Surapura Assembly constituency: ಸುರಪುರ ಉಪ ಚುನಾವಣೆಗೆ ರಾಜುಗೌಡ ಬಿಜೆಪಿ ಅಭ್ಯರ್ಥಿ; ಹೇಗಿದೆ ಕ್ಷೇತ್ರ ಚಿತ್ರಣ? - Vistara News

ರಾಜಕೀಯ

Surapura Assembly constituency: ಸುರಪುರ ಉಪ ಚುನಾವಣೆಗೆ ರಾಜುಗೌಡ ಬಿಜೆಪಿ ಅಭ್ಯರ್ಥಿ; ಹೇಗಿದೆ ಕ್ಷೇತ್ರ ಚಿತ್ರಣ?

Surapura Assembly constituency: ಬಿ.ಎಸ್.‌ ಯಡಿಯೂರಪ್ಪ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ರಾಜುಗೌಡ ಕ್ಷೇತ್ರದಲ್ಲಿ ಜನರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರು. ಆದರೆ, ಕಾಂಗ್ರೆಸ್‌ ಅಭ್ಯರ್ಥಿಗೆ ಇರುವ ಅನುಕಂಪದ ಅಲೆಯನ್ನು ದಾಟಿ ಇವರು ಜಯಗಳಿಸಬೇಕೆಂದರೆ ಹೆಚ್ಚಿನ ಶ್ರಮವನ್ನು ಹಾಕಲೇಬೇಕಿದೆ.

VISTARANEWS.COM


on

Raju Gowda Shorapur or Surapura Assembly constituency BJP Candidate
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದೇಶದೆಲ್ಲೆಡೆ ಲೋಕಸಭಾ ಚುನಾವಣೆಯ (Lok Sabha Election 2024) ಫೀವರ್‌ ಹೆಚ್ಚಾಗಿದೆ. ಈ ನಡುವೆ ಮುಖ್ಯ ಚುನಾವಣಾ ಆಯೋಗವು ಹಲವು ರಾಜ್ಯಗಳ ಉಪ ಚುನಾವಣೆಯನ್ನೂ ಸಹ ಘೋಷಣೆ ಮಾಡಿದೆ. ಇದಕ್ಕೆ ಈಗ ರಾಜ್ಯದಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ (Raja Venkatappa Nayaka) ಅವರ ನಿಧನದಿಂದ ತೆರವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ (Surapura Assembly constituency) ಬಿಜೆಪಿ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ರಸಿಂಹ ನಾಯಕ (ರಾಜೂಗೌಡ) (Raju Gowda) ಅವರಿಗೆ ಮತ್ತೆ ಟಿಕೆಟ್ ನೀಡಲಾಗಿದೆ.

ರಾಜುಗೌಡ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ರಾಜಾ ವೆಂಕಟಪ್ಪ ನಾಯಕ ವಿರುದ್ಧ ಸೋಲು ಕಂಡಿದ್ದರು. ಆದರೆ, ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಿದೆ. 2023ರಲ್ಲಿ ನಡೆದ ಚುನಾವಣೆಯಲ್ಲಿ ರಾಜೂಗೌಡ ಅವರು 25223 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು. ಆದರೆ, ಕಳೆದ 2018ರ ಚುನಾವಣೆಯಲ್ಲಿ ರಾಜುಗೌಡ ಅವರು ಗೆದ್ದಿದ್ದರು. ಅಲ್ಲದೆ, ಬಿ.ಎಸ್.‌ ಯಡಿಯೂರಪ್ಪ (BS Yediyurappa) ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಇವರು ಕ್ಷೇತ್ರದಲ್ಲಿ ಜನರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರು. ಆದರೆ, ಕಾಂಗ್ರೆಸ್‌ ಅಭ್ಯರ್ಥಿಗೆ ಇರುವ ಅನುಕಂಪದ ಅಲೆಯನ್ನು ದಾಟಿ ಇವರು ಜಯಗಳಿಸಬೇಕೆಂದರೆ ಹೆಚ್ಚಿನ ಶ್ರಮವನ್ನು ಹಾಕಲೇಬೇಕಿದೆ.

ಕಾಂಗ್ರೆಸ್‌ನಿಂದ ರಾಜಾ ವೇಣುಗೋಪಾಲ ನಾಯಕ ಸ್ಪರ್ಧೆ

ಕಾಂಗ್ರೆಸ್‌ನಿಂದ ಈಗಾಗಲೇ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ. ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ (Raja Venugopala Nayaka) ಸ್ಪರ್ಧೆ ಮಾಡುತ್ತಿದ್ದಾರೆ. ತಂದೆ ನಿಧನವಾಗಿದ್ದರಿಂದ ಅನುಕಂಪದ ಅಲೆ ಹಾಗೂ ಕಾಂಗ್ರೆಸ್‌ ಆಡಳಿತದಲ್ಲಿರುವುದು ಅವರಿಗೆ ಪ್ಲಸ್‌ ಆಗಲಿದೆ. ಜತೆಗೆ ವೇಣುಗೋಪಾಲ ನಾಯಕ್‌ಗೆ ಚುನಾವಣೆ ಹೊಸದೇನಲ್ಲ. ಅವರದ್ದು ರಾಜಕೀಯ ಹಿನ್ನೆಲೆಯ ಕುಟುಂಬವಾಗಿದೆ. ಇವರ ಅಜ್ಜ ರಾಜಾ ಕುಮಾರ ನಾಯಕ ಅವರು ಎರಡು ಬಾರಿ, ತಂದೆ ರಾಜಾ ವೆಂಕಟಪ್ಪ ನಾಯಕ 4 ಬಾರಿ, ಚಿಕ್ಕಪ್ಪ ಒಂದು ಬಾರಿ ಸುರಪುರ ಕ್ಷೇತ್ರದಿಂದ ಶಾಸಕರಾಗಿದ್ದರು. ಅಲ್ಲದೆ, ತಂದೆಯ ಜತೆಗೆ ಚುನಾವಣೆ ಸಂದರ್ಭದಲ್ಲಿ ಕ್ಯಾಂಪೇನ್‌ ಮಾಡುವುದು, ತಂತ್ರಗಾರಿಕೆಯನ್ನು ರೂಪಿಸುವ ಕೆಲಸವನ್ನು ವೇಣುಗೋಪಾಲ ನಾಯಕ ಮಾಡುತ್ತಿದ್ದರು. ಹೀಗಾಗಿ ಅವರಿಗೆ ಈ ಚುನಾವಣೆ ಹೊಸದಲ್ಲ.

