ಗುರು ಗ್ರಹ ನೀಡುವ ಭಾವಫಲಗಳ ಬಗ್ಗೆ ಮಾಹಿತಿ ಇದೆಯೇ? - Vistara News

ಪ್ರಮುಖ ಸುದ್ದಿ

ಗುರು ಗ್ರಹ ನೀಡುವ ಭಾವಫಲಗಳ ಬಗ್ಗೆ ಮಾಹಿತಿ ಇದೆಯೇ?

ಜಾತಕದಲ್ಲಿರುವ 9 ಗ್ರಹಗಳು ಒಂದೊಂದು ಮನೆಯಲ್ಲಿ ಒಂದೊಂದು ಗುಣವನ್ನು ಹೊಂದಿರುತ್ತವೆ. ಅದರಂತೆ ನಿಮ್ಮ ಜೀವನದಲ್ಲೂ ಆ ಗುಣಗಳು ಪ್ರತಿಬಿಂಬಿಸುತ್ತವೆ. ಗುರು ಗ್ರಹ ನೀಡುವ ಫಲದ ಬಗ್ಗೆ ಮಾಹಿತಿ ಇಲ್ಲಿದೆ

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜ್ಯೋತಿಷ ಶಾಸ್ತ್ರದಲ್ಲಿ ಗುರು ಗ್ರಹ ನಾಲ್ಕನೇಯದ್ದು. ಹಾಗೆಯೇ ಬಹಳ ಪ್ರಾಮುಖ್ಯತೆ ಹೊಂದಿರುವ ಗ್ರಹ. ಈ ಗುರು ಲಗ್ನದಲ್ಲಿದ್ದರೆ ಪ್ರಬಲ. ಬುಧ ಗ್ರಹ ಅನೇಕ ಶುಭಫಲಗಳನ್ನು ಪ್ರಾಪ್ತಿಸುತ್ತದೆ. ವಿವಿಧ ಸ್ಥಾನಗಳಲ್ಲಿ ವಿವಿಧ ಫಲಗಳನ್ನು ನೀಡುತ್ತಾನೆ. ಗುರುವಿನ ಭಾವಫಲದ ಬಗ್ಗೆ ಮಾಹಿತಿ ಇಲ್ಲಿದೆ:

ಭಾವಶ್ರಿತ ರಾಶಿಫಲ:

ಗುರುವು ಲಗ್ನದಲ್ಲಿ ಬಲಿಷ್ಠ. ಈ ಜಾತಕದವರು ಸುಂದರವಾಗಿರುತ್ತಾರೆ ಹಾಗೂ ಭಾಗ್ಯಶಾಲಿಯಾಗಿರುತ್ತಾರೆ. ಇವರಿಗೆ ಸಂತತಿಯ ಸುಖ ಪ್ರಾಪ್ತವಾಗಲಿದೆ. ಈ ಜಾತಕದವರು ಧೈರ್ಯವಂತರು ಹಾಗೂ ನಿರ್ಭಯವಾಗಿರುತ್ತಾರೆ.

ದ್ವಿತೀಯ ಭಾವದಲ್ಲಿ ಗುರುವಿದ್ದ ಜಾತಕದವರಿಗೆ ವಾಕ್ಚಾತುರ್ಯವಿರುತ್ತದೆ. ಇವರು ಧನವಂತನು ಮತ್ತು ಸಕಲಶಾಸ್ತ್ರ ಪಾರಂಗತರು ಆಗುತ್ತಾರೆ. ತೇಜಸ್ವಿಯಾಗಿ ಇತರರ ಮೇಲೆ ಪ್ರಭಾವ ಬೀರುವ ಸಾಮರ್ಥ್ಯ ಇವರಿಗುರತ್ತದೆ. ಉತ್ತಮ ಭೋಜನ ಇವರಿಗೆ ಪ್ರಿಯವಾಗಿರುತ್ತದೆ. .

ತೃತೀಯ ಭಾವದಲ್ಲಿ ಗುರುವಿರುವ ಜಾತಕದವರು ಕೃಪಣ ಹಾಗೂ ಪರಾಕ್ರಮಿಯಾಗಿದ್ದರೂ ಸಮಸ್ಯೆಗೆ ಸಿಲುಕಿಕೊಳ್ಳಬಹುದಾಗಿದೆ. ಇವರ ಪಾಪಕರ್ಮ ಮತ್ತು ದುರ್ಬುದ್ಧಿ ಇವರನ್ನು ಇತರರು ತಿರಸ್ಕೃತ ದೃಷ್ಟಿಯಿಂದ ನೋಡುತ್ತಾರೆ. ಇವರು ಅಪಖ್ಯಾತಿಯುಳ್ಳ ಇನ್ನೋರ್ವ ಸಹೋದರ ಹೊಂದಿರುತ್ತಾರೆ.

ಗುರುವು ಚತುರ್ಥಭಾವದಲ್ಲಿದ್ದರೆ, ಇವರಿಗೆ ತಾಯಿ, ಪತ್ನಿ-ಸುತರಿಂದೊಡಗೂಡಿ ಸುಖವಾಗಿ ಬಾಳುವ ಸಂದರ್ಭವಿರುತ್ತದೆ. ಈ ಜಾತಕದವರು ಧನ ಧಾನ್ಯಗಳಿಂದ ಸಂಪನ್ನರಾಗಿ ಸುಖಮಯ ಜೀವನವ್ನು ಸಾಗಿಸುತ್ತಾರೆ.

ಪಂಚಮದಲ್ಲಿ ಗುರುವು ಸಾಧಾರಣ ಫಲವನ್ನು ಪ್ರಾಪ್ತಿಸುತ್ತಾನೆ. ಈ ಜಾತಕದವರು ಬುದ್ಧಿವಂತರು ಮತ್ತು ರಾಜನ ಸಚಿವರಾಗುವ ಸೌಭಾಗ್ಯ ಹೊಂದಿರುತ್ತಾರೆ. ಆದರೆ, ಇವರಿಗೆ ಪುತ್ರರ ಕಾರಣದಿಂದಾಗಿ ದುಃಖವನ್ನು ಅನುಭವಿಸುವ ಸಂದರ್ಭ ಎದುರಾಗುತ್ತದೆ.

