Explainer: ನೆಟ್‌ಫ್ಲಿಕ್ಸ್‌ ಭಾರತದಲ್ಲಿ ಚಂದಾದಾರರನ್ನು ಕಳೆದುಕೊಳ್ಳುತ್ತಿರುವುದೇಕೆ? - Vistara News

EXPLAINER

Explainer: ನೆಟ್‌ಫ್ಲಿಕ್ಸ್‌ ಭಾರತದಲ್ಲಿ ಚಂದಾದಾರರನ್ನು ಕಳೆದುಕೊಳ್ಳುತ್ತಿರುವುದೇಕೆ?

ಇತ್ತೀಚಿನ ದಿನಗಳಲ್ಲಿ ನಷ್ಟವಾಗುತ್ತಿರುವ ಚಂದಾದಾರರ ಸಂಖ್ಯೆ ನೆಟ್‌ಫ್ಲಿಕ್ಸ್‌ ಸಂಸ್ಥೆಗೆ ತಲೆಬಿಸಿ ತಂದೊಡ್ಡಿದೆ. ಭಾರತದಲ್ಲೂ ಸಬ್‌ಸ್ಕ್ರೈಬರ್‌ಗಳ ಸಂಖ್ಯೆ ಕುಸಿಯುತ್ತಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನೋಡುಗರನ್ನು ತೆರೆಗೆ ಸದಾಕಾಲ ಅಂಟಿಕೊಂಡಿರುವಂತೆ ಮಾಡಿರುವ ಒಟಿಟಿ ವೇದಿಕೆಗಳಲ್ಲಿ ನೆಟ್‌ಪ್ಲಿಕ್ಸ್‌, ಅಮೆಜಾನ್‌ ಪ್ರೈಮ್‌, ಡಿಸ್ನಿ ಹಾಟ್‌ಸ್ಟಾರ್‌ಗೆ ಅಗ್ರ ಸ್ಥಾನ. ಆದರೆ ಕಳೆದ ಮೂರು ತಿಂಗಳಲ್ಲಿ ಇದು ಜಗತ್ತಿನಾದ್ಯಂತ ಕಳೆದುಕೊಂಡಿರುವ ಚಂದಾದಾರರ ಸಂಖ್ಯೆ 2 ಲಕ್ಷ. ಭಾರತದಲ್ಲೂ ಇದು ಭದ್ರ ನೆಲೆಗಟ್ಟು ಕಂಡುಕೊಂಡಿಲ್ಲ. ಈ ಹಿನ್ನಡೆಗೆ ಕಾರಣವೇನು?
ಅಮೆರಿಕ ಮೂಲದ ಈ ಮೂರೂ ಕಂಪನಿಗಳು ಭಾರತದಲ್ಲಿ ತಮ್ಮದೇ ಆದ ಚಂದಾದಾರರ ತಳಹದಿ ಹೊಂದಿವೆ. 2016ರಲ್ಲಿ ನೆಟ್‌ಪ್ಲಿಕ್ಸ್‌ ಭಾರತೀಯ ಮಾರುಕಟ್ಟೆಗೆ ಕಾಲಿಟ್ಟಿತು. ಒಂದು ಅಂದಾಜಿನ ಪ್ರಕಾರ ನೆಟ್‌ಪ್ಲಿಕ್ಸ್‌ಗೆ ಭಾರತದಲ್ಲಿರುವ ಚಂದಾದಾರರ ಸಂಖ್ಯೆ 55 ಲಕ್ಷ. ಇದಕ್ಕೆ ಹೋಲಿಸಿದರೆ ಅಮೆಜಾನ್‌ ಪ್ರೈಮ್‌ ಮತ್ತು ಹಾಟ್‌ಸ್ಟಾರ್‌ಗಳು ತುಂಬಾ ಮುಂದಿವೆ. ಪ್ರೈಮ್‌ಗೆ ಇಲ್ಲಿ 2.2 ಕೋಟಿ ಹಾಗೂ ಹಾಟ್‌ಸ್ಟಾರ್‌ಗೆ 4.6 ಕೋಟಿ ಚಂದಾದಾರರಿದ್ದಾರೆ. ಇವರೂ ನಾನಾ ಕಾರಣಗಳಿಂದಾಗಿ ನೆಟ್‌ಪ್ಲಿಕ್ಸ್‌ನಿಂದ ದೂರವಾಗುತ್ತಿದ್ದಾರೆ.

ಚಂದಾದಾರರ ಇಳಿಕೆ

ಸಂಸ್ಥೆಯೇ ಹೇಳಿಕೊಂಡಿರುವಂತೆ ಜಾಗತಿಕವಾಗಿ ಕಳೆದ ಮೂರು ತಿಂಗಳಲ್ಲಿ ಕಳೆದುಕೊಂಡಿರುವ ಚಂದಾದಾರರ ಸಂಖ್ಯೆ 2 ಲಕ್ಷ. ಈ ಅಂಶ ಬಹಿರಂಗವಾಗುತ್ತಿರುವಂತೆ ನೆಟ್‌ಪ್ಲಿಕ್ಸ್‌ನ ಷೇರುಗಳು 26% ಕುಸಿತ ಕಂಡವು. ಕಂಪನಿಯ ಸ್ಟಾಕ್‌ ಮಾರ್ಕೆಟ್‌ ಮೌಲ್ಯದಲ್ಲಿ 4000 ಕೋಟಿ ಡಾಲರ್‌ ಕುಸಿತವಾಯಿತು. ಸಂಸ್ಥೆ ಗುರುತಿಸಿರುವಂತೆ ಚಂದಾದಾರರ ಕುಸಿತಕ್ಕೆ ಕಾರಣಗಳು ಇವು:

  • ಕೊರೊನಾ ಸಂದರ್ಭದಲ್ಲಿ ಎಲ್ಲರೂ ಮನೆಯಲ್ಲಿದ್ದ ಕಾರಣ ಒಟಿಟಿ ವೀಕ್ಷಣೆ ಹೆಚ್ಚಿತ್ತು. ಆದರೆ ನಂತರ, ಅದೇ ಸನ್ನಿವೇಶ ಉಳಿಯಲಿಲ್ಲ. ಆ ಎರಡು ವರ್ಷಗಳ ಸನ್ನಿವೇಶ ನೋಡಿಕೊಂಡು ನೆಟ್‌ಪ್ಲಿಕ್ಸ್‌ ಹೂಡಿಕೆಗೆ ಮುಂದಾಗಿತ್ತು.
  • ಆರ್ಥಿಕತೆಯಲ್ಲಿ ನಿರೀಕ್ಷಿತ ಚೇತರಿಕೆ ಆಗಲಿಲ್ಲ. ಹಣದುಬ್ಬರ ಹೆಚ್ಚುತ್ತಿದೆ, ಹೊಸ ಚಂದಾದಾರರು ನಿರೀಕ್ಷೆಯಂತೆ ಬರುತ್ತಿಲ್ಲ.
  • ಉಕ್ರೇನ್‌ ಮೇಲೆ ರಷ್ಯಾ ದಾಳಿಯಂಥ ಬೆಳವಣಿಗೆಗಳು ಮನರಂಜನಾ ಮಾರುಕಟ್ಟೆಗೆ ಹೊಡೆತ ನೀಡಿವೆ.
  • ಕೋವಿಡ್‌ನ ದಾಳಿಯ ಪರಿಣಾಮ ಇನ್ನೂ ಪೂರ್ತಿ ಮಾಯವಾಗಿಲ್ಲ.
  • 22 ಕೋಟಿ ಚಂದಾದಾರರು ಇನ್ನೂ 10 ಕೋಟಿ ಮಂದಿಯ ಜೊತೆಗೆ ತಮ್ಮ ಚಂದಾದಾರಿಕೆಯನ್ನು ಹಂಚಿಕೊಳ್ಳುತ್ತಿದ್ದಾರೆ. ಪಾಸ್‌ವರ್ಡ್‌ ಶೇರಿಂಗ್‌ ನಮಗೆ ಮಾರಕವಾಗಿ ಪರಿಣಮಿಸಿದೆ ಎಂದು ಕಂಪನಿ ಹೇಳಿದೆ.
  • ಇತರ ಕಂಪನಿಗಳು ನೀಡುತ್ತಿರುವ ಪೈಪೋಟಿ.

ಭಾರತದಲ್ಲಿ ಯಾಕೆ ಕುಸಿತ?

  • ಭಾರತದ ಮಾರುಕಟ್ಟೆಯನ್ನು ನಿರೀಕ್ಷೆಯಂತೆ ಆವರಿಸಿಕೊಳ್ಳಲು ನೆಟ್‌ಪ್ಲಿಕ್ಸ್‌ಗೆ ಸಾಧ್ಯವಾಗಿಲ್ಲ. ಮುಖ್ಯವಾಗಿ ಅದರ ಹೆಚ್ಚಿನ ಕಂಟೆಂಟ್‌ ಅಮೆರಿಕನ್‌ ಮೂಲದ್ದು. ಭಾರತೀಯರ ಮನರಂಜನೆಯ ನಿರೀಕ್ಷೆ ಬೇರೆ.
  • ಪ್ರಾದೇಶಿಕ ಕಂಟೆಂಟ್‌ನ ವಿಚಾರದಲ್ಲಿ ಪ್ರಾದೇಶಿಕ ಒಟಿಟಿ ವೇದಿಕೆಗಳೇ ದೊಡ್ಡ ಪೈಪೋಟಿ ಕೊಡುತ್ತಿವೆ. ಉದಾಹರಣೆಗೆ, ಮಲಯಾಳಂ ಸಿನಿಮಾಗಳ ವಿಷಯದಲ್ಲಿ ಡಿಸ್ನಿ ಹಾಟ್‌ಸ್ಟಾರ್‌ ನೀಡುತ್ತಿರುವ ಕಂಟೆಂಟ್‌ ಅದ್ಭುತವಾಗಿದೆ. ಪ್ರೈಮ್‌ ಕೂಡ ಈ ವಿಚಾರದಲ್ಲಿ ಸಾಕಷ್ಟು ಮುಂದಿದೆ.
  • 2018ರಲ್ಲಿ ಹಿಂದಿಯಲ್ಲಿ ಬಂದ ಟಾಪ್‌ 100 ಫಿಲಂಗಳಲ್ಲಿ ನೆಟ್‌ಫ್ಲಿಕ್ಸ್‌ ಖರೀದಿಸಿದ್ದು ಕೇವಲ 20. ಆದರೆ ಪ್ರೈಮ್‌ 40ನ್ನು ಖರೀದಿಸಿದೆ. ಪ್ರೈಮ್‌, ಹಾಟ್‌ಸ್ಟಾರ್‌ಗಳು ಈ ವಿಚಾರದಲ್ಲಿ ಗಾವುದ ಮುಂದಿವೆ.
  • ಪ್ರಾದೇಶಿಕ ಒರಿಜಿನಲ್ಸ್‌ಗಳ ತಯಾರಿಯಲ್ಲೂ ಪ್ರೈಮ್‌ ಮುಂದಿದೆ. ಮನೋಜ್‌ ಬಾಜಪೇಯಿ ನಟನೆಯ ಫ್ಯಾಮಿಲಿ ಮ್ಯಾನ್‌ ಮುಂತಾದವನ್ನು ಉದಾಹರಿಸಬಹುದು. ನೆಟ್‌ಫ್ಲಿಕ್ಸ್‌ನಲ್ಲಿ ಇವು ಕಡಿಮೆ.
  • ತೀರ ಇತ್ತೀಚಿನವರೆಗೂ ನೆಟ್‌ಫ್ಲಿಕ್ಸ್‌ ಚಂದಾದಾರಿಕೆ ದುಬಾರಿಯಾಗಿತ್ತು. ಇತ್ತೀಚೆಗೆ ಇದು ತನಗೆ ನಷ್ಟದಾಯಕ ಆಗುತ್ತಿರುವುದನ್ನು ಅರಿತು ನೆಟ್‌ಫ್ಲಿಕ್ಸ್‌ ದರಗಳನ್ನು ತುಸು ಇಳಿಸಿದೆ.

ಇದನ್ನೂ ಓದಿ: ಹೆಚ್ಚೆಚ್ಚು ಸ್ತ್ರೀಯರನ್ನು ಕೊಲ್ಲುತ್ತಿದೆ ಹಾರ್ಟ್‌ಫೇಲ್, ಈಗಲೇ ಎಚ್ಚೆತ್ತುಕೊಳ್ಳಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ವಿಸ್ತಾರ Explainer: Wealth redistribution: ನಿಮ್ಮ ಆಸ್ತಿಯನ್ನು ಸರ್ಕಾರ ವಶಪಡಿಸಿಕೊಳ್ಳಬಹುದಾ? ಸುಪ್ರೀಂ ಕೋರ್ಟ್ ಮುಂದಿದೆ ಕೇಸ್‌

wealth redistribution: ಮೂರು ದಶಕಗಳಷ್ಟು ಹಳೆಯ ಪ್ರಕರಣವನ್ನು ಸುಪ್ರೀಂ ಕೋರ್ಟ್‌ (Supreme Court) ಪೀಠ ಮರಳಿ ಕೈಗೆತ್ತಿಕೊಂಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (CJI DY Chandrachud) ನೇತೃತ್ವದ ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಾಧೀಶರ ಪೀಠವು (nine judges bench) ಇಂದಿನಿಂದ ಈ ಪ್ರಕರಣದ ವಿಚಾರಣೆ ನಡೆಸಲಿದೆ.

