World Cup History: 2011ರ ವಿಶ್ವಕಪ್‌; ಛಲದಂಕಮಲ್ಲ ಧೋನಿ ಬಳಗ ಜಗದಂಕಮಲ್ಲ ಆಗಿದ್ದು ಹೀಗೆ... - Vistara News

ಕ್ರಿಕೆಟ್

World Cup History: 2011ರ ವಿಶ್ವಕಪ್‌; ಛಲದಂಕಮಲ್ಲ ಧೋನಿ ಬಳಗ ಜಗದಂಕಮಲ್ಲ ಆಗಿದ್ದು ಹೀಗೆ…

World Cup History: ಯಾವುದೇ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳುವ ತಂಡಗಳಿಗೆ ಸ್ಮರಣೀಯ ಅನುಭವ ಆಗುತ್ತದೆ. ಆದರೆ, ಗೆಲುವು ಸಾಧಿಸಿದ ತಂಡ ಮಾತ್ರ ಅವಿಸ್ಮರಣೀಯ ಕ್ಷಣೆಗಳಿಗೆ ಸಾಕ್ಷಿಯಾಗುತ್ತದೆ. ಅಂತಹ ಅವಿಸ್ಮರಣೀಯ ಕ್ಷಣಗಳಿಗೆ ಭಾರತ ತಂಡ ಸಾಕ್ಷಿಯಾಗಿದ್ದು ಹೇಗೆ? ಇಲ್ಲಿದೆ 2011ರ ವಿಶ್ವಕಪ್ ಝಲಕ್.‌

VISTARANEWS.COM


on

2011 World Cup India Champion
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತ ಕ್ರಿಕೆಟ್‌ ತಂಡ ವಿಶ್ವಕಪ್‌ ಗೆಲ್ಲದೆ 28 ವರ್ಷಗಳಾಗಿದ್ದವು. ವಿಶ್ವಕಪ್‌ನಲ್ಲಿ ಸತತ ಮೂರು ಬಾರಿ ಚಾಂಪಿಯನ್‌ ಆದ ಆಸ್ಟ್ರೇಲಿಯಾ ತಂಡದ ಅಶ್ವಮೇಧಯಾಗವನ್ನು ತಡೆಯುವುದು ಯಾರು ಎಂಬ ಪ್ರಶ್ನೆ ಕ್ರಿಕೆಟ್‌ ಜಗತ್ತನ್ನು ಕಾಡುತ್ತಿತ್ತು. ಆದರೆ, 2011ರ ವಿಶ್ವಕಪ್‌ (2011 World Cup) ಹಲವು ನಿರೀಕ್ಷೆಗಳನ್ನು ಹುಸಿ ಮಾಡಲಿಲ್ಲ. ‘ಈ ಸಲ ಕಪ್‌ ನಮ್ದೆʼ ಎಂಬ ಮನಸ್ಥಿತಿಯೊಂದಿಗೆ ಭಾರತ ತಂಡ ಕಾಲಿಟ್ಟು, ‘ಆ ಸಲ ಕಪ್‌ ನಮ್ದೆʼ ಎಂದು ಈಗಲೂ ನಾವು ಹೇಳಿಕೊಂಡು ತಿರುಗಾಡುವಂತೆ ಮಾಡಿತು. ಹಾಗೆಯೇ, 2011ರ ವಿಶ್ವಕಪ್‌ ಟೂರ್ನಿಯು ಕೂಡ ಎಲ್ಲ ವಿಶ್ವಕಪ್‌ ಟೂರ್ನಿಗಳಂತೆ ಹಲವು ದಾಖಲೆ, ಸಂಭ್ರಮ, ಹಿನ್ನಡೆ, ನಿರಾಸೆ, ತಿರುವು, ತಿಮಿರು, ವಿವಾದ, ಪ್ರಮಾದಗಳಿಗೆ ಸಾಕ್ಷಿಯಾಯಿತು. ಹಾಗಾದರೆ, 2011ರ ವಿಶ್ವಕಪ್‌ ಯಾವೆಲ್ಲ ಕ್ಷಣಗಳಿಗೆ (World Cup History) ಸಾಕ್ಷಿಯಾಯಿತು? ಎಲ್ಲ ದೇಶಗಳನ್ನು ಹಿಮ್ಮೆಟ್ಟಿಸಿ ಭಾರತ ತಂಡ ಹೇಗೆ ಚಾಂಪಿಯನ್‌ ಆಯಿತು? ಭಾರತದ ಜತೆಗೆ ಯಾವ ತಂಡಗಳು ಉತ್ತಮ ಪ್ರದರ್ಶನ ತೋರಿದವು? ಯಾವ ತಂಡ ಕಳಪೆ ಪ್ರದರ್ಶನ ನೀಡಿದವು ಎಂಬುದರ ಸಮಗ್ರ ಮಾಹಿತಿ ಹೀಗಿದೆ…

ಭಾರತ, ಶ್ರೀಲಂಕಾ, ಬಾಂಗ್ಲಾದೇಶ ಜಂಟಿ ಆಯೋಜನೆ

ವಿಶ್ವಕಪ್‌ ಟೂರ್ನಿಯ 10ನೇ ಸರಣಿಯ ಪಂದ್ಯಗಳ ಆಯೋಜನೆಯು 2011ರಲ್ಲಿ ಭಾರತ, ಶ್ರೀಲಂಕಾ ಹಾಗೂ ಬಾಂಗ್ಲಾದೇಶಕ್ಕೆ ದೊರೆಯಿತು. ಸುಮಾರು 15 ವರ್ಷಗಳ ಬಳಿಕ ಏಷ್ಯಾ ಉಪಖಂಡದಲ್ಲಿ ವಿಶ್ವಕಪ್‌ ಆಯೋಜನೆಯ ಅವಕಾಶ ದೊರೆಯಿತು. ಒಂದು ಸೆಮಿಫೈನಲ್‌ ಹಾಗೂ ಫೈನಲ್‌ ಸೇರಿ ಭಾರತದ ಎಂಟು ಕ್ರೀಡಾಂಗಣಗಳಲ್ಲಿ 29 ಪಂದ್ಯ ನಡೆದರೆ, ಒಂದು ಸೆಮಿಫೈನಲ್‌ ಸೇರಿ 12 ಪಂದ್ಯಗಳನ್ನು ಶ್ರೀಲಂಕಾ ಆಯೋಜಿಸಿತು. ಬಾಂಗ್ಲಾದೇಶವು ಎರಡು ಕ್ರೀಡಾಂಗಣಗಳಲ್ಲಿ 8 ಪಂದ್ಯಗಳನ್ನು ಆಯೋಜಿಸಿತು. ಫೆಬ್ರವರಿ 17ರಂದು ವಿಶ್ವಕಪ್‌ ಉದ್ಘಾಟನಾ ಸಮಾರಂಭ ನಡೆದರೆ, ಫೆಬ್ರವರಿ 19ರಂದು ಮೊದಲ ಪಂದ್ಯದಿಂದ ಅಧಿಕೃತ ಚಾಲನೆ ದೊರೆಯಿತು. ಏಪ್ರಿಲ್‌ 2ರವರೆಗೆ ವಿಶ್ವಕಪ್‌ ಪಂದ್ಯಗಳು ನಡೆದವು.

2011ರ ವಿಶ್ವಕಪ್‌ ತಂಡಗಳ ನಾಯಕರು.

ಆಯೋಜನೆಗೆ ಸಿಗದ ಅವಕಾಶ, ಪಾಕಿಸ್ತಾನಕ್ಕೆ ಮುಖಭಂಗ

ಏಷ್ಯಾದಲ್ಲಿಯೇ 2011ರ ಏಕದಿನ ವಿಶ್ವಕಪ್‌ ಆಯೋಜನೆಗೊಂಡರೂ ಒಂದೇ ಒಂದು ಪಂದ್ಯ ಆಯೋಜಿಸಲು ಅವಕಾಶ ಸಿಗದಿರುವುದು ಪಾಕಿಸ್ತಾನಕ್ಕೆ ಜಾಗತಿಕ ಮಟ್ಟದಲ್ಲಿ ಭಾರಿ ಮುಖಭಂಗವಾಯಿತು. 2009ರಲ್ಲಿ ಪಾಕಿಸ್ತಾನದ ಲಾಹೋರ್‌ನಲ್ಲಿ ಶ್ರೀಲಂಕಾ ತಂಡದ ಆಟಗಾರರ ಮೇಲೆ ಉಗ್ರರು ದಾಳಿ ನಡೆಸಿದ ಕಾರಣ ಭದ್ರತೆಯ ಕಾರಣಗಳಿಂದಾಗಿ 2011ರ ವಿಶ್ವಕಪ್‌ನ ಒಂದೂ ಪಂದ್ಯ ಆಯೋಜಿಸಲು ಪಾಕ್‌ಗೆ ಅವಕಾಶ ಸಿಗಲಿಲ್ಲ. ಪಾಕಿಸ್ತಾನದಲ್ಲಿ ನಡೆಯಬೇಕಿದ್ದ 14 ಪಂದ್ಯಗಳಲ್ಲಿ 8 ಪಂದ್ಯ ಭಾರತದಲ್ಲಿ, 4 ಮ್ಯಾಚ್‌ ಶ್ರೀಲಂಕಾ ಹಾಗೂ 2 ಮ್ಯಾಚ್‌ ಬಾಂಗ್ಲಾದೇಶದಲ್ಲಿ ನಡೆದವು.

