Fetus In Baby: ಏಳು ತಿಂಗಳ ಮಗುವಿನ ಹೊಟ್ಟೆಯಲ್ಲಿ ಭ್ರೂಣ ಪತ್ತೆ! - Vistara News

ವಿಜ್ಞಾನ

Fetus In Baby: ಏಳು ತಿಂಗಳ ಮಗುವಿನ ಹೊಟ್ಟೆಯಲ್ಲಿ ಭ್ರೂಣ ಪತ್ತೆ!

ಅಸಹಜವಾಗಿ ಮಗುವಿನ ಹೊಟ್ಟೆ ಬೆಳವಣಿಗೆಯಾಗುತ್ತಿರುವುದನ್ನು ಗಮನಿಸಿದ ತಾಯಿ ಹಿಮಾಲಯನ್ ಆಸ್ಪತ್ರೆ ಜಾಲಿಗ್ರಾಂಟ್‌ನ ಹಿರಿಯ ಮಕ್ಕಳ ಶಸ್ತ್ರಚಿಕಿತ್ಸಕ ಡಾ. ಸಂತೋಷ್ ಸಿಂಗ್ ಅವರನ್ನು ಸಂಪರ್ಕಿಸಿದಾಗ ಮಗುವಿನ ಹೊಟ್ಟೆಯೊಳಗೆ ಮಾನವ ಭ್ರೂಣವು (Fetus In Baby) ಬೆಳವಣಿಗೆಯಾಗುತ್ತಿರುವುದನ್ನು ಎಕ್ಸ್ ರೇ ಬಹಿರಂಗಪಡಿಸಿತು. ಬಳಿಕ ಶಸ್ತ್ರಚಿಕಿತ್ಸೆ ನಡೆಸಿ ಭಾಗಶಃ ಬೆಳವಣಿಗೆಯಾಗಿದ್ದ ಭ್ರೂಣವನ್ನು ಹೊರತೆಗೆಯಲಾಗಿದೆ.

VISTARANEWS.COM


on

Fetus In Baby
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಡೆಹ್ರಾಡೂನ್: ಏಳು ತಿಂಗಳ ಮಗುವಿನ (7 month baby) ಹೊಟ್ಟೆಯಲ್ಲಿ ಮಾನವನ ಭ್ರೂಣ (Fetus In Baby) ಪತ್ತೆಯಾಗಿರುವ ಅಪರೂಪದ ಘಟನೆ ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ (Uttarakhand Dehradun) ನಡೆದಿದೆ. ಹಿಮಾಲಯನ್ ಆಸ್ಪತ್ರೆ (Himalayan Hospital) ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಿ ಮಗುವಿನ ಹೊಟ್ಟೆಯಲ್ಲಿದ್ದ ಭ್ರೂಣವನ್ನು ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.

ಏಳು ತಿಂಗಳ ಮಗುವಿನ ಹೊಟ್ಟೆ ಬೆಳೆಯುತ್ತಿರುವುದನ್ನು ತಾಯಿ ಗಮನಿಸಿದ್ದು, ಪ್ರಾರಂಭದಲ್ಲಿ ನಿರ್ಲಕ್ಷಿಸಿದ್ದಳು. ಆದರೆ ಹೊಟ್ಟೆಯ ಬೆಳವಣಿಗೆ ಹೆಚ್ಚಾಗುತ್ತಾ ಹೋದಂತೆ ಹಲವು ವೈದ್ಯರನ್ನು ಸಂಪರ್ಕಿಸಿದರು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ.

ಬಳಿಕ ಅವರು ಹಿಮಾಲಯನ್ ಆಸ್ಪತ್ರೆ ಜಾಲಿಗ್ರಾಂಟ್‌ನ ಹಿರಿಯ ಮಕ್ಕಳ ಶಸ್ತ್ರಚಿಕಿತ್ಸಕ ಡಾ. ಸಂತೋಷ್ ಸಿಂಗ್ ಅವರನ್ನು ಸಂಪರ್ಕಿಸಿದರು. ಮಗುವಿನ ಆರಂಭಿಕ ಪರೀಕ್ಷೆಯಲ್ಲಿ ಡಾ. ಸಿಂಗ್ ಹೊಟ್ಟೆಯಲ್ಲಿ ಅಸಹಜ ದ್ರವ್ಯರಾಶಿಯನ್ನು ಶಂಕಿಸಿದ್ದರು. ಆದರೆ ಮಗುವಿನ ಹೊಟ್ಟೆಯೊಳಗೆ ಮಾನವ ಭ್ರೂಣವು ಬೆಳವಣಿಗೆಯಾಗುತ್ತಿರುವುದನ್ನು ಎಕ್ಸ್ ರೇ ಬಹಿರಂಗಪಡಿಸಿತು.

ಈ ಸ್ಥಿತಿಯನ್ನು ವೈದ್ಯಕೀಯವಾಗಿ “ಫೆಟಸ್-ಇನ್-ಫೀಟು” ಎಂದು ಹೇಳಿರುವ ಡಾ. ಸಂತೋಷ್ ಸಿಂಗ್, ಮಗುವಿನ ಪೋಷಕರಿಗೆ ಈ ಕುರಿತು ಸಂಪೂರ್ಣ ಮಾಹಿತಿ ನೀಡಿ ಶಸ್ತ್ರಚಿಕಿತ್ಸೆ ನಡೆಸಬೇಕಿರುವುದಾಗಿ ತಿಳಿಸಿದರು.

ಕಳೆದ ವಾರ ಮಗುವಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಭಾಗಶಃ ಅಭಿವೃದ್ಧಿ ಹೊಂದಿದ್ದ ಮಾನವ ಭ್ರೂಣವನ್ನು ಮಗುವಿನ ಹೊಟ್ಟೆಯಿಂದ ಹೊರತೆಗೆಯಲಾಗಿದೆ. ಶಸ್ತ್ರಚಿಕಿತ್ಸೆಯ ನಾಲ್ಕು ದಿನಗಳ ಅನಂತರ ಮಗು ಚೇತರಿಸಿಕೊಂಡಿದ್ದು, ಮಗುವನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಡಾ. ಸಂತೋಷ್ ಸಿಂಗ್ ತಿಳಿಸಿದ್ದಾರೆ.


ಫೀಟಸ್-ಇನ್-ಫೀಟು ಎಂದರೇನು?

ಹಿಮಾಲಯನ್ ಆಸ್ಪತ್ರೆ ಜಾಲಿಗ್ರಾಂಟ್‌ನ ಮಕ್ಕಳ ಶಸ್ತ್ರಚಿಕಿತ್ಸಕ ಡಾ. ಸಂತೋಷ್ ಸಿಂಗ್ ಅವರು “ಫಿಟಸ್-ಇನ್-ಫೀಟು” ಬಗ್ಗೆ ವಿವರಿಸಿದ್ದು, ಇದೊಂದು ಅತ್ಯಂತ ಅಪರೂಪದ ವಿದ್ಯಮಾನವಾಗಿದೆ. ಅಜ್ಞಾತ ಕಾರಣಗಳಿಂದ ಒಂದು ಭ್ರೂಣವು ಇನ್ನೊಂದರೊಳಗೆ ಪರಾವಲಂಬಿಯಂತೆ ಬೆಳವಣಿಗೆಯಾಗಲು ಪ್ರಾರಂಭಿಸುತ್ತದೆ. ಈ ಸ್ಥಿತಿಯನ್ನು ತಾಯಿಯ ಗರ್ಭಾವಸ್ಥೆಯಲ್ಲಿ ಅಲ್ಟ್ರಾಸೌಂಡ್ ಮೂಲಕ ಕಂಡುಹಿಡಿಯಬಹುದು. ಆದರೂ ಹೆಚ್ಚಿನ ಸಂದರ್ಭಗಳಲ್ಲಿ ಇದು ಜನನದ ನಂತರ ಪತ್ತೆಯಾಗುತ್ತದೆ.

ಇದನ್ನೂ ಓದಿ: Viral Video: ಆಟಿಕೆ ಎಂದು ತಿಳಿದು ಹಾವನ್ನೇ ಕಚ್ಚಿದ ಮಗು! ಕಚ್ಚಿಸಿಕೊಂಡ ಹಾವು ಸಾವು!