VISTARANEWS.COM


on

supreme court wealth redistribution
Koo

ಹೊಸದಿಲ್ಲಿ: “ಸಂಪತ್ತು ಮರುಹಂಚಿಕೆ” (Wealth redistribution) ಕುರಿತ ವಿವಾದ (controversy) ರಾಷ್ಟ್ರ ರಾಜಕೀಯದಲ್ಲಿ ಜೋರಾಗುತ್ತಿರುವಂತೆ, ವ್ಯಕ್ತಿಯ ಖಾಸಗಿ ಒಡೆತನದ (Private property) ಆಸ್ತಿಯನ್ನು “ಸಮುದಾಯದ ವಸ್ತು ಸಂಪನ್ಮೂಲ” (community property) ಎಂದು ಪರಿಗಣಿಸಬಹುದೇ ಎಂದು ನಿರ್ಧರಿಸಲು ಮೂರು ದಶಕಗಳಷ್ಟು ಹಳೆಯ ಪ್ರಕರಣವನ್ನು ಸುಪ್ರೀಂ ಕೋರ್ಟ್‌ (Supreme Court) ಪೀಠ ಮರಳಿ ಕೈಗೆತ್ತಿಕೊಂಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (CJI DY Chandrachud) ನೇತೃತ್ವದ ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಾಧೀಶರ ಪೀಠವು (nine judges bench) ಇಂದಿನಿಂದ ಈ ಪ್ರಕರಣದ ವಿಚಾರಣೆ ನಡೆಸಲಿದೆ.

ವಿವಾದವೇನು?

ಬಿರುಸಿನ ಲೋಕಸಭೆ ಚುನಾವಣೆ (lok Sabha Election 2024) ಪ್ರಚಾರ ನಡೆಯುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇದ್ದ ಒಂದು ಉಲ್ಲೇಖವನ್ನು ಎತ್ತಿ ಆಡಿದ್ದ ಪ್ರಧಾನಿ ನರೇಂದ್ರ ಮೋದಿ (PM Narendra Modi), “ಸಂಪತ್ತು ಪುನರ್ ವಿತರಣಾ ಯೋಜನೆಯ ಭಾಗವಾಗಿ ಮನೆ, ಚಿನ್ನ, ವಾಹನ ಸೇರಿದಂತೆ ಖಾಸಗಿ ಆಸ್ತಿಯನ್ನು ಕಿತ್ತುಕೊಳ್ಳುವುದಾಗಿ ಕಾಂಗ್ರೆಸ್ (Congress) ತನ್ನ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿದೆ” ಎಂದಿದ್ದರು. ಇದು ರಾಜಕೀಯ ಬಿರುಗಾಳಿ ಎಬ್ಬಿಸಿತ್ತು.

ಅಂತಹ ಯಾವುದೇ ಯೋಜನೆಯನ್ನು ಕಾಂಗ್ರೆಸ್ ನಿರಾಕರಿಸಿದೆ. ಪ್ರಧಾನಿ ಜನರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದೆ. ಕಾಂಗ್ರೆಸ್ ಆಯ್ಕೆಯಾದರೆ ರಾಷ್ಟ್ರವ್ಯಾಪಿ ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿ ನಡೆಸಲಿದೆ ಎಂದು ಅದರ ಪ್ರಣಾಳಿಕೆ ಹೇಳುತ್ತದೆ. “ಜಾತಿಗಳು ಮತ್ತು ಉಪ-ಜಾತಿಗಳು ಮತ್ತು ಅವರ ಸಾಮಾಜಿಕ-ಆರ್ಥಿಕ ಪರಿಸ್ಥಿತಿಗಳನ್ನು ಎಣಿಸಲು ಕಾಂಗ್ರೆಸ್ ರಾಷ್ಟ್ರವ್ಯಾಪಿ ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಯನ್ನು ನಡೆಸುತ್ತದೆ. ದತ್ತಾಂಶದ ಆಧಾರದ ಮೇಲೆ, ನಾವು ಸಕಾರಾತ್ಮಕ ಕ್ರಮಕ್ಕಾಗಿ ಕಾರ್ಯಸೂಚಿಯನ್ನು ಬಲಪಡಿಸುತ್ತೇವೆ.” ಖಾಸಗಿ ಆಸ್ತಿ ಮರುಹಂಚಿಕೆ ಯೋಜನೆ ಬಗ್ಗೆ ಪ್ರಣಾಳಿಕೆಯಲ್ಲಿ ಹೇಳಿಲ್ಲ.

Narendra Modi

ಕೋರ್ಟ್‌ ಮುಂದಿರುವ ಪ್ರಕರಣ ಮತ್ತು ಅದರ ಇತಿಹಾಸ

ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಾಧೀಶರ ಪೀಠದ ಮುಂದಿರುವ ಪ್ರಕರಣವು 1986ರ ಹಿಂದಿನದು. ಮಹಾರಾಷ್ಟ್ರ ಸರ್ಕಾರವು ಮಹಾರಾಷ್ಟ್ರ ವಸತಿ ಮತ್ತು ಪ್ರದೇಶಾಭಿವೃದ್ಧಿ ಕಾಯಿದೆ- 1976 (MHADA) ಇದನ್ನು ತಿದ್ದುಪಡಿ ಮಾಡಿತ್ತು. 70 ಪ್ರತಿಶತ ನಿವಾಸಿಗಳ ಒಪ್ಪಿಗೆಯಿದ್ದರೆ ಮರುಸ್ಥಾಪನೆ ಉದ್ದೇಶಗಳಿಗಾಗಿ ಕೆಲವು “ಸೆಸ್ಡ್ ಆಸ್ತಿಗಳನ್ನು” ಸ್ವಾಧೀನಪಡಿಸಿಕೊಳ್ಳಬಹುದು ಎಂಬ ಅಧಿಕಾರವನ್ನು ಇದು ಮುಂಬೈ ಕಟ್ಟಡ ದುರಸ್ತಿ ಮತ್ತು ಪುನರ್ನಿರ್ಮಾಣ ಮಂಡಳಿಗೆ ಹೊಂದಲು ಅವಕಾಶ ಮಾಡಿಕೊಟ್ಟಿತು. ತಿದ್ದುಪಡಿಯು ಸಂವಿಧಾನದ 39(ಬಿ) ವಿಧಿಯನ್ನು ಉಲ್ಲೇಖಿಸಿದೆ. ಅದು “ಸಮುದಾಯದ ವಸ್ತು ಸಂಪನ್ಮೂಲಗಳ ಮಾಲೀಕತ್ವ ಮತ್ತು ನಿಯಂತ್ರಣವನ್ನು ಸಾಮಾನ್ಯ ಒಳಿತಿಗಾಗಿ ಉತ್ತಮ ರೀತಿಯಲ್ಲಿ ವಿತರಿಸಲಾಗುವುದು” ಎಂದು ಹೇಳುತ್ತದೆ.

ಮುಂಬೈನಲ್ಲಿರುವ 20,000ಕ್ಕೂ ಹೆಚ್ಚು ಭೂಮಾಲೀಕರನ್ನು ಪ್ರತಿನಿಧಿಸುವ ಆಸ್ತಿ ಮಾಲೀಕರ ಸಂಘ (POA) ಈ ತಿದ್ದುಪಡಿಯನ್ನು ಪ್ರಶ್ನಿಸಿದೆ ಮತ್ತು ವಸತಿ ಸಂಕೀರ್ಣಗಳನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲು ಮಂಡಳಿಗೆ ಇದು ಅನಿಯಂತ್ರಿತ ಅಧಿಕಾರವನ್ನು ನೀಡಿದೆ ಎಂದು ವಾದಿಸಿದೆ. ಡಿಸೆಂಬರ್ 1991ರಲ್ಲಿ, ಬಾಂಬೆ ಉಚ್ಚ ನ್ಯಾಯಾಲಯವು, “ಸಾಮಾನ್ಯ ಜನರಿಗೆ ಆಶ್ರಯ ನೀಡುವುದು ಸರ್ಕಾರವು ಕರ್ತವ್ಯವಾಗಿದೆ” ಎಂಬ ಕಾರಣಕ್ಕಾಗಿ ಅರ್ಜಿಗಳನ್ನು ರದ್ದುಗೊಳಿಸಿತು.

ಪಿಒಎ ಮತ್ತು ಇತರ ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಅವರ ಅರ್ಜಿಯನ್ನು ಇನ್ನೆರಡು ಪ್ರಕರಣಗಳಿಗೆ ಜೋಡಿಸಲಾಗಿದೆ. ಅವು ಶಿವರಾಮ ರಾಮಯ್ಯ ಯೆರಾಳ ವರ್ಸಸ್‌ ಮಹಾರಾಷ್ಟ್ರ ಸರ್ಕಾರ ಪ್ರಕರಣ ಹಾಗೂ ಬಾಂಬೆಯ ಪ್ರಮೀಳಾ ಚಿಂತಾಮಣಿ ಮೋಹನ್‌ದಾಸ್ ವರ್ಸಸ್‌ ಮಹಾರಾಷ್ಟ್ರ ರಾಜ್ಯ ಸರ್ಕಾರ. ಇವು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿರುವ ಅತ್ಯಂತ ಹಳೆಯ ಪ್ರಕರಣಗಳಾಗಿವೆ. ಸುಪ್ರೀಂ ಕೋರ್ಟ್ ಪೀಠವು ಇವನ್ನು ಐದು ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ವರ್ಗಾಯಿಸಿತ್ತು. ಅದು ಇವನ್ನು ಏಳು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಿತು. 2002ರಲ್ಲಿ, ಆಗಿನ ಮುಖ್ಯ ನ್ಯಾಯಮೂರ್ತಿ ಎಸ್‌ಪಿ ಭರೂಚಾ ನೇತೃತ್ವದ ಏಳು ನ್ಯಾಯಾಧೀಶರ ಪೀಠವು ಈ ವಿಷಯವನ್ನು ಒಂಬತ್ತು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಿತು.

2019ರಲ್ಲಿ, ಮತ್ತೊಂದು ಪ್ರಮುಖ ಬೆಳವಣಿಗೆ ನಡೆಯಿತು. ಮಹಾರಾಷ್ಟ್ರ ಸರ್ಕಾರ ಮತ್ತೆ ಕಾನೂನನ್ನು ತಿದ್ದುಪಡಿ ಮಾಡಿತು. ಹೊಸ ತಿದ್ದುಪಡಿಯ ಪ್ರಕಾರ, ಗಡುವಿನೊಳಗೆ ಆಸ್ತಿ ಮರುಸ್ಥಾಪಿಸಲು ಭೂಮಾಲೀಕರು ವಿಫಲವಾದರೆ, ರಾಜ್ಯ ಸರ್ಕಾರವು ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಬಹುದಿತ್ತು. ಇದು ಕಲ್ಯಾಣ ಶಾಸನ ಎಂದು ರಾಜ್ಯ ಸರ್ಕಾರ ಒತ್ತಿಹೇಳಿತು. ಆದರೆ ಆಸ್ತಿಯನ್ನು ಕಡಿಮೆ ಬೆಲೆಗೆ ಕಿತ್ತುಕೊಂಡು ಗುತ್ತಿಗೆದಾರರಿಗೆ ಹಸ್ತಾಂತರಿಸುವ ಯೋಜನೆ ಇದು ಎಂದು ಭೂಮಾಲೀಕರು ಆರೋಪಿಸಿದರು.

ಕಳೆದ ವರ್ಷ, ವಿಚಾರಣೆಗೆ ಬಾಕಿ ಇರುವ ಒಂಬತ್ತು ನ್ಯಾಯಾಧೀಶರ ಪೀಠದ ಪ್ರಕರಣಗಳನ್ನು ಪಟ್ಟಿ ಮಾಡುವುದಾಗಿ ಸುಪ್ರೀಂ ಕೋರ್ಟ್ ಹೇಳಿತ್ತು. ಈ ಪ್ರಕರಣದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ನಿನ್ನೆ ನಡೆಸಿತು. ನ್ಯಾಯಮೂರ್ತಿ ಹೃಷಿಕೇಶ್ ರಾಯ್, ನ್ಯಾಯಮೂರ್ತಿ ಬಿವಿ ನಾಗರತ್ನ, ನ್ಯಾಯಮೂರ್ತಿ ಸುಧಾಂಶು ಧುಲಿಯಾ, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ, ನ್ಯಾಯಮೂರ್ತಿ ಮನೋಜ್ ಮಿಶ್ರಾ, ನ್ಯಾಯಮೂರ್ತಿ ರಾಜೇಶ್ ಬಿಂದಾಲ್, ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಆಗಸ್ಟಿನ್ ಜಾರ್ಜ್ ಮಸಿಹ್ ಅವರು ಪೀಠದಲ್ಲಿರುವ ಇತರ ಎಂಟು ನ್ಯಾಯಾಧೀಶರು. ಒಟ್ಟು 16 ಅರ್ಜಿಗಳು ನ್ಯಾಯಾಲಯದ ಮುಂದಿವೆ.

ನಿರ್ಣಾಯಕ ಪ್ರಶ್ನೆ

ನ್ಯಾಯಾಲಯದ ಮುಂದಿರುವ ಪ್ರಮುಖ ಸಮಸ್ಯೆಯು ಸಂವಿಧಾನದಲ್ಲಿನ ಎರಡು ನಿಬಂಧನೆಗಳಿಗೆ ಸಂಬಂಧಿಸಿದೆ- ಆರ್ಟಿಕಲ್ 31 ಸಿ ಮತ್ತು ಆರ್ಟಿಕಲ್ 39 (ಬಿ). ಇವುಗಳು ರಾಜ್ಯ ನೀತಿಯ ಡೈರೆಕ್ಟಿವ್ ಪ್ರಿನ್ಸಿಪಲ್ಸ್‌ಗೆ ಸಂಬಂಧಿಸಿವೆ. ಈ ತತ್ವಗಳು ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡುವುದಿಲ್ಲ. ಆದರೆ ದೇಶದ ಆಡಳಿತಕ್ಕೆ ಇವು ಮೂಲಭೂತವಾಗಿವೆ. ಕಾನೂನುಗಳನ್ನು ರಚಿಸುವಾಗ ಈ ತತ್ವಗಳನ್ನು ಅನ್ವಯಿಸುವುದು ರಾಜ್ಯದ ಕರ್ತವ್ಯ ಎಂದು ಸಂವಿಧಾನ ಹೇಳುತ್ತದೆ.

