Celebrity Divorce: ಸಂಸಾರದಲ್ಲಿ ಬಿರುಕು, ಪತಿಯಿಂದ ದೂರವಾದ ಕಿರುತೆರೆ ನಟಿ - Vistara News

ಕಿರುತೆರೆ

Celebrity Divorce: ಸಂಸಾರದಲ್ಲಿ ಬಿರುಕು, ಪತಿಯಿಂದ ದೂರವಾದ ಕಿರುತೆರೆ ನಟಿ

ಹಿಂದಿ ಕಿರುತೆರೆ ನಟಿ ಚಾರು ಅಸೋಪಾ ಮತ್ತು ಮಾಡೆಲ್‌ ರಾಜೀವ್‌ ಸೇನ್‌ ತಮ್ಮ ದಾಂಪತ್ಯ ಜೀವನಕ್ಕೆ ಅಂತ್ಯ (celebrity divorce) ಹಾಡಿದ್ದಾರೆ.

VISTARANEWS.COM


on

rajeev sen and Charu Asopa divorce
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಬಾಲಿವುಡ್‌ನ ಕಿರುತೆರೆ ನಟಿ ಚಾರು ಅಸೋಪಾ ಮತ್ತು ನಟಿ ಸುಶ್ಮಿತಾ ಸೇನ್‌ ಅವರ ಸಹೋದರ ರಾಜೀವ್‌ ಸೇನ್‌ ನಡುವಿನ ದಾಂಪತ್ಯದಲ್ಲಿ ಬಿರುಗಾಳಿ ಎದ್ದು ಹಲವು ವರ್ಷಗಳೇ ಕಳೆದಿವೆ. ಇಷ್ಟು ದಿನ ಸಹಿಸಿಕೊಂಡಿದ್ದ ಈ ಜೋಡಿ ಇದೀಗ ಪರಸ್ಪರ ವಿಚ್ಛೇದನ ಪಡೆದುಕೊಂಡಿದ್ದು, ದೂರವಾಗಿರುವುದಾಗಿ (celebrity divorce) ಘೋಷಿಸಿಕೊಂಡಿದ್ದಾರೆ.

ಈ ಕುರಿತಾಗಿ ರಾಜೀವ್‌ ಸೇನ್‌ ಅವರೇ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಂಚಿಕೊಂಡಿದ್ದಾರೆ. ಪತ್ನಿ ಚಾರು ಅವರೊಂದಿಗೆ ಇರುವ ಫೋಟೋವನ್ನು ಹಂಚಿಕೊಂಡಿರುವ ರಾಜೀವ್‌, “ಗುಡ್‌ ಬೈ ಇಲ್ಲ. ಇಬ್ಬರು ಪರಸ್ಪರ ಜತೆ ಬದುಕಲಾರೆವು ಅಷ್ಟೇ. ಪ್ರೀತಿ ಇದ್ದೇ ಇರುತ್ತದೆ. ನಾವು ಯಾವಾಗಲೂ ನಮ್ಮ ಮಗಳಿಗೆ ಅಪ್ಪ ಅಮ್ಮನಾಗಿ ಇರುತ್ತೇವೆ” ಎಂದು ಬರೆದುಕೊಂಡಿದ್ದಾರೆ. ಅವರ ಈ ಸ್ಟೋರಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.


ಚಾರು ಮತ್ತು ರಾಜೀವ್‌ ಅವರು 2019ರಲ್ಲಿ ಗೋವಾದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮದುವೆಯಾದಾಗಿನಿಂದಲೂ ಅವರಿಬ್ಬರ ಮಧ್ಯೆ ಒಂದಿಲ್ಲೊಂದು ರೀತಿಯ ಸಮಸ್ಯೆಗಳಿತ್ತು. ಹಲವಾರು ಬಾರಿ ಅವರಿಬ್ಬರು ದೂರವಾಗಿದ್ದರು ಕೂಡ. ಮದುವೆಯಾಗಿ ಎರಡು ವರ್ಷಗಳಿಗೆ ಅವರಿಗೆ ಹೆಣ್ಣು ಮಗುವೊಂದು ಜನಿಸಿತು. ಕಳೆದ ವರ್ಷದೊಂದು ಅವರಿಬ್ಬರು ದೊಡ್ಡ ನಿರ್ಧಾರ ತೆಗೆದುಕೊಂಡು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ಅವರ ವಿಚ್ಛೇದನವಾಗಿದೆ.

