Rama Mandir : ರಾಮ ಭಕ್ತರು ಯಾವತ್ತೋ ಕಾಂಗ್ರೆಸನ್ನು ತಿರಸ್ಕರಿಸಿ ಆಗಿದೆ; ಜೋಶಿ ಲೇವಡಿ - Vistara News

ಕರ್ನಾಟಕ

Rama Mandir : ರಾಮ ಭಕ್ತರು ಯಾವತ್ತೋ ಕಾಂಗ್ರೆಸನ್ನು ತಿರಸ್ಕರಿಸಿ ಆಗಿದೆ; ಜೋಶಿ ಲೇವಡಿ

Rama Mandir : ಕಾಂಗ್ರೆಸ್‌ ರಾಮ ಮಂದಿರ ಉಧ್ಘಾಟನೆಯನ್ನು ಬಹಿಷ್ಕರಿಸುವುದಕ್ಕೆ ಸಂಬಂಧಿಸಿ‌ ಸಿಎಂ ಸಿದ್ದರಾಮಯ್ಯ ಅವರು ನೀಡಿದ ಕಾರಣಗಳಿಗೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿರುಗೇಟು ನೀಡಿದ್ದಾರೆ.

VISTARANEWS.COM


on

pralhad Joshi Siddaramaiah Rama Mandir
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ಕಾಂಗ್ರೆಸ್‌ನವರು ರಾಮ ಮಂದಿರ (Rama Mandir) ಉದ್ಘಾಟನೆ ಆಮಂತ್ರಣ (Rama Mandir Invitation) ತಿರಸ್ಕರಿಸುವ ಮೊದಲೇ ದೇಶದ ಜನ ಮತ್ತು ರಾಮ ಭಕ್ತರು (Rama Bhaktas) ಕಾಂಗ್ರೆಸ್ ಅನ್ನು ತಿರಸ್ಕರಿಸಿ (boycott Congress) ಆಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿರುಗೇಟು ನೀಡಿದ್ದಾರೆ.

ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮವನ್ನು ಕಾಂಗ್ರೆಸ್‌ ಯಾಕೆ ಬಹಿಷ್ಕರಿಸುತ್ತಿದೆ ಎಂಬ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆಗೆ ಪ್ರತಿಯಾಗಿ ಟ್ವೀಟ್ ಮಾಡಿರುವ ಸಚಿವ ಜೋಶಿ ಅವರು,
ಅಯೋಧ್ಯೆಯಲ್ಲಿ ರಾಜಕೀಯ ಮಾಡಲು, ಅಲ್ಲಿ ನಡೆಯುತ್ತಿರುವುದು 140 ಕೋಟಿ ಭಾರತೀಯರ ಅಸ್ಮಿತೆ. ಪ್ರಭು ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಹೊರತು ವಿದೇಶಿ ವ್ಯಕ್ತಿಯೊಬ್ಬ ಸ್ಥಾಪಿಸಿದ ಕಾಂಗ್ರೆಸ್ ಪಕ್ಷದ ಚುನಾವಣಾ ರ‍್ಯಾಲಿ ಅಲ್ಲ ಎಂದು ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಶ್ರೀರಾಮನ ಮೇಲೆ ನಂಬಿಕೆ, ಭಕ್ತಿ, ಶ್ರದ್ಧೆ ಇದ್ದವರು ಖಂಡಿತವಾಗಿಯೂ ಯಾವುದೇ ರಾಜಕೀಯ ಮಾಡದೆ ಮಂದಿರಕ್ಕೆ ಭೇಟಿ ನೀಡುತ್ತಾರೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ನೀವು ನಿಮ್ಮ ಆಡಳಿತ ವೈಫಲ್ಯವನ್ನು ಮರೆಮಾಚಲು ಇಂತಹ ವಿಚಾರ ಮುನ್ನಲೆಗೆ ತರುವ ಪ್ರಯತ್ನ ಮಾಡುತ್ತಿದ್ದೀರಿ. ಇಂಥ ರಾಜಕೀಯವನ್ನು ತಾವು ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆ.

ರಾಜ್ಯ ಮಾತ್ರವಲ್ಲ ಇಡೀ ದೇಶದ ಜನತೆಗೆ ಅರ್ಥವಾಗಿದೆ ಕರ್ನಾಟಕದಲ್ಲಿ ನಿಮ್ಮ “ಸುಳ್ಳಿನ ಸರಕಾರ ಎತ್ತ ಸಾಗುತ್ತಿದೆ” ಎಂದು. ರಾಮ ಈ ದೇಶದ ಸಂಸ್ಕೃತಿ. ರಾಮನಿಗಾಗಿ ಅಳಿಲು ಸೇವೆಯೂ ಕಾಂಗ್ರೆಸ್ ನವರಿಂದ ಆಗಿಲ್ಲ.‌ ಹೀಗಿರುವಾಗ ರಾಮ ಮಂದಿರ ಉದ್ಘಾಟನೆಗೆ ಕಾಂಗ್ರೆಸ್ ನವರು ಯಾವ ಮುಖ ಇಟ್ಕೊಂಡು ಬರುತ್ತಾರೆ? ಅದಕ್ಕಾಗಿ ಈ ರೀತಿ ಆಮಂತ್ರಣ ತಿರಸ್ಕಾರ ಪ್ರಹಸನ ಮಾಡುತ್ತಿದ್ದಾರೆ ಎಂದು ಜೋಶಿ ಹೇಳಿದ್ದಾರೆ.

ಇವರಿಗಿಂತ ಮೊದಲು ರಾಮ ಭಕ್ತರು ಇವರನ್ನ ತಿರಸ್ಕರಿಸಿ ಆಗಿದೆ.

ಧಾರ್ಮಿಕವಾಗಿ ಅಲ್ಲದಿದ್ದರೂ, ರಾಮನನ್ನು ನಮ್ಮ ಸಾಂಸ್ಕೃತಿಕ ದೃಷ್ಠಿಯಿಂದ ನೋಡುವ ಮುಸ್ಲಿಂ, ಕ್ರಿಶ್ಚಿಯನ್ ಅನ್ಯ ಧರ್ಮದವರು ಕಾಂಗ್ರೆಸ್ ಅನ್ನು ತಿರಸ್ಕರಿಸುವ ಕಾಲ ಸನ್ನಿಹಿತದಲ್ಲಿದೆ ಎಂದು ಸಚಿವ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : Ram Mandir: ರಾಮ ಮಂದಿರ ಉದ್ಘಾಟನೆ ದಿನ ದೇವಸ್ಥಾನಗಳಲ್ಲಿ ಪೂಜೆ ಮಾಡಲು ನಾನು ಹೇಳಿಲ್ಲ: ಸಿದ್ದರಾಮಯ್ಯ

ಹಿಂದುಗಳನ್ನು ಒಡೆಯುವ ಸಿದ್ದರಾಮಯ್ಯ: ಸಿ.ಟಿ. ರವಿ ತಿಗುಗೇಟು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಹಿರಿಯ ಬಿಜೆಪಿ ನಾಯ ಸಿ.ಟಿ ರವಿ ಕೂಡಾ ಕೌಂಟರ್ ನೀಡಿದ್ದಾರೆ.

