Ram Janmabhoomi: ಅಯೋಧ್ಯೆ ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿ, ಖರ್ಗೆ ಹೋಗದಿರುವುದೇ ಸರಿ: ಸಿಎಂ - Vistara News

ಕರ್ನಾಟಕ

Ram Janmabhoomi: ಅಯೋಧ್ಯೆ ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿ, ಖರ್ಗೆ ಹೋಗದಿರುವುದೇ ಸರಿ: ಸಿಎಂ

Ram Janmabhoomi: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ಅಧೀರ್ ಚೌದರಿ ತೀರ್ಮಾನ ಸರಿಯಾಗಿದೆ. ಇದನ್ನು ನಾನು ಬೆಂಬಲಿಸುತ್ತೇನೆ‌ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

CM Siddaramaiah and Mallikarjun Kharge and Sonia Gandhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಯೋಧ್ಯೆ ರಾಮಜನ್ಮಭೂಮಿಯ (Ram Janmabhoomi) ರಾಮ ಮಂದಿರದಲ್ಲಿ (Ram Mandir) ಜನವರಿ 22ರಂದು ಶ್ರೀರಾಮನ ಮೂರ್ತಿ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ನಾಯಕರು (Congress leaders) ಭಾಗವಹಿಸದೇ ಇರುವ ನಿರ್ಧಾರಕ್ಕೆ ಬಂದಿರುವುದನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ “ರಾಮ”ನ ಯುದ್ಧ ಮುಂದುವರಿದಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC president Mallikarjun Kharge), ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ (Sonia Gandhi) ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ಅಧೀರ್ ಚೌದರಿ ತೀರ್ಮಾನ ಸರಿಯಾಗಿದೆ. ಇದನ್ನು ನಾನು ಬೆಂಬಲಿಸುತ್ತೇನೆ‌ ಎಂದು ಸಿಎಂ ಸಿದ್ದರಾಮಯ್ಯ ಅವರು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕುವ ಮೂಲಕ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಪೋಸ್ಟ್‌ನಲ್ಲೇನಿದೆ?

“ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮ್ಮ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಅಧೀರ್ ಚೌದರಿ ಅವರ ತೀರ್ಮಾನ ಸರಿಯಾಗಿದೆ. ಇದನ್ನು ನಾನು ಬೆಂಬಲಿಸುತ್ತೇನೆ.

ಜಾತಿ, ಧರ್ಮ, ಪಕ್ಷ-ಪಂಥವನ್ನು ಮೀರಿ ಸರ್ವರನ್ನೂ ಒಳಗೊಂಡು ಭಕ್ತಿ ಮತ್ತು ಗೌರವದಿಂದ ನಡೆಸಬೇಕಾದ ಒಂದು ಧಾರ್ಮಿಕ ಕಾರ್ಯಕ್ರಮವನ್ನು ಒಂದು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಘ ಪರಿವಾರದ ನಾಯಕರು ಶ್ರೀರಾಮನಿಗೆ ಹಾಗೂ ದೇಶದ 140 ಕೋಟಿ ಜನತೆಗೆ ಅಗೌರವವನ್ನುಂಟು ಮಾಡಿದ್ದಾರೆ. ಶ್ರದ್ದಾಪೂರ್ವಕವಾಗಿ ನಡೆಸಬೇಕಾಗಿದ್ದ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯ ಪ್ರಚಾರದ ಅಭಿಯಾನವನ್ನಾಗಿ ಮಾಡಿದ್ದು ಸಮಸ್ತ ಹಿಂದು ಬಾಂಧವರಿಗೆ ಮಾಡಿರುವ ದ್ರೋಹವಾಗಿದೆ.

ಹಿಂದು ಧರ್ಮದ ಸಂಸ್ಕೃತಿ, ಆಚಾರ-ವಿಚಾರಗಳ ಬಗ್ಗೆ ಪ್ರತಿನಿತ್ಯ ಉಪದೇಶ ನೀಡುವ ಬಿಜೆಪಿ ಮತ್ತು ಆರ್.ಎಸ್‌.ಎಸ್ ನಾಯಕರು ಅಪೂರ್ಣಗೊಂಡಿರುವ ಶ್ರೀರಾಮನ ದೇವಸ್ಥಾನವನ್ನು ಉದ್ಘಾಟಿಸಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಡೆಯ ಬಗ್ಗೆ ಮೌನವಾಗಿರುವುದು ಇವರೆಲ್ಲರ ಪೊಳ್ಳು ಹಿಂದುತ್ವದ ಮುಖವಾಡವನ್ನು ಬಯಲುಗೊಳಿಸಿದೆ.

ರಾಮಜನ್ಮಭೂಮಿ ವಿವಾದ ಶುರುವಾದ ದಿನದಿಂದ ಕಾಂಗ್ರೆಸ್ ಪಕ್ಷ ತನ್ನ ನಿಲುವಿಗೆ ಬದ್ಧವಾಗಿ ಉಳಿದಿದೆ. ನ್ಯಾಯಾಲಯದ ತೀರ್ಪಿಗೆ ನಾವು ತಲೆಬಾಗುತ್ತೇವೆ ಎಂಬ ನಮ್ಮ ನಿಲುವಿನಂತೆ ರಾಮಮಂದಿರ ನಿರ್ಮಾಣಕ್ಕೆ ನಮ್ಮ ಸಂಪೂರ್ಣ ಬೆಂಬಲ ನೀಡಿದ್ದೆವು. ಇದರ ಬಗ್ಗೆ ನಮ್ಮಲ್ಲಿ ಯಾವುದೇ ತಕರಾರಿಲ್ಲ. ಮುಸ್ಲಿಂ ಬಾಂಧವರು ಕೂಡಾ ನ್ಯಾಯಾಲಯದ ತೀರ್ಪನ್ನು ಒಪ್ಪಿಕೊಂಡು ನ್ಯಾಯಾಂಗದ ಮೇಲಿನ ತಮ್ಮ ನಿಷ್ಠೆಯನ್ನು ಸಾಬೀತುಪಡಿಸಿದ್ದಾರೆ.

ಹಿಪಾಕ್ರಟಿಕ್ ನಡವಳಿಕೆಗೆ ಸಾಕ್ಷಿ

ಆದರೆ, ರಾಮಜನ್ಮಭೂಮಿ ವಿವಾದ ಧಾರ್ಮಿಕ ಶ್ರದ್ಧೆಯ ಪ್ರಶ್ನೆ, ಅದು ನ್ಯಾಯಾಲಯದಲ್ಲಿ ತೀರ್ಮಾನ ಮಾಡುವಂತಹದ್ದಲ್ಲ ಎಂದು ಹೇಳಿಕೊಂಡು ಬಂದಿದ್ದ ಬಿಜೆಪಿ ಮತ್ತು ಆರ್.ಎಸ್.ಎಸ್, ವಿಶ್ವ ಹಿಂದು ಪರಿಷತ್ ಮೊದಲಾದ ಸಂಘಟನೆಗಳು ಸುಪ್ರೀಂ ಕೋರ್ಟ್ ತೀರ್ಪು ತಮ್ಮ ಪರವಾಗಿ ಹೊರಬಿದ್ದ ಕೂಡಲೇ ಅದನ್ನು ಒಪ್ಪಿಕೊಂಡಿರುವುದು ಈ ಸಂಘಟನೆಗಳ ನಾಯಕರ ಹಿಪಾಕ್ರಟಿಕ್ ನಡವಳಿಕೆಗೆ ಸಾಕ್ಷಿ.

