Black Hole | ಕ್ಷಣಕ್ಕೊಂದು ಭೂಮಿ ನುಂಗುವ ಸಾಮರ್ಥ್ಯದ ಬೃಹತ್‌ ಕಪ್ಪು ರಂಧ್ರ ಪತ್ತೆ - Vistara News

ಪ್ರಮುಖ ಸುದ್ದಿ

Black Hole | ಕ್ಷಣಕ್ಕೊಂದು ಭೂಮಿ ನುಂಗುವ ಸಾಮರ್ಥ್ಯದ ಬೃಹತ್‌ ಕಪ್ಪು ರಂಧ್ರ ಪತ್ತೆ

ಆಸ್ಟ್ರೇಲಿಯಾದ ಖಗೋಳಶಾಸ್ತ್ರಜ್ಞರು ಬಾಹ್ಯಾಕಾಶದಲ್ಲಿ ಅತಿ ವೇಗದಲ್ಲಿ ಬೆಳೆಯುತ್ತಿರುವ Black hole ಪತ್ತೆ ಮಾಡಿದ್ದಾರೆ. ಇದು ಭೂಮಿಯ ಗಾತ್ರದ ಕಾಯವನ್ನು ಒಂದು ಕ್ಷಣದಲ್ಲಿ ಮಂಗಮಾಯ ಮಾಡಬಲ್ಲುದಂತೆ!

VISTARANEWS.COM


on

Black Hole
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಬಾಹ್ಯಾಕಾಶದಲ್ಲಿ ಅತಿ ವೇಗದಲ್ಲಿ ಬೆಳೆಯುತ್ತಿರುವ ʼಕಪ್ಪುರಂಧ್ರʼ (Black Hole) ಪತ್ತೆಯಾಗಿದೆ. ಆಸ್ಟ್ರೇಲಿಯಾ ರಾಷ್ಟ್ರೀಯ ವಿಶ್ವವಿದ್ಯಾಲಯದ ವಿಜ್ಞಾನಿಗಳು ಈ ಅನ್ವೇಷಣೆ ಮಾಡಿದ್ದಾರೆ.

ಅತಿ ವೇಗದಲ್ಲಿ ಬೆಳೆಯುತ್ತಿರುವ ಕಪ್ಪುರಂಧ್ರವನ್ನು ಕಂಡು ವಿಜ್ಞಾನಿಗಳು ಆಶ್ಚರ್ಯಪಟ್ಟಿದ್ದಾರೆ. ʼಇದು ಸಂಪೂರ್ಣ ಅನಿರೀಕ್ಷಿತʼ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಈ ಕಪ್ಪುರಂಧ್ರ ಯಾವ ಪ್ರಮಾಣದಲ್ಲಿ ಬೆಳೆಯುತ್ತಿದೆ ಎಂದರೆ ಭೂಮಿಯ ಗಾತ್ರಕ್ಕೆ ಸಮನಾದ ವಸ್ತುವನ್ನು ಒಂದು ಕ್ಷಣದಲ್ಲಿ ನುಂಗಿಹಾಕಬಹುದು.

ಆಸ್ಟ್ರೇಲಿಯಾ ರಾಷ್ಟ್ರೀಯ ವಿಶ್ವವಿದ್ಯಾಲಯದ ಖಗೋಳಶಾಸ್ತ್ರಜ್ಞರು ಬಾಹ್ಯಾಕಾಶದಲ್ಲಿ ಅವಳಿ ನಕ್ಷತ್ರದ ಹುಡುಕಾಟ ನಡೆಸುತ್ತಿದ್ದರು. ಈ ವೇಳೆ ಕಪ್ಪುರಂಧ್ರದ ಅನ್ವೇಷಣೆ ನಡೆದಿದೆ. ಸಂಸ್ಥೆಯ ಮುಖ್ಯ ಸಂಶೋಧನಾಕಾರರಾದ ಡಾ. ಕ್ರಿಸ್ಟಫರ್‌ ಒಂಕೆನ್‌ ಈ ಬಗ್ಗೆ ಮಾತನಾಡಿ ʼʼಈ ರೀತಿಯ ವಿಸ್ಮಯಕ್ಕಾಗಿ ಕಳೆದ 50 ವರ್ಷಗಳಿಂದ ಹುಡುಕಾಟ ನಡೆದಿತ್ತು. ಆದರೆ ಈ ರೀತಿಯ ಪ್ರಕಾಶಮಾನವಾದ ಕಪ್ಪುರಂಧ್ರ ಈವರೆಗೆ ನಮ್ಮ ಗಮನದಿಂದ ದೂರವಿತ್ತುʼʼ ಎಂದು ತಿಳಿಸಿದರು.

ಏನಿದು ಕಪ್ಪುರಂಧ್ರ?

ಎರಡು ಗೆಲೆಕ್ಸಿಗಳು ಒಂದೊಕ್ಕೊಂದು ಡಿಕ್ಕಿ ಹೊಡೆದಾಗ ಉಂಟಾಗುವ ಫಲಿತಾಂಶವನ್ನು ಕಪ್ಪುರಂಧ್ರ ಎನ್ನಲಾಗುತ್ತದೆ. ಇದು ಒಂದು ನಕ್ಷತ್ರದ ಅಂತಿಮ ಸ್ಥಿತಿಯಾಗಿದೆ. ಒಂದು ನಕ್ಷತ್ರ ಮರಣ ಹೊಂದಿದಾಗ ಕೆಲವು ಅವಶೇಷಗಳು ಉಳಿಯುತ್ತವೆ. ಅವುಗಳಿಂದ ಉಂಟಾಗುವ ಪ್ರದೇಶವೇ ಕಪ್ಪುರಂಧ್ರ ಎಂದು ಗುರುತಿಸಲಾಗಿದೆ. ಈ ಕಪ್ಪುರಂಧ್ರದಲ್ಲಿ ಗುರುತ್ವ ಕ್ಷೇತ್ರಗಳು ಅತ್ಯಂತ ಪ್ರಬಲವಾಗಿರುತ್ತದೆ. ಇದರ ಗುರುತ್ವ ಶಕ್ತಿ ಊಹೆಗೂ ನಿಲುಕದ್ದು! ಈ ಗುರುತ್ವ ಶಕ್ತಿಯಿಂದ ಬೆಳಕು ಕೂಡ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅಷ್ಟು ಅತ್ಯುಚ್ಛವಾದ ಸಾಂದ್ರತೆ ಹೊಂದಿರುತ್ತದೆ.

ಈ ಕಪ್ಪುರಂಧ್ರದ ಗಾತ್ರ ಎಷ್ಟು?