ಷಷ್ಟಮ ಭಾವದಲ್ಲಿ ಗುರುವಿದ್ದರೆ ಆಲಸ್ಯ ಆವರಿಸುತ್ತದೆ. ಆದರೆ, ಈ ಜಾತಕದವರು ಶತ್ರುಗಳನ್ನು ದಮನ ಮಾಡುವ ಸಾಮರ್ಥ್ಯ ಹೊಂದಿರುತ್ತಾರೆ. ಮಾಟ ಮಂತ್ರಾದಿ ಅಭಿಚಾರ ಕಾರ್ಯನಿರತರಾಗಿರುತ್ತಾರೆ. ಇವರು ಸಾಮನ್ಯವಾಗಿ ಅವಮಾನಕ್ಕೀಡಾಗಿ ತಿರಸ್ಕೃತರು ಆಗಿರುತ್ತಾರೆ.

ಗುರುವು ಸಪ್ತಮ ಭಾವದಲ್ಲಿರುವ ಜಾತಕದವರು ಬಹುತೇಜಸ್ವಿಯಾಗಿರುತ್ತಾರೆ. ಇವರಿಗೆ ಸುಂದರ ಪತ್ನಿ-ಪುತ್ರವುಳ್ಳುತ್ತಾರೆ.ಇವರು ತನ್ನ ಪೂರ್ವಜರಿಗಿಂತಲೂ ಅಧಿಕ ಉದಾರತೆ ತೋರುವವರಾಗಿರುತ್ತಾರೆ.

ಗುರುವು ಅಷ್ಟಮದಲ್ಲಿರುವಾಗ, ಜಾತಕದವರು ದೀನರಾಗಿರುತ್ತಾರೆ. ಜೀವನೋಪಾಯಕ್ಕಾಗಿ ಸೇವೆ ಮಾಡುತ್ತಾರೆ, ಆದರೆ ಪಾಪಾತ್ಮರಾಗಿರುತ್ತರೆ. ಇವರಿಗೆ ದೀರ್ಘಾಯುವು ಪ್ರಾಪ್ತವಾಗಿರುತ್ತದೆ.

ಗುರುವು ನವಮದಲ್ಲಿರುವ ಜಾತಕದವರು ಪ್ರಖ್ಯಾತ ಮಂತ್ರಿಯಾಗಿ ಬಾಳುತ್ತಾರೆ. ಸನ್ಮಾರ್ಗದಿಂದ ಆರ್ಜಿತ ಧನಸಂಪತ್ತನ್ನೂ ಹೊಂದುತ್ತಾರೆ. ಇವರಿಗೆ ಪುತ್ರ ಸಂಪತ್ತು ಪ್ರಾಪ್ತಿಸಲಿದೆ ಹಾಗೂ ಇವರು ಧಾರ್ಮಿಕ ಆಚರಣೆಯನ್ನು ಪಾಲಿಸುವವರಾಗಿರುತ್ತಾರೆ.

ದಶಮ ಭಾವದಲ್ಲಿ ಗುರುವಿರುವ ಜಾತಕದವರು ಸದಾಚಾರಿಯಾಗಿರುತ್ತಾರೆ. ಇವರು ಅತ್ಯಂತ ಧನವಂತರಾಗಿರುತ್ತಾರೆ. ಇವರ ಸದ್ಗುಣದಿಂದ ರಾಜನ ಪ್ರೀತಿಗೆ ಪಾತ್ರರಾಗುತ್ತಾರೆ.

ಗುರುವು ಏಕಾದಶ ಭಾವದಲ್ಲಿದ್ದರೆ ಧನಸಂಪತ್ತು ಪ್ರಾಪ್ತವಾಗುತ್ತದೆ. ಈ ಜಾತಕದವರು ನಿರ್ಭಯವವಾಗಿರುತ್ತಾರೆ. ಆದರೆ, ಇವರು ಅಲ್ಪಸಂತತಿಯುಳ್ಳವವರಾಗಿರುತ್ತಾರೆ. ಇವರು ದೀರ್ಘಾಯುವಾಗಿರುತ್ತಾರೆ ಹಾಗೂ ವಾಹನಸುಖ ಸಂಪನ್ನರಾಗಿರುತ್ತಾರೆ.

ದ್ವಾದಶದಲ್ಲಿ ಗುರುವಿದ್ದರೆ, ಇವರು ಅನ್ನದಿಂದ ದ್ವೇಷಿಸಲ್ಪಡುವವರಾಗಿರುತ್ತಾರೆ. ಈ ಜಾತಕದವರು ಅವಾಚ್ಯ ಮಾತುಗಳನ್ನಾಡುವವರಯ, ಪಾಪಕರ್ಮ ಹೊಂದಿರುವವಾರಾಗಿರುತ್ತಾರೆ. ಹೀನ ಕರ್ಮಗಳನ್ನು ಮಾಡುತ್ತ ಬದುಕುವವರು, ಆಲಸಿಯು ಹಾಗೂ ಸಂತತಿಹೀನರಾಗುತ್ತಾರೆ.