ಇದನ್ನೂ ಓದಿ: Viral News: ಮುಖ್ಯಮಂತ್ರಿಗಳೇ ಎಣ್ಣೆ ರೇಟ್‌ ಜಾಸ್ತಿ ಮಾಡ್ಬೇಡಿ; BPL ಕಾರ್ಡ್‌ದಾರನ ವಾರ್ಷಿಕ ಲೆಕ್ಕ ಮುಂದಿಟ್ಟ ಕುಡುಕರ ಸಂಘ!
ಚಾರು ಅವರು ʼದೇವೋ ಕೆ ದೇವ್‌ ಮಹಾದೇವ್‌ʼ, ʼಬಾಲವೀರ್‌ʼ, ʼಮೆರೆ ಆಂಗನೆ ಮೇʼ, ʼಜೀಜಿ ಮಾʼ ಸೇರಿ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಚಾರು ಮೊದಲಿಗೆ ಉದ್ಯಮಿಯೊಬ್ಬರನ್ನು ರಾಜಸ್ಥಾನದಲ್ಲಿ ವರಿಸಿದ್ದರು. ಅದನ್ನು ಮುರಿದುಕೊಂಡ ಅವರು ನೀರಜ್‌ ಮಾಳ್ವಿಯಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡರು. ಅದನ್ನೂ ಮುರಿದುಕೊಂಡು ನಂತರ ರಾಜೀವ್‌ ಸೇನ್‌ರನ್ನು ಮದುವೆಯಾಗಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Tarak Ponnappa: ‘ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ’ಧಾರಾವಾಹಿಗೆ ವಿದಾಯ ಹೇಳಿದ ʻಕೆಜಿಎಫ್‌ʼ ಖ್ಯಾತಿಯ ನಟ!

Tarak Ponnappa: ಅಜರಾಮರ’ ಸಿನಿಮಾದ ಮೂಲಕ ಹಿರಿತೆರೆಗೆ ಪದಾರ್ಪಣೆ ಮಾಡಿದ ತಾರಕ್‌ ಮುಂದೆ ‘ಬೃಹಸ್ಪತಿ’ ಸಿನಿಮಾದಲ್ಲಿ ನಟಿಸಿದ್ದರು. ‘ಕೆಜಿಎಫ್’ ಸಿನಿಮಾದಲ್ಲಿ ಗ್ಯಾಂಗ್‌ಸ್ಟರ್ ಆಗಿ ಅಭಿನಯಿಸಿದ ತಾರಕ್ ‘ಮೋಕ್ಷ’, ‘ಯುವರಾಜ’ ಸಿನಿಮಾಗಳಲ್ಲಿ ಬಣ್ಣ ಹಚ್ಚಿ ದ್ದರು. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಪೌರಾಣಿಕ ಧಾರಾವಾಹಿ ‘ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ’ದಲ್ಲಿ ರೇಣು ಮಹಾರಾಜನ ಪಾತ್ರದಲ್ಲಿ ತಾರಕ್ ಪೊನ್ನಪ್ಪ (Tarak Ponnappa) ಪಾತ್ರ ನಿರ್ವಹಿಸಿದ್ದರು.ಕಾರಣಾಂತರಗಳಿಂದ ಈ ಧಾರಾವಾಹಿಗೆ ತಾರಕ್ ಪೊನ್ನಪ್ಪ ವಿದಾಯ ಹೇಳಿದ್ದಾರೆ.

VISTARANEWS.COM


on

Tarak Ponnappa out of udho udho sri renuka yellamma serial
Koo

ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಪೌರಾಣಿಕ ಧಾರಾವಾಹಿ ‘ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ’ದಲ್ಲಿ ರೇಣು ಮಹಾರಾಜನ ಪಾತ್ರದಲ್ಲಿ ತಾರಕ್ ಪೊನ್ನಪ್ಪ (Tarak Ponnappa) ಪಾತ್ರ ನಿರ್ವಹಿಸಿದ್ದರು.

ಕಾರಣಾಂತರಗಳಿಂದ ಈ ಧಾರಾವಾಹಿಗೆ ತಾರಕ್ ಪೊನ್ನಪ್ಪ ವಿದಾಯ ಹೇಳಿದ್ದಾರೆ. ಇನ್ನು ಮುಂದೆ ರೇಣು ಮಹಾರಾಜನ ಪಾತ್ರವನ್ನು ನಟ ಹರೀಶ್ ಪ್ರಭಾತ್ ನಿಭಾಯಿಸಲಿದ್ದಾರೆ.