ಹೊಸತಾಗಿ ಅನ್ವೇಷಣೆಯಾದ ಕಪ್ಪುರಂಧ್ರವು 14.5 ಪರಿಮಾಣ ಹೊಂದಿರುವುದಾಗಿ ಈ ಸದ್ಯ ತಿಳಿದು ಬಂದಿದೆ. ಅಂದರೆ ಇದು ಪ್ರಸ್ತುತ ನಮ್ಮ ಗೆಲೆಕ್ಸಿಯಲ್ಲಿ ಕಂಡುಬಂದ ಕಪ್ಪುರಂಧ್ರದ 500 ಪ್ರಮಾಣ ಅಧಿಕವಾಗಿದೆ. ನಮ್ಮ ಸೌರ ಮಂಡಲದ ಎಲ್ಲಾ ಗ್ರಹಗಳ ಕಕ್ಷೆಗಳು ಈ ಕಪ್ಪುರಂಧ್ರದ ಕೇವಲ ಒಂದು ಸಣ್ಣ ಭಾಗದಲ್ಲಿ ಹಿಡಿಯುತ್ತದೆ.
ಇದು ಎಷ್ಟು ಪ್ರಕಾಶಮಾನವಾಗಿದೆ ಎಂದರೆ ನಮ್ಮ ಗೆಲೆಕ್ಸಿಯ ಬೆಳಕಿಗಿಂತಲೂ 7,000 ಪಟ್ಟು ಅಧಿಕ ಪ್ರಮಾಣದಲ್ಲಿ ಹೊಳೆಯುತ್ತದೆ.

ಈ ಅನ್ವೇಷಣೆಯಲ್ಲಿ ಕಂಡುಬಂದ ಸಂಪೂರ್ಣ ವಿವರಗಳ ವರದಿಯನ್ನು ಆಸ್ಟ್ರೇಲಿಯಾದ ಆಸ್ಟ್ರೊನಾಮಿಕಲ್‌ ಸಂಸ್ಥೆಯಲ್ಲಿ ಪ್ರಕಟಿಸಲಾಗಿದೆ.

ಇದನ್ನೂ ಓದಿ: ನಾಲ್ಕು ಸಾವಿರ ವರ್ಷದ ಹಿಂದಿನ ತಾಮ್ರಯುಗದ ಮಹಿಳೆ ಬಿಂಬದ ಮರುಸೃಷ್ಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಕೋರ್ಟ್‌ನಲ್ಲಿದೆ 41 ಹುದ್ದೆ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ

Job Alert: ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ರಾಜ್ಯದಲ್ಲೇ ಕೆಲಸ ನಿರ್ವಹಿಸಬೇಕು ಎನ್ನುವ ಆಕಾಂಕ್ಷೆ ಹೊಂದಿದ್ದೀರಾ? ಹಾಗಾದರೆ ನಿಮಗಾಗಿ ಕಾದಿದೆ ಗುಡ್‌ನ್ಯೂಸ್‌. ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 41 ಜವಾನ (Peon) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೇ 3ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಕೊನೆಯ ದಿನ ಜೂನ್‌ 3. ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ಬೆಂಗಳೂರು: ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ರಾಜ್ಯದಲ್ಲೇ ಕೆಲಸ ನಿರ್ವಹಿಸಬೇಕು ಎನ್ನುವ ಆಕಾಂಕ್ಷೆ ಹೊಂದಿದ್ದೀರಾ? ಹಾಗಾದರೆ ನಿಮಗಾಗಿ ಕಾದಿದೆ ಗುಡ್‌ನ್ಯೂಸ್‌. ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 41 ಜವಾನ (Peon) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೇ 3ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಕೊನೆಯ ದಿನ ಜೂನ್‌ 3 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸಾಮಾನ್ಯ ಅಭ್ಯರ್ಥಿ – 18, ಪರಿಶಿಷ್ಟ ಜಾತಿ – 7, ಪರಿಶಿಷ್ಟ ಪಂಗಡ – 4, ಪ್ರವರ್ಗ – 1- 2, ಪ್ರವರ್ಗ-2 (ಎ) -6, ಪ್ರವರ್ಗ-2 (ಬಿ)-2, ಪ್ರವರ್ಗ-3 (ಎ)-1, ಪ್ರವರ್ಗ-3 (ಬಿ)-1 ಹುದ್ದೆಗಳಿವೆ. ಅರ್ಜಿ ಸಲ್ಲಿಸುವವರು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜತೆಗೆ ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು. ತತ್ಸಮಾನ ವಿದ್ಯಾರ್ಹತೆ: ಸಿಬಿಎಸ್‌ಸಿ ಮತ್ತು ಐಸಿಎಸ್‌ಇ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆ ಮತ್ತು ಇತರ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆ. ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಓಪನ್‌ ಸ್ಕೂಲಿಂಗ್‌ (ಎನ್‌.ಐ.ಒ.ಎಸ್‌.) ವತಿಯಿಂದ ನಡೆಸುವ ಪ್ರೌಢ ಶಿಕ್ಷಣ ಕೋರ್ಸ್‌. ಕರ್ನಾಟಕ ಪ್ರೌಢ ಶಿಕ್ಷಣ ಪ್ರೀಕ್ಷಾ ಮಂಡಳಿ ನಡೆಸುವ ಪ್ರೌಢ ಶಿಕ್ಷಣ ಮಟ್ಟದ ಕೋರ್ಸ್‌ (ಕೆ.ಒ.ಎಸ್‌.).

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ. ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. 2 ಎ, 2 ಬಿ, 3 ಎ, 3 ಬಿ ವಿಭಾಗದವರಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ ವರ್ಗದವರು ಅರ್ಜಿ ಶುಲ್ಕವಾಗಿ 300 ರೂ., ಪ್ರವರ್ಗ 2 ಎ, 2 ಬಿ, 3 ಎ, 3 ಬಿ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 150 ರೂ. ಪಾವತಿಸಬೇಕು. ಇದನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು. ಇದಕ್ಕಾಗಿ ಕ್ರೆಡಿಟ್‌ / ಡೆಬಿಟ್‌ ಕಾರ್ಡ್‌, ನೆಟ್‌ ಬ್ಯಾಂಕಿಂಗ್‌ ಸೌಲಭ್ಯ ಬಳಸಬಹುದು.

