Albert Einstein Birthday : ವಿಜ್ಞಾನ ಎಂದರೆ ತಟ್ಟನೆ ನೆನಪಾಗುವ ಅಕ್ಕರೆಯ ವಿಜ್ಞಾನಿ ಆಲ್ಬರ್ಟ್ ಐನ್‌ಸ್ಟೀನ್‌ - Vistara News

ವಿಜ್ಞಾನ

Albert Einstein Birthday : ವಿಜ್ಞಾನ ಎಂದರೆ ತಟ್ಟನೆ ನೆನಪಾಗುವ ಅಕ್ಕರೆಯ ವಿಜ್ಞಾನಿ ಆಲ್ಬರ್ಟ್ ಐನ್‌ಸ್ಟೀನ್‌

ಇಂದು ಮಹಾ ವಿಜ್ಞಾನಿ ಆಲ್ಬರ್ಟ್‌ ಐನ್‌ಸ್ಟೀನ್‌ ಅವರ ಹುಟ್ಟುಹಬ್ಬ (Albert Einstein Birthday). ಈ ವಿಜ್ಞಾನಿಯ ಸಾಧನೆ, ವ್ಯಕ್ತಿತ್ವವನ್ನು ಪರಿಚಯಿಸುವ ಲೇಖನ ಇಲ್ಲಿದೆ.

VISTARANEWS.COM


on

Everything to know about the father of modern physics
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
albert einstein

ಡಾ. ಡಿ.ಸಿ.ರಾಮಚಂದ್ರ
ಐನ್‌ಸ್ಟೀನ್‌ ಹೆಸರು ವಿಜ್ಞಾನ ಲೋಕದಲ್ಲಿ ಎಲ್ಲರಿಗೂ ಪ್ರೇರಣೆ ನೀಡುವಂತಹದ್ದು. ಇಂದು ಅವರ ಹುಟ್ಟು ಹಬ್ಬ (Albert Einstein Birthday). ಶಾಲೆಯ ನಾಲ್ಕುಗೋಡೆಗಳ ನಡುವೆ ಶಿಕ್ಷಣ ಕಲಿಯದ ಬಾಲಕ ಹೊರ ಪ್ರಪಂಚದ ಅನುಭವದಿಂದಲೇ ವಿಜ್ಞಾನಿಯಾಗಿ ಬೆಳೆದು ವಿಜ್ಞಾನ ಲೋಕವೇ ಬೆರಗುಗೊಳಿಸುವಂತ ಸಾಧನೆ ಮಾಡಿದ ಮಹಾನ್ ವಿಜ್ಞಾನಿ. ಇವರು ಮಂಡಿಸಿದ ವೈಜ್ಞಾನಿಕ ಅನ್ವೇಷಣೆಗಳು ಇಂದಿಗೂ ಮನುಕುಲಕ್ಕೆ ಮಹಾ ಉಪಯೋಗ ನೀಡುತ್ತಾ ಬಂದಿವೆ.

1879 ರ ಮಾರ್ಚ್ 14 ರಂದು ಆಲ್ಬರ್ಟ್‌ ಐನ್‌ಸ್ಟೀನ್‌ ಜರ್ಮನ್ ಸಾಮ್ರಾಜ್ಯದ ಒಂದು ಭಾಗವಾದ ಉಲ್ಮನ್‌ ನಲ್ಲಿ ಜನಿಸಿದರು. ಅವರತಂದೆ ಹರ್ಮನ್‌ ಐನ್‌ಸ್ಟೀನ್‌ ಅವರು ಎಂಜಿನಿಯರ್‌ ಆಗಿದ್ದರು. ಅವರ ತಾಯಿ ಪಾಲಿನ್ ಐನ್ ಸ್ಟೀನ್‌. ಉಲ್ಮನ್‌ ಪಟ್ಟಣವು ಕೇವಲ 120,000ಕ್ಕಿಂತ ಹೆಚ್ಚು ಜನ ಸಂಖ್ಯೆಯನ್ನು ಹೊಂದಿದೆ. ಅವರ ಮನೆ ನಿಂತಿದ್ದ ಒಂದು ಸಣ್ಣ ಸ್ಮರಣಾರ್ಥ ಫಲಕವಿದೆ (ಇದು ಎರಡನೆಯ ಮಹಾಯುದ್ಧದ ಸಮಯದಲ್ಲಿ ನಾಶವಾಗಿದೆ). ಐನ್‌ಸ್ಟೀನ್‌ ಜನನದ ಸ್ವಲ್ಪ ಸಮಯದ ನಂತರ ಕುಟುಂಬವು ಮ್ಯೂನಿಚ್‌ಗೆ ಸ್ಥಳಾಂತರಗೊಂಡಿತು ನಂತರ ಇಟಲಿಗೆ ಹೋದಾಗ ಅವರ ತಂದೆ ತನ್ನ ಸ್ವಂತ ವ್ಯವಹಾರವನ್ನು ನಡೆಸುವಲ್ಲಿ ಸಮಸ್ಯೆಗಳನ್ನು ಎದುರಿಸಿದರು.

ಐನ್‌ಸ್ಟೀನ್‌ತಂದೆ ಹರ್ಮನ್‌ ಎಲೆಕ್ಟ್ರೋ ಕೆಮಿಕಲ್‌ ಕಾರ್ಖಾನೆಯನ್ನು ನಡೆಸುತ್ತಿದ್ದರು ಮತ್ತು ಅವರ ತಾಯಿ ಪಾಲಿನ್ ಆಲ್ಬರ್ಟ್ ಮತ್ತು ಅವರ ತಂಗಿ ಮಾರಿಯಾಳನ್ನು ನೋಡಿಕೊಂಡಿದ್ದರು. ಐನ್‌ಸ್ಟೀನ್‌ ತನ್ನ ಕೆಲವು ಶಿಕ್ಷಕರ ಸರ್ವಾಧಿಕಾರಿ ಧೋರಣೆಯ ವಿರುದ್ಧ ದಂಗೆ ಎದ್ದು, ಹದಿನಾರನೇ ವಯಸ್ಸಿನಲ್ಲಿ ಶಾಲೆಯಿಂದ ಹೊರಗುಳಿದನು. ನಂತರ ಅವನು ಜುರಿಚ್‌ನ ಸ್ವಿಸ್ ಫೆಡರಲ್ ಪಾಲಿಟೆಕ್ನಿಕ್ ಶಾಲೆಗೆ ಪ್ರವೇಶ ಪರೀಕ್ಷೆಯನ್ನು ತೆಗೆದುಕೊಂಡನು. ಭೌತಶಾಸ್ತ್ರ ಮತ್ತು ಗಣಿತದಲ್ಲಿ ಅವನ ಪ್ರದರ್ಶನಗಳು ಅತ್ಯುತ್ತಮವಾಗಿದ್ದರೂ, ಅವನ ಅಂಕಗಳು ಇತರ ಪ್ರದೇಶಗಳು ಸಬ್‌ಪಾರ್‌ ಆಗಿದ್ದವು ಮತ್ತು ಅವನು ಪರೀಕ್ಷೆಯಲ್ಲಿ ಉತ್ತೀರ್ಣನಾಗಿರಲಿಲ್ಲ.

ಬಾಲ್ಯದಲ್ಲೇ ಆವಿಷ್ಕಾರ

ಆಲ್ಬರ್ಟ್ ಐನ್‌ಸ್ಟೀನ್‌ ವಿದ್ವಾಂಸ ಹ್ಯಾನ್ಸ್-ಜೋಸೆಫ್‌ಕೊಪ್ಪರ್‌ ಅವರ ಪ್ರಕಾರ, ಐನ್‌ಸ್ಟೀನ್‌ ಜೀವನದಲ್ಲಿ ಎರಡು “ಅದ್ಭುತಗಳು” ನಡೆದಿವೆ. ಅವರು ಐದನೇ ವಯಸ್ಸಿನಲ್ಲಿರುವಾಗ ಬಾಹ್ಯ ಒತ್ತಡಗಳು ಸೂಜಿಯನ್ನು ತಿರುಗಿಸ ಬಲ್ಲವು ಎಂಬುದನ್ನು ಮನವರಿಕೆ ಮಾಡಿಕೊಂಡರು. ಇದು ಅವರು ಕಾಣದ ವಿಷಯಗಳ ಕುರಿತು ಕುತೂಹಲಿಯಾಗಲು ಕಾರಣವಾಯಿತು. ಇನ್ನು 12ನೇ ವಯಸ್ಸಿನಲ್ಲಿರುವಾಗಲೇ ಅವರು ಜ್ಯಾಮಿತಿಯ ಸೂತ್ರಗಳನ್ನು ಕಂಡು ಕೊಂಡರು. ಇದು ಅವರ ಜೀವನದಲ್ಲಿ ಮಹತ್ವದ ಘಟ್ಟ.