ಹಿಂದುಗಳನ್ನು ಒಡೆಯುವ ಕಾರ್ಯಕ್ರಮ

ರಾಮಮಂದಿರದಲ್ಲಿ ಶೈವರು-ಶಾಕ್ತರಿಗೆ ಅಧಿಕಾರ ಇಲ್ಲ ಎಂಬ ರಾಮಮಂದಿರ ಟ್ರಸ್ಟ್‌ನ ಕಾರ್ಯದರ್ಶಿಯವರ ಹೇಳಿಕೆ ವಿವಾದ ಸೃಷ್ಟಿಸಿದೆ. ಇದು ನಿಜವೆಂದಾದರೆ ಇದು ಸಮಸ್ತ ಶೈವ ಆರಾಧಕರಿಗೆ ಮಾಡಿರುವ ಅವಮಾನವಾಗಿದೆ. ಇದೇ ರೀತಿ ರಾಮಮಂದಿರವನ್ನು ರಾಜಕೀಯಕ್ಕಾಗಿ ದುರುಪಯೋಗಗೊಳಿಸುತ್ತಿರುವುದನ್ನು ವಿರೋಧಿಸಿ ನಾಲ್ವರು ಶಂಕರಾಚಾರ್ಯರು ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಹೇಳಿರುವುದು ವರದಿಯಾಗಿದೆ. ಸಮಸ್ತ ಹಿಂದುಗಳನ್ನು ಒಗ್ಗೂಡಿಸುವ ಕಾರ್ಯಕ್ರಮವಾಗಬೇಕಾಗಿದ್ದ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮ ಬಿಜೆಪಿಯ ರಾಜಕೀಯದಿಂದಾಗಿ ಹಿಂದುಗಳನ್ನು ಒಡೆಯುವ ಕಾರ್ಯಕ್ರಮವಾಗಿರುವುದು ದುರಂತ.

ಚುನಾವಣೆಯನ್ನು ಗೆಲ್ಲುವ ಆತ್ಮವಿಶ್ವಾಸ ಇಲ್ಲ

ಇನ್ನೇನು ಹತ್ತು ವರ್ಷಗಳ ಆಡಳಿತವನ್ನು ಪೂರ್ಣಗೊಳಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ಸಾಧನೆಯನ್ನು ಮತದಾರರ ಮುಂದಿಟ್ಟು ಚುನಾವಣೆಯನ್ನು ಗೆಲ್ಲುವ ಆತ್ಮವಿಶ್ವಾಸ ಇಲ್ಲ. ಇದಕ್ಕಾಗಿ ಲೋಕಸಭಾ ಚುನಾವಣೆಯ ಕಾಲದಲ್ಲಿಯೇ ಅವಸರದಿಂದ ಅಪೂರ್ಣ ಸ್ಥಿತಿಯಲ್ಲಿರುವ ರಾಮಮಂದಿರವನ್ನು ಉದ್ಘಾಟಿಸಿ ಈ ಮೂಲಕ ಹಿಂದುತ್ವದ ಅಲೆಯನ್ನು ಬಡಿದೆಬ್ಬಿಸಿ ಅದರ ಮರೆಯಲ್ಲಿ ತಮ್ಮ ವೈಫಲ್ಯವನ್ನು ಮುಚ್ಚಿಹಾಕುವ ಪ್ರಯತ್ನ ನಡೆಸಿದ್ದಾರೆ.

ಡೋಂಗಿ ಹಿಂದುತ್ವದ ಜಾಲಕ್ಕೆ ಖಂಡಿತ ಬಲಿಯಾಗುವುದಿಲ್ಲ

ಕಳೆದ 30-35 ವರ್ಷಗಳಿಂದ ಬಿಜೆಪಿ ಮತ್ತು ಸಂಘ ಪರಿವಾರ ರಾಮನ ಹೆಸರಲ್ಲಿ ನಡೆಸಿಕೊಂಡು ಬಂದಿರುವ ರಾಜಕೀಯವನ್ನು ಗಂಭೀರವಾಗಿ ಗಮನಿಸುತ್ತಾ ಬಂದಿರುವ ದೇಶದ ಜನತೆ ಈ ಬಾರಿ ಇಂತಹ ಡೋಂಗಿ ಹಿಂದುತ್ವದ ಜಾಲಕ್ಕೆ ಖಂಡಿತ ಬಲಿಯಾಗುವುದಿಲ್ಲ ಎಂಬ ವಿಶ್ವಾಸ ನನಗಿದೆ. ಈಗಾಗಲೇ ಜನ ಇಟ್ಟಿಗೆಯ ಹೆಸರಲ್ಲಿ ಸಂಗ್ರಹಿಸಿರುವ ದೇಣಿಗೆಯ ಲೆಕ್ಕವನ್ನು ಕೇಳತೊಡಗಿದ್ದಾರೆ.

ಡೋಂಗಿ ಹಿಂದುತ್ವವನ್ನು ನಾವು ವಿರೋಧಿಸುತ್ತಲೇ ಇರುತ್ತೇವೆ

ನಾವು ಹಿಂದು ಧರ್ಮದ ವಿರೋಧಿಗಳಲ್ಲ, ಧರ್ಮದ ಹೆಸರಲ್ಲಿ ನಡೆಸಲಾಗುವ ಅಸ್ಪ್ರಶ್ಯತೆ, ಜಾತೀಯತೆ, ಅಂಧಶ್ರದ್ದೆ, ಕಂದಾಚಾರಗಳನ್ನು ವಿರೋಧಿಸುತ್ತೇವೆ. ಧರ್ಮವನ್ನು ರಾಜಕಾರಣಕ್ಕೆ ಬಳಸುವುದರ ಬಗ್ಗೆ ನಮ್ಮ ಸಂಪೂರ್ಣ ವಿರೋಧ ಇದೆ. ಮಹಾತ್ಮ ಗಾಂಧೀಜಿ, ಸ್ವಾಮಿ ವಿವೇಕಾನಂದ, ಕನಕದಾಸ, ನಾರಾಯಣ ಗುರು, ಕುವೆಂಪು ಅವರು ಸೇರಿದಂತೆ ದೇಶದ ಅನೇಕಾನೇಕ ಮಹನೀಯರು ಆಚರಿಸುತ್ತಾ ಬಂದಿರುವ ಹಿಂದೂ ಧರ್ಮದ ಬಗ್ಗೆ ನಮಗೆ ಯಾವುದೇ ತಕರಾರಿಲ್ಲ. ಆದರೆ, ಧರ್ಮವನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ ಮತ್ತು ಸಂಘ ಪರಿವಾರದ ಡೋಂಗಿ ಹಿಂದುತ್ವವನ್ನು ನಾವು ವಿರೋಧಿಸುತ್ತಲೇ ಇರುತ್ತೇವೆ. ಈ ವಿಷಯದಲ್ಲಿ ನಾವು ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರವನ್ನು ಮಾಡುವುದಿಲ್ಲ.

