World Cup History: 2007ರ ವಿಶ್ವಕಪ್‌; ಟೂರ್ನಿಯಲ್ಲಿ ಹತ್ತಾರು ಮೇನಿಯಾ, ಆಸ್ಟ್ರೇಲಿಯಾ ಏಕಮೇವಾದ್ವಿತೀಯ! Vistara News

ಕ್ರಿಕೆಟ್

World Cup History: 2007ರ ವಿಶ್ವಕಪ್‌; ಟೂರ್ನಿಯಲ್ಲಿ ಹತ್ತಾರು ಮೇನಿಯಾ, ಆಸ್ಟ್ರೇಲಿಯಾ ಏಕಮೇವಾದ್ವಿತೀಯ!

World Cup History: 2007ರ ಏಕದಿನ ವಿಶ್ವಕಪ್‌ ಟೂರ್ನಿಯುದ್ದಕ್ಕೂ ಆಸ್ಟ್ರೇಲಿಯಾ ಏಕಚಕ್ರಾಧಿಪತ್ಯ ಸಾಧಿಸಿದರೂ ವಿಶ್ವಕಪ್‌ ಟೂರ್ನಿಯ ಕೌತುಕ, ರೋಚಕ ಪಂದ್ಯಾಟ, ತಿರುವು, ವಿವಾದಗಳಿಗೇನೂ ಕೊರತೆ ಇರಲಿಲ್ಲ. ಒಂದು ಸಲ 2007ಕ್ಕೆ ಹೋಗಿ ಬರೋಣ.

VISTARANEWS.COM


on

2007 World Cup Winner
2007ರ ಏಕದಿನ ವಿಶ್ವಕಪ್‌ ಚಾಂಪಿಯನ್‌ ಆಸ್ಟ್ರೇಲಿಯಾ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹೊಸ ತಂಡಗಳ ಸೇರ್ಪಡೆ, ನಿಯಮಗಳ ಬದಲಾವಣೆ ಸೇರಿ ಹೊಸತನದೊಂದಿಗೆ ಆರಂಭವಾದ 2007ರ ಏಕದಿನ ವಿಶ್ವಕಪ್‌ ಟೂರ್ನಿಯು (2007 ODI World Cup) ಹತ್ತಾರು ವಿವಾದ, ಮೈದಾನದಲ್ಲಿ ಮದಗಜಗಳ ಕಾದಾಟ, ಭಾರತ ತಂಡಕ್ಕೆ ಎಂದೂ ಮರೆಯಲಾಗದ ನಿರಾಸೆ, ಆಸ್ಟ್ರೇಲಿಯಾ ಪಾರಮ್ಯ, ಶ್ರೀಲಂಕಾ ಹೋರಾಟಕ್ಕೆ ಸಾಕ್ಷಿಯಾಯಿತು. ರೋಚಕ ಪಂದ್ಯಗಳು ಎಂದಿನಂತೆ ಕ್ರಿಕೆಟ್‌ ಟೂರ್ನಿಯನ್ನು (World Cup History) ಮೆರುಗುಗೊಳಿಸಿದವು. ಬ್ಯಾಟರ್‌ ಹಾಗೂ ಬೌಲರ್‌ಗಳ ಮೊನಚಾದ ಆಟವು ಕ್ರಿಕೆಟ್‌ ಜಗತ್ತನ್ನು ಬೆರಗುಗೊಳಿಸಿತು. ಅದರಲ್ಲೂ, ರಿಕಿ ಪಾಂಟಿಂಗ್‌ (Ricky Ponting) ಎಂಬ ಚಾಣಾಕ್ಷ ನಾಯಕ ಹಾಗೂ ಬಲಿಷ್ಠ ಆಟಗಾರರನ್ನು ಹೊಂದಿದ್ದ ಆಸ್ಟ್ರೇಲಿಯಾ ಮತ್ತೊಮ್ಮೆ ಕ್ರಿಕೆಟ್‌ ಲೋಕವನ್ನು ನಿಬ್ಬೆರಗುಗೊಳಿಸಿತು. ಹಾಗಾದರೆ, 2007ರ ವಿಶ್ವಕಪ್‌ನ ರೋಚಕ ಕ್ಷಣಗಳು ಯಾವವು? ಹೊಸ ತಂಡ, ನೂತನ ನಿಯಮಗಳು ಹೇಗಿದ್ದವು? ಯಾವ ವಿವಾದಗಳು ಚರ್ಚೆಗೆ ಬಂದವು? ಯಾವ ತಂಡದ ಪ್ರದರ್ಶನ ಹೇಗಿತ್ತು? ರೋಚಕ ಕ್ಷಣಗಳು ಯಾವವು? ಭಾರತ ತಂಡ (Indian Cricket Team) ಹೇಗೆ ನಿರಾಸೆ ಅನುಭವಿಸಿತು ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಕೆರಿಬಿಯನ್‌ ನಾಡಲ್ಲಿ ಮೊದಲ ವಿಶ್ವಕಪ್

ಮೊದಲ ಹಾಗೂ ದ್ವಿತೀಯ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಚಾಂಪಿಯನ್‌ ಆದ ವೆಸ್ಟ್‌ ಇಂಡೀಸ್‌ಗೆ 2007ರವರೆಗೆ ತವರು ನೆಲದಲ್ಲಿ ವಿಶ್ವಕಪ್‌ ಆಯೋಜಿಸುವ ಭಾಗ್ಯ ಒದಗಿರಲಿಲ್ಲ. ಆದರೆ, 2007ರಲ್ಲಿ ಮೊದಲ ಬಾರಿಗೆ ವೆಸ್ಟ್‌ ಇಂಡೀಸ್‌ ವಿಶ್ವಕಪ್‌ ಆಯೋಜನೆಯ ಜವಾಬ್ದಾರಿ ನಿಭಾಯಿಸಿತು. ಜಮೈಕಾ ಸರ್ಕಾರವು ನೂರಾರು ಕೋಟಿ ರೂಪಾಯಿ ವ್ಯಯಿಸಿ ಒಟ್ಟು ಎಂಟು ಕ್ರೀಡಾಂಗಣಗಳಲ್ಲಿ ಸಕಲ ವ್ಯವಸ್ಥೆಯೊಂದಿಗೆ ಪಂದ್ಯಗಳನ್ನು ಆಯೋಜಿಸಿತು. 9ನೇ ಆವೃತ್ತಿಯ ವಿಶ್ವಕಪ್‌ ಪಂದ್ಯಗಳಿಗಾಗಿಯೇ ಕ್ರೀಡಾಂಗಣಗಳನ್ನು ನವೀಕರಣಗೊಳಿಸಿ ಮೊದಲ ಆಯೋಜನೆಯಲ್ಲಿಯೇ ಗಮನ ಸೆಳೆಯಿತು. ಆ ಮೂಲಕ ಅಮೆರಿಕ ಲಾಬಿ ಮಧ್ಯೆಯೂ ವಿಶ್ವಕಪ್‌ ಆಯೋಜನೆಯ ಅವಕಾಶ ಪಡೆದ ವೆಸ್ಟ್‌ ಇಂಡೀಸ್‌ ತನ್ನ ಸಾಮರ್ಥ್ಯ ಪ್ರದರ್ಶಿಸಿತು.

ಎರಡು ಹೊಸ ತಂಡ ಸೇರ್ಪಡೆ, ಮಾದರಿ ಬದಲು

2007ರ ವಿಶ್ವಕಪ್‌ನಲ್ಲಿ ಒಟ್ಟು 16 ತಂಡಗಳು ಕಾದಾಡಿದವು. 2003ರ ವಿಶ್ವಕಪ್‌ನಲ್ಲಿ 14 ತಂಡಗಳು ಪಾಲ್ಗೊಂಡರೆ, 2007ರಲ್ಲಿ ಐರ್ಲೆಂಡ್‌ ಹಾಗೂ ಬರ್ಮುಡಾ ತಂಡಗಳು ಮೊದಲ ಬಾರಿಗೆ ವಿಶ್ವಕಪ್‌ ಕ್ರಿಕೆಟ್‌ಗೆ ಅರ್ಹತೆ ಪಡೆದು ಒಟ್ಟು 16 ತಂಡಗಳು ಪಾಲ್ಗೊಂಡವು. ಹಾಗಾಗಿ, ಟೂರ್ನಿಯ ಕೆಲ ನಿಯಮಗಳನ್ನು ಮಾರ್ಪಾಡು ಮಾಡಲಾಯಿತು. ಎರಡು ಗ್ರೂಪ್‌ಗಳ ಬದಲು ನಾಲ್ಕು ಗ್ರೂಪ್‌ಗಳನ್ನಾಗಿ ಮಾಡಿ, ಒಂದೊಂದು ಗ್ರೂಪ್‌ನಲ್ಲಿ 4 ತಂಡಗಳು ಸ್ಥಾನ ಪಡೆದವು. ಭಾರತವು ಶ್ರೀಲಂಕಾ, ಬಾಂಗ್ಲಾದೇಶ ಹಾಗೂ ಬರ್ಮುಡಾ ತಂಡಗಳನ್ನೊಳಗೊಂಡ ಬಿ ಗ್ರೂಪ್‌ನಲ್ಲಿ ಇತ್ತು. ಗ್ರೂಪ್‌ ಹಂತದ ಪಂದ್ಯಗಳಲ್ಲಿ ಅಗ್ರ ಎರಡು ಸ್ಥಾನ ಪಡೆದ ತಂಡಗಳು ಸೂಪರ್‌ 8 ರೌಂಡ್‌ಗೆ ಅರ್ಹತೆ ಪಡೆದವು. ಸೂಪರ್‌ 8 ಹಂತದಲ್ಲಿ ತಲಾ 7 ಪಂದ್ಯ ಆಡಿದ 8 ತಂಡಗಳಲ್ಲಿ ನಾಲ್ಕು ತಂಡ ಸೆಮಿಫೈನಲ್‌ಗೆ, ಸೆಮೀಸ್‌ನಲ್ಲಿ ಗೆದ್ದ ಎರಡು ತಂಡಗಳು ಫೈನಲ್‌ಗೆ ಅರ್ಹತೆ ಪಡೆದವು.