ಐನ್‌ಸ್ಟೀನ್‌ ಒಟ್ಟಾರೆ ತಮ್ಮ ಜೀವಿತಾವಧಿಯಲ್ಲಿ ಮುನ್ನೂರಕ್ಕು ಹೆಚ್ಚು ಸಂಶೋಧನಾ ಪ್ರಬಂಧಗಳು ಮತ್ತು ಇತರ 150 ಕ್ಕೂ ಹೆಚ್ಚು ಪ್ರಬಂಧಗಳನ್ನು ಬರೆದಿದ್ದಾರೆ. ಭಾರತದ ಸತ್ಯೇಂದ್ರನಾಥ್ ಬೋಸ್‌ ಜೊತೆಗೂಡಿ ನೀಡಿದ ‘ಬೋಸ್-ಐನ್ ಸ್ಟೀನ್‌ ಸ್ಟಾಟಿಸ್ಟಿಕ್ಸ್’ ಸೇರಿದಂತೆ ‘ಐನ್ ಸ್ಟೀನ್‌ ರೆಫ್ರಿಜರೇಟರ್’, ‘ಐನ್ ಸ್ಟೀನ್‌-ಕಾರ್ಟನ್ ಸಿದ್ಧಾಂತ’, ‘ಐನ್‌ಸ್ಟೀನ್‌ -ಇನ್ಫೆಲ್ಡ್-ಹಾಫ್ಮನ್‌ ಇಕ್ವೇಷನ್ಸ್’, ‘ಐನ್ ಸ್ಟೀನ್‌ -ಪೊಡೊಲೊಸ್ಕಿ-ರೋಸೆನ್ ಪ್ಯಾರಾಡಾಕ್ಸ್’ ಇವುಗಳಲ್ಲಿ ಪ್ರಮುಖವಾದವು. ಇರ್ವಿನ್ ಶ್ರೋಡಿಂಗರ್’ಗೆ ಸಂಶೋಧನೆಗೆ ಸೂಚಿಸಿದ್ದು ಐನ್‌ಸ್ಟೀನ್‌ ಹಿರಿಮೆಗಳಲ್ಲೊಂದು.

ನೊಬೆಲ್ ಸಮಿತಿಗೂ ಅರ್ಥವಾಗಿರಲಿಲ್ಲ !

ತಮ್ಮ ಅದ್ಭುತ ಸಂಶೋಧನೆಯ ಹೊರತಾಗಿಯೂ ಐನ್‌ಸ್ಟೀನ್‌ಗೆ ಸಾಪೇಕ್ಷ ಸಿದ್ಧಾಂತಕ್ಕೆ ನೊಬೆಲ್ ಪ್ರಶಸ್ತಿ ಸಿಗಲೇ ಇಲ್ಲ. ಏಕೆಂದರೆ ಸಾಪೇಕ್ಷ ಸಿದ್ಧಾಂತ ನೊಬೆಲ್ ಸಮಿತಿಯವರಿಗೂ ಅರ್ಥವಾಗಿರಲಿಲ್ಲ. ಇದರ ಬದಲಾಗಿ ಇದರ ಮುಂದೆ ಚಿಲ್ಲರೆ ಎನಿಸಬಹುದಾದ ‘ಫೋಟೋ ಎಲೆಕ್ಟ್ರಿಕ್‌ ಎಫೆಕ್ಟ್’ಗೆ ಅದೂ 16 ವರ್ಷ ಬಿಟ್ಟು, 1921ರಲ್ಲಿ ನೊಬೆಲ್ ಪ್ರಶಸ್ತಿ ನೀಡಲಾಯಿತು. ವಿಚಿತ್ರ ಎಂದರೆ ಅವರ ಕೆಲವು ಥಿಯರಿಗಳು ಸಾಕ್ಷವಿಲ್ಲದೇ ಹಾಗೇ ಉಳಿದುಕೊಂಡಿದ್ದವು. ಅವು ಸತ್ಯವೋ ಸುಳ್ಳೋ ಎಂದು ಹೇಳಲು ಸಾಮಾನ್ಯರು ಬಿಡಿ ವಿಶ್ವದಯಾವ ಘಟಾನುಘಟಿ ವಿಜ್ಞಾನಿಗಳಿಗೂ ಸಾಧ್ಯವಾಗಿರಲಿಲ್ಲ.

ಐನ್‌ಸ್ಟೀನ್‌ ಅವರ ಜನಪ್ರಿಯ ಚಿತ್ರವೆಂದರೆ ಅವರು ತಮ್ಮ ನಾಲಗೆಯನ್ನು ಹೊರಗೆಚಾಚಿ ಪೋಸು ನೀಡಿದ್ದು. ಐನ್‌ಸ್ಟೀನ್‌ ಚಿಕ್ಕ ಹುಡುಗನಂತೆ ವರ್ತಿಸಿದ್ದ ಈ ಚಿತ್ರತೆಗೆದಿದ್ದು ಐನ್ ಸ್ಟೀನ್‌ 72ನೇ ಹುಟ್ಟುಹಬ್ಬ ದಂದು. ಐನ್‌ಸ್ಟೀನ್‌ಗೆ ಗೌರವ ಸೂಚಿಸಲು ಪ್ರಿನ್ಸ್‌ಸ್ಟ್‌ ಕ್ಲಬ್‌ನಲ್ಲಿ ಸಮಾರಂಭ ಆಯೋಜನೆಯಾಗಿತ್ತು. ಅವತ್ತು ಸ್ನೇಹಿತರು, ಸಹೋದ್ಯೋಗಿಗಳೆಲ್ಲಾ ಜಮಾಯಿಸಿದ್ದರು. ಅಲ್ಲಿಯೇ ಸಾಕಷ್ಟು ಪೋಟೊಗಳಿಗೆ ಪೋಸ್ ನೀಡಿ ನಕ್ಕು ನಕ್ಕು ವಿಜ್ಞಾನಿಗೆ ಸುಸ್ತಾಗಿತ್ತು. ಪಾರ್ಟಿ ಮುಗಿದ ಬಳಿಕ ಮನೆಗೆ ಹೊರಡಲು ಸ್ನೇಹಿತರೊಬ್ಬರ ಕಾರು ಹತ್ತಿದ ಮೇಧಾವಿಯನ್ನು ಫೋಟೊಗ್ರಾಫರ್‌ಗಳು ಬಿಡಲಿಲ್ಲ. ಮತ್ತಷ್ಟು ಫೋಟೊತೆಗೆಯಲು ಮುಂದಾದಾಗ ನಕ್ಕು ಸುಸ್ತಾಗಿದ್ದ ಐನ್‌ಸ್ಟೀನ್‌ ನಾಲಗೆಯನ್ನು ಹೊರಗೆಚಾಚಿ ಪೋಸು ನೀಡಿದರು.

Everything to know about the father of modern physics

ಸಾಕ್ಸ್ ಹಾಕಲೇ ಇಲ್ಲ !

ಐನ್‌ಸ್ಟೀನ್‌ ಅವರ ವಿಚಿತ್ರ ಡೆಸ್ಸಿಂಗ್ ಅವರ ಹೈಲೆಟ್‌ ಆಗಿತ್ತು. ಆದರೆ ಅವರ ಕೆದರಿದ ಕೂದಲೂ ಕೂಡ ಜನರನ್ನು ಆಕರ್ಷಿಸಿದೆ. ಅಷ್ಟೇ ಅಲ್ಲ ಅವರು ಎಂದೂಕೂಡ ಶೂ ಧರಿಸುವಾಗ ಸಾಕ್ಸ್ ಹಾಕುತ್ತಿರಲಿಲ್ಲವಂತೆ…ಅದೂ ಕೂಡ ಹೆಚ್ಚಿನವರನ್ನು ಆಕರ್ಷಿಸಿದೆ. ವಿಜ್ಞಾನಿ ಐನ್‌ಸ್ಟೀನ್‌ ಅವರಿಗೆ ಸಾಕ್ಸ್ಎಂದರೆ ಕಿರಿಕಿರಿ ಮಾಡುವ ಮತ್ತು ನೋವುಂಟು ಮಾಡುವ ವಸ್ತುವಾಗಿತ್ತು.