ಈ ಧಾರಾವಾಹಿ ಶುರುವಾದಾಗಿನಿಂದಲೂ ತಾರಕ್ ಪೊನ್ನಪ್ಪ ಅವರು ರೇಣು ಮಹಾರಾಜನ ಪಾತ್ರವನ್ನು ನಿರ್ವಹಿಸಿದ್ದರು. ಅವರ ಘನತೆ ಗಾಂಭೀರ್ಯ ಅದ್ಭುತ ನಟನೆಗೆ ಜನರು ಖುಷಿಪಟ್ಟಿದ್ದರು.

‘ಅಜರಾಮರ’ ಸಿನಿಮಾದ ಮೂಲಕ ಹಿರಿತೆರೆಗೆ ಪದಾರ್ಪಣೆ ಮಾಡಿದ ತಾರಕ್‌ ಮುಂದೆ ‘ಬೃಹಸ್ಪತಿ’ ಸಿನಿಮಾದಲ್ಲಿ ನಟಿಸಿದ್ದರು. ‘ಕೆಜಿಎಫ್’ ಸಿನಿಮಾದಲ್ಲಿ ಗ್ಯಾಂಗ್‌ಸ್ಟರ್ ಆಗಿ ಅಭಿನಯಿಸಿದ ತಾರಕ್ ‘ಮೋಕ್ಷ’, ‘ಯುವರಾಜ’ ಸಿನಿಮಾಗಳಲ್ಲಿ ಬಣ್ಣ ಹಚ್ಚಿ ದ್ದರು.

ಇದನ್ನೂ ಓದಿ: Junior NTR: ಬಿಗ್‌ ಅಪ್‌ಡೇಟ್‌ ಹಂಚಿಕೊಂಡ ಜ್ಯೂನಿಯರ್‌ ಎನ್‌ಟಿಆರ್‌-ಪ್ರಶಾಂತ್​ ನೀಲ್!

ಈಗ ತಾರಕ್‌ ಅವರಿಗೆ ಬೇರೆ ಕೆಲಸಗಳ, ಕಮಿಟ್‌ಮೆಂಟ್‌ ಗಳಿರುವುದರಿಂದ ತಾರಕ್ ಪೊನ್ನಪ್ಪ ತಮ್ಮ ಪಾತ್ರಕ್ಕೆ ವಿದಾಯ ಹೇಳಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ.

Continue Reading

ಕಿರುತೆರೆ

Kannada Serials TRP: ಐಪಿಎಲ್​ ಎಫೆಕ್ಟ್‌: ಯಾವ ಧಾರಾವಾಹಿ ಈ ವಾರ ಟಾಪ್‌?

Kannada Serials TRP: ಎರಡು ಡಿಜಿಟ್ ಸಂಖ್ಯೆಯಲ್ಲಿ ಟಿಆರ್​ಪಿ (TRP) ಪಡೆದ ಧಾರಾವಾಹಿಗಳ ಟಿಆರ್‌ಪಿ ಭಾರಿ ಕುಸಿತ ಕಂಡಿದೆ. ಈ ವಾರ ಎಲ್ಲಾ ಧಾರಾವಾಹಿಗಳ ಟಿಆರ್​ಪಿಯಲ್ಲಿ ಇಳಿಕೆ ಕಂಡಿದೆ. ಕಲರ್ಸ್ ಕನ್ನಡದ ಧಾರಾವಾಹಿ ‘ರಾಮಾಚಾರಿ’ (Ramachari Serila Kannada) ಮೂರನೇ ಸ್ಥಾನ ಪಡೆದುಕೊಂಡಿದೆ. ಸೀತಾ ರಾಮ’ ಧಾರಾವಾಹಿಗೆ ನಾಲ್ಕನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮುನ್ನಡೆ ಸಾಧಿಸಿದೆ.

VISTARANEWS.COM


on

Kannada Serials TRP IPL Matches Effected On Kannada Serial
Koo

ಬೆಂಗಳೂರು: ಈ ಮೊದಲು ಬಿಗ್ ಬಾಸ್ ಬಂದಾಗ ಧಾರಾವಾಹಿಗಳ ಟಿಆರ್​ಪಿ (Kannada Serials TRP) ಕಡಿಮೆ ಆಗಿತ್ತು. ಎರಡು ಡಿಜಿಟ್ ಸಂಖ್ಯೆಯಲ್ಲಿ ಟಿಆರ್​ಪಿ (TRP) ಪಡೆದ ಧಾರಾವಾಹಿಗಳ ಟಿಆರ್‌ಪಿ ಭಾರಿ ಕುಸಿತ ಕಂಡಿದೆ. ಈ ವಾರ ಎಲ್ಲಾ ಧಾರಾವಾಹಿಗಳ ಟಿಆರ್​ಪಿಯಲ್ಲಿ ಇಳಿಕೆ ಕಂಡಿದೆ.

