Bigg Boss Kannada | ಲೀಕ್‌ ಆಯ್ತಾ ಸ್ಪರ್ಧಿಗಳ ಹೆಸರು? ಇವರಿಬ್ಬರು ಹೋಗುವುದು ಕನ್ಫರ್ಮ್!! - Vistara News

ಕಿರುತೆರೆ/ಒಟಿಟಿ

Bigg Boss Kannada | ಲೀಕ್‌ ಆಯ್ತಾ ಸ್ಪರ್ಧಿಗಳ ಹೆಸರು? ಇವರಿಬ್ಬರು ಹೋಗುವುದು ಕನ್ಫರ್ಮ್!!

ಬಿಗ್‌ಬಾಸ್‌ ಕನ್ನಡ (Bigg Boss Kannada)ಒಟಿಟಿ ಸ್ಪರ್ಧಿಗಳನ್ನು ಜನರೇ ಪಟ್ಟಿ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಸುದ್ದಿ ಮಾಡುತ್ತಿದ್ದಾರೆ. ಈ ನಡುವೆ ಬಿಗ್‌ಬಾಸ್‌ ಒಟಿಟಿ ಇಬ್ಬರು ಸ್ಪರ್ಧಿಗಳ ಹೆಸರನ್ನು ಕನ್ಫರ್ಮ್‌ ಮಾಡಿದೆ.

VISTARANEWS.COM


on

Bigg Boss Kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡ ಕಿರುತೆರೆಯ ಅತಿ ದೊಡ್ಡ ರಿಯಾಲಿಟಿ ಶೋಗಳಲ್ಲಿ ಒಂದಾದ ಬಿಗ್‌ ಬಾಸ್‌ (Bigg Boss Kannada) ಈ ಬಾರಿ ಎರಡು ಕಾರ್ಯಕ್ರಮ ನಡೆಯಲಿದ್ದು, ಮೊದಲಿಗೆ ಮಿನಿ ಬಿಗ್‌ ಬಾಸ್‌ (BiggBoss Kannada OTT) ಆರಂಭವಾಗಲಿದೆ. ಇದರಲ್ಲಿ ಯಾರೆಲ್ಲಾ ಭಾಗವಹಿಸಲಿದ್ದಾರೆ ಎಂಬುದು ಈಗ ತೀವ್ರ ಕುತೂಹಲ ಮೂಡಿಸಿದೆ.

ಈ ಮಿನಿ ಬಿಗ್‌ ಬಾಸ್‌ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಮಾತ್ರ ಪ್ರಸಾರವಾಗಲಿದೆ. ಟಿವಿಯಲ್ಲಿ ಪ್ರಸಾರವಾಗುವುದಿಲ್ಲ ಎಂದು ಚಾನಲ್‌ ತಿಳಿಸಿದೆ. ಆಗಸ್ಟ್ 6 ಸಂಜೆ 7 ಗಂಟೆಯಿಂದ ಒಟಿಟಿ ಬಿಗ್ ಬಾಸ್ ಮೊದಲ ಸೀಸನ್ ಆರಂಭವಾಗಲಿದೆ. ಈ ಶೋ 45 ದಿನಗಳ ಕಾಲ ನಡೆಯುತ್ತದೆ. ಒಟಿಟಿಯಲ್ಲಿ ಕನ್ನಡದಲ್ಲಿ ಪ್ರಸಾರವಾಗುವ ಈ ಬಿಗ್‌ಬಾಸ್‌ ಮಿನಿ ಸೀಸನ್‌ ಅನ್ನು ಕಿಚ್ಚ ಸುದೀಪ್‌ ಅವರೇ ನಡೆಸಿಕೊಡಲಿರುವುದು ವಿಶೇಷ.

ಇದರಲ್ಲಿ ಇವರು ಭಾಗವಹಿಸಲಿದ್ದಾರೆ, ಅವರು ಭಾಗವಹಿಸಲಿದ್ದಾರೆ ಎಂದು ಹಲವು ಸ್ಪರ್ಧಿಗಳ ಹೆಸರು ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಸದ್ದು ಮಾಡುತ್ತಿವೆ. ಇನ್ನೂ ಕೆಲವರು ತಾವೇ ನಟ ನಟಿಯರ ಫೋಟೊ ಹಾಕಿ ಇವರು ಹೋಗುವುದು ಫಿಕ್ಸ್‌ ಎಂದು ಪೋಸ್ಟ್‌ ಹಂಚಿಕೊಳ್ಳುತ್ತಿದ್ದಾರೆ.

ಇಬ್ಬರು ಸ್ಪರ್ಧಿಗಳ ಹೆಸರು ಪ್ರಕಟ

ಈ ನಡುವೆ, ನಿರೂಪಕ ಹಾಗೂ ಪತ್ರಕರ್ತ ಸೋಮಣ್ಣ ಮಾಚಿಮಾಡ ಹಾಗೂ ಪುಟ್ಟ ಗೌರಿ ಮದುವೆ ಧಾರಾವಾಹಿ ಖ್ಯಾತಿಯ ಸಾನ್ವಿ ಅಯ್ಯರ್‌ ಬಿಗ್‌ಬಾಸ್‌ ಮನೆಗೆ ಹೋಗುವುದು ಕನ್ಫರ್ಮ್‌ ಆಗಿದೆ. ಬಿಗ್‌ಬಾಸ್‌ ಒಟಿಟಿಯೇ ಇವರಿಬ್ಬರ ಹೆಸರನ್ನು ಖಚಿತಪಡಿಸಿ ಟ್ವೀಟ್‌ ಮಾಡಿದೆ.

ಇದನ್ನೂ ಓದಿ | Shamita Shetty | ಬೈ ಬೈ ಹೇಳಿದ ಶಮಿತಾ ಶೆಟ್ಟಿ ಹಾಗೂ ರಾಕೇಶ್‌ ಬಾಪಟ್‌

ರಂಗ ಕಲಾವಿದರಿಗೆ ಹೆಚ್ಚಿನ ಆಸಕ್ತಿ?

ಈ ಬಾರಿ ಒಟಿಟಿ ಬಿಗ್‌ಬಾಸ್‌ನಲ್ಲಿ ರಂಗ ಕಲಾವಿದರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಮೂಲಗಳ ಪ್ರಕಾರ ಕಿರು ತೆರೆಯ ಕಲಾವಿದರು, ಸಾಮಾಜಿಕ ಮಾಧ್ಯಮದ ಪ್ರಭಾವಿಗಳು, ಗಾಯಕರು ಮತ್ತು ಕ್ರೀಡಾ ಪಟುಗಳು, ಚಲನಚಿತ್ರ ನಟ-ನಟಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಒಟಿಟಿ ಬಿಗ್ ಬಾಸ್​​​​​​​ನಲ್ಲಿ ಪದ್ಮಶ್ರೀ ಪ್ರಶಸ್ತಿ ವಿಜೇತೆ, ಜಾನಪದ ಅಕಾಡೆಮಿ ಅಧ್ಯಕ್ಷರಾದ ಮಂಜಮ್ಮ ಜೋಗತಿ ಸೇರಿದಂತೆ ಸಿನಿಮಾ, ಸಂಗೀತ, ಸಮಾಜಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಹಲವರನ್ನು ಕರೆತರಲಾಗುತ್ತಿದೆ ಎಂಬ ಸುದ್ದಿಯೂ ಇದೆ.

ನಾಗಿಣಿ ಧಾರಾವಾಹಿ ಖ್ಯಾತಿಯ ನಮ್ರತಾ ಗೌಡ ಬಿಗ್‌ ಬಾಸ್‌ ಒಟಿಟಿಯಲ್ಲಿ ಸ್ಪರ್ಧಿಯಾಗಲಿದ್ದಾರೆ ಎಂದು ಅವರ ಫ್ಯಾನ್‌ ಪೇಜ್‌ನಲ್ಲಿ ಅವರ ಅಭಿಮಾನಿಗಳು ಪೋಸ್ಟ್‌ ಹಂಚಿಕೊಳ್ಳುತ್ತಿದ್ದಾರೆ. ಆದರೆ ಅವರ ಹೆಸರನ್ನು ಚಾನಲ್‌ ಇನ್ನೂ ಖಚಿತ ಪಡಿಸಿಲ್ಲ.