ಐನ್‌ಸ್ಟೀನ್‌ ಅವರ ತಾಯಿ ಸಂಗೀತಗಾರ್ತಿ. ಆಕೆ ತನ್ನ ಮಗ ಮ್ಯೂಸಿಕ್‌ನ್ನು ಇಷ್ಟಪಡಬೇಕು ಮತ್ತು ಕಲಿಯಬೇಕು ಎಂದು ಬಯಸಿದ್ದರು. ಅಲ್ಬರ್ಟ್ ಐನ್‌ಸ್ಟೀನ್‌ ಚಿಕ್ಕವರಿದ್ದಾಗ ವಾಯಲಿನ್ ಕಲಿಯುವುದನ್ನು ಇಷ್ಟಪಡಲೇ ಇಲ್ಲ. ಆದರೆ ಟೀನೇಜ್‌ಗೆ ಕಾಲಿಟ್ಟ ಮೇಲೆ ಅವರು ವಯಲಿನ್ ಕಲಿತದ್ದು ಮಾತ್ರವಲ್ಲ ಹಾಡುವುದೂ ಕೂಡ ತಿಳಿದಿತ್ತು. ಸಿಕ್ ಅನ್ನು ಬಹಳವಾಗಿ ಇಷ್ಟಪಟ್ಟರು. ಐನ್‌ಸ್ಟೀನ್‌ ಗೆ ವಯೋಲಿನ್ ಮತ್ತು ಸಂಗೀತ ಎಂದರೆ ಅತೀವ ಮೋಹ. ಒಂದೊಮ್ಮೆ ನಾನು ವಿಜ್ಞಾನಿಯಾಗದಿದ್ದರೆ ಸಂಗೀತಗಾರ ನಾಗುತ್ತಿದ್ದೆ ಎಂದು ಸ್ವತಃ ಐನ್‌ಸ್ಟೀನ್‌ ಹೇಳಿಕೊಂಡಿದ್ದರು.

ನೌಕಾಯಾನ ಅಂದರೆ ಐನ್ ಸ್ಟೀನ್‌ ಅವರಿಗೆ ಇಷ್ಟವಾಗುತ್ತಿತ್ತು. ಹಾಗಂತ ಅವರು ಅಷ್ಟೇನು ಉತ್ತಮ ನಾವಿಕರಾಗಿರಲಿಲ್ಲ. ದೋಣಿ ಹಾಳಾದರೆ ಅಕ್ಕಪಕ್ಕದವರು ಅದನ್ನು ಸರಿಪಡಿಸಿಕೊಡ ಬೇಕಿತ್ತು. ಅಷ್ಟೇ ಅಲ್ಲ ಅವರು ತಮ್ಮ ಜೀವನದುದ್ದಕ್ಕೂ ಈಜುವುದನ್ನು ಕಲಿಯಲೇ ಇಲ್ಲವಂತೆ. ಹಾಗಂತ ಅವರು ನೌಕಾಯಾನ ಕೈಗೊಳ್ಳುವುದನ್ನು ತಡೆಯುವುದಕ್ಕೆ ಸಾಧ್ಯವಾಗಿಲ್ಲ.

ರೆಫ್ರಿಜರೇಟರ್ ಸಂಶೋಧನೆ

ಐನ್‌ಸ್ಟೀನ್‌ ಅವರ ಸೀನಿಯರ್ ಆಗಿದ್ದ ಲಿಯೋ ಸಿಜಾರ್ಡ್ ಅವರ ಜೊತೆಗೆ ರೆಫ್ರಿಜರೇಟರ್‌ ಅನ್ನು ಕೂಡ ಸಂಶೋಧನೆ ಮಾಡಿದ್ದರು. ಎರಡು ದಶಕಗಳ ನಂತರ ಅವರಥಿಯರಿಯನ್ನು ಅವರು ಪ್ರಕಟಿಸಿದರು. 1930 ರಲ್ಲಿ ಈ ರೆಪ್ರಿಜರೇಟರ್‌ ಅನ್ನು ಪೇಟೆಂಟ್ ಪಡೆಯಲಾಯಿತು ಮತ್ತು ಕೂಡಲೇ ಅದರ ಅಪ್‌ಡೇಟ್‌ ಆಗಿರುವ ವರ್ಷನ್‌ ಕೂಡ ಬಂತು.

ಇಸ್ರೆಲ್‌ನ ಮೊದಲ ಅಧ್ಯಕ್ಷ ಚೈಮ್ ವಿಜ್ಮನ್‌ ಅವರು 1952 ನವೆಂಬರ್ 9 ರಂದು ಮೃತಪಟ್ಟ ನಂತರ ಇಸ್ರೆಲ್‌ನ ಎರಡನೇ ಅಧ್ಯಕ್ಷರಾಗುವಂತೆ ಆಲ್ಬರ್ಟ್ ಐನ್‌ಸ್ಟೀನ್‌ ಆಫರ್‌ ಬಂದಿತ್ತು. ಆದರೆ 73 ವರ್ಷದವರಾಗಿದ್ದ ಐನ್‌ಸ್ಟೀನ್‌ ನಾಜೂಕಿ ನಿಂದಲೇ ಅವರಿಗೆ ಬಂದ ಆಫರ್‌ನ್ನು ನಿರಾಕರಿಸಿದ್ದರು. ಅದಕ್ಕೆ ಕಾರಣವನ್ನು ಕೇಳಿದಾಗ ಅವರು “ದೈಹಿಕ ಯೋಗ್ಯತೆಯ ಕೊರತೆ ಮತ್ತು ಜನರನ್ನು ಸರಿಯಾಗಿ ನಿಭಾಯಿಸುವ ತಾಕತ್ತು ಇಲ್ಲದೇ ಇರುವುರು” ಎಂದು ತಿಳಿಸಿದ್ದರು. ಅಂದರೆ ನನಗೆ ವಯಸ್ಸಾಗಿದೆ, ನಾನು ಅಧ್ಯಕ್ಷನಾಗುವುದು ಸೂಕ್ತವಲ್ಲ ಎಂದು ಹೇಳಿದ್ದರು.

ಬ್ರಿಲಿಯೆಂಟ್‌ ಬ್ರೈನ್‌

ಐನ್‌ಸ್ಟೀನ್‌ ಅವರ ಹೆಸರನ್ನೇ ತೆಗೆದುಕೊಳ್ಳಿ. ಇಂಗ್ಲೀಷ್‌ನಲ್ಲಿ ಅವರ ಹೆಸರಿನ ʻAlbert Einsteinʼ ನಲ್ಲಿರುವ ಅಕ್ಷರಗಳನ್ನು ಆಚೀಚೆ ಮಾಡಿ ಪುನಃ ಜೋಡಿಸಿದರೆ ‘Ten elite brains’ ಎಂದು ಕೂಡ ಮಾಡಬಹುದು. ಇದರರ್ಥ 10 ಶ್ರೇಷ್ಠ ಮೆದುಳುಗಳು ಎಂದಾಗುತ್ತದೆ. ಇದಷ್ಟು ಸಮಂಜಸವಾಗಿಲ್ಲವೇ ಐನ್‌ಸ್ಟೀನ್‌ ಅವರಿಗೆ ನೀವೇ ಹೇಳಿ!

ಇದನ್ನೂ ಓದಿ : Bal Puarskar: ಬೆಂಗಳೂರಿನ 8 ವರ್ಷದ ಬಾಲಕ ರಿಷಿಗೆ ರಾಷ್ಟ್ರೀಯ ಬಾಲ ಪುರಸ್ಕಾರ, ಈತನ ಐಕ್ಯು ಐನ್‌ಸ್ಟೀನ್‌ಗಿಂತ ಹೆಚ್ಚು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Meta: ಮೆಟಾದಿಂದ ಯುವ ಜನರಿಗೆ ಡಿಜಿಟಲ್ ಸುರಕ್ಷಾ ಪಾಠ

Meta: ಮೆಟಾ ಸಂಸ್ಥೆಯಿಂದ ಮಂಗಳವಾರ ಬೆಂಗಳೂರು ನಗರದಲ್ಲಿ 1ಎಂ1ಬಿ ಸಹಯೋಗದಲ್ಲಿ ‘ಟಾಕಿಂಗ್ ಡಿಜಿಟಲ್ ಸುರಕ್ಷಾ ಫಾರ್ ಟೀನ್ಸ್’(ಹದಿಹರೆಯದವರಿಗೆ ಡಿಜಿಟಲ್ ಸುರಕ್ಷಾ) ಕಾರ್ಯಕ್ರಮ ಜರುಗಿತು. ಆನ್‌ಲೈನ್ ಸುರಕ್ಷತೆಗಾಗಿ ಮೆಟಾದ ವಿಧಾನಗಳ ಕುರಿತು ಪೋಷಕರಲ್ಲಿ ಜಾಗೃತಿ ಮೂಡಿಸಲು ಮತ್ತು ಆನ್‌ಲೈನ್ ಜಗತ್ತಿನಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಹದಿಹರೆಯದವರ ಯೋಗಕ್ಷೇಮವನ್ನು ಕಾಪಾಡುವಂತಹ ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳಲು ಈ ಪೋಷಕ- ಶಿಕ್ಷಕರ ಜಾಗೃತಿ ಕಾರ್ಯಕ್ರಮ ಜರುಗಿತು.