ʻʻರಾಮ ಹಿಂದೂಗಳನ್ನು ಜೋಡಿಸ್ತಾನೆ. ಹಿಂದೂಗಳನ್ನು ಒಡೆಯುವವರು ಸಿದ್ದರಾಮಯ್ಯ ಥರ ಹೇಳಿಕೆ‌ ಕೊಡ್ತಾರೆ. ಅವರು ಒಡೆಯುವುದರಲ್ಲಿ ಎಕ್ಸ್‌ಪರ್ಟ್‌. ವೀರಶೈವ ಲಿಂಗಾಯತ ಸಮಾಜ ಒಡೆಯಲು‌ ಹೋಗಿದ್ದ ಸಿದ್ದರಾಮಯ್ಯ ಅವರು ಸಮಾಜ‌ ಒಡೆಯುವುದರಲ್ಲಿ ಪ್ರೊಡ್ಯೂಸರ್ʼʼ ಎಂದು ಸಿ.ಟಿ. ರವಿ ಹೇಳಿದ್ದಾರೆ.

ʻʻಅವರ ಅಜೆಂಡಾ ಸ್ಪಷ್ಟ. ಅಲ್ಪಸಂಖ್ಯಾತರ ಓಲೈಕೆಗಾಗಿ ಅವ್ರು ರಾಮಮಂದಿರ‌ ಪ್ರಾಣ ಪ್ರತಿಷ್ಠಾಪನೆಗೆ ಬರ್ತಿಲ್ಲ. ಅವರು ಬಹಿಷ್ಕರಿಸಿದ ಉದ್ದೇಶವೇ‌ ಇಡಿಗಂಟು ಮುಸ್ಲಿಂ‌ ಮತಬ್ಯಾಂಕ್ ಉಳಿಸಿಕೊಳ್ಳುವ ಸಲುವಾಗಿ. ಹಿಂದೂಗಳನ್ನು ಜಾತಿವಾರುವ ಒಡೆಯುವ ನೀತಿ ಅವರದ್ದು. ಸಿದ್ದರಾಮಯ್ಯ ಜಾತಿವಾರು ಸಮಾಜ ಒಡೆಯಲು ಹೊರಟಿದ್ದಾರೆʼʼ ಎಂದು ಹೇಳಿದ್ದಾರೆ ಸಿ.ಟಿ. ರವಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆಹಾರ/ಅಡುಗೆ

Famous Food of Bangalore: ಬೆಂಗಳೂರಿಗೆ ಬಂದಾಗ ಈ ಖಾದ್ಯಗಳ ರುಚಿ ನೋಡಲು ಮರೆಯಬೇಡಿ!

Famous Food of bangalore: ಬೆಂಗಳೂರಿಗೆ ಹೋಗುವ ಪ್ಲ್ಯಾನ್ ಇದ್ದರೆ ಇಲ್ಲಿನ ಕೆಲವು ರುಚಿಕರವಾದ ಖಾದ್ಯವನ್ನು ಸವಿಯಲು ಮರೆಯದಿರಿ. ಹಾಗೆಯೇ ಈ ಖಾದ್ಯಗಳನ್ನು ಮನೆಯಲ್ಲೂ ತಯಾರಿಸಬಹುದು. ಆಹಾರ ಪ್ರಿಯರಿಗೆ ಇಲ್ಲಿದೆ ಉಪಯುಕ್ತ ಮಾಹಿತಿ.

VISTARANEWS.COM


on

By

Famous Food of bangalore
Koo

ಇಡ್ಲಿ (Idli), ದೋಸೆ (dose), ವಿವಿಧ ಬಗೆಯ (Famous Food of Bangalore) ರೈಸ್, ಮೈಸೂರು ಪಾಕ್ (mysore pak) ಸೇರಿದಂತೆ ವಿವಿಧ ಸಿಹಿ ತಿನಿಸುಗಳು ಎಂಥವರ ಬಾಯಲ್ಲೂ ನೀರೂರುವಂತೆ ಮಾಡುತ್ತದೆ. ದಕ್ಷಿಣ ಭಾರತೀಯ (south india) ಪಾಕಪದ್ಧತಿಯು ಸುವಾಸನೆ ಮತ್ತು ವಿವಿಧ ರೆಸಿಪಿಗಳ ರುಚಿಕರ ಸವಿಯಿಂದ ತುಂಬಿರುತ್ತದೆ. ಕರಿಬೇವಿನ ಎಲೆಗಳು, ಹುಣಸೆಹಣ್ಣು, ಹಸಿರು ಮತ್ತು ಕೆಂಪು ಮೆಣಸಿನಕಾಯಿ, ತೆಂಗಿನ ಹಾಲು, ಕರಿಮೆಣಸು ಹೀಗೆ ಬಗೆಬಗೆಯ ಮಸಾಲೆಗಳು ಮತ್ತು ಗಿಡಮೂಲಿಕೆಗಳೊಂದಿಗೆ ಭಕ್ಷ್ಯಗಳನ್ನು ಸಿದ್ಧಪಡಿಸಲಾಗುತ್ತದೆ.

ಬೆಂಗಳೂರಿಗೆ (bengaluru) ಪ್ರಯಾಣ ಮಾಡುವ ಯೋಜನೆ ಇದ್ದರೆ ಇಲ್ಲಿನ ಕೆಲವೊಂದು ಖಾದ್ಯಗಳ (Best dish) ಸವಿಯನ್ನು ನೀವು ಪಡೆಯದೇ ಇದ್ದರೆ ಖಂಡಿತ ನಿಮ್ಮ ಪ್ರಯಾಣ ಪೂರ್ತಿ ಅಲ್ಲ. ಅಂತಹ ಖಾದ್ಯಗಳು ಯಾವುದು ಗೊತ್ತೇ? ಇಲ್ಲಿದೆ ಮಾಹಿತಿ.


ಮಂಗಳೂರು ಬಜ್ಜಿ

ಕರ್ನಾಟಕದ ಪ್ರಸಿದ್ಧ ಖಾದ್ಯಗಳು ಬೀದಿಯ ಮೂಲೆ ಮೂಲೆಯಲ್ಲಿ ಕಂಡುಬರುತ್ತದೆ. ಮಂಗಳೂರು ಬಜ್ಜಿಯನ್ನು ಅಧಿಕೃತ ಮಸಾಲೆಗಳು ಮತ್ತು ಗಿಡಮೂಲಿಕೆಗಳಿಂದ ತಯಾರಿಸಲಾಗುತ್ತದೆ. ಈ ಜನಪ್ರಿಯ ಆಹಾರವನ್ನು ನೀವು ಮನೆಯಲ್ಲಿ ಸುಲಭವಾಗಿ ತಯಾರಿಸಬಹುದು. ಬೆಂಗಳೂರಿನ ಮಂಗಳೂರು ಮೂಲದ ಹೋಟೆಲ್‌ಗಳಲ್ಲಿ ಈ ಬಜ್ಜಿ ಚೆನ್ನಾಗಿರುತ್ತದೆ.