ಆಯ್ಕೆ ವಿಧಾನ

ಕರ್ನಾಟಕ ಅಧೀನ ನ್ಯಾಯಾಲಯಗಳ ನಿಯಮಗಳ ಅನ್ವಯ ನೇಮಕಾತಿ ನಡೆಯಲಿದೆ. ಅದರಂತೆ 10ನೇ ತರಗತಿಯ ಗರಿಷ್ಠ ಅಂಕಗಳನ್ನು ಆಧರಿಸಿ ಒಂದು ಹುದ್ದೆಗೆ 10 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಆ ಪೈಕಿ ಅರ್ಹರನ್ನು ನೇಮಿಸಿಕೊಳ್ಳಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳಿಗೆ ಇಂದೇ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ಕ್ರೀಡೆ

IPL 2024 : ಮುಂಬೈ ಬ್ಯಾಟರ್​​ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಮಾಲೀಕರಿಗೆ ಸಲಹೆ ನೀಡಿದ ಮಾಜಿ ಕ್ರಿಕೆಟಿಗ

IPL 2024: ಚೇಸಿಂಗ್ ಮಾಡುತ್ತಿದ್ದ ಮುಂಬೈ ತಂಡದ ಬ್ಯಾಟಿಂಗ್ ಕ್ರಮಾಂಕವು ಮತ್ತೊಮ್ಮೆ ಪರಿಣಾಮಕಾರಿಯಾಗಲಿಲ್ಲ; ಸೂರ್ಯಕುಮಾರ್ ಯಾದವ್ (56) ಹೊರತುಪಡಿಸಿ ರನ್ ಚೇಸ್​​ನಲ್ಲಿ ಯಾವುದೇ ಬ್ಯಾಟ್ಸ್ಮನ್ 30 ಕ್ಕಿಂತ ಹೆಚ್ಚು ರನ್ ಗಳಿಸಲಿಲ್ಲ. ಇದಲ್ಲದೆ, ನಾಯಕ ಹಾರ್ದಿಕ್ ಪಾಂಡ್ಯ 7 ನೇ ಕ್ರಮಾಂಕದಲ್ಲಿ ಮತ್ತು ಟಿಮ್ ಡೇವಿಡ್ 8 ನೇ ಕ್ರಮಾಂಕದಲ್ಲಿ ಬಂದಿದ್ದರಿಂದ ಕೆಲವು ಬ್ಯಾಟಿಂಗ್ ಕ್ರಮಾಂಕದ ಆಯ್ಕೆಗಳು ಪ್ರಶ್ನೆಗಳನ್ನು ಹುಟ್ಟುಹಾಕಿದವು.

VISTARANEWS.COM


on

IPL 2024
Koo

ಬೆಂಗಳೂರು: ಐಪಿಎಲ್​ 17ನೇ ಆವೃತ್ತಿಯಲ್ಲಿ (IPL 2024) ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 24 ರನ್​ಗಳ ಭರ್ಜರಿ ಜಯ ಸಾಧಿಸಿ ಪ್ಲೇ ಆಫ್ಗೆ ಪ್ರವೇಶಿಸುವ ಅವಕಾಶ ಹೆಚ್ಚಿಸಿಕೊಂಡಿದೆ. ಆಡಿರುವ 11 ಪಂದ್ಯಗಳಲ್ಲಿ 8ನೇ ಸೋಲು ಕಂಡಿರುವ ಮುಂಬೈ ಇಂಡಿಯನ್ಸ್ ಅಗ್ರ 4ರಲ್ಲಿ ಸ್ಥಾನ ಪಡೆಯುವ ಅವಕಾಶ ಕಳೆದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ನೈಟ್ ರೈಡರ್ಸ್ 169 ರನ್​ಗಳಿಗೆ ಆಲ್​ಔಟ್ ಆಯಿತು. ಆದರೆ, ಅದಕ್ಕಿಂತ ಮೊದಲು 57 ರನ್​ಗೆ 5 ವಿಕೆಟ್​ ಕಳೆದುಕೊಂಡಿತ್ತು. ಆದರೆ ಆ ಬಳಿಕ ಚೇತರಿಸಿಕೊಂಡಿತ್ತು. ಆದರೆ, ಮುಂಬೈ ತಂಡ ಗೆಲುವಿನ ಅವಕಾಶವನ್ನು ಎಲ್ಲಿಯೂ ಸೃಷ್ಟಿ ಮಾಡಿಕೊಂಡಿರಲಿಲ್ಲ.

ಚೇಸಿಂಗ್ ಮಾಡುತ್ತಿದ್ದ ಮುಂಬೈ ತಂಡದ ಬ್ಯಾಟಿಂಗ್ ಕ್ರಮಾಂಕವು ಮತ್ತೊಮ್ಮೆ ಪರಿಣಾಮಕಾರಿಯಾಗಲಿಲ್ಲ; ಸೂರ್ಯಕುಮಾರ್ ಯಾದವ್ (56) ಹೊರತುಪಡಿಸಿ ರನ್ ಚೇಸ್​​ನಲ್ಲಿ ಯಾವುದೇ ಬ್ಯಾಟ್ಸ್ಮನ್ 30 ಕ್ಕಿಂತ ಹೆಚ್ಚು ರನ್ ಗಳಿಸಲಿಲ್ಲ. ಇದಲ್ಲದೆ, ನಾಯಕ ಹಾರ್ದಿಕ್ ಪಾಂಡ್ಯ 7 ನೇ ಕ್ರಮಾಂಕದಲ್ಲಿ ಮತ್ತು ಟಿಮ್ ಡೇವಿಡ್ 8 ನೇ ಕ್ರಮಾಂಕದಲ್ಲಿ ಬಂದಿದ್ದರಿಂದ ಕೆಲವು ಬ್ಯಾಟಿಂಗ್ ಕ್ರಮಾಂಕದ ಆಯ್ಕೆಗಳು ಪ್ರಶ್ನೆಗಳನ್ನು ಹುಟ್ಟುಹಾಕಿದವು.

“ಟಿಮ್ ಡೇವಿಡ್ ಮತ್ತು ಹಾರ್ದಿಕ್ ಪಾಂಡ್ಯ ಕೂಡ ತಡವಾಗಿ ಬ್ಯಾಟಿಂಗ್​ಗೆ ಬಂದರು. ಆ ರೀತಿ ಮಾಡುವುದರಿಂದ ನೀವು ಯಾವ ಫಲಿತಾಂಶಗಳನ್ನು ನಿರೀಕ್ಷೆ ಮಾಡುತ್ತೀರಿ. ಕೆಲವೇ ಎಸೆತಗಳು ಉಳಿದಾಗ ಅವರು ಬಂದರೆ ಏನು ಉಪಯೋಗ. ಅವರು ಮೊದಲೇ ಆಡಲು ಬರಬೇಕಿತ್ತು. ಆಟವನ್ನು ಬೇಗನೆ ಮುಗಿಸಬಹುದಿತ್ತು. ಚೇಸಿಂಗ್ ನಲ್ಲಿ ಅವರಿಗೆ ಏನಾಗಿದೆ ಎಂದು ನಾನು ನಿಜವಾಗಿಯೂ ಆಶ್ಚರ್ಯ ಪಡುತ್ತೇನೆ. ಪಾಂಡ್ಯ 7ನೇ ಕ್ರಮಾಂಕದಲ್ಲಿ ಮತ್ತು ಡೇವಿಡ್ 8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದರೆ ಏನು ಪ್ರಯೋಜ ಎಂದು ಸೆಹ್ವಾಗ್ ಹೇಳಿದ್ದಾರೆ.

