Rushikonda Palace: 500 ಕೋಟಿಯ ʼಋಷಿಕೊಂಡ ಅರಮನೆʼ ಖರೀದಿಸಲು ಕ್ರಿಮಿನಲ್‌ ಸುಕೇಶ್ ಚಂದ್ರಶೇಖರ್ ರೆಡಿ! - Vistara News

ರಾಜಕೀಯ

Rushikonda Palace: 500 ಕೋಟಿಯ ʼಋಷಿಕೊಂಡ ಅರಮನೆʼ ಖರೀದಿಸಲು ಕ್ರಿಮಿನಲ್‌ ಸುಕೇಶ್ ಚಂದ್ರಶೇಖರ್ ರೆಡಿ!

ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅಧಿಕಾರದಲ್ಲಿದ್ದಾಗ ಸುಮಾರು 500 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಋಷಿಕೊಂಡ ಹಿಲ್‌ಟಾಪ್ ಪ್ಯಾಲೇಸ್ ಬಗ್ಗೆ ಟಿಡಿಪಿ ಆಕ್ಷೇಪ ವ್ಯಕ್ತಪಡಿಸಿ ಸಾಕಷ್ಟು ಆರೋಪಗಳನ್ನು ಮಾಡಿತ್ತು. ಇದೀಗ ಈ ಅರಮನೆಯನ್ನು (Rushikonda Palace) ಖರೀದಿ ಮಾಡಲು ಸದ್ಯ ದೆಹಲಿಯ ಮಂಡೋಲಿ ಜೈಲಿನಲ್ಲಿರುವ ಕುಖ್ಯಾತ ಕ್ರಿಮಿನಲ್ ಸುಕೇಶ್ ಚಂದ್ರಶೇಖರ್‌ ಆಸಕ್ತಿ ತೋರಿಸಿದ್ದಾನೆ.

VISTARANEWS.COM


on

Rushikonda Palace
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಆಂಧ್ರಪ್ರದೇಶದ ಋಷಿಕೊಂಡ ಬೆಟ್ಟದಲ್ಲಿ (Rushikonda Hilltop) ಈ ಹಿಂದಿನ ಜಗನ್ ರೆಡ್ಡಿ ಸರ್ಕಾರ ನಿರ್ಮಿಸಿರುವ ವಿವಾದಾತ್ಮಕ ಅರಮನೆಯನ್ನು (Rushikonda Palace) ಮಾರುಕಟ್ಟೆ ದರಕ್ಕಿಂತ ಶೇ.20ರಷ್ಟು ಹೆಚ್ಚು ಹಣ ಕೊಟ್ಟು ಖರೀದಿಸಲು ತಾನು ಸಿದ್ಧ ಎಂದು ಅಕ್ರಮ ಹಣ ವರ್ಗಾವಣೆ, ವಂಚನೆ ಮತ್ತು ಸುಲಿಗೆ ಪ್ರಕರಣ ಸಂಬಂಧ ದೆಹಲಿಯ ಜೈಲಿನಲ್ಲಿರುವ ಆರೋಪಿ ಸುಕೇಶ್ ಚಂದ್ರಶೇಖರ್ (Sukesh Chandrashekhar) ಹೇಳಿಕೊಂಡಿದ್ದಾನೆ. ಈ ಕುರಿತು ಆತ ಆಂಧ್ರಪ್ರದೇಶದ (Andhra Pradesh) ಮುಖ್ಯಮಂತ್ರಿ (Chief Minister) ಎನ್. ಚಂದ್ರಬಾಬು ನಾಯ್ಡು (N Chandrababu Naidu) ಅವರಿಗೆ ಪತ್ರ ಬರೆದಿದ್ದಾನೆ.

ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅಧಿಕಾರದಲ್ಲಿದ್ದಾಗ ಸುಮಾರು 500 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಋಷಿಕೊಂಡ ಹಿಲ್‌ಟಾಪ್ ಪ್ಯಾಲೇಸ್ ಬಗ್ಗೆ ಟಿಡಿಪಿ ಆಕ್ಷೇಪ ವ್ಯಕ್ತಪಡಿಸಿ ಸಾಕಷ್ಟು ಆರೋಪಗಳನ್ನು ಮಾಡಿತ್ತು. ಇದೀಗ ಈ ಅರಮನೆಯನ್ನು ಖರೀದಿ ಮಾಡಲು ಸದ್ಯ ದೆಹಲಿಯ ಜೈಲಿನಲ್ಲಿರುವ ಸುಕೇಶ್ ಆಸಕ್ತಿ ತೋರಿದ್ದಾನೆ.

ಆಂಧ್ರಪ್ರದೇಶದ ಈಗಿನ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಸರ್ಕಾರವು ಆ ಆಸ್ತಿಯನ್ನು ಮಾರಾಟ ಮಾಡಲು ಅಥವಾ ಗುತ್ತಿಗೆಗೆ ನೀಡಲು ನಿರ್ಧರಿಸಿದರೆ ಮಾರುಕಟ್ಟೆ ಬೆಲೆಗಿಂತ ಶೇ. 20 ಹೆಚ್ಚಿನ ದರ ನೀಡುವುದಾಗಿ ಆತ ಹೇಳಿದ್ದಾನೆ. ಮಾಜಿ ಮುಖ್ಯಮಂತ್ರಿ ರೆಡ್ಡಿ ವೈಜಾಗ್‌ನಲ್ಲಿ 500 ಕೋಟಿ ರೂಪಾಯಿ ವೆಚ್ಚದ ಬೆಟ್ಟದ ಅರಮನೆಯನ್ನು ತಮ್ಮ ಸ್ವಾರ್ಥಕ್ಕಾಗಿ ನಿರ್ಮಿಸಿದ್ದಾರೆ ಎಂದು ತೆಲುಗು ದೇಶಂ ಪಕ್ಷ (ಟಿಡಿಪಿ) ಆರೋಪಿಸಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಕೆಟ್ಟದಾಗಿದ್ದರೂ ಈ ಅರಮನೆ ಮತ್ತು ಅಲ್ಲಿನ ಐಷಾರಾಮಿ ಸೌಕರ್ಯಗಳಿಗೆ ದುಂದು ವೆಚ್ಚ ಮಾಡಲಾಗಿದೆ ಎಂದು ಆರೋಪಿಸಿದೆ.

