ವಿಸ್ತಾರ ಸಂಪಾದಕೀಯ: ರಾಜಕೀಯ ವಾಗ್ಯುದ್ಧ ಅಂಕೆ ಮೀರದಿರಲಿ Vistara News
Connect with us

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ರಾಜಕೀಯ ವಾಗ್ಯುದ್ಧ ಅಂಕೆ ಮೀರದಿರಲಿ

ಅವಹೇಳನ, ದ್ವೇಷ, ರೋಷಾವೇಷವಿಲ್ಲದೆಯೂ ರಾಜಕೀಯ ಪಕ್ಷಗಳು ಪರಸ್ಪರ ಪರಿಣಾಮಕಾರಿಯಾಗಿ ಆರೋಪ ಪ್ರತ್ಯಾರೋಪ ಮಾಡಲು ಸಾಧ್ಯವಿದೆ. ಎದುರಾಳಿಯನ್ನು ಎದುರಿಸುವುದರಲ್ಲೂ ಇಂಥ ಘನತೆ ಇರಬೇಕು.

VISTARANEWS.COM


on

Fight
Koo

ಇತ್ತೀಚೆಗೆ ರಾಜಕಾರಣಿಗಳ ಪರಸ್ಪರ ದೋಷಾರೋಪ, ವಾಕ್‌ ಪ್ರಹಾರಗಳು ಹೆಚ್ಚಿವೆ. ಇದಕ್ಕೆ ಇನ್ನು ಕೆಲವೇ ತಿಂಗಳಲ್ಲಿ ಬರಲಿರುವ ಲೋಕಸಭೆ ಚುನಾವಣೆ ಹಾಗೂ ಸದ್ಯದಲ್ಲೇ ಇರುವ ವಿಧಾನಸಭೆ ಚುನಾವಣೆ. ರಾಜ್ಯ ಸರ್ಕಾರದ ಮಂತ್ರಿಯೊಬ್ಬರು ಮಾಜಿ ಮುಖ್ಯಮಂತ್ರಿಯವರ ವಿರುದ್ಧ ನಾಲಿಗೆ ಸಡಿಲ ಬಿಟ್ಟು ದ್ವೇಷವನ್ನು ಪ್ರಚೋದಿಸುವಂತೆ ಮಾತಾಡಿರುವುದು ವರದಿಯಾಗಿದೆ. ಅದೇ ಪಕ್ಷದ ಇನ್ನೊಬ್ಬ ಶಾಸಕರು ಕೂಡ ಹೀಗೇ ಮಾತನಾಡಿದ್ದಾರೆ. ಟಿಪ್ಪು ಸುಲ್ತಾನ್‌ ವಿಚಾರದಲ್ಲಿ ಈ ಮಾತಿನ ಕೂರಂಬುಗಳು ಹಾರಾಡಿವೆ. ಕೆಲವೇ ದಿನಗಳ ಮುನ್ನ ಇನ್ನೊಂದು ಪಕ್ಷದವರೂ ಈ ಪಕ್ಷದ ಮುಖಂಡರನ್ನು ಪಿಂಪ್‌ಗಳಿಗೆ ಹೋಲಿಸಿದ್ದೂ ವರದಿಯಾಗಿತ್ತು. ಟೀಕೆ, ವಾಕ್‌ಪ್ರಹಾರಗಳು ಲಕ್ಷ್ಮಣರೇಖೆ ದಾಟಿ ಹೋಗದಂತೆ ನೋಡಿಕೊಳ್ಳುವುದು ಖಂಡಿತವಾಗಿಯೂ ಅಗತ್ಯವಿದೆ.

ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ನಡುವೆ ವಾಕ್ಸಮರ ಜೋರಾಗುವುದು ಸಹಜ. ಆದರೆ ಅದು ಮಿತಿಯನ್ನು ಮೀರಿ ಅಶ್ಲೀಲವಾಗಿ ಬೈದಾಡಿಕೊಳ್ಳುತ್ತಿರುವುದು, ಎದುರಿನವರ ಮೇಲೆ ದ್ವೇಷ ಸೃಷ್ಟಿಸುವಂತಿರುವುದು ವಿಷಾದಕರ. ವಾಗ್ದಾಳಿಗಳು ಸಭ್ಯತೆಯ ಎಲ್ಲೆ ಮೀರದಂತಿರಬೇಕು, ಆರೋಗ್ಯಕರವಾಗಿರಬೇಕು. ವಾಚಾಮಗೋಚರವಾಗಿ ಬೈದಾಡಿಕೊಳ್ಳುವುದು ರಾಜಕೀಯ ಪಕ್ಷಗಳ ಮುಖಂಡರಿಗೆ ಖಂಡಿತ ಶೋಭೆ ತರದು. ಎಲ್ಲೆ ಮೀರಿದಾಗ ಇವು ಕೋರ್ಟ್‌ ಅಂಗಳವನ್ನೂ ಪ್ರವೇಶಿಸಬಹುದು. ಆಗ ನ್ಯಾಯಾಂಗದಿಂದ ಪಾಠ ಹೇಳಿಸಿಕೊಳ್ಳಬೇಕಾಗುತ್ತದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್‌ ಕೂಡ ಒಂದು ಪ್ರಕರಣದಲ್ಲಿ, ದ್ವೇಷ ಭಾಷಣ ಮಾಡುವವರು ಯಾರೇ ಆಗಿದ್ದರೂ ಅವರ ವಿರುದ್ಧ ಸ್ವಯಂಪ್ರೇರಿತವಾಗಿ ಕ್ರಮ ಕೈಗೊಳ್ಳುವಂತೆ ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಪೊಲೀಸರಿಗೆ ಆದೇಶಿಸಿತ್ತು. ಕಳೆದ ವರ್ಷ ನವೆಂಬರ್‌ನಲ್ಲಿ ಇನ್ನೊಂದು ಪ್ರಕರಣದಲ್ಲಿ, ಕೇರಳದ ಮಾಜಿ ಸಚಿವ ಎಂ.ಎನ್‌. ಮಾಣಿ ಅವರಿಗೆ ಕೋರ್ಟ್‌ ಛೀಮಾರಿಯನ್ನೂ ಹಾಕಿತ್ತು. ರಾಜಕಾರಣಿಗಳು ಹಾಗೂ ಉನ್ನತ ಸ್ಥಾನದಲ್ಲಿರುವವರು ಅನ್ಯರ ಬಗ್ಗೆ ಮಾನಹಾನಿಕರವಾದ ಮಾತುಗಳನ್ನು ಆಡಬಾರದು ಎಂದು ನಿರ್ದೇಶಿಸಿತ್ತು. ಇದು ಕೋರ್ಟ್‌ ಹೇಳದೆಯೂ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಅರ್ಥ ಮಾಡಿಕೊಳ್ಳಬೇಕಾದ ಮಾತು.