ಸರ್ವಧರ್ಮ ಸಮಭಾವ ಸಂವಿಧಾನದ ಆಶಯವಾಗಿದೆ

ಜನಪ್ರತಿನಿಧಿಯಾಗಿ ಇಲ್ಲಿಯವರೆಗೆ ನೂರಾರು ದೇವಸ್ಥಾನಗಳ ಪ್ರತಿಷ್ಠಾಪನೆ, ಜೀರ್ಣೋದ್ದಾರದಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ. ನನ್ನ ಊರಿನಲ್ಲಿಯೇ ರಾಮನ ದೇವಸ್ಥಾನವನ್ನು ನಿರ್ಮಾಣ ಮಾಡಿ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿದ್ದೇನೆ. ಇದೇ ರೀತಿ ಮಸೀದಿ-ಚರ್ಚ್‌ಗಳ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೌರವ ಸಲ್ಲಿಸಿದ್ದೇನೆ. ಸರ್ವಧರ್ಮ ಸಮಭಾವ ಸಂವಿಧಾನದ ಆಶಯವಾಗಿದೆ. ಅದಕ್ಕೆ ನಾವೆಲ್ಲರೂ ಬದ್ಧರಾಗಲೇ ಬೇಕಾಗಿದೆ.

ಇದನ್ನೂ ಓದಿ: Ram Mandir: ಅಯೋಧ್ಯೆ ಯಾತ್ರೆ ಇನ್ನು ಸುಲಭ; 20 ಸಾವಿರ ಮಂದಿಯ ಉಚಿತ ಪ್ರಯಾಣಕ್ಕೆ ಸರ್ಕಾರದಿಂದ ವ್ಯವಸ್ಥೆ

ಸಂವಿಧಾನದ ಆಶಯಕ್ಕೆ ನಾನು ಮತ್ತು ನಮ್ಮ ಪಕ್ಷ ಬದ್ಧ

ಶ್ರೀರಾಮನ ಮೇಲೆ ನಂಬಿಕೆ ಮತ್ತು ಭಕ್ತಿ ಇದ್ದವರು ಪ್ರತಿದಿನ ಆತನನ್ನು ಪೂಜಿಸುವುದು ಹೇಗೆ ಧಾರ್ಮಿಕ ಕರ್ತವ್ಯವೋ, ಅದೇ ರೀತಿ ಶ್ರೀರಾಮನನ್ನು ರಾಜಕೀಯಕ್ಕೆ ಬಳಸುವವರ ವಿರುದ್ಧ ದನಿ ಎತ್ತುವುದು ಕೂಡಾ ಅಷ್ಟೇ ಪವಿತ್ರವಾದ ಧಾರ್ಮಿಕ ಕರ್ತವ್ಯವಾಗಿದೆ. ಯಾವ ಧರ್ಮ ಕೂಡಾ ಇನ್ನೊಂದು ಧರ್ಮವನ್ನು ದ್ವೇಷಿಸುವುದಿಲ್ಲ, ನಿರಾಕರಿಸುವುದಿಲ್ಲ. ಸಮಾಜವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಮಾಡುವ ಸಂವಿಧಾನದ ಆಶಯಕ್ಕೆ ನಾನು ಮತ್ತು ನಮ್ಮ ಪಕ್ಷ ಬದ್ಧ” ಎಂದು ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Gode Bengaluru : ಬೆಂಗಳೂರು ಗೋಡೆಗಳ ಮೇಲೆ ಚಿತ್ತಾರ; ʻಗೋಡೆ ಬೆಂಗಳೂರುʼ ಘೋಷಿಸಿದ ಅನ್‌ಬಾಕ್ಸಿಂಗ್‌

BMRCL : ಬಿಎಂಆರ್‌ಸಿಎಲ್‌ ಸಹಯೋಗದೊಂದಿಗೆ ಬೆಂಗಳೂರಿನ ಗೋಡೆಗಳ ಮೇಲೆ ಚಿತ್ರಕಲೆ ಬಿಡಿಸುವ “ಗೋಡೆ ಬೆಂಗಳೂರು” (Gode Bengaluru) ಚಟುವಟಿಕೆಯನ್ನು ಅನ್‌ಬಾಕ್ಸಿಂಗ್‌ ಬೆಂಗಳೂರು ಘೋಷಿಸಿದೆ.

VISTARANEWS.COM


on

By

Gode Bengaluru
Koo

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಗೋಡೆಗಳನ್ನು ಚಿತ್ರಗಳಿಂದ ಕಂಗೊಳಿಸುವಂತೆ ಮಾಡುವ ಉದ್ದೇಶದಿಂದ ಅನ್‌ಬಾಕ್ಸಿಂಗ್‌ ಬೆಂಗಳೂರು ಫೌಂಡೇಷನ್‌, ಬಿಎಂಆರ್‌ಸಿಎಲ್‌ ಸಹಯೋಗದೊಂದಿಗೆ “ಗೋಡೆ ಬೆಂಗಳೂರು” ಶೀರ್ಷಿಕೆಯಡಿ (Gode Bengaluru) ಗೋಡೆಗಳ ಮೇಲೆ ಚಿತ್ರಬಿಡುಸುವ ಉಪಕ್ರಮವನ್ನು ಘೋಷಿಸಿದೆ.

ಬೆಂಗಳೂರಿನಾದ್ಯಂತ ಇರುವ ಗೋಡೆಗಳ ಮೇಲೆ ನಮ್ಮ ಕಲೆ, ಸಂಸ್ಕೃತಿ, ಆಚರಣೆ ಇತ್ಯಾದಿ ಸೊಬಗನ್ನು ಬಿಂಬಿಸುವ ಚಿತ್ರಗಳನ್ನು ಬಿಡಿಸುವ ಚಟುವಟಿಕೆ ನಡೆಸುತ್ತಿದೆ. ಸರ್ಕಾರದ ಸಹಭಾಗಿತ್ವದಲ್ಲಿ ಇದೇ ನವೆಂಬರ್ 30 ರಿಂದ ಡಿಸೆಂಬರ್ 15ರ ವರೆಗೆ “ಬೆಂಗಳೂರು ಹಬ್ಬ”ವನ್ನು ಅದ್ಧೂರಿಯಿಂದ ಅನ್‌ಬಾಕ್ಸಿಂಗ್‌ ಫೌಂಡೇಷನ್‌ ಆಚರಿಸಲು ಸಿದ್ಧತೆ ನಡೆಸುತ್ತಿದೆ.