5 ಲಕ್ಷದಲ್ಲಿ ಒಂದು ಪ್ರಕರಣ

ಡಾ. ಸಂತೋಷ್ ಕುಮಾರ್ ಅವರ ಪ್ರಕಾರ ಇದು 5 ಲಕ್ಷಕ್ಕಿಂತಲೂ ಹೆಚ್ಚು ಗರ್ಭಧಾರಣೆಗಳಲ್ಲಿ ಒಂದರಲ್ಲಿ ಉಂಟಾಗಬಹುದು. ವಿಶಿಷ್ಟವಾಗಿ, ಮಗುವಿನ ಹೊಟ್ಟೆಯು ಒಂದರಿಂದ ಎರಡು ವರ್ಷಗಳ ನಡುವೆ ಅಸಹಜವಾಗಿ ಹಿಗ್ಗಿದಾಗ ಈ ಪ್ರಕರಣಗಳನ್ನು ಗಮನಿಸಬಹುದು. ಈ ಸ್ಥಿತಿಯು ಸಾಮಾನ್ಯವಾಗಿ ಮಗುವಿನ ಜೀವಕ್ಕೆ ತೊಂದರೆಯನ್ನು ಉಂಟು ಮಾಡುವುದಿಲ್ಲವಾದರೂ ಇದು ಇತರ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಈ ಸ್ಥಿತಿಯ ಏಕೈಕ ಚಿಕಿತ್ಸೆಯು ಶಸ್ತ್ರಚಿಕಿತ್ಸೆಯಾಗಿದೆ. ಇದನ್ನು ಸಾಧ್ಯವಾದಷ್ಟು ಬೇಗ ನಿರ್ವಹಿಸಬೇಕು ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Dengue Vaccine: ಭಾರತದ ಮೊದಲ ಡೆಂಗ್ಯೂ ಲಸಿಕೆ; 3ನೇ ಹಂತದ ಪ್ರಯೋಗ ಪ್ರಾರಂಭ

ಡೆಂಗ್ಯೂಗೆ ಭಾರತೀಯ ಲಸಿಕೆ (Dengue Vaccine) 3ನೇ ಹಂತದ ಪ್ರಯೋಗದಲ್ಲಿದೆ. ಈ ಹಿಂದೆ ನಡೆಸಿರುವ ಎರಡು ಪ್ರಯೋಗಗಳು ಯಶಸ್ವಿಯಾಗಿದ್ದು, ಐಸಿಎಂಆರ್ ಸಹಯೋಗದೊಂದಿಗೆ 3 ಹಂತದ ಪ್ರಯೋಗವು 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 19 ಪ್ರದೇಶಗಳಲ್ಲಿ 10,335ಕ್ಕೂ ಹೆಚ್ಚು ಆರೋಗ್ಯವಂತ ವಯಸ್ಕರ ಮೇಲೆ ನಡೆಯಲಿದೆ. ಈ ಲಸಿಕೆ ಯಶಸ್ವಿಯಾದರೆ ಡೆಂಗ್ಯೂ ರೋಗದಿಂದ ಉಂಟಾಗುತ್ತಿರುವ ಸಾವು ತಪ್ಪಿಸಬಹುದು.

VISTARANEWS.COM


on

By

Dengue Vaccine
Koo

ಪಂಡಿತ್ ಭಾಗವತ್ ದಯಾಳ್ ಶರ್ಮಾ ಪೋಸ್ಟ್ ಗ್ರಾಜುಯೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (PGIMS) ರೋಹ್ಟಕ್‌ನಲ್ಲಿ ಭಾರತದ ಮೊದಲ ಸ್ಥಳೀಯ ಡೆಂಗ್ಯೂ ಲಸಿಕೆ (Dengue Vaccine) 3ನೇ ಹಂತದ ಪ್ರಯೋಗವನ್ನು ಪ್ರಾರಂಭಿಸಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಮತ್ತು ಪ್ಯಾನೇಸಿಯಾ ಬಯೋಟೆಕ್ (Panacea Biotec) ಘೋಷಿಸಿದೆ.

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಈ ಉಪಕ್ರಮವನ್ನು ಶ್ಲಾಘಿಸಿದ್ದು, ಡೆಂಗ್ಯೂ ಚಿಕೆತ್ಸೆಗಾಗಿ ಭಾರತದ ಮೊದಲ ಸ್ಥಳೀಯ ಲಸಿಕೆಯ 3 ಕ್ಲಿನಿಕಲ್ ಪ್ರಯೋಗದ ಪ್ರಾರಂಭವು ಡೆಂಗ್ಯೂ ವಿರುದ್ಧದ ನಮ್ಮ ಹೋರಾಟದಲ್ಲಿ ನಿರ್ಣಾಯಕ ಪ್ರಗತಿಯನ್ನು ಸೂಚಿಸುತ್ತದೆ ಎಂದು ಹೇಳಿದರು.

ಡೆಂಗ್ಯೂ ಲಸಿಕೆ ಅಭಿವೃದ್ಧಿಗೆ ಐಸಿಎಂಆರ್ ಮತ್ತು ಪ್ಯಾನೇಸಿಯಾ ಬಯೋಟೆಕ್ ನಡುವಿನ ಸಹಯೋಗದ ಪ್ರಾಮುಖ್ಯತೆಯನ್ನು ತಿಳಿಸಿದ ಕೇಂದ್ರ ಆರೋಗ್ಯ ಸಚಿವರು, ಈ ಪಾಲುದಾರಿಕೆಯ ಮೂಲಕ ನಾವು ನಮ್ಮ ಜನರ ಆರೋಗ್ಯ ಮತ್ತು ಯೋಗಕ್ಷೇಮವನ್ನು ಖಾತ್ರಿಪಡಿಸುವತ್ತ ಹೆಜ್ಜೆ ಇಡುತ್ತಿದ್ದೇವೆ. ಆರೋಗ್ಯ ಕ್ಷೇತ್ರದಲ್ಲಿ ಆತ್ಮನಿರ್ಭರ ಭಾರತ್‌ನ ನಮ್ಮ ದೃಷ್ಟಿಯನ್ನು ಬಲಪಡಿಸುತ್ತದೆ ಎಂದು ತಿಳಿಸಿದರು.


ಪ್ರಸ್ತುತ ದೇಶವು ಡೆಂಗ್ಯೂಗೆ ಯಾವುದೇ ಆಂಟಿವೈರಲ್ ಚಿಕಿತ್ಸೆ ಅಥವಾ ಪರವಾನಗಿ ಪಡೆದ ಲಸಿಕೆಯನ್ನು ಹೊಂದಿಲ್ಲ. ಪರಿಣಾಮಕಾರಿ ಲಸಿಕೆಯನ್ನು ಅಭಿವೃದ್ಧಿಪಡಿಸುವುದು ಸಂಕೀರ್ಣ ಮತ್ತು ತುರ್ತು ಅಗತ್ಯವಾಗಿದೆ. ಡೆಂಗ್ಯೂ ವೈರಸ್‌ನ ಎಲ್ಲಾ ನಾಲ್ಕು ಸಿರೊಟೈಪ್‌ಗಳಲ್ಲಿ ಹೆಚ್ಚಿನ ಪರಿಣಾಮಕಾರಿತ್ವವನ್ನು ಸಾಧಿಸುವಲ್ಲಿ ಸವಾಲು ಇದೆ. ಇದು ದೇಶದ ಅನೇಕ ಪ್ರದೇಶಗಳಲ್ಲಿ ಹರಡುತ್ತಿದೆ ಎಂದರು.

ಟೆಟ್ರಾವಲೆಂಟ್ ಡೆಂಗ್ಯೂ ಲಸಿಕೆ ಸ್ಟ್ರೈನ್ (TV003/TV005) ಆರಂಭದಲ್ಲಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ (NIH), ಯುಎಸ್ ಎನಿಂದ ಅಭಿವೃದ್ಧಿಪಡಿಸಲಾಯಿತು. ಜಾಗತಿಕವಾಗಿ ಪೂರ್ವಭಾವಿ ಮತ್ತು ಕ್ಲಿನಿಕಲ್ ಪ್ರಯೋಗಗಳಲ್ಲಿ ಭರವಸೆಯ ಫಲಿತಾಂಶಗಳನ್ನು ತೋರಿಸಿದೆ. ಇದರ ಪ್ರಯೋಗ ಆರಂಭಿಸಿದ ಮೂರು ಭಾರತೀಯ ಕಂಪೆನಿಗಳಲ್ಲಿ ಒಂದಾದ Panacea Biotec ಸಂಪೂರ್ಣ ಲಸಿಕೆಯನ್ನು ಅಭಿವೃದ್ಧಿಪಡಿಸುವಲ್ಲಿ ಹೆಚ್ಚು ಪ್ರಗತಿ ಸಾಧಿಸಿದೆ.

ಈ ಕೆಲಸಕ್ಕಾಗಿ ಕಂಪನಿಯು ಪ್ರಕ್ರಿಯೆಯ ಪೇಟೆಂಟ್ ಅನ್ನು ಹೊಂದಿದೆ. 2018-19ರಲ್ಲಿ ಭಾರತೀಯ ಲಸಿಕೆ ಕ್ಲಿನಿಕಲ್ ಪ್ರಯೋಗ ಹಂತ 1 ಮತ್ತು 2 ಪೂರ್ಣಗೊಂಡಿವೆ. ಇದು ಭರವಸೆಯ ಫಲಿತಾಂಶಗಳನ್ನು ನೀಡಿದೆ.
ಐಸಿಎಂಆರ್ ಸಹಯೋಗದೊಂದಿಗೆ ನಡೆಸಲಾದ ಹಂತ 3 ಕ್ಲಿನಿಕಲ್ ಪ್ರಯೋಗವು 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 10,335 ಕ್ಕೂ ಹೆಚ್ಚು ಆರೋಗ್ಯವಂತ ವಯಸ್ಕ ಭಾಗವಹಿಸುವವರನ್ನು ಒಳಗೊಂಡ 19 ಪ್ರದೇಶಗಳಲ್ಲಿ ನಡೆಯಲಿದೆ.