ಲಕ್ಷ್ಮೀ ನಿವಾಸ

ಸಾಯಿ ನಿರ್ಮಲ ಪ್ರೊಡಕ್ಷನ್‌ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ (lakshmi nivasa kannada serial) ಇದೆ. ಕಿರುತೆರೆಯಲ್ಲಿ ಈ ಹಿಂದೆ ಹೀರೊ ಹೀರೋಯಿನ್‌ಗಳಾಗಿ‌ ಮಿಂಚಿದ್ದ ಹಲವು ಅನುಭವಿ ಕಲಾವಿದರು ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿದ್ದಾರೆ. ಇಬ್ಬರು ಹೆಣ್ಣು ಮಕ್ಕಳ ಮದುವೆ ಮಾಡಬೇಕು ಎಂದು ಕಷ್ಟಪಡುವ ತಂದೆಯ ಕಥೆ-ವ್ಯಥೆಯ ಜೊತೆ ಸಾಕಷ್ಟು ಭಾವನಾತ್ಮಕ ವಿಚಾರಗಳನ್ನು ಈ ಧಾರಾವಾಹಿಯಲ್ಲಿ (Kannada Serials TRP) ತೋರಿಸಲಾಗಿದೆ. ಸದ್ಯ ಜಯಂತ್‌ನ ಅಸಲಿ ಮುಖ ಜಾಹ್ನವಿ ತಿಳಿಯಬೇಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಅದ್ದೂರಿ ಬಜೆಟ್​ನಲ್ಲಿ ಈ ಧಾರಾವಾಹಿ ಸಿದ್ಧವಾಗಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

‘ಪುಟ್ಟಕ್ಕನ ಮಕ್ಕಳು’

ಈ ವಾರ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಎರಡನೇ ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿ ಈ ಮೊದಲು ಎರಡಂಕಿ ಟಿಆರ್​ಪಿ ಪಡೆಯುತ್ತಿತ್ತು. ಆದರೆ, ಇತ್ತೀಚೆಗೆ ಟಿಆರ್​ಪಿ ಕುಸಿಯುತ್ತಿದೆ. ಈ ಧಾರಾವಾಹಿಯಲ್ಲಿ ಪುಟ್ಟಕ್ಕನ ಮೊದಲ ಮಗಳು ಸಹನಾ ಜೀವನ ಈಗಾಗಲೇ ಬೀದಿಗೆ ಬಿದ್ದಿದೆ. ಹಾಗೇ ಪುಟ್ಟಕ್ಕನ ಎರಡನೇ ಮಗಳು ಅತ್ತೆ ಬಂಗಾರಮ್ಮಳನ್ನು ಜೈಲಿಗೆ ಕಳುಹಿಸಿದ್ದಾಳೆ. ಈಗ ಬಂಗಾರಮ್ಮ ಜೈಲಿನಲ್ಲಿ ನಿಂತು ಪುಟ್ಟಕ ಮುಂದೇನೆ ತನ್ನ ಮನೆಯಿಂದಲೇ ಸ್ನೇಹಾಳನ್ನು ಮನೆಯಿಂದ ಆಚೆ ಹಾಕುವುದಾಗಿ ಹೇಳಿದ್ದಾಳೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: Kannada Serials TRP: ಟಿಆರ್‌ಪಿ ರೇಸ್‌ನಲ್ಲಿ ‘ಶ್ರಾವಣಿ ಸುಬ್ರಮಣ್ಯ’: ಟಾಪ್​ ಐದರಲ್ಲಿ ಇಲ್ಲ ʻರಾಮಾಚಾರಿʼ!