ಹುಳಿ ಮೊಸರಿಗೆ ಅಕ್ಕಿ ಹಿಟ್ಟು ಮತ್ತು ಮೈದಾವನ್ನು ಬೆರೆಸುವ ಮೂಲಕ ಕರಿಬೇವು, ತೆಂಗಿನಕಾಯಿ, ಕೊತ್ತಂಬರಿ ಸೊಪ್ಪು ಮತ್ತು ಹಸಿರು ಮೆಣಸಿನಕಾಯಿಯನ್ನು ಸೇರಿಸಿ. ಹಿಟ್ಟನ್ನು ಚೆನ್ನಾಗಿ ಮಿಶ್ರಣ ಮಾಡಿ, ಸಕ್ಕರೆ, ನೀರು ಮತ್ತು ಬೇಕಿಂಗ್ ಪೌಡರ್ ಹಾಕಿ. 2 ಗಂಟೆಗಳ ಕಾಲ ಹಿಟ್ಟನ್ನು ಸಿದ್ಧಪಡಿಸಿ ಇಟ್ಟು ಬಳಿಕ ಗೋಲಿ ಬಜೆಯನ್ನು ಎಣ್ಣೆಯಲ್ಲಿ ಗರಿಗರಿಯಾಗಿ ಕೆಂಪು ಬಣ್ಣ ಬರುವವರೆಗೆ ಕರಿಯಿರಿ. ಸುವಾಸನೆಯ ರುಚಿಗಾಗಿ ತೆಂಗಿನಕಾಯಿ ಚಟ್ನಿಯೊಂದಿಗೆ ಬಡಿಸಿ.


ಬಿಸಿ ಬೇಳೆ ಬಾತ್

ಈ ಜನಪ್ರಿಯ ದಕ್ಷಿಣ-ಭಾರತೀಯ ಖಾದ್ಯವು ಇತರ ಭಕ್ಷ್ಯಗಳಂತೆ ಅಲ್ಲ. ಹಲವಾರು ದಕ್ಷಿಣ-ಭಾರತೀಯ ರೆಸ್ಟೋರೆಂಟ್ ಗಳಲ್ಲಿ ಮತ್ತು ರಾಜ್ಯದ ಹೊರಗೂ ಲಭ್ಯವಿದೆ. ಈ ಅಧಿಕೃತ ರೆಸಿಪಿ ನಿಜವಾಗಿಯೂ ಕರ್ನಾಟಕದ ವಿಶೇಷತೆಯಾಗಿದೆ. ಕರ್ನಾಟಕ ಶೈಲಿಯ ಬಿಸಿ ಬೇಳೆ ಬಾತ್ ಅನ್ನು ನೀವು ಮನೆಯಲ್ಲಿಯೂ ಪ್ರಯತ್ನಿಸಬಹುದು. ಬೆಂಗಳೂರಿನ ಬಹುತೇಕ ಹೋಟೆಲ್‌ಗಳಲ್ಲಿ ಇದು ಮುಖ್ಯ ಆಹಾರ.

ಅಕ್ಕಿ ಮತ್ತು ಕಡಲೆಕಾಯಿಯನ್ನು 25 ನಿಮಿಷಗಳ ಕಾಲ ನೆನೆಸಿ ಅನಂತರ ಉಪ್ಪು ಸೇರಿಸಿ. ಅಕ್ಕಿ ಮತ್ತು ಕಡಲೆಕಾಯಿಯನ್ನು ಬೇಯಿಸಿ ಮತ್ತು ಅವುಗಳನ್ನು ಪಕ್ಕಕ್ಕೆ ಇರಿಸಿ. ಮುಂದೆ, ಹುಣಸೆಹಣ್ಣನ್ನು ನೆನೆಸಿ ಮತ್ತು ಅದರ ತಿರುಳನ್ನು ಹೊರತೆಗೆಯಿರಿ. ಪ್ರೆಶರ್ ಕುಕ್ ನಲ್ಲಿ ತೊಗರಿ ಬೆಳೆ, ಅರಿಶಿನ ಪುಡಿ ಮತ್ತು ನೀರು, ಎಲ್ಲಾ ಕತ್ತರಿಸಿದ ತರಕಾರಿಗಳು ಮತ್ತು ಉಪ್ಪನ್ನು ಬೆರೆಸಿ. ಈಗ, ಕುಕ್ಕರ್‌ನಲ್ಲಿ ನೆನೆಸಿದ ಅಕ್ಕಿ, ಕಡಲೆಕಾಳು, ಹಿಸುಕಿದ ದಾಲ್ ಮತ್ತು ಹುಣಸೆ ತಿರುಳನ್ನು ಸೇರಿಸಿ ಮತ್ತು ಮಸಾಲೆಯನ್ನು ತಯಾರಿಸಿ. ಬಿಸಿಬೇಳೆ ಬಾತ್ ಮಸಾಲ ಮತ್ತು ನೀರನ್ನು ಬಾಣಲೆಯಲ್ಲಿ ಹಾಕಿ ಬೇಯಿಸಿ ಕುಕ್ಕರ್‌ಗೆ ಸೇರಿಸಿ. ಅದಕ್ಕೆ ತಕ್ಕಂತೆ ಒಣಗಿದ ತೆಂಗಿನಕಾಯಿ ಮತ್ತು ಉಪ್ಪನ್ನು ಸೇರಿಸಿ ಮತ್ತು ಎಲ್ಲವನ್ನೂ ಮಿಶ್ರಣ ಮಾಡಲು ಮರೆಯಬೇಡಿ. ರುಚಿಕರವಾದ ತಡ್ಕಾಕ್ಕೆ ಕರಿಬೇವು, ಮರಾಠಿ ಮೊಗ್ಗು, ಇಂಗು, ಒಣಗಿದ ಕೆಂಪು ಮೆಣಸಿನಕಾಯಿ ಮತ್ತು ಗೋಡಂಬಿ ಸೇರಿಸಿ. ಬಿಸಿಯಾಗಿ ಬಡಿಸಿ ಮತ್ತು ಹುರಿದ ಪಾಪಡ್‌ನೊಂದಿಗೆ ಸವಿಯಿರಿ.


ರಾಗಿ ಮುದ್ದೆ

ಇದು ಕರ್ನಾಟಕದ ‘ಪ್ರೋಟೀನ್ ಬೈಟ್ಸ್’ . ಇದು ಪ್ರಮುಖ ಆಹಾರವಾಗಿದೆ. ತಮಿಳುನಾಡಿನಲ್ಲಿಯೂ ಹೆಚ್ಚಾಗಿ ಕಂಡುಬರುತ್ತದೆ. ಈ ʼಪೌಷ್ಟಿಕ ಚೆಂಡುʼಗಳು ರೈತರನ್ನು ಹಗಲಿನಲ್ಲಿ ಚುರುಕಾಗಿ ಇರಿಸಲು ಸಹಾಯ ಮಾಡುತ್ತದೆ. ನೀವು ಈ ಗರಿಗರಿಯಾದ ಮುದ್ದೆಗಳನ್ನು ನಿಮ್ಮ ಊಟದಲ್ಲಿ ಸೇರಿಸಿಕೊಳ್ಳಬಹುದು. ಒಟ್ಟು 20 ನಿಮಿಷಗಳಲ್ಲಿ ತಯಾರಿಸಬಹುದು. ಬೆಂಗಳೂರಿನ ಮಿಲಿಟರಿ ಹೋಟೆಲ್‌ಗಳಲ್ಲಿ ರಾಗಿ ಮುದ್ದೆ ರುಚಿಕರವಾಗಿ ತಯಾರಿಸುತ್ತಾರೆ.