ಆರ್ಟಿಕಲ್ 39(ಬಿ) ಹೇಳುವಂತೆ, ಸಮುದಾಯದ ವಸ್ತು ಸಂಪನ್ಮೂಲಗಳ ಮಾಲೀಕತ್ವ ಮತ್ತು ನಿಯಂತ್ರಣವನ್ನು ಸಾಮಾನ್ಯ ಒಳಿತಿಗಾಗಿ ಉತ್ತಮ ರೀತಿಯಲ್ಲಿ ವಿತರಿಸಬಹುದು. ಆರ್ಟಿಕಲ್ 31(ಸಿ) ಕೆಲವು ನಿರ್ದೇಶನ ತತ್ವಗಳನ್ನು ಜಾರಿಗೆ ತರುವ ಕಾನೂನುಗಳನ್ನು ರಕ್ಷಿಸುತ್ತದೆ. ಇದರ ಅರ್ಥವೇನೆಂದರೆ, ನಿರ್ದೇಶನದ ತತ್ವಗಳ ಅಡಿಯಲ್ಲಿ ರಾಜ್ಯವು ಜಾರಿಗೊಳಿಸಿದ ಯಾವುದೇ ಕಾನೂನನ್ನು ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಹಕ್ಕು ಸೇರಿದಂತೆ ಮೂಲಭೂತ ಹಕ್ಕುಗಳೊಂದಿಗೆ ವ್ಯವಹರಿಸುವ ಸಂವಿಧಾನದ ಆರ್ಟಿಕಲ್ 14 ಮತ್ತು ಆರ್ಟಿಕಲ್ 19ನ್ನು ಮುಂದಿಟ್ಟುಕೊಂಡು ಕೂಡ ಪ್ರತಿಭಟಿಸಲು ಸಾಧ್ಯವಿಲ್ಲ.

supreme court CJI DY chandrachud

ನಿರ್ದೇಶನದ ತತ್ವಗಳಲ್ಲಿ ರಾಜ್ಯವು “ಆದಾಯದಲ್ಲಿನ ಅಸಮಾನತೆಗಳನ್ನು ಕಡಿಮೆ ಮಾಡಲು ಶ್ರಮಿಸಬೇಕು ಮತ್ತು ವ್ಯಕ್ತಿಗಳ ನಡುವೆ ಮಾತ್ರವಲ್ಲದೆ ವಿವಿಧ ಪ್ರದೇಶಗಳಲ್ಲಿ ವಾಸಿಸುವ ಅಥವಾ ವಿವಿಧ ಕೆಲಸಗಳಲ್ಲಿ ತೊಡಗಿರುವ ಜನರ ಗುಂಪುಗಳ ನಡುವೆಯೂ ಸಹ ಸ್ಥಾನಮಾನ, ಸೌಲಭ್ಯಗಳು ಮತ್ತು ಅವಕಾಶಗಳಲ್ಲಿನ ಅಸಮಾನತೆಗಳನ್ನು ತೊಡೆದುಹಾಕಲು ಪ್ರಯತ್ನಿಸಬೇಕು” ಎಂದು ಹೇಳುತ್ತದೆ.

ಹಾಗಾಗಿ ಖಾಸಗಿ ಆಸ್ತಿಯನ್ನು ʼಸಮುದಾಯದ ವಸ್ತು ಸಂಪನ್ಮೂಲಗಳು’ ಎಂದು ಪರಿಗಣಿಸಬಹುದೇ ಮತ್ತು ಸಾಮಾನ್ಯ ಒಳಿತಿಗಾಗಿ ರಾಜ್ಯವು ಸ್ವಾಧೀನಪಡಿಸಿಕೊಳ್ಳಬಹುದೇ ಎಂಬುದು ನ್ಯಾಯಾಲಯದ ಮುಂದಿರುವ ಪ್ರಮುಖ ಪ್ರಶ್ನೆಯಾಗಿದೆ.

ಪ್ರಮುಖ ಅವಲೋಕನಗಳು

ನಿನ್ನೆ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿಗಳು ಕೆಲವು ಪ್ರಮುಖ ಅವಲೋಕನಗಳನ್ನು ಮಾಡಿದರು. “ನೀವು ಆಸ್ತಿಯ ಬಂಡವಾಳಶಾಹಿ ಪರಿಕಲ್ಪನೆಯನ್ನು ನೋಡಿದರೆ, ಅದು ಆಸ್ತಿಗೆ ಪ್ರತ್ಯೇಕತೆಯ ಭಾವನೆಯನ್ನು, ಇದು ಪ್ರತ್ಯೇಕವಾಗಿ ನನ್ನದು ಎಂಬ ಭಾವನೆಯನ್ನು ಆರೋಪಿಸುತ್ತದೆ. ಆಸ್ತಿಯ ಸಮಾಜವಾದಿ ಪರಿಕಲ್ಪನೆಯು ಕನ್ನಡಿ ಪ್ರತಿಬಿಂಬವಾಗಿದೆ. ಇದು ಆಸ್ತಿಗೆ ಸಾಮಾನ್ಯತೆಯ ಕಲ್ಪನೆಯನ್ನು ಸೂಚಿಸುತ್ತದೆ. ಯಾವುದೂ ವ್ಯಕ್ತಿಗೆ ಪ್ರತ್ಯೇಕವಾಗಿಲ್ಲ. ಎಲ್ಲಾ ಆಸ್ತಿಯೂ ಸಮುದಾಯಕ್ಕೆ ಸಾಮಾನ್ಯವಾಗಿದೆ. ಇದು ತೀವ್ರ ಸಮಾಜವಾದಿ ದೃಷ್ಟಿಕೋನ” ಎಂದು ಹೇಳಿದರು.

“ಭಾರತದ ರಾಜ್ಯ ನೀತಿಯ ನಿರ್ದೇಶನ ತತ್ವಗಳು ಗಾಂಧಿ ತತ್ವ ಮತ್ತು ಸಿದ್ಧಾಂತಕ್ಕೆ ಅನುಗುಣವಾಗಿವೆ. ಆ ತತ್ವಗಳೇನು? ನಮ್ಮ ನೀತಿಯು ನಂಬಿಕೆಯ ಆಸ್ತಿಯನ್ನು ಪರಿಗಣಿಸುತ್ತದೆ. ಖಾಸಗಿ ಆಸ್ತಿ ಇಲ್ಲ ಎಂಬುದಕ್ಕಾಗಿ ನಾವು ಸಮಾಜವಾದಿ ಮಾದರಿಯನ್ನು ಅಳವಡಿಸಿಕೊಳ್ಳಲು ಹೋಗಿಲ್ಲ. ಆದರೆ ಖಾಸಗಿ ಆಸ್ತಿ ಇದೆ” ಎಂದವರು ಗಮನಿಸಿದರು.

“ನಮ್ಮ ಆಸ್ತಿಯ ಪರಿಕಲ್ಪನೆಯು ತೀವ್ರ ಬಂಡವಾಳಶಾಹಿ ದೃಷ್ಟಿಕೋನದಿಂದ ಅಥವಾ ತೀವ್ರ ಸಮಾಜವಾದಿ ದೃಷ್ಟಿಕೋನದಿಂದ ಅತ್ಯಂತ ವಿಭಿನ್ನವಾದ, ಅತ್ಯಂತ ಸೂಕ್ಷ್ಮವಾದ ಬದಲಾವಣೆ ಹೊಂದಿದೆ. ನಾವು ಆಸ್ತಿಯನ್ನು ನಂಬುವ ವಿಷಯವೆಂದು ಪರಿಗಣಿಸುತ್ತೇವೆ. ನಾವು ಕುಟುಂಬದಲ್ಲಿ ಮುಂದಿನ ಪೀಳಿಗೆಗೆ ಆಸ್ತಿಯನ್ನು ನೀಡುವ ನಂಬಿಕೆಯನ್ನು ಇರಿಸಿದ್ದೇವೆ. ಆದರೆ ವಿಶಾಲವಾಗಿ ನಾವು ಆಸ್ತಿಯನ್ನು ವಿಶಾಲ ಸಮುದಾಯದ ವಿಶ್ವಾಸದಲ್ಲಿರಿಸುತ್ತೇವೆ. ಅದು ಸುಸ್ಥಿರ ಅಭಿವೃದ್ಧಿಯ ಸಂಪೂರ್ಣ ಪರಿಕಲ್ಪನೆಯಾಗಿದೆ. ಅದನ್ನೇ ನಾವು ಇಂಟರ್‌ಜೆನೆರೇಶನಲ್ ಇಕ್ವಿಟಿ ಎಂದು ಕರೆಯುತ್ತೇವೆ,” ಎಂದು ಅವರು ಹೇಳಿದರು.

“ಸಮುದಾಯದ ವಸ್ತು ಸಂಪನ್ಮೂಲಗಳು ಎಂದರೆ ಸಾರ್ವಜನಿಕ ಸಂಪನ್ಮೂಲಗಳು ಮತ್ತು ನಾವು ವ್ಯಕ್ತಿಯ ಖಾಸಗಿ ಆಸ್ತಿಯಲ್ಲಿ ಅದಿಲ್ಲ ಎಂದು ಸೂಚಿಸುವುದು ಸ್ವಲ್ಪ ವಿಪರೀತ. ಆ ದೃಷ್ಟಿಕೋನವನ್ನು ತೆಗೆದುಕೊಳ್ಳುವುದು ಏಕೆ ಅಪಾಯಕಾರಿ ಎಂದು ನಾನು ಹೇಳುತ್ತೇನೆ. ಗಣಿಗಳು ಮತ್ತು ಖಾಸಗಿ ಅರಣ್ಯಗಳಂತಹ ಸರಳ ವಿಷಯಗಳನ್ನು ತೆಗೆದುಕೊಳ್ಳಿ. ಉದಾಹರಣೆಗೆ, 39 (ಬಿ) ಅಡಿಯಲ್ಲಿ ಖಾಸಗಿ ಅರಣ್ಯಗಳಿಗೆ ಸರ್ಕಾರಿ ನೀತಿ ಅನ್ವಯಿಸುವುದಿಲ್ಲ ಎಂದು ನಾವು ಹೇಳುತ್ತೇವೆ. ಆದ್ದರಿಂದ ಪ್ರತಿಪಾದನೆಯಾಗಿ ಅತ್ಯಂತ ಅಪಾಯಕಾರಿ,” ಅವರು ಹೇಳಿದರು.

ಸಂವಿಧಾನ ರಚನೆಯಾದ 1950ರ ಪರಿಸ್ಥಿತಿಯನ್ನು ಉಲ್ಲೇಖಿಸಿದ ಮುಖ್ಯ ನ್ಯಾಯಮೂರ್ತಿಗಳು, “ಸಂವಿಧಾನವು ಸಾಮಾಜಿಕ ಪರಿವರ್ತನೆಯನ್ನು ತರಲು ಉದ್ದೇಶಿಸಲಾಗಿತ್ತು. ಆಸ್ತಿಯನ್ನು ಖಾಸಗಿಯಾಗಿ ಹೊಂದಿರುವ ನಂತರ 39 (ಬಿ) ವಿಧಿಗೆ ಯಾವುದೇ ಅನ್ವಯವಿಲ್ಲ ಎಂದು ನಾವು ಹೇಳಲು ಸಾಧ್ಯವಿಲ್ಲ.” ಎಂದರು.

ಆದಾಗ್ಯೂ, ಮಹಾರಾಷ್ಟ್ರದ ಕಾನೂನು ಶಿಥಿಲಗೊಂಡ ಕಟ್ಟಡಗಳನ್ನು ಸ್ವಾಧೀನಪಡಿಸಿಕೊಳ್ಳಲು ಅಧಿಕಾರಿಗಳಿಗೆ ಅಧಿಕಾರ ನೀಡಿದೆಯೇ ಎಂಬುದು ವಿಭಿನ್ನ ವಿಷಯವಾಗಿದೆ ಮತ್ತು ಅದನ್ನು ಸ್ವತಂತ್ರವಾಗಿ ನಿರ್ಧರಿಸಲಾಗುತ್ತದೆ ಎಂದು ಅದು ಒತ್ತಿಹೇಳಿತು. ‘ಜಮೀಂದಾರಿ’ ಪದ್ಧತಿಯ ರದ್ದತಿಯನ್ನೂ ಮುಖ್ಯ ನ್ಯಾಯಮೂರ್ತಿ ಉಲ್ಲೇಖಿಸಿದರು. “ಸಂವಿಧಾನವು ಸಾಮಾಜಿಕ ಪರಿವರ್ತನೆಯನ್ನು ತರಲು ಉದ್ದೇಶಿಸಿರುವುದರಿಂದ ಸಂವಿಧಾನದಲ್ಲಿ 39 (ಬಿ) ವಿಧವನ್ನು ನಿರ್ದಿಷ್ಟ ರೀತಿಯಲ್ಲಿ ರಚಿಸಲಾಗಿದೆ ಎಂದು ನೀವು ಅರ್ಥಮಾಡಿಕೊಳ್ಳಬೇಕು. ಆದ್ದರಿಂದ ನಾವು ಖಾಸಗಿ ಆಸ್ತಿಯನ್ನು ಖಾಸಗಿ ಆಸ್ತಿ ಎಂದು ಹೇಳಿದಾಗ ಆರ್ಟಿಕಲ್ 39 (ಬಿ) ಯಾವುದೇ ಅನ್ವಯವನ್ನು ಹೊಂದಿರುವುದಿಲ್ಲ” ಎಂದು ಅವರು ಹೇಳಿದರು. ಇಂದು ಮತ್ತೆ ಪ್ರಕರಣದ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ: Wealth Redistribution: ಸಂಪತ್ತು ಮರು ಹಂಚಿಕೆ ವಿವಾದದ ಬೆಂಕಿಗೆ ತುಪ್ಪ ಸುರಿದ ಸ್ಯಾಮ್ ಪಿತ್ರೊಡಾ; ಕಾಂಗ್ರೆಸ್‌ಗೆ ಫಜೀತಿ!