ಇದನ್ನೂ ಓದಿ: World Cup History : ಆಂಗ್ಲರ ನಾಡಲ್ಲಿ ನಡೆದ 1999ರ ವಿಶ್ವ ಕಪ್​ ಆಸ್ಟ್ರೇಲಿಯಾ ತಂಡದ ಪಾಲಾಗಿದ್ದು ಹೀಗೆ

ಶಾಕ್‌ ಕೊಟ್ಟ ಬಾಂಗ್ಲಾ, ಲೀಗ್‌ ಹಂತದಲ್ಲೇ ಹೊರಬಿದ್ದ ಭಾರತ

ಟ್ರಿನಿಡಾಡ್‌ನಲ್ಲಿ ನಡೆದ ಲೀಗ್‌ ಹಂತದ ಮೊದಲ ಪಂದ್ಯದಲ್ಲಿಯೇ ರಾಹುಲ್‌ ದ್ರಾವಿಡ್‌ ಪಡೆಯು ಬಾಂಗ್ಲಾದೇಶ ತಂಡದ ಎದುರು ಮಂಡಿಯೂರಿದ್ದು ತುಂಬಲಾರದ ನಷ್ಟವಾಯಿತು. ಬಾಂಗ್ಲಾ ವಿರುದ್ಧ 191 ರನ್‌ಗೆ ಆಲೌಟ್‌ ಆಗಿ, ಇದನ್ನು ಬಾಂಗ್ಲಾ ಸುಲಭವಾಗಿ ಚೇಸ್‌ ಮಾಡಿತು. ಎರಡನೇ ಪಂದ್ಯದಲ್ಲಿ ಕ್ರಿಕೆಟ್‌ ಶಿಶು ಬರ್ಮುಡಾ ವಿರುದ್ಧ ದಾಖಲೆಯ 257 ರನ್‌ಗಳ ಅಂತರದಲ್ಲಿ ಭಾರತ ತಂಡ ಗೆಲುವು ಸಾಧಿಸಿದರೂ ಲೀಗ್‌ ಹಂತದ ಮೂರನೇ ಹಾಗೂ ಕೊನೆಯ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 69 ರನ್‌ಗಳ ಅಂತರದಲ್ಲಿ ಸೋಲನುಭವಿಸುವ ಮೂಲಕ ರಾಹುಲ್‌ ದ್ರಾವಿಡ್‌ ಬಳಗವು ಮನೆಯ ದಾರಿ ಹಿಡಿಯಿತು. ಮತ್ತೊಂದೆಡೆ, ಐರ್ಲೆಂಡ್‌ ವಿರುದ್ಧ ಪಂದ್ಯ ಸೋತ ಪಾಕಿಸ್ತಾನವೂ ಲೀಗ್‌ ಹಂತದಲ್ಲೇ ವಿಶ್ವಕಪ್‌ ಟೂರ್ನಿಯಿಂದ ಹೊರಬಿತ್ತು. ಭಾರತ ವಿರುದ್ಧದ ಪಂದ್ಯದ ವೇಳೆ ರಾಬಿನ್‌ ಉತ್ತಪ್ಪ ಕ್ಯಾಚ್‌ ಹಿಡಿದ ಬರ್ಮುಡಾ ತಂಡದ ಡ್ವೇನ್‌ ಲೆವರಾಕ್‌ ಸಂಭ್ರಮದ ದೃಶ್ಯವು ಈಗಲೂ ಕಣ್ಣಿಗೆ ಕಟ್ಟಿದಂತಿದೆ. ವಿಶ್ವಕಪ್‌ ಲೀಗ್‌ ಹಂತದಲ್ಲೇ ಹೊರಬಿದ್ದ ಭಾರತ ತಂಡದ ಆಟಗಾರರ ಮನೆಗೆ ಕಲ್ಲೆಸೆದ ಪ್ರಕರಣಗಳು ಕೂಡ ನಡೆದಿದ್ದು ಈಗ ಇತಿಹಾಸ.

ಸೂಪರ್‌ 8ರಲ್ಲಿ 4 ತಂಡಗಳ ಸಾಧನೆ ‘ಸೂಪರ್‌’, ಲಂಕಾ ಫೈನಲ್‌ಗೆ ಲಗ್ಗೆ

ಲೀಗ್‌ ಹಂತದಲ್ಲಿ ಉತ್ತಮ ಪ್ರದರ್ಶನ ತೋರಿದ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬಾಂಗ್ಲಾದೇಶ, ನ್ಯೂಜಿಲ್ಯಾಂಡ್‌, ಇಂಗ್ಲೆಂಡ್‌, ವೆಸ್ಟ್‌ ಇಂಡೀಸ್‌ ಹಾಗೂ ಐರ್ಲೆಂಡ್‌ ಸೂಪರ್‌ 8ರ ಹಂತ ತಲುಪಿದವು. ಸೂಪರ್‌ 8ರ ಸ್ಟೇಜ್‌ನಲ್ಲಿ ಎಂಟೂ ತಂಡಗಳು ತಲಾ ಏಳು ಪಂದ್ಯ ಆಡಿದವು. ಆಸ್ಟ್ರೇಲಿಯಾ, ಶ್ರೀಲಂಕಾ, ನ್ಯೂಜಿಲ್ಯಾಂಡ್‌ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಅಧಿಕಾರಯುತವಾಗಿ ಸೆಮಿಫೈನಲ್‌ ತಲುಪಿದವು. ತವರು ನೆಲದಲ್ಲಿಯೇ ನಡೆದ ಟೂರ್ನಿಯಲ್ಲಿ ವೆಸ್ಟ್‌ ಇಂಡೀಸ್‌ ತಂಡವು ಸೂಪರ್‌ 8ರಲ್ಲಿ ಆಡಿದ 7 ಪಂದ್ಯಗಳ ಪೈಕಿ ಕೇವಲ 2ರಲ್ಲಿ ಗೆದ್ದು ಸೆಮೀಸ್‌ ಕನಸು ಕೈಚೆಲ್ಲಿತು. ಸೆಮಿಫೈನಲ್‌ನಲ್ಲಿ ನ್ಯೂಜಿಲ್ಯಾಂಡ್‌ ತಂಡವನ್ನು 81 ರನ್‌ಗಳಿಂದ ಸೋಲಿಸಿದ ಶ್ರೀಲಂಕಾ, ದಕ್ಷಿಣ ಆಫ್ರಿಕಾ ತಂಡವನ್ನು 7 ವಿಕೆಟ್‌ಗಳಿಂದ ಮಣಿಸಿದ ಆಸ್ಟ್ರೇಲಿಯಾ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟವು.

4 ಎಸೆತಗಳಲ್ಲಿ 4 ವಿಕೆಟ್‌ ಪಡೆದು ಲಸಿತ್‌ ಮಾಲಿಂಗ ಕಮಾಲ್‌

ಶ್ರೀಲಂಕಾ ವೇಗಿ, ಯಾರ್ಕರ್‌ ಸ್ಪೆಷಲಿಸ್ಟ್‌ ಲಸಿತ್‌ ಮಾಲಿಂಗ ಅವರು ಸತತ ನಾಲ್ಕು ಎಸೆತಗಳಲ್ಲಿ ನಾಲ್ಕು ವಿಕೆಟ್‌ ಪಡೆಯುವ ದಾಖಲೆ ಬರೆದರು. ದಕ್ಷಿಣ ಆಫ್ರಿಕಾ ವಿರುದ್ಧ ಗಯಾನದಲ್ಲಿ ನಡೆದ ಸೂಪರ್‌ 8 ಪಂದ್ಯದ ವೇಳೆ ಶ್ರೀಲಂಕಾ ನೀಡಿದ 209 ರನ್‌ಗಳ ಸಾಧಾರಣ ಮೊತ್ತ ಬೆನ್ನತ್ತಿದ್ದ ಗ್ರೇಮ್‌ ಸ್ಮಿತ್‌ ಬಳಗವು 44.4 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು ಸುಲಭ ಗೆಲುವಿನ ಸಮೀಪ ಇತ್ತು. ಆದರೆ, 45ನೇ ಓವರ್‌ನ ಕೊನೆಯ ಎಸೆತಗಳಲ್ಲಿ ಲಸಿತ್‌ ಮಾಲಿಂಗ ಎರಡು ವಿಕೆಟ್‌ ಪಡೆದರು. 47ನೇ ಓವರ್‌ನ ಮೊದಲ ಎಸೆತದಲ್ಲಿಯೇ ಮಾಲಿಂಗ ಅವರು ಜಾಕ್‌ ಕಾಲಿಸ್‌ ವಿಕೆಟ್‌ ಪಡೆದು ಹ್ಯಾಟ್ರಿಕ್‌ ಸಾಧನೆ ಮಾಡಿದರು. ಇನ್ನು ನಂತರದ ಎಸೆತದಲ್ಲಿ ಮಖಾಯ ಎನ್‌ಟಿನಿ ವಿಕೆಟ್‌ ಪಡೆದು ದಾಖಲೆ ಸೃಷ್ಟಿಸಿದರು. ಆ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸತತ ನಾಲ್ಕು ಎಸೆತಗಳಲ್ಲಿ ನಾಲ್ಕು ವಿಕೆಟ್‌ ಕಿತ್ತ ಮೊದಲ ಬೌಲರ್‌ ಎನಿಸಿದರು. ಆದರೂ, ಆ ಪಂದ್ಯದಲ್ಲಿ ಲಂಕಾ ಒಂದು ವಿಕೆಟ್‌ನಿಂದ ಸೋಲನುಭವಿಸಿತು.

