Sumalatha Ambarish : ನಾನು ಬಿಜೆಪಿ ಸದಸ್ಯೆಯಲ್ಲ, ಕಾಂಗ್ರೆಸ್‌ನಿಂದ ಆಹ್ವಾನ ಬಂದಿಲ್ಲ; ಸುಮಲತಾ ಮಾತಿನ ಅರ್ಥವೇನು? - Vistara News

ಕರ್ನಾಟಕ

Sumalatha Ambarish : ನಾನು ಬಿಜೆಪಿ ಸದಸ್ಯೆಯಲ್ಲ, ಕಾಂಗ್ರೆಸ್‌ನಿಂದ ಆಹ್ವಾನ ಬಂದಿಲ್ಲ; ಸುಮಲತಾ ಮಾತಿನ ಅರ್ಥವೇನು?

Sumalatha Ambarish : ಮಂಡ್ಯದ ಸಂಸದೆ ಸುಮಲತಾ ಅವರು ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿ ಬಿಜೆಪಿ ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದರು. ಆದರೆ, ನನಗೂ ಬಿಜೆಪಿಗೂ ಸಂಬಂಧವಿಲ್ಲ ಎಂಬರ್ಥದಲ್ಲಿ ಮಾತನಾಡಿದ್ದಾರೆ. ಜತೆಗೆ ಆಪರೇಷನ್‌ ಹಸ್ತದ ವಿಚಾರವೂ ಚರ್ಚೆಯಾಗಿದೆ.

VISTARANEWS.COM


on

Sumalatha Ambarish says her views are not connected with BIP
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ನಾನು ಬಿಜೆಪಿ ಸಂಸದೆ ಅಲ್ಲ, ಸದಸ್ಯೆಯೂ ಅಲ್ಲ. ಸ್ವತಂತ್ರಳಾಗಿ ಸಂಸತ್ತಿಗೆ (I am Independent MP) ಆಯ್ಕೆಯಾದವಳು. ನಾನು ಬಿಜೆಪಿಗೆ ಬೆಂಬಲ ನೀಡಿರುವುದು. ನೀಡುತ್ತಿರುವುದು ನಿಜ. ಹಾಗಂತ ಪಕ್ಷದ ನಿರ್ಧಾರಗಳಿಗೂ ನನಗೂ ಸಂಬಂಧ ಇಲ್ಲ. ಹೀಗೆಂದು ಸ್ಪಷ್ಟವಾಗಿ ಹೇಳಿದ್ದಾರೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ (Sumalatha Ambarish). ಇದೇ ಹೊತ್ತಿಗೆ ಅವರು ತನಗೆ ಕಾಂಗ್ರೆಸ್‌ನಿಂದ ಆಹ್ವಾನ ಬಂದಿಲ್ಲ (No invitation from Congress says Sumalatha) ಎಂದು ಹೇಳಿದ್ದಾರೆ. ಅವರ ಈ ಎರಡೂ ಹೇಳಿಕೆಗಳನ್ನು ಇಟ್ಟುಕೊಂಡು ರಾಜಕೀಯ ವಲಯದಲ್ಲಿ ಚರ್ಚೆ ನಡೆದಿದೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುತ್ತಿರುವುದನ್ನು ಪ್ರತಿಭಟಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಅವರು, ರೈತರ ಸಮಸ್ಯೆಗಳು, ನೀರಿನ ಸಮಸ್ಯೆಗಳ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಹೇಳಿದರು. ಹಾಗಂತ ತಾನು ಬಿಜೆಪಿಯ ಸದಸ್ಯೆಯಲ್ಲ ಎನ್ನುವುದನ್ನು ಒತ್ತಿ ಹೇಳಿದರು.

ಬಿಜೆಪಿ ನಾಯಕರು ಮಾಡಿರುವ ಆರೋಪಗಳ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದಕ್ಕೂ ನನಗೂ ಸಂಬಂಧವಿಲ್ಲ. ಯಾರು ಆರೋಪ ಮಾಡಿದ್ದಾರೆಯೋ ಅವರೇ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ಹೀಗಿರುವಾಗ ಆ ವಿಚಾರವಾಗಿ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ. ನಾನು ಸ್ವತಂತ್ರ ಸಂಸದೆ ಮಾತ್ರವಲ್ಲ, ಸ್ವತಂತ್ರವಾಗಿ ನನ್ನದೇ ಆದ ಅನಿಸಿಕೆಗಳನ್ನು ವ್ಯಕ್ತಪಡಿಸಲು ಸ್ವಾತಂತ್ರ್ಯವಿದೆ. ನನ್ನ ನಿಲುವು ಏನು ಎಂಬುದನ್ನು ನಾನು ಸ್ಪಷ್ಟಪಡಿಸುತ್ತೇನೆ. ಪಕ್ಷದ ನಿಲುವಿನ ಬಗ್ಗೆ ಸಂಬಂಧಪಟ್ಟವರಲ್ಲಿ ಅಥವಾ ಪಕ್ಷದ ವಕ್ತಾರರ ಬಳಿ ಕೇಳಿ ಎಂದರು.

ಬಿಜೆಪಿಯ ನಿರ್ಧಾರಗಳಿಗೆ ಬೆಂಬಲ ನೀಡುವುದಿಲ್ಲ ಎಂದು ಹೇಳಲಾರೆ. ಹಾಗೆಂದು ನನ್ನ ಸ್ವಂತ ಅಭಿಪ್ರಾಯ ನನ್ನದು. ಪಕ್ಷದ ನಿಲುವನ್ನು ನನ್ನ ಬಳಿ ತಿಳಿಸಿ, ಅದರ ಬಗ್ಗೆ ನನಗೆ ಸಹಮತ ಮೂಡಿದರೆ ಖಂಡಿತಾ ಬೆಂಬಲಿಸುತ್ತೇನೆ ಎಂದರು.