Continue Reading

Lok Sabha Election 2024

Lok Sabha Election: ರಾಜಕೀಯ ಕುಟುಂಬಗಳಿಂದ ರಾಜಮನೆತನದವರೆಗೆ; ಬಿಜೆಪಿಯಿಂದ 68 ಮಹಿಳೆಯರು ಕಣಕ್ಕೆ

Lok Sabha election 2024: ಹಿಂದಿನ ಸಾಲಿಗಿಂತ ಈ ಬಾರಿ ಬಿಜೆಪಿ ಹೆಚ್ಚಿನ ಮಹಿಳೆಯರನ್ನು ಲೋಕಸಭಾ ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಿದೆ. ಆದರೆ ಇವರಲ್ಲಿ ಅರ್ಧಕ್ಕಿಂತ ಹೆಚ್ಚಿನವರು ಕುಟುಂಬ ರಾಜಕಾರಣದಿಂದ ಬಂದವರು. ಇವರಲ್ಲಿ ಪ್ರಮುಖರು ಯಾರಿದ್ದಾರೆ. ಈ ಕುರಿತ ಚಿತ್ರಣ ಇಲ್ಲಿದೆ.

VISTARANEWS.COM


on

By

Lok Sabha election-2024
Koo

ನವದೆಹಲಿ: ಲೋಕಸಭಾ ಚುನಾವಣೆ-2024ರಲ್ಲಿ (Lok Sabha election 2024) ಬಿಜೆಪಿ (bjp) ಈ ಬಾರಿ ಹಿಂದೆಂದಿಗಿಂತ ಹೆಚ್ಚು ಮಹಿಳೆಯರನ್ನು ಕಣಕ್ಕೆ ಇಳಿಸಿದೆ. ಆದರೂ ಈ ಪ್ರಮಾಣ ಶೇ. 16 ಮಾತ್ರ. ಇವರಲ್ಲಿ ಅರ್ಧದಷ್ಟು ಮಂದಿ ರಾಜಕೀಯ ಕುಟುಂಬಗಳ (political families) ಹಿನ್ನೆಲೆಯಿಂದ ಬಂದವರು. ಬಿಜೆಪಿ 417 ಲೋಕಸಭಾ ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇವರಲ್ಲಿ ಕೇವಲ 68 ಮಂದಿ ಮಹಿಳೆಯರಿದ್ದಾರೆ. ಬಿಜೆಪಿಯ ಮಹಿಳಾ ಅಭ್ಯರ್ಥಿಗಳ ಪಟ್ಟಿಯಲ್ಲಿ 40 ಮಂದಿ ಆಳವಾಗಿ ಬೇರೂರಿರುವ ರಾಜಕೀಯ ಸಂಪರ್ಕ ಹೊಂದಿರುವ ಕುಟುಂಬಗಳಿಂದ ಬಂದವರಾಗಿದ್ದಾರೆ.

ಬಿಜೆಪಿಯು 417 ಸಂಸದೀಯ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಅದರಲ್ಲಿ 68 ಮಂದಿ ಶೇ. 16ಕ್ಕಿಂತ ಹೆಚ್ಚು ಮಂದಿ ಮಹಿಳೆಯರಿದ್ದಾರೆ. ಪಕ್ಷವು 2009ರಲ್ಲಿ 45, 2014ರಲ್ಲಿ 38 ಮತ್ತು 2019ರಲ್ಲಿ 55 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು.

ಇದನ್ನೂ ಓದಿ: Parliament Flashback: 1996ರ ಬಳಿಕ ರಾಜ್ಯದ ಲೋಕಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ

ಕಣದಲ್ಲಿರುವ ಪ್ರಮುಖ ಮಹಿಳೆಯರು ಯಾರು?

ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಅವರ ಪತ್ನಿ ಪ್ರಣೀತ್ ಕೌರ್ , ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್, ಜೆಎಂಎಂ ಮುಖ್ಯಸ್ಥ ಶಿಬು ಸೊರೆನ್ ಅವರ ಸೊಸೆ ಸೀತಾ ಸೊರೆನ್, ಮಾಜಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಅವರ ಪತ್ನಿ ಗೀತಾ ಕೋಡಾ, ಮಾಜಿ ಸಂಸದ ನಾಥೂರಾಂ ಮಿರ್ಧಾ ಅವರ ಮೊಮ್ಮಗಳು ಜ್ಯೋತಿ ಮಿರ್ಧಾ, ಮಾಜಿ ಕೇಂದ್ರ ಸಚಿವ ಜಿ.ಎಂ. ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ, ಶಾಸಕ ರವಿ ರಾಣಾ ಅವರ ಪತ್ನಿ ನವನೀತ್ ರಾಣಾ, ಮಾಜಿ ಕಲಹಂಡಿ ಸಂಸದ ಅರ್ಕಾ ಕೇಶರಿ ದೇವ್ ಅವರ ಪತ್ನಿ ಮಾಳವಿಕಾ ದೇವಿ, ತಿಪ್ರಾ ಮೋಥಾ ಪಕ್ಷದ ಸಂಸ್ಥಾಪಕ ಪ್ರದ್ಯೋತ್ ಕಿಶೋರ್ ಮಾಣಿಕ್ಯ ದೆಬ್ಬರ್ಮಾ ಅವರ ಸಹೋದರಿ ಕೃತಿ ಸಿಂಗ್ ದೆಬ್ಬರ್ಮಾ ಅವರು ಈ ಬಾರಿ ಬಿಜೆಪಿಯಿಂದ ಕಣಕ್ಕೆ ಇಳಿದಿರುವ ಬಿಜೆಪಿಯ ಪ್ರಮುಖ ಮಹಿಳಾ ಅಭ್ಯರ್ಥಿಗಳು.

ಕಣದಲ್ಲಿರುವ ಪ್ರಮುಖರು

ಸೀತಾ ಸೊರೆನ್ ರಾಜಕೀಯ ಕುಟುಂಬದಿಂದ ಬಂದವರಾದರೂ ಒಂದು ಕ್ಷೇತ್ರದಲ್ಲಿ ಒಬ್ಬ ಸಾಮಾನ್ಯ ಕಾರ್ಯಕರ್ತ ಮಾಡುವ ಕೆಲಸ ಮಾಡುತ್ತಿದ್ದೇನೆ. ಅದೇ ಶಕ್ತಿಯೊಂದಿಗೆ ಕಣಕ್ಕೆ ಇಳಿದಿದ್ದೇನೆ ಎಂದು ತಿಳಿಸಿದ್ದಾರೆ.

ರಾಜಮಂಡ್ರಿಯ ಬಿಜೆಪಿ ಅಭ್ಯರ್ಥಿಯಾಗಿರುವ ಮಾಜಿ ಕೇಂದ್ರ ಸಚಿವೆ ಮತ್ತು ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷೆ ಡಿ. ಪುರಂದೇಶ್ವರಿ ಅವರು ಪ್ರಸಿದ್ಧ ನಟ ಮತ್ತು ಎನ್‌.ಟಿ. ರಾಮರಾವ್ ಅವರ ಪುತ್ರಿ.

ಮಹಾರಾಷ್ಟ್ರದಲ್ಲಿ ಆರು ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದು ಹಾಲಿ ಸಂಸದೆ ಭಾರತಿ ಪವಾರ್ ಮತ್ತೆ ದಿಂಡೂರಿನಲ್ಲಿ ಸ್ಪರ್ಧಿಸಿದ್ದಾರೆ. ಇವರ ಮಾವ ಎಂಟು ಬಾರಿ ಶಾಸಕರಾಗಿದ್ದರು ಮತ್ತು ಮಹಾರಾಷ್ಟ್ರ ಸಚಿವರಾಗಿದ್ದರು. ಮಗ ಕೂಡ ಶಾಸಕರಾಗಿದ್ದಾರೆ.

ಬಿಜೆಪಿ ಸಂಸದೆ, ಆರು ಬಾರಿ ಶಾಸಕ ಮತ್ತು ಬುಡಕಟ್ಟು ನಾಯಕರಾಗಿದ್ದ ವಿಜಯ್ ಗವಿತ್ ಅವರ ಪುತ್ರಿ ಹೀನಾ ಗವಿತ್ ಈಗ ನಂದೂರ್ಬಾರ್‌ನಿಂದ ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿಯ ದಿವಂಗತ ಗೋಪಿನಾಥ್ ಮುಂಡೆ ಅವರ ಪುತ್ರಿ, ಹಿರಿಯ ನಾಯಕಿ ಪಂಕಜಾ ಮುಂಡೆ ಬೀಡಿನಿಂದ ಸ್ಪರ್ಧಿಸುತ್ತಿದ್ದಾರೆ.

ಸಂಸದೆ ರಕ್ಷಾ ಖಡ್ಸೆ ಮತ್ತೆ ರೇವರ್ ನಿಂದ ಸ್ಪರ್ಧಿಸಿದ್ದಾರೆ. ಇವರ ಮಾವ ಏಕನಾಥ್ ಖಾಡ್ಸೆ 2020ರಲ್ಲಿ ಬಿಜೆಪಿ ತೊರೆದು ಶರದ್ ಪವಾರ್ ನೇತೃತ್ವದ ಎನ್‌ಸಿಪಿಯಲ್ಲಿದ್ದಾರೆ.

ಜಲಗಾಂವ್‌ನಲ್ಲಿ ಎಂಎಲ್ಸಿ ಸ್ಮಿತಾ ವಾಘ್ ಅವರನ್ನು ಕಣಕ್ಕಿಳಿಸಲು ಹಾಲಿ ಸಂಸದ ಉನ್ಮೇಶ್ ಪಾಟೀಲ್ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದೆ. ಅವರ ಪತಿ ಉದಯ್ ವಾಘ್ ಬಿಜೆಪಿ ಜಲಗಾಂವ್ ಜಿಲ್ಲಾಧ್ಯಕ್ಷರಾಗಿದ್ದಾರೆ. ಅಮರಾವತಿಯಿಂದ ಹಾಲಿ ಸಂಸದ ನವನೀತ್ ರಾಣಾ ಮತ್ತೆ ಸ್ಪರ್ಧಿಸಿದ್ದಾರೆ.

ಹೊಸ ಮುಖವಾಗಿರುವ ಅನಿತಾ ಅವರ ಪತಿ ಮಧ್ಯಪ್ರದೇಶದ ಅರಣ್ಯ ಸಚಿವ ಮತ್ತು ಮೂರು ಬಾರಿ ಶಾಸಕ ನಗರ್ ಸಿಂಗ್ ಚೌಹಾಣ್. ಮತ್ತೊಂದು ಹೊಸ ಮುಖ ಲತಾ ವಾಂಖೆಡೆ ಸಾಗರ್‌ನಿಂದ ಕಣಕ್ಕಿಳಿಯಲು ಮುಂದಾಗಿದ್ದಾರೆ. ಅವರ ಪತಿ ನಂದಕಿಶೋರ್ ಅಲಿಯಾಸ್ ಗುಡ್ಡು ವಾಂಖೆಡೆ ಕೂಡ ರಾಜಕೀಯದಲ್ಲಿದ್ದಾರೆ.

ಬಿಜೆಪಿ ಸಂಸದ ಹಿಮಾದ್ರಿ ಸಿಂಗ್ – ಮಾಜಿ ಸಂಸದರಾದ ದಲ್ವಿರ್ ಸಿಂಗ್ ಮತ್ತು ರಾಜೇಶ್ ನಂದಿನಿ ಸಿಂಗ್ ಅವರ ಪುತ್ರಿ ಶಹದೋಲ್‌ನಿಂದ ಮತ್ತೊಂದು ಅವಧಿಯನ್ನು ನಿರೀಕ್ಷಿಸುತ್ತಿದ್ದಾರೆ. ಅವರ ಪತಿ ನರೇಂದ್ರ ಮರಾವಿ ಕೂಡ ಬಿಜೆಪಿ ನಾಯಕರಾಗಿದ್ದಾರೆ.

ರಾಜಮನೆತನದವರು

2019 ರಲ್ಲಿ ರಾಜಸ್ಥಾನದಲ್ಲಿ ಬಿಜೆಪಿ ಇದುವರೆಗೆ ಐದು ಮಹಿಳಾ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡಿದೆ. ದೇವಿ ಜಾತವ್ (ಧೋಲ್ಪುರ್ ಕರೌಲಿ), ಪ್ರಿಯಾಂಕಾ ಬಾಲನ್ (ಶ್ರೀಗಂಗಾನಗರ), ಮಂಜು ಶರ್ಮಾ (ಜೈಪುರ), ಜ್ಯೋತಿ ಮಿರ್ಧಾ (ನಾಗೌರ್) ಮತ್ತು ಮಹಿಮಾ ವಿಶ್ವರಾಜ್ ಸಿಂಗ್ (ರಾಜಸಮಂದ್). ಮಹಿಮಾ ವಿಶ್ವರಾಜ್ ಸಿಂಗ್ ಮೇವಾರ್‌ನ ರಾಜಮನೆತನಕ್ಕೆ ಸೇರಿದವರಾಗಿದ್ದಾರೆ.

ಮಾಳವಿಕಾ ಕೇಶರಿ ದೇವ್ ಅವರು ಕಲಹಂಡಿ ಜಿಲ್ಲೆಯ ಹಿಂದಿನ ರಾಜಮನೆತನದ ಸಂಪರ್ಕವನ್ನು ಹೊಂದಿದ್ದಾರೆ. 2019ರಲ್ಲಿ ಅಸ್ಕಾದಿಂದ ಸ್ಪರ್ಧಿಸಿ ಸೋತಿದ್ದ ಅನಿತಾ ಪ್ರಿಯದರ್ಶಿನಿ ಮತ್ತೆ ಅದೇ ಸ್ಥಾನದಿಂದ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ರಾಜಕೀಯ ಹಿನ್ನೆಲೆಯುಳ್ಳವರು

ಜಾರ್ಖಂಡ್ ಮೂರು ಮಹಿಳಾ ಅಭ್ಯರ್ಥಿಗಳಾದ ಸೀತಾ ಸೊರೆನ್, ಗೀತಾ ಕೊಡ ಮತ್ತು ಅನ್ನಪೂರ್ಣ ದೇವಿ ಅವರು ದುಮ್ಕಾ, ಸಿಂಗ್‌ಭೂಮ್ ಮತ್ತು ಕೊಡರ್ಮಾದಿಂದ ಸ್ಪರ್ಧಿಸಿದ್ದಾರೆ. ಈ ಮೂವರೂ ಅಭ್ಯರ್ಥಿಗಳು ರಾಜಕೀಯ ಹಿನ್ನೆಲೆಯುಳ್ಳವರಾಗಿದ್ದಾರೆ.