ರಾಜ್ಯದಲ್ಲಿ ಮಾತ್ರವೇ ಅಲ್ಲ, ರಾಷ್ಟ್ರ ಮಟ್ಟದಲ್ಲೂ ಎದುರಾಳಿಯ ಕೀಳು ನಿಂದನೆ, ಅವಾಚ್ಯ ಪದಗಳ ಬಳಕೆ ಎದ್ದು ಕಾಣಿಸುತ್ತಿದೆ. ಮಧ್ಯಪ್ರದೇಶದ ಕಾಂಗ್ರೆಸ್‌ ಮುಖಂಡನೊಬ್ಬ, ಸಂವಿಧಾನವನ್ನು ಉಳಿಸಲು ನರೇಂದ್ರ ಮೋದಿಯವರನ್ನು ಕೊಲ್ಲುವ ಅಗತ್ಯವಿದೆ ಎಂದು ಹೇಳಿದ್ದ. ಇಂಥ ಮಾತುಗಳು ಅಪರಾಧವೆನಿಸುತ್ತವೆ. 2007ರಲ್ಲಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್‌ ಮುಖ್ಯಸ್ಥೆ ಸೋನಿಯಾ ಗಾಂಧಿ ʼಸಾವಿನ ಸರದಾರʼ ಎಂದು ಕರೆದಿದ್ದರು. 2017ರಲ್ಲಿ ಮಣಿಶಂಕರ ಅಯ್ಯರ್‌ ಅವರು ಮೋದಿಯವರನ್ನು ʼನೀಚʼ ಎಂದು ಕರೆದಿದ್ದರು. ಇತ್ತೀಚೆಗೆ ಗುಜರಾತ್‌ ಚುನಾವಣೆ ಸಂದರ್ಭ ಮೋದಿಯವರಿಗೆ ಮಲ್ಲಿಕಾರ್ಜುನ ಖರ್ಗೆಯವರು ʼರಾವಣʼ ಎಂದಿದ್ದರು. ಆದರೆ ಇಂಥ ಹೇಳಿಕೆಗಳೆಲ್ಲ ಹೇಳಿದವರಿಗೇ ತಿರುಮಂತ್ರವಾಗಿವೆ. ಮತದಾರರ ಮನಶ್ಶಾಸ್ತ್ರ ಅರ್ಥ ಮಾಡಿಕೊಳ್ಳುವ ಜನನಾಯಕರು ಇಂಥ ಬೈಗುಳಗಳನ್ನು ತಮ್ಮ ಎದುರಾಳಿಗೆ ಬಳಸಲಾರರು. ಇದು ಅವರನ್ನೇ ಇಕ್ಕಟ್ಟಿಗೆ ಸಿಲುಕಿಸುವುದಲ್ಲದೆ, ಅವರ ಚಾರಿತ್ರ್ಯವನ್ನೂ ಹರಾಜಿಗಿಡುತ್ತದೆ.

ಅವಹೇಳನ, ದ್ವೇಷ, ರೋಷಾವೇಷವಿಲ್ಲದೆಯೂ ರಾಜಕೀಯ ಪಕ್ಷಗಳು ಪರಸ್ಪರ ಪರಿಣಾಮಕಾರಿಯಾಗಿ ಆರೋಪ ಪ್ರತ್ಯಾರೋಪ ಮಾಡಲು ಸಾಧ್ಯವಿದೆ. ಎದುರಾಳಿಯನ್ನು ಎದುರಿಸುವುದರಲ್ಲೂ ಇಂಥ ಘನತೆ ಇರಬೇಕು. ಚುನಾವಣೆ ಸಂದರ್ಭದಲ್ಲಿ ಎಂಥ ಮಾತುಕತೆ, ವಾಗ್ವಾದ ನಡೆಯಬೇಕು? ಸರ್ಕಾರದ ಪ್ರಗತಿ, ಭ್ರಷ್ಟಾಚಾರ, ಸಾಧನೆ, ವೈಫಲ್ಯಗಳ ಬಗ್ಗೆ ಅರ್ಥಪೂರ್ಣ ಚರ್ಚೆ ಆಗಬೇಕು. ಆಡಳಿತ ಪಕ್ಷ ಸರಿಯಾಗಿ ಕೆಲಸ ಮಾಡಿದೆಯೇ ಇಲ್ಲವೇ ಎಂದು ಪ್ರತಿಪಕ್ಷ ವಿಮರ್ಶಿಸಬೇಕು. ತಾನು ಮಾಡಿರುವ ಕೆಲಸಗಳಿಗೆ ಆಡಳಿತ ಪಕ್ಷ ಕನ್ನಡಿ ಹಿಡಿಯಬೇಕು, ಪ್ರತಿಪಕ್ಷದ ವೈಫಲ್ಯಗಳನ್ನು ಸಾಣೆಗೆ ಹಿಡಿಯಬೇಕು.

ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ಟ್ರಾಫಿಕ್ ದಂಡ ವಿನಾಯಿತಿ ಕ್ರಾಂತಿಕಾರಕ ನಿರ್ಧಾರ

ಎದುರಾಳಿಯನ್ನು ವೈಯಕ್ತಿಕವಾಗಿ ದೂರುವ, ಅವಹೇಳನ ಮಾಡುವ, ಪಾಠ ಕಲಿಸಲು ಕರೆ ಕೊಡುವ ಅಗತ್ಯವೇ ಇಲ್ಲ. ಆಗ ಮಾತ್ರ ರಾಜಕೀಯ ವಾಗ್ವಾದಗಳು ಅರ್ಥಪೂರ್ಣವಾಗುತ್ತವೆ. ಕರ್ನಾಟಕಕ್ಕೆ ಒಂದು ಸಭ್ಯ ರಾಜಕೀಯ ಪರಂಪರೆಯಿದೆ. ಇಲ್ಲಿನ ರಾಜಕೀಯ ವಾಗ್ಯುದ್ಧಗಳು ಸಭ್ಯತೆಯ ಆವರಣದೊಳಗಿವೆ. ಈ ಪರಂಪರೆಗೆ ಧಕ್ಕೆ ಆಗದಿರಲಿ. ಕರ್ನಾಟಕದ ರಾಜಕೀಯವು ಬಿಹಾರ, ಉತ್ತರ ಪ್ರದೇಶದ ರಾಜಕಾರಣದಂತೆ ಆಗುವುದು ಬೇಡ. ಹೊಸ ತಲೆಮಾರಿನ ರಾಜಕಾರಣಿಗಳಿಗೆ ನಕಾರಾತ್ಮಕ ರಾಜಕಾರಣದ ಶೈಲಿಯ ಸಂದೇಶ ರವಾನೆ ಆಗದಿರಲಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ದೇಶ

Maharashtra News: ಮಹಾರಾಷ್ಟ್ರದ ಮತ್ತೊಂದು ಆಸ್ಪತ್ರೆಯಲ್ಲಿ 10 ರೋಗಿಗಳು ಮೃತ! ತನಿಖೆಗೆ ಮುಂದಾದ ಸರ್ಕಾರ

Maharashtra News: ನಾಂದೇಡ್ ಆಸ್ಪತ್ರೆಯಲ್ಲಿ ರೋಗಿಗಳ ಮರಣ ಮೃದಂಗ ಬಾರಿಸುತ್ತಿರುವ ಮಧ್ಯೆಯೇ ಸಂಭಾಜಿನಗರದ ಮತ್ತೊಂದು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಸಾಯುತ್ತಿರುವ ಪ್ರಕರಣಗಳು ವರದಿಯಾಗಿವೆ.