ಎಲ್ಲ ಪಕ್ಷದವರೂ ಇಲ್ಲಿ ಗೆದ್ದಿದ್ದಾರೆ

2008ರ ಕ್ಷೇತ್ರ ಮರು ವಿಂಗಡಣೆವರೆಗೂ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಸಾಮಾನ್ಯ ವರ್ಗದವರು ಸ್ಪರ್ಧೆ ಮಾಡಬಹುದಾಗಿತ್ತು. ಇದರ ಬಳಿಕ ಎಸ್‌ಟಿ ಮೀಸಲು ಕ್ಷೇತ್ರವಾಯಿತು. 1957ರಿಂದ ಇಲ್ಲಿಯವರೆಗೆ ಒಟ್ಟು 16 ಬಾರಿ ಚುನಾವಣೆಗಳು ನಡೆದಿವೆ. ಇದರಲ್ಲಿ ಕಾಂಗ್ರೆಸ್‌ 8, ಬಿಜೆಪಿ 2 ಹಾಗೂ ಸ್ವತಂತ್ರ ಪಕ್ಷ, ಕರ್ನಾಟಕ ಕಾಂಗ್ರೆಸ್‌ ಪಕ್ಷ (ಕೆಸಿಪಿ), ಕನ್ನಡ ನಾಡು ಪಕ್ಷ (ಕೆಎನ್‌ಡಿಪಿ) ಮತ್ತು ಸ್ವತಂತ್ರ್ಯ ಅಭ್ಯರ್ಥಿಗಳು ತಲಾ ಒಮ್ಮೆ ವಿಜಯ ಸಾಧಿಸಿದ್ದಾರೆ.

ಪಕ್ಷಾಂತರ ಮಾಡಿದ್ದ ರಾಜುಗೌಡ

2013ರ ಚುನಾವಣೆಯಲ್ಲಿ ಬಿಜೆಪಿ ತೊರೆದು ಜೆಡಿಎಸ್‌ ಸೇರಿದ್ದ ರಾಜು ಗೌಡ ಸೋಲು ಕಂಡಿದ್ದರು. ಆಗ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ರಾಜಾ ವೆಂಕಟಪ್ಪ ನಾಯಕ 65,033 ಮತಗಳನ್ನು ಪಡೆದು ಗೆದ್ದಿದ್ದರು. ರಾಜುಗೌಡ 60,958 ಮತಗಳನ್ನು ಪಡೆದಿದ್ದರು. ಕೇವಲ 4,075 ಮತಗಳ ಅಂತರದಿಂದ ಸೋಲು ಕಂಡಿದ್ದರು.

2018ರ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಸೇರಿದ ರಾಜು ಗೌಡ 1,04,426 ಮತಗಳನ್ನು ಪಡೆದು ಮೂರನೇ ಬಾರಿಗೆ ಜಯ ಸಾಧಿಸಿದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ರಾಜಾ ವೆಂಕಟಪ್ಪ ನಾಯಕ 81,851 ಮತಗಳನ್ನು ಪಡೆದುಕೊಂಡಿದ್ದರು. ಹೀಗಾಗಿ 22,568 ಮತಗಳ ಅಂತರದಲ್ಲಿ ರಾಜುಗೌಡ ಗೆದ್ದಿದ್ದರು.

ಸಮುದಾಯವಾರು ಮತಗಳು ಎಷ್ಟಿವೆ?

ಸದ್ಯದ ಮಾಹಿತಿ ಪ್ರಕಾರ ಸುರಪುರ ಕ್ಷೇತ್ರದಲ್ಲಿ 1,41, 618 ಪುರುಷರು, 1,39,729 ಮಹಿಳಾ, 28 ಲಿಂಗತ್ವ ಅಲ್ಪಸಂಖ್ಯಾತ ಮತದಾರರು ಸೇರಿ ಒಟ್ಟು 2,81,375 ಮತದಾರರಿದ್ದಾರೆ. ಎಸ್‌ಟಿ ಮೀಸಲು ಕ್ಷೇತ್ರವಾಗಿರುವ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಪಂಗಡದ ಜನರೇ ನಿರ್ಣಾಯಕರು.

  • ಪರಿಶಿಷ್ಟ ಪಂಗಡ: 1 ಲಕ್ಷಕ್ಕೂ ಅಧಿಕ ಮತದಾರರು
  • ದಲಿತ: 80 ಸಾವಿರಕ್ಕೂ ಅಧಿಕ ಮತದಾರರು
  • ಮುಸ್ಲಿಂ: 45 ಸಾವಿರಕ್ಕೂ ಅಧಿಕ ಮತದಾರರಿದ್ದಾರೆ.

ಇದನ್ನೂ ಓದಿ: Lok Sabha Election 2024: ಮಂಡ್ಯನಾ? ರಾಮನಗರವಾ? ಧರ್ಮ ಸಂಕಟದಲ್ಲಿ ಮಾಜಿ ಸಿಎಂ ಎಚ್‌ಡಿಕೆ!

ಉಪ ಚುನಾವಣೆಯ ಫಲಿತಾಂಶ ಜೂ. 4ಕ್ಕೆ ಇದ್ದು, ಯಾರು ವಿಜಯಶಾಲಿಯಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಆದರೆ, ಸುರಪುರ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್‌ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Fact Check: ಓವೈಸಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಮಹಿಳೆ ಅಲ್ಲವೆ?

Fact Check: ತಾವು ಮಹಿಳೆಯೇ ಅಲ್ಲ ಎಂದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಹೈದರಾಬಾದ್ ನ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ತಾವು ಮಹಿಳೆಯೇ ಅಲ್ಲ ಎಂದು ಹೇಳಿರುವುದು ನಿಜವೇ, ಅವರು ಯಾಕೆ ಹಾಗೆ ಹೇಳಿದರು. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋದ ನಿಜಾಂಶ ಏನು? ಇಲ್ಲಿದೆ ಸಂಪೂರ್ಣ ವಿವರ.

