TVK Party Flag Unveils: ತಮ್ಮ ರಾಜಕೀಯ ಪಕ್ಷದ ಧ್ವಜ, ಚಿಹ್ನೆ ಅನಾವರಣಗೊಳಿಸಿದ ನಟ ವಿಜಯ್ - Vistara News

ರಾಜಕೀಯ

TVK Party Flag Unveils: ತಮ್ಮ ರಾಜಕೀಯ ಪಕ್ಷದ ಧ್ವಜ, ಚಿಹ್ನೆ ಅನಾವರಣಗೊಳಿಸಿದ ನಟ ವಿಜಯ್

ತಮಿಳಗ ವೆಟ್ರಿ ಕಳಗಂ ಪಕ್ಷದ ಮೆರೂನ್ (ಕೆಂಗಂದು) ಮತ್ತು ಹಳದಿ ಬಣ್ಣದ ಧ್ವಜವನ್ನು (TVK Party Flag Unveils) ನಟ ವಿಜಯ್ ಅನಾವರಣಗೊಳಿಸಿದರು. ಧ್ವಜದ ಮಧ್ಯದಲ್ಲಿ ಎರಡು ಆನೆಗಳು ಮತ್ತು ನಕ್ಷತ್ರಗಳಿಂದ ಸುತ್ತುವರಿದ ನವಿಲಿನ ಗುರುತು ಇದೆ. ಈ ಧ್ವಜವನ್ನು ಪನೈಯೂರ್ ಪಕ್ಷದ ಕಚೇರಿಯಲ್ಲಿ ವಿಜಯ್ ಧ್ವಜಾರೋಹಣ ಮಾಡಿ ಬಳಿಕ ರಾಜಕೀಯ ಪಕ್ಷದ ಅಧಿಕೃತ ಹಾಡನ್ನು ಬಿಡುಗಡೆ ಮಾಡಲಿದ್ದಾರೆ.

VISTARANEWS.COM


on

TVK Party Flag Unveils
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಮಿಳು ಚಿತ್ರರಂಗದ (Tamil cinema) ಸೂಪರ್ ಸ್ಟಾರ್ (Super star) ವಿಜಯ್ (actor vijay) ಅವರು ತಮ್ಮ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂನ (Tamizhaga Vetri Kazhagam) ಧ್ವಜ ಮತ್ತು ಚಿಹ್ನೆಯನ್ನು (TVK Party Flag Unveils) ಗುರುವಾರ ಅನಾವರಣಗೊಳಿಸಿದರು.

ಮೆರೂನ್ (ಕೆಂಗಂದು) ಮತ್ತು ಹಳದಿ ಬಣ್ಣವಿರುವ ಧ್ವಜದ ಮಧ್ಯದಲ್ಲಿ ಎರಡು ಆನೆಗಳು ಮತ್ತು ನಕ್ಷತ್ರಗಳಿಂದ ಸುತ್ತುವರಿದ ನವಿಲಿನ ಗುರುತು ಇದೆ. ಈ ಧ್ವಜವನ್ನು ಪನೈಯೂರ್ ಪಕ್ಷದ ಕಚೇರಿಯಲ್ಲಿ ವಿಜಯ್ ಧ್ವಜಾರೋಹಣ ಮಾಡಿ ಬಳಿಕ ರಾಜಕೀಯ ಪಕ್ಷದ ಅಧಿಕೃತ ಹಾಡನ್ನು ಬಿಡುಗಡೆ ಮಾಡಲಿದ್ದಾರೆ. ಫೆಬ್ರವರಿಯಲ್ಲಿ ವಿಜಯ್ ಅವರು ತಮಿಳಗ ವೆಟ್ರಿ ಕಳಗಂ ಪಕ್ಷವನ್ನು ಪ್ರಾರಂಭಿಸುವುದಾಗಿ ಘೋಷಿಸಿ, ತಮಿಳುನಾಡಿನಲ್ಲಿ 2026ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದರು. ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಅವರ ಪಕ್ಷವು ಯಾವುದೇ ರಾಜಕೀಯ ಬಣದೊಂದಿಗೆ ಹೊಂದಾಣಿಕೆ ಮಾಡಿಕೊಂಡಿರಲಿಲ್ಲ.

ಪಕ್ಷದ ಧ್ವಜ ಮತ್ತು ಚಿಹ್ನೆಯನ್ನು ಅನಾವರಣಗೊಳಿಸಿದ ಬಳಿಕ ಮಾತನಾಡಿದ ವಿಜಯ್, ನೀವೆಲ್ಲರೂ ನಮ್ಮ ಮೊದಲ ರಾಜ್ಯ ಸಮ್ಮೇಳನಕ್ಕಾಗಿ ಕಾಯುತ್ತಿದ್ದೀರಿ ಎಂದು ನನಗೆ ತಿಳಿದಿದೆ. ಅದಕ್ಕಾಗಿ ಸಿದ್ಧತೆಗಳು ನಡೆಯುತ್ತಿವೆ ಮತ್ತು ಶೀಘ್ರದಲ್ಲೇ ನಾನು ಅದನ್ನು ಘೋಷಿಸುತ್ತೇನೆ. ಅದಕ್ಕೂ ಮೊದಲು ನಾನು ಇಂದು ನಮ್ಮ ಪಕ್ಷದ ಧ್ವಜವನ್ನು ಅನಾವರಣ ಮಾಡಿದ್ದೇನೆ. ನನಗೆ ತುಂಬಾ ಹೆಮ್ಮೆ ಅನಿಸುತ್ತದೆ. ತಮಿಳುನಾಡಿನ ಅಭಿವೃದ್ಧಿಗೆ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ತಮಿಳುನಾಡಿನ ಕಲ್ಯಾಣಕ್ಕಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದ ಅವರು, ಇನ್ನು ಮುಂದೆ ತಮಿಳುನಾಡು ಉತ್ತಮವಾಗಿರುತ್ತದೆ. ಗೆಲುವು ಖಚಿತ ಎಂದು ತಿಳಿಸಿದ್ದಾರೆ. ಉತ್ತರ ತಮಿಳುನಾಡಿನ ವಿಕ್ರವಾಂಡಿಯಲ್ಲಿ ಸಾರ್ವಜನಿಕರ ದೃಷ್ಟಿಯಲ್ಲಿ ಔಪಚಾರಿಕವಾಗಿ ಪಕ್ಷವನ್ನು ಪ್ರಾರಂಭಿಸಲು ಸೆಪ್ಟೆಂಬರ್ ಕೊನೆಯ ವಾರದಲ್ಲಿ ಬೃಹತ್ ರಾಲಿಯನ್ನು ನಡೆಸಿ ಧ್ವಜವನ್ನು ಬಹಿರಂಗಪಡಿಸಲಾಗುತ್ತದೆ. ಚುನಾವಣಾ ಆಯೋಗದ ಅಡಿಯಲ್ಲಿ ಪಕ್ಷದ ನೋಂದಣಿ ಮುಂದುವರಿದ ಹಂತದಲ್ಲಿದ್ದು, ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಎಂದು ಹೇಳಿದರು.