ಇದನ್ನೂ ಓದಿ | Bigg Boss Kannada | ಬಿಗ್ ಬಾಸ್ ಆಕಾಂಕ್ಷಿಗಳು ಮೋಸ ಹೋಗಬೇಡಿ! ಕಲರ್ಸ್‌ ವಾಹಿನಿಯಿಂದ ಸೂಚನೆ

ಇದೇ ರೀತಿ ಬಹುಭಾಷೆಯಲ್ಲಿ ನಟಿಸಿ ಖ್ಯಾತಿ ಪಡೆದ ರೇಖಾ ವೇದವ್ಯಾಸ್‌ ಹಾಗೂ ಸ್ಯಾಂಡಲ್‌ವುಡ್‌ ನಟ ನವೀನ್‌ ಕೃಷ್ಣ ಅವರು ಬಿಗ್‌ಬಾಸ್‌ ಮನೆಗೆ ಹೋಗಲಿದ್ದಾರೆ ಎಂಬ ಸುದ್ದಿ ಹರಡಿದೆ. ಸುದ್ದಿ ವಾಹಿನಿಯ ನಿರೂಪಕ ಚಂದನ್ ಶರ್ಮಾರ ಹೆಸರೂ ಮುಖ್ಯವಾಗಿ ಕೇಳಿ ಬರುತ್ತಿದೆ. ಪ್ರಸ್ತುತ ಸಾಮಾಜಿಕ ಮಾಧ್ಯಮಗಳ ಮೂಲಕ ಜನರಿಗೆ ಚಿರ ಪರಿಚಿತರಾಗಿರುವ ಅಹೋರಾತ್ರ, ಲಾಯರ್ ಜಗದೀಶ್, ಚರಣ್, ಶಿವ ಪುತ್ರ, ರೂರಲ್‌ ರಂಜನ್‌, ಡ್ರೋನ್‌ ಪ್ರತಾಪ್‌, ವರ್ಷಿಣಿ, ದೀಪಿಕಾ ಪಿಲ್ಲಿ, ನವ್ಯಾ ಸ್ವಾಮಿ, ಧನುಶ್‌, ಚಿತ್ರಾ ರೈ ಸೇರಿದಂತೆ ಸುಮಾರು ೨೦ಕ್ಕೂ ಹೆಚ್ಚು ಹೆಸರುಗಳನ್ನು ಇಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ.

ಚಿತ್ರರಂಗ ಮತ್ತು ಕಿರುತೆರೆ ಎರಡರಲ್ಲೂ ನಾಯಕನಾಗಿ, ನಿರ್ಮಾಪಕನಾಗಿ ಹಾಗೂ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಖ್ಯಾತ ನಟ ದಿಲೀಪ್ ರಾಜ್, ನಿರ್ದೇಶಕ ಮತ್ತು ನಿರ್ಮಾಪಕ ರವಿ ಶ್ರೀವತ್ಸ ಬಿಗ್ ಬಾಸ್ ಮನೆಗೆ ಬರಲಿದ್ದಾರೆ ಎನ್ನಲಾಗುತ್ತಿದೆ. ಮಿಮಿಕ್ರಿ ಆರ್ಟಿಸ್ಟ್‌ ಗೋಪಿ, ಸೋಷಿಯಲ್‌ ಮೀಡಿಯಾದಲ್ಲಿ ಟಿಕ್‌ಟಾಕ್‌ ವಿಡಿಯೊಗಳಿಂದ ಖ್ಯಾತಿ ಪಡೆದ ಭೂಮಿಕಾ ಬಸವರಾಜ್‌, ಖ್ಯಾತ ರೂಪದರ್ಶಿ ಹಾಗೂ ನಟಿ ಆಶಾ ಭಟ್‌ ಕೂಡ ಬರಲಿದ್ದಾರೆ ಎನ್ನಲಾಗುತ್ತಿದೆ. ಇದಿಷ್ಟೂ ಹೆಸರುಗಳು ಜನರೇ ಪಟ್ಟಿ ಮಾಡಿದ್ದು, ಚಾನಲ್‌ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿಲ್ಲ.

ಆರು ಮಂದಿಗೆ ಅವಕಾಶ !

ಬಿಗ್ ಬಾಸ್ ಸೀಸನ್- 9ಕ್ಕಾಗಿ ಪ್ರೇಕ್ಷಕರು ಕಾತುರರಾಗಿದ್ದಾರೆ. ಈ ಬಾರಿಯ ಬಿಗ್‌ ಬಾಸ್‌ಗೆ ವೂಟ್‌ ಸೆಲೆಕ್ಷನ್‌ ಮೂಲಕ 15 ಸ್ಪರ್ಧಿಗಳನ್ನು ಆಯ್ಕೆ ಮಾಡಲಾಗುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಹವಾ ಕ್ರಿಯೇಟ್‌ ಮಾಡಿದವರು, ಮನರಂಜನೆ ನೀಡುವವರು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಗಳಾಗುವ ಸಾಧ್ಯತೆ ಇದೆ. 90 ದಿನಗಳ ಕಾಲ ಕಲರ್ಸ್‌ ಕನ್ನಡದಲ್ಲಿ ಬಿಗ್‌ ಬಾಸ್‌ ಪ್ರಸಾರವಾಗಲಿದೆ.

ವೂಟ್‌ನ ಶೋನಲ್ಲಿ ಭಾಗವಹಿಸಿದ, ಅತ್ಯುತ್ತಮವಾಗಿ ಆಟ ಆಡಿದ 6 ಜನ ಸ್ಪರ್ಧಿಗಳು ಮುಂದೆ ಟಿವಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಕನ್ನಡ ಸೀಸನ್ 9ರಲ್ಲಿ ಭಾಗವಹಿಸುತ್ತಾರೆ. ಆದರೆ, ಓಟಿಟಿ ಶೋದಲ್ಲಿ ಗೆದ್ದವರಿಗೆ ಬಿಗ್ ಬಾಸ್ ಕನ್ನಡ 9ರಲ್ಲಿ ಭಾಗವಹಿಸುವ ಅವಕಾಶ ಇರುವುದಿಲ್ಲ ಎಂದು ಚಾನಲ್‌ ಹೇಳಿದೆ.

ಹೇಗೆ ಪ್ರಸಾರವಾಗಲಿದೆ ಬಿಗ್‌ಬಾಸ್‌ ಒಟಿಟಿ

ಒಟಿಟಿ ಫ್ಲಾಟ್‌ಫಾರ್ಮ್‌ ನಲ್ಲಿ 24 ಗಂಟೆ ಲೈವ್‌ನಲ್ಲಿ ಪ್ರಸಾರವಾಗಲಿದ್ದು, ಮನೆಯಲ್ಲಿ ನಡೆಯುವ ಎಲ್ಲ ಮಾಹಿತಿ ಸಿಗಲಿದೆ. ಬಿಗ್ ಬಾಸ್ ಒಟಿಟಿ ಶೋ ಮೊದಲು ಪ್ರಸಾರ ಆಗುತ್ತದೆ. ವೂಟ್‌ ಆ್ಯಪ್ ಡೌನ್‌ಲೋಡ್‌ ಮಾಡಿಕೊಂಡರೆ ಮಾತ್ರ ಈ ಕಾರ್ಯಕ್ರಮ ನೋಡಲು ಸಾಧ್ಯ.