ಇದನ್ನೂ ಓದಿ: World Cup History : ಎರಡು ಪಂದ್ಯಗಳ ವಾಕ್​ ಓವರ್ ಪಡೆದು ವಿಶ್ವ ಕಪ್​ ಗೆದ್ದ ಶ್ರೀಲಂಕಾ!

ಬಾಬ್‌ ವೂಲ್ಮರ್‌ ಶಂಕಾಸ್ಪದ ಸಾವು

ಪಾಕಿಸ್ತಾನದ ಕೋಚ್‌ ಆಗಿದ್ದ, ಬ್ರಿಟನ್‌ ಮೂಲದ ಬಾಬ್‌ ವೂಲ್ಮರ್‌ ಅವರ ಸಾವು 2007ರ ವಿಶ್ವಕಪ್‌ ಟೂರ್ನಿಯ ಕಪ್ಪು ಚುಕ್ಕೆಯಾಗಿದೆ. ಐರ್ಲೆಂಡ್‌ ವಿರುದ್ಧ ಪಾಕಿಸ್ತಾನ ಸೋಲನುಭವಿಸಿದ ಒಂದು ದಿನ ನಂತರ ಅಂದರೆ 2007ರ ಮಾರ್ಚ್‌ 18ರಂದು ಹೋಟೆಲ್‌ ಕೋಣೆಯಲ್ಲಿ 58 ವರ್ಷದ ಬಾಬ್‌ ವೂಲ್ಮರ್‌ ಶವವಾಗಿ ಪತ್ತೆಯಾಗಿದ್ದರು. ಮರಣೋತ್ತರ ಪರೀಕ್ಷೆ ನಡೆಸಿದ ಜಮೈಕಾ ಪೊಲೀಸರು, ಸಾವಿನ ಕುರಿತು ಈಗಲೇ ಏನೂ ಹೇಳಲು ಆಗುವುದಿಲ್ಲ ಎಂದರು. ಒಂದು ದಿನದ ತನಿಖೆ ಬಳಿಕ, ಬಾಬ್‌ ವೂಲ್ಮರ್‌ ಅವರನ್ನು ಕತ್ತುಹಿಸುಕಿ ಕೊಲೆ ಮಾಡಲಾಗಿದೆ ಎಂದರು. ಅಷ್ಟೇ ಏಕೆ, ಕೆಲ ದಿನಗಳ ವಿಸ್ತೃತ ತನಿಖೆ ಬಳಿಕ ‘ಬಾಬ್‌ ವೂಲ್ಮರ್’‌ ಅವರದ್ದು ಸಹಜ ಸಾವು ಎಂದು ಷರಾ ಬರೆದರು. ಇಂದಿಗೂ ಬಾಬ್‌ ವೂಲ್ಮರ್‌ ಅವರ ಸಾವಿಗೆ ಕಾರಣ ಏನು ಎಂಬುದು ನಿಗೂಢವಾಗಿಯೇ ಉಳಿದಿದೆ.

ಹಿಸ್ಟರಿ ರಿಪೀಟ್;‌ ಆಸ್ಟ್ರೇಲಿಯಾ ವರ್ಸಸ್‌ ಶ್ರೀಲಂಕಾ ಫೈನಲ್‌

ಬಾರ್ಬಡಾಸ್‌ನ ಕೆನ್ಸಿಂಗ್‌ಟನ್‌ ಓವಲ್‌ ಕ್ರೀಡಾಂಗಣವು 2007ರ ಏಪ್ರಿಲ್‌ 28ರಂದು ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ತಂಡಗಳ ಫೈನಲ್‌ ಕಾಳಗಕ್ಕೆ ಸಾಕ್ಷಿಯಾಯಿತು. 1996ರ ಬಳಿಕ ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಮತ್ತೆ ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ಎದುರಾದವು. ಆದರೆ, 1996ರಂತೆ 2007ರಲ್ಲಿ ಫೈನಲ್‌ನಲ್ಲಿ ಗೆಲುವು ಸಾಧಿಸಲು ಶ್ರೀಲಂಕಾ ತಂಡಕ್ಕೆ ಆಗಲಿಲ್ಲ. ಮಳೆಯಿಂದಾಗಿ ವಿಳಂಬವಾದ ಪಂದ್ಯವನ್ನು 38 ಓವರ್‌ಗಳಿಗೆ ಸೀಮಿತಗೊಳಿಸಲಾಯಿತು. ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ರಿಕಿ ಪಾಂಟಿಂಗ್‌ ನಿರ್ಧಾರವನ್ನು ಆಸ್ಟ್ರೇಲಿಯಾ ಬ್ಯಾಟರ್‌ಗಳು ಸಮರ್ಥಿಸಿಕೊಂಡರು.

ಟೂರ್ನಿಯುದ್ದಕ್ಕೂ ನಿರೀಕ್ಷಿತ ಪ್ರದರ್ಶನ ತೋರದ ಆ್ಯಡಮ್‌ ಗಿಲ್‌ಕ್ರಿಸ್ಟ್‌, ಫೈನಲ್‌ನಲ್ಲಿ ನಿರೀಕ್ಷಿಗೂ ಮೀರಿದ ಆಟ ಪ್ರದರ್ಶಿಸಿದರು. ಗಿಲ್‌ಕ್ರಿಸ್ಟ್‌ ಅಬ್ಬರದ 149 ರನ್‌ಗಳ ನೆರವಿನಿಂದ ಆಸ್ಟ್ರೇಲಿಯಾ 38 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 284 ರನ್‌ ಗಳಿಸಿತು. ಗುರಿ ಬೆನ್ನತ್ತಿದ ಶ್ರೀಲಂಕಾ ಅಷ್ಟೇನೂ ಅಬ್ಬರದ ಅಟವಾಡದೆ, 36 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 215 ರನ್‌ ಗಳಿಸಿತು. ಇದೇ ವೇಳೆ ಮಂದ ಬೆಳಕಿನ ಕಾರಣ ಪಂದ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಆಗ, ಆಸ್ಟ್ರೇಲಿಯಾ ಆಟಗಾರರು ಘೋಷಣೆಗೂ ಮೊದಲೇ ಸಂಭ್ರಮಾಚರಣೆ ಮಾಡಿದರು. ಆದರೆ, ಅಂಪೈರ್‌ಗಳು ಆಟ ಮುಗಿದಿಲ್ಲ ಎಂದು ಘೋಷಿಸಿ, ಎರಡೂ ತಂಡಗಳ ನಾಯಕರ ಒಪ್ಪಿಗೆ ಮೇರೆಗೆ ಶ್ರೀಲಂಕಾಗೆ 3 ಓವರ್‌ಗಳಲ್ಲಿ 69 ರನ್‌ ಗುರಿ ನೀಡಿದರು.

ಫೈನಲ್‌ ಪಂದ್ಯದ ಹೈಲೈಟ್ಸ್‌

ಕ್ರೀಡಾಂಗಣದಲ್ಲಿ ಫ್ಲಡ್‌ಲೈಟ್‌ ಇಲ್ಲದ ಕಾರಣ ಕೊನೆಯ ಮೂರು ಓವರ್‌ಗಳನ್ನು ಬಹುತೇಕ ಕತ್ತಲಲ್ಲಿಯೇ ಆಡಿದಂತಾಯಿತು. ಅಸಹಾಯಕವಾದ ಶ್ರೀಲಂಕಾ 37 ರನ್‌ಗಳಿಂದ ಸೋಲೊಪ್ಪಿಕೊಂಡಿತು. ಗೊಂದಲದ ತೀರ್ಮಾನಗಳನ್ನು ತೆಗೆದುಕೊಂಡ ಅಂಪೈರ್‌ಗಳು ಬಳಿಕ ಕ್ಷಮೆಯಾಚಿಸಿದರು. ಈಗಲೂ ಫೈನಲ್‌ ಪಂದ್ಯದಲ್ಲಿ ಅಂಪೈರ್‌ಗಳ ತೀರ್ಮಾನವು ವಿವಾದಾತ್ಮಕವಾಗಿಯೇ ಇದೆ. ಮತ್ತೊಂದೆಡೆ, ಸತತ ಮೂರನೇ ಬಾರಿಗೆ ಆಸ್ಟ್ರೇಲಿಯಾ ವಿಶ್ವಕಪ್‌ ಎತ್ತಿಹಿಡಿಯಿತು. ಒಂದೇ ಒಂದು ಪಂದ್ಯ ಸೋಲದೆ ಆಸ್ಟ್ರೇಲಿಯಾ ಚಾಂಪಿಯನ್‌ ಎನಿಸಿತು. ಟೂರ್ನಿಯುದ್ದಕ್ಕೂ 26 ವಿಕೆಟ್‌ ಪಡೆದ ಆಸ್ಟ್ರೇಲಿಯಾದ ಗ್ಲೆನ್‌ ಮೆಕ್‌ಗ್ರಾತ್‌ ಪ್ಲೇಯರ್‌ ಆಫ್‌ ದಿ ಟೂರ್ನಿ (ಮ್ಯಾನ್‌ ಆಫ್‌ ದಿ ಸಿರೀಸ್)‌ ಎನಿಸಿದರು.