VISTARANEWS.COM


on

Edited by

Maharashtra News, another hospital witnessed for 10 patients death
Koo

ಮುಂಬೈ: ಕಳೆದ ಒಂದು ವಾರದಲ್ಲಿ ಮಹಾರಾಷ್ಟ್ರದ (Maharashtra) ಅನೇಕ ಸರ್ಕಾರಿ ಆಸ್ಪತ್ರೆಗಳಲ್ಲಿ (Government Hospital) ರೋಗಿಗಳ ಸಾವು ವರದಿಯಾಗುತ್ತಿರುವ ಬೆನ್ನಲ್ಲೇ ಸಂಭಾಜಿನಗರದ ಘಾಟಿ ಆಸ್ಪತ್ರೆಯಲ್ಲಿ (Ghati Hospital) 24 ಗಂಟೆಯಲ್ಲಿ 10ಕ್ಕಿಂತ ಹೆಚ್ಚು ರೋಗಿಗಳು ಮೃತಪಟ್ಟಿದ್ದಾರೆ. ಈ ಹಿಂದೆ ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ (Nanded Government hospital) 48 ಗಂಟೆಯಲ್ಲಿ ಶಿಶುಗಳು ಸೇರಿದಂತೆ 34 ರೋಗಿಗಳು ಮೃತಪಟ್ಟ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಮಹಾರಾಷ್ಟ್ರ ಸರ್ಕಾರವು, ತನಿಖೆಗೆ ಸಮಿತಿಯನ್ನು (Probe Committee) ರಚಿಸುವುದಾಗಿ ಘೋಷಣೆ ಮಾಡಿದೆ(Maharashtra News).

ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ ಜರಗುತ್ತಿರುವ ಘಟನೆಗಳು ಭಯಾನಕವಾಗಿವೆ. ಅದೇ ರೀತಿ ಘಾಟಿ ಆಸ್ಪತ್ರೆಯಲ್ಲಿ ರೋಗಿಗಳು ಸಾಯುತ್ತಿದ್ದಾರೆ ಎಂಬ ಮಾಹಿತಿ ಈಗ ಬಹಿರಂಗವಾಗಿದೆ. ಇಬ್ಬರು ಮಕ್ಕಳು ಸೇರಿದಂತೆ 8 ರೋಗಿಗಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ನಾಂದೇಡ್ ಆಸ್ಪತ್ರೆಯಲ್ಲಿ ಮತ್ತೆ 7 ರೋಗಿಗಳು ಮೃತಪಟ್ಟಿದ್ದಾರೆಂಬ ವರ್ತಮಾನವಿದೆ. ಇದೆಲ್ಲವೂ ಭಯಾನಕವಾಗಿದೆ ಎಂದು ಶಿವಸೇನೆಯ ನಾಯಕ ಆದಿತ್ಯ ಠಾಕ್ರೆ ಅವರು ಟ್ವೀಟ್ ಮಾಡಿದ್ದಾರೆ.

ನಾಂದೇಡ್ ಆಸ್ಪತ್ರೆಯಲ್ಲಿ ರೋಗಿಗಳ ಸರಣಿ ಸಾವು

ಮಹಾರಾಷ್ಟ್ರದ (Maharashtra) ನಾಂದೇಡ್ ಜಿಲ್ಲೆಯ (Nanded District) ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನದಲ್ಲಿ 12 ಶಿಶು (Newborns) ಸೇರಿ 24 ರೋಗಿಗಳು ಮೃತಪಟ್ಟ ಘಟನೆಯು ಮಹಾರಾಷ್ಟ್ರದಲ್ಲಿ ಭಾರೀ ಆಕ್ರೋಶಕ್ಕೆಕಾರಣವಾಗಿತ್ತು. ಇದರ ಬೆನ್ನಲ್ಲೇ ಮತ್ತೆ 7 ರೋಗಿಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಅವಘಡಕ್ಕೆ ಸರ್ಕಾರಿ ಆಸ್ಪತ್ರೆ ಎದುರಿಸುತ್ತಿರುವ ಸಿಬ್ಬಂದಿ ಹಾಗೂ ಔಷಧಗಳ ಕೊರತೆಯ ಕಾರಣ ಎಂದು ನಾಂದೇಡ್ ಶಂಕರ್ ರಾವ್ ಚವಾಣ್ ಸರ್ಕಾರಿ ಆಸ್ಪತ್ರೆಯ ಡೀನ್ ಹೇಳಿದ್ದಾರೆ(Shankarrao Chavan Government Hospital Dean). ಮೃತಪಟ್ಟ 12 ವಯಸ್ಕರ ಪೈಕಿ ಹೆಚ್ಚಿನವರು ಹಾವು ಕಡಿತಕ್ಕೊಳಗಾದವರಿದ್ದಾರೆ ಎಂದು ಅವರು ತಿಳಿಸಿದ್ದರು.

ಈ ಸುದ್ದಿಯನ್ನೂ ಓದಿ: Maharashtra: ಔಷಧ ಕೊರತೆ, ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ಒಂದೇ ದಿನದಲ್ಲಿ 12 ಶಿಶುಗಳು ಸೇರಿ 24 ರೋಗಿಗಳ ಸಾವು!

ಕಳೆದ 24 ಗಂಟೆಗಳಲ್ಲಿ ಆರು ಗಂಡು ಮತ್ತು ಆರು ಹೆಣ್ಣು ಶಿಶುಗಳು ಸಾವನ್ನಪ್ಪಿವೆ. ಹನ್ನೆರಡು ವಯಸ್ಕರು ವಿವಿಧ ಕಾಯಿಲೆಗಳಿಂದ ಸಾವನ್ನಪ್ಪಿದ್ದಾರೆ, ಈ ಪೈಕಿ ಹೆಚ್ಚಿನವರು ಹಾವು ಕಡಿತದಿಂದ ಬಳಲುತ್ತಿದ್ದರು. ವಿವಿಧ ಸಿಬ್ಬಂದಿಯನ್ನು ವರ್ಗಾವಣೆ ಮಾಡಿದ್ದರಿಂದ ಆಸ್ಪತ್ರೆಯು ಸಮಸ್ಯೆಯನ್ನು ಎದುರಿಸುತ್ತಿದೆ ಎಂದು ಅವರು ಆಸ್ಪತ್ರೆಯ ಡೀನ್ ಹೇಳಿದ್ದರು.