ಮುಂದೆ ಬರಲಿರುವ ಬಿಗ್ ಬಾಸ್ ಕನ್ನಡ ಸೀಸನ್ 9 ಟಿವಿಯಲ್ಲಿಯೂ ಪ್ರಸಾರವಾಗಲಿದೆ. ಬಿಗ್ ಬಾಸ್ ಒಟಿಟಿ ಶೋ ಮುಗಿದ ನಂತರದಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 9 ಶೋ ಶುರುವಾಗುತ್ತದೆ.

ಇದನ್ನೂ ಓದಿ | Bigg Boss Kannada | ಶೀಘ್ರದಲ್ಲೇ ಬರಲಿದೆ ಮಿನಿ ಬಿಗ್ ಬಾಸ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Kannada Web Series: ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದ ಬಸ್ ಮೆಕಾನಿಕಲ್; ಸೆಟ್ಟೇರಿತು ‘ಕರ್ನಾಟಕ Love’s ಕೇರಳ’ ವೆಬ್ ಸಿರೀಸ್

Kannada Web Series: ಕನ್ನಡದಲ್ಲಿ ವೆಬ್‌ ಸೀರಿಸ್‌ಗಳು ಕಡಿಮೆ. ಇದೀಗ ಈ ಕೊರತೆಯನ್ನು ನೀಗಿಸಲು ಹೊಸಬರ ತಂಡವೊಂದು ಮುಂದಾಗಿದೆ. ‘ಕರ್ನಾಟಕ Love’s ಕೇರಳ’ ಹೆಸರಿನ ವೆಬ್‌ ಸೀರಿಸ್‌ ಬೆಂಗಳೂರಿನಲ್ಲಿ ಸೆಟ್ಟೇರಿದೆ.

VISTARANEWS.COM


on

kannada web series
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ಈಗ ಹೊಸಬರಿಗೆ ವಿಫುಲ ಅವಕಾಶವಿದೆ. ಹೊಸಬರ ಚಿತ್ರಗಳು ಸಿನಿಪ್ರಿಯರ ಮೆಚ್ಚುಗೆ ಗಳಿಸುತ್ತಿವೆ. ಇದೀಗ ಮತ್ತೊಂದು ಪ್ರತಿಭಾನ್ವಿತ ಹಾಗೂ ಯುವ ಸಿನಿಮೋತ್ಸಾಹಿಗಳ ತಂಡವೊಂದು ಸೇರಿ ‘ಕರ್ನಾಟಕ Love’s ಕೇರಳ’ (Karnataka Loves Kerala) ಎಂಬ ವೆಬ್ ಸಿರೀಸ್ ರೂಪಿಸುತ್ತಿದೆ.‌ ಅದರ ಮೊದಲ ಭಾಗವಾಗಿ ಇತ್ತೀಚೆಷ್ಟೇ ಬೆಂಗಳೂರಿನ ವೆಂಕಟೇಶ್ವರ ದೇಗುಲದಲ್ಲಿ ವೆಬ್‌ ಸೀರಿಸ್‌ (Kannada Web Series)ಗೆ ಮುಹೂರ್ತ ನಡೆಸಲಾಯಿತು. ‘ಕರ್ನಾಟಕ Love’s ಕೇರಳ’ ಸಿರೀಸ್‌ಗೆ ಗರುಡ ರಾಮ್ ಕ್ಲಾಪ್ ಮಾಡಿದ್ದು, ವೀರಕಪುತ್ರ ಶ್ರೀನಿವಾಸ್ ಕ್ಯಾಮೆರಾ ಚಾಲನೆ ನೀಡಿದರು.

‘ಕರ್ನಾಟಕ Love’s ಕೇರಳ’ ವೆಬ್ ಸರಣಿಗೆ ಯುವ ಪ್ರತಿಭೆ ಲೋಕೇಶ್ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ನಿರ್ದೇಶನದ ಜತೆಗೆ ನಾಯಕನಾಗಿಯೂ ಅದೃಷ್ಟ ಪರೀಕ್ಷೆಗಿಳಿದ್ದಾರೆ. ಬಸ್ ಮೆಕಾನಿಕಲ್ ಆಗಿರುವ ಲೋಕೇಶ್‌‌ ಒಂದಷ್ಟು ಕಿರುಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಹಲವು ಚಿತ್ರಗಳಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ ಅಭಿಯಿಸಿದ್ದು, ಇದೀಗ ಪೂರ್ಣ ಪ್ರಮಾಣದ ನಾಯಕನಾಗಿ ಬಣ್ಣ ಹಚ್ಚುತ್ತಿದ್ದಾರೆ. ಇವರಿಗೆ ಜೋಡಿಯಾಗಿ ಜ್ಯೋತಿ, ಸಹನಾ ಸಾಥ್ ನೀಡುತ್ತಿದ್ದಾರೆ.

ಎಂ.ಎಂ.ಕೆ. ಬಾಲು ನಿರ್ಮಾಣ‌ ಮಾಡುತ್ತಿರುವ ʼಕರ್ನಾಟಕದ love’s ಕೇರಳʼ ಸಿರೀಸ್‌ಗೆ ಲೋಕೇಶ್ ಅವರದ್ದೇ ಕಥೆ ಚಿತ್ರಕಥೆ. ಟೈಟಲ್ ಹೇಳುವಂತೆ ಇದೊಂದು ಪ್ರೇಮಕಥೆ‌‌ ಒಳಗೊಂಡಿದೆ. ಆನಂದ್ ಇಳಯರಾಜ ಛಾಯಾಗ್ರಹಣ, ಪ್ರವೀಣ್ ಶ್ರೀನಿವಾಸ್ ಸಂಗೀತ, ಮಹೇಶ್ ಸಂಕಲನ ಸರಣಿಗಿದೆ.‌ ಮುಂದಿನ ವಾರದಿಂದ ಕೇರಳ ಭಾಗದಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಸಜ್ಜಾಗಿದೆ.

’ಭುವನಂ ಗಗನಂ’ ಸಿನಿಮಾಗೆ ಧ್ರುವ ಸರ್ಜಾ ಸಾಥ್‌

ಬೆಂಗಳೂರು: ಸ್ಯಾಂಡಲ್‌ವುಡ್‌ ಅಂಗಳದ ಇಬ್ಬರು ಪ್ರತಿಭಾನ್ವಿತ ನಟರಾದ ʻಸಲಾರ್ʼ ಪ್ರಮೋದ್ ಹಾಗೂ ʼದಿಯಾʼ ಪೃಥ್ವಿ ಅಂಬಾರ್ ನಟನೆಯ ಬಹುನಿರೀಕ್ಷಿತ ಸಿನಿಮಾ ʻಭುವನಂ ಗಗನಂʼ. ಈ ಚಿತ್ರದ ನಿರ್ಮಾಪಕ ಎಂ. ಮುನೇಗೌಡ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಟೀಸರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಬೆಸ್ಟ್ ವಿಷಸ್ ತಿಳಿಸಿದ್ದಾರೆ. ಬೆಂಗಳೂರಿನ ಡಾ. ರಾಜಕುಮಾರ್‌ ಇಂಡೋರ್ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ನಟ ನೆನಪಿರಲಿ ಪ್ರೇಮ್, ನಿರ್ದೇಶಕ ಸಿಂಪಲ್ ಸುನಿ ಸೇರಿದಂತೆ ಹಲವರು ಉಪಸ್ಥಿತಿದ್ದರು.

ಇದನ್ನೂ ಓದಿ: Kannada New Movie: ʻಕಮಲ್ ಹಾಸನ್ʼ ಬಂದು ಟೈಟಲ್‌ ಲಾಂಚ್‌ ಮಾಡಿದ್ರು! ಯಾವುದು ಆ ಸಿನಿಮಾ?

