Kannada Serial: 900 ಸಂಚಿಕೆ ಪೂರೈಸಿದ ಜೊತೆ ಜೊತೆಯಲಿ ಧಾರಾವಾಹಿ; ಸಂಭ್ರಮದಲ್ಲಿ ತಂಡ Vistara News
Connect with us

ಕಿರುತೆರೆ

Kannada Serial: 900 ಸಂಚಿಕೆ ಪೂರೈಸಿದ ಜೊತೆ ಜೊತೆಯಲಿ ಧಾರಾವಾಹಿ; ಸಂಭ್ರಮದಲ್ಲಿ ತಂಡ

ಜೀ ಕನ್ನಡದ ಪ್ರಸಿದ್ಧ ಧಾರಾವಾಹಿಯಾದ (Kannada Serial) ʼಜೊತೆ ಜೊತೆಯಲಿʼ 900 ಸಂಚಿಕೆಗಳನ್ನು ಇತ್ತೀಚೆಗೆ ಪೂರೈಸಿದೆ.

VISTARANEWS.COM


on

Koo

ಬೆಂಗಳೂರು: ಅದು 2019ರ ಸೆಪ್ಟೆಂಬರ್‌ 9. ಕನ್ನಡದ ಕಿರುತೆರೆಗೆ ಹೊಸ ಶೈಲಿಯ ಕಥೆಯೊಂದು (Kannada Serial) ಎಂಟ್ರಿ ಕೊಟ್ಟಿತ್ತು. ಅದುವೇ ʼಜೊತೆ ಜೊತೆಯಲಿʼ. ಈ ಧಾರಾವಾಹಿ ಕಿರುತೆರೆಗೆ ಎಂಟ್ರಿ ಕೊಟ್ಟ ಒಂದೇ ವಾರದಲ್ಲಿ ಕನ್ನಡದ ಎಲ್ಲಾ ಧಾರಾವಾಹಿಗಳ ದಾಖಲೆಗಳನ್ನು ಮುರಿದು ಅತಿ ಹೆಚ್ಚು ವೀಕ್ಷಣೆ ಪಡೆದ ಧಾರಾವಾಹಿ ಎನ್ನುವ ಖ್ಯಾತಿ ಪಡೆದುಕೊಂಡಿತು. ಆ ಧಾರಾವಾಹಿಗೆ ಇದೀಗ 900 ಸಂಚಿಕೆಗಳು ಸಂಪೂರ್ಣಗೊಂಡಿವೆ.

ಇದನ್ನೂ ಓದಿ: Jote Joteyali: ಹಸೆಮಣೆ ಏರಲು ಸಜ್ಜಾದ `ಜೊತೆ ಜೊತೆಯಲಿ’ ಧಾರಾವಾಹಿ ನಟಿ ಶಿಲ್ಪಾ ಅಯ್ಯರ್

ಧಾರಾವಾಹಿ 900 ಸಂಚಿಕೆಗಳನ್ನು ಪೂರ್ಣಗೊಳಿಸಿರುವ ಸಂತಸದಲ್ಲಿ ಧಾರಾವಾಹಿಯ ತಂಡವಿದೆ. ಈ 900 ಸಂಚಿಕೆಗಳಲ್ಲಿ ಧಾರಾವಾಹಿ ಹಲವಾರು ತಿರುವುಗಳನ್ನು ಕಂಡಿದೆ. ಅನಿರುದ್ಧ ಅವರನ್ನು ಧಾರಾವಾಹಿ ತಂಡದಿಂದ ಹೊರಹಾಕಿದ ನಂತರ ಅವರ ಸ್ಥಾನಕ್ಕೆ ಹರೀಶ್‌ ರಾಜ್‌ ಅವರನ್ನು ಕರೆತರಲಾಗಿದೆ. ಅದಕ್ಕಾಗಿಯೇ ಕೆಲವು ಹೊಸ ಉಪಕಥೆಯನ್ನೂ ಪರಿಚಯಿಸಲಾಗಿದೆ. ಹಾಗೆಯೇ ಜೋಡಿ ಹಕ್ಕಿ ಧಾರಾವಾಹಿ ಖ್ಯಾತಿಯ ಚೈತ್ರ ರಾವ್‌ ಅವರನ್ನೂ ಸಹ ಆರಾಧನಾ ಹೆಸರಿನಲ್ಲಿ ಧಾರಾವಾಹಿಯಲ್ಲಿ ಪರಿಚಯಿಸಲಾಗಿದೆ.