ಹೀಗಿತ್ತು ವಿಶ್ವಕಪ್‌ ಮಾದರಿ…

ಕೆಲವು ಸಣ್ಣಪುಟ್ಟ ಬದಲಾವಣೆಗಳೊಂದಿಗೆ 2011ರ ವಿಶ್ವಕಪ್‌ಗೆ ಚಾಲನೆ ದೊರೆಯಿತು. 2007ರ ವಿಶ್ವಕಪ್‌ ಟೂರ್ನಿಯಲ್ಲಿ 16 ತಂಡ ಭಾಗವಹಿಸಿದರೆ, 2011ರಲ್ಲಿ ತಂಡಗಳ ಸಂಖ್ಯೆ 14ಕ್ಕೆ ಇಳಿಯಿತು. ಹಾಗೆಯೇ, 4 ಗ್ರೂಪ್‌ಗಳಿಗೆ ಬದಲಾಗಿ 2 ಗ್ರೂಪ್‌ಗಳನ್ನಾಗಿ ವಿಂಗಡಿಸಲಾಯಿತು. ಐಸಿಸಿಯ 10 ಪೂರ್ಣಕಾಲಿಕ ಸದಸ್ಯ ರಾಷ್ಟ್ರಗಳ ಜತೆಗೆ ಐರ್ಲೆಂಡ್‌, ಕೆನಡಾ, ನೆದರ್ಲೆಂಡ್ಸ್‌ ಹಾಗೂ ಕೀನಾ ತಂಡಗಳು ಅರ್ಹತೆ ಪಡೆದಿದ್ದವು. ಒಂದೊಂದು ಗ್ರೂಪ್‌ನಲ್ಲಿ ತಲಾ 7 ತಂಡಗಳು ಸ್ಥಾನ ಪಡೆದವು. ಪ್ರತಿಯೊಂದು ತಂಡದ ವಿರುದ್ಧ ಸ್ಪರ್ಧಿಸಿದ ಬಳಿಕ ಗ್ರೂಪ್‌ನಲ್ಲಿ ಅಗ್ರ 4 ಸ್ಥಾನ ಪಡೆದ ತಂಡಗಳು ಕ್ವಾರ್ಟರ್‌ಫೈನಲ್‌ಗೆ, ಕ್ವಾರ್ಟರ್‌ ಫೈನಲ್‌ನಲ್ಲಿ ಗೆದ್ದ ತಂಡಗಳು ಸೆಮಿಫೈನಲ್‌ ಹಾಗೂ ಸೆಮಿಫೈನಲ್‌ನಲ್ಲಿ ಗೆಲುವು ಸಾಧಿಸಿದ ಟೀಮ್‌ಗಳು ಫೈನಲ್‌ಗೆ ಇಟ್ಟವು.

ಇದನ್ನೂ ಓದಿ: World Cup History: 2007ರ ವಿಶ್ವಕಪ್‌; ಟೂರ್ನಿಯಲ್ಲಿ ಹತ್ತಾರು ಮೇನಿಯಾ, ಆಸ್ಟ್ರೇಲಿಯಾ ಏಕಮೇವಾದ್ವಿತೀಯ!

ಲೀಗ್‌ ಹಂತದಿಂದ ಸೆಮೀಸ್‌ವರೆಗಿನ ಜರ್ನಿ…

2007ರಲ್ಲಿ ಬಾಂಗ್ಲಾದೇಶ ತಂಡ ಭಾರತ ತಂಡವನ್ನು, ಐರ್ಲೆಂಡ್‌ ಪಾಕಿಸ್ತಾನ ತಂಡವನ್ನು ಸೋಲಿಸಿದಂತಹ ಅಚ್ಚರಿಯ ಫಲಿತಾಂಶಗಳು 2011ರ ವಿಶ್ವಕಪ್‌ನಲ್ಲೂ ಕಾಣಿಸಿತು. ಇಂಗ್ಲೆಂಡ್‌ ನೀಡಿದ 327 ಗುರಿಯನ್ನು ಬೆನ್ನತ್ತಿದ ಐರ್ಲೆಂಡ್‌ ತಂಡವು ಎಲ್ಲರನ್ನೂ ನಿಬ್ಬೆರಗು ಮೂಡಿಸಿತು. ಆದರೂ, ಇಂಗ್ಲೆಂಡ್‌ ಬೇರೆ ತಂಡಗಳ ವಿರುದ್ಧ ಗೆಲುವು ಸಾಧಿಸಿ ಕ್ವಾರ್ಟರ್‌ ಫೈನಲ್‌ ತಲುಪಿತು. ಎ ಗ್ರೂಪ್‌ನಲ್ಲಿ ಅಗ್ರ 4 ಸ್ಥಾನ ಪಡೆದ ಪಾಕಿಸ್ತಾನ, ಶ್ರೀಲಂಕಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲ್ಯಾಂಡ್‌, ಬಿ ಗ್ರೂಪ್‌ನಲ್ಲಿದ್ದ ದಕ್ಷಿಣ ಆಫ್ರಿಕಾ, ಭಾರತ, ಇಂಗ್ಲೆಂಡ್‌ ಹಾಗೂ ವೆಸ್ಟ್‌ ತಂಡಗಳು ಕ್ವಾರ್ಟರ್‌ ಫೈನಲ್‌ ತಲುಪಿದವು. ಎ ಗ್ರೂಪ್‌ನಲ್ಲಿ ಜಿಂಬಾಬ್ವೆ, ಕೆನಡಾ ಮತ್ತು ಕೀನ್ಯಾ, ಬಿ ಗ್ರೂಪ್‌ನಲ್ಲಿ ಬಾಂಗ್ಲಾದೇಶ, ಐರ್ಲೆಂಡ್‌ ಹಾಗೂ ನೆದರ್ಲೆಂಡ್ಸ್ ತಂಡಗಳು ಕೊನೆಯ ಸ್ಥಾನ ಪಡೆದು ಹೋರಾಟ ಅಂತ್ಯಗೊಳಿಸಿದವು.

ಕ್ವಾರ್ಟರ್‌ ಫೈನಲ್‌ನಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಬಗ್ಗುಬಡಿದ ಭಾರತ ತಂಡವು ಸೆಮಿಫೈನಲ್‌ಗೆ ಲಗ್ಗೆ ಇಟ್ಟಿತು. ಹಾಗೆಯೇ, ವೆಸ್ಟ್‌ ಇಂಡೀಸ್‌ ತಂಡವನ್ನು ಸುಲಭವಾಗಿ ಮಣಿಸಿದ ಪಾಕಿಸ್ತಾನ, ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವು ಸಾಧಿಸಿದ ನ್ಯೂಜಿಲ್ಯಾಂಡ್‌ ಮತ್ತು ಇಂಗ್ಲೆಂಡ್‌ ವಿರುದ್ಧ ಗೆದ್ದ ಶ್ರೀಲಂಕಾ ಸೆಮೀಸ್‌ಗೆ ತಲುಪಿದವು. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಭಾರತದ ಸಚಿನ್‌, ಗಂಭೀರ್‌ ಹಾಗೂ ಯುವರಾಜ್‌ ಅದ್ಭುತ ಪ್ರದರ್ಶನಸ ತೋರಿ ಸೆಮಿಫೈನಲ್‌ ಹಾದಿಯನ್ನು ಸುಗಮಗೊಳಿಸಿದರು.

ವಿಶ್ವದಾಖಲೆ ಸೃಷ್ಟಿಸಿದ ಕೆವಿನ್‌ ಒಬ್ರಿಯಾನ್‌

ಲೀಗ್‌ ಹಂತದಲ್ಲಿ ಐರ್ಲೆಂಡ್‌ ಆಲ್ರೌಂಡರ್‌ ತೋರಿದ ಅಬ್ಬರದ ಬ್ಯಾಟಿಂಗ್‌ ಪ್ರದರ್ಶನವು ಕ್ರಿಕೆಟ್‌ ಲೋಕದ ಗಮನ ಸೆಳೆಯಿತು. ಇಂಗ್ಲೆಂಡ್‌ ವಿರುದ್ಧದ ಪಂದ್ಯದ ವೇಳೆ ಕೇವಲ 50 ಎಸೆತಗಳಲ್ಲಿ ಕೆವಿನ್‌ ಓಬ್ರಿಯಾನ್‌ ಅವರು ಶತಕ ಬಾರಿಸುವ ಮೂಲಕ ವಿಶ್ವಕಪ್‌ ಕ್ರಿಕೆಟ್‌ ಇತಿಹಾಸದಲ್ಲಿ ಅತಿವೇಗದ ಶತಕ ಬಾರಿಸಿದ ಆಟಗಾರ ಎಂಬ ಖ್ಯಾತಿಗೆ ಭಾಜನರಾದರು. ಈಗಲೂ ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಕಡಿಮೆ ಎಸೆತಗಳಲ್ಲಿ ಶತಕ ಬಾರಿಸಿದ ದಾಖಲೆ ಕೆವಿನ್‌ ಒಬ್ರಿಯಾನ್‌ ಹೆಸರಲ್ಲೇ ಇದೆ. ಹಾಗೆಯೇ, ವೆಸ್ಟ್‌ ಇಂಡೀಸ್‌ನ ಕೆಮರ್‌ ರೋಚ್‌, ಶ್ರೀಲಂಕಾದ ಲಸಿತ್‌ ಮಾಲಿಂಗ ಹ್ಯಾಟ್ರಿಕ್‌ ವಿಕೆಟ್‌ ಸಾಧನೆಯೂ ಈ ವಿಶ್ವಕಪ್‌ನಲ್ಲಿ ಅಚ್ಚಳಿಯದೆ ಉಳಿಯುವಂತೆ ಮಾಡಿತು.