‘ರಾಮಾಚಾರಿ’

ಕಲರ್ಸ್ ಕನ್ನಡದ ಧಾರಾವಾಹಿ ‘ರಾಮಾಚಾರಿ’ (Ramachari Serila Kannada) ಮೂರನೇ ಸ್ಥಾನ ಪಡೆದುಕೊಂಡಿದೆ. ಮೌನ, ರುತ್ವಿಕ್ ಕೃಪಾಕರ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಕಿಟ್ಟಿಯ ಪಾತ್ರ ಕೂಡ ಜನ ಮೆಚ್ಚಿದ್ದಾರೆ. ಈ ಧಾರಾವಾಹಿಯ ಟಿಆರ್​ಪಿಯಲ್ಲಿ ಏರಿಳಿತ ಆಗುತ್ತಲೇ ಇದೆ. ಇದು ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿಗೆ ನಾಲ್ಕನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮುನ್ನಡೆ ಸಾಧಿಸಿದೆ. ಸದ್ಯ ಅಶೋಕ್ ಹಾಗೂ ಆಕೆಯ ಗೆಳೆತಿಯ ಜತೆ ಮದುವೆ ನಡೆಯುತ್ತಿದೆ. ಇದರಿಂದ ಟಿಆರ್​ಪಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಧಾರಾವಾಹಿ ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: Kannada Serials TRP: ಟಾಪ್‌ 4ನಲ್ಲಿ `ರಾಮಾಚಾರಿ’ ಧಾರಾವಾಹಿ; ರೇಸ್‌ನಲ್ಲಿ ಇಲ್ಲ ʻಸತ್ಯʼ, ʻಶ್ರೀರಸ್ತು ಶುಭಮಸ್ತುʼ!

‘ಶ್ರಾವಣಿ ಸುಬ್ರಮಣ್ಯ’

ಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡ ಧಾರಾವಾಹಿಯಲ್ಲಿ ಶ್ರಾವಣಿ ಸುಬ್ರಮಣ್ಯ ಪ್ರಸಾರ ಕಾಣುತ್ತಿದೆ. ಇದು ಐದನೇ ಸ್ಥಾನದಲ್ಲಿದೆ. ಮನೆಯಲ್ಲಿ ಸಿರಿವಂತಿಕೆಯ ತುಂಬಿದ್ದರೂ ಅಪ್ಪನ ಪ್ರೀತಿಗಾಗಿ ಹಾತೊರೆಯುವ ಮಗಳು ಒಂದೆಡೆಯಾದರೆ ಮನೆಯಲ್ಲಿ ಬಡತನವಿದ್ದರೂ ಪ್ರೀತಿಯಲ್ಲಿ ಶ್ರೀಮಂತರಾಗಿರುವ ಮಧ್ಯಮ ವರ್ಗದ ಕುಟುಂಬದ ಕಥೆಯ ಜತೆ ಎರಡು ಹೃದಯಗಳ ಕಥೆಯನ್ನು ಶ್ರಾವಣಿ ಸುಬ್ರಹ್ಮಣ್ಯ ಮೂಲಕ ಚಾನೆಲ್‌ ಪ್ರೇಕ್ಷಕರ ಮುಂದಿಟ್ಟಿದೆ. ಹಿರಿಯ ಕಲಾವಿದರಾದ ಮೋಹನ್‌ ಮತ್ತು ಬಾಲರಾಜ್‌ , ಕಿರುತೆರೆಯ ಖ್ಯಾತ ಕಲಾವಿದೆಯೆರಾದ ಅಪೂರ್ವ ಮತ್ತು ಸ್ನೇಹ ಇವರು ಜೊತೆ ಯುವ ಕಲಾವಿದರು ಈ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

Continue Reading

ಕಿರುತೆರೆ

Arun Yogiraj: ಕಿರುತೆರೆಗೆ ಕಾಲಿಟ್ಟ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್‌; ಯಾವ ಕಾರ್ಯಕ್ರಮ?

run Yogiraj: ಸದಾ ಹೊಸತನದ ಕಾರ್ಯಕ್ರಮಗಳ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ಸ್ಟಾರ್‌ ಸುವರ್ಣ ವಾಹಿನಿಯ ಜನ ಮೆಚ್ಚಿದ ಶೋ ಬೋಂಬಾಟ್‌ ಭೋಜನ. ಸಿಹಿಕಹಿ ಚಂದ್ರ ನಡೆಸಿಕೊಡುವ ಈ ಕಾರ್ಯಕ್ರಮ ಈಗಾಗಲೇ ಸಾವಿರ ಸಂಚಿಕೆ ಪೂರೈಸಿ ಹೊಸ ಮೈಲಿಗಲ್ಲು ಸೃಷ್ಟಿಸಿದೆ. ರಾಮ ನವಮಿ ಪ್ರಯುಕ್ತ ಈ ಕಾರ್ಯಕ್ರಮದಲ್ಲಿ ಅಯೋಧ್ಯೆಯ ರಾಮಲಲ್ಲಾ ವಿಗ್ರಹವನ್ನು ಕೆತ್ತಿರುವ ಶಿಲ್ಪಿ ಅರುಣ್ ಯೋಗಿರಾಜ್ ಭಾಗವಹಿಸಲಿದ್ದಾರೆ. ಈ ಸಂಚಿಕೆ ನಾಳೆ (ಏಪ್ರಿಲ್‌ 17) ಮಧ್ಯಾಹ್ನ 12 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