Gode Bengaluru
Gode Bengaluru

ಇದರ ಭಾಗವಾಗಿ “ಗೋಡೆ ಬೆಂಗಳೂರು” ಚಟುವಟಿಕೆಯನ್ನು ಪ್ರಾರಂಭಿಸಲಾಗುತ್ತಿದೆ. ಬಿಎಂಆರ್‌ಸಿಎಲ್‌ನ ಸಹಯೋಗದಿಂದಿಗೆ “ಗೋಡೆ ಬೆಂಗಳೂರು” ಚಟುವಟಿಕೆ ನಡೆಯಲಿದ್ದು, ನಮ್ಮ ಸಂಸ್ಕೃತಿ ಹಾಗೂ ಕ್ರಿಯಾತ್ಮಕ ಮನೋಭಾವದ ಚಿತ್ರಗಳನ್ನು ಗೋಡೆಗಳ ಮೇಲೆ ಚಿತ್ರಿಸಿ ನಮ್ಮ ನಗರವನ್ನು ಸುಂದವಾಗಿಸಲು ಪ್ರಯತ್ನಿಸಲಾಗುತ್ತಿದೆ. ಈ ಉಪಕ್ರಮವು ಮೆಟ್ರೋ ನಿಲ್ದಾಣಗಳು, ನಗರದ ಪ್ರಮುಖ ಗೋಡೆಗಳ ಮೇಲೆ ಚಿತ್ರಿಸಲಾಗುತ್ತದೆ. ಬೆಂಗಳೂರಿನ ನಿವಾಸಿಗಳು ಹಾಗೂ ಬೆಂಗಳೂರಿಗೆ ಭೇಟಿ ನೀಡುವ ಪ್ರವಾಸಿಗರು ಈ ಸುಂದರ ಕಲೆಗಳ ದೃಶ್ಯವನ್ನು ಕಣ್ತುಂಬಿಕೊಳ್ಳಬಹುದು.

ಈಗಾಗಲೇ ಆಗಸ್ಟ್ ತಿಂಗಳಲ್ಲೇ “ ಗೋಡೆ ಬೆಂಗಳೂರು” ಚಟುವಟಿಕೆಗೆ ಕಲಾವಿದರಿಂದ ಅರ್ಜಿ ಆಹ್ವಾನಿಸಿ, ಹತ್ತು ಪ್ರತಿಭಾವಂತ ಕಲಾವಿದರನ್ನು ಆಯ್ಕೆ ಮಾಡಲಾಗಿದೆ. ಈ ಅರ್ಜಿಗಳನ್ನು 1ಶಾಂತಿರೋಡ್ ಸ್ಟುಡಿಯೋ/ಗ್ಯಾಲರಿಯ ಸಂಸ್ಥಾಪಕ, ದೃಶ್ಯ ಕಲಾವಿದ, ಕಲಾ ಇತಿಹಾಸಕಾರ ಮತ್ತು ಮೇಲ್ವಿಚಾರಕರಾದ ಸುರೇಶ್ ಜಯರಾಮ್, ಕಲಾವಿದೆ ಅರ್ಚನಾ ಹಂಡೆ, ಬಹುಶಿಸ್ತೀಯ ಕಲಾವಿದ ಮತ್ತು ಚಿತ್ರಕಲೆ, ಶಿಲ್ಪಕಲೆ ಕಲಾವಿದಾರದ ರವಿಕುಮಾರ್ ಕಾಶಿ ಈ ತೀರ್ಪುಗಾರರನ್ನು ಒಳಗೊಂಡ ಸ್ವತಂತ್ರ ಸಮಿತಿಯು ಪರಿಶೀಲನೆ ನಡೆಸಿ ಕಲಾವಿದರನ್ನು ಆಯ್ಕೆ ಮಾಡಿದೆ.

ಆಯ್ಕೆಯಾಗಿರುವ ಹತ್ತು ಪ್ರತಿಭಾವಂತ ಕಲಾವಿದರು ಬೆಂಗಳೂರಿನ ಗೋಡೆಗಳ ಮೇಲೆ ಸುಂದರ ಕಲಾಕೃತಿಗಳನ್ನು ರಚಿಸಲಿದ್ದಾರೆ. ಈ ಕಲಾವಿದರು ‘ಬೆಂಗಳೂರು ವರ್ಣಗಳು’ ಎಂಬ ವಿಷಯದ ಸುತ್ತ ಚಿತ್ರಗಳನ್ನು ರಚಿಸಲಿದ್ದಾರೆ. ಇದು ನಗರದ ಸಾರವನ್ನು ಸೆರೆಹಿಡಿಯುವ ಪ್ರಯತ್ನವಾಗಿದೆ. ನಮ್ಮ ನಗರದ ಇತಿಹಾಸ, ಸಂಸ್ಕೃತಿ, ಹಬ್ಬಗಳು, ಸಸ್ಯ ಮತ್ತು ಪ್ರಾಣಿಗಳು ಮತ್ತು ಬೆಂಗಳೂರನ್ನು ಅನನ್ಯವಾಗಿಸುವ ದೈನಂದಿನ ಮೋಡಿ ಸೇರಿದಂತೆ ಹಲವು ಪ್ರಮುಖ ಆಕರ್ಷಣೆಗಳು ಒಳಗೊಂಡರಲಿದೆ.’

ಗೋಡೆ ಬೆಂಗಳೂರಿನ ಮುಖ್ಯ ಕ್ಯುರೇಟರ್, ಕಾಮಿನಿ ಸಾಹ್ನಿ ಮಾತನಾಡಿ, ಈ ವಿನೂತನ ಉಪಕ್ರಮವು ನಮ್ಮ ಹೆಮ್ಮೆಯ ಕಲೆ ಮತ್ತು ಸಾಂಸ್ಕೃತಿಕ ಮಹತ್ವವನ್ನು ಎತ್ತಿ ತೋರಿಸಲಿದೆ. “ಗೋಡೆ ಬೆಂಗಳೂರು” ಶೀರ್ಷಿಕೆಯಲ್ಲಿ ಮೂಡಿ ಬರುವ ಗೋಡೆ ಚಿತ್ರಗಳು ಬೆಂಗಳೂರಿನ ಜನರ ಮನಸ್ಸಿನಲ್ಲಿ ಅವಿನಾಭಾವ ಸೆಳೆತ ಸೃಷ್ಟಿಸುವ ಪ್ರಯತ್ನ ಮಾಡಲಿದೆ..
ಈ ಗೋಡೆ ಚಿತ್ರಗಳು ನಮ್ಮ ಸಮುದಾಯ ಎತ್ತ ಸಾಗುತ್ತಿದೆ, ಸಂಸ್ಕೃತಿಯ ಮಹತ್ವ ಇತ್ಯಾದಿ ಅಂಶಗಳನ್ನು ಜನರ ನಡುವೆ ಸಂಭಾಷಣಾ ಕ್ಯಾನ್ವಾಸ್ ಆಗಿ ಕಾರ್ಯನಿರ್ವಹಿಸಬೇಕೆಂದು ನಾವು ಬಯಸುತ್ತೇವೆ. ಪ್ರತಿಯೊಂದು ಕಲೆಯು ಒಂದೊಂದು ವಿಶಿಷ್ಟವಾದ ಕಥೆಯನ್ನು ಹೇಳುತ್ತವೆ, ಈ ಉಪಕ್ರಮವು ಅನುಭವಿ ಮತ್ತು ಉದಯೋನ್ಮುಖ ಕಲಾವಿದರಿಗೆ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ, ಇದು ಬೆಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ತಮ್ಮ ಛಾಪು ಮೂಡಿಸಲು ಅನುವು ಮಾಡಿಕೊಡುತ್ತದೆ.

