುವುದು. ಇಷ್ಟವಿದ್ದವರು ಜಮೀನು ನೀಡಬಹುದು, ಯಾರಿಗೂ ಒತ್ತಾಯ ಮಾಡುವುದಿಲ್ಲ. ಅಣೆಕಟ್ಟಿನ ಭದ್ರತೆಯನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸಲಾಗುವುದು. ಸ್ಥಳೀಯ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡರು ನೀರಾವರಿಗೆ ಸಂಬಂಧಿಸಿದಂತೆ ಅನೇಕ ಮನವಿಗಳನ್ನು ಸಲ್ಲಿಸಿದ್ದಾರೆ. ಅವರ ಮನವಿಗಳನ್ನು ಶೀಘ್ರ ಪರಿಗಣಿಸಲಾಗುವುದು ಎಂದು ಹೇಳಿದರು.

ಪ್ರತಿವರ್ಷ ಐದು ಮಂದಿಗೆ ಪ್ರಶಸ್ತಿ

ಕಬಿನಿ, ಕೆಆರ್‌ಎಸ್, ಹೇಮಾವತಿ ವಿಭಾಗದಲ್ಲಿ ಮೂರು ಜನ ರೈತರು ಹಾಗೂ ಒಬ್ಬ ಪ್ರಗತಿಪರ ರೈತ ಮತ್ತು ಕಿರಿಯ ಎಂಜಿನಿಯರ್ ಅವರಿಗೆ ಕಾವೇರಿ ನೀರಾವರಿ ನಿಗಮದಿಂದ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದರು.

ಬಾಗಿನ ಅರ್ಪಣೆಗೂ ಮುಂಚಿತವಾಗಿ ಕೆಆರ್ ಎಸ್ ಅಣೆಕಟ್ಟಿನ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅತಿಥಿಗೃಹದ ಬಳಿ ಉತ್ತರಿಸಿದ ಡಿಸಿಎಂ ಅವರು, ಪ್ರಸ್ತುತ ಮಳೆ ಕಡಿಮೆಯಾಗಿದೆ. ಕಾವೇರಿ ನದಿ ತೀರದ ಪ್ರದೇಶಗಳ ಜನರಿಗೆ ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ. ತಮಿಳುನಾಡಿದ ಸಿಎಂ ಅವರ ರಾಜ್ಯಗಳ ಕೆರೆಗಳನ್ನು ತುಂಬಿಸಲು ಸೂಚನೆ ನೀಡಿದ್ದಾರೆ. ನಾವು ನಮ್ಮ ರಾಜ್ಯದ ಕೆರೆಗಳನ್ನು ತುಂಬಿಸುತ್ತಿದ್ದೇವೆ. ನಮ್ಮ ರೈತರನ್ನು ನಾವು ಕಾಪಾಡುತ್ತೇವೆ. ತಮಿಳುನಾಡಿಗೆ ಹಾಗೂ ನಮ್ಮ ರಾಜ್ಯಕ್ಕೆ ಒಳ್ಳೆಯದಾಗಲಿ. ಹೆಚ್ಚು ಕಾವೇರಿ ನೀರನ್ನು ಬಳಸಿಕೊಳ್ಳುವ ವಿಚಾರವಾಗಿ ಚರ್ಚೆ ನಡೆಸಬೇಕಾಗಿದೆ ಎಂದರು.

ಇದನ್ನೂ ಓದಿ | BJP Padayatra: ಮುಡಾ ಹಗರಣ ಖಂಡಿಸಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ಬಿಜೆಪಿ ನಿರ್ಧಾರ

ಬಿಜೆಪಿ- ಜೆಡಿಎಸ್ ಪಾದಯಾತ್ರೆ ವಿಚಾರವಾಗಿ ಕೇಳಿದಾಗ, ಮೊದಲು ಭೂತಾಯಿ ಮತ್ತು ವರುಣದೇವನಿಗೆ ಪೂಜೆ ಸಲ್ಲಿಸೋಣ. ಆನಂತರ ರಾಜಕಾರಣ ಮಾತನಾಡೋಣ ಎಂದು ಹೇಳಿದರು.

Continue Reading

ಕರ್ನಾಟಕ

Kabini Dam: ಕಬಿನಿ ಡ್ಯಾಂಗೆ ಬಾಗಿನ ಅರ್ಪಿಸಿದ ಸಿಎಂ; ರಾಜ್ಯದ ಜಲಾಶಯಗಳು ತುಂಬಿದ್ದಕ್ಕೆ ಸಂತಸ

Kabini Dam: ಧನುರ್ ಲಗ್ನದಲ್ಲಿ ಪೂಜೆ ಸಲ್ಲಿಸಿ ಕಬಿನಿ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಣೆ‌ ಮಾಡಿದರು. ಈ ವೇಳೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಉತ್ತಮ ಮಳೆಯಾಗಿರುವುದರಿಂದ ರಾಜ್ಯ ಸಮೃದ್ಧವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Kabini Dam
Koo