Rushikonda Palace


ಇದು ನನಗೆ, ನನ್ನ ಕುಟುಂಬಕ್ಕೆ ಮತ್ತು ನನ್ನ ಸಮುದಾಯಕ್ಕೆ ಬಹಳ ವಿಶೇಷವಾಗಿದೆ ಎಂದು ಸುಕೇಶ್ ಆಂಧ್ರಪ್ರದೇಶ ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾನೆ ಎಂದು ಅವರ ವಕೀಲ ಅನಂತ್ ಮಲಿಕ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ನಾನು ಬಾಲ್ಯದ ರಜಾ ದಿನಗಳಲ್ಲಿ ಅಜ್ಜಿಯ ಬಳಿ ಕರೆದುಕೊಂಡು ಹೋದಾಗ ಆ ಪ್ರದೇಶದ ಸುತ್ತಮುತ್ತ ಆಟವಾಡುತ್ತಿದ್ದೆ. ಆ ಸೆಂಟಿಮೆಂಟ್‌ ನನಗೆ ಅಲ್ಲಿಯ ಆಸ್ತಿ ಖರಿದಿಸುವ ಬಯಕೆ ಹುಟ್ಟಿಸಿದೆ. ಸರ್ಕಾರ ಆ ಆಸ್ತಿ ಮಾರಿದರೆ ಹಣವನ್ನು ಶೇ. 100ರಷ್ಟು ನ್ಯಾಯಸಮ್ಮತ ರೀತಿಯಲ್ಲಿ ಪಾವತಿಸುತ್ತೇನೆ ಎಂದು ಸುಕೇಶ್ ಪತ್ರದಲ್ಲಿ ತಿಳಿಸಿದ್ದಾನೆ.

ನನ್ನ ಆತಿಥ್ಯ ಉದ್ಯಮವು ಚೆನ್ನೈ, ಗೋವಾ, ದುಬೈ ಮತ್ತು ಬಾರ್ಸಿಲೋನಾದಲ್ಲಿ ಹೊಟೇಲ್ ರೂಪದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಈ ಎಲ್ಲಾ ವಿವರಗಳನ್ನು ನಾನು ದಾಖಲೆ ಸಮೇತ ನೀಡುವೆ. ಮಧ್ಯಮ ವರ್ಗದ ಕುಟುಂಬದ ಹುಡುಗನೊಬ್ಬ ಋಷಿಕೊಂಡ ಅರಮನೆಯಂತಹ ಪ್ರತಿಷ್ಠಿತ ಆಸ್ತಿಯನ್ನು ಪಡೆಯುವ ಹಂತಕ್ಕೆ ಬೆಳೆದಿದ್ದಾನೆ. ನನ್ನ ವಿರುದ್ಧದ ಆರೋಪಗಳು ಸಾಬೀತಾಗಿಲ್ಲ. ಹೀಗಾಗಿ ಅರಮನೆಯನ್ನು ಖರೀದಿಸಲು ಅಥವಾ ಬಾಡಿಗೆಗೆ ನೀಡಲು ನನಗೆ ಅವಕಾಶವನ್ನು ನೀಡುವುದರಿಂದ ಅಲ್ಲಿರುವ ಎಲ್ಲಾ ಯುವಕರಿಗೆ ಇದು ಸ್ಫೂರ್ತಿಯಾತ್ತದೆ. ಯಾಕೆಂದರೆ ಜಗತ್ತು ನಿಮ್ಮ ಯಶಸ್ಸಿಗೆ ವಿರುದ್ಧವಾಗಿದ್ದರೂ ಯಾವುದೂ ಅಸಾಧ್ಯವಲ್ಲ ಎಂದು ಸುಕೇಶ್ ಪತ್ರದಲ್ಲಿ ವಿವರಿಸಿದ್ದಾನೆ.

ಆರೋಪವೇನು?

ವೈ.ಎಸ್.ಜಗನ್‌ ಮೋಹನ್‌ ರೆಡ್ಡಿ ಅವರು ಈ ಮೊದಲು ಮೂರು ನಗರಗಳನ್ನು ರಾಜಧಾನಿ ಎಂದು ಘೋಷಿಸಿದ್ದರು. ವಿಶಾಖಪಟ್ಟಣಂ ಅಥವಾ ವೈಜಾಗ್‌ ಅನ್ನೇ ಈ ಮೊದಲು ಆಂಧ್ರಪ್ರದೇಶದ ರಾಜಧಾನಿ ಎಂದು ಘೋಷಿಸಲಾಗಿತ್ತು. ಹಾಗಾಗಿ, ಇಲ್ಲಿ ಪತ್ನಿಯ ಆಸೆಯಂತೆಯೇ ಜಗನ್‌ ಮೋಹನ್‌ ರೆಡ್ಡಿ ಅವರು ಐಷಾರಾಮಿ ಬಂಗಲೆ ಕಟ್ಟಿಸಿದ್ದಾರೆ ಎಂದು ಟಿಡಿಪಿ ಆರೋಪಿಸಿದೆ.

ಇದನ್ನೂ ಓದಿ: Actor Darshan: ದರ್ಶನ್‌ ತುಂಬ ಮುಗ್ದ, ತಾಯಿ ಕಣ್ಣೀರು ಹಾಕೊಂಡು ಮಗನನ್ನು ಬೆಳಸಬೇಕು ಎಂದಿದ್ರು ಎಂದ ಲಹರಿ ವೇಲು!