VISTARANEWS.COM


on

Talking Digital Safety for Teens programme by Meta in Bengaluru
Koo

ಬೆಂಗಳೂರು: ಯುವಜನರ ಯೋಗಕ್ಷೇಮದ ಕುರಿತು ಮೆಟಾ (Meta) ಸಂಸ್ಥೆಯಿಂದ ಮಂಗಳವಾರ ನಗರದಲ್ಲಿ 1ಎಂ1ಬಿ ಸಹಯೋಗದಲ್ಲಿ ‘ಟಾಕಿಂಗ್ ಡಿಜಿಟಲ್ ಸುರಕ್ಷಾ ಫಾರ್ ಟೀನ್ಸ್’ (ಹದಿಹರೆಯದವರಿಗೆ ಡಿಜಿಟಲ್ ಸುರಕ್ಷಾ) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಆನ್‌ಲೈನ್ ಸುರಕ್ಷತೆಗಾಗಿ ಮೆಟಾದ ವಿಧಾನಗಳ ಕುರಿತು ಪೋಷಕರಲ್ಲಿ ಜಾಗೃತಿ ಮೂಡಿಸಲು ಮತ್ತು ಆನ್‌ಲೈನ್ ಜಗತ್ತಿನಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಹದಿಹರೆಯದವರ ಯೋಗಕ್ಷೇಮವನ್ನು ಕಾಪಾಡುವಂತಹ ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳಲು ಈ ಪೋಷಕ- ಶಿಕ್ಷಕರ ಜಾಗೃತಿ ಕಾರ್ಯಕ್ರಮ ಜರುಗಿತು. ಮೆಟಾದ ಪ್ಲಾಟ್ ಫಾರ್ಮ್‌ಗಳನ್ನು ಒಳಗೊಂಡಂತೆ ಹದಿಹರೆಯದ ಮಕ್ಕಳ ಸ್ಮಾರ್ಟ್‌ಫೋನ್‌ ಮತ್ತು ಸಾಧನಗಳ ಬಳಕೆಯನ್ನು ಆತ್ಮವಿಶ್ವಾಸದಿಂದ ನಿರ್ವಹಣೆ ಮಾಡಲು ಸಾಧ್ಯವಾಗುವಂತೆ ಪೋಷಕರನ್ನು ಸಜ್ಜುಗೊಳಿಸುವ ಅನೇಕ ವಿಧಾನಗಳನ್ನು ಕಾರ್ಯಕ್ರಮದಲ್ಲಿ ಚರ್ಚಿಸಲಾಯಿತು.

ಇದನ್ನೂ ಓದಿ: Cauvery Dispute: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸಲು CWMA ಸೂಚನೆ

ಕಾರ್ಯಕ್ರಮದಲ್ಲಿ ಹದಿಹರೆಯದ ಮಕ್ಕಳ ಸಾಮಾಜಿಕ ಮಾಧ್ಯಮಗಳ ಬಳಕೆ ಮತ್ತು ಇತರ ಆನ್‌ಲೈನ್ ಟ್ರೆಂಡ್‌ಗಳ ಬಳಕೆ ಕುರಿತು ಪೋಷಕರು ಮತ್ತು ಶಿಕ್ಷಕರ ಒಳನೋಟಗಳನ್ನು ಈ ವೇಳೆ ಸಂಗ್ರಹಿಸಲಾಯಿತು. ಡಿಜಿಟಲ್ ಸುರಕ್ಷತಾ ಉಪಕ್ರಮಗಳ ಕುರಿತು ಹೆಚ್ಚು ತಿಳಿದುಕೊಳ್ಳಲು ಮತ್ತು ಅವರ ಹದಿಹರೆಯದ ಮಕ್ಕಳ ಸಾಮಾಜಿಕ ಜಾಲತಾಣಗಳ ಪ್ರಯಾಣದ ಅನುಭವಗಳ ಕುರಿತು ಚರ್ಚಿಸಲು ನಗರದ ಆಯ್ದ 10-15 ಶಾಲೆಗಳ ಆಯ್ದ ಶಿಕ್ಷಕರು ಮತ್ತು ಪೋಷಕರು ಪಾಲ್ಗೊಂಡಿದ್ದರು.

ಈ ವೇಳೆ ಇನ್‌ಸ್ಟಾಗ್ರಾಮ್‌ನ ಭಾರತದ ಸಾರ್ವಜನಿಕ ನೀತಿಯ ನಿರ್ದೇಶಕಿ ನತಾಶಾ ಜೋಗ್ ಮಾತನಾಡಿ, ನಮ್ಮ ಯುವ ಬಳಕೆದಾರರು ಆನ್‌ಲೈನ್‌ನಲ್ಲಿ ಅರ್ಥಪೂರ್ಣವಾಗಿ ಸಮಯವನ್ನು ಕಳೆಯುವುದರ ಜತೆಗೆ ವಿಶೇಷವಾಗಿ ಅವರು ಇಷ್ಟಪಡುವ ಎಲ್ಲಾ ಕೆಲಸಗಳನ್ನು ಮಾಡುತ್ತಲೇ ಸುರಕ್ಷಿತವಾಗಿರುವ ಅಗತ್ಯವನ್ನು ನಾವು ಗಮನಿಸಿದ್ದೇವೆ.

ಭಾರತದಾದ್ಯಂತ ಈ ಚರ್ಚಾ ಸರಣಿಯ ಮೂಲಕ ನಾವು ಶಿಕ್ಷಕರೊಂದಿಗೆ ಸಂವಹನ ನಡೆಸುತ್ತಲೇ, ಕುಟುಂಬದ ಆನ್‌ಲೈನ್ ಅಭ್ಯಾಸಗಳನ್ನು ನಿರ್ವಹಿಸಲು ಪೋಷಕರನ್ನು ಸಜ್ಜುಗೊಳಿಸುವ ದಾರಿಗಳನ್ನು ಹುಡುಕುತ್ತಿದ್ದೇವೆ. ಆ ಮೂಲಕ ಅವರ ಪಾಲಿಗೆ ಉತ್ತಮ ಎನಿಸುವ ರಕ್ಷಣಾ ವಿಧಾನ ಒದಗಿಸುವ ಉದ್ದೇಶ ಹೊಂದಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

ಬಳಕೆದಾರರ ಸುರಕ್ಷತಾ ಪರಿಸರ ವ್ಯವಸ್ಥೆಯನ್ನು ಬಲಪಡಿಸಲು ನಡೆಯುತ್ತಿರುವ ಪ್ರಯತ್ನಗಳ ಭಾಗವಾಗಿ ಮೆಟಾ ಕಳೆದ ವರ್ಷ ‘ಡಿಜಿಟಲ್ ಸುರಕ್ಷಾ ಶೃಂಗಸಭೆ’ ಅನ್ನು ನಡೆಸಿತ್ತು. ಆ ಮೂಲಕ ಯುವಜನತೆ ಮತ್ತು ಮಹಿಳೆಯರಿಗೆ ಸುರಕ್ಷಿತ ಮತ್ತು ಸಮತೋಲಿತ ಆನ್‌ಲೈನ್ ಅನುಭವವನ್ನು ಒದಗಿಸುವ ಪ್ರಯತ್ನ ಮಾಡಲಾಗಿತ್ತು. ಇದರ ಜತೆಗೆ ಮೆಟಾ, ಆನ್‌ಲೈನ್ ಸುರಕ್ಷತೆ ಮತ್ತು ಡಿಜಿಟಲ್ ಪೌರತ್ವ ಕುರಿತು ಮಾಹಿತಿ, ಜ್ಞಾನ ಮತ್ತು ಶಿಕ್ಷಣದ ಬಗ್ಗೆ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಸಬಲೀಕರಣಗೊಳಿಸಲು ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ (ಐಟಿಬಿಟಿ) ಇಲಾಖೆಯೊಂದಿಗೆ ಎರಡು ವರ್ಷಗಳ ಪಾಲುದಾರಿಕೆಯನ್ನು ಪ್ರಕಟಿಸಿದೆ.