ಇದನ್ನೂ ಓದಿ: Bridge Collapse: 9 ವರ್ಷಗಳಿಂದ ನಿರ್ಮಾಣವಾಗುತ್ತಿರುವ ಸೇತುವೆ 3ನೇ ಬಾರಿ ಕುಸಿದು ಬಿತ್ತು; ವಿಡಿಯೊ ನೋಡಿ

ಭಾರತವು ಡೆಂಗ್ಯೂ ರೋಗದ ಅತಿ ಹೆಚ್ಚು ಸಂಭವವಿರುವ ಟಾಪ್ 30 ದೇಶಗಳಲ್ಲಿ ಒಂದಾಗಿದೆ. ಡಬ್ಲ್ಯೂ ಹೆಚ್‌ಒ ವರದಿಯ ಪ್ರಕಾರ ಭಾರತದಲ್ಲಿ ಸುಮಾರು ಶೇ. 75-80ರಷ್ಟು ಸೋಂಕುಗಳು ಲಕ್ಷಣ ರಹಿತವಾಗಿವೆ. ಆದರೂ ಈ ವ್ಯಕ್ತಿಗಳು ಈಡಿಸ್ ಸೊಳ್ಳೆಗಳ ಕಡಿತದ ಮೂಲಕ ಸೋಂಕನ್ನು ಹರಡಬಹುದು. ರೋಗ ಲಕ್ಷಣಗಳು ಪ್ರಾಯೋಗಿಕವಾಗಿ ಸ್ಪಷ್ಟವಾಗಿ ಕಂಡುಬರುವ ಶೇ. 20-25 ಪ್ರಕರಣಗಳಲ್ಲಿ ಮಕ್ಕಳು ಹೆಚ್ಚಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದು, ಮರಣದ ಅಪಾಯವೂ ಹೆಚ್ಚಾಗಿರುತ್ತದೆ.

Continue Reading

ದೇಶ

SkyDeck: ಕೃಷಿ ಮತ್ತಿತರ ಕ್ಷೇತ್ರಗಳಿಗೆ ನೆರವಾಗುವ ʼಸ್ಕೈಡೆಕ್ʼ ಪ್ಲಾಟ್‌ಫಾರ್ಮ್! ಏನಿದು?

SkyDeck: ಸಂಪೂರ್ಣವಾಗಿ ದೇಶೀಯವಾಗಿ ಸಿದ್ಧಪಡಿಸಿ, ಉತ್ಪಾದನೆ ಮಾಡುತ್ತಿರುವ ಡ್ರೋನ್ ತಂತ್ರಜ್ಞಾನ ಕಂಪನಿಯಾದ ಆಸ್ಟರಿಯಾ ಏರೋಸ್ಪೇಸ್, ಅತ್ಯಾಧುನಿಕ ನವೀನ ಬಗೆಯ ಕ್ಲೌಡ್ ಪ್ಲಾಟ್ ಫಾರ್ಮ್ ಆದ ಸ್ಕೈಡೆಕ್ ಅನ್ನು ಪರಿಚಯಿಸುತ್ತಿದೆ. ಇದೀಗ ಅದನ್ನು ಸೆಲ್ಫ್ ಸರ್ವೀಸ್ SaaS ಸಲ್ಯೂಷನ್ ಆಗಿ ನೀಡುತ್ತಿದೆ. ಡ್ರೋನ್ ಡೇಟಾದ ಬಳಕೆದಾರರು ಹಾಗೂ ಸೇವಾ ಪೂರೈಕೆದಾರರು ಇಬ್ಬರಿಗೂ ಇದು ಸಮಗ್ರ ಸಾಫ್ಟ್ ವೇರ್ ಪ್ಲಾಟ್ ಫಾರ್ಮ್ ರೀತಿಯಲ್ಲಿ ಸೇವೆ ಒದಗಿಸುತ್ತದೆ. ಈ ಕುರಿತ ಮತ್ತಷ್ಟು ಮಾಹಿತಿ ಇಲ್ಲಿದೆ.

VISTARANEWS.COM


on

Asteria Aerospace has introduced a SkyDeck platform that helps in various fields including agriculture
Koo

ಬೆಂಗಳೂರು: ಸಂಪೂರ್ಣವಾಗಿ ಎಲ್ಲವನ್ನೂ ದೇಶೀಯವಾಗಿ ಸಿದ್ಧಪಡಿಸಿ, ಉತ್ಪಾದನೆ ಮಾಡುತ್ತಿರುವ ಡ್ರೋನ್ ತಂತ್ರಜ್ಞಾನ ಕಂಪನಿಯಾದ ಆಸ್ಟರಿಯಾ ಏರೋಸ್ಪೇಸ್ (Asteria Aerospace), ಅತ್ಯಾಧುನಿಕ ನವೀನ ಬಗೆಯ ಕ್ಲೌಡ್ ಪ್ಲಾಟ್‌ಫಾರ್ಮ್ ಆದ ಸ್ಕೈಡೆಕ್ (SkyDeck) ಅನ್ನು ಪರಿಚಯಿಸುತ್ತಿದ್ದು, ಇದೀಗ ಅದನ್ನು ಸೆಲ್ಫ್ ಸರ್ವೀಸ್ SaaS ಸಲ್ಯೂಷನ್ ಆಗಿ ನೀಡುತ್ತಿದೆ.

ಉದ್ಯಮಗಳಿಗೆ ಡ್ರೋನ್ ದತ್ತಾಂಶ ನಿರ್ವಹಣೆಯನ್ನು ಸುವ್ಯವಸ್ಥಿತ ಮಾಡುವುದಕ್ಕೆ ಸ್ಕೈಡೆಕ್ ಪ್ಲಾಟ್‌ಫಾರ್ಮ್‌ ಬಲ ತುಂಬುತ್ತದೆ. ಡ್ರೋನ್ ಡೇಟಾದ ಬಳಕೆದಾರರು ಹಾಗೂ ಸೇವಾ ಪೂರೈಕೆದಾರರು ಇಬ್ಬರಿಗೂ ಇದು ಸಮಗ್ರ ಸಾಫ್ಟ್‌ವೇರ್ ಪ್ಲಾಟ್‌ಫಾರ್ಮ್‌ ರೀತಿಯಲ್ಲಿ ಸೇವೆ ಒದಗಿಸುತ್ತದೆ. ಆ ಮೂಲಕ ಅವರ ಡಿಜಿಟಲ್ ರೂಪಾಂತರ ಪ್ರಯಾಣವನ್ನು ಸರಳಗೊಳಿಸುತ್ತದೆ ಮತ್ತು ಡ್ರೋನ್‌ನಿಂದ ಡೇಟಾ ಚಾಲಿತ ಒಳನೋಟಗಳನ್ನು ಸಕ್ರಿಯಗೊಳಿಸುತ್ತದೆ.

ಜಿಐಎಸ್‌ನಂಥ ಉದ್ಯಮಗಳು ನಿರ್ಮಾಣ, ತೈಲ ಹಾಗೂ ಅನಿಲ, ಕೃಷಿ ಕ್ಷೇತ್ರಗಳಲ್ಲಿ ತೊಡಗಿಕೊಂಡಿವೆ. ಸ್ಕೈಡೆಕ್ ಇಂಥವುಗಳಿಗೆ ತಂತ್ರಜ್ಞಾನದ ದೃಷ್ಟಿಯಿಂದ ಆಧುನಿಕವಾದ ಸಲಕರಣೆಗಳು ಮತ್ತು ವಿಶ್ಲೇಷಣೆಗಳನ್ನು ಒದಗಿಸುತ್ತದೆ. ಅದರೊಂದಿಗೆ ಡ್ರೋನ್ ಡೇಟಾವನ್ನು ಬಳಸಿಕೊಂಡು, ಸೈಟ್‌ಗಳು ಮತ್ತು ತಮ್ಮ ನಿರ್ಣಾಯಕ ಸ್ವತ್ತುಗಳನ್ನು ಡಿಜಿಟಲ್ ಆಗಿ ರೂಪಾಂತರ ಮಾಡಿಕೊಳ್ಳಬಹುದಾಗಿರುತ್ತದೆ.

ಇದನ್ನೂ ಓದಿ: Assembly Session 2024: ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್‌; ಶೀಘ್ರವೇ ಗೌರವಧನ ಹೆಚ್ಚಳ!

ಈ ಕ್ಲೌಡ್ ಪ್ಲಾಟ್‌ಫಾರ್ಮ್ ಸುರಕ್ಷಿತವಾದ, ಕೇಂದ್ರೀಕೃತ ಡ್ರೋನ್ ನಿರ್ವಹಣೆ ಒದಗಿಸುವುದರ ಜತೆಗೆ ತತ್‌ಕ್ಷಣಕ್ಕೆ ದೃಶ್ಯವನ್ನು ಸಹ ತಂದುಕೊಳ್ಳುತ್ತದೆ. ಸಹಯೋಗ ಹಾಗೂ ವರದಿ ಮಾಡುವ ಸಾಧನಗಳೊಂದಿಗೆ ಸುವ್ಯವಸ್ಥಿತ ಸೈಟ್ ಮೇಲ್ವಿಚಾರಣೆ ಮತ್ತು ನಿಗಾ ವಹಿಸಲು ಅನುಕೂಲ ಮಾಡಿಕೊಡುತ್ತದೆ.

ಸ್ಕೈಡೆಕ್‌ನ ವಿಶೇಷತೆ ಏನು?

ಸ್ಕೈಡೆಕ್ ಎಷ್ಟು ವಿಶಿಷ್ಟ ಅಂದರೆ, ಅದರ ಪೂರ್ವ- ನಿರ್ಮಿತ, ಉದ್ಯಮಕ್ಕೆ ನಿರ್ದಿಷ್ಟ ಕೃತಕ ಬುದ್ಧಿಮತ್ತೆ (ಎಐ- ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ಮಾದರಿಗಳಿಂದಾಗಿ ಅದು ವೈಮಾನಿಕ ದತ್ತಾಂಶಗಳನ್ನು ಶೀಘ್ರವಾಗಿ ವಿಶ್ಲೇಷಣೆ ಮಾಡುತ್ತದೆ. ಪೂರ್ವಭಾವಿಯಾಗಿ ನಿರ್ಧಾರ ಒದಗಿಸುತ್ತದೆ ಮತ್ತು ಉದ್ಯಮದ ಉತ್ಕೃಷ್ಟತೆಯನ್ನು ಸಾಧಿಸುತ್ತದೆ.

