Rahul Mahajan : ಮೂರನೇ ದಾಂಪತ್ಯದಲ್ಲೂ ಬಿರುಕು! ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ರಾಹುಲ್‌ ಮಹಾಜನ್‌ ದಂಪತಿ - Vistara News

ಕಿರುತೆರೆ/ಒಟಿಟಿ

Rahul Mahajan : ಮೂರನೇ ದಾಂಪತ್ಯದಲ್ಲೂ ಬಿರುಕು! ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ರಾಹುಲ್‌ ಮಹಾಜನ್‌ ದಂಪತಿ

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಾಹುಲ್‌ ಮಹಾಜನ್‌ (Rahul Mahajan) ಅವರು ಪತ್ನಿ ನಟಾಲಿಯಾ ಅವರೊಂದಿಗೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಿದೆ. ಇದು ಅವರ ಮೂರನೇ ವಿಚ್ಛೇದನವಾಗಿದೆ.

VISTARANEWS.COM


on

rahul mahajan and Natalya Ilina
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಹಿಂದಿ ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ರಾಹುಲ್‌ ಮಹಾಜನ್‌ (Rahul Mahajan) ಆಗಾಗ ಖಾಸಗಿ ವಿಚಾರಗಳಿಂದ ಸುದ್ದಿಯಾಗುವ ವ್ಯಕ್ತಿ. ಈಗಾಗಲೇ ಇಬ್ಬರು ಪತ್ನಿಯರಿಂದ ವಿಚ್ಛೇದನ ಪಡೆದಿರುವ ರಾಹುಲ್‌ ಇದೀಗ ಮೂರನೇ ಪತ್ನಿಯೊಂದಿಗಿನ ದಾಂಪತ್ಯಕ್ಕೂ ಅಂತ್ಯ ಹಾಡಿದ್ದಾರೆ. ಅವರು ಪತ್ನಿ ನಟಾಲಿಯಾ ಇಲಿನಾ ಜತೆಗೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದಾಗಿ ವರದಿಯಾಗಿದೆ.

ಈ ಬಗ್ಗೆ ಖಾಸಗಿ ಮಾಧ್ಯಮ ಸಂಸ್ಥೆಯೊಂದು ವರದಿ ಮಾಡಿದೆ. ವರದಿಯ ಪ್ರಕಾರ ರಾಹುಲ್‌ ಮತ್ತು ನಟಾಲಿಯಾ ಮದುವೆಯಾದಾಗಿನಿಂದಲೂ ಇಬ್ಬರ ಮಧ್ಯೆ ಭಿನ್ನಾಭಿಪ್ರಾಯಗಳು ಇದ್ದವು. ಅವರಿಬ್ಬರು ದಾಂಪತ್ಯವನ್ನು ಉಳಿಸಿಕೊಳ್ಳಲೆಂದು ಸಾಕಷ್ಟು ಪ್ರಯತ್ನಗಳು ಮಾಡಿದ್ದರು. ಆದರೆ ಅದು ಸಾಧ್ಯವಾಗದ ಹಿನ್ನೆಲೆ ದಂಪತಿ ಕಳೆದ ವರ್ಷವೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Self Harming :ಖಾಸಗಿ ವಿಡಿಯೊ ವೈರಲ್‌; ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆ
ಮೂರನೇ ಬಾರಿಗೆ ವಿಚ್ಛೇದನ ಎದುರಿಸುತ್ತಿರುವ ರಾಹುಲ್‌ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುವ ಸಮಯದಲ್ಲಿ ಸಾಕಷ್ಟು ಕುಗ್ಗಿದ್ದರು. ಮನಸ್ಸಿಗೆ ನೋವುಂಟು ಮಾಡಿಕೊಂಡಿದ್ದ ಅವರು ಇತ್ತೀಚೆಗೆ ಸಾಮಾನ್ಯ ಜೀವನಕ್ಕೆ ಮರಳುತ್ತಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ನ್ಯಾಯಾಲಯದಿಂದ ವಿಚ್ಛೇದನ ಸಿಕ್ಕಿದೆಯೋ ಇಲ್ಲವೋ ಎನ್ನುವುದರ ಬಗ್ಗೆ ಇನ್ನೂ ಯಾವುದೇ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಯಾವುದೇ ಮಾತನ್ನು ಆಡದಿರಲು ರಾಹುಲ್‌ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಹಿಂದೆ ಸ್ಟಾರ್‌ ಪ್ಲಸ್‌ ವಾಹಿನಿಯಲ್ಲಿ ಪತಿಯೊಂದಿಗೆ ಭಾಗವಹಿಸಿದ್ದ ನಟಾಲಿಯಾ ಅವರು, ರಾಹುಲ್‌ ಅವರು ಹಿಂದಿನ ಮದುವೆಗಳ ಬಗ್ಗೆ ಮಾತನಾಡಿದ್ದರು. “ಅವುಗಳನ್ನು ಮದುವೆ ಎನ್ನುವುದಕ್ಕಿಂತ ಸಣ್ಣ ಸಮಯದ ರಿಲೇಶನ್‌ಶಿಪ್‌ ಎಂದು ಹೇಳಬಹುದು. ಮದುವೆ ಎನ್ನುವುದು ತುಂಬ ಆಳವಾದ ಸಂಬಂಧವಾಗಿರುತ್ತದೆ. ಆ ರೀತಿಯ ಸಂಬಂಧ ರಾಹುಲ್‌ಗೆ ಇರಲೇ ಇಲ್ಲವಾದ್ದರಿಂದ ನಾನು ಅದರ ಬಗ್ಗೆ ಯೋಚಿಸುವುದೂ ಇಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: Kidney Stones: ಕಿಡ್ನಿ ಕಲ್ಲಿನ ಬಗ್ಗೆ ನಾವು ಈ ವಿಷಯ ತಿಳಿದಿರಬೇಕು
ರಾಹುಲ್‌ ಅವರು 2006ರಲ್ಲಿ ಶ್ವೇತಾ ಸಿಂಗ್‌ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. 2008ರಲ್ಲಿ ಆ ದಾಂಪತ್ಯ ಮುರಿದುಬಿದ್ದಿತ್ತು. ಅದಾದ ನಂತರ ಅವರು ಮ್ಯಾಟ್ರಿಮೋನಿ ರಿಯಾಲಿಟಿ ಶೋನಲ್ಲಿ ಭಾಗವಹಿಸಿ ಅಲ್ಲಿ ಡಿಂಪಿ ಗಂಗೂಲಿ ಹೆಸರಿನ ಯುವತಿಯನ್ನು ಪ್ರೀತಿಸಿದ್ದರು. ಅವರ ಮದುವೆ 2010ರಲ್ಲಿ ನಡೆದು, ಆ ದಾಂಪತ್ಯ 2015ರಲ್ಲಿ ಅಂತ್ಯವಾಗಿತ್ತು. ನಂತರ ಅವರು 2018ರಲ್ಲಿ ನಟಾಲಿಯಾ ಅವರನ್ನು ವಿವಾಹವಾಗಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Kannada Web Series: ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದ ಬಸ್ ಮೆಕಾನಿಕಲ್; ಸೆಟ್ಟೇರಿತು ‘ಕರ್ನಾಟಕ Love’s ಕೇರಳ’ ವೆಬ್ ಸಿರೀಸ್