VISTARANEWS.COM


on

Arun Yogiraj
Koo

ಬೆಂಗಳೂರು: ಸ್ಟಾರ್ ಸುವರ್ಣ (Star Suvarna) ವಾಹಿನಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿರುವ ಅಡುಗೆ ಶೋ ʼಬೊಂಬಾಟ್ ಭೋಜನʼದಲ್ಲಿ ಈ ಬಾರಿ ʼರಾಮ ನವಮಿ’ (Rama Navami) ಹಬ್ಬದ ಪ್ರಯುಕ್ತ ವಿಶೇಷ ಸಂಚಿಕೆಯನ್ನು ಪ್ರಸಾರ ಮಾಡಲಾಗುತ್ತಿದೆ. ಈ ರಾಮನವಮಿಯ ವಿಶೇಷ ಸಂಚಿಕೆಯಲ್ಲಿ ವಿಶೇಷ ಅತಿಥಿ ಪಾಲ್ಗೊಳ್ಳಲಿದ್ದಾರೆ. ಅವರೇ ಅಯೋಧ್ಯೆಯ ರಾಮಲಲ್ಲಾ ವಿಗ್ರಹವನ್ನು ಕೆತ್ತಿರುವ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj).

ಅರುಣ್ ಯೋಗಿರಾಜ್ ಅವರ ಮನೆಯಲ್ಲಿ ರಾಮನವಮಿಯನ್ನು ಸಂಭ್ರಮದಿಂದ ಆಚರಿಸಲಾಗಿದೆ. ಈ ಸಡಗರಕ್ಕೆ ಸ್ಟಾರ್‌ ಸುವರ್ಣ ವಾಹಿನಿಯ ಬೊಂಬಾಟ್‌ ಭೋಜನ ತಂಡವೂ ಸಾಕ್ಷಿಯಾಗಿದೆ. ಕನ್ನಡ ಕಿರುತೆರೆಯಲ್ಲಿ ಇದೇ ಮೊದಲ ಬಾರಿಗೆ ಅರುಣ್ ಯೋಗಿರಾಜ್ ಅವರ ತುಂಬು ಕುಟುಂಬವನ್ನು ನೀವು ಈ ವಿಶೇಷ ಸಂಚಿಕೆಯಲ್ಲಿ ಕಾಣಬಹುದು. ಇನ್ನು ರಾಮಲಲ್ಲಾ ವಿಗ್ರಹದ ಬಗ್ಗೆ, ಅದನ್ನು ಕೆತ್ತುವಾಗ ಆದ ಅನುಭವದ ಬಗ್ಗೆ ಈ ವಿಶೇಷ ಸಂಚಿಕೆಯಲ್ಲಿ ಎಳೆಎಳೆಯಾಗಿ ಅವರು ಬಿಚ್ಚಿಟ್ಟಿದ್ದಾರೆ.

ʼಬೊಂಬಾಟ್ ಭೋಜನʼದ ರೂವಾರಿಯಾಗಿರುವ ಸಿಹಿ ಕಹಿ ಚಂದ್ರು ಅವರು ಅರುಣ್ ಯೋಗಿರಾಜ್ ಅವರಿಗೆ ಗೌರವಾರ್ಪಣೆಯೊಂದಿಗೆ ಸನ್ಮಾನ ನಡೆಸಿದ್ದಾರೆ. ಜತೆಗೆ ಈ ವಿಶೇಷ ಸಂಚಿಕೆಗೆ ಗಾಯಕ ಶ್ರೀ ಚಿನ್ಮಯಿ ಅತ್ರೇಯಸ್ ಅವರೂ ಅತಿಥಿಯಾಗಿ ಆಗಮಿಸಿದ್ದು, ರಾಮನಾಮವನ್ನು ಭಕ್ತಿಯಿಂದ ಹಾಡಿದ್ದಾರೆ.