ಆಪರೇಷನ್‌ ಹಸ್ತದ ಬಗ್ಗೆ ಸುಮಲತಾ ಹೇಳಿದ್ದೇನು?

ರಾಜ್ಯದಲ್ಲಿ ಲೋಕಸಭಾ ಚುನಾವಣೆಗೂ ಮುನ್ನವೇ ಆಪರೇಷನ್‌ ಹಸ್ತ ಮಾಡಲಾಗುತ್ತಿದೆ ಎಂಬ ಬಗ್ಗೆ ಕೇಳಿದಾಗ, ಈ ವಿಚಾರದಲ್ಲಿ, ಯಾರೂ ನನಗೆ ಕಾಂಗ್ರೆಸ್‌ಗೆ ಆಹ್ವಾನ ನೀಡಿಲ್ಲ ಎಂದರು. ಕಾಂಗ್ರೆಸ್ ನಿಂದ ಆಫರ್ ವಿಚಾರವೆಲ್ಲವೂ ಊಹಾಪೋಹ ಎಂದರು. ರಾಜಕೀಯ ಅನ್ನೋದು ನನಗೆ ಅನಿವಾರ್ಯ ಅಲ್ಲ, ಆಕಸ್ಮಿಕ. ಎಲ್ಲವೂ ಸರಿ ಎನಿಸಿದ್ರೆ ಮಾತ್ರ ಮುಂದಿನ ಹೆಜ್ಜೆ ಇಡುತ್ತೇನೆ ಎಂದರು.

ಸುಮಲತಾ ಹಾಜರಾದ ಸಭೆಗೆ ಪ್ರತಾಪ್‌ ಸಿಂಹ ಗೈರು

ಮಂಡ್ಯದಲ್ಲಿ ನಡೆದ ಕಾವೇರಿ ವಿಚಾರದಲ್ಲಿ ಬಿಜೆಪಿ ಆಯೋಜಿಸಿದ ಸಭೆಯಲ್ಲಿ ಸಂಸದೆ ಸುಮಲತಾ ಹಾಜರಾಗಿದ್ದರೆ, ಮೈಸೂರು ಸಂಸದ ಪ್ರತಾಪ್‌ ಸಿಂಹ ಗೈರುಹಾಜರಾಗಿದ್ದರು. ಮಾಜಿ ಶಾಸಕ ರಾಮದಾಸ್, ಸಿ ಪಿ ಯೋಗೇಶ್ವರ್ ಕೂಡಾ ಬಂದಿಲ್ಲ.

ಸಭೆಯಲ್ಲಿ ಮಂಡ್ಯ ಸಂಸದೆ ಸುಮಲತಾ, ಮಾಜಿ ಶಾಸಕ ಎಲ್ ನಾಗೇಂದ್ರ, ನಿರಂಜನ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ್ ಭಾಗಿಯಾಗಿದ್ದಾರೆ. ಕಾವೇರಿ ವಿಚಾರದಲ್ಲೂ ಇಬ್ಬರು ಮುಖಂಡರ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆಯೇ ಎಂಬ ಪ್ರಶ್ನೆ ಎದುರಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಹಾಸನ

Murder Case : ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದು ನೇಣಿಗೆ ಶರಣಾದ ಪತಿ

Murder case : ಹಾಸನದಲ್ಲಿ ಭೀಕರ ಕೊಲೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದು ಬಳಿಕ ತಾನು ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ.

VISTARANEWS.COM


on

By

Murder case
ಸಾಂದರ್ಭಿಕ ಚಿತ್ರ
Koo

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಂದು (Murder Case) ತಾನು ಆತ್ಮಹತ್ಯೆ (Self Harming) ಮಾಡಿಕೊಂಡು ಪತಿಯೊಬ್ಬ ಮೃತಪಟ್ಟಿದ್ದಾನೆ. ಹರೀಶ್ (50) ಎಂಬಾತ ಪತ್ನಿ ಜಾಜಿ (45) ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ದೊಡ್ಡಸಾಲಾವರ ಗ್ರಾಮದಲ್ಲಿ ಘಟನೆ ನಡೆದಿದೆ. ಹರೀಶ್‌ ಹಾಗೂ ಜಾಜಿ ನಡುವೆ ಪ್ರತಿನಿತ್ಯ ಒಂದಲ್ಲ ಒಂದು ಕಾರಣಕ್ಕೆ ಜಗಳ ನಡೆಯುತ್ತಲೇ ಇತ್ತು. ಸೋಮವಾರ ರಾತ್ರಿಯೂ ಇಬ್ಬರ ನಡುವೆ ಜಗಳ ನಡೆದಿದ್ದು, ವಿಕೋಪಕ್ಕೆ ತಿರುಗಿದೆ.

ಈ ವೇಳೆ ಸಿಟ್ಟಾದ ಹರೀಶ್‌ ಮನೆಯಲ್ಲಿದ್ದ ನಾಡ ಬಂದೂಕಿನಿಂದ ಗುಂಡು ಹಾರಿಸಿ ಪತ್ನಿ ಜಾಜಿಯನ್ನು ಹತ್ಯೆ ಮಾಡಿದ್ದಾನೆ. ನಂತರ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಇನ್ನೂ ಈ ದಂಪತಿಗೆ ಮೂವರು ಮಕ್ಕಳಿದ್ದು, ಬೇರೆಡೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ.