Kannada Web Series: ಕನ್ನಡದಲ್ಲಿ ವೆಬ್‌ ಸೀರಿಸ್‌ಗಳು ಕಡಿಮೆ. ಇದೀಗ ಈ ಕೊರತೆಯನ್ನು ನೀಗಿಸಲು ಹೊಸಬರ ತಂಡವೊಂದು ಮುಂದಾಗಿದೆ. ‘ಕರ್ನಾಟಕ Love’s ಕೇರಳ’ ಹೆಸರಿನ ವೆಬ್‌ ಸೀರಿಸ್‌ ಬೆಂಗಳೂರಿನಲ್ಲಿ ಸೆಟ್ಟೇರಿದೆ.

VISTARANEWS.COM


on

kannada web series
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ಈಗ ಹೊಸಬರಿಗೆ ವಿಫುಲ ಅವಕಾಶವಿದೆ. ಹೊಸಬರ ಚಿತ್ರಗಳು ಸಿನಿಪ್ರಿಯರ ಮೆಚ್ಚುಗೆ ಗಳಿಸುತ್ತಿವೆ. ಇದೀಗ ಮತ್ತೊಂದು ಪ್ರತಿಭಾನ್ವಿತ ಹಾಗೂ ಯುವ ಸಿನಿಮೋತ್ಸಾಹಿಗಳ ತಂಡವೊಂದು ಸೇರಿ ‘ಕರ್ನಾಟಕ Love’s ಕೇರಳ’ (Karnataka Loves Kerala) ಎಂಬ ವೆಬ್ ಸಿರೀಸ್ ರೂಪಿಸುತ್ತಿದೆ.‌ ಅದರ ಮೊದಲ ಭಾಗವಾಗಿ ಇತ್ತೀಚೆಷ್ಟೇ ಬೆಂಗಳೂರಿನ ವೆಂಕಟೇಶ್ವರ ದೇಗುಲದಲ್ಲಿ ವೆಬ್‌ ಸೀರಿಸ್‌ (Kannada Web Series)ಗೆ ಮುಹೂರ್ತ ನಡೆಸಲಾಯಿತು. ‘ಕರ್ನಾಟಕ Love’s ಕೇರಳ’ ಸಿರೀಸ್‌ಗೆ ಗರುಡ ರಾಮ್ ಕ್ಲಾಪ್ ಮಾಡಿದ್ದು, ವೀರಕಪುತ್ರ ಶ್ರೀನಿವಾಸ್ ಕ್ಯಾಮೆರಾ ಚಾಲನೆ ನೀಡಿದರು.

‘ಕರ್ನಾಟಕ Love’s ಕೇರಳ’ ವೆಬ್ ಸರಣಿಗೆ ಯುವ ಪ್ರತಿಭೆ ಲೋಕೇಶ್ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ನಿರ್ದೇಶನದ ಜತೆಗೆ ನಾಯಕನಾಗಿಯೂ ಅದೃಷ್ಟ ಪರೀಕ್ಷೆಗಿಳಿದ್ದಾರೆ. ಬಸ್ ಮೆಕಾನಿಕಲ್ ಆಗಿರುವ ಲೋಕೇಶ್‌‌ ಒಂದಷ್ಟು ಕಿರುಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಹಲವು ಚಿತ್ರಗಳಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ ಅಭಿಯಿಸಿದ್ದು, ಇದೀಗ ಪೂರ್ಣ ಪ್ರಮಾಣದ ನಾಯಕನಾಗಿ ಬಣ್ಣ ಹಚ್ಚುತ್ತಿದ್ದಾರೆ. ಇವರಿಗೆ ಜೋಡಿಯಾಗಿ ಜ್ಯೋತಿ, ಸಹನಾ ಸಾಥ್ ನೀಡುತ್ತಿದ್ದಾರೆ.

ಎಂ.ಎಂ.ಕೆ. ಬಾಲು ನಿರ್ಮಾಣ‌ ಮಾಡುತ್ತಿರುವ ʼಕರ್ನಾಟಕದ love’s ಕೇರಳʼ ಸಿರೀಸ್‌ಗೆ ಲೋಕೇಶ್ ಅವರದ್ದೇ ಕಥೆ ಚಿತ್ರಕಥೆ. ಟೈಟಲ್ ಹೇಳುವಂತೆ ಇದೊಂದು ಪ್ರೇಮಕಥೆ‌‌ ಒಳಗೊಂಡಿದೆ. ಆನಂದ್ ಇಳಯರಾಜ ಛಾಯಾಗ್ರಹಣ, ಪ್ರವೀಣ್ ಶ್ರೀನಿವಾಸ್ ಸಂಗೀತ, ಮಹೇಶ್ ಸಂಕಲನ ಸರಣಿಗಿದೆ.‌ ಮುಂದಿನ ವಾರದಿಂದ ಕೇರಳ ಭಾಗದಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಸಜ್ಜಾಗಿದೆ.

’ಭುವನಂ ಗಗನಂ’ ಸಿನಿಮಾಗೆ ಧ್ರುವ ಸರ್ಜಾ ಸಾಥ್‌

ಬೆಂಗಳೂರು: ಸ್ಯಾಂಡಲ್‌ವುಡ್‌ ಅಂಗಳದ ಇಬ್ಬರು ಪ್ರತಿಭಾನ್ವಿತ ನಟರಾದ ʻಸಲಾರ್ʼ ಪ್ರಮೋದ್ ಹಾಗೂ ʼದಿಯಾʼ ಪೃಥ್ವಿ ಅಂಬಾರ್ ನಟನೆಯ ಬಹುನಿರೀಕ್ಷಿತ ಸಿನಿಮಾ ʻಭುವನಂ ಗಗನಂʼ. ಈ ಚಿತ್ರದ ನಿರ್ಮಾಪಕ ಎಂ. ಮುನೇಗೌಡ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಟೀಸರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಬೆಸ್ಟ್ ವಿಷಸ್ ತಿಳಿಸಿದ್ದಾರೆ. ಬೆಂಗಳೂರಿನ ಡಾ. ರಾಜಕುಮಾರ್‌ ಇಂಡೋರ್ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ನಟ ನೆನಪಿರಲಿ ಪ್ರೇಮ್, ನಿರ್ದೇಶಕ ಸಿಂಪಲ್ ಸುನಿ ಸೇರಿದಂತೆ ಹಲವರು ಉಪಸ್ಥಿತಿದ್ದರು.