ಇದನ್ನೂ ಓದಿ: Jagan Mohan Reddy: ಬರೀ ಎಗ್‌ ಪಫ್ಸ್‌ಗಾಗಿ ಒಂದಲ್ಲ.. ಎರಡಲ್ಲ ಬರೋಬ್ಬರಿ 3.6 ಕೋಟಿ ರೂ. ವೆಚ್ಚ- ಜಗನ್‌ ಮತ್ತೊಂದು ಹಗರಣ ಬಯಲು

ಧ್ವಜ ಗೀತೆಯನ್ನು ಜನಪ್ರಿಯ ಸಂಗೀತ ನಿರ್ದೇಶಕ ಎಸ್. ಥಮನ್ ಸಂಯೋಜಿಸಿದ್ದು, ಸಾಹಿತ್ಯವನ್ನು ವಿ. ವಿವೇಕ್ ಬರೆದಿದ್ದಾರೆ. ಕಾರ್ಯಕ್ರಮದಲ್ಲಿ ಪಕ್ಷದ 300ಕ್ಕೂ ಹೆಚ್ಚು ಕಾರ್ಯಕರ್ತರು ಮತ್ತು ವಿಜಯ್ ಅವರ ಅಭಿಮಾನಿಗಳ ಸಂಘಗಳ ಸದಸ್ಯರನ್ನು ಆಹ್ವಾನಿಸಲಾಗಿದೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Jagan Mohan Reddy: ಬರೀ ಎಗ್‌ ಪಫ್ಸ್‌ಗಾಗಿ ಒಂದಲ್ಲ.. ಎರಡಲ್ಲ ಬರೋಬ್ಬರಿ 3.6 ಕೋಟಿ ರೂ. ವೆಚ್ಚ- ಜಗನ್‌ ಮತ್ತೊಂದು ಹಗರಣ ಬಯಲು

Jagan Mohan Reddy: ಅಧಿಕಾರದಿಂದ ಕೆಳಗಿಳಿದ ಬಳಿಕ ಆಂಧ್ರ ಪ್ರದೇಶ ಮಾಜಿ ಸಿಎಂ ವೈಎಸ್ ಜಗನ್ ಮೋಹರ್ ರೆಡ್ಡಿ ವಿರುದ್ಧ ದಿನಕ್ಕೊಂದು ಆರೋಪಗಳು ಕೇಳಿಬರುತ್ತಿದ್ದು, ಇದೀಗ ಹೊಸದಾಗಿ ‘ಮೊಟ್ಟೆ ಪಫ್ಸ್’ ವಿವಾದ ಹೊಸದಾಗಿ ಸೇರ್ಪಡೆಯಾಗಿದೆ. ಜಗನ್ ಮೋಹನ್ ರೆಡ್ಡಿ ತಮ್ಮ ಅಧಿಕಾರಾವಧಿಯಲ್ಲಿ ಮೊಟ್ಟೆ ಪಫ್ಸ್ ಗಳಿಗಾಗಿ ಬರೊಬ್ಬರಿ 3.6 ಕೋಟಿ ರೂ ವೆಚ್ಚ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

VISTARANEWS.COM


on

Jagan Mohan Reddy
Koo

ಹೈದರಾಬಾದ್‌:ತಮ್ಮ ಅಧಿಕಾರಾವಧಿಯಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ವಿಶಾಖಪಟ್ಟಣಂನಲ್ಲಿ ಅರಮನೆಯಂತಹ ಐಷಾರಾಮಿ ಬಂಗಲೆ ಕಟ್ಟಿಸಿಕೊಂಡು ಅಕ್ರಮ ಎಸಗಿರುವ ಆರೋಪದ ಬೆನ್ನಲ್ಲೇ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್‌ ಜಗನ್ ಮೋಹನ್ ರೆಡ್ಡಿ(Jagan Mohan Reddy) ವಿರುದ್ಧ ಮತ್ತೊಂದು ಹಗರಣ ಬಯಲಿಗೆ ಬಂದಿದೆ. ತಮ್ಮ ಅಧಿಕಾರಾವಧಿಯ ಐದು ವರ್ಷಗಳಲ್ಲಿ ಎಗ್‌ ಪಫ್ಸ್‌(Jagan Egg puffs Scam)ಗಾಗಿ ಬರೊಬ್ಬರಿ 3.6 ಕೋಟಿ ರೂ. ಖರ್ಚು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದಿನಕ್ಕೆ 993 ‘ಮೊಟ್ಟೆ ಪಫ್ಸ್‌’ಗಳಂತೆ 5 ವರ್ಷಗಳಲ್ಲಿ 18.12 ಲಕ್ಷ ಪಫ್ಸ್‌ ಖರೀದಿಸಿದ್ದಾರೆ ಎಂದು ವರದಿಯಾಗಿದೆ.