ಇದನ್ನೂ ಓದಿ: Murder Case : ಸ್ಮಶಾನಕ್ಕೆ ಕರೆದೊಯ್ದು ಸ್ನೇಹಿತನನ್ನೇ ಕೊಂದು ಹಾಕಿದ ಮಿತ್ರದ್ರೋಹಿ

ರಸ್ತೆಯಲ್ಲಿ ಅಡ್ಡಗಟ್ಟಿ ಚಿಕ್ಕಮ್ಮನನ್ನು ಹೊಡೆದು ಕೊಂದ ದುಷ್ಟ

ಬೆಂಗಳೂರು: ಕೌಟುಂಬಿಕ ಕಲಹ (Family Dispute) ಹಿನ್ನೆಲೆ ಮಗನಿಂದಲೆ ಚಿಕ್ಕಮ್ಮನ ಕೊಲೆಯಾಗಿದೆ. ಬೆಂಗಳೂರು ಗ್ರಾಮಾಂತರದ ಹೊಸಕೋಟೆಯ ಸಿದ್ದಾರ್ಥ ನಗರದ ಬಳಿ ತಡರಾತ್ರಿ ಘಟನೆ (Murder Case) ನಡೆದಿದೆ. ಬೆಂಗಳೂರಿನ ದೊಮ್ಮಸಂದ್ರ ಮೂಲದ ಚಂದ್ರಮ್ಮ ( 40 ) ಮೃತ ದುರ್ದೈವಿ. ಆರೋಪಿ ವೆಂಕಟೇಶ್ ಎಂಬಾತ ಕೊಲೆ ಮಾಡಿ ಎಸ್ಕೇಪ್ ಆದವನು.

ಚಂದ್ರಮ್ಮ ಕೈವಾರಕ್ಕೆ ದೇವಸ್ಥಾನಕ್ಕೆ ಹೋಗಿ ರಾತ್ರಿ ವಾಪಸ್ ಆಗುತ್ತಿದ್ದರು. ಈ ವೇಳೆ‌ ಹೊಸಕೋಟೆ ಬಳಿ ಚಂದ್ರಮ್ಮ ಇದ್ದ ಬೈಕ್ ಅಡ್ಡ ಗಟ್ಟಿದ ವೆಂಕಟೇಶ್‌ ಗಲಾಟೆ ಶುರು ಮಾಡಿದ್ದ. ಗಲಾಟೆಯಲ್ಲಿ ಮಾತಿಗೆ ಮಾತು ಬೆಳೆದಿದ್ದು, ಅಲ್ಲೆ ಇದ್ದ ದೊಣ್ಣೆಯಿಂದ ಚಂದ್ರಮ್ಮನ ತಲೆಗೆ ಹೊಡೆದಿದ್ದಾನೆ. ದೊಣ್ಣೆಯಿಂದ ಹೊಡೆದ ರಭಸಕ್ಕೆ ಚಂದ್ರಮ್ಮ ತೀವ್ರ ರಕ್ತವಾಗಿ ರಸ್ತೆಯಲ್ಲೆ ಬಿದ್ದು ಒದ್ದಾಡಿದ್ದಾರೆ.

ಮಾರಣಾಂತಿಕ ಹಲ್ಲೆ ಮಾಡಿದ ವೆಂಕಟೇಶ್‌ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಇತ್ತ ಗಂಭೀರ ಗಾಯಗೊಂಡಿದ್ದ ಚಂದ್ರಮ್ಮಳನ್ನು ಬೆಂಗಳೂರಿನ ಖಾಸಗಿ ಆಸ್ವತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಚಂದಮ್ಮ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

murder Case

ಪರಾರಿ ಆಗಿರುವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ‌ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿವಮೊಗ್ಗ

Murder Case : ಸ್ಮಶಾನಕ್ಕೆ ಕರೆದೊಯ್ದು ಸ್ನೇಹಿತನನ್ನೇ ಕೊಂದು ಹಾಕಿದ ಮಿತ್ರದ್ರೋಹಿ

Murder Case : ಮದ್ಯ ಸೇವಿಸುವ ನೆಪದಲ್ಲಿ ಗೆಳೆಯನನ್ನು ಸ್ಮಶಾನಕ್ಕೆ ಕರೆದುಕೊಂಡು ಹೋದ ದುಷ್ಟನೊಬ್ಬ ಬರ್ಬರವಾಗಿ ಕೊಂದಿದ್ದಾನೆ. ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ್ದಾನೆ.

VISTARANEWS.COM


on

By

murder Case
ಸಾಂದರ್ಭಿಕ ಚಿತ್ರ
Koo

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಯುವಕನೊಬ್ಬ ತನ್ನ ಸ್ನೇಹಿತನನ್ನೇ ಬರ್ಬರವಾಗಿ ಕೊಂದು (Murder Case) ಹಾಕಿದ್ದಾನೆ. ಶಿವಮೊಗ್ಗ ನಗರದ ಆಯನೂರು ಗೇಟ್ ಬಳಿ ಸೋಮವಾರ ತಡರಾತ್ರಿ ಘಟನೆ ನಡೆದಿದೆ. ಶಿವಮೊಗ್ಗದ ಜೆಪಿ ನಗರದ ನಿವಾಸಿ ರಾಜುನಾಯ್ಕ(30) ಕೊಲೆಯಾದವನು. ವಿಕ್ರಮ್ ಕೊಲೆ ಆರೋಪಿ ಆಗಿದ್ದಾನೆ.