ಜೊತೆ ಜೊತೆಯಲ್ಲಿ ಧಾರಾವಾಹಿಯು ಮಧ್ಯಮ ವಯಸ್ಸಿನ ಉದ್ಯಮಿ ಆರ್ಯವರ್ಧನ್‌ ಕಥೆಯಾಗಿದೆ. ಅದರಲ್ಲಿ ಆ ಉದ್ಯಮಿಗೆ ಅನು ಹೆಸರಿನ ಯುವತಿಯೊಂದಿಗೆ ಪ್ರೀತಿ ಹುಟ್ಟಿ ಅವರಿಬ್ಬರು ಮದುವೆಯಾಗುತ್ತಾರೆ. ಇದೀಗ ಅನು ಗರ್ಭಿಣಿಯಾಗಿದ್ದು, ಅದೇ ಸಂಭ್ರಮದಲ್ಲಿ ಆರ್ಯವರ್ಧನ್‌ ಇದ್ದಾರೆ. ಆದರೆ ಇವರಿಬ್ಬರ ಅನ್ಯೋನ್ಯತೆ ಬಗ್ಗೆ ಆರಾಧನಾ ಅವರಿಗೆ ಅಸಮಾಧಾನ ಇದೆ.

ಇದನ್ನೂ ಓದಿ: Anirudh Jatkar: ʻಜೊತೆ ಜೊತೆಯಲಿʼ ಖ್ಯಾತಿಯ ಅನಿರುದ್ಧ ಮುಂಬರುವ ಧಾರಾವಾಹಿಗೆ ನಾಯಕಿ ಯಾರು?
ಜೀ ಕನ್ನಡ ವಾಹಿನಿಯಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಈ ಧಾರಾವಾಹಿ ರಾತ್ರಿ 9.30ಕ್ಕೆ ಪ್ರಸಾರವಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕಿರುತೆರೆ

Celebrity Divorce: ಸಂಸಾರದಲ್ಲಿ ಬಿರುಕು, ಪತಿಯಿಂದ ದೂರವಾದ ಕಿರುತೆರೆ ನಟಿ

ಹಿಂದಿ ಕಿರುತೆರೆ ನಟಿ ಚಾರು ಅಸೋಪಾ ಮತ್ತು ಮಾಡೆಲ್‌ ರಾಜೀವ್‌ ಸೇನ್‌ ತಮ್ಮ ದಾಂಪತ್ಯ ಜೀವನಕ್ಕೆ ಅಂತ್ಯ (celebrity divorce) ಹಾಡಿದ್ದಾರೆ.

VISTARANEWS.COM


on

Edited by

rajeev sen and Charu Asopa divorce
Koo

ಮುಂಬೈ: ಬಾಲಿವುಡ್‌ನ ಕಿರುತೆರೆ ನಟಿ ಚಾರು ಅಸೋಪಾ ಮತ್ತು ನಟಿ ಸುಶ್ಮಿತಾ ಸೇನ್‌ ಅವರ ಸಹೋದರ ರಾಜೀವ್‌ ಸೇನ್‌ ನಡುವಿನ ದಾಂಪತ್ಯದಲ್ಲಿ ಬಿರುಗಾಳಿ ಎದ್ದು ಹಲವು ವರ್ಷಗಳೇ ಕಳೆದಿವೆ. ಇಷ್ಟು ದಿನ ಸಹಿಸಿಕೊಂಡಿದ್ದ ಈ ಜೋಡಿ ಇದೀಗ ಪರಸ್ಪರ ವಿಚ್ಛೇದನ ಪಡೆದುಕೊಂಡಿದ್ದು, ದೂರವಾಗಿರುವುದಾಗಿ (celebrity divorce) ಘೋಷಿಸಿಕೊಂಡಿದ್ದಾರೆ.

ಈ ಕುರಿತಾಗಿ ರಾಜೀವ್‌ ಸೇನ್‌ ಅವರೇ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಂಚಿಕೊಂಡಿದ್ದಾರೆ. ಪತ್ನಿ ಚಾರು ಅವರೊಂದಿಗೆ ಇರುವ ಫೋಟೋವನ್ನು ಹಂಚಿಕೊಂಡಿರುವ ರಾಜೀವ್‌, “ಗುಡ್‌ ಬೈ ಇಲ್ಲ. ಇಬ್ಬರು ಪರಸ್ಪರ ಜತೆ ಬದುಕಲಾರೆವು ಅಷ್ಟೇ. ಪ್ರೀತಿ ಇದ್ದೇ ಇರುತ್ತದೆ. ನಾವು ಯಾವಾಗಲೂ ನಮ್ಮ ಮಗಳಿಗೆ ಅಪ್ಪ ಅಮ್ಮನಾಗಿ ಇರುತ್ತೇವೆ” ಎಂದು ಬರೆದುಕೊಂಡಿದ್ದಾರೆ. ಅವರ ಈ ಸ್ಟೋರಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.