ಉತ್ತರ ಪ್ರದೇಶದಲ್ಲಿ ರೇಖಾ ವರ್ಮಾ (ಧಾರುಹರ) ಮತ್ತು ಮೇನಕಾ ಗಾಂಧಿ (ಸುಲ್ತಾನ್‌ಪುರ) ಕೂಡ ರಾಜಕೀಯದಲ್ಲಿ ಕುಟುಂಬ ಸದಸ್ಯರನ್ನು ಹೊಂದಿದ್ದರು. ಹಿಂದಿನವರು 2014 ರಿಂದ ಧರುಹರಾದಿಂದ ಹಾಲಿ ಸಂಸದರಾಗಿದ್ದರೆ, ನಂತರದವರು 1989ರಲ್ಲಿ ಲೋಕಸಭೆಗೆ ಮೊದಲ ಬಾರಿಗೆ ಆಯ್ಕೆಯಾದರು.

Continue Reading

ಆಹಾರ/ಅಡುಗೆ

Food Expired Date: ಅವಧಿ ಮೀರಿದ ಆಹಾರದಿಂದ ಜೀವಕ್ಕೇ ಅಪಾಯ! ಖರೀದಿಸುವಾಗ ಈ ಅಂಶಗಳನ್ನು ಗಮನಿಸಿ

Food Expired Date: ತಿನ್ನುವ ಆಹಾರ ಎಷ್ಟು ಸುರಕ್ಷಿತ ಮತ್ತು ಗುಣಮಟ್ಟದಲ್ಲಿದೆ ಎಂಬುದನ್ನು ನಾವು ತಿಳಿದುಕೊಂಡಿರಲೇಬೇಕು. ಇಲ್ಲವಾದರೆ ಆರೋಗ್ಯ ಹಾಳಾಗಬಹುದು. ಇವುಗಳನ್ನು ಪರೀಕ್ಷಿಸುವ ಹಲವು ವಿಧಾನಗಳು ಇಲ್ಲಿವೆ.

VISTARANEWS.COM


on

By

Food products
Koo

ಎರಡು ದಿನಗಳ ಹಿಂದೆ ಡೇಟ್ ಎಕ್ಸ್‌ಪೈರ್‌ (Food Expired Date) ಆಗಿದ್ದ ಚಾಕಲೇಟ್ (Chocolate) ಸೇವಿಸಿ ಪಂಜಾಬ್‌ನ (punjab) ಪಟಿಯಾಲದಲ್ಲಿ (patiyala) ಬಾಲಕಿ ಒಬ್ಬಳು ಮೃತಪಟ್ಟಿದ್ದಳು, ವಾರದ ಹಿಂದೆ ಮಂಡ್ಯ (mandya) ಜಿಲ್ಲೆ ಶ್ರೀರಂಗಪಟ್ಟಣ (srirangapattana) ತಾಲೂಕಿನ ಬೆಟ್ಟಹಳ್ಳಿಯಲ್ಲಿ ಐಸ್ ಕ್ರೀಮ್ (icecream) ತಿಂದು ಅವಳಿ ಜವಳಿ ಮಕ್ಕಳಿಬ್ಬರು ಮೃತಪಟ್ಟಿದ್ದರು. ಈ ಎರಡೂ ಘಟನೆಗಳಲ್ಲಿ ಖರೀದಿ ಮಾಡಿದ ಆಹಾರದ (Food products) ಗುಣಮಟ್ಟದ (quality) ಬಗ್ಗೆ ನಿರ್ಲಕ್ಷ್ಯ ವಹಿಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ.

ಆಹಾರ ಮತ್ತು ಔಷಧ ಇವೆರಡೂ ನಿರ್ದಿಷ್ಟ ಸಮಯದ ಬಳಿಕ ಹಾಳಾಗುತ್ತದೆ ಮತ್ತು ವಿಷಕಾರಿಯಾಗುತ್ತದೆ. ಹೀಗಾಗಿ ಅರೋಗ್ಯ ಸುರಕ್ಷತೆಯ ದೃಷ್ಟಿಯಲ್ಲಿ ಇವೆರಡನ್ನು ನಿಗದಿತ ಸಮಯದೊಳಗೆ ಸೇವಿಸುವುದು ಉತ್ತಮ.

ಇವೆರಡರ ನಡುವಿನ ಗಮನಾರ್ಹ ವ್ಯತ್ಯಾಸವೆಂದರೆ ಎಕ್ಸ್‌ಪೈರಿ ಡೇಟ್ ಮುಗಿದ ಮೇಲೆ ಔಷಧಗಳಲ್ಲಿ ಬಳಸುವ ರಾಸಾಯನಿಕ ಮಿಶ್ರಣವು ವಿಷವಾಗುತ್ತದೆ. ಅದಕ್ಕಾಗಿ ಎಕ್ಸ್‌ಪೈರಿ ಡೇಟ್ ಮುಗಿದ ಮೇಲೆ ಔಷಧವನ್ನು ಸೇವಿಸಬಾರದು ಮತ್ತು ಎಸೆಯಬೇಕು. ಇಲ್ಲಿ ಸುರಕ್ಷತೆ ಸಮಸ್ಯೆಯೇ ಹೊರತು ಗುಣಮಟ್ಟ ಅಲ್ಲ.

ಇದನ್ನೂ ಓದಿ: Nestle Company: ಮಕ್ಕಳ ಜೀವದ ಜತೆ ನೆಸ್ಲೆ ಕಂಪನಿ ಚೆಲ್ಲಾಟ? ಸೆರೆಲಾಕ್‌ ಕುಡಿಸೋ ಮುನ್ನ ಎಚ್ಚರ!

ಇದಕ್ಕೆ ವ್ಯತಿರಿಕ್ತವಾಗಿ ಆಹಾರ ಉತ್ಪನ್ನಗಳು ಕ್ರಮೇಣ ಹಾಳಾಗುತ್ತವೆ. ಅಪರೂಪ ಎಂಬಂತೆ ಕೆಲವೊಮ್ಮೆ ವಿಷಕಾರಿಯಾಗುತ್ತವೆ. ಆಹಾರ ವಿಷಕಾರಿ ಆಗುವ ಮೊದಲು ರುಚಿ, ಪರಿಮಳ ಮತ್ತು ಪೌಷ್ಟಿಕಾಂಶವನ್ನು ಕಳೆದುಕೊಳ್ಳುತ್ತದೆ. ಕಾಲಾನಂತರದಲ್ಲಿ ತನ್ನ ಗುಣಮಟ್ಟವನ್ನು ಕಳೆದುಕೊಳ್ಳುತ್ತದೆ. ಹೀಗಾಗಿ ಇಲ್ಲಿ, ಗುಣಮಟ್ಟ ಪ್ರಮುಖ ವಿಚಾರವಾಗಿದೆಯೇ ಹೊರತು ಸುರಕ್ಷತೆ ಅಲ್ಲ. ಹೀಗಾಗಿ ಆಹಾರ ಉತ್ಪನ್ನಗಳಿಗೆ ಎಕ್ಸ್‌ಪೈರಿ ಡೇಟ್ ಈನ್ದು ಇರುವುದಿಲ್ಲ. ಬದಲಾಗಿ ಅವನ್ನು ತಯಾರಿಸಿದ, ಬಳಸಲಾಗುವ ದಿನಾಂಕಗಳನ್ನು ಮಾತ್ರ ಹೇಳಲಾಗುತ್ತದೆ.


ಆಹಾರ ಪೋಲು

ಇದರಿಂದಾಗಿ ಪ್ರಪಂಚದಾದ್ಯಂತ ಜನರು ಸೇವಿಸಲು ಯೋಗ್ಯವಾದ ಸಾಕಷ್ಟು ಉತ್ತಮವಾದ ಆಹಾರಗಳು ಕಸದ ಬುಟ್ಟಿ ಸೇರುತ್ತದೆ.

ಪ್ರಪಂಚದಾದ್ಯಂತ ಲಕ್ಷಾಂತರ ಮಂದಿ ಎರಡು ಹೊತ್ತಿನ ಊಟಕ್ಕಾಗಿ ಪರದಾಡುತ್ತಿದ್ದಾರೆ. ಅಮೆರಿಕ, ಮಲೇಷ್ಯಾ ದೇಶಗಳು ವಿಶ್ವದಲ್ಲೇ ಹೆಚ್ಚು ಆಹಾರ ಪೋಲು ಮಾಡುವ ರಾಷ್ಟ್ರಗಳಾಗಿವೆ. ಇದರಲ್ಲಿ ಭಾರತವೂ ಹಿಂದೆ ಬಿದ್ದಿಲ್ಲ. ನಾವು ಆಹಾರ ವ್ಯರ್ಥವಾಗುವುದನ್ನು ತಡೆಗಟ್ಟುವ ಜೊತೆಗೆ ಅವುಗಳ ಗುಣಮಟ್ಟಕ್ಕೂ ಹೆಚ್ಚಿನ ಆದ್ಯತೆ ನೀಡಬೇಕಿದೆ.

ಆಹಾರ ಉತ್ಪನ್ನಗಳ ದಿನಾಂಕ

ಬೇರೆಬೇರೆ ಆಹಾರಗಳು ಬೇರೆಬೇರೆ ಅವಧಿಯವರೆಗೆ ಉತ್ತಮ ಗುಣಮಟ್ಟದಲ್ಲಿ ಇರುತ್ತದೆ. ಅಂದರೆ, ಎಲ್ಲಾ ಆಹಾರ ಪದಾರ್ಥಗಳು ಒಂದೇ ಪ್ರಮಾಣದಲ್ಲಿ, ಒಂದೇ ಸಮಯದಲ್ಲಿ ಹಾಳಾಗುವುದಿಲ್ಲ. ಆಹಾರ ಕಂಪನಿಗಳು ಶೆಲ್ಫ್ ಜೀವನವನ್ನು ಹೆಚ್ಚಿಸಲು ಸಂರಕ್ಷಕಗಳನ್ನು ಬಳಸುತ್ತವೆ. ಇದರ ಆಧಾರದ ಮೇಲೆ ಅವುಗಳ ಗುಣಮಟ್ಟದ ಬಾಳಿಕೆ ಅವಧಿಯನ್ನು ನಿರ್ಧರಿಸಲಾಗುತ್ತದೆ.

ಆಹಾರದ ಗುಣಮಟ್ಟಕ್ಕೆ ದಿನಾಂಕಗಳನ್ನು ಹೇಗೆ ನಿರ್ಧರಿಸಬೇಕು ಎಂಬುದರ ಕುರಿತು ವಿಶ್ವದ ಯಾವುದೇ ದೇಶದಲ್ಲೂ ಸ್ಪಷ್ಟ ಮಾರ್ಗಸೂಚಿಗಳಿಲ್ಲ. ಹೀಗಾಗಿ ಇದಕ್ಕೆ ಸಂಬಂಧಿಸಿ ಕಠಿಣ ಕಾನೂನುಗಳನ್ನು ಹೊಂದಿಲ್ಲ. ಇದನ್ನು ಅನುಭವದ ಆಧಾರದ ಮೇಲೆ ನಿರ್ಧರಿಸಲು ಆಹಾರ ತಯಾರಕರಿಗೆ ಅನುಮತಿ ನೀಡಲಾಗಿದೆ. ಇದಕ್ಕಾಗಿ ಆಹಾರ ಕಂಪೆನಿಗಳು ಗುಣಮಟ್ಟವನ್ನು ಪರೀಕ್ಷಿಸಲು ಕೆಲವು ಪರೀಕ್ಷೆಗಳನ್ನು ನಡೆಸುತ್ತವೆ.

ವಿದೇಶಗಳಲ್ಲಿ ಆಹಾರ ಗುಣಮಟ್ಟ ನಿರ್ಧರಿಸುವ ದಿನಾಂಕಗಳನ್ನು ಉಲ್ಲೇಖಿಸಲಾಗುತ್ತದೆ. ಇದರ ಬಗ್ಗೆ ಭಾರತೀಯರು ತಿಳಿದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ವಿದೇಶಕ್ಕೆ ಪ್ರವಾಸ ಮಾಡುವ ಯೋಜನೆ ಇದ್ದರೆ ಇದು ಹೆಚ್ಚು ಉಪಯುಕ್ತವಾಗಿರುತ್ತದೆ.


ಪ್ಯಾಕ್ಡ್ ಆನ್ / ಕ್ಲೋಸ್ಡ್ ಆನ್

ಆಹಾರ ಪದಾರ್ಥವನ್ನು ಕಂಟೇನರ್‌ನಲ್ಲಿ ಸೀಲ್ ಮಾಡಿದ ದಿನಾಂಕ ಮತ್ತು ಅದರ ಬಾಳಿಕೆ ಹಾಗೂ ಆಹಾರದ ಗುಣಮಟ್ಟವನ್ನು ನಿರ್ಣಯಿಸಲು ಇದು ಉಪಯುಕ್ತವಾಗಿದೆ.

ಸೆಲ್ ಬೈ / ಪುಲ್ ಬೈ

ಈ ಸಂದೇಶವು ತಯಾರಕರಿಂದ ಚಿಲ್ಲರೆ ವ್ಯಾಪಾರಿಗಳಿಗೆ. ನಿರ್ಧಿಷ್ಟ ದಿನಾಂಕದೊಳಗೆ ಉತ್ಪನ್ನವನ್ನು ಮಾರಾಟ ಮಾಡದಿದ್ದರೆ ಅದನ್ನು ಶೆಲ್ಫ್‌ನಿಂದ ತೆಗೆದು ಕಸದ ಬುಟ್ಟಿಗೆ ಹಾಕಬೇಕು.