ಕಳೆದ ಎರಡ್ಮೂರು ದಿನದಿಂದ ರಾಜುನಾಯ್ಕ ಹಾಗೂ ವಿಕ್ರಮ್‌ ನಡುವೆ ಕಲಹ ಇತ್ತು. ನಿನ್ನೆ ಸೋಮವಾರ ರಾತ್ರಿ ಎಣ್ಣೆ ಕುಡಿಯೋಣ ಬಾ ಎಂದು ವಿಕ್ರಮ್‌ ರಾಜುನಾಯ್ಕ್‌ನನ್ನು ಕರೆದುಕೊಂಡು ಹೋಗಿದ್ದ. ಎಣ್ಣೆ ಕುಡಿಸುವ ನೆಪದಲ್ಲಿ ಸ್ಮಶಾನಕ್ಕೆ ಕರೆದುಕೊಂಡು ಹೋಗಿ ತಲೆ ಮೇಲೆ ಕಲ್ಲು ಎತ್ತಿ ಕೊಲೆ ಮಾಡಲಾಗಿದೆ.

ಸದ್ಯ ಘಟನೆ ಸಂಬಂಧ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Reels Tragedy : ರೀಲ್ಸ್‌ ಶೋಕಿ; ಪ್ರಪಾತಕ್ಕೆ ಬಿದ್ದು ಯುವತಿ ಸಾವು- ಛಿದ್ರಗೊಂಡ ಕಾರು

ಹಾಸನದಲ್ಲಿ ಪತ್ನಿಯನ್ನು ಕೊಂದು ನೇಣಿಗೆ ಶರಣಾದ ಪತಿ

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾನೆ. ಹರೀಶ್ (50) ಎಂಬಾತ ಪತ್ನಿ ಜಾಜಿ (45) ಕೊಂದು ಆತ್ಮಹತ್ಯೆ ಮಾಡಿಕೊಂಡವನು.

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ದೊಡ್ಡಸಾಲಾವರ ಗ್ರಾಮದಲ್ಲಿ ಘಟನೆ ನಡೆದಿದೆ. ಹರೀಶ್‌ ಹಾಗೂ ಜಾಜಿ ನಡುವೆ ಪ್ರತಿನಿತ್ಯ ಒಂದಲ್ಲ ಒಂದು ಕಾರಣಕ್ಕೆ ಜಗಳ ನಡೆಯುತ್ತಲೇ ಇತ್ತು. ಸೋಮವಾರ ರಾತ್ರಿಯೂ ಇಬ್ಬರ ನಡುವೆ ಜಗಳ ನಡೆದಿದ್ದು, ವಿಕೋಪಕ್ಕೆ ತಿರುಗಿದೆ.

ಈ ವೇಳೆ ಸಿಟ್ಟಾದ ಹರೀಶ್‌ ಮನೆಯಲ್ಲಿದ್ದ ನಾಡ ಬಂದೂಕಿನಿಂದ ಗುಂಡು ಹಾರಿಸಿ ಪತ್ನಿ ಜಾಜಿಯನ್ನು ಹತ್ಯೆ ಮಾಡಿದ್ದಾನೆ. ನಂತರ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಇನ್ನೂ ಈ ದಂಪತಿಗೆ ಮೂವರು ಮಕ್ಕಳಿದ್ದು, ಬೇರೆಡೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Actor Darshan: ರಕ್ತ ಕಾರಿಕೊಂಡು ಸತ್ತ ದರ್ಶನ್‌ ಫಾರಂ ಹೌಸ್ ಮ್ಯಾನೇಜರ್;‌ ಏನಿದು ಮತ್ತೊಂದು ನಿಗೂಢ?

actor darshan: ದರ್ಶನ್‌ ಮ್ಯಾನೇಜರ್‌ (Darshan manager) ಆಗಿದ್ದ ಶ್ರೀಧರ್‌ ಎಂಬಾತ ಶಂಕಾಸ್ಪದವಾಗಿ ರಕ್ತ ಕಾರಿಕೊಂಡು ಸತ್ತಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

VISTARANEWS.COM


on

actor darshan manager death
Koo

ಆನೇಕಲ್‌: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renuka Swamy Murder) ನಟ ದರ್ಶನ್‌ (Actor Darshan) ಪೊಲೀಸ್‌ ವಿಚಾರಣೆ ಎದುರಿಸುತ್ತಿರುವ ಹೊತ್ತಿನಲ್ಲಿಯೇ, ದರ್ಶನ್‌ಗೇ ಸಂಬಂಧಿಸಿದ ಇನ್ನೊಂದು ಅನುಮಾನಾಸ್ಪದ ಸಾವು (UDR case) ಬಯಲಿಗೆ ಬಂದಿದೆ. ದರ್ಶನ್‌ ಫಾರಂ ಹೌಸ್ ಮ್ಯಾನೇಜರ್‌ (Darshan manager) ಆಗಿದ್ದ ಶ್ರೀಧರ್‌ ಎಂಬಾತ ಶಂಕಾಸ್ಪದವಾಗಿ ರಕ್ತ ಕಾರಿಕೊಂಡು ಸತ್ತಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶ್ರೀಧರ್ (35) ಆತ್ಮಹತ್ಯೆ (self harming) ಮಾಡಿಕೊಂಡ ಮ್ಯಾನೇಜರ್. ಏಪ್ರಿಲ್ 17ನೇ ತಾರೀಕು ಈತ ವಿಷ (poison) ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದ. ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಬಗ್ಗನದೊಡ್ಡಿಯಲ್ಲಿ ಘಟನೆ ನಡೆದಿದೆ. ಬಗ್ಗನದೊಡ್ಡಿಯಲ್ಲಿ ನಟ ದರ್ಶನ್‌ಗೆ ಸೇರಿದ ʼದುರ್ಗ ಫಾರ್ಮ್ ಹೌಸ್ʼ ಇದ್ದು, ಅಲ್ಲಿ ಈತ ಮ್ಯಾನೇಜರ್‌ ಆಗಿದ್ದ.