ಯುವರಾಜ್‌ ಸಿಂಗ್‌ ಅಲ್ರೌಂಡ್‌ ಆಟದ ದಾಖಲೆ

ಐರ್ಲೆಂಡ್‌ ವಿರುದ್ಧದ ಪಂದ್ಯದ ವೇಳೆ ಭಾರತದ ಯುವರಾಜ್‌ ಸಿಂಗ್‌ ಅವರು ತೋರಿದ ಆಲ್ರೌಂಡ್‌ ಪ್ರದರ್ಶನವೂ ದಾಖಲೆಯಾಯಿತು. ವಿಶ್ವಕಪ್‌ನಲ್ಲಿ ಐದು ವಿಕೆಟ್‌ ತೆಗೆಯುವ ಜತೆಗೆ ಅದೇ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ ವಿಶ್ವದ ಮೊದಲ ಆಟಗಾರ ಎಂಬ ಖ್ಯಾತಿಗೆ ಯುವರಾಜ್‌ ಸಿಂಗ್‌ ಭಾಜನರಾದರು. 10 ಓವರ್‌ ಬೌಲಿಂಗ್‌ ಮಾಡಿದ ಯುವಿ, ಕೇವಲ 31 ರನ್‌ ನೀಡಿ 5 ವಿಕೆಟ್‌ ಕಬಳಿಸಿದರು. ಬ್ಯಾಟಿಂಗ್‌ನಲ್ಲೂ ಉತ್ತಮ ಪ್ರದರ್ಶನ ತೋರಿ 50 ರನ್‌ ಗಳಿಸಿ ತಂಡದ ಗೆಲುವಿಗೆ ನಿರ್ಣಾಯಕ ಎನಿಸಿದರು.

ಇದನ್ನೂ ಓದಿ: World Cup History : ಭಾರತ ಫೈನಲ್​​ನಲ್ಲಿ ಸೋತ 2003 ಆವೃತ್ತಿಯ ಅವಿಸ್ಮರಣೀಯ ಕ್ಷಣಗಳು ಇಲ್ಲಿವೆ

ಪಾಕ್‌ ಬಗ್ಗುಬಡಿದು ಭಾರತ ಫೈನಲ್‌ಗೆ

ಪಾಕಿಸ್ತಾನದ ವಿರುದ್ಧ ಭಾರತ ತಂಡವು ಬೇರೆ ಟೂರ್ನಿಗಳಲ್ಲಿ ತೋರುವ ಆಟವೇ ಬೇರೆ, ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಜತೆಗೆ ಆಡುವ ಆಟದ ಶೈಲಿಯೇ ಬೇರೆ. ಇದೇ ಕಾರಣಕ್ಕಾಗಿ ಇಂದಿಗೂ ಏಕದಿನ ವಿಶ್ವಕಪ್‌ನಲ್ಲಿ ಪಾಕ್‌ ವಿರುದ್ಧ ಭಾರತ ಒಂದೇ ಒಂದು ಪಂದ್ಯ ಸೋತಿಲ್ಲ. 2011ರ ವಿಶ್ವಕಪ್‌ ಸೆಮಿಫೈನಲ್‌ನಲ್ಲೂ ಭಾರತ ತಂಡವು ಪಾಕಿಸ್ತಾನದ ವಿರುದ್ಧ ಆಕ್ರಮಣಕಾರಿ ಆಟ ಪ್ರದರ್ಶಿಸಿತು. ಸಚಿನ್‌ ತೆಂಡೂಲ್ಕರ್‌ ಅವರ ಅಮೋಘ 85 ರನ್‌ಗಳ ನೆರವಿನಿಂದ ಭಾರತ ತಂಡ 50 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 260 ರನ್‌ ಗಳಿಸಿತು. ಆದರೆ, ಜಹೀರ್‌ ಖಾನ್‌, ಮುನಾಫ್‌ ಪಟೇಲ್‌, ಆಶಿಶ್‌ ನೆಹ್ರಾ, ಹರ್ಭಜನ್‌ ಸಿಂಗ್‌ ಹಾಗೂ ಯುವರಾಜ್‌ ಸಿಂಗ್‌ ಅವರ ಸಂಘಟಿತ ಬೌಲಿಂಗ್‌ ದಾಳಿಗೆ (ಐವರೂ ತಲಾ ಎರಡು ವಿಕೆಟ್)‌ ನಲುಗಿದ ಪಾಕಿಸ್ತಾನ 231 ರನ್‌ಗಳಿಗೆ ಆಲೌಟ್‌ ಆಗಿ ಸೋಲೊಪ್ಪಿಕೊಂಡಿತು. ಇದರೊಂದಿಗೆ ಧೋನಿ ಬಳಗವು ಪ್ರಶಸ್ತಿ ಸುತ್ತಿಗೆ ಪ್ರವೇಶ ಪಡೆಯಿತು. ಮತ್ತೊಂದೆಡೆ, ನ್ಯೂಜಿಲ್ಯಾಂಡ್‌ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಶ್ರೀಲಂಕಾ ಕೂಡ ಫೈನಲ್‌ ಬ್ಯಾಟಲ್‌ಗೆ ಟಿಕೆಟ್‌ ಪಡೆಯಿತು.

ವಿಶ್ವಕಪ್ ‘ದೋಣಿ’ಯನ್ನು ದಡ ಸೇರಿಸಿದ ‘ಧೋನಿ’ ಬಳಗ‌, ನಾವೇ ವಿಶ್ವ ಚಾಂಪಿಯನ್

1983ರಲ್ಲಿ ಭಾರತ ವಿಶ್ವಕಪ್‌ ಗೆದ್ದರೂ ಒಂದಿಡೀ ಪೀಳಿಗೆಗೆ ಆ ಪಂದ್ಯ ವೀಕ್ಷಿಸಲು, ಗೆಲುವಿನ ಕ್ಷಣಗಳನ್ನು ಅನುಭವಿಸಲು ಸಾಧ್ಯವಾಗಿರಲಿಲ್ಲ. 2003ರಲ್ಲಿ ಭಾರತ ತಂಡ ಫೈನಲ್‌ಗೆ ತಲುಪಿದರೂ ಅನುಭವಿಸಿದ ಸೋಲಿನ ನೋವು ಭಾರತೀಯರನ್ನು ಕಾಡದೆ ಬಿಟ್ಟಿರಲಿಲ್ಲ. ಹಾಗಾಗಿ, 2011ರ ವಿಶ್ವಕಪ್‌ ಫೈನಲ್‌ ಪಂದ್ಯದ ಮೇಲೆ ಶತಕೋಟಿ ಭಾರತೀಯರ ನಿರೀಕ್ಷೆ, ಬಯಕೆ, ತಹತಹಿಕೆ, ಆಶಾಭಾವ ಎಲ್ಲವೂ ಇತ್ತು. ಇದನ್ನು ಹುಸಿ ಮಾಡಲೇಬಾರದು ಎಂಬಂತೆ ಆಟವಾಡಿದ ಗೌತಮ್‌ ಗಂಭೀರ್‌ ಹಾಗೂ ಮಹೇಂದ್ರ ಸಿಂಗ್‌ ಧೋನಿಯು ಭಾರತಕ್ಕೆ ವಿಶ್ವಕಪ್‌ ತಂದುಕೊಟ್ಟರು. ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ 6 ವಿಕೆಟ್‌ ಕಳೆದುಕೊಂಡು 274 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಭಾರತ ತಂಡ ಆರಂಭಿಕ ಹಿನ್ನಡೆ ಅನುಭವಿಸಿದರೂ, ಗಂಭೀರ್‌ ಹಾಗೂ ಧೋನಿ ಅವರ ಸಮಯೋಚಿತ ಆಟದಿಂದ ಗೆಲುವು ದಕ್ಕಿತು. ಅದರಲ್ಲೂ, ಧೋನಿ ಅವರು ಸಿಕ್ಸರ್‌ ಮೂಲಕ ಭಾರತಕ್ಕೆ ಗೆಲುವು ತಂದುಕೊಟ್ಟ ವಿಡಿಯೊ ಈಗಲೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿರುತ್ತದೆ. ಶ್ರೀಲಂಕಾದ ತಿಲಕರತ್ನೆ ದಿಲ್ಶಾನ್‌ 500 ರನ್‌ ಗಳಿಸಿ ಅತ್ಯಧಿಕ ಸ್ಕೋರರ್‌ ಎನಿಸಿದರು. ಪಾಕಿಸ್ತಾನದ ಶಹೀದ್‌ ಅಫ್ರಿದಿ ಹಾಗೂ ಭಾರತದ ಜಹೀರ್‌ ಖಾನ್‌ ಅವರು ಬೌಲಿಂಗ್‌ನಲ್ಲಿ ಮಿಂಚಿ ತಲಾ 21 ವಿಕೆಟ್‌ ಪಡೆದು ಗರಿಷ್ಠ ವಿಕೆಟ್‌ ಪಡೆದ ಬೌಲರ್‌ಗಳೆನಿಸಿದರು.