ಚಾರು ಮತ್ತು ರಾಜೀವ್‌ ಅವರು 2019ರಲ್ಲಿ ಗೋವಾದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮದುವೆಯಾದಾಗಿನಿಂದಲೂ ಅವರಿಬ್ಬರ ಮಧ್ಯೆ ಒಂದಿಲ್ಲೊಂದು ರೀತಿಯ ಸಮಸ್ಯೆಗಳಿತ್ತು. ಹಲವಾರು ಬಾರಿ ಅವರಿಬ್ಬರು ದೂರವಾಗಿದ್ದರು ಕೂಡ. ಮದುವೆಯಾಗಿ ಎರಡು ವರ್ಷಗಳಿಗೆ ಅವರಿಗೆ ಹೆಣ್ಣು ಮಗುವೊಂದು ಜನಿಸಿತು. ಕಳೆದ ವರ್ಷದೊಂದು ಅವರಿಬ್ಬರು ದೊಡ್ಡ ನಿರ್ಧಾರ ತೆಗೆದುಕೊಂಡು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ಅವರ ವಿಚ್ಛೇದನವಾಗಿದೆ.

ಇದನ್ನೂ ಓದಿ: Viral News: ಮುಖ್ಯಮಂತ್ರಿಗಳೇ ಎಣ್ಣೆ ರೇಟ್‌ ಜಾಸ್ತಿ ಮಾಡ್ಬೇಡಿ; BPL ಕಾರ್ಡ್‌ದಾರನ ವಾರ್ಷಿಕ ಲೆಕ್ಕ ಮುಂದಿಟ್ಟ ಕುಡುಕರ ಸಂಘ!
ಚಾರು ಅವರು ʼದೇವೋ ಕೆ ದೇವ್‌ ಮಹಾದೇವ್‌ʼ, ʼಬಾಲವೀರ್‌ʼ, ʼಮೆರೆ ಆಂಗನೆ ಮೇʼ, ʼಜೀಜಿ ಮಾʼ ಸೇರಿ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಚಾರು ಮೊದಲಿಗೆ ಉದ್ಯಮಿಯೊಬ್ಬರನ್ನು ರಾಜಸ್ಥಾನದಲ್ಲಿ ವರಿಸಿದ್ದರು. ಅದನ್ನು ಮುರಿದುಕೊಂಡ ಅವರು ನೀರಜ್‌ ಮಾಳ್ವಿಯಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡರು. ಅದನ್ನೂ ಮುರಿದುಕೊಂಡು ನಂತರ ರಾಜೀವ್‌ ಸೇನ್‌ರನ್ನು ಮದುವೆಯಾಗಿದ್ದರು.

Continue Reading

ಕಿರುತೆರೆ

Chaitra Hallikeri: ಕಿರುತೆರೆಗೆ ಎಂಟ್ರಿ ಕೊಟ್ಟ ಬಿಗ್‌ ಬಾಸ್‌ ಖ್ಯಾತಿಯ ಚೈತ್ರಾ ಹಳ್ಳಿಕೇರಿ

Chaitra Hallikeri: ಶಿಷ್ಯ ಹಾಗೂ ಖುಷಿ ಸಿನಿಮಾದಲ್ಲಿ ಅಭಿನಯಿಸಿದ ಚೈತ್ರಾ ಬಹಳ ಸಮಯದ ನಂತರ ಮತ್ತೊಮ್ಮೆ ತೆರೆಯ ಮೇಲೆ ಮಿಂಚಲು ಬರುತ್ತಿದ್ದಾರೆ.

VISTARANEWS.COM


on

Edited by

actress chaitra hallikeri
Koo

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ (Bigg Boss Kannada) ಒಟಿಟಿ ರಿಯಾಲಿಟಿ ಶೋನಲ್ಲಿ ಮನೆಮಾತಾಗಿದ್ದ ಚೈತ್ರಾ ಹಳ್ಳಿಕೇರಿ (Chaitra Hallikeri) ಕಿರುತೆರೆಗೆ ಎಂಟ್ರಿ ಕೊಡುತ್ತಿದ್ದಾರೆ. ಶಿಷ್ಯ ಹಾಗೂ ಖುಷಿ ಸಿನಿಮಾದಲ್ಲಿ ಅಭಿನಯಿಸಿದ ಚೈತ್ರಾ ಬಹಳ ಸಮಯದ ನಂತರ ಮತ್ತೊಮ್ಮೆ ತೆರೆಯ ಮೇಲೆ ಮಿಂಚಲು ಬರುತ್ತಿದ್ದಾರೆ. ನಟಿ, ನಿರ್ದೇಶಕಿ ಸ್ವಪ್ನ ಕೃಷ್ಣ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಅಂತರಪಟ’ ಧಾರಾವಾಹಿಯಲ್ಲಿ ಬ್ಯುಸಿನೆಸ್ ವುಮೆನ್ ಚಾಂದಿನಿ ಪಾತ್ರದ ಮೂಲಕ ಚೈತ್ರಾ ಹಳ್ಳಿಕೇರಿ ಕಮ್‌ ಬ್ಯಾಕ್‌ ಆಗಿದ್ದಾರೆ.