ಇದನ್ನೂ ಓದಿ: Kannada New Movie: ʻಕಮಲ್ ಹಾಸನ್ʼ ಬಂದು ಟೈಟಲ್‌ ಲಾಂಚ್‌ ಮಾಡಿದ್ರು! ಯಾವುದು ಆ ಸಿನಿಮಾ?

ಭುವನಂ ಗಗನಂ ಸಿನಿಮಾ ಲವ್, ರೋಮ್ಯಾನ್ಸ್, ಫ್ಯಾಮಿಲಿ ಎಮೋಷನ್ ಕಥಾಹಂದರ ಸಿನಿಮಾವಾಗಿದ್ದು, ನಗರ, ಹಳ್ಳಿ ಎರಡು ಬ್ಯಾಕ್ ಡ್ರಾಪ್‌ನಲ್ಲಿ ನಡೆಯುವ ಕಥೆಯಾಗಿದ್ದು, ಪ್ರಮೋದ್‌ಗೆ ಜೋಡಿಯಾಗಿ ʼಲವ್ ಮಾಕ್ಟೇಲ್ʼ ಖ್ಯಾತಿಯ ರೆಚೆಲ್ ಡೇವಿಡ್, ಪೃಥ್ವಿಗೆ ಜೋಡಿಯಾಗಿ ಅಶ್ವಥಿ ನಟಿಸ್ತಿದ್ದಾರೆ. ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ಸಿದ್ಲಿಂಗು ಶ್ರೀಧರ್, ಹರಿಣಿ, ʼಸ್ಪರ್ಶʼ ರೇಖಾ, ಪ್ರಜ್ವಲ್ ಶೆಟ್ಟಿ, ಚೇತನ್ ದುರ್ಗ ತಾರಾಬಳಗದಲ್ಲಿದ್ದಾರೆ. ಉದಯ್ ಲೀಲಾ ಕ್ಯಾಮೆರಾ ಕೈಚಳಕ, ಗುಮ್ಮಿನೇನಿ ವಿಜಯ್ ಮ್ಯೂಸಿಕ್ ಕಿಕ್, ಸುನಿಲ್‌ ಕಶ್ಯಪ್ ಸಂಕಲನ ಸಿನಿಮಾಕ್ಕಿದೆ. ಮಳೆಗಾಲದಲ್ಲಿ ʼಭುವನಂ ಗಗನಂʼ ಸಿನಿಮಾ ತೆರೆಗೆ ಬರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕಿರುತೆರೆ/ಒಟಿಟಿ

Kapil Sharma: ಸುನಿಲ್‌ ಗ್ರೋವರ್ ಜತೆಗೆ ನೆಟ್​ಫ್ಲಿಕ್ಸ್​ಗೆ ಕಾಲಿಟ್ಟ ಕಪಿಲ್ ಶರ್ಮಾ; ಶೋ ಟ್ರೇಲರ್‌ ಔಟ್‌: ಪ್ರಸಾರ ಯಾವಾಗ ?

Kapil Sharma: ಹಾಸ್ಯ, ಮನರಂಜನೆಯ ರಸದೌತಣ ನೀಡಿ ದೇಶದ ಮನೆಮಾತಾಗಿರುವ ಕಪಿಲ್‌ ಶರ್ಮಾ ಅವರ ಹೊಸ ಶೋ ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶರ್ಮಾ ಶೋ’ ನೆಟ್‌ಫ್ಲಿಕ್ಸ್‌ನಲ್ಲಿ ಪ್ರಸಾರವಾಗಲಿದೆ. ಸದ್ಯ ಶೋದ ಟ್ರೇಲರ್‌ ಬಿಡುಗಡೆಯಾಗಿದ್ದು, ಗಮನ ಸೆಳೆಯುತ್ತಿದೆ.

VISTARANEWS.COM


on

kapil sharma
Koo

ಮುಂಬೈ: ಭಾರತೀಯರ ಅಚ್ಚುಮೆಚ್ಚಿನ ಕಾಮಿಡಿ ಶೋ ʼದಿ ಕಪಿಲ್‌ ಶರ್ಮಾ ಶೋʼ (The Kapil Sharma Show). ಈ ಶೋ ಮೂಲಕ ಹಾಸ್ಯ, ಮನರಂಜನೆಯ ರಸದೌತಣ ನೀಡಿ ದೇಶದ ಮನೆಮಾತಾಗಿರುವ ಕಪಿಲ್‌ ಶರ್ಮಾ (Kapil Sharma) ಹಾಗೂ ಸುನಿಲ್‌ ಗ್ರೋವರ್‌ (Sunil Grover) ಮತ್ತೆ ಒಂದಾಗಿದ್ದಾರೆ. ಸುಮಾರು ಆರು ವರ್ಷಗಳ ಮುನಿಸಿನ ಬಳಿಕ ಇಬ್ಬರೂ ಒಂದಾಗಿದ್ದಾರೆ. ನೆಟ್‌ಫ್ಲಿಕ್ಸ್‌ (Netflix)ನಲ್ಲಿ ಪ್ರಸಾರವಾಗಲಿರುವ ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶರ್ಮಾ ಶೋ’ (The Great Indian Kapil Show)ದಲ್ಲಿ ಈ ಇಬ್ಬರು ದಿಗ್ಗಜರು ಒಂದಾಗಲಿದ್ದಾರೆ. ಈ ಮೂಲಕ ಟಿವಿಯಲ್ಲಿ ಜನಪ್ರಿಯವಾದ ಶೋ ಒಟಿಟಿಗೂ ಕಾಲಿಟ್ಟಿದೆ. ಶನಿವಾರ (ಮಾರ್ಚ್‌ 23) ಈ ಶೋದ ಟ್ರೇಲರ್‌ ಬಿಡುಗಡೆಯಾಗಿದ್ದು, ಗಮನ ಸೆಳೆದಿದೆ.

ಬಾಲಿವುಡ್​, ಕ್ರಿಕೆಟ್​ ಲೋಕದ ಭಾರಿ ದೊಡ್ಡ ಸೆಲೆಬ್ರಿಟಿಗಳು ಕಪಿಲ್​ ಅವರ ಶೋಗೆ ಬಂದಿರುವುದು ಟ್ರೇಲರ್‌ನಲ್ಲಿ ಕಂಡು ಬಂದಿದೆ. ಮತ್ತೊಂದು ವಿಶೇಷ ಎಂದರೆ ಕಪಿಲ್​ ಶರ್ಮಾ ಅವರ ಹಳೆಯ ಗೆಳೆಯರೆಲ್ಲ ಮತ್ತೆ ಶೋಗೆ ಬಂದಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಇನ್ನು ನಗುವಿಗೆ ಕೊರತೆ ಇಲ್ಲ ಎಂದು ಅನೇಕರು ಸಂತಸ ವ್ಯಕ್ತಪಡಿಸಿದ್ದಾರೆ.