ಫೈನಲ್‌ ಪಂದ್ಯದ ಸ್ಕೋರ್‌ ಕಾರ್ಡ್‌ ನೋಡಲು ಇಲ್ಲಿ ಕ್ಲಿಕ್‌ ಮಾಡಿ

ಸಿಕ್ಕರ್‌ ಮೂಲಕ ಲಂಕಾವನ್ನು ‘ಫಿನಿಶ್‌ ಮಾಡಿದ ಧೋನಿ (Dhoni Finishes Off In Style)

ಕ್ಯಾನ್ಸರ್‌ ಜತೆಗೇ ವಿಶ್ವಕಪ್‌ ಆಡಿದ ಯುವಿ ಎಂಬ ಹೋರಾಟಗಾರ

262 ರನ್‌, 9 ವಿಕೆಟ್‌, ಅತ್ಯದ್ಭುತ ಫೀಲ್ಡಿಂಗ್‌. ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರೂ, ಅದರ ಲಕ್ಷಣಗಳು ನೋವಿನ ಮೂಲಕ ಬಾಧಿಸುತ್ತಿದ್ದರೂ, ಒಬ್ಬರೇ ಒಬ್ಬರ ಗಮನಕ್ಕೆ ಬಾರದಂತೆ ವಿಶ್ವಕಪ್‌ನಲ್ಲಿ ಆಡಿದ ಯುವರಾಜ್‌ ಸಿಂಗ್‌ ಖಂಡಿತವಾಗಿಯೂ 2011ರ ವಿಶ್ವಕಪ್‌ ಹೀರೊ. ಟೂರ್ನಿಯುದ್ದಕ್ಕೂ ತಂಡಕ್ಕೆ ಆಲ್ರೌಂಡ್‌ ಪ್ರದರ್ಶನ ನೀಡಿ, ಪಂದ್ಯಗಳ ಗೆಲುವಿಗೆ ಕಾರಣರಾದ ಯುವಿ ಮ್ಯಾನ್‌ ಆಫ್ ದಿ ಸಿರೀಸ್‌ ಪ್ರಶಸ್ತಿ ಪಡೆದರು. ವಿಶ್ವಕಪ್‌ ಗೆದ್ದ ಬಳಿಕವೇ ಯುವಿ ಆರೋಗ್ಯ ತಪಾಸಣೆ ಮಾಡಿಸಿಕೊಂಡಾಗ ಲಂಗ್‌ ಕ್ಯಾನ್ಸರ್‌ ಮೊದಲ ಸ್ಟೇಜ್‌ನಲ್ಲಿದೆ ಎಂಬುದು ಗೊತ್ತಾಯಿತು. ಆದರೇನಂತೆ, 2011ರ ವಿಶ್ವಕಪ್‌ ವೇಳೆ ಮೈದಾನದಲ್ಲಿ ವೀರನಂತೆ ಹೋರಾಡಿದ ಯುವರಾಜ್‌ ಸಿಂಗ್‌, ಕ್ಯಾನ್ಸರ್‌ ವಿರುದ್ಧವೂ ಹೋರಾಡಿದರು. ವಿಶ್ವಕಪ್‌ ಗೆದ್ದ ವರ್ಷವೇ ಎದೆಗುಂದದೆ, ಹಿಂದಡಿ ಇಡದೆ ಚಿಕಿತ್ಸೆ ಪಡೆದ ಯುವಿ, ಕ್ಯಾನ್ಸರ್‌ಅನ್ನೂ ಗೆದ್ದು 2012ರಲ್ಲಿ ತಂಡಕ್ಕೆ ಮರಳಿದರು. ಕ್ಯಾನ್ಸರ್‌ ನೋವು ಕಾಣಿಸಿಕೊಂಡರೂ ಆಟದ ಮೇಲೆ ಗಮನ ಹರಿಸಿದ ಯುವಿಯನ್ನು ನಾವೆಲ್ಲ ಅಂಕಿ-ಅಂಶಗಳಾಚೆ, ಆಟಗಾರರ ನಡುವಿನ ಹೋಲಿಕೆಗಳ ಆಚೆ ಇಷ್ಟಪಡುವುದು ಇದೇ ಕಾರಣಕ್ಕೆ!

ಕ್ರಿಕೆಟ್‌ ದೇವರಿಗೆ ವಿಶ್ವಕಪ್‌ ಉಡುಗೊರೆ

ಭಾರತ ಕ್ರಿಕೆಟ್‌ ತಂಡಕ್ಕೆ 2 ದಶಕಗಳವರೆಗೆ ಅಪಾರ ಕೊಡುಗೆ ನೀಡಿದ, ಶತಕೋಟಿ ಭಾರತೀಯರ ನಿರೀಕ್ಷೆಗಳನ್ನು ಹೊತ್ತುಕೊಂಡು ಆಟವಾಡಿದ, ಪ್ರತಿ ಬಾರಿ ಬ್ಯಾಟ್‌ ಹಿಡಿದು ಮೈದಾನಕ್ಕೆ ಬಂದಾಗಲೂ ಖುರ್ಚಿಯ ತುದಿಗೆ ಕೂರುವಂತೆ ಮಾಡಿದ, ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ ಅವರಿಗೂ ವಿಶ್ವಕಪ್‌ ಗೆಲ್ಲದ ಕೊರಗಿತ್ತು. ಆದರೆ, 2011ರಲ್ಲಿ ಆ ಕೊರಗನ್ನು ಭಾರತ ತಂಡ ನೀಗಿಸಿತು. ಫೈನಲ್‌ ಗೆದ್ದ ಬಳಿಕ ಕಪ್‌ ಎತ್ತುವ ಮೊದಲು ವಿರಾಟ್‌ ಕೊಹ್ಲಿ, ಯುಸುಫ್‌ ಪಠಾಣ್‌ ಸೇರಿ ಹಲವರು ಸಚಿನ್‌ ತೆಂಡೂಲ್ಕರ್‌ ಎಂಬ ವಾಮನ ಮೂರ್ತಿಯನ್ನು ಮೈದಾನದ ಸುತ್ತಲೂ ಹೊತ್ತು ತಿರುಗಿದರು.

ಅಷ್ಟೇ ಅಲ್ಲ, ತಂಡದ ಆಟಗಾರರು ಇಡೀ ವಿಶ್ವಕಪ್‌ ಗೆಲುವನ್ನು ಸಚಿನ್‌ ತೆಂಡೂಲ್ಕರ್‌ ಅವರಿಗೆ ಅರ್ಪಿಸಿದರು. “21 ವರ್ಷಗಳವರೆಗೆ ದೇಶದ ಜನರ ನಿರೀಕ್ಷೆಗಳ ಭಾರವನ್ನು ತೆಂಡೂಲ್ಕರ್‌ ಹೊತ್ತುಕೊಂಡರು. ಈಗ ನಾವು ಅವರನ್ನ ಹೊತ್ತುಕೊಂಡು ತಿರುಗುವ ಸಮಯ ಬಂದಿದೆ” ಎಂದು ವಿರಾಟ್‌ ಕೊಹ್ಲಿ ಹೇಳಿದರು. “ನಾವು ನಿಜವಾಗಿಯೂ ಸಾಧಿಸಿದ್ದೇವೆ. ವಿಶ್ವಕಪ್‌ ಸಚಿನ್‌ ತೆಂಡೂಲ್ಕರ್‌ಗೆ ಅರ್ಪಣೆ” ಎಂದು ಯುವರಾಜ್‌ ಸಿಂಗ್‌ ಭಾವುಕರಾದರು. ಗೌತಮ್‌ ಗಂಭೀರ್‌ ಕೂಡ ಗೆಲುವನ್ನು ಮಾಸ್ಟರ್‌ ಬ್ಲಾಸ್ಟರ್‌ಗೆ ಅರ್ಪಿಸಿದರು. ಇದರೊಂದಿಗೆ ಭಾರತದ 28 ವರ್ಷಗಳ ಕನಸು ನನಸು ನನಸಾಯಿತು. 1983ರಷ್ಟೇ 2011ನೇ ಇಸವಿ ಕೂಡ ಚಿರಸ್ಥಾಯಿಯಾಯಿತು.

ವಿಶ್ವಕಪ್‌ ಕುರಿತ ಇನ್ನಷ್ಟು ಆಸಕ್ತಿದಾಯಕ ಸುದ್ದಿಗಳಿಗೆ ಇಲ್ಲಿ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

MS Dhoni Bike Riding: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಹೇಳಿದ ಬಳಿಕ ವಿಶ್ರಾಂತ ಜೀವನವನ್ನು ಎಂಜಾಯ್​ ಮಾಡುತ್ತಿರುವ ಧೋನಿ ಅವರು ತಮ್ಮ ಬೈಕ್ ಮತ್ತು ಕಾರ್​ಗಳನ್ನು ಇರಿಸಲು ತಮ್ಮ ಮನೆಯ ಪಕ್ಕದಲ್ಲಿ ದೊಡ್ಡ ಕಟ್ಟಡವನ್ನೇ ಹೊಂದಿದ್ದಾರೆ. ಕೆಳವು ದಿನಗಳ ಹಿಂದೆ ವೆಂಕಟೇಶ್ ಪ್ರಸಾದ್ ಮತ್ತು ಸುನಿಲ್ ಜೋಶಿ ಅವರು ಧೋನಿಯ ರಾಂಚಿಯಲ್ಲಿರುವ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಧೋನಿ ಫಾರ್ಮ್ ಹೌಸ್​ನಲ್ಲಿರುವ ಬೈಕ್​(ms dhoni bike collection) ಮತ್ತು ಕಾರುಗಳ ವಿಡಿಯೊವನ್ನು ಹಂಚಿಕೊಂಡಿದ್ದರು

VISTARANEWS.COM


on

MS Dhoni Bike Riding
Koo

ರಾಂಚಿ: ಆರ್​ಸಿಬಿ ವಿರುದ್ಧ ಸೋಲುವ ಮೂಲಕ ಚೆನ್ನೈ ಸೂಪರ್​ ಕಿಂಗ್ಸ್​(CSK) ತಂಡ 17ನೇ ಆವೃತ್ತಿಯ ಐಪಿಎಲ್​ನಿಂದ ಹೊರಬಿದ್ದಿತ್ತು. ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಡೆದಿದ್ದ ಪಂದ್ಯದಲ್ಲಿ ಚೆನ್ನೈ 27 ರನ್​ಗಳ ಅಂತರದಿಂದ ಸೋಲು ಕಂಡಿತ್ತು. ಈ ಸೋಲಿನ ಮರು ದಿನವೇ ಧೋನಿ(MS Dhoni) ತಮ್ಮ ತವರಾದ ರಾಂಚಿಗೆ ಮರಳಿದ್ದರು. ಇದೀಗ ತವರಿನಲ್ಲಿ ಬೈಕ್​ ರೈಡಿಂಗ್​ ಮಾಡಿದ್ದಾರೆ. ಅವರು ಬೈಕ್​ನಲ್ಲಿ ಸುತ್ತಾಡಿಕೊಂಡು ವಾಪಸ್​ ಮನೆಗೆ ಬರುತ್ತಿರುವ ವಿಡಿಯೊ ವೈರಲ್​ ಆಗಿದೆ. ಸದ್ಯ ಧೋನಿ ಅವರು ಬೈಕ್​ ಓಡಿಸಿದ(MS Dhoni Bike Riding) ವಿಡಿಯೊ ವೈರಲ್(Viral Video)​ ಆಗಿದ್ದು, ಅವರ ಅಭಿಮಾನಿಗಳು ಹಲವು ಕಮೆಂಟ್​ಗಳನ್ನು ಮಾಡಿದ್ದಾರೆ.