VISTARANEWS.COM


on

By

Viral Video
Koo

ಹೈದರಾಬಾದ್: ಭಾರತೀಯ ಜನತಾ ಪಕ್ಷದ (BJP) ಹೈದರಾಬಾದ್ ನ (Hyderabad) ಅಭ್ಯರ್ಥಿ ಮಾಧವಿ ಲತಾ (Madhavi Latha) ಅವರು ತಾವು ಮಹಿಳೆಯೇ ಅಲ್ಲ ಎಂದು ಹೇಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗಿದ್ದು, ಇದನ್ನು ನೋಡಿರುವ ನೆಟ್ಟಿಗರು (Fact Check) ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾಧವಿ ಲತಾ ಅವರು “ನಾನು ಮಹಿಳೆ ಅಲ್ಲ” ಎಂದು ಹೇಳುವ ವಿಡಿಯೋವನ್ನು ಕತ್ತರಿಸಿ ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿದೆ. ಹೈದರಾಬಾದ್‌ನ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಮಹಿಳೆ ಅಲ್ಲ ಎಂದು ಸುಳ್ಳು ಪ್ರಚಾರವನ್ನೂ ಮಾಡಲಾಗುತ್ತಿದೆ. ಇದರ ಮೂಲ ಸಂದರ್ಶನದಲ್ಲಿ ಲತಾ ಅವರು ತಾನು ಕೇವಲ ಮಹಿಳೆಯಲ್ಲ ಆದರೆ ಶಕ್ತಿ ಎಂದು ಹೇಳಿದ್ದರು.

ಓವೈಸಿ ವಿರುದ್ಧ ಕಣಕ್ಕೆ

ತೆಲಂಗಾಣದ ಹೈದರಾಬಾದ್‌ನಲ್ಲಿ ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನ ಹಾಲಿ ಸಂಸದ ಅಸಾದುದ್ದೀನ್ ಓವೈಸಿ ವಿರುದ್ಧ ಬಿಜೆಪಿಯಿಂದ ಕಣಕ್ಕೆ ಇಳಿದಿರುವ ನಟಿ ಲತಾ ಅವರು ಇತ್ತೀಚೆಗೆ ಪ್ರಚಾರ ಕಾರ್ಯಕ್ರಮವೊಂದರಲ್ಲಿ 221 ಕೋಟಿ ರೂ. ಮೌಲ್ಯದ ಕುಟುಂಬದ ಆಸ್ತಿಯನ್ನು ಘೋಷಿಸಿದ ನಂತರ ಹೈದರಾಬಾದ್ ಕ್ಷೇತ್ರದ ಶ್ರೀಮಂತ ಅಭ್ಯರ್ಥಿಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: Viral News: ಸಿಂಗಾಪುರ ಏರ್‌ಲೈನ್ಸ್‌ ಪೈಲಟ್‌ ಅಂತಾ ಹೇಳ್ಕೊಂಡು ಪೋಸ್‌ ಕೊಡ್ತಿದ್ದವ ಲಾಕ್‌!

ವಿಡಿಯೋದಲ್ಲಿ ಏನಿದೆ?

ಈಗ ವೈರಲ್ ಆಗಿರುವ ವಿಡಿಯೋದಲ್ಲಿ ಲತಾ ಅವರು ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದು, ಮಹಿಳೆಯಾಗಿ ಪರಿಸ್ಥಿತಿಯನ್ನು ನಿಭಾಯಿಸುವ ಬಗ್ಗೆ ವರದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ, “ನಾನು ಮಹಿಳೆ ಅಲ್ಲ, ದಯವಿಟ್ಟು ನನ್ನನ್ನು ಮಹಿಳೆ ಎಂದು ಕರೆಯಬೇಡಿ”’ ಎಂದು ನೇರವಾಗಿ ಹೇಳಿದ್ದಾರೆ. ಆದರೆ ಮುಂದೆ ಅವರು, ನಾನು ಮಹಿಳೆ ಅಲ್ಲ, ಕೇವಲ ಮಹಿಳೆ ಅಲ್ಲ, ಮಹಾ ಶಕ್ತಿ ಎಂದು ಮಾಧವಿ ಲತಾ ಹೇಳಿದ್ದರು. ಆದರೆ ಈ ಭಾಗ ತೋರಿಸದೆ ತಾವು ಮಹಿಳೆ ಅಲ್ಲ ಎಂದ ದೃಶ್ಯವನ್ನಷ್ಟೇ ಕಟ್ ಮಾಡಿ ಶೇರ್ ಮಾಡಲಾಗುತ್ತದೆ.

ಈ ಕುರಿತು ಹಲವಾರು ಮಂದಿ ನೆಟ್ಟಿಗರು ಕಾಮೆಂಟ್ ಮಾಡಿದ್ದು, ಹಾಗಾದರೆ ಹೈದರಾಬಾದ್ ಬಿಜೆಪಿ ಅಭ್ಯರ್ಥಿ ಮಹಿಳೆ ಅಲ್ಲವೇ, ಮುಖ ನೋಡುವಾಗ ಮಹಿಳೆಯಂತೆ ಕಾಣುತ್ತಾರೆ, ಹಾಗಾದರೆ ಅವರು ಮಂಗಳಮುಖಿಯೇ… ಹೀಗೆ ಹಲವು ರೀತಿಯಲ್ಲಿ ಕಾಮೆಂಟ್ ಗಳನ್ನು ಮಾಡಿದ್ದಾರೆ.


ಸತ್ಯ ಏನು?

ಲತಾ ಅವರು ಮಹಿಳೆ ಅಲ್ಲ ಎಂದು ನೀಡಿರುವ ಹೇಳಿಕೆಯನ್ನು ಕತ್ತರಿಸಿ ಹಂಚಿಕೊಳ್ಳಲಾಗಿದೆ ಎಂದು ಬೂಮ್ ಕಂಡುಹಿಡಿದಿದೆ. ‘ನ್ಯೂಸ್ ನೇಷನ್’ ಎಂಬ ಹಿಂದಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಲತಾ ಅವರು, ಓವೈಸಿ ವಿರುದ್ಧ ಸ್ಪರ್ಧಿಸುತ್ತಿರುವ ವಿಚಾರವಾಗಿ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ್ದಾರೆ. ಅಲ್ಲದೇ ತಾವು ಬಿಜೆಪಿ ಸೇರಿದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಕುರಿತಾದ ಹಲವಾರು ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾರೆ.