ಯಾವಾಗ ಪ್ರಸಾರ ?

ಸುನಿಲ್‌ ಗ್ರೋವರ್‌ ಜತೆಗೆ ಅರ್ಚನಾ ಪೂರನ್‌ ಸಿಂಗ್‌, ಕಿಕು ಶಾರದಾ, ರಾಜೀವ್ ಠಾಕೂರ್ ಮತ್ತು ಕೃಷ್ಣ ಅಭಿಷೇಕ್ ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶರ್ಮಾ ಶೋ’ದ ಭಾಗವಾಗಲಿದ್ದಾರೆ. ನೆಟ್​ಫ್ಲಿಕ್ಸ್​ನಲ್ಲಿ ಮಾರ್ಚ್ 30ರಿಂದ ಪ್ರತಿ ಶನಿವಾರ ರಾತ್ರಿ 8 ಗಂಟೆಗೆ ಹೊಸ ಈ ಶೋ ಪ್ರಸಾರವಾಗಲಿದೆ.

ಟ್ರೇಲರ್‌ನಲ್ಲಿ ಏನಿದೆ?

ಶೋ ಅದ್ದೂರಿಯಾಗಿ ಮೂಡಿ ಬಂದಿದೆ ಎನ್ನುವುದಕ್ಕೆ ಟ್ರೇಲರ್‌ನಲ್ಲಿ ಸಾಕ್ಷಿ ಸಿಕ್ಕಿದೆ. ಭಾರತೀಯ ಚಿತ್ರರಂಗ ಹಾಗೂ ಕ್ರಿಕೆಟ್​ ಲೋಕದ ದಿಗ್ಗಜರು ಈ ಬಾರಿ ಶೋಗೆ ಅತಿಥಿಗಳಾಗಿ ಆಗಮಿಸಲಿದ್ದಾರೆ. ಪ್ರಸ್ತುತ ಬಿಡುಗಡೆ ಆಗಿರುವ ಟ್ರೇಲರ್‌ನಲ್ಲಿ ​ಬಾಲಿವುಡ್ ಸ್ಟಾರ್ ನಟ ರಣ್​ಬೀರ್ ಕಪೂರ್, ತಮ್ಮ ತಾಯಿ ಹಾಗೂ ಸಹೋದರಿ ಜತೆಗೆ ಶೋದಲ್ಲಿ ಭಾಗವಹಿಸಿರುವುದು ಕಂಡು ಬಂದಿದೆ. ಸಾಮಾನ್ಯವಾಗಿ ಯಾವುದೇ ಶೋಗೆ ಹೋಗದ ಆಮೀರ್ ಖಾನ್ ಸಹ ಕಪಿಲ್ ಶರ್ಮಾ ಶೋಗೆ ಆಗಮಿಸಿದ್ದಾರೆ. ಭಾರತೀಯ ಕ್ರಿಕೆಟ್ ಟೀಂನ ನಾಯಕ ರೋಹಿತ್‌ ಶರ್ಮಾ, ಕ್ರಿಕೆಟಿಗ ಶ್ರೆಯಸ್ ಐಯ್ಯರ್ ಮತ್ತಿತರರು ಆಗಮಿಸಿದ್ದಾರೆ. ಹೀಗಾಗಿ ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶರ್ಮಾ ಶೋ’ ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: ನಾರಾಯಣಮೂರ್ತಿ ಬಸ್‌ ಕಂಡಕ್ಟರ್ ಹೈ ಕ್ಯಾ?‌ ಭೇಟಿ ಕುರಿತು ಕಪಿಲ್‌ ಶರ್ಮಾ ಶೋನಲ್ಲಿ ಸುಧಾಮೂರ್ತಿ ಹೇಳಿದ್ದೇನು?

ಇಬ್ಬರ ಮಧ್ಯೆ ಏಕೆ ಜಗಳ?

ಕಪಿಲ್‌ ಶರ್ಮಾ ಹಾಗೂ ಸುನಿಲ್‌ ಗ್ರೋವರ್‌ ಅವರ ಮಧ್ಯೆ 2017ರಲ್ಲಿ ಭಿನ್ನಾಭಿಪ್ರಾಯ ಮೂಡಿತ್ತು. ಆಸ್ಟ್ರೇಲಿಯಾದಲ್ಲಿ ಶೋ ಮುಗಿಸಿ, ಮುಂಬೈಗೆ ಆಗಮಿಸುವಾಗ ವಿಮಾನದಲ್ಲಿಯೇ ಕಪಿಲ್‌ ಶರ್ಮಾ ಅವರು ಸುನಿಲ್‌ ಗ್ರೋವರ್‌ ಅವರಿಗೆ ಬೈದಿದ್ದರು. ಇದಾದ ಬಳಿಕ ಇಬ್ಬರೂ ವಾಗ್ವಾದ ನಡೆಸಿದ್ದರು ಎನ್ನಲಾಗಿದೆ. ನಂತರ ಸುನಿಲ್‌ ಗ್ರೋವರ್‌ ಅವರು ʼದಿ ಕಪಿಲ್‌ ಶರ್ಮಾ ಶೋʼ ತೊರೆದಿದ್ದರು. ಜಗಳದ ಕುರಿತು ಸ್ಪಷ್ಟನೆ ನೀಡಿದ್ದ ಕಪಿಲ್‌ ಶರ್ಮಾ, “ನಾನು ಎಂದಿಗೂ ಸುನಿಲ್‌ ಗ್ರೋವರ್‌ ಜತೆ ಜಗಳ ಆಡಿಲ್ಲ, ಬೈದಿಲ್ಲ. ನಾನು ಅದ್ಭುತ ವ್ಯಕ್ತಿಗಳ ಜತೆ ಕೆಲಸ ಮಾಡಲು ಬಯಸುತ್ತೇನೆ. ಅವರಲ್ಲಿ ಸುನಿಲ್‌ ಗ್ರೋವರ್‌ ಕೂಡ ಒಬ್ಬರು” ಎಂದು ಹೇಳಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕಿರುತೆರೆ/ಒಟಿಟಿ

OTT Release: ಒಟಿಟಿ ಪ್ರಿಯರಿಗೆ ಈ ವಾರ ಹಬ್ಬ; ʼಉಪಾಧ್ಯಕ್ಷʼ ಚಿತ್ರದ ಜತೆಗೆ ರಿಲೀಸ್‌ ಆದ‌ ಇತರ ಶೋಗಳ ವಿವರ ಇಲ್ಲಿದೆ

OTT Release: ಈ ವಾರ ಒಟಿಟಿಯಲ್ಲಿ ಚಿಕ್ಕಣ್ಣ ಅಭಿನಯದ ಉಪಾಧ್ಯಕ್ಷ ಸಿನಿಮಾ ಸೇರಿದಂತೆ ಹಲವು ಚಿತ್ರಗಳು ತೆರೆ ಕಂಡಿವೆ. ಈ ಕುರಿತಾದ ವಿವರ ಇಲ್ಲಿದೆ.