ಒಂದು ಬಟ್ಟಲಿನಲ್ಲಿ ರಾಗಿ ಹಿಟ್ಟು ಮತ್ತು ನೀರನ್ನು ಬೆರೆಸುವ ಮೂಲಕ ಪ್ರಾರಂಭಿಸಿ. ಮಿಶ್ರಣದಲ್ಲಿ ಯಾವುದೇ ಉಂಡೆಗಳಿಲ್ಲ ಎಂದು ಖಚಿತಪಡಿಸಿಕೊಳ್ಳಿ. ಬಾಣಲೆಯಲ್ಲಿ ನೀರು, ತುಪ್ಪ ಮತ್ತು ಉಪ್ಪು ಸೇರಿಸಿ, ನೀರನ್ನು ಕುದಿಸಿ ಮತ್ತು ರಾಗಿ ಹಿಟ್ಟಿನ ಮಿಶ್ರಣವನ್ನು ಕುದಿಯುವ ನೀರಿಗೆ ಸುರಿಯಿರಿ. ದಪ್ಪವಾಗುವವರೆಗೆ ಬೇಯಿಸಿ. ಹಿಟ್ಟು ಸೇರಿಸಿ. ಅದರಲ್ಲಿ ಯಾವುದೇ ಹಿಟ್ಟಿನ ಉಂಡೆಗಳಿಲ್ಲ ಎಂದು ಖಚಿತಪಡಿಸಿಕೊಳ್ಳಿ. ಇನ್ನೊಂದು 5 ನಿಮಿಷ ಬೇಯಿಸಿ. ಮಿಶ್ರಣವನ್ನು ಪ್ಲೇಟ್ ಗೆ ವರ್ಗಾಯಿಸಿ, ಬೆರಳುಗಳಲ್ಲಿ ರಾಗಿ ಹಿಟ್ಟಿನ ಚೆಂಡುಗಳನ್ನು ಮಾಡಿ. ಯಾವುದಾದರೂ ಸಾಂಬಾರಿನೊಂದಿಗೆ ಬಡಿಸಿ.


ನೀರ್ ದೋಸೆ

ಕರ್ನಾಟದ ಪ್ರಸಿದ್ಧ ನೀರ್ ದೋಸೆ ದೋಸೆಗಳಲ್ಲೇ ವಿಶಿಷ್ಟವಾಗಿದೆ. ತೆಳುವಾದ ಈ ದೋಸೆ ಕರ್ನಾಟಕದಾದ್ಯಂತ ಜನಪ್ರಿಯ ಉಪಾಹಾರವಾಗಿದೆ. ಮುಖ್ಯವಾಗಿ ಬೆಂಗಳೂರಿನ ಕರಾವಳಿ ರೆಸ್ಟೋರೆಂಟ್‌ಗಳಲ್ಲಿ ನೀರ್‌ ದೋಸೆ ಪ್ರಮುಖ ಆಕರ್ಷಣೆಯಾಗಿದೆ. ಹಿಟ್ಟಿಗೆ ಹುದುಗುವಿಕೆಯ ಅಗತ್ಯವಿಲ್ಲ. ಮನೆಯಲ್ಲೆ ಇದನ್ನು ಸುಲಭವಾಗಿ ಮಾಡಬಹುದು.

ಅಕ್ಕಿಯನ್ನು ರಾತ್ರಿಯಿಡೀ ನೆನೆಸಿ ಅನಂತರ ನಯವಾದ ಪೇಸ್ಟ್ ಆಗಿ ರುಬ್ಬಿ. ಹಿಟ್ಟಿಗೆ ನೀರಿನ ಉಪ್ಪು ಸೇರಿಸಿ ಮತ್ತು ಬಾಣಲೆಯಲ್ಲಿ ಕೆಲವು ಹನಿ ಎಣ್ಣೆಯನ್ನು ಹಾಕಿ,. ತೆಳುವಾಗಿ ಸುರಿಯಿರಿ. ಅದನ್ನು 2 ನಿಮಿಷಗಳ ಕಾಲ ಮುಚ್ಚಳದಿಂದ ಮುಚ್ಚಿ ಮತ್ತು ದೋಸೆಯ ಬದಿಗಳು ಸುಲಭವಾಗಿ ಹೊರಬರುವವರೆಗೆ ಕಾಯಿಸಿ. ತ್ರಿಕೋನದಲ್ಲಿ ಮಡಚಿ, ಚಟ್ನಿ ಅಥವಾ ಸಾಂಬಾರಿನೊಂದಿಗೆ ಸವಿಯಲು ರುಚಿಯಾಗಿರುತ್ತದೆ.


ತಟ್ಟೆ ಇಡ್ಲಿ

ಈ ಪ್ರಸಿದ್ಧ ಖಾದ್ಯವು ಸಾಮಾನ್ಯ ಇಡ್ಲಿಗಳಿಗಿಂತ ದೊಡ್ಡದಾಗಿದೆ ಮತ್ತು ದಪ್ಪವಾಗಿರುತ್ತದೆ. ಬೆಂಗಳೂರು ಮತ್ತು ಮೈಸೂರು ರಾಜ್ಯ ಹೆದ್ದಾರಿಗಳ ಬಳಿ ಜನಪ್ರಿಯವಾಗಿ ಕಂಡುಬರುವ ಈ ಖಾದ್ಯವನ್ನು ನೀವು ತಟ್ಟೆ ಇಡ್ಲಿ ರೆಸ್ಟೋರೆಂಟ್‌ಗಳಲ್ಲಿ ಸವಿಯಬಹುದು. ದಕ್ಷಿಣ ಕರ್ನಾಟಕದ ಪ್ರಮುಖ ತಿಂಡಿ ಇದು.

ಇಡ್ಲಿ ಅಕ್ಕಿ ಮತ್ತು ಉದ್ದಿನ ಬೇಳೆಯನ್ನು ನೆನೆಸಿಟ್ಟು ಖಾದ್ಯವನ್ನು ತಯಾರಿಸಿ. ನಯವಾದ ಹಿಟ್ಟನ್ನು ಪಡೆಯುವವರೆಗೆ ರಾತ್ರಿ ರುಬ್ಬಿಕೊಂಡು ಇಡಿ. ಬ್ಯಾಟರ್ ಅನ್ನು ಸ್ಟೀಮರ್ ನಲ್ಲಿ ಸುರಿಯಿರಿ ಮತ್ತು 15-20 ನಿಮಿಷಗಳ ಕಾಲ ಉಗಿ ಮಾಡಿ. ನಿಮ್ಮ ಇಡ್ಲಿಯನ್ನು ಸಾಂಬಾರ್, ತೆಂಗಿನಕಾಯಿ ಚಟ್ನಿ ಅಥವಾ ಒಂದು ಕಪ್ ಕಾಫಿಯೊಂದಿಗೆ ಸವಿಯಲು ರುಚಿಯಾಗಿರುತ್ತದೆ.