ಈ ಆಸ್ಪತ್ರೆಯು ತೃತೀಯ ಹಂತದ ಆರೈಕೆ ಕೇಂದ್ರವಾಗಿದೆ. ಅಲ್ಲದೇ, 70ರಿಂದ 80 ಕಿ.ಮೀ ವ್ಯಾಪ್ತಿಯಲ್ಲಿನ ಏಕೈಕ ಸರ್ಕಾರಿ ಆಸ್ಪತ್ರೆಯಾಗಿದೆ. ಹಾಗಾಗಿ, ದೂರದ ಸ್ಥಳಗಳಿಂದ ರೋಗಿಗಳು ಈ ಆಸ್ಪತ್ರೆಗೆ ಆಗಮಿಸುತ್ತಾರೆ. ಹೀಗೆ, ರೋಗಿಗಳು ಸಂಖ್ಯೆ ಹೆಚ್ಚಳವಾದಾಗ ಅವರನ್ನು ಈ ಆಸ್ಪತ್ರೆಯಲ್ಲಿ ನಿರ್ವಹಣೆ ಮಾಡುವುದು ಕಷ್ಟ. ಆಗ ಸಮಸ್ಯೆಗಳು ಶುರುವಾಗುತ್ತವೆ ಎಂದು ಅವರು ತಿಳಿಸಿದ್ದಾರೆ. ಹಾಫ್ಕಿನ್ ಎಂಬ ಸಂಸ್ಥೆಯಿದ್ದು, ಇಲ್ಲಿಂದ ಔಷಧಿಗಳನ್ನು ಖರೀದಿಸಬೇಕು. ಆದರೆ ಈ ಸಂಸ್ಥೆಯಿಂದ ಔಷಧಗಳ ಖರೀದಿ ಸಾಧ್ಯವಾಗಿಲ್ಲ. ಆಗ ನಾವು ಸ್ಥಳೀಯವಾಗಿ ಔಷಧಗಳನ್ನು ಖರೀದಿಸಿ ರೋಗಿಗಳಿಗೆನೀಡಿದ್ದೇವೆ ಎಂದು ಡೀನ್ ಅವರು ತಿಳಿಸಿದ್ದರು.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ಕ್ರೀಡೆ

Asian Games : ಪಾಕಿಸ್ತಾನದ ಸ್ಪರ್ಧಿ ನದೀಮ್ ಔಟ್​; ನೀರಜ್​ಗೆ ಪದಕ ಬಹುತೇಕ ಖಾತರಿ

ಮೊಣಕಾಲಿನ ಗಾಯದಿಂದ ಬಳಲುತ್ತಿರುವ ಅರ್ಷದ್ ನದೀಮ್ ಏಷ್ಯನ್ ಗೇಮ್ಸ್ ನಿಂದ (Asian Games) ಹೊರಗುಳಿಯಲು ನಿರ್ಧರಿಸಿದ್ದಾರೆ. ನೀರಜ್ ಚೋಪ್ರಾ ಈಗ ಚಿನ್ನದ ಪದಕದ ಫೇವರಿಟ್ ಆಗಿದ್ದಾರೆ.

VISTARANEWS.COM


on

Arshad Nadeem
Koo

ಹ್ಯಾಂಗ್ಜೌ: ಪಾಕಿಸ್ತಾನದ ಜಾವೆಲಿನ್ ಎಸೆತಗಾರ ಅರ್ಷದ್ ನದೀಮ್ ಏಷ್ಯನ್ ಗೇಮ್ಸ್ (Asian Games) 2023 ರಿಂದ ಹಿಂದೆ ಸರಿದಿದ್ದಾರೆ. 26 ವರ್ಷದ ಅಥ್ಲೀಟ್​ ಮೊಣಕಾಲು ಗಾಯದಿಂದ ಬಳಲುತ್ತಿದ್ದು, ಪ್ರಸ್ತುತ ನಡೆಯುತ್ತಿರುವ ಕಾಂಟಿನೆಂಟಲ್ ಈವೆಂಟ್​ನಲ್ಲಿ ಕಾಣಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಈ ಪಂದ್ಯಾವಳಿಯಲ್ಲಿ ಅವರು ಭಾರತದ ನೀರಜ್ ಚೋಪ್ರಾ ಅವರ ಅತಿದೊಡ್ಡ ಪ್ರತಿಸ್ಪರ್ಧಿಗಳಲ್ಲಿ ಒಬ್ಬರಾಗುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಅವರ ನಿರ್ಗಮನದಿಂದಾಗಿ ಏಷ್ಯನ್ ಕ್ರೀಡಾಕೂಟದ ಪುರುಷರ ಜಾವೆಲಿನ್ ಥ್ರೋನಲ್ಲಿ ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ ಇರುವುದಿಲ್ಲ. ನೀರಜ್ ಚೋಪ್ರಾ ಮತ್ತು ಅರ್ಷದ್ ಕಳೆದ ಕೆಲವು ವರ್ಷಗಳಿಂದ ಜಾವೆಲಿನ್ ಥ್ರೋನಲ್ಲಿ ತೀವ್ರ ಪೈಪೋಟಿಯನ್ನು ಒಡ್ಡುತ್ತಿದ್ದಾರೆ. ಈ ಕಾರಣದಿಂದ ಭಾರತಕ್ಕೆ ಚಿನ್ನದ ಪದಕ ಬಹುತೇಕ ಖಚಿತಗೊಂಡಿದೆ.

ವರದಿಗಳ ಪ್ರಕಾರ, ಅರ್ಷದ್ ನದೀಮ್ ಏಷ್ಯಾಡ್​ಗಾಗಿ ತರಬೇತಿ ಪಡೆಯುತ್ತಿದ್ದರು ಹಾಗೂ ಈವೆಂಟ್​ನಲ್ಲಿ ಭಾಗವಹಿಸಲು ಸಜ್ಜಾಗಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಗಾಯಗೊಂಡ ಅವರನ್ನು ಎಂಆರ್​ಐ ಸ್ಕ್ಯಾನ್​ಗೆ ಒಳಪಡಿಸಿದಾಗ ಗಾಯವನ್ನು ಬಹಿರಂಗಪಡಿಸಿದೆ. ಹೀಗಾಗಿ ಅವರು ಪಂದ್ಯಾವಳಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಪಾಕಿಸ್ತಾನದ ಚೆಫ್ ಡಿ ಮಿಷನ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಹ್ಯಾಂಗ್ಝೌನಲ್ಲಿ ನಡೆದ ಮೊದಲ ತರಬೇತಿಯ ನಂತರ ಅರ್ಷದ್ ಅವರ ಬಲ ಮೊಣಕಾಲಿನಲ್ಲಿ ನೋವು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ನಂತರ ಕ್ರೀಡಾಪಟುವನ್ನು ಎಂಆರ್​ಐ ಸ್ಕ್ಯಾನ್​​ಗೆ ಕರೆದೊಯ್ಯಲಾಯಿತು, ನಂತರ ಏಷ್ಯಾಡ್​ನಿಂದ ಹೊರಗುಳಿಯುವ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ತಿಳಿಸಲಾಗಿದೆ.