ಕಳೆದ ಮೂರು ವರ್ಷಗಳಲ್ಲಿ, ಆನ್‌ಲೈನ್ ಸುರಕ್ಷತೆಯನ್ನು ಉತ್ತೇಜಿಸಲು ಮೆಟಾ 50ಕ್ಕೂ ಹೆಚ್ಚು ಸುರಕ್ಷತಾ ಪರಿಕರಗಳು ಮತ್ತು ಫೀಚರ್‌ಗಳನ್ನು ಬಿಡುಗಡೆ ಮಾಡಿದೆ. ಹದಿಹರೆಯದವರ ಸುರಕ್ಷತೆಗಾಗಿ ‘ನೈಟ್ ನಡ್ಜಸ್’ ಎಂಬ ಫೀಚರನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದ್ದು, ಇದು ತಡರಾತ್ರಿಯಲ್ಲಿ ಇನ್ ಸ್ಟಾಗ್ರಾಮ್ ಆಪ್ ಬಳಸುವಾಗ ಆ ಆಪ್ ಅನ್ನು ಷಟ್‌ಡೌನ್ ಮಾಡಲು ಬಳಕೆದಾರರಿಗೆ ಸೂಚಿಸುತ್ತದೆ. ಜತೆಗೆ ‘ಕ್ವೈಟ್ ಮೋಡ್’ ಫೀಚರ್ ಕೂಡ ಇದ್ದು, ಇದು ಹದಿಹರೆಯದ ಬಳಕೆದಾರರಿಗೆ ತಾವು ಆಪ್‌ನಲ್ಲಿ ಕಳೆಯುವ ಸಮಯದ ಮೇಲೆ ಮತ್ತು ಅವರು ಏನು ನೋಡುತ್ತಾರೆ ಎಂಬುದರ ಮೇಲೆ ಹೆಚ್ಚಿನ ನಿಯಂತ್ರಣವನ್ನು ಹೊಂದಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Viral Video: ಇಂಗ್ಲೀಷ್‌ನಲ್ಲೂ ಮಾತಾಡುತ್ತೆ…ಮಿಮಿಕ್ರಿನೂ ಮಾಡುತ್ತೆ ಈ ಗಿಣಿ; ವಿಡಿಯೋ ನೋಡಿದ್ರೆ ಫಿದಾ ಆಗೋದು ಗ್ಯಾರಂಟಿ!

ಇದಲ್ಲದೆ, ಇನ್ಸ್ಟಾಗ್ರಾಮ್‌ನ ಪೇರೆಂಟಲ್ ಸೂಪರ್ ವಿಷನ್ ಫೀಚರ್ (ಪೋಷಕರ ಮೇಲ್ವಿಚಾರಣಾ ವೈಶಿಷ್ಟ್ಯ) ಮೂಲಕ ಪೋಷಕರು ತಮ್ಮ ಮಕ್ಕಳು ಫಾಲೋ ಮಾಡುವ ಖಾತೆಗಳು, ಅವರ ಮಕ್ಕಳನ್ನು ಫಾಲೋ ಮಾಡುವ ಖಾತೆಗಳನ್ನು ವೀಕ್ಷಿಸಬಹುದು ಮತ್ತು ಅವರ ಆನ್‌ಲೈನ್ ಬಳಕೆಯಲ್ಲಿ ತಮ್ಮನ್ನೂ ಹೆಚ್ಚು ತೊಡಗಿಸಿಕೊಳ್ಳಬಹುದು. ಮೆಟಾದ ‘ಫ್ಯಾಮಿಲಿ ಸೆಂಟರ್’ ಫೀಚರ್ ಪ್ಲಾಟ್‌ಫಾರ್ಮ್‌ಗಳನ್ನು ಸುರಕ್ಷಿತವಾಗಿ ಬಳಸುವುದು ಹೇಗೆ ಎಂಬ ಮಾಹಿತಿಯನ್ನು ಹುಡುಕಲು ಪೋಷಕರು ಮತ್ತು ಹದಿಹರೆಯದವರಿಗೆ ಸಹ ಮಾಹಿತಿ ಒದಗಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

Continue Reading

ವಿಜ್ಞಾನ

Nuclear Test In Pokhran: ಭಾರತ ಮೊದಲ ಪರಮಾಣು ಪರೀಕ್ಷೆ ನಡೆಸಿ ಇಂದಿಗೆ 50 ವರ್ಷ; ಏನಿದು ಸ್ಮೈಲಿಂಗ್‌ ಬುದ್ಧ?

ಭಾರತ ಪರಮಾಣು ಶಕ್ತಿ ರಾಷ್ಟ್ರವಾಗಿ ಇಂದಿಗೆ 50 ವರ್ಷ. ಇಂದಿಗೆ ಸುಮಾರು 50 ವರ್ಷಗಳ ಹಿಂದೆ ಭಾರತ ರಾಜಸ್ಥಾನದ ಪೋಖ್ರಾನ್‌ನಲ್ಲಿ ತನ್ನ ಮೊದಲ ಪರಮಾಣು ಪರೀಕ್ಷೆಯನ್ನು (Nuclear Test In Pokhran) ನಡೆಸಿತ್ತು. ಈ ಕುರಿತ ಕುತೂಹಲಕರ ಹಿನ್ನೋಟ ಇಲ್ಲಿದೆ.

VISTARANEWS.COM


on

By

Nuclear test at Pokhran
Koo

ಇಂದಿಗೆ 50 ವರ್ಷಗಳ ಹಿಂದೆ ಭಾರತದ (India) ಇತಿಹಾಸದಲ್ಲಿ ಒಂದು ಅಭೂತಪೂರ್ವ ಕ್ಷಣ ದಾಖಲಾಗಿತ್ತು. ಅದುವೇ ಅಣು ಪರೀಕ್ಷೆ. ಪೋಖ್ರಾನ್‌ನಲ್ಲಿ ಪರಮಾಣು ಪರೀಕ್ಷೆ (Nuclear Test In Pokhran) ನಡೆಸಲು ಭಾರತಕ್ಕೆ ಸುಮಾರು ಎರಡು ವರ್ಷಗಳ ತಯಾರಿ ಬೇಕಾಯಿತು. ಆಗಿನ ಪ್ರಧಾನಿಯಾಗಿದ್ದ (Prime Minister) ಇಂದಿರಾ ಗಾಂಧಿಯವರು (Indira gandhi) 1972ರ ಸೆಪ್ಟೆಂಬರ್‌ನಲ್ಲಿ ಸ್ವದೇಶಿ ವಿನ್ಯಾಸದ ಪರಮಾಣು ಸಾಧನವನ್ನು ಸ್ಫೋಟಿಸಲು ಬಿಎಆರ್‌ಸಿ (BARC) ವಿಜ್ಞಾನಿಗಳಿಗೆ ಅನುಮತಿ ನೀಡಿದ್ದರು.

ಭಾರತ ಇಂದು ರಾಜಸ್ಥಾನದ ಪೋಖ್ರಾನ್‌ನಲ್ಲಿ ತನ್ನ ಮೊದಲ ಪರಮಾಣು ಪರೀಕ್ಷೆಯ 50ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಅಂದಿನ ಪರೀಕ್ಷೆ ಭಾರತವನ್ನು ಪರಮಾಣು ಶಕ್ತಿಯನ್ನಾಗಿ ರೂಪಿಸಿತು.

ಸ್ಮೈಲಿಂಗ್ ಬುದ್ಧ ಹೆಸರು ನೀಡಿದ್ದು ಯಾಕೆ?

ಈ ಪರೀಕ್ಷೆಗೆ ‘ಸ್ಮೈಲಿಂಗ್ ಬುದ್ಧ’ ಎಂಬ ಸಂಕೇತನಾಮವನ್ನು ನೀಡಲಾಯಿತು. 1974ರ ಮೇ 18ರಂದು ಆ ವರ್ಷದ ಬುದ್ಧ ಪೂರ್ಣಿಮೆಯಂದು ಪರೀಕ್ಷೆಯನ್ನು ನಡೆಸಲಾಗಿದ್ದರಿಂದ ಈ ಹೆಸರನ್ನು ಆಯ್ಕೆ ಮಾಡಲಾಯಿತು. “ಬುದ್ಧ ಅಂತಿಮವಾಗಿ ಮುಗುಳ್ನಕ್ಕ” ಎಂಬುದು ಭಾರತದ ಪ್ರಧಾನ ಪರಮಾಣು ಸಂಶೋಧನಾ ಸಂಸ್ಥೆ ಭಾಭಾ ಪರಮಾಣು ಸಂಶೋಧನಾ ಕೇಂದ್ರದ (BARC) ನಿರ್ದೇಶಕ ರಾಜಾ ರಾಮಣ್ಣ ಅವರು ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಸಂದೇಶವನ್ನು ರವಾನಿಸಿದ್ದರು!


ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (ಯುಎನ್‌ಎಸ್‌ಸಿ) ಕಾಯಂ ಸದಸ್ಯತ್ವ ಹೊಂದಿರದ ರಾಷ್ಟ್ರವೊಂದು ನಡೆಸಿದ ಮೊದಲ ಪರಮಾಣು ಪರೀಕ್ಷೆ ಇದಾಗಿದೆ.