ಋಷಿಕೊಂಡ ಹಿಲ್ಸ್‌ ಪ್ರವಾಸಿ ತಾಣವಾಗಿತ್ತು. ಇಲ್ಲಿಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುತ್ತಿದ್ದರು. ಆದರೆ, 9.88 ಎಕರೆ ಜಾಗದಲ್ಲಿ ಜಗನ್‌ ಮೋಹನ್‌ ರೆಡ್ಡಿ ಅವರು ಬಂಗಲೆ ನಿರ್ಮಿಸಿದ್ದಾರೆ. ಸುಮಾರು 36 ಲಕ್ಷ ರೂ. ವೆಚ್ಚದಲ್ಲಿ ಬಾತ್‌ ಟಬ್‌ ನಿರ್ಮಿಸಿದ್ದಾರೆ. ಹತ್ತಾರು ಐಷಾರಾಮಿ ಕೋಣೆಗಳು, ಸೌಕರ್ಯಗಳು ಬಂಗಲೆಯಲ್ಲಿವೆ. ಇದನ್ನೇ ಪಾರ್ಟಿ ಕಚೇರಿ ಮಾಡುವುದು ಜಗನ್‌ ಮೋಹನ್‌ ರೆಡ್ಡಿ ಅವರ ಉದ್ದೇಶವಾಗಿತ್ತು ಎಂದು ಆರೋಪಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

DK Shivakumar: ಸಿಎಂ ಬದಲಾವಣೆ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಡಿ.ಕೆ. ಶಿವಕುಮಾರ್

DK Shivakumar: ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂಬ ಚಂದ್ರಶೇಖರನಾಥ ಸ್ವಾಮೀಜಿಯವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಉತ್ಸಾಹದಲ್ಲಿ ಕೆಲವರು ಹೀಗೆ ಮಾತನಾಡುತ್ತಾರೆ. ರಾಜಕಾರಣದಲ್ಲಿ ಅಭಿಮಾನಪೂರ್ವಕವಾಗಿ ಇಂತಹ ಹೇಳಿಕೆಗಳನ್ನು ಮಧ್ಯೆ ಮಧ್ಯೆ ನೀಡುವುದು ಸಹಜ ಎಂದಿದ್ದಾರೆ.

VISTARANEWS.COM


on

DCM DK Shivakumar latest statement about CM change issue
Koo

ನವದೆಹಲಿ: ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ದೆಹಲಿಯಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂಬ ಚಂದ್ರಶೇಖರನಾಥ ಸ್ವಾಮೀಜಿಯವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಉತ್ಸಾಹದಲ್ಲಿ ಕೆಲವರು ಹೀಗೆ ಮಾತನಾಡುತ್ತಾರೆ. ರಾಜಕಾರಣದಲ್ಲಿ ಅಭಿಮಾನಪೂರ್ವಕವಾಗಿ ಇಂತಹ ಹೇಳಿಕೆಗಳನ್ನು ಮಧ್ಯೆ ಮಧ್ಯೆ ನೀಡುವುದು ಸಹಜ. ಅವರ ಮಾತಿಗೆ ಹೆಚ್ಚು ಗಮನ ಕೊಡಬಾರದು. ಪಕ್ಷದ ತೀರ್ಮಾನವೇ ಅಂತಿಮ ಎಂದು ತಿಳಿಸಿದರು.

ಇದನ್ನೂ ಓದಿ: DK Shivakumar: ಹೆಚ್ಚುವರಿ ಡಿಸಿಎಂ ಹುದ್ದೆಗೆ ಹೈಕಮಾಂಡ್ ಬಳಿ ಹೋಗಲಿ; ಡಿ.ಕೆ. ಶಿವಕುಮಾರ್

ಸಚಿವ ಸ್ಥಾನ ಬಿಡಲು ಸಿದ್ಧ, ತಮ್ಮನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿ ಎಂಬ ರಾಜಣ್ಣ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಅದಕ್ಕೆ ಉತ್ತರ ಕೊಡುತ್ತೇವೆ ಎಂದರು.

ನೆಲ, ಜಲ, ಭಾಷೆ ಉಳಿವಿಗಾಗಿ ಸಂಸದರ ಜತೆ ಚರ್ಚೆ

ದೆಹಲಿ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌, ಕರ್ನಾಟಕ ರಾಜ್ಯದಿಂದ ನೂತನವಾಗಿ ಆಯ್ಕೆಯಾಗಿರುವ ಸಂಸದರು ಹಾಗೂ ರಾಜ್ಯಸಭಾ ಸದಸ್ಯರನ್ನು ಭೇಟಿ ಮಾಡಿ, ನಮ್ಮ ರಾಜ್ಯದಲ್ಲಿ ಬಾಕಿ ಉಳಿದಿರುವ ಕೇಂದ್ರದ ಯೋಜನೆಗಳು, ಅನುದಾನ ಬಾಕಿ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯದ ಹಿತಕ್ಕಾಗಿ ಸಂಸತ್ ಕಲಾಪದಲ್ಲಿ ಹೋರಾಟ ಮಾಡುವಂತೆ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: Lakshmi Hebbalkar: ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ: ಹೆಬ್ಬಾಳಕರ್

ಇಷ್ಟು ದಿನ ರಾಜಕಾರಣವಾಯಿತು. ಈಗ ರಾಜ್ಯದ ಅಭಿವೃದ್ಧಿಗಾಗಿ, ನೆಲ, ಜಲ, ಭಾಷೆ, ಸಂಸ್ಕೃತಿಯ ಉಳಿವಿಗಾಗಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು. ಈ ವಿಚಾರವನ್ನು ಸಂಸದರ ಗಮನಕ್ಕೆ ತರಲಾಗುವುದು. ಒಗ್ಗಟ್ಟಿನಿಂದ ರಾಜ್ಯದ ಹಿತಕ್ಕಾಗಿ ದುಡಿಯುತ್ತಾರೆ ಎನ್ನುವ ನಂಬಿಕೆಯಿದೆ ಎಂದು ಹೇಳಿದರು.