ಮೈಸೂರು: ಜಿಲ್ಲೆಯ ಎಚ್‌.ಡಿ. ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿನ ಕಬಿನಿ ಜಲಾಶಯಕ್ಕೆ (Kabini Dam) ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಅವರು ಸೋಮವಾರ ಸಂಜೆ ಬಾಗಿನ ಅರ್ಪಿಸಿದರು. ಧನುರ್ ಲಗ್ನದಲ್ಲಿ ಪೂಜೆ ಸಲ್ಲಿಸಿ, ಸಿಎಂ, ಡಿಸಿಎಂ ಬಾಗಿನ ಅರ್ಪಣೆ ಮಾಡಿದರು. ಈ ವೇಳೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸೇರಿ ಹಳೆ ಮೈಸೂರು ಭಾಗದ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಉತ್ತಮ ಮಳೆಯಾಗಿ ರಾಜ್ಯ ಸಮೃದ್ಧಿಯಿಂದ ಕೂಡಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಹೀಗಾಗಿ ಕೆಆರ್‌ಎಸ್, ಕಬಿನಿ, ಹಾರಂಗಿ, ಹೇಮಾವತಿ ಜಲಾಶಯಗಳು ಭರ್ತಿಯಾಗಿದೆ. ಇದರಿಂದ ರಾಜ್ಯ ಸಮೃದ್ಧಿಯಿಂದ ಕೂಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಮಿಳುನಾಡು ನಮಗೂ ಕಾವೇರಿ ನೀರು ಹಂಚಿಕೆ ಸಮಸ್ಯೆ ಉಂಟಾಗಿದೆ. ಇದರಿಂದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ 47 ಟಿಎಂಸಿ ನೀರು ಬಿಡುವಂತೆ ಆದೇಶ ನೀಡಿತ್ತು. ಇದೀಗ ತಮಿಳುನಾಡಿಗೆ 80 ಟಿಎಂಸಿಗೂ ಹೆಚ್ಚು ನೀರು ಬಿಡಲಾಗಿದೆ. ರಾಜ್ಯದಲ್ಲಿ 66 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡಲಾಗಿದೆ. ರಾಜ್ಯ ಸಮೃದ್ಧಿಯಿಂದ ಕೂಡಿದೆ ಎಂದು
ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಬಿನಿ ಜಲಾಶಯ ನಮ್ಮೆಲ್ಲರ ಮರ್ಯಾದೆ ಉಳಿಸಿದೆ ಎಂದ ಡಿಸಿಎಂ

ಕಬಿನಿ ಜಲಾಶಯ ನಮ್ಮೆಲ್ಲರ ಮರ್ಯಾದೆ ಉಳಿಸಿದೆ. ತಮಿಳುನಾಡಿಗೆ ನೀರು ಬಿಡಬೇಕಿತ್ತು. ಜಲಾಶಯ ತುಂಬಿದ್ದರಿಂದ ನೀರನ್ನು ಬಿಡಲಾಗಿದೆ. ನಾನು, ಸಿಎಂ ಇಂದು ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದೇವೆ. ಕಪಿಲೆ ಮೈದುಂಬಿ ಹರಿಯುತ್ತಿದ್ದಾಳೆ ಎಂದು ಬಾಗಿನ ಅರ್ಪಣೆ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ | BJP-JDS Padayatra: ರಾಜ್ಯ ಸರ್ಕಾರದ ವಿರುದ್ಧ ಆ.3ರಿಂದ ಬೆಂಗಳೂರು-ಮೈಸೂರು ಪಾದಯಾತ್ರೆ: ಬಿ.ವೈ.ವಿಜಯೇಂದ್ರ

ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ; ಕಾವೇರಿ ಮಾತೆ ಪ್ರತಿಮೆಗೆ ವಿಶೇಷ ಪೂಜೆ

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯ (ಕೆಆರ್‌ಎಸ್‌) ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸೋಮವಾರ ಬಾಗಿನ ಅರ್ಪಿಸಿದರು. ಬೆಳಗ್ಗೆ 11 ಗಂಟೆಗೆ ಅಭಿಜಿನ್ ಮುಹೂರ್ತದಲ್ಲಿ ಜಲಾಶಯಕ್ಕೆ (KRS Dam) ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ ಅವರು, ನಂತರ ಕಾವೇರಿ ಮಾತೆ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದರು.

ಬಾಗಿನ ಅರ್ಪಿಸುವ ವೇಳೆ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಎನ್. ಚೆಲುವರಾಯಸ್ವಾಮಿ, ವೆಂಕಟೇಶ್, ಮೈಸೂರು ಹಾಗೂ ಮಂಡ್ಯ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಮೇಕೆದಾಟು ಯೋಜನೆ ಬಗ್ಗೆ ಚರ್ಚೆಗೆ ಸಿದ್ಧ ಎಂದ ಸಿದ್ದರಾಮಯ್ಯ

ಮೆಟ್ಟೂರು ಅಣೆಕಟ್ಟು ತುಂಬಿ ನೀರು ವ್ಯರ್ಥವಾಗುತ್ತಿದ್ದು, ಈ ಬಗ್ಗೆ ತಮಿಳುನಾಡು ಸರ್ಕಾರದೊಂದಿಗೆ ನಾವು ಮಾತನಾಡಲು ತಯಾರಿದ್ದೇವೆ. ಮೇಕೆದಾಟು ಯೋಜನೆಯಿಂದ ಅವರಿಗೆ ತೊಂದರೆಯಾಗದಿದ್ದರೂ ಮಾತನಾಡಲು ಅವರು ಸಿದ್ಧರಿಲ್ಲ. ಕೇಂದ್ರ ಸರ್ಕಾರ ಅನುಮೋದನೆ ಕೊಟ್ಟರೇ ನಾವು ನಿರ್ಮಾಣ ಮಾಡಲು ಸಿದ್ಧ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಿಜೆಪಿ ಪಾದಯಾತ್ರೆ: ರಾಜಕೀಯವಾಗಿ ವಿರೋಧಿಸುತ್ತೇವೆ