ಇದನ್ನೂ ಓದಿ: ಬಹುತೇಕ ಶುಭಫಲಗಳನ್ನೇ ನೀಡುವ ಬುಧನ ಭಾವಫಲಗಳು ಹೀಗಿವೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Virat Kohli : ಅಭ್ಯಾಸದ ಮಧ್ಯೆ ಮೊಬೈಲ್​ನಲ್ಲೇ ಡೆಲ್ಲಿ ವರ್ಸಸ್​​ ಮುಂಬೈ ಮ್ಯಾಚ್ ನೋಡಿದ ಕೊಹ್ಲಿ

Virat kohli: ಗುಜರಾತ್ ಜೈಂಟ್ಸ್ ವಿರುದ್ಧದ ಆರ್​ಸಿಬಿ ಪಂದ್ಯದ ಹಿನ್ನೆಲೆಯಲ್ಲಿ ಕೊಹ್ಲಿ ಸತತವಾಗಿ ಅಭ್ಯಾಸ ನಡೆಸುತ್ತಿದ್ದಾರೆ. ಅದರ ನಡುವೆಯೂ ಅವರು ಮೊಬೈಲ್​ನಲ್ಲಿ ಮ್ಯಾಚ್ ನೋಡಿ ಖುಷಿ ಪಟ್ಟಿದ್ದಾರೆ. ಆರ್​ಸಿಬಿಯ ತರಬೇತಿ ಅವಧಿಗೆ ಮುಂಚಿತವಾಗಿ ಕ್ರಿಕೆಟಿಗ ಊಟ ಮಾಡುತ್ತಿದ್ದಾಗಲೂ ಆಟವನ್ನು ವೀಕ್ಷಿಸುತ್ತಿದ್ದರು. ಹೋಟೆಲ್​​ನಲ್ಲಿ ಹಾದು ಹೋಗಿರುವ ವ್ಯಕ್ತಿಯೊಬ್ಬರು ಅದನ್ನು ರೆಕಾರ್ಡ್ ಮಾಡಿದ್ದಾರೆ.

VISTARANEWS.COM


on

virat kohli
Koo

ಅಹಮದಾಬಾದ್: ಐಪಿಎಲ್ 2024ರ (IPL 2024) 43 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲಿಸಿದೆ. ಈ ಪಂದ್ಯ ಸಿಕ್ಕಾಪಟ್ಟೆ ಕುತೂಹಲಕಾರಿಯಾಗಿತ್ತು. ಅಂತೆಯೇ ಅರ್​ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ((Virat Kohli) ) ಏಪ್ರಿಲ್ 27ರಂದು ತಂಡದ ಹೋಟೆಲ್​ನಲ್ಲಿ ಇರುವಾಗಲೇ ಪಂದ್ಯವನ್ನು ವೀಕ್ಷಿಸಿದ್ದಾರೆ. ಈ ವಿಡಿಯೊ ವೈರಲ್ ಆಗಿದೆ.

ಗುಜರಾತ್ ಜೈಂಟ್ಸ್ ವಿರುದ್ಧದ ಆರ್​ಸಿಬಿ ಪಂದ್ಯದ ಹಿನ್ನೆಲೆಯಲ್ಲಿ ಕೊಹ್ಲಿ ಸತತವಾಗಿ ಅಭ್ಯಾಸ ನಡೆಸುತ್ತಿದ್ದಾರೆ. ಅದರ ನಡುವೆಯೂ ಅವರು ಮೊಬೈಲ್​ನಲ್ಲಿ ಮ್ಯಾಚ್ ನೋಡಿ ಖುಷಿ ಪಟ್ಟಿದ್ದಾರೆ. ಆರ್​ಸಿಬಿಯ ತರಬೇತಿ ಅವಧಿಗೆ ಮುಂಚಿತವಾಗಿ ಕ್ರಿಕೆಟಿಗ ಊಟ ಮಾಡುತ್ತಿದ್ದಾಗಲೂ ಆಟವನ್ನು ವೀಕ್ಷಿಸುತ್ತಿದ್ದರು. ಹೋಟೆಲ್​​ನಲ್ಲಿ ಹಾದು ಹೋಗಿರುವ ವ್ಯಕ್ತಿಯೊಬ್ಬರು ಅದನ್ನು ರೆಕಾರ್ಡ್ ಮಾಡಿದ್ದಾರೆ. ಏಪ್ರಿಲ್ 25 ರಂದು ಹೈದರಾಬಾದ್​ನಲ್ಲಿ ನಡೆದ ಸನ್​ರೈಸರ್ಸ್​ ಹೈದರಾಬಾದ್ (ಎಸ್​ಆರ್​​ಎಚ್​​) ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮ್ಯಾಚ್ ವಿನ್ನಿಂಗ್ ಅರ್ಧಶತಕ ಬಾರಿಸಿದ್ದರು.

ಅಹಮದಾಬಾದ್​ನಲ್ಲಿ ಕೊಹ್ಲಿಗೆ ಭರ್ಜರಿ ಸ್ವಾಗತ

ಬೆಂಗಳೂರು: ಮುಂಬರುವ ಐಪಿಎಲ್ 2024 ರಲ್ಲಿ (IPL 2024) ಆತಿಥೇಯ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡದ ಇತರ ಆಟಗಾರರು ಅಹಮದಾಬಾದ್​ಗೆ ಆಗಮಿಸಿದ್ದಾರೆ. ಬಹುನಿರೀಕ್ಷಿತ ಮುಖಾಮುಖಿಗೆ ಒಂದು ದಿನ ಮೊದಲು ಬಂದ ಆರ್​ಸಿಬಿ ಪಡೆಗಳಿಗೆ ತಂಡದ ಹೋಟೆಟ್​ನಲ್ಲಿ ಭವ್ಯ ಸ್ವಾಗತ ದೊರೆಯಿತು.