ಚೈತ್ರಾ ಹಳ್ಳಿಕೇರಿ ಈ ಧಾರಾವಾಹಿಯಲ್ಲಿ ಚಾಂದಿನಿ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ. ಈ ಪಾತ್ರ ಕೂಡ ಮಹಿಳಾ ಸಬಲೀಕರಣವನ್ನೇ ಸಾರುತ್ತದೆ. ಸ್ವಾವಲಂಬಿ ಮಹಿಳೆಯಾಗಿರುವ ಚಾಂದಿನಿ ತನ್ನ ಬ್ಯುಸಿನೆಸ್‌ಅನ್ನು ತಾನೇ ಪರಿಶ್ರಮದಿಂದ ಮುಂದೆ ತಂದಿರುವಂತಹ ದಿಟ್ಟೆ. ಜತೆಗೆ “ಅಂತರಪಟ” ಧಾರಾವಾಹಿಯ ಮುಖ್ಯ ಪಾತ್ರಧಾರಿ ಆರಾಧನಾಳ ಬ್ಯುಸಿನೆಸ್ ಗುರುವಾಗಿಯೂ ಕಾಣಿಸಿಕೊಳ್ಳಲಿದ್ದಾರಂತೆ.

ಸದ್ಯಕ್ಕೆ ‘ನಾಗಪಂಚಮಿ’ ಎಂಬ ತೆಲುಗು ಧಾರಾವಾಹಿಯಲ್ಲೂ ಕಾಣಿಸಿಕೊಳ್ಳುತ್ತಿರುವ ಚೈತ್ರಾ ಹಳ್ಳಿಕೇರಿ ಇದೀಗ ಕನ್ನಡಕ್ಕೆ ಮತ್ತೆ ವಾಪಸ್ ಆಗಿರುವುದು ಪ್ರೇಕ್ಷಕರಿಗಂತೂ ಖುಷಿ ತಂದಿದೆ. ತೆಲುಗು ಕಿರುತೆರೆಯಲ್ಲಿ ಬ್ಯುಸಿಯಾಗಿರುವ ಚೈತ್ರಾಗೆ ಕನ್ನಡದ ಧಾರಾವಾಹಿಯಲ್ಲಿ ನಟಿಸಬೇಕೆಂಬ ಆಸೆ ಬಹುದಿನಗಳಿಂದೂ ಇತ್ತು. ಗೌಡ್ರು, ಖುಷಿ, ಶಿಷ್ಯ, ಗುನ್ನ, ಪಾರ್ಥ, ಶ್ರೀ ದಾನಮ್ಮ ದೇವಿ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದರು. ಮದುವೆಯ ನಂತರ ಸಿನಿಮಾ ರಂಗದಿಂದಲೇ ದೂರವಾದರು.

ಇದನ್ನೂ ಓದಿ: Viral News: Deepika Das: ಕಿರುತೆರೆಗೆ ಎಂಟ್ರಿ ಕೊಟ್ಟ ದೀಪಿಕಾ ದಾಸ್‌, ‘ಅಂತರಪಟ’ದಲ್ಲಿ ಏನಿದೆ?

‘ಅಂತರಪಟ’ ಧಾರಾವಾಹಿಯಲ್ಲಿ ನಟಿ ಜ್ಯೋತಿ ಕಿರಣ್, ನಟ ಮಂಜು ಪಾವಗಡ ನಟಿಸಿದ್ದಾರೆ.
ಅಂತರಪಟ ಧಾರಾವಾಹಿಗೆ ನಾಯಕನಾಗಿ ಲಕ್ಷ್ಮಿ ಬಾರಮ್ಮ ಧಾರಾವಾಹಿ ಖ್ಯಾತಿಯ ನೇಹಾ ಗೌಡ ಅವರ ಪತಿ ಚಂದನ್ ಅವರ ಎಂಟ್ರಿ ಕೂಡ ಆಗಿದೆ.

Continue Reading

ಕರ್ನಾಟಕ

Weekend With Ramesh: ಸಾಧಕರ ಕುರ್ಚಿ ಏರಿದ ಟ್ರಬಲ್‌ ಶೂಟರ್‌ ಡಿಕೆಶಿ;‌ ಜೂ.10, 11ಕ್ಕೆ ಪ್ರಸಾರ

Weekend With Ramesh: ಜೀ ಕನ್ನಡ ವಾಹಿನಿಯಲ್ಲಿ ಜೂನ್‌ 10 ಮತ್ತು 11ರಂದು ಪ್ರಸಾರವಾಗಲಿರುವ ಸಂಚಿಕೆಗಳಲ್ಲಿ ತಮ್ಮ ರಾಜಕೀಯ ಜೀವನದ ಏಳು ಬೀಳುಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾತನಾಡಲಿದ್ದಾರೆ.