ಬೆಂಗಳೂರು ಹಬ್ಬಾ ಮುಖ್ಯ ಸಂಚಾಲಕ ರವಿಚಂದರ್ ವಿ ಅವರು, ಈ ಉಪಕ್ರಮದ ಬಗ್ಗೆ ಹರ್ಷ ವ್ಯಕ್ತಪಡಿಸಿದರು, “ಗೋಡೆ ಬೆಂಗಳೂರು” ಕೇವಲ ಕಲೆಯನ್ನು ಚಿತ್ರಿಸುವುದಷ್ಟೇ ಅಲ್ಲದೆ, ಇದು ಬೆಂಗಳೂರಿನ ಜನರ ನಡುವೆ ಅವಿನಾಭಾವ ಸಂಬಂಧ ಬೆಸೆಯಲಿದೆ.ಈ ಉಪಕ್ರಮದ ಮೂಲಕ, ನಾವು ನಗರದ ಚೈತನ್ಯ, ವೈವಿಧ್ಯತೆ ಮತ್ತು ಅದನ್ನು ವ್ಯಾಖ್ಯಾನಿಸುವ ನಾವೀನ್ಯತೆಯ ಮನೋಭಾವವನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದ್ದೇವೆ. ಕಲೆಯು ಜನರನ್ನು ಒಟ್ಟುಗೂಡಿಸುವ ಮತ್ತು ಸಂಭಾಷಣೆಗಳನ್ನು ಪ್ರೇರೇಪಿಸುವ ಶಕ್ತಿಯನ್ನು ಹೊಂದಿದ್ದು, ಇದನ್ನು ಗೋಡೆ ಬೆಂಗಳೂರಿನ ಮೂಲಕ ಸಾಕಾರಗೊಳಿಸಲಿದ್ದೇವೆ ಎಂದರು.

ಅನ್‌ಬಾಕ್ಸಿಂಗ್ ಬೆಂಗಳೂರು ವತಿಯಿಂದ ಇದೇ ನವೆಂಬರ್‌ ತಿಂಗಳಲ್ಲಿ ಆಚರಿಸಲಾಗುತ್ತಿರುವ “ಬೆಂಗಳೂರು ಹಬ್ಬ”ದ ಮುನ್ನ ವಾರದಲ್ಲಿ “ಗೋಡೆ ಬೆಂಗಳೂರು” ಮೂಲಕ ಗೋಡೆಗಳ ಮೇಲೆ ಕಲಾಕೃತಿಗಳು ಲೈವ್‌ ಇನ್‌ಸ್ಟಾಲ್‌ ಆಗಲಿವೆ. ಈ ಅದ್ಭುತ ಕಲಾಕೃತಿಗಳನ್ನು ಬೆಂಗಳೂರಿಗರು ಕಣ್ತುಂಬಿಕೊಳ್ಳಬಹುದು.

ಬೆಂಗಳೂರು ಹಬ್ಬ 2024

ಬೆಂಗಳೂರು ಹಬ್ಬ ಸರ್ಕಾರಿ ಬೆಂಬಲಿತ, ನಾಗರಿಕ-ಆಧಾರಿತ ಉತ್ಸವವಾಗಿದ್ದು, ಬೆಂಗಳೂರಿಗರಿಗಾಗಿ ಆಚರಿಸುತ್ತದೆ. ಉತ್ಸವದ ಎರಡನೇ ಆವೃತ್ತಿಯು ನವೆಂಬರ್ 30 ರಿಂದ ಡಿಸೆಂಬರ್ 15, 2024 ರವರೆಗೆ ನಡೆಯಲಿದೆ. ಬೆಂಗಳೂರು ಹಬ್ಬವನ್ನು ಅನ್‌ಬಾಕ್ಸಿಂಗ್‌ ಬಿಎಲ್‌ಆರ್ ಫೌಂಡೇಶನ್ ಆಯೋಜಿಸುತ್ತಿದೆ. ಇದು ಲಾಭೋದ್ದೇಶವಿಲ್ಲದ ವೇದಿಕೆ ಆಗಿದ್ದು, ಜನಸಾಮ್ಯರನ್ನು ಸಕ್ರಿಯಗೊಳಿಸುವ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದೆ. ಬೆಂಗಳೂರಿನ ಪ್ರಯಾಣವನ್ನು ಜಾಗತಿಕ ಟೆಕ್ ಹಬ್ ಮತ್ತು ಸಾಂಸ್ಕೃತಿಕ ನಗರಿಯನ್ನಾಗಿ ಆಚರಿಸುತ್ತದೆ. ಬೆಂಗಳೂರು ಹಬ್ಬ ಬೆರಗುಗೊಳಿಸುವ ಪ್ರದರ್ಶನಗಳು ಮತ್ತು ಕಲಾತ್ಮಕ ಪ್ರದರ್ಶನಗಳು ಮತ್ತು ತಲ್ಲೀನಗೊಳಿಸುವ ಅನುಭವಗಳಿಂದ ನಗರದ ರೋಮಾಂಚಕ ಸಂಸ್ಕೃತಿಯನ್ನು ಆಚರಿಸುತ್ತದೆ.

Continue Reading

ದೇಶ

Pralhad Joshi : ನನಗೆ ಸಹೋದರಿಯೇ ಇಲ್ಲ! ಗೋಪಾಲ್ ಜೋಶಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ, ತಪ್ಪು ಮಾಡಿದ್ದರೆ ಕಾನೂನು ಕ್ರಮವಾಗಲಿ- ಪ್ರಲ್ಹಾದ ಜೋಶಿ

Pralhad Joshi : ನನಗೆ ಸಹೋದರಿಯೇ ಇಲ್ಲ. ನನ್ನ ಸಹೋದರ ಗೋಪಾಲ್ ಜೋಶಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ, ತಪ್ಪು ಮಾಡಿದ್ದರೆ ಕಾನೂನು ಕ್ರಮವಾಗಲಿ ಎಂದು ಪ್ರಲ್ಹಾದ ಜೋಶಿ ತಿಳಿಸಿದರು.

VISTARANEWS.COM


on

By

Pralhad Joshi
Koo

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ (Pralhad Joshi) ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ, ಬೆಂಗಳೂರಿನಲ್ಲಿ ದಾಖಲಾಗಿರುವ ಬಿಜೆಪಿ ಟಿಕೆಟ್ ವಂಚನೆ ಪ್ರಕರಣದ ಬಗ್ಗೆ ಹೀಗೆ ಸ್ಪಷ್ಟನೆ ನೀಡಿದರು.