ಕ್ರಿಕೆಟ್‌ ದಿಗ್ಗಜರ ನಿವೃತ್ತಿ

2007ರ ವಿಶ್ವಕಪ್‌ ಟೂರ್ನಿಯು ಕ್ರಿಕೆಟ್‌ ಜಗತ್ತಿನಲ್ಲಿ ಹಲವು ಬದಲಾವಣೆಗಳಿಗೆ ಕಾರಣವಾಯಿತು.‌ ವಿಶ್ವಕಪ್‌ ಬಳಿಕ ವೆಸ್ಟ್‌ ಇಂಡೀಸ್‌ ದಂತಕತೆ ಬ್ರಿಯಾನ್‌ ಲಾರಾ, ಪಾಕಿಸ್ತಾನದ ಇಂಜಮಾಮ್‌ ಉಲ್‌ ಹಕ್‌ ಹಾಗೂ ಆಸ್ಟ್ರೇಲಿಯಾದ ಮ್ಯಾಥ್ಯೂ ಹೇಡನ್‌ ನಿವೃತ್ತಿ ಘೋಷಿಸಿದರು.

ಲೀಗ್‌ ಹಂತದಲ್ಲೇ ಹೊರ ಬಿದ್ದ ಕಾರಣ ಟಿ20 ವಿಶ್ವಕಪ್‌ಗೆ ಮಹೇಂದ್ರ ಸಿಂಗ್‌ ಧೋನಿ ಅವರನ್ನು ನಾಯಕ ಎಂದು ಘೋಷಿಸಲಾಯಿತು. ಇದೇ ವರ್ಷದ ಸೆಪ್ಟೆಂಬರ್‌ನಲ್ಲಿ ರಾಹುಲ್‌ ದ್ರಾವಿಡ್‌ ಅವರು ಏಕದಿನ ತಂಡದ ನಾಯಕತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಟಿ20 ವಿಶ್ವಕಪ್‌ ಗೆದ್ದ ಖ್ಯಾತಿಯಲ್ಲಿದ್ದ ಮಹೇಂದ್ರ ಸಿಂಗ್‌ ಧೋನಿ ಭಾರತ ಏಕದಿನ ಕ್ರಿಕೆಟ್‌ ತಂಡದ ನಾಯಕರಾದರು. ಮುಂದೆ ಆಗಿದ್ದೆಲ್ಲ ಈಗ ಇತಿಹಾಸ.

ವಿಶ್ವಕಪ್‌ ಕುರಿತು ಸ್ವಾರಸ್ಯಕರ ಸುದ್ದಿಗಳಿಗೆ ಇಲ್ಲಿ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರಿಕೆಟ್

ನಾಳೆಯಿಂದ ಅಂಡರ್​-19 ಏಷ್ಯಾಕಪ್; ಭಾರತ-ಪಾಕ್​ ಮುಖಾಮುಖಿ ಯಾವಾಗ?

ಅಂಡರ್​-19 ಏಷ್ಯಾಕಪ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಬದ್ದ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಡಿ.10 ರಂದು ನಡೆಯಲಿದೆ.

VISTARANEWS.COM


on

U-19 Asia Cup IND vs PAK
Koo

ದುಬೈ: ದುಬೈ (Dubai) ಆತಿಥ್ಯನಲ್ಲಿ ನಡೆಯುವ ಪುರುಷರ ಅಂಡರ್​-19 ಏಷ್ಯಾಕಪ್ (ACC Men’s U19 Asia Cup 2023) ಟೂರ್ನಿಯ ಪಂದ್ಯಾವಳಿಗಳು ಡಿಸೆಂಬರ್ 8 ರಿಂದ ಆರಂಭಗೊಳ್ಳಲಿದೆ. ಟೂರ್ನಿ ಡಿಸೆಂಬರ್ 17 ರವರೆಗೆ ನಡೆಯಲಿದೆ. ಡಿ.8ರಂದು ನಡೆಯುವ ಉದ್ಘಾಟನ ಪಂದ್ಯದಲ್ಲಿ ಭಾರತ ತಂಡ ಅಫಘಾನಿಸ್ತಾನ​ ವಿರುದ್ಧ ಕಣಕ್ಕಿಳಿಯುವ ಮೂಲಕ ಅಭಿಯಾನ ಆರಂಭಿಸಲಿದೆ. ಸಾಂಪ್ರದಾಯಿಕ ಬದ್ದ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ ಡಿ.10 ರಂದು ಕಣಕಿಳಿಯಲಿದೆ.

15 ಪಂದ್ಯಗಳು

50-ಓವರ್‌ಗಳ ಸ್ಪರ್ಧೆಯಲ್ಲಿ ಒಟ್ಟು 15 ಪಂದ್ಯಗಳು ನಡೆಯಲಿವೆ. ಇದರಲ್ಲಿ ಎರಡು ಸೆಮಿಫೈನಲ್ ಮತ್ತು ಒಂದು ಫೈನಲ್ ಪಂದ್ಯ ಕೂಡ ಸೇರಿದೆ. ಫೈನಲ್ ಪಂದ್ಯ ಡಿಸೆಂಬರ್ 17 ರಂದು ನಡೆಯಲ್ಲಿದೆ. ಈ ಟೂರ್ನಿಯ ಪಂದ್ಯಗಳು ಐಸಿಸಿ ಅಕಾಡೆಮಿ ಓವಲ್ ಸೇರಿದಂತೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ (Dubai International Cricket Stadium) ನಡೆಯಲಿವೆ. ಒಟ್ಟು 8 ತಂಡಗಳು ಪ್ರಶಸ್ತಿಗಾಗಿ ಸಣಸಾಡಲಿವೆ.

ತಂಡಗಳು

ಕೂಟದಲ್ಲಿ ಒಟ್ಟು 8 ತಂಡಗಳು ಪಾಲ್ಗೊಳ್ಳಲಿವೆ. ಅವುಗಳೆಂದರೆ ಭಾರತ, ಪಾಕಿಸ್ತಾನ, ಶ್ರೀಲಂಕಾ, ಜಪಾನ್, ಯುಎಇ
ಅಫಘಾನಿಸ್ತಾನ, ಬಾಂಗ್ಲಾದೇಶ, ನೇಪಾಳ. ಎಂಟು ತಂಡಗಳನ್ನು ತಲಾ ನಾಲ್ಕು ತಂಡಗಳ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಹಾಲಿ ಚಾಂಪಿಯನ್ ಭಾರತ, ನೇಪಾಳ, ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ. ‘ಬಿ’ ಗುಂಪಿನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ, ಜಪಾನ್ ಮತ್ತು ಆತಿಥೇಯ ಯುನೈಟೆಡ್ ಅರಬ್ ಎಮಿರೇಟ್ಸ್ ತಂಡಗಳು ಸ್ಥಾನ ಪಡೆದಿವೆ.

ಇದನ್ನೂ ಓದಿ ACC Under-19 Asia Cup : ಜೂನಿಯರ್​ಗಳ ಏಷ್ಯಾ ಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ವೇಳಾಪಟ್ಟಿ

ಡಿಸೆಂಬರ್ 8 – ಭಾರತ vs ಅಫ್ಘಾನಿಸ್ತಾನ – ICC ಅಕಾಡೆಮಿ ಓವಲ್ 1

ಡಿಸೆಂಬರ್ 8 – ಪಾಕಿಸ್ತಾನ vs ನೇಪಾಳ – ICC ಅಕಾಡೆಮಿ ಓವಲ್ 2

ಡಿಸೆಂಬರ್ 9 – ಬಾಂಗ್ಲಾದೇಶ vs ಯುಎಇ – ICC ಅಕಾಡೆಮಿ ಓವಲ್ 1

ಡಿಸೆಂಬರ್ 9 – ಶ್ರೀಲಂಕಾ vs ಜಪಾನ್ – ICC ಅಕಾಡೆಮಿ ಓವಲ್ 2

ಡಿಸೆಂಬರ್ 10 – ಭಾರತ vs ಪಾಕಿಸ್ತಾನ – ICC ಅಕಾಡೆಮಿ ಓವಲ್ 1

ಡಿಸೆಂಬರ್ 10 – ಅಫ್ಘಾನಿಸ್ತಾನ vs ನೇಪಾಳ – ICC ಅಕಾಡೆಮಿ ಓವಲ್ 2

ಡಿಸೆಂಬರ್ 11 – ಶ್ರೀಲಂಕಾ vs ಯುಎಇ – ICC ಅಕಾಡೆಮಿ ಓವಲ್ 1

ಡಿಸೆಂಬರ್ 11 – ಬಾಂಗ್ಲಾದೇಶ vs ಜಪಾನ್ – ICC ಅಕಾಡೆಮಿ ಓವಲ್ 2

ಡಿಸೆಂಬರ್ 12 – ಪಾಕಿಸ್ತಾನ vs ಅಫ್ಘಾನಿಸ್ತಾನ – ICC ಅಕಾಡೆಮಿ ಓವಲ್ 1

ಡಿಸೆಂಬರ್ 12 – ಭಾರತ vs ನೇಪಾಳ – ICC ಅಕಾಡೆಮಿ ಓವಲ್ 2

ಡಿಸೆಂಬರ್ 13 – ಬಾಂಗ್ಲಾದೇಶ vs ಶ್ರೀಲಂಕಾ – ICC ಅಕಾಡೆಮಿ ಓವಲ್ 1

ಡಿಸೆಂಬರ್ 13 – ಯುಎಇ vs ಜಪಾನ್ – ಐಸಿಸಿ ಅಕಾಡೆಮಿ ಓವಲ್ 2

ಡಿಸೆಂಬರ್ 15 – ಸೆಮಿಫೈನಲ್ 1 – ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣ

ಡಿಸೆಂಬರ್ 15 – ಸೆಮಿ-ಫೈನಲ್ 2 – ICC ಅಕಾಡೆಮಿ ಓವಲ್ 1

ಡಿಸೆಂಬರ್ 17 – ಫೈನಲ್ – ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣ

ಭಾರತ ಅಂಡರ್-19 ತಂಡ

ಅರ್ಶಿನ್ ಕುಲಕರ್ಣಿ, ಆದರ್ಶ್ ಸಿಂಗ್, ರುದ್ರ ಮಯೂರ್ ಪಟೇಲ್, ಸಚಿನ್ ದಾಸ್, ಪ್ರಿಯಾಂಶು ಮೊಲಿಯಾ, ಮುಶೀರ್ ಖಾನ್, ಉದಯ್ ಸಹರಾನ್ (ನಾಯಕ), ಅರ್ವೆಲ್ಲಿ ಅವನೀಶ್ ರಾವ್ (ವಿಕೆಟ್​ ಕೀಪರ್​), ಸೌಮಿ ಕುಮಾರ್ ಪಾಂಡೆ (ಉಪನಾಯಕ), ಮುರುಗನ್ ಅಭಿಷೇಕ್, ಇನ್ನೇಶ್ ಮಹಾಜನ್ (ವಿಕೆಟ್ ಕೀಪರ್), ಧನುಷ್ ಗೌಡ, ಆರಾಧ್ಯ ಶುಕ್ಲಾ, ರಾಜ್ ಲಿಂಬಾನಿ, ನಮನ್ ತಿವಾರಿ.

ಟ್ರಾವೆಲಿಂಗ್ ಮೀಸಲು ಆಟಗಾರರು: ಪ್ರೇಮ್ ದಿಯೋಕರ್, ಅನ್ಶ್ ಗೋಸಾಯಿ, ಎಂಡಿ ಅಮನ್

ಮೀಸಲು ಆಟಗಾರರು: ದಿಗ್ವಿಜಯ್ ಪಾಟೀಲ್, ಜಯಂತ್ ಗೋಯತ್, ಪಿ.ವಿಘ್ನೇಶ್, ಕಿರಣ್ ಚೋರ್ಮಾಲೆ

Continue Reading

ಕ್ರಿಕೆಟ್

ಕಿಂಗ್​ ಕೊಹ್ಲಿ ಕೈಬಿಟ್ಟ ಬಿಸಿಸಿಐ; ಟಿ20 ವಿಶ್ವಕಪ್​ಗೆ ನೂತನ ಆಟಗಾರನ ಆಯ್ಕೆ!

ವಿರಾಟ್​ ಕೊಹ್ಲಿ ಇದುವರೆಗೆ ಭಾರತ ಪರ 115 ಟಿ20 ಪಂದ್ಯಗಳನ್ನು ಆಡಿ 4008 ರನ್‌ ಬಾರಿಸಿದ್ದಾರೆ. 122 ವೈಯಕ್ತಿಕ ಗರಿಷ್ಠ ಮೊತ್ತವಾಗಿದೆ. 1 ಶತಕ ಮತ್ತು 37 ಅರ್ಧಶತಕ ಬಾರಿಸಿದ್ದಾರೆ.

VISTARANEWS.COM


on

Virat Kohli
Koo

ಮುಂಬಯಿ: ವಿರಾಟ್​ ಕೊಹ್ಲಿ(Virat Kohli) ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ. ವಿಶ್ವದ ಅನೇಕ ದಿಗ್ಗಜ ಆಟಗಾರರ ಸಾಧನೆಗಳನ್ನು ಮುರಿದಿರುವ ಅವರಿಗೆ ಕಿಂಗ್ ಕೊಹ್ಲಿ​ ಎಂಬ ಪಟ್ಟ ನೀಡಲಾಗಿದೆ. ಆದರೆ ಇದೀಗ ಅವರ ಸ್ಥಾನಕ್ಕೆ ಬೇರೊಬ್ಬ ಉತ್ತರಾಧಿಕಾರಿಯನ್ನು ನೇಮಿಸಲು ಬಿಸಿಸಿಐ(BCCI) ಮುಂದಾಗಿದೆ.

ಹೌದು, ಮುಂದಿನ ವರ್ಷ ವೆಸ್ಟ್​ ಇಂಡೀಸ್ ಮತ್ತು ಅಮೆರಿಕ ಆತಿಥ್ಯದಲ್ಲಿ​ ನಡೆಯುವ ಟಿ20 ವಿಶ್ವಕಪ್​ನಲ್ಲಿ ಕೊಹ್ಲಿಗೆ ಸ್ಥಾನ ಸಿಗುವುದು ಅನುಮಾನ ಎನ್ನಲಾಗಿದೆ. ಅವರ ಸ್ಥಾನಕ್ಕೆ ಬಿಸಿಸಿಐ ಈಗಾಗಲೇ ಯುವ ಆಟಗಾರನನ್ನು ಆಯ್ಕೆ ಮಾಡಿದ್ದು ಪ್ರಯೋಗ ನಡೆಸುತ್ತಿದೆ. ಕೊಹ್ಲಿ ಸ್ಥಾನಕ್ಕೆ ಬಿಸಿಸಿಐ ಆಯ್ಕೆ ಮಾಡಿರುವ ಆಟಗಾರನೆಂದರೆ ಅದು ಇಶಾನ್​ ಕಿಶನ್​(ishan kishan).

ಕಳೆದ ವರ್ಷ ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್​ ಸೆಮಿಫೈನಲ್​ನಲ್ಲಿ ಭಾರತ ತಂಡ ಸೋಲು ಕಂಡ ಬಳಿಕ ಇದುವರೆಗೂ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಕಾಣಿಸಿಕೊಂಡಿಲ್ಲ. ಇವರ ಜತೆಗೆ ಹಿರಿಯ ಆಟಗಾರ ರೋಹಿತ್​ ಶರ್ಮ, ಶಮಿ, ರಾಹುಲ್​ ಸೇರಿ ಇನ್ನೂ ಕೆಲ ಆಟಗಾರರನ್ನು ಬಿಸಿಸಿಐ ಟಿ20ಯಿಂದ ದೂರ ಇರಿಸಿ ಯುವ ಆಟಗಾರರರಿಗೆ ಮಣೆ ಹಾಕುತ್ತಲೇ ಬಂದಿದೆ. ಇದೀಗ ಮುಂದಿನ ವರ್ಷ ನಡೆಯುವ ಟಿ20ಯಲ್ಲಿಯೂ ಹಿರಿಯ ಆಟಗಾರಿಗೆ ಅವಕಾಶ ಸಿಗುವುದು ಕಷ್ಟ ಎನ್ನಲಾಗಿದೆ. ಇದೇ ಕಾರಣಕ್ಕೆ ಬಿಸಿಸಿಐ ಈ ಯುವ ಆಟಗಾರರನ್ನು ಹಿರಿಯ ಆಟಗಾರರ ಕ್ರಮಾಂಕದಲ್ಲಿ ಆಡಿಸುವ ಮೂಲಕ ಬಲಿಷ್ಠ ತಂಡವನ್ನು ರೂಪುಗೊಳಿಸಲು ಮುಂದಾಗಿದೆ.

ಕೊಹ್ಲಿ ಸ್ಥಾನಕ್ಕೆ ಇಶಾನ್​

ಆರಂಭಿಕ ಆಟಗಾರನಾಗಿರುವ ಇಶಾನ್​ ಕಿಶನ್​ ಅವರನ್ನು ಕಳೆದ ಆಸೀಸ್​ ವಿರುದ್ಧದ ಟಿ20 ಸರಣಿಯಲ್ಲಿ ದ್ವಿತೀಯ ಕ್ರಮಾಂಕದಲ್ಲಿ ಆಡಿಸಲಾಗಿತ್ತು. ಇಲ್ಲಿ ಅವರು ಕ್ಲಿಕ್​ ಕೂಡ ಆಗಿದ್ದರೂ. ಇದು ಬಿಸಿಸಿಐ ನಡೆಸಿದ ಪ್ರಯೋಗ ಎನ್ನುವುದು ಈಗ ತಿಳಿದುಬಂದಿದೆ. ಬಿಸಿಸಿಐ ಅಧಿಕಾರಿಯೊಬ್ಬರು ನೀಡಿದ ಮಾಹಿತಿ ಪ್ರಕಾರ ಕೊಹ್ಲಿ ಅವರ ಟಿ20 ಕ್ರಿಕೆಟ್ ಜರ್ನಿ ಬಹುತೇಕ ಅಂತ್ಯ ಕಂಡಿದ್ದು ಅವರ ಸ್ಥಾನಕ್ಕೆ ಇಶಾನ್​ ಕಿಶನ್​ ಅವರನ್ನು ರೆಡಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ Ram Mandir: ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ವಿರಾಟ್​ ಕೊಹ್ಲಿ, ಸಚಿನ್​​ಗೆ ಆಹ್ವಾನ