VISTARANEWS.COM


on

Edited by

DCM DK Shivakumar
Koo

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವಾಗುತ್ತಿರುವ ʼವೀಕೆಂಡ್‌ ವಿತ್‌ ರಮೇಶ್‌ ಶೋ-5ʼ ರಲ್ಲಿ (Weekend With Ramesh) ಈ ವಾರ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಾಧಕರ ಕುರ್ಚಿ ಏರಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಜ್ಯ ಕಾಂಗ್ರೆಸ್‌ನ ಟ್ರಬಲ್‌ ಶೂಟರ್‌ ಡಿಕೆಶಿ ಅವರು ಜೂನ್‌ 10 ಮತ್ತು 11ರಂದು ರಾತ್ರಿ 9ಕ್ಕೆ ಪ್ರಸಾರವಾಗಲಿರುವ ಸಂಚಿಕೆಗಳಲ್ಲಿ ತಮ್ಮ ರಾಜಕೀಯ ಜೀವನದ ಏಳು ಬೀಳುಗಳ ಬಗ್ಗೆ ಮಾತನಾಡಲಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಜೀವನದ ಸಂಪೂರ್ಣ ಚಿತ್ರಣ ಕಟ್ಟಿಕೊಡಲಿರುವ ಕಾರ್ಯಕ್ರಮದ ಟ್ರೇಲರ್‌ ಅನ್ನು ಜೀ ಕನ್ನಡ ವಾಹಿನಿ ಬಿಡುಗಡೆ ಮಾಡಿದೆ. ಕಾರ್ಯಕ್ರಮದಲ್ಲಿ ಕುಟುಂಬಸ್ಥರು, ಆಪ್ತರು ಹಾಗೂ ವಿವಿಧ ರಾಜಕಾರಣಿಗಳು, ಡಿ.ಕೆ.ಶಿವಕುಮಾರ್‌ ಅವರ ಬಗ್ಗೆ ಮಾತನಾಡಿದ್ದಾರೆ.

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ರಾಜಕೀಯ ವ್ಯಕ್ತಿಗಳು ಬರುತ್ತಿರುವುದು ಇದೇ ಮೊದಲೇನೂ ಅಲ್ಲ. ಹಲವು ಸೀಸನ್‌ಗಳಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ಇದನ್ನೂ ಓದಿ | Bera movie: ಬೇರ: ಕೋಮು ದ್ವೇಷದ ಮೂಲ ಚಿತ್ರಿಸುವ ಕನ್ನಡ ಸಿನಿಮಾ ಜೂನ್‌ 16ರಂದು ರಿಲೀಸ್

ಡಿ.ಕೆ. ಶಿವಕುಮಾರ್

ಡಿ.ಕೆ. ಶಿವಕುಮಾರ್ ಅವರ ಪೂರ್ಣ ಹೆಸರು ದೊಡ್ಡಾಲಹಳ್ಳಿ ಕೆಂಪೇಗೌಡ ಶಿವಕುಮಾರ್ .ಯಾವುದೇ ಕುಟುಂಬ ರಾಜಕೀಯದ ಹಿನ್ನೆಲೆ ಹೊಂದಿಲ್ಲ. ಒಕ್ಕಲಿಗ ಸಮುದಾಯಕ್ಕೆ ಸೇರಿದ ನಾಯಕ ಇವರು.

  • 7 ಬಾರಿ ಶಾಸಕರಾಗಿ ಆಯ್ಕೆ
  • 1985ರಲ್ಲಿ ಮೊದಲ ಬಾರಿಗೆ ಸಾತನೂರು ಕ್ಷೇತ್ರದಲ್ಲಿ ಜೆಡಿಎಸ್‌ನ ಎಚ್. ಡಿ.ದೇವೇಗೌಡರ ವಿರುದ್ಧ ಸೋಲು
  • 1987ರಲ್ಲಿ ಸಾತನೂರು ಕ್ಷೇತ್ರದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆ
  • 1989ರ ಸಾತನೂರು ಕ್ಷೇತ್ರದಿಂದ ಗೆಲ್ಲುವ ಮೂಲಕ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆ
  • 1991ರಲ್ಲಿ ಎಸ್.ಬಂಗಾರಪ್ಪ ಸಂಪುಟದಲ್ಲಿ ಬಂಧಿಖಾನೆ ಖಾತೆ ಸಚಿವರಾಗಿ ನೇಮಕ
  • 1994ರಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಸಾತನೂರು ಕ್ಷೇತ್ರದಲ್ಲಿ ಕಣಕ್ಕಿಳಿದು ಜಯ
  • 1999ರ ಚುನಾವಣೆಯಲ್ಲಿ ಸಾತನೂರು ಕ್ಷೇತ್ರದಿಂದ ಮತ್ತೆ ಆಯ್ಕೆ
  • 1999ರಲ್ಲಿ ಎಸ್.ಎಂ.ಕೃಷ್ಣ ಸಂಪುಟದಲ್ಲಿ ಸಹಕಾರ ಸಚಿವರಾಗಿ ಬಳಿಕ ನಗರಾಭಿವೃದ್ಧಿ ಸಚಿವರಾಗಿ ಸೇವೆ
  • 2008ರಲ್ಲಿ ಕ್ಷೇತ್ರ ಪುನರ್ ವಿಂಗಡನೆ ಬಳಿಕ ಕನಕಪುರದಿಂದ ಸ್ಪರ್ಧಿಸಿ ಗೆಲುವು
  • 2013ರ ಚುನಾವಣೆಯಲ್ಲಿ ಗೆದ್ದ ಬಳಿಕ ಸಿದ್ದರಾಮಯ್ಯ ಸಂಪುಟದಲ್ಲಿ ಇಂಧನ ಖಾತೆ ಸಚಿವರಾಗಿ ಆಯ್ಕೆ
  • 2018ರಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಜಲಸಂಪನ್ಮೂಲ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿ ಸೇವೆ
  • 2020ರ ಮಾರ್ಚ್ 11ರಂದು ಕೆಪಿಸಿಸಿಯ 23ನೇ ಅಧ್ಯಕ್ಷರಾಗಿ ನೇಮಕ