ಅಧಿಕಾರದಿಂದ ಕೆಳಗಿಳಿದ ಬಳಿಕ ಆಂಧ್ರ ಪ್ರದೇಶ ಮಾಜಿ ಸಿಎಂ ವೈಎಸ್ ಜಗನ್ ಮೋಹರ್ ರೆಡ್ಡಿ ವಿರುದ್ಧ ದಿನಕ್ಕೊಂದು ಆರೋಪಗಳು ಕೇಳಿಬರುತ್ತಿದ್ದು, ಇದೀಗ ಹೊಸದಾಗಿ ‘ಮೊಟ್ಟೆ ಪಫ್ಸ್’ ವಿವಾದ ಹೊಸದಾಗಿ ಸೇರ್ಪಡೆಯಾಗಿದೆ. ಜಗನ್ ಮೋಹನ್ ರೆಡ್ಡಿ ತಮ್ಮ ಅಧಿಕಾರಾವಧಿಯಲ್ಲಿ ಮೊಟ್ಟೆ ಪಫ್ಸ್ ಗಳಿಗಾಗಿ ಬರೊಬ್ಬರಿ 3.6 ಕೋಟಿ ರೂ ವೆಚ್ಚ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಪತ್ರಕರ್ತೆಯೊಬ್ಬರು ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದು, ‘ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್‌.ಜಗನ್ ಮೋಹನ್ ರೆಡ್ಡಿ ಅವರ ಅಧಿಕಾರವಧಿಯಲ್ಲಿ ಮುಖ್ಯಮಂತ್ರಿಗಳ ಕಚೇರಿ ವತಿಯಿಂದ ಪ್ರತಿದಿನ 993 ಮೊಟ್ಟೆ ಪಫ್ಸ್‌ಗಳನ್ನು ಖರೀದಿಸಲಾಗಿದ್ದು, 5 ವರ್ಷಗಳಲ್ಲಿ ಮೊಟ್ಟೆ ಪಫ್ಸ್‌ಗಳಗಾಗಿಯೇ 3.62 ಕೋಟಿ ಖರ್ಚು ಮಾಡಲಾಗಿದೆ. ವರ್ಷಕ್ಕೆ ಪಫ್ಸ್‌ಗಾಗಿಯೇ 72 ಲಕ್ಷ ರೂ. ವೆಚ್ಚವಾಗಿದೆ ಎಂದು ಆರೋಪಿಸಿದ್ದಾರೆ.

ಇನ್ನು ಈ ಆರೋಪವನ್ನು ಜಗನ್‌ ಅವರ ವೈಎಸ್‌ಆರ್ ಕಾಂಗ್ರೆಸ್‌ ತಳ್ಳಿ ಹಾಕಿದೆ. ಸತ್ಯಾಸತ್ಯತೆಯನ್ನು ಪರಿಶೀಲಿಸದೆ, ಮಾಹಿತಿಯ ಮೂಲವನ್ನು ಉಲ್ಲೇಖಿಸದೆ ಪತ್ರಕರ್ತರು ಆಧಾರರಹಿತ ಆರೋಪ ಮಾಡುತ್ತಿರುವುದು ನಿಜಕ್ಕೂ ನಿರಾಶೆ ಮೂಡಿಸುತ್ತದೆ. ಪುರಾವೆಗಳಿಲ್ಲದೆ ತಪ್ಪು ಮಾಹಿತಿ ಹಂಚಿಕೊಂಡಿದ್ದಾರೆ. ಮಾಧ್ಯಮಗಳೂ ಇಂತಹ ವದಂತಿಗಳಿಗೆ ಆದ್ಯತೆ ನೀಡುತ್ತಿರುವುದು ವಿಷಾದನೀಯ ಎಂದಿದೆ.

ಎನ್‌.ಚಂದ್ರಬಾಬು ನಾಯ್ಡು (N Chandra Babu Naidu) ಅವರ ಟಿಡಿಪಿಯು ಆಂಧ್ರದಲ್ಲಿ ಅಧಿಕಾರಕ್ಕೆ ಬಂದ ಬೆನ್ನಲ್ಲೇ, “ಜಗನ್‌ ಮೋಹನ್‌ ರೆಡ್ಡಿ ಅವರು ಮುಖ್ಯಮಂತ್ರಿ ಆಗಿದ್ದಾಗ ಸರ್ಕಾರದ 500 ಕೋಟಿ ರೂ. ವೆಚ್ಚದಲ್ಲಿ ವಿಶಾಖಪಟ್ಟಣಂನಲ್ಲಿ ಅರಮನೆಯಂತಹ ಐಷಾರಾಮಿ ಬಂಗಲೆ ಕಟ್ಟಿಸಿಕೊಂಡಿದ್ದಾರೆ” ಎಂಬುದಾಗಿ ಟಿಡಿಪಿ ಗಂಭೀರ ಆರೋಪ ಮಾಡಿದೆ.