“ಹಾರ್ದಿಕ್ ಪಾಂಡ್ಯ ಜಿಟಿ ನಾಯಕರಾಗಿದ್ದಾಗ ಅವರು ಸಾಮಾನ್ಯವಾಗಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದರು. ಅನುಭವಿ ಆಟಗಾರರ ಈಗ ಕೊನೆಯಲ್ಲಿ ಏಕೆ ಬರುತ್ತಿದ್ದಾರೆ? ಇದು ನಿಜವಾಗಿಯೂ ಗೊಂದಲಮಯ” ಎಂದು ಅವರು ಸೆಹ್ವಾಗ್​ ಟೀಕಿಸಿದ್ದಾರೆ.

2025 ರ ಋತುವಿಗೆ ಯೋಜನೆ ಹಾಕುತ್ತಿರುವ ಎಂಐ ನೇಹಾಲ್ ವಧೇರಾ ಮತ್ತು ನಮನ್ ಧೀರ್ ಅವರನ್ನು ಅಗ್ರ ಕ್ರಮಾಂಕದಲ್ಲಿ ಕಳುಹಿಸಿದೆ ಎಂದು ಟಿವಿ ನಿರೂಪಕ ಪ್ರತಿಕ್ರಿಯಿಸಿದ್ದಾರೆ. ಈಗ ಪಂದ್ಯಗಳನ್ನು ಗೆಲ್ಲದಿದ್ದರೆ ತಂಡವು ಭವಿಷ್ಯಕ್ಕಾಗಿ ಯೋಜನೆ ಹಾಕಿ ಏನು ಪ್ರಯೋಜನ ಎಂದು ಸೆಹ್ವಾಗ್ ವಾದಿಸಿದ್ದಾರೆ.

ಇದನ್ನೂ ಓದಿ: Rinku Singh : ಕೊಹ್ಲಿಯ ಬ್ಯಾಟ್​ನಲ್ಲಿ ರಿಂಕು ಚೆನ್ನಾಗಿ ಆಡುತ್ತಿಲ್ಲ; ನೆಟ್ಟಿಗರಿಂದ ಟ್ರೋಲ್​!

“2025 ಕ್ಕೆ ತಯಾರಿ ನಡೆಸಲಿ. ಆದರೆ ಈಗ ಯಾರು ಎಲ್ಲಿ ಬ್ಯಾಟಿಂಗ್ ಮಾಡಬೇಕು ಎಂಬುದರ ಬಗ್ಗೆ ಯೋಚಿಸಬೇಕು. ಈ ಕ್ಷಣದಲ್ಲಿ ಭವಿಷ್ಯವನ್ನು ಹೇಗೆ ಊಹಿಸಬಹುದು? ಪ್ಲೇಆಫ್ ಗೆ ಅರ್ಹತೆ ಪಡೆದಿದ್ದರೆ ಅವಕಾಶಗಳನ್ನು ತೆಗೆದುಕೊಳ್ಳಬಹುದಿತ್ತು. ಮುಂಬಯಿ ತಂಡ ಬ್ಯಾಟಿಂಗ್ ಕ್ರಮಾಂಕದಲ್ಲಿ ಗೊಂದಲದಲ್ಲಿದೆ ಮತ್ತು ಪಂದ್ಯಗಳನ್ನು ಗೆಲ್ಲುತ್ತಿಲ್ಲ,” ಎಂದು ಸೆಹ್ವಾಗ್ ನುಡಿದಿದ್ದಾರೆ.

ಇದು ತುಂಬಾ ವಿಚಿತ್ರವಾಗಿದೆ. ಮ್ಯಾನೇಜ್ಮೆಂಟ್​ ಆಟಗಾರರನ್ನು ಪ್ರಶ್ನಿಸಬೇಕು ಮತ್ತು ಅವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪರ್ಯಾಯವಾಗಿ, ಆಟಗಾರರು ತಾವು ವಿಭಿನ್ನ ಸ್ಥಾನದಲ್ಲಿ ಏಕೆ ಬ್ಯಾಟಿಂಗ್ ಮಾಡುತ್ತಿದ್ದೇವೆ ಎಂಬುದನ್ನು ಸ್ಪಷ್ಟಪಡಿಸಬೇಕಾಗಿದೆ. ಇದು ಸಹಾಯಕ ಸಿಬ್ಬಂದಿ, ಬ್ಯಾಟಿಂಗ್ ಕೋಚ್, ಬೌಲಿಂಗ್ ಕೋಚ್ ಮತ್ತು ನಾಯಕನ ತಪ್ಪು. ಮಾಲೀಕರು ಕಠಿಣ ಪ್ರಶ್ನೆಗಳನ್ನು ಕೇಳಬೇಕಾಗುತ್ತದೆ” ಎಂದು ಅವರು ಹೇಳಿದರು.

Continue Reading

ಕರ್ನಾಟಕ

Prajwal Revanna Case: ಹಾಸನ ಸಂಸದರಿಗೂ ನನಗೂ ಸಂಬಂಧವಿಲ್ಲ ಎಂದ ನಿಖಿಲ್‌ ಕುಮಾರಸ್ವಾಮಿ!