Continue Reading

South Cinema

Kollam Sudhi: ಮಲಯಾಳಂ ಖ್ಯಾತ ಕಿರುತೆರೆ ನಟ ಕಾರು ಅಪಘಾತದಲ್ಲಿ ನಿಧನ; ಕಾರು ನಜ್ಜುಗುಜ್ಜು!

ಮಲಯಾಳಂನಲ್ಲಿ ಹಾಸ್ಯ ಪಾತ್ರಗಳ ಮೂಲಕ ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಗುರುತಿಸಿಕೊಂಡಿದ್ದ, ಸ್ಟಾರ್ ಮ್ಯಾಜಿಕ್ ಖ್ಯಾತಿಯ ಕೊಲ್ಲಂ ಸುಧಿ (Kollam Sudhi) ಕಾರು ಅಪಘಾತದಲ್ಲಿ ಜೂನ್‌ 5ರ ಬೆಳಗ್ಗೆ ಮೃತಪಟ್ಟಿದ್ದಾರೆ.

VISTARANEWS.COM


on

Edited by

Actor Kollam Sudhi
Koo

ಬೆಂಗಳೂರು: ಮಲಯಾಳಂನಲ್ಲಿ ಹಾಸ್ಯ ಪಾತ್ರಗಳ ಮೂಲಕ ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಗುರುತಿಸಿಕೊಂಡಿದ್ದ, ಸ್ಟಾರ್ ಮ್ಯಾಜಿಕ್ ಖ್ಯಾತಿಯ ಕೊಲ್ಲಂ ಸುಧಿ (Kollam Sudhi) ಕಾರು ಅಪಘಾತದಲ್ಲಿ ಜೂನ್‌ 5ರ ಬೆಳಗ್ಗೆ ಮೃತಪಟ್ಟಿದ್ದಾರೆ. ಕೈಪಮಂಗಲದಲ್ಲಿ ಟ್ರಕ್​ಗೆ ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ ಹೊಡೆದು 39 ವರ್ಷದ ನಟ ಮೃತಪಟ್ಟಿದ್ದಾರೆ. ಇನ್ನು ಮೂವರು ಮಿಮಿಕ್ರಿ ಕಲಾವಿದರಾದ ಬಿನು ಅಡಿಮಲಿ, ಉಲ್ಲಾಸ್ ಮತ್ತು ಮಹೇಶ್ ಕೂಡ ಅಪಘಾತದಲ್ಲಿ ಗಾಯಗೊಂಡಿದ್ದಾರೆ.

ವರದಿಯ ಪ್ರಕಾರ, ಸುಧಿ ಮತ್ತು ಇತರ ಕಲಾವಿದರು ತಮ್ಮ ಟಿವಿ ಕಾರ್ಯಕ್ರಮದ ನಂತರ ಮನೆಗೆ ಹಿಂತಿರುಗುತ್ತಿದ್ದರು. ಸುಧಿಯವರನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರೂ ತಲೆಗೆ ತೀವ್ರ ಪೆಟ್ಟಾಗಿರುವ ಕಾರಣದಿಂದ ಉಳಿಸಿಕೊಳ್ಳಲಾಗಲಿಲ್ಲ ಎಂದು ವರದಿಯಾಗಿದೆ. ಟ್ರಕ್​ ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ಮಿಮಿಕ್ರಿ ಕಲಾವಿದ ಕೊಲ್ಲಂ ಸುಧಿ ಅವರು ಈ ಹಿಂದೆ ನಟ ಜಗದೀಶ್ ಅವರ ಅನುಕರಣೆ ಮೂಲಕ ಅದೆಷ್ಟೋ ಹೃದಯಗಳನ್ನು ಗೆದ್ದಿದ್ದರು.