ಧೋನಿ ಬಳಿ ಇದೆ ದೊಡ್ಡ ಬೈಕ್​ ಗ್ಯಾರೇಜ್​


ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಹೇಳಿದ ಬಳಿಕ ವಿಶ್ರಾಂತ ಜೀವನವನ್ನು ಎಂಜಾಯ್​ ಮಾಡುತ್ತಿರುವ ಧೋನಿ ಅವರು ತಮ್ಮ ಬೈಕ್ ಮತ್ತು ಕಾರ್​ಗಳನ್ನು ಇರಿಸಲು ತಮ್ಮ ಮನೆಯ ಪಕ್ಕದಲ್ಲಿ ದೊಡ್ಡ ಕಟ್ಟಡವನ್ನೇ ಹೊಂದಿದ್ದಾರೆ. ಕೆಳವು ದಿನಗಳ ಹಿಂದೆ ವೆಂಕಟೇಶ್ ಪ್ರಸಾದ್ ಮತ್ತು ಸುನಿಲ್ ಜೋಶಿ ಅವರು ಧೋನಿಯ ರಾಂಚಿಯಲ್ಲಿರುವ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಧೋನಿ ಫಾರ್ಮ್ ಹೌಸ್​ನಲ್ಲಿರುವ ಬೈಕ್​(ms dhoni bike collection) ಮತ್ತು ಕಾರುಗಳ ವಿಡಿಯೊವನ್ನು ಹಂಚಿಕೊಂಡಿದ್ದರು. ಇದನ್ನು ಕಂಡ ಅನೇಕರು ಅಬ್ಬಾ… ಎಂದು ಆಶ್ಚರ್ಯವಾಗಿದ್ದರು. ಈ ಫಾರ್ಮ್​ಹೌಸ್​ನ ವಿಡಿಯೊ ವೈರಲ್​ ಆಗುತ್ತು.

ಇದನ್ನೂ ಓದಿ MS Dhoni Retirement: ಧೋನಿ ನಿವೃತ್ತಿ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಚೆನ್ನೈ ಫ್ರಾಂಚೈಸಿ

ಎಂಎಸ್ ಧೋನಿ ಬೈಕ್ ಕಲೆಕ್ಷನ್

ಯಮಹಾ, ಡುಕಾಟಿ, ಕವಾಸಕಿ ಮುಂತಾದ ಪ್ರಸಿದ್ಧ ಬ್ರಾಂಡ್ ಗಳು ಧೋನಿ ಅವರ ಆಕರ್ಷಕ ಬೈಕ್ ಗಳ ಸಂಗ್ರಹದಲ್ಲಿವೆ ಎಂದು ವಿವಿಧ ಮಾಧ್ಯಮಗಳು ವರದಿ ಮಾಡಿವೆ. ಹೆಚ್ಚುವರಿಯಾಗಿ, ಕಾನ್ಫೆಡರೇಟ್ ಎಕ್ಸ್ 132 ಹೆಲ್ ಕ್ಯಾಟ್, ವಿಂಟೇಜ್ ನಾರ್ಟನ್ ಜುಬಿಲಿ 250 ಮತ್ತು ಹಲವಾರು ಗಮನಾರ್ಹ ಬೈಕುಗಳಂತಹ ವಿಶಿಷ್ಟ ಮತ್ತು ಅಪರೂಪದ ಮಾದರಿಗಳನ್ನು ಹೊಂದಿದ್ದಾರೆ. ಇತ್ತೀಚೆಗೆ, ಧೋನಿ ಹೊಸದಾಗಿ ಕಸ್ಟಮೈಸ್ ಮಾಡಿದ ಜಾವಾ 42 ಬಾಬ್ಬರ್ ಅನ್ನು ತಮ್ಮ ಬೆಳೆಯುತ್ತಿರುವ ಬೈಕುಗಳ ಸಂಗ್ರಹಕ್ಕೆ ಸೇರಿಸಿದ್ದಾರೆ.

ಮಹೇಂದ್ರ ಸಿಂಗ್​ ಧೋನಿ(MS Dhoni Retirement) ಅವರ ನಿವೃತ್ತಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೀಗ ಧೋನಿ ನಿವೃತ್ತಿ ವಿಚಾರವಾಗಿ ಸಿಎಸ್​ಕೆ ಫ್ರಾಂಚೈಸಿಯ ಅಧಿಕಾರಿಯೊಬ್ಬರು ಮಹತ್ವದ ಹೇಳಿಕೆ ನೀಡಿದ್ದಾರೆ.

“ಧೋನಿ ಅವರು ಸಿಎಸ್‌ಕೆ ಜತೆ ಯಾರೊಂದಿಗೂ ತಮ್ಮ ನಿವೃತ್ತಿ ಬಗ್ಗೆ ಇದುವರೆಗೂ ಮಾತನಾಡಿಲ್ಲ. ಕೆಲವು ಸಕ್ರಿಯ ಕ್ರಿಕೆಟಿಗರಿಂದ ಹೆಚ್ಚು ಟೀಕೆಗೆ ಒಳಗಾಗಿರುವ ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮವು ಧೋನಿಯ ನಿವೃತ್ತಿಯ ವಿಚಾರದಲ್ಲಿ ಪ್ರಮುಖ ಪಾತ್ರವಹಿಸುವ ಸಾಧ್ಯತೆಯಿದೆ. ನಿಯಮವು ಮುಂದುವರಿದರೆ, ತಂಡದೊಂದಿಗೆ ನಿರ್ದಿಷ್ಟ ಕೆಲಸವನ್ನು ಪೂರೈಸಲು ಇದು ಅವರಿಗೆ ಸ್ವಾತಂತ್ರ್ಯವನ್ನು ನೀಡುತ್ತದೆ. ನಿಯಮವನ್ನು ರದ್ದುಗೊಳಿಸಿದರೆ, ಧೋನಿ ಆಡುವುದು ಕಷ್ಟ” ಎಂದು ಹೇಳಿದ್ದಾರೆ.

ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಾಗಿತ್ತು. ಇದೀಗ ಚೆನ್ನೈ ಸೋತು ಟೂರ್ನಿಯಿಂದ ಹೊರಬಿದ್ದರೂ ಧೋನಿ ತಮ್ಮ ನಿವೃತ್ತಿ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಪ್ರಕಟಿಸಿಲ್ಲ.

Continue Reading

ಕ್ರೀಡೆ

KMF Nandini Logo: ನಂದಿನಿಗೆ ಸ್ವಾಗತಿಸಿ ಟಿ20 ವಿಶ್ವಕಪ್​ ಜೆರ್ಸಿ ಬಿಡುಗಡೆಗೊಳಿಸಿದ ಐರ್ಲೆಂಡ್ ತಂಡ

KMF Nandini Logo: ಜೆರ್ಸಿ ಬಿಡುಗಡೆಯ ಬಳಿಕ ಮಾತನಾಡಿದ, ಕ್ರಿಕೆಟ್ ಐರ್ಲೆಂಡ್‌ನ ಮುಖ್ಯ ಹಣಕಾಸು ಅಧಿಕಾರಿ ಆ್ಯಂಡ್ರ್ಯೂ ಮೇ,” ಕರ್ನಾಟಕ ಹಾಲು ಒಕ್ಕೂಟವನ್ನು ಹೊಸ ಪಾಲುದಾರರಾಗಿ ಸ್ವಾಗತಿಸಲು ನಮಗೆ ಸಂತೋಷವಾಗುತ್ತಿದೆ. ಟಿ–20 ವಿಶ್ವಕಪ್‌ನಲ್ಲಿ ಐರ್ಲೆಂಡ್ ಪುರುಷರ ತಂಡದ ಅಧಿಕೃತ ಪ್ರಾಯೋಜಕರಾಗಿ ನಂದಿನಿಯನ್ನು ಘೋಷಿಸಲು ಸಂತಸವಾಗುತ್ತಿದೆ” ಎಂದು ಹೇಳಿದರು.