ವಾಲ್ಮೀಕಿ ಮತ್ತು ಮುಡಾ ಹಗರಣ ವಿರೋಧಿಸಿ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆ ಹಮ್ಮಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಮಾಡಲಿ, ನಾವೂ ಕೂಡ ರಾಜಕೀಯವಾಗಿ ವಿರೋಧಿಸುತ್ತೇವೆ. ವಾಲ್ಮೀಕಿ ಹಗರಣದಲ್ಲಿ ನಾವು 84.63 ಕೋಟಿ ಹಗರಣವಾಗಿದೆ ಎನ್ನುವುದು ನಿಜ. ಎಸ್.ಐ.ಟಿ ರಚನೆಯಾಗಿದ್ದು ತನಿಖೆಯಾಗುತ್ತಿದೆ. ಅವರೂ ಕೂಡ ಸಿಬಿಐ, ಇಡಿಯವರೂ ತನಿಖೆ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ | BJP-JDS Padayatra: ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಅನುಮತಿ ಕೊಡಲ್ಲ: ಗೃಹ ಸಚಿವ ಪರಮೇಶ್ವರ್‌

ಬಿಜೆಪಿ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ?

ಉಪಮುಖ್ಯಮಂತ್ರಿಗಳು ಅಯೋಗ್ಯ ಅಧಿಕಾರಿಗಳು ಹೀಗೆ ಮಾಡಿದ್ದಾರೆ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ? ಅದಕ್ಕಾಗಿಯೇ 21 ಹಗರಣಗಳನ್ನು ಪಟ್ಟಿ ಮಾಡಿ ಹೇಳಿದ್ದೇನೆ ಎಂದರು. ಕೆಲವು ತನಿಖೆಗಳು ನಡೆಯುತ್ತಿವೆ. ರಾಘವೇಂದ್ರ ಸಹಕಾರಿ ಬ್ಯಾಂಕ್ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ. ಇಂದಿನವರೆಗೂ ಸಿಬಿಐ ತನಿಖೆ ಪೂರ್ಣಗೊಳಿಸಿಲ್ಲ. ಅವರ ಅವಧಿಯಲ್ಲಿ ಒಂದೇ ಒಂದು ಪ್ರಕರಣವನ್ನು ಸಿಬಿಐಗೆ ಕೊಟ್ಟಿಲ್ಲ. 7-8 ಹಗರಣಗಳನ್ನು ಸಿಬಿಐಗೆ ವಹಿಸಲಾಗಿದೆ. ಇದೆ ಬಿಜೆಪಿ ನಾವು ಅಧಿಕಾರದಲ್ಲಿದ್ದಾಗ ಸಿಬಿಐ ಅನ್ನು ಚೋರ್ ಬಚಾವ್ ಸಂಸ್ಥೆ ಎನ್ನುತ್ತಿದ್ದರು. ಈಗ ಸಿಬಿಐ ಗೆ ಮೇಲೆ ಇವರಿಗೇನು ಪ್ರೀತಿ ಎಂದರು. ಈ ಕುರಿತ ದಾಖಲೆಗಳನ್ನು ನಾನು ಕೊಡುತ್ತೇನೆ ಎಂದರು.


Continue Reading

ಪ್ರಮುಖ ಸುದ್ದಿ

KRS Dam: ಸಂಪ್ರದಾಯಕ್ಕೆ ಎಳ್ಳು ನೀರು; ಕಾವೇರಿಗೆ ಬಾಗಿನ ಕಾರ್ಯಕ್ರಮದಲ್ಲಿ ಬಾಡೂಟ!

KRS Dam: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಡ್ಯಾಂನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಬೆಳಗ್ಗೆ ಬಾಗಿನ ಸಲ್ಲಿಸಿ, ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ್ದರು. ಇದಾದ ಬಳಿಕ ಅಧಿಕಾರಿಗಳು ಭರ್ಜರಿ ಬಾಡೂಟ ಆಯೋಜನೆ ಮಾಡಿರುವುದು ಕಂಡುಬಂದಿದೆ.

VISTARANEWS.COM


on

KRS Dam
Koo

ಮಂಡ್ಯ: ಸಿಎಂ, ಡಿಸಿಎಂ ಭಾಗವಹಿಸಿದ್ದ ಕೆಆರ್‌ಎಸ್‌ಗೆ (KRS Dam) ಬಾಗಿನ ಸಲ್ಲಿಸುವ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ. ಕಾರ್ಯಕ್ರಮದ ಬಳಿಕ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಭರ್ಜರಿ ಬಾಡೂಟ ಆಯೋಜನೆ ಮಾಡಿದ್ದು, ಈ ಮೂಲಕ ಸಂಪ್ರದಾಯಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಸಂಪ್ರದಾಯ ಮುರಿದು ಬಾಗಿನ ದಿವಸ ಬಾಡೂಟ ಆಯೋಜನೆ ಮಾಡಲಾಗಿದೆ. ಸಿಎಂ, ಸಚಿವರು ಹೊರಟ ಬಳಿಕ ಇಲಾಖೆ ಅಧಿಕಾರಿಗಳು ಭರ್ಜರಿ ಬಾಡೂಟ ಸೇವಿಸಿದ್ದಾರೆ. ಕೆಆರ್‌ಎಸ್‌ನ ಖಾಸಗಿ ಹೋಟೆಲ್‌ನಲ್ಲಿ ಬಾಡೂಟ ಆಯೋಜನೆ ಮಾಡಲಾಗಿತ್ತು.

