Site icon Vistara News

Lok Sabha Election 2024: ಕಾಂಗ್ರೆಸ್‌ನ ಈ 10 ಸಚಿವರು ಲೋಕಸಭಾ ಕಣಕ್ಕೆ? ಹೈಕಮಾಂಡ್‌ ಪಟ್ಟು, ಮಂತ್ರಿಗಳ ಇಕ್ಕಟ್ಟು

These 10 Congress Ministers To Contest Lok Sabha Election 2024 new parliament building

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಭರ್ಜರಿ ತಯಾರಿ ನಡೆಸುತ್ತಿದೆ. ಈ ಸಂಬಂಧ ಗುರುವಾರ (ಜ. 4) ನವ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಇಲ್ಲಿ ಹಲವು ವಿಚಾರಗಳು ಚರ್ಚೆಗೆ ಬರಲಿದೆ. ಪ್ರಮುಖವಾಗಿ ನಿಗಮ – ಮಂಡಳಿಗಳ ನೇಮಕ ಹಾಗೂ ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಮಾತುಕತೆ ನಡೆಯಲಿದೆ. ಈಗಾಗಲೇ ಹೈಕಮಾಂಡ್‌ ಬುಲಾವ್‌ ಮೇರೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ (DCM DK Shivakumar) ಅಲ್ಲಿಗೆ ತೆರಳಿದ್ದಾರೆ. ಇನ್ನು ರಾಜ್ಯ ನಾಯಕರ ನಿರಾಸಕ್ತಿ ನಡುವೆಯೂ 10ಕ್ಕೂ ಹೆಚ್ಚು ಸಚಿವರನ್ನು ಲೋಕಸಭಾ ಕಣಕ್ಕೆ ಇಳಿಸಲು ಕಾಂಗ್ರೆಸ್‌ ಹೈಕಮಾಂಡ್‌ ಆಸಕ್ತಿ ತೋರಿದೆ ಎಂಬ ವಿಷಯ ಗೊತ್ತಾಗಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಈಗಾಗಲೇ ರಾಜ್ಯ ಘಟಕದ ಪಟ್ಟಿಯನ್ನು ತೆಗೆದುಕೊಂಡು ಹೋಗಿದ್ದಾರೆ. ಜಿಲ್ಲಾ ಘಟಕಗಳಿಂದ ಮಾಹಿತಿ ಪಡೆದು ಪಟ್ಟಿ ಸಿದ್ಧಪಡಿಸಿದ್ದಾರೆ. ಆದರೆ, ಈ ಪಟ್ಟಿ ಬಗ್ಗೆ ಹೈಕಮಾಂಡ್ ನಾಯಕರಿಗೆ ಅಷ್ಟಾಗಿ ಮನಸ್ಸಿಲ್ಲ. ಶತಾಯಗತಾಯ ಅತಿ ಹೆಚ್ಚು ಸೀಟ್‌ಗಳನ್ನು ಪಡೆಯಬೇಕು ಎಂಬ ಗುರಿಯನ್ನು ಹಾಕಿಕೊಂಡಿರುವ ಕಾಂಗ್ರೆಸ್‌ ದಿಲ್ಲಿ ನಾಯಕರು, ಇದಕ್ಕಾಗಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಲೆಕ್ಕಾಚಾರದಲ್ಲಿ ಇದ್ದಾರೆ. ಆದರೆ, ಹತ್ತಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಅಭ್ಯರ್ಥಿ ಕೊರತೆ ಎದುರಾಗಿದೆ.

ಆ ಕ್ಷೇತ್ರಗಳು ಯಾವುವು?

ಹೈಕಮಾಂಡ್ ಲಿಸ್ಟ್‌ನಲ್ಲಿ ಇರುವ ಸಚಿವರು?

ಇವರಿಗೆ ಇಲ್ಲ ಆಸಕ್ತಿ!