ಬೆಸ್ಟ್ ಯೂಸ್ಡ್ ಬಿಫೋರ್/ ಬೆಸ್ಟ್ ಯೂಸ್ಡ್ ಬೈ

ಇದು ಆಹಾರ ಪದಾರ್ಥಗಳ ಗುಣಮಟ್ಟ ಕಡಿಮೆಯಾಗುವುದನ್ನು ಸೂಚಿಸುವ ದಿನಾಂಕವಾಗಿದೆ. ನಿರ್ದಿಷ್ಟ ದಿನಾಂಕದೊಳಗೆ ಬಳಸದೇ ಇದ್ದರೆ ಆಹಾರದ ರುಚಿ, ಪರಿಮಳ ಮತ್ತು ಪೌಷ್ಟಿಕಾಂಶದ ಮೌಲ್ಯವು ನಂತರ ಬದಲಾಗುತ್ತದೆ. ಈ ದಿನಾಂಕದ ಅನಂತರ ಕೆಲವು ದಿನಗಳವರೆಗೆ ಆಹಾರವು ಸೇವಿಸಲು ಸಾಕಷ್ಟು ಉತ್ತಮವಾಗಿರುತ್ತದೆ.

ಯೂಸ್ ಬೈ/ ಡು ನಾಟ್ ಯೂಸ್ ಆಫ್ಟರ್

ನಿಗದಿತ ಅವಧಿ ಮುಗಿದ ಬಳಿಕ ಆಹಾರದ ಗುಣಮಟ್ಟವು ಹದಗೆಟ್ಟಿರುತ್ತದೆ. ಅದನ್ನು ಕಸದ ಬುಟ್ಟಿಗೆ ಹಾಕಲೇ ಬೇಕು ಎಂಬುದನ್ನು ಇದು ಹೇಳುತ್ತದೆ.

ಇವೆಲ್ಲವೂ ಮುಚ್ಚಿರುವ ಆಹಾರಗಳಿಗೆ ಮಾತ್ರ ಅನ್ವಯಾವಾಗುತ್ತದೆ. ಒಮ್ಮೆ ಪ್ಯಾಕೆಟ್ ತೆರೆದರೆ ಅಥವಾ ಗಾಳಿಗೆ ಒಡ್ಡಿಕೊಂಡರೆ ಅವುಗಳ ಗುಣಮಟ್ಟ ಕ್ಷೀಣಿಸಲು ಪ್ರಾರಂಭವಾಗುತ್ತದೆ.

ಖರೀದಿ ಮಾಡುವಾಗ ಎಚ್ಚರ

ಪ್ಯಾಕೆಟ್ ನಲ್ಲಿರುವ ದಿನಾಂಕ ಕೇವಲ ಗುಣಮಟ್ಟಕ್ಕೆ ಸಂಬಂಧಿಸಿರುತ್ತದೆ. ಆದರೆ ಆಹಾರದಲ್ಲಿ ನಾವು ಸುರಕ್ಷತೆ ಬಗ್ಗೆಯೂ ಗಮನ ಹರಿಸಬೇಕು.

ಪ್ಯಾಕೆಟ್ ಆಹಾರ ಖರೀದಿ ಪ್ಯಾಕೆಟ್ ಸರಿಯಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಯಾಕೆಂದರೆ ಆಹಾರ ಪ್ಯಾಕೇಜಿಂಗ್, ಸ್ಥಳಾಂತರದ ವೇಳೆ ಅದು ಹಾನಿಗೊಳಾಗಿರಬಹುದು. ಇಂತಹ ಪ್ಯಾಕೆಟ್‌ಗಳು ಇಲಿ, ನೊಣಗಳಿಂದ ಸೋಂಕಿಗೆ ಒಳಗಾಗಿ, ಗಾಳಿಯ ತೇವಾಂಶದಿಂದ ವಿಷಕಾರಿ ಆಗಿರಬಹುದು.

ಆಹಾರ ಡಬ್ಬಿಯಲ್ಲಿ ಬಿರುಕು ಇದೆಯೇ ಎಂಬುದನ್ನು ಪರಿಶೀಲಿಸಬೇಕು. ಅಲ್ಲದೇ ಕೆಲವೊಂದು ಡಬ್ಬಿಗಳು ಉಬ್ಬಿದ್ದರೆ ಆಹಾರದಲ್ಲಿ ತೀವ್ರವಾದ ಬ್ಯಾಕ್ಟೀರಿಯಾ ಇದ್ದು, ಆಹಾರ ವಿಷಕಾರಿಯಾಗುತ್ತಿದೆ ಎಂಬುದನ್ನು ಅರಿತುಕೊಳ್ಳಬೇಕು.


ಮನೆಯಲ್ಲಿ ಸಿದ್ಧಪಡಿಸಿದ ಆಹಾರ

ಕೆಟ್ಟ ವಾಸನೆ, ಪ್ಯಾಕೆಟ್, ಕ್ಯಾನ್‌ನಲ್ಲಿ ಕಪ್ಪು ಕಲೆಗಳು- ಇದು ಇಲಿಗಳಿಂದ ಆಹಾರ ಹಾಳಾಗಿದೆ ಎಂಬುದನ್ನು ತಿಳಿಸುತ್ತದೆ.

ಸಾಮಾನ್ಯವಾಗಿ ಆಹಾರದ ಬಣ್ಣ ಬದಲಾಗಿದ್ದರೆ, ಅವುಗಳ ಮೇಲೆ ಹಸಿರು ಅಥವಾ ಕಪ್ಪು ತೇಪೆಗಳು ಕಂಡುಬಂದರೆ ಇದು ಶಿಲೀಂಧ್ರಗಳ ಬೆಳವಣಿಗೆಯಾಗಿದೆ. ಇದು ಹೆಚ್ಚಾಗಿ ಬೇಯಿಸಿದ ಪದಾರ್ಥಗಳಲ್ಲಿ ಕಾಣಿಸುತ್ತದೆ.

ಆಹಾರವು ತುಂಬಾ ಬಲವಾದ ಅಸಾಮಾನ್ಯ ವಾಸನೆಯನ್ನು ಹೊಂದಿದ್ದರೆ ಆಹಾರವು ಹುಳಿಯಾಗಿರುತ್ತದೆ. ಸಾಮಾನ್ಯವಾಗಿ ದೋಸೆ ಅಥವಾ ಇಡ್ಲಿ ಹಿಟ್ಟು ಮತ್ತು ಮೊಸರಿನಲ್ಲಿ ಹೀಗಾಗುತ್ತದೆ.

ಆಹಾರ ಪದಾರ್ಥವು ಲೋಳೆ ಅಥವಾ ಜಿಗುಟಾಗಿದ್ದರೆ ಬ್ಯಾಕ್ಟೀರಿಯಾ ಅಥವಾ ವೈರಲ್ ತಗಲಿದೆ ಎಂಬುದರ ಸೂಚಕವಾಗಿದೆ.

ಆಹಾರ ಸಾಮಾನ್ಯಕ್ಕಿಂತ ಹೆಚ್ಚು ಕಹಿ ಅಥವಾ ಹೆಚ್ಚು ಹುಳಿಯಾಗಿದ್ದಾರೆ ಬ್ಯಾಕ್ಟೀರಿಯಾದ ಚಟುವಟಿಕೆ ನಡೆಯುತ್ತಿದೆ ಎಂದು ತಿಳಿಯಬೇಕು.

ಯಾವತ್ತೂ ಆಹಾರದ ಮುಚ್ಚಳ ತೆರೆಯುವಾಗ ಸೂಕ್ಷ್ಮವಾಗಿ ಗಮನಿಸಿ. ಒಂದು ವೇಳೆ ಬಳಸಲು ಯೋಗ್ಯವಾಗಿಲ್ಲ ಎಂದು ಅನಿಸಿದರೆ ಕೂಡಲೇ ಅದನ್ನು ಕಸದ ಬುಟ್ಟಿಗೆ ಹಾಕಿ.

ಗುಣಮಟ್ಟ ಕಾಪಾಡಿ

ಮಾರುಕಟ್ಟೆಯಿಂದ ಖರೀದಿ ಮಾಡಿ ತಂದ ವಸ್ತುಗಳ ಗುಣಮಟ್ಟ ಕಾಪಾಡುವುದು ನಮ್ಮ ಜವಾಬ್ದಾರಿ. ಹಣ್ಣು ಅಥವಾ ತರಕಾರಿಗಳನ್ನು ತೊಳೆದು ರೆಫ್ರಿಜರೇಟರ್ ನಲ್ಲಿ ಇಡಿ. ಆಹಾರ ಪ್ಯಾಕೆಟ್‌ಗಳ ಮೇಲೆ ಅವುಗಳನ್ನು ಹೇಗೆ ಸಂಗ್ರಹಿಸಿಡಬೇಕು ಎಂದು ಸೂಚಿಸಲಾಗಿರುತ್ತದೆ. ಅದನ್ನು ತಿಳಿದುಕೊಳ್ಳಿ. ಉದಾ- ಬೀಜಗಳನ್ನು ತೆರೆದು ಇಡಬಾರದು ಏಕೆಂದರೆ ಅವುಗಳಲ್ಲಿನ ತೈಲಗಳು ಕಂದುಬಣ್ಣಕ್ಕೆ ತಿರುಗುವುದರಿಂದ ಅವು ಮೃದು ಮತ್ತು ಕಹಿಯಾಗಬಹುದು.
ಕೆಲವು ಉತ್ಪನ್ನಗಳನ್ನು ತಕ್ಷಣವೇ ಬಳಸಲಾಗುವುದಿಲ್ಲ. ಆದರೆ ಹೆಚ್ಚು ಕಾಲ ಉಳಿಯಬೇಕು. ಆಗ ಅವುಗಳನ್ನು ಫ್ರೀಜರ್ ನಲ್ಲಿ ಇರಿಸಿ.

ಆಹಾರದ ಪ್ಯಾಕೆಟ್ ಅನ್ನು ತೆರೆದ ಬಳಿಕ ತಕ್ಷಣವೇ ಖಾಲಿ ಮಾಡಿ. ಪದೇಪದೇ ಗಾಳಿಗೆ ಒಡ್ಡುವುದರಿಂದ ಅವುಗಳ ಸತ್ವ ನಾಶವಾಗುತ್ತದೆ.

Continue Reading

ರಾಜಕೀಯ

Party Symbols: ವಿವಿಧ ಪಕ್ಷಗಳ ಚುನಾವಣಾ ಚಿಹ್ನೆ ಹಿಂದೆ ಹೇಗಿತ್ತು, ಈಗ ಏನಾಗಿದೆ? ಸಂಗ್ರಹಯೋಗ್ಯ ಮಾಹಿತಿ

Party symbols: ಭಾರತದಲ್ಲಿ ಚುನಾವಣೆ ಆರಂಭದಿಂದಲೂ ವಿವಿಧ ಪಕ್ಷಗಳಿಗೆ ಚುನಾವಣಾ ಚಿಹ್ನೆಯನ್ನು ನೀಡಲಾಗುತ್ತಿದೆ. ಆದರೆ ಈಗ ಇರುವ ಚುನಾವಣೆ ಚಿಹ್ನೆಗಳು ಮೊದಲು ಇರಲಿಲ್ಲ. ಪಕ್ಷ ಹುಟ್ಟಿಕೊಂಡ ಕೆಲವು ವರ್ಷಗಳ ಬಳಿಕ ಬಳಕೆಗೆ ಬಂದವು. ಕೆಲವು ಪಕ್ಷಗಳು ತನ್ನ ಚಿಹ್ನೆಯನ್ನು ಕಳೆದುಕೊಂಡು ಹೊಸ ಗುರುತನ್ನು ಪಡೆದಿದೆ. ಈ ಚಿಹ್ನೆಯ ಮಹತ್ವ ಎಷ್ಟು ಗೊತ್ತೇ? ಈ ಕುರಿತ ಸಂಗ್ರಹಯೋಗ್ಯ ಮಾಹಿತಿ ಇಲ್ಲಿದೆ.

VISTARANEWS.COM


on

By

Party symbols
Koo

ಚುನಾವಣೆ (election) ವೇಳೆ ಎಲ್ಲರ ಗಮನ ಸೆಳೆಯುವುದು ಚುನಾವಣಾ ಚಿಹ್ನೆಗಳು. ಈ ಬಾರಿಯೂ ಲೋಕಸಭಾ ಚುನಾವಣೆ- 2024ರಲ್ಲಿ (loksabha election-2024) ಕಣಕ್ಕೆ ಇಳಿದಿರುವ ಅಭ್ಯರ್ಥಿಗಳಿಗೆ ಚುನಾವಣಾ ಆಯೋಗವು ನೀಡಿದ್ದ ಚುನಾವಣಾ ಚಿಹ್ನೆಗಳು ಎಲ್ಲರ ಗಮನ ಸೆಳೆದಿತ್ತು. ಚುನಾವಣಾ ಚಿಹ್ನೆಯ (Party symbols) ಬಳಕೆ ಹೊಸದೇನಲ್ಲ 1951ರ ಮೊದಲ ಚುನಾವಣೆಯಿಂದಲೇ ಅಭ್ಯರ್ಥಿಯನ್ನು (candidate) ಗುರುತಿಸಲು ಚುನಾವಣಾ ಚಿಹ್ನೆಗಳನ್ನು ಬಳಸಲಾಗುತ್ತಿದೆ.

ಚುನಾವಣಾ ಪ್ರಚಾರದ ವೇಳೆ ಜನರ ಗಮನಸೆಳೆಯುವ ಚುನಾವಣಾ ಚಿಹ್ನೆಗಳು ಒಂದೇ ಹೆಸರಿನ ಅಭ್ಯರ್ಥಿಗಳು ಕಣದಲ್ಲಿ ಇದ್ದರೆ ತಮ್ಮ ನೆಚ್ಚಿನ ಅಭ್ಯರ್ಥಿಯನ್ನು ಗುರುತಿಸಲು ಇದು ಸಹಾಯ ಮಾಡುತ್ತದೆ. ಚಿತ್ರಗಳು ಸಾಮಾನ್ಯವಾಗಿ ಎಲ್ಲರಿಗೂ ನೆನಪಿನಲ್ಲಿ ಉಳಿಯುತ್ತದೆ. ದೇಶದಲ್ಲಿ ಚುನಾವಣೆ ಪ್ರಕ್ರಿಯೆ ಆರಂಭವಾದಾಗ ಸಾಕ್ಷರರ ಪ್ರಮಾಣ ಕಡಿಮೆ ಇತ್ತು. ಹೀಗಾಗಿಯೇ ಚುನಾವಣಾ ಆಯೋಗ ಚಿಹ್ನೆಗಳನ್ನು ಬಳಸಲು ಪ್ರಾರಂಭಿಸಿತ್ತು.