ಈ ಹಿಂದೆ ಎಂದೂ ಬಾಗಿನ ಸಲ್ಲಿಸಿದ ದಿವಸ ಬಾಡೂಟ ಆಯೋಜಿಸಿದ್ದ ಉದಾಹರಣೆ ಇಲ್ಲ. ಇದೇ ಮೊದಲ ಬಾರಿಗೆ ಬಾಗಿನ ಸಲ್ಲಿಸಿದ ದಿನ ಬಾಡೂಟ ಆಯೋಜನೆ ಮಾಡಲಾಗಿದೆ. ಈ ಮೂಲಕ ಮೂಲಕ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸಂಪ್ರದಾಯ ಮುರಿದಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯ (ಕೆಆರ್‌ಎಸ್‌) ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸೋಮವಾರ ಬಾಗಿನ ಅರ್ಪಿಸಿದರು. ಬೆಳಗ್ಗೆ 11 ಗಂಟೆಗೆ ಅಭಿಜಿನ್ ಮುಹೂರ್ತದಲ್ಲಿ ಜಲಾಶಯಕ್ಕೆ (KRS Dam) ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ ಅವರು, ನಂತರ ಕಾವೇರಿ ಮಾತೆ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದರು.

ಬಾಗಿನ ಅರ್ಪಿಸುವ ವೇಳೆ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಎನ್. ಚೆಲುವರಾಯಸ್ವಾಮಿ, ವೆಂಕಟೇಶ್, ಮೈಸೂರು ಹಾಗೂ ಮಂಡ್ಯ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಮೇಕೆದಾಟು ಯೋಜನೆ ಬಗ್ಗೆ ಚರ್ಚೆಗೆ ಸಿದ್ಧ: ಸಿದ್ದರಾಮಯ್ಯ

ಮೈಸೂರು: ಮೆಟ್ಟೂರು ಅಣೆಕಟ್ಟು ತುಂಬಿ ನೀರು ವ್ಯರ್ಥವಾಗುತ್ತಿದ್ದು, ಈ ಬಗ್ಗೆ ತಮಿಳುನಾಡು ಸರ್ಕಾರದೊಂದಿಗೆ ನಾವು ಮಾತನಾಡಲು ತಯಾರಿದ್ದೇವೆ. ಮೇಕೆದಾಟು ಯೋಜನೆಯಿಂದ ಅವರಿಗೆ ತೊಂದರೆಯಾಗದಿದ್ದರೂ ಮಾತನಾಡಲು ಅವರು ಸಿದ್ಧರಿಲ್ಲ. ಕೇಂದ್ರ ಸರ್ಕಾರ ಅನುಮೋದನೆ ಕೊಟ್ಟರೇ ನಾವು ನಿರ್ಮಾಣ ಮಾಡಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಗ್ಲಾದೇಶದಿಂದ 20 ಸಾವಿರ ಜನ ಬೆಂಗಳೂರಿಗೆ ವಲಸೆ ಬಂದಿರುವ ಬಗ್ಗೆ ಮಾತನಾಡಿ, ಈ ಬಗ್ಗೆ ತಿಳಿದಿಲ್ಲ. ವಿಚಾರ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಬಿಜೆಪಿ ಪಾದಯಾತ್ರೆ: ರಾಜಕೀಯವಾಗಿ ವಿರೋಧಿಸುತ್ತೇವೆ

ವಾಲ್ಮೀಕಿ ಮತ್ತು ಮುಡಾ ಹಗರಣ ವಿರೋಧಿಸಿ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆ ಹಮ್ಮಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಮಾಡಲಿ, ನಾವೂ ಕೂಡ ರಾಜಕೀಯವಾಗಿ ವಿರೋಧಿಸುತ್ತೇವೆ. ವಾಲ್ಮೀಕಿ ಹಗರಣದಲ್ಲಿ ನಾವು 84.63 ಕೋಟಿ ಹಗರಣವಾಗಿದೆ ಎನ್ನುವುದು ನಿಜ. ಎಸ್.ಐ.ಟಿ ರಚನೆಯಾಗಿದ್ದು ತನಿಖೆಯಾಗುತ್ತಿದೆ. ಅವರೂ ಕೂಡ ಸಿಬಿಐ, ಇಡಿಯವರೂ ತನಿಖೆ ಮಾಡುತ್ತಿದ್ದಾರೆ ಎಂದರು.

ಬಿಜೆಪಿ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ?