ಋಷಿಕೊಂಡ ಹಿಲ್ಸ್‌ ಪ್ರವಾಸಿ ತಾಣವಾಗಿತ್ತು. ಇಲ್ಲಿಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುತ್ತಿದ್ದರು. ಆದರೆ, 9.88 ಎಕರೆ ಜಾಗದಲ್ಲಿ ಜಗನ್‌ ಮೋಹನ್‌ ರೆಡ್ಡಿ ಅವರು ಬಂಗಲೆ ನಿರ್ಮಿಸಿದ್ದಾರೆ. ಸುಮಾರು 36 ಲಕ್ಷ ರೂ. ವೆಚ್ಚದಲ್ಲಿ ಬಾತ್‌ ಟಬ್‌ ನಿರ್ಮಿಸಿದ್ದಾರೆ. ಇಂತಹ ಹತ್ತಾರು ಐಷಾರಾಮಿ ಕೋಣೆಗಳು, ಸೌಕರ್ಯಗಳು ಬಂಗಲೆಯಲ್ಲಿವೆ. ಇದನ್ನೇ ಪಾರ್ಟಿ ಕಚೇರಿ ಮಾಡುವುದು ಜಗನ್‌ ಮೋಹನ್‌ ರೆಡ್ಡಿ ಅವರ ಉದ್ದೇಶವಾಗಿತ್ತು ಎಂದು ಆರೋಪಿಸಲಾಗಿದೆ. ಆಂಧ್ರ ಪ್ರದೇಶ ವಿಧಾನ ಸಭೆಯ 175 ಸೀಟುಗಳ ಪೈಕಿ ಎನ್‌ಡಿಎ 164 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಈ ಪೈಕಿ ಟಿಡಿಪಿ 135, ಜನಸೇನಾ ಪಾರ್ಟಿ 21 ಮತ್ತು ಬಿಜೆಪಿ 8 ಕಡೆ ಗೆದ್ದಿದೆ. ವೈಎಸ್‌ಆರ್‌ಸಿಪಿಯು ಕೇವಲ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವುದು ಅವರಿಗೆ ಮುಖಭಂಗ ತಂದಿದೆ.

ಇದನ್ನೂ ಓದಿ: Jagan Mohan Reddy: ಸರ್ಕಾರದ 500 ಕೋಟಿ ರೂ.ನಲ್ಲಿ ಜಗನ್‌ ಅರಮನೆ ನಿರ್ಮಾಣ? ಟಿಡಿಪಿ ಸ್ಫೋಟಕ ಆರೋಪ

Continue Reading

ಕರ್ನಾಟಕ

Almatti Dam: ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

Almatti Dam: ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹಣೆಯು ಪೂರ್ಣ ಮಟ್ಟಕ್ಕೆ ಆರ್.ಎಲ್. 519.60 ಮೀ.ವರೆಗೆ (123 ಟಿ.ಎಂ.ಸಿ.) ತಲುಪಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಗಂಗಾಪೂಜೆ ನೇರವೇರಿಸಿ ಬಾಗಿನ ಅರ್ಪಿಸಿದರು.

VISTARANEWS.COM


on

Koo

ವಿಜಯಪುರ: ಉತ್ತರ ಕರ್ನಾಟಕದ ಪ್ರತಿಷ್ಠಿತ ಕೃಷ್ಣಾ ಮೇಲ್ದಂಡೆ ಯೋಜನೆಯ ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹಣೆಯು ಪೂರ್ಣ ಮಟ್ಟಕ್ಕೆ ಆರ್.ಎಲ್. 519.60 ಮೀ.ವರೆಗೆ (123 ಟಿ.ಎಂ.ಸಿ.) ತಲುಪಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೃಷ್ಣೆಯ ಜಲಧಿಗೆ ಬುಧವಾರ ಗಂಗಾಪೂಜೆ ನೇರವೇರಿಸಿ ಬಾಗಿನ (Almatti Dam) ಅರ್ಪಣೆ ಮಾಡಿದರು.

ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕೃಷ್ಣಾ ನ್ಯಾಯಾಧೀಕರಣ-1ರ ತೀರ್ಪಿನನ್ವಯ ಯು.ಕೆ.ಪಿ.-1 ಮತ್ತು 2 ರಲ್ಲಿ 173 ಟಿಎಂಸಿ. ನೀರಿನ ಹಂಚಿಕೆಯಡಿ ಒಟ್ಟು 6.67 ಲಕ್ಷ ಹೆಕ್ಟೇರ್ (16.47 ಲಕ್ಷ ಎಕರೆ) ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಯು.ಕೆ.ಪಿ ಹಂತ-3 ಕ್ಕೆ ಹಂಚಿಕೆಯಾದ 130 ಟಿ.ಎಂ.ಸಿ ನೀರಿನ ಬಳಕೆಗಾಗಿ ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹಣೆ ಮಟ್ಟ 519.60 ಮೀ ನಿಂದ 524.256 ಮೀ ವರೆಗೆ (15 ಅಡಿ) ಎತ್ತರಿಸುವುದು ಒಳಗೊಂಡಿದೆ. ಉತ್ತರ ಕರ್ನಾಟಕದ ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಡಿ ಒಟ್ಟಾರೆ 5.94 ಲಕ್ಷ ಹೆಕ್ಟೇರ್ (14.68 ಲಕ್ಷ ಎಕರೆ) ಅಚ್ಚುಕಟ್ಟು ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವುದಾಗಿದೆ ಎಂದು ಹೇಳಿದರು.