VISTARANEWS.COM


on

ott
Koo

ಮುಂಬೈ: ಇತ್ತೀಚೆಗೆ ಒಟಿಟಿ ಫ್ಲಾಟ್‌ಫಾರ್ಮ್‌ಗೆ ವೀಕ್ಷಕರು ಹೆಚ್ಚಾಗಿದ್ದಾರೆ. ಹಲವರು ಥಿಯೇಟರ್‌ಗೆ ಹೋಗಿ ಸಿನಿಮಾ ನೋಡುವುದಕ್ಕಿಂತ ಒಟಿಟಿ ರಿಲೀಸ್‌ಗೆ ಕಾಯುತ್ತಿರುತ್ತಾರೆ. ಸಿನಿಮಾ ಜತೆಗೆ ವೆಬ್‌ ಸೀರಿಸ್‌, ಶೋಗಳಿಗೂ ಸಾಕಷ್ಟು ಸಂಖ್ಯೆಯಲ್ಲಿ ಪ್ರೇಕ್ಷಕರಿದ್ದಾರೆ. ಈ ವಾರ ಒಟಿಟಿಯಲ್ಲಿ ತೆರೆ ಕಾಣುತ್ತಿರುವ ಪ್ರಮುಖ ಚಿತ್ರಗಳು, ಶೋಗಳ ವಿವರ ಇಲ್ಲಿದೆ (OTT Release).

ಶೋ ಟೈಮ್‌ (ಡಿಸ್ನಿ ಪ್ಲಸ್‌ ಹಾಟ್‌ ಸ್ಟಾರ್‌)-ಮಾರ್ಚ್‌ 8

ಬಾಲಿವುಡ್‌ ಸ್ಟಾರ್‌ ಇಮ್ರಾನ್‌ ಹಶ್ಮಿ ಅಭಿನಯದ ವೆಬ್‌ ಸೀರಿಸ್‌ ʼಶೋ ಟೈಮ್‌ʼ ಡಿಸ್ನಿ ಪ್ಲಸ್‌ ಹಾಟ್‌ ಸ್ಟಾರ್‌ನಲ್ಲಿ ಮಾರ್ಚ್‌ 8ರಿಂದ ಸ್ಟ್ರೀಮಿಂಗ್‌ ಆಗುತ್ತಿದೆ. ಕರಣ್‌ ಜೋಹರ್‌ ಅವರ ಧರ್ಮ ಪ್ರೊಡಕ್ಷನ್ಸ್‌ ಈ ವೆಬ್‌ ಸೀರಿಸ್‌ ಅನ್ನು ನಿರ್ಮಿಸಿದ್ದು, ಶ್ರೀಯಾ ಶರಣ್‌, ಮೌನಿ ರಾಯ್‌, ನಾಸಿರುದ್ದೀನ್‌ ಶಾ ಮತ್ತಿತರರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಮಹಾರಾಣಿ ಸೀನಸ್‌ 3 (ಸೋನಿ ಲೈವ್‌)-ಮಾರ್ಚ್‌ 7

ಜನಪ್ರಿಯ ವೆಬ್‌ ಸೀರಿಸ್‌ ʼಮಹಾರಾಣಿʼಯ ಮೂರನೇ ಸೀಸನ್‌ ಕೂಡ ಮಾರ್ಚ್‌ 8ರಿಂದ ಪ್ರಸಾರವಾಗುತ್ತಿದೆ. ಬಾಲಿವುಡ್‌ ನಟಿ ಹುಮಾ ಖರೇಷಿ ಅಭಿನಯದ ಈ ಪಾಲಿಟಿಕಲ್‌ ಡ್ರಾಮವನ್ನು ಸೋನಿ ಲೈವ್‌ (SonyLIV)ನಲ್ಲಿ ವೀಕ್ಷಿಸಬಹುದು. ಸಾಮಾನ್ಯ ಹೆಣ್ಣು ಮಗಳೊಬ್ಬಳು ರಾಜಕೀಯ ಪ್ರವೇಶ ಪಡೆಯುವ ರೋಚಕ ಕಥೆಯನ್ನು ಇದು ಒಳಗೊಂಡಿದೆ.

ಮೆರ‍್ರಿ ಕ್ರಿಸ್‌ಮಸ್‌ (ನೆಟ್‌ಫ್ಲಿಕ್ಸ್‌)-ಮಾರ್ಚ್‌ 8

ಮಾರ್ಚ್‌ 8ರಿಂದ ನೀವು ನೋಡಬಹುದಾದ ಥ್ರಿಲ್ಲರ್‌ ಚಿತ್ರ ʼಮೆರ‍್ರಿ ಕ್ರಿಸ್‌ಮಸ್‌ʼ. ಕಾಲಿವುಡ್‌ ಸ್ಟಾರ್‌ ವಿಜಯ್‌ ಸೇತುಪತಿ ಮತ್ತು ಬಾಲಿವುಡ್‌ ನಟಿ ಕತ್ರಿನಾ ಕೈಫ್‌ ಮೊದಲ ಬಾರಿ ತೆರೆ ಮೇಲೆ ಒಂದಾದ ಚಿತ್ರವನ್ನು ಶ್ರೀರಾಮ್‌ ರಾಘವನ್‌ ನಿರ್ದೇಶಿಸಿದ್ದಾರೆ. ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡ ಈ ಚಿತ್ರ ಬಾಕ್ಸ್‌ ಆಫೀಸ್‌ನಲ್ಲಿ ಅಷ್ಟೇನೂ ಸದ್ದು ಮಾಡಿಲ್ಲ. ನೆಟ್‌ಫ್ಲಿಕ್ಸ್‌ನಲ್ಲಿ ಈ ಸಿನಿಮಾವನ್ನು ವೀಕ್ಷಿಸಬಹುದು.