ಉಪಮುಖ್ಯಮಂತ್ರಿಗಳು ಅಯೋಗ್ಯ ಅಧಿಕಾರಿಗಳು ಹೀಗೆ ಮಾಡಿದ್ದಾರೆ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ? ಅದಕ್ಕಾಗಿಯೇ 21 ಹಗರಣಗಳನ್ನು ಪಟ್ಟಿ ಮಾಡಿ ಹೇಳಿದ್ದೇನೆ ಎಂದರು. ಕೆಲವು ತನಿಖೆಗಳು ನಡೆಯುತ್ತಿವೆ. ರಾಘವೇಂದ್ರ ಸಹಕಾರಿ ಬ್ಯಾಂಕ್ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ. ಇಂದಿನವರೆಗೂ ಸಿಬಿಐ ತನಿಖೆ ಪೂರ್ಣಗೊಳಿಸಿಲ್ಲ. ಅವರ ಅವಧಿಯಲ್ಲಿ ಒಂದೇ ಒಂದು ಪ್ರಕರಣವನ್ನು ಸಿಬಿಐಗೆ ಕೊಟ್ಟಿಲ್ಲ. 7-8 ಹಗರಣಗಳನ್ನು ಸಿಬಿಐಗೆ ವಹಿಸಲಾಗಿದೆ. ಇದೆ ಬಿಜೆಪಿ ನಾವು ಅಧಿಕಾರದಲ್ಲಿದ್ದಾಗ ಸಿಬಿಐ ಅನ್ನು ಚೋರ್ ಬಚಾವ್ ಸಂಸ್ಥೆ ಎನ್ನುತ್ತಿದ್ದರು. ಈಗ ಸಿಬಿಐ ಗೆ ಮೇಲೆ ಇವರಿಗೇನು ಪ್ರೀತಿ ಎಂದರು. ಈ ಕುರಿತ ದಾಖಲೆಗಳನ್ನು ನಾನು ಕೊಡುತ್ತೇನೆ ಎಂದರು.

ಇದನ್ನೂ ಓದಿ | CM Siddaramaiah: ನಾಳೆ ದಿಲ್ಲಿಗೆ ಸಿಎಂ- ಡಿಸಿಎಂ ದೌಡು; ಸಚಿವ ಸಂಪುಟದಲ್ಲಿ ಬದಲಾವಣೆ ಫಿಕ್ಸ್?

ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ

ಮುಡಾ ಪ್ರಕರಣದಲ್ಲಿ ನಿವೇಶನಗಳನ್ನು ಸಿಎಂ ಹಿಂದಿರುಗಿಸಿ ತನಿಖೆಗೆ ಅವಕಾಶ ಕೊಡಬೇಕೆಂದು ಬಿಜೆಪಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮೂಡಾ ಪ್ರಕರಣದಲ್ಲಿ ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ. ಈ ಬಗ್ಗೆ ನ್ಯಾಯಾಂಗ ಆಯೋಗ ರಚನೆಯಾಗಿದೆ. ಬಿಜೆಪಿ ಯಾವುದೇ ನ್ಯಾಯಾಂಗ ತನಿಖೆ ರಚಿಸಿತ್ತೆ ಎಂದು ಪ್ರಶ್ನಿಸಿದರು. ಕೋವಿಡ್ 19 ಸಂದರ್ಭದಲ್ಲಿ 3 ರಿಂದ 4 ಸಾವಿರ ಕೋಟಿ ರೂಪಾಯಿ ನುಂಗಿ ಹಾಕಿದ್ದಾರೆ. ನ್ಯಾಯಾಂಗ ತನಿಖೆ ಅಥವಾ ಸಿಬಿಐಗೆ ವಹಿಸಲು ಕೊಡಿ ಎಂಡು ಒತ್ತಾಯಿಸಿದೆ. ಆದರೆ ಅವರು ಕೊಡಲಿಲ್ಲ ಎಂದರು. ಯಾವುದೇ ತಪ್ಪಿಲ್ಲದಿದ್ದರೂ ಕೂಡ ಜನರ ಮನಸ್ಸಿನಲ್ಲಿ ಅನುಮಾನವಿರಬಾರದು ಎಂಬ ಕಾರಣಕ್ಕೆ ನ್ಯಾಯಾಂಗ ಆಯೋಗ ರಚಿಸಲಾಗಿದೆ ಎಂದರು. ಒಬ್ಬ ಸಚಿವರು, ಮುಖ್ಯಮಂತ್ರಿಯಾಗಿದ್ದವರು ಹೇಗೆ ಮಾತನಾಡಿದರೆ ಹೇಗೆ? ನಮಗೆ ನಮ್ಮ ಪೊಲೀಸರ ಮೇಲೆ ನಂಬಿಕೆ ಇದೆ ಎಂದರು.

Continue Reading

ಪ್ರಮುಖ ಸುದ್ದಿ

Karnataka Flood: ನೆರೆ ಪೀಡಿತ ಸ್ಥಳಗಳಿಗೆ ಭೇಟಿ ನೀಡಲು 6 ತಂಡ ರಚಿಸಿದ ಬಿಜೆಪಿ; ನಾಳೆಯಿಂದ ಪ್ರವಾಸ

Karnataka Flood: ನೆರೆ ಪೀಡಿತ ಪ್ರದೇಶಗಳಿಗೆ (Karnataka Flood) ಭೇಟಿ ನೀಡುವ ಉದ್ದೇಶದಿಂದ ರಾಜ್ಯ ಬಿಜೆಪಿಯು 6 ತಂಡಗಳನ್ನು ರಚನೆ ಮಾಡಿದೆ. ಜುಲೈ 30 ಮತ್ತು 31ರಂದು ಈ ತಂಡಗಳು ಪ್ರವಾಸ ಕೈಗೊಳ್ಳಲಿವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