ಆಲಮಟ್ಟಿ ಜಲಾಶಯದ ಸಂಗ್ರಹಣೆಯನ್ನು 524.256 ಮೀ. ಗೆ ಹೆಚ್ಚಿಸಿದಲ್ಲಿ ಹಿನ್ನೀರಿನಲ್ಲಿ 188 ಗ್ರಾಮಗಳಡಿಯ ಸುಮಾರು 75,000 ಎಕರೆ ಜಮೀನು ಮುಳುಗಡೆ ಹೊಂದಲಿದೆ. ಅಲ್ಲದೇ, ಮುಳುಗಡೆ ಹೊಂದುವ 20 ಗ್ರಾಮಗಳಡಿ ಬಾಗಲಕೋಟ ಪಟ್ಟಣ ಒಳಗೊಂಡು ಬೃಹತ್ ಪ್ರಮಾಣದ ಪುನರ್ವಸತಿ ಮತ್ತು ಪುನರ್‌ನಿರ್ಮಾಣದ ಕ್ರಮಗಳನ್ನು ಹೊಸ ಭೂಸ್ವಾಧೀನ-2013 ರ ಕಾಯ್ದೆಯನ್ವಯ ಜರುಗಿಸುವುದಾಗಿರುತ್ತದೆ. ಒಟ್ಟಾರೆ 1.34 ಲಕ್ಷ ಎಕರೆ ಜಮೀನನ್ನು ಭೂಸ್ವಾಧೀನಪಡಿಸಿಕೊಳ್ಳಬೇಕಾಗಿದ್ದು, ಇಲ್ಲಿಯವರೆಗೆ 28,878 ಎಕರೆ ಕ್ಷೇತ್ರವನ್ನು ಭೂಸ್ವಾಧೀನಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ | PR Sreejesh: ಹಾಕಿ ದಿಗ್ಗಜ ಶ್ರೀಜೇಶ್​ಗೆ 2 ಕೋಟಿ ಬಹುಮಾನ ಘೋಷಣೆ ಮಾಡಿದ ಕೇರಳ ಸರ್ಕಾರ

Almatti Dam
Almatti Dam

ಈ ಯೋಜನೆಯ ಅನುಷ್ಠಾನಕ್ಕೆ ರೂ.51,148.94 ಕೋಟಿ (2014-15ರ ದರಪಟ್ಟಿ) ಪರಿಷ್ಕೃತ ಅಂದಾಜು ಮೊತ್ತಕ್ಕೆ ಸರ್ಕಾರವು 2017ರ ಅ.9ರಂದು ಅನುಮೋದನೆ ನೀಡಿದೆ. ಈ ಪೈಕಿ ಭೂಸ್ವಾಧೀನ ಮತ್ತು ಆರ್ & ಆರ್ ಗಾಗಿ 30,143.00 ಕೋಟಿ ರೂ. ಪ್ರಾವಿಧಾನ ಮಾಡಲಾಗಿದೆ. ಇಲ್ಲಿಯವರೆಗೆ (ಜುಲೈ-2024 ಅಂತ್ಯಕ್ಕೆ) ಖರ್ಚಾದ ವಿವರಗಳು ಈ ಕೆಳಗಿನಂತಿವೆ:

  • ಕಾಮಗಾರಿಗಳಿಗಾಗಿ ​- ರೂ. 11,099.00 ಕೋಟಿ
  • ಆರ್ & ಆರ್ ಗಾಗಿ ​- ರೂ.3,456.00 ಕೋಟಿ
  • ಭೂಸ್ವಾಧೀನಕ್ಕಾಗಿ ​- ರೂ.3,288.00 ಕೋಟಿ
  • ಸಿಬ್ಬಂದಿ & ಇತರೆ ವೆಚ್ಚ​- ರೂ.527.00 ಕೋಟಿ
  • ಒಟ್ಟಾರೆ ವೆಚ್ಚ​- ರೂ.18,370.00 ಕೋಟಿ.

ಮುಂದುವರಿದು, ಯು.ಕೆ.ಪಿ.-3 ರ ಅನುಷ್ಠಾನಕ್ಕಾಗಿ ಇತ್ತೀಚಿನ ದರಪಟ್ಟಿ ಮತ್ತು ಒಪಂದದ ಐತೀರ್ಪಿನ ಭೂಸ್ವಾಧೀನ ದರಗಳನ್ನು ಪರಿಗಣಿಸಿ ಸುಮಾರು ರೂ.83,700.00 ಕೋಟಿ ರಷ್ಟು ಅಂದಾಜಿಸಲಾಗಿದೆ. ಕೃಷ್ಣಾ ನ್ಯಾಯಾಧೀಕರಣ-2ರ ಅಂತಿಮ ತೀರ್ಪು ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸುವುದು ಬಾಕಿ ಇರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

Continue Reading

ವಿದೇಶ

PM Modi Poland Visit: ಪೋಲೆಂಡ್‌ಗೆ ಬಂದಿಳಿದ ಪ್ರಧಾನಿ ಮೋದಿ- ಗುಜರಾತಿ ನೃತ್ಯದ ಮೂಲಕ ಭರ್ಜರಿ ಸ್ವಾಗತ

PM Modi Poland Visit: ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಪೋಲೆಂಡ್‌ನಲ್ಲಿ ಬಂದಿಳಿದೆ. ಇಲ್ಲಿನ ವಿವಿಧ ಕಾರ್ಯಕ್ರಮಗಳನ್ನು ಎದುರು ನೋಡುತ್ತಿದ್ದೇನೆ. ಈ ಭೇಟಿಯು ಭಾರತ-ಪೋಲೆಂಡ್ ಸ್ನೇಹವನ್ನು ಬಲಪಡಿಸುತ್ತದೆ ಮತ್ತು ನಮ್ಮ ರಾಷ್ಟ್ರಗಳ ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಬರೆದಿದ್ದಾರೆ.