ಹೈದರಾಬಾದ್‌ನ ಹಳೆಯ ನಗರ ಭಾಗದ ಕೆಲವು ಪ್ರದೇಶಗಳಿಗೆ ಭೇಟಿ ನೀಡಿಲ್ಲ ಎಂದಿರುವ ಅವರು, ನಗರದ ಅತಿದೊಡ್ಡ ಕೊಳೆಗೇರಿ ವಸಾಹತುಗಳಲ್ಲಿ ಒಂದಾದ ತಾಲಾಬ್ ಕಟ್ಟಾ ಮುಂತಾದವುಗಳ ಬಗ್ಗೆ ವರದಿಗಾರ ಪ್ರಶ್ನೆಗಳಿಗೆ ಉತ್ತರಿಸಿದರು. ಒಬ್ಬ ಮಹಿಳೆಯಾಗಿ ನೀವು ಆ ಪರಿಸ್ಥಿತಿಯನ್ನು ಹೇಗೆ ಎದುರಿಸಲು ಯೋಜಿಸುತ್ತೀರಿ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸಿಟ್ಟಾದ ಸ್ವರದಲ್ಲಿ ನಾನು ಮಹಿಳೆ ಅಲ್ಲ, ನಾನು ಶಕ್ತಿ. ನೀವು ಅದನ್ನು ಮೊದಲು ಸ್ಪಷ್ಟಪಡಿಸಬೇಕು. ನನ್ನನ್ನು ಮಹಿಳೆ ಎಂದು ಪದೇ ಪದೇ ಕರೆಯಬೇಡಿ. ನೀವು ನನ್ನನ್ನು ದುರ್ಬಲ ಎಂದು ಪರಿಗಣಿಸುವಂತೆ ತೋರುತ್ತಿದೆ ಎಂದು ಹೇಳಿದ್ದಾರೆ.

ಇದಾದ ನಂತರ ಲತಾ ಕ್ಯಾಮೆರಾದತ್ತ ತಿರುಗಿ, ನೇರವಾಗಿ ವೀಕ್ಷಕರನ್ನು ಉದ್ದೇಶಿಸಿ, ನಾನು ಒಬ್ಬ ಮಹಿಳೆ ಅಲ್ಲ, ತನ್ನ ಸಹೋದರ ಸಹೋದರಿಯರ ಶಕ್ತಿಯಿಂದ ಇಲ್ಲಿರುವ ಶಕ್ತಿ ಸ್ವತಃ ನಾನು. ಅವರ ಶಕ್ತಿಯಿಂದಾಗಿ ನಾನು ಉಳಿದಿದ್ದೇನೆ ಎಂದು ತಿಳಿಸಿದ್ದಾರೆ.

ಶಕ್ತಿ ಎಂಬ ಪದವನ್ನು ಹಿಂದೂ ಧರ್ಮದಲ್ಲಿ ವಿವಿಧ ರೂಪಗಳಲ್ಲಿ ಪೂಜಿಸುವ ದೈವಿಕ ಸ್ತ್ರೀಲಿಂಗ ಶಕ್ತಿಯನ್ನು ಉಲ್ಲೇಖಿಸಲು ಇದನ್ನು ಬಳಸಲಾಗುತ್ತದೆ. ವೈರಲ್ ಆಗಿರುವ ವಿಡಿಯೋದಲ್ಲಿ ಲತಾ ಅವರ ಹೇಳಿಕೆಯನ್ನು ಕತ್ತರಿಸಿ ಹಾಕಲಾಗಿದೆ.

Continue Reading

ಕರ್ನಾಟಕ

Lok Sabha Election 2024: ದೇಶ, ರಾಜ್ಯಕ್ಕೆ ಬಿಜೆಪಿಯಿಂದ ಖಾಲಿ ಚೊಂಬು ಕೊಟ್ಟಿದ್ದಾರೆ: ರಾಹುಲ್‌ ಗಾಂಧಿ

Lok Sabha Election 2024: ಬಳ್ಳಾರಿಯನ್ನು ಜೀನ್ಸ್ ಕ್ಯಾಪಿಟಲ್ ಮಾಡುವುದಾಗಿ ಭರವಸೆ ನೀಡಿದ್ದೆ. ಇದನ್ನು ನಿಜ ಮಾಡಿ ತೋರಿಸುತ್ತೇನೆ. ಈ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಿಳಿಸಿದ್ದಾರೆ.

VISTARANEWS.COM


on

Congress leader Rahul Gandhi speech in Ballari
Koo

ಬಳ್ಳಾರಿ: ಪ್ರಧಾನಿ ನರೇಂದ್ರ ಮೋದಿಯವರ ʼಭಾರತೀಯ ಚೊಂಬು ಪಾರ್ಟಿʼ ದೇಶ, ರಾಜ್ಯಕ್ಕೆ ಖಾಲಿ ಖಾಲಿ ಚೊಂಬು ಕೊಟ್ಟಿದ್ದಾರೆ. ಬರ ಪರಿಹಾರ ನೀಡುವಲ್ಲಿಯೂ ಕರ್ನಾಟಕಕ್ಕೆ ಖಾಲಿ ಚೊಂಬು ನೀಡಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ (Lok Sabha Election 2024) ತೀವ್ರ ವಾಗ್ದಾಳಿ ನಡೆಸಿದರು.

ಲೋಕಸಭಾ ಚುನಾವಣೆ ಹಿನ್ನೆಲೆ ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್‌ ಸಮಿತಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಅವರು ಮಾತನಾಡಿದರು.

ಈ ಚುನಾವಣೆಯು ಸಂವಿಧಾನ ರಕ್ಷಣೆ ಮಾಡುವುದಕ್ಕೆ ನಡೆಯುತ್ತಿರುವ ಚುನಾವಣೆಯಾಗಿದೆ. ಈ ಬಾರಿ ಬಿಜೆಪಿಗೆ ಅಧಿಕಾರ ಕೊಟ್ಟರೆ ಸಂವಿಧಾನ ಬದಲಾಯಿಸುತ್ತೇವೆ ಎಂದು ಹೇಳುತ್ತಾರೆ. ಆದರೆ ಸಂವಿಧಾನ ಬದಲಾಯಿಸುವ ಶಕ್ತಿ ಯಾರಿಗೂ ಇಲ್ಲ ಎಂದ ಅವರು, ಕಾಂಗ್ರೆಸ್, ಇಂಡಿಯಾ ಒಕ್ಕೂಟ ಸಂವಿಧಾನ ಉಳಿಸುವ ಕೆಲಸ ಮಾಡುತ್ತಿದೆ ಎಂದರು.

ಇದನ್ನೂ ಓದಿ: Lok Sabha Election : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ; ದಾಖಲೆ ಪ್ರಮಾಣದಲ್ಲಿ ಮತ ಚಲಾವಣೆ

ಬಿಜೆಪಿಯು ಅದಾನಿಯಂತಹ ಜನರಿಗೆ ದೇಶದ ಹಣ ಕೊಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಬಿಜೆಪಿ ಸಿರಿವಂತರಿಗೆ ಹಣ ಕೊಟ್ಟರೆ, ನಾವು ಬಡವರಿಗೆ ಹಣ ಕೊಡುತ್ತೇವೆ ಎಂದು ತಿಳಿಸಿದರು.

ಮೋದಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ನರೇಂದ್ರ ಮೋದಿ ಅವರು ಕೋವಿಡ್‌ನಂತೆ ನಿರುದ್ಯೋಗವನ್ನು ತಂದಿದ್ದಾರೆ. ಕೊರೊನಾ ಓಡಿಸಲು ದೇಶದ ಜನತೆಗೆ ರಸ್ತೆಯಲ್ಲಿ ನಿಂತು ಗಂಟೆ ಜಾಗಟೆ ಭಾರಿಸಿ ಎಂದಿದ್ದರು, ಈಗ ನಿರುದ್ಯೋಗಿಗಳಿಗೆ ರಸ್ತೆ ಬದಿ ಪಕೋಡ ಮಾರಾಟ ಮಾಡಿ ಎನ್ನುತ್ತಿದ್ದಾರೆ. ಹೀಗಾಗಿ, ಕಾಂಗ್ರೆಸ್‌ನಿಂದ ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸುವ ಹೊಸ ಯೋಜನೆ ರೂಪಿಸಲಾಗುವುದು ಎಂದರು.

ಇದನ್ನೂ ಓದಿ: Lok Sabha Election 2024: ಮತದಾನ ಬಹಿಷ್ಕರಿಸಿದ್ದ 2 ಗ್ರಾಮದ ಜನ, ಸಂಜೆಗೆ ಮನವೊಲಿಕೆ; 7 ಗಂಟೆ ದಾಟಿದರೂ ಮುಗಿಯದ ಮತದಾನ

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಇಡೀ ದೇಶದ ಜನತೆಗೆ ದಾರಿ ತೋರಿಸಿದೆ. ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಯೋಜನೆ, ಯುವನಿಧಿ, ಗೃಹಜ್ಯೋತಿ ಮೂಲಕ ರಾಜ್ಯದ ಜನತೆಗೆ ನೀಡುತ್ತಿದೆ. ಈವರೆಗೂ ಯಾವುದೇ ಸರ್ಕಾರ ಈ ಯೋಜನೆಗಳನ್ನು ನೀಡಿಲ್ಲ ಎಂದ ಅವರು, ಪ್ರತಿ ಬಡ ಕುಟುಂಬದ ಮಹಿಳೆಯನ್ನು ಆಯ್ಕೆ ಮಾಡಿ ಅವರ ಬ್ಯಾಂಕ್ ಖಾತೆಗೆ ಒಂದು ಲಕ್ಷ ರೂ. ಹಾಕಲಾಗುವುದು. ದೇಶದ ಕೋಟ್ಯಾಂತರ ಮಹಿಳೆಯರು, ಬಡವರು, ನಿರುದ್ಯೋಗಿಗಳನ್ನು ಲಕ್ಷಾಧೀಶ್ವರರನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ರೈತರ ಎಲ್ಲ ಸಾಲ ಮನ್ನಾ ಮಾಡಲಾಗುವುದು. ಅಗ್ನಿವೀರ ಯೋಜನೆಯನ್ನು ರದ್ದುಗೊಳಿಸಲಾಗುವುದು. ಜಿಎಸ್‌ಟಿಯನ್ನು ಸರಳಗೊಳಿಸಲಾಗುವುದು ಎಂದು ಇದೇ ವೇಳೆ ರಾಹುಲ್‌ ಗಾಂಧಿ ತಿಳಿಸಿದರು.

ಗೇಟ್ ಗಟ್ಟಿ ಇದ್ದರೆ ಕಿತ್ತು ಒಳಗಡೆ ಬನ್ನಿ ಎಂದ ಸಚಿವ

ಕಾಂಗ್ರೆಸ್ ಸಮಾವೇಶದಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸಲು ಸಚಿವ ಬಿ.ನಾಗೇಂದ್ರ , ಗೇಟ್ ಗಟ್ಟಿ ಇದ್ದರೆ ಕಿತ್ತು ಒಳಗಡೆ ಬನ್ನಿ. ಸೈನಿಕರಂತೆ ಕಾಂಗ್ರೆಸ್ ಗೆಲುವಿಗೆ ಶ್ರಮಿಸಿ. ಬಿಜೆಪಿಯನ್ನು ಮನೆಗೆ ಕಳಿಸುವವರೆಗೆ ವಿಶ್ರಮಿಸಬಾರದು ಎಂದು ಹುರಿದುಂಬಿಸಿದರು. ಈ ವೇಳೆ ಸಚಿವರ ಕರೆಗೆ ಓಗೊಟ್ಟು ಬ್ಯಾರಿಕೇಡ್‌ಗಳನ್ನು ತಳ್ಳಿ ಜನತೆ ನುಗ್ಗಿದ ಪ್ರಸಂಗ ನಡೆಯಿತು.

ಇದನ್ನೂ ಓದಿ: IPL 2024 : ಅಂಕಪಟ್ಟಿಯ ಅಗ್ರಸ್ಥಾನಿ ರಾಜಸ್ಥಾನ್​ಗೆ ಸವಾಲೊಡ್ಡುವುದೇ ಲಕ್ನೊ ಸೂಪರ್​ ಜೈಂಟ್ಸ್​​

ಸಮಾವೇಶದಲ್ಲಿ ಸಚಿವರಾದ ಶಿವರಾಜ್ ತಂಗಡಗಿ, ಜಮೀರ್ ಅಹ್ಮದ್ ಖಾನ್‌ ಮಾತನಾಡಿದರು.

Continue Reading

ಕರ್ನಾಟಕ

Neha Murder Case: ನೇಹಾ ತಂದೆಗೆ ಗನ್ ಮ್ಯಾನ್, ಮನೆಗೆ ಪೊಲೀಸ್ ಭದ್ರತೆ ಏರ್ಪಡಿಸಿದ ರಾಜ್ಯ ಸರ್ಕಾರ

Neha Murder Case: ನಮ್ಮ ಕುಟುಂಬಕ್ಕೆ ಬೆದರಿಕೆ ಇದೆ ಎಂದು ನೇಹಾ ತಂದೆ ನಿರಂಜನ್‌ ಹಿರೇಮಠ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಹೇಳಿದ್ದರು. ಹೀಗಾಗಿ ಅವರಿಗೆ ರಾಜ್ಯ ಸರ್ಕಾರ ಭದ್ರತೆ ವ್ಯವಸ್ಥೆ ಮಾಡಿದೆ.