ಯಾವಾಗ ಪ್ರಸಾರ?

ಅಂದ ಹಾಗೆ ʼಬೊಂಬಾಟ್ ಭೋಜನʼದ ರಾಮನವಮಿ ವಿಶೇಷ ಸಂಚಿಕೆಯು ಇದೇ ಬುಧವಾರ (ಏಪ್ರಿಲ್‌ 17) ಮಧ್ಯಾಹ್ನ 12 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

ಇದನ್ನೂ ಓದಿ: Kannada Serials TRP: ಟಿಆರ್‌ಪಿ ರೇಸ್‌ನಲ್ಲಿ ‘ಶ್ರಾವಣಿ ಸುಬ್ರಮಣ್ಯ’: ಟಾಪ್​ ಐದರಲ್ಲಿ ಇಲ್ಲ ʻರಾಮಾಚಾರಿʼ!

Continue Reading

ಕಿರುತೆರೆ

Namratha Gowda: ಸಖತ್‌ ಕ್ಯೂಟ್‌ ಆಗಿರೋ ಕಾರು ಖರೀದಿಸಿದ ನಮ್ರತಾ ಗೌಡ! ವೈಶಿಷ್ಟ್ಯವೇನು?

Namratha Gowda: ನಾಗಿಣಿ 2, ಬಿಗ್ ಬಾಸ್ ಸೀಸನ್ 10 (Bigg Boss Kannada 10) ಶೋ ಮೂಲಕ ಗಮನ ಸೆಳೆದ ನಮ್ರತಾ ಗೌಡ (Namratha Gowda) ಹುಟ್ಟುಹಬ್ಬದ ಸೆಲೆಬ್ರೇಶನ್ ಮೂಡ್‌ನಲ್ಲಿ ಇದ್ದಾರೆ. ಇದರ ನಡುವೆ ಪುಟಾಣಿ ಕಾರು ಖರೀದಿಸುವ ಮೂಲಕ ನಟಿ ಸಂಭ್ರಮಿಸಿದ್ದಾರೆ.‌ ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿ ನಮ್ರತಾ ಗೌಡ ಅವರ ಬೇಡಿಕೆ ಈಗ ಹೆಚ್ಚಾಗಿದೆ. ಕಿರುತೆರೆ, ಹಿರಿತೆರೆ ಮತ್ತು ಜಾಹೀರಾತುಗಳಿಗೆ ಅವಕಾಶಗಳು ಹರಿದು ಬರುತ್ತಿವೆ.

VISTARANEWS.COM


on

Namratha Gowda Buys New MG Comet EV Car
Koo

ಬಿಗ್ ಬಾಸ್ ಸೀಸನ್ 10 ಶೋ (Namratha Gowda) ಮೂಲಕ ಭಾರೀ ಜನಪ್ರಿಯತೆ ಪಡೆದುಕೊಂಡಿರುವ ನಟಿ ನಮ್ರತಾ ಗೌಡ ಹುಟ್ಟುಹಬ್ಬದ ಸಂಭ್ರಮದಲ್ಲಿಯೇ ಹೊಸ ಎಲೆಕ್ಟ್ರಿಕ್ ಕಾರು ಖರೀದಿಸಿದ್ದಾರೆ.

ನಮ್ರತಾ ಗೌಡ ಎಂಜಿ ಮೋಟಾರ್ ನಿರ್ಮಾಣದ ಕಾಮೆಟ್ ಇವಿ ಕಾರು ಖರೀದಿಸಿದ್ದು (Best EV Car in India), ನಮ್ರತಾ ಖುಷಿ ನೋಡಿ ಅಭಿಮಾನಿಗಳು ಶುಭ ಕೋರುತ್ತಿದ್ದಾರೆ.

ಇದನ್ನೂ ಓದಿ: Namratha Gowda: ವೃದ್ಧಾಶ್ರಮಕ್ಕೆ ನಮ್ರತಾ ಪೋಷಕರು ಸಹಾಯ ಹಸ್ತ; ವೋಟ್‌ಗೋಸ್ಕರ ಡ್ರಾಮ ಅಂದ್ರು ನೆಟ್ಟಿಗರು!

ಕಾಮೆಟ್ ಇವಿ (Comet EV Car) ಕಾರು ಸದ್ಯ ಮಾರುಕಟ್ಟೆಯಲ್ಲಿ ಪೇಸ್, ಪ್ಲೇ ಮತ್ತು ಪ್ಲಶ್ ಎನ್ನುವ ಮೂರು ವೆರಿಯೆಂಟ್‌ಗಳಲ್ಲಿ ಲಭ್ಯವಿದೆ.