ಇಶಾನ್​ ಕಿಶನ್ 3ನೇ ಸ್ಥಾನಕ್ಕೆ ಒಪ್ಪಿಗೆ ಪಡೆದರೆ ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಉಳಿದ ಸ್ಥಾನಗಳನ್ನು ತುಂಬುವ ಸಾಧ್ಯತೆಯಿದೆ. ಹೀಗಾಗಿ, ಕೊಹ್ಲಿಗೆ ಯಾವುದೇ ಸ್ಥಾನವಿಲ್ಲ. ಆದಾಗ್ಯೂ, ಕೊಹ್ಲಿಯ ಟಿ20 ಕ್ರಿಕೆಟ್​ ಯೋಜನೆಗಳ ಬಗ್ಗೆ ಬಿಸಿಸಿಐ ಮತ್ತು ಹಿರಿಯ ಸದಸ್ಯರು ಶೀಘ್ರದಲ್ಲೇ ಚರ್ಚೆ ನಡೆಸಲಿದ್ದಾರೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕೊಹ್ಲಿಯ ಟಿ20 ಸಾಧನೆ

ವಿರಾಟ್​ ಕೊಹ್ಲಿ ಇದುವರೆಗೆ ಭಾರತ ಪರ 115 ಟಿ20 ಪಂದ್ಯಗಳನ್ನು ಆಡಿ 4008 ರನ್‌ ಬಾರಿಸಿದ್ದಾರೆ. 122 ವೈಯಕ್ತಿಕ ಗರಿಷ್ಠ ಮೊತ್ತವಾಗಿದೆ. 1 ಶತಕ ಮತ್ತು 37 ಅರ್ಧಶತಕ ಬಾರಿಸಿದ್ದಾರೆ. 4 ವಿಕೆಟ್​ ಕೂಡ ಕೆಡವಿದ್ದಾರೆ. ಇತ್ತೀಚೆಗೆ ಮುಕ್ತಾಯ ಕಂಡ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಅಮೋಘ ಬ್ಯಾಟಿಂಗ್​ ಪ್ರದರ್ಶನ ತೋರಿದ ಕೊಹ್ಲಿ ಟೂರ್ನಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಆಟಗಾರ ಎನಿಸಿಕೊಂಡಿದ್ದರು. ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು ಕಾಣುವ ಮೂಲಕ ಭಾರತ ಕಪ್​ ಗೆಲ್ಲುವಲ್ಲಿ ವಿಫಲವಾಗಿತ್ತು.

Continue Reading

T20 ವಿಶ್ವಕಪ್

T20 World Cup 2024:​ ನೂತನ ಲೋಗೋ ವಿನ್ಯಾಸಕ್ಕೆ ಫಿದಾ ಆದ ಕ್ರಿಕೆಟ್​ ಅಭಿಮಾನಿಗಳು

ಮುಂದಿನ ವರ್ಷ ನಡೆಯುವ ಪುರುಷರ ಮತ್ತು ಮಹಿಳೆಯರ ಟಿ20 ವಿಶ್ವಕಪ್​(T20 World Cup 2024) ಟೂರ್ನಿಯ ಹೊಸ ಲೋಗೋವನ್ನು ಐಸಿಸಿ ಬಿಡುಗಡೆ ಮಾಡಿದೆ.

VISTARANEWS.COM


on

2024 t20 world cup
Koo

ದುಬೈ: 2024ರಲ್ಲಿ ನಡೆಯುವ ಪ್ರತಿಷ್ಠಿತ ಪುರುಷರ ಮತ್ತು ಮಹಿಳೆಯರ ಟಿ20 ವಿಶ್ವಕಪ್​(T20 World Cup 2024) ಟೂರ್ನಿಯ ಹೊಸ ಲೋಗೋವನ್ನು ಐಸಿಸಿ ಗುರುವಾರ ಬಿಡುಗಡೆ ಮಾಡಿದೆ. ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಐಸಿಸಿ ವಿಡಿಯೊವೊಂದನ್ನು ಹಂಚಿಕೊಳ್ಳುವ ಮೂಲಕ ಹೊಸ ಲೋಗೋ ಮತ್ತು ಇದರ ಉದ್ದೇಶವನ್ನು ತಿಳಿಸಿದೆ.

ಸದ್ಯದ ಮಾಹಿತಿ ಪ್ರಕಾರ ಪುರುಷರ 9ನೇ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಯ ಪಂದ್ಯಗಳು ಜೂನ್ 4 ರಿಂದ 30ರ ವರೆಗೆ ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿದೆ ಎನ್ನಲಾಗಿದೆ. ಮಹಿಳಾ ಟಿ20 ವಿಶ್ವಕಪ್ ಬಾಂಗ್ಲಾದೇಶದ ಆತಿಥ್ಯದಲ್ಲಿ ನಡೆಸಲಾಗುತ್ತದೆ. ಆದರೆ ವೇಳಾಪಟ್ಟಿಯನ್ನು ಇನ್ನೂ ಪ್ರಕಟಿಸಿಲ್ಲ. ಕಳೆದ ವರ್ಷ ಆಸ್ಟ್ರೇಲಿಯಾದಲ್ಲಿ ನಡೆದ ಪುರುಷರ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆಯದ ವಿಂಡೀಸ್​ ಈ ಬಾರಿ ಟೂರ್ನಿಯ ಆತಿಥ್ಯ ವಹಿಸಿಕೊಂಡ ಕಾರಣದಿಂದ ಪಂದ್ಯಾವಳಿಯಲ್ಲಿ ಸ್ಥಾನಪಡೆದಿದೆ.

ಹೊಸ ಲೋಗೋದ ಸಂದೇಶವೇನು?

ಹೊಸ ಲೋಗೋ ಹಿಂದಿನ ಉದ್ದೇಶವನ್ನು ಐಸಿಸಿ ವಿಡಿಯೊ ಮುಲಕ ತಿಳಿಸಿದ್ದು, ಟಿ20 ಕ್ರಿಕೆಟ್‌ನ ಶಕ್ತಿಯನ್ನು ಪ್ರತಿಬಿಂಬಿಸುವ ಮೂಲಕ ಬ್ಯಾಟ್, ಬಾಲ್ ಮತ್ತು ಶಕ್ತಿಯ ಸೃಜನಶೀಲ ಮಿಶ್ರಣವಾಗಿರುವ ಸಂಕೇತ ಎಂದು ಐಸಿಸಿ ಹೇಳಿದೆ. ಟಿ20 ಸ್ವರೂಪದಲ್ಲಿ ವೇಗವಾಗಿ ಬದಲಾಗುತ್ತಿರುವ ಆಟವನ್ನು ಲೋಗೋ ಪ್ರತಿಬಿಂಬಿಸುವಂತಿದೆ. ಟೂರ್ನಿಯ ಆತಿಥೇಯ ರಾಷ್ಟ್ರದ ಟೆಕಶ್ಚರ್ ಮತ್ತು ಪ್ಯಾಟರ್ನ್‌ ಒಳಗೊಂಡಿದೆ. ಐಸಿಸಿ ತನ್ನ ಟ್ವಿಟರ್​ನಲ್ಲಿ ಬ್ಯಾಟ್​,ಬಾಲ್​ ಮತ್ತು ಎನರ್ಜಿ ಎಂದು ಬರೆದುಕೊಂಡು ಈ ಲೋಗೋವನ್ನು ಪ್ರಕಟಿಸಿದೆ.

ಇದನ್ನೂ ಓದಿ ICC T20 World Cup 2024 : ಕ್ರಿಕೆಟ್​ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಉಗಾಂಡ ತಂಡ

ಸ್ವರೂಪ ಬದಲು

ಹಿಂದಿನ ಆವೃತ್ತಿಗಳಿಗಿಂತ ಈ ಬಾರಿ ಟೂರ್ನಿ ವಿಭಿನ್ನ ಸ್ವರೂಪವನ್ನು ಹೊಂದಿದೆ. ಸೂಪರ್ 12 ತಂಡಗಳು ಸೇರಿ 20 ತಂಡಗಳನ್ನು ತಲಾ 5 ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಪ್ರತಿ ಗುಂಪಿನಿಂದ ಅಗ್ರ 2 ತಂಡಗಳು ಸೂಪರ್ 8ಗೆ ಅರ್ಹತೆ ಪಡೆಯುತ್ತವೆ. ಸೂಪರ್ 8 ತಂಡಗನ್ನು ತಲಾ ನಾಲ್ಕರ ಎರಡು ಗುಂಪುಗಳಾಗಿ ವಿಭಜಿಸಲಾಗುತ್ತದೆ. ಪ್ರತಿ ಗುಂಪಿನ ಅಗ್ರ ಎರಡು ತಂಡಗಳು ಸೆಮಿಫೈನಲ್​ಗೆ ಅರ್ಹತೆ ಪಡೆಯಲಿವೆ. ಬಳಿಕ ಫೈನಲ್ ನಡೆಯಲಿದೆ. 2022ರ ಆವೃತ್ತಿಯಲ್ಲಿ 12 ತಂಡಗಳು ಭಾಗಿಯಾಗಿದ್ದವು. ಆದರೆ 2024ರ ಟೂರ್ನಿಯಲ್ಲಿ 20 ತಂಡಗಳು ಕಣಕ್ಕಿಳಿಯಲಿವೆ.