ಇತ್ತೀಚೆಗೆ ಅರ್ಷದ್ ವಿಶ್ವ ಚಾಂಪಿಯನ್​ಷಿಪ್​ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಅವರು ಅಲ್ಲಿ 87.82 ಮೀಟರ್ ಎಸೆದಿದ್ದರು. ಈ ಕೂಟದಲ್ಲಿ 88.17 ಮೀಟರ್ ಎಸೆತದೊಂದಿಗೆ ತಮ್ಮ ಮೊದಲ ವಿಶ್ವ ಚಾಂಪಿಯನ್​ಷಿಪ್ ಚಿನ್ನದ ಪದಕವನ್ನು ನೀರಜ್ ಚೋಪ್ರಾ ಗೆದಿದ್ದರು.

ವಿಶ್ವ ಚಾಂಪಿಯನ್​​ಷಿಪ್​ನಲ್ಇ ಇಬ್ಬರೂ ಕ್ರೀಡಾಪಟುಗಳ ಪ್ರದರ್ಶನವು ಏಷ್ಯಾಡ್​ನಲ್ಲಿ ದೊಡ್ಡ ಪೈಪೋಟಿ ಎದುರಾಗುವ ನಿರೀಕ್ಷೆಗಳನ್ನು ಹುಟ್ಟಿಸಿತ್ತು. ನೀರಜ್​​ಗೆ ಹೋಲಿಸಿದರೆ ಅರ್ಷದ್ ಉತ್ತಮ ವೈಯಕ್ತಿಕ ಸಾಮರ್ಥ್ಯವನ್ನು ಹೊಂದಿದ್ದಾರೆ. ಕಳೆದ ವರ್ಷ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ 90.18 ಮೀಟರ್ ಎಸೆಯುವ ಮೂಲಕ ನೀರಜ್ ಚೋಪ್ರಾ ಅನುಪಸ್ಥಿತಿಯಲ್ಲಿ ತಮ್ಮ ದೇಶಕ್ಕೆ ಚಿನ್ನ ತಂದುಕೊಟ್ಟಿದ್ದರು.

ಏಷ್ಯನ್ ಗೇಮ್ಸ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಈ ಋತುವಿನಲ್ಲಿ ನೀರಜ್ ಚೋಪ್ರಾ 88.77 ಮೀಟರ್ ಎಸೆದು ಋತುವಿನ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಅರ್ಷದ್ 87.82 ಮೀ ದೂರ ಎಸೆದು ಅವರ ಹತ್ತಿರದ ಪ್ರತಿಸ್ಪರ್ಧಿಯಾಗಿದ್ದಾರೆ. ಅರ್ಷದ್ ಅನುಪಸ್ಥಿತಿಯು ಈಗ ನೀರಜ್ ಅವರನ್ನು ಚಿನ್ನದ ಪದಕಕ್ಕೆ ಅತ್ಯಂತ ನೆಚ್ಚಿನ ಸ್ಪರ್ಧಿಯನ್ನಾಗಿ ಮಾಡಿದೆ. ನೀರಜ್​ ಹಾಲಿ ಏಷ್ಯನ್ ಗೇಮ್ಸ್ ಚಾಂಪಿಯನ್ ಆಗಿದ್ದಾರೆ. ಅವರು ಜಕಾರ್ತಾದಲ್ಲಿ ಚಿನ್ನ ಗೆದಿದ್ದರು. ಅರ್ಷದ್ ಅಲ್ಲಿ ಬೆಳ್ಳಿ ಪದಕ ಗೆದ್ದಿದ್ದರು.

Continue Reading

ಕ್ರೀಡೆ

Asian Games : ಮಹಿಳೆಯರ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದು ದಾಖಲೆ ಬರೆದ ಅನ್ನುರಾಣಿ

ಅನ್ನು ರಾಣಿಯ ಚಿನ್ನದ ಪದಕದೊಂದಿಗೆ ಭಾರತದ ಒಟ್ಟಾರೆ ಚಿನ್ನದ ಪದಕದ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.ಬೆಳ್ಳಿ, ಕಂಚು ಸೇರಿ 69 ಪದಕಗಳೊಂದಿಗೆ (Asian Games ) ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದೆ.

VISTARANEWS.COM


on

Annu Rani
Koo

ಹ್ಯಾಂಗ್ಜೌ: ಭಾರತದ ಜಾವೆಲಿನ್​ ಎಸೆತಗಾರ್ತಿ ಅನ್ನುರಾಣಿ ಏಷ್ಯನ್​ ಗೇಮ್ಸ್​ನಲ್ಲಿ (Asian Games) ಹೊಸ ದಾಖಲೆ ಬರೆದ್ದಾರೆ. ಅವರು ಖಂಡಾಂತರ ಕ್ರೀಡಾಕೂಟದ ಮಹಿಳೆಯರ ಜಾವೆಲಿನ್​ ಎಸೆತ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವ ಭಾರತದ ಮೊಟ್ಟ ಮೊದಲ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಮಂಗಳವಾರ ಸಂಜೆ ನಡೆಸ ಸ್ಪರ್ಧೆಯಲ್ಲಿ ಅತ್ಯುತ್ತಮ 62.92 ಮೀಟರ್ ದೂರಕ್ಕೆ ಜಾವೆಲಿನ್​ ಎಸೆತ ಅನ್ನು ರಾಣಿ ಬಂಗಾರದ ಪದಕಕ್ಕೆ ಕೊರಳೊಡ್ಡಿದರು. ಅಂದ ಹಾಗೆ ಅನ್ನು ರಾಣಿ 2014ರಲ್ಲಿ ನಡೆದಿದ್ದ ಏಷ್ಯನ ಗೇಮ್ಸ್​ನಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದರು ಇದೀಗ ಅವರು ಪ್ರದರ್ಶನದಲ್ಲಿ ಸುಧಾರಣೆ ಮಾಡಿಕೊಂಡು ಸ್ವರ್ಣ ಪದಕ ತಮ್ಮದಾಗಿಸಿಕೊಂಡಿದ್ದರು.

ಅನ್ನು ರಾಣಿ ಅವರ ಚಿನ್ನದ ಪದಕದ ಸಾಧನೆಯೊಂದಿಗೆ ಭಾರತದ ಬಂಗಾರದ ಗಳಿಕೆ 15ಕ್ಕೆ ಏರಿಕೆಯಾಗಿದೆ. 26 ಬೆಳ್ಳಿ ಹಾಗೂ 28 ಕಂಚಿನ ಪದಕದ ಸಾಧನೆಯೊಂದಿಗೆ ಒಟ್ಟಾರೆ 69 ಪದಕಗಳನ್ನು ಗೆದ್ದು ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ಮುಂದುವರಿಸಿದೆ.