ಹೋಟೆಲ್​ನಲ್ಲಿ ಸಿಕ್ಕಿರುತ ಆತ್ಮೀಯ ಸ್ವಾಗತವನ್ನು ಸ್ವೀಕರಿಸಿದವರಲ್ಲಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕೂಡ ಸೇರಿದ್ದಾರೆ. ಅದರ ತುಣುಕುಗಳು ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

ಇದನ್ನೂ ಓದಿ: IPL 2024 : ದೊಡ್ಡ ಮೊತ್ತದ ಪಂದ್ಯದಲ್ಲಿ ಮುಂಬೈ ವಿರುದ್ಧ ಡೆಲ್ಲಿಗೆ 10 ರನ್ ಜಯ

ವಿರಾಟ್ ಕೊಹ್ಲಿ ಏಪ್ರಿಲ್ 28 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆತಿಥೇಯ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದೊಂದಿಗೆ ಆರ್​ಸಿಬಿ ಫ್ರಾಂಚೈಸಿಗಾಗಿ ತಮ್ಮ ಪಾತ್ರವನ್ನು ಪುನರಾವರ್ತಿಸಲಿದ್ದಾರೆ. ಸ್ಪರ್ಧೆಗೆ ಒಂದು ದಿನ ಮುಂಚಿತವಾಗಿ ಅವರು ಮತ್ತು ಅವರ ಉಳಿದ ಆಟಗಾರರ ಜತೆ ಹೋಟೆಲ್​ಗೆ ಆಗಮಿಸಿದರು. ಈ ಮೂಲಕ ಅವರು ಅಹಮದಾಬಾದ್​ನಲ್ಲಿ ತಮ್ಮ ಇರುವಿಕೆಯನ್ನು ಗುರುತಿಸಿಕೊಂಡರು.

ಐಪಿಎಲ್ 2024 ರ ಸ್ಟಾರ್ ಆಕರ್ಷಣೆಗಳಲ್ಲಿ ಒಬ್ಬರಾದ ಕೊಹ್ಲಿ ಏಪ್ರಿಲ್ 27 ರಂದು ತಂಡದ ಹೋಟೆಲ್​ಗೆ ಹೋಗುವ ವೇಳೆ ಭವ್ಯ ಸ್ವಾಗತ ಪಡೆದರು.

ಆರೆಂಜ್ ಕ್ಯಾಪ್ ವೀರ ಕೊಹ್ಲಿ

ವಿರಾಟ್ ಕೊಹ್ಲಿ ಪ್ರಸ್ತುತ ಐಪಿಎಲ್ 2024 ರ ಋತುವಿನಲ್ಲಿ ‘ಆರೆಂಜ್ ಕ್ಯಾಪ್’ ಹೊಂದಿದ್ದಾರೆ. ಕ್ರಿಕೆಟಿಗ ಈಗಾಗಲೇ ಕೇವಲ ಒಂಬತ್ತು ಇನಿಂಂಗ್ಸ್​​​ಗಳಲ್ಲಿ 61 ಕ್ಕೂ ಹೆಚ್ಚು ಸರಾಸರಿಯಲ್ಲಿ 430 ರನ್ ಗಳಿಸಿದ್ದಾರೆ/ ಎರಡನೇ ಸ್ಥಾನದಲ್ಲಿರುವ ಸುನಿಲ್ ನರೈನ್ ಅವರನ್ನು 73 ರನ್​ಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ.
ಕೊಹ್ಲಿ ಇತ್ತೀಚೆಗೆ ಹೈದರಾಬಾದ್​ನಲ್ಲಿ ನಡೆದ ಎಸ್ಆರ್​​ಎಚ್​ ತಂಡದ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದರು. ಈ ಗೆಲುವು ಒಂದು ತಿಂಗಳಲ್ಲಿ ಆರ್​ಸಿಬಿಯ ಮೊದಲ ಗೆಲುವು ಮತ್ತು ಋತುವಿನ ಒಟ್ಟಾರೆ ಎರಡನೇ ಗೆಲುವು.

ಒಂಬತ್ತು ಲೀಗ್ ಪಂದ್ಯಗಳಲ್ಲಿ ಕೇವಲ ಎರಡು ಗೆಲುವುಗಳನ್ನು ಗಳಿಸಿರುವ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್ಸಿಬಿ ಗುಂಪು ಐಪಿಎಲ್ 2024 ಪಾಯಿಂಟ್ಸ್ ಟೇಬಲ್ನಲ್ಲಿ ಕೊನೆಯ ಸ್ಥಾನದಲ್ಲಿದೆ. ಏಣಿಯನ್ನು ಏರುವ ಪ್ರಯತ್ನದಲ್ಲಿ ಅವರು ಪಂದ್ಯಾವಳಿಯ ಈ ಹಂತದಲ್ಲಿ ಗುಜರಾತ್ ಟೈಟಾನ್ಸ್ ಅನ್ನು ಸೋಲಿಸಬೇಕಾಗಿದೆ.

Continue Reading

ಕ್ರೀಡೆ

IPL 2024 : ದೊಡ್ಡ ಮೊತ್ತದ ಪಂದ್ಯದಲ್ಲಿ ಮುಂಬೈ ವಿರುದ್ಧ ಡೆಲ್ಲಿಗೆ 10 ರನ್ ಜಯ

IPL 2024: ಇಲ್ಲಿನ ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬಯಿ ಇಂಡಿಯನ್ಸ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ಬಳಗ ನಿಗದಿತ 20 ಓವರ್​​ಗಳಲ್ಲಿ 4 ವಿಕೆಟ್​ಗೆ 257 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಮುಂಬಯಿ ತನ್ನೆಲ್ಲ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್​ ನಷ್ಟಕ್ಕೆ 247 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