ದೊನ್ನೆ ಬಿರಿಯಾನಿ

ಈ ಜನಪ್ರಿಯ ಖಾದ್ಯವನ್ನು ಬೆಂಗಳೂರು ನಗರದಲ್ಲಿ ವ್ಯಾಪಕವಾಗಿ ಸವಿಯಲಾಗುತ್ತದೆ. ಚಿಕನ್ ತುಂಡುಗಳನ್ನು ಸ್ವಚ್ಛಗೊಳಿಸಿ ದೊಡ್ಡ ಬಟ್ಟಲಿನಲ್ಲಿ ಅರಿಶಿನ, ಉಪ್ಪು, ನಿಂಬೆ ರಸ ಮತ್ತು ಮೊಸರು ಸೇರಿಸಿ 30 ನಿಮಿಷಗಳ ಕಾಲ ಮುಚ್ಚಿಡಿ. ಮಿಕ್ಸಿಂಗ್ ಜಾರ್‌ನಲ್ಲಿ ಕೊತ್ತಂಬರಿ ಸೊಪ್ಪು, ಹಸಿಮೆಣಸಿನಕಾಯಿ ಮತ್ತು ಪುದೀನಾ ಸೊಪ್ಪು ಹಾಕಿ ಚೆನ್ನಾಗಿ ಪೇಸ್ಟ್ ಮಾಡಿಕೊಳ್ಳಿ. ಬಾಣಲೆಯಲ್ಲಿ, ಎಣ್ಣೆಯನ್ನು ಬಿಸಿ ಮಾಡಿ, ಸಂಪೂರ್ಣ ಮಸಾಲೆಗಳು, ದಾಲ್ಚಿನ್ನಿ ಕಡ್ಡಿ, ಏಲಕ್ಕಿ ಹಾಕಿ ಕುದಿಯಲು ಬಿಡಿ. ಅನಂತರ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಸೇರಿಸಿ ರೈಸ್ ಎಲ್ಲವನ್ನೂ ಚೆನ್ನಾಗಿ ಮಿಶ್ರಣ ಮಾಡಿ ಮತ್ತು ಮುಚ್ಚಳದಿಂದ ಮುಚ್ಚಿ. ಬಾಣಲೆಯಲ್ಲಿ ನೀರನ್ನು ಕುದಿಸಿ ಮತ್ತು ಕಡಾಯಿಯ ಮುಚ್ಚಳದ ಮೇಲೆ ಇರಿಸಿ, ಮೇಲಿನಿಂದ ಶಾಖವನ್ನು ಒದಗಿಸಲು ಪ್ರಕ್ರಿಯೆಯನ್ನು ಮಾಡಲಾಗುತ್ತದೆ. ನಿಮ್ಮ ದೊನ್ನೆ ಬಿರಿಯಾನಿ ಸಿದ್ಧವಾಗಿದೆ. ಹುರಿದ ಪಾಪಡ್ ಅಥವಾ ಧನಿಯಾ ರೈತಾದೊಂದಿಗೆ ಬಡಿಸಿ ಮತ್ತು ಆನಂದಿಸಿ.


ಮೈಸೂರು ಪಾಕ್

ದಕ್ಷಿಣ ಭಾರತೀಯ ಈ ಸಿಹಿತಿಂಡಿಯು ಅತ್ಯಂತ ಜನಪ್ರಿಯವಾಗಿದೆ. ಇದು ರುಚಿಕರವಾಗಿರುತ್ತದೆ. ಬೆಂಗಳೂರಿನ ಪ್ರಮುಖ ಬೇಕರಿಗಳಲ್ಲಿ ಉತ್ತಮ ದರ್ಜೆಯ ಮೈಸೂರ್‌ ಪಾಕ್‌ ಸಿಗುತ್ತದೆ. ನೀವು ಇದನ್ನು ಒಟ್ಟು 40 ನಿಮಿಷಗಳಲ್ಲಿ ಮಾಡಬಹುದು.

ಇದನ್ನೂ ಓದಿ: Dietary Guidelines: ಕಡಿಮೆ ದೈಹಿಕ ಚಟುವಟಿಕೆ ಇರುವವರಿಗೆ ಯಾವ ರೀತಿಯ ಆಹಾರ ಸೂಕ್ತ?

ದೊಡ್ಡ ಬಟ್ಟಲಿಗೆ ಬೆಸನ್ ಸೇರಿಸುವ ಮೂಲಕ ಪ್ರಾರಂಭಿಸಿ. ಕಡಾಯಿಯಲ್ಲಿ ಎಣ್ಣೆ ಮತ್ತು ತುಪ್ಪವನ್ನು ಸುರಿಯಿರಿ, ಹಿಟ್ಟನ್ನು 3 ಭಾಗಗಳಾಗಿ ವಿಂಗಡಿಸಲು ಮರೆಯಬೇಡಿ. ನೀರಿಗೆ ಸಕ್ಕರೆಯನ್ನು ಸೇರಿಸುವ ಮೂಲಕ ಸಕ್ಕರೆ ಪಾಕವನ್ನು ತಯಾರಿಸಿ. ಸಕ್ಕರೆ ಪಾಕಕ್ಕೆ ಹಿಟ್ಟಿನ ಸ್ವಲ್ಪ ಭಾಗವನ್ನು ಸೇರಿಸಿ ಮತ್ತು ಚೆನ್ನಾಗಿ ಬೆರೆಸಿ. ಹಿಟ್ಟಿನ ಇನ್ನೊಂದು ಭಾಗವನ್ನು ಸೇರಿಸಿ ಮತ್ತು ಪ್ರಕ್ರಿಯೆಯನ್ನು ಪುನರಾವರ್ತಿಸಿ. ಯಾವುದೇ ಉಂಡೆಗಳಿಲ್ಲ ಎಂದು ಖಚಿತಪಡಿಸಿಕೊಳ್ಳಿ ಮತ್ತು ಬಿಸಿ ಮಾಡಿದ ಎಣ್ಣೆ ಮತ್ತು ತುಪ್ಪವನ್ನು ಬಾಣಲೆಗೆ ಸೇರಿಸಿ. ಮಿಶ್ರಣವು ತುಪ್ಪವನ್ನು ಹೀರಿಕೊಂಡ ಬಳಿಕ ಮಿಶ್ರಣವು ದಪ್ಪವಾಗಲು ಪ್ರಾರಂಭಿಸುತ್ತದೆ. ಈ ಮೈಸೂರು ಪಾಕ್ ನ ಮಿಶ್ರಣವನ್ನು ತುಪ್ಪ ಸವರಿದ ಬಾಣಲೆಗೆ ವರ್ಗಾಯಿಸಿ ಐದು ನಿಮಿಷಗಳ ಬಳಿಕ ತುಂಡುಗಳಾಗಿ ಕತ್ತರಿಸಿ ಸವಿಯಿರಿ.

Continue Reading

ಶಿವಮೊಗ್ಗ

Road Accident : ಬಸ್ ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆ; ಚಕ್ರಕ್ಕೆ ಸಿಲುಕಿ ಸಾವು

Road Accident : ಸಿಗಂದೂರು ಚೌಡೇಶ್ವರಿ ದರ್ಶನ ಪಡೆದು ಬಸ್‌ ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.

VISTARANEWS.COM


on

By

Road Accident
Koo

ಶಿವಮೊಗ್ಗ: ಬಸ್ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ (Road Accident) ಮೃತಪಟ್ಟಿದ್ದಾರೆ. ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ಕಲಘಟಗಿ ಮೂಲದ ಮಹಿಳೆ (37) ಎನ್ನಲಾಗಿದೆ.

