Site icon Vistara News

ಸಿಎಂ ಬೊಮ್ಮಾಯಿ ಭೇಟಿಯಾಗುತ್ತಿರುವ ಆರ್‌ಎಸ್‌ಎಸ್‌ ಮುಖಂಡರು, ಶಾಸಕರು, ಸಚಿವರು

RSS Mukund

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಸಾಲುಸಾಲಾಗಿ ಆರ್‌ಎಸ್‌ಎಸ್‌ ಮುಖಂಡರು ಹಾಗೂ ಸಚಿವರುಗಳು ಭೇಟಿ ಮಾಡುತ್ತಿರುವುದು ರಾಜ್ಯ ರಾಜಕೀಯದ ದೃಷ್ಟಿಯಿಂದ ಕುತೂಹಲ ಹೆಚ್ಚಿಸಿದೆ.

ಎರಡು ದಿನದ ಹಿಂದಷ್ಟೆ ಆರ್‌ಎಸ್‌ಎಸ್‌ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಆರ್‌.ಟಿ. ನಗರದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರ ಮನೆಗೆ ತೆರಳಿ ಗೌಪ್ಯ ಭೇಟಿ ಮಾಡಿ ಬಂದಿದ್ದರು.

ಇದೀಗ ಶುಕ್ರವಾರ ಬೆಳಗ್ಗೆ ಆರ್‌ಎಸ್‌ಎಸ್‌ ಸಹ ಸರಕಾರ್ಯವಾಹ ಮುಕುಂದ ಅವರು ರೇಸ್‌ಕೋರ್ಸ್‌ ರಸ್ತೆಯ ನಿವಾಸದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ. ರಾಜ್ಯ ರಾಜಕೀಯದ ಕುರಿತು ಕೆಲ ಮಹತ್ವದ ಸಂಗತಿಗಳನ್ನು ಇಬ್ಬರೂ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆರ್‌ಎಸ್‌ಎಸ್‌ ಪ್ರಮುಖರು ಒಬ್ಬೊಬ್ಬರಾಗಿ ಸಿಎಂ ಅವರನ್ನು ಭೇಟಿ ಮಾಡುತ್ತಿರುವ ವಿಚಾರ ಹೊರಬೀಳುತ್ತಿರುವಂತೆಯೇ ಶಾಸಕರು, ಸಚಿವರ ದಂಡು ಭೇಟಿಗೆ ಮುಂದಾಗಿದೆ.

ಶಾಸಕರಾದ ರಘುಪತಿ ಭಟ್, ಬಾಲಚಂದ್ರ ಜಾರಕಿಹೊಳಿ, ಸಚಿವರಾದ ಶಿವರಾಂ ಹೆಬ್ಬಾರ್, ವಿ ಸೋಮಣ್ಣ ಅವರುಗಳು ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ತೆರಳಿದ್ದಾರೆ.

ಇದನ್ನೂ ಓದಿ | ಬಿಜೆಪಿಯಲ್ಲಿ ಕುತೂಹಲಕಾರಿ ನಡೆ: ಸಿಎಂ ಬೊಮ್ಮಾಯಿ ಭೇಟಿಯಾದ ದತ್ತಾತ್ರೇಯ ಹೊಸಬಾಳೆ

Exit mobile version