Prajwal Revanna Case: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ದೇಶದ ಪ್ರಧಾನಿಗಳನ್ನು ಈ ವಿಚಾರದಲ್ಲಿ ಕರೆತರುವುದು ಒಳ್ಳೆಯದಲ್ಲ, ಅದು ಸೂಕ್ತವೂ ಅಲ್ಲ. ಅಲ್ಲದೇ ಹಾಸನ ಪ್ರಕರಣ ವಿಚಾರಕ್ಕೆ ನನಗೂ ಸಂಬಂಧ ಇಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

VISTARANEWS.COM


on

Nikhil Kumaraswamy
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣ (Prajwal Revanna Case) ದೇಶಾದ್ಯಂತ ಸಂಚಲನ ಮೂಡಿಸಿದೆ. ಪ್ರಕರಣವನ್ನು ಎಸ್‌ಐಟಿ ತನಿಖೆ ಮಾಡುತ್ತಿರುವ ನಡುವೆ ಮೊದಲ ಬಾರಿ ಮಾಧ್ಯಮಗಳಿಗೆ ನಿಖಿಲ್‌ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ದೇವೇಗೌಡರನ್ನು ಹಾಗೂ ಕುಮಾರಸ್ವಾಮಿ ಅವರನ್ನು ಮುಂದೆ ತರುವುದು ಸರಿಯಲ್ಲ. ನಾನು ಈಗಾಗಲೇ ಹೇಳಿದ್ದೇನೆ, ಯಾರು ತಪ್ಪು ಮಾಡಿದ್ದಾರೆ, ಅವರಿಗೆ ಖಂಡಿತಾ ಶಿಕ್ಷೆ ಆಗಬೇಕು. ಹಾಸನ ಸಂಸದರಿಗೂ ನನಗೂ ಸಂಬಂಧವಿಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದರು.

ನಗರದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರನ್ನು ಭೇಟಿಯಾದ ಬಳಿಕ ಅವರು ಮಾತನಾಡಿದ್ದು, ನನಗೆ ನಾಲ್ಕು ದಿನಗಳಿಂದ ವೈರಲ್ ಫೀವರ್ ಇತ್ತು. ಹಾಗಾಗಿ ದೇವೇಗೌಡರನ್ನು ಪೋನ್‌ನಲ್ಲಿ ಮಾತನಾಡಿದ್ದೆ. ಈಗ ಬಂದು ಅವರ ಆರೋಗ್ಯ ವಿಚಾರಿಸಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ | Prajwal Revanna Case: ಪ್ರಜ್ವಲ್‌ ರೇವಣ್ಣ ಪತ್ತೆಗೆ ಬ್ಲೂ ಕಾರ್ನರ್‌ ನೋಟೀಸ್!‌ ಏನಿದರ ಅಗತ್ಯ?

ಇನ್ನು ಪ್ರಕರಣದಲ್ಲಿ ದೇಶದ ಪ್ರಧಾನಿಗಳನ್ನು ಈ ವಿಚಾರದಲ್ಲಿ ಕರೆತರುವುದು ಒಳ್ಳೆಯದಲ್ಲ, ಅದು ಸೂಕ್ತವೂ ಅಲ್ಲ. ಅಲ್ಲದೇ ಹಾಸನ ಪ್ರಕರಣ ವಿಚಾರಕ್ಕೆ ನನಗೂ ಸಂಬಂಧ ಇಲ್ಲ. ನಾನು ಹೆಚ್ಚಾಗಿ ಹಾಸನಕ್ಕೆ ಕಾಲೇ ಇಟ್ಟಿಲ್ಲ. ವರ್ಷದಲ್ಲಿ ಹಾಸನಾಂಬೆ ದರ್ಶನಕ್ಕೆ ಮಾತ್ರ ಹೋಗುತ್ತೇನೆ. ಹಾಸನ ಸಂಸದರಿಗೂ ನನಗೂ ಸಂಬಂಧವಿಲ್ಲ. ಕರ್ನಾಟಕ ಸರ್ಕಾರ ಈಗಾಗಲೇ ಎಸ್ಐಟಿ ರಚನೆ ಮಾಡಿದೆ, ತನಿಖೆ ನಡೆಯುತ್ತಿದ್ದು, ಕಾನೂನಿಗಿಂತ ಯಾರು ದೊಡ್ಡವರಲ್ಲ. ಅದು ಒಂದು ಪ್ರಕ್ರಿಯೆ, ಅದರ ಬಗ್ಗೆ ನಾನು ಮಾತನಾಡಲು ಹೋಗಲ್ಲ ಎಂದು ಹೇಳಿದರು.

ಡಿ.ಕೆ. ಬ್ರದರ್ಸ್ ಅವರಿಂದ ದೇವೇಗೌಡ ಹಾಗೂ ಕುಮಾರಸ್ವಾಮಿ ಟಾರ್ಗೆಟ್ ಅಗುತ್ತಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ಒಂದು ಪ್ರಕರಣ ರಾಜ್ಯದ ಜನತೆಗೆ ತಪ್ಪು ಸಂದೇಶ ಕೊಡುತ್ತಿದೆ. ವಿಶೇಷವಾಗಿ ದೇವೇಗೌಡ ಅವರ ಜೀವನ ತೆರೆದ ಪುಸ್ತಕ, ಅಜ್ಜಿ ಚೆನ್ನಮ್ಮ ಯಾವ ರೀತಿ ಬದುಕಿದ್ದಾರೆ ಅಂತ ಅದು ನಮಗೆ ಗೊತ್ತು. ಹಾಗಾಗಿ ಕೈ ಮುಗಿದು ಕೇಳಿಕೊಳ್ಳುತ್ತೇನೆ, ಅವರಿಗೆ 92 ವರ್ಷ ಆಗಿದೆ. ಅವರಿಗೆ ಸಹಜವಾಗಿ ಮನಸ್ಸಿನ ಮೇಲೆ ಪ್ರಭಾವ ಬೀರುತ್ತೆ. ಒಬ್ಬರೇ ವಿಶ್ರಾಂತಿ ತೆಗೆದುಕೊಳ್ತಾ ಇದ್ದರು, ದೇವಸ್ಥಾನಕ್ಕೆ ಹೋಗಿಬಂದೆ ಅಂದರು. ಅವರು ಸಾಕಷ್ಟು ನೊಂದಿದ್ದಾರೆ, ನಮ್ಮ ಅಜ್ಜಿ ಸಹ ಬಹಳ ನೋವಿನಲ್ಲಿದ್ದಾರೆ ಎಂದು ತಿಳಿಸಿದರು.