ಯೋಜನಾ ನಿರ್ವಹಣೆ, ಹಾರಾಟದ ಯೋಜನೆ ಮತ್ತು ಅನುಷ್ಠಾನ ಇವೆಲ್ಲವನ್ನೂ ಸಂಯೋಜನೆ ಮಾಡುವ ಮೂಲಕವಾಗಿ ಡ್ರೋನ್ ಸೇವಾ ಪೂರೈಕೆದಾರರಿಗೆ ಕೆಲಸದ ಹರಿವು (ವರ್ಕ್ ಫ್ಲೋ) ಸರಾಗ ಮಾಡಿಕೊಡುತ್ತದೆ ಸ್ಕೈಡೆಕ್. ಆಟೋಮೆಟೆಡ್ ಡ್ರೋನ್ ದತ್ತಾಂಶದ ಸಂಸ್ಕರಣೆಗೆ ಇದು ವೆಚ್ಚದ ದೃಷ್ಟಿಯಿಂದ ಪರಿಣಾಮಕಾರಿ, ಕ್ಲೌಡ್ ಆಧಾರಿತವಾದ ಸಲ್ಯೂಷನ್ ಆಗಿದ್ದು, ಉದ್ಯಮದ ಅಗತ್ಯಗಳಿಗೆ ವ್ಯಾಪಕವಾಗಿ ನೆರವಾಗುತ್ತದೆ. ಇದರ ಜತೆಗೆ ಸ್ಕೈಡೆಕ್ ಏಕೀಕೃತವಾದ ರೆಪಾಸಿಟರಿ ಡ್ರೋನ್ ದತ್ತಾಂಶವನ್ನು ಒದಗಿಸುತ್ತದೆ, ಸಹಯೋಗ ವಿಶ್ಲೇಷಣೆಯನ್ನು ಸರಳಗೊಳಿಸುತ್ತದೆ ಮತ್ತು ಬಳಕೆದಾರರೊಂದಿಗೆ ಡೇಟಾ ಹಂಚಿಕೊಳ್ಳುತ್ತದೆ.

ಇದನ್ನೂ ಓದಿ: Assembly Session 2024: ಕಾಲುವೆಗಳ ಕೊನೇ ಭಾಗದ ರೈತರಿಗೆ ನೀರು ಖಾತರಿ; ನೀರಾವರಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

ಈ ಕುರಿತು ಆಸ್ಟರಿಯಾ ಏರೋಸ್ಪೇಸ್ ಸಹ ಸಂಸ್ಥಾಪಕ ನೀಲ್ ಮೆಹ್ತಾ ಮಾತನಾಡಿ, “ಸುರಕ್ಷಿತ ಮತ್ತು ವ್ಯಾಪಕವಾದ ಡ್ರೋನ್ ಕಾರ್ಯಾಚರಣೆಗಳು ಮತ್ತು ಡೇಟಾ ನಿರ್ವಹಣೆ ಸಲ್ಯೂಷನ್‌ಗಳನ್ನು ಬಯಸುವ ಉದ್ಯಮಗಳು ಮತ್ತು ವೃತ್ತಿಪರರಿಗೆ ಸ್ಕೈಡೆಕ್ ಅನ್ನು ಪರಿಚಯಿಸಲು ನಾವು ಉತ್ಸುಕರಾಗಿದ್ದೇವೆ,” ಎಂದು ತಿಳಿಸಿದ್ದಾರೆ.

“ಸ್ಕೈಡೆಕ್ ಕಠಿಣವಾದ ಸವಾಲಿನ ಅಂಶಗಳನ್ನು ಸರಿಪಡಿಸುತ್ತದೆ, ದತ್ತಾಂಶವನ್ನು ದಾಖಲಿಸುವುದರಿಂದ ಹಿಡಿದು ಕಾರ್ಯಸಾಧುವಾಗುವಂಥ ಒಳನೋಟಗಳ ತನಕ ಎಲ್ಲ ಉದ್ಯಮಗಳಿಗೂ ಡ್ರೋನ್ ಆಧಾರಿತವಾದ ಪರಿಹಾರಗಳನ್ನು ಅಳವಡಿಸಿಕೊಳ್ಳಲು ಕೆಲಸದ ಹರಿವನ್ನು ಸುವ್ಯವಸ್ಥಿತಗೊಳಿಸುತ್ತದೆ. ನಮ್ಮಲ್ಲಿನ ಹೊಂದಿಕೊಳ್ಳುವ ಬೆಲೆಯು ಎಲ್ಲ ಗಾತ್ರದ ಉದ್ಯಮಗಳಿಗೂ-ವ್ಯವಹಾರಗಳಿಗೂ ತಮ್ಮ ನಿರ್ದಿಷ್ಟ ಅಗತ್ಯಗಳನ್ನು ಪೂರೈಸುವುದನ್ನು ಸ್ಕೈಡೆಕ್ ಸಾಮರ್ಥ್ಯ ಖಾತ್ರಿ ಮಾಡುತ್ತದೆ.” ಎಂದು ತಿಳಿಸಿದ್ದಾರೆ.

ಆಸ್ಟರಿಯಾ ಏರೋಸ್ಪೇಸ್ ಲಿಮಿಟೆಡ್ ಕುರಿತು

ಆಸ್ಟರಿಯಾ ಏರೋಸ್ಪೇಸ್ ಲಿಮಿಟೆಡ್ ಎಂಬುದು ವೈಮಾನಿಕ ದತ್ತಾಂಶದಿಂದ ಕ್ರಿಯಾಶೀಲ ಬುದ್ಧಿಮತ್ತೆಯನ್ನು ಒದಗಿಸುವ ಪೂರ್ಣ ಪ್ರಮಾಣದ ಡ್ರೋನ್ ತಂತ್ರಜ್ಞಾನ ಕಂಪನಿಯಾಗಿದೆ. ಆಸ್ಟರಿಯಾ ತನ್ನ ಆಂತರಿಕ ಹಾರ್ಡ್‌ವೇರ್ ವಿನ್ಯಾಸ, ಸಾಫ್ಟ್‌ವೇರ್ ಅಭಿವೃದ್ಧಿ ಮತ್ತು ಉತ್ಪಾದನಾ ಸಾಮರ್ಥ್ಯಗಳನ್ನು ಬಳಸಿಕೊಂಡು ಸರ್ಕಾರ ಹಾಗೂ ಉದ್ಯಮ ಗ್ರಾಹಕರಿಗೆ ಅವರಿಗೆ ಬೇಕಾದಂತ ರೀತಿಯಲ್ಲಿ ರೂಪಿಸಿದ ಗ್ರಾಹಕ ನಿರ್ದಿಷ್ಟ ಡ್ರೋನ್ ಸಲ್ಯೂಷನ್‌ಗಳನ್ನು ಅಭಿವೃದ್ಧಿಪಡಿಸುತ್ತದೆ.

ಇದನ್ನೂ ಓದಿ: Greater Bengaluru Governance Bill 2024: ಗ್ರೇಟರ್ ಬೆಂಗಳೂರಿನಲ್ಲಿ ಯಾವ್ಯಾವ ಏರಿಯಾಗಳು ಸೇರಬಹುದು? ಇದರ ಉದ್ದೇಶ ಏನು?

ದೀರ್ಘಾವಧಿಯ, ಗುಣಮಟ್ಟ-ಕೇಂದ್ರಿತ ಮತ್ತು ವಿಶ್ವಾಸಾರ್ಹ ಉತ್ಪನ್ನಗಳು ಮತ್ತು ಸೇವೆಗಳನ್ನು ರಕ್ಷಣೆ ಮತ್ತು ಹೋಮ್‌ಲ್ಯಾಂಡ್ ಭದ್ರತೆ, ಕೃಷಿ, ತೈಲ ಮತ್ತು ಅನಿಲ, ಇಂಧನ ಮತ್ತು ಯುಟಿಲಿಟಿ, ದೂರಸಂಪರ್ಕ, ಗಣಿಗಾರಿಕೆ ಮತ್ತು ನಿರ್ಮಾಣ ಕ್ಷೇತ್ರಗಳಿಗೆ ಒದಗಿಸಲು ಆಸ್ಟರಿಯಾವು ವಿಶ್ವಾಸಾರ್ಹ ಪಾಲುದಾರ ಆಗಿದೆ. ಆಸ್ಟರಿಯಾ ಏರೋಸ್ಪೇಸ್ ಲಿಮಿಟೆಡ್ ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್‌ನ ಅಂಗಸಂಸ್ಥೆಯಾಗಿದೆ, ಇದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಬಹುಪಾಲು ಸ್ವಾಮ್ಯದ ಅಂಗಸಂಸ್ಥೆಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ದೇಶ

Toyota Kirloskar Motor: ಟೊಯೊಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ

Toyota Kirloskar Motor: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) 66ನೇ ಟೊಯೋಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮ (ಟಿ-ಟಿಇಪಿ) ಮತ್ತು ಟಿ-ಟಿಇಪಿ ಅಡಿಯಲ್ಲಿ “ತಾಂತ್ರಿಕ ಶಿಕ್ಷಣ ಮತ್ತು ಮಾನ್ಯತೆಗಾಗಿ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು (ಸ್ಟಾರ್) ಬರೇಲಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಾರಂಭಿಸುವುದಾಗಿ ಘೋಷಿಸಿದೆ.