VISTARANEWS.COM


on

Karnataka Flood
Koo

ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಿಂದ ಪ್ರವಾಹ ಸೃಷ್ಟಿಯಾಗಿ ಜನ ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ನೆರೆ ಪೀಡಿತ ಪ್ರದೇಶಗಳಿಗೆ (Karnataka Flood) ಭೇಟಿ ನೀಡುವ ಉದ್ದೇಶದಿಂದ ರಾಜ್ಯ ಬಿಜೆಪಿಯು 6 ತಂಡಗಳನ್ನು ರಚನೆ ಮಾಡಿದ್ದು,, ಜುಲೈ 30 ಮತ್ತು 31ರಂದು ಈ ತಂಡಗಳು ಪ್ರವಾಹ ಪೀಡಿಯ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಶಾಸಕರಾದ ಅರಗ ಜ್ಞಾನೇಂದ್ರ, ಡಾ. ಸಿ.ಎನ್. ಅಶ್ವತ್ಥನಾರಾಯಣ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಹಾಗೂ ಮಾಜಿ ಸಚಿವ ಬಿ. ಶ್ರೀರಾಮುಲು ಅವರ ನೇತೃತ್ವದಲ್ಲಿನ ತಂಡಗಳು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿವೆ.

ಆರ್. ಅಶೋಕ್ ಅವರ ತಂಡವು ಮಂಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ, ಆರಗ ಜ್ಞಾನೇಂದ್ರ ಅವರ ತಂಡವು ಶಿವಮೊಗ್ಗ ಜಿಲ್ಲೆಯಲ್ಲಿ, ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರ ತಂಡವು ಕೊಡಗು ಮತ್ತು ಉಡುಪಿ ಜಿಲ್ಲೆಗಳಲ್ಲಿ, ಛಲವಾದಿ ನಾರಾಯಣಸ್ವಾಮಿ ತಂಡವು ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ, ಅರವಿಂದ ಬೆಲ್ಲದ್ ಅವರ ತಂಡವು ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ, ಬಿ. ಶ್ರೀರಾಮುಲು ಅವರ ತಂಡವು ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ.

ಇದನ್ನೂ ಓದಿ | BJP-JDS Padayatra: ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಅನುಮತಿ ಕೊಡಲ್ಲ: ಗೃಹ ಸಚಿವ ಪರಮೇಶ್ವರ್‌

ಪಾದಯಾತ್ರೆಗೂ ಮುನ್ನ ಪ್ರವಾಹ ಸ್ಥಳಗಳಿಗೆ ಭೇಟಿ: ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಮಳೆಯಿಂದಾಗಿ ಪ್ರವಾಹ ಹೆಚ್ಚಾಗಿದೆ. ಹೀಗಾಗಿ ಪ್ರವಾಹ ಸ್ಥಳಗಳಿಗೆ ಭೇಟಿ ನೀಡಲು ಬಿಜೆಪಿಯಿಂದ 6 ತಂಡ ರಚನೆ ಮಾಡಿದ್ದೇವೆ. ವಿಪಕ್ಷ ನಾಯಕ ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ, ಅರವಿಂದ ಬೆಲ್ಲದ್ ಸೇರಿ 6 ನಾಯಕರ ನೇತೃತ್ವದಲ್ಲಿ 6 ತಂಡ ರಚನೆಯಾಗಿದೆ. ಮಂಗಳವಾರ, ಬುಧವಾರ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಮೈಸೂರು ಚಲೋ ಪಾದಯಾತ್ರೆ ಪೂರ್ವಭಾವಿ ಸಭೆ ಬಳಿಕ ಅವರು ಮಾತನಾಡಿದರು. ಇನ್ನು ಬಿಜೆಪಿ ಪಾದಯಾತ್ರೆ ಆರಂಭಿಸಲು ಸಕಾರಣಗಳು ಇವೆ, ಬಿಜೆಪಿ ಅವಧಿಯಲ್ಲಿ ನಮ್ಮ ಮೇಲೆ ಸಾಕಷ್ಟು ಅಪಪ್ರಚಾರ ಮಾಡಲು ಕಾಂಗ್ರೆಸ್ ಯಶಸ್ವಿಯಾಯಿತು. ಶೇ.40 ವಿಚಾರದಲ್ಲಿ ಯಶಸ್ವಿಯಾಗಿ ಅಪಪ್ರಚಾರ ಮಾಡಿ, ಅಧಿಕಾರಕ್ಕೆ ಬಂದಿದೆ ಎಂಬುದನ್ನು ನಾವು ಒಪ್ಪಿಕೊಳ್ಳಲೇಬೇಕು. ಆದರೆ, ಅಭಿವೃದ್ಧಿ ಕೆಲಸಗಳ ಬಗ್ಗೆ ಯಾರೂ ಚಕಾರ ಎತ್ತುತ್ತಿಲ್ಲ. ಅಭಿವೃದ್ಧಿ ಕೆಲಸ ಮಾಡಿಕೊಡಿ ಅಂತ ಸಿಎಂ ಪತ್ರ ತೆಗೆದುಕೊಂಡು ಹೋದರೆ ಏ ಏನ್ರೀ ಅಭಿವೃದ್ಧಿ ಕೆಲಸ, ಗ್ಯಾರಂಟಿ ಕೊಡುತ್ತಿಲ್ಲವೇನ್ರೀ, ಅದೇ ಅಭಿವೃದ್ಧಿ ಕೆಲಸ ಎಂದು ಸಿಎಂ ಹೇಳುತ್ತಿದ್ದಾರೆ ಎಂದು ಟೀಕಿಸಿದರು.