ಸ್ಟಾರ್ ಮ್ಯಾಜಿಕ್‌ಗೆ ಪ್ರವೇಶಿಸಿದ ನಂತರ ಮಲಯಾಳಂ ಟಿವಿ ವೀಕ್ಷಕರಲ್ಲಿ ಮನೆಮಾತಾದರು. ನಟನ ಸಾವಿಗೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಅವರ ಅಕಾಲಿಕ ಮರಣವು ಕುಟುಂಬದವರಿಗೆ ಹಾಗೂ ಫ್ಯಾನ್ಸ್​ಗೆ ಅತೀವ ದುಃಖ ತಂದಿದೆ.

ಇದನ್ನೂ ಓದಿ: Gufi Paintal : ಮಹಾಭಾರತದ ‘ಶಕುನಿ ಮಾಮಾ’ ಇನ್ನಿಲ್ಲ

ಸ್ಟೇಜ್ ಶೋಗಳು ಮತ್ತು ಟಿವಿ ಕಾರ್ಯಮಗಳ ಜತೆಗೆ, ಸುಧಿ ಚಲನಚಿತ್ರಗಳಲ್ಲಿಯೂ ಪಾತ್ರಗಳನ್ನು ನಿರ್ವಹಿಸುತ್ತಿದ್ದರು. 2015ರಲ್ಲಿ ‘ಕಾಂತಾರಿ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ‘ಕಟ್ಟಪ್ಪಣ್ಣ’, ‘ಆ್ಯನ್ ಇಂಟರ್​ನ್ಯಾಷನಲ್​ ಲೋಕಲ್ ಸ್ಟೋರಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

Continue Reading
Advertisement
Sphoorti Salu
ಸುವಚನ16 mins ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Horoscope Today
ಪ್ರಮುಖ ಸುದ್ದಿ16 mins ago

Horoscope Today: ಈ ರಾಶಿಯವರ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಎಚ್ಚರ ಇರಲಿ!

Hindu janajagruti samiti pressmeet
ಕರ್ನಾಟಕ5 hours ago

ಜೂ.16 ರಿಂದ 22ರವರೆಗೆ ಗೋವಾದಲ್ಲಿ ‘ವೈಶ್ವಿಕ ಹಿಂದು ರಾಷ್ಟ್ರ ಮಹೋತ್ಸವʼ

Man Dies Of Heart Attack In Noida
ಕ್ರೀಡೆ5 hours ago

Heart Attack: ಬ್ಯಾಡ್ಮಿಂಟನ್‌ ಆಡುತ್ತಿದ್ದವನ ಬಾಳಲ್ಲಿ ಆಟವಾಡಿದ ವಿಧಿ; ಹೃದಯಾಘಾತದಿಂದ ವ್ಯಕ್ತಿ ಸಾವು

Digital Payment
ಪ್ರಮುಖ ಸುದ್ದಿ6 hours ago

ವಿಸ್ತಾರ ಸಂಪಾದಕೀಯ: ಡಿಜಿಟಲ್ ಪಾವತಿಯಲ್ಲಿ ಭಾರತ ನಂ.1, ಭಾರತೀಯರ ಪ್ರೌಢಿಮೆಗೆ ಇದು ಸಾಕ್ಷಿ

aamir khan to act in rajamouli movie
ಸಿನಿಮಾ6 hours ago

Aamir Khan : ದಕ್ಷಿಣ ಭಾರತ ಸಿನಿಮಾದಲ್ಲಿ ವಿಲನ್‌ ಆಗ್ತಾರಂತೆ ಬಾಲಿವುಡ್‌ನ ಮಿಸ್ಟರ್‌ ಪರ್ಫೆಕ್ಟ್‌ ಆಮೀರ್ ಖಾನ್‌!

Minister Pralhad Joshi
ಕರ್ನಾಟಕ6 hours ago

ಹುಬ್ಬಳ್ಳಿ ಏರ್‌ಪೋರ್ಟ್‌ ವಿಸ್ತರಣೆಗೆ 273 ಕೋಟಿ ರೂ.; ಕೇಂದ್ರಕ್ಕೆ ಪ್ರಲ್ಹಾದ್‌ ಜೋಶಿ ಧನ್ಯವಾದ

Viat kohli WTC Final 2023
ಕ್ರಿಕೆಟ್6 hours ago

WTC Final : ಭಾರತದ ಗೆಲುವಿಗೆ ಇನ್ನೂ ಬೇಕು 280 ರನ್​, ಕೌತುಕದಲ್ಲಿ ವಿಶ್ವ ಟೆಸ್ಟ್​ ಚಾಂಪಿಯನ್​ಷಿಪ್​ ಫೈನಲ್​