VISTARANEWS.COM


on

Toyota Technical Education Programme started at Bareilly Government Polytechnic by TKM
Koo

ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) 66ನೇ ಟೊಯೋಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮ (ಟಿ-ಟಿಇಪಿ) ಮತ್ತು ಟಿ-ಟಿಇಪಿ ಅಡಿಯಲ್ಲಿ “ತಾಂತ್ರಿಕ ಶಿಕ್ಷಣ ಮತ್ತು ಮಾನ್ಯತೆಗಾಗಿ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು (ಸ್ಟಾರ್) ಬರೇಲಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಾರಂಭಿಸುವುದಾಗಿ (Toyota Kirloskar Motor) ಘೋಷಿಸಿದೆ.

ಸ್ಥಳೀಯ ಉತ್ಪಾದನಾ ಪರಿಸರ ವ್ಯವಸ್ಥೆಯನ್ನು ಬೆಂಬಲಿಸಲು ಮತ್ತು ಕೌಶಲ್ಯ ಅಭಿವೃದ್ಧಿಯ ಮೂಲಕ ಸಮುದಾಯಗಳನ್ನು ಸಬಲೀಕರಣಗೊಳಿಸಲು, ಟಿಕೆಎಂ ತನ್ನ ಪ್ರಮುಖ ಕಾರ್ಯಕ್ರಮಗಳಾದ ಟೊಯೊಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ಮತ್ತು ಟೊಯೊಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮ (ಟಿ-ಟಿಇಪಿ) ಯೊಂದಿಗೆ ಮುಂಚೂಣಿಯಲ್ಲಿದೆ. ಒಂದು ದಶಕಕ್ಕೂ ಹೆಚ್ಚು ಕಾಲದಿಂದ, ಈ ಕಾರ್ಯಕ್ರಮಗಳು ಆರ್ಥಿಕವಾಗಿ ಸವಾಲಿನ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ವಿಶ್ವದರ್ಜೆಯ ತರಬೇತಿಯನ್ನು ಒದಗಿಸುವತ್ತ ಗಮನ ಹರಿಸಿವೆ. ‘ಸ್ಕಿಲ್ ಇಂಡಿಯಾ’ ಅಭಿಯಾನಕ್ಕೆ ಗಮನಾರ್ಹ ಕೊಡುಗೆ ನೀಡಿವೆ.

ಇದನ್ನೂ ಓದಿ: Kannada Short Movie: ಪತ್ರಕರ್ತೆ ಸುನಯನಾ ಸುರೇಶ್ ಈಗ ನಿರ್ದೇಶಕಿ; ‘ಮೌನ ರಾಗ’ ಕಿರುಚಿತ್ರಕ್ಕೆ ನಿರ್ದೇಶನ

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯವು 2023 ರ ಜುಲೈ 29 ಮತ್ತು 30 ರಂದು ದೆಹಲಿಯ ಪ್ರಗತಿ ಮೈದಾನದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಕ್ರಮದ 3 ನೇ ವಾರ್ಷಿಕೋತ್ಸವದ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಸಂವಹನ ನಡೆಸುವ ಗೌರವವನ್ನು ಪಡೆದ ಟಿಟಿಟಿಐ ಹಳೆಯ ವಿದ್ಯಾರ್ಥಿ ಮತ್ತು 2022 ರ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಮೆಕಾಟ್ರಾನಿಕ್ಸ್ ಕಂಚಿನ ಪದಕ ವಿಜೇತ ಅಖಿಲೇಶ್ ನರಸಿಂಹ ಮೂರ್ತಿ ಒಂದು ಗಮನಾರ್ಹ ಯಶಸ್ಸನ್ನು ಸಾಧಿಸಿದ್ದಾರೆ.

ಟಿ-ಟಿಇಪಿ ಒಂದು ಸಮಗ್ರ ವರ್ಷ ವಿಡೀ ನಡೆಯುವ ಕಾರ್ಯಕ್ರಮವಾಗಿದೆ. ಇದು ಆನ್-ದಿ-ಜಾಬ್ ಟ್ರೈನಿಂಗ್ (ಒಜೆಟಿ) ಅನ್ನು ಒಳಗೊಂಡಿದೆ ಮತ್ತು ಅಂತಿಮ ವರ್ಷದ ಐಟಿಐ / ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಅನುಗುಣವಾಗಿದೆ. ಈ ಕಾರ್ಯಕ್ರಮದ ಪ್ರಮುಖ ಲಕ್ಷಣಗಳಲ್ಲಿ ಟೊಯೊಟಾದಿಂದ ಟಿ-ಟಿಇಪಿಯ ಪ್ರಮುಖ ತರಬೇತುದಾರರಿಗೆ ವಿಶೇಷ ತರಬೇತಿ, ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ಟೊಯೊಟಾ ಡೀಲರ್ ಶಿಪ್‌ಗಳಲ್ಲಿ ಪ್ರಾಯೋಗಿಕ ಕೌಶಲ್ಯ ಅಭಿವೃದ್ಧಿ ಮತ್ತು ಭಾರತೀಯ ವಾಹನ ಉದ್ಯಮದ ಅಗತ್ಯಗಳಿಗೆ ಅನುಗುಣವಾಗಿ ಸುಧಾರಿತ ತಂತ್ರಜ್ಞಾನಗಳ ತಾಂತ್ರಿಕ ಜ್ಞಾನವನ್ನು ನೀಡಲು ವಿನ್ಯಾಸಗೊಳಿಸಲಾದ ಪಠ್ಯಕ್ರಮ ಸೇರಿವೆ. ಕಳೆದ ವರ್ಷ ಆರ್ಥಿಕವಾಗಿ ಸವಾಲಿನ ವಿದ್ಯಾರ್ಥಿಗಳಿಗೆ ತಾಂತ್ರಿಕ ಅಧ್ಯಯನವನ್ನು ಮುಂದುವರಿಸಲು ಸಹಾಯ ಮಾಡಲು ಟಿಕೆಎಂ ಸ್ಟಾರ್ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಪ್ರಾರಂಭಿಸಿತು. ಇಲ್ಲಿಯವರೆಗೆ, 13 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಟಿ-ಟಿಇಪಿ ಮೂಲಕ ತರಬೇತಿ ಪಡೆದಿದ್ದಾರೆ. 70% ಕ್ಕೂ ಹೆಚ್ಚು ಜನರು ದೇಶಾದ್ಯಂತ ವಿವಿಧ ಆಟೋಮೊಬೈಲ್ ಕಂಪನಿಗಳು ಮತ್ತು ಅವುಗಳ ಡೀಲರ್‌ಶಿಪ್‌ಗಳಲ್ಲಿ ಉದ್ಯೋಗವನ್ನು ಪಡೆದಿದ್ದಾರೆ ಎಂದು ತಿಳಿಸಿದೆ.

ಇದನ್ನೂ ಓದಿ: World Blood Donors Day: ವಿಶ್ವ ರಕ್ತದಾನಿಗಳ ದಿನ; ಜಾಗೃತಿ ಜಾಥಾಕ್ಕೆ ದಿನೇಶ್ ಗುಂಡೂರಾವ್‌ ಚಾಲನೆ

ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಉತ್ತರ ಪ್ರದೇಶ ಸರ್ಕಾರದ ವಿಧಾನ ಪರಿಷತ್ ಸದಸ್ಯ ಡಿ.ಸಿ. ವರ್ಮಾ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಉದ್ಯೋಗ ಮಾರುಕಟ್ಟೆಯಲ್ಲಿ ಅಭಿವೃದ್ಧಿ ಹೊಂದಲು ಅಗತ್ಯವಾದ ಕೌಶಲ್ಯಗಳೊಂದಿಗೆ ನಮ್ಮ ಯುವಕರನ್ನು ಸಬಲೀಕರಣಗೊಳಿಸುವ ಟಿಕೆಎಂನ ಬದ್ಧತೆಯನ್ನು ನಾವು ಶ್ಲಾಘಿಸುತ್ತೇವೆ. ಟೊಯೊಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮ (ಟಿ-ಟಿಇಪಿ) ನಂತಹ ಉಪಕ್ರಮಗಳು ಉದ್ಯೋಗಾರ್ಹತೆಯನ್ನು ಹೆಚ್ಚಿಸುವ ಮತ್ತು ಈ ಪ್ರದೇಶದಲ್ಲಿ ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುವ ನಮ್ಮ ಧ್ಯೇಯದೊಂದಿಗೆ ಸಂಪೂರ್ಣವಾಗಿ ಹೊಂದಿಕೆಯಾಗಿವೆ. ವಿಶೇಷವಾಗಿ ಗ್ರಾಮೀಣ ಮತ್ತು ಆರ್ಥಿಕವಾಗಿ ಸವಾಲಿನ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಪ್ರಯೋಜನವನ್ನು ನೀಡುತ್ತದೆ. ಟಿ-ಟಿಇಪಿ ಮತ್ತು ಸ್ಟಾರ್ ವಿದ್ಯಾರ್ಥಿವೇತನ ಬೆಂಬಲವು ವಿದ್ಯಾರ್ಥಿಗಳಿಗೆ ಟೊಯೊಟಾದ ಮೌಲ್ಯಗಳು, ಉತ್ತಮ ಅಭ್ಯಾಸಗಳು ಮತ್ತು ಸುಧಾರಿತ ತಂತ್ರಜ್ಞಾನಗಳ ಬಗ್ಗೆ ಅಮೂಲ್ಯವಾದ ಒಳನೋಟಗಳನ್ನು ನೀಡುತ್ತದೆ.