IPL 2024
Koo

ನವ ದೆಹಲಿ: ಮತ್ತೊಂದು ದೊಡ್ಡ ಮೊತ್ತದ ಐಪಿಎಲ್​ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮುಂಬಯಿ ಇಂಡಿಯನ್ಸ್ ವಿರುದ್ಧ. 10 ರನ್​ಗಳ ವಿಜಯ ದೊರಕಿದೆ. ಎರಡೂ ತಂಡಗಳು ಗೆಲುವಿಗಾಗಿ ಕೊನೇ ಕ್ಷಣದ ತನಕ ಹೋರಾಡಿದ್ದು ಹಲವು ಸೋಲಿನ ಬಳಿಕ ಪುಟಿದೆದ್ದಿರುವ ಡೆಲ್ಲಿ ತಂಡ ಪಾಂಡ್ಯ ಬಳಗಕ್ಕೆ ಗೆಲುವು ನಿಕರಾಕರಿಸಿದೆ. ಈ ಮೂಲಕ ಮುಂಬೈ ತಂಡದ ಸೋಲಿನ ಬವಣೆ ಮುಂದುವರಿದಿದ್ದು ಹಾಲಿ ಆವೃತ್ತಿಯಲ್ಲಿ 9ನೇ ಪರಾಜಯಕ್ಕೆ ಒಳಗಾಗಿದೆ. ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐದನೇ ಗೆಲುವನ್ನು ತನ್ನದಾಗಿಸಿಕೊಂಡು ಒಟ್ಟು 10 ಅಂಕಗಳನ್ನು ಪಡೆದುಕೊಂಡಿದ್ದು ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿದೆ. ಇದೇ ವೇಳೆ ಮುಂಬಯಿ ಇಂಡಿಯನ್ಸ್​ ಬಳಗ ಕೇವಲ 6 ಅಂಕಗಳೊಂದಿಗೆ 9ನೇ ಸ್ಥಾನವನ್ನು ಪಡೆದುಕೊಂಡಿತು.

ಇಲ್ಲಿನ ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬಯಿ ಇಂಡಿಯನ್ಸ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ಬಳಗ ನಿಗದಿತ 20 ಓವರ್​​ಗಳಲ್ಲಿ 4 ವಿಕೆಟ್​ಗೆ 257 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಮುಂಬಯಿ ತನ್ನೆಲ್ಲ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್​ ನಷ್ಟಕ್ಕೆ 247 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

ಮುಂಬಯಿ ಭರ್ಜರಿ ಹೋರಾಟ

ದೊಡ್ಡ ಮೊತ್ತವನ್ನು ಬೆನ್ನಟ್ಟಲು ಹೊರಟ ಮುಂಬೈ ತಂಡಕ್ಕೆ ಅದಕ್ಕೆ ಪೂರಕವಾಗಿರುವ ಆರಂಭ ದೊರಕಲಿಲ್ಲ. ರೋಹಿತ್ ಶರ್ಮಾ 8 ರನ್​ಗೆ ಔಟಾದರೆ ಇಶಾನ್ ಕಿಶನ್​ 20 ರನ್​ಗಳಿಗೆ ವಿಕೆಟ್​ ಒಪ್ಪಿಸಿದರು. 45 ರನ್​ಗೆ 2 ವಿಕೆಟ್​ ನಷ್ಟ ಮಾಡಿಕೊಂಡ ಮುಂಬೈಗೆ ಆತಂಕ ಎದುರಾಯಿತು. ಈ ವೇಳೆ ಆಡಲು ಬಂದ ಸೂರ್ಯಕುಮಾರ್ ಯಾದವ್​ 13 ಎಸೆತಕ್ಕೆ 26 ರನ್ ಬಾರಿಸಿ ಮಿಂಚುವ ಸೂಚನೆ ಕೊಟ್ಟರು. ಆದರೆ ಸೂರ್ಯನ ಆಟ ಹೆಚ್ಚು ಹೊತ್ತು ನಡೆಯಲಿಲ್ಲ. ಆದರೆ, ಮತ್ತೊಂದು ಬದಿಯಲ್ಲಿ ತಿಲಕ್ ವರ್ಮಾ ಗಟ್ಟಿಯಾಗಿ ನಿಂತು ಡೆಲ್ಲಿ ಬೌಲರ್​ಗಳನ್ನು ದಂಡಿಸಿದರು. ಅದೇ ರೀತಿ ಹಾಲಿ ಆವೃತ್ತಿಯಲ್ಲಿ ಮೊದಲ ಬ್ಯಾರಿಗೆ ಬ್ಯಾಟಿಂಗ್​ನಲ್ಲಿ ಮಿಂಚಿದ ಹಾರ್ದಿಕ್ ಪಾಂಡ್ಯ 24 ಎಸೆತಕ್ಕೆ 46 ರನ್ ಬಾರಿಸಿದರು.

ನಂತರ ಬಂದ ನೇಹಲ್ ವದೇರಾ 4 ರನ್​ಗೆ ಔಟಾದಾಗ ಮತ್ತೆ ಮುಂಬೈಗೆ ಭಯ ಶುರುವಾಯಿತು. ಆದೆರ, ಟಿಮ್ ಡೇವಿಡ್ 17 ಎಸೆತಕ್ಕೆ 37 ರನ್ ಬಾರಿಸ ಗೆಲುವಿನ ಸನಿಹಕ್ಕೆ ಬರಲು ನೆರವಾದರು. ಡೆಲ್ಲಿ ಪರ ರಸಿಕ್​ ಸಲಾಂ ಹಾಗೂ ಮುಖೇಶ್ ಕುಮಾರ್​ ತಲಾ 3 ವಿಕೆಟ್​ ಉರುಳಿಸಿ ತಂಡ ಗೆಲುವಿಗೆ ನೆರವಾದರು.