ಸಿಗಂದೂರು ಚೌಡೇಶ್ವರಿ ದರ್ಶನ ಪಡೆದು ಬರುವಾಗ ಆತುರದಲ್ಲಿ ಕೆಎಸ್ಆರ್‌ಟಿಸಿ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಬಸ್‌ ಮುಂದೆ ಚಲಿಸಿದ್ದು, ಚಕ್ರದಡಿ ಸಿಲುಕಿ ಮೃತಪಟ್ಟಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Road Accident : ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ಹೆದ್ದಾರಿಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್; ಬೈಕ್‌ನಿಂದ ಎಗರಿ ಬಿದ್ದ ಬಾಲಕ ಸಾವು

ವಿಜಯನಗರದಲ್ಲಿ ಬೈಕ್‌ಗಳ ಮುಖಾಮುಖಿ ಡಿಕ್ಕಿ; ಎಗರಿ ಬಿದ್ದ ಬಾಲಕ ಸಾವು

ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿದ್ದು, ಡಿಕ್ಕಿ ರಭಸಕ್ಕೆ ಬೈಕ್ ಹಿಂದೆ ಕುಳಿತಿದ್ದ ಬಾಲಕ ಎಗರಿ ಬಿದ್ದು ಮೃತಪಟ್ಟಿದ್ದಾನೆ. ಘಟನೆಯಲ್ಲಿ ಮೂವರಿಗೆ ಸಣ್ಣ-ಪುಟ್ಟ ಗಾಯವಾಗಿದೆ. ವಿಜಯನಗರದ ಹರಪನಹಳ್ಳಿ – ಕೂಡ್ಲಿಗಿ ರಸ್ತೆಯ ಹರಾಳು ಕ್ರಾಸ್ ಬಳಿ ಘಟನೆ ನಡೆದಿದೆ. ಕೂಡ್ಲಿಗಿ ತಾಲೂಕಿನ ನಿವಾಸಿ ಮಹಮದ್ (13) ಮೃತ ದುರ್ದೈವಿ.

ಮಹಮದ್‌ ತಂದೆ ಅಸ್ಲಾಂ ಭಾಷಾ ಅವರು ಕೆಎಸ್‌ಆರ್‌ಸಿಟಿ ಬಸ್‌ ಓವರ್ ಟೆಕ್ ಮಾಡಲು ಹೋಗಿದ್ದಾರೆ. ಈ ವೇಳೆ ಬೈಕ್‌ನಲ್ಲಿ ಬರುತ್ತಿದ್ದ ರೇವಣಸಿದ್ದಪ್ಪ ಎಂಬುವವರ ಬೈಕ್‌ಗೆ ಗುದ್ದಿದ್ದಾರೆ. ಪರಿಣಾಮ ಡಿಕ್ಕಿ ರಭಸಕ್ಕೆ ಹಿಂಬದಿ ಕುಳಿತಿದ್ದ ಮಹಮದ್‌ ಹಾರಿ ಬಿದ್ದು ಮೃತಪಟ್ಟಿದ್ದಾನೆ. ಅಸ್ಲಾಂ ಭಾಷಾ, ಮತ್ತೊಬ್ಬ ಪುತ್ರ ಮಹಮದ್ ಫರಾನ್ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆದರೆ ಮಹಮದ್‌ ತಾಯಿ ಬಸ್ ಚಾಲಕನನ್ನು ದೂರಿದ್ದಾರೆ. ಬಸ್ ಸ್ಪೀಡ್ ಆಗಿ ಬಂದಾಗ ಬೈಕ್ ಬ್ಯಾಲೆನ್ಸ್ ತಪ್ಪಿ ಮತ್ತೊಂದು ಬೈಕ್‌ಗೆ ಡಿಕ್ಕಿಯಾಗಿದೆ. ಬಸ್‌ ಮಗನಿಗೂ ಡಿಕ್ಕಿ ಹೊಡೆದಿದೆ. ನನ್ನ ಮಗನ ಸಾವಿಗೆ ಬಸ್ ಚಾಲಕ ಶಿವಕುಮಾರ್ ಕೂಡಾ ಕಾರಣ ಎಂದು ದೂರು ದಾಖಲಿಸಿದ್ದಾರೆ. ಸದ್ಯ ಈ ಸಂಬಂಧ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿವಮೊಗ್ಗ

Kannada stone inscription: ಕಾಶಿಯಲ್ಲಿ ಕನ್ನಡದ ಶಿಲಾ ಶಾಸನ ಪತ್ತೆ; ಘಾಟ್ ನಲ್ಲಿ ಕಾಲು ಸಂಕವಾಗಿ ಬಳಕೆ!

Kannada stone inscription: ಕಾಶಿಯ ಕಪಿಲಾ ಘಾಟ್ ಬಳಿ ಶಾಸನ ಪತ್ತೆಯಾಗಿದೆ. ಕಾಶಿ ವಿಶ್ವನಾಥ ದೇವಸ್ಥಾನದಿಂದ ಸುಮಾರು 20 ಕಿ.ಮೀ. ದೂರದಲ್ಲಿರುವ ಜಾಗದಲ್ಲಿ ಶಾಸನ ಕಂಡುಬಂದಿದೆ. ಘಾಟ್‌ನಲ್ಲಿ ಪತ್ತೆಯಾದ ಈ ಶಾಸನಗಳಲ್ಲಿ ಕೆಲವು ಕಾಲು ಸಂಕವಾಗಿ ಬಳಕೆಯಾಗುತ್ತಿದೆ. ಮತ್ತೆ ಕೆಲವು ಬಟ್ಟೆ ತೊಳೆಯಲು ಬಳಕೆಯಾಗುತ್ತಿದೆ. ಈ ಮೂಲಕ ಅಪರೂಪದ ಶಿಲಾಶಾಸನವೊಂದು ಭಾರಿ ನಿರ್ಲಕ್ಷ್ಯಕ್ಕೆ ಒಳಗಾಗಿದೆ ಎಂದು ಗೊತ್ತಾಗಿದೆ.

VISTARANEWS.COM


on

Kannada stone inscription found in Kashi Use as a foot bridge at the ghat
Koo

ಶಿವಮೊಗ್ಗ: ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕಾಶಿಯಲ್ಲಿ (Kashi Vishwanath Temple) ಕನ್ನಡದ ಶಿಲಾ ಶಾಸನ (Kannada stone inscription) ಪತ್ತೆಯಾಗಿದೆ. ಇದು ಶಿವಮೊಗ್ಗ ಜಿಲ್ಲೆಯ ಕೆಳದಿ ಅರಸರ ಕಾಲದ ಶಾಸನ ಎಂದು ಗೊತ್ತಾಗಿದೆ.

ವಿಜಯನಗರ ಸಾಮ್ರಾಜ್ಯದ ಪತನದ ನಂತರ ಅಸ್ತಿತ್ವಕ್ಕೆ ಬಂದಿದ್ದ ಕೆಳದಿ ಸಂಸ್ಥಾನವು ಬರೆದಿದ್ದ ಶಿಲಾ ಶಾಸನ ಇದಾಗಿದೆ. ವಿಜಯನಗರದ ಸಾಮ್ರಾಜ್ಯಕ್ಕೆ ಕೆಳದಿಯ ಅರಸರು ಸಾಮಂತರಾಗಿದ್ದರು.