ನನಗೆ ಒಂದೇ ಒಂದು ದುಃಖ ಏನೆಂದರೆ, ಆ ದೃಶ್ಯ ಏನಿದೆ ಅದನ್ನು ನಾನು ನೋಡಕ್ಕೆ ಹೋಗಿಲ್ಲ. ನನ್ನ ಆಪ್ತ ವರ್ಗದವರು ಹೇಳಿದ ಪ್ರಕಾರ, ಕನಿಷ್ಠ ಆ ವೀಡಿಯೊ ಬ್ಲರ್ ಕೂಡ ಆಗಿಲ್ಲ. ಆದರೆ, ಪಾಪ ಆ ಹೆಣ್ಣು ಮಕ್ಕಳನ್ನ ಓಪನ್ ಆಗಿ ತೋರಿಸಿದ್ದಾರ. ಇದು ನಿಜಕ್ಕೂ ಕೂಡ ಬೇಜಾರು ಆಗುತ್ತೆ. ಇದರ ಬಗ್ಗೆಯೂ ಸಹ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

ಹಾಸನ ಟಿಕೆಟ್ ವಿಚಾರದಲ್ಲಿ ಬಿಜೆಪಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಪಕ್ಷದ ಕಾರ್ಯಕರ್ತರು ರಾಷ್ಟ್ರೀಯ ಅಧ್ಯಕ್ಷರು ಅಂತಿಮ ನಿರ್ಧಾರ ಮಾಡುತ್ತಾರೆ, ಅವರ ನಿರ್ಧಾರಕ್ಕೆ ತಲೆಬಾಗಿ ಕೆಲಸ ಮಾಡಿದ್ದೇವೆ ಎಂದರು. ಇನ್ನು ಪ್ರಕರಣದಿಂದ ನೊಂದ ಪಕ್ಷದ ಹಾಸನ ಕಾರ್ಯಕರ್ತರರಿಗೆ ಧೈರ್ಯ ಹೇಳುವ ಬಗ್ಗೆ ಸ್ಪಂದಿಸಿ, ನೂರಕ್ಕೆ ನೂರು ಆ ವಿಚಾರದಲ್ಲಿ ಹಾಸನಕ್ಕೆ ಹೋಗೊದು ಇದೆ. ಪಕ್ಷದ ನಾಯಕರು ಕಾರ್ಯಕರ್ತರ ಬಳಿ ಕುಮಾರಣ್ಣ ಹೋಗುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ | Prajwal Revanna Case: ಜರ್ಮನಿ ಆಯ್ತು, ದುಬೈ ಬಿಟ್ಟಾಯ್ತು; ಮತ್ತೊಂದು ದೇಶಕ್ಕೆ ಹಾರಿದ ಪ್ರಜ್ವಲ್‌ ರೇವಣ್ಣ!

ಶಿವರಾಮೇಗೌಡರ ಆರೋಪದ ವಿಚಾರ ಪ್ರತಿಕ್ರಿಯಿಸಿ, ಶಿವರಾಮೇಗೌಡರು ಬಹಳ ದೊಡ್ಡವರಿದ್ದಾರೆ. ಪಾಪ ಏನೋ ಮಾತನಾಡುತ್ತಾರೆ, ಎಸ್ಐಟಿ ರಚನೆ ಆಗಿದೆ. ತನಿಖೆ ನಡೆಯುತ್ತಿದೆ ಎಂದು ಹೇಳಿದರು.

Continue Reading

ಕ್ರೀಡೆ

PBKS vs CSK: ಬ್ಯಾಟಲ್​ ಆಫ್​ ದಿ ಕಿಂಗ್ಸ್​ಗೆ ಚೆನ್ನೈ-ಪಂಜಾಬ್​ ರೆಡಿ; ಗಾಯಕ್ವಾಡ್​ಗೆ ಸೇಡಿನ ಪಂದ್ಯ

PBKS vs CSK: ಎಚ್‌ಪಿಸಿಎ ಕ್ರಿಕೆಟ್​ ಸ್ಟೇಡಿಯಂನಲ್ಲಿ ಇದುವರೆಗೆ 11 ಐಪಿಎಲ್​ ಪಂದ್ಯಗಳು ನಡೆದಿವೆ. ಈ ಪೈಕಿ 6 ಪಂದ್ಯಗಳನ್ನು ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆದ್ದಿದ್ದರೆ, 5 ಬಾರಿ ಚೇಸಿಂಗ್​ ನಡೆಸಿದ ತಂಡ ಗೆದ್ದಿದೆ. 2 ವಿಕೆಟ್​ಗೆ 232 ರನ್​ ಇಲ್ಲಿ ದಾಖಲಾದ ಅತ್ಯಧಿಕ ರನ್​ ಗಳಿಕೆಯಾಗಿದೆ. 2011ರಲ್ಲಿ ಪಂಜಾಬ್​ ಮತ್ತು ಆರ್​ಸಿಬಿ ನಡುವಿನ ಪಂದ್ಯದಲ್ಲಿ ಈ ಮೊತ್ತ ದಾಖಲಾಗಿತ್ತು.

VISTARANEWS.COM


on

PBKS vs CSK
Koo

ಧರ್ಮಶಾಲಾ: ಪಂಜಾಬ್​-ಚೆನ್ನೈ(PBKS vs CSK) ನಡುವೆ ನಾಲ್ಕೇ ದಿನಗಳ ಅಂತರದಲ್ಲಿ ದ್ವಿತೀಯ ಸುತ್ತಿನ ಹೋರಾಟಕ್ಕೆ ಸಿದ್ಧವಾಗಿ ನಿಂತಿದೆ. ಭಾನುವಾರದ ಮೊದಲ ಪಂದ್ಯದಲ್ಲಿ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಇತ್ತಂಡಗಳು ಸೆಣಸಾಟಕ್ಕೆ ಇಳಿಯಲಿವೆ. ಇದು ಈ ಆವೃತ್ತಿಯಲ್ಲಿ ಇಲ್ಲಿ ನಡೆಯುವ ಮೊದಲ ಐಪಿಎಲ್(IPL 2024)​ ಪಂದ್ಯವಾಗಿದೆ. ಕಳೆದ ಪಂದ್ಯದಲ್ಲಿ ತವರಿನಲ್ಲೇ 7 ವಿಕೆಟ್​ ಸೋಲಿಗೆ ಪಂಜಾಬ್​ಗೆ ಅವರ ತವರಿನ ಅಂಗಳದಲ್ಲಿ ಸೇಡು ತೀರಿಸಿಕೊಳ್ಳುವುದು ಹಾಲಿ ಚಾಂಪಿಯನ್‌ ಗುರಿಯಾಗಿದೆ.