VISTARANEWS.COM


on

KMF Nandini Logo
Koo

ಬೆಂಗಳೂರು: ಕೆಲವು ದಿನಗಳ ಹಿಂದಷ್ಟೇ ನಂದಿನಿ ಲೋಗೋ(KMF Nandini Logo) ಇರುವ ಜೆರ್ಸಿಯನ್ನು ‘ಕ್ರಿಕೆಟ್ ಸ್ಕಾಟ್ಲೆಂಡ್’ ಅನಾವರಣಗೊಳಿಸಿತ್ತು. ಇದೀಗ ಐರ್ಲೆಂಡ್(Ireland) ತಂಡ ಕೂಡ ನಂದಿನಿ ಲೋಗೋ ಇರುವ ಜೆರ್ಸಿಯನ್ನು ಪ್ರಕಟಿಸಿದೆ. ಇದು ಮಾತ್ರವಲ್ಲದೆ ಕ್ರಿಕೆಟ್​ ಐರ್ಲೆಂಡ್ ತನ್ನ ಅಧಿಕೃತ ವೆಬ್​ಸೈಟ್​ನ ಫೋಟೊದಲ್ಲಿಯೂ ನಂದಿನಿ ಲೋಗೋ ಇರುವ ಜೆರ್ಸಿಯ ದೊಡ್ಡ ಫೋಟೊವನ್ನು ಹಾಕಿ ‘ವೆಲ್​ಕಮ್​ ನಂದಿನಿ'(WELCOME NANDINI) ಎಂದು ಬರೆದುಕೊಂಡಿದೆ. ಸೋಮವಾರ ಕ್ರಿಕೆಟ್​ ಐರ್ಲೆಂಡ್ ಈ ಜೆರ್ಸಿಯನ್ನು ಅನಾವರಣ ಮಾಡಿತು.

ಜೆರ್ಸಿ ಬಿಡುಗಡೆಯ ಬಳಿಕ ಮಾತನಾಡಿದ, ಕ್ರಿಕೆಟ್ ಐರ್ಲೆಂಡ್‌ನ ಮುಖ್ಯ ಹಣಕಾಸು ಅಧಿಕಾರಿ ಆ್ಯಂಡ್ರ್ಯೂ ಮೇ,” ಕರ್ನಾಟಕ ಹಾಲು ಒಕ್ಕೂಟವನ್ನು ಹೊಸ ಪಾಲುದಾರರಾಗಿ ಸ್ವಾಗತಿಸಲು ನಮಗೆ ಸಂತೋಷವಾಗುತ್ತಿದೆ. ಟಿ–20 ವಿಶ್ವಕಪ್‌ನಲ್ಲಿ ಐರ್ಲೆಂಡ್ ಪುರುಷರ ತಂಡದ ಅಧಿಕೃತ ಪ್ರಾಯೋಜಕರಾಗಿ ನಂದಿನಿಯನ್ನು ಘೋಷಿಸಲು ಸಂತಸವಾಗುತ್ತಿದೆ” ಎಂದು ಹೇಳಿದರು.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ನಲ್ಲಿ ‘ನಂದಿನಿ’ ಲಾಂಛನ; ಹರ್ಷ ವ್ಯಕ್ತಪಡಿಸಿದ ಸಿದ್ದರಾಮಯ್ಯ

ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ನಮ್ಮ ಬ್ರಾಂಡ್​ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದು ಕರ್ನಾಟಕದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣವಾಗಿದೆ. ಶುದ್ಧತೆ ಮತ್ತು ಶ್ರೇಷ್ಠತೆಯ ಪ್ರತೀಕವಾಗಿರುವ ನಂದಿನಿಯು ಈಗ ಜಾಗತಿಕ ಬ್ರ್ಯಾಂಡ್‌ ಆಗಿ ಗುರುತಿಸಿಕೊಳ್ಳುವುದಕ್ಕೆ ಹೆಮ್ಮೆ ಎನಿಸುತ್ತದೆ. ಈ ಮೂಲಕ ನಂದಿನಿಯ ಮೌಲ್ಯ ಮತ್ತು ಜನಪ್ರಿಯತೆ ಮತ್ತಷ್ಟು ಹೆಚ್ಚಾಗಲಿದ್ದು, ಜನಪ್ರಿಯ ಕ್ರೀಡೆಯಾದ ಕ್ರಿಕೆಟ್‌ ತಂಡದ ಪ್ರಾಯೋಜಕತ್ವದಿಂದಾಗಿ ನಂದಿನಿ ಲೋಗೋ ವಿಶ್ವವ್ಯಾಪಿ ರಾರಾಜಿಸಲಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಇನಷ್ಟು ತಂಡಗಳ ಪ್ರಾಯೋಜಕ್ವ ಪಡೆದರೂ ಅಚ್ಚರಿಯಿಲ್ಲ.  

ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಎಡಗೈ ಬ್ಯಾಟ್ಸ್‌ಮನ್‌ಗಳಿಗೆ ಬಲಗೈ ಮತ್ತು ಬಲಗೈ ಬ್ಯಾಟ್ಸ್‌ಮನ್‌ಗಳ ಎಡಗೈ ಮೇಲೆ ನಂದಿನಿ ಲೋಗೋ ಕಾಣಿಸಿಕೊಳ್ಳಲಿದೆ. ಐರ್ಲೆಂಡ್ ತಂಡ ಜೆರ್ಸಿ ಇನ್ನಷ್ಟೇ ಅನಾವರಣಗೊಳ್ಳಬೇಕಿದೆ. ಮಿನಿ ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ಮೋಹನ್‌ದಾಸ್‌ ಪೈ ವಿರೋಧ


ಉದ್ಯಮಿ ಮೋಹನ್‌ದಾಸ್‌ ಪೈ (Mohandas Pai) ಅವರು ಸ್ಕಾಟ್ಲೆಂಡ್, ಐರ್ಲೆಂಡ್‌ ತಂಡಗಳಿಗೆ KMF ಪ್ರಾಯೋಜಕತ್ವ ಪಡೆದ ಕಾರಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಕೆಎಂಎಫ್‌ಗೆ ಕರ್ನಾಟಕ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು ಕಾಣುವುದಿಲ್ಲವೇ? ಇವುಗಳಿಗೇಕೆ ಪ್ರಾಯೋಜಕತ್ವ ನೀಡಿಲ್ಲ ಎಂದು ಪ್ರಶ್ನೆ ಮಾಡಿದ್ದರು.

ಕೆಎಂಎಫ್‌ನಿಂದ ವಿದೇಶಿ ಕ್ರಿಕೆಟ್ ತಂಡಗಳಿಗೆ ಪ್ರಾಯೊಜಕತ್ವ ಪಡೆದ ವಿಚಾರದ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋಹನ್‌ ದಾಸ್‌ ಪೈ, ಕರ್ನಾಟಕದ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು, ಬಡವರಿಗೆ ವಿದ್ಯಾರ್ಥಿ ವೇತನಗಳಿಗೆ ಏಕೆ ಕೆಎಂಎಫ್‌ ಪ್ರಾಯೋಜಕತ್ವವನ್ನು ನೀಡಬಾರದು? ಕೆಎಂಎಫ್ ಕನ್ನಡಿಗ ತೆರಿಗೆದಾರರ ಹಣ, ಸಬ್ಸಿಡಿ ಮತ್ತು ಬಜೆಟ್‌ನಿಂದ ಧನಸಹಾಯವನ್ನು ಪಡೆದುಕೊಳ್ಳುತ್ತದೆ. ಆದರೆ, ಯಾರಿಗೂ ಗೊತ್ತಿಲ್ಲದ ವಿದೇಶಿ ತಂಡಗಳಿಗೆ ಖರ್ಚು ಮಾಡಲು ಹೊರಟಿದೆ” ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಈ ಬಗ್ಗೆ ಟ್ಯಾಗ್‌ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದರು.

Continue Reading

ಕ್ರೀಡೆ

T20 World Cup 2024: ಇಂಡೋ-ಪಾಕ್​ ಮಿನಿ ವಿಶ್ವಕಪ್​ ಸಮರ ನಡೆಯುವ ಸ್ಟೇಡಿಯಂನ ವಿಡಿಯೊ ವೈರಲ್​

T20 World Cup 2024:ಈ ಸ್ಟೇಡಿಯಂ ಭಾರತ-ಪಾಕ್​ ಪಂದ್ಯಕ್ಕಾಗಿಯೇ ತಾತ್ಕಾಲಿಕವಾಗಿ ನಿರ್ಮಿಸಲಾಗಿದೆ ಎನ್ನಲಾಗಿದೆ. ಪಂದ್ಯದ ನಂತರ ಇದನ್ನು ಕೆಡವಲಾಗುತ್ತದೆ ಎಂದು ತಿಳಿಸಲಾಗಿದೆ. ವಿಶ್ವಕಪ್ ಟೂರ್ನಿಗೆ ಅಮೆರಿಕದ ಮೂರು ಸ್ಟೇಡಿಯಂಗಳು ಆತಿಥ್ಯ ವಹಿಸಿವೆ. ಇಲ್ಲಿ 16 ಪಂದ್ಯಗಳು ನಡೆಯಲಿದೆ.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್​: ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್​(T20 World Cup 2024) ಟೂರ್ನಿ ಆರಂಭಕ್ಕೆ ಇನ್ನು ಕೇವಲ 12 ದಿನಗಳು ಮಾತ್ರ ಬಾಕಿ ಉಳಿದಿವೆ. ಜೂನ್​ 1ರಿಂದ ಆರಂಭವಾಗಿ ಜೂನ್​ 29ರ ತನಕ ಈ ಟೂರ್ನಿ ನಡೆಯಲಿದೆ. ಮೊದಲ ಬಾರಿಗೆ ಅಮೆರಿಕ ವಿಂಡೀಸ್​ ಜತೆ ಸೇರಿ ಟೂರ್ನಿಯ ಆತಿಥ್ಯವಹಿಸಿಕೊಂಡಿದೆ. ವಿಶ್ವಕಪ್​ ಸಲುವಾಗಿಯೇ ನ್ಯೂಯಾರ್ಕ್​ನಲ್ಲಿ ನಿಮಾರ್ಣ ಮಾಡಲಾಗಿರುವ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium)ಯಂನ ವಿಡಿಯೊವೊಂದು ವೈರಲ್​ ಆಗಿದೆ.