ಪೋಖ್ರಾನ್‌ನಲ್ಲಿ ಸ್ಫೋಟಿಸಿದ ಸಾಧನದ ಬಗ್ಗೆ ಚರ್ಚೆಯಾಗಿದ್ದರೂ, ಇದು ಸುಮಾರು 8- 12 ಕಿಲೋ ಟನ್‌ಗಳಷ್ಟು ಟಿಎನ್‌ಟಿ (ಪರಮಾಣು ಪರೀಕ್ಷೆ ಮಾಪನ) ಎಂದು ನಂಬಲಾಗಿದೆ. ಪರೀಕ್ಷೆಯ ಪ್ರಮುಖ ಅಂಶವೆಂದರೆ ಭಾರತವು ಯುನೈಟೆಡ್ ಸ್ಟೇಟ್ಸ್ ಮತ್ತು ಇತರ ಗುಪ್ತಚರ ಸಂಸ್ಥೆಗಳ ಪತ್ತೆಯನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದು. ಇಂತಹ ಪರೀಕ್ಷೆಗಳು ಪರಮಾಣು ಪ್ರಸರಣಕ್ಕೆ ಕಾರಣವಾಗಬಹುದು ಎಂದು ಹೇಳಿದ ಅಮೆರಿಕದಂತಹ ರಾಷ್ಟ್ರದ ನಿರ್ಬಂಧಗಳ ಸರಣಿಯನ್ನು ದೇಶವು ಎದುರಿಸಿತು.


ಎರಡು ವರ್ಷಗಳ ತಯಾರಿ

ಈ ಪರೀಕ್ಷೆಯನ್ನು ನಡೆಸಲು ಭಾರತಕ್ಕೆ ಸುಮಾರು ಎರಡು ವರ್ಷಗಳ ತಯಾರಿ ಬೇಕಾಯಿತು. ಇಂದಿರಾ ಗಾಂಧಿಯವರು 1972ರ ಸೆಪ್ಟೆಂಬರ್‌ನಲ್ಲಿ ಸ್ವದೇಶಿ ವಿನ್ಯಾಸದ ಪರಮಾಣು ಸಾಧನವನ್ನು ಸ್ಫೋಟಿಸಲು ಬಿಎಆರ್‌ಸಿ ವಿಜ್ಞಾನಿಗಳಿಗೆ ಅನುಮತಿ ನೀಡಿದ್ದರು.

ಇದನ್ನೂ ಓದಿ: Chinese Scientists: ಇನ್ನು ಮನುಷ್ಯರು 130 ವರ್ಷ ಬದುಕಬಹುದು! ಚೀನಾ ವಿಜ್ಞಾನಿಗಳ ಸಂಶೋಧನೆ

ಪೋಖ್ರಾನ್-II ಪರೀಕ್ಷೆ

1974ರ ಅನಂತರ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ 1998ರಲ್ಲಿ ಭಾರತವು ಅದೇ ಸ್ಥಳದಲ್ಲಿ ಪೋಖ್ರಾನ್- II ಹೆಸರಿನಲ್ಲಿ ಮತ್ತೊಂದು ಪರಮಾಣು ಪರೀಕ್ಷೆ ನಡೆಸಿತು. ಈ ಪರೀಕ್ಷೆ ಮೇ 1998ರಲ್ಲಿ ಪೋಖ್ರಾನ್‌ನಲ್ಲಿ ಐದು ಪರಮಾಣು ಸ್ಫೋಟಗಳ ಸರಣಿಯನ್ನು ಕಂಡವು. ಪೋಖ್ರಾನ್-II ಪರೀಕ್ಷೆಗಳ ವಾರ್ಷಿಕೋತ್ಸವದ ನೆನಪಿಗಾಗಿ ಪ್ರತಿ ವರ್ಷ ಮೇ 11ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ. 2020ರಿಂದ ಭಾರತವು 1974ರ ಪೋಖ್ರಾನ್ ಪರೀಕ್ಷೆಗಳ ವಾರ್ಷಿಕೋತ್ಸವವನ್ನು ಆಚರಿಸಲು ಪ್ರಾರಂಭಿಸಿತ್ತು.

Continue Reading

ದೇಶ

Isha Ambani: ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಶ್ಲಾಘಿಸಿದ ಇಶಾ ಅಂಬಾನಿ

Isha Ambani: ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಹಾಗೂ ಮಾಹಿತಿ ಮತ್ತು ಸಂವಹನ ಕ್ಷೇತ್ರಗಳಲ್ಲಿ ಯುವತಿಯರ ಪಾಲ್ಗೊಳ್ಳುವಿಕೆ ಹೆಚ್ಚಾಗಬೇಕು. ಹೆಣ್ಣುಮಕ್ಕಳು ತಂತ್ರಜ್ಞಾನ ಕ್ಷೇತ್ರವನ್ನು ವೃತ್ತಿಯನ್ನಾಗಿ ತೆಗೆದುಕೊಳ್ಳಬೇಕು. ತಂತ್ರಜ್ಞಾನ ಕ್ಷೇತ್ರದಲ್ಲಿ ಮಹಿಳೆ ಹಾಗೂ ಪುರುಷರ ಪಾಲ್ಗೊಳ್ಳುವಿಕೆ ಅನುಪಾತವು ಸಮಾನವಾಗಿ ಇರಬೇಕು ಎಂದು ರಿಲಯನ್ಸ್ ಇಂಡಸ್ಟ್ರೀಸ್ ನಿರ್ದೇಶಕಿ ಇಶಾ ಅಂಬಾನಿ ತಿಳಿಸಿದ್ದಾರೆ.

VISTARANEWS.COM


on

Isha Ambani
Koo

ನವದೆಹಲಿ: ನಾಲ್ಕನೇ ಕೈಗಾರಿಕೆ ಕ್ರಾಂತಿಯಾದ ಈ ಡಿಜಿಟಲ್ ಯುಗದಲ್ಲಿ ಭಾರತ ದೇಶವು ವಿಶ್ವನಾಯಕ ಆಗಿ ಹೊರಹೊಮ್ಮಲು ಹೆಣ್ಣು ಮಕ್ಕಳನ್ನು ಮುಂದೆ ತರಬೇಕು. ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಹಾಗೂ ಮಾಹಿತಿ ಮತ್ತು ಸಂವಹನ ಕ್ಷೇತ್ರಗಳಲ್ಲಿ ಯುವತಿಯರ ಪಾಲ್ಗೊಳ್ಳುವಿಕೆ ಹೆಚ್ಚಾಗಬೇಕು ಎಂದು ರಿಲಯನ್ಸ್ ಇಂಡಸ್ಟ್ರೀಸ್ ನಿರ್ದೇಶಕಿ ಇಶಾ ಅಂಬಾನಿ (Isha Ambani) ಅಭಿಪ್ರಾಯಪಟ್ಟರು.

ದೂರಸಂಪರ್ಕ ಇಲಾಖೆಯಿಂದ ಆಯೋಜಿಸಿದ್ದ ಗರ್ಲ್ಸ್ ಇನ್ ಐಸಿಟಿ ಇಂಡಿಯಾ– 2024 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳು ತಂತ್ರಜ್ಞಾನ ಕ್ಷೇತ್ರವನ್ನು ವೃತ್ತಿಯನ್ನಾಗಿ ತೆಗೆದುಕೊಳ್ಳಬೇಕು. ತಂತ್ರಜ್ಞಾನ ಕ್ಷೇತ್ರದಲ್ಲಿ ಮಹಿಳೆ ಹಾಗೂ ಪುರುಷರ ಪಾಲ್ಗೊಳ್ಳುವಿಕೆ ಅನುಪಾತವು ಸಮಾನವಾಗಿ ಇರಬೇಕು. ಇದಕ್ಕಾಗಿ ನಾವು ಇನ್ನೂ ಬಹಳ ದೂರ ಸಾಗಬೇಕಿದೆ ಎಂದು ಹೇಳಿದರು.

ಇದನ್ನೂ ಓದಿ: Karnataka Weather: ಇಂದು, ನಾಳೆ ಗುಡುಗು, ಮಿಂಚು ಸಹಿತ ಭಾರಿ ಮಳೆ; ಉತ್ತರ ಒಳನಾಡಿನಲ್ಲಿ ಆರೆಂಜ್ ಅಲರ್ಟ್

ಭಾರತ ಸರ್ಕಾರ, ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ (ದಕ್ಷಿಣ ಏಷ್ಯಾ), ಇನ್ನೋವೇಶನ್ ಸೆಂಟರ್ – ದೆಹಲಿ ಮತ್ತು ಇತರ ಯುಎನ್ ಏಜೆನ್ಸಿಗಳ ದೂರಸಂಪರ್ಕ ಇಲಾಖೆ ಜಂಟಿಯಾಗಿ ‘ಗರ್ಲ್ಸ್ ಇನ್ ಇನ್ಫರ್ಮೇಷನ್ ಅಂಡ್ ಕಮ್ಯುನಿಕೇಷನ್ ಟೆಕ್ನಾಲಜಿ (ಜಿಐಸಿಟಿ) ಇಂಡಿಯಾ – 2024’ ಅನ್ನು ಆಯೋಜಿಸಿವೆ.