ಟಿ20 ವಿಶ್ವಕಪ್ 2024 ನಡೆಯುವ ಸ್ಥಳಗಳು

  • ಆಂಟಿಗುವಾ ಮತ್ತು ಬಾರ್ಬುಡಾ
  • ಬಾರ್ಬಡೋಸ್
  • ಡೊಮಿನಿಕಾ (ಹೊರತೆಗೆಯಲಾಗಿದೆ)
  • ಗಯಾನಾ
  • ಸೇಂಟ್ ಲೂಸಿಯಾ
  • ಟ್ರಿನಿಡಾಡ್ ಮತ್ತು ಟೊಬಾಗೊ
  • ಸೇಂಟ್ ವಿನ್ಸೆಂಟ್ & ದಿ ಗ್ರೆನಡೀನ್ಸ್
  • ಡಲ್ಲಾಸ್
  • ಫ್ಲೋರಿಡಾ
  • ನ್ಯೂಯಾರ್ಕ್

ಭಾರತ-ಪಾಕ್ ಪಂದ್ಯಕ್ಕೂ ಸಿದ್ಧವಾಗಿಲ್ಲ ಕ್ರೀಡಾಂಗಣ

ಇನ್ನು ಏಳು ತಿಂಗಳು ಬಾಕಿ ಇರುವಾಗ ಭಾರತ ಮತ್ತು ಪಾಕ್ ಪಂದ್ಯಕ್ಕೆ ಇನ್ನೂ ಸ್ಥಳ ಸಿದ್ಧಗೊಂಡಿಲ್ಲ . ಬ್ರಾಂಕ್ಸ್ನ ವ್ಯಾನ್ ಕಾರ್ಟ್ಲ್ಯಾಂಡ್ ಪಾರ್ಕ್ ಮೂಲ ಸ್ಥಳವಾಗಿತ್ತು. ಐಸಿಸಿ ಮತ್ತು ಸ್ಥಳೀಯ ಸಂಘಟನಾ ಸಮಿತಿಯು ಸ್ಥಳೀಯರಿಂದ ವಿರೋಧವನ್ನು ಎದುರಿಸಿತು. ಆದ್ದರಿಂದ, ನಸ್ಸಾವು ಕೌಂಟಿಯ ಐಸೆನ್ಹೋವರ್ ಪಾರ್ಕ್ ಅನ್ನು ಹೊಸ ಸ್ಥಳವಾಗಿ ಆಯ್ಕೆ ಮಾಡಲಾಯಿತು. ಆದಾಗ್ಯೂ, ಇನ್ನೂ ಯಾವುದೇ ಕ್ರಿಕೆಟ್ ಕ್ರೀಡಾಂಗಣ ಸಜ್ಜುಗೊಂಡಿಲ್ಲ. ಕೇವಲ ಏಳು ತಿಂಗಳುಗಳು ಮಾತ್ರ ಉಳಿದಿವೆ. ಮುಂಬರುವ ದಿನಗಳಲ್ಲಿ ಕಠಿಣ ಚಳಿಗಾಲವು ಬರುವ ಕಾರಣ ಕ್ರೀಡಾಂಗಣವನ್ನು ಯಾವ ರೀತಿ ಸಜ್ಜು ಮಾಡುತ್ತಾರೆ ಎಂಬ ಕೌತುಕ ಇನ್ನೂ ಉಳಿದಿದೆ.

Continue Reading

ಕ್ರಿಕೆಟ್

ಜಗಳಗಂಟ ಗಂಭೀರ್​ ಕರಾಳ ಮುಖ ತೆರೆದಿಟ್ಟ ಶ್ರೀಶಾಂತ್‌; ವಿಡಿಯೊ ವೈರಲ್​ 

ನೀನೊಬ್ಬ ಫಿಕ್ಸರ್​ ಎಂದು ಪದೇಪದೆ ಹೇಳುವ ಜತೆಗೆ ಅವಾಚ್ಯ ಪದಗಳಿಂದ ಗಂಭೀರ್​ ನಿಂದಿಸಿದ್ದಾರೆ ಎಂದು ಶ್ರೀಶಾಂತ್​ ಲೈವ್​ ವಿಡಿಯೊದಲ್ಲಿ ಹೇಳಿದ್ದಾರೆ.

VISTARANEWS.COM


on

sreesanth and gambhir
Koo

ಸೂರತ್: ಲೆಜೆಂಡ್ಸ್ ಲೀಗ್ ಕ್ರಿಕೆಟ್‌ ಪಂದ್ಯದಲ್ಲಿ ಮೈದಾನದಲ್ಲೇ ಮಾಜಿ ಟೀಮ್​ ಇಂಡಿಯಾದ ಆಟಗಾರರಾದ ಗೌತಮ್​ ಗಂಭೀರ್(Gautam Gambhir)​ ಮತ್ತು ಎಸ್​.ಶ್ರೀಶಾಂತ್(S. Sreesanth)​ ಅವರು ಕಿತ್ತಾಟ ನಡೆಸಿದ ವಿಡಿಯೊ ಈಗಾಗಲೇ ಎಲ್ಲಡೆ ಭಾರಿ ಸುದ್ದು ಮಾಡುತ್ತಿದೆ. ಇದೀಗ ಈ ಘಟನೆ ನಡೆಯಲು ನಿಜವಾದ ಕಾರಣ ಏನೆಂಬುದನ್ನು ಶ್ರೀಶಾಂತ್ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಲೈವ್​ ವಿಡಿಯೊ ಮೂಲಕ ರಿವಿಲ್​ ಮಾಡಿದ್ದಾರೆ.

ಸೂರತ್‌ನಲ್ಲಿ ಬುಧವಾರ ರಾತ್ರಿ ನಡೆದ ಇಂಡಿಯಾ ಗುಜರಾತ್ ಜೈಂಟ್ಸ್ ಮತ್ತು ಇಂಡಿಯಾ ಕ್ಯಾಪಿಟಲ್ಸ್ ನಡುವಿನ ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನ (LLC 2023- ಎಲ್‌ಎಲ್‌ಸಿ 2023) ಎಲಿಮಿನೇಟರ್ ಪಂದ್ಯದಲ್ಲಿ ಶ್ರೀಶಾಂತ್ ಮತ್ತು ಗೌತಮ್‌ ಗಂಭೀರ್ ನಡುವೆ ಜಗಳ ನಡೆದಿತ್ತು. ಇವರಿಬ್ಬರ ಈ ಜಗಳದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಗುರುವಾರ ಭಾರಿ ವೈರಲ್​ ಆಗುವುದರ ಜತೆಗೆ ಪರ ಮತ್ತು ವಿರೋಧ ವ್ಯಕ್ತವಾಗಿತ್ತು.

ಎರಡನೇ ಇನ್ನಿಂಗ್ಸ್‌ನಲ್ಲಿ ಕ್ಯಾಪಿಟಲ್ಸ್ ನಾಯಕ ಗಂಭೀರ್, ಶ್ರೀಶಾಂತ್ ಅವರ ಬಾಲ್‌ಗಳಿಗೆ ಸಿಕ್ಸರ್‌ ಹಾಗೂ ಬೌಂಡರಿಗಳ ಮೂಲಕ ಉತ್ತರಿಸಿದರು. ಇದರಿಂದ ಹತಾಶೆಗೀಡಾದ ಶ್ರೀಶಾಂತ್ ಗಂಭೀರ್‌ ಕಡೆಗೆ ತೀಕ್ಷ್ಣವಾಗಿ ನೋಡುತ್ತಾ ಸ್ಲೆಡ್ಜಿಂಗ್‌ ಮಾಡಿದ್ದಾರೆ. ಪ್ರತಿಯಾಗಿ ಗಂಭೀರ್ ಕೂಡ ಏನನ್ನೋ ಗೊಣಗುತ್ತಾ ಶ್ರೀಶಾಂತ್‌ ಅವರನ್ನು ಗುರಾಯಿಸಿದರು. ವಿರಾಮದ ಸಮಯದಲ್ಲಿ ಕೂಡ ಅವರಿಬ್ಬರೂ ಬೈಗುಳ ವಿನಿಮಯ ಮಾಡಿಕೊಂಡಿದ್ದಾರೆ.

ಜಗಳಕ್ಕೆ ಕಾರಣವೇನು?