ಅಕ್ಷರಗಳಿಗಿಂತ ಹೆಚ್ಚು ವೇಗವಾಗಿ ಮನ ಮುಟ್ಟುವ ಚುನಾವಣಾ ಚಿಹ್ನೆಗಳು ಮತ್ತು ಅವುಗಳ ಸೃಜನಾತ್ಮಕ ಬಳಕೆಯ ಕುರಿತು ಭಾರತದಲ್ಲಿ ಹಿನ್ನೆಲೆ ಹೇಗಿತ್ತು ಗೊತ್ತೇ ?

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌-ಬಿಜೆಪಿ ಮಧ್ಯೆ ʼಚೆಂಬುʼ ವಾರ್; ಗ್ಯಾರಂಟಿಗಳಿಂದ ಜನರಿಗೆ ಕಾಂಗ್ರೆಸ್‌ ಟೋಪಿ ಎಂದ ವಿಜಯೇಂದ್ರ

ಯಾವಾಗ ಆರಂಭ?

1951ರ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಸೇರಿ 53 ಪಕ್ಷಗಳ ಅಭ್ಯರ್ಥಿಗಳು ಸುಮಾರು 4,500 ಸ್ಥಾನಗಳಿಗೆ ಸ್ಪರ್ಧಿಸಿದ್ದರು. ಈ ಸಂದರ್ಭದಲ್ಲಿ ಚುನಾವಣಾ ಆಯೋಗವು ಅಭ್ಯರ್ಥಿಗಳು ಸ್ಪರ್ಧಿಸಬಹುದಾದ ಪಕ್ಷಗಳಿಗೆ ಚಿಹ್ನೆಗಳನ್ನು ನಿಗದಿಪಡಿಸಿತ್ತು. ಈ ಪ್ರಕ್ರಿಯೆಯು ಚುನಾವಣಾ ಚಿಹ್ನೆಗಳ ಮೀಸಲಾತಿ ಮತ್ತು ಹಂಚಿಕೆ ಆದೇಶ 1968ರಲ್ಲಿ ಹೊರಬಂದು ಇದು ಹೆಚ್ಚು ಸುವ್ಯವಸ್ಥಿತವಾಯಿತು. ಇದರ ಪ್ರಕಾರ ರಾಷ್ಟ್ರೀಯ, ರಾಜ್ಯ ಮಟ್ಟದಲ್ಲಿ ಪಕ್ಷಗಳಿಗೆ ಮತ್ತು ಸ್ವತಂತ್ರ ಅಭ್ಯರ್ಥಿಗಳಿಗೆ ಚಿಹ್ನೆಗಳ ಹಂಚಿಕೆಯನ್ನು ಮಾಡಲಾಗುತ್ತದೆ. ಇದು ಎರಡು ಅಥವಾ ಹೆಚ್ಚಿನ ಪಕ್ಷಗಳ ವಿಲೀನದ ಸಂದರ್ಭದಲ್ಲಿ ಅಥವಾ ಪಕ್ಷದಲ್ಲಿ ವಿಭಜನೆಯ ಸಂದರ್ಭದಲ್ಲಿ ಅನ್ವಯಿಸಬಹುದಾದ ನಿಯಮಗಳನ್ನೂ ಹೊಂದಿದೆ.

ವಿಲೀನ, ವಿಭಜನೆಯಾದ ಸಂದರ್ಭದಲ್ಲಿ ಕೆಲವು ಚಿಹ್ನೆಗಳು ಹೊಸದಾಗಿ ಬರುತ್ತದೆ, ಇನ್ನು ಕೆಲವು ಅಳಿಸಿ ಹೋಗುತ್ತದೆ. ಪ್ರಸ್ತುತ ಇರುವ ಚಿಹ್ನೆಗಳು ಹುಟ್ಟಿಕೊಳ್ಳುವುದರ ಹಿಂದೆ ಬಹು ದೊಡ್ಡ ಕಥೆಯೇ ಇದೆ.


ಕಾಂಗ್ರೆಸ್ ನ ಕೈ

ಕಾಂಗ್ರೆಸ್ ಪ್ರಾರಂಭದಲ್ಲಿ ಚುನಾವಣಾ ಚಿಹ್ನೆಯಾಗಿ ನೊಗ ಹಿಡಿದ ಎತ್ತುಗಳನ್ನು ಹೊಂದಿತ್ತು. ಜವಾಹರಲಾಲ್ ನೆಹರು, 1969ರಲ್ಲಿ ಇಂದಿರಾ ಗಾಂಧಿ ಅವರೂ ಜೋಡಿ ಎತ್ತಿನ ಚಿಹ್ನೆಯನ್ನು ಹೊಂದಿದ್ದರು. 1969ರಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಎಸ್. ನಿಜಲಿಂಗಪ್ಪ ಅವರು ಪಕ್ಷದಿಂದ ಹೊರಹೋದಾಗ ಕಾಂಗ್ರೆಸ್ ವಿಭಜನೆಯಾಯಿತು. ಈ ಸಂದರ್ಭದಲ್ಲಿ ಚುನಾವಣಾ ಚಿನ್ಹೆಯಾಗಿದ್ದ ಜೋಡಿ ಎತ್ತುಗಳ ಬಗ್ಗೆ ವಿವಾದ ಉಂಟಾಯಿತು. ಇಂದಿರಾ ಗಾಂಧಿಯವರ ಬಣಕ್ಕೆ ಹಸು, ಕರು ಚಿಹ್ನೆಯನ್ನು ನೀಡಲಾಯಿತು. ಇದಕ್ಕೂ ಆಕ್ಷೇಪಣೆ ವ್ಯಕ್ತವಾಗಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಲಾಗಿತ್ತು.

ತುರ್ತುಪರಿಸ್ಥಿತಿಯ ಬಳಿಕ ಮೊರಾರ್ಜಿ ದೇಸಾಯಿ ನೇತೃತ್ವದ ಜನತಾ ಪಕ್ಷದ ಕೈಯಲ್ಲಿ ಸೋಲು ಅನುಭವಿಸಿದ ಇಂದಿರಾ ಗಾಂಧಿ ಅವರು ಮರಳಿ ಅಧಿಕಾರಕ್ಕೆ ಬರಲು ಪ್ರಯತ್ನಿಸಿದರು. ತಮ್ಮ ಅಧೀನದಲ್ಲಿರುವ ಪಕ್ಷ ನಿಜವಾದ ಕಾಂಗ್ರೆಸ್ ಎಂದು ಹೇಳಿ ಕಾಂಗ್ರೆಸ್ (ಇಂದಿರಾ) ರಚನೆಯನ್ನು ಘೋಷಿಸಿದರು. 1979ರವರೆಗೆ ಇದ್ದ ಹಸುಕರು ಚಿಹ್ನೆಯನ್ನು ಫ್ರೀಜ್ ಮಾಡಲಾಯಿತು. ಚುನಾವಣಾ ಆಯೋಗವು ಹಲವಾರು ಚಿಹ್ನೆಗಳ ನಡುವೆ ಆಯ್ಕೆಯನ್ನು ನೀಡಿತು. ಅದರಲ್ಲಿ ಕಲ್ಲೇಕುಳಂಗರದ ಕೈಪತಿ ದೇವಸ್ಥಾನ ಅಥವಾ ಕೈ ದೇವಸ್ಥಾನದ ಕಥೆಯು ಇಂದಿರಾ ಗಾಂಧಿಯವರಿಗೆ ‘ಕೈ’ ಚಿಹ್ನೆಯನ್ನು ಪಡೆಯಲು ಪ್ರೇರೇಪಿಸಿತು ಎನ್ನಲಾಗಿದೆ.

ಭಾರತೀಯ ಜನತಾ ಪಕ್ಷ

1980ರಲ್ಲಿ ಬಿಜೆಪಿ ಜನಸಂಘದಿಂದ ಹುಟ್ಟಿಕೊಂಡಿತ್ತು. 1977ರಲ್ಲಿ ಜನ ಸಂಘವು ಜನತಾ ಪಕ್ಷದೊಂದಿಗೆ ವಿಲೀನಗೊಂಡು ಕೇಂದ್ರ ಸರ್ಕಾರವನ್ನು ರಚಿಸಿತ್ತು. ಭಾರತದ ಮೊದಲ ಸಾರ್ವತ್ರಿಕ ಚುನಾವಣೆ ವೇಳೆ ಭಾರತೀಯ ಜನಸಂಘದ ಚುನಾವಣಾ ಚಿಹ್ನೆ 1977ರ ತನಕ ಎಣ್ಣೆ ದೀಪವಾಗಿತ್ತು. ಬಳಿಕ ಅದು ನೊಗ ಹಿಡಿದ ರೈತನನ್ನು ತನ್ನ ಚಿಹ್ನೆಯಾಗಿ ಬಳಸಿತ್ತು. 1980ರಲ್ಲಿ ಜನತಾ ಪಕ್ಷ ದಿಂದ ಹೊರಬಂದ ಜನಸಂಘ ನಾಯಕರು ಭಾರತೀಯ ಜನತಾ ಪಾರ್ಟಿ ಎಂಬ ಹೊಸ ಪಕ್ಷ ಕಟ್ಟಿ ಅದಕ್ಕೆ ಕಮಲದ ಹೂವು ಚುನಾವಣಾ ಚಿಹ್ನೆಯಾಗಿ ಪಡೆದರು.

ಇದಕ್ಕೆ ಸ್ಫೂರ್ತಿಯಾಗಿದ್ದು 1980ರಲ್ಲಿ ಅಟಲ್ ಬಿಹಾರಿ ವಾಜಪೇಯಿಯವರು ಮುಂಬಯಿಯಲ್ಲಿ ರ್ಯಾಲಿ ನಡೆಸುತ್ತಿದ್ದಾಗ ಕಾಂಗ್ರೆಸ್ ವಿರುದ್ಧ ಮಾತನಾಡುತ್ತ “ಅಂಧೇರಾ ಚಟೇಗಾ, ಸೂರಜ್ ನಿಕ್ಲೇಗಾ, ಕಮಲ ಖಿಲೇಗಾ” ಎಂದು ಹೇಳಿದ್ದರು. 1980ರ ಏಪ್ರಿಲ್ 6ರಂದು ಭಾರತೀಯ ಜನತಾ ಪಕ್ಷದ ರಚನೆಯ ವೇಳೆ ವಾಜಪೇಯಿಯವರ ಕಮಲದ ಚಿಹ್ನೆಯ ಆಯ್ಕೆಯು ಹೊಸ ಪಕ್ಷದ ರಾಷ್ಟ್ರೀಯತಾವಾದಿ ಸಿದ್ಧಾಂತಗಳಿಗೆ ಹೊಂದಿಕೆಯಾಯಿತು. ಹೀಗಾಗಿ ಕಮಲ ಬಿಜೆಪಿಯ ಚಿಹ್ನೆಯಾಯಿತು.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ

ಪ್ರಾರಂಭದಲ್ಲಿ ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ)ಯು ಕತ್ತಿ (ಕುಡುಗೋಲು) ಸುತ್ತಿಗೆ ನಕ್ಷತ್ರಗಳನ್ನು ಚುನಾವಣಾ ಚಿಹ್ನೆಯಾಗಿ ಬಳಸಿಕೊಂಡಿತ್ತು. 1964ರ ಬಳಿಕ ಐದು-ಬಿಂದುಗಳ ನಕ್ಷತ್ರವನ್ನು ಸೇರಿಸಲಾಯಿತು. ಬಳಿಕ ವಿಭಜನೆಯಾಗಿ ಸಿಪಿಐ (ಎಂ), ಸಿಪಿಐ (ಎಡ) ಪಕ್ಷಗಳು ಹುಟ್ಟಿಕೊಂಡವು. ಆಂಧ್ರಪ್ರದೇಶ, ಕೇರಳ ಮತ್ತು ಪಶ್ಚಿಮ ಬಂಗಾಳದ ಲ್ಲಿ ಮಾತ್ರ ಸ್ಥಾನಗಳನ್ನು ಪಡೆದಿರುವ ಸಿಪಿಐ ಪಕ್ಷಕ್ಕೆ 1964ರಲ್ಲಿ ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡಲಾಯಿತು. ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಸಿಪಿಐ (ಮಾರ್ಕ್ಸ್‌ವಾದಿ)ಯ ಚುನಾವಣಾ ಚಿಹ್ನೆ ಕತ್ತಿ ಮತ್ತು ಜೋಳದ ತೆನೆಯಾಗಿತ್ತು.


ಬಹುಜನ ಸಮಾಜ ಪಕ್ಷ

1984ರಲ್ಲಿ ಹುಟ್ಟಿಕೊಂಡ ಬಹುಜನ ಸಮಾಜ ಪಕ್ಷ (BSP) 1988ರ ಅಲಹಾಬಾದ್ ಉಪ ಚುನಾವಣೆಯಲ್ಲಿ ತನ್ನ ಛಾಪು ಮೂಡಿಸಿತ್ತು. ಬಿಎಸ್‌ಪಿಯ ಸಂಸ್ಥಾಪಕ ಕಾನ್ಶಿ ರಾಮ್ ಅವರು ಪ್ರಚಾರದ ವೇಳೆ ಆನೆಯ ಮೇಲೆ ನೀಲಿ ಧ್ವಜದ ಚಿಹ್ನೆಯನ್ನು ಬಳಸಿಕೊಂಡರು. ಹಿಂದೂ ಮತ್ತು ಬೌದ್ಧ ಧರ್ಮದಲ್ಲಿ ಪ್ರಾಮುಖ್ಯತೆಯನ್ನು ಹೊಂದಿರುವ ‘ಆನೆ’ ಚಿಹ್ನೆಯು ಕಾನ್ಶಿರಾಮ್‌ಗೆ ಹೆಚ್ಚಿನ ಬಲ ತುಂಬಿತ್ತು. ಬಿಎಸ್ಪಿಯ ‘ಆನೆ’ ಭಾರತದಲ್ಲಿ ಕೆಲವು ಪ್ರಾಣಿ ಆಧಾರಿತ ಚುನಾವಣಾ ಚಿಹ್ನೆಗಳಲ್ಲಿ ಒಂದಾಗಿದೆ. ಯಾಕೆಂದರೆ ಚುನಾವಣಾ ಆಯೋಗವು ಈಗ ಹೊಸದಾಗಿ ಪ್ರಾಣಿಗಳ ಚಿಹ್ನೆಗಳನ್ನು ನೀಡುವುದನ್ನು ನಿಲ್ಲಿಸಿದೆ.