ಮೊದಲನೆಯದಾಗಿ ನನಗೆ ಯಾರೂ ಸಹೋದರಿ ಇಲ್ಲ. ಇನ್ನು, ನನ್ನ ತಾಯಿಗೆ ಗೋಪಾಲ್ ಜೋಶಿ ಸೇರಿ ನಾಲ್ವರು ಮಕ್ಕಳು. ಆದರೆ, ಗೋಪಾಲ್ ಜೋಶಿ ಅವರೊಂದಿಗೆ ಕಳೆದ 32 ವರ್ಷಗಳಿಂದ ತಮ್ಮ ಸಂಪರ್ಕ, ಸಂಬಂಧವಿಲ್ಲ ಎಂದು ಆರೋಪವನ್ನು ತಳ್ಳಿ ಹಾಕಿದರು. ಗೋಪಾಲ್ ಜೋಶಿ ಮಾತ್ರವಲ್ಲ ಯಾರೇ ತಮ್ಮ ಕೆಲಸ ಕಾರ್ಯಗಳಿಗೆ ನನ್ನ ಹೆಸರು ದುರುಪಯೋಗ ಪಡಿಸಿಕೊಳ್ಳುತ್ತಿದ್ದರೆ ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರಲ್ಹಾದ ಜೋಶಿ ಪುನರುಚ್ಚರಿಸಿದರು.

I have no role in the Gopal Joshi case. If you have done anything wrong, you should take legal action  Pralhad Joshi
I have no role in the Gopal Joshi case. If you have done anything wrong, you should take legal action Pralhad Joshi

ಯಾರೊಂದಿಗೂ ನನ್ನ ಹೆಸರು ಉಲ್ಲೇಖಿಸದಂತೆ 2013ರಲ್ಲೇ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ ತಡೆಯಾಜ್ಞೆ ನೀಡಿದೆ. ನ್ಯಾಯಾಲದ ಅಫಿಡವಿಟ್ ನಲ್ಲಿ ಅದರ ವಿವರವಿದೆ ಎಂದು ದಾಖಲೆ ಸಮೇತ ಪ್ರಲ್ಹಾದ ಜೋಶಿ ಸ್ಪಷ್ಟನೆ ನೀಡಿದರು . ಇನ್ನು, ಬೆಂಗಳೂರಿನಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ವಿಜಯಲಕ್ಷ್ಮಿ ನನ್ನ ಸಹೋದರಿ ಎಂದು ಉಲ್ಲೇಖಿಸಿದ್ದಾರೆ. ವಾಸ್ತವವಾಗಿ ನನಗೆ ಸಹೋದರಿಯೇ ಇಲ್ಲ. ಇದನ್ನೆಲ್ಲ ನೋಡಿದರೆ ಎಲ್ಲ ಬೋಗಸ್ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ ಎಂದು ಹೇಳಿದರು.

ಗೋಪಾಲ್ ಜೋಶಿ ತಪ್ಪು ಮಾಡಿದ್ದರೆ ಕ್ರಮ ಕೈಗೊಳ್ಳಲಿ

ಈ ಪ್ರಕರಣದಲ್ಲಿ ನನಗೂ, ನನ್ನ ಕುಟುಂಬಕ್ಕೂ ಹಾಗೂ ಬಿಜೆಪಿ ಪಕ್ಷಕ್ಕೂ ಸಹ ಸಂಬಂಧವಿಲ್ಲ. ಗೋಪಾಲ್ ಜೋಶಿ ತಪ್ಪೆಸಗಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಗೋಪಾಲ್ ಜೋಶಿ ಹಣ ಪಡೆದಿದ್ದಾರೋ ಇಲ್ಲವೋ ಗೊತ್ತಿಲ್ಲ. ಇದು ತನಿಖೆಯಿಂದ ಸಾಬೀತಾಗಬೇಕಿದೆ ಅಷ್ಟೇ ಎಂದು ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು.

ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ಅತ್ಯಂತ ಬೌದ್ಧಿಕ ದಿವಾಳಿತನ ಪ್ರದರ್ಶನ ಮಾಡುತ್ತಿದೆ ಎಂದು ಜೋಶಿ ಕಿಡಿ ಕಾರಿದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿಯನ್ನು ಬಂಧಿಸಬೇಕೆನ್ನುವ ಮೂಲಕ ಕಾಂಗ್ರೆಸ್ ಮುಠ್ಠಾಳತನ ತೋರುತ್ತಿದೆ. ಸತ್ಯಾಸತ್ಯತೆ ವಿಮರ್ಶೆ ಮಾಡದೆ ಒಂದು ರೀತಿ ಹುಂಬತನ ಪ್ರದರ್ಶಿಸುತ್ತಿದೆ ಎಂದು ಲೇವಡಿ ಮಾಡಿದರು. ಕಳೆದ 25 ವರ್ಷಗಳಿಂದ ರಾಜಕೀಯ ಜೀವನದಲ್ಲಿ ಇದ್ದೇನೆ. ಒಂದು ಕಾಲದಲ್ಲಿ “ಕೋಲ್ ಎಂದರೆ ಭ್ರಷ್ಟಾಚಾರ, ಹಗರಣದ್ದೇ ಸದ್ದು ಮಾಡುತ್ತಿತ್ತು”. ಇಂಥ ಒಂದು ಖಾತೆ ನಿರ್ವಹಿಸಿದಾಗ್ಯೂ ಯಾವತ್ತೂ ಕೈ ಮಸಿ ಮಾಡಿಕೊಂಡಿಲ್ಲ. ಇಂದಿಗೂ ಶುದ್ಧ ಹಸ್ತನಾಗಿದ್ದೇನೆ ಎಂದು ಸಚಿವ ಪ್ರಲ್ಹಾದ ಜೋಶಿ ಕಾಂಗ್ರೆಸ್ಸಿಗರಿಗೆ ತಿರುಗೇಟು ನೀಡಿದರು.

Continue Reading

ಬೆಂಗಳೂರು

Aplastic anemia : ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ ಆಫ್ರಿಕಾ ಮೂಲದ ಬಾಲಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

Aplastic anemia : ಆಫ್ರಿಕಾ ಮೂಲದ ಬಾಲಕ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ. ಆತನಿಗೆ ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನೀಡಿದೆ.

VISTARANEWS.COM


on

By

African boy successfully undergoes surgery for rare aplastic anemia
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಅಸ್ಥಿಮಜ್ಜೆಯು ರಕ್ತಕಣಗಳನ್ನು ಉತ್ಪಾದಿಸುವಲ್ಲಿ ವಿಫಲವಾಗಿದ್ದ ಕಾರಣ ಅತಿ ವಿರಳ ಕಾಯಿಲೆಯಾದ ಅಪ್ಲ್ಯಾಸ್ಟಿಕ್ ರಕ್ತ ಹೀನತೆಯಿಂದ ಬಳಲುತ್ತಿದ್ದ 16 ವರ್ಷದ ಬಾಲಕನಿಗೆ ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ (Aplastic anemia) ನೀಡಲಾಗಿದೆ.