Debt Under Narendra Modi Government
ದೇಶ7 hours ago

Narendra Modi: 14 ಪ್ರಧಾನಿಗಳು ಮಾಡಿದ್ದ ಸಾಲ 55 ಲಕ್ಷ ಕೋಟಿ ರೂ., ಮೋದಿ ಒಬ್ಬರೇ ಮಾಡಿದ ಸಾಲವೆಷ್ಟು?

murder case accused tippayya
ಕರ್ನಾಟಕ7 hours ago

Bellary News: ಪತ್ನಿ, ಮಕ್ಕಳು ಸೇರಿ ಐವರನ್ನು ಕೊಂದವನಿಗೆ ಮರಣ ದಂಡನೆ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ1 day ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Autodrivers oppose free bus service
ಕರ್ನಾಟಕ12 hours ago

Free Bus Service: ನನ್ ಒಂದೇ ಓಟಲ್ಲ ಸ್ವಾಮಿ, ನಮ್ ಫ್ಯಾಮಿಲಿದೆಲ್ಲ ಇದೆ ಹುಷಾರ್: ಸಿದ್ದರಾಮಯ್ಯಗೆ ಆಟೋ ಡ್ರೈವರ್‌ ವಾರ್ನಿಂಗ್‌

accident in kerala
ವೈರಲ್ ನ್ಯೂಸ್17 hours ago

Viral Video: ಬಸ್ಸು ಮತ್ತು ಲಾರಿ ಮಧ್ಯೆ ಸ್ಕೂಟರ್‌ ಅಪ್ಪಚ್ಚಿ, ಸವಾರರ ಕಣ್ ಮುಂದೆ ಯಮ ರಪ್ ಅಂತ ಪಾಸ್ ಆದ!

Cancellation of tenders for 108 ambulances and Dinesh Gundu rao
ಆರೋಗ್ಯ2 days ago

Dinesh Gundu Rao: ಬಿಜೆಪಿ ಅವಧಿಯ 108 ಆಂಬ್ಯುಲೆನ್ಸ್‌, ಡಯಾಲಿಸಿಸ್‌ ಟೆಂಡರ್‌ ರದ್ದು; ಆರೋಗ್ಯ ಇಲಾಖೆಯಲ್ಲಿ ಮೇಜರ್‌ ಸರ್ಜರಿ

Meghalaya Villagers Chase Bangladesh soldiers
ದೇಶ2 days ago

Viral Video : ಗಡಿ ದಾಟಿ ಭಾರತಕ್ಕೆ ನುಗ್ಗಿದ ಬಾಂಗ್ಲಾ ಯೋಧರು! ಅಟ್ಟಾಟಿಸಿಕೊಂಡು ಒದ್ದೋಡಿಸಿದ ಹಳ್ಳಿಗರು

snake mate in chamarajnagar 2
ಕರ್ನಾಟಕ2 days ago

Video Viral: ಚಾಮರಾಜನಗರದಲ್ಲಿ ಹಾವುಗಳ ಮಿಲನ; ಗಂಟೆಗೂ ಹೆಚ್ಚು ಸರಸ ಸಲ್ಲಾಪ! ವೈರಲ್‌ ಆಯ್ತು ವಿಡಿಯೊ

Rain in mangalore
ಉಡುಪಿ2 days ago

Rain News: ಬಿಪರ್‌ಜಾಯ್‌ ಸೈಕ್ಲೋನ್ ಎಫೆಕ್ಟ್‌; ಮಂಗಳೂರಲ್ಲಿ ಚಿಟಪಟ ಮಳೆ

Rain in koppal
ಉಡುಪಿ2 days ago

Weather Report: ಕರಾವಳಿಯಲ್ಲಿ ಗುಡುಗಲಿರುವ ಮಳೆ; ಮಲೆನಾಡು, ಒಳನಾಡಲ್ಲಿ ಹೇಗಿರಲಿದೆ ಪ್ರಭಾವಳಿ

youths rescued in Kaveri river
ಕರ್ನಾಟಕ2 days ago

Video Viral: ತಲಕಾಡಿನ ಕಾವೇರಿ ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವಕರ ರಕ್ಷಣೆ!

Elephant attack in muttunga wildlife sanctuary
ಕರ್ನಾಟಕ3 days ago

Viral Video: ವನ್ಯಧಾಮದಲ್ಲಿ ಮೂತ್ರಕ್ಕೆಂದು ಕಾಡಿಗೆ ಹೋದ; ಆನೆ ದಾಳಿಗೆ ಹೆದರಿ ಪ್ಯಾಂಟ್‌ ಹಿಡಿದು ಓಡೋಡಿ ಬಂದ!

abhishek ambareesh wedding Reception
ಕರ್ನಾಟಕ3 days ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

ಟ್ರೆಂಡಿಂಗ್‌

error: Content is protected !!