Continue Reading

ಕರ್ನಾಟಕ

DK Shivakumar: ಹೆಚ್ಚುವರಿ ಡಿಸಿಎಂ ಹುದ್ದೆಗೆ ಹೈಕಮಾಂಡ್ ಬಳಿ ಹೋಗಲಿ; ಡಿ.ಕೆ. ಶಿವಕುಮಾರ್

DK Shivakumar: ಹೆಚ್ಚುವರಿ ಡಿಸಿಎಂ ವಿಚಾರವಾಗಿ ಮಾಧ್ಯಮಗಳ ಮುಂದೆ ಮಾತನಾಡುತ್ತಿರುವವರು, ಹೈಕಮಾಂಡ್ ನಾಯಕರ ಬಳಿ ಹೋಗಿ ಮಾತನಾಡಲಿ. ಮಾಧ್ಯಮಗಳು ಪ್ರಚಾರ ಮಾಡುತ್ತವೇ ಹೊರತು, ಪರಿಹಾರ ನೀಡುವುದಿಲ್ಲ. ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ . ನಾನು ಕೂಡ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ. ಯಾರು ಬೇಕಾದರೂ ಹೈಕಮಾಂಡ್ ನಾಯಕರ ಬಳಿ ಹೋಗಿ ಪರಿಹಾರ ಹುಡುಕಿಕೊಂಡು ಬರಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

Post of Additional DCM Those who speak before the media should go to the High Command and speak says DCM DK Shivakumar
Koo

ಬೆಂಗಳೂರು: ಹೆಚ್ಚುವರಿ ಡಿಸಿಎಂ ವಿಚಾರವಾಗಿ ಮಾಧ್ಯಮಗಳ ಮುಂದೆ ಮಾತನಾಡುತ್ತಿರುವವರು, ಹೈಕಮಾಂಡ್ ನಾಯಕರ ಬಳಿ ಹೋಗಿ ಮಾತನಾಡಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು.

ವಿಧಾನಸೌಧದ ಆವರಣದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳು ಪ್ರಚಾರ ಮಾಡುತ್ತವೇ ಹೊರತು, ಪರಿಹಾರ ನೀಡುವುದಿಲ್ಲ. ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ನಾನು ಕೂಡ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ. ಯಾರು ಬೇಕಾದರೂ ಹೈಕಮಾಂಡ್ ನಾಯಕರ ಬಳಿ ಹೋಗಿ ಪರಿಹಾರ ಹುಡುಕಿಕೊಂಡು ಬರಲಿ ಎಂದರು.

ಇದನ್ನೂ ಓದಿ: Ballari News: ಬಳ್ಳಾರಿಯಲ್ಲಿ ಅಕ್ರಮ ಗಾಂಜಾ ಸಂಗ್ರಹ; ಇಬ್ಬರು ಆರೋಪಿಗಳ ಬಂಧನ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, “”ಬಹಳ ಸಂತೋಷ. ಸಮಯ ವ್ಯರ್ಥ ಮಾಡಬಾರದು. ಅವರಿಗೆ ಪರಿಹಾರ ಕಂಡುಕೊಳ್ಳಲು ಎಲ್ಲಿ ಹೋಗಬೇಕೋ ಅಲ್ಲಿ ಹೋಗಲಿ. ಆರೋಗ್ಯ ಸರಿಯಿಲ್ಲ ಎಂದು ವೈದ್ಯರ ಬಳಿ ಹೋದರೆ ಔಷಧಿ ನೀಡುತ್ತಾರೆ. ಅದೇ ರೀತಿ ಅವರು ಎಲ್ಲಾದರೂ ಪರಿಹಾರವನ್ನು ಹುಡುಕಿಕೊಂಡು ಹೋಗಲಿʼʼ ಎಂದು ತಿಳಿಸಿದರು.

ಮುಂದಿನ ವರ್ಷದಿಂದ ಇಂತಹ ತಪ್ಪು ಆಗದಂತೆ ಕ್ರಮ

ಕೆಂಪೇಗೌಡರ ಜಯಂತಿಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡದ ವಿಚಾರವಾಗಿ ರಾಜ್ಯ ಒಕ್ಕಲಿಗರ ಸಂಘ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ಯಾರನ್ನೂ ಅಗೌರವಿಸುವ ಉದ್ದೇಶ ನಮಗಿಲ್ಲ. ಒಕ್ಕಲಿಗ ಸಮುದಾಯದ ನಾಯಕರಾಗಿ ಎಸ್.ಎಂ. ಕೃಷ್ಣ, ಸದಾನಂದ ಗೌಡರು, ದೇವೇಗೌಡರು, ಕುಮಾರಸ್ವಾಮಿ ಅವರು ಇದ್ದಾರೆ. ಪ್ರಾಧಿಕಾರದ ಅಧಿಕಾರಿಗಳು ಶಿಷ್ಟಾಚಾರವನ್ನು ಮಾತ್ರ ಗಮನದಲ್ಲಿಟ್ಟುಕೊಂಡು ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ವ್ಯಾಪ್ತಿಯ ಜನಪ್ರತಿನಿಧಿಗಳನ್ನು ಮಾತ್ರ ಆಹ್ವಾನ ನೀಡಿದ್ದಾರೆ. ದೇವೇಗೌಡರು ಹಾಸನ ಜಿಲ್ಲಾ ವ್ಯಾಪ್ತಿಗೆ ಬರುತ್ತಾರೆ. ಕುಮಾರಸ್ವಾಮಿ ಮಂಡ್ಯ ಸಂಸದರಾಗಿದ್ದಾರೆ. ಈ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕಿತ್ತು. ಮುಂದಿನ ವರ್ಷ ಈ ರೀತಿಯ ತಪ್ಪುಗಳು ನಡೆಯದಂತೆ ಸರಿಪಡಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: Railway New Rules: ರೈಲು ಪ್ರಯಾಣಿಕರೇ, ಬರ್ತ್‌ನಲ್ಲಿ ಮಲಗುವ ಕುರಿತ ಈ ಹೊಸ ರೂಲ್ಸ್‌ ನೆನಪಿನಲ್ಲಿರಲಿ!