ಫೋರ್ಟಿಸ್ ಆಸ್ಪತ್ರೆಯ ಮೆಡಿಕಲ್‌ ಮತ್ತು ಹೆಮಟೋ ಆಂಕೊಲಾಜಿಯ ಹಿರಿಯ ನಿರ್ದೇಶಕಿ ಡಾ. ನೀತಿ ರೈಜಾದಾ, ಹೆಮಟೋ ಆಂಕೊಲಾಜಿ ಸಮಾಲೋಚಕ ಡಾ ನಿಶಿತ್ ಓಜ್ಹಾ, ಪೀಡಿಯಾಟ್ರಿಕ್ ಹೆಮಟೋ ಆಂಕೊಲಾಜಿಯ ಸಲಹೆಗಾರರಾದ ಡಾ ತನುಶ್ರೀ ಪಾಲ್ ಅವರ ವೈದ್ಯ ತಂಡ ಈ ಬಾಲಕನಿಗೆ ಸಮಯೋಚಿತವಾಗಿ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಬಾಲಕನ ಜೀವ ಉಳಿಸಲಾಗಿದೆ.

ಈ ಕುರಿತು ಮಾತನಾಡಿದ ಡಾ. ನೀತಿ ರೈಜಾದಾ, ಆಫ್ರೀಕಾ ಮೂಲದ 16 ವರ್ಷದ ಮೈಕೆಲ್ ಎಂಬಾತನಿಗೆ ಕಳೆದ ಎರಡು ತಿಂಗಳಿನಿಂದ ತೀವ್ರವಾದ ಜ್ವರ, ಆಯಾಸ, ದೌರ್ಬಲ್ಯಗಳಿಂದ ಬಳಲುತ್ತಿದ್ದರು. ಅಷ್ಟೇ ಅಲ್ಲದೆ, ಆತನ ಬಲ ಕಿವಿಯಿಂದ ರಕ್ತಸ್ತ್ರಾವವಾಗಲು ಪ್ರಾರಂಭಗೊಂಡಿತ್ತು. ಇದರಿಂದ ಭಯಭೀತಗೊಂಡ ಅವರ ಕುಟುಂಬ ಆಫ್ರಿಕಾದಲ್ಲಿರುವ ಎಲ್ಲಾ ಆಸ್ಪತ್ರೆಗಳಿಗೆ ತೋರಿಸಿದರೂ, ಬಾಲಕನ ಆರೋಗ್ಯ ಸಮಸ್ಯೆ ಏನೆಂದು ತಿಳಿಯಲಿಲ್ಲ. ಹೀಗಾಗಿ ಅವರು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು.

African boy successfully undergoes surgery for rare aplastic anemia
African boy successfully undergoes surgery for rare aplastic anemia

ಬಾಲಕನ ಸಂಪೂರ್ಣ ತಪಾಸಣೆ ಬಳಿಕ, ಆ ಬಾಲಕನಿಗೆ ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆ ಆಗಿರುವುದು ತಿಳಿದುಬಂತು. ಇದು ಅಸ್ಥಿಮಜ್ಜೆಯು ರಕ್ತಕಣಗಳನ್ನು ಉತ್ಪಾದಿಸುವಲ್ಲಿ ವಿಫಲವಾದ ಕಾರಣ ಆ ಬಾಲಕ ರಕ್ತ ಹೀನತೆಗೆ ಒಳಗಾಗಿದ್ದ. ಹೀಗಾಗಿ ಆತನಿಗೆ ಹ್ಯಾಪ್ಲೋಡೆಂಟಿಕಲ್‌ ಸ್ಟೆಮ್‌ ಸೆಲ್‌ ಕಸಿ ಮಾಡುವ ಅವಶ್ಯಕತೆ ಅನಿವಾರ್ಯವಾಗಿತ್ತು. ಆದರೆ, ಬಾಲಕನ ರಕ್ತದ ಗುಂಪಿಗೆ ಹೊಂದುವಂತೆ ಸ್ಟೆಮ್‌ಸೆಲ್‌ ಸಿಗದೇ ಸಮಸ್ಯೆ ಎದುರಾಗಿತ್ತು.

ಈ ಮಧ್ಯೆ ಬಾಲಕನ ಹಿರಿಯ ಸಹೋದರಿಯೇ ತನ್ನ ತಮ್ಮನಿಗೆ ಹ್ಯಾಪ್ಲೊಂಡೆಂಟಿಕಲ್‌ ದಾನ ಮಾಡಲು ಮುಂದಾದರು. ಆದರೆ, ಬಾಲಕನಿಗೆ ಬಲಕಿವಿ ಸೋಂಕಿನಿಂದ ಸೋರುತ್ತಿದ್ದ ಕಾರಣ, ಮೊದಲು ಕಿವಿ ಶಸ್ತ್ರಚಿಕಿತ್ಸೆ ಮುಂದಾಗಬೇಕಾಯಿತು. ಬಾಲಕನ ಬಲ ಕಾರ್ಟಿಕಲ್‌ ಮಾಸ್ಟೊಡೆಕ್ಟಮಿ (ಕಿವಿ ಸುತ್ತ ಇರುವ ಸೋಂಕಿನ ಅಂಗಾಂಶ) ತೆಗೆದು ಹಾಕಿ ಶಸ್ತ್ರಚಿಕಿತ್ಸೆ ಮಾಡಲಾಯಿತು. ಇದಾದ ಬಳಿಕ ಬಾಲಕನಿಗೆ ಹ್ಯಾಪ್ಲೋಡೆಂಟಿಕಲ್‌ ಸ್ಟೆಮ್‌ ಸೆಲ್‌ ಕಸಿಯನ್ನು ಯಶಸ್ವಿಯಾಗಿ ನಡೆಸಲಾಯಿತು. ಇದೀಗ ಬಾಲಕ ಗುಣಮುಖರಾಗುತ್ತಿದ್ದಾನೆ ಎಂದು ವಿವರಿಸಿದರು.

Continue Reading

ಚಿತ್ರದುರ್ಗ

Self Harming: ಪ್ರೀತ್ಸೆ ಅಂತ ಪ್ರಾಣ ತಿಂದ ಯುವಕ; ಕಾಲೇಜು ಕಟ್ಟಡದ ಮೇಲಿಂದು ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

Self Harming: ಯುವಕನ ಕಾಟಕ್ಕೆ ಬೇಸತ್ತ ಯುವತಿಯೊಬ್ಬಳು ಕಾಲೇಜು ಕಟ್ಟದ ಮೇಲಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

Self Harming
Koo

ಚಿತ್ರದುರ್ಗ/ ಬೆಂಗಳೂರು: ಕಾಲೇಜು ಕಟ್ಟಡದ ಮೇಲಿಂದ ಜಿಗಿದು ವಿದ್ಯಾರ್ಥಿನಿ (Self Harming) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಟ್ಟಡ ಮೇಲಿಂದ ಬಿದ್ದು ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿದ್ದಾಳೆ. ಚಿತ್ರದುರ್ಗ ನಗರದ ಚಿತ್ರಾ ಡಾನ್ ಬೋಸ್ಕೋ ಕಾಲೇಜಲ್ಲಿ ಪ್ರಥಮ ಬಿಎಸ್ಸಿ ಓದುತ್ತಿದ್ದ ಪ್ರೇಮಾ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟವಳು.