ಲೋಕಸಭಾ ಚುನಾವಣೆಗೆ ಮೂರು ದಿನಗಳ ಮುಂಚೆ ಗೃಹ ಲಕ್ಷ್ಮೀ ಯೋಜನೆ ಹಣ ಖಾತೆಗೆ ಹೋಗಿದೆ, ಬಳಿಕ ಸ್ಥಗಿತ ಆಗಿದೆ. ಚುನಾವಣೆ ಹತ್ತಿರ ಬಂದಾಗ ಖಾತೆಗೆ ಜಮಾ‌ ಆಗುತ್ತದೆ, ಚುನಾವಣೆ ಮುಗಿದ ಬಳಿಕ ಬಂದ್ ಆಗುತ್ತದೆ, ಇದು ಕಾಂಗ್ರೆಸ್ ಗ್ಯಾರಂಟಿ. ಇನ್ನೆರಡು ತಿಂಗಳು ಹೋದರೆ ಕೆಎಸ್ಆರ್‌ಟಿಸಿಗೆ ಬೀಗ ಹಾಕುತ್ತಾರೆ ಅಷ್ಟೇ. ವಾಲ್ಮೀಕಿ ನಿಗಮ ಅಧೀಕ್ಷಕ ಚಂದ್ರಶೇಖರ ಡೆತ್ ‌ನೋಟ್ ನೋಡಿದ ಮೇಲೆ ಕೂಡ ವಾಲ್ಮೀಕಿ ನಿಗಮದಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಸಿಎಂ ಹೇಳುತ್ತಾರೆ. ಇನ್ನು ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಬಡವರಿಗೆ ತಲುಪಬೇಕಿದ್ದ ಮೂರರಿಂದ ನಾಲ್ಕು ಸಾವಿರ ಕೋಟಿ ಬೆಲೆ ಬಾಳುವ ಸೈಟುಗಳು ಉಳ್ಳವರ ಪಾಲಾಗಿವೆ ಎಂದು ಆರೋಪಿಸಿದರು.

ನಿವೇಶನ ಹಗರಣ ನಡೆದಿದೆ, ಯಾವುದೇ ಕಾರಣಕ್ಕೂ ನಿವೇಶನ ಹಂಚಿಕೆ ಆಗಬಾರದು ಅಂತ ಮುಡಾ ಅಧ್ಯಕ್ಷ ಮರಿಗೌಡ ಅವರೇ ಕಮಿಷನರ್‌ಗೆ ಪತ್ರ ಬರೆದಿದ್ದರು. ಜಿಲ್ಲಾಧಿಕಾರಿ ತನಿಖೆ ಸರಿ ಇದೆ ಎಂದು ಒಪ್ಪಿಕೊಳ್ಳುತ್ತಾರೆ. ಬಳಿಕ ಮುಡಾ ಸೈಟ್ ಹಂಚಿಕೆ ನಿಲ್ಲಿಸಬೇಕು ಅಂತ ರಾಜ್ಯ ಸರ್ಕಾರ ಆದೇಶ ಮಾಡಿದೆ. ಆದೇಶದ ಬಳಿಕವೂ ಯತೇಚ್ಛವಾಗಿ ಸೈಟ್ ಹಂಚಿಕೆ ಮಾಡುತ್ತಾರೆ. ತನಿಖಾ ವರದಿ ಕೂಡ ಇದೆ. ಇದಾದ ಮೇಲೂ ಮುಡಾ ಕಮಿಷನರ್ ಸೈಟ್ ಹಂಚಿಕೆ ಮಾಡುತ್ತಾರೆ. ಅವರ ಹಿಂದಿರೋ ಶಕ್ತಿ ಯಾವುದು ಎಂದು ಪ್ರಶ್ನಿಸಿದರು.

ವಾಲ್ಮೀಕಿ ನಿಗಮ ಹಗರಣ ಹಾಗೂ ಮುಡಾ ಹಗರಣದಿಂದ ಪರಿಶಿಷ್ಟರಿಗೆ, ಬಡವರಿಗೆ ಅನ್ಯಾಯ ಆಗಿದೆ. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಪಾಠ ಕಲಿಸಬೇಕಿದೆ. ಬಿಜೆಪಿ ಹೋರಾಟದಿಂದ ಸಚಿವ ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ. ಸದನದಲ್ಲಿ ವಾಲ್ಮೀಕಿ ಹಗರಣ ಚರ್ಚೆ ಮಾಡಿದ್ದರು. ಆದರೆ ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ಕೊಡಲಿಲ್ಲ. ಇವರ ಹಣೆಬರಹ ಬಯಲಿಗೆ ಬರಲಿದೆ ಅಂತ ಅವಕಾಶ ಕೊಡಲಿಲ್ಲ. ಕಾಂಗ್ರೆಸ್ ಬಂಡವಾಳ‌ ಹೊರ ಬರಲಿದೆ ಅಂತ ಸದನದಲ್ಲಿ ಚರ್ಚೆಗೆ ಅವಕಾಶವೇ ನೀಡಲಿಲ್ಲ ಎಂದು ಕಿಡಿಕಾರಿದರು.