ಇನ್ನು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸಿದ ಇಶಾ ಅಂಬಾನಿ, ಸರ್ಕಾರವು ಅಗತ್ಯ ಸುಧಾರಣೆಗಳನ್ನು ಮಾಡುತ್ತಿದೆ ಮತ್ತು ಅದರ ಫಲಿತಾಂಶಗಳು ಸಹ ಗೋಚರಿಸುತ್ತಿವೆ. ಕಳೆದ ಒಂದು ದಶಕದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರನ್ನು ಗಮನಿಸಿದರೆ ಮಹಿಳಾ ಪ್ರಾತಿನಿಧ್ಯವು ಶೇ. 6ರಷ್ಟು ಹೆಚ್ಚಾಗಿದೆ. ಆದರೆ ಉದ್ಯಮವು ತನ್ನ ಪಾತ್ರವನ್ನು ನಿರ್ವಹಿಸಬೇಕಾಗಿದೆ. ಮಹಿಳೆಯರ ವೃತ್ತಿ ಜೀವನದಲ್ಲಿ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಅಂತಹ ವಿಧಾನಗಳು ಮತ್ತು ಸಾಧನಗಳನ್ನು ಸಿದ್ಧಪಡಿಸಬೇಕು. ಒಟ್ಟಾರೆಯಾಗಿ, ನಮ್ಮ ಹೆಣ್ಣುಮಕ್ಕಳು ನಾಳಿನ ನಾಯಕತ್ವ ವಹಿಸುವುದಕ್ಕೆ ಸಮಾನ ಅವಕಾಶಗಳನ್ನು ಹೊಂದಿರುವ ಭವಿಷ್ಯವನ್ನು ನಾವು ರೂಪಿಸಬಹುದು ಎಂದು ಹೇಳಿದರು.

ಇದನ್ನೂ ಒದಿ: Fortis Hospital: ರೋಬೋಟಿಕ್‌ ನೆರವಿನಿಂದ ಇಬ್ಬರಿಗೆ ‘ಸಂಕೀರ್ಣ ಕಿಡ್ನಿ ಕಸಿ’ ಆಪರೇಷನ್ ಸಕ್ಸೆಸ್!

ಇಶಾ ಅವರು ತಮ್ಮ ತಾಯಿ ನೀತಾ ಅಂಬಾನಿಯವರ ಮಾತನ್ನು ಉಲ್ಲೇಖಿಸಿ, “ಒಬ್ಬ ಪುರುಷನನ್ನು ಸಬಲಗೊಳಿಸಿದರೆ ಆತ ತನ್ನ ಕುಟುಂಬವನ್ನು ಪೋಷಿಸುತ್ತಾನೆ, ಆದರೆ ಮಹಿಳೆ ಸಬಲಳಾಗಿದ್ದರೆ, ಅವಳು ಇಡೀ ಗ್ರಾಮವನ್ನು ಪೋಷಿಸುತ್ತಾಳೆ” ಎಂದು ಅವರು ಪದೇ ಪದೇ ಹೇಳುತ್ತಾರೆ. “ನನಗೆ ಅಮ್ಮ ಹೇಳುವ ಮಾತಿನಲ್ಲಿ ಸಂಪೂರ್ಣ ವಿಶ್ವಾಸವಿದೆ. ಮಹಿಳೆಯರು ಹುಟ್ಟಿನಿಂದಲೇ ನಾಯಕಿಯರು. ಅವರಲ್ಲಿರುವ ಸಹಜವಾದ ನಿಸ್ವಾರ್ಥತೆಯು ಅತ್ಯುತ್ತಮ ನಾಯಕರನ್ನಾಗಿ ಮಾಡುತ್ತದೆ. ಮಹಿಳಾ ಉದ್ಯೋಗಿಗಳನ್ನು ಅವರ ವೃತ್ತಿ ಜೀವನದ ಆರಂಭದಿಂದಲೂ ಪ್ರೋತ್ಸಾಹಿಸಬೇಕು ಮತ್ತು ಕೇವಲ ಕಾಗದದ ಮೇಲೆ ಮಾತ್ರ ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಯನ್ನು ತೋರಿಸುವುದರಿಂದ ಯಾವುದೇ ಬದಲಾವಣೆಯನ್ನು ಆಗುವುದಿಲ್ಲ ಎಂದು ನಾನು ಬಲವಾಗಿ ನಂಬುತ್ತೇನೆ ಎಂದು ತಿಳಿಸಿದರು.

Continue Reading

ವಿದೇಶ

Sunita Williams: ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ; ಮೇ 17ಕ್ಕೆ ಮುಂದೂಡಿಕೆ

Sunita Williams:ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಕಾರ್ಯಾಚರಣೆಯಲ್ಲಿ ಗಗನಯಾನ ಕೈಗೊಳ್ಳಲು ಸಿದ್ಧತೆ ನಡೆಸಿದ್ದರು. ಆದರೆ ಉದ್ದೇಶಿತ ಉಡಾವಣೆಯ ಎರಡು ಗಂಟೆಗಳ ಮೊದಲು ರದ್ದು ಪಡಿಸಲಾಯಿತು

VISTARANEWS.COM


on

Sunita Williams
Koo

ವಾಷಿಂಗ್ಟನ್‌: ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ (Sunita Williams) ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ. ಮೇ 7ರಂದು ಬಾಹ್ಯಾಕಾಶ ನೌಕೆ (Spacecraft)ಯ ಉಡಾವಣೆಯನ್ನು ತಾಂತ್ರಿಕ ಕಾರಣಗಳಿಂದ ರದ್ದುಗೊಂಡಿತ್ತು. ಬಳಿಕ ಈ ಗಗನಯಾತ್ರೆಯ ದಿನಾಂಕ ನಾಳೆಗೆ(ಮೇ10) ನಿಗದಿ ಪಡಿಸಲಾಗಿತ್ತು. ಆದರೆ ಇದೀಗ ಮತ್ತೆ ಸುನೀತಾ ವಿಲಿಯಮ್ಸ್‌ ಅವರನ್ನೊಳಗೊಂಡ ಬಾಹ್ಯಾಕಾಶ ನೌಕೆ (Spacecraft)ಯ ಉಡಾವಣೆಯನ್ನು ದಿನಾಂಕವನ್ನು ಮೇ 17ಕ್ಕೆ ಮುಂದೂಡಲಾಗಿದೆ.

ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಕಾರ್ಯಾಚರಣೆಯಲ್ಲಿ ಗಗನಯಾನ ಕೈಗೊಳ್ಳಲು ಸಿದ್ಧತೆ ನಡೆಸಿದ್ದರು. ಆದರೆ ಉದ್ದೇಶಿತ ಉಡಾವಣೆಯ ಎರಡು ಗಂಟೆಗಳ ಮೊದಲು ರದ್ದು ಪಡಿಸಲಾಯಿತು. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ನಾಸಾ ಮಾಹಿತಿ ನೀಡಿದ್ದು, “ಅಟ್ಲಾಸ್ ವಿಯಲ್ಲಿನ ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಇಂದಿನ ಸ್ಟಾರ್‌ಲೈನರ್ ಉಡಾವಣೆಯನ್ನು ರದ್ದುಪಡಿಸಲಾಗಿದೆ. ನಮ್ಮ ಗಗನಯಾತ್ರಿಗಳು ಸ್ಟಾರ್‌ಲೈನರ್‌ನಿಂದ ನಿರ್ಗಮಿಸಿದ್ದಾರೆʼʼ ಎಂದು ಬರೆದುಕೊಂಡಿತ್ತು.

ವಿಶೇಷ ಎಂದರೆ ಈ ಮೂಲಕ ಸುನೀತಾ ವಿಲಿಯಮ್ಸ್‌ ಮೂರನೇ ಬಾರಿ ಗಗನಯಾತ್ರೆ ಕೈಗೊಳ್ಳಲು ಸಜ್ಜಾಗಿದ್ದರು. ಇಬ್ಬರು ಗಗನಯಾತ್ರಿಗಳೊಂದಿಗೆ ಬೋಯಿಂಗ್ ಸ್ಟಾರ್‌ಲೈನರ್ ಅನ್ನು ಮೇ 10ರಂದು ಉಡಾವಣೆ ಮಾಡಲು ಪ್ರಯತ್ನಿಸಲಾಗುವುದು ಎಂದು ನಾಸಾ ತಿಳಿಸಿತ್ತು. ಆದರೆ ಇನ್ನು ಒಂದೆರಡು ದಿನಗಳ ಕಾಲಾವಕಾಶ ಬೇಕಾಗಿರುವ ಹಿನ್ನೆಲೆಯಲ್ಲಿ ದಿನಾಂಕವವನ್ನು ಏ.17ಕ್ಕೆ ಮುಂದೂಡಲಾಗಿದೆ. ಏಪ್ರಿಲ್‌ 17ರಂದು ಸಂಜೆ 6.16ಕ್ಕೆ ಬಾಹ್ಯಾಕಾಶ ನೌಕೆ ಉಡಾವಣೆಯಾಗಲಿದೆ ಎಂದು ಇದೀಗ ನಾಸಾ ಮತ್ತೆ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದೆ.