ಇದನ್ನೂ ಓದಿ: IPL 2024 : ಅಹಮದಾಬಾದ್​ನಲ್ಲಿ ಕೊಹ್ಲಿಗೆ ಭರ್ಜರಿ ಸ್ವಾಗತ; ವಿಡಿಯೊ ಇದೆ

ಮೆಗ್​ಕುರ್ಕ್​ ಭರ್ಜರಿ ಬ್ಯಾಟಿಂಗ್​

ಗೆಲುವಿನೊಂದಿಗೆ ಚೈತನ್ಯ ಪಡೆದುಕೊಂಡಿದ್ದ ಡೆಲ್ಲಿ ತಂಡ ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿತು. ಜೇಕ್​ ಫೇಸರ್​ ಮೆಕ್​ಗುರ್ಕ್​ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ 27 ಎಸೆತಕ್ಕೆ 84 ರನ್ ಬಾರಿಸಿ ಮಿಂಚಿದರು. ಅವರು ಅಭಿಷೇಕ್ ಪೊರೆಲ್​ (36 ರನ್​) ಜತೆಗೂಡಿ 114 ರನ್ ಬಾರಿಸಿ ಮಿಂಚಿದರು. ಶಾಯ್​ ಹೋಪ್​ 17 ಎಸೆತಕ್ಕೆ 41 ರನ್ ಬಾರಿಸಿ ಮಿಂಚಿದ್ದಾರೆ. ರಿಷಭ್ ಪಂತ್​ 29 ರನ್ ಬಾರಿಸಿ ಮಿಂಚಿದರೆ ಟ್ರಿಸ್ಟಾನ್ 25 ಎಸೆತಕ್ಕೆ 48 ರನ್ ಬಾರಿಸಿದರು.

Continue Reading

ಕರ್ನಾಟಕ

Srinivasa Prasad: ಸಂಸದ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ತೆರಳಿದ ಸಿಎಂ

Srinivasa Prasad: ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್‌ ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದಾರೆ. ಅವರಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

VISTARANEWS.COM


on

Srinivasa Prasad
Koo

ಬೆಂಗಳೂರು: ಚಾಮರಾಜನಗರ ಸಂಸದ, ರಾಜ್ಯದ ಹಿರಿಯ ರಾಜಕಾರಣಿ ವಿ. ಶ್ರೀನಿವಾಸ ಪ್ರಸಾದ್‌ (76) (V Srinivasa Prasad) ಅವರ ಆರೋಗ್ಯ ಸ್ಥಿತಿಯು ಗಂಭೀರವಾಗಿದ್ದು, ಬೆಂಗಳೂರಿನಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿ (Manipal Hospital) ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ (ICU) ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯವನ್ನು ವಿಚಾರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣಿಪಾಲ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.

ಬಹು ಅಂಗಾಂಗ ವೈಫಲ್ಯ, ವಯೋಸಹಜ ಕಾಯಿಲೆಗಳಿಂದ ಬಳಲುತ್ತಿರುವ ಶ್ರೀನಿವಾಸ ಪ್ರಸಾದ್‌ ಅವರು ಹಲವು ದಿನಗಳಿಂದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಧಿಕ ರಕ್ತದೊತ್ತಡ, ಶುಗರ್‌ ಪ್ರಮಾಣದಲ್ಲಿ ಶನಿವಾರ ಭಾರಿ ಏರುಪೇರಾದ ಕಾರಣ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಇದೇ ಕಾರಣಕ್ಕಾಗಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸುದ್ದಿ ತಿಳಿದ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜಕೀಯ ನಿವೃತ್ತಿ

2019ರಲ್ಲಿ ಚಾಮರಾಜನಗರ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿ. ಶ್ರೀನಿವಾಸ ಪ್ರಸಾದ್‌, ಕಾಂಗ್ರೆಸ್‌ ಅಭ್ಯರ್ಥಿ ಧ್ರುವನಾರಾಯಣ ಅವರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದರು. ಆದರೆ, ಕಳೆದ ಮಾರ್ಚ್‌ನಲ್ಲಿಯೇ ರಾಜಕೀಯ ನಿವೃತ್ತಿ ಘೋಷಿಸಿದ ಅವರು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ. ಅಲ್ಲದೆ, ಚಾಮರಾಜನಗರ ಬಿಜೆಪಿ ಅಭ್ಯರ್ಥಿ ಎಸ್.‌ ಬಾಲರಾಜ್‌ ಅವರ ಪರವಾಗಿಯೂ ಪ್ರಚಾರದಲ್ಲಿ ಭಾಗವಹಿಸಿರಲಿಲ್ಲ. ಇನ್ನು, ಅವರ ಬೆಂಬಲ ಪಡೆಯಲು ಕಾಂಗ್ರೆಸ್‌ ತಂತ್ರ ಕೂಡ ಹೆಣೆದಿತ್ತು.

ಕೆಲ ದಿನಗಳ ಹಿಂದಷ್ಟೇ ಮೈಸೂರಿನಲ್ಲಿ ವಿ. ಶ್ರೀನಿವಾಸ ಪ್ರಸಾದ್‌ ಅವರ ಮನೆಗೆ ಸಿದ್ದರಾಮಯ್ಯ ಭೇಟಿ ನೀಡಿ, ಕಾಂಗ್ರೆಸ್‌ಗೆ ಬಿಜೆಪಿಯ ಪ್ರಭಾವಿ ದಲಿತ ನಾಯಕನ ಬೆಂಬಲವನ್ನು ಸೆಳೆಯುವ ಪ್ರಯತ್ನ ಮಾಡಿದ್ದರು. ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ಶ್ರೀನಿವಾಸ ಪ್ರಸಾದ್‌ ಅವರ ಮನೆಗೆ ತೆರಳಿದ ಸಿದ್ದರಾಮಯ್ಯ ಅವರು ಕೆಲ ಹೊತ್ತು ಚರ್ಚಿಸಿದ್ದರು.

ಕಳೆದ ಕೆಲವು ವರ್ಷಗಳಿಂದ ಸಿದ್ದರಾಮಯ್ಯ ಅವರಿಂದ ಶ್ರೀನಿವಾಸ ಪ್ರಸಾದ್‌ ಅವರು ದೂರವೇ ಉಳಿದಿದ್ದರು. ಆದರೆ, ಏಕಾಏಕಿ ಸಿದ್ದರಾಮಯ್ಯ ಅವರೇ ಶ್ರೀನಿವಾಸ ಪ್ರಸಾದ್‌ ಅವರನ್ನು ಭೇಟಿ ಮಾಡಿದ್ದರು. ಭೇಟಿಯ ಬೆನ್ನಲ್ಲೇ, “ನನಗೆ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ಹಾಗಾಗಿ, ನಾನು ಮೋದಿ ಕಾರ್ಯಕ್ರಮಕ್ಕೆ ಹೋಗುವುದಿಲ್ಲ. ಚಾಮರಾಜನಗರದಲ್ಲಿ ಈ ಬಾರಿ ಕಾಂಗ್ರೆಸ್‌ ಪರವಾದ ಅಲೆ ಇದೆ” ಎಂದು ಹೇಳಿದ್ದರು.