ದಿ ರಿಜಿಮ್‌ (ಜಿಯೋ ಸಿನಿಮಾ)- ಮಾರ್ಚ್‌ 4

ಈ ಇಂಗ್ಲಿಷ್‌ ಟಿವಿ ಮಿನಿ ಸಿರೀಸ್‌ ಮಾರ್ಚ್‌ 4ರಿಂದ ಜಿಯೋ ಸಿನಿಮಾದಲ್ಲಿ ಪ್ರಸಾರವಾಗುತ್ತಿದೆ. ಸರ್ವಾಧಿಕಾರಿ ಎಲೆನಾ ವೆರ್ನ್ಹ್ಯಾಮ್ ಪಾತ್ರದಲ್ಲಿ ಆಸ್ಕರ್ ಪ್ರಶಸ್ತಿ ವಿಜೇತೆ ಕೇಟ್ ವಿನ್ಸ್ಲೆಟ್ ಕಾಣಿಸಿಕೊಂಡಿದ್ದಾರೆ. ಇದರಲ್ಲಿ ಹಗ್ ಗ್ರಾಂಟ್, ಮಥಿಯಾಸ್ ಶೋನರ್ಟ್ಸ್ ಮತ್ತು ಗೈಲ್ಯೂಮ್ ಗ್ಯಾಲಿಯನ್ ಮತ್ತಿತರರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಡ್ಯಾಮ್‌ಸೆಲ್‌ (ನೆಟ್‌ಫ್ಲಿಕ್ಸ್‌)- ಮಾರ್ಚ್‌ 8

ಅಮೆರಿಕನ್‌ ಡಾರ್ಕ್‌ ಫ್ಯಾಂಟಸಿ ಚಿತ್ರ ʼಡ್ಯಾಮ್‌ಸೆಲ್‌ʼ ಮಾರ್ಚ್‌ 8ರಿಂದ ನೆಟ್‌ಫ್ಲಿಕ್ಸ್‌ನಲ್ಲಿ ಲಭ್ಯ. ಮಿಲ್ಲಿ ಬಾಬಿ ಬ್ರೌನ್, ರೇ ವಿನ್ಸ್ಟೋನ್, ನಿಕ್ ರಾಬಿನ್ಸನ್, ಶೋಹ್ರೆ ಅಘ್ಡಾಶ್ಲೂ, ಏಂಜೆಲಾ ಬ್ಯಾಸೆಟ್, ರಾಬಿನ್ ರೈಟ್ ಮತ್ತಿತರರು ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಲಾಲ್‌ ಸಲಾಂ (ನೆಟ್‌ಫ್ಲಿಕ್ಸ್‌)- ಮಾರ್ಚ್‌ 8

ಕಾಲಿವುಡ್‌ ಸೂಪರ್‌ ಸ್ಟಾರ್‌ ರಜನಿಕಾಂತ್‌ ಅಭಿನಯದ ʼಲಾಲ್‌ ಸಲಾಂʼ ಚಿತ್ರವನ್ನು ಥಿಯೇಟರ್‌ನಲ್ಲಿ ಮಿಸ್‌ ಮಾಡಿಕೊಂಡವರು ಒಟಿಟಿಯಲ್ಲಿ ಮಾರ್ಚ್‌ 8ರಿಂದ ಈ ಸಿನಿಮಾವನ್ನು ನೋಡಬಹುದು. ನೆಟ್‌ಫ್ಲಿಕ್ಸ್‌ನಲ್ಲಿ ಇದು ಸ್ಟ್ರೀಮಿಂಗ್‌ ಆಗುತ್ತಿದೆ. ಐಶ್ವರ್ಯಾ ರಜನಿಕಾಂತ್‌ ನಿರ್ದೇಶನದ ಈ ಚಿತ್ರದಲ್ಲಿ ವಿಷ್ಣು ವಿಶಾಲ್‌, ವಿಕ್ರಾಂತ್‌ ಮತ್ತಿತರರು ಮುಖ್ಯ ಪಾತ್ರದಲ್ಲಿದ್ದಾರೆ. ಥಿಯೇಟರ್‌ನಲ್ಲಿ ಸಾಧಾರಣ ಯಶಸ್ಸು ಕಂಡಿದ್ದ ಇದು ಒಟಿಟಿಯಲ್ಲಿ ಗಮನ ಸೆಳೆಯುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

ಉಪಾಧ್ಯಕ್ಷ (ಸನ್‌ ನೆಕ್ಟ್ಸ್‌) – ಮಾರ್ಚ್‌ 8

ಇತ್ತೀಚೆಗೆ ಸ್ಯಾಂಡಲ್‌ವುಡ್‌ನಲ್ಲಿ ಸುದ್ದಿ ಮಾಡಿದ ಚಿತ್ರ ʼಉಪಾಧ್ಯಕ್ಷʼ. ಇದೀಗ ಈ ಸಿನಿಮಾ ಸದ್ದಿಲ್ಲದೆ ಒಟಿಟಿಗೆ ಲಗ್ಗೆ ಇಟ್ಟಿದೆ. ಮಾರ್ಚ್‌ 8ರಿಂದ ನೀವು ಸನ್‌ ನೆಕ್ಟ್ಸ್‌ಲ್ಲಿ ಉಪಾಧ್ಯಕ್ಷ ಚಿತ್ರ ವೀಕ್ಷಿಸಬಹುದು. ಚಿಕ್ಕಣ್ಣ ನಾಯಕನಾಗಿರುವ ಈ ಚಿತ್ರ ಮಲೈಕಾ ವಸುಪಾಲ್‌, ರವಿಶಂಕರ್‌, ಸಾಧು ಕೋಕಿಲ, ವೀಣಾ ಸುಂದರ್‌ ಮತ್ತಿತರರು ಪ್ರಧಾನ ಪಾತ್ರಗಳಲ್ಲಿ ಮಿಂಚಿದ್ದಾರೆ.

ಅನ್ವೇಷಿಪ್ಪಿನ್‌ ಕಂಡೆಂತ್ತುಮ್‌ (ನೆಟ್‌ಫ್ಲಿಕ್ಸ್‌)- ಮಾರ್ಚ್‌ 8

ನೀವು ಮಲಯಾಳಂ ಚಿತ್ರ ಪ್ರೇಮಿಗಳಾಗಿದ್ದರೆ ಈ ಚಿತ್ರವನ್ನು ಮಿಸ್‌ ಮಾಡದೇ ನೋಡಿ. ಈ ಕ್ರೈಂ ಥ್ರಿಲ್ಲರ್‌ 90ರ ದಶಕದ ಪೊಲೀಸ್‌ ತನಿಖೆಯ ಕಥೆ ಹೇಳುತ್ತುದೆ. ಟೊವಿನೋ ಥಾಮಸ್‌, ಇಂದ್ರನ್ಸ್‌, ಸಿದ್ಧಿಕ್‌ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಕ್ಷಣ ಕ್ಷಣಕ್ಕೂ ಕುತೂಹಲ ಕೆರಳಿಸುವ ಈ ಚಿತ್ರದಲ್ಲಿ ಯಾರೂ ಊಹಿಸದ ಕ್ಲೈಮ್ಯಾಕ್ಸ್‌ ಇದೆ. ಡಾರ್ವಿನ್ ಕುರಿಯಕ್ಕೋಸ್‌ ಈ ಸಿನಿಮಾದ ನಿರ್ದೇಶಕರು. ಅನ್ವೇಷಿಪ್ಪಿನ್‌ ಕಂಡೆಂತ್ತುಮ್‌ ಚಿತ್ರವನ್ನು ಮಾರ್ಚ್‌ 8ರಿಂದ ನೆಟ್‌ಫ್ಲಿಕ್ಸ್‌ನಲ್ಲಿ ವೀಕ್ಷಿಸಬಹುದು.