ಚಿತ್ರದುರ್ಗದ ಮೆದೆಹಳ್ಳಿ ನಿವಾಸಿ ಆಗಿದ್ದ ಪ್ರೇಮಾ, ಶುಕ್ರವಾರ ಬೆಳಗ್ಗೆ ಕಾಲೇಜಿಗೆ ಬಂದು ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸ್ಥಳಕ್ಕೆ ಬಡಾವಣೆ ಪೊಲೀಸ್ ಠಾಣೆ ಪಿಎಸ್‌ಐ ರಘು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಪ್ರೇಮಾಳಿಗೆ ಯುವಕನೊಬ್ಬ ಕಿರುಕುಳ ನೀಡುತ್ತಿದ್ದ ಎನನ್ಲಾಗಿದೆ. ತರುಣ್‌ ಎಂಬಾತ ಪ್ರೀತಿ‌ ಮಾಡುವಂತೆ ಪ್ರೇಮಾಳಿಗೆ ಪೀಡುಸುತ್ತಿದ್ದ ಎನ್ನಲಾಗಿದೆ. ವಾಟ್ಸ್‌ ಆ್ಯಪ್‌ನಲ್ಲಿ ನಿತ್ಯವೂ ಚಾಟಿಂಗ್ ಮಾಡಿ ಕಿರಿಕಿರಿ ಮಾಡುತ್ತಿದ್ದ. ಆತ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. ತರುಣ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದರು.

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಇಂಡ್ಲವಾಡಿ ಕ್ರಾಸ್ ಬಳಿ ನಡೆದಿದೆ. ಇಬ್ರಾಜ್ ಗುರುಂಗ(49) ಆತ್ಮಹತ್ಯೆಗೆ ಶರಣಾದವರು. ಅಸ್ಸಾಂ ಮೂಲದ ಇಬ್ರಾಜ್ ಗುರುಂಗ ಪ್ಯೊಚರ್ ಕಿಚನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಂಡ್ಲವಾಡಿ ಬಳಿ ಬಾಡಿಗೆ ಮನೆಯಲ್ಲಿ ಮೂವರು ಸ್ನೇಹಿತರೊಂದಿಗೆ ವಾಸವಿದ್ದರು. ಕಳೆದ ರಾತ್ರಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಸ್ನೇಹಿತರು ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರೆ. ಮೃತದೇಹವನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿ ಸಾವು

ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ – ರಾಜಾನುಕುಂಟೆ ರೈಲ್ವೆ ಮಾರ್ಗದ ಮಧ್ಯೆ ಘಟನೆ ನಡೆದಿದೆ. 55 ವರ್ಷದ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾರೆ. ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಸಾವೋ ಎನ್ನುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಲಿಸುತ್ತಿದ್ದ ರೈಲಿನಿಂದ ಬಿದ್ದು ಸಾವನ್ನಪ್ಪಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement
Gode Bengaluru
ಬೆಂಗಳೂರು3 ಗಂಟೆಗಳು ago

Gode Bengaluru : ಬೆಂಗಳೂರು ಗೋಡೆಗಳ ಮೇಲೆ ಚಿತ್ತಾರ; ʻಗೋಡೆ ಬೆಂಗಳೂರುʼ ಘೋಷಿಸಿದ ಅನ್‌ಬಾಕ್ಸಿಂಗ್‌

Pralhad Joshi
ದೇಶ3 ಗಂಟೆಗಳು ago

Pralhad Joshi : ನನಗೆ ಸಹೋದರಿಯೇ ಇಲ್ಲ! ಗೋಪಾಲ್ ಜೋಶಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ, ತಪ್ಪು ಮಾಡಿದ್ದರೆ ಕಾನೂನು ಕ್ರಮವಾಗಲಿ- ಪ್ರಲ್ಹಾದ ಜೋಶಿ

African boy successfully undergoes surgery for rare aplastic anemia
ಬೆಂಗಳೂರು4 ಗಂಟೆಗಳು ago

Aplastic anemia : ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ ಆಫ್ರಿಕಾ ಮೂಲದ ಬಾಲಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

Self Harming
ಚಿತ್ರದುರ್ಗ7 ಗಂಟೆಗಳು ago

Self Harming: ಪ್ರೀತ್ಸೆ ಅಂತ ಪ್ರಾಣ ತಿಂದ ಯುವಕ; ಕಾಲೇಜು ಕಟ್ಟಡದ ಮೇಲಿಂದು ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

Actress Amulyas brother film director Deepak aras passes away
ಸಿನಿಮಾ8 ಗಂಟೆಗಳು ago

Deepak Aras: ನಟಿ ಅಮೂಲ್ಯ ಸಹೋದರ ಚಲನಚಿತ್ರ ನಿರ್ದೇಶಕ ದೀಪಕ್ ಅರಸ್ ಅನಾರೋಗ್ಯದಿಂದ ನಿಧನ

Fraud case Union Minister Pralhad Joshis brother duped of ticket for Lok Sabha polls
ಬೆಂಗಳೂರು9 ಗಂಟೆಗಳು ago

Fraud Case : ಲೋಕಸಭೆ ಚುನಾವಣೆಗೆ ಟಿಕೆಟ್‌ ಕೊಡಿಸುವುದಾಗಿ ಕೋಟಿ ರೂ. ಲೂಟಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಹೋದರನ ವಿರುದ್ಧ ಎಫ್‌ಐಆರ್‌ ದಾಖಲು

Dina bhavishya
ಭವಿಷ್ಯ15 ಗಂಟೆಗಳು ago

Dina Bhavishya : ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಪಿತೂರಿ ಮಾಡುವ ಜನರ ಬಗ್ಗೆ ಇರಲಿ ಎಚ್ಚರ

Gosavi samaj lathicharged Sri Ram Sene calls for bandh in Lakshmeshwara town on October 19
ಗದಗ1 ದಿನ ago

Lakshmeshwara Town: ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್; ಅ.19ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಶ್ರೀರಾಮಸೇನೆ ಕರೆ

A man killed his wife and her lover then committed suicide
ಬೆಂಗಳೂರು1 ದಿನ ago

Murder Case: ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತ್ನಿ ಲಾಕ್‌; ಇಬ್ಬರನ್ನು ಕೊಂದು ಪತಿ ಸೂಸೈಡ್‌

Parvati Nair to play dual role in suspense thriller un Paravail Tamil film
ಸಿನಿಮಾ1 ದಿನ ago

Parvati Nair : ಸಸ್ಪೆನ್ಸ್ ಥ್ರಿಲ್ಲರ್‌ ʻಊಣ್‌ ಪರವೈಲ್‌ʼ ತಮಿಳು ಚಿತ್ರದಲ್ಲಿ ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಮಿಂಚಿಂಗ್‌

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