ಕಪಿಲಾ ಘಾಟ್ ಬಳಿ ಶಾಸನ ಪತ್ತೆ

ಕಾಶಿಯ ಕಪಿಲಾ ಘಾಟ್ ಬಳಿ ಶಾಸನ ಪತ್ತೆಯಾಗಿದೆ. ಕಾಶಿ ವಿಶ್ವನಾಥ ದೇವಸ್ಥಾನದಿಂದ ಸುಮಾರು 20 ಕಿ.ಮೀ. ದೂರದಲ್ಲಿರುವ ಜಾಗದಲ್ಲಿ ಶಾಸನ ಕಂಡುಬಂದಿದೆ. ಘಾಟ್‌ನಲ್ಲಿ ಪತ್ತೆಯಾದ ಈ ಶಾಸನಗಳಲ್ಲಿ ಕೆಲವು ಕಾಲು ಸಂಕವಾಗಿ ಬಳಕೆಯಾಗುತ್ತಿದೆ. ಮತ್ತೆ ಕೆಲವು ಬಟ್ಟೆ ತೊಳೆಯಲು ಬಳಕೆಯಾಗುತ್ತಿದೆ. ಈ ಮೂಲಕ ಅಪರೂಪದ ಶಿಲಾಶಾಸನವೊಂದು ಭಾರಿ ನಿರ್ಲಕ್ಷ್ಯಕ್ಕೆ ಒಳಗಾಗಿದೆ ಎಂದು ಗೊತ್ತಾಗಿದೆ.

ಕನ್ನಡದಲ್ಲಿ ಕೆತ್ತಲಾಗಿರುವ ಶಾಸನ

ಶಾಸನದಲ್ಲಿ ಕೆಳದಿ ಅರಸ ಶಿವಪ್ಪ ನಾಯಕನ ಹೆಸರನ್ನು ಉಲ್ಲೇಖ ಮಾಡಲಾಗಿದೆ. ಇದು 16ನೇ ಶತಮಾನಕ್ಕೆ ಸೇರಿದ್ದೆಂದು ಹೇಳಲಾಗುತ್ತಿದೆ. ಶಾಸನ ಕಾಲುಸಂಕವಾಗಿ ಬಳಕೆಯಾಗುತ್ತಿರುವುದಕ್ಕೆ ಶಾಸನ ಪ್ರಿಯರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಸಾಗರದ ವಕೀಲ ಹಾಗೂ ಶಾಸನ ಪ್ರಿಯ ಪ್ರವೀಣ್ ಕುಮಾರ್ ಮಾಧ್ಯಮದವರೊಂದಿಗೆ ಮಾತನಾಡಿ, ಶಾಸನ ರಕ್ಷಣೆ ಆಗಬೇಕು. ರಾಜ್ಯ ಹಾಗೂ ಕೇಂದ್ರ ಸರ್ಕಾರವು ಈ ಶಾಸನ ರಕ್ಷಣೆಗೆ ಮುಂದಾಗಬೇಕು. ಉತ್ತರ ಪ್ರದೇಶ ಸರ್ಕಾರವನ್ನು ಸಂಪರ್ಕಿಸಿ ಶಾಸನವನ್ನು ರಕ್ಷಿಸಬೇಕು. ಕೇಂದ್ರ ಪುರಾತತ್ವ ಇಲಾಖೆಯು ತಕ್ಷಣವೇ ಶಾಸನ ರಕ್ಷಣಾ ಕಾರ್ಯಕ್ಕೆ ಮುಂದಾಗಬೇಕು ಎಂದು ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: HD Deve Gowda: ದೇವೇಗೌಡರಿಗೆ ಜನ್ಮದಿನ ಶುಭ ಕೋರಿದ ಮೋದಿ; ಮಾಜಿ ಪ್ರಧಾನಿಗೆ ಹಲಸಿನ ಹಣ್ಣು ಗಿಫ್ಟ್‌

ಇನ್ನು ಈ ಶಾಸನವು ಕನ್ನಡ ಹಾಗೂ ಪರ್ಶಿಯನ್ ಭಾಷೆಯಲ್ಲಿದ್ದು, ಎರಡೂ ಶಾಸನವನ್ನು ರಕ್ಷಿಸಬೇಕು, ಇದು ಶಿವಮೊಗ್ಗದ ಹೆಮ್ಮೆಯ ಪ್ರತೀಕವಾಗಿದೆ. ಹೀಗಾಗಿ ಇದರ ರಕ್ಷಣೆಯ ಅವಶ್ಯಕತೆ ಇದೆ ಎಂದು ಪ್ರವೀಣ್ ಕುಮಾರ್ ಒತ್ತಾಯಿಸಿದ್ದಾರೆ.

Continue Reading

ಬೆಂಗಳೂರು ಗ್ರಾಮಾಂತರ

Road Accident : ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ಹೆದ್ದಾರಿಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್; ಬೈಕ್‌ನಿಂದ ಎಗರಿ ಬಿದ್ದ ಬಾಲಕ ಸಾವು

Road Accident : ತುಮಕೂರು ರಸ್ತೆ ಮಾದಾವರ ಫ್ಲೈಓವರ್ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಡಿವೈಡರ್‌ಗೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್‌ ಪಕ್ಕದ ಹೆದ್ದಾರಿಗೆ ಹಾರಿದೆ. ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

By

Road Accident
Koo

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಅಡಕಮಾರನಹಳ್ಳಿಯ ತುಮಕೂರು ರಸ್ತೆ ಮಾದಾವರ ಫ್ಲೈಓವರ್ ಬಳಿ ಭಾರೀ ದುರಂತವೊಂದು (Road Accident) ತಪ್ಪಿದೆ. ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್‌ವೊಂದು ಪ್ರಯಾಣಿಕರನ್ನು ಹೊತ್ತು ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿತ್ತು. ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ಸಮೀಪ ಬಂದಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು, ಹೆದ್ದಾರಿಯ ತಡೆಗೋಡೆಯನ್ನು ಹಾರಿ ಪಕ್ಕದ ರಸ್ತೆಗೆ ಬಂದು ನಿಂತಿತ್ತು. ಇದು 40 ಅಡಿ ಎತ್ತರದ ಫ್ಲೈಓವರ್‌ನಲ್ಲಿ ಘಟನೆ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಒಂದು ವೇಳೆ ಬಸ್‌ ಏನಾದರೂ 40 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದರೆ, ಪ್ರಯಾಣಿಕರ ಜೀವಕ್ಕೆ ಕುತ್ತು ಬರುತ್ತಿತ್ತು. ಮಾತ್ರವಲ್ಲದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನ ಸವಾರರು ಪ್ರಾಣವನ್ನೇ ಕಳೆದುಕೊಳ್ಳಬೇಕಿತ್ತು.

Road accidents in Bengaluru  Vijayanagar

ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ಚಾಲಕ ನಿರ್ವಾಹಕ ಸೇರಿದಂತೆ ಆರು ಮಂದಿಗೆ ಗಾಯವಾಗಿದ್ದು, ಅವರನ್ನೆಲ್ಲ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಕ್ಕದ ರಸ್ತೆಗೆ ಹಾರಿದ್ದ ಬಸ್‌ ಅನ್ನು ತೆರವುಗೊಳಿಸುತ್ತಿದ್ದಾರೆ.