ಆ ಮೂಲಕ ಅವರ ಒಟ್ಟಾರೆ ಕೌಶಲ್ಯ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ. ಹೆಚ್ಚುವರಿಯಾಗಿ ಟೊಯೊಟಾದಂತಹ ಉದ್ಯಮ ಪಾಲುದಾರರ ಸಹಯೋಗದ ಪ್ರಯತ್ನಗಳು ಉತ್ತರ ಪ್ರದೇಶದ ವಿದ್ಯಾರ್ಥಿಗಳಲ್ಲಿ ವಿಶ್ವದರ್ಜೆಯ ಕಾರ್ಯಪಡೆಯ ಲಭ್ಯತೆಯನ್ನು ಹೆಚ್ಚಿಸುತ್ತದೆ, ಅವರ ವೃತ್ತಿಜೀವನದ ಆಕಾಂಕ್ಷೆಗಳನ್ನು ಸಾಧಿಸಲು ಸಹಾಯ ಮಾಡುತ್ತದೆ. ವಾಹನ ಕ್ಷೇತ್ರದ ಬೆಳವಣಿಗೆಗೆ ಕೊಡುಗೆ ನೀಡುತ್ತದೆ ಎಂದು ತಿಳಿಸಿದ್ದಾರೆ.

ಈ ವೇಳೆ ಕಾರ್ಪೊರೇಟ್ ವ್ಯವಹಾರ ಮತ್ತು ಆಡಳಿತದ ಕಂಟ್ರಿ ಹೆಡ್ ಮತ್ತು ಕಾರ್ಯನಿರ್ವಾಹಕ ಉಪಾಧ್ಯಕ್ಷ ವಿಕ್ರಮ್ ಗುಲಾಟಿ ಮಾತನಾಡಿ, ಟಿಕೆಎಂನಲ್ಲಿ ಯುವ ಪ್ರತಿಭೆಗಳಿಗೆ ಸುಧಾರಿತ ತಾಂತ್ರಿಕ ಕೌಶಲ್ಯ ಮತ್ತು ಜ್ಞಾನವನ್ನು ಪಡೆಯಲು ಅವಕಾಶಗಳನ್ನು ಸೃಷ್ಟಿಸುವಲ್ಲಿ ತಾಂತ್ರಿಕ ತರಬೇತಿಯ ಪರಿವರ್ತಕ ಶಕ್ತಿಯನ್ನು ನಾವು ಗುರುತಿಸುತ್ತೇವೆ. ನಮ್ಮ ಟಿ-ಟಿಇಪಿ ಸೌಕರ್ಯ ಮತ್ತು ಸ್ಟಾರ್ ಕಾರ್ಯಕ್ರಮವು ಆಟೋಮೋಟಿವ್ ಉದ್ಯಮಕ್ಕೆ ನುರಿತ ಕಾರ್ಯಪಡೆಯನ್ನು ಬೆಳೆಸುವ ನಮ್ಮ ಬದ್ಧತೆಗೆ ಉದಾಹರಣೆಯಾಗಿದೆ. ಅದೇ ಸಮಯದಲ್ಲಿ ವಿಶಾಲವಾದ ‘ಸ್ಕಿಲ್ ಇಂಡಿಯಾ’ ಮಿಷನ್ ಅನ್ನು ಬೆಂಬಲಿಸುತ್ತದೆ, ಅಂತಿಮವಾಗಿ ನಮ್ಮ ಸಮುದಾಯಗಳಲ್ಲಿ ಸಕಾರಾತ್ಮಕ ಬದಲಾವಣೆಗೆ ಕಾರಣವಾಗುತ್ತದೆ.

ಟಿ-ಟಿಇಪಿ ಉಪಕ್ರಮದ ಭಾಗವಾಗಿರುವ ಸ್ಟಾರ್ ಕಾರ್ಯಕ್ರಮವು ಅರ್ಹ ವಿದ್ಯಾರ್ಥಿಗಳನ್ನು, ವಿಶೇಷವಾಗಿ ಆರ್ಥಿಕವಾಗಿ ಸವಾಲಿನ ಹಿನ್ನೆಲೆಯಿಂದ ಬಂದವರನ್ನು ವಿದ್ಯಾರ್ಥಿವೇತನವನ್ನು ಒದಗಿಸುವ ಮೂಲಕ ಮತ್ತು ಆಟೋಮೋಟಿವ್ ಕ್ಷೇತ್ರದಲ್ಲಿ ಯಶಸ್ವಿ ವೃತ್ತಿಜೀವನಕ್ಕಾಗಿ ಅಗತ್ಯ ಕೌಶಲ್ಯಗಳು ಮತ್ತು ಜ್ಞಾನದೊಂದಿಗೆ ಸಜ್ಜುಗೊಳಿಸುವ ಮೂಲಕ ಸಬಲೀಕರಣಗೊಳಿಸಲು ವಿನ್ಯಾಸಗೊಳಿಸಲಾಗಿದೆ. ಪ್ರತಿಭೆಗಳನ್ನು ಪೋಷಿಸಲು, ವಿದ್ಯಾರ್ಥಿಗಳು ತಮ್ಮ ಪೂರ್ಣ ಸಾಮರ್ಥ್ಯವನ್ನು ತಲುಪಲು ಮತ್ತು ವಾಹನ ಉದ್ಯಮ ಮತ್ತು ನಮ್ಮ ರಾಷ್ಟ್ರದ ಬೆಳವಣಿಗೆಗೆ ಕೊಡುಗೆ ನೀಡಲು ನಾವು ಸಮರ್ಪಿತರಾಗಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: RBI Penalty: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ 1.45 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ; ಕಾರಣ ಏನು?

ಕಾರ್ಯಕ್ರಮದಲಲ್ಲಿ ಬರೇಲಿಯ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ನರೇಂದ್ರ ಕುಮಾರ್, ವಾಣಿಜ್ಯ ಟೊಯೊಟಾದ ನಿರ್ದೇಶಕ ಶಿವಂ ಗುಪ್ತಾ ಮಾತನಾಡಿದರು.

Continue Reading

ಕರ್ನಾಟಕ

Bengaluru News: ಬೆಂಕಿ ನಂದಿಸುವ ‘ವಿಶಿಷ್ಟ ಡ್ರೋನ್‌’; ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಆವಿಷ್ಕಾರ!

Bengaluru News: ಬೆಂಗಳೂರಿನ ಗೋಪಾಲನ್ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಆಯೋಜಿಸಿದ್ದ 2 ದಿನಗಳ ಗ್ರೋಯಿಂಗ್ ಎಲೆಕ್ಟ್ರಾನಿಕ್ಸ್ ಟೆಕ್ನಾಲಜಿ ಓರಿಯೆಂಟೆಡ್ ಕಾಂಗ್ರೆಗೇಷನ್ ಸ್ಟೇಜ್ (GETOCS 4.0) ದಲ್ಲಿ ವಿದ್ಯಾರ್ಥಿಗಳು ಬೆಂಕಿ ನಂದಿಸುವ ಬಾಲ್‌ಗಳನ್ನು ಹೊಂದಿದ ಡ್ರೋನ್‌ಗಳನ್ನು ಬಳಸಿ ಅದ್ಭುತ ಮಾದರಿಯನ್ನು ಪ್ರದರ್ಶಿಸಿದರು.

VISTARANEWS.COM


on

engineering students have invented a unique fire extinguisher drone at bengaluru
Koo

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ವಿಶ್ವದೆಲ್ಲೆಡೆ ಅಗ್ನಿ ಅವಘಡಗಳು ಸಂಭವಿಸುತ್ತಲೇ ಇವೆ. ತಕ್ಷಣವೇ ಪರಿಹಾರ ಕಾರ್ಯ ಕೈಗೊಳ್ಳಲಾಗದ ಅದೆಷ್ಟೋ ಸಂದರ್ಭಗಳಲ್ಲಿ ಪ್ರಾಣ ನಷ್ಟ ಕೂಡ ಸಂಭವಿಸುತ್ತಿವೆ. ಹಲವು ಸಂದರ್ಭಗಳಲ್ಲಿ ಬೆಂಕಿ ನಂದಿಸುವ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ತಲುಪುವುದು ಕಷ್ಟವಾಗುತ್ತದೆ. ಹಾಗೆಯೇ ಅತೀ ಎತ್ತರದ ಕಟ್ಟಡಗಳಿಗೆ ಅಂಟಿಕೊಂಡ ಬೆಂಕಿಯನ್ನು ನಂದಿಸುವುದು ಸವಾಲಾಗಿಯೇ ಪರಿಣಮಿಸುತ್ತದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಗೋಪಾಲನ್‌ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌‌ ಮತ್ತು ಮ್ಯಾನೇಜ್‌ಮೆಂಟ್ ವಿದ್ಯಾರ್ಥಿಗಳು ವಿಶಿಷ್ಟ ಡ್ರೋನ್‌ ಆವಿಷ್ಕರಿಸಿದ್ದು, ಆ ಮೂಲಕ ಯಶಸ್ವಿಯಾಗಿ ಬೆಂಕಿ (Bengaluru News) ನಂದಿಸಬಹುದಾಗಿದೆ.