ಭುವನಂ ಗಗನಂ ಸಿನಿಮಾ ಲವ್, ರೋಮ್ಯಾನ್ಸ್, ಫ್ಯಾಮಿಲಿ ಎಮೋಷನ್ ಕಥಾಹಂದರ ಸಿನಿಮಾವಾಗಿದ್ದು, ನಗರ, ಹಳ್ಳಿ ಎರಡು ಬ್ಯಾಕ್ ಡ್ರಾಪ್‌ನಲ್ಲಿ ನಡೆಯುವ ಕಥೆಯಾಗಿದ್ದು, ಪ್ರಮೋದ್‌ಗೆ ಜೋಡಿಯಾಗಿ ʼಲವ್ ಮಾಕ್ಟೇಲ್ʼ ಖ್ಯಾತಿಯ ರೆಚೆಲ್ ಡೇವಿಡ್, ಪೃಥ್ವಿಗೆ ಜೋಡಿಯಾಗಿ ಅಶ್ವಥಿ ನಟಿಸ್ತಿದ್ದಾರೆ. ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ಸಿದ್ಲಿಂಗು ಶ್ರೀಧರ್, ಹರಿಣಿ, ʼಸ್ಪರ್ಶʼ ರೇಖಾ, ಪ್ರಜ್ವಲ್ ಶೆಟ್ಟಿ, ಚೇತನ್ ದುರ್ಗ ತಾರಾಬಳಗದಲ್ಲಿದ್ದಾರೆ. ಉದಯ್ ಲೀಲಾ ಕ್ಯಾಮೆರಾ ಕೈಚಳಕ, ಗುಮ್ಮಿನೇನಿ ವಿಜಯ್ ಮ್ಯೂಸಿಕ್ ಕಿಕ್, ಸುನಿಲ್‌ ಕಶ್ಯಪ್ ಸಂಕಲನ ಸಿನಿಮಾಕ್ಕಿದೆ. ಮಳೆಗಾಲದಲ್ಲಿ ʼಭುವನಂ ಗಗನಂʼ ಸಿನಿಮಾ ತೆರೆಗೆ ಬರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕಿರುತೆರೆ/ಒಟಿಟಿ

Kapil Sharma: ಸುನಿಲ್‌ ಗ್ರೋವರ್ ಜತೆಗೆ ನೆಟ್​ಫ್ಲಿಕ್ಸ್​ಗೆ ಕಾಲಿಟ್ಟ ಕಪಿಲ್ ಶರ್ಮಾ; ಶೋ ಟ್ರೇಲರ್‌ ಔಟ್‌: ಪ್ರಸಾರ ಯಾವಾಗ ?

Kapil Sharma: ಹಾಸ್ಯ, ಮನರಂಜನೆಯ ರಸದೌತಣ ನೀಡಿ ದೇಶದ ಮನೆಮಾತಾಗಿರುವ ಕಪಿಲ್‌ ಶರ್ಮಾ ಅವರ ಹೊಸ ಶೋ ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶರ್ಮಾ ಶೋ’ ನೆಟ್‌ಫ್ಲಿಕ್ಸ್‌ನಲ್ಲಿ ಪ್ರಸಾರವಾಗಲಿದೆ. ಸದ್ಯ ಶೋದ ಟ್ರೇಲರ್‌ ಬಿಡುಗಡೆಯಾಗಿದ್ದು, ಗಮನ ಸೆಳೆಯುತ್ತಿದೆ.

VISTARANEWS.COM


on

kapil sharma
Koo

ಮುಂಬೈ: ಭಾರತೀಯರ ಅಚ್ಚುಮೆಚ್ಚಿನ ಕಾಮಿಡಿ ಶೋ ʼದಿ ಕಪಿಲ್‌ ಶರ್ಮಾ ಶೋʼ (The Kapil Sharma Show). ಈ ಶೋ ಮೂಲಕ ಹಾಸ್ಯ, ಮನರಂಜನೆಯ ರಸದೌತಣ ನೀಡಿ ದೇಶದ ಮನೆಮಾತಾಗಿರುವ ಕಪಿಲ್‌ ಶರ್ಮಾ (Kapil Sharma) ಹಾಗೂ ಸುನಿಲ್‌ ಗ್ರೋವರ್‌ (Sunil Grover) ಮತ್ತೆ ಒಂದಾಗಿದ್ದಾರೆ. ಸುಮಾರು ಆರು ವರ್ಷಗಳ ಮುನಿಸಿನ ಬಳಿಕ ಇಬ್ಬರೂ ಒಂದಾಗಿದ್ದಾರೆ. ನೆಟ್‌ಫ್ಲಿಕ್ಸ್‌ (Netflix)ನಲ್ಲಿ ಪ್ರಸಾರವಾಗಲಿರುವ ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶರ್ಮಾ ಶೋ’ (The Great Indian Kapil Show)ದಲ್ಲಿ ಈ ಇಬ್ಬರು ದಿಗ್ಗಜರು ಒಂದಾಗಲಿದ್ದಾರೆ. ಈ ಮೂಲಕ ಟಿವಿಯಲ್ಲಿ ಜನಪ್ರಿಯವಾದ ಶೋ ಒಟಿಟಿಗೂ ಕಾಲಿಟ್ಟಿದೆ. ಶನಿವಾರ (ಮಾರ್ಚ್‌ 23) ಈ ಶೋದ ಟ್ರೇಲರ್‌ ಬಿಡುಗಡೆಯಾಗಿದ್ದು, ಗಮನ ಸೆಳೆದಿದೆ.

ಬಾಲಿವುಡ್​, ಕ್ರಿಕೆಟ್​ ಲೋಕದ ಭಾರಿ ದೊಡ್ಡ ಸೆಲೆಬ್ರಿಟಿಗಳು ಕಪಿಲ್​ ಅವರ ಶೋಗೆ ಬಂದಿರುವುದು ಟ್ರೇಲರ್‌ನಲ್ಲಿ ಕಂಡು ಬಂದಿದೆ. ಮತ್ತೊಂದು ವಿಶೇಷ ಎಂದರೆ ಕಪಿಲ್​ ಶರ್ಮಾ ಅವರ ಹಳೆಯ ಗೆಳೆಯರೆಲ್ಲ ಮತ್ತೆ ಶೋಗೆ ಬಂದಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಇನ್ನು ನಗುವಿಗೆ ಕೊರತೆ ಇಲ್ಲ ಎಂದು ಅನೇಕರು ಸಂತಸ ವ್ಯಕ್ತಪಡಿಸಿದ್ದಾರೆ.

ಯಾವಾಗ ಪ್ರಸಾರ ?

ಸುನಿಲ್‌ ಗ್ರೋವರ್‌ ಜತೆಗೆ ಅರ್ಚನಾ ಪೂರನ್‌ ಸಿಂಗ್‌, ಕಿಕು ಶಾರದಾ, ರಾಜೀವ್ ಠಾಕೂರ್ ಮತ್ತು ಕೃಷ್ಣ ಅಭಿಷೇಕ್ ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶರ್ಮಾ ಶೋ’ದ ಭಾಗವಾಗಲಿದ್ದಾರೆ. ನೆಟ್​ಫ್ಲಿಕ್ಸ್​ನಲ್ಲಿ ಮಾರ್ಚ್ 30ರಿಂದ ಪ್ರತಿ ಶನಿವಾರ ರಾತ್ರಿ 8 ಗಂಟೆಗೆ ಹೊಸ ಈ ಶೋ ಪ್ರಸಾರವಾಗಲಿದೆ.

ಟ್ರೇಲರ್‌ನಲ್ಲಿ ಏನಿದೆ?