ದೆಹಲಿ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕರ್ನಾಟಕ ರಾಜ್ಯದಿಂದ ನೂತನವಾಗಿ ಆಯ್ಕೆಯಾಗಿರುವ ಸಂಸದರನ್ನು ಭೇಟಿ ಮಾಡಿ, ನಮ್ಮ ರಾಜ್ಯದಲ್ಲಿ ಬಾಕಿ ಉಳಿದಿರುವ ಕೇಂದ್ರದ ಯೋಜನೆಗಳು, ಅನುದಾನ ಬಾಕಿ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯದ ಹಿತಕ್ಕಾಗಿ ಧ್ವನಿ ಎತ್ತುವಂತೆ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.

Continue Reading

ಪ್ರಮುಖ ಸುದ್ದಿ

CM Siddaramaiah: ಡಿಕೆಶಿ ಮುಖ್ಯಮಂತ್ರಿ ಮಾಡಿ ಎಂದು ಸಿಎಂಗೆ ವೇದಿಕೆಯಲ್ಲೇ ಒತ್ತಾಯಿಸಿದ ಚಂದ್ರಶೇಖರ ಸ್ವಾಮೀಜಿ; ಸಿದ್ದರಾಮಯ್ಯ ಉತ್ತರ ಏನಿತ್ತು?

CM Siddaramaiah: ಸ್ವಾಮೀಜಿ ಹೇಳಿಕೆ ಕುರಿತು ಸಿಎಂ ಆಗಲೀ, ಡಿಕೆಶಿ ಆಗಲೀ ವೇದಿಕೆ ಮೇಲೆ ಯಾವುದೇ ಉತ್ತರ ನೀಡಲಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಿಂದ ಹೊರಬಂದ ಬಳಿಕ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

VISTARANEWS.COM


on

cm siddaramaiah kempegowda jayanthi
Koo

ಬೆಂಗಳೂರು: ಡಿಕೆ ಶಿವಕುಮಾರ್ (DK Shivakumar) ಅವರನ್ನು ಸಿಎಂ ಮಾಡಿ ಎಂದು ಸ್ವಾಮೀಜಿಯೊಬ್ಬರು ಸಿಎಂ ಸಿದ್ದರಾಮಯ್ಯ (CM Siddaramaiah) ಮುಂದೆ ವೇದಿಕೆಯ ಮೇಲೆಯೇ ಬೇಡಿಕೆ ಇಟ್ಟ ಪ್ರಸಂಗ ಕೆಂಪೇಗೌಡ ಜಯಂತಿ (Kempegowda Jayanthi) ಕಾರ್ಯಕ್ರಮದಲ್ಲಿ ನಡೆಯಿತು. ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ (Chandrashekhara swamiji) ಅವರು ಸಿದ್ದರಾಮಯ್ಯ ಅವರಿಗೆ ವೇದಿಕೆಯಲ್ಲೇ ಬಹಿರಂಗವಾಗಿ ಈ ಬೇಡಿಕೆಯನ್ನು ಇಟ್ಟಿದ್ದಾರೆ.

ಎಲ್ಲರೂ ಮುಖ್ಯಮಂತ್ರಿಗಳಾಗಿ ತಮ್ಮ ತಮ್ಮ ಅಧಿಕಾರ ಅನುಭವಿಸಿದ್ದಾರೆ. ಆದರೆ ಡಿಕೆ ಶಿವಕುಮಾರ್ ಒಬ್ಬರು ಮುಖ್ಯಮಂತ್ರಿ ಆಗಿಲ್ಲ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಸ್ಥಾನ ಅನುಭವಿಸಿದ್ದಾರೆ. ಆ ಕಾರಣಕ್ಕಾಗಿ ಇನ್ನು ಮುಂದೆ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕು ಎಂದು ಆಗ್ರಹಿಸಿದರು.

ಇದು ಸಿಎಂ ಸಿದ್ದರಾಮಯ್ಯ ಮನಸ್ಸು ಮಾಡಿದರೆ ಇದು ಆಗಲಿದೆ, ಇಲ್ಲಾಂದ್ರೆ ಆಗಲ್ಲ. ಹಾಗಾಗಿ ದಯವಿಟ್ಟು ಡಿಕೆಶಿಯನ್ನು ಸಿಎಂ ಆಗಿ ಮಾಡಿ ಎಂದು ಮನವಿ ಮಾಡುತ್ತೇನೆ ಎಂದು ವೇದಿಕೆಯಲ್ಲಿ ಕೇಳಿಕೊಂಡರು. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಸಚಿವರು ಕೂಡಾ ಉಪಸ್ಥಿತರಿದ್ದರು. ಸ್ವಾಮೀಜಿ ನೀಡಿದ ಈ ಹೇಳಿಕೆಯನ್ನು ಸಭಿಕರಲ್ಲಿದ್ದ ಡಿಕೆ ಶಿವಕುಮಾರ್ ಬೆಂಬಲಿಗರು ಚಪ್ಪಾಳೆ ಶಿಳ್ಳೆಗಳ ಮೂಲಕ ಸ್ವಾಗತಿಸಿದರು.