VISTARANEWS.COM


on

PM Modi Poland Visit
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರು ಇಂದು ಸಂಜೆ ಪೋಲೆಂಡ್‌(Poland)ಗೆ ಭೇಟಿ ನೀಡಿದ್ದಾರೆ(PM Modi Poland Visit). 45 ವರ್ಷಗಳ ನಂತರ ಮಧ್ಯ ಯುರೋಪಿಯನ್ ದೇಶಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ನಾಯಕರಾಗಿದ್ದಾರೆ. ಭಾರತ ಮತ್ತು ಪೋಲೆಂಡ್ ತಮ್ಮ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 70ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆ ಪ್ರಧಾನಿ ಪೋಲೆಂಡ್​ನ ವಾರ್ಸಾಗೆ ಭೇಟಿ ಕೊಟ್ಟಿದ್ದಾರೆ.

ಇನ್ನು ಪೋಲೆಂಡ್‌ಗೆ ಬಂದಿಳಿಯುತ್ತಿದ್ದಂತೆ ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಪೋಲೆಂಡ್‌ನಲ್ಲಿ ಬಂದಿಳಿದೆ. ಇಲ್ಲಿನ ವಿವಿಧ ಕಾರ್ಯಕ್ರಮಗಳನ್ನು ಎದುರು ನೋಡುತ್ತಿದ್ದೇನೆ. ಈ ಭೇಟಿಯು ಭಾರತ-ಪೋಲೆಂಡ್ ಸ್ನೇಹವನ್ನು ಬಲಪಡಿಸುತ್ತದೆ ಮತ್ತು ನಮ್ಮ ರಾಷ್ಟ್ರಗಳ ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಬರೆದಿದ್ದಾರೆ.

ಗುಜರಾತಿ ನೃತ್ಯದ ಮೂಲಕ ಮೋದಿಗೆ ಸ್ವಾಗತ

ಪೋಲೆಂಡ್​ನ ವಾರ್ಸಾದಲ್ಲಿರುವ ಹೋಟೆಲ್​ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಟೆಲ್‌ನಲ್ಲಿ ಭಾರತೀಯ ಡಯಾಸ್ಪೊರಾ ಸದಸ್ಯರು ಸ್ವಾಗತಿಸಿದ್ದಾರೆ. ಈ ವೇಳೆ ಭಾರತೀಯ ಸಾಂಪ್ರದಾಯಿಕ ನೃತ್ಯವನ್ನು ಪ್ರದರ್ಶಿಸುವ ಮೂಲಕ ಪೋಲೆಂಡ್​ನ ನೃತ್ಯ ಕಲಾವಿದರು ನರೇಂದ್ರ ಮೋದಿಯವರಿಗೆ ಭರ್ಜರಿ ಸ್ವಾಗತ ಕೋರಿದ್ದಾರೆ. ದೂರದ ಪೋಲೆಂಡ್​ನಲ್ಲಿ ಭಾರತೀಯ ಸಂಸ್ಕೃತಿಯ ಅನಾವರಣವನ್ನು ಕಂಡು ಖುಷಿಯಿಂದ ಮೋದಿ ಚಪ್ಪಾಳೆ ತಟ್ಟಿ, ಕಲಾವಿದರಿಗೆ ಶಹಬ್ಬಾಸ್ ಹೇಳಿದ್ದಾರೆ.

ಇದನ್ನೂ ಓದಿ: PM Narendra Modi: ಕೆಂಪುಕೋಟೆಯ ಕಾರ್ಯಕ್ರಮಕ್ಕೆ ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ

Continue Reading

ಪ್ರಮುಖ ಸುದ್ದಿ

Thawar Chand Gehlot: ರಾಜ್ಯಪಾಲರಿಗೆ ಬಂತು ಬುಲೆಟ್‌ಪ್ರೂಫ್‌ ಕಾರು! ಥಟ್‌ ಅಂತ ಯಾಕೀ ಬದಲಾವಣೆ?

Thawar Chand Gehlot: ಮಂಗಳೂರಿನ ಕಾಂಗ್ರೆಸ್‌ ಮುಖಂಡ ಐವನ್‌ ಡಿಸೋಜಾ, ಬಾಂಗ್ಲಾದೇಶದ ಪ್ರಧಾನಿಗೆ ಆದ ಸ್ಥಿತಿಯೇ ರಾಜ್ಯಪಾಲರಿಗೂ ಆಗಲಿದೆ ಎಂದು ಹೇಳಿದ್ದರು. ರಾಜಭವನಕ್ಕೆ ನುಗ್ಗಲೂ ಕಾಂಗ್ರೆಸ್‌ ಕಾರ್ಯಕರ್ತರು ಯತ್ನಿಸಿದ್ದರು.

VISTARANEWS.COM


on

thawar chand gehlot car
Koo

ಬೆಂಗಳೂರು: ಕರ್ನಾಟಕ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot) ಅವರ ವಾಹನದಲ್ಲಿ ಗುಪ್ತಚರ ಇಲಾಖೆಯ ಸಲಹೆ ಮೇರೆಗೆ ಬದಲಾವಣೆ ಮಾಡಲಾಗಿದೆ. ಇದುವರೆಗೆ ಸಾಮಾನ್ಯ ಕಾರು ಬಳಸುತ್ತಿದ್ದ ರಾಜ್ಯಪಾಲರು (Karnataka Governor) ಇನ್ನು ಮುಂದೆ ಬುಲೆಟ್‌ ಪ್ರೂಫ್‌ ಕಾರು (Bullet proof Car) ಬಳಸಲಿದ್ದಾರೆ.

ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ವಿರುದ್ಧ ಪ್ರಾಸಿಕ್ಯೂಷನ್​ಗೆ (prosecution) ಅನುಮತಿ ನೀಡಿದ ಬಳಿಕ ರಾಜ್ಯದ ಎಲ್ಲೆಡೆ ಕಾಂಗ್ರೆಸ್‌ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ರಾಜಭವನಕ್ಕೆ ನುಗ್ಗಲೂ ಕಾಂಗ್ರೆಸ್‌ ಕಾರ್ಯಕರ್ತರು ಯತ್ನಿಸಿದ್ದರು. ಅವರನ್ನು ಪೊಲೀಸರು ಬಂಧಿಸಿದ್ದರು. ಇನ್ನು, ರಾಜ್ಯದ ಹಲವೆಡೆ ಗವರ್ನರ್‌ಗೆ ʼಗೋ ಬ್ಯಾಕ್‌ʼ ಪ್ರತಿಭಟನೆ ನಡೆಸಲಾಗಿತ್ತು. ಜೊತೆಗೆ, ರಾಜ್ಯಪಾಲರ ಫೋಟೋಗೆ ಚಪ್ಪಲಿ ಹಾರ ಹಾಕಲಾಗಿತ್ತು. ಕೆಲವು ಕಾಂಗ್ರೆಸ್ ನಾಯಕರಂತೂ ಎಲ್ಲೆ ಮೀರಿದ ಹೇಳಿಕೆಗಳನ್ನು ನೀಡಿದ್ದರು.

ಮಂಗಳೂರಿನ ಕಾಂಗ್ರೆಸ್‌ ಮುಖಂಡ ಐವನ್‌ ಡಿಸೋಜಾ, ಬಾಂಗ್ಲಾದೇಶದ ಪ್ರಧಾನಿಗೆ ಆದ ಸ್ಥಿತಿಯೇ ರಾಜ್ಯಪಾಲರಿಗೂ ಆಗಲಿದೆ ಎಂದು ಹೇಳಿದ್ದರು. ಈ ಕುರಿತು ಅವರ ಮೇಲೆ ಕೇಸು ದಾಖಲಿಸಲಾಗಿದೆ. ಈ ಎಲ್ಲದರ ಹಿನ್ನೆಲೆಯಲ್ಲಿ, ಎಚ್ಚರಿಕೆ ವಗಹಿಸುವಂತೆ ಗುಪ್ತಚರ ಇಲಾಖೆಯು ರಾಜ್ಯಪಾಲರಿಗೆ ಸೂಚನೆ ನೀಡಿದೆ. ಹೀಗಾಗಿ, ಪ್ರವಾಸದಿಂದ ಬೆಂಗಳೂರಿಗೆ (Bengaluru) ವಾಪಸ್ ಆಗಿರುವ ಗೆಹ್ಲೋಟ್​ ಅವರು ಎಚ್ಚರಿಕೆ ಹೆಜ್ಜೆಯನ್ನಿಟ್ಟಿದ್ದಾರೆ. ನಿನ್ನೆ ಇಂದೋರ್‌ನಿಂ ವಾಪಸ್ ಆಗಿರುವ ರಾಜ್ಯಪಾಲರಿಗೆ ರಾಜ್ಯದ ಗುಪ್ತಚರ ಇಲಾಖೆಯಿಂದ ಬಿಪಿ ಕಾರು ನೀಡಲಾಗಿದೆ.

ರಾಜ್ಯಪಾಲರಾಗಿ ಗೆಹ್ಲೋಟ್ ಅವರು ರಾಜ್ಯಕ್ಕೆ ಆಗಮಿಸಿದ ಬಳಿಕ ಅವರು ಬುಲೆಟ್ ಪ್ರೂಫ್ ಇರುವ ಕಾರನ್ನು ಪಡೆದುಕೊಳ್ಳದೆ ಸಾಮಾನ್ಯ ಇನ್ನೋವಾ ಕಾರನ್ನೇ ಬಳಕೆ ಮಾಡಿದ್ದರು. ಕಳೆದ ಬಾರಿ ರಾಜ್ಯಪಾಲರು ಬುಲೆಟ್ ಪ್ರೂಫ್ ಕಾರು ಬಳಸುತ್ತಿದ್ದರು. ಆದರೆ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ಬೆನ್ನಲ್ಲೇ ಬುಲೆಟ್ ಪ್ರೂಫ್ ಕಾರು ಪಡೆದಕೊಂಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

ಜೊತೆಗೆ, ಆಗಸ್ಟ್ 29ನೇ ತಾರೀಖಿನವರೆಗೆ ರಾಜ್ಯದಲ್ಲಿನ ಎಲ್ಲಾ ಕಾರ್ಯಕ್ರಮಗಳನ್ನು ರಾಜ್ಯಪಾಲರು ಕ್ಯಾನ್ಸಲ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇದರ ನಡುವೆಯೇ ರಾಜ್ಯಪಾಲರು ಹೈಕೋರ್ಟ್ ಆದೇಶಕ್ಕಾಗಿ ಕಾಯುತ್ತಿದ್ದಾರೆ. ಈ ಹಿನ್ನೆಲೆಯಲ್ಲೇ ನೃಪತುಂಗ ವಿವಿ ಮೊದಲ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮಕ್ಕೆ ಕೂಡ ಗೈರಾಗಿದ್ದಾರೆ. ಸಾರ್ವಜನಿಕ ಕಾರ್ಯಕ್ರಮಗಳಿಂದ ರಾಜ್ಯಪಾಲರು ದೂರ ಉಳಿದಿದ್ದಾರೆ. ಜೊತೆಗೆ ರಾಜ್ಯಪಾಲರ ವಿರುದ್ಧ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಲು ಕರೆ ಕೊಟ್ಟಿವೆ.