34 ಸಾವಿರ ಪ್ರೇಕ್ಷಕರು ಕೂರುವಷ್ಟು ಸಾಮರ್ಥ್ಯದ ಸ್ಟೇಡಿಯಂ ಅನ್ನು ಕೇವಲ 5 ತಿಂಗಳಲ್ಲಿ ನಿರ್ಮಿಸಲಾಯಿತು. ಈ ವೇಳೆ ಹಲವು ಅಡಚಣೆಗಳು ಕೂಡ ಎದುರಾಗಿತ್ತು. ಸ್ಟೇಡಿಯಂ ನಿರ್ಮಾಣದ ವೇಳೆ ವಿಪರೀತ ಮಂಚು ಬಿದ್ದು ನಿರ್ಮಾಣ ಕಾರ್ಯ ಹಲವು ಬಾರಿ ಸ್ಥಗಿತಗೊಂಡಿತ್ತು. ಆದರೂ ಹಠ ಬಿಡದ ಸಂಘಟಕರು ಅಂತಿಮವಾಗಿ ಈ ಸ್ಟೇಡಿಯಂ ನಿರ್ಮಾಣ ಮಾಡಿಯೇ ಬಿಟ್ಟಿದ್ದಾರೆ. ಪ್ರತಿ ತಿಂಗಳು ಕೂಡ ಈ ಮೈದಾನದ ಕಾಮಗಾರಿಯ ವಿಡಿಯೊವನ್ನು ಐಸಿಸಿ ಕೂಡ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಳ್ಳುತ್ತಿತ್ತು.

ಈ ಸ್ಟೇಡಿಯಂ ಭಾರತ-ಪಾಕ್​ ಪಂದ್ಯಕ್ಕಾಗಿಯೇ ತಾತ್ಕಾಲಿಕವಾಗಿ ನಿರ್ಮಿಸಲಾಗಿದೆ ಎನ್ನಲಾಗಿದೆ. ಪಂದ್ಯದ ನಂತರ ಇದನ್ನು ಕೆಡವಲಾಗುತ್ತದೆ ಎಂದು ತಿಳಿಸಲಾಗಿದೆ. ವಿಶ್ವಕಪ್ ಟೂರ್ನಿಗೆ ಅಮೆರಿಕದ ಮೂರು ಸ್ಟೇಡಿಯಂಗಳು ಆತಿಥ್ಯ ವಹಿಸಿವೆ. ಇಲ್ಲಿ 16 ಪಂದ್ಯಗಳು ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನ ಜೂನ್​ 9ರಂದು ಪಂದ್ಯವನ್ನಾಡಲಿದೆ.

ಇದನ್ನೂ ಓದಿ T20 World Cup 2024: ಪಾಕ್​ ಉಗ್ರರ ಭೀತಿ; ಬಿಗಿ ಭದ್ರತೆ ಕೈಗೊಂಡ ವಿಂಡೀಸ್​ ಕ್ರಿಕೆಟ್​ ಮಂಡಳಿ

ಅಮೆರಿಕದಲ್ಲಿ ಸುಸಜ್ಜಿತ ಕ್ರಿಕೆಟ್​ ಪಿಚ್ ಇಲ್ಲದ ಕಾರಣ ಆಸ್ಟ್ರೇಲಿಯಾದಿಂದ ಈ ಪಿಚ್​ಗಳನ್ನು ತರಿಸಲಾಗಿದೆ. ಡ್ರಾಪ್ ಇನ್ ಪಿಚ್‌ಗಳ(Drop-In Pitches) ಅಳವಡಿ ಕೂಡ ಸಂಪೂರ್ಣಗೊಂಡಿದೆ. ಪಿಚ್ ಸಂಪೂರ್ಣವಾಗಿ ಅಡಿಲೇಡ್‌ನಲ್ಲಿ ತಯಾರಿಸಲಾಗಿದ್ದು, ಅದನ್ನು ಹಡಗಿನಲ್ಲೇ 22,500 ಕಿಲೋಮೀಟರ್ ದೂರದ ಫ್ಲೋರಿಡಾ ಮೂಲಕ ನ್ಯೂಯಾರ್ಕ್‌ಗೆ ತರಲಾಗಿತ್ತು.

ಅಮೆರಿಕದ ಈ ಮೂರು ಕ್ರೀಡಾಂಗಣಗಳಲ್ಲಿ 16 ಪಂದ್ಯಗಳು ನಡೆಯಲಿದೆ. ಉಳಿದ 39 ಪಂದ್ಯಗಳಿಗೆ ವೆಸ್ಟ್ ಇಂಡೀಸ್ ಆತಿಥ್ಯ ವಹಿಸಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ನ್ಯೂಯಾರ್ಕ್ ಮತ್ತು ನವದೆಹಲಿ ನಡುವೆ 10.5 ಗಂಟೆಗಳ ಸಮಯದ ವ್ಯತ್ಯಾಸವಿರುವುದರಿಂದ, ಸಂಘಟಕರು ಕೆಲವು ಪಂದ್ಯಗಳನ್ನು, ವಿಶೇಷವಾಗಿ ಭಾರತವನ್ನು ಒಳಗೊಂಡ ಪಂದ್ಯಗಳನ್ನು ಬೆಳಗ್ಗೆ ಪ್ರಾರಂಭಿಸಲು ಚರ್ಚಿಸಿದ್ದಾರೆ ಎನ್ನಲಾಗಿದೆ. ಇದು ಭಾರತೀಯ ದೂರದರ್ಶನ ಪ್ರೇಕ್ಷಕರಿಗೆ ತಮ್ಮ ಅನುಕೂಲದ ಸಮಯದಲ್ಲಿ ಪಂದ್ಯವನ್ನು ನೋಡಲು ಸಹಾಯ ಮಾಡಲಿದೆ. ಜೂನ್​ 9 ಕೂಡ ಭಾನುವಾರವಾಗಿದೆ. ಅಮೆರಿಕದಲ್ಲಿ ರಾತ್ರಿ ಪಂದ್ಯ ಆಯೋಜಿಸಿದರೆ, ಭಾರತದಲ್ಲಿ ಸೋಮವಾರ ಮುಂಜಾನೆ ಪಂದ್ಯ ಪ್ರಸಾರವಾಗುತ್ತದೆ. ಹೀಗಾಗಿ ಅಮೆರಿಕದಲ್ಲಿ ರಾತ್ರಿ ಪಂದ್ಯ ನಡೆಸುವುದಾದರೆ ಜೂನ್​ 8ರಂದೇ ನಡೆಯಲಿದೆ. ಆಗ ಭಾರತದಲ್ಲಿ ಭಾನುವಾರ ಬೆಳಗ್ಗೆ ಪಂದ್ಯ ಪ್ರಸಾರವಾಗಲಿದೆ.

Continue Reading

ಕ್ರೀಡೆ

IPL 2024: ಮೋದಿ ಸ್ಟೇಡಿಯಂನಲ್ಲಿ ಫುಟ್ಬಾಲ್​ ಆಡಿದ ಆರ್​ಸಿಬಿ ಆಟಗಾರರು

IPL 2024: ರಾಜಸ್ಥಾನ್​(RCB vs RR) ವಿರುದ್ಧ ಬುಧವಾರ ನಡೆಯುವ ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ಆರ್​ಸಿಬಿ ಆಟಗಾರರು ಫುಟ್ಬಾಲ್​ ಆಡಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

IPL 2024
Koo

ಬೆಂಗಳೂರು: ಐಪಿಎಲ್​ ಟೂರ್ನಿ(IPL 2024) ಆರಂಭಕ್ಕೂ ಮುನ್ನ ವಿರಾಟ್​ ಕೊಹ್ಲಿ(virat kohli) ಇದು ಆರ್​ಸಿಬಿಯ ಹೊಸ ಅಧ್ಯಾಯ ಎಂದು ಹೇಳುವು ಮೂಲಕ ಆರ್‌ಸಿಬಿ ಹವಾ ಸೃಷ್ಟಿಸಿತ್ತು. ಈ ಮಾತಿಗೆ ತಕ್ಕಂತೆ ಮೊದಲ ಹಂತದಲ್ಲಿ ಆರ್​ಸಿಬಿ(RCB players) ಪ್ರದರ್ಶನ ನೀಡಲು ವಿಫಲವಾಗಿತ್ತು. 7 ಸೋಲು ಕಂಡು ಇನ್ನೇನು ಟೂರ್ನಿಯಿಂದ ಹೊರಬೀಳುವ ಸ್ಥಿತಿಯಲ್ಲಿತ್ತು. ಆರ್​ಸಿಬಿ ಅಭಿಮಾನಿಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಇದು ಮುಗಿದು ಹೋದ ಅಧ್ಯಾಯ ಎಂದು ಬೇಸರ ಹೊರಹಾಕಿದ್ದರು. ಆದರೆ ಆ ಬಳಿಕ ನಡೆದದ್ದೇ ಬೇರೆ. ಪವಾಡ ಸಂಭವಿಸಿದೆ ಆರ್​ಸಿಬಿ ಸತತವಾಗಿ 6 ಪಂದ್ಯಗಳನ್ನು ಒಟ್ಟು 7 ಪಂದ್ಯಗಳಲ್ಲಿ ಜಯ ಸಾಧಿಸಿ ಕೊನೆಯ ಸ್ಥಾನದಿಂದ ಮೇಲೆದ್ದು ಅಚ್ಚರಿ ಎಂಬಂತೆ ಪ್ಲೇ ಆಫ್​ ಪ್ರವೇಶಿಸಿತ್ತು. ಇದೀಗ ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ರಾಜಸ್ಥಾನ್​(RCB vs RR) ವಿರುದ್ಧ ಆಡಲಿದೆ.