ನಗರದಲ್ಲಿ ಗೋಪಾಲನ್ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಆಯೋಜಿಸಿದ್ದ ಎರಡು ದಿನಗಳ ಗ್ರೋಯಿಂಗ್ ಎಲೆಕ್ಟ್ರಾನಿಕ್ಸ್ ಟೆಕ್ನಾಲಜಿ ಓರಿಯೆಂಟೆಡ್ ಕಾಂಗ್ರೆಗೇಷನ್ ಸ್ಟೇಜ್ (GETOCS 4.0) ದಲ್ಲಿ ವಿದ್ಯಾರ್ಥಿಗಳು ಬೆಂಕಿ ನಂದಿಸುವ ಬಾಲ್‌ಗಳನ್ನು ಹೊಂದಿದ ಡ್ರೋನ್‌ಗಳನ್ನು ಬಳಸಿ ಅದ್ಭುತ ಮಾದರಿಯನ್ನು ಪ್ರದರ್ಶಿಸಿದರು.

ಈ ವಿನೂತನ ಮಾದರಿಯು ತೀವ್ರವಾದ ಬೆಂಕಿಯನ್ನು ತ್ವರಿತವಾಗಿ ನಂದಿಸುವಲ್ಲಿ ಸಫಲವಾಗುತ್ತದೆ. ಇದರಿಂದಾಗಿ ಜೀವಗಳನ್ನು ರಕ್ಷಿಸುವುದರ ಜತೆಗೆ ಕಟ್ಟಡಗಳಿಗೆ ಆಗುವ ಹಾನಿಯನ್ನು ಕೂಡಾ ತಡೆಯುತ್ತದೆ ಮತ್ತು ಪರಿಸರವನ್ನು ರಕ್ಷಿಸುತ್ತದೆ. ಈ ಡ್ರೋನ್‌ಗಳ ಕ್ಷಿಪ್ರ ನಿಯೋಜನೆಯಿಂದ ಹತ್ತಿರದ ಪ್ರದೇಶಗಳಿಗೆ ಬೆಂಕಿ ಹರಡುವುದನ್ನು ತಪ್ಪಿಸಬಹುದಾಗಿದೆ. ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾದ ಮಾದರಿಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಮೂಲಕ ವಿಶಾಲ ಪ್ರದೇಶವನ್ನು ಕವರ್‌ ಮಾಡಬಹುದಾಗಿದೆ. ಪ್ರದರ್ಶಿಸಲಾದ ಈ ಮಾದರಿಯನ್ನು ನೋಡಿದ ತಜ್ಞರು, ನಾವು ನೋಡಿದ ಅತ್ಯುತ್ತಮ ಪ್ರಾತ್ಯಕ್ಷಿಕೆ ಇದಾಗಿದೆ ಎಂದು ವಿದ್ಯಾರ್ಥಿಗಳ ಈ ಅನ್ವೇಷಣೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಜೂ.15ರಂದು ʼನಾರಿ ಸಮ್ಮಾನ್‌ʼ ಪ್ರಶಸ್ತಿ ಪ್ರದಾನ

ಎಲ್‌ಆರ್‌ಡಿಇ, ಡಿಆರ್‌ಡಿಒ ನಿವೃತ್ತ ಹೆಚ್ಚುವರಿ ನಿರ್ದೇಶಕ ಪ್ರೊ. ಹರ್ಜಿಂದರ್ ಸಿಂಗ್ ಭಾಟಿಯಾ ಅವರು ಉತ್ಸವವನ್ನು ಉದ್ಘಾಟಿಸಿ ಮಾತನಾಡಿ, ಶೈಕ್ಷಣಿಕ ಅನ್ವೇಷಣೆಗಳ ಹೊರತಾಗಿ, ಎಲೆಕ್ಟ್ರಾನಿಕ್ಸ್ ಹಾರ್ಡ್‌ವೇರ್ ಯೋಜನೆಗಳು ಪ್ರಸ್ತುತ ಸಮಾಜದ ಅಗತ್ಯ ಮತ್ತು ಸವಾಲುಗಳನ್ನು ಪ್ರತಿನಿಧಿಸುವಂತಾಗಬೇಕು. ಇವುಗಳು ಕಡಿಮೆ ವೆಚ್ಚದ ವೈದ್ಯಕೀಯ ಸಾಧನಗಳನ್ನು ಅಭಿವೃದ್ಧಿಪಡಿಸುವುದಾಗಲಿ, ಪರಿಸರ ಮೇಲ್ವಿಚಾರಣಾ ವ್ಯವಸ್ಥೆಗಳನ್ನು ಹೆಚ್ಚಿಸುವುದಾಗಲಿ ಅಥವಾ ಗ್ರಾಹಕ ಬಳಕೆಯ ವಿನೂತನ ಎಲೆಕ್ಟ್ರಾನಿಕ್ಸ್ ಉಪಕರಣ ಅನ್ವೇಷಿಸುವುದಾಗಿರಲಿ, ಈ ಯೋಜನೆಗಳು ನಮ್ಮ ಸುತ್ತಲಿನ ಜನರ ಜೀವನದ ಮೇಲೆ ಅರ್ಥಪೂರ್ಣ ಪರಿಣಾಮವನ್ನು ಬೀರುವ ಸಾಮರ್ಥ್ಯವನ್ನು ಹೊಂದಿರಬೇಕು.

ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್ ಎಂಜಿನಿಯರ್‌ ಸಂಸ್ಥೆಯಲ್ಲಿ (IETE) ಸದಸ್ಯತ್ವ ಪಡೆಯುವುದರಿಂದ, ISRO, DRDO, LRDE ಮತ್ತು ಇತರ ಸಂಸ್ಥೆಗಳ ವಿವಿಧ ಉಚಿತ ಕೋರ್ಸ್‌ಗಳ ಪ್ರಯೋಜನ ಪಡೆಯಬಹುದಾಗಿದೆ. ಮುಂಬರುವ ವರ್ಷಗಳಲ್ಲಿ ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಅದ್ಭುತ ಭವಿಷ್ಯ ಅಡಗಿದೆ ಎಂಬುದನ್ನು ಒತ್ತಿ ಹೇಳುತ್ತೇನೆ ಎಂದು ತಿಳಿಸಿದರು.

GETOCS 4.0, ಗೋಪಾಲನ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ (EC) ವಿಭಾಗವು ನಡೆಸಿದ ಕಾರ್ಯಕ್ರಮವಾಗಿದ್ದು, ದಾಖಲಾತಿಗಳ ಪ್ರಸ್ತುತಿ, ರೊಬೊಟಿಕ್ ಸ್ಪರ್ಧೆಗಳು, ಸರ್ಕ್ಯೂಟ್ ಡೀಬಗ್ ಮಾಡುವುದು, ಪ್ರಾಜೆಕ್ಟ್ ಪ್ರದರ್ಶನಗಳು, ತಾಂತ್ರಿಕ ರಸಪ್ರಶ್ನೆ ಮತ್ತು ಚರ್ಚೆಗಳಂತಹ ವಿವಿಧ ಚಟುವಟಿಕೆಗಳ ಮೂಲಕ ಭಾಗವಹಿಸುವವರು ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ಅವಕಾಶವನ್ನು ಒದಗಿಸಿತ್ತು.

ಇದನ್ನೂ ಓದಿ: World Blood Donors Day: ವಿಶ್ವ ರಕ್ತದಾನಿಗಳ ದಿನ; ಜಾಗೃತಿ ಜಾಥಾಕ್ಕೆ ದಿನೇಶ್ ಗುಂಡೂರಾವ್‌ ಚಾಲನೆ

ಗುರುವಾರ ಮುಕ್ತಾಯಗೊಂಡ ಈ ವಾರ್ಷಿಕ ಎರಡು ದಿನಗಳ ಕಾರ್ಯಕ್ರಮವು ಯಾವುದೇ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸಿ ಕೊಟ್ಟಿತ್ತು. GETOCS 4.0ನ ಪ್ರಾಥಮಿಕ ಕಾರ್ಯಸೂಚಿಯು ವಿದ್ಯಾರ್ಥಿಗಳ ಬೆಳವಣಿಗೆ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಉತ್ತೇಜಿಸುವುದು, ಸಾಮಾಜಿಕ ಆರೋಗ್ಯವನ್ನು ಹೆಚ್ಚಿಸುವುದು ಮತ್ತು ಹೆಚ್ಚಿನ ಸಂಶೋಧನೆ-ಆಧಾರಿತ ಯೋಜನೆಗಳನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ.