ಮಂಗಳವಾರ ಸಂಜೆ ಪಾರುಲ್ ಚೌಧರಿ, ಮಹಿಳೆಯರ 5000 ಮೀಟರ್ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದರು. ಓಟದ ಅಂತಿಮ ಕ್ಷಣದಲ್ಲಿ ವೇಗ ಹೆಚ್ಚಿಸಿದ ಅವರು ಅವರು 15:14.75 ಸೆಕೆಂಡುಗಳಲ್ಲಿ ಗುರಿ ತಲುಪಿ ಜಪಾನ್ ನ ರಿರಿಕಾ ಹಿರೊನಾಕಾ ಅವರನ್ನು ಹಿಂದಿಕ್ಕಿದರು.

ಮಹಿಳೆಯರ 400 ಮೀಟರ್ ಓಟದ ಫೈನಲ್​ನಲ್ಲಿ ವಿಥ್ಯಾ ರಾಮರಾಜ್ ಕಂಚಿನ ಪದಕ ಗೆದ್ದರು. ಇದಕ್ಕೂ ಮುನ್ನ ಯಶಸ್ವಿ ಜೈಸ್ವಾಲ್ ಅವರ ಅದ್ಭುತ ಶತಕ (100), ರಿಂಕು ಸಿಂಗ್ ಅವರ ಅದ್ಭುತ ಶತಕ (37*) ಮತ್ತು ಬೌಲರ್​ಗಳ ಅಬ್ಬರದಿಂದಾಗಿ ಭಾರತ ಕ್ರಿಕೆಟ್​ ತಂಡವು ತಂಡವು ನೇಪಾಳ ವಿರುದ್ಧ 23 ರನ್​ಗಳ ವಿಜಯ ಸಾಧಿಸಿತ್ತು. ಈ ಗೆಲುವಿನೊಂದಿಗೆ ಭಾರತ ಪುರುಷರ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿದೆ.

ಭಾರತ ಪುರುಷರ ಕಬಡ್ಡಿ ತಂಡವು ಪಂದ್ಯಾವಳಿಯಲ್ಲಿ 55-18 ಅಂಕಗಳಿಂದ ಬಾಂಗ್ಲಾದೇಶವನ್ನು ಸೋಲಿಸಿದರೆ, ಮಹಿಳಾ ಹಾಕಿ ತಂಡವು ಹಾಂಗ್ ಕಾಂಗ್ ವಿರುದ್ಧ 13-0 ಅಂತರದಿಂದ ಗೆಲುವು ಸಾಧಿಸಿತು. ಅರ್ಚರಿಯಲ್ಲಿ ಭಾರತೀಯರು ಪ್ರಾಬಲ್ಯ ಮೆರೆದಿದ್ದು, ಪುರುಷರ ವಿಭಾಗದಲ್ಲಿ ಓಜಾಸ್ ಪ್ರವೀಣ್ ಡಿಯೋಟಾಲೆ ಮತ್ತು ಅಭಿಷೇಕ್ ಶರ್ಮಾ ಅಖಿಲ ಭಾರತ ಫೈನಲ್ ತಲುಪಿದರೆ, ಜ್ಯೋತಿ ಸುರೇಖಾ ವೆನ್ನಮ್ ಕೂಡ ಮಹಿಳೆಯರ ವಿಭಾಗದಲ್ಲಿ ಫೈನಲ್ ತಲುಪಿದ್ದಾರೆ.

ಇದನ್ನೂ ಓದಿ : Asian Games : ಭಾರತಕ್ಕೆ ಮತ್ತೊಂದು ಚಿನ್ನದ ಪದಕ, 5000 ಮೀಟರ್​ ಓಟದಲ್ಲಿ ಮೊದಲ ಸ್ಥಾನ ಪಡೆದ ಪಾರುಲ್​

ಬ್ಯಾಡ್ಮಿಂಟರ್​ನಲ್ಲಿ ಭಾರತದ ಎಚ್.ಎಸ್.ಪ್ರಣಯ್, ಪಿ.ವಿ.ಸಿಂಧು ಮತ್ತು ಕಿಡಂಬಿ ಶ್ರೀಕಾಂತ್ 16ನೇ ಸುತ್ತಿಗೆ ತಲುಪಿದ್ದಾರೆ. ಮಹಿಳೆಯರ 800 ಮೀಟರ್ ಓಟದಲ್ಲಿ ಕುಮಾರಿ ಚಂದಾ ಮತ್ತು ಹರ್ಮಿಲನ್ ಬೈನ್ಸ್ ಅಂತಿಮ ಸ್ಥಾನಗಳನ್ನು ಗಳಿಸಿದರೆ. ಭಾರತವು 4×400 ಮೀಟರ್ ತಂಡ ಪುರುಷರ ಸ್ಪರ್ಧೆಯಲ್ಲಿ ಫೈನಲ್​ಗೆ ಅರ್ಹತೆ ಪಡೆಯಿತು.

ಪುರುಷರ ಡೆಕಾಥ್ಲಾನ್​ನಲ್ಲಿ ಅಗ್ರ ಸ್ಥಾನವನ್ನು ಗಳಿಸುವ ಗುರಿಯನ್ನು ತೇಜಸ್ವಿನ್ ಶಂಕರ್ ಹೊಂದಿದ್ದಾರೆ. 2014ರ ಏಷ್ಯನ್ ಗೇಮ್ಸ್ ನಲ್ಲಿ ಕಂಚು ಗೆದ್ದಿದ್ದ ಮಹಿಳಾ ಜಾವೆಲಿನ್ ಸ್ಪರ್ಧಿ ಅನ್ನು ರಾಣಿ ಇನ್ನೊಂದು ಪದಕದ ಮೇಲೆ ಗುರಿಯಿಟ್ಟಿದ್ದಾರೆ.

Continue Reading

ಕರ್ನಾಟಕ

Old Pension Scheme : ಸರ್ಕಾರಿ ನೌಕರರಿಗೆ Good News; ಶೀಘ್ರವೇ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಎಂದ ಮಧು ಬಂಗಾರಪ್ಪ

Old Pension Scheme : ರಾಜ್ಯದಲ್ಲೇ ಸದ್ಯವೇ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಹೇಳುವ ಮೂಲಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ ನೀಡಿದ್ದಾರೆ.