ಸುನೀತಾ ವಿಲಿಯಮ್ಸ್‌ ಹಿನ್ನೆಲೆ

ಭಾರತದ ಮೂಲದ ಡಾ. ದೀಪಕ್‌ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ಮೊದಲ ಬಾರಿಗೆ 2006ರಲ್ಲಿ ಯಶಸ್ವಿ ಗಗನಯಾತ್ರೆ ಕೈಗೊಂಡಿದ್ದರು. ಇದಾದ ಬಳಿಕ 2012ರಲ್ಲಿ ಮತ್ತೆ ಗಗನಯಾತ್ರೆ ಕೈಗೊಂಡಿದ್ದರು. ಅವರು ಬಾಹ್ಯಾಕಾಶದಲ್ಲಿ ಬರೋಬ್ಬರಿ 322 ದಿನಗಳನ್ನು ಕಳೆದಿದ್ದಾರೆ. ಸುನೀತಾ ವಿಲಿಯಮ್ಸ್ ಅತೀ ಹೆಚ್ಚು ಬಾರಿ ಬಾಹ್ಯಾಕಾಶಕ್ಕೆ ಹಾರಿದ ಹಾಗೂ ಬಾಹ್ಯಾಕಾಶದಲ್ಲಿ ಅಧ್ಯಯನ ನಡೆಸಿದ ಮಹಿಳಾ ಗಗನ ಯಾತ್ರಿ ಎಂದೂ ಗುರುತಿಸಲ್ಪಡುತ್ತಿದ್ದಾರೆ.

ಇದನ್ನೂ ಓದಿ:Sangeeth Sivan dies: ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಇದುವರೆಗೆ ಸುನೀತಾ ವಿಲಿಯಮ್ಸ್ ಗರಿಷ್ಠ ಬಾಹ್ಯಾಕಾಶ ಪ್ರಯಾಣ ಮಾಡಿದ್ದಾರೆ. ಮಹತ್ವದ ಅಧ್ಯಯನಕ್ಕಾಗಿ ಮಂಗಳವಾರ ಮೂರನೇ ಬಾರಿ ಬಾಹ್ಯಾಕಾಶಕ್ಕೆ ಹಾರಲಿದ್ದ ಸುನೀತಾ ವಿಲಿಯಮ್ಸ್ ಎಲ್ಲ ತಯಾರಿ ಮಾಡಿಕೊಂಡಿದ್ದರು. ʼʼಕೊಂಚ ನರ್ವಸ್ ಆಗಿದ್ದೇನೆ. ಆದರೆ ಮತ್ತೆ ತವರಿಗೆ ಮರಳು ಅನುಭವವಾಗುತ್ತಿದೆ. ಬಾಹ್ಯಕಾಶವೇ ನನಗೆ ತವರಾಗಿದೆʼʼ ಎಂದು ಸುನೀತಾ ವಿಲಿಯಮ್ಸ್ ಹೇಳಿದ್ದರು.

ʼʼಯಾವುದೇ ಕೆಲಸಕ್ಕೂ ಮೊದಲು ಗಣೇಶನ ಪ್ರಾರ್ಥಿಸುತ್ತೇನೆ. ಸಿದ್ಧಿ ವಿನಾಯಕ ನನ್ನ ಶುಭ ಸಂಕೇತʼʼ ಎಂದು ಅವರು ಈ ಹಿಂದೆ ಹೇಳಿದ್ದರು. ʼʼಬಾಹ್ಯಾಕಾಶ ಪ್ರಯಾಣ ಸೇರಿದಂತೆ ಯಾವುದೇ ಕೆಲಸಕ್ಕೂ ಗಣೇಶನ ಆಶೀರ್ವಾದ ನನಗೆ ಬೇಕು. ಗಣೇಶ ನನ್ನ ಎಲ್ಲ ಕಾರ್ಯಗಳಿಗೆ ಶಕ್ತಿಯಾಗಿದ್ದಾನೆ. ಪ್ರತಿ ಬಾರಿ ನಾನು ಬಾಹ್ಯಾಕಾಶ ಪ್ರಯಾಣದಲ್ಲೂ ಸಣ್ಣ ಗಣೇಶನ ವಿಗ್ರಹವನ್ನು ತೆಗೆದುಕೊಂಡು ಹೋಗುತ್ತೇನೆʼʼ ಎಂದು ಸುನೀತಾ ವಿಲಿಯಮ್ಸ್ ತಿಳಿಸಿದ್ದರು. ಈ ಹಿಂದೆ ಅವರು ಬಾಹ್ಯಾಕಾಶಕ್ಕೆ ಭಗವದ್ಗೀತೆ ಒಯ್ಯುವ ಮೂಲಕ ಭಾರತೀಯರ ಗಮನ ಸೆಳೆದಿದ್ದರು.

Continue Reading
Advertisement
IPL 2024
ಕ್ರೀಡೆ2 hours ago

IPL 2024 : 17 ವರ್ಷ ಕಾದರೂ ಟ್ರೋಫಿ ಇಲ್ಲ: ಆರ್​ಸಿಬಿ ಅಭಿಮಾನಿಗಳ ಕಾಯುವಿಕೆ ನಿರಂತರ

Karnataka police
ಪ್ರಮುಖ ಸುದ್ದಿ2 hours ago

ವಿಸ್ತಾರ ಸಂಪಾದಕೀಯ: ಒಂದು ಕಡೆ ಸರಣಿ ಕೊಲೆ, ಇನ್ನೊಂದೆಡೆ ಪೊಲೀಸರ ಬೀದಿ ಸುಲಿಗೆ!

Harish Poonja
ಕರ್ನಾಟಕ3 hours ago

Harish Poonja: ವಿಚಾರಣೆ ಮುಗಿಸಿ ಠಾಣೆಯಿಂದ ಹೊರಬಂದ ಶಾಸಕ ಹರೀಶ್‌ ಪೂಂಜಾ

IPL 2024
ಕ್ರೀಡೆ3 hours ago

IPL 2024 : ಐಪಿಎಲ್​ 17ನೇ ಆವೃತ್ತಿಯಲ್ಲಿ ಆರ್​ಸಿಬಿ ಅಭಿಯಾನ ಅಂತ್ಯ; ರಾಜಸ್ಥಾನ್​ 2ನೇ ಕ್ವಾಲಿಫೈಯರ್​ಗೆ

IPL 2024
ಪ್ರಮುಖ ಸುದ್ದಿ4 hours ago

IPL 2024 : ದಿನೇಶ್​ ಕಾರ್ತಿಕ್​ ಔಟಾ; ನಾಟೌಟಾ? ಮತ್ತೊಂದು ಅಂಪೈರಿಂಗ್ ವಿವಾದ

Mother Dies
ಕರ್ನಾಟಕ4 hours ago

Mother Dies: ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ ಸಾವು; 35 ಲಕ್ಷ ಬಿಲ್‌ ಕಟ್ಟಿ ಮೃತದೇಹ ತೆಗೆದುಕೊಳ್ಳಿ ಎಂದ ಆಸ್ಪತ್ರೆ!

young womans lover was stabbed in the neck by an ex lover
ಉತ್ತರ ಕನ್ನಡ4 hours ago

Assault Case: ಯುವತಿಯ ಪ್ರಿಯಕರನ ಕುತ್ತಿಗೆಗೆ ಚಾಕುವಿನಿಂದ ಇರಿದ ಮಾಜಿ ಪ್ರಿಯಕರ!

IPL 2024
ಪ್ರಮುಖ ಸುದ್ದಿ5 hours ago

Yuzvendra Chahal : ರಾಜಸ್ಥಾನ್​ ರಾಯಲ್ಸ್​ ಪರ ವಿಕೆಟ್​ ಗಳಿಕೆಯಲ್ಲಿ ಹೊಸ ದಾಖಲೆ ಬರೆದ ಯಜ್ವೇಂದ್ರ ಚಹಲ್​

Pune porsche car crash
ದೇಶ5 hours ago

Pune porsche car crash : ಕುಡಿದು ಕಾರು ಚಲಾಯಿಸಿ ಇಬ್ಬರ ಸಾವಿಗೆ ಕಾರಣನಾದ ಬಾಲಕನ ಜಾಮೀನು ವಜಾ

Kalki 2898 AD
ಪ್ರಮುಖ ಸುದ್ದಿ5 hours ago

Kalki 2898 AD: ಕಲ್ಕಿ ಚಿತ್ರದ ʼಬುಜ್ಜಿʼ ಪಾತ್ರ ರಿವೀಲ್; ಅದ್ಧೂರಿ ಕಾರ್ಯಕ್ರಮದ LIVE ವಿಡಿಯೊ ಇಲ್ಲಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ20 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ6 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