ಎರಡು ತಿಂಗಳ ಹಿಂದೆ ಈ ಆತ್ಮಹತ್ಯೆ ಘಟಿಸಿದ್ದು, ಪೊಲೀಸರು ಅನುಮಾನಾಸ್ಪದ ಸಾವು (UDR) ದಾಖಲಿಸಿಕೊಂಡಿದ್ದರು. ಫಾರ್ಮ್ ಹೌಸ್ ಪಕ್ಕದಲ್ಲಿಯೇ ಈತ ವಿಷ ಸೇವಿಸಿ ರಕ್ತ ಕಾರಿಕೊಂಡು ಮೃತಪಟ್ಟಿದ್ದಾನೆ. ಬಗ್ಗನದೊಡ್ಡಿಯಲ್ಲಿ ಸುಮಾರು 2 ಎಕರೆ 36 ಗುಂಟೆ ಪ್ರದೇಶದಲ್ಲಿರುವ ಫಾರ್ಮ್ ಹೌಸ್‌ನಲ್ಲಿ ಒಂದು ವರ್ಷ ಕಾಲ ಈತ ಮ್ಯಾನೇಜರ್ ಆಗಿ ಕೆಲಸ ಮಾಡಿದ್ದ. ಫಾರ್ಮ್‌ ಹೌಸ್‌ ಪಕ್ಕದ ಕಲ್ಲು ಬಂಡೆ ಮೇಲೆ ಶ್ರೀಧರ್ ಮೃತದೇಹ ಪತ್ತೆಯಾಗಿತ್ತು. ಶ್ರೀಧರ್ ಮೃತ ದೇಹ ಕಂಡು ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದ.

ಒಂದು ಡೆತ್‌ ನೋಟನ್ನೂ (Death note) ಶ್ರೀಧರ್‌ ಬರೆದಿಟ್ಟಿದ್ದಾನೆ. ತಾನು ಮಾನಸಿಕ ಖಿನ್ನತೆಗೊಳಗಾಗಿ ಸೂಸೈಡ್ ಮಾಡಿಕೊಳ್ಳುತ್ತಿರುವುದಾಗಿ ಅದರಲ್ಲಿ ಬರೆದಿದ್ದಾನೆ. “ನನ್ನ ಸಾವಿಗೆ ನಾನೇ ಕಾರಣ. ಒಂಟಿತನ ಕಾಡುತ್ತಿದೆ. ಬದುಕಿದ್ದು ಮನೆ ಕಟ್ಟಬೇಕು ಎಂದು ಆಸೆ ಇತ್ತು. ಆಗಲಿಲ್ಲ. ನಾನು ಸತ್ತಮೇಲೆ ನನ್ನ ಗೋರಿ ಆದರೂ ಕಟ್ಟಿ” ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ. ಡೆತ್‌ನೋಟನ್ನು ಯಾವುದೇ ಚಿತ್ತು ಕಾಟಿಲ್ಲದೆ ಬರೆದು, ಹೆಸರು ಬರೆದು ಸಹಿ ಹಾಕಿ ಜೊತೆಗೆ ಹೆಬ್ಬೆಟ್ಟು ಗುರುತನ್ನೂ ಒತ್ತಿದ್ದಾನೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ UDR ಪ್ರಕರಣ ದಾಖಲಾಗಿದೆ.

“ನನ್ನ ಸಾವಿಗೆ ಬೇರೆ ಯಾರೂ ಕಾರಣರಲ್ಲ” ಎಂದು ಮತ್ತೆ ಮತ್ತೆ ಡೆತ್‌ನೋಟ್‌ನಲ್ಲಿ ಶ್ರೀಧರ್‌ ಉಲ್ಲೇಖಿಸಿದ್ದಾನೆ. “ನನ್ನ ಅಮ್ಮ ಅಪ್ಪ ಅಕ್ಕಂದಿರು ಯಾರಾದರೂ ನನ್ನ ಸಾವಿನ ಬಗ್ಗೆ ಅನುಮಾನವಿದೆ ಎಂದು ಕಂಪ್ಲೇಂಟ್‌ ಕೊಟ್ಟರೆ ಅದನ್ನು ತಗೋಬೇಡಿ. ನಾನು ತುಂಬಾ ಯೋಚನೆ ಮಾಡಿ ನನ್ನ ಪ್ರಾಣ ಕಳೆದುಕೊಳ್ತಾ ಇದೇನೆ” ಎಂದು ಬರೆದಿದ್ದಾನೆ. ಇದೇ ಈಗ ಅನುಮಾನಕ್ಕೆ ಕಾರಣವಾಗಿದೆ. ದರ್ಶನ್‌ ಹೆಸರನ್ನು ಎಲ್ಲೂ ಈತ ಉಲ್ಲೇಖಿಸಿಲ್ಲ.

ಸಾಕ್ಷಿದಾರರಾಗಿ ಬಳಕೆ

ದರ್ಶನ್ ಆಂಡ್ ಗ್ಯಾಂಗ್‌ನಿಂದ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಲ್ಲದೇ ಹಲವು ಮಂದಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಅವರ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಹೇಳಿಕೆ ನೀಡಿದವರನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಗಳು ಸೇರಿ 27ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಲಾಗಿದೆ. 27 ಮಂದಿಯಲ್ಲಿ 17 ಮಂದಿ ಬಂಧಿತ ಆರೋಪಿಗಳು. ನಟ ದರ್ಶನ್, ಪವಿತ್ರ ಗೌಡ ಸೇರಿ 17 ಮಂದಿ ಬಂಧಿತ ಆರೋಪಿಗಳು. ಇನ್ನುಳಿದ 10 ಮಂದಿಯನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ. ಸಾಕ್ಷಿಗಳು ಎಂದು ಈವರೆಗೆ 10 ಮಂದಿಯ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದಾರೆ.