VISTARANEWS.COM


on

Edited by

Old Pension Scheme Madhu Bangarappa
Koo

ಮೈಸೂರು: ರಾಜ್ಯದಲ್ಲಿ ಶೀಘ್ರವೇ ಹಳೆ ಪಿಂಚಣಿ ವ್ಯವಸ್ಥೆ (Old Pension Scheme) ಜಾರಿಯಾಗಲಿದೆ. ಈ ಮೂಲಕ ಸದ್ಯವೇ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ (Good News for Govt Employees) ಸಿಗಲಿದೆ ಎಂದು ಶಿಕ್ಷಣ ಸಚಿವ (Education Minister) ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ (Congress manifesto) ಹಳೆ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿ ಮಾಡುವುದಾಗಿ ಹೇಳಿತ್ತು. ಅದರಂತೆ ನಡೆದುಕೊಳ್ಳಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಹೊಸ ಪಿಂಚಣಿ ವ್ಯವಸ್ಥೆಯ (New Pension Scheme) ವಿರುದ್ಧ ದೊಡ್ಡ ಮಟ್ಟದ ಆಕ್ರೋಶವಿದೆ. ಹಳೆಯ ಪಿಂಚಣಿ ಜಾರಿಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರು ಆಗಾಗ ಪ್ರತಿಭಟನೆ ನಡೆಸುತ್ತಲೇ ಇದ್ದಾರೆ. ಕಳೆದ ಚುನಾವಣೆಯ ಸಂದರ್ಭದಲ್ಲೇ ರಾಜ್ಯ ಸರ್ಕಾರಿ ನೌಕರರು ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯ ಮಂಡಿಸಿದ್ದರು. ಬಿಜೆಪಿ ಈ ವಿಚಾರದಲ್ಲಿ ಯಾವುದೇ ಸ್ಪಷ್ಟ ನಿಲುವನ್ನು ತಳೆದಿರಲಿಲ್ಲ. ಆದರೆ, ಕಾಂಗ್ರೆಸ್‌ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಮಾಡುವುದಾಗಿ ಪ್ರಕಟಿಸಿತ್ತು. ಇದೀಗ ಪಕ್ಷ ಗೆಲುವು ಸಾಧಿಸಿದ್ದರಿಂದ ಅದು ಆ ಬೇಡಿಕೆಯನ್ನು ಈಡೇರಿಸಲಿದೆ ಎಂದು ಮಧು ಬಂಗಾರಪ್ಪ ಶಿಕ್ಷಕರಿಗೆ ಭರವಸೆ ನೀಡಿದ್ದಾರೆ.

ಮುಂದಿನ ವರ್ಷದಿಂದ 600 ಕರ್ನಾಟಕ ಪಬ್ಲಿಕ್‌ ಸ್ಕೂಲ್

‌ರಾಜ್ಯದಲ್ಲಿ ಮುಂದಿನ ವರ್ಷದಿಂದ 600 ಹೊಸ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ (ಕೆಪಿಎಸ್‌) ತೆರೆಯಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಅವರು ಸೋಮವಾರ ವಿಶ್ವನಾಥಪುರದಲ್ಲಿ ಹೇಳಿದರು. ಜಿಲ್ಲಾಡಳಿತ ಮತ್ತು ಜಿಪಂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೆಪಿಎಸ್‌ ಶಾಲೆಯ ಆವರಣದಲ್ಲಿ ʻನನ್ನ ಶಾಲೆ ನನ್ನ ಕೊಡುಗೆʼಯಡಿಯಲ್ಲಿ ಸಿಎಸ್‌ಆರ್‌ ಅನುದಾನದಲ್ಲಿ ಮಾದರಿ ಸರಕಾರಿ ಶಾಲೆ ಯೋಜನೆ ಉದ್ಘಾಟನೆ ಮತ್ತು ನೂತನ ಶಾಲಾ ಕೊಠಡಿಗಳು ಹಾಗೂ ವಿವೇಕ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಿಎಸ್‌ಆರ್‌ ಅನುದಾನದಡಿಯಲ್ಲಿ ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಸರಕಾರದ ಪ್ರಯತ್ನಗಳು ಕಾರ್ಯರೂಪದಲ್ಲಿದೆ. 1 ರಿಂದ 12 ನೇ ತರಗತಿಯವರೆಗೆ ಒಂದೇ ಶಾಲೆಯಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಲು ಹಾಗೂ ಮೂಲ ಸೌಲಭ್ಯಗಳನ್ನು ಒಳಗೊಂಡ 600 ಕೆ.ಪಿ.ಎಸ್‌ ಶಾಲೆಗಳನ್ನು ಮುಂದಿನ ವರ್ಷದ ವೇಳೆಗೆ ರಾಜ್ಯಾದ್ಯಂತ ಪ್ರಾರಂಭ ಮಾಡಲಾಗುವುದು. ಮುಂದಿನ 5 ವರ್ಷಗಳಲ್ಲಿಎರಡು ಗ್ರಾಮಗಳಿಗೆ ಒಂದರಂತೆ 2000 ಕೆ.ಪಿ.ಎಸ್‌ ಶಾಲೆಗಳನ್ನು ನಿರ್ಮಿಸಲು ಗುರಿ ಹೊಂದಲಾಗಿದೆ ಎಂದರು.

ಇದನ್ನೂ ಓದಿ: Shivamogga Violence : ನಾವು ತ್ರಿಶೂಲ ಹಿಡ್ಕೊಳಲ್ವಾ? ಹಾಗೆ ಅವರು ತಲ್ವಾರ್‌ ಹಿಡಿದಿದ್ದಾರೆ ಅಷ್ಟೆ; ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿಮೂಲಸೌಲಭ್ಯ ಕಲ್ಪಿಸಿ, ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ಕಲ್ಪಿಸುವುದು ಸರಕಾರದ ಜವಾಬ್ದಾರಿಯಾಗಿದೆ . ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರಕಾರ ಶ್ರಮಿಸುತ್ತಿದ್ದು, ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಶಾಲಾ ಮಕ್ಕಳಿಗೆ ಬಿಸಿಯೂಟದ ಜತೆಗೆ ವಾರಕ್ಕೆ 2 ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ನೀಡಲಾಗುತ್ತಿದೆ. ಈ ವರ್ಷ ಪಿಯುಸಿ ಫೇಲಾದ ವಿದ್ಯಾರ್ಥಿಗಳಿಗೆ 2 ಪೂರಕ ಪರೀಕ್ಷೆಗಳನ್ನು ನಡೆಸಿದ್ದೆವು. ಇದರ ಪ್ರತಿಫಲವಾಗಿ 4200 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ ಎಂದು ವಿವರಿಸಿದರು.