ಶೋ ಅದ್ದೂರಿಯಾಗಿ ಮೂಡಿ ಬಂದಿದೆ ಎನ್ನುವುದಕ್ಕೆ ಟ್ರೇಲರ್‌ನಲ್ಲಿ ಸಾಕ್ಷಿ ಸಿಕ್ಕಿದೆ. ಭಾರತೀಯ ಚಿತ್ರರಂಗ ಹಾಗೂ ಕ್ರಿಕೆಟ್​ ಲೋಕದ ದಿಗ್ಗಜರು ಈ ಬಾರಿ ಶೋಗೆ ಅತಿಥಿಗಳಾಗಿ ಆಗಮಿಸಲಿದ್ದಾರೆ. ಪ್ರಸ್ತುತ ಬಿಡುಗಡೆ ಆಗಿರುವ ಟ್ರೇಲರ್‌ನಲ್ಲಿ ​ಬಾಲಿವುಡ್ ಸ್ಟಾರ್ ನಟ ರಣ್​ಬೀರ್ ಕಪೂರ್, ತಮ್ಮ ತಾಯಿ ಹಾಗೂ ಸಹೋದರಿ ಜತೆಗೆ ಶೋದಲ್ಲಿ ಭಾಗವಹಿಸಿರುವುದು ಕಂಡು ಬಂದಿದೆ. ಸಾಮಾನ್ಯವಾಗಿ ಯಾವುದೇ ಶೋಗೆ ಹೋಗದ ಆಮೀರ್ ಖಾನ್ ಸಹ ಕಪಿಲ್ ಶರ್ಮಾ ಶೋಗೆ ಆಗಮಿಸಿದ್ದಾರೆ. ಭಾರತೀಯ ಕ್ರಿಕೆಟ್ ಟೀಂನ ನಾಯಕ ರೋಹಿತ್‌ ಶರ್ಮಾ, ಕ್ರಿಕೆಟಿಗ ಶ್ರೆಯಸ್ ಐಯ್ಯರ್ ಮತ್ತಿತರರು ಆಗಮಿಸಿದ್ದಾರೆ. ಹೀಗಾಗಿ ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶರ್ಮಾ ಶೋ’ ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: ನಾರಾಯಣಮೂರ್ತಿ ಬಸ್‌ ಕಂಡಕ್ಟರ್ ಹೈ ಕ್ಯಾ?‌ ಭೇಟಿ ಕುರಿತು ಕಪಿಲ್‌ ಶರ್ಮಾ ಶೋನಲ್ಲಿ ಸುಧಾಮೂರ್ತಿ ಹೇಳಿದ್ದೇನು?

ಇಬ್ಬರ ಮಧ್ಯೆ ಏಕೆ ಜಗಳ?

ಕಪಿಲ್‌ ಶರ್ಮಾ ಹಾಗೂ ಸುನಿಲ್‌ ಗ್ರೋವರ್‌ ಅವರ ಮಧ್ಯೆ 2017ರಲ್ಲಿ ಭಿನ್ನಾಭಿಪ್ರಾಯ ಮೂಡಿತ್ತು. ಆಸ್ಟ್ರೇಲಿಯಾದಲ್ಲಿ ಶೋ ಮುಗಿಸಿ, ಮುಂಬೈಗೆ ಆಗಮಿಸುವಾಗ ವಿಮಾನದಲ್ಲಿಯೇ ಕಪಿಲ್‌ ಶರ್ಮಾ ಅವರು ಸುನಿಲ್‌ ಗ್ರೋವರ್‌ ಅವರಿಗೆ ಬೈದಿದ್ದರು. ಇದಾದ ಬಳಿಕ ಇಬ್ಬರೂ ವಾಗ್ವಾದ ನಡೆಸಿದ್ದರು ಎನ್ನಲಾಗಿದೆ. ನಂತರ ಸುನಿಲ್‌ ಗ್ರೋವರ್‌ ಅವರು ʼದಿ ಕಪಿಲ್‌ ಶರ್ಮಾ ಶೋʼ ತೊರೆದಿದ್ದರು. ಜಗಳದ ಕುರಿತು ಸ್ಪಷ್ಟನೆ ನೀಡಿದ್ದ ಕಪಿಲ್‌ ಶರ್ಮಾ, “ನಾನು ಎಂದಿಗೂ ಸುನಿಲ್‌ ಗ್ರೋವರ್‌ ಜತೆ ಜಗಳ ಆಡಿಲ್ಲ, ಬೈದಿಲ್ಲ. ನಾನು ಅದ್ಭುತ ವ್ಯಕ್ತಿಗಳ ಜತೆ ಕೆಲಸ ಮಾಡಲು ಬಯಸುತ್ತೇನೆ. ಅವರಲ್ಲಿ ಸುನಿಲ್‌ ಗ್ರೋವರ್‌ ಕೂಡ ಒಬ್ಬರು” ಎಂದು ಹೇಳಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕಿರುತೆರೆ/ಒಟಿಟಿ

OTT Release: ಒಟಿಟಿ ಪ್ರಿಯರಿಗೆ ಈ ವಾರ ಹಬ್ಬ; ʼಉಪಾಧ್ಯಕ್ಷʼ ಚಿತ್ರದ ಜತೆಗೆ ರಿಲೀಸ್‌ ಆದ‌ ಇತರ ಶೋಗಳ ವಿವರ ಇಲ್ಲಿದೆ

OTT Release: ಈ ವಾರ ಒಟಿಟಿಯಲ್ಲಿ ಚಿಕ್ಕಣ್ಣ ಅಭಿನಯದ ಉಪಾಧ್ಯಕ್ಷ ಸಿನಿಮಾ ಸೇರಿದಂತೆ ಹಲವು ಚಿತ್ರಗಳು ತೆರೆ ಕಂಡಿವೆ. ಈ ಕುರಿತಾದ ವಿವರ ಇಲ್ಲಿದೆ.

VISTARANEWS.COM


on

ott
Koo

ಮುಂಬೈ: ಇತ್ತೀಚೆಗೆ ಒಟಿಟಿ ಫ್ಲಾಟ್‌ಫಾರ್ಮ್‌ಗೆ ವೀಕ್ಷಕರು ಹೆಚ್ಚಾಗಿದ್ದಾರೆ. ಹಲವರು ಥಿಯೇಟರ್‌ಗೆ ಹೋಗಿ ಸಿನಿಮಾ ನೋಡುವುದಕ್ಕಿಂತ ಒಟಿಟಿ ರಿಲೀಸ್‌ಗೆ ಕಾಯುತ್ತಿರುತ್ತಾರೆ. ಸಿನಿಮಾ ಜತೆಗೆ ವೆಬ್‌ ಸೀರಿಸ್‌, ಶೋಗಳಿಗೂ ಸಾಕಷ್ಟು ಸಂಖ್ಯೆಯಲ್ಲಿ ಪ್ರೇಕ್ಷಕರಿದ್ದಾರೆ. ಈ ವಾರ ಒಟಿಟಿಯಲ್ಲಿ ತೆರೆ ಕಾಣುತ್ತಿರುವ ಪ್ರಮುಖ ಚಿತ್ರಗಳು, ಶೋಗಳ ವಿವರ ಇಲ್ಲಿದೆ (OTT Release).