VISTARANEWS.COM


on

Neha Murder Case
Koo

ಹುಬ್ಬಳ್ಳಿ: ಮಗಳು ನೇಹಾ ಹತ್ಯೆ (Neha Murder Case) ನಡೆದ ಮೇಲೆ ತಮಗೂ ಜೀವ ಬೆದರಿಕೆ ಇದೆ ಎಂದು ನಿರಂಜನ ಹಿರೇಮಠ್‌ ಅವರು ಹೇಳಿದ ಹಿನ್ನೆಲೆಯಲ್ಲಿ ಅವರಿಗೆ ಗನ್ ಮ್ಯಾನ್, ಮನೆಗೆ ಪೊಲೀಸ್ ಭದ್ರತೆಯನ್ನು ರಾಜ್ಯ ಸರ್ಕಾರ ಏರ್ಪಡಿಸಿದೆ. ನೇಹಾ ಹಿರೇಮಠ್ ಹತ್ಯೆ ಹಿನ್ನೆಲೆ ಸಿಎಂ ಸಿದ್ಧರಾಮಯ್ಯ ಅವರು ನೇಹಾ ತಂದೆ ನಿರಂಜನ್ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿ, ಬೆದರಿಕೆ ಇದ್ದರೆ ಭದ್ರತೆ ಒದಗಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ನೇಹಾ ತಂದೆಗೆ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

ಮಗಳ ಹತ್ಯೆ ನಂತರ ಅನೇಕರು ಬಂದು ಸಾಂತ್ವನ ಹೇಳಿ, ಧೈರ್ಯ ತುಂಬುತ್ತಿದ್ದಾರೆ. ಆದರೆ ಮಗಳ ಹತ್ಯೆಯಾದ ಐದನೇ ದಿನ, ಸಂತಾಪದ ನೆಪದಲ್ಲಿ ಒಬ್ಬರು ನಮ್ಮ ಮನೆಗೆ ಬಂದು ವಿಡಿಯೊ ಮಾಡಿಕೊಂಡು ಹೋಗಿದ್ದಾರೆ. ಕೆಲವೊಂದು ಅನುಮಾನಾಸ್ಪದ ಸನ್ನಿವೇಶ ಕಂಡು ಬಂದಿದೆ. ಕೊಲೆ ಮಾಡುವ ಮುನ್ನ ಆರೋಪಿ ಬಿಡ್ನಾಳದಲ್ಲಿ ಅನುಮಾನಾಸ್ಪದವಾಗಿ ಓಡಾಡಿದ್ದ ಎಂದು ತಿಳಿದು ಬಂದಿದೆ. ಇವತ್ತು ಕೆಲ ವ್ಯಕ್ತಿಗಳು ಯಾವುದೊ ಸಂಚು ಹಾಕಿದ್ದಾರೆ ಎಂಬ ಅನುಮಾನ ಬಂದಿದೆ. ಈ ವಿಷಯವನ್ನು ಪೊಲೀಸ್ ಆಯುಕ್ತರಿಗೆ ಹೇಳಿದ್ದೇವೆ, ಅವರು ಭದ್ರತೆ ಕೊಡುವುದಾಗಿ ಹೇಳಿದ್ದು, ಪೊಲೀಸರನ್ನು ನಿಯೋಜಿಸಿದ್ದಾರೆ ಎಂದು ನಿರಂಜನ್‌ ಗುರುವಾರ ತಿಳಿಸಿದ್ದರು. ಇದರ ಬೆನ್ನಲ್ಲೇ ಅವರಿಗೆ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

ಏನಿದು ಪ್ರಕರಣ?

ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌ ಎಂಬಾತ ಕಾರ್ಪೋರೇಟರ್‌ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದು ಎಸ್ಕೇಪ್‌ ಆಗಲು ಯತ್ನಿಸಿದ್ದ. ಏ.18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲೇ ಈ ಹತ್ಯೆ ನಡೆದಿತ್ತು. ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳು ನೇಹಾ ಹಿರೇಮಠ ಬರ್ಬರವಾಗಿ ಕೊಲೆಯಾಗಿದ್ದಳು.

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಳು. ಅದೇ ಕಾಲೇಜಿನಲ್ಲಿ ಓದುತ್ತಿದ್ದ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಳು ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಆತ ಏ.18ರ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದ, ಆದರೆ ನೇಹಾ ಪ್ರೀತಿಸಲು‌ ನಿರಾಕರಿಸಿದ್ದಳು.

ಇದನ್ನೂ ಓದಿ | Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿ ಫಯಾಜ್‌ ಏಕಾಏಕಿ ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದ. ಆತನಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದ ನೇಹಾಳನ್ನು ಹಿಡಿದುಕೊಂಡ ಪಾಗಲ್‌ ಪ್ರೇಮಿ, ಮನಬಂದಂತೆ ಚಾಕುವಿನಿಂದ ಇರಿದಿದ್ದ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದರಿಂದ ನೇಹಾಳಿಗೆ ತೀವ್ರ ರಕ್ತಸ್ರಾವವಾಗಿತ್ತು. ಕೂಡಲೇ ಅಲ್ಲಿದ್ದವರು ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದರು. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಳು.

Continue Reading

ಕರ್ನಾಟಕ

Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

Lok Sabha Election 2024: ರಾಜ್ಯದಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ ಎರಡೂ ಹಂತಗಳಲ್ಲೂ ಒಟ್ಟು ಶೇ. 68.96 ಮತದಾನ ನಡೆದಿತ್ತು. ಈ ಬಾರಿ ಮೊದಲ ಹಂತದಲ್ಲಿ ಶೇ.69.23 ವೋಟಿಂಗ್‌ ನಡೆದಿದೆ, ಇನ್ನು ರಾಜ್ಯದ ಎಲ್ಲ ಮತಗಟ್ಟೆಗಳಲ್ಲಿ ಬಹುತೇಕ ಶಾಂತಿಯುತವಾಗಿ ಶುಕ್ರವಾರ ಮತದಾನವಾಗಿದೆ.

VISTARANEWS.COM


on

Koo

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ 2024ರ (Lok Sabha Election 2024) ಮೊದಲ ಹಂತದ ಮತದಾನ ಶುಕ್ರವಾರ ಮುಕ್ತಾಯವಾಗಿದೆ. ಒಂದೆರಡು ಕಡೆ ಸಣ್ಣಪುಟ್ಟ ಅಹಿತಕರ ಘಟನೆಗಳು ಹೊರತುಪಡಿಸಿದರೆ ಎಲ್ಲೆಡೆ ಬಹುತೇಕ ಶಾಂತಿಯುತವಾಗಿ ಮತದಾನ ಜರುಗಿದ್ದು, 14 ಕ್ಷೇತ್ರಗಳಲ್ಲಿ ಸಂಜೆ 6 ಗಂಟೆವರೆಗೆ ಒಟ್ಟು ಶೇ.69.23 ಮತದಾನ ದಾಖಲಾಗಿದೆ. ಮಂಡ್ಯ ಕ್ಷೇತ್ರದಲ್ಲಿ ಅತಿಹೆಚ್ಚು ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾನ ದಾಖಲಾಗಿದೆ.