Road accidents in Bengaluru  Vijayanagar

ಇದನ್ನೂ ಓದಿ: Robbery Case : ಕ್ಯಾಂಟರ್‌ ಅಡ್ಡಗಟ್ಟಿದ ದರೋಡೆಕೋರರು; ಖಾರದ ಪುಡಿ ಎರಚಿ 32 ಲಕ್ಷ ರೂ. ದೋಚಿ ಪರಾರಿ

ವಿಜಯನಗರದಲ್ಲಿ ಬೈಕ್‌ಗಳ ಮುಖಾಮುಖಿ ಡಿಕ್ಕಿ; ಎಗರಿ ಬಿದ್ದ ಬಾಲಕ ಸಾವು

ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿದ್ದು, ಡಿಕ್ಕಿ ರಭಸಕ್ಕೆ ಬೈಕ್ ಹಿಂದೆ ಕುಳಿತಿದ್ದ ಬಾಲಕ ಎಗರಿ ಬಿದ್ದು ಮೃತಪಟ್ಟಿದ್ದಾನೆ. ಘಟನೆಯಲ್ಲಿ ಮೂವರಿಗೆ ಸಣ್ಣ-ಪುಟ್ಟ ಗಾಯವಾಗಿದೆ. ವಿಜಯನಗರದ ಹರಪನಹಳ್ಳಿ – ಕೂಡ್ಲಿಗಿ ರಸ್ತೆಯ ಹರಾಳು ಕ್ರಾಸ್ ಬಳಿ ಘಟನೆ ನಡೆದಿದೆ. ಕೂಡ್ಲಿಗಿ ತಾಲೂಕಿನ ನಿವಾಸಿ ಮಹಮದ್ (13) ಮೃತ ದುರ್ದೈವಿ.

ಮಹಮದ್‌ ತಂದೆ ಅಸ್ಲಾಂ ಭಾಷಾ ಅವರು ಕೆಎಸ್‌ಆರ್‌ಸಿಟಿ ಬಸ್‌ ಓವರ್ ಟೆಕ್ ಮಾಡಲು ಹೋಗಿದ್ದಾರೆ. ಈ ವೇಳೆ ಬೈಕ್‌ನಲ್ಲಿ ಬರುತ್ತಿದ್ದ ರೇವಣಸಿದ್ದಪ್ಪ ಎಂಬುವವರ ಬೈಕ್‌ಗೆ ಗುದ್ದಿದ್ದಾರೆ. ಪರಿಣಾಮ ಡಿಕ್ಕಿ ರಭಸಕ್ಕೆ ಹಿಂಬದಿ ಕುಳಿತಿದ್ದ ಮಹಮದ್‌ ಹಾರಿ ಬಿದ್ದು ಮೃತಪಟ್ಟಿದ್ದಾನೆ. ಅಸ್ಲಾಂ ಭಾಷಾ, ಮತ್ತೊಬ್ಬ ಪುತ್ರ ಮಹಮದ್ ಫರಾನ್ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆದರೆ ಮಹಮದ್‌ ತಾಯಿ ಬಸ್ ಚಾಲಕನನ್ನು ದೂರಿದ್ದಾರೆ. ಬಸ್ ಸ್ಪೀಡ್ ಆಗಿ ಬಂದಾಗ ಬೈಕ್ ಬ್ಯಾಲೆನ್ಸ್ ತಪ್ಪಿ ಮತ್ತೊಂದು ಬೈಕ್‌ಗೆ ಡಿಕ್ಕಿಯಾಗಿದೆ. ಬಸ್‌ ಮಗನಿಗೂ ಡಿಕ್ಕಿ ಹೊಡೆದಿದೆ. ನನ್ನ ಮಗನ ಸಾವಿಗೆ ಬಸ್ ಚಾಲಕ ಶಿವಕುಮಾರ್ ಕೂಡಾ ಕಾರಣ ಎಂದು ದೂರು ದಾಖಲಿಸಿದ್ದಾರೆ. ಸದ್ಯ ಈ ಸಂಬಂಧ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Milana Nagaraj Anarkali border gown worn
ಸ್ಯಾಂಡಲ್ ವುಡ್11 mins ago

Milana Nagaraj: ಗರ್ಭಿಣಿ ಮಿಲನಾ ನಾಗರಾಜ್‌ ಧರಿಸಿರುವ ಕ್ರಶ್ಡ್ ಅನಾರ್ಕಲಿ ಬಾರ್ಡರ್‌ ಗೌನ್‌ನ ವಿಶೇಷ ಏನು?

Boxer Parveen
ಕ್ರೀಡೆ14 mins ago

Boxer Parveen: ಒಲಿಂಪಿಕ್ಸ್‌ ಕೋಟಾ ಕಳೆದುಕೊಂಡ ಭಾರತದ ಬಾಕ್ಸರ್‌ ಪರ್ವೀನ್‌

Famous Food of bangalore
ಆಹಾರ/ಅಡುಗೆ36 mins ago

Famous Food of Bangalore: ಬೆಂಗಳೂರಿಗೆ ಬಂದಾಗ ಈ ಖಾದ್ಯಗಳ ರುಚಿ ನೋಡಲು ಮರೆಯಬೇಡಿ!

Prime Minister of India
ರಾಜಕೀಯ40 mins ago

Prime Minister Of India: ಸುದೀರ್ಘ ಕಾಲ ಪ್ರಧಾನಿಯಾಗಿದ್ದ ನೆಹರೂ, ಇಂದಿರಾ ದಾಖಲೆಯನ್ನು ಮೋದಿ ಮುರಿಯಲು ಸಾಧ್ಯವೆ?

RCB FANS BIKE RALLY
ಕ್ರೀಡೆ46 mins ago

RCB FANS BIKE RALLY: ಪಂದ್ಯಕ್ಕೂ ಮುನ್ನವೇ ಬೃಹತ್​ ಬೈಕ್​ ರ‍್ಯಾಲಿ ಮಾಡಿದ ಆರ್​ಸಿಬಿ ಅಭಿಮಾನಿಗಳು; ವಿಡಿಯೊ ವೈರಲ್​​

Pavithra Jayaram Chandrakant are just friends, daughter said
ಕಿರುತೆರೆ52 mins ago

Pavithra Jayaram: ಚಂದ್ರಕಾಂತ್‌ ಹಾಗೂ ನನ್ನ ಅಮ್ಮ ಜಸ್ಟ್‌ ಫ್ರೆಂಡ್ಸ್‌, ಪವಿತ್ರಾ ಮಗಳ ಸ್ಪಷ್ಟನೆ!

Powerful Bike
ಪ್ರಮುಖ ಸುದ್ದಿ55 mins ago

Powerful Bikes : 2.5 ಲಕ್ಷ ರೂ.ಗಿಂತಲೂ ಕಡಿಮೆ ಬೆಲೆಗೆ ಸಿಗ್ತವೆ ಈ 5 ಪವರ್​ಫುಲ್ ಬೈಕ್​ಗಳು

Road Accident
ಶಿವಮೊಗ್ಗ1 hour ago

Road Accident : ಬಸ್ ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆ; ಚಕ್ರಕ್ಕೆ ಸಿಲುಕಿ ಸಾವು

Kannada stone inscription found in Kashi Use as a foot bridge at the ghat
ಶಿವಮೊಗ್ಗ1 hour ago

Kannada stone inscription: ಕಾಶಿಯಲ್ಲಿ ಕನ್ನಡದ ಶಿಲಾ ಶಾಸನ ಪತ್ತೆ; ಘಾಟ್ ನಲ್ಲಿ ಕಾಲು ಸಂಕವಾಗಿ ಬಳಕೆ!

Road Accident
ಬೆಂಗಳೂರು ಗ್ರಾಮಾಂತರ2 hours ago

Road Accident : ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ಹೆದ್ದಾರಿಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್; ಬೈಕ್‌ನಿಂದ ಎಗರಿ ಬಿದ್ದ ಬಾಲಕ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ19 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