ಇದನ್ನೂ ಓದಿ: Gut Health: ನಿಮ್ಮ ಕರುಳಿನ ಆರೋಗ್ಯಕ್ಕಾಗಿ ಬೇಸಿಗೆಯಲ್ಲಿ ಈ ಡ್ರಿಂಕ್ಸ್ ಸೇವಿಸಿ

Continue Reading

ಪ್ರಮುಖ ಸುದ್ದಿ

IPL 2024 : ಅಹಮದಾಬಾದ್​ನಲ್ಲಿ ಕೊಹ್ಲಿಗೆ ಭರ್ಜರಿ ಸ್ವಾಗತ; ವಿಡಿಯೊ ಇದೆ

IPL 2024: ವಿರಾಟ್ ಕೊಹ್ಲಿ ಏಪ್ರಿಲ್ 28 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆತಿಥೇಯ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದೊಂದಿಗೆ ಆರ್​ಸಿಬಿ ಫ್ರಾಂಚೈಸಿಗಾಗಿ ತಮ್ಮ ಪಾತ್ರವನ್ನು ಪುನರಾವರ್ತಿಸಲಿದ್ದಾರೆ. ಸ್ಪರ್ಧೆಗೆ ಒಂದು ದಿನ ಮುಂಚಿತವಾಗಿ ಅವರು ಮತ್ತು ಅವರ ಉಳಿದ ಆಟಗಾರರ ಜತೆ ಹೋಟೆಲ್​ಗೆ ಆಗಮಿಸಿದರು. ಈ ಮೂಲಕ ಅವರು ಅಹಮದಾಬಾದ್​ನಲ್ಲಿ ತಮ್ಮ ಇರುವಿಕೆಯನ್ನು ಗುರುತಿಸಿಕೊಂಡರು.

VISTARANEWS.COM


on

Virat Kohli
Koo

ಬೆಂಗಳೂರು: ಮುಂಬರುವ ಐಪಿಎಲ್ 2024 ರಲ್ಲಿ (IPL 2024) ಆತಿಥೇಯ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡದ ಇತರ ಆಟಗಾರರು ಅಹಮದಾಬಾದ್​ಗೆ ಆಗಮಿಸಿದ್ದಾರೆ. ಬಹುನಿರೀಕ್ಷಿತ ಮುಖಾಮುಖಿಗೆ ಒಂದು ದಿನ ಮೊದಲು ಬಂದ ಆರ್​ಸಿಬಿ ಪಡೆಗಳಿಗೆ ತಂಡದ ಹೋಟೆಟ್​ನಲ್ಲಿ ಭವ್ಯ ಸ್ವಾಗತ ದೊರೆಯಿತು.

ಹೋಟೆಲ್​ನಲ್ಲಿ ಸಿಕ್ಕಿರುತ ಆತ್ಮೀಯ ಸ್ವಾಗತವನ್ನು ಸ್ವೀಕರಿಸಿದವರಲ್ಲಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕೂಡ ಸೇರಿದ್ದಾರೆ. ಅದರ ತುಣುಕುಗಳು ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

ವಿರಾಟ್ ಕೊಹ್ಲಿ ಏಪ್ರಿಲ್ 28 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆತಿಥೇಯ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದೊಂದಿಗೆ ಆರ್​ಸಿಬಿ ಫ್ರಾಂಚೈಸಿಗಾಗಿ ತಮ್ಮ ಪಾತ್ರವನ್ನು ಪುನರಾವರ್ತಿಸಲಿದ್ದಾರೆ. ಸ್ಪರ್ಧೆಗೆ ಒಂದು ದಿನ ಮುಂಚಿತವಾಗಿ ಅವರು ಮತ್ತು ಅವರ ಉಳಿದ ಆಟಗಾರರ ಜತೆ ಹೋಟೆಲ್​ಗೆ ಆಗಮಿಸಿದರು. ಈ ಮೂಲಕ ಅವರು ಅಹಮದಾಬಾದ್​ನಲ್ಲಿ ತಮ್ಮ ಇರುವಿಕೆಯನ್ನು ಗುರುತಿಸಿಕೊಂಡರು.

ಐಪಿಎಲ್ 2024 ರ ಸ್ಟಾರ್ ಆಕರ್ಷಣೆಗಳಲ್ಲಿ ಒಬ್ಬರಾದ ಕೊಹ್ಲಿ ಏಪ್ರಿಲ್ 27 ರಂದು ತಂಡದ ಹೋಟೆಲ್​ಗೆ ಹೋಗುವ ವೇಳೆ ಭವ್ಯ ಸ್ವಾಗತ ಪಡೆದರು.