ಸ್ವಾಮೀಜಿ ಹೇಳಿಕೆ ಕುರಿತು ಸಿಎಂ ಆಗಲೀ, ಡಿಕೆಶಿ ಆಗಲೀ ವೇದಿಕೆ ಮೇಲೆ ಯಾವುದೇ ಉತ್ತರ ನೀಡಲಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಿಂದ ಹೊರಬಂದ ಬಳಿಕ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು. “ನಮ್ಮದು ಹೈಕಮಾಂಡ್ ಸಂಸ್ಕೃತಿಯ ಪಕ್ಷ. ಹೈಕಮಾಂಡ್ ನಿರ್ಧಾರವೇ ಅಂತಿಮ” ಎಂದು ಹೇಳಿದರು. ಈ ಮೂಲಕ, ಸಿಎಂ ಸ್ಥಾನ ಅಷ್ಟು ಸುಲಭವಿಲ್ಲ ಎಂಬ ಸಂದೇಶ ರವಾನೆ ಮಾಡಿದರು. ಡಿಕೆಶಿ ಸಿಎಂ ಆಗೋದು ಹೈಕಮಾಂಡ್ ಕೈಯಲ್ಲಿ ಇದೆ ಅನ್ನುವುದನ್ನು ಸ್ಪಷ್ಟಪಡಿಸಿದರು.

ಕಳೆದ ಒಂದು ತಿಂಗಳಿನಿಂದ ಡಿಕೆಶಿ ಸಿಎಂ ಆಗುವ ಕುರಿತು ಮತ್ತು ಹೊಸ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಕುರಿತು ಕಾಂಗ್ರೆಸ್‌ ನಾಯಕರೊಳಗೇ ಬಣ ರಾಜಕೀಯ ನಡೆಯುತ್ತಿದೆ. ಹಲವಾರು ಕಾಂಗ್ರೆಸ್‌ ನಾಯಕರು, ಇನ್ನಷ್ಟು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಬೇಕು ಎಂಬ ವಾದ ಮುಂದಿಟ್ಟಿದ್ದಾರೆ. ಇದೀಗ, ಒಕ್ಕಲಿಗರೊಬ್ಬರು ಸಿಎಂ ಆಗಬೇಕು ಎಂದು ಒಕ್ಕಲಿಗ ಸ್ವಾಮೀಜಿಗಳೇ ಹೇಳುವ ಮೂಲಕ ಈ ಬಣ ರಾಜಕೀಯಕ್ಕೆ ಇನ್ನಷ್ಟು ತುಪ್ಪ ಸುರಿದಂತಾಗಿದೆ.

ಡಿಸಿಎಂ ಕೂಗು ಎಬ್ಬಿಸಿದ್ದ ಸಿದ್ದರಾಮಯ್ಯ ಬಣಕ್ಕೆ ಮಾಸ್ಟರ್ ಸ್ಟ್ರೋಕ್ ಕೊಡಲು ಡಿಕೆ ಶಿವಕುಮಾರ್ ಈ ಮೂಲಕ ಮುಂದಾದರೇ ಎಂಬ ಅನುಮಾನವೂ ಮೂಡಿದೆ. ಸಮುದಾಯಕ್ಕೊಂದು ಡಿಸಿಎಂ ಹುದ್ದೆ ಸೃಷ್ಟಿ ಆಗಬೇಕು ಎಂದು ಸಿಎಂ ಆಪ್ತ ಸಚಿವರು ಹೇಳಿದ್ದರು. ನಿನ್ನೆ ಡಿಕೆಶಿ ಬಣದ ಶಾಸಕರಿಂದ, ಡಿಕೆ ಶಿವಕುಮಾರ್ ಸಿಎಂ ಮಾಡಿ ಎಂಬ ಹಕ್ಕೊತ್ತಾಯ ಬಂದಿತ್ತು. ಹತ್ತು ಜನರನ್ನು ಡಿಸಿಎಂ ಮಾಡಿ ಅಂತ ಹೇಳಿಕೆಯೂ ಬಂದಿತ್ತು. ಅದರ ಬೆನ್ನಲ್ಲೇ ಸ್ವಾಮೀಜಿಯಿಂದಲೇ ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟು ಕೊಡಿ ಅಂತ ಸಲಹೆ ಬಂದಿದೆ. ಆ ಮೂಲಕ ಸಿಎಂ ಬಣದ ಏಟಿಗೆ ಡಿಕೆಶಿ ಬಣ ಎದಿರೇಟು ನೀಡಲಾಗಿದೆ ಎಂದು ತರ್ಕಿಸಲಾಗಿದೆ.

ಇದನ್ನೂ ಓದಿ: HD Kumaraswamy: ನನ್ನ ಹೃದಯದಲ್ಲಿ ಕೆಂಪೇಗೌಡರಿದ್ದಾರೆ, ಆಹ್ವಾನ ಬೇಕಿಲ್ಲ; ಕುಮಾರಸ್ವಾಮಿ