ಇದನ್ನೂ ಓದಿ: Nitish Bharadwaj: ʼ16,000 ಹೆಂಡತಿಯರನ್ನು ನಿಭಾಯಿಸಿದʼವನಿಗೆ ಪತ್ನಿಯಿಂದ ದೌರ್ಜನ್ಯ! ಏನಿವರ ಗೋಳಿನ ಕತೆ?

Continue Reading

ಕಿರುತೆರೆ

Nitish Bharadwaj: ʼ16,000 ಹೆಂಡತಿಯರನ್ನು ನಿಭಾಯಿಸಿದʼವನಿಗೆ ಪತ್ನಿಯಿಂದ ದೌರ್ಜನ್ಯ! ಏನಿವರ ಗೋಳಿನ ಕತೆ?

ಇದು ಜನಪ್ರಿಯ ಟಿವಿ ಸೀರಿಯಲ್‌ (TV Serial) ʼಮಹಾಭಾರತʼದ ಕೃಷ್ಣನ ಪಾತ್ರಧಾರಿ ನಟ ನಿತೀಶ್ ಭಾರದ್ವಾಜ್ (Nitish Bharadwaj) ಬದುಕಿನ ಕತೆ.

VISTARANEWS.COM


on

nitish bharadwaj with wife
Koo

ಮುಂಬಯಿ: ಮಹಾಭಾರತದ (Mahabharat) ಕೃಷ್ಣನೇನೋ 16,000 ಹೆಂಡತಿಯರನ್ನು ಜಗಳವಿಲ್ಲದೆ ನಿಭಾಯಿಸಿದ. ಆದರೆ ಈ ʼಕೃಷ್ಣʼನ (Krishna) ಬದುಕು ಮಾತ್ರ ಪತ್ನಿಯಿಂದಲೇ ಬರ್ಬಾದ್‌ ಆಗಿದೆ. ಇದು ಜನಪ್ರಿಯ ಟಿವಿ ಸೀರಿಯಲ್‌ (TV Serial) ʼಮಹಾಭಾರತʼದ ಕೃಷ್ಣನ ಪಾತ್ರಧಾರಿ ನಟ ನಿತೀಶ್ ಭಾರದ್ವಾಜ್ (Nitish Bharadwaj) ಬದುಕಿನ ಕತೆ.

ನಿತೀಶ್‌ ಭಾರದ್ವಾಜ್‌ ಮತ್ತು ಅವರ ವಿಚ್ಛೇದಿತ ಪತ್ನಿ ಸ್ಮಿತಾ ಭಾರದ್ವಾಜ್ ನಡುವಿನ ಕಲಹದ ಕತೆ ಹೊಸದೇನೂ ಅಲ್ಲ. ಕಳೆದ ಕೆಲವು ತಿಂಗಳುಗಳಲ್ಲಿ ಇಬ್ಬರೂ ಪರಸ್ಪರರ ವಿರುದ್ಧ ಹಲವಾರು ಆರೋಪಗಳನ್ನು ಮಾಡಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ನಿತೀಶ್ ಇನ್ನಷ್ಟು ಆಘಾತಕಾರಿ ಆರೋಪಗಳನ್ನು ಮಾಡಿದ್ದಾರೆ. ತಮ್ಮಿಬ್ಬರ ದಾಂಪತ್ಯದಲ್ಲಿ ತಾನು ಅತ್ಯಂತ ದೌರ್ಜನ್ಯಕ್ಕೀಡಾದವನು ಎಂದು ಹೇಳಿಕೊಂಡಿದ್ದಾರೆ.

“ಈ ದಾಂಪತ್ಯದಲ್ಲಿ ನಾನು ಎಲ್ಲಾ ರೀತಿಯ ನಿಂದನೆಗಳನ್ನು ಎದುರಿಸಿದ್ದೇನೆ. ನನ್ನ ಪೋಷಕರನ್ನು ನನ್ನಿಂದ ದೂರವಿಡಲಾಯಿತು. ನನ್ನ ಇಬ್ಬರು ಮಕ್ಕಳನ್ನು ನನ್ನಿಂದ ದೂರವಿಡಲಾಯಿತು. ನನ್ನ 11 ವರ್ಷದ ಹೆಣ್ಣುಮಕ್ಕಳು ಹೇಳಿದ ಎರಡು ಸಾಲುಗಳನ್ನು ಮಾತ್ರ ನಾನು ನಿಮಗೆ ಹೇಳುವೆ- ʻಅಪ್ಪಾ, ನಿಮ್ಮನ್ನು ನಮ್ಮ ತಂದೆ ಎಂದು ಕರೆಯಲು ನಮಗೆ ಅಸಹ್ಯವಾಗುತ್ತದೆ.’ ಇದು ಒಂದು ಮಗು ನನಗೆ ಹೇಳಿದ್ದು” ಎಂದು ನಿತೀಶ್ ದುಃಖಿಸಿದ್ದಾರೆ.

“ನನಗೆ ಆಗುತ್ತಿರುವ ಪ್ರಕ್ಷುಬ್ಧತೆಯನ್ನು ಹೇಗೆ ನಿಭಾಯಿಸಬೇಕೆಂದು ನನಗೆ ತಿಳಿಯುತ್ತಿಲ್ಲ. ನಾನು ಹಣ ಕೇಳುತ್ತಿದ್ದೇನೆ ಎಂದು ನನ್ನ ಮೇಲೆ ಮಾಡಿರುವ ಆರೋಪ ಸುಳ್ಳು. ನಾನು ನನ್ನಿಂದ ಮೋಸ ಮಾಡಿ ಕಸಿಯಲಾದ ಹಣವನ್ನು ಕೇಳುತ್ತಿದ್ದೇನೆ. ಹಾಗಾಗಿ ಇಂದು ನಾನು ಮಾಡುತ್ತಿರುವುದು ನನ್ನ ಮಕ್ಕಳ ಪಾಲಿನ ಹೋರಾಟವಾಗಿದೆ” ಎಂದಿದ್ದಾರೆ ನಿತೀಶ್. ‌

“ವಂಚಿತನಾದ ನಾನು ಬೇರೆ ಯಾವುದೇ ಮಹಿಳೆಗೆ ನ್ಯಾಯ ಸಲ್ಲಿಸಲು ಸಾಧ್ಯವಾಗುತ್ತದೆಯೇ ಎಂದು ನನಗೆ ಗೊತ್ತಾಗುತ್ತಿಲ್ಲ. ದಾಂಪತ್ಯ ನನಗೆ ಎಂದೂ ಗೌರವಾರ್ಹವಾದುದು. ನಾನು ಅದನ್ನು ನಂಬುತ್ತೇನೆ. ನನ್ನ ಹೆತ್ತವರ ದಾಂಪತ್ಯ ಸೇರಿದಂತೆ ಹಲವು ಯಶಸ್ವಿ ಕುಟುಂಬಗಳನ್ನು ನಾನು ನೋಡಿದ್ದೇನೆ” ಎಂದಿದ್ದಾರೆ ಅವರು.