ಮಂಡ್ಯ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ ಶೇ.81.48 ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ 52.81 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಇನ್ನು ಮೊದಲ ಹಂತದಲ್ಲಿ ಒಟ್ಟು 2,88,08,182 ಮತದಾರರು ಮತ ಚಲಾಯಿಸಿದ್ದು, 14 ಕ್ಷೇತ್ರಗಳಲ್ಲಿ 118 ಪಕ್ಷೇತರ ಅಭ್ಯರ್ಥಿಗಳು ಸೇರಿ 247 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಇದರಲ್ಲಿ 226 ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ. ಜೂನ್‌ 4ರಂದು ಫಲಿತಾಂಶ ಹೊರಬೀಳಲಿದೆ.

14 ಕ್ಷೇತ್ರಗಳ ಶೇಕಡಾವಾರು ಮತದಾನ ಪಟ್ಟಿ

ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ?

ಕ್ಷೇತ್ರಲೋಕಸಭಾ ಚುನಾವಣೆ-2024ಲೋಕಸಭಾ ಚುನಾವಣೆ-2019
ಉಡುಪಿ-ಚಿಕ್ಕಮಗಳೂರುಶೇ. 76.06ಶೇ. 76.07
ಹಾಸನಶೇ. 77.51ಶೇ. 77.35
ದಕ್ಷಿಣ ಕನ್ನಡ
ಶೇ. 77.43ಶೇ. 77.99
ಚಿತ್ರದುರ್ಗ
ಶೇ. 73.11ಶೇ. 70.80
ತುಮಕೂರು
ಶೇ. 77.70ಶೇ. 77.43
ಮಂಡ್ಯಶೇ. 81.48ಶೇ. 80.59
ಮೈಸೂರುಕೊಡಗು
ಶೇ. 70.45ಶೇ. 69.51
ಚಾಮರಾಜನಗರ
ಶೇ. 76.59ಶೇ. 75.35
ಬೆಂಗಳೂರು ಗ್ರಾಮಾಂತರ
ಶೇ.67.29ಶೇ. 64.98
ಬೆಂಗಳೂರು ಉತ್ತರ
ಶೇ.54.42ಶೇ. 54.76
ಬೆಂಗಳೂರು ಸೆಂಟ್ರಲ್‌
ಶೇ. 52.81ಶೇ. 54.32
ಬೆಂಗಳೂರು ದಕ್ಷಿಣ
ಶೇ. 53.15ಶೇ. 53.70
ಚಿಕ್ಕಬಳ್ಳಾಪುರ
ಶೇ. 76.82ಶೇ. 76.74
ಕೋಲಾರಶೇ. 78.07
ಶೇ. 77.25
ಒಟ್ಟು ಶೇಕಡಾವಾರು ಮತದಾನ 69.23

2019ರ ಲೋಕಸಭಾ ಚುನಾವಣೆಯ ಒಟ್ಟು ಮತದಾನ ಎಷ್ಟು?
2019ರ ಲೋಕಸಭಾ ಚುನಾವಣೆಯಲ್ಲಿ ಎರಡೂ ಹಂತ ಸೇರಿ ಒಟ್ಟು ಶೇ. 68.96 ಮತದಾನ ನಡೆದಿತ್ತು. ಮಂಡ್ಯದಲ್ಲಿ ಅತಿಹೆಚ್ಚು ಶೇ. 80.59, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಶೇ. 53.70 ಮತದಾನ ದಾಖಲಾಗಿತ್ತು.

ಇದನ್ನೂ ಓದಿ | Lok Sabha Election 2024: ಮತ ಹಾಕದವರನ್ನು ಮತ ಪಟ್ಟಿಯಿಂದ ತೆಗೆದುಹಾಕಬೇಕು: ಅನಂತ್ ನಾಗ್ ಸಲಹೆಗೆ ಏನಂತೀರಿ?

ಇಂಡಿಗನತ್ತ ಮತಗಟ್ಟೆಯಲ್ಲಿ ಮರು ಮತದಾನ ಸಾಧ್ಯತೆ

ಚಾಮರಾಜನಗರದ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಮರು ಮತದಾನ ನಡೆಯುವ ಸಾಧ್ಯತೆ ಇದೆ. ಶುಕ್ರವಾರ ಕೇವಲ 10 ಮತದಾರರು ಮಾತ್ರ ಹಕ್ಕು ಚಲಾವಣೆ ಮಾಡಿದ್ದಾರೆ. ಮತಗಟ್ಟೆಯಲ್ಲಿ ಮೂಲಸೌಕರ್ಯ ಇಲ್ಲ ಎಂದು ಮತದಾರರು ಅಸಮಾಧಾನ ಹೊರಹಾಕಿ ಮತದಾನ ಬಹಿಷ್ಕರಿಸಿದ್ದರು. ಹೀಗಾಗಿ 2 ದಿನಗಳೊಳಗೆ ಅಧಿಕಾರಿಗಳು ಮಾತುಕತೆ ನಡೆಸಿ ಮರು ಮತದಾನ ಮಾಡಿಸುವ ಸಾಧ್ಯತೆ ಇದೆ.

ಬೆಳಗ್ಗೆ ಏಳು ಗಂಟೆಗೆ ಆರಂಭಗೊಂಡ ಮತದಾನ ಪಕ್ರಿಯೆ ಸಂಜೆ 6 ಗಂಟೆಗೆ ಸರಿಯಾಗಿ ಅಂತ್ಯಗೊಂಡಿತು. ನಿಗದಿತ ಸಮಯವಾಗುತ್ತಿದ್ದಂತೆ ಅಧಿಕಾರಿಗಳು ಮತಗಟ್ಟೆಯ ಪ್ರಮುಖ ದ್ವಾರಗಳನ್ನು ಮುಚ್ಚಿದರು. ಸಂಜೆ ಐದು ಗಂಟೆಯ ವೇಳೆಗೆ ಶೇ 63.90 ಮತದಾನ ದಾಖಲಾಗಿತ್ತು. ಮತದಾನ ಅವಧಿ ಮುಕ್ತಾಯಗೊಂಡ ಬಳಿಕ 6 ಗಂಟೆ ವೇಳೆಗೆ ಸಾಲಿನಲ್ಲಿದ್ದವರಿಗೆ ಮಾತ್ರ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಇವಿಎಂಗಳಿಗೆ ಸೀಲ್​