ಗೋಪಾಲನ್ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಡಾ. ಸಿ. ಪ್ರಭಾಕರ್ ಮಾತನಾಡಿ, ನಮ್ಮ ವಿದ್ಯಾರ್ಥಿಗಳು ಕೈಗಾರಿಕೆಗಳಿಗೆ ಪ್ರಯೋಜನಕಾರಿಯಾದ ನವೀನ ಯೋಜನೆಗಳನ್ನು ಅಭಿವೃದ್ಧಿಪಡಿಸಿದ್ದಾರೆ. ನಾವು ಗುಣಮಟ್ಟದ ಯೋಜನೆಗಳತ್ತ ಗಮನಹರಿಸುತ್ತಿದ್ದೇವೆ ಮತ್ತು ರಾಷ್ಟ್ರಕ್ಕೆ ನೆರವಾಗುವಂತಹ ಯೋಜನೆಗಳಿಗೆ ಆರ್ಥಿಕ ಸಹಾಯ ಮಾಡುತ್ತಿದ್ದೇವೆ. ಹೆಚ್ಚುವರಿಯಾಗಿ, ನಾವು 30 ಲಕ್ಷ ರೂ.ದೊಂದಿಗೆ ಗೋಪಾಲನ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನಲ್ಲಿ ಇಂಟೆಲ್ ಪ್ರಯೋಗಾಲಯವನ್ನು ಸ್ಥಾಪಿಸುತ್ತಿದ್ದೇವೆ. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸಾಧನೆಗಳ ಜತೆಗೆ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವುದು ಕೂಡಾ ನಿರ್ಣಾಯಕವಾಗಿದೆ ಎಂದು ಅವರು ಹೇಳಿದರು.

ಗೋಪಾಲನ್ ಇನ್‌ಸ್ಟಿಟ್ಯೂಷನ್ಸ್ ಸಿಇಒ ಡಾ. ಭಾಸ್ಕರ್ ರೆಡ್ಡಿ ಸಿ.ಎಂ. ಮಾತನಾಡಿ, ” GETOCS.4.0 ಕಾರ್ಯಕ್ರಮವನ್ನು ಇಸಿಇ ವಿಭಾಗವು ಆಯೋಜಿಸಿದ್ದಕ್ಕಾಗಿ ನಾನು ಅಭಿನಂದಿಸುತ್ತೇನೆ. ಈ ರೀತಿಯ ಕಾರ್ಯಕ್ರಮವು ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಜ್ಞಾನವನ್ನು ಒರೆಗೆ ಹಚ್ಚುತ್ತದೆ ಎಂದರು.

ಗೋಪಾಲನ್ ಕಾಲೇಜ್ ಆಫ್ ಎಂಜಿನಿಯರಿಂಗ್‌‌ ಮತ್ತು ಮ್ಯಾನೇಜ್‌ ಮೆಂಟ್‌ನ ಪ್ರಾಂಶುಪಾಲ ಡಾ. ಅರುಣ್ ವಿಕಾಸ್ ಸಿಂಗ್ ಮಾತನಾಡಿ, ಪ್ರತಿಷ್ಠಿತ ಕಂಪನಿಗಳಲ್ಲಿ ವಿದ್ಯಾರ್ಥಿಗಳ ಉದ್ಯೋಗಾವಕಾಶವನ್ನು ಹೆಚ್ಚಿಸಲು ನಿಯಮಿತ ಶೈಕ್ಷಣಿಕ ತರಗತಿಗಳ ಜತೆಗೆ ಹೆಚ್ಚುವರಿ ಕೌಶಲ್ಯಗಳನ್ನು ಪಡೆದುಕೊಳ್ಳುವ ಪ್ರಾಮುಖ್ಯತೆಯನ್ನು ಮನವರಿಕೆ ಮಾಡಿಕೊಟ್ಟರು. ನಾವು ವಿದ್ಯಾರ್ಥಿಗಳಿಗೆ ಉದ್ಯಮಶೀಲತೆಯ ಕೌಶಲ್ಯದ ಬಗ್ಗೆ ತರಬೇತಿ ನೀಡುತ್ತೇವೆ, ಇದರಿಂದ ಅವರು ಉದ್ಯೋಗಿಗಳಾಗದೆ ಉದ್ಯೋಗದಾತರಾಗಬಹುದು ಎಂದು ಹೇಳಿದರು.

ಇದನ್ನೂ ಓದಿ: Tata Motors: ಪಂಚ್. ಇವಿ, ನೆಕ್ಸಾನ್.ಇವಿಗೆ ಭಾರತ್-ಎನ್‌ಸಿಎಪಿಯಿಂದ 5 ಸ್ಟಾರ್ ರೇಟಿಂಗ್

ಕಾರ್ಯಕ್ರಮದಲ್ಲಿ ಗೋಪಾಲನ್ ಆರ್ಗ್ಯಾನಿಕ್ಸ್ ನ ನಿರ್ದೇಶಕಿ ಸುನೀತಾ ಪ್ರಭಾಕರ್‌, ಎಸ್. ಅನಂತ ಪದ್ಮನಾಭಂ, ಇಸಿಇ ವಿಭಾಗದ ಮುಖ್ಯಸ್ಥ ಡಾ. ಕೃಷ್ಣ ಕುಮಾರ್, ಕಾರ್ಯಕ್ರಮ ಸಂಘಟನಾ ಸಮಿತಿಯ ಮುಖ್ಯಸ್ಥ ಡಾ. ಕೆ.ಸುರೇಶ್, ಉಜಿರೆಯ ಧರ್ಮಸ್ಥಳ ಎಂಜಿನಿಯರಿಂಗ್ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ. ಮಧುಸೂದನ್, ಬಿಎಂಎಸ್ ಪ್ರಾಧ್ಯಾಪಕ ಡಾ. ಪುರುಷೋತ್ತಮ್, ಏರೋನಾಟಿಕ್ಸ್ ವಿಭಾಗದ ಮುಖ್ಯಸ್ಥ ಡಾ.ಕೆ. ನಟರಾಜನ್, ಗೋಪಾಲನ್ ಕಾಲೇಜ್ ಆಫ್ ಎಂಜಿನಿಯರಿಂಗ್‌ ಮತ್ತು ಮ್ಯಾನೇಜ್ಮೆಂಟ್‌ನ ಪ್ರಧಾನ ವಿಜ್ಞಾನಿ ಮತ್ತು ಇಸಿಇ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ. ಸುರೇಶ್ ಹಾಗೂ ಇತರರು ಉಪಸ್ಥಿತರಿದ್ದರು.

Continue Reading
Advertisement
Jagan Mohan Reddy
ದೇಶ44 mins ago

Jagan Mohan Reddy: ಬರೀ ಎಗ್‌ ಪಫ್ಸ್‌ಗಾಗಿ ಒಂದಲ್ಲ.. ಎರಡಲ್ಲ ಬರೋಬ್ಬರಿ 3.6 ಕೋಟಿ ರೂ. ವೆಚ್ಚ- ಜಗನ್‌ ಮತ್ತೊಂದು ಹಗರಣ ಬಯಲು

Census
ದೇಶ1 hour ago

Census: ಮುಂದಿನ ತಿಂಗಳಿಂದ ಜನಗಣತಿ ಆರಂಭ ಸಾಧ್ಯತೆ; ಮೋದಿ ಸರ್ಕಾರದಿಂದ ಮಹತ್ವದ ನಿರ್ಧಾರ

Air store Released
ದೇಶ2 hours ago

Air store released: ಪೋಖ್ರಾನ್‌ ಬಳಿ ತಪ್ಪಿದ ಭಾರೀ ಅವಘಡ; ಏಕಾಏಕಿ ಏರ್‌ಸ್ಟೋರ್‌ ರಿಲೀಸ್‌ ಮಾಡಿದ ಯುದ್ಧ ವಿಮಾನ

Indian hockey team
ಕ್ರೀಡೆ2 hours ago

Indian hockey team: ಭುವನೇಶ್ವರದಲ್ಲಿ ಭಾರತೀಯ ಹಾಕಿ ತಂಡದಿಂದ ರೋಡ್ ಶೋ

Fetus In Baby
ವಿಜ್ಞಾನ3 hours ago

Fetus In Baby: ಏಳು ತಿಂಗಳ ಮಗುವಿನ ಹೊಟ್ಟೆಯಲ್ಲಿ ಭ್ರೂಣ ಪತ್ತೆ!

CEAT Cricket Awards
ಕ್ರೀಡೆ3 hours ago

CEAT Cricket Awards: ವರ್ಷದ ಅತ್ಯುತ್ತಮ ಏಕದಿನ ಬ್ಯಾಟರ್​ ಪ್ರಶಸ್ತಿ ಗೆದ್ದ ವಿರಾಟ್​ ಕೊಹ್ಲಿ

Pharma Company Blast
ದೇಶ3 hours ago

Pharma Company Blast: ಫಾರ್ಮಾ ಕಂಪನಿಯಲ್ಲಿ ಭಾರೀ ಬ್ಲಾಸ್ಟ್‌- 17ಮಂದಿ ಬಲಿ; ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಭೀತಿ

Starbucks CEO
ವಿದೇಶ3 hours ago

Starbucks CEO: ಸಿಕ್ರೆ ಇಂಥಾ ಕೆಲ್ಸ ಸಿಗ್ಬೇಕಪ್ಪಾ! 1600 ಕಿ.ಮೀ ದೂರ ಆಫೀಸ್‌..ದಿನಾ ಓಡಾಡೋಕೆ ಕಂಪನಿ ಜೆಟ್‌! ಈತ ಪುಣ್ಯವಂತನೇ ಸರಿ

Viral News
ಕ್ರಿಕೆಟ್4 hours ago

Viral News: ಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಟಿ20 ವಿಶ್ವಕಪ್​ ಟ್ರೋಫಿಗೆ ಪೂಜೆ ಸಲ್ಲಿಸಿದ ರೋಹಿತ್​ ಶರ್ಮ, ಜಯ್​ ಶಾ

ಕರ್ನಾಟಕ4 hours ago

Almatti Dam: ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