ಹೊಸ ಕಾರಿನಲ್ಲಿ 3.3kW ಹೋಂ ಚಾರ್ಜರ್ ನೀಡಲಾಗಿದ್ದು, ಇದರೊಂದಿಗೆ 100% ಬ್ಯಾಟರಿ ಚಾರ್ಜ್ ಆಗಲು 7 ಗಂಟೆ ಸಮಯಾವಕಾಶ ತೆಗೆದುಕೊಳ್ಳುತ್ತದೆ.

Continue Reading
Advertisement
Neha Murder Case
ಹುಬ್ಬಳ್ಳಿ5 mins ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Lok sabha election-2024
Latest16 mins ago

Lok sabha election-2024: ಶತಾಯುಷಿಗಳೇ ಚುನಾವಣೆಯ ಬ್ರಾಂಡ್​ ಅಂಬಾಸಿಡರ್​ಗಳು!

Viral Video
ದೇಶ20 mins ago

Viral Video: 7 ಮಕ್ಕಳನ್ನು ದೇವರು ಕೊಟ್ಟಿದ್ದಾದರೆ ಬಡತನಕ್ಕೆ ಮೋದಿ ಹೇಗೆ ಕಾರಣ? ಮುಸ್ಲಿಂ ಮಹಿಳೆಗೆ ತರಾಟೆ!

AC Helmet
ದೇಶ25 mins ago

AC Helmet: ಬೇಸಿಗೆ ಎಫೆಕ್ಟ್​​; ಟ್ರಾಫಿಕ್ ಪೊಲೀಸರ ಹೆಲ್ಮೆಟ್​ಗೆ ಎಸಿ!

Tarak Ponnappa out of udho udho sri renuka yellamma serial
ಕಿರುತೆರೆ28 mins ago

Tarak Ponnappa: ‘ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ’ಧಾರಾವಾಹಿಗೆ ವಿದಾಯ ಹೇಳಿದ ʻಕೆಜಿಎಫ್‌ʼ ಖ್ಯಾತಿಯ ನಟ!

electoral Bond
ಪ್ರಮುಖ ಸುದ್ದಿ41 mins ago

Electoral Bond : ಎನ್​ಡಿಎ ಅಧಿಕಾರಕ್ಕೆ ಬಂದರೆ ಚುನಾವಣಾ ಬಾಂಡ್​ ವ್ಯವಸ್ಥೆ ಮರುಜಾರಿ; ನಿರ್ಮಲಾ ಸೀತಾರಾಮನ್​

boat capsizes in bhatkal
ಉತ್ತರ ಕನ್ನಡ45 mins ago

Boat Capsizes: ಭಾರೀ ಗಾಳಿ ಮಳೆಗೆ ಅರಬ್ಬೀ ಸಮುದ್ರದಲ್ಲಿ ಬೋಟ್‌ ಮುಳುಗಡೆ, ನಾಲ್ವರ ರಕ್ಷಣೆ; ಇಲ್ಲಿದೆ ವಿಡಿಯೋ

Mahesh Babu SS Rajamouli return from Dubai
South Cinema1 hour ago

Mahesh Babu: ಹೇಗಿದೆ ಮಹೇಶ್‌ ಬಾಬು ಲುಕ್‌? ರಾಜಮೌಳಿ ಪ್ಲ್ಯಾನ್​ ಉಲ್ಟಾ!

MS Dhoni
ಪ್ರಮುಖ ಸುದ್ದಿ1 hour ago

MS Dhoni : ಸಿಎಸ್​ಕೆ ವಾರ್ಷಿಕೋತ್ಸವದಂದೇ 101 ಮೀಟರ್ ಸಿಕ್ಸರ್ ಬಾರಿಸಿದ ಧೋನಿ!

Modi In Karnataka
ಪ್ರಮುಖ ಸುದ್ದಿ2 hours ago

PM Narendra Modi: ಬೆಂಗಳೂರಿನಲ್ಲಿ ಇಂದು ಮೋದಿ; ಸಂಚಾರಕ್ಕೆ ಪರ್ಯಾಯ ರಸ್ತೆಗಳ ಸೂಚನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ5 mins ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ7 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ20 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20246 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

ಟ್ರೆಂಡಿಂಗ್‌