ಕಳೆದ ತಿಂಗಳು ನಿತೀಶ್ ಭಾರದ್ವಾಜ್ ಅವರು ಅವರ ಪತ್ನಿ ಸ್ಮಿತಾ ಗೇಟ್ ವಿರುದ್ಧ ಕಿರುಕುಳ ಮತ್ತು ಅಶಿಸ್ತಿನ ವರ್ತನೆಯನ್ನು ಆರೋಪಿಸಿ ಪೊಲೀಸ್ ದೂರು ದಾಖಲಿಸಿದ್ದಾರೆ. ಸ್ಮಿತಾ ಗೇಟ್‌, ಮಧ್ಯಪ್ರದೇಶದ ಮಾನವ ಹಕ್ಕುಗಳ ಆಯೋಗದಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವರದಿಯ ಪ್ರಕಾರ, ತಮ್ಮ ಅವಳಿ ಹೆಣ್ಣು ಮಕ್ಕಳಾದ ದೇವಯಾನಿ ಮತ್ತು ಶಿವರಂಜನಿ ಅವರನ್ನು ಭೇಟಿಯಾಗದಂತೆ ನಿತೀಶ್‌ ಅವರನ್ನು ಸ್ಮಿತಾ ತಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ತಮ್ಮ ಹೆಣ್ಣುಮಕ್ಕಳ ಶಾಲೆಗಳಿಗೆ ತಾವು ಹೋಗುವುದನ್ನು ತಡೆದಿದ್ದಾರೆ. ಇದು ತಮ್ಮ ಮಾನಸಿಕ ನೆಮ್ಮದಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಅವರು ದೂರಿದ್ದಾರೆ.

ಜನಪ್ರಿಯ ಟಿವಿ ಸರಣಿ ಮಹಾಭಾರತದಲ್ಲಿ ಶ್ರೀಕೃಷ್ಣನ ಪಾತ್ರದಲ್ಲಿ ನಿತೀಶ್ ದೇಶಾದ್ಯಂತ ಖ್ಯಾತಿ ಗಳಿಸಿದ್ದರು. ವಿಷ್ಣು ಪುರಾಣ, ಮೊಹೆಂಜೊದಾರೋ, ಕೇದಾರನಾಥ್ ಮತ್ತಿತರ ಜನಪ್ರಿಯ ಧಾರಾವಾಹಿಗಳು ಮತ್ತು ಚಲನಚಿತ್ರಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Actor Dhanush: ಧನುಷ್‌-ರಶ್ಮಿಕಾ ಅಭಿನಯದ ಸಿನಿಮಾದ ಟೈಟಲ್‌ ರಿವೀಲ್‌!

Continue Reading
Advertisement
Triple Talaq
ದೇಶ8 mins ago

Triple Talaq: ಚಲಿಸುವ ರೈಲಿನಲ್ಲೇ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಭೂಪ

Covishield vaccine Puneeth Rakumar
ಸ್ಯಾಂಡಲ್ ವುಡ್15 mins ago

Covishield vaccine: ಕೋವಿಶೀಲ್ಡ್‌ ‌ ತಗೋಬೇಡಿ, ಒಳ್ಳೆಯದಲ್ಲ ಎಂದು ಅಪ್ಪುಗೆ ಮನವಿ ಮಾಡಿದ್ದ ಅಭಿಮಾನಿ: ಪೋಸ್ಟ್‌ ವೈರಲ್‌!

Kavya Maran
ಕ್ರೀಡೆ22 mins ago

Kavya Maran: ರೋಚಕ ಗೆಲುವು ಕಂಡು ಆಕಾಶಕ್ಕೆ ಜಿಗಿದಂತೆ ಕುಣಿದು ಸಂಭ್ರಮಿಸಿದ ಕಾವ್ಯಾ ಮಾರನ್; ವಿಡಿಯೊ ವೈರಲ್​

murder case stabbing bengaluru
ಕ್ರೈಂ24 mins ago

Murder Case: ಎಣ್ಣೆ ಪಾರ್ಟಿ ನಂತರ ರಿಕ್ಷಾ ಚಾಲಕನ ಇರಿದು ಕೊಂದ ರೌಡಿ ಶೀಟರ್‌

Elephant attack in Shivamogga
ಶಿವಮೊಗ್ಗ37 mins ago

Elephant attack : ನಿಲ್ಲದ ಕಾಡು ಪ್ರಾಣಿಗಳ ಹಾವಳಿ; ಶಿವಮೊಗ್ಗದಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿ

Lalu Prasad Yadav
ದೇಶ39 mins ago

Lalu Prasad Yadav: ಬಿಹಾರದಲ್ಲಿ ಲಾಲೂ ಪ್ರಸಾದ್‌ ಯಾದವ್‌ v/s ಲಾಲೂ ಪುತ್ರಿ

Kiccha Sudeep jailer fame kevin has composed stunt in max
ಸ್ಯಾಂಡಲ್ ವುಡ್43 mins ago

Kiccha Sudeep: ಕಿಚ್ಚ ಸುದೀಪ್ ಸಿನಿಮಾಗೆ ‘ಜೈಲರ್’ ಸ್ಟಂಟ್ ಮಾಸ್ಟರ್ ಎಂಟ್ರಿ!

prajwal revanna case hd revanna farm house
ಕ್ರೈಂ47 mins ago

Prajwal Revanna Case: ಪ್ರಜ್ವಲ್‌ ರೇವಣ್ಣ, ರೇವಣ್ಣ ಮನೆ ಇಂಚಿಂಚೂ ತಲಾಶ್, ಸಿಗ್ತಾ ಮಹತ್ವದ ಕ್ಲೂ?

Thomas Cup 2024
ಕ್ರೀಡೆ1 hour ago

Thomas Cup 2024: ಉಬೆರ್‌ ಕಪ್‌ ಬಳಿಕ ಥಾಮಸ್‌ ಕಪ್​ನಲ್ಲಿಯೂ ಮುಗ್ಗರಿಸಿದ ಭಾರತ

ACTOR DHANUSH Nagarjuna mysterious first look from Kubera
ಕಾಲಿವುಡ್1 hour ago

Actor Dhanush: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ನಾಗಾರ್ಜುನ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ17 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