Site icon Vistara News

Yathindra Siddaramaiah : ವಿದ್ಯುತ್ ಕಳ್ಳತನ ಮುಚ್ಚಿಹಾಕಲು ಈ ಆರೋಪ: ಎಚ್‌ಡಿಕೆ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

CM Siddaramaiah vs HD Kumaraswamy

ಬೆಂಗಳೂರು: ಈಗ ಮಾಧ್ಯಮಗಳಲ್ಲಿ ಪ್ರಸಾರ ಆಗುತ್ತಿರುವ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ (Yathindra Siddaramaiah ) ಮಾತನಾಡುತ್ತಿರುವ ವಿಡಿಯೊವನ್ನು ಬೇಕೆಂದೇ ಹರಿಬಿಡಲಾಗಿದೆ. ವಿದ್ಯುತ್‌ ಕಳ್ಳತನ ಪ್ರಕರಣವನ್ನು (Electricity theft case) ಮುಚ್ಚಿಹಾಕಲು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ (Former CM HD Kumaraswamy) ಅವರು ಈ ರೀತಿ ಮಾಡಿದ್ದಾರೆ. ಯಾರೇ ತಪ್ಪು ಮಾಡಿದರೂ ಎಫ್‌ಐಆರ್‌ ಹಾಕಬೇಕು. ಈಗ ಅದನ್ನು ಮರೆಮಾಚಲು ಹೊರಬಿಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಗಂಭೀರ ಆರೋಪ ಮಾಡಿದ್ದು, ಆ ವಿಡಿಯೊದಲ್ಲಿ ವರ್ಗಾವಣೆ ಅಥವಾ ಹಣದ ಬಗ್ಗೆಯಾಗಲಿ ಮಾತನಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.

ಬೆಂಗಳೂರಿನಲ್ಲಿ ಗುರುವಾರ (ನ.16) ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಒಎಸ್‍ಡಿ ಮಹದೇವ್ ಅವರಿಗೆ ಅಕ್ರಮವಾಗಿ ಬಡ್ತಿ ನೀಡಿ ಇಟ್ಟುಕೊಳ್ಳಲಾಗಿದೆ ಎಂದು ಆರೋಪ ಮಾಡುತ್ತಾರೆ. ಮಹದೇವ್ ಅವರು ನಮ್ಮೂರಿನವರೇ, ಉಪನೋಂದಣಾಧಿಕಾರಿಯಾಗಿದ್ದಾರೆ. ಅವರನ್ನು ನಮ್ಮ ಕಚೇರಿಗೆ ತೆಗೆದುಕೊಳ್ಳಲಾಗಿದೆ. ಅದರಲ್ಲಿ ತಪ್ಪೇನು ಎಂದು ಪ್ರಶ್ನೆ ಮಾಡಿದರು.

ವರ್ಗಾವಣೆಗೆ ಹಣ; ಸಾಬೀತಾದರೆ ರಾಜಕೀಯ ನಿವೃತ್ತಿ

ಯತೀಂದ್ರ ಅವರು ವಿಡಿಯೊದಲ್ಲಿ ಹಣದ ಬಗ್ಗೆ ಮಾತನಾಡಿದ್ದಾರೆಯೇ? ಅಥವಾ ವರ್ಗಾವಣೆಯ ಬಗ್ಗೆ ಮಾತನಾಡಿದ್ದಾರೆಯೇ? ಅದನ್ನು ವರ್ಗಾವಣೆಗೆ ತಳುಕು ಹಾಕಿದ್ದಾರೆ. ನನ್ನ ರಾಜಕೀಯ ಜೀವನದಲ್ಲಿ ಇಂದಿನವರೆಗೆ ಒಂದು ವರ್ಗಾವಣೆಗೆ ಹಣ ಪಡೆದಿದ್ದೇನೆ ಎಂದು ನಿರೂಪಿಸಿದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದರು.

ಆಶ್ರಯ ಸಮಿತಿ ಅಧ್ಯಕ್ಷರು ಹಾಗೂ ಕೆಡಿಪಿ ಸದಸ್ಯರಾಗಿರುವ ಹಾಗೂ ಕ್ಷೇತ್ರವನ್ನು ನೋಡಿಕೊಳ್ಳುತ್ತಿರುವ ಯತೀಂದ್ರ ನನ್ನ ಬಳಿ ಮಾತನಾಡಿ ಸಿಎಸ್‍ಆರ್ ನಿಧಿಯ ಕುರಿತು ಪ್ರಶ್ನಿಸಿದಾಗ ಪಟ್ಟಿಯನ್ನು ಮಹದೇವಪ್ಪ ಅವರಿಗೆ ನೀಡಲಾಗಿದೆ ಎಂದು ತಿಳಿಸಿದೆ. ಕುಮಾರಸ್ವಾಮಿ ಅವರ ಕಾಲದಲ್ಲಿ ಏನಾಗುತ್ತಿತ್ತೋ ಅದರಿಂದ ಹೊರಬರಲು ಅವರಿಗೆ ಆಗುತ್ತಿಲ್ಲ. ಹೀಗಾಗಿ ಈ ರೀತಿ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿದ್ಯುತ್‌ ಕಳ್ಳತನ ಮುಚ್ಚಿ ಹಾಕಲು ಈ ಹೇಳಿಕೆ

ಮಾಜಿ ಮುಖ್ಯಮಂತ್ರಿಯಾಗಿ ತಮ್ಮ ಮನೆಗೆ ಅಕ್ರಮವಾಗಿ ವಿದ್ಯುತ್ ಪಡೆದು ಮನೆಯನ್ನು ಬೆಳಗಿಸಿದ್ದಾರೆ. ಇದು ಅಪರಾಧವಲ್ಲವೇ? ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಅದನ್ನು ಮುಚ್ಚಿಹಾಕಲು ಈ ರೀತಿ ಮಾಡುತ್ತಿದ್ದಾರೆ ಎಂದರು. ಯಾರೇ ತಪ್ಪು ಮಾಡಿದರು ಎಫ್.ಐ.ಆರ್ ಆಗಬೇಕು. ಅದನ್ನು ಮುಚ್ಚಿಹಾಕಲು ಹೀಗೆ ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

ಇದನ್ನೂ ಓದಿ: ‌Yathindra Siddaramaiah : ಹೆಲೋ ಅಪ್ಪ..! ಶ್ಯಾಡೋ ಸಿಎಂ ಪೋಸ್ಟರ್‌ ಬಿಟ್ಟ ಬಿಜೆಪಿ!

ಸಿಎಸ್‌ಆರ್‌ ನಿಧಿಗೆ ದಾಖಲೆ ಇರುತ್ತದೆಯೇ?

ಸಾಕ್ಷ್ಯ ಇಲ್ಲದೇ ಏನು ಬೇಕಾದರೂ ಹೇಳಬಹುದೇ? ಸಿಎಸ್‍ಆರ್ ನಿಧಿ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಕೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಿಎಸ್‍ಆರ್ ನಿಧಿ ಬಗ್ಗೆ ಮಾತನಾಡಿರುವುದಕ್ಕೆ ದಾಖಲೆ ಇರುತ್ತದೆಯೇ? ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Exit mobile version