ಆಮ್ ಆದ್ಮಿ ಪಕ್ಷ

2011ರಲ್ಲಿ ಅಣ್ಣಾ ಹಜಾರೆ ನೇತೃತ್ವದಲ್ಲಿ ಭ್ರಷ್ಟಾಚಾರದ ವಿರುದ್ಧ ಹುಟ್ಟಿಕೊಂಡ ಸಂಘಟನೆ ಇದು. ಅರವಿಂದ್ ಕೇಜ್ರಿವಾಲ್ ಅವರು 2012ರಲ್ಲಿ ಆಮ್ ಆದ್ಮಿ ಪಕ್ಷವನ್ನು ರಚಿಸಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದರು. ‘ಪೊರಕೆ’ಯ ಇದರ ಚುನಾವಣಾ ಚಿಹ್ನೆಯಾಗಿದೆ. ಚುನಾವಣಾ ಆಯೋಗಕ್ಕೆ ಪಕ್ಷವು ಸಲ್ಲಿಸಿದ ಮೂರು ಚಿಹ್ನೆಗಳಲ್ಲಿ ‘ಮೇಣದಬತ್ತಿ’ ಮತ್ತು ‘ಟ್ಯಾಪ್’ ಕೂಡ ಇತ್ತು.

ಪೊರಕೆಯ ಚಿಹ್ನೆ ಕಾರ್ಮಿಕರ ಘನತೆಗಾಗಿ ಮಾತ್ರವಲ್ಲ, ನಮ್ಮ ಸರ್ಕಾರ ಮತ್ತು ನಮ್ಮ ಶಾಸಕಾಂಗವನ್ನು ವ್ಯಾಪಿಸಿರುವ ಕೊಳೆಯನ್ನು ಸ್ವಚ್ಛಗೊಳಿಸುವ ಪಕ್ಷದ ಆಶಯವನ್ನು ಪ್ರತಿನಿಧಿಸುತ್ತದೆ ಎನ್ನುತ್ತಾರೆ ಪಕ್ಷದ ಮುಖಂಡರು.

ನ್ಯಾಷನಲ್ ಪೀಪಲ್ಸ್ ಪಾರ್ಟಿ

ಭಾರತದಲ್ಲಿನ ಆರು ರಾಷ್ಟ್ರೀಯ ಪಕ್ಷಗಳಲ್ಲಿ ಒಂದಾದ ನ್ಯಾಷನಲ್ ಪೀಪಲ್ಸ್ ಪಾರ್ಟಿ (NPP) ಅನ್ನು 2013ರಲ್ಲಿ ಸ್ಥಾಪಿಸಲಾಯಿತು. ಅದರ ಸಂಸ್ಥಾಪಕ ಮಾಜಿ ಮೇಘಾಲಯ ಮುಖ್ಯಮಂತ್ರಿ ಪಿ.ಎ. ಸಂಗ್ಮಾ ಅವರನ್ನು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿತ್ತು.

ಪುಸ್ತಕವನ್ನು ಪಕ್ಷದ ಚಿಹ್ನೆಯಾಗಿ ಮಾಡಿಕೊಂಡ ಅವರು ಸಾಕ್ಷರತೆ ಮತ್ತು ಶಿಕ್ಷಣವು ದುರ್ಬಲ ವರ್ಗದವರನ್ನು ಸಬಲೀಕರಣಗೊಳಿಸುತ್ತದೆ ಎಂದು ನಂಬುವುದಾಗಿ ಹೇಳಿ ಶಿಕ್ಷಣಕ್ಕೆ ಒತ್ತು ನೀಡುವ ಭರವಸೆ ನೀಡಿದ್ದರು.

ವಿವಿಧ ಪಕ್ಷಗಳಿಗೆ ಒಂದೇ ಚಿಹ್ನೆಗಳು

ಇನ್ನು ರಾಜ್ಯ ಮಟ್ಟದಲ್ಲಿ ಒಂದೇ ಚುನಾವಣಾ ಚಿಹ್ನೆಯನ್ನು ಪಡೆದು ಬೇರೆಬೇರೆ ಪಕ್ಷಗಳಿಂದಲೂ ಅಭ್ಯರ್ಥಿಗಳು ಕಣಕ್ಕೆ ಇಳಿದಿರುವ ಇತಿಹಾಸವೂ ಇದೆ. ಒಂದೇ ಕ್ಷೇತ್ರದಿಂದ ಪರಸ್ಪರರ ವಿರುದ್ಧ ಸ್ಪರ್ಧಿಸುವುದಿಲ್ಲವೋ ಅಲ್ಲಿಯವರೆಗೆ ಅದು ಸಾಮಾನ್ಯವಾಗಿ ಸಮಸ್ಯೆಯನ್ನು ಉಂಟು ಮಾಡುವುದಿಲ್ಲ. ಆದರೆ ಪಕ್ಷಗಳು ತನ್ನ ಕಾಯ್ದಿರಿಸಿದ ಚಿಹ್ನೆಯಡಿ ಬೇರೆಯವರಿಗೆ ಸ್ಪರ್ಧಿಸಲು ಅನುಮತಿಸುವುದಿಲ್ಲ ಎಂಬ ಷರತ್ತು ವಿಧಿಸುತ್ತದೆ.

ಬೈಸಿಕಲ್ ಗಾಗಿ ಸ್ಪರ್ಧೆ

ಭಾರತೀಯ ರಾಜಕೀಯ ಇತಿಹಾಸದಲ್ಲಿ ಬೈಸಿಕಲ್ ತೀವ್ರ ಪೈಪೋಟಿಯ ಸಂಕೇತವಾಗಿದೆ. ಎನ್.ಟಿ. ರಾಮರಾವ್ ಅವರ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಮುಲಾಯಂ ಸಿಂಗ್ ಯಾದವ್ ಅವರ ಸಮಾಜವಾದಿ ಪಕ್ಷದ ನಡುವೆ ಬೈಸಿಕಲ್ ಗಾಗಿ ಪೈಪೋಟಿ ಏರ್ಪಟ್ಟಿತ್ತು.

1982ರಲ್ಲಿ ಸ್ಥಾಪನೆಯಾದ ಟಿಡಿಪಿಯಿಂದ 1995ರಲ್ಲಿ ಎನ್. ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದಲ್ಲಿ ಅಧಿಕಾರ ವಹಿಸಿಕೊಂಡಾಗ ಟಿಡಿಪಿಯನ್ನು ಅದರ ‘ಬೈಸಿಕಲ್ ಚಿಹ್ನೆ’ಯೊಂದಿಗೆ ಪಡೆದರು.
ಸುಮಾರು ಒಂದು ದಶಕದ ಅನಂತರ ಸಮಾಜವಾದಿ ಪಕ್ಷದ ರಚನೆಯಾಗಿ ಮುಲಾಯಂ ಸಿಂಗ್ ಯಾದವ್ ಅವರ ಮಗ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತು ಮುಲಾಯಂ ಅವರ ಸಹೋದರ ಶಿವಪಾಲ್ ಯಾದವ್ ನಡುವೆ ಕಲಹ ಉಂಟಾಗಿ ಪಕ್ಷ ಮತ್ತು ಅದರ ಚಿಹ್ನೆಯ ಮೇಲೆ ಅಧಿಕಾರವನ್ನು 2017ರಲ್ಲಿ ಅಖಿಲೇಶ್‌ಗೆ ನೀಡಲಾಯಿತು.


ಬಿಲ್ಲು ಮತ್ತು ಬಾಣ

ಪ್ರಸ್ತುತ ಸ್ಪರ್ಧೆಯಲ್ಲಿರುವ ಮತ್ತೊಂದು ಚಿಹ್ನೆ ಮಹಾರಾಷ್ಟ್ರದಲ್ಲಿ ‘ಬಿಲ್ಲು ಮತ್ತು ಬಾಣ’. ಏಕನಾಥ್ ಶಿಂಧೆ ನೇತೃತ್ವದ “ನೈಜ” ಶಿವಸೇನೆಗೆ ಹಂಚಲ್ಪಟ್ಟ ಈ ಚಿಹ್ನೆಯನ್ನು ಮೊದಲು 1989ರಲ್ಲಿ ಬಾಳ್ ಠಾಕ್ರೆ ಅವರು ಬಳಸಿದ್ದರು.

1972ರಲ್ಲಿ ರಚಿಸಲಾದ ಜಾರ್ಖಂಡ್ ಮುಕ್ತಿ ಮೋರ್ಚಾ ಜಾರ್ಖಂಡ್‌ನಲ್ಲಿ ಅದೇ ‘ಬಿಲ್ಲು ಮತ್ತು ಬಾಣ’ ಚಿಹ್ನೆಯನ್ನು ಬಳಸುತ್ತದೆ. ಬಿಹಾರದ ಜನತಾ ದಳ (ಯುನೈಟೆಡ್) ಪಕ್ಷದ ಚಿಹ್ನೆಯು ‘ಬಾಣ’ವಾಗಿದೆ. 2019 ರಲ್ಲಿ ಚುನಾವಣಾ ಆಯೋಗವು ಮಹಾರಾಷ್ಟ್ರ ಅಥವಾ ಜಾರ್ಖಂಡ್‌ನಲ್ಲಿ ಈ ಚಿಹ್ನೆಯನ್ನು ಬಳಸಲು ಅನುಮತಿಸುವುದಿಲ್ಲ ಎಂದು ಘೋಷಿಸಿತು. .

Continue Reading
Advertisement
Reliance Smart Bazar
ವಾಣಿಜ್ಯ30 seconds ago

Reliance Smart Bazar: ರಿಲಯನ್ಸ್ ಸ್ಮಾರ್ಟ್ ಬಜಾರ್ ಗ್ರಾಹಕರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ; ಯಾವೆಲ್ಲ ವಸ್ತುಗಳಿಗೆ ಹೆಚ್ಚಿನ ಬೇಡಿಕೆ?

Ethnic Collection
ಫ್ಯಾಷನ್24 mins ago

Ethnic Collection: ‘ಹೀರಾಮಂಡಿ’ ವೆಬ್ ಸೀರಿಸ್‌ ಪ್ರೇರಿತ ಸಾಂಪ್ರದಾಯಿಕ ಫ್ಯಾಷನ್ ಕಲೆಕ್ಷನ್‌ ಬಿಡುಗಡೆ ಮಾಡಿದ ಅಜಿಯೋ

Self Harming in Bengaluru
ಬೆಂಗಳೂರು26 mins ago

Self Harming : ಬೆಂಗಳೂರಲ್ಲಿ ರೈಲಿಗೆ ಸಿಲುಕಿ ಮೂವರು ಸಾವು; ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹಗಳು

Voting awareness by the newly married couple at the reception
ಕರ್ನಾಟಕ31 mins ago

Lok Sabha Election 2024: ಆರತಕ್ಷತೆಯಲ್ಲಿ ವಧು-ವರರಿಂದ ಮತದಾನ ಜಾಗೃತಿ

Tamannaah Bhatia and Sanjay Dutt
ಕ್ರೀಡೆ37 mins ago

IPL Streaming Case: ಏನಿದು ಐಪಿಎಲ್​ ಲೈವ್ ಸ್ಟ್ರೀಮಿಂಗ್ ಕೇಸ್​; ತಮನ್ನಾ,ಜಾಕ್ವೆಲಿನ್, ಸಂಜಯ್​ ದತ್​ಗೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದೇಕೆ?

World Malaria Day
ಆರೋಗ್ಯ1 hour ago

World Malaria Day: ಮಲೇರಿಯಾ ಮತ್ತು ಡೆಂಗ್ಯು ನಡುವಿನ ವ್ಯತ್ಯಾಸ ಏನು? ಗುರುತಿಸುವುದು ಹೇಗೆ?

supreme court wealth redistribution
ಪ್ರಮುಖ ಸುದ್ದಿ2 hours ago

ವಿಸ್ತಾರ Explainer: Wealth redistribution: ನಿಮ್ಮ ಆಸ್ತಿಯನ್ನು ಸರ್ಕಾರ ವಶಪಡಿಸಿಕೊಳ್ಳಬಹುದಾ? ಸುಪ್ರೀಂ ಕೋರ್ಟ್ ಮುಂದಿದೆ ಕೇಸ್‌

Lok Sabha Election 2024 BJP rejects Sam Pitroda statement
Lok Sabha Election 20242 hours ago

Lok Sabha Election 2024: ಕಾಂಗ್ರೆಸ್‌ಗೆ ಅಧಿಕಾರ ಸಿಕ್ಕರೆ ಪಿತ್ರಾರ್ಜಿತ ಆಸ್ತಿಯಲ್ಲಿ ಸರ್ಕಾರಕ್ಕೆ ಪಾಲು; ‘ಕೈ’ಗೆ ಇಕ್ಕಟ್ಟು, ಬಿಜೆಪಿಗೆ ಅಸ್ತ್ರ

Anant-Radhika wedding
ವಾಣಿಜ್ಯ2 hours ago

Anant- Radhika  wedding: 1,500 ಕೋಟಿ ರೂ. ದಾಟಲಿದೆ ಅಂಬಾನಿ ಮಗನ ಮದುವೆ ಖರ್ಚು!

Ballari Lok Sabha constituency Congress candidate e Tukaram election campaign at apmc market
ಬಳ್ಳಾರಿ2 hours ago

Lok Sabha Election 2024: ತಾಯಿ ನಾನು ನಿಮ್ಮ ಮಗನಂತೆ, ಮತ ನೀಡಿ ಗೆಲ್ಲಿಸಿ ಎಂದ ಈ. ತುಕಾರಾಂ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder case CID Officer
ಹುಬ್ಬಳ್ಳಿ3 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20245 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

ಟ್ರೆಂಡಿಂಗ್‌