Continue Reading

ದೇಶ

Parliament Sessions: ಸೆಂಗೋಲ್‌ ಮೇಲೆ ಪ್ರತಿಪಕ್ಷಗಳ ಕಣ್ಣು; ಸಂಸತ್‌ನಲ್ಲಿ ಭಾರೀ ಕೋಲಾಹಲ

Parliament Sessions: ಈ ಸೆಂಗೋಲ್‌ ಅನ್ನು ಸ್ಥಾಪಿಸುವಾಗ ಪ್ರಧಾನಿ ಮೋದಿ ತಲೆಬಾಗಿ ನಮಸ್ಕರಿಸಿದ್ದರು. ಆದರೆ ಈ ಬಾರಿ ಪ್ರಮಾಣ ವಚನ ಸ್ವೀಕರಿಸುವಾಗ ಅದಕ್ಕೆ ನಮಸ್ಕರಿಸುವುದನ್ನು ಮರೆತಿದ್ದಾರೆ. ನಾವೇ ಇದೀಗ ಅವರಿಗೆ ಇದನ್ನು ನೆನಪಿಸಬೇಕಾಗಿದೆ ಎಂದು ಚೌಧರಿ ಕುಟುಕಿದರು. ಚೌಧರಿ ಬೇಡಿಕೆಗೆ ಹಿರಿಯ ಕಾಂಗ್ರೆಸ್‌ ಮುಖಂಡ ಮಾಣಿಕ್ಯಂ, ಆರ್‌ಜೆಡಿ ಸಂಸದರು ಹಾಗೂ ಲಾಲೂ ಪ್ರಸಾದ್‌ ಪುತ್ರಿ ಮೀಸಾ ಭಾರತಿ ಬೆಂಬಲ ಸೂಚಿಸಿದ್ದಾರೆ.

VISTARANEWS.COM


on

Parliament Sessions
Koo

ಹೊಸದಿಲ್ಲಿ: 18ನೇ ಲೋಕಸಭಾ ಅಧಿವೇಶನ(Parliament Sessions)ದಲ್ಲಿ ಇಂದು ಸಭಾಧ್ಯಕ್ಷರ ಪೀಠದ ಬಳಿ ಇರುವ ಸೆಂಗೋಲ್‌(Sengol) ರಾಜದಂಡ ವಿಚಾರ ಚರ್ಚೆಗೆ ಗ್ರಾಸವಾಯಿತು. ಸೆಂಗೋಲ್‌(Sengol) ಅನ್ನು ಬದಲಿಸುವಂತೆ ಪ್ರತಿಪಕ್ಷಗಳು ಪಟ್ಟು ಹಿಡಿದಿವೆ. ಸಮಾಜವಾದಿ ಪಕ್ಷದ ಸಂಸದ ಆರ್‌.ಕೆ. ಚೌಧರಿ ಈ ಬಗ್ಗೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಸೆಂಗೋಲ್‌ ಬದಲಾಗಿ ಸಂವಿಧಾನದ ಪ್ರತಿಯನ್ನು ಇಡುವಂತೆ ಒತ್ತಾಯಿಸಿದ್ದಾರೆ.

ಸಂವಿಧಾನದ ಅಂಗೀಕಾರವು ದೇಶದಲ್ಲಿ ಪ್ರಜಾಪ್ರಭುತ್ವದ ಆರಂಭವನ್ನು ಗುರುತಿಸಿತು ಮತ್ತು ಸಂವಿಧಾನವು ಅದರ ಸಂಕೇತವಾಗಿದೆ. ಬಿಜೆಪಿ ಸರ್ಕಾರ ತನ್ನ ಕೊನೆಯ ಅವಧಿಯಲ್ಲಿ ಸ್ಪೀಕರ್ ಕುರ್ಚಿಯ ಪಕ್ಕದಲ್ಲಿ ‘ಸೆಂಗೊಲ್’ ಅನ್ನು ಸ್ಥಾಪಿಸಿತು. ಸೆಂಗೋಲ್ ಎಂಬುದು ತಮಿಳು ಪದವಾಗಿದ್ದು, ಇದರ ಅರ್ಥ ರಾಜದಂಡ. ರಾಜದಂಡ ಎಂದರೆ ರಾಜನ ಕೋಲು ಎಂದೂ ಅರ್ಥ. ರಾಜಕಾಲದ ನಂತರ ನಾವು ಸ್ವತಂತ್ರರಾಗಿದ್ದೇವೆ. ಈಗ, ಅರ್ಹ ಮತದಾರರಾಗಿರುವ ಪ್ರತಿಯೊಬ್ಬ ಪುರುಷ ಮತ್ತು ಮಹಿಳೆ ಈ ದೇಶವನ್ನು ನಡೆಸಲು ಸರ್ಕಾರವನ್ನು ಆಯ್ಕೆ ಮಾಡುತ್ತಾರೆ. ಹಾಗಾದರೆ ದೇಶವು ಸಂವಿಧಾನದಿಂದ ನಡೆಯುತ್ತದೋ? ಅಥವಾ ರಾಜದಂಡದಿಂದ ನಡೆಸಲ್ಪಡುತ್ತದೆಯೇ? ‘ಸೆಂಗೊಲ್’ ಬದಲಿಗೆ ಪ್ರಜಾಪ್ರಭುತ್ವವನ್ನು ಉಳಿಸಲು ಸಂವಿಧಾನದ ಪ್ರತಿಯನ್ನು ಇರಿಸಬೇಕೆಂದು ಒತ್ತಾಯಿಸಿದರು.

ಈ ಸೆಂಗೋಲ್‌ ಅನ್ನು ಸ್ಥಾಪಿಸುವಾಗ ಪ್ರಧಾನಿ ಮೋದಿ ತಲೆಬಾಗಿ ನಮಸ್ಕರಿಸಿದ್ದರು. ಆದರೆ ಈ ಬಾರಿ ಪ್ರಮಾಣ ವಚನ ಸ್ವೀಕರಿಸುವಾಗ ಅದಕ್ಕೆ ನಮಸ್ಕರಿಸುವುದನ್ನು ಮರೆತಿದ್ದಾರೆ. ನಾವೇ ಇದೀಗ ಅವರಿಗೆ ಇದನ್ನು ನೆನಪಿಸಬೇಕಾಗಿದೆ ಎಂದು ಚೌಧರಿ ಕುಟುಕಿದರು. ಚೌಧರಿ ಬೇಡಿಕೆಗೆ ಹಿರಿಯ ಕಾಂಗ್ರೆಸ್‌ ಮುಖಂಡ ಮಾಣಿಕ್ಯಂ, ಆರ್‌ಜೆಡಿ ಸಂಸದರು ಹಾಗೂ ಲಾಲೂ ಪ್ರಸಾದ್‌ ಪುತ್ರಿ ಮೀಸಾ ಭಾರತಿ ಬೆಂಬಲ ಸೂಚಿಸಿದ್ದಾರೆ.