ಘಟನಾ ಸ್ಥಳದಲ್ಲಿ ಹಾಜರಿದ್ದ ಕೆಲವರು, ಬೇರೆಬೇರೆ ಕಡೆಗಳಲ್ಲಿ ಪ್ರತ್ಯಕ್ಷ ಪರೋಕ್ಷವಾಗಿ ಕಂಡು ಬಂದ ವ್ಯಕ್ತಿಗಳ ವಿಚಾರಣೆ ನಡೆಸಲಾಗಿದೆ. ಅವರನ್ನು ರೇಣುಕಾಸ್ವಾಮಿ ಕೊಲೆ ಸಂಬಂಧ ಸಾಕ್ಷಿಗಳು ಎಂದು ಪರಿಗಣಿಸಿ ಹೇಳಿಕೆ ದಾಖಲು ಮಾಡಲಾಗಿದೆ. ಶೆಡ್ ಬಳಿ ಇದ್ದ ಇನ್ನೂ ಕೆಲವರ ಹೇಳಿಕೆ ಪಡೆದುಕೊಂಡಿದ್ದಾರೆ. ಘಟನೆ ಹೇಗಾಯ್ತು, ಯಾರು ಯಾರು ಇದ್ದರು, ಎಷ್ಟು ಜನ ಸೇರಿದ್ದರು, ದರ್ಶನ್ ಎಷ್ಟು ಹೊತ್ತಿಗೆ ಬಂದಿದ್ದು, ಯಾವಯಾವ ಆಯುಧಗಳಿಂದ ಹಲ್ಲೆ ಮಾಡಿದರು, ಹೀಗೆ ಹಲವು ವಿಚಾರಗಳ ಬಗ್ಗೆ ಹೇಳಿಕೆ ದಾಖಲಿಸಿದ್ದಾರೆ. ಶೆಡ್‌ನ ಸಿಸಿ ಕ್ಯಾಮೆರಾ ಫೂಟೇಜ್‌ಗಳನ್ನು ದರ್ಶನ್‌ ಗ್ಯಾಂಗ್‌ ನಾಶ ಮಾಡಿರುವ ಹಿನ್ನೆಲೆಯಲ್ಲಿ, ಈ ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ಮಹತ್ವ ಪಡೆದುಕೊಳ್ಳಲಿದೆ.

ಇದನ್ನೂ ಓದಿ: Actor Darshan: ಹಾಸ್ಯನಟ ಚಿಕ್ಕಣ್ಣಗೆ ಮೂರು ಗಂಟೆ ಪೊಲೀಸರ ಡ್ರಿಲ್‌, ರೇಣುಕಾಸ್ವಾಮಿ ಕೊಲೆ ವಿಷಯ ಬಂತಾ ಪಾರ್ಟಿಯಲ್ಲಿ?

Continue Reading

ದೇಶ

Reels Tragedy : ರೀಲ್ಸ್‌ ಶೋಕಿ; ಪ್ರಪಾತಕ್ಕೆ ಬಿದ್ದು ಯುವತಿ ಸಾವು- ಛಿದ್ರಗೊಂಡ ಕಾರು

Reels Accident : ರೀಲ್ಸ್‌ ಹುಚ್ಚು ಯುವತಿಯೊಬ್ಬಳ ಪ್ರಾಣವನ್ನೇ ಕಸಿದಿದೆ. ಬೆಟ್ಟದ ತುದಿಯಲ್ಲಿ ಸಾಹಸ ಪ್ರದರ್ಶಿಸಲು ಹೋಗಿ 25ರ ಯುವತಿ ಪ್ರಪಾತಕ್ಕೆ ಬಿದ್ದು ದಾರುಣವಾಗಿ ಮೃತಪಟ್ಟಿದ್ದಾಳೆ. ಸಾವಿನ ಕೊನೆ ಕ್ಷಣವು ಸ್ನೇಹಿತನ ಮೊಬೈಲ್‌ನಲ್ಲಿ (Reels Tragedy) ಸೆರೆಯಾಗಿದೆ.

VISTARANEWS.COM


on

By

Reels tragedy
Koo

ಮಹಾರಾಷ್ಟ್ರ: ಇತ್ತೀಚಿನ ದಿನಗಳಲ್ಲಿ ರೀಲ್ಸ್‌ಗಾಗಿ (Reels Accident) ಯುವ ಜನತೆಯಲ್ಲಿ ಹುಚ್ಚು ಸಾಹಸ ಪ್ರದರ್ಶಿಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದಕ್ಕಾಗಿ ತಮ್ಮ ಪ್ರಾಣವನ್ನೇ ಒತ್ತೆ ಇಡುತ್ತಾರೆ. ಅದರಲ್ಲೂ ಜನಪ್ರಿಯತೆ ಗಳಿಸಲು ಯಾವ ಮಟ್ಟಕ್ಕೂ ಬೇಕಾದರೂ ಇಳಿಯಲು ತಯಾರಿರುತ್ತಾರೆ. ಇಂತಹ ರೀಲ್ಸ್‌ (Reels Tragedy) ಮಾಡಲು ಹೋಗಿ ಅನೇಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.