ಶೋ ಟೈಮ್‌ (ಡಿಸ್ನಿ ಪ್ಲಸ್‌ ಹಾಟ್‌ ಸ್ಟಾರ್‌)-ಮಾರ್ಚ್‌ 8

ಬಾಲಿವುಡ್‌ ಸ್ಟಾರ್‌ ಇಮ್ರಾನ್‌ ಹಶ್ಮಿ ಅಭಿನಯದ ವೆಬ್‌ ಸೀರಿಸ್‌ ʼಶೋ ಟೈಮ್‌ʼ ಡಿಸ್ನಿ ಪ್ಲಸ್‌ ಹಾಟ್‌ ಸ್ಟಾರ್‌ನಲ್ಲಿ ಮಾರ್ಚ್‌ 8ರಿಂದ ಸ್ಟ್ರೀಮಿಂಗ್‌ ಆಗುತ್ತಿದೆ. ಕರಣ್‌ ಜೋಹರ್‌ ಅವರ ಧರ್ಮ ಪ್ರೊಡಕ್ಷನ್ಸ್‌ ಈ ವೆಬ್‌ ಸೀರಿಸ್‌ ಅನ್ನು ನಿರ್ಮಿಸಿದ್ದು, ಶ್ರೀಯಾ ಶರಣ್‌, ಮೌನಿ ರಾಯ್‌, ನಾಸಿರುದ್ದೀನ್‌ ಶಾ ಮತ್ತಿತರರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಮಹಾರಾಣಿ ಸೀನಸ್‌ 3 (ಸೋನಿ ಲೈವ್‌)-ಮಾರ್ಚ್‌ 7

ಜನಪ್ರಿಯ ವೆಬ್‌ ಸೀರಿಸ್‌ ʼಮಹಾರಾಣಿʼಯ ಮೂರನೇ ಸೀಸನ್‌ ಕೂಡ ಮಾರ್ಚ್‌ 8ರಿಂದ ಪ್ರಸಾರವಾಗುತ್ತಿದೆ. ಬಾಲಿವುಡ್‌ ನಟಿ ಹುಮಾ ಖರೇಷಿ ಅಭಿನಯದ ಈ ಪಾಲಿಟಿಕಲ್‌ ಡ್ರಾಮವನ್ನು ಸೋನಿ ಲೈವ್‌ (SonyLIV)ನಲ್ಲಿ ವೀಕ್ಷಿಸಬಹುದು. ಸಾಮಾನ್ಯ ಹೆಣ್ಣು ಮಗಳೊಬ್ಬಳು ರಾಜಕೀಯ ಪ್ರವೇಶ ಪಡೆಯುವ ರೋಚಕ ಕಥೆಯನ್ನು ಇದು ಒಳಗೊಂಡಿದೆ.

ಮೆರ‍್ರಿ ಕ್ರಿಸ್‌ಮಸ್‌ (ನೆಟ್‌ಫ್ಲಿಕ್ಸ್‌)-ಮಾರ್ಚ್‌ 8

ಮಾರ್ಚ್‌ 8ರಿಂದ ನೀವು ನೋಡಬಹುದಾದ ಥ್ರಿಲ್ಲರ್‌ ಚಿತ್ರ ʼಮೆರ‍್ರಿ ಕ್ರಿಸ್‌ಮಸ್‌ʼ. ಕಾಲಿವುಡ್‌ ಸ್ಟಾರ್‌ ವಿಜಯ್‌ ಸೇತುಪತಿ ಮತ್ತು ಬಾಲಿವುಡ್‌ ನಟಿ ಕತ್ರಿನಾ ಕೈಫ್‌ ಮೊದಲ ಬಾರಿ ತೆರೆ ಮೇಲೆ ಒಂದಾದ ಚಿತ್ರವನ್ನು ಶ್ರೀರಾಮ್‌ ರಾಘವನ್‌ ನಿರ್ದೇಶಿಸಿದ್ದಾರೆ. ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡ ಈ ಚಿತ್ರ ಬಾಕ್ಸ್‌ ಆಫೀಸ್‌ನಲ್ಲಿ ಅಷ್ಟೇನೂ ಸದ್ದು ಮಾಡಿಲ್ಲ. ನೆಟ್‌ಫ್ಲಿಕ್ಸ್‌ನಲ್ಲಿ ಈ ಸಿನಿಮಾವನ್ನು ವೀಕ್ಷಿಸಬಹುದು.

ದಿ ರಿಜಿಮ್‌ (ಜಿಯೋ ಸಿನಿಮಾ)- ಮಾರ್ಚ್‌ 4

ಈ ಇಂಗ್ಲಿಷ್‌ ಟಿವಿ ಮಿನಿ ಸಿರೀಸ್‌ ಮಾರ್ಚ್‌ 4ರಿಂದ ಜಿಯೋ ಸಿನಿಮಾದಲ್ಲಿ ಪ್ರಸಾರವಾಗುತ್ತಿದೆ. ಸರ್ವಾಧಿಕಾರಿ ಎಲೆನಾ ವೆರ್ನ್ಹ್ಯಾಮ್ ಪಾತ್ರದಲ್ಲಿ ಆಸ್ಕರ್ ಪ್ರಶಸ್ತಿ ವಿಜೇತೆ ಕೇಟ್ ವಿನ್ಸ್ಲೆಟ್ ಕಾಣಿಸಿಕೊಂಡಿದ್ದಾರೆ. ಇದರಲ್ಲಿ ಹಗ್ ಗ್ರಾಂಟ್, ಮಥಿಯಾಸ್ ಶೋನರ್ಟ್ಸ್ ಮತ್ತು ಗೈಲ್ಯೂಮ್ ಗ್ಯಾಲಿಯನ್ ಮತ್ತಿತರರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಡ್ಯಾಮ್‌ಸೆಲ್‌ (ನೆಟ್‌ಫ್ಲಿಕ್ಸ್‌)- ಮಾರ್ಚ್‌ 8

ಅಮೆರಿಕನ್‌ ಡಾರ್ಕ್‌ ಫ್ಯಾಂಟಸಿ ಚಿತ್ರ ʼಡ್ಯಾಮ್‌ಸೆಲ್‌ʼ ಮಾರ್ಚ್‌ 8ರಿಂದ ನೆಟ್‌ಫ್ಲಿಕ್ಸ್‌ನಲ್ಲಿ ಲಭ್ಯ. ಮಿಲ್ಲಿ ಬಾಬಿ ಬ್ರೌನ್, ರೇ ವಿನ್ಸ್ಟೋನ್, ನಿಕ್ ರಾಬಿನ್ಸನ್, ಶೋಹ್ರೆ ಅಘ್ಡಾಶ್ಲೂ, ಏಂಜೆಲಾ ಬ್ಯಾಸೆಟ್, ರಾಬಿನ್ ರೈಟ್ ಮತ್ತಿತರರು ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಲಾಲ್‌ ಸಲಾಂ (ನೆಟ್‌ಫ್ಲಿಕ್ಸ್‌)- ಮಾರ್ಚ್‌ 8

ಕಾಲಿವುಡ್‌ ಸೂಪರ್‌ ಸ್ಟಾರ್‌ ರಜನಿಕಾಂತ್‌ ಅಭಿನಯದ ʼಲಾಲ್‌ ಸಲಾಂʼ ಚಿತ್ರವನ್ನು ಥಿಯೇಟರ್‌ನಲ್ಲಿ ಮಿಸ್‌ ಮಾಡಿಕೊಂಡವರು ಒಟಿಟಿಯಲ್ಲಿ ಮಾರ್ಚ್‌ 8ರಿಂದ ಈ ಸಿನಿಮಾವನ್ನು ನೋಡಬಹುದು. ನೆಟ್‌ಫ್ಲಿಕ್ಸ್‌ನಲ್ಲಿ ಇದು ಸ್ಟ್ರೀಮಿಂಗ್‌ ಆಗುತ್ತಿದೆ. ಐಶ್ವರ್ಯಾ ರಜನಿಕಾಂತ್‌ ನಿರ್ದೇಶನದ ಈ ಚಿತ್ರದಲ್ಲಿ ವಿಷ್ಣು ವಿಶಾಲ್‌, ವಿಕ್ರಾಂತ್‌ ಮತ್ತಿತರರು ಮುಖ್ಯ ಪಾತ್ರದಲ್ಲಿದ್ದಾರೆ. ಥಿಯೇಟರ್‌ನಲ್ಲಿ ಸಾಧಾರಣ ಯಶಸ್ಸು ಕಂಡಿದ್ದ ಇದು ಒಟಿಟಿಯಲ್ಲಿ ಗಮನ ಸೆಳೆಯುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