ಬಿಜೆಪಿ ತಿರುಗೇಟು

ಪ್ರತಿಪಕ್ಷಗಳ ಆರೋಪಕ್ಕೆ ಬಿಜೆಪಿ ಸೇರಿದಂತೆ ಎನ್‌ಡಿಎ ನಾಯಕರು ತಿರುಗೇಟು ಕೊಟ್ಟಿದ್ದಾರೆ. ಸಮಾಜವಾದಿ ಪಕ್ಷವು ಮೊದಲು ರಾಮಚರಿತಮಾನಸ್ ಮತ್ತು ಈಗ ಭಾರತೀಯ ಸಂಸ್ಕೃತಿಯ ಭಾಗವಾಗಿರುವ ಮತ್ತು ವಿಶೇಷವಾಗಿ ತಮಿಳು ಸಂಸ್ಕೃತಿಯ ಭಾಗವಾಗಿರುವ ಸೆಂಗೋಲ್ ಮೇಲೆ ದಾಳಿ ಮತ್ತು ನಿಂದನೆ ಮಾಡಿದೆ. ಸೆಂಗೋಲ್‌ನ ಈ ಅವಮಾನವನ್ನು ಅವರು ಬೆಂಬಲಿಸುತ್ತಾರೆಯೇ ಎಂಬುದನ್ನು ಡಿಎಂಕೆ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Hijab Ban: ತರಗತಿಯಲ್ಲಿ ಹಿಜಾಬ್‌, ಬುರ್ಖಾ ನಿಷೇಧ; ಕಾಲೇಜು ಆದೇಶ ಎತ್ತಿಹಿಡಿದ ಹೈಕೋರ್ಟ್‌

Continue Reading
Advertisement
IND vs ENG Semi Final
ಕ್ರೀಡೆ53 mins ago

IND vs ENG Semi Final: ಇಂಗ್ಲೆಂಡ್​ ಮಣಿಸಿ 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಭಾರತ

Abhyas Trial
ದೇಶ3 hours ago

Abhyas Trial: ದೇಶದ ಕ್ಷಿಪಣಿ ವ್ಯವಸ್ಥೆಗೆ ಬಲ ತುಂಬುವ ‘ಅಭ್ಯಾಸ್’‌ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿ

Congress Protest
ಕರ್ನಾಟಕ3 hours ago

ಹಾಲು, ಪೆಟ್ರೋಲ್‌ ಬೆಲೆ ಏರಿಸಿ, ಎಸಿ ಬಸ್‌ನಲ್ಲಿ ಪ್ರತಿಭಟನೆಗೆ ಹೊರಟ ಕಾಂಗ್ರೆಸ್‌ ಹಣದ ಮೂಲ ಏನು? ಬಿಜೆಪಿ ಪ್ರಶ್ನೆ

NEET Aspirant
ದೇಶ4 hours ago

NEET Aspirant: ನೀಟ್‌ ಅಕ್ರಮ ಬಯಲಾದ ಬೆನ್ನಲ್ಲೇ 17 ವರ್ಷದ NEET ಅಭ್ಯರ್ಥಿ ಆತ್ಮಹತ್ಯೆ; ಸಾವಿಗೆ ಯಾರು ಹೊಣೆ?

Tata Motors has taken the lead in the SUV market with Nexon Punch
ಕರ್ನಾಟಕ4 hours ago

Tata Motors: ನೆಕ್ಸಾನ್, ಪಂಚ್‌ ಮೂಲಕ ಎಸ್‌ಯುವಿ ಮಾರುಕಟ್ಟೆಯಲ್ಲಿ ಮುನ್ನಡೆ ಸಾಧಿಸಿದ ಟಾಟಾ ಮೋಟಾರ್ಸ್

Rohit Sharma
ಕ್ರೀಡೆ4 hours ago

Rohit Sharma: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್

virat kohli
ಕ್ರೀಡೆ4 hours ago

Virat Kohli: ಮೊದಲ ಬಾರಿಗೆ ಸೆಮಿಫೈನಲ್​ನಲ್ಲಿ ಸಿಂಗಲ್​ ಡಿಜಿಟ್​ಗೆ ಔಟ್​ ಆದ​ ಕೊಹ್ಲಿ; ಸಮಾಧಾನಪಡಿಸಿದ ಕೋಚ್​

DCM DK Shivakumar latest statement about CM change issue
ಪ್ರಮುಖ ಸುದ್ದಿ5 hours ago

DK Shivakumar: ಸಿಎಂ ಬದಲಾವಣೆ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಡಿ.ಕೆ. ಶಿವಕುಮಾರ್

roopantara Movie First Look Poster released
ಕರ್ನಾಟಕ5 hours ago

Kannada New Movie: ‘ರೂಪಾಂತರ’ಗೊಂಡ ರಾಜ್ ಬಿ. ಶೆಟ್ಟಿ! ಮತ್ತೊಂದು ವಿಭಿನ್ನ ಚಿತ್ರ

Hosur Airport
ಪ್ರಮುಖ ಸುದ್ದಿ5 hours ago

Hosur Airport: ಬೆಂಗಳೂರಿನಿಂದ ಕೇವಲ 40 ಕಿ.ಮೀ ದೂರದ ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ7 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ9 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು10 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ14 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ7 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 weeks ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