ಮುಂದಿನ ಶೈಕ್ಷಣಿಕ ವರ್ಷದಿಂದ 13,500 ಶಿಕ್ಷಕರನ್ನು ನೇಮಕ ಮಾಡಿಕೊಂಡು ಶಿಕ್ಷಕರ ಕೊರತೆ ನೀಗಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

Continue Reading
Advertisement
Eid Milad procession
ಕರ್ನಾಟಕ1 min ago

Sagara News: ಸಾಗರದಲ್ಲಿ ತಲ್ವಾರ್‌ ಝಳಪಿಸಿ, ಹಿಂದು ವಿರೋಧಿ ಘೋಷಣೆ; ಮೂವರ ಬಂಧನ

gandhi
ಬಾಲಿವುಡ್10 mins ago

Gandhi Jayanti: ಗಾಂಧಿ ಪಾತ್ರಕ್ಕಾಗಿ 30 ಕೆಜಿ ತೂಕ ಕಳೆದುಕೊಂಡಿದ್ದೆ; ಬೊಮನ್‌ ಇರಾನಿ

Maharashtra News, another hospital witnessed for 10 patients death
ದೇಶ15 mins ago

Maharashtra News: ಮಹಾರಾಷ್ಟ್ರದ ಮತ್ತೊಂದು ಆಸ್ಪತ್ರೆಯಲ್ಲಿ 10 ರೋಗಿಗಳು ಮೃತ! ತನಿಖೆಗೆ ಮುಂದಾದ ಸರ್ಕಾರ

Arshad Nadeem
ಕ್ರೀಡೆ16 mins ago

Asian Games : ಪಾಕಿಸ್ತಾನದ ಸ್ಪರ್ಧಿ ನದೀಮ್ ಔಟ್​; ನೀರಜ್​ಗೆ ಪದಕ ಬಹುತೇಕ ಖಾತರಿ

rashmika
South Cinema34 mins ago

Rashmika Mandanna: ಮತ್ತೊಮ್ಮೆ ʼರಂಜಿತಮೆʼ, ʼಸಾಮಿʼ ಹಾಡಿಗೆ ಹೆಜ್ಜೆ ಹಾಕಿದ ರಶ್ಮಿಕಾ!

Annu Rani
ಕ್ರೀಡೆ41 mins ago

Asian Games : ಮಹಿಳೆಯರ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದು ದಾಖಲೆ ಬರೆದ ಅನ್ನುರಾಣಿ

Old Pension Scheme Madhu Bangarappa
ಕರ್ನಾಟಕ59 mins ago

Old Pension Scheme : ಸರ್ಕಾರಿ ನೌಕರರಿಗೆ Good News; ಶೀಘ್ರವೇ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಎಂದ ಮಧು ಬಂಗಾರಪ್ಪ

No Rain Girl waiting For rain and holding Umbrella
ಉಡುಪಿ1 hour ago

karnataka weather forecast : ಮುಕ್ಕಾಲು ರಾಜ್ಯಕ್ಕೆ ಕೈಕೊಟ್ಟ ಮಳೆರಾಯ; ಮತ್ತೆ ಮುಂಗಾರು ದುರ್ಬಲ

Paris facing bed bugs and France government is trying to tackle crisis
ಪ್ರಮುಖ ಸುದ್ದಿ1 hour ago

Bed Bugs: ಪ್ಯಾರಿಸ್‌ನಲ್ಲಿ ಸಿಕ್ಕಾಪಟ್ಟೆ ತಿಗಣೆ ಕಾಟ! ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಎಂಟ್ರಿ ಕೊಟ್ಟ ಫ್ರಾನ್ಸ್ ಸರ್ಕಾರ

Parul won gold medal in asian Games
ಕ್ರೀಡೆ2 hours ago

Asian Games : ಭಾರತಕ್ಕೆ ಮತ್ತೊಂದು ಚಿನ್ನದ ಪದಕ, 5000 ಮೀಟರ್​ ಓಟದಲ್ಲಿ ಮೊದಲ ಸ್ಥಾನ ಪಡೆದ ಪಾರುಲ್​

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Karnataka bandh Majestic
ಕರ್ನಾಟಕ1 week ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ3 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ10 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

The maintenance train finally lifted Metro services as usual
ಕರ್ನಾಟಕ4 hours ago

Namma Metro : ಕೊನೆಗೂ ಲಿಫ್ಟ್ ಆಯ್ತು ಮೆಂಟೈನ್ಸ್‌ ವೆಹಿಕಲ್‌; ಎಂದಿನಂತೆ ಮೆಟ್ರೋ ಓಡಾಟ

BBK Season 10 KicchaSudeep
ಕಿರುತೆರೆ5 hours ago

BBK Season 10 : ಅಕ್ಟೋಬರ್‌ 8 ರಿಂದ ಬಿಗ್‌ ಬಾಸ್‌ ಆಟ; ಚಾರ್ಲಿ ಎಂಟ್ರಿ ಕನ್ಫರ್ಮ್, ಉಳಿದವರು ಯಾರು ?

dina bhavishya
ಪ್ರಮುಖ ಸುದ್ದಿ15 hours ago

Dina Bhavishya : ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು!

Actor Nagabhushana
ಕರ್ನಾಟಕ1 day ago

Actor Nagabhushana : ಡ್ರಂಕ್‌ ಆ್ಯಂಡ್‌ ಡ್ರೈವ್‌ನಲ್ಲಿ ನಟ ನಾಗಭೂಷಣ್‌ ನೆಗಟಿವ್‌; ವಿಚಾರಣೆಗೆ ಕರೆದ ಪೊಲೀಸರು

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಆಪ್ತರೊಂದಿಗೆ ಮಾಡುವ ವ್ಯಾಪಾರ ನಷ್ಟ ತಂದೀತು ಹುಷಾರ್‌!

Terrorist Attack in Turkey Suicide bomber blows himself near parliament
ಪ್ರಮುಖ ಸುದ್ದಿ2 days ago

Terrorist Attack: ಟರ್ಕಿ ಸಂಸತ್ ಬಳಿ ಆತ್ಮಹತ್ಯಾ ಬಾಂಬ್ ದಾಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಸ್ಫೋಟದ ಕ್ಷಣಗಳು!

prajwal and yashswini
ಕರ್ನಾಟಕ2 days ago

Actor Nagabhushana : ಆ್ಯಕ್ಟಿಂಗ್‌ ನೋಡಿ ಮೆಚ್ಚಿದವರ ಪಾಲಿಗೆ ಯಮನಾಗಿಬಿಟ್ಟ; ಮೃತ ಕುಟುಂಬಸ್ಥರ ಆಕ್ರೋಶ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಆಪ್ತರೊಂದಿಗೆ ಅತಿಯಾದ ಸಲುಗೆ ಈ ರಾಶಿಯವರಿಗೆ ಒಳ್ಳೆಯದಲ್ಲ!

dina bhavishya
ಪ್ರಮುಖ ಸುದ್ದಿ4 days ago

Dina Bhavishya : ದಿನ ಪೂರ್ತಿ ಈ ರಾಶಿಯವರಿಗೆ ಟೆನ್ಷನ್‌ ಜತೆಗೆ ಪ್ರೆಶರ್‌

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಮನೆಯಲ್ಲೂ ಕಿರಿಕಿರಿ, ಆಫೀಸ್‌ನಲ್ಲೂ ಕಿರಿಕ್‌!

ಟ್ರೆಂಡಿಂಗ್‌