ಉಪಾಧ್ಯಕ್ಷ (ಸನ್‌ ನೆಕ್ಟ್ಸ್‌) – ಮಾರ್ಚ್‌ 8

ಇತ್ತೀಚೆಗೆ ಸ್ಯಾಂಡಲ್‌ವುಡ್‌ನಲ್ಲಿ ಸುದ್ದಿ ಮಾಡಿದ ಚಿತ್ರ ʼಉಪಾಧ್ಯಕ್ಷʼ. ಇದೀಗ ಈ ಸಿನಿಮಾ ಸದ್ದಿಲ್ಲದೆ ಒಟಿಟಿಗೆ ಲಗ್ಗೆ ಇಟ್ಟಿದೆ. ಮಾರ್ಚ್‌ 8ರಿಂದ ನೀವು ಸನ್‌ ನೆಕ್ಟ್ಸ್‌ಲ್ಲಿ ಉಪಾಧ್ಯಕ್ಷ ಚಿತ್ರ ವೀಕ್ಷಿಸಬಹುದು. ಚಿಕ್ಕಣ್ಣ ನಾಯಕನಾಗಿರುವ ಈ ಚಿತ್ರ ಮಲೈಕಾ ವಸುಪಾಲ್‌, ರವಿಶಂಕರ್‌, ಸಾಧು ಕೋಕಿಲ, ವೀಣಾ ಸುಂದರ್‌ ಮತ್ತಿತರರು ಪ್ರಧಾನ ಪಾತ್ರಗಳಲ್ಲಿ ಮಿಂಚಿದ್ದಾರೆ.

ಅನ್ವೇಷಿಪ್ಪಿನ್‌ ಕಂಡೆಂತ್ತುಮ್‌ (ನೆಟ್‌ಫ್ಲಿಕ್ಸ್‌)- ಮಾರ್ಚ್‌ 8

ನೀವು ಮಲಯಾಳಂ ಚಿತ್ರ ಪ್ರೇಮಿಗಳಾಗಿದ್ದರೆ ಈ ಚಿತ್ರವನ್ನು ಮಿಸ್‌ ಮಾಡದೇ ನೋಡಿ. ಈ ಕ್ರೈಂ ಥ್ರಿಲ್ಲರ್‌ 90ರ ದಶಕದ ಪೊಲೀಸ್‌ ತನಿಖೆಯ ಕಥೆ ಹೇಳುತ್ತುದೆ. ಟೊವಿನೋ ಥಾಮಸ್‌, ಇಂದ್ರನ್ಸ್‌, ಸಿದ್ಧಿಕ್‌ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಕ್ಷಣ ಕ್ಷಣಕ್ಕೂ ಕುತೂಹಲ ಕೆರಳಿಸುವ ಈ ಚಿತ್ರದಲ್ಲಿ ಯಾರೂ ಊಹಿಸದ ಕ್ಲೈಮ್ಯಾಕ್ಸ್‌ ಇದೆ. ಡಾರ್ವಿನ್ ಕುರಿಯಕ್ಕೋಸ್‌ ಈ ಸಿನಿಮಾದ ನಿರ್ದೇಶಕರು. ಅನ್ವೇಷಿಪ್ಪಿನ್‌ ಕಂಡೆಂತ್ತುಮ್‌ ಚಿತ್ರವನ್ನು ಮಾರ್ಚ್‌ 8ರಿಂದ ನೆಟ್‌ಫ್ಲಿಕ್ಸ್‌ನಲ್ಲಿ ವೀಕ್ಷಿಸಬಹುದು.

ಇದನ್ನೂ ಓದಿ: Nitish Bharadwaj: ʼ16,000 ಹೆಂಡತಿಯರನ್ನು ನಿಭಾಯಿಸಿದʼವನಿಗೆ ಪತ್ನಿಯಿಂದ ದೌರ್ಜನ್ಯ! ಏನಿವರ ಗೋಳಿನ ಕತೆ?

Continue Reading

ಕಿರುತೆರೆ

Nitish Bharadwaj: ʼ16,000 ಹೆಂಡತಿಯರನ್ನು ನಿಭಾಯಿಸಿದʼವನಿಗೆ ಪತ್ನಿಯಿಂದ ದೌರ್ಜನ್ಯ! ಏನಿವರ ಗೋಳಿನ ಕತೆ?

ಇದು ಜನಪ್ರಿಯ ಟಿವಿ ಸೀರಿಯಲ್‌ (TV Serial) ʼಮಹಾಭಾರತʼದ ಕೃಷ್ಣನ ಪಾತ್ರಧಾರಿ ನಟ ನಿತೀಶ್ ಭಾರದ್ವಾಜ್ (Nitish Bharadwaj) ಬದುಕಿನ ಕತೆ.

VISTARANEWS.COM


on

nitish bharadwaj with wife
Koo

ಮುಂಬಯಿ: ಮಹಾಭಾರತದ (Mahabharat) ಕೃಷ್ಣನೇನೋ 16,000 ಹೆಂಡತಿಯರನ್ನು ಜಗಳವಿಲ್ಲದೆ ನಿಭಾಯಿಸಿದ. ಆದರೆ ಈ ʼಕೃಷ್ಣʼನ (Krishna) ಬದುಕು ಮಾತ್ರ ಪತ್ನಿಯಿಂದಲೇ ಬರ್ಬಾದ್‌ ಆಗಿದೆ. ಇದು ಜನಪ್ರಿಯ ಟಿವಿ ಸೀರಿಯಲ್‌ (TV Serial) ʼಮಹಾಭಾರತʼದ ಕೃಷ್ಣನ ಪಾತ್ರಧಾರಿ ನಟ ನಿತೀಶ್ ಭಾರದ್ವಾಜ್ (Nitish Bharadwaj) ಬದುಕಿನ ಕತೆ.

ನಿತೀಶ್‌ ಭಾರದ್ವಾಜ್‌ ಮತ್ತು ಅವರ ವಿಚ್ಛೇದಿತ ಪತ್ನಿ ಸ್ಮಿತಾ ಭಾರದ್ವಾಜ್ ನಡುವಿನ ಕಲಹದ ಕತೆ ಹೊಸದೇನೂ ಅಲ್ಲ. ಕಳೆದ ಕೆಲವು ತಿಂಗಳುಗಳಲ್ಲಿ ಇಬ್ಬರೂ ಪರಸ್ಪರರ ವಿರುದ್ಧ ಹಲವಾರು ಆರೋಪಗಳನ್ನು ಮಾಡಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ನಿತೀಶ್ ಇನ್ನಷ್ಟು ಆಘಾತಕಾರಿ ಆರೋಪಗಳನ್ನು ಮಾಡಿದ್ದಾರೆ. ತಮ್ಮಿಬ್ಬರ ದಾಂಪತ್ಯದಲ್ಲಿ ತಾನು ಅತ್ಯಂತ ದೌರ್ಜನ್ಯಕ್ಕೀಡಾದವನು ಎಂದು ಹೇಳಿಕೊಂಡಿದ್ದಾರೆ.

“ಈ ದಾಂಪತ್ಯದಲ್ಲಿ ನಾನು ಎಲ್ಲಾ ರೀತಿಯ ನಿಂದನೆಗಳನ್ನು ಎದುರಿಸಿದ್ದೇನೆ. ನನ್ನ ಪೋಷಕರನ್ನು ನನ್ನಿಂದ ದೂರವಿಡಲಾಯಿತು. ನನ್ನ ಇಬ್ಬರು ಮಕ್ಕಳನ್ನು ನನ್ನಿಂದ ದೂರವಿಡಲಾಯಿತು. ನನ್ನ 11 ವರ್ಷದ ಹೆಣ್ಣುಮಕ್ಕಳು ಹೇಳಿದ ಎರಡು ಸಾಲುಗಳನ್ನು ಮಾತ್ರ ನಾನು ನಿಮಗೆ ಹೇಳುವೆ- ʻಅಪ್ಪಾ, ನಿಮ್ಮನ್ನು ನಮ್ಮ ತಂದೆ ಎಂದು ಕರೆಯಲು ನಮಗೆ ಅಸಹ್ಯವಾಗುತ್ತದೆ.’ ಇದು ಒಂದು ಮಗು ನನಗೆ ಹೇಳಿದ್ದು” ಎಂದು ನಿತೀಶ್ ದುಃಖಿಸಿದ್ದಾರೆ.