ಇದನ್ನೂ ಓದಿ | KRS Dam: ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ; ಕಾವೇರಿ ಮಾತೆ ಪ್ರತಿಮೆಗೆ ವಿಶೇಷ ಪೂಜೆ

ಆಗಸ್ಟ್ 3ರಿಂದ ಮೈಸೂರು ಚಲೋ ಪಾದಯಾತ್ರೆ

ಕಾಂಗ್ರೆಸ್ ಅವರ ಗೊಡ್ಡು ಬೆದರಿಕೆಗೆ ನಮ್ಮ‌ ಕಾರ್ಯಕರ್ತರು ಹೆದರಲ್ಲ. ನಿಮ್ಮ ವಿರುದ್ಧ ಹೋರಾಟ ಮಾಡದಿದ್ದರೆ ಭಗವಂತ ಕೂಡ ಮೆಚ್ಚಲ್ಲ. ನಿಮ್ಮ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದೆ. ನಮ್ಮ ಪಕ್ಷದ ಹಾಗೂ ಜೆಡಿಎಸ್‌ ಪಕ್ಷದ ಎಲ್ಲಾ ಹಿರಿಯರು ಚರ್ಚೆ ಮಾಡಿ ನಿರ್ಣಯ ತೆಗೆದುಕೊಂಡಿದ್ದೇವೆ. ಆಗಸ್ಟ್ 3ರಿಂದ ಪಾದಯಾತ್ರೆ ಆರಂಭವಾಗಿ, ಆಗಸ್ಟ್ 10ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಬಡವರ ಪರವಾಗಿ ಈ ಹೋರಾಟ ನಡೆಯಲಿದೆ.

Continue Reading
Advertisement
Mosquito Repellents
ಆರೋಗ್ಯ1 min ago

Natural Mosquito Repellents: ಸೊಳ್ಳೆಗಳು ನಿಮ್ಮ ಹತ್ತಿರ ಸುಳಿಯದಂತೆ ಮಾಡಲು ಇಲ್ಲಿವೆ ನೈಸರ್ಗಿಕ ಉಪಾಯಗಳು!

DK Shivakumar
ಕರ್ನಾಟಕ7 mins ago

DK Shivakumar: ಕನ್ನಂಬಾಡಿ ಕಟ್ಟೆ, ನಮ್ಮೆಲ್ಲರ ಅನ್ನದ ತಟ್ಟೆ; ಮಳೆ ಬರಲ್ಲ ಎಂದವರಿಗೆ ತಕ್ಕ ಉತ್ತರ ಸಿಕ್ಕಿದೆ ಎಂದ ಡಿಕೆಶಿ

ICW 2024
ಫ್ಯಾಷನ್39 mins ago

ICW 2024: ರ‍್ಯಾಂಪ್‌ ಮೇಲೆ ಮಾಡೆಲ್‌ಗಳು ಧರಿಸಿರುವುದು ಗೌನಾ ಅಥವಾ ಪಂಜರ?!

Aditya Birla Group
ಚಿನ್ನದ ದರ40 mins ago

Aditya Birla Group: ಟಾಟಾ, ಅಂಬಾನಿಯೊಂದಿಗೆ ಸ್ಪರ್ಧೆ: ಆಭರಣ ವ್ಯಾಪಾರಕ್ಕೆ ಬಿರ್ಲಾ ಎಂಟ್ರಿ!

ಪ್ರಮುಖ ಸುದ್ದಿ44 mins ago

Rohit Sharma : ಏಕ ದಿನ ಸರಣಿಗಾಗಿ ಶ್ರೀಲಂಕಾ ತಲುಪಿದ ರೋಹಿತ್, ವಿರಾಟ್​ ಕೊಹ್ಲಿ

karnataka Rain
ಮಳೆ52 mins ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

New Toll System
ತಂತ್ರಜ್ಞಾನ1 hour ago

New Toll System: ಫಾಸ್ಟ್‌ ಟ್ಯಾಗ್‌ಗೂ ಉಪಗ್ರಹ ಆಧರಿತ ಟೋಲ್‌ ಸಂಗ್ರಹಕ್ಕೂ ಏನು ವ್ಯತ್ಯಾಸ? ಏನು ಪ್ರಯೋಜನ?

Manu Bhaker
ಪ್ರಮುಖ ಸುದ್ದಿ1 hour ago

Paris Olympics 2024 : ಮನು ಭಾಕರ್ ಸೇರಿದಂತೆ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದವರ ಎಕ್ಸ್​ ಖಾತೆಯಲ್ಲಿ ಐಫೆಲ್​ ಟವರ್ ಚಿತ್ರ

Viral Video
Latest1 hour ago

Viral Video: ಕಚೇರಿಯ ಟೇಬಲ್‌ನೊಳಗೆ ಅಡಗಿದ್ದ ಬೃಹತ್‌ ಹಾವನ್ನು ಹಿಡಿದ ಮಹಿಳಾ ಸಿಬ್ಬಂದಿ! ವಿಡಿಯೊ ನೋಡಿ

Kabini Dam
ಕರ್ನಾಟಕ1 hour ago

Kabini Dam: ಕಬಿನಿ ಡ್ಯಾಂಗೆ ಬಾಗಿನ ಅರ್ಪಿಸಿದ ಸಿಎಂ; ರಾಜ್ಯದ ಜಲಾಶಯಗಳು ತುಂಬಿದ್ದಕ್ಕೆ ಸಂತಸ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ52 mins ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ1 day ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ1 day ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ1 day ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ1 day ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಟ್ರೆಂಡಿಂಗ್‌