ಪಿಚ್​ ರಿಪೋರ್ಟ್​

ಹಿಮಾಚಲ ಪ್ರದೇಶ ಕ್ರಿಕೆಟ್‌ ಅಸೋಸಿಯೇಶನ್‌ ಸ್ಟೇಡಿಯಂ (ಎಚ್‌ಪಿಸಿಎ) ಪ್ರಕೃತಿಯ ಅತ್ಯಂತ ರಮಣೀಯ ಸ್ಟೇಡಿಯಂ ಆಗಿದ್ದು, ಹಿಮಾಲಯ ಶ್ರೇಣಿಯಲ್ಲಿ ತಲೆಯೆತ್ತಿ ನಿಂತಿದೆ. ಸಮುದ್ರ ಮಟ್ಟದಿಂದ 1,317 ಮೀ. ಎತ್ತರದಲ್ಲಿದೆ. ಅಡಿಲೇಡ್‌ ಓವಲ್‌, ನ್ಯೂಜಿಲ್ಯಾಂಡ್​ ಸ್ಟೇಡಿಯಂಗಳಂತೆ ಇದು ಕೂಡ ಚಿತ್ರಸದೃಶವಾಗಿದೆ. 23 ಸಾವಿರದಷ್ಟು ವೀಕ್ಷಕರ ಸಾಮರ್ಥ್ಯ ಹೊಂದಿರುವ ಈ ಸ್ಟೇಡಿಯಂ ಪ್ರಕೃತಿಗೆ ತೆರೆದುಕೊಂಡಿದೆ. ಹೀಗಾಗಿ ಇಲ್ಲಿ ಸದಾ ಗಾಳಿ ಬೀಸುತ್ತಲೇ ಇರುತ್ತದೆ. ಈ ಕಾರಣಕ್ಕಾಗಿಯೇ ಇದು ಪೇಸ್‌ ಬೌಲಿಂಗ್‌ ಸ್ವರ್ಗವೆನಿಸಿದೆ.

ಎಚ್‌ಪಿಸಿಎ ಕ್ರಿಕೆಟ್​ ಸ್ಟೇಡಿಯಂನಲ್ಲಿ ಇದುವರೆಗೆ 11 ಐಪಿಎಲ್​ ಪಂದ್ಯಗಳು ನಡೆದಿವೆ. ಈ ಪೈಕಿ 6 ಪಂದ್ಯಗಳನ್ನು ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆದ್ದಿದ್ದರೆ, 5 ಬಾರಿ ಚೇಸಿಂಗ್​ ನಡೆಸಿದ ತಂಡ ಗೆದ್ದಿದೆ. 2 ವಿಕೆಟ್​ಗೆ 232 ರನ್​ ಇಲ್ಲಿ ದಾಖಲಾದ ಅತ್ಯಧಿಕ ರನ್​ ಗಳಿಕೆಯಾಗಿದೆ. 2011ರಲ್ಲಿ ಪಂಜಾಬ್​ ಮತ್ತು ಆರ್​ಸಿಬಿ ನಡುವಿನ ಪಂದ್ಯದಲ್ಲಿ ಈ ಮೊತ್ತ ದಾಖಲಾಗಿತ್ತು. ಚೆನ್ನೈ ಮತ್ತು ಪಂಜಾಬ್​ ಈ ಮೈದಾನದಲ್ಲಿ 2 ಪಂದ್ಯಗಳು ಆಡಿವೆ. ಉಭಯ ತಂಡಗಳು ಕೂಡ ತಲಾ ಒಂದೊಂದು ಪಂದ್ಯ ಗೆದ್ದಿವೆ.

ಇದನ್ನೂ ಓದಿ IPL 2024: ಕೆಎಸ್‌ಸಿಎಗೆ ಮತ್ತೆ ಸಂಕಷ್ಟ; ಚಿನ್ನಸ್ವಾಮಿ ಸ್ಟೇಡಿಯಂನ ಎಲ್ಲ ನೀರಿನ ಮೂಲದ ವಿವರ ಕೇಳಿದ ಎನ್‌ಜಿಟಿ!

ಬೌಲಿಂಗ್​ ಸುಧಾರಣೆ ಅಗತ್ಯ


ಚೆನ್ನೈ(Chennai Super Kings) ತಂಡ ಆರಂಭಿಕ ಪಂದ್ಯಗಳಲ್ಲಿ ಉತ್ತಮ ಬೌಲಿಂಗ್​ ಪ್ರದರ್ಶನದ ಮೂಲಕ ಸತತ ಗೆಲುವು ಸಾಧಿಸಿತ್ತು. ಆದರೆ ಈಗ ಹಿಂದಿನ ಲಯ ಕಳೆದುಕೊಂಡಿದ್ದು ತವರಿನಲ್ಲೇ ಸೋಲಿನ ಅವಮಾನಕ್ಕೆ ಸಿಲುಕಿದೆ. ಬಾಂಗ್ಲಾ ಎಡಗೈ ವೇಗಿ ಮುಸ್ತಫಿಜುರ್​ ರೆಹಮಾನ್​ ಕೂಡ ಟಿ20 ವಿಶ್ವಕಪ್​ಗೆ ಸಿದ್ಧತೆ ನಡೆಸುವ ಸಲುವಾಗಿ ತಂಡ ತೊರೆದಿದ್ದಾರೆ. ಶಾರ್ದೂಲ್​ ಠಾಕೂರ್​ ಕೂಡ ನಿರೀಕ್ಷಿತ ಪ್ರದರ್ಶನ ತೋರುತ್ತಿಲ್ಲ. ದೀಪಕ್ ಚಹಾರ್, ರಿಚರ್ಡ್ ಗ್ಲೀಸನ್ ಕೂಡ ದುಬಾರಿಯಾಗುತ್ತಿದ್ದಾರೆ. ಜಡೇಜಾ ಕೂಡ ಸ್ಪಿನ್​ ಮಾಡುತಿಲ್ಲ. ಸದ್ಯಕ್ಕೆ ಪತಿರಾಣ ಮಾತ್ರ ಘಾತಕ ಬೌಲಿಂಗ್​ ನಡೆಸುತ್ತಿದ್ದಾರೆ.