ಅಂತಹದ್ದೇ ಘಟನೆಯೊಂದು ಮಹಾರಾಷ್ಟ್ರದ ಸಂಭಾಜಿನಗರ ಜಿಲ್ಲೆಯ ಸುಲಿಭಂಜನ್ ಗ್ರಾಮದಲ್ಲಿ ಘಟನೆ ನಡೆದಿದೆ. ರೀಲ್ಸ್ ಹುಚ್ಚಿಗೆ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಶ್ವೇತಾ (25) ಮೃತ ದುರ್ದೈವಿ. ಶ್ವೇತಾ ತನ್ನ ಮೂವರು ಸ್ನೇಹಿತರ ಜತೆಗೆ ಸುಲಿಭಂಜನ್ ಗ್ರಾಮದ ದತ್ತ ಮಂದಿರಕ್ಕೆ ಪ್ರವಾಸಕ್ಕೆ ತೆರಳಿದ್ದಳು. ಈ ವೇಳೆ ಬೆಟ್ಟದ ತುದಿಯಲ್ಲಿ ಕಾರು ನಿಲ್ಲಿಸಿ ರೀಲ್ಸ್ ಮಾಡುತ್ತಿದ್ದಳು. ಕಾರಿನೊಳಗೆ ಕುಳಿತ ಶ್ವೇತಾ ರಿವರ್ಸ್ ಗೇರ್‌ನಲ್ಲಿದ್ದ ಕಾರನ್ನು ಚಲಾಯಿಸಿದ್ದಾಳೆ.ಏಕಾಏಕಿ ಜೋರಾಗಿ ಎಕ್ಸಿಲೇಟರ್‌ ಹೊತ್ತಿದ್ದಾಳೆ. ಅಷ್ಟೇ ನೋಡ ನೋಡುತ್ತಿದ್ದಂತೆ ಜಸ್ಟ್‌ 15 ಸೆಕೆಂಡ್‌ನಲ್ಲೇ ಯುವತಿ ಕಾರು ಸಮೇತ ಪ್ರಪಾತಕ್ಕೆ ಬಿದ್ದಿದ್ದಾಳೆ.

ಲೈವ್ ಆ್ಯಕ್ಸಿಡೆಂಟ್ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಪಾತಕ್ಕೆ ಬಿದ್ದ ರಭಸಕ್ಕೆ ಕಾರು ಛಿದ್ರ ಛಿದ್ರವಾಗಿದ್ದರೆ ಶ್ವೇತಾ ಸ್ಪಾಟ್‌ನಲ್ಲೇ ಮೃತಪಟ್ಟಿದ್ದಾಳೆ.

ಇದನ್ನೂ ಓದಿ: Bhavani Revanna: ಭವಾನಿ ರೇವಣ್ಣ‌ ನಿರಾಳ, ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್

ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ್ಟೆಯಲ್ಲಿತ್ತು ಸತ್ತ ಹಾವು! ವಿಡಿಯೊ ನೋಡಿ

ಬಿಹಾರ : ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸರ್ಕಾರ ಮಕ್ಕಳಿಗೆ ಬಿಸಿಯೂಟ ಯೋಜನೆಯನ್ನು ನೀಡುತ್ತಿದೆ. ಅದರಂತೆ ಮಕ್ಕಳಿಗೆ ಮಧ್ಯಾಹ್ನದ ಊಟವನ್ನು ಶಾಲೆಯಲ್ಲಿಯೇ ತಯಾರಿಸಿ ಉಚಿತವಾಗಿ ನೀಡಲಾಗುತ್ತಿದೆ. ಆದರೆ ಈ ಊಟ ಸೇವಿಸಿ ಹಲವು ಬಾರಿ ಮಕ್ಕಳು ಅಸ್ವಸ್ಥರಾದ ಬಗ್ಗೆ ನಾವು ಕೇಳಿದ್ದೇವೆ. ಅಂತಹದೊಂದು ಘಟನೆ ಬಿಹಾರದ ಬಂಕಾದಲ್ಲಿ ನಡೆದಿದ್ದು, ಈ ಬಗ್ಗೆ ಇಲ್ಲಿನ ವಿದ್ಯಾರ್ಥಿಯೊಬ್ಬ ಸಾಕ್ಷಿ ಸಮೇತ ನಿರೂಪಿಸಿದ್ದಾನೆ. ಈ ಸುದ್ದಿ ಈಗ ಎಲ್ಲೆಡೆ ವೈರಲ್‌ (Viral News) ಆಗಿದೆ.

ಬಿಹಾರದ ಬಂಕಾದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ರಿಷಿ ಸಿಂಗ್ ಕಾಲೇಜಿನ ಅವ್ಯವಸ್ಥೆಯಿಂದ ಹಿಡಿದು ಕಳಪೆ ಗುಣಮಟ್ಟದ ಆಹಾರವನ್ನು ನೀಡುತ್ತಿರುವ ವಿಚಾರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಬಯಲು ಮಾಡಿದ್ದಾನೆ.
ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಊಟದಲ್ಲಿ ಸತ್ತ ಹಾವು ಇತ್ತು ಎಂದು ತನ್ನ ಸೋಷಿಯಲ್‌ ಮೀಡಿಯಾ ಪೇಜ್ ನಲ್ಲಿ ಬರೆದಿದ್ದಾನೆ. ಆ ಆಹಾರವನ್ನು ಸೇವಿಸಿದ ವಿದ್ಯಾರ್ಥಿಗಳು ಅನಾರೋಗ್ಯಕ್ಕೀಡಾಗಿದ್ದರು ಎಂಬುದಾಗಿ ತಿಳಿಸಿದ್ದಾನೆ. ಇದಕ್ಕೆ ಸಂಬಂಧಿಸಿದ ಪೋಟೊಗಳನ್ನು ಪೋಸ್ಟ್ ಮಾಡಿದ್ದಾನೆ.