ಮತದಾನದ ಸಮಯ ಮುಕ್ತಾಯಗೊಳ್ಳುತ್ತಿದ್ದಂತೆ ಅಧಿಕಾರಿಗಳು ಗೇಟ್​ ಮುಚ್ಚಿದರು. ಈ ವೇಳೆ ಮೊದಲೇ ಬಂದು ಸರತಿಯಲ್ಲಿ ಸಾಲಿನಲ್ಲಿ ನಿಂತವರಿಗೆ ಮಾತ್ರ ಅವಕಾಶ ನೀಡಲಾಯಿತು. ಕೆಲವರು ಅ ಬಳಿಕ ಬಂದರೂ ಅವರಿಗೆ ಅವಕಾಶ ನೀಡಲು ಹಿರಿಯ ಅಧಿಕಾರಿಗಳು ಒಪ್ಪಲಿಲ್ಲ. ಎಲ್ಲರೂ ಮತ ಚಲಾವಣೆ ಮಾಡಿದ ಬಳಿಕ ಹಿರಿಯ ಅಧಿಕಾರಿಗಳು ಇವಿಎಂ ಯಂತ್ರಗಳಿಗೆ ಸೀಲ್ ಮಾಡಿದರು. ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಅವರು ಮತ ಯಂತ್ರಗಳನ್ನು ಪ್ಯಾಕ್ ಮಾಡಿದರು. ಈ ಮತಪೆಟ್ಟಿಗಳು ಇನ್ನು ಭಾರೀ ಭದ್ರತೆಯೊಂದಿಗೆ ನಿಗದಿತ ಸ್ಟ್ರಾಂಗ್ ರೂಮ್​ಗೆ ರವಾನೆಯಾಗಲಿವೆ.

ಇದನ್ನೂ ಓದಿ | Lok Sabha Election 2024: ಹೃದಯಾಘಾತಕ್ಕೆ 3 ಬಲಿ; ಮೈಸೂರು, ತುಮಕೂರಿನಲ್ಲಿ ಮತ ಹಾಕಿದ್ದ, ಕೊಡಗಲ್ಲಿ ವೋಟ್‌ ಹಾಕಲು ನಿಂತಿದ್ದವ ಸಾವು!

ಭರ್ಜರಿ ಪ್ರತಿಕ್ರಿಯೆ

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಮುಂಜಾನೆಯಿಂದಲೇ ಜನರು ಅತ್ಯಂತ ಉತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ಬೇಸಿಗೆ ಬಿಸಿಲು ಹೆಚ್ಚಿರಬಹುದು ಎಂಬ ಕಾರಣಕ್ಕೆ ಮುಂಜಾನೆ ಅವಧಿಯಲ್ಲಿ ಮತಗಟ್ಟೆಗಳ ಬಳಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಕಂಡು ಬಂದರು. ಕೆಲವೊಂದು ಜನನಿಬಿಡ ಮತಗಟ್ಟೆಗಳಲ್ಲಿ 2 ಗಂಟೆಗಳಷ್ಟು ಕಾಲ ಜನ ಮತ ಚಲಾಯಿಸಲು ಸರತಿ ಸಾಲಿನಲ್ಲಿ ನಿಂತಿದ್ದರು.

Continue Reading
Advertisement
Vampire Facial
ಆರೋಗ್ಯ4 seconds ago

Vampire Facial: ಹೆಣ್ಣುಮಕ್ಕಳೇ ಎಚ್ಚರ; ಫೇಶಿಯಲ್‌ ಮಾಡಿಸಿಕೊಂಡ ಮೂವರು ಸ್ತ್ರಿಯರಿಗೆ ಎಚ್‌ಐವಿ!

Yogi Adithyanatha
ಪ್ರಮುಖ ಸುದ್ದಿ3 mins ago

Yogi Adityanath: “ಗೋಮಾಂಸ ಸೇವಿಸುವ ಹಕ್ಕು….” ಕಾಂಗ್ರೆಸ್‌ ವಿರುದ್ಧ ಯೋಗಿ ಇನ್ನೊಂದು ಆರೋಪ

Road Accident in Bengaluru
ಬೆಂಗಳೂರು18 mins ago

Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ ಆಂಬ್ಯುಲೆನ್ಸ್‌ ಚಾಲಕ; ಸರಣಿ ಅಪಘಾತಕ್ಕೆ ಕಾರುಗಳು ಜಖಂ, ಗರ್ಭಿಣಿ ಸೇಫ್

Dhanush Gowda Wedding With Sanjana Photos
ಕಿರುತೆರೆ25 mins ago

Dhanush Gowda:  ವೈವಾಹಿಕ ಜೀವನಕ್ಕೆ ಕಾಲಿಟ್ಟ ʻಗೀತಾʼ ಧಾರಾವಾಹಿ ನಟ

ಕರ್ನಾಟಕ37 mins ago

Parkinson’s disease: ಪಾರ್ಕಿನ್ಸನ್ ರೋಗಿಗಳಲ್ಲಿ ಡಿಬಿಎಸ್ ಚಿಕಿತ್ಸೆಗಾಗಿ ಹೊಸ ತಂತ್ರಜ್ಞಾನ- ಇದು ದೇಶದಲ್ಲೇ ಮೊದಲು

Drought Relief
ಕರ್ನಾಟಕ40 mins ago

Drought Relief: ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

IRCTC Jyotirlinga Yatra
ಪ್ರವಾಸ42 mins ago

IRCTC Jyotirlinga Yatra: ರೈಲ್ವೆ ಇಲಾಖೆಯಿಂದ ಏಳು ಜ್ಯೋತಿರ್ಲಿಂಗ ವೀಕ್ಷಣೆ ಪ್ರವಾಸ; ದರ ವಿವರ ಇಲ್ಲಿದೆ

Viral Video
ವೈರಲ್ ನ್ಯೂಸ್42 mins ago

Fact Check: ಓವೈಸಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಮಹಿಳೆ ಅಲ್ಲವೆ?

Road Accident in kalaburagi
ಕಲಬುರಗಿ44 mins ago

Road Accident : ಲಾರಿ- ಬೈಕ್‌ ಅಪಘಾತ; ಪತ್ನಿ ಕಣ್ಣೇದುರೇ ಒದ್ದಾಡಿ ಪ್ರಾಣಬಿಟ್ಟ ಪತಿ

food poisoning raichur news
ಕ್ರೈಂ45 mins ago

Food Poisoning: ಹಾಸ್ಟೆಲ್‌ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ23 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

ಟ್ರೆಂಡಿಂಗ್‌