ಪಂಜಾಬ್​ಗೆ ಬ್ಯಾಟಿಂಗ್ ಬಲ


ಪಂಜಾಬ್​(Punjab Kings) ತಂಡದಲ್ಲಿ ಅನುಭವಿಗಳಾದ ಕಗಿಸೊ ರಬಾಡ, ಅರ್ಶ್​ದೀಪ್​ ಸಿಂಗ್​, ಹರ್ಷಲ್​ ಪಟೇಲ್ ಅವರಂತಹ ಘಾತಕ ಬೌಲರ್​​ ಇದ್ದರೂ ಕೂಡ ಇವರಿಂದ ಇದುವರೆಗೆ ನಿರೀಕ್ಷಿತ ಮಟ್ಟದ ಬೌಲಿಂಗ್ ಪ್ರದರ್ಶನ ಕಂಡುಬಂದಿಲ್ಲ.​ ಪಂಜಾಬ್​ ಗೆದ್ದಿರುವುದು ಬ್ಯಾಟಿಂಗ್​ ಬಲದಿಂದ. ಹೀಗಾಗಿ ಈ ಪಂದ್ಯದಲ್ಲಿಯೂ ಪಂಜಾಬ್​ ಬ್ಯಾಟಿಂಗ್​ ಬಲವನ್ನೇ ನಂಬಿದೆ. ಕಳೆದೊಂದು ವರ್ಷದಿಂದ ತೀವ್ರ ಬ್ಯಾಟಿಂಗ್​ ಬರ ಎದುರಿಸಿದ್ದ ಜಾನಿ ಬೇರ್​ಸ್ಟೋ ಪ್ರಚಂಡ ಫಾರ್ಮ್​ಗೆ ಮರಳಿದ್ದಾರೆ. ಇದು ಪಂಜಾಬ್​ಗೆ ಆನೆ ಬಲ ಬಂದಂತಾಗಿದೆ. ಮಧ್ಯಮ ಕ್ರಮಾಂಕದಲ್ಲಿ ಶಶಾಂಕ್​ ಸಿಂಗ್​ ಮತ್ತು ಅಶುತೋಷ್ ಶರ್ಮಾ ಸಿಡಿಲಬ್ಬರ ಬ್ಯಾಟಿಂಗ್​ ಮೂಲಕ ತಂಡಕ್ಕೆ ನೆರವಾಗಬಲ್ಲರು. ಒಟ್ಟಾರೆಯಾಗಿ ಪಂಜಾಬ್​ಗೆ ಬ್ಯಾಟಿಂಗ್​ಗೇ ಮುಖ್ಯ ಬಲವಾಗಿದೆ.

ಸಂಭಾವ್ಯ ತಂಡಗಳು


ಚೆನ್ನೈ: ಅಜಿಂಕ್ಯ ರಹಾನೆ, ರುತುರಾಜ್ ಗಾಯಕ್ವಾಡ್ (ನಾಯಕ), ಡೆರಿಲ್ ಮಿಚೆಲ್, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆ), ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ರಿಚರ್ಡ್ ಗ್ಲೀಸನ್, ಮತೀಶ ಪತಿರಾಣ.

ಪಂಜಾಬ್​ ಕಿಂಗ್ಸ್​: ಜಾನಿ ಬೈರ್‌ಸ್ಟೋವ್, ಸ್ಯಾಮ್ ಕರನ್ (ನಾಯಕ), ರಿಲೀ ರೊಸೊ, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ (ವಿಕೆ), ಅಶುತೋಷ್ ಶರ್ಮಾ, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್

Continue Reading
Advertisement
Job Alert
ಉದ್ಯೋಗ35 seconds ago

Job Alert: ಕೋರ್ಟ್‌ನಲ್ಲಿದೆ 41 ಹುದ್ದೆ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ

IPL 2024
ಕ್ರೀಡೆ5 mins ago

IPL 2024 : ಮುಂಬೈ ಬ್ಯಾಟರ್​​ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಮಾಲೀಕರಿಗೆ ಸಲಹೆ ನೀಡಿದ ಮಾಜಿ ಕ್ರಿಕೆಟಿಗ

Nikhil Kumaraswamy
ಕರ್ನಾಟಕ21 mins ago

Prajwal Revanna Case: ಹಾಸನ ಸಂಸದರಿಗೂ ನನಗೂ ಸಂಬಂಧವಿಲ್ಲ ಎಂದ ನಿಖಿಲ್‌ ಕುಮಾರಸ್ವಾಮಿ!

PBKS vs CSK
ಕ್ರೀಡೆ33 mins ago

PBKS vs CSK: ಬ್ಯಾಟಲ್​ ಆಫ್​ ದಿ ಕಿಂಗ್ಸ್​ಗೆ ಚೆನ್ನೈ-ಪಂಜಾಬ್​ ರೆಡಿ; ಗಾಯಕ್ವಾಡ್​ಗೆ ಸೇಡಿನ ಪಂದ್ಯ

Road Accident in bagalakote
ಬಾಗಲಕೋಟೆ33 mins ago

Road Accident : ಟಿಪ್ಪರ್‌ ಲಾರಿ ಡಿಕ್ಕಿಗೆ ಕಾರು ಪುಡಿ ಪುಡಿ; ಸಿದ್ದನಕೊಳ್ಳ ಶ್ರೀಗಳು ಗಂಭೀರ ಗಾಯ

MTR Karunadu Svada food festival inauguration in Bengaluru
ಕರ್ನಾಟಕ33 mins ago

MTR: ಬೆಂಗಳೂರಿನಲ್ಲಿ ಎಂಟಿಆರ್ ಕರುನಾಡು ಸ್ವಾದ; 2 ದಿನಗಳ ಆಹಾರ ಉತ್ಸವದಲ್ಲಿ ಏನೇನಿವೆ?

Vijay Devarakonda announces new film
ಕಿರುತೆರೆ35 mins ago

Vijay Deverakonda: ಸಿನಿಮಾಗಳ ಸತತ ಸೋಲಿನ ಬೆನ್ನಲ್ಲೆ ಹೊಸ ಸಿನಿಮಾ ಅನೌನ್ಸ್‌ ಮಾಡಿದ ವಿಜಯ್‌ ದೇವರಕೊಂಡ!

Amruthadhare Serial Bhumika-Gautham angryness has melted like ice
ಕಿರುತೆರೆ37 mins ago

Amruthadhare Serial : ಐಸ್ ಥರ ಕರಗಿಹೋಯ್ತು ಭೂಮಿಕಾ-ಗೌತಮ್‌ ಮುನಿಸು!

Gold smuggling
ದೇಶ40 mins ago

Gold Smuggling: ಜ್ಯಾಕೆಟ್‌, ಲೆಗ್ಗಿನ್ಸ್‌ನಲ್ಲಿ, ಬೆಲ್ಟ್‌ನಲ್ಲಿ 25 ಕೆ.ಜಿ ಚಿನ್ನ; ಆಫ್ಘಾನ್‌ ರಾಜತಾಂತ್ರಿಕ ಅಧಿಕಾರಿ ಕಸ್ಟಮ್ಸ್‌ ಬಲೆಗೆ

Prajwal Revanna Case
ಕರ್ನಾಟಕ46 mins ago

Prajwal Revanna Case: ಜರ್ಮನಿ ಆಯ್ತು, ದುಬೈ ಬಿಟ್ಟಾಯ್ತು; ಮತ್ತೊಂದು ದೇಶಕ್ಕೆ ಹಾರಿದ ಪ್ರಜ್ವಲ್‌ ರೇವಣ್ಣ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ12 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