“ನನಗೆ ಆಗುತ್ತಿರುವ ಪ್ರಕ್ಷುಬ್ಧತೆಯನ್ನು ಹೇಗೆ ನಿಭಾಯಿಸಬೇಕೆಂದು ನನಗೆ ತಿಳಿಯುತ್ತಿಲ್ಲ. ನಾನು ಹಣ ಕೇಳುತ್ತಿದ್ದೇನೆ ಎಂದು ನನ್ನ ಮೇಲೆ ಮಾಡಿರುವ ಆರೋಪ ಸುಳ್ಳು. ನಾನು ನನ್ನಿಂದ ಮೋಸ ಮಾಡಿ ಕಸಿಯಲಾದ ಹಣವನ್ನು ಕೇಳುತ್ತಿದ್ದೇನೆ. ಹಾಗಾಗಿ ಇಂದು ನಾನು ಮಾಡುತ್ತಿರುವುದು ನನ್ನ ಮಕ್ಕಳ ಪಾಲಿನ ಹೋರಾಟವಾಗಿದೆ” ಎಂದಿದ್ದಾರೆ ನಿತೀಶ್. ‌

“ವಂಚಿತನಾದ ನಾನು ಬೇರೆ ಯಾವುದೇ ಮಹಿಳೆಗೆ ನ್ಯಾಯ ಸಲ್ಲಿಸಲು ಸಾಧ್ಯವಾಗುತ್ತದೆಯೇ ಎಂದು ನನಗೆ ಗೊತ್ತಾಗುತ್ತಿಲ್ಲ. ದಾಂಪತ್ಯ ನನಗೆ ಎಂದೂ ಗೌರವಾರ್ಹವಾದುದು. ನಾನು ಅದನ್ನು ನಂಬುತ್ತೇನೆ. ನನ್ನ ಹೆತ್ತವರ ದಾಂಪತ್ಯ ಸೇರಿದಂತೆ ಹಲವು ಯಶಸ್ವಿ ಕುಟುಂಬಗಳನ್ನು ನಾನು ನೋಡಿದ್ದೇನೆ” ಎಂದಿದ್ದಾರೆ ಅವರು.

ಕಳೆದ ತಿಂಗಳು ನಿತೀಶ್ ಭಾರದ್ವಾಜ್ ಅವರು ಅವರ ಪತ್ನಿ ಸ್ಮಿತಾ ಗೇಟ್ ವಿರುದ್ಧ ಕಿರುಕುಳ ಮತ್ತು ಅಶಿಸ್ತಿನ ವರ್ತನೆಯನ್ನು ಆರೋಪಿಸಿ ಪೊಲೀಸ್ ದೂರು ದಾಖಲಿಸಿದ್ದಾರೆ. ಸ್ಮಿತಾ ಗೇಟ್‌, ಮಧ್ಯಪ್ರದೇಶದ ಮಾನವ ಹಕ್ಕುಗಳ ಆಯೋಗದಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವರದಿಯ ಪ್ರಕಾರ, ತಮ್ಮ ಅವಳಿ ಹೆಣ್ಣು ಮಕ್ಕಳಾದ ದೇವಯಾನಿ ಮತ್ತು ಶಿವರಂಜನಿ ಅವರನ್ನು ಭೇಟಿಯಾಗದಂತೆ ನಿತೀಶ್‌ ಅವರನ್ನು ಸ್ಮಿತಾ ತಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ತಮ್ಮ ಹೆಣ್ಣುಮಕ್ಕಳ ಶಾಲೆಗಳಿಗೆ ತಾವು ಹೋಗುವುದನ್ನು ತಡೆದಿದ್ದಾರೆ. ಇದು ತಮ್ಮ ಮಾನಸಿಕ ನೆಮ್ಮದಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಅವರು ದೂರಿದ್ದಾರೆ.

ಜನಪ್ರಿಯ ಟಿವಿ ಸರಣಿ ಮಹಾಭಾರತದಲ್ಲಿ ಶ್ರೀಕೃಷ್ಣನ ಪಾತ್ರದಲ್ಲಿ ನಿತೀಶ್ ದೇಶಾದ್ಯಂತ ಖ್ಯಾತಿ ಗಳಿಸಿದ್ದರು. ವಿಷ್ಣು ಪುರಾಣ, ಮೊಹೆಂಜೊದಾರೋ, ಕೇದಾರನಾಥ್ ಮತ್ತಿತರ ಜನಪ್ರಿಯ ಧಾರಾವಾಹಿಗಳು ಮತ್ತು ಚಲನಚಿತ್ರಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Actor Dhanush: ಧನುಷ್‌-ರಶ್ಮಿಕಾ ಅಭಿನಯದ ಸಿನಿಮಾದ ಟೈಟಲ್‌ ರಿವೀಲ್‌!

Continue Reading
Advertisement
pm narendra modi nomination varanasi
ಪ್ರಮುಖ ಸುದ್ದಿ9 mins ago

PM Narendra Modi: ವಾರಾಣಸಿಯಲ್ಲಿ ನರೇಂದ್ರ ಮೋದಿ ನಾಮಪತ್ರ ಅನುಮೋದಿಸುವ ನಾಲ್ವರು ಯಾರು?

karnataka Rain Effected
ಬೆಂಗಳೂರು18 mins ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Viral Video
ವೈರಲ್ ನ್ಯೂಸ್19 mins ago

Viral Video: ಛೇ..ಇವನೆಂಥಾ ಪಾಪಿ..! ನಾಯಿ ಮೇಲೆ ಪದೇ ಪದೇ ಹಲ್ಲೆ ನಡೆಸಿ ವಿಕೃತಿ

Salman Khan
ಬಾಲಿವುಡ್29 mins ago

Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; 6ನೇ ಆರೋಪಿಯ ಬಂಧನ

RCB Vs CSK
ಕ್ರೀಡೆ30 mins ago

RCB vs CSK: ಆರ್​ಸಿಬಿ ಪ್ಲೇ ಆಫ್​ ಹಾದಿಗೆ ಕೊಳ್ಳಿ ಇಡಲಿದೆಯೇ ಮಳೆ; ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಏನು?

bomb hoax bengaluru
ಕ್ರೈಂ1 hour ago

Bomb Hoax: ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್, ತಪಾಸಣೆ

Team India Coach
ಕ್ರಿಕೆಟ್1 hour ago

Team India Coach: ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಹುದ್ದೆಗೆ ಅರ್ಜಿ ಆಹ್ವಾನ; ಮೇ 27 ಕೊನೆಯ ದಿನ

Job Alert
ಉದ್ಯೋಗ2 hours ago

Job Alert: ಎಚ್ಎ‌ಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Narendra Modi
ದೇಶ2 hours ago

Narendra Modi: ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾರತಿ ಮಾಡಿದ ಮೋದಿ-ಇಲ್ಲಿದೆ ಲೈವ್‌

HD Deve gowda prajwal revanna case
ಪ್ರಮುಖ ಸುದ್ದಿ2 hours ago

‌Prajwal Revanna Case: ಜೀವನದಲ್ಲಿ ಮೊದಲ ಬಾರಿಗೆ ಗಡ್ಡ ಬಿಟ್ಟ ದೇವೇಗೌಡರು; ವೈರಿನಾಶಕ್ಕೆ ಶಪಥ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain Effected
ಬೆಂಗಳೂರು18 mins ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ7 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ17 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ17 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ18 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ18 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ18 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ1 day ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 day ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

ಟ್ರೆಂಡಿಂಗ್‌