ಆರಂಭದಲ್ಲಿ ಇದು ಶ್ರೀಶಾಂತ್​ ಮಾಡಿದ ಕಿತಾಪತಿ ಎನ್ನಲಾಗಿತ್ತು. ಇದೇ ಕಾರಣಕ್ಕೆ ಗಂಭೀರ್​ ಅವರು ಕೆರಳಿದ್ದು ಎಂದು ಹೇಳಲಾಗಿತ್ತು. ಆದರೆ ಇದೀಗ ನೈಜ ವಿಚಾರವನ್ನು ಶ್ರೀಶಾಂತ್​ ಬಹಿರಂಗಪಡಿಸಿದ್ದಾರೆ. ಲೈವ್​ ವಿಡಿಯೊ ಮೂಲಕ ಮಾತನಾಡಿದ ಶ್ರೀಶಾಂತ್, ನಾನು ಗಂಭೀರ್​ ಅವರಿಗೆ ಒಂದು ಸಣ್ಣ ಕಟ್ಟ ಪದ ಬಳಸಿಯೂ ಬೈದಿಲ್ಲ. ಈ ವಿಚಾರ ಫೀಲ್ಡ್​ ಅಂಪೈರ್​ಗೂ ತಿಳಿದಿದೆ. ಅವರೇ ನನ್ನನ್ನು ನೋಡಿ ನೀನೊಬ್ಬ ಫಿಕ್ಸರ್​ ಎಂದು ಪದೇಪದೆ ಹೇಳುವ ಮೂಲಕ ನನ್ನನ್ನು ಹೀಯಾಳಿಸಿದರು. ಆಗ ನಾನು ಅವರ ಬಳಿ ಪ್ರಶ್ನೆ ಮಾಡಿ ಏನು ಇನ್ನೊಮ್ಮೆ ಈ ಮಾತನ್ನು ಹೇಳಿ ಎಂದು ಹೇಳುತ್ತ ಅವರ ಬಳಿಗೆ ಬಂದೆ ಈ ವೇಳೆ ಸಹ ಆಟಗಾರರ ತಡೆದರು. ನಾನು ನಿಜವಾಗಿಯೂ ಯಾವುದೇ ಕಿರಿಕ್​ ಮಾಡಿಲ್ಲ” ಎಂದು ಶ್ರೀಶಾಂತ್​ ಈ ವಿಡಿಯೊದಲ್ಲಿ ಹೇಳಿದ್ದಾರೆ.

“ಗಂಭೀರ್​ ನನ್ನನ್ನು ಫೀಕ್ಸರ್​ ಎಂದು ಕರೆಯುವ ಜತೆಗೆ ಇನ್ನೂ ಕೆಲ ಅವಾಚ್ಯ ಪದಗಳಿಂದ ನಿಂದಿಸಿದರು. ನಾನ್ನ ಮೇಲಿದ್ದ ಫಿಕ್ಸಿಂಗ್ ಆರೋಪ ಸುಳ್ಳು ಎನ್ನುವುದು ಈಗಾಗಕಲೇ ಸಾಭೀತಾಗಿದೆ. ನಾನು ನನ್ನ ಕುಟುಂಬದ ಜತೆ ಮಾನ್ಯವಾಗಿ ಜೀವಿಸುವ ವ್ಯಕ್ತಿಯಾಗಿದ್ದೇನೆ” ಎಂದು ಶ್ರೀಶಾಂತ್​ ಹೇಳಿದ್ದಾರೆ.

ಇದನ್ನೂ ಓದಿ Gautam Gambhir: ʼಯಾಕೋ ಗುರಾಯಿಸ್ತೀಯಾ?ʼ ಕ್ರೀಡಾಂಗಣದಲ್ಲಿ ಶ್ರೀಶಾಂತ್-‌ ಗಂಭೀರ್ ಕಿರಿಕ್‌

ಭಾರತ ತಂಡದ ಮಾಜಿ ವೇಗಿ ಶ್ರೀಶಾಂತ್‌, ಐಪಿಎಲ್ ಪಂದ್ಯದ ಸ್ಪಾಟ್ ಫಿಕ್ಸಿಂಗ್ ಮಾಡಿದ ಆರೋಪಕ್ಕೆ ಗುರಿಯಾದ ಬಳಿಕ ಅಂತಾರಾಷ್ಟ್ರೀಯ, ರಾಷ್ಟ್ರೀಯ ಕ್ರಿಕೆಟ್‌ನಿಂದ ನಿಷೇಧಕ್ಕೊಳಗಾಗಿದ್ದರು. ಕೆಲವು ವರ್ಷಗಳ ಹಿಂದೆ ನ್ಯಾಯಾಲಯ ಈ ನಿಷೇಧವನ್ನು ತೆಗೆದುಹಾಕಿದ್ದು, ಶ್ರೀಶಾಂತ್ ನಂತರ ವಿವಿಧ ಲೀಗ್‌ಗಳನ್ನು ಆಡುತ್ತಿದ್ದಾರೆ. ಪಂದ್ಯದ ವೇಳೆ ಗಂಭೀರ್ ತನಗೆ ನಿಖರವಾಗಿ ಏನು ಹೇಳಿದರು ಎಂಬುದನ್ನು ಬಹಿರಂಗಪಡಿಸುವುದಾಗಿ ಶ್ರೀಶಾಂತ್‌ ಹೇಳಿದ್ದು, ಈ ಮಾತುಗಳು ತನಗೆ ಮತ್ತು ತನ್ನ ಕುಟುಂಬಕ್ಕೆ ನೋವುಂಟು ಮಾಡಿದೆ ಎಂದಿದ್ದಾರೆ.

ಗಂಭೀರ್​ ಅವರು ಸಹ ಆಟಗಾರರೊಂದಿಗೆ ಈ ರೀತಿ ಕಿರಿಕ್​ ಮಾಡುತ್ತಿರುವುದು ಇದೇ ಮೊದಲೇನಲ್ಲ. ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ ವಿರಾಟ್​ ಕೊಹ್ಲಿ ಜತೆ ಹಲವು ಬಾರಿ ಮೈದಾನದಲ್ಲಿ ಇದೇ ರೀತಿಯ ಕಿರಿಕ್​ ಮಾಡಿದ್ದಾರೆ. ಈ ಬಾರಿಯ ಐಪಿಎಲ್​ ಟೂರ್ನಿಯಲ್ಲಿ ಗಂಭೀರ್​ ಅವರು ನವೀನ್​ ಉಲ್​ ಹಕ್​ ವಿಚಾರವಾಗಿ ಕೊಹ್ಲಿ ಜತೆ ಅನಗತ್ಯವಾಗಿ ಜಗಳವಾಡಿದ್ದರು.

Continue Reading
Advertisement
self harming by wadi Acc cement Depute Director
ಕರ್ನಾಟಕ11 mins ago

Self Harming : ಅದಾನಿ ಗ್ರೂಪ್‌ ಕಾರ್ಖಾನೆಯ ಡೆಪ್ಯೂಟಿ ಮ್ಯಾನೇಜರ್ ಸೂಸೈಡ್‌!

A girl shoots her classmate and herself with shotgun
ವಿದೇಶ12 mins ago

ಸಹಪಾಠಿಗೆ ಗುಂಡು ಹೊಡೆದು ತಾನೂ ಸತ್ತ 14 ವರ್ಷದ ವಿದ್ಯಾರ್ಥಿನಿ!

Flax Seeds Benefits For Hair
ಆರೋಗ್ಯ21 mins ago

Flax Seeds Benefits For Hair: ಚಳಿಗಾಲದಲ್ಲಿ ಕೂದಲ ಆರೋಗ್ಯಕ್ಕೆ ಅಗಸೆಬೀಜ ಸೂಪರ್‌!

Wedding Fashion
ಫ್ಯಾಷನ್27 mins ago

Wedding Fashion: ಮದುಮಗನ ಆರತಕ್ಷತೆಯ ಗ್ರ್ಯಾಂಡ್‌ ಔಟ್‌ಫಿಟ್‌ ಆಯ್ಕೆಗೆ ಇಲ್ಲಿದೆ 5 ಸಿಂಪಲ್‌ ಸೂತ್ರ

U-19 Asia Cup IND vs PAK
ಕ್ರಿಕೆಟ್36 mins ago

ನಾಳೆಯಿಂದ ಅಂಡರ್​-19 ಏಷ್ಯಾಕಪ್; ಭಾರತ-ಪಾಕ್​ ಮುಖಾಮುಖಿ ಯಾವಾಗ?

Veer Savarkar and Priyank Kharge
ಕರ್ನಾಟಕ37 mins ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

job opportunity
ದೇಶ49 mins ago

Job News: ಕೇಂದ್ರ ಸರ್ಕಾರ, ರಕ್ಷಣಾ ಇಲಾಖೆಗಳಲ್ಲಿ ಶೇ.14ರಷ್ಟು ಉದ್ಯೋಗ ಹೆಚ್ಚಳ

Office Rental Rises in top 7 cities including bengaluru
ದೇಶ52 mins ago

ಬೆಂಗಳೂರು ಸೇರಿ ದೇಶದ ಟಾಪ್ 7 ನಗರಗಳಲ್ಲಿ ಕಚೇರಿ ಬಾಡಿಗೆ ಹೆಚ್ಚಳ!

BMTC Bus hits bike
ಕರ್ನಾಟಕ1 hour ago

BMTC Accident : ಕಿಲ್ಲರ್‌ ಬಿಎಂಟಿಸಿ ಬಸ್‌ಗೆ 120 ಮಂದಿ ಬಲಿ!

Kapil Sharma and Sunil Grover
ಬಾಲಿವುಡ್1 hour ago

The Kapil Sharma Show: 6 ವರ್ಷದ ಮುನಿಸು ಮರೆತು ಒಟ್ಟಿಗೆ ಪಾರ್ಟಿ ಮಾಡಿದ ಕಪಿಲ್‌ ಶರ್ಮಾ, ಸುನಿಲ್‌ ಗ್ರೋವರ್!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Veer Savarkar and Priyank Kharge
ಕರ್ನಾಟಕ37 mins ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ6 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ13 hours ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ21 hours ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ1 day ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ1 day ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ1 day ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ1 day ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ1 day ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

read your daily horoscope predictions for december 6 2023
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರು ಸುಮ್ಮನಿದ್ದರೂ ನಡೆಯುತ್ತೆ ಕಲಹ!

ಟ್ರೆಂಡಿಂಗ್‌