ಆರೆಂಜ್ ಕ್ಯಾಪ್ ವೀರ ಕೊಹ್ಲಿ

ವಿರಾಟ್ ಕೊಹ್ಲಿ ಪ್ರಸ್ತುತ ಐಪಿಎಲ್ 2024 ರ ಋತುವಿನಲ್ಲಿ ‘ಆರೆಂಜ್ ಕ್ಯಾಪ್’ ಹೊಂದಿದ್ದಾರೆ. ಕ್ರಿಕೆಟಿಗ ಈಗಾಗಲೇ ಕೇವಲ ಒಂಬತ್ತು ಇನಿಂಂಗ್ಸ್​​​ಗಳಲ್ಲಿ 61 ಕ್ಕೂ ಹೆಚ್ಚು ಸರಾಸರಿಯಲ್ಲಿ 430 ರನ್ ಗಳಿಸಿದ್ದಾರೆ/ ಎರಡನೇ ಸ್ಥಾನದಲ್ಲಿರುವ ಸುನಿಲ್ ನರೈನ್ ಅವರನ್ನು 73 ರನ್​ಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: IPL 2024 : ಪಂದ್ಯದ ನಡುವೆ ಮೈದಾನದಲ್ಲೇ ಗಾಳಿಪಟ ಹಾರಿಸಿದ ಪಂತ್​, ರೋಹಿತ್! ಇಲ್ಲಿದೆ ವಿಡಿಯೊ

ಕೊಹ್ಲಿ ಇತ್ತೀಚೆಗೆ ಹೈದರಾಬಾದ್​ನಲ್ಲಿ ನಡೆದ ಎಸ್ಆರ್​​ಎಚ್​ ತಂಡದ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದರು. ಈ ಗೆಲುವು ಒಂದು ತಿಂಗಳಲ್ಲಿ ಆರ್​ಸಿಬಿಯ ಮೊದಲ ಗೆಲುವು ಮತ್ತು ಋತುವಿನ ಒಟ್ಟಾರೆ ಎರಡನೇ ಗೆಲುವು.

ಒಂಬತ್ತು ಲೀಗ್ ಪಂದ್ಯಗಳಲ್ಲಿ ಕೇವಲ ಎರಡು ಗೆಲುವುಗಳನ್ನು ಗಳಿಸಿರುವ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್ಸಿಬಿ ಗುಂಪು ಐಪಿಎಲ್ 2024 ಪಾಯಿಂಟ್ಸ್ ಟೇಬಲ್ನಲ್ಲಿ ಕೊನೆಯ ಸ್ಥಾನದಲ್ಲಿದೆ. ಏಣಿಯನ್ನು ಏರುವ ಪ್ರಯತ್ನದಲ್ಲಿ ಅವರು ಪಂದ್ಯಾವಳಿಯ ಈ ಹಂತದಲ್ಲಿ ಗುಜರಾತ್ ಟೈಟಾನ್ಸ್ ಅನ್ನು ಸೋಲಿಸಬೇಕಾಗಿದೆ.

Continue Reading
Advertisement
Air Force Chopper
ದೇಶ1 min ago

Air Force Chopper: ಉತ್ತರಾಖಂಡದಲ್ಲಿ ಕಾಡಿನ ಬೆಂಕಿ ನಂದಿಸಲು ವಾಯು ಪಡೆಯ ಹೆಲಿಕಾಪ್ಟರ್‌ ಬಳಕೆ

TCS World 10K
ಬೆಂಗಳೂರು5 mins ago

TCS World 10K : ನಾಳೆ ಬೆಂಗಳೂರಿನಲ್ಲಿ ವಿಶ್ವ ವಿಖ್ಯಾತಿಯ ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಾಥಾನ್​

Lok Sabha Election 2024 special kit for the polling staff
ಉತ್ತರ ಕನ್ನಡ9 mins ago

Lok Sabha Election 2024: ಲೋಕಸಭಾ ಚುನಾವಣೆ ಸಿಬ್ಬಂದಿಗೆ ತಯಾರಾಗಿದೆ ವಿಶೇಷ ಕಿಟ್

virat kohli
ಪ್ರಮುಖ ಸುದ್ದಿ45 mins ago

Virat Kohli : ಅಭ್ಯಾಸದ ಮಧ್ಯೆ ಮೊಬೈಲ್​ನಲ್ಲೇ ಡೆಲ್ಲಿ ವರ್ಸಸ್​​ ಮುಂಬೈ ಮ್ಯಾಚ್ ನೋಡಿದ ಕೊಹ್ಲಿ

MDH, Everest Spices
ವಿದೇಶ53 mins ago

MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಮಾಹಿತಿ ಸಂಗ್ರಹಕ್ಕೆ ಮುಂದಾದ ಅಮೆರಿಕ

Zameer Ahmed Khan‌
ಕರ್ನಾಟಕ1 hour ago

Zameer Ahmed Khan‌: ಸಚಿವ ಜಮೀರ್ ಅಹ್ಮದ್ ರೋಷಾವೇಶದ ಭಾಷಣಕ್ಕೆ ಗಾಜು ಪೀಸ್‌ ಪೀಸ್; ಇಲ್ಲಿದೆ ವಿಡಿಯೊ

Medical Negligence
ಕ್ರೈಂ1 hour ago

Medical Negligence: ಆಸ್ಪತ್ರೆ ನಿರ್ಲಕ್ಷ್ಯದಿಂದ ಬಾಲಕ ಸಾವು: 10 ಲಕ್ಷ ರೂ. ಪರಿಹಾರ ಘೋಷಿಸಿದ ಕೋರ್ಟ್​​

IPL 2024
ಕ್ರೀಡೆ2 hours ago

IPL 2024 : ದೊಡ್ಡ ಮೊತ್ತದ ಪಂದ್ಯದಲ್ಲಿ ಮುಂಬೈ ವಿರುದ್ಧ ಡೆಲ್ಲಿಗೆ 10 ರನ್ ಜಯ

Viral News
ವೈರಲ್ ನ್ಯೂಸ್2 hours ago

Viral News: ಅಪ್ರಾಪ್ತ ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದ ಮುಸ್ಲಿಂ ಯುವಕನಿಗೆ ಬಿತ್ತು ಗೂಸಾ

Assault Case
ಕರ್ನಾಟಕ2 hours ago

Assault Case: ಬೆಂಗಳೂರಲ್ಲಿ ಟೀ ಶಾಪ್ ಯುವಕನ ಮೇಲೆ ಹಲ್ಲೆ ಮಾಡಿದ ಮುಸ್ಲಿಂ ಯುವಕರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20245 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ10 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ17 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