ವಿಶ್ವವಿದ್ಯಾಲಯಗಳ ವಾರ್ಷಿಕ ಘಟಿಕೋತ್ಸವಗಳಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಬೇಕಿತ್ತು. ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಘಟಿಕೋತ್ಸವ ಆಯೋಜನೆ ಮಾಡಲಾಗಿದ್ದು, 2020-21 ರಿಂದ 2022-2023 ನೇ ಸಾಲಿನ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ. ಇದರಲ್ಲಿ 792 ವಿದ್ಯಾರ್ಥಿಗಳಿಗೆ ಪದವಿ, 16 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಬೇಕಿತ್ತು. ಆದರೆ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ನೃಪತುಂಗ ವಿವಿಯ ಮೊದಲ ಘಟಿಕೋತ್ಸವ ನಡೆದಿದೆ. ಈಗಾಗಲೇ ರಾಜ್ಯಪಾಲರ ವಿರುದ್ಧ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಲು ಕರೆ ಕೊಟ್ಟಿವೆ.

ನೃಪತುಂಗ ವಿವಿಯ ಮೊದಲ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ವಿವಿ ಕುಲಪತಿ ಪ್ರೊ. ಶ್ರೀನಿವಾಸ್ ಎಸ್.ಬಳ್ಳಿ , ಸಿಂಡಿಕೇಟ್ ಸದಸ್ಯರು ಭಾಗಿಯಾಗಿದ್ದರು. ಇಸ್ರೋ ವಿಜ್ಞಾನಿ ನಂದಿನಿ ಹರಿನಾಥ, ಸ್ವಾಮಿ ವಿವೇಕಾನಂದ ಯೂಥ್ ಮೂವ್‌ಮೆಂಟ್‌ನ ಡಾ.ರಾಮಸ್ವಾಮಿ ಬಾಲ ಸುಬ್ರಮಣಿಯನ್, ಇನ್ಫೋಸಿಸ್‌ನ ದಿನೇಶ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ.

ಇದನ್ನೂ ಓದಿ: HD Kumaraswamy: ನನ್ನ ಬಂಧಿಸಲು ನೂರು ಸಿದ್ದರಾಮಯ್ಯ ಬರಬೇಕು ಎಂದ ಎಚ್‌ಡಿಕೆ

Continue Reading
Advertisement
Road Accident
ಕೋಲಾರ4 seconds ago

Road Accident : ಬಂಗಾರಪೇಟೆಯಲ್ಲಿ ವ್ಹೀಲಿಂಗ್ ಹಾವಳಿಗೆ ಅರ್ಚಕ ಬಲಿ; ರಸ್ತೆ ದಾಟುತ್ತಿದ್ದವನಿಗೆ ಕಾರು ಡಿಕ್ಕಿ

muda scam papers
ಮೈಸೂರು34 mins ago

MUDA Scam: ಮುಡಾದಲ್ಲಿ ಇನ್ನೊಂದು ಗೋಲ್‌ಮಾಲ್, ಇಲ್ಲದ ವ್ಯಕ್ತಿ ಸೃಷ್ಟಿಸಿ ನಿವೇಶನ ಪಡೆದ ಅಧಿಕಾರಿಗಳು!

UR Cristiano
ಕ್ರೀಡೆ40 mins ago

UR Cristiano: ಯೂಟ್ಯೂಬ್​ ಚಾನೆಲ್ ಆರಂಭಿಸಿ ಕೆಲವೇ ಗಂಟೆಗಳಲ್ಲಿ ವಿಶ್ವ ದಾಖಲೆ ಬರೆದ ಕ್ರಿಸ್ಟಿಯಾನೊ ರೊನಾಲ್ಡೊ

Physical Abuse 5 year old girl raped by minor
ಹಾಸನ1 hour ago

Physical Abuse : 5 ವರ್ಷದ ಬಾಲಕಿ ಮೇಲೆ ಎರಗಿ ಅತ್ಯಾಚಾರವೆಸಗಿದ ಅಪ್ರಾಪ್ತ

Sexual Abuse
Latest1 hour ago

Sexual Abuse: ಕಾಶ್ಮೀರದಲ್ಲಿ ಹಿಂದೂ ಬಾಲಕಿ ಮೇಲೆ ಅತ್ಯಾಚಾರ; ಬೃಹತ್‌ ಪ್ರತಿಭಟನೆ

Kolkata Doctor Murder Case
Latest2 hours ago

Kolkata Doctor Murder Case: ಹೆಣ್ಣಿನ ಮೇಲೆ ಆಸೆಯಾದರೆ ನಮ್ಮ ಬಳಿ ಬನ್ನಿ; ಕಾಮುಕರಿಗೆ ಯುವತಿಯ ಮುಕ್ತ ಆಹ್ವಾನ!

gold rate today
ಪ್ರಮುಖ ಸುದ್ದಿ2 hours ago

Gold Rate Today: ಸುವರ್ಣಪ್ರಿಯರಿಗೆ ಸಿಹಿ ಸುದ್ದಿ; ಇಂದೂ ಚಿನ್ನದ ದರದಲ್ಲಿ ಇಳಿಕೆ

Green Ammonia Export
ದೇಶ2 hours ago

Green Ammonia Export: ಜಪಾನ್‌ಗೆ ಇನ್ನು ಭಾರತದಿಂದ ಹಸಿರು ಅಮೋನಿಯಾ ರಫ್ತು! ಒಪ್ಪಂದಕ್ಕೆ ಸಹಿ

TVK Party Flag Unveils
ರಾಜಕೀಯ2 hours ago

TVK Party Flag Unveils: ತಮ್ಮ ರಾಜಕೀಯ ಪಕ್ಷದ ಧ್ವಜ, ಚಿಹ್ನೆ ಅನಾವರಣಗೊಳಿಸಿದ ನಟ ವಿಜಯ್

Viral Video
Latest2 hours ago

Viral Video: ಅಪ್ಪ-ಮಗನ ಗುದ್ದಾಟದಿಂದ ಮೂವರು ಅಮಾಯಕರ ಸ್ಥಿತಿ ಗಂಭೀರ!

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