ಆರ್​ಸಿಬಿ ತಂಡದ ಆಟಗಾರರು ರಾಜಸ್ಥಾನ್​ ವಿರುದ್ಧ ಎಲಿಮಿನೇಟರ್​ ಪಂದ್ಯವನ್ನಾಡಲು ಈಗಾಗಲೇ ಅಹಮದಾಬಾದ್​ಗೆ ತಲುಪಿದ್ದಾರೆ. ಸೋಮವಾರ ಆಟಗಾರರು ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಫುಟ್ಬಾಲ್​ ಆಡುವ(RCB players played football) ಮೂಲಕ ತಮ್ಮ ಫಿಟ್​ನೆಸ್​ ತರಬೇತಿ ಮುಗಿಸಿದ್ದಾರೆ. ಆಟಗಾರರು 2 ತಂಡಗಳಾಗಿ ಫುಟ್ಬಾಲ್​ ಆಡಿದ ವಿಡಿಯೊವನ್ನು ಆರ್​ಸಿಬಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ.

ಕಳೆದ 5 ವರ್ಷದಲ್ಲಿ ಆರ್‌ಸಿಬಿ 4 ಬಾರಿ ಪ್ಲೇ ಆಫ್ ಪ್ರವೇಶಿಸಿದ ಸಾಧನೆ ಮಾಡಿದೆ. ಈ ಮೂಲಕ ಆರ್‌ಸಿಬಿ ನಿರಂತವಾಗಿ ತನ್ನ ಸಾಮರ್ಥ್ಯ ಪ್ರದರ್ಶಿಸಿದೆ. 3 ಬಾರಿ ಫೈನಲ್​ ಪ್ರವೇಶೀಸಿದರೂ ಕಪ್​ ಗೆಲ್ಲಲು ಸಾಧ್ಯವಾಗಿರಲಿಲ್ಲ. 2009, 2011 ಮತ್ತು 2016ರಲ್ಲಿ ಆರ್​ಸಿಬಿ ಫೈನಲ್​ಗೆ ಲಗ್ಗೆಯಿಟ್ಟಿತ್ತು.

ಎಲಿಮಿನೇಟರ್(IPL 2024 Eliminator)​ ಪಂದ್ಯಕ್ಕೂ ಮುನ್ನವೇ ಆರ್​ಸಿಬಿಗೆ ದೊಡ್ಡ ಆಘಾತವೊಂದು ಎದುರಾಗಿದೆ. ಟಿ20 ವಿಶ್ವಕಪ್​ ಟೂರ್ನಿಯ ಅಭ್ಯಾಸ ನಡೆಸುವ ಸಲುವಾಗಿ ರಾಷ್ಟ್ರೀಯ ತಂಡದಿಂದ ಕರೆ ಬಂದರೆ ಆಸ್ಟ್ರೇಲಿಯಾದ ಸ್ಟಾರ್​ ಆಲ್​ರೌಂಡರ್​ಗಳಾದ ಕ್ಯಾಮರೂನ್​ ಗ್ರೀನ್​ ಮತ್ತು ಗ್ಲೆನ್​ ಮ್ಯಾಕ್ಸ್​ವೆಲ್​ ತಂಡ ತೊರೆಯಬೇಕಾಗಿದೆ.

ಈಗಾಗಲೇ ಇಂಗ್ಲೆಂಡ್​ನ ಆಟಗಾರರು ಐಪಿಎಲ್​ ಪಂದ್ಯವಾವಳಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ ತವರಿಗೆ ಮರಳಿದ್ದಾರೆ. ಇದೀಗ ಆಸ್ಟ್ರೇಲಿಯಾ ಸರದಿ ಎನ್ನಲಾಗಿದೆ. ಕೇವಲ ಆರ್​ಸಿಬಿ ಮಾತ್ರವಲ್ಲದೆ ಇತರ ತಂಡದ ಪರ ಆಡುತ್ತಿರುವ ಆಸ್ಟ್ರೇಲಿಯಾ ಆಟಗಾರರು ಕೂಡ ಐಪಿಎಲ್​ ತೊರೆಬೇಕಾಗಬಹುದು. ಎಂದು ವರದಿಯಾಗಿದೆ. ಒಂದೊಮ್ಮೆ ಆಸೀಸ್​ ಆಟಗಾರರು ಐಪಿಎಲ್​ನಿಂದ ಹೊರಹೋದರೆ ಸನ್​ರೈಸರ್ಸ್​ ಮತ್ತು ಆರ್​ಸಿಬಿ ತಂಡಗಳಿಗೆ ದೊಡ್ಡ ಹೊಡೆತ ಬೀಳಲಿದೆ. ಏಕೆಂದರೆ ಈ 2 ತಂಡಗಳಲ್ಲಿಯೇ ತಲಾ 2 ಆಸೀಸ್​ ಆಟಗಾರರಿದ್ದಾರೆ.

ಇದನ್ನೂ ಓದಿ IPL 2024: ಮೋದಿ ಸ್ಟೇಡಿಯಂನಲ್ಲಿ ನಡೆಯುವ ಐಪಿಎಲ್​ ಪ್ಲೇ ಆಫ್​ ಪಂದ್ಯಕ್ಕೆ ಐಸಿಸ್‌ ಉಗ್ರರ ಕಾಟ; ಪಂದ್ಯಕ್ಕೂ ಮುನ್ನ ನಾಲ್ವರ ಬಂಧನ

ಟಿ20 ವಿಶ್ವಕಪ್​ ಟೂರ್ನಿಯ ಅಭ್ಯಾಸ ಪಂದ್ಯಗಳು ಮೇ 27ರಿಂದ ಆರಂಭಗೊಳ್ಳಲಿದೆ. ಆಸ್ಟ್ರೇಲಿಯಾ ತನ್ನ ಮೊದಲ ಅಭ್ಯಾಸ ಪಂದ್ಯವನ್ನು ನಮೀಬಿಯಾ ವಿರುದ್ಧ ಮೇ 29ಕ್ಕೆ ಆಡಲಿದೆ. ಒಂದೊಮ್ಮೆ ಆಸೀಸ್​ ಆಟಗಾರರು ಎಲಿಮಿನೇಟರ್​ ಮತ್ತು ಕ್ವಾಲಿಫೈಯರ್​ ಪಂದ್ಯದಲ್ಲಿ ಆಡಿದರೂ ಕೂಡ ಫೈನಲ್​ ತನಕ ಭಾರತದಲ್ಲಿ ನಿಲ್ಲುವುದು ಅನುಮಾನ ಎನ್ನಲಾಗಿದೆ.

Continue Reading
Advertisement
Prajwal Revanna Case
ಕರ್ನಾಟಕ1 hour ago

Prajwal Revanna Case: ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್ ರದ್ದು ಮಾಡಲು ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

Mobile
ದೇಶ2 hours ago

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡಿ 15 ವರ್ಷದ ಅಕ್ಕನನ್ನೇ ಗರ್ಭಿಣಿ ಮಾಡಿದ 13 ವರ್ಷದ ಬಾಲಕ!

Army Officer
Lok Sabha Election 20242 hours ago

101ನೇ ವಯಸ್ಸಿನಲ್ಲೂ ‘ಕರ್ತವ್ಯ’ ಮರೆಯದೆ ವೋಟ್‌ ಮಾಡಿದ ನಿವೃತ್ತ ಯೋಧ; ಸೆಲ್ಯೂಟ್‌ ಎಂದರು ಜನ

Congress Guarantee
ಪ್ರಮುಖ ಸುದ್ದಿ2 hours ago

Congress Guarantee: ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ಸರ್ಕಾರ ಮಾಡಿದ ಖರ್ಚು ಎಷ್ಟು ಸಾವಿರ ಕೋಟಿ?

Malaysia Masters
ಕ್ರೀಡೆ2 hours ago

Malaysia Masters: ವಿಶ್ರಾಂತಿ ಬಳಿಕ ಮಲೇಷ್ಯಾ ಮಾಸ್ಟರ್ಸ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ಸಿಂಧು

Rahul Gandhi
ದೇಶ3 hours ago

Rahul Gandhi: ರಾಯ್‌ಬರೇಲಿಯಲ್ಲಿ ಜನ ಜೈ ಶ್ರೀರಾಮ್‌ ಎನ್ನುತ್ತಲೇ ಕಾಲ್ಕಿತ್ತ ರಾಹುಲ್‌ ಗಾಂಧಿ! Video ಇದೆ

MS Dhoni Bike Riding
ಕ್ರೀಡೆ3 hours ago

MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

Self Harming
ಕರ್ನಾಟಕ4 hours ago

Self Harming: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ

AAP Funds
ದೇಶ4 hours ago

AAP Funds: ನಿಯಮ ಉಲ್ಲಂಘಿಸಿ ಬೇರೆ ದೇಶಗಳಿಂದ ಆಪ್‌ 7 ಕೋಟಿ ರೂ. ದೇಣಿಗೆ ಸ್ವೀಕಾರ; ಇ.ಡಿ ಸ್ಫೋಟಕ ಮಾಹಿತಿ!

Karnataka weather Forecast
ಕರ್ನಾಟಕ4 hours ago

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ12 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