ಹಾಗೇ ಮತ್ತೊಂದು ಪೋಸ್ಟ್ ನಲ್ಲಿ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಬ್ರೆಡ್‌ನ ಬಗ್ಗೆ ತಿಳಿಸಿದ್ದಾನೆ. ಬ್ರೆಡ್‌ಗೆ ಅವಧಿ ಮೀರಿದ ಕಾರಣ ಅದರಲ್ಲಿ ಇರುವೆ, ಹುಳುಗಳು ಇವೆ. ಅದನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಇದು ವಿದ್ಯಾರ್ಥಿಗಳ ಆರೋಗ್ಯವನ್ನು ಹಾಳುಮಾಡುತ್ತದೆ ಎಂದು ಅದಕ್ಕೆ ಸಂಬಂಧಪಟ್ಟ ವಿಡಿಯೊ ತುಣುಕೊಂದನ್ನು ಪೋಸ್ಟ್ ಮಾಡಿದ್ದಾನೆ.

ಅಲ್ಲದೇ ಇದರ ಕುರಿತು ಕ್ರಮ ತೆಗೆದುಕೊಳ್ಳಲು ಕಾಲೇಜು ಆಡಳಿತ ಮತ್ತು ಸ್ಥಳೀಯ ಪ್ರಾಧಿಕಾರ ಯಾರು ಮುಂದೆ ಬರುತ್ತಿಲ್ಲ ಎಂದು ವಿದ್ಯಾರ್ಥಿಯು ತಿಳಿಸಿದ್ದಾನೆ. ಹಾಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಬಂಕಾಗೆ ಟ್ಯಾಗ್ ಮಾಡಿದ್ದಾನೆ. ಜೂನ್ 17 ಸೋಮವಾರದಿಂದು ಈ ಘಟನೆ ವರದಿಯಾಗಿದೆ.

ಈ ಘಟನೆಯ ನಂತರ ಬಂಕಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಂಶುಲ್ ಕುಮಾರ್ ಮತ್ತು ಇತರ ಕೆಲವು ಅಧಿಕಾರಿಗಳು ಈ ವಿಷಯವನ್ನು ತನಿಖೆ ಮಾಡಲು ಮೆಸ್ ಗೆ ಭೇಟಿ ನೀಡಿದ್ದಾರೆ ಮತ್ತು ಮೆಸ್ ಮಾಲೀಕರಿಗೆ ದಂಡ ವಿಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Gold Rate Today
ಚಿನ್ನದ ದರ7 mins ago

Gold Rate Today: ಆಭರಣ ಖರೀದಿಸುವವರಿಗೆ ಗುಡ್‌ನ್ಯೂಸ್‌; ಮತ್ತೆ ಇಳಿದ ಚಿನ್ನದ ದರ

Austria vs France
ಕ್ರೀಡೆ12 mins ago

Austria vs France: ಗಂಭೀರ ಗಾಯಗೊಂಡ ಎಂಬಾಪೆ; ಮುಂದಿನ ಪಂದ್ಯಕ್ಕೆ ಅನುಮಾನ

Murder case
ಹಾಸನ14 mins ago

Murder Case : ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದು ನೇಣಿಗೆ ಶರಣಾದ ಪತಿ

murder Case
ಶಿವಮೊಗ್ಗ30 mins ago

Murder Case : ಸ್ಮಶಾನಕ್ಕೆ ಕರೆದೊಯ್ದು ಸ್ನೇಹಿತನನ್ನೇ ಕೊಂದು ಹಾಕಿದ ಮಿತ್ರದ್ರೋಹಿ

NEET UG 2024
ದೇಶ32 mins ago

NEET UG 2024: ನೀಟ್ ಯುಜಿ ವಿವಾದ; ಶೇ. 0.001ರಷ್ಟು ನಿರ್ಲಕ್ಷ್ಯವೂ ಸಹಿಸಲು ಸಾಧ್ಯವಿಲ್ಲ ಎಂದು ಚಾಟಿ ಬೀಸಿದ ಸುಪ್ರೀಂ ಕೋರ್ಟ್‌

actor darshan manager death
ಪ್ರಮುಖ ಸುದ್ದಿ49 mins ago

Actor Darshan: ರಕ್ತ ಕಾರಿಕೊಂಡು ಸತ್ತ ದರ್ಶನ್‌ ಫಾರಂ ಹೌಸ್ ಮ್ಯಾನೇಜರ್;‌ ಏನಿದು ಮತ್ತೊಂದು ನಿಗೂಢ?

Gautam Gambhir
ಕ್ರೀಡೆ1 hour ago

Gautam Gambhir: ಅಮೀತ್​ ಶಾ ಭೇಟಿಯಾದ ಗೌತಮ್‌ ಗಂಭೀರ್‌; ಕೋಚ್​ ಆಗುವುದು ಖಚಿತ ಎಂದ ನೆಟ್ಟಿಗರು

Reels tragedy
ದೇಶ1 hour ago

Reels Tragedy : ರೀಲ್ಸ್‌ ಶೋಕಿ; ಪ್ರಪಾತಕ್ಕೆ ಬಿದ್ದು ಯುವತಿ ಸಾವು- ಛಿದ್ರಗೊಂಡ ಕಾರು

bhavani revanna bail
ಕ್ರೈಂ1 hour ago

Bhavani Revanna: ಭವಾನಿ ರೇವಣ್ಣ‌ ನಿರಾಳ, ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್

Viral News
Latest1 hour ago

Viral News: 20 ತಿಂಗಳ ಮಗುವಿಗೆ ಸಿಗರೇಟ್ ಸೇದಿಸಲು, ಮದ್ಯ ಕುಡಿಸಲು ಯತ್ನಿಸಿದ ತಾಯಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು24 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