ಆದರೆ, ಸಚಿವರಿಗೆ ಲೋಕಸಭಾ ಚುನಾವಣೆ ಕಣಕ್ಕೆ ಇಳಿಯಲು ಅಷ್ಟಾಗಿ ಆಸಕ್ತಿ ಇಲ್ಲ ಎನ್ನಲಾಗಿದೆ. ಜತೆಗೆ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್‌ ಅವರಿಗೂ ಈ ಬಗ್ಗೆ ಅಷ್ಟಾಗಿ ಆಸಕ್ತಿ ಇಲ್ಲ. ಒಂದು ವೇಳೆ ಪ್ರಧಾನಿ ನರೇಂದ್ರ ಮೋದಿ ಅಲೆಯಲ್ಲಿ ಸೋತರೆ ಸರ್ಕಾರಕ್ಕೆ ಡ್ಯಾಮೇಜ್ ಆಗುತ್ತದೆ ಎಂಬ ಕಾರಣವನ್ನೂ ಹಲವರು ನೀಡುತ್ತಿದ್ದಾರೆ.

ಹಿಂದೇಟಿಗೆ ಕಾರಣವೇನು?

ಲೋಕಸಭಾ ಚುನಾವಣೆಯಲ್ಲಿ ಸಚಿವರನ್ನು ಕಣಕ್ಕಿಳಿಸಲು ಹೈಕಮಾಂಡ್‌ ಪ್ಲಾನ್ ಮಾಡಿದೆಯಾದರೂ ಸ್ಪರ್ಧೆಗೆ ಹಲವು ಸಚಿವರು ನಿರಾಸಕ್ತಿ ತೋರಿದ್ದಾರೆ ಎಂದು ತಿಳಿದುಬಂದಿದೆ. ಹೈಕಮಾಂಡ್‌ ನಿರ್ಧಾರವನ್ನು ಈಗಾಗಲೇ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ. ಆದರೆ, ತಾವು ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡುವುದಿಲ್ಲ. ಒಂದು ವೇಳೆ ನಾವು ಸೋತರೆ ವಿರೋಧ ಪಕ್ಷಗಳಿಗೆ ಆಹಾರವಾಗಬೇಕು ಎಂಬ ಕಾರಣವನ್ನು ಇಡುತ್ತಿದ್ದಾರೆ. ಹೀಗಾಗಿ ನೀವು ಪರ್ಯಾಯ ಅಭ್ಯರ್ಥಿಯನ್ನು ಹುಡುಕಿ ಕಣಕ್ಕಿಳಿಸುವುದೇ ಸೂಕ್ತ ಎಂದು ಹೇಳುತ್ತಿದ್ದಾರೆ.

ಕುಟುಂಬ ವರ್ಗಕ್ಕೆ ನೀಡಲು ಮನವಿ

ಇನ್ನು ಸಿಎಂ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಹೋದ್ಯೋಗಿಗಳ ಬೆಂಬಲಕ್ಕೆ ನಿಂತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸಚಿವರ ಸ್ಪರ್ಧೆ ಬೇಡ. ಇದು ವಿಪಕ್ಷಗಳಿಗೆ ಅಸ್ತ್ರವಾಗಲಿದೆ ಎಂದು ಹೇಳಿದ್ದಾರೆನ್ನಲಾಗಿದೆ.

ಇದನ್ನೂ ಓದಿ: Karnataka Weather : ಗುಡುಗು ಮಿಂಚು ಸಹಿತ ಮಳೆ; ಹವಾಮಾನ ಇಲಾಖೆ ಸೂಚನೆ

ಇನ್ನು ನಾವು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಬೇರೆ ಸಂದೇಶ ರವಾನೆಯಾಗಲಿದೆ. ಫಲಿತಾಂಶ ವ್ಯತಿರಿಕ್ತವಾಗಿ ಬಂದಲ್ಲಿ ಇಲಾಖೆಯ ಮೇಲಿನ ಹಿಡಿತ ತಪ್ಪುತ್ತದೆ. ನಮ್ಮ ಸ್ಪರ್ಧೆ ಬದಲಿಗೆ ಕುಟುಂಬ ವರ್ಗಕ್ಕೆ ಇಲ್ಲವೇ, ನಾವು ಸೂಚಿಸಿದವರಿಗೆ ಟಿಕೆಟ್ ನೀಡಬೇಕು ಎಂದು ಮಂತ್ರಿಗಳು ಮನವಿ ಮಾಡಿದ್ದಾರೆ ಎನ್ನಲಾಗಿದೆ